Thursday, February 26, 2026
Thursday, February 26, 2026
Home Blog Page 269

Madhu Bangarappa ಜಾತಿ ಗಣತಿಗೆ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರನ್ನ ನಿಯೋಜಿಸುವುದಿಲ್ಲ- ಸಚಿವ ಮಧು ಬಂಗಾರಪ್ಪ

0

Madhu Bangarappa ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಜಾತಿ ಗಣತಿಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುವುದಿಲ್ಲ. ಬದಲಿಗೆ ಗಣತಿಯ ಹೊಣೆಯನ್ನು ಹೊರಗುತ್ತಿಗೆಗೆ ವಹಿಸಲು ಯೋಚಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿದರೆ ವಿದ್ಯಾರ್ಥಿಗಳ ಪಾಠ – ಪ್ರವಚನಕ್ಕೆ ತೊಂದರೆಯಾಗಲಿದೆ ಎಂಬುದನ್ನು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸ್ಪಷ್ಟಪಡಿಸಿದ್ದೇನೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

CM Siddaramaiah ರಾಜ್ಯದ ಏಳು ಬಿಲ್ ಗಳಿಗೆ ಶೀಘ್ರ ಅನುಮೋದನೆ ನೀಡಲು ರಾಷ್ಟ್ರಪತಿಗಳಿಗೆ ಸಿದ್ಧರಾಮಯ್ಯ ಮನವಿ

0

CM Siddaramaiah ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್‌ಗಳ ಬಗ್ಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್‌ಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದೇನೆ ಎಂದು ಸೀಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ರಾಷ್ಟ್ರಪತಿಗಳು ಹಾಗೂ ಕೇಂದ್ರ ವಿತ್ತ ಸಚಿವರ ಭೇಟಿಯ ನಂತರ ದೆಹಲಿಯಲ್ಲಿ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14ನೇ ಹಣಕಾಸು ಆಯೋಗದಲ್ಲಿ 4.7% ತೆರಿಗೆ ಹಂಚಿಕೆಯಾಗಿತ್ತು. 15ನೇ ಹಣಕಾಸು ಆಯೋಗದಲ್ಲಿ 3.6% ಆಗಿದೆ. ಶೇಕಡಾ 1.1% ಕಡಿಮೆಯಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ ಶೇ. 23% ಗಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು ₹80,000 ಕೋಟಿ ನಷ್ಟವಾಗಿದೆ.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ₹63 ಸಾವಿರ ಕೋಟಿ ಅನ್ಯಾಯವಾಗಿದೆ. ರಾಜ್ಯಕ್ಕೆ ವಿಶೇಷ ಅನುದಾನ ₹5,495 ಕೋಟಿ ಮೀಸಲಿಡಿಲಾಗಿತ್ತು. ಪೆರಿಫೆರಲ್ ರಿಂಗ್ ರೋಡ್ ಗೆ ₹3,000 ಕೋಟಿ, ಬೆಂಗಳೂರಿನ ಕೆರೆಗಳ ಅಭಿವೃದ್ಧಿಗಾಗಿ ₹3,000 ಕೋಟಿ ಸೇರಿದಂತೆ ಒಟ್ಟು ₹11,495 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು. ಒಟ್ಟಾರೆಯಾಗಿ ₹80,000 ಕೋಟಿ ನಮಗೆ ಕಡಿಮೆಯಾಗಿದೆ. ಇದು ಬಹಳ ದೊಡ್ಡ ಮೊತ್ತವಾಗಿದೆ.

CM Siddaramaiah ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ 5% ರಷ್ಟಿದೆ. ಕರ್ನಾಟಕ 8.7% ಜಿಡಿಪಿಗೆ ಕೊಡುಗೆ ನೀಡುತ್ತಿದೆ. 2011-12ರಲ್ಲಿ 7.6% ಇದ್ದದ್ದು, ಈಗ 8.7% ಕೊಡುಗೆ ನೀಡುತ್ತಿದೆ. ದೇಶಕ್ಕೆ ಜಿಎಸ್‌ಟಿ ಕೊಡುಗೆ ನೀಡುವುದರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಜಿ.ಡಿ.ಪಿ ನಲ್ಲಿ ನಮ್ಮ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಹಾಗಾಗಿ ಯಾವ ರಾಜ್ಯ ಹೆಚ್ಚು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೋರಲಾಗಿದೆ.

ತಲಾವಾರು ಆದಾಯವನ್ನು ಪರಿಗಣಿಸುವ ಮಾನದಂಡವನ್ನು ಶೇ.45 ರಿಂದ ಶೇ. 20 ಕ್ಕೆ ಇಳಿಸಬೇಕೆಂದು ಕೋರಲಾಗಿದೆ. ಕೇರಳ, ಆಂಧ್ರ, ತಮಿಳುನಾಡು ರಾಜ್ಯಗಳಿಗೆ ನೀಡಿದಂತೆ ಆದಾಯ ಕೊರತೆ ಅನುದಾನವನ್ನು ಕರ್ನಾಟಕಕ್ಕೂ ನೀಡಬೇಕು. ಇಲ್ಲವೇ ಯಾವುದೇ ರಾಜ್ಯಗಳಿಗೆ ನೀಡಬಾರದು. ರಾಜಸ್ವ ಹೆಚ್ಚಳದಲ್ಲಿ ಖರ್ಚಿಗಿಂತ ಆದಾಯ ಹೆಚ್ಚಿದ್ದು, ವಿತ್ತೀಯ ಕೊರತೆಯಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ರಾಜಸ್ವ ಹೆಚ್ಚಳದಲ್ಲಿದ್ದ ಕರ್ನಾಟಕ ಕಳೆದ ವರ್ಷದಿಂದ ವಿತ್ತೀಯ ಕೊರತೆ ಎದುರಿಸುತ್ತಿದ್ದು, ಮುಂದಿನ ವರ್ಷಕ್ಕೆ ಈ ಪರಿಸ್ಥಿತಿ ಸುಧಾರಿಸಲಿದೆ. ನಿರಂತರವಾಗಿ ವಿತ್ತೀಯ ಕೊರತೆಯಲ್ಲಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ಹು ನೀಡಲಾಗುತ್ತದೆ. ಹಣಕಾಸಿನ ಕಾರ್ಯಕ್ಷಮತೆ ತೋರದಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ನು ನೀಡುತ್ತಿರುವ ಕೇಂದ್ರದ ಕ್ರಮ ಸರಿಯಾದುದಲ್ಲ.

ಬೆಂಗಳೂರು ಜಾಗತಿಕ ನಗರವಾಗಿದ್ದು, ನಗರದ ಬಂಡವಾಳ ಕಾರ್ಯಗಳಿಗೆ ₹1.15 ಲಕ್ಷ ಕೋಟಿ ಬೇಕಾಗಿದ್ದು, ಇದಕ್ಕಾಗಿ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ. ಮಲೆನಾಡು ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಪ್ರವಾಹದಿಂದಾಗುವ ಅನಾಹುತಗಳನ್ನು ನಿಭಾಯಿಸಲು ವಿಶೇಷ ಅನುದಾನ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ.

ರಾಜ್ಯಕ್ಕೆ ಅಗತ್ಯವಿರುವ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಗಿದೆಯೇ ಹೊರತು ಆರೋಪ ಮಾಡಿಲ್ಲ. ರಾಜ್ಯಕ್ಕೆ ಅನ್ಯಾಯವಾಗಿದ್ದರೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಕೇಂದ್ರ ವಿತ್ತಸಚಿವರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

Gurudatta Hegde ಅತ್ಯಾಧುನಿಕ ತಂತ್ರಾಂಶವನ್ನು ಅರಿತು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಳ್ಳಿ : ಗುರುದತ್ತ ಹೆಗಡೆ

0

Gurudatta Hegde ನಾಗಾಲೋಟದಲ್ಲಿ ಬದಲಾಗುತ್ತಿರುವ ಕಾಲಮಾನಕ್ಕೆ ಅನುಗುಣವಾಗಿ ಸರ್ಕಾರವು ಸುಗಮ ಆಡಳಿತಕ್ಕೆ ಅನುಕೂಲವಾಗುವಂತೆ ರೂಪಿಸಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳನ್ನು ಹಾಗೂ ಅತ್ಯಾಧುನಿಕ ತಂತ್ರಾಂಶಗಳನ್ನು ಅರಿತು ಅಧಿಕಾರಿಗಳು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
ಅವರು ಇಂದು ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ಜಿಲ್ಲೆಯ ನೌಕರರಿಗಾಗಿ ಏರ್ಪಡಿಸಲಾಗಿದ್ದ ಹೆಚ್.ಆರ್.ಎಂ.ಎಸ್.-2.0 ಹಾಗೂ ಕೆ.ಎ.ಎಸ್.ಎಸ್.‌ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಹಿಂದೆ ಬಳಸುತ್ತಿದ್ದ ಹೆಚ್.ಆರ್.ಎಂ.ಎಸ್.‌ತಂತ್ರಾಂಶ ಬಹಳ ಚೆನ್ನಾಗಿ ವಿನ್ಯಾಸಗೊಳಿಸಲಾಗಿದೆ ಆದರೂ ಅದರ ಬಳಕೆ ಸ್ವಲ್ಪ ಕಷ್ಟಕರವೂ, ದಾಖಲೆಗಳ ನಿರ್ವಹಣೆ ಕಷ್ಟಕರವೂ ಆಗಿತ್ತು. ಅದನ್ನು ಇಲಾಖೆಗಳ ಪತ್ರಾಂಕಿತ ಅಧಿಕಾರಿಗಳು ಹಾಗೂ ವಿಷಯ ನಿರ್ವಾಹಕರು ಸರಳವಾಗಿ ಬಳಸಲು ಅನುಕೂಲವಾಗುವಂತೆ ಸರ್ಕಾರಿ ನೌಕರರ ಸಂಘವು ಹೆಚ್.ಆರ್.‌ಎಂ.ಎಸ್.‌ತಂತ್ರಾಂಶ ಮತ್ತು ಕೆ.ಎ.ಎಸ್.ಎಸ್.‌ಕುರಿತು ಕಾರ್ಯಾಗಾರ ಆಯೋಜಿಸಿರುವುದು ಅತ್ಯಂತ ಉಪಯುಕ್ತವಾಗಿದೆ. ಈ ತಂತ್ರಾಂಶವನ್ನು ಅರಿತು ಅಳವಡಿಸಿಕೊಂಡಲ್ಲಿ ಆಡಳಿತ ವ್ಯವಸ್ಥೆ ಸುಗಮವಾಗಲಿದೆ ಎಂದವರು ನುಡಿದರು.
ಪ್ರಸ್ತುತ ವಿನ್ಯಾಸಗೊಳಿಸಲಾಗಿರುವ ಹೆಚ್.‌ಆರ್.‌ಎಂ.ಎಸ್.‌ತಂತ್ರಾಂಶ-2.0ವನ್ನು ವಿಷಯ ನಿರ್ವಾಹಕರು ಸರಳವಾಗಿ ಅರಿತು ನಿರ್ವಹಿಸಲು ಅನುಕೂಲವಾಗುವಂತೆ ರೂಪಿಸಲಾಗಿದೆ. ಅದರಲ್ಲಿ ನೌಕರರ ಎಲ್ಲಾ ದಾಖಲೆಗಳನ್ನು ನಿರ್ವಹಿಸಲು ಹಾಗೂ ದಾಖಲಿಸಲು ವಿಶೇಷ ಗಮನಹರಿಸಲಾಗಿದೆ. ಈ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅಕ್ಟೋಬರ್‌ಮಾಸಾಂತ್ಯದವರೆಗೆ ನಡೆಯಲಿದೆ. ನಂತರದ ಕಾಲದಲ್ಲಿ ಎಲ್ಲರೂ ತಂತ್ರಾಂಶವನ್ನು ಸರಳವಾಗಿ ಬಳಸಿಕೊಳ್ಳಬಹುದಾಗಿದೆ. ತಂತ್ರಾಂಶದ ಬಳಕೆ ಕುರಿತು ತರಬೇತಿ ಪಡೆದವರು ತರಬೇತಿ ಪಡೆಯದ ಇತರೆ ಅಧಿಕಾರಿ-ಸಿಬ್ಬಂಧಿಗಳಿಗೂ ತಿಳಿಸುವಂತಾಗಬೇಕೆಂದವರು ನುಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ಈ ತಂತ್ರಾಂಶ ಬಳಕೆಯ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘವು ಇದೇ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ನೌಕರರಿಗಾಗಿ ಕಾರ್ಯಾಗಾರವನ್ನು ಆಯೋಜಿಸಿದ್ದು, ನೌಕರರ ವಲಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸುವ ಉದ್ದೇಶ ಹೊಂದಲಾಗಿದೆ. ನೌಕರರು ಈ ಸದವಕಾಶದ ಲಾಭ ಪಡೆದುಕೊಳ್ಳಬೇಕೆಂದವರು ನುಡಿದರು.
ಈ ತಂತ್ರಾಂಶದ ಬಳಕೆಯಿಂದ ನೌಕರರ ದಾಖಲೆಗಳನ್ನು ನಿರ್ವಹಿಸಲು ಹಾಗೂ ವ್ಯವಸ್ಥಿತವಾಗಿ ದಾಖಲಿಸುವಲ್ಲಿ ಸಮಸ್ಯೆಗಳಿಂದ ಮುಕ್ತಗೊಂಡು ಸುಧಾರಣೆ ಕಾಣಬಹುದಾಗಿದೆ. ಉಪನ್ಯಾಸ, ಚರ್ಚೆ, ಸಂವಾದ ಮತ್ತು ಪ್ರಾತ್ಯಕ್ಷಿತೆಗಳ ಮೂಲಕ ನಡೆಯುವ ತರಬೇತಿ ಕಾರ್ಯಾಗಾರವು ಅತ್ಯುಪಯುಕ್ತವಾಗಿದೆ. ಅದಕ್ಕಾಗಿ ವಿಷಯಾಧಾರಿತ ಸಂಪನ್ಮೂಲ ವ್ಯಕ್ತಿಗಳೇ ಮಾಹಿತಿ ನೀಡುತ್ತಿರುವುದು ವಿಶೇಷವಾಗಿದೆ ಎಂದರು.
Gurudatta Hegde KASS ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳ ನೌಕರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಲಾಭ ಪಡೆದುಕೊಳ್ಳಬೇಕು. ಬಹುಸಂಖ್ಯಾತ ನೌಕರರು ಈವರೆಗೆ ಹೆಸರು ನೋಂದಾಯಿಸಿಕೊಳ್ಳದಿರುವುದು ಬೇಸರದ ಸಂಗತಿಯಾಗಿದೆ. ಕೂಡಲೇ ನೌಕರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಆರೋಗ್ಯ ಸಂಜೀವಿನಿ ಯೋಜನೆಯ ಫಲಾನುಭವಿಗಳು ಮತ್ತು ಅವರ ಕುಟುಂಬದ ಅವಲಂಬಿತರ ಅನಾರೋಗ್ಯಕ್ಕೆ ಚಿಕಿತ್ಸೆ ನೀಡುವಲ್ಲಿ ಜಿಲ್ಲೆಯ ಪ್ರತಿಷ್ಠಿತ ಆಸ್ಪತ್ರೆಗಳು ಹೆಸರು ನೋಂದಾಯಿಸಿಕೊಂಡಿವೆ

  • ಸಿ.ಎಸ್.ಷಡಾಕ್ಷರಿ, ರಾಜ್ಯಾಧ್ಯಕ್ಷರು, ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು.
    ಕಾರ್ಯಾಗಾರದಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌, ಸಂಪನ್ಮೂಲ ವ್ಯಕ್ತಿಗಳಾಗಿದ್ದ ಯೋಜನಾಧಿಕಾರಿ ಶ್ರೀಮತಿ ನಿರ್ಮಲಾ, ತಾಂತ್ರಿಕ ತರಬೇತುದಾರ ಸುಮಂತ್‌ಮತ್ತು ಯೋಜನಾಧಿಕಾರಿ ಶ್ರೀಮತಿ ಸುಧಾರಾಣಿ, ನೌಕರರ ಸಂಘದ ಗೌರವಾಧ್ಯಕ್ಷ ಆರ್.ಪಾಪಣ್ಣ, ರಾಜ್ಯ ಪರಿಷತ್‌ಸದಸ್ಯ ಎನ್.ಎಂ.ರಂಗನಾಥ್‌ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು, ತಾಲೂಕು ಘಟಕಗಳ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.

MESCOM ಮೆಸ್ಕಾಂ ಜನ ಸಂಪರ್ಕ ಸಭೆ

0

MESCOM ಸಾಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ.26 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9448289516.

Backward Classes Welfare Department ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

0

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26 ನೇ ಸಾಲಿಗೆ ವ್ಯಾಸಂಗ ಮಾಡುತ್ತಿರುವ ಪಿಯುಸಿ, ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್‌ಸಿ, ಎಸ್‌ಟಿ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ, ಇತರೆ ವರ್ಗದವರಿಗೆ ರೂ.1 ಲಕ್ಷದವರೆಗೂ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕವಾಗಿದ್ದು, ವಿದ್ಯಾರ್ಥಿಗಳು https://shp.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. https://bcwd.karnataka.gov.in ವೆಬ್‌ಸೈಟ್‌ನಿಂದ ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರಿ ಆದೇಶದ ಕುರಿತು ಮಾಹಿತಿ ಪಡೆಯಬಹುದು.
Backward Classes Welfare Department ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಯಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಅಗತ್ಯ ದಾಖಲೆಗಳೊಂದಿಗೆ ಅಥವಾ ಸಹಾಯವಾಣಿ ಸಂಖ್ಯೆ;8050770004 ಮತ್ತು 8050770005 ಕ್ಕೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Department of Horticulture ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

0

Department of Horticulture ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ವಿವಿಧ ಯೋಜನೆಯಡಿ ಸಹಾಯಧನ ಪಡೆದುಕೊಳ್ಳಲು ಆಸಕ್ತ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದು ಬಾಳೆ, ಅಂಗಾಂಶ ಬಾಳೆ, ತರಕಾರಿ, ಕಾಳು ಮೆಣಸು, ಗೋಡಂಬಿ, ಹೂವಿನ ಬೆಳೆಗಳ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ (weed Mat) , ಮಿನಿ ಟ್ರಾಕ್ಟರ್ (up to 20 pto hp), ಫಾರಂ ಗೇಟ್, ಪ್ರಾಥಮಿಕ ಸಂಸ್ಕರಣಾ ಘಟಕ, ಪ್ಯಾಕ್ ಹೌಸ್, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ. ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ (ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕ್ಯೊಯಲು ಸಹಾಯ ಧನ. ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಣ್ಣಿನ ಬೆಳೆಗಳು, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಕೆ. ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕಾಳುಮೆಣಸು ಪ್ರದೇಶ ವಿಸ್ತರಣೆ, ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಯೋಜನೆಯಡಿ ಮತ್ತು ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ತೆಂಗಿನ ಮರ ಹತ್ತುವ ಯಂತ್ರ, ಕಳೆ ಕೊಚ್ಚುವ ಯಂತ್ರ, ಟ್ರಾಕ್ಟರ್ ಟ್ರೈಲರ್ ಮತ್ತು ಇನ್ನಿತರ ಯಂತ್ರೋಪಕರಣಗಳಿಗೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪ್ಲಾಸ್ಟಿಕ್ ಕ್ರೇಟ್, ಹಣ್ಣು ಮಾಗಿಸುವ ಘಟಕ, ಸೋಲಾರ್ ಪಂಪ್ ಸೇಟ್, ಲಘು ಪೋಷಕಾಂಶಗಳ ಮಿಶ್ರಣ / ಬೆಳೆ ಸ್ಪೇಷಲ್ ಸಹಾಯಧನ, ರಾಜ್ಯವಲಯ ಯೋಜನೆ ಹಾಗೂ ಜಿಲ್ಲಾ ಪಂಚಾಯತ್ ಯೋಜನೆ ವತಿಯಿಂದ ಜೇನು ಪೆಟ್ಟಿಗೆ ಸ್ಟ್ಯಾಂಡ್ ಹಾಗೂ ಜೇನು ಕುಟುಂಬಕ್ಕೆ ಸಹಾಯಧನ ಪಡೆದುಕೊಳ್ಳುವುದು.
Department of Horticulture ಆಸಕ್ತ ರೈತರು ಅರ್ಜಿಯನ್ನು ಆಯಾ ರೈತ ಸಂಪರ್ಕ ಕೇಂದ್ರದಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 5 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿ.ಪಂ. ಭದ್ರಾವತಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಮತ್ತು ಭದ್ರಾವತಿ ತೋಟಗಾರಿಕೆ ಕಛೇರಿ ಹಾಗೂ ದೂ.ಸಂ. 08282-295029 ನ್ನು ಸಂಪರ್ಕಿಸಬಹುದು.

Shivamogga Scheduled Caste Welfare Department ಪರಿಶಿಷ್ಟ ವರ್ಗಗಳ ಇಂಜಿನಿಯರಿಂಗ್ ಪದವಿಧರರಿಂದ ತರಬೇತಿಗೆ ಅರ್ಜಿ ಆಹ್ವಾನ

0

Shivamogga Scheduled Caste Welfare Department ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಐಐಎಸ್ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಷಲ್ ಇಟಲಿಜನ್ಸ್ ಅಂಡ್ ಮಿಷಿನ್ ಲರ್ನಿಂಗ್ ಮುಂತಾದ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿಂಗ್ ಪದವೀಧರರಿಗೆ 15,000/- ರೂ.ಗಳ ಶಿಷ್ಯ ವೇತನದೊಂದಿಗೆ ತರಬೇತಿ ನೀಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
Shivamogga Scheduled Caste Welfare Department ಆಸಕ್ತ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಒಳಗೆ ಕಚೇರಿಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 04 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.08182-200266 ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.

Klive Special Article ವಿಶಿಷ್ಟ, ವಿನೂತನ ಪ್ರಜ್ಞಾ ಬುಕ್ ಗ್ಯಾಲರಿಯ ಕವಿ.ಡಾ.ಹೆಚ್.ಎಸ್.ವಿ.ಭಾವನಮನ ಲೇ:ಡಾ.ಮೈತ್ರೇಯಿ ಆದಿತ್ಯ ಪ್ರಸಾದ್

0

Klive Special Article ಒಂದು ಕಾರ್ಯಕ್ರಮ ಆಗಿ ಬಹುದಿನಗಳೇ ಕಳೆದು ಹೋದರೂ ಅಲ್ಲಿನ ಹಾಡೊಂದು ಇನ್ನೂ ಕಿವಿಯಲ್ಲಿ ಅನುರಣನಗೊಳ್ಳುತ್ತಿದೆ ಎಂದೇ ಅದರ ಕುರಿತಾಗಿ ಬರೆಯಲಾರಂಭಿಸಿದೆ. ಆ ಹಾಡೇ ಹಸಿರು ಹಸಿರೆಂದರೆ ಹೆಸರಿಲ್ಲದ ಮರ ಎನ್ನುವ…. ಎಚ್.ಎಸ್. ವೆಂಕಟೇಶಮೂರ್ತಿ ಅವರ ಹಾಡು. ಅದನ್ನು ಹಾಡಿದ್ದು ನಮ್ಮನ್ನಗಲಿದ HSVಯವರಿಗೆ ಭಾವ ನಮನ ಸಲ್ಲಿಸಲು ಆಯೋಜಿತವಾದ ಕಾರ್ಯಕ್ರಮ. ಅದರದಲ್ಲಿ ಎಲ್ಲವೂ ವಿಶೇಷ ಅದೇನೆಂದರೆ ಪುಸ್ತಕಗಳನ್ನು ಮಾರುವ ಅಂಗಡಿಯೊಂದು ಅದನ್ನು ಸರಸ್ವತೀ ಮಂದಿರವಾಗುವಂತೆ ಮಾಡಿದ್ದು. Klive Special Article ನಗರದ ಪ್ರಸಿದ್ಧ ಪುಸ್ತಕದ ಅಂಗಡಿಗಳಲ್ಲಿ ಒಂದಾದ ದುರ್ಗಿಗುಡಿಯಲ್ಲಿನ “ಪ್ರಜ್ಞಾ ಬುಕ್ ಗ್ಯಾಲರಿ” ಈ ರೀತಿಯ ವಿಶಿಷ್ಟ ಕಾರ್ಯಕ್ರಮ ಆಯೋಜಿಸುವ ಮೂಲಕ ಜನಮನ ಸೆಳೆಯುತ್ತಿದೆ ಎಂದರೆ ತಪ್ಪೇನಿಲ್ಲ. ಅಂದಿನ ಕಾರ್ಯಕ್ರಮ ಅತ್ಯಂತ ಅಚ್ಚುಕಟ್ಟಾಗಿ ಆಯೋಜಿತವಾಗಿದ್ದೇ ಅಲ್ಲದೆ ಪ್ರೇಕ್ಷಕರ ಆಸನ ವ್ಯವಸ್ಥೆಯಿಂದ ಹಿಡಿದು ಧ್ವನಿವರ್ಧಕಗಳ ವ್ಯವಸ್ಥೆಯವರೆಗೆ ಎಲ್ಲವೂ ಸುಸೂತ್ರವಾಗಿತ್ತು. ಕೇವಲ ವ್ಯಾಪಾರವೇ ಅಲ್ಲದೆ ಸಾಹಿತ್ಯಾಸಕ್ತಿ ಮೂಡಿಸುವ ಕಾರ್ಯಕ್ರಮ ಕಳೆದ ಹಲವಾರು ತಿಂಗಳುಗಳಿಂದ ಪ್ರಜ್ಞಾ ಬುಕ್ ಗ್ಯಾಲರಿ ಆಯೋಜಿಸುತ್ತಾ ಬಂದಿದೆ. ಅದರಂತೆ ಅಂದು ಕನ್ನಡದ ಶ್ರೇಷ್ಠ ಕವಿಯಾದ ಶ್ರೀ ಹೆಚ್. ಎಸ್. ವಿ ಅವರಿಗೆ ಅವರ ಕುರಿತಾದ ವಿಷಯಗಳನ್ನು ತಿಳಿಯುತ್ತಲೇ ಅವರೇ ರಚಿಸಿದ ಹಾಡುಗಳನ್ನು ಪ್ರಸ್ತುತಪಡಿಸುವ ಕಾರ್ಯಕ್ರಮ ಅದಾಗಿತ್ತು. ಈ ಕಾರ್ಯಕ್ರಮದ ಇನ್ನೊಂದು ವಿಶೇಷತೆ ಎಂದರೆ ನಡೆಸಿಕೊಡುವವರಿಂದ ಹಿಡಿದು ಹಾಡುಗಳನ್ನು ಹಾಡುವವರೆಗೂ ಎಲ್ಲರೂ ಸಾಹಿತ್ಯ ಹಾಗೂ ಸಾಂಸ್ಕೃತಿಕ ವಿಚಾರಗಳಿಗೆ ತವರೂರಾದಂತಹ ಶಿವಮೊಗ್ಗದವರೇ ಆಗಿದ್ದರು. HSV ಆಗಲಿದ 14ನೇ ದಿನಕ್ಕೆ ಆಯೋಜಿತವಾದ ಈ ಕಾರ್ಯಕ್ರಮ ಹಿಂದಿನ ಅವಿಭಜಿತ ಶಿವಮೊಗ್ಗ ಜಿಲ್ಲೆಯವರೇ ಆದ ಅವರಿಗೆ ಸಮರ್ಪಿಸಿದ, ಅದರಲ್ಲೂ ಮನೆಯವರೆಲ್ಲರೂ ಸೇರಿ ಮನೆಯ ಹಿರಿಯ ಸದಸ್ಯ ಅಗಲಿದಾಗ ಅವರ ಸದ್ಗುಣಗಳನ್ನು ಕೊಂಡಾಡುತ್ತಲೇ ಅವರಿಗಿಷ್ಟವಾದ ಆಹಾರಗಳನ್ನು ಬಂದಿರುವ ಇತರರಿಗೆ ಮಾಡಿ ಬಡಿಸಿ ಇಷ್ಟು ದಿನಗಳ ಕಾಲ ಜೊತೆಗಿದ್ದ ಜೀವಕ್ಕೆ ಸದ್ಗತಿ ದೊರೆಯಲೆಂದು ಮಾಡಿದ ವೈಕುಂಠ ಸಮಾರಾಧನೆಯ ಹಾಗೆಯೇ ಆದಂತಿತ್ತು.

ನಿಜವಾಗಿಯೂ ಅದೊಂದು ಅದ್ಭುತ ಕಾರ್ಯಕ್ರಮ ಶ್ರೀ ವಿನಯ್ ಶಿವಮೊಗ್ಗ ಅವರು ಸಾಕ್ಷಾತ್ ಸರಸ್ವತಿಯ ಪುತ್ರರಂತೆ HSV ಕುರಿತು ಅನೇಕ ವಿಷಯಗಳನ್ನು ಕಲೆ ಹಾಕಿ ನಮ್ಮೆದುರಿಗೆ ಪ್ರಸ್ತುತಪಡಿಸಿದರು. ಇದರಿಂದ HSV ಕುರಿತಾದ ಪ್ರೀತಿ ಗೌರವ ಹೆಮ್ಮೆ ಎಲ್ಲವೂ ಇಮ್ಮಡಿಗೊಳಿಸುವಂತೆ ಆಯಿತು. ಭಾವಗೀತೆ ಮತ್ತು ಸುಗಮ ಸಂಗೀತ ಕ್ಷೇತ್ರಗಳು ಅತ್ಯಂತ ಶ್ರೀಮಂತ ಗೊಳ್ಳಲು ಕೊಡುಗೆ ನೀಡಿದ ಮಹನೀಯರಲ್ಲಿ HSV ಕೂಡ ಒಬ್ಬರು. ಇವರ ಹಾಡು ಮನಸ್ಸಿಗೆ ಹಿತವಾಗುವಂತೆ ಆಗುತ್ತದೆ. ನಾಟಕ, ಕಥೆ, ಕಾದಂಬರಿ, ವಿಮರ್ಶೆ, ಪ್ರಬಂಧ, ಅಂಕಣ, ಚಲನಚಿತ್ರ, ಭಾವಗೀತೆ, ಶಿಶು ಗೀತೆ ಹೀಗೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ತಮ್ಮ ಛಾಪನ್ನು ಮೂಡಿಸಿ ಕನ್ನಡ ಸಾಹಿತ್ಯ ಲೋಕವನ್ನು ಅಚ್ಚರಿಗೊಳಿಸಿದವರು. ಅನೇಕ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾದವರು ಹೆಚ್. ಎಸ್. ವಿ. ಇಂತಹ ಮಹನೀಯರ ಕುರಿತಾಗಿ ವಿನಯಣ್ಣ ಹೇಳುವಾಗ ಅನೇಕ ಸಂಗತಿಗಳು ನಮಗೆ ತಿಳಿದೇ ಇರಲಿಲ್ಲವೇನೋ ಎನ್ನುವಂತಾಗಿತ್ತು. ಅವರಾಡಿದ ಬಹಳಷ್ಟು ಮಾತುಗಳು ವಿಶೇಷ ಎನಿಸಿದ್ದವು. ಅವುಗಳಲ್ಲಿ ಕೆಲವನ್ನು ಇಲ್ಲಿ ಹೇಳುವುದಾದರೆ ಅವರೊಬ್ಬ ಕ್ಯಾಸೆಟ್ ಕವಿ ಅಲ್ಲ ಅಸೆಟ್ ಕವಿ ಎಂದ ಜೋಗಿಯ ಮಾತೇ ಆಗಿರಬಹುದು…, ಲೋಕ ತಿರುಗಲು ನೀಡಿದ ಪಾಸ್ಪೋರ್ಟ್ ನಂತೆ ಇದ್ದ ಗೀತೆಯೇ ಲೋಕದ ಕಣ್ಣಿಗೆ ರಾಧೆಯು ಕೂಡ… ಇಲ್ಲಿ ಬರುವ ಮಹಾ ಪ್ರವಾಹ ಎಂದರೆ ರಾಧೆಯ ಪ್ರೀತಿಯ ಪ್ರವಾಹ ಎಂಬುದು…, ವೇದ ಉಪನಿಷತ್ ಗಳಲ್ಲಿನ ಅಧ್ಯಯನ ಸಾವನ್ನೂ ಸಲೀಸಾಗಿ ತೋರಿಸುವ ವ್ಯಕ್ತಿತ್ವ ಅವರದು… ಎಂಬುದು, ತಾಯಿ ಹಾಗೂ ಅಜ್ಜಿಯ ಮಮತೆಯ ಮಡಿಲಲ್ಲಿ ಅವರು ಬೆಳೆದಿದ್ದರಿಂದ ತಾನು ಮಾತೃಗೋತ್ರದವನೆಂದು ಪರಿಚಯಿಸಿಕೊಳ್ಳುತ್ತಿದ್ದರೆಂಬುದು… ಅವರ ಪದ್ಯಗಳಿಗೆ ಮಲೆನಾಡಿನ ಭಾಷೆ ಆದರೆ ಗದ್ಯಗಳಿಗೆ ಬಯಲು ಸೀಮೆಯ ಭಾಷೆ ಎಂಬುದು… ಅವರ ಕೃತಿಗಳಲ್ಲಿ ಮಣ್ಣಿನ ಸೊಗಡನ್ನು ಎತ್ತಿ ಹಿಡಿಯುವ ಶಕ್ತಿ ಇತ್ತೆಂಬುದು…, ಪ್ರೀತಿ ಮತ್ತು ಸತ್ಯಕ್ಕೆ ಮನಸೋತ ಕವಿ ಅವರಲ್ಲಿನ ಸಮನ್ವಯತೆ, ಭಾವ ಶುದ್ಧತೆ, ಪರಿಸರ ಪ್ರಜ್ಞೆಯ ಕವಿ, ಸಂಜೆಯಾಗುತ್ತಿದೆ ನಡೆ-ನಡೆ ಗೆಳೆಯ ಬೃಂದಾವನದ ಕಡೆ ಎನ್ನುವುದಂತು ತಮ್ಮದೇ ಚರಮಗೀತೆಯಂತೆ ಎಂದಿರುವುದು…, ಬುದ್ಧ ಚರಣದಲ್ಲಿ ಬರುವ ಸಾಲುಗಳನ್ನು ಓದಿದ್ದು, ಅಭಿಜಾತ ಪ್ರತಿಭೆ, ಕೇವಲ ಹಿರಿಯರಷ್ಟೇ ಅಲ್ಲ ಪುಟ್ಟ ಮಕ್ಕಳಿಗೂ ಒದಗಿ ಬರುವ ಕವಿ, ಅವರು ಇಂದಿನ ತರುಣರನ್ನು ತಲುಪಿದ್ದು ಹೇಗೆ, ಚಿತ್ರಗೀತೆಗಳಿಗೆ ನೀಡಿದ ಸಂಗೀತದ ಕುರಿತಾಗಿ ಹೀಗೆ ಹತ್ತು ಹಲವು ಸಂಗತಿಗಳು ಅನಾವರಣಗೊಂಡ ಬಗೆಯಂತೂ ಸಾಹಿತ್ಯಾಸಕ್ತರ ಮನ ಗೆದ್ದಿತು.

Klive Special Article ಅಂದು ಹಾಡಿದ ಹಾಡುಗಳಾದ ಇಷ್ಟು ಕಾಲ ಒಟ್ಟಿಗಿದ್ದು, ಲೋಕದ ಕಣ್ಣಿಗೆ ರಾಧೆಯು ಕೂಡ, ಬಾನಲ್ಲಿ ಓಡೋ ಮೇಘ, ಹುಚ್ಚು ಕೊಡಿ ಮನಸು, ತೂಗು ಮಂಚದಲ್ಲಿ ಕೂತು, ಮುಕ್ತ ಮುಕ್ತ ಇತ್ಯಾದಿ ಎಲ್ಲಾ ಹಾಡುಗಳು ಕೇಳುಗರನ್ನು ಮಂತ್ರಮುಗ್ಧರನ್ನಾಗಿಸಿತ್ತು. ಆ ನಿಟ್ಟಿನಲ್ಲಿ ನಮ್ಮ ಶಿವಮೊಗ್ಗದ ಪೃಥ್ವಿ ಗೌಡ, ಪಾರ್ಥ ಚಿರಂತನ್, ಸಂಗೀತ, ಸೋನಾಲಿಯೇ ಅಲ್ಲದೇ ವಿನಯಣ್ಣ ಸಹ ಹಾಡಿದ ಹಾಡುಗಳು HSV ಯವರ ಜನಪ್ರಿಯ ಗೀತೆಗಳೇ ಆದರೂ ನಮ್ಮೂರಿನ ಪ್ರತಿಭೆಗಳು ಹಾಡಿದ್ದರಿಂದ ಕೇಳಲು ಮುದ ಎನಿಸಿತು. ಸಂಗೀತದ ಅಬ್ಬರವಿಲ್ಲದೆ ಮನಮುಟ್ಟುವಂತೆ ಇದ್ದ ಹಾಡುಗಳು ಬಂದವರೆಲ್ಲರೂ ಭಾವಲೋಕದಲ್ಲಿ ಮಿಂದೇಳುವಂತೆ ಮಾಡಿತ್ತು.

ಹಾಗಾಗಿ ಈ ರೀತಿಯ ಕಾರ್ಯಕ್ರಮ ಆಯೋಜಿಸಿದ ಪ್ರಜ್ಞಾ ಬುಕ್ ಗ್ಯಾಲರಿ ಅವರಿಗೆ ವಿಶೇಷವಾದ ಅಭಿನಂದನಾ ಪೂರ್ವಕ ಕೃತಜ್ಞತೆಗಳು ಸಲ್ಲಲೇ ಬೇಕು. ಕಾರ್ಯಕ್ರಮ ಮುಗಿದ ಮೇಲೂ ಇನ್ನು ಇದೆಯೇನೋ ಎಂದು ಕುಳಿತು ಕೇಳೋಣ ಎನಿಸುವಂತೆ ಮಾಡಿದ ಎಲ್ಲ ಕಲಾವಿದರಿಗೂ ಅನಂತಾನಂತ ಧನ್ಯವಾದಗಳು.

ಡಾ. ಮೈತ್ರೇಯಿ ಆದಿತ್ಯಪ್ರಸಾದ್
ಉಪನ್ಯಾಸಕರು ಪೇಸ್ ಕಾಲೇಜ್ ಶಿವಮೊಗ್ಗ.

Friends Center Shivamogga ಚಾರಣಗಳಲ್ಲಿ ಪಾಲ್ಗೊಳ್ಳುವುದರಿಂದ ಜೀವನೋತ್ಸಾಹ ವೃದ್ಧಿ

0

Friends Center Shivamogga ಬದುಕಿನ ಒತ್ತಡಗಳ ನಡುವೆ ಪ್ರವಾಸ, ಚಾರಣಗಳಲ್ಲಿ ಪಾಲ್ಗೊಳ್ಳುವುದರಿಂದ ಜೀವನೋತ್ಸಾಹ ವೃದ್ಧಿಯಾಗುತ್ತದೆ ಎಂದು ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಬಿ.ಜಿ.ಧನರಾಜ್ ಹೇಳಿದರು.
ಫ್ರೆಂಡ್ಸ್ ಸೆಂಟರ್ ವತಿಯಿಂದ ಆಯೋಜಿಸಿದ್ದ ಮಳೆಗಾಲದ ಪ್ರವಾಸ ಹಾಗೂ ಚಾರಣಗಳನ್ನು ಉದ್ದೇಶಿಸಿ ಮಾತನಾಡಿ, ಪ್ರವಾಸದಿಂದ ಪರಸ್ಪರರಲ್ಲಿ ಒಡನಾಟ ಹಾಗೂ ಪರಿಚಯವಾಗುವ ಜತೆಗೆ ಅವರ ಪ್ರತಿಭೆ ಅನಾವರಣಗೊಳ್ಳುತ್ತದೆ. ಹೊಸ ಹೊಸ ಸ್ಥಳಗಳ ಪರಿಚಯವಾಗುತ್ತದೆ. ಅಲ್ಲಿಯ ಜನರ ಜೀವನ ಬದುಕು ತಿಳಿಯುತ್ತದೆ. ಆದ್ದರಿಂದ ವರ್ಷದಲ್ಲಿ ಒಂದು ಎರಡು ಬಾರಿ ಪ್ರವಾಸ ಮಾಡುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಮಳೆಗಾಲದಲ್ಲಿ ವಿಶೇಷ ಅನುಭವವನ್ನು ನೀಡುವಂತಹ ಸ್ಥಳಗಳು ಶಿವಮೊಗ್ಗ ಜಿಲ್ಲೆಯಲ್ಲಿ ಸಾಕಷ್ಟು ಇವೆ. ಅವುಗಳನ್ನು ಭೇಟಿ ಮಾಡಿ ಪ್ರವಾಸಿ ತಾಣಗಳ ಪರಿಚಯ ಮಾಡಿಕೊಳ್ಳಬೇಕು ಎಂದರು.
ಫ್ರೆಂಡ್ಸ್ ಸೆಂಟರ್ ಮಾಜಿ ಅಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಪ್ರವಾಸ ಹಾಗೂ ಚಾರಣದಿಂದ ದೇಹ ಹಾಗೂ ಮನಸ್ಸು ಸದೃಢವಾಗಿರುತ್ತದೆ. ಮಳೆಗಾಲದಲ್ಲಿ ಪ್ರಕೃತಿ ಮಾತೆಯನ್ನು ನೋಡಲು ಬಹಳ ಸುಂದರವಾಗಿರುತ್ತದೆ. ಪ್ರಕೃತಿಯನ್ನು ನಾವು ಪ್ರೀತಿಸಿ ಗೌರವಿಸಿ ಸಂರಕ್ಷಿಸಬೇಕು. ಪ್ರವಾಸಿ ತಾಣಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಜತೆಗೆ ಪ್ರವಾಸಿಗರಿಗೆ ಬೇಕಾದ ಸೂಕ್ತ ವ್ಯವಸ್ಥೆಗಳನ್ನು ಇಲಾಖೆ ವತಿಯಿಂದ ಮಾಡಬೇಕು ಎಂದು ನುಡಿದರು.
Friends Center Shivamogga ಫ್ರೆಂಡ್ಸ್ ಸೆಂಟರ್ ಚೇರ್ಮನ್ ವಿ ನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿ 84 ಪ್ರಸಿದ್ಧ ಪ್ರವಾಸಿ ತಾಣಗಳು ಇವೆ. ಪ್ರವಾಸೋದ್ಯಮ ಬೆಳೆಯಬೇಕಾದರೆ ಸಾರ್ವಜನಿಕರ ಸಹಕಾರವು ಅಷ್ಟೇ ಮುಖ್ಯವಾಗಿರುತ್ತದೆ. ಅವರಿಗೆ ಸೂಕ್ತ ಹಾಗೂ ಮೂಲ ವ್ಯವಸ್ಥೆಗಳ ಅವಶ್ಯಕತೆ ಇರುತ್ತದೆ. ಪ್ರವಾಸೋದ್ಯಮ ಇಲಾಖೆ ಸಹಕರಿಸಬೇಕಾಗಿದೆ ಎಂದು ಹೇಳಿದರು.
ಮೃಘವಧೆ, ಹರಿಹರಪುರ, ಕುಪ್ಪಳ್ಳಿ, ಶಕಟಾಪುರ, ಶೃಂಗೇರಿ ಹಾಗೂ ಮುಂತಾದ ದಳಗಳಿಗೆ ಏರ್ಪಡಿದ್ದ ಪ್ರವಾಸದಲ್ಲಿ ಫ್ರೆಂಡ್ಸ್ ಸೆಂಟರ್ ಸದಸ್ಯರು ಪಾಲ್ಗೊಂಡು ಪ್ರವಾಸಿ ತಾಣಗಳನ್ನು ಭೇಟಿ ನೀಡಿ ಸಂಭ್ರಮಿಸಿದರು. ಶೃಂಗೇರಿ ಹಾಗೂ ಹರಿಹರಪುರದಲ್ಲಿ ಪ್ರವಾಸಿ ಸ್ಥಳಗಳನ್ನು ಸ್ವಚ್ಛಗೊಳಿಸಿದರು.
ಫ್ರೆಂಡ್ಸ್ ಸೆಂಟರ್ ನೇತ್ರ ಭಂಡಾರದ ಚೇರ್ಮನ್ ವಿ.ನಾಗರಾಜ್, ಮಾಜಿ ಅಧ್ಯಕ್ಷ ಸತ್ಯನಾರಾಯಣ್ ಮಹೇಶ್ವರಪ್ಪ, ರಮೇಶ್, ಸುರೇಶ್, ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಬಿಂದು ವಿಜಯ ಕುಮಾರ್, ಎಲ್ ಎಂ ಮೋಹನ್, ಯು ರವೀಂದ್ರನಾಥ್ ಐತಾಳ್, ಎಮ್ ಶಂಕರ್ ಹಿರೇಮಠ್, ದ್ವಾರಕನಾಥ್ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Pinnacle Data Services ಪಿನಾಕಲ್‌ನಿಂದ ಪರಿಸರ ಜಾಗೃತಿ, ಸಾಮಾಜಿಕ ಸೇವೆ ಕಾರ್ಯಕ್ರಮ

0

Pinnacle Data Services ಪಿನಾಕಲ್ ಡೇಟಾ ಸರ್ವೀಸ್ ಸಂಸ್ಥೆಯ ಸಿಎಸ್‌ಆರ್ ಸಮಿತಿಯಿಂದ ಶಿವಮೊಗ್ಗದಲ್ಲಿ ಹಸಿರು ಅಭಿಯಾನ ಮತ್ತು ಸಾಮಾಜಿಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನೂರಾರು ಸಸಿಗಳನ್ನು ನೆಡುವ ಜತೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವ ಸಾರಲಾಯಿತು.
ಪಿನಾಕಲ್ ಡೇಟಾ ಸರ್ವೀಸ್ ಸಂಸ್ಥೆಯು ಕಾರ್ಪೋರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ (ಸಿಎಸ್‌ಆರ್) ಸಮಿತಿಯು ಪರಿಸರ ಸಂರಕ್ಷಣೆಯತ್ತ ಮತ್ತು ಸಮಾಜದ ಕಲ್ಯಾಣದತ್ತ ಒತ್ತು ನೀಡುವ ಉದ್ದೇಶದಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು.
ಕಾರ್ಯಕ್ರಮದ ಅಂಗವಾಗಿ ಶಿವಮೊಗ್ಗ ಹುಲಿ ಮತ್ತು ಸಿಂಹಧಾಮ ಉದ್ಯಾನವನದಲ್ಲಿ ಹಮ್ಮಿಕೊಂಡ ಹಸಿರು ಅಭಿಯಾನದಲ್ಲಿ 102 ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮವನ್ನು ಪಿನಾಕಲ್ ಡೇಟಾ ಸರ್ವೀಸ್ ಸಂಸ್ಥೆ ನಿರ್ದೇಶಕರಾದ ರವಿಕುಮಾರ್ ಎನ್.ಎಸ್., ರೋಹಿತ್, ಬಾಲಕೃಷ್ಣ ನಾಯಕ್ ಮತ್ತು ಆರಾಧನಾ ಆಸ್ಪತ್ರೆಯ ವೈದ್ಯೆ ಡಾ. ಶೋಭಾ ಎಂ.ಎಂ. ನೇತೃತ್ವ ವಹಿಸಿದ್ದರು. ಸಂಸ್ಥೆಯ ನೌಕರರು ಮತ್ತು ಸ್ಥಳೀಯ ಪರಿಸರ ಸಂರಕ್ಷಕರು ಸಹಭಾಗಿಯಾಗಿ ಹಸಿರೀಕರಣ ಕಾರ್ಯಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
Pinnacle Data Services ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ತಂಡವು ಶಿವಮೊಗ್ಗದ ಆಶಾಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗೆ ಭೇಟಿ ನೀಡಿ, ಅಲ್ಲಿನ ಮಕ್ಕಳಿಗೆ ಪುಸ್ತಕಗಳು ಮತ್ತು ಹುಡೀಸ್‌ಗಳನ್ನು ವಿತರಿಸಿತು. ಸಮಾನತೆ, ಸಹಾನುಭೂತಿ ಮತ್ತು ಸಾಮಾಜಿಕ ಜವಾಬ್ದಾರಿಯ ಮೌಲ್ಯಗಳನ್ನು ಸಾರ್ವಜನಿಕರಲ್ಲಿ ಹರಡುವ ಉದ್ದೇಶ ಇಡಲಾಗಿದೆ.
ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಕಾರ್ಯಕ್ರಮಗಳು ಸ್ಥಳೀಯ ಸಮುದಾಯದಿಂದ ಉತ್ತಮ ಪ್ರತಿಕ್ರಿಯೆ ಪಡೆಯಿತು. ಪಿನಾಕಲ್ ಸಂಸ್ಥೆಯ ಸಮಾಜಮುಖಿ ದೃಷ್ಟಿಕೋನವನ್ನು ಕಾರ್ಯಕ್ರಮಗಳು ಮತ್ತಷ್ಟು ಬಿಂಬಿಸಿದವು.