Monday, May 4, 2026
Monday, May 4, 2026
Home Blog Page 3

Kuvempu University ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್ಸಿ,/ಬಿಸಿಎ ಪದವಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

0

Kuvempu University ಕುವೆಂಪು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ 2026-27ನೇ ಸಾಲಿಗೆ ಪ್ರಥಮ ಬಿ.ಎಸ್ಸಿ./ಬಿ.ಸಿ.ಎ. ಪದವಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಬಿ.ಎಸ್ಸಿ. ಪದವಿಯಲ್ಲಿ 15 ವಿಷಯ ಸಮೂಹಗಳಿದ್ದು, ಆಸಕ್ತ ವಿದ್ಯಾಥಿಗಳು ಜಾಲತಾಣ https://uucms.karnataka.gov.in ರಲ್ಲಿ ಜೂ. 05 ರೊಳಗಾಗಿ ಅರ್ಜಿ ಸಲ್ಲಿಸುವುದು. ಪಿಯುಸಿಯಲ್ಲಿ ಶೇ. 60% ಕ್ಕಿಂತ ಹೆಚ್ಚು ಅಂಕಗಳಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಬಿ.ಸಿ.ಎ. ಪದವಿ ಪ್ರವೇಶಕ್ಕೆ ಮೆರಿಟ್ ಆಧಾರದ ಮೇಲೆ ಪ್ರತ್ಯೇಕ ರ‍್ಯಾಂಕ್ ಪಟ್ಟಿ ಪ್ರಕಟಿಸಲಾಗುವುದು ಎಂದು ಕಾಲೇಜಿನ ಪ್ರಾಚಾರ್ಯರು ತಿಳಿಸಿರುತ್ತಾರೆ.

Kuvempu University ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-240435 ನ್ನು ಸಂಪಕಿಸುವುದು.

Department of School Education and Literacy ಮೇ 2.ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ” ದಿ.ಎಸ್.ಬಂಗಾರಪ್ಪ ಬಡಾವಣೆ” ನಾಮಕರಣ ಕಾರ್ಯಕ್ರಮ

0

Department of School Education and Literacy ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ-2), ಎನ್.ಜಿ.ಟಿ. ಅನುದಾನದ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ ಮಾಜಿ ಮುಖ್ಯಮಂತ್ರಿ “ದಿ|| ಶ್ರೀ ಎಸ್. ಬಂಗಾರಪ್ಪ ಬಡಾವಣೆ” ಎಂಬ ನಾಮಕರಣ ಸಮಾರಂಭವನ್ನು ಮೇ 02 ರಂದು ಬೆಳಗ್ಗೆ ಬೊಮ್ಮನಕಟ್ಟೆ ‘ಬಿ’ ಬ್ಲಾಕ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಬಿ.ಎಸ್. ಸುರೇಶ್‌ರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಉಪ ಆಯುಕ್ತರು ಮತ್ತು ಪಾಲಿಕೆಯ ಅಧಿಕಾರಿ/ಸಿಬ್ಬಂದಿ ವರ್ಗದವರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

Mysore Chamarajendra Government College of Visual Arts ಮೈಸೂರು ದೃಶ್ಯಕಲಾ ಕಾಲೇಜಿನಲ್ಲಿ 2026-27 ನೇ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ/ಸಂಪನ್ಮೂಲ ವ್ಯಕ್ತಿಗಳ ಸ್ಥಾನಕ್ಕೆ ನೇಮಕಾತಿ ಪ್ರಕಟಣೆ

0

Mysore Chamarajendra Government College of Visual Arts ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ/ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಛಿಸುವವರಿಂದ ಗೌರವ ಸಂಭಾವನೆ ಆಧಾರದ ಮೇಲೆ ಷರತ್ತು ಹಾಗೂ ನಿಬಂಧನೆಗಳನ್ವಯ ಕಾರ್ಯನಿರ್ವಹಿಸಲು ಅರ್ಜಿಗಳನ್ನು ಅಹ್ವಾನಿಸಿದೆ.

ಬಿ.ವಿ.ಎ/ಎಂ.ಬಿ.ಎ.ವಿದ್ಯಾರ್ಥಿಗಳು ಸೇರಿದಂತೆ ಅನ್ವಯ ಕಲೆ, ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ(ಗ್ರಾಫಿಕ್ಸ್) ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮಗಳ ಪ್ರಾಯೋಗಿಕ ಮತ್ತು ಥಿಯರಿ, ಕಲಾ ಇತಿಹಾಸದ ಥಿಯರಿ ಬೋಧನೆಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55%ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.

ಕನ್ನಡ, ಇಂಗ್ಲೀಷ್, ಹಿಂದಿ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಆಯಾ ಭಾಷಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಭಾರತ ಮತ್ತು ಭಾರತೀಯ ಸಂವಿಧಾನ ಹಾಗೂ ಸಂವಿಧಾನದ ಮೌಲ್ಯಗಳು ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಮತ್ತು ಪರಿಸರ ಅಧ್ಯಯನಕ್ಕೆ ಸಂಬಂಧಿಸಿದಂತೆ ಎಂ.ಎಸ್‌ಸಿ (ಇವಿಎಸ್) ಸ್ನಾತಕೋತ್ತರ ಪದವಿ ಪಡೆದಿರಬೇಕು.

chamarajendra Government College of Visual Arts ಆಸಕ್ತರು ಕರ್ನಾಟಕ ಸರ್ಕಾರದ ಅಂತರ್ಜಾಲ www.mysore.nic.in ಮತ್ತು www.cavamysore.karnataka.gov.in ದ ಮೂಲಕ ಮಾಹಿತಿ ಪಡೆದು ಅರ್ಜಿಯನ್ನು ಮೇ 15 ರೊಳಗಾಗಿ ಸಲ್ಲಿಸುವುದು. ಮೇ 19 ರಂದು 11.00ಕ್ಕೆ ಸಂಸ್ಥೆಯಲ್ಲಿ ಸಂದರ್ಶನ ನಡೆಸಿ ತರಗತಿಗಳು ಅನ್ವಯವಾಗುವಂತೆ ಕಾರ್ಯ ನಿರ್ವಹಿಸಲು ತಿಳಿಸಲಾಗುವುದು ಎಂದು ಮೈಸೂರು ಕಾವಾ ಡೀನ್ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಹಾಗೂ ದೂ.ಸಂ.: 0821-2438931 ನ್ನು ಸಂಪರ್ಕಿಸುವುದು.

ಶಿವಮೊಗ್ಗ ಗ್ರೂಪ್ ಆಶ್ರಯದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆ

0

ಈ ದಿವಸ ವಿಶ್ವ ಕಾರ್ಮಿಕ ದಿನಾಚರಣೆಯ ಸುಸಂದರ್ಭದಲ್ಲಿ ನಮ್ಮ ಶಿವಮೊಗ್ಗ ಗ್ರೂಪ್ ನ ಅಧ್ಯಕ್ಷರಾದ ಟಿ. ಅನಿಲ್ ಕುಮಾರ್, ವಕೀಲರು ಶಿವಮೊಗ್ಗ ರವರ ನೇತೃತ್ವದಲ್ಲಿ ಡಿ ಪ್ರವೀಣ, ಪೊಲೀಸ್ ಇಲಾಖೆ, ಪ್ರವೀಣ್. ಜಿ.ಪಿ. ಚಲನಚಿತ್ರ ನಿರ್ದೇಶಕರು ಬೆಂಗಳೂರು, ಚಿತ್ರೇಶ್, ಡಿ ಪ್ರವೀಣ್, ಸಿವಿಲ್ ಇಂಜಿನಿಯರ್, ಆನಂದ್, ಮಗರ್ ಡಿಸೈನರ್ಸ್ ಶಿವಮೊಗ್ಗ,
ಪ್ರೊಫೆಸರ್ ಮಂಜುನಾಥ್ ಪ್ರಾಂಶುಪಾಲರು, ಶಿವಕುಮಾರ್. ಎಸ್.ಬಿ. ಕರವೇ ಕಾವಲುಪಡೆ ಜಿಲ್ಲಾಧ್ಯಕ್ಷರು, ಕರವೇ ಪತ್ರಿಕಾ ಸಂಚಾಲಕರು ಮಾಲತೇಶ್ ಶಿವಮೊಗ್ಗ. ಕರವೇ ಕಿರಣ್ ಇನ್ನು ಮುಂತಾದವರು ಹಾಜರಿದ್ದು ಶಿವಮೊಗ್ಗದ ಮಹಾನಗರಪಾಲಿಕೆಯ ಪೌರಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರೊಂದಿಗೆ ವಿಶ್ವ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗಿರುತ್ತದೆ.

ಮೇ 8ರಿಂದ ಯಾದವ ಸ್ಕೂಲ್ ಆಫ್ ಚೆಸ್ ನಿಂದ ಬೇಸಿಗೆ ರಜೆ ಚೆಸ್ ಶಿಬಿರ

0

ಶಿವಮೊಗ್ಗನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ ಭಾರಿಯ ಬೇಸಿಗೆ ರಜೆ ನಿಮಿತ್ತ ಮೇ 8ರಿಂದ 13ರವರೆಗೆ ಪ್ರತಿ ದಿನ ಬೆಳಿಗ್ಗೆ 10:30 ರಿಂದ 11:30 ರವರೆಗೆ, ಸಂಜೆ 5ರಿಂದ 6:30ಗಂಟೆವರೆಗೆ ರವೀಂದ್ರನಗರ ದಲ್ಲಿರುವ (ಶ್ರೀನಿವಾಸ ಕೃಪ) ಶಾಖೆಯಲ್ಲಿ ಎರಡು ಬ್ಯಾಚ್‌ಗಳಲ್ಲಿ ಚೆಸ್ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.
ಚೆಸ್ ಆಟವು ಮಾನಸಿಕ ಹಾಗೂ ಬೌದಿಕವಾಗಿ ವಿದ್ಯಾರ್ಥಿಗಳನ್ನು ಸಬಲಿಗೊಳಿಸುವಲ್ಲಿ ಪ್ರಪಂಚದ ಎಲ್ಲಾ ಆಟಗಳಿಗಿಂತ ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿ ಬ್ಯಾಚ್‌ನಲ್ಲಿ 10 ಮಕ್ಕಳಿಗೆ ಮಾತ್ರ ಅವಕಾಶವಿದೆ. ಮಾಹಿತಿಗೆ ಹಾಗೂ ಹೆಸರು ನೊಂದಾಯಿಸಲು ಪ್ರಾಣೇಶ್ ಯಾದವ್ ಮೊ. ೯೨೪೨೪ ೦೧೭೦೨, ೯೭೪೩೮೧೯೬೭೮ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

ಶಿಕ್ಷಕರೇ..ಮನಬಿಚ್ಚಿ ಪಾಠ ಬೋಧಿಸಿ- ಡಾ.ಕೆ.ಶ್ರೀಪತಿ ಭಟ್ ಹಳಗುಂದ

0

“ನಾವುಗಳು ಬೋಧಿಸುವ ಪ್ರತೀ ವಿದ್ಯಾರ್ಥಿಯೂ ಈ ದೇಶದ ರಾಷ್ಟ್ರಪತಿಯಾಗುವ ಯೋಗವಿದೆ ಎಂದು ತಿಳಿದು ಬೋಧನೆ ಮಾಡಬೇಕು ಇದು ನಿಮ್ಮಂತಹ ಶಿಕ್ಷಕರಾಗುವವರಿಗೆ ಮಾತ್ರ ಸಾಧ್ಯ ಎಂದು ತಿಳಿಯಬೇಕು. ಯಾರ ಹೃದಯ ಮುಚ್ಚಿಕೊಂಡೆ ಇರುತ್ತದೆಯೋ ಅವರಿಗೆ ಪ್ರಪಂಚವೂ ಮುಚ್ಚಿರುತ್ತದೆ.

ತೆರೆಯಿರಿ ನಿಮ್ಮ ಮನಸ್ಸನ್ನು. ಮನಬಿಚ್ಚಿ ವಿದ್ಯಾರ್ಥಿಗಳಿಗೆ ಬೋಧಿಸಬೇಕು. ಶಿಕ್ಷಕರಿಗೆ ಡ್ರೆಸ್ ಕೋಡ್ ಬೇಕೇ ಬೇಕು. ನೋಡಿದ ತಕ್ಷಣ ವಿದ್ಯಾರ್ಥಿಗಳಿಗೆ ಈತ ಶಿಕ್ಷಕ ಎಂದು ಕಾಣಬೇಕು. ಶಿಕ್ಷಣವನ್ನು ನಾವು ದಿನನಿತ್ಯ ಬೇಡಬೇಕು. ಅದು ಓದಿನ ಮೂಲಕ, ಬೋಧನೆಯ ಮೂಲಕ, ಸಾಹಿತ್ಯದ ಮೂಲಕ ಮನವರಿಕೆ ಮಾಡಿಕೊಂಡಾಗ ಮಾತ್ರ ಉತ್ತಮ ಶಿಕ್ಷಕನಾಗಲು ಸಾಧ್ಯ. ಇದೂ ಒಂದು ನಿಮ್ಮ ದೊಡ್ಡ ಸಾಧನೆ. ನಿಮ್ಮ ಜೀವನದ ತುಂಬಾ ಓದುತ್ತಿರಬೇಕು. ಗೋಪಾಳಕೃಷ್ಣ ಅಡಿಗ, ದ.ರಾ. ಬೇಂದ್ರೆ, ಚಂದ್ರಶೇಖರ ಕಂಬಾರ, ಶಿವರಾಮ ಕಾರಂತ, ಪಂಪ, ರನ್ನ, ಕುಮಾರವ್ಯಾಸ ಇವರುಗಳ ಸಾಹಿತ್ಯವನ್ನು ಅರಗಿಸಿಕೊಂಡು ವಿದ್ಯಾರ್ಥಿಗಳಿಗೆ ಬೋಧನೆ ಮಾಡಿದಾಗ ಮಾತ್ರ ಒಳ್ಳೆಯ ಶಿಕ್ಷಕನಾಗಲು ಸಾಧ್ಯ. ತಮ್ಮ ವೃತ್ತಿ ಜೀವನವನ್ನು ಗೌರವಿಸಿ, ಸಂತೋಷಪಡಿ. ಉತ್ತಮ ಶಿಕ್ಷಕರಾಗಿ ಪಾಠ ಮಾಡಿ, ಶಬ್ದ, ವ್ಯಾಕರಣ, ಕವನ, ಕವಿತೆ, ನಾಟಕಗಳನ್ನು ಮನದಟ್ಟಾಗಿ ವಿದ್ಯಾರ್ಥಿಗಳಿಗೆ ಬೋಧಿಸಿ, ಅವರುಗಳು ತಮ್ಮ ಜೀವಮಾನದುದ್ದಕ್ಕೂ ನೆನಪಿಡುತ್ತಾರೆ. ಈ ಕಾಲೇಜಿನಲ್ಲಿ ನಾನು ವಿದ್ಯಾರ್ಥಿಯಾಗಿದ್ದಾಗ ರೇಣುಕಪ್ಪ ಗೌಡ, ಪ್ರಭುಸ್ವಾಮಿ ಮಠ್, ಇಂತಹ ಕನ್ನಡ ಶಿಕ್ಷಕರು ಸದಾ ನೆನಪಾಗುತ್ತಾರೆ. ಅವರುಗಳ ಪ್ರೇರಣೆಯಿಂದ ಈಗ ನಾನು ಬೋಧಿಸಿರುವ ಸಾವಿರಾರು ವಿದ್ಯಾರ್ಥಿಗಳು ನನ್ನ ನೆನಪನ್ನು ಮಾಡಿಕೊಳ್ಳುತ್ತಾರೆ. ಎಲ್ಲರೂ ಇತಿಹಾಸವನ್ನು ಓದಬೇಕು. ಇತಿಹಾಸವನ್ನು ಓದದವ ಇತಿಹಾಸವನ್ನು ನಿರ್ಮಿಸಲಾರ ಎಂಬುದನ್ನು ತಿಳಿಯಿರಿ. ಉತ್ತಮ ಶಿಕ್ಷಕರಾಗಿ ವಿದ್ಯಾರ್ಥಿಗಳನ್ನು ಈ ದೇಶದ ಆಸ್ತಿಯನ್ನಾಗಿ ಮಾಡುವ ಹೊಣೆ ನಿಮ್ಮ ಮೇಲಿದೆ. ನಿಮ್ಮ ಭವಿಷ್ಯ ಉಜ್ವಲವಾಗಿಲಿ, ಜೀವಂತವಾಗಿರಲಿ ಎಂದು ಎಂದು ಡಾ. ಕೆ. ಶ್ರೀಪತಿ, ಹಳಗುಂದ, ಮುಖ್ಯಸ್ಥರು, ಕನ್ನಡ ವಿಭಾಗ, ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸನಗರ, ಇವರು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನವು ನಡೆಸುತ್ತಿರುವ ಡಾ. ಜಿ.ಎ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದ 2025-27ನೇ ಸಾಲಿನ ವಿದ್ಯಾರ್ಥಿ ವೇದಿಕೆ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಮೊದಲು ಪ್ರಾರ್ಥನೆ ಚಿದಂಬರ ಮತ್ತು ಸಂಗಡಿಗರು ಮಾಡಿದರು. ಡಾ. ಶಿಲ್ಪ ವಿ.ಎನ್., ಪ್ರಾಚಾರ್ಯರು, ಡಾ. ಜಿ.ಎ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯ ಇವರು ಸರ್ವರನ್ನೂ ಸ್ವಾಗತಿಸಿದರು. ಪ್ರಥಮ ವರ್ಷದ ಕು. ಚಿನ್ಮಯ್ ವಿದ್ಯಾರ್ಥಿ
ಕಾರ್ಯದರ್ಶಿ, ಕು. ಅನುಷಾ ಎನ್.ಎಲ್, ಸಹ-ಕಾರ್ಯದರ್ಶಿ ವಿದ್ಯಾರ್ಥಿ ವೇದಿಕೆ ವಾರ್ಷಿಕ ಕ್ರಿಯಾ ಯೋಜನೆಯ ವರದಿಯನ್ನು ಓದಿದರು. ಕು. ಅಂಕಿತಾ, ಸಹ-ಕಾರ್ಯದರ್ಶಿ ಇವರು ಉದ್ಘಾಟಕರ ಪರಿಚಯ ಮಾಡಿದರು.
ಸಭೆಯ ಅಧ್ಯಕ್ಷತೆಯನ್ನು ಎಂ.ಡಿ.ಎಫ್.ನ ಅಧ್ಯಕ್ಷರಾದ ಬಿ.ಆರ್. ಜಯಂತ್ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ. ಹೆಚ್.ಎಂ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಡಿ.ಎಫ್., ಕೆ.ಎಂ. ಸೂರ್ಯನಾರಾಯಣ, ಉಪಾಧ್ಯಕ್ಷರು ಎಂ.ಡಿ.ಎಫ್., ಕೆ. ವೆಂಕಟೇಶ್, ಕವಲಕೋಡು, ಕೋಶಾಧ್ಯಕ್ಷರು ಎಂ.ಡಿ.ಎಫ್., ನಾಗೇಂದ್ರ, ವಿದ್ಯಾರ್ಥಿ ವೇದಿಕೆಯ ಕಾರ್ಯದರ್ಶಿ ಇವರುಗಳು ಉಪಸ್ಥಿತರಿದ್ದರು. ಕಿರಣ ಜಿ.ಎಂ. ದ್ವಿತೀಯ ವರ್ಷದ ಬಿ.ಇಡಿ ವಿದ್ಯಾರ್ಥಿ ಇವರು ಸರ್ವರಿಗೂ ವಂದನಾರ್ಪಣೆ ತಿಳಿಸಿದರು.

ಜಗತ್ತಿಗೆ ಅಹಿಂಸೆ, ಕರುಣೆ ,ಶಾಂತಿ ಸಂದೇಶ ಸಾರಿದ ಮಾನವತಾವಾದಿ ಭಗವಾನ್ ಬುದ್ಧ- ಸಿ.ಎಸ್.ಚಂದ್ರಭೂಪಾಲ್

0

ಬುದ್ದನನ್ನು‌ ನಮ್ಮೊಳಗೆ ಇಳಿಸಿಕೊಳ್ಳುವ ಇಚ್ಛಾಶಕ್ತಿ ಇರಬೇಕು. ಆಗ ಶಾಂತಿ, ನೆಮ್ಮದಿ ಲಭಿಸಲು ಸಾಧ್ಯವಾಗುತ್ತದೆ ಎಂದು
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ್ ನುಡಿದರು.
ಜಿಲ್ಲಾಡಳಿತ, ಜಿ.ಪಂ. ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಭಗವಾನ್ ಶ್ರೀ ಬುದ್ದರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ‌ ಮಾತನಾಡಿದರು.
ಬುದ್ದ ಜಗತ್ತಿಗೆ ಅಹಿಂಸೆ, ಕರುಣೆ ಮತ್ತು ಶಾಂತಿಯ ಸಂದೇಶವನ್ನು ಸಾರಿದ ಮಹಾ ಮಾನವತಾವಾದಿ.
ಬದುಕಿಗೆ ಜ್ಞಾನವನ್ನು ನೀಡಿದ ಜ್ಞಾನಿ‌ ಇವರಾಗಿದ್ದು
ಜೀವನದಲ್ಲಿ ಪರಿಶುದ್ದತೆಯನ್ನು ಅಳವಡಿಸಿಕೊಳ್ಳಬೇಕು. ಮನುಷ್ಯ ಮನುಷ್ಯನಾಗಿ ಬದುಕುವ , ಇತರರಿಗೆ ಸಹಾಯ ಮಾಡುವಂತಹ ಗುಣ ಹೊಂದಬೇಕೆಂದು ಸಾರಿದ್ದಾರೆ.
ಇಂತಹ ಬುದ್ದನ ತತ್ವಗಳು ಸರಳವಾಗಿದ್ದು ನಾವೆಲ್ಲ ಅಳವಡಿಸಿಕೊಳ್ಳೋಣವೆಂದು ಕರೆ ನೀಡಿದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಿರಿವಂತೆ ‘ಚಿತ್ರಸಿರಿ’ಯ ಚಂದ್ರಶೇಖರ್ ಎನ್ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, 2600 ವರ್ಷಗಳ ಇತಿಹಾಸ ಹೊಂದಿರುವ ಬುದ್ದನ ಕಾಲದಲ್ಲಿ ಲಿಪಿ ಇರಲಿಲ್ಲ. ಸುಮಾರು ಒಂದೂವರೆ ಶತಮಾನಗಳ ನಂತರ ಬಂದ ಪಾಲಿ ಭಾಷೆಯಲ್ಲಿ ಬುದ್ದನ ಇತಿಹಾಸ ಬರೆದಿಡಲಾಗಿದೆ. ಅಂದರೆ ಅಲ್ಲಿಯವರೆಗೆ ಬುದ್ದ ಜನರ ಬಾಯಿಂದ ಬಾಯಿಗೆ, ಜನಪದದ ಮೂಲಕ ಸಾಗಿ‌ ಬರುವುದನ್ನು ಕಾಣಬಹುದಾಗಿದೆ.
ಬುದ್ದ ಎಂದಿಗೂ ರೂಢಿಗತ ಬದುಕನ್ನು‌ ಕಣ್ಣು ಮುಚ್ಚಿ‌ ನಂಬಲಿಲ್ಲ. ಪ್ರತಿಯೊಂದನ್ನು ಪ್ರಶ್ನೆ ಮಾಡುತ್ತಿದ್ದ. ಈ ಗುಣವೇ ಬುದ್ದನನ್ನು ನಮ್ಮವರೆಗೆ ಕರೆ ತಂದಿದೆ. ಈ ಪ್ರಶ್ನೆ ಕೇಳುವ ಗುಣ ಎಲ್ಲರಲ್ಲಿ ಬೆಳೆಯಬೇಕು.
ಬುದ್ದ ಬಾಲ್ಯದಿಂದಲೇ ಹಿಂಸೆಯನ್ನು‌, ಮನುಷ್ಯ ಮನುಷ್ಯನನ್ನು ಶೋಷಿಸುವುದನ್ನು
ವಿರೋಧಿಸುತ್ತಿದ್ದ. ಸಂಸ್ಕೃತಿಯನ್ನು ಉನ್ನತೀಕರಿಸುವ ತುಡಿತ ಅವನಲ್ಲಿ‌ ಇತ್ತು ಎಂದ ಅವರು ನಾವೆಲ್ಲ ಮಾನಸಿಕ ಸಂಸ್ಕೃತಿಯನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದರು.
ಬುದ್ಧನು ಅಂದಿನ ಕಾಲದ ಸಾಮಾಜಿಕ ತಾರತಮ್ಯಗಳನ್ನು ಬಲವಾಗಿ ವಿರೋಧಿಸುತ್ತಿದ್ದರು. ಮೇಲು-ಕೀಳು ಎನ್ನುವ ಭೇದಭಾವವಿಲ್ಲದೆ ಎಲ್ಲರಿಗೂ ಧರ್ಮದ ಬಾಗಿಲನ್ನು ತೆರೆಯುತ್ತಾರೆ.
ಮೌಢ್ಯ,ಅಸಮಾನತೆ, ತಾರತಮ್ಯ ಹೋಗಲಾಡಿಸುವ ಮಾರ್ಗೋಪಾಯವಾಗಿ ತನ್ನ ಕಾಲ್ನಡಿಗೆಯ ಮೂಲಕ ಪ್ರಯಾಣ ಮಾಡುತ್ತಾನೆ.
ಹುಟ್ಟು, ಬುದುಕು ಅಂದರೆ ಏನೆಂಬ ಪ್ರಶ್ನೆ ಸದಾ ಅವನಿಗೆ ಕಾಡುತ್ತಿತ್ತು. ಹಾಗೂ ಆಕಸ್ಮಿಕವಾದ ಹುಟ್ಟು ಮತ್ತು ಸಾವು ಸಹ ಬುದ್ದನನ್ನು ಸದಾ ಕಾಡುತ್ತಿತ್ತು.
ಮನುಷ್ಯನ ಆಸೆಗೆ ಮಿತಿ ಇರಬೇಕು ಎನ್ನುತ್ತಾ ಆಸೆಯೇ ದುಃಖಕ್ಕೆ ಮೂಲ ಎಂದು ಸಾರುತ್ತಾನೆ. ಹಾಗೂ ಸಾವಿಲ್ಲದ ಮನೆ ಸಾಸಿವೆ ತರುವ ಪ್ರಸಂಗದ ಮೂಲಕ ದುಃಖ ಸಾರ್ವತ್ರಿಕ ಎಂದು ಸಾರಿದ್ದಾನೆ.
ಇದ್ದದನ್ನು ಇದ್ದ ಹಾಗೆ ಹೇಳಿದ ಏಕೈಕ ವ್ಯಕ್ತಿ ಯಾರಾದರೂ ಇದ್ದರೆ ಅದು ಬುದ್ದ.
ಇನ್ನೊಬ್ಬರನ್ನು ಅರ್ಥ ಮಾಡಕೊಳ್ಳುವ ಗುಣ, ನಮ್ಮ ನಮ್ಮೊಳಗೇ ಮಾನಸಿಕ ಹಿಂಸೆ ಕೊಟ್ಟುಕೊಳ್ಳುವುದನ್ನು ಬಿಡಬೇಕು.
ದಾನ ಕೊಡುವುದನ್ನು ರೂಢಿಸಿಕೊಳ್ಳಬೇಕು ಎಂದು ಅಂದೇ ಸಾರಿದ್ದರು. ವೈಚಾರಿಕ ಚಿಂತನೆ ಬೆಳಿಸಿಕೊಳ್ಳಬೇಕು. ಅದಕ್ಕಾಗಿ ನಾವು ಅಧ್ಯಯನ ಶೀಲರಾಗಬೇಕು ಎಂದಿದ್ದರು ಎಂದ ಅವರು ಬುದ್ದ ಸೂಕ್ಷ್ಮವಾಗಿ ಜೀವನದ ಎಲ್ಲ‌ ಅಂಶಗಳನ್ನು ತಿಳಿಸಿದ್ದು, ನಾವು ನಮ್ಮೊಳಗೆ ಬುದ್ದನನ್ನು‌ ಇಳಿಸಿಕೊಂಡರೆ ಎಲ್ಲವೂ ಅರ್ಥ ಆಗುತ್ತದೆ ಎಂದು ತಿಳಿಸಿದರು.
ಬುದ್ದ ಧರ್ಮಾಂಕುರ ಟ್ರಸ್ಟ್ ಅಧ್ಯಕ್ಷರಾದ ಪ್ರೊ.ರಾಚಪ್ಪ ಬುದ್ದ ವಂದನೆ ನೆರವೇರಿಸಿಕೊಟ್ಟರು. ನೀಲಪ್ಪ‌ರವರು ಬುದ್ದ ಗೀತೆಯನ್ನು ಪ್ರಸ್ತುತಪಡಿಸಿದರು.
ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಲಿಂಗರಾಜ್ ,
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಹಾಗೂ ಮುಖಂಡರು ಹಾಜರಿದ್ದರು.

Shivamogga District Police ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ: ಡ್ರೋನ್ ಮೂಲಕ ಪತ್ತೆ. ಮೂವರ ಬಂಧನ.

0

Shivamogga District Police ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಕಾನೂನು ಬಾಹೀರ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳುವ ಸಂಬಂಧ ಡ್ರೋಣ್ ಕ್ಯಾಮೆರಾ ಮುಖಾಂತರ ಕಣ್ಗಾವಲು ಇಟ್ಟಿದ್ದು, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಗಂಗೂರು ಗ್ರಾಮದ ಹೊರ ವಲಯದಲ್ಲಿ ಡ್ರೋಣ್ ಹಾರಿಸಿದಾಗ ಕೆಲವು ಜನರು ಕೋಟೆಗಂಗೂರು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿರುವುದು ಕಂಡು ಬಂದಿರುತ್ತದೆ. ನಂತರ ಈ ಬಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಧ್ಯಪಾನ ಮಾಡುತ್ತಿದ್ದ 1) ಸಂದೀಪ್, 2) ಶಿವನೇಶ ಕುಮಾರ, ಮತ್ತು 3) ಮೇಘರಾಜ್ ರವರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ, ಕರ್ನಾಟಕ ಅಬಕಾರಿ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗಿರುತ್ತದೆ.

Karnataka State Backward Classes Welfare Department ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

0

Karnataka State Backward Classes Welfare Department ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಬೆಳಗಾವಿ ಜಿಲ್ಲೆಯ ಇಲಾಖಾ ಸೇವಾ ಆಯ್ಕೆ ಪೂರ್ವ ತರಬೇತಿ ಶಾಲೆಗಳಲ್ಲಿ ಆಯೋಜಿಸಿದ್ದ ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2026-27ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ ಆರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ 13 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0820-2574881/08182-222129 ಗಳನ್ನು ಸಂಪರ್ಕಿಸುವುದು.

B.Y. Raghavendra ಶಂಕರಘಟ್ಟದ ಕಾಲೇಜಿನ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತದಲ್ಲಿ ಈರ್ವರ ಸಾವು : ಸಂಸದ ರಾಘವೇಂದ್ರ ಸಂತಾಪ

0

B.Y. Raghavendra ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಖಾಸಗಿ ಬಸ್ ಮತ್ತು ಲಾರಿ ನಡುವಿನ ಭೀಕರ ಅಪಘಾತದ ಸುದ್ದಿ ಕೇಳಿ ಮನಸ್ಸಿಗೆ ಆಘಾತ ಮತ್ತು ನೋವುಂಟಾಗಿದೆ ಎಂದು ಬಿ.ವೈ.ರಾಘವೇಂದ್ರ ಅವರು ಸಂತಾಪ ಸೂಚಿಸಿದ್ದಾರೆ.

ಈ ದುರ್ಘಟನೆಯಲ್ಲಿ ನಮ್ಮ ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಅವಾಂತರ ಸಂಭವಿಸಿರುವುದು ದುರದೃಷ್ಟಕರ. ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

B.Y. Raghavendra ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳು ಹಾಗೂ ಇತರ ಪ್ರಯಾಣಿಕರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ಕೊಡಿಸಲು ಸ್ಥಳೀಯ ಆಡಳಿತ ಮತ್ತು ಆಸ್ಪತ್ರೆಯ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದೇನೆ. ರಕ್ಷಣಾ ಕಾರ್ಯದಲ್ಲಿ ಶ್ರಮಿಸಿದ ಅಂಬ್ಯುಲೆನ್ಸ್ ತಂಡ ಹಾಗೂ ಸ್ಥಳೀಯ ಪೊಲೀಸರ ಕಾರ್ಯ ಶ್ಲಾಘನೀಯ. ಪ್ರವಾಸಿಗರು ಮತ್ತು ವಾಹನ ಸವಾರರು ಹೆದ್ದಾರಿಗಳಲ್ಲಿ ಸಂಚರಿಸುವಾಗ ಹೆಚ್ಚಿನ ಜಾಗರೂಕತೆ ವಹಿಸಬೇಕೆಂದು ಈ ಮೂಲಕ ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.