Saturday, February 7, 2026
Saturday, February 7, 2026
Home Blog Page 29

Mallapur ಭದ್ರಾವತಿ ತಾಲ್ಲೂಕಿನ ಮಲ್ಲಾಪುರ ಗೇಟ್ ಬಳಿಹಸುಕಂದ ಪತ್ತೆ. ಸಾರ್ವಜನಿಕ ಪ್ರಕಟಣೆ.

0

Mallapur ಭದ್ರಾವತಿ ತಾಲ್ಲೂಕು, ಮಲ್ಲಾಪುರ ಗ್ರಾಮದ ಗೇಟ್ ಹತ್ತಿರ ರಸ್ತೆ ಬದಿ ಮಗು ಪತ್ತೆಯಾಗಿದ್ದು ಹೊಳೆಹೊನ್ನೂರು ಪೋಲೀಸ್ ಠಾಣಾಧಿಕಾರಿಗಳು ಸಾರ್ವಜನಿಕರ ಮಾಹಿತಿ ಮೇರೆಗೆ ರಕ್ಷಿಸಿ ದಿನಾಂಕ: 16.12.2025 ರಂದು ಪೋಷಕರ ಪತ್ತೆಗಾಗಿ ದೂರು ದಾಖಲಿಸಿ ಮಕ್ಕಳ ಕಲ್ಯಾಣ ಸಮಿತಿ ಶಿವಮೊಗ್ಗ ಇಲ್ಲಿಗೆ ದಾಖಲಿಸಿರುತ್ತಾರೆ.

Mallapur ಮಗುವಿನ ಮುಂದಿನ ಪುನರ್ವಸತಿ ಹಿತದೃಷ್ಠಿಯಿಂದ ಮಗುವಿನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಅಥವಾ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅಧೀಕ್ಷಕರು, ಸರ್ಕಾರಿ ಬಾಲಕರ ಬಾಲಮಂದಿರ, ಆಲ್ಕೊಳ, ಶಿವಮೊಗ್ಗ ಇವರ ಕಛೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-295511 ಗೆ ಸಂಪರ್ಕಿಸಲು ಕೋರಿದೆ.

Shimoga News ಮೆನೇಜ್ ಮೆಂಟ್ & ರಿಸರ್ಚ್ ಪ್ರೋಗ್ರಾಂ ಡಿಪ್ಲೊಮಾ ವ್ಯಾಸಂಗ ಮಾಡಲು ಮಾಜಿ‌ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ.

0

Shimoga News ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನ, ಶೃಂಗೇರಿ ಶಾರದಾ ಪೀಠಂ ಇವರು ಸಶಸ್ತ್ರಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸೇವೆ ಸಲ್ಲಿಸಿದ ಸೈನಿಕರು ಮತ್ತು ಮಾಜಿ ಸೈನಿಕರ ಮಕ್ಕಳಿಗೆ 2026-28ನೇ ಶೈಕ್ಷಣಿಕ ವರ್ಷದಲ್ಲಿ ಕೆಲವು ಷರತ್ತುಗಳೊಂದಿಗೆ ಶಿಷ್ಯವೇತನವನ್ನೊಳಗೊಂಡ ಸ್ನಾತಕೋತ್ತರ ಪದವಿ “ಡಿಪ್ಲೋಮ ಇನ್ ಮೇನೇಜೆಂಟ್ ಅಂಡ್ ರಿಸರ್ಚ್ ಪ್ರೋಗ್ರಾಂ” ವ್ಯಾಸಂಗಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Shimoga News ಆಸಕ್ತರು ಶೀಘ್ರದಲ್ಲಿ ಅರ್ಜಿ ಸಲ್ಲಿಸಲು ಕೋರಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ 9218084965/66 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Bharat Petroleum ಭಾರತ್ ಪೆಟ್ರೋಲಿಯಂ ಸಂಸ್ಥೆಯ ಉತ್ಪನ್ನಗಳ ಮಾರಾಟ ಸೇವೆ: ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ.

0

Bharat Petroleum ಭಾರತ್ ಪೆಟ್ರೋಲಿಯಂ ಸಂಸ್ಥೆ, ಮಂಗಳೂರು ಪ್ರದೇಶದ ಭಂಟ್ವಾಳ ತಾಲ್ಲೂಕಿನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ ಕುರಿತಂತೆ ಸೇವೆಯನ್ನು ಒದಗಿಸಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

Bharat Petroleum ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮುಖಾಂತರ ಜ. 12 ರೊಳಗಾಗಿ ಅರ್ಜಿಯನ್ನು ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ “www.bharatpetroleum.in“ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.

Bhadravati Police Station ಯುವತಿ ನಾಪತ್ತೆ. ಭದ್ರಾವತಿ ಪೊಲೀಸ್ ಠಾಣೆ ಪ್ರಕಟಣಾ ಮಾಹಿತಿ.

0

Bhadravati Police Station ಅಲ್ಮಾಸ್ ಪರ್ವೀನ್ ಎನ್ ಆರ್, 25 ವರ್ಷ ವಯಸ್ಸು ಈಕೆಯು ಭದ್ರಾವತಿಯ ಸಿಗೇಬಾಗಿಯಲ್ಲಿರುವ ರಾಜೀವ್‌ಗಾಂಧಿ ಬಿ.ಎಡ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಮನೆಯಿಂದ ಹೋದವಳು ಹಿಂದುರುಗಿ ಬಂದಿರುವುದಿಲ್ಲ.

ಕಾಣೆಯಾದ ಅಲ್ಮಾಸ್ ಪರ್ವೀನ್ 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಉರ್ದು, ಹಿಂದಿ, ಕನ್ನಡ, ಇಂಗ್ಲೀಷ್ ಭಾಷೆ ಮಾತಾನಾಡುತ್ತಾಳೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಟಾಪ್, ಪಿಂಕ್ ಬಣ್ಣದ ಲೆಗಿನ್ಸ್ ಪ್ಯಾಂಟು, ಬಿಳಿ ಗೆರೆಗಳಿರುವ ಕಪ್ಪು ಬಣ್ಣದ ಬುರ್ಖಾ, ಕಾಫಿ ಬಣ್ಣದ ವೇಲ್ ಧರಿಸಿರುತ್ತಾಳೆ.

Bhadravati Police Station ಈಕೆಯ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಹಳೇನಗರ ಪೊಲೀಸ್ ಠಾಣೆ, ಭದ್ರಾವತಿ ಇಲ್ಲಿಗೆ ಮಾಹಿತಿ ನೀಡಬೇಕೆಂದು ಭದ್ರಾವತಿ ಹಳೇನಗರ ಪೊಲೀಸ್ ಠಾಣೆ ಕೋರಿದೆ.

Shimoga Telex ಶಿವಮೊಗ್ಗ ” ಟೆಲೆಕ್ಸ್” ಪತ್ರಿಕೆಯ ಆರ್.ಪಿ.ಭರತ್ ರಾಜ್ ಸಿಂಗ್ ಅವರಿಗೆ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ.

0

Shimoga Telex ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಉಪಸಂಪಾದಕರಾದ ಆರ್. ಪಿ. ಭರತ್ ರಾಜ್ ಸಿಂಗ್ 2025ನೇ ಸಾಲಿನ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ನಿವೃತ್ತ ಪ್ರಾಂಶುಪಾಲರಾದ ಪುಟ್ಟುಸಿಂಗ್ ಅವರ ಪುತ್ರರಾದ ಬಿ.ಎ ಪದವೀಧರ ಆರ್. ಪಿ ಭರತ್‌ರಾಜ್‌ಸಿಂಗ್ ಅವರು ಸಾಮಾಜಿಕ ಬದಲಾವಣೆಯ ಚಳವಳಿಯ ಭಾಗವಾಗಿ 1989ರಲ್ಲಿ ಶಿವಮೊಗ್ಗ ಎಕ್ಸ್ ಪ್ರೆಸ್ ಕನ್ನಡ ದಿನಪತ್ರಿಕೆಯನ್ನು ಆರಂಭಿಸುವ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟರು. ಆರ್ಥಿಕ ಮುಗ್ಗಟ್ಟಿನಿಂದ ಪತ್ರಿಕೆ ಮುನ್ನಡೆಸಲಾಗದೆ 1991 ರಿಂದ ಸ್ವಾತಂತ್ರ್ಯ ಹೋರಾಟಗಾರರು, ಜನಪರ ಚಳವಳಿಗಾರರು ಆದ ಶ್ರೀನಿವಾಸ್ ಅಯ್ಯಂಗಾರ್, ಸಿ.ಎಸ್.ಚಂದ್ರಭೂಪಾಲ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಸಹ್ಯಾದ್ರಿ ದಿನಪತ್ರಿಕೆಯ ವರದಿಗಾರರಾಗಿ ಮತ್ತು ಅನೇಕ ರಾಜ್ಯಮಟ್ಟದ ದಿನಪತ್ರಿಕೆಗಳಿಗೆ ವರದಿಗಳನ್ನು ಬರೆಯುತ್ತಿದ್ದರು.

Shimoga Telex 1997 ರಿಂದ ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆಯ ಉಪಸಂಪಾದಕರಾಗಿ ಸೇವೆ ಸಲ್ಲಿಸುತ್ತಿರುವ ಆರ್.ಪಿ.ಭರತ್‌ರಾಜ್ ಸಿಂಗ್ ಪ್ರಾಮಾಣಿಕ, ವೃತ್ತಿಪರ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವುದು ಜಿಲ್ಲೆಯ ಪತ್ರಿಕೋದ್ಯಮದ ಹೆಗ್ಗಳಿಕೆಯಾಗಿದೆ.

ಆರ್.ಪಿ.ಭರತ್ ರಾಜ್ ಸಿಂಗ್ ಅವರ ಮೂರುವರೆ ದಶಕಗಳಿಗೂ ಹೆಚ್ಚಿನ ಕಾಲ ಪತ್ರಕರ್ತರಾಗಿ ವೃತ್ತಿಪರತೆ, ಬದ್ದತೆಯಿಂದ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ 2025 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಮಾಡಿದೆ.
ಪ್ರಶಸ್ತಿಯು 50 ಸಾವಿರ ರೂ. ನಗದು, ಪ್ರಶಸ್ತಿ ಫಲಕ ಹೊಂದಿರುತ್ತದೆ.

KSRTC ರಾಜ್ಯ ಸಾರಿಗೆ ಸಂಸ್ಥೆಯ ಕೆಲವು ಬಸ್ ಪ್ರಯಾಣ ದರಗಳಲ್ಲಿ ಶೇ 5 ರಿಂದ 15 ವರೆಗೆ ರಿಯಾಯಿತಿ.

0

KSRTC ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೆಲವು ಆಯ್ದ ಮಾರ್ಗಗಳ ಬಸ್‌ ಪ್ರಯಾಣ ದರದಲ್ಲಿ ಶೇ.5 ರಿಂದ 15ರ ವರೆಗೆ ರಿಯಾಯಿತಿ ಘೋಷಿಸಲಾಗಿದೆ.

ಬೆಂಗಳೂರಿನಿಂದ ಮಂಗಳೂರು, ಕುಂದಾಪುರ, ಉಡುಪಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಪುತ್ತೂರು, ಮಡಿಕೇರಿ, ದಾವಣಗೆರೆ, ಶಿವಮೊಗ್ಗ, ಚೆನ್ನೈ, ಹೈದರಾಬಾದ್‌, ತಿರುಪತಿ, ಮಂತ್ರಾಲಯ, ಮುಂಬಯಿ, ವಿಜಯವಾಡ, ಎರ್ನಾಕುಲಂ, ಮಧುರೈ, ಕೊಯಮತ್ತೂರು ಮಾರ್ಗಗಳಲ್ಲಿ ರಿಯಾಯಿತಿ ನೀಡಿದೆ.

KSRTC ಇಷ್ಟು ಮಾರ್ಗಗಳ ಜೊತೆಗೆ ಕೆಲವು ಆಯ್ದ ಮಾರ್ಗಗಳಲ್ಲಿ ಸಂಚರಿಸುವ ರಾಜಹಂಸ, ನಾನ್‌ ಎಸಿ ಸ್ಲೀಪರ್‌, ಐರಾವತ, ಐರಾವತ ಕ್ಲಬ್‌ ಕ್ಲಾಸ್‌, ಎಸಿ ಸ್ಲೀಪರ್‌, ಮಲ್ಟಿ ಆಕ್ಸೆಲ್‌ ಎಸಿ ಸ್ಲೀಪರ್‌ ಮಾದರಿಯ ಬಸ್‌ಗಳಿಗೂ ಅನ್ವಯಿಸುತ್ತದೆ.

Bharat Scouts and Guides ಭಾರತ್ ಸ್ಕೌಟ್ಸ್ & ಗೈಡ್ಸ್ ವತಿಯಿಂದ ಶತಮಾನೋತ್ಸವ ಸಂಭ್ರಮಕ್ಕೆ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರಿಗೆ ಆಹ್ವಾನ.

0

Bharat Scouts and Guides ಜಿಲ್ಲಾ ವರಿಷ್ಟಾದಿಯಧಿಕಾರಿಗಳಾಗಿ ಶಿವಮೊಗ್ಗಕ್ಕೆ ಆಗಮಿಸಿ ಅಧಿಕಾರ ವಹಿಸಿಕೊಂಡ ನಿಖಿಲ್ ಸರ್. ರವರಿಗೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆ ವತಿಯಿಂದ ಆತ್ಮೀಯವಾಗಿ ಅಭಿನಂದಿಸಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಇದೇ ತಿಂಗಳು ದಿನಾಂಕ 10 ಮತ್ತು 11ರಂದು. ಸ್ಕೌಟ್ಸ್ ಅಂಡ್ ಗೈಡ್ಸ್ ನ
ಶತಮಾನೋತ್ಸವ ಹಾಗೂ ಜಿಲ್ಲಾ ಮಟ್ಟದ ರ್ಯಾಲಿ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಆಮಂತ್ರಣ ಪತ್ರಿಕೆ ನೀಡಿ ವಿನಂತಿಸಿಕೊಳ್ಳಲಾಯಿತು.

Bharat Scouts and Guides ಕಾರ್ಯಕ್ರಮದಲ್ಲಿ ಪ್ರಧಾನ ಆಯುಕ್ತರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ್. ಕೇಂದ್ರ ಸ್ಟಾನಿಕ ಆಯುಕ್ತರುಗಳಾದ .. ಜಿ ವಿಜಯಕುಮಾರ್. ಕೆ ರವಿ. ಎಸ್ ಜಿ ಆನಂದ್. ಮಲ್ಲಿಕಾರ್ಜುನ ಖಾನೂರ್. ಜಿಲ್ಲಾ ಕಾರ್ಯದರ್ಶಿ ಕೆ ವಿ ಚಂದ್ರಶೇಖರಯ್ಯ ಜಿಲ್ಲಾ ಖಜಾಂಚಿ. ಚೂಡಾಮಣಿ ಈ ಪವಾರ್. ಜಿಲ್ಲಾ ತರಬೇತಿ ಆಯುಕ್ತರನಾದ ಚಂದ್ರಶೇಖರಯ್ಯ ಕೃಷ್ಣ ಸ್ವಾಮಿ. ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಚಟುವಟಿಕೆಗಳ ಬಗ್ಗೆ ತಿಳಿಸಿ ಮಕ್ಕಳಿಗೆ ರಸ್ತೆ ಅಪಘಾತ ಹಾಗೂ ಕಾನೂನಿನ ಬಗ್ಗೆ ಅರಿವು ಮೂಡಿಸಲು ಕೇಳಿಕೊಳ್ಳಲಾಯಿತು.

Krishna Byre Gowda ಈಗ ಉಪ ವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ಕಛೇರಿ ದಾಖಲೆಗಳ ಡಿಜಿಟಲೀಕರಣ- ಸಚಿವ ಕೃಷ್ಣ ಬೈರೇಗೌಡ.

0

Krishna Byre Gowda ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದೆ.

ಕಳೆದ ವರ್ಷ ಜನವರಿಯಲ್ಲಿ ಎಲ್ಲ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ ಡಿಜಿಟಲೀಕರಿಸಲಾಗಿತ್ತು.

Krishna Byre Gowda ಇದೀಗ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ದಾಖಲೆಗಳ ಸ್ಕ್ಯಾನಿಂಗ್‌ಗೂ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

e-Aasthi ನಗರ & ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸಾರ್ವಜನಿಕರಿಗೂ” ಇ- ಖಾತಾ ” ನೀಡಲು ತೀರ್ಮಾನ

0

e-Aasthi ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯದೇ ನಿವೇಶನಗಳನ್ನು ರಚಿಸಿರುವ ಅಥವಾ ಮಾರಾಟ ಮಾಡುವ ಪ್ರಕ್ರಿಯೆಯನ್ನು ತಡೆಯುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ.

e-Aasthi ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಅನಧಿಕೃತವಾಗಿ ರಚಿಸಿರುವ ಬಡಾವಣೆಗಳ ಬಿ – ಖಾತಾ ನಿವೇಶನ / ಕಟ್ಟಡ / ಅಪಾರ್ಟ್‌ಮೆಂಟ್‌ಗಳಿಗೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯುವ ಷರತ್ತಿಗೆ ಒಳಪಟ್ಟು ಎ – ಖಾತಾ ನೀಡಲು ತೀರ್ಮಾನಿಸಲಾಗಿದೆ.

CM Siddaramaiah ರಾಜ್ಯದ ಹದಿಹರೆಯದ ಹೆಣ್ಣುಮಕ್ಕಳ ಸಬಲೀಕರಣಕ್ಕೆ ಸರ್ಕಾರ ಬದ್ಧ.- ಸಿದ್ಧರಾಮಯ್ಯ.

0

CM Siddaramaiah ‘ಶುಚಿತ್ವದ ನಡಿಗೆ – ಹೆಣ್ಣುಮಕ್ಕಳ ಆತ್ಮವಿಶ್ವಾಸದ ಕಡೆಗೆ’ ಎಂಬ ಘೋಷವಾಕ್ಯದೊಂದಿಗೆ ರಾಜ್ಯ ಸರ್ಕಾರವು ಹೆಣ್ಣುಮಕ್ಕಳ ಸಬಲೀಕರಣಕ್ಕೆ ಬದ್ಧವಾಗಿದ್ದು, ರಾಜ್ಯದ ಹದಿಹರೆಯದ ಹೆಣ್ಣುಮಕ್ಕಳ ಋತುಚಕ್ರದ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ 71.83 ಕೋಟಿ ರೂ ಅನುದಾನ ಬಿಡುಗಡೆ ಮಾಡುವ ಮೂಲಕ ‘ಶುಚಿ’ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಿದರು.

CM Siddaramaiah ನಾಡಿನ ಸುಮಾರು 19 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈ ಯೋಜನೆಯ ಫಲಾನುಭವಿಗಳು. ‘ಶುಚಿ’ ಯೋಜನೆಯ ಪರಿಣಾಮಕಾರಿ ಅನುಷ್ಠಾನದಿಂದ 2,35,74,084 ಸ್ಯಾನಿಟರಿ ಪ್ಯಾಡ್ ಯುನಿಟ್‌ಗಳ ವಿತರಣೆ ಮಾಡಲಾಗುತ್ತಿದೆ. 10,38,912 ಸುಸ್ಥಿರ ‘ಮುಟ್ಟಿನ ಕಪ್’ (Menstrual Cups) ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರಿ ಹಾಗೂ ಅನುದಾನಿತ ಶಾಲೆ, ಕಾಲೇಜು ಮತ್ತು ಹಾಸ್ಟೆಲ್‌ಗಳ ಎಲ್ಲಾ ನೋಂದಾಯಿತ ವಿದ್ಯಾರ್ಥಿನಿಯರಿಗೆ ಇದರ ಸೌಲಭ್ಯ ತಲುಪುತ್ತದೆ. 6 ರಿಂದ 8ನೇ ತರಗತಿ ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ಹಾಗೂ 9ನೇ ತರಗತಿಯಿಂದ ಪಿಯುಸಿ ವಿದ್ಯಾರ್ಥಿನಿಯರಿಗೆ ಪ್ಯಾಡ್‌ಗಳ ಜೊತೆಗೆ ಪರಿಸರ ಸ್ನೇಹಿ ಮುಟ್ಟಿನ ಕಪ್ ನೀಡಲಾಗುತ್ತಿದೆ ಎಂದರು.