Wednesday, May 6, 2026
Wednesday, May 6, 2026
Home Blog Page 29

Shivamogga News ಕಾ.ಎಂ.ಲಿಂಗಪ್ಪನವರು, ಅಸಹಾಯಕರು ಮತ್ತು ದುರ್ಬಲ ಜನತೆಯ ಪರ ಧ್ವನಿಯಾಗಿದ್ದರು- ಡಿ.ರವಿಕುಮಾರ್.

0

Shivamogga News ನಾಡು ಕಂಡಂತಹ ಹಿರಿಯ ದಣಿವರಿಯದ ಅಕ್ಷರದ ದನಿ ಕಾಮ್ರೇಡ್ ಎಂ ಲಿಂಗಪ್ಪರವರು ಸಾಮಾಜಿಕ ಕಳಕಳಿ, ಸಾಮಾಜಿಕ ನ್ಯಾಯ, ಅಸಹಾಯಕರ, ದುರ್ಬಲ ಜನತೆಯ ಪರವಾಗಿ ಪ್ರತಿಧ್ವನಿಸಿದ್ದ ವಿಶೇಷ ವ್ಯಕ್ತಿತ್ವದ ರಾಜಿರಹಿತ ಪತ್ರಕರ್ತರಾಗಿದ್ದರು’ ಎಂದು ತಿಳಿದುಕೊಂಡಿದ್ದೆ, ಅವರನ್ನು ನಗರದ ವಿವಿದೆಡೆ ದರ್ಶಿಸಿಯು ಇದ್ದೆ, ಅವರ ಕೆಂಪು ಪೋಷಾಕು, ಟೋಪಿ, ಹೆಗಲಿಗೆ ಮೈಕ್ ಹಾಕಿಕೊಂಡು, ಕೈಯಲ್ಲಿ ಪತ್ರಿಕೆ ಇಟ್ಟುಕೊಂಡು ಸಾರ್ವಜನಿಕರ ಗಮನ ಸೆಳೆದಿದ್ದರು, ಈ ಮೂಲಕ ಆಡಳಿತ ವ್ಯವಸ್ಥೆಯನ್ನು ಎಚ್ಚರಿಸುತ್ತಿದ್ದು ಇಂದಿಗೂ ಯಾರು ಮಾಡಲಾಗದ ಹೋರಾಟದ ಗಣಿಯಾಗಿದ್ದರು ಎಂದು ಶಿಕಾರಿಪುರದ “ಅಕ್ಷರ ಎಜುಕೇಷನ್ ಟ್ರಸ್ಟ್ ” ಸಂಸ್ಥಾಪಕರಾದ ಡಿ ರವಿಕುಮಾರ್ ಅಭಿಪ್ರಾಯಪಟ್ಟರು,
ಅವರು ಶಿವಮೊಗ್ಗ ನಗರದ ಆರ್’ಟಿಓ ಕಚೇರಿ ರಸ್ತೆಯಲ್ಲಿರುವ ಶ್ರೀ ಕಲಾ ಕೌಶಲ್ಯ ಅಭಿವೃದ್ದಿ ಕೇಂದ್ರ ಆವರಣದಲ್ಲಿ ಏಪ್ರಿಲ್ 09 ರ ಸಂಜೆ ‘ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೋರಂ’ ಸಂಘಟನೆವತಿಯಿಂದ ಆಯೋಜಿಸಿದ್ದ ದಿವಂಗತರಾದ ಹಿರಿಯ ಪತ್ರಕರ್ತ ‘ಕಾಮ್ರೇಡ್ ಎಂ ಲಿಂಗಪ್ಪ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಬರಪೂರತೆಯಿಂದ ಮಾತನಾಡಿದರು.

ಹಿಂದುಳಿದ ಜನಜಾಗೃತಿ ಸಮಿತಿ ಸಂಚಾಲಕರಾದ ಆರ್ ಟಿ ನಟರಾಜ್ ಅವರು ಮಾತನಾಡಿ, ‘ಕಾಮ್ರೇಡ್ ಎಂ ಲಿಂಗಪ್ಪರೊಂದಿಗೆ ತಮಗೆ ಹಲವು ದಶಕಗಳ ಒಡನಾಟವಿತ್ತು. ಯಾವುದೇ ಮರ್ಜಿ – ಮುಲಾಜಿಗೂ ಒಳಗಾಗುತ್ತಿರಲಿಲ್ಲ. ನೊಂದವರಿಗೆ ನ್ಯಾಯ ಕೊಡಿಸುತ್ತಿದ್ದರು. ಹೋರಾಟದ ದೊಡ್ಡ ಧ್ವನಿಯಾಗಿದ್ದರು’ ಎಂದು ತಿಳಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಕಾರ್ಪೋರೇಟರ್ ಐಡಿಯಲ್ ಗೋಪಿ, ( ಜಿ ಗೋಪಾಲಕೃಷ್ಣ ) ಅವರು ಮಾತನಾಡಿ, ‘ತಾವೊಬ್ಬ ರಾಜಕಾರಣಿಯಾಗಲು ಕಾಮ್ರೇಡ್ ಅವರು ಕಾರಣಕರ್ತರಾಗಿದ್ದಾರೆ. ಅವರ ಹೋರಾಟದ ಸ್ಪೂರ್ತಿಯೇ ಪಾಲಿಕೆಯ ಜವಾಬ್ದಾರಿಯನ್ನು ನಿರ್ವಹಿಸಲು ಸಾಧ್ಯವಾಗಿದೆ, ದುರ್ಗಿಗುಡಿ ರಸ್ತೆಯ ತಮ್ಮ ಮನೆಯ ಬಳಿಯೇ ಅವರ ಮನೆಯಿತ್ತು. ಬಾಲ್ಯದಿಂದಲೇ ತಮ್ಮಲ್ಲಿ ನಾಯಕತ್ವ ಗುಣ ಬೆಳೆಸಿದ್ದರು. ಅವರು ಚುನಾವಣೆಗೆ ನಿಂತಾಗ ತಾವು ಅವರೊಂದಿಗೆ ಪ್ರಚಾರಕ್ಕೆ ತೆರಳುತ್ತಿದ್ದೆ. ಅವರಂತಹ ಕೆಚ್ಚೆದೆಯ ಹೋರಾಟಗಾರರನ್ನು ತಾವು ನೋಡಿಲ್ಲ’ ಎಂದು ಅವರ ವ್ಯಕ್ತಿತ್ವದ ಗುಣಗಾನ ಮಾಡಿದರು.
ವಕೀಲರಾದ ಗೀತಾ ಮಾನೆ ಅವರು ಮಾತನಾಡಿ, ‘ಕಾಮ್ರೇಡ್ ಅವರ ಹೆಸರಿನಲ್ಲಿ ಸಮಾಜದ ವಿವಿಧ ವರ್ಗಗಳ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ನಿಜಕ್ಕೂ ಅಭಿನಂದನೀಯ, ಮಾದರಿಯಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಹೊತ್ತಿನ ತಲೆಮಾರಿನ ಯುವ ಸಮುದಾಯಕ್ಕೆ ಮಾದರಿ ಎಂದು ತಿಳಿಸಿದರು,
ಇದಕ್ಕೂ ಮುನ್ನ ಸಂಘಟನೆಯ ಅಧ್ಯಕ್ಷ ಗಾರಾ ಶ್ರೀನಿವಾಸ್ ಅವರು ಮಾತನಾಡಿದರು. ‘ಕಾಮ್ರೇಡ್ ದೈಹಿಕವಾಗಿ ದೂರವಾಗಿರಬಹುದು. ಆದರೆ ಅವರ ಹೋರಾಟದ ಜೀವನ ಅವಿಸ್ಮರಣೀಯ. ಅವರ ನೆನಪು ಸದಾ ಕಾಲವಿರಬೇಕೆಂಬ ಉದ್ದೇಶದಿಂದ ಅವರ ಹೆಸರಿನಲ್ಲಿ ಪ್ರತಿ ವರ್ಷ ಸಮಾಜದ ವಿವಿಧ ವರ್ಗಗಳ ಸಾಧಕರನ್ನು ಗುರುತಿಸಿ ಸಂಘಟನೆಯಿಂದ ಗೌರವಿಸಲಾಗುವುದು’ ಎಂದು ತಿಳಿಸಿದರು.

Shivamogga News ಜೆಎನ್’ಎನ್’ಸಿಇ ಉಪನ್ಯಾಸಕ ಸುರೇಶ್ ಹೆಚ್ ಬಿ ಅವರು ಕಾಮ್ರೇಡ್ ಒಡನಾಟದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. ವೇದಿಕೆಯಲ್ಲಿ ಸಂಘದ ನಿರ್ದೇಶಕರಾದ ದಯಾನಂದ್, ಕಾಮ್ರೇಡ್ ಅವರ ಮೊಮ್ಮಗ ಅಶೋಕ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಪರಮೇಶ್, ಪ್ರಧಾನ ಕಾರ್ಯದರ್ಶಿ ನವೀನ್ ತಲಾರಿ, ನಿರ್ದೇಶಕರಾದ ಚಿರಂಜೀವಿ ಬಾಬು, ಶೃತಿ ಶೇಟ್, ಅನಿಲ್ ಕುಮಾರ್, ಎಂ ಎನ್ ಸಿಗ್ಬತ್ ಉಲ್ಲಾ, ಕರವೇ ಕಿರಣ್ ಕುಮಾರ್, ಪತ್ರಿಕಾ ವಿತರಕ ಸಂಘದ ಮುಖಂಡ ಮಾಲತೇಶ್ ಸೇರಿದಂತೆ ಮೊದಲಾದವರಿದ್ದರು.

ಸಿನಿಮಾ ನಟ, ಪತ್ರಕರ್ತ, ಬರಹಗಾರ, ವಕೀಲರಿಗೆ ಪ್ರಶಸ್ತಿ ಪ್ರದಾನ
ಸಿನಿಮಾ ನಟ ರಘುರಾಜ್ ಮಲ್ನಾಡ್, ಪತ್ರಕರ್ತ ಬಿ ರೇಣುಕೇಶ್, ಸಾಹಿತಿ ಖಲಂದರ್ ರಜ್ಜಿ ಬೆಜ್ಜವಳ್ಳಿ, ಯುವ ವಕೀಲರಾದ ರೇಖೇಶ್ ಮಾನೆ ಅವರಿಗೆ ‘ಕಾಮ್ರೇಡ್ ಎಂ ಲಿಂಗಪ್ಪ’ ಪ್ರಶಸ್ತಿ ನೀಡಿ ಆತ್ಮೀಯವಾಗಿ ಅಭಿನಂದಿಸಲಾಯಿತು. ಪ್ರಶಸ್ತಿ ಪುರಸ್ಕೃತರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಪತ್ರಕರ್ತ ಬಿ ರೇಣುಕೇಶ್ ಅವರು ಮಾತನಾಡಿ, ‘ಕಾಮ್ರೇಡ್ ಅವರು ತಮ್ಮ ಪತ್ರಿಕೋದ್ಯಮದ ಗುರುಗಳಾಗಿದ್ದಾರೆ. ಶೋಷಿತರು, ಬಡವರು, ನೊಂದವರ ಧ್ವನಿಯಾಗಿದ್ದರು. ತಾವು ನಂಬಿದ ತತ್ವ – ಸಿದ್ದಾಂತಗಳಿಗೆ ಬದ್ದರಾಗಿ ಜೀವನ ನಡೆಸಿದ ಅಪರೂಪದ ಪತ್ರಕರ್ತರಾಗಿದ್ದರು’ ಎಂದು ಅವರೊಂದಿಗಿನ ಒಡನಾಟ ಮೆಲುಕು ಹಾಕಿದರು

2nd PUC Exam Result 2026 ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ: ಕಳೆದ ವರ್ಷಕ್ಕಿಂತ ಶೇ10 ಹೆಚ್ಚಿನ ಸಾಧನೆ- ಎನ್.ಹೇಮಂತ್.

0

2nd PUC Exam Result 2026 ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಶಿವಮೊಗ್ಗ ಜಿಲ್ಲೆಯು ಶೇ. 87.62 ಫಲಿತಾಂಶ ಪಡೆದಿದ್ದು ಕಳೆದ ಬಾರಿಗಿಂತ ಶೇ.10 ರಷ್ಟು ಹೆಚ್ಚು ಫಲಿತಾಂಶ ಪಡೆಯುವ ಮೂಲಕ ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದು ಜಿ.ಪಂ ಸಿಇಓ ಹೇಮಂತ್ ಎನ್ ತಿಳಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಶುಕ್ರವಾರ ದ್ವಿತೀಯ ಪಿಯುಸಿ ಪರೀಕ್ಷೆ – 1 ಫಲಿತಾಂಶ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿ, 2024-25 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ.79.91 ಫಲಿತಾಂಶ ಬಂದಿದ್ದು, ಈ ಸಾಲಿನಲ್ಲಿ ಶೇ.87.62 ಫಲಿತಾಂಶ ಪಡೆಯಲಾಗಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 17532 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 15361 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ 10123 ಬಾಲಕಿಯರಲ್ಲಿ 9432 ಅಂದರೆ ಶೇ.93 ಬಾಲಕಿಯರು ಪಾಸಾಗಿದ್ದಾರೆ. ಪರೀಕ್ಷೆ ಬರೆದ 7409 ಬಾಲಕರಲ್ಲಿ 5929 ಬಾಲಕರು ಅಂದರೆ ಶೇ.81 ಬಾಲಕರು ಪಾಸಾಗಿದ್ದಾರೆ.
ಕಲಾ ವಿಭಾಗದಲ್ಲಿ 3637 ರಲ್ಲಿ 2701 , ವಾಣಿಜ್ಯ ವಿಭಾಗದಲ್ಲಿ 5865 ರಲ್ಲಿ 5139, ವಿಜ್ಞಾನ ವಿಭಾಗದಲ್ಲಿ 8030 ರಲ್ಲಿ 7521 ಪಾಸಾಗಿದ್ದಾರೆ. ನಗರ ಭಾಗದಲ್ಲಿ ಪರೀಕ್ಷೆಗೆ ಹಾಜರಾದ 10084 ವಿದ್ಯಾರ್ಥಿಗಳಲ್ಲಿ 8721 ಹಾಗೂ ಗ್ರಾಮೀಣ ಭಾಗದಲ್ಲಿ ಪರೀಕ್ಷೆಗೆ ಹಾಜರಾದ 7448 ವಿದ್ಯಾರ್ಥಿಗಳಲ್ಲಿ 6640 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಫಲಿತಾಂಶ ವಿವರ : ಜಿಲ್ಲೆಯಲ್ಲಿ ಉನ್ನತ ಶ್ರೇಣಿ 4622, ಪ್ರಥಮ ದರ್ಜೆ 8308, ದ್ವಿತೀಯ ದರ್ಜೆ 1841 ಮತ್ತು 639 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
2nd PUC Exam Result 2026 ತಾಲ್ಲೂಕುವಾರು ತೀರ್ಥಹಳ್ಳಿ ತಾಲ್ಲೂಕು ಉನ್ನತಶ್ರೇಣಿ 381, ಪ್ರಥಮ ದರ್ಜೆ 519, ದ್ವಿತೀಯ ದರ್ಜೆ 121, ಪಾಸು 26, ಶೇ.93.73 ಫಲಿತಾಂಶದೊAದಿಗೆ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಹೊಸನಗರ ಉನ್ನತ ಶ್ರೇಣಿ 177, ಪ್ರಥಮ ದರ್ಜೆ 469, ದ್ವಿತೀಯ ದರ್ಜೆ 103, ಪಾಸು 22 ಶೇ.93 ದ್ವಿತೀಯ ಸ್ಥಾನ. ಶಿವಮೊಗ್ಗ ಉನ್ನತ ಶ್ರೇಣಿ 2541, ಪ್ರಥಮ ದರ್ಜೆ 3379, ದ್ವಿತೀಯ ದರ್ಜೆ 522, ಪಾಸು 198, ಶೇ.91.28 ಮೂರನೇ ಸ್ಥಾನ. ಭದ್ರಾವತಿ ಉನ್ನತ ಶ್ರೇಣಿ 433, ಪ್ರಥಮ ದರ್ಜೆ 1046, ದ್ವಿತೀಯ ದರ್ಜೆ 292, ಪಾಸು 128 ಶೇ.84.55 ಫಲಿತಾಂಶ ಲಭಿಸಿದೆ. ಸಾಗರ ಉನ್ನತ ಶ್ರೇಣಿ 362, ಪ್ರಥಮ ದರ್ಜೆ 1070, ದ್ವಿತೀಯ ದರ್ಜೆ 307, 97 ಪಾಸು, ಶೇ83.99 ಫಲಿತಾಂಶ. ಸೊರಬ ಉನ್ನತ ಶ್ರೇಣಿ 147, ಪ್ರಥಮ ದರ್ಜೆ 759, ದ್ವಿತೀಯ ದರ್ಜೆ 256, ಪಾಸು 66, ಶೇ 83.14 ಫಲಿತಾಂಶ. ಶಿಕಾರಿಪುರ ಉನ್ನತಶ್ರೇಣಿ 581, ಪ್ರಥಮ ದರ್ಜೆ 1066, ದ್ವಿತೀಯ ದರ್ಜೆ 240, 102 ಪಾಸು ಶೇ.81.75 ಫಲಿತಾಂಶ ಲಭಿಸಿದೆ.
ಸರ್ಕಾರಿ ಶಾಲೆಗಳಲ್ಲಿ ಉನ್ನತ ಶ್ರೇಣಿ 895, ಪ್ರಥಮ ದರ್ಜೆ 3551, ದ್ವಿತೀಯ ದರ್ಜೆ 1179, ಪಾಸು 421, ಶೇ.81.01 ಫಲಿತಾಂಶ ಲಭಿಸಿದೆ.
ಅನುದಾನಿತ ಶಾಲೆಗಳಲ್ಲಿ ಉನ್ನತ ಶ್ರೇಣಿ 547 ಪ್ರಥಮ ದರ್ಜೆ 1398, ದ್ವಿತೀಯ ದರ್ಜೆ 348, ಪಾಸು 169, ಶೇ.81.01 ಫಲಿತಾಂಶ ಲಭಿಸಿದೆ.
ಅನುದಾನಿತರಹಿತ ಶಾಲೆಗಳಲ್ಲಿ ಉನ್ನತ ಶ್ರೇಣಿ 2971 ಪ್ರಥಮ ದರ್ಜೆ 3298, ದ್ವಿತೀಯ ದರ್ಜೆ 310, ಪಾಸು 49, ಶೇ.96.74 ಫಲಿತಾಂಶ ಲಭಿಸಿದೆ.
ವಸತಿ ಶಾಲೆಗಳಲ್ಲಿ ಉನ್ನತ ಶ್ರೇಣಿ 209, ಪ್ರಥಮ ದರ್ಜೆ 121, ದ್ವಿತೀಯ ದರ್ಜೆ 04, ಪಾಸು 0, ಶೇ.99.11 ಫಲಿತಾಂಶ ಲಭಿಸಿದೆ.
ಮುಂದಿನ ವರ್ಷ ಶೇ.90 ರಷ್ಟು ಫಲಿತಾಂಶ ಪಡೆಯುವ ಗುರಿ ಹೊಂದಲಾಗಿದೆ. ಸರ್ಕಾರಿ ಕಾಲೇಜುಗಳಲ್ಲಿ ಶೇ.100 ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮತ್ತು ಕಾಲೇಜುಗಳಿಗೆ ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದರು.

2nd PUC Exam Result 2026 ಗುರುಪುರ ಬಿಜಿಎಸ್ ಸ್ವತಂತ್ರ ಪಪೂ. ಕಾಲೇಜಿಗೆ ಶೇ.100 ಫಲಿತಾಂಶ ಸಾಧನೆ.

0

2nd PUC Exam Result 2026 ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಗುರುಕುಲ ಮಾದರಿಯ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಗ್ರಾಮೀಣ ಭಾಗದ ಹೆಚ್ಚು ಮಕ್ಕಳನ್ನು ಹೊಂದಿರುವ ಈ ಕಾಲೇಜು ವಿದ್ಯಾರ್ಥಿಗಳು ಈ ಬಾರಿ ದ್ವಿತೀಯ ಪಿಯುಸಿ ಯಲ್ಲಿ ಅತ್ಯುನ್ನತ ಫಲಿತಾಂಶವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ: 116 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಉನ್ನತ ಶ್ರೇಣಿ,26 ಪ್ರಥಮ ಶ್ರೇಣಿ,89, 1 ದ್ವಿತೀಯ ಶ್ರೇಣಿ ಪಡೆದಿದ್ದು,
ವಿಜ್ಞಾನ ವಿಭಾಗದಲ್ಲಿ ರಚನಾ ಎಸ್. 600 ಕ್ಕೆ 574 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದರೆ,ರಾಹುಲ್ ಎ. 570 ಅಂಕಗಳಿಸುವ ಮೂಲಕ ದ್ವಿತೀಯ ಸ್ಥಾನ ಗಳಿಸಿದ್ದಾರೆ.ಐಶ್ವರ್ಯ ಜಿ. 556 ಅಂಕಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ 26ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ: 45 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ತೇರ್ಗಡೆಯಾಗಿದ್ದು44 ವಿದ್ಯಾರ್ಥಿಗಳು, 15 ಉನ್ನತ ಶ್ರೇಣಿ ಹಾಗು 28 ಪ್ರಥಮ ಶ್ರೇಣಿಯಲ್ಲಿ, ಒಂದು ದ್ವಿತೀಯ ಶ್ರೇಣಿಯಲ್ಲಿ ಲಭಿಸಿದೆ.
ವಾಣಿಜ್ಯ ವಿಭಾಗದಲ್ಲಿ ಆರಾಧನ ಆರ್. 600 ಕ್ಕೆ 584 ಅಂಕ ಪಡೆದುಕೊಂಡು ಕಾಲೇಜಿಗೆ ಪ್ರಥಮಳಾಗಿದ್ದಾಳೆ,ಕುಶಾಲ್ ಎಂ.ಬಿ. 583 ಅಂಕಗಳಿಸಿದ್ದಾರೆ.ಲಾವಣ್ಯ ಸಿ. ಯು. 555 ಅಂಕಗಳಿಸಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
2nd PUC Exam Result 2026 ವಿದ್ಯಾರ್ಥಿಗಳ ಸಾಧನೆಯನ್ನು ಮೆಚ್ಚಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಪೂಜ್ಯ ಶ್ರೀ ನಾದಮಯಾನಂದನಾಥ ಸ್ವಾಮೀಜಿ, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್., ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

DVS Independent College ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ.ಡಿವಿಎಸ್ ಪದವಿ ಪೂರ್ವ ಕಾಲೇಜಿನ ಗಮನಾರ್ಹ ಸಾಧನೆ.

0

DVS Independent College ದ್ವಿತೀಯ ಪಿಯು ಪರೀಕ್ಷೆಯಲ್ಲಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಪದವಿಪೂರ್ವ ( ಸ್ವತಂತ್ರ) ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ರ‍್ಯಾಂಕ್ ಗಳಿಸಿದ್ದಾರೆ.
ಡಿವಿಎಸ್ ಪದವಿಪೂರ್ವ ( ಸ್ವತಂತ್ರ) ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಶೇ. 97.92, ವಾಣಿಜ್ಯ ವಿಭಾಗದಲ್ಲಿ ಶೇ. 97.30 ಮತ್ತು ಕಲಾ ವಿಭಾಗದಲ್ಲಿ ಶೇ 95.83 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 631 ವಿದ್ಯಾರ್ಥಿಗಳಲ್ಲಿ 216 ಅತ್ಯುನ್ನತ ಶ್ರೇಣಿ, 351 ಪ್ರಥಮ ಶ್ರೇಣಿ ಹಾಗೂ 38 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಎನ್.ಎಸ್.ವಸಿಷ್ಠ 595 ಅಂಕ ಪಡೆಯುವ ರಾಜ್ಯಕ್ಕೆ ಆರನೇ ರ‍್ಯಾಂಕ್ ಪಡೆದಿದ್ದು, ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾನೆ. ಪಿ.ಪೃಥ್ವಿ, ಕೆ.ಎನ್.ಸ್ನೇಹ, ಮೊಹಮ್ಮದ್ ಹುಸೇನ್ ಪಿಯು ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 591 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 10ನೇ ರ‍್ಯಾಂಕ್ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಪಿ.ಬೃಂದಾ 590 ಅಂಕ ಪಡೆದು ರಾಜ್ಯಮಟ್ಟದಲ್ಲಿ 7ನೇ ಸ್ಥಾನ ಪಡೆದಿದ್ದು, ಹರಿಪ್ರಿಯಾ ಪಿ.ಸೊರಬ 587 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 10ನೇ ಸ್ಥಾನ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಡಿವಿಎಸ್ ಸಂಸ್ಥೆಯ ನೂತನ ಆಡಳಿತ ಮಂಡಳಿ ನೇತೃತ್ವದಲ್ಲಿ ಸಂಪಾದಿಸಿ ಪ್ರಕಟಿಸಲಾದ ಚೊಚ್ಚಲ ಮಾಸಿಕ ಪತ್ರಿಕೆ ಡಿವಿಎಸ್ DVS Independent College ದೀವಿಗೆಯನ್ನು ಗುರುವಾರ ಬಿಡುಗಡೆಗೊಳಿಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ನೌಕರರ ಸಾಹಿತ್ಯಾಭಿರುಚಿ ಪ್ರೋತ್ಸಾಹಿಸುವ ದೃಷ್ಟಿಯಿಂದ “ಡಿವಿಎಸ್ ದೀವಿಗೆ” ಸಹಕಾರಿಯಾಗಲಿದೆ. ಆಡಳಿತ ಮಂಡಳಿ ಪದಾಧಿಕಾರಿಗಳು ಸಂಚಿಕೆ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಡಿವಿಎಸ್ ಆಡಳಿತ ಮಂಡಳಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎರಡು ನೂತನ ಬಸ್ ಉದ್ಘಾಟಿಸಲಾಯಿತು.
ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ರಾಜ್ಯಮಟ್ಟದ ಸಾಧನೆಗೆ ಡಿವಿಎಸ್ ಅಧ್ಯಕ್ಷ ಕೆ.ಬಸಪ್ಪ ಗೌಡ, ಕಾರ್ಯದರ್ಶಿ ಎಸ್.ಪಿ.ದಿನೇಶ್ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Sri Adi Chunchanagiri ಶ್ರೀಆದಿಚುಂಚನಗಿರಿ ಸ್ವತಂತ್ರ ಪಪೂ ಕಾಲೇಜಿಗೆ ಶೇ 99.71 ಫಲಿತಾಂಶ. ಸಂಗಡ 5 ವಿದ್ಯಾರ್ಥಿಗಳ ಉನ್ನತ ಶ್ರೇಣಿ ಸಾಧನೆ.

0

Sri Adi Chunchanagiri ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿ ದ್ವಿತೀಯ ಪಿಯುಸಿ ಯಲ್ಲಿ ಅತ್ಯುನ್ನತ ಫಲಿತಾಂಶವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಹಾಜರಾದ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ: ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳು- 351, ತೇರ್ಗಡೆಯಾದ ವಿದ್ಯಾರ್ಥಿಗಳು- 350, 209 ಡಿಸ್ಟಿಂಕ್ಷನ್,137 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 05 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದು 99.71% ಫಲಿತಾಂಶದೊಂದಿಗೆ ತೇರ್ಗಡೆ ಹೊಂದಿರುತ್ತಾರೆ.
ಈ ಸಾಧನೆಯನ್ನು ಮೆಚ್ಚಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಆಡಳಿತ ಮಂಡಳಿಯ ನಿರ್ದೇಶಕರು, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಶುಭ ಶುಭ ಹಾರೈಸಿರುತ್ತಾರೆ. ಸಲ್ಲಿಸಿರುತ್ತಾರೆ.
ಬಾಕ್ಸ್:
Sri Adi Chunchanagiri ಕಾಲೇಜಿಗೆ 5 ರ‍್ಯಾಂಕ್ ಉತ್ತಮ ಸಾಧನೆ: ಲಕ್ಷ್ಮಿ ಹೆಚ್.ಕೆ. 600ಕ್ಕೆ 593 ಅಂಕ ಪಡೆದು ರಾಜ್ಯಕ್ಕೆ 6ನೇ ರ‍್ಯಾಂಕ್ , ಜಿಯಾ ಶೇಟ್ 600 ಕ್ಕೆ 592 ಅಂಕ ಪಡೆದು 7ನೇ ರ‍್ಯಾಂಕ್ , ಫರಿಯಲ್ ಫಾತಿಮ 600 ಕ್ಕೆ 591 ಅಂಕ ಪಡೆದು 8ನೇ ರ‍್ಯಾಂಕ್ ,ತೇಜಶ್ರೀ ಎಸ್. 600 ಕ್ಕೆ 590 ಅಂಕ ಪಡೆದು 9ನೇ ರ‍್ಯಾಂಕ್ ಹಾಗೂ ಅನ್ನಪೂರ್ಣ ಜಿ.ಎಸ್. 600ಕ್ಕೆ 589 ಅಂಕ ಪಡೆದು 10ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಹಾಗೂ ಶಿವಮೊಗ್ಗ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ.

S.N. Channabasappa ಶಿವಮೊಗ್ಗ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ- ಶಾಸಕ ಎಸ್.ಎನ್.ಚನ್ನಬಸಪ್ಪ.

0

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್ ಅನ್ನು ಸುಸಜ್ಜಿತವಾಗಿ ರೂಪಿಸುವ ಮತ್ತು ನಾಗರಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಸಂಕಲ್ಪದೊಂದಿಗೆ ಇಂದು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ನಗರದ ವಿವಿಧ ಭಾಗಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ವಾರ್ಡ್ ನಂಬರ್ 5: ಪೂರಲೆ ಭಾಗದ ಅಂಬುಜ ಅಪಾರ್ಟ್‌ಮೆಂಟ್ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ.

ವಾರ್ಡ್ ನಂಬರ್ 18: ಆರ್.ಎಂ.ಎಲ್ ನಗರದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ.

ಸಾರ್ವಜನಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳನ್ನು ಅತ್ಯಂತ ಗುಣಮಟ್ಟದಿಂದ ಹಾಗೂ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ಇದೇ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

S.N. Channabasappa ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಪ್ರಮುಖರಾದ ಶ್ರೀ ಪೆರುಮಾಳ್, ಶ್ರೀ ರಮೇಶ್, ಶ್ರೀ ಜಗನ್ನಾಥ್, ಶ್ರೀ ಹರ್ಷ, ಶ್ರೀ ಮಲ್ಲಿಕಾರ್ಜುನ್, ಶ್ರೀ ಆನಂದ್, ವಾರ್ಡ್ ನ ಅಧ್ಯಕ್ಷರಾದ ಶ್ರೀ ರಮೇಶ್, ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ್, ಶ್ರೀ ಸುಧೀರ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ಧನ್ಯವಾದಗಳೊಂದಿಗೆ,
ಶಾಸಕರ ಕಚೇರಿ, ಶಿವಮೊಗ್ಗ.

MESCOM ಮೆಸ್ಕಾಂ ಕೈಗೊಂಡಿರುವ ಪೂರ್ವಾನ್ವಯ ವಿದ್ಯುತ್ ದರ ಏರಿಕೆಗೆ ಹೋಟೆಲ್ ಮಾಲೀಕರ ಸಂಘದ ವಿರೋಧ.

0

MESCOM ಮೆಸ್ಕಾಂನಿಂದ ಜಾರಿಗೆ ತರಲಾದ ಪೂರ್ವಾನ್ವಯದ ವಿದ್ಯುತ್ ದರ ಏರಿಕೆಗೆ ಶಿವಮೊಗ್ಗ ಹೋಟೆಲ್ ಮಾಲೀಕರ ಸಂಘದ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಏಪ್ರಿಲ್ 2026ರಲ್ಲಿ ವಿತರಿಸಲಾದ ಪರಿಷ್ಕೃತ ವಿದ್ಯುತ್ ಬಿಲ್‌ಗಳಲ್ಲಿ ಮೇ 2025ರಿಂದ ಮಾರ್ಚ್ 2026ರವರೆಗಿನ ಬಾಕಿ ಮೊತ್ತವನ್ನು ಪೂರ್ವಾನ್ವಯದ ದರದಲ್ಲಿ ಸೇರಿಸಲಾಗಿದೆ. ಇದರಿಂದ ಶಿವಮೊಗ್ಗದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಲಾಡ್ಜ್ ಗಳ ಮೇಲೆ ಅನಿರೀಕ್ಷಿತ ಮತ್ತು ಬಾರಿ ಆರ್ಥಿಕ ಹೊರೆ ಬಿದ್ದಿದೆ ಎಂದು ಸಂಘ ತಿಳಿಸಿದೆ.

ಹಿನ್ನೋಟದ ಬಿಲ್ಲಿಂಗ್ ಕ್ರಮವು ಅನ್ಯಾಯ. ಆರ್ಥಿಕವಾಗಿ ಹಾನಿಕಾರಕ ಮತ್ತು ನೈಸರ್ಗಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಸಂಘದ ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವ್ಯವಹಾರಗಳಿಗೆ ಮುಂಚಿತವಾಗಿ ಮಾಹಿತಿ ನೀಡಿಲ್ಲ ಅಥವಾ ಸಿದ್ಧತೆ ಮಾಡಿಕೊಳ್ಳಲು ಅವಕಾಶ ನೀಡಿಲ್ಲ ಎಂದು ದೂರಿದ್ದಾರೆ.

ಕೋವಿಡ್ ನಂತರದ ಪರಿಸ್ಥಿತಿಯಿಂದ ಚೇತರಿಸಿಕೊಳ್ಳುತ್ತಿರುವ ಮತ್ತು ಕಡಿಮೆ ಲಾಭಾಂಶದಲ್ಲಿ ನಡೆಯುತ್ತಿರುವ ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರವು ಹಠಾತ್ ಹೆಚ್ಚುವರಿ ಹೊರೆಯಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ.

ಸಂಘವು ಪ್ರಮುಖ ಅಂಶಗಳ ಬಗ್ಗೆ ಪ್ರಸ್ತಾಪಿಸಿದೆ. ಹಲವಾರು ಸಣ್ಣ ಮತ್ತು ಮಧ್ಯಮ ಗಾತ್ರದ ಹೋಟೆಲ್‌ಗಳು ಮುಚ್ಚುವ ಭೀತಿಯಲ್ಲಿವೆ. ನೂರಾರು ಕಾರ್ಮಿಕರ ಉದ್ಯೋಗಕ್ಕೆ ಅಪಾಯ ಎದುರಾಗಿದೆ. ಸ್ಥಳೀಯ ಆರ್ಥಿಕತೆ ಮತ್ತು ಪ್ರವಾಸೋದ್ಯಮ ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಶಿವಮೊಗ್ಗ ಹೋಟೆಲ್ ಮಾಲೀಕರ ಸಂಘ ಸರ್ಕಾರದ ಪ್ರಮುಖ ಬೇಡಿಕೆಗಳನ್ನು ಇಟ್ಟಿದೆ. ಪೂರ್ವಾನ್ವಯದ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು. ದರ ಪರಿಷ್ಕರಣೆಯನ್ನು ಕೇವಲ ಮುಂದಿನ ದಿನಾಂಕದಿಂದ ಮಾತ್ರ ಜಾರಿಗೆ ತರಬೇಕು. ಬಿಲ್ಲಿಂಗ್ ಲೆಕ್ಕಾಚಾರದಲ್ಲಿ ಪಾರದರ್ಶಕತೆ ಇರಬೇಕು. ಪ್ರಮುಖ ನೀತಿ ಬದಲಾವಣೆಗಳ ಮೊದಲು ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಬೇಕು.

MESCOM ಈ ಸಮಸ್ಯೆಯು ಬಗೆಹರಿಯದಿದ್ದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವನ್ನು ಸಂಪರ್ಕಿಸಲು ಮತ್ತು ಕಾನೂನು ಕ್ರಮ ಕೈಗೊಳ್ಳಲು ಸಂಘವು ನಿರ್ಧರಿಸಿದೆ. ಈ ವಿಷಯವನ್ನು ಜನಪ್ರತಿನಿಧಿಗಳ ಗಮನಕ್ಕೆ ತರಲು ಮತ್ತು ಅಗತ್ಯವಿದ್ದಲ್ಲಿ ಸಾಮೂಹಿಕ ಹೋರಾಟ ಸಂಘಟಿಸಲು ಸಂಘವು ನಿರ್ಧರಿಸಿದೆ. “ನಾವು ದರ ಪರಿಷ್ಕರಣೆಯ ವಿರುದ್ಧವಿಲ್ಲ. ಆದರೆ ಪೂರ್ವಾನ್ವಯವಾಗಿ (ಹಿನ್ನೋಟದ) ದರ ಹೇರುವುದು ಸ್ವೀಕಾರಾರ್ಹವಲ್ಲ ಮತ್ತು ಅನ್ಯಾಯದಾಯಕ” ಎಂದು ಶಿವಮೊಗ್ಗ ಹೋಟೆಲ್ ಮಾಲೀಕರ ಸಂಘ ಅಧ್ಯಕ್ಷ ಯು.ಎಂ.ಶಂಕರನಾರಾಯಣ ಹೊಳ್ಳ ಹಾಗೂ ಕಾರ್ಯದರ್ಶಿ ಎನ್.ಗೋಪಿನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2nd PUC Exam Result 2026 ಪಿಯು (ವಿಜ್ಞಾನ ) ಪರೀಕ್ಷೆ: ಶಿವಮೊಗ್ಗದ ಮಹೀನ್ ಖಾನುಂ ಗೆ600/596 ಸಾಧನೆಯ ಗರಿ.

2nd PUC Exam Result 2026 ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.

ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಮಹಿನ್ ಖಾನುಂ ಅಫ್ರಿದಿ ಅವರು 600ಕ್ಕೆ 596 ಅಂಕ ಗಳಿಸಿದ್ದಾರೆ.

ಇಂಗ್ಲಿಷ್-98, ಹಿಂದಿ-100, ಫಿಸಿಕ್ಸ್-100, ಕೆಮಿಸ್ಟ್ರಿ-99, ಗಣಿತ-100 ಹಾಗೂ ಜೀವಶಾಸ್ತ್ರ-99 ಅಂಕಗಳನ್ನು ಪಡೆದಿದ್ದಾರೆ.

2nd PUC Exam Result 2026 ಶಿವಮೊಗ್ಗ ನಗರದ ಜಬ್ಬೀರ್ ಅಹಮ್ಮದ್ ಖಾನ್ ಮತ್ತು ಆಯೆಷಾ ಸಿದ್ಧಿಕಾ ಖಾನುಂ ಪುತ್ರಿ ಮಹಿನ್ ಖಾನುಂ ಅಫ್ರಿದಿ ಅವರು ಪೇಸ್ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿದ್ದರು.

Pace PU College Shivamogga ಶಿವಮೊಗ್ಗ ಪೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ಸುಗ್ಗಿ.

Pace PU College Shivamogga 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1ಕ್ಕೆ ಶಿವಮೊಗ್ಗದ ಪೇಸ್ ಪಿ.ಯು ಕಾಲೇಜಿನ ಹಾಜರಾದ ಒಟ್ಟು 697 ವಿದ್ಯಾರ್ಥಿಗಳಲ್ಲಿ 479 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 210 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯನ್ನು, 04 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದು 99.42% ಫಲಿತಾಂಶದೊಂದಿಗೆ ತೇರ್ಗಡೆ ಹೊಂದಿರುತ್ತಾರೆ.

ಮಹಿನ್ ಖಾನುಂ ಅಫ್ರಿದಿ 600ಕ್ಕೆ 596 ಅಂಕಗಳನ್ನು ಪಡೆದು ರಾಜ್ಯಕ್ಕೆ 3ನೇ ಸ್ಥಾನ, ಸಾಧ್ವಿ ಎಂ.ಎಸ್ 600ಕ್ಕೆ 594 ಅಂಕ ಪಡೆದು ರಾಜ್ಯಕ್ಕೆ 5ನೇ ಸ್ಥಾನ, ಅಂಕಿತ್ ಯು.ವಿ , ಧೃತಿ ಎಚ್. ಭಟ್, ಹಾಗೂ ಸಿಂಚನಾ ಪಿ.ಓ. 600ಕ್ಕೆ 589 ಅಂಕ ಪಡೆದು ರಾಜ್ಯಕ್ಕೆ 10ನೇ ಸ್ಥಾನ ಪಡೆದಿದ್ದಾರೆ.

Pace PU College Shivamogga ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಕಾಲೇಜಿಗೆ ಹಾಗೂ ಶಿವಮೊಗ್ಗ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಇವರ ಈ ಸಾಧನೆಗೆ ಕಾಲೇಜಿನ ಟ್ರಸ್ಟಿಗಳು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

0

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯೋಗವು (ECI) ನಮ್ಮ ಸರ್ಕಾರಕ್ಕೆ ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿರುವುದು ಚುನಾವಣಾ ಆಯೋಗದ ಪಕ್ಷಪಾತಿತನವನ್ನು ತೋರಿಸುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

CM Siddharamaiah ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ಅಲ್ಲಿನ ಬಿಜೆಪಿ ಸರ್ಕಾರ ನಗದು ವರ್ಗಾವಣೆ ಯೋಜನೆಗಳ ಜಾರಿಮಾಡಿದಾಗ ಕಣ್ಮುಚ್ಚಿ ಕೂತಿದ್ದ ಚುನಾವಣಾ ಆಯೋಗ, ಕಳೆದ ಎರಡೂ ಮುಕ್ಕಾಲು ವರ್ಷದಿಂದ ಜಾರಿಯಿರುವ ಗ್ಯಾರಂಟಿ ಯೋಜನೆಗಳ ಲೆಕ್ಕಕೇಳಿ ನಮ್ಮನ್ನು ಬೆದರಿಸಲು ಹೊರಟಿದೆ. ಇಂಥ ಗೊಡ್ಡು ಬೆದರಿಕೆ ಬಗ್ಗುವವರು ನಾವಲ್ಲ.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಆಗಿ ತಮ್ಮ ಅನಿಸಿಕೆಯನ್ನ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.