District Level Guarantee Schemes Authority ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಗಾಗಿ ಗೃಹಲಕ್ಷಿö್ಮ ಮತ್ತು ಗೃಹಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ಹಾಗೂ ಜಿಲ್ಲಾ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರವು ಸ್ವಾಗತಿಸುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ್ ತಿಳಿಸಿದರು
ಮಂಗಳವಾರ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ, ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೆಳಕಂಡ ವಿಷಯಗಳನ್ನು ಅಂಗೀಕರಿಸಿದರು.
‘ಗೃಹಲಕ್ಷ್ಮಿ’ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಸುಮಾರು 9,247 ಫಲಾನುಭವಿಗಳು ನಿಧನರಾಗಿದ್ದರೂ, ಅವರ ಬ್ಯಾಂಕ್ ಖಾತೆಗಳಿಗೆ ಇನ್ನೂ ಹಣ ಜಮೆ ಆಗುತ್ತಿರುವುದು ಹಾಗೂ ಅದನ್ನು ಬೇರೆಯವರು ಪಡೆಯುತ್ತಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಒಂದೇ ಮನೆಯಲ್ಲಿ ಇಬ್ಬರು ಅಥವಾ ಮೂವರು ಮಹಿಳೆಯರು ಯಜಮಾನಿಯರಾಗಿ ಸೌಲಭ್ಯ ಪಡೆಯುತ್ತಿರುವ ಪ್ರಕರಣಗಳೂ ಪತ್ತೆಯಾಗಿದ್ದು, ಇಂತಹ ಪ್ರಸಂಗಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಷ್ಕರಿಸಲು ಸೂಚಿಸಲಾಗಿದೆ.
ಸರ್ಕಾರಕ್ಕೆ ಆದಾಯ ತೆರಿಗೆ ಪಾವತಿಸುವವರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿರುವುದು ಪತ್ತೆಯಾಗಿದೆ. ಜಿಲ್ಲೆಯ ವರದಿಯ ಪ್ರಕಾರ ಇಂತಹ 5,618 ಅನರ್ಹರು ಯೋಜನೆಯ ಲಾಭ ಪಡೆಯುತ್ತಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. ಹೀಗಾಗಿ ಇಂತಹ ಅನರ್ಹರನ್ನು ಫಲಾನುಭವಿಗಳ ಪಟ್ಟಿಯಿಂದ ತಕ್ಷಣವೇ ತೆಗೆದುಹಾಕಲು ಕಟ್ಟುನಿಟ್ಟಿನ ಕ್ರಮ ಅನಿವಾರ್ಯವಾಗಿದೆ ಎಂದು ಸಭೆ ತಿಳಿಸಿದೆ.
ಉಚಿತ ವಿದ್ಯುತ್ ದುರ್ಬಳಕೆ – ವಾಣಿಜ್ಯ ಬಳಕೆಗೆ ಬ್ರೇಕ್: ‘ಗೃಹಜ್ಯೋತಿ’ ಯೋಜನೆಯಡಿ ಗೃಹಬಳಕೆಗಾಗಿ ನೀಡಲಾಗುವ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು, ಕೆಲವರು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವುದು ಕಂಡುಬAದಿದೆ. ಅಲ್ಲದೆ, ಒಬ್ಬರ ಹೆಸರಲ್ಲೇ ಒಂದಕ್ಕಿAತ ಹೆಚ್ಚು ಮೀಟರ್ಗಳಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಾಡಿಗೆ ಮನೆಗಳಲ್ಲಿ ನಿಜವಾದ ಫಲಾನುಭವಿಗಳಿದ್ದಾರೆಯೇ ಅಥವಾ ಬೇರೆಯವರಿದ್ದಾರೆಯೇ ಎಂದು ಸೂಕ್ತ ತನಿಖೆ ನಡೆಸಿ ಸರಿಪಡಿಸಲು ಆದೇಶಿಸಲಾಗಿದೆ.
ಸ್ಮಾರ್ಟ್ ಕಾರ್ಡ್ ಹಾಗೂ ಮತದಾನದ ಹಕ್ಕು ಕಡ್ಡಾಯ: ‘ಶಕ್ತಿ’ ಯೋಜನೆಯಡಿ ಉಚಿತ ಪ್ರಯಾಣದ ಸೌಲಭ್ಯವು ಕೇವಲ ಅರ್ಹರಿಗೆ ಮಾತ್ರ ತಲುಪುವಂತೆ ಮಾಡಲು ಮಹಿಳೆಯರಿಗೆ ಇಲಾಖೆಯಿಂದ ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್ ನೀಡಲು ಉದ್ದೇಶಿಸಲಾಗಿದೆ. ಇದರೊಂದಿಗೆ, ಮತದಾನದ ಹಕ್ಕು ಇಲ್ಲದಿದ್ದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಸಿಗುವುದಿಲ್ಲ ಎಂಬ ಸರ್ಕಾರದ ಕಟ್ಟುನಿಟ್ಟಿನ ಸೂಚನೆಯ ಹಿನ್ನೆಲೆಯಲ್ಲಿ, ಬಿ.ಎಲ್.ಒ ಗಳ ಮೂಲಕ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಫಲಾನುಭವಿಗಳಿಗೆ ಜಾಗೃತಿ ಮೂಡಿಸಲು ತಾಲೂಕು ಮಟ್ಟದ ಸಮಿತಿಗಳಿಗೆ ಸೂಚಿಸಲಾಗಿದೆ.
ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಸಂಕಲ್ಪ: ಯೋಜನೆಗಳ ದುರ್ಬಳಕೆ ತಡೆಗಾಗಿ ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ಸರ್ಕಾರದ ನಿರ್ಧಾರ ಹಾಗೂ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡುವ ಉಪಕ್ರಮವನ್ನು ಸಭೆ ಸ್ವಾಗತಿಸಿದೆ. ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಘೋಷಣೆಯಂತೆ, ಗ್ಯಾರಂಟಿ ಯೋಜನೆಗಳು ನೈಜ ಫಲಾನುಭವಿಗಳಿಗೆ ತಲುಪುವಂತೆ ಮಾಡಲು ಜಿಲ್ಲಾ ಪ್ರಾಧಿಕಾರವು ಬದ್ಧವಾಗಿದೆ. ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿರುವುದಕ್ಕೆ ಸಭೆ ಹರ್ಷ ವ್ಯಕ್ತಪಡಿಸಿತು.
District Level Guarantee Schemes Authority ಶಕ್ತಿ ಯೋಜನೆ : ಸಭೆಯಲ್ಲಿ ಶಿಕಾರಿಪುರ ಸದಸ್ಯರಾದ ನಾಗನಗೌಡ, ಇತ್ತೀಚೆಗೆ ಬಸ್ಸುಗಳಲ್ಲಿ ದಟ್ಟಣೆ ಹೆಚ್ಚಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹೊಸ ಬಸ್ಸುಗಳನ್ನು ಮಂಜೂರು ಮಾಡುವಂತೆ ಸಭೆಯಲ್ಲಿ ಮನವಿ ಮಾಡಿದರು.
ಸದಸ್ಯರು, ತಾಲ್ಲೂಕು ಮಟ್ಟದ ಸಭೆಗಳಿಗೆ ಡಿಪೋ ಮ್ಯಾನೇಜರ್ಗಳು ಗೈರಾಗುತ್ತಿದ್ದಾರೆ. ಸಾಗರದಿಂದ ಹೊಸನಗರಕ್ಕೆ ಸಂಜೆ 6:30ರ ನಂತರ ಬಸ್ ಸೌಕರ್ಯವಿಲ್ಲ ಹಾಗೂ ತೀರ್ಥಹಳ್ಳಿ ಗ್ರಾಮೀಣ ಸಾರಿಗೆ ಸಮಸ್ಯೆಗಳು ಹಾಗೇ ಉಳಿದಿವೆ. ಹೊಸನಗರ ತಾಲ್ಲೂಕಿನಲ್ಲಿ ಕೆಎಸ್ಆರ್ಟಿಸಿ ಬಸ್ ಇಲ್ಲದೆ ಶಕ್ತಿ ಯೋಜನೆಯ ಸೌಲಭ್ಯ ಸಿಗುತ್ತಿಲ್ಲವಾದ್ದರಿಂದ ಈ ಮಾರ್ಗಕ್ಕೆ ಬಸ್ ಬಿಡಬೇಕೆಂದು ಹಾಗೂ ತೀರ್ಥಹಳ್ಳಿ-ಬಸವಾನಿ ಮಾರ್ಗದಲ್ಲಿ ಬಸ್ ಬಿಡುವಂತೆ ಮನವಿ ಮಾಡಿದರು.
ಉಪಾಧ್ಯಕ್ಷರಾದ ಶಿವಣ್ಣ ಮಾತನಾಡಿ, ಸಭೆಯಲ್ಲಿ ಚರ್ಚೆಯಾದ ವಿಷಯಗಳ ಕುರಿತು ಅಧಿಕಾರಿಗಳು ಕಡ್ಡಾಯವಾಗಿ ಅನುಪಾಲನಾ ವರದಿ ನೀಡಬೇಕು. ಕೈಗೊಳ್ಳಲಾದ ಕ್ರಮಗಳ ಬಗ್ಗೆ ತಿಳಿಸಬೇಕು. ಆಗ ಮಾತ್ರ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯವೆಂದರು.
ಶಕ್ತಿ ಯೋಜನೆಯಡಿ ಈವರೆಗೆ 76801377 ಅಂದರೆ ಶೇ.65 ರಷ್ಟು ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು ರೂ.5527.41 ಕೋಟಿ ಸರ್ಕಾರ ವೆಚ್ಚ ಮಾಡಿದೆ ಎಂದು ಕೆಎಸ್ಆರ್ಟಿಸಿ ಡಿಸಿ ನವೀನ್ ತಿಳಿಸಿದರು.
ಗೃಹಜ್ಯೋತಿ ಯೋಜನೆ : ಸದಸ್ಯರು ಮಾತನಾಡಿ, ಹೊಸ ಮನೆ ನಿರ್ಮಾಣದ ಸಂದರ್ಭದಲ್ಲಿ ಕೆಇಬಿ ವತಿಯಿಂದ ಎನ್ಒಸಿ ನೀಡಲು ಸಮಸ್ಯೆಗಳಿವೆ. ಇದನ್ನು ಅಧಿಕಾರಿಗಳು ತಮ್ಮ ಹಂತದಲ್ಲೇ ಬಗೆಹರಿಸಲು ಕ್ರಮ ವಹಿಸಬೇಕು. ಸ್ಮಾರ್ಟ್ ಸಿಟಿ ಯೋಜನೆಯಡಿ ಯುಜಿ ಕೇಬಲ್ ಅಳವಡಿಸುವಾಗ ರಸ್ತೆಯ ಟೈಲ್ಸ್ ಕಿತ್ತು ಹಾಗೇ ಬಿಡುತ್ತಿರುವುದು ಮತ್ತು ಲೈಟ್ ಕಂಬಗಳ ಕೆಳಗೆ ಕೇಬಲ್ ವೈರ್ಗಳನ್ನು ಸರಿಯಾಗಿ ನಿರ್ವಹಿಸದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡು, ಕೆಲಸವನ್ನು ಸಮರ್ಪಕವಾಗಿ ಮುಗಿಸಬೇಕು. ವಾಣಿಜ್ಯ ಉದ್ದೇಶಗಳಿಗಾಗಿ ಗೃಹಜ್ಯೋತಿ ಯೋಜನೆಯ ದುರ್ಬಳಕೆಯಾಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದರು.
ಅನ್ನಭಾಗ್ಯ ಯೋಜನೆ : ನ್ಯಾಯಬೆಲೆ ಅಂಗಡಿಗಳಲ್ಲಿ ಫಲಾನುಭವಿಗಳಿಂದ ಅನಗತ್ಯವಾಗಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕೇಳುತ್ತಿರುವುದಕ್ಕೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಸರ್ಕಾರದ ಅಧಿಕೃತ ಮಾರ್ಗಸೂಚಿ ಇಲ್ಲದೆ ಇಂತಹ ನಿಯಮ ಹೇರಬಾರದು ಮತ್ತು ಪಡಿತರವನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ತಾಂತ್ರಿಕ ಸಮಸ್ಯೆ: ಸರ್ವರ್ ಸಮಸ್ಯೆ ನಿವಾರಿಸುವುದು, ಪಡಿತರ ವಿತರಣಾ ಸ್ಥಳಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವುದು ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ ವೈಫೈ ಅಳವಡಿಕೆ ಕುರಿತು ಸೂಕ್ತ ಮಾರ್ಗಸೂಚಿ ಸಿದ್ಧಪಡಿಸುವಂತೆ ಮನವಿ ಮಾಡಲು ಸಭೆ ತೀರ್ಮಾನಿಸಿತು.
ಬಿಪಿಎಲ್ ಕಾರ್ಡ್ ಸಮಸ್ಯೆ: ಒಂದೇ ಪಡಿತರ ಚೀಟಿಯಲ್ಲಿ ತಂದೆ ಮಕ್ಕಳ ಹೆಸರು ಇದ್ದು, ಮಕ್ಕಳು ದುಡಿಯಲು ಆರಂಭಿಸಿದಾಗ ಇಡೀ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆಗೊಳ್ಳುತ್ತಿರುವುದರಿಂದ ಬಡ ಪೋಷಕರು ಸೌಲಭ್ಯ ವಂಚಿತವಾಗುತ್ತಿದೆ. ಅಲ್ಲದೆ, ಆಸ್ಪತ್ರೆ ಮತ್ತಿತರ ತುರ್ತು ಅಗತ್ಯಗಳಿಗಾಗಿ 1 ಲಕ್ಷ ರೂ. ಒಳಗಿನ ನಾಲ್ಕು ಚಕ್ರದ ವಾಹನ ಹೊಂದಿದ್ದರೂ ಬಿಪಿಎಲ್ ರದ್ದಾಗುತ್ತಿರುವ ನಿಯಮದ ಬಗ್ಗೆ ಚರ್ಚಿಸಿ, ಸೂಕ್ತ ಮಾರ್ಗದರ್ಶನಕ್ಕಾಗಿ ಕೋರಲಾಯಿತು.
ಗೃಹಲಕ್ಷ್ಮಿ ಯೋಜನೆಗೆ ಸಂಬAಧಿಸಿದAತೆ ಈವರೆಗೆ 388559 ಮಹಿಳಾ ಫಲಾನುಭವಿಗಳಿಗೆ ಒಟ್ಟು ರೂ.3110,48,96,000 ಪಾವತಿಸಲಾಗಿದೆ. ಈ ಯೋಜನೆ ಬದಲಾವಣೆ ಕುರಿತು ಸರ್ಕಾರದ ಯಾವುದೇ ಹೊಸ ಮಾರ್ಗಸೂಚಿಗಳು ಇನ್ನು ಬಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ್ ಸ್ಪಷ್ಟಪಡಿಸಿದರು.
ಯುವನಿಧಿ: ಜಿಲ್ಲಾ ಉದ್ಯೋಗಾಧಿಕಾರಿ ಮಂಜುನಾಥ್ ಮಾತನಾಡಿ, ಈ ಯೋಜನೆಯಡಿ ಈವರೆಗೆ 1,03,610 ಫಲಾನುಭವಿಗಳಿಗೆ ಒಟ್ಟು ರೂ.30,82,31,500 ಗಳನ್ನು ಪಾವತಿಸಲಾಗಿದೆ ಎಂದರು.
ಈ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಮತ್ತು ನಿರುದ್ಯೋಗಿ ಯುವಕರಲ್ಲಿ ಇನ್ನು ಹೆಚ್ಚಿನ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಯೋಜನೆಯನ್ನು ಪರಿಣಾಮಕಾರಿಯಾಗಿ ಯಶಸ್ವಿಗೊಳಿಸುವಂತೆ ಸದಸ್ಯರು ತಿಳಿಸಿದರು.
ಸಭೆಯಲ್ಲಿ ಪ್ರಾಧಿಕಾರದ ಉಪಾಧ್ಯಕ್ಷರಾದ ಶಿವಣ್ಣ, ಎಂ ಎಸ್ ಬಸವರಾಜಪ್ಪ, ಅಫ್ತಾಬ್ ಪರ್ವೇಜ್, ರಮೇಶ್, ಸದಸ್ಯರಾದ ಅಮೀರ್ ಅಮ್ಜಾ, ಪ್ರಭಾಕರ್, ಭವ್ಯ ಕೃಷ್ಣಮೂರ್ತಿ, ರಾಹುಲ್, ಅರ್ಚನ, ನವುಲೇಶ್, ಶಿವಾನಂದ, ಉದಯಕುಮಾರ್, ಹೆಚ್ ಎಂ ಮಧು, ಚಿದಂಬರ, ಜಯಶೀಲಪ್ಪಗೌಡ, ಜಯಂತ್, ನಾಗನಗೌಡ ಇತರೆ ಸದಸ್ಯರು ಹಾಗೂ ಜಿ.ಪಂ ಉಪ ಕಾರ್ಯದರ್ಶಿ ಸುಜಾತ, ಆಹಾರ ಇಲಾಖೆ ಉಪ ನಿರ್ದೇಶಕ ಸತೀಶ್ ಇತರೆ ಅಧಿಕಾರಿಗಳು ಹಾಜರಿದ್ದರು.
ಚಾಲುಕ್ಯನಗರದಲ್ಲಿ ಹಸಿರು- ಉಸಿರು ಪರಿಸರ ಜಾಗೃತಿ ಚಟುವಟಿಕೆ
ಹಸಿರು ಉಸಿರು- ಪರಿಸರ ಜಾಗೃತಿ ನಿಟ್ಟಿನಲ್ಲಿ ಗೋಪಾಳದ ಬ್ರಾಹ್ಮಣ ಸೇವಾ ಸಂಘ(ರಿ)ವತಿಯಿಂದ ಚಾಲುಕ್ಯನಗರ ಸುರಭಿ ಸಮುದಾಯ ಭವನ ಹಾಗು ಶ್ರೀಬಲಮುರಿ ವಿಜಯ ಗಣಪತಿ ದೇವಸ್ಥಾನ ಸುತ್ತಮುತ್ತ ಗಿಡಗಳನ್ನು ನೆಡುವ ವನಮಹೋತ್ಸವ ಆಚರಿಸಲಾಯಿತು.
ಸಂಘದ ಸದಸ್ಯರು ವಿವಿಧ ಜಾತಿಯ ಗಿಡಗಳನ್ನು ನೆಟ್ಟರು, ವಿವಿಧ ಕಡೆಗಳಲ್ಲಿ ಹಸಿರನ್ನು ಬೆಳಸುವ ಸಂಕಲ್ಪವನ್ನು ಸಂದರ್ಭದಲ್ಲಿ ಕೈಗೊಳ್ಳಲಾಯಿತು.
ಸಂಘದ ಅಧ್ಯಕ್ಷ ಸುರೇಶ್ ಉಮರಾಣಿ, ನಿಕಟಪೂರ್ವಅಧ್ಯಕ್ಷ ಎ.ಶಿವರಾಮಭಟ್, ಕಾರ್ಯದರ್ಶಿ ಶ್ರೀಧರಮೂರ್ತಿ, ಖಜಾಂಚಿ ಬಾಲಾಜಿರಾವ್, ನಿರ್ದೇಶಕರಾದ ಎನ್,ಆರ್,ವೆಂಕಟೇಶ್, ಉಮೇಶ್ ಬಾಪಟ್ ನೇತೃತ್ವ ವಹಿಸಿದ್ದರು.
Government Women’s Residential Polytechnic Shimoga Institute ಲ್ಯಾಟರಲ್ ಎಂಟ್ರಿ ಮೂಲಕ ಶಿವಮೊಗ್ಗ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ 2ನೇವರ್ಷ/ 3 ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್ ಗಳಿಗೆ ಪ್ರವೇಶ ಪರೀಕ್ಷೆ ಮಾಹಿತಿ
Government Women’s Residential Polytechnic Shimoga Institute ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗ ಸಂಸ್ಥೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಐ.ಟಿ.ಐ/ದ್ವಿತೀಯ ಪಿಯುಸಿ (ವಿಜ್ಞಾನ/ತಾಂತ್ರಿಕ ವಿಷಯಗಳಲ್ಲಿ) ಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶ ಪರೀಕ್ಷೆಯು ಮೆರಿಟ್ ಹಾಗೂ ರೋಸ್ಟರ್ಗನುಗುಣವಾಗಿ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ವಿತರಣೆ ದಿ: 17/06/2026, ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಪ್ರಕಟಿಸುವ ದಿನಾಂಕ: 18/06/2026, ಆಪ್ಲೈನ್ ಕೌನ್ಸಲಿಂಗ್ ಮೂಲಕ ಸೀಟು ಹಂಚಿಕೆ ಮಾಡಿ, ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳು ಮತ್ತು ಪ್ರವೇಶ ಶುಲ್ಕದೊಂದಿಗೆ ಪ್ರವೇಶಾತಿ ಪಡೆಯಲು ಅಂತಿಮ ದಿನಾಂಕ: 19/06/2026 ಆಗಿರುತ್ತದೆ.
ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್(ಕನ್ನಡ), ಕಮರ್ಷಿಯಲ್ ಪ್ರಾಕ್ಟಿಸ್(ಇಂಗ್ಲಿಷ್), ಅಪೆರಲ್ ಡಿಸೈನಿಂಗ್ ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸುಗಳು ಲಭ್ಯವಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪಡೆಯಲು ಎಸ್ಎಸ್ಎಲ್ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ/ಎನ್ಓಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ(ಕ್ಷೇತ್ರ ಶಿಕ್ಷಣಾಧಿಕಾರಿಗಳು ದೃಢೀಕರಿಸಿದ ಸಹಿಯೊಂದಿಗೆ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಭಾವಚಿತ್ರ 06 ನ್ನು ಹಾಗೂ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.
Government Women’s Residential Polytechnic Shimoga Institute ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ರವಿನಾಯಕ್ ಡಿ, ಪ್ರಾಂಶುಪಾಲರು, ಮೊ.ಸಂ: 9886610245 ನ್ನು ಸಂಪರ್ಕಿಸಬಹುದೆಂದು ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ನ ಪ್ರಾಂಶುಪಾಲರು ತಿಳಿಸಿದ್ದಾರೆ.
Karnataka Media Academy ಛಾಯಾಚಿತ್ರಗ್ರಾಹಕರಿಗೆ ರಾಷ್ಟ್ರಮಟ್ಟದ ” ಫೋಕಸ್ ಆನ್ ನ್ಯೂಸ್” ಶೀರ್ಷಿಕೆ ಛಾಯಾಚಿತ್ರ ಸ್ಪರ್ಧೆ
Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ “Focus on News” ಎಂಬ ರಾಷ್ಟ್ರಮಟ್ಟದ ಪತ್ರಿಕಾ ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಿದೆ.
ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ. 25,000/- ರೂ. ಹಾಗೂ 15,000/- ರೂ. ನಗದು ಬಹುಮಾನ ನೀಡಲಾಗುವುದು.
ಆಯ್ದ 50 ಛಾಯಾಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಲಾಗುವುದು.
ಸ್ಪರ್ಧೆಯ ಷರತ್ತುಗಳು
ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ :01-01-.2025 ರಿಂದ 31-5-2026 ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು.
ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಹಾಗೂ ಪ್ರಕಟವಾಗಿರುವ ಯಾವುದಾದರೂಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.
ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ.
ಈ ಸ್ಪರ್ಧೆಯನ್ನು ಸುದ್ಧಿ ಛಾಯಾಗ್ರಾಹಕರಿಗಾಗಿ ಮಾತ್ರ ಆಯೋಜಿಸಲಾಗಿದೆ. ಪ್ರತಿಯೊಬ್ಬ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಆಯಾ ರಾಜ್ಯ ಸರ್ಕಾರಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಥವಾ ಪಿಐಬಿಯು ಪತ್ರಕರ್ತರಿಗಾಗಿ ನೀಡುವ Accreditation Card ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.
ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್ಗಳು ಇರಬಾರದು.
ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳ ಅಂದರೆ ಡಿಜಿಟಲ್ ಇಮೇಜ್ ಗಳನ್ನುJPEG format ನಲ್ಲಿ ಮಾತ್ರ ಸಲ್ಲಿಸಬೇಕು.
ಪ್ರದರ್ಶನಕ್ಕೆ ಆಯ್ಕೆಯಾಗುವ ಛಾಯಾಚಿತ್ರಗಳನ್ನು20”x 30” ಅಳತೆಯಲ್ಲಿಮುದ್ರಣ ಮಾಡಿಸಬೇಕಾಗಿರುವುದರಿಂದ ನೀವು ಕಳಿಸುವ ಇಮೇಜ್ ಗಳು 20”x 30” ಅಳತೆಯ,300 DPI ನಲ್ಲಿದ್ದು ಕನಿಷ್ಠ 5MB ಗಾತ್ರದಲ್ಲಿರಬೇಕು.
ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನುಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ.
ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿಛಾಯಾಚಿತ್ರಗಳು ಸಹಜವಾಗಿರಬೇಕು.
Karnataka Media Academy ಚಿತ್ರದಲ್ಲಿನ ಯಾವುದೇ ಭಾಗವನ್ನು ತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು.
AI ಚಿತ್ರಗಳನ್ನು ಪರಿಗಣಿಸಲಾಗುವುದಿಲ್ಲ.
ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಛಾಯಾಗ್ರಾಹಕರು mediaacademy.karnataka.gov.in ವೆಬ್ಸೈಟಿನಲ್ಲಿಇರುವ ನಿಗದಿತ ಅರ್ಜಿಯನ್ನು Download ಮಾಡಿಕೊಂಡು ಭರ್ತಿಮಾಡಿ, ತಮ್ಮ ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇಮೇಜ್ಗಳನ್ನು focusonnewskma@gmail.com ಇ-ಮೇಲ್ ವಿಳಾಸಕ್ಕೆ ದಿನಾಂಕ: 30-06-2026 ರಂದು ಸಂಜೆ 5:00ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನು ಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆ ಆಯ್ಕೆ ಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿಅನುಭವ ಹೊಂದಿರುವ ಮೂವರು ತೀರ್ಪುಗಾರರಿದ್ದುಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ.
ಪ್ರಶಸ್ತಿಗೆ ಆಯ್ಕೆಯಾದ ಮೂರು ಛಾಯಾಚಿತ್ರಗಳಿಗೆ ಪ್ರಥಮ ಬಹುಮಾನ: ರೂ. 35,000/ ದ್ವಿತೀಯ ಬಹುಮಾನ: ರೂ. 25,000/-, ಹಾಗೂ ತೃತೀಯ ಬಹುಮಾನ: ರೂ. 15,000/- ಗಳನ್ನುನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9845351766 ಹಾಗೂ 9449245980 ನ್ನು ಕರೆ ಮಾಡುವ ಮೂಲಕ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸ ಬಹುದು.
“ಪ್ರಧಾನಿ ಮೋದಿ ಜನಸೇವೆಯ 12 ವರ್ಷ” ಶಾಸಕ ಚೆನ್ನಿ ಅವರ ನೇತೃತ್ವದಲ್ಲಿ “ಬೂತ್ ವಾಸ್ತವ್ಯ” ಅಭಿಯಾನ
“ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರ್ಕಾರವು ‘ಜನಸೇವೆ ಮತ್ತು ಪ್ರಗತಿ’ಯ ಭವ್ಯ 12 ವರ್ಷಗಳನ್ನು ಪೂರೈಸಿರುವುದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಸಂದರ್ಭವಾಗಿದೆ.
ಸರ್ಕಾರದ ಈ ಜನಕಲ್ಯಾಣ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವುದೇ ನಮ್ಮ ಸಂಘಟನೆಯ ಮೂಲ ಆಶಯವಾಗಿದೆ,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.
ಮೋದಿ ಸರ್ಕಾರದ ಸಾಧನೆಗಳ ಹಿನ್ನೆಲೆಯಲ್ಲಿ ಬಿಜೆಪಿ ಶಿವಮೊಗ್ಗ ನಗರ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿಶ್ವಾಸ, ಅಭಿವೃದ್ಧಿ ಹಾಗೂ ಜನಕಲ್ಯಾಣದ ಸಂಭ್ರಮಾಚರಣೆಯ “ಎರಡು ದಿನಗಳ ವಿಶೇಷ ಬೂತ್ ವಾಸ್ತವ್ಯ” ಅಭಿಯಾನದ ಮೊದಲ ದಿನದ ನಿಮಿತ್ತ ನಿನ್ನೆ ಶಾಸಕರು ವಾರ್ಡ್ ನಂಬರ್ 01ರ ಬೂತ್ ಸಂಖ್ಯೆ 26ರ ಅಧ್ಯಕ್ಷರಾದ ಶ್ರೀಮತಿ ಶಾಂತಮ್ಮ ಅವರ ನಿವಾಸದಲ್ಲಿ ಕುಟುಂಬ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ವಾಸ್ತವ್ಯ ಹೂಡಿದರು.
ವಿಶೇಷ ಪೂಜೆ ಹಾಗೂ ಸಂವಾದ:
ವಾಸ್ತವ್ಯದ ಆರಂಭಕ್ಕೂ ಮುನ್ನ ಶಾಸಕರು ವಾರ್ಡ್ ನಂಬರ್ 01ರ ಪ್ರಸಿದ್ಧ ಶ್ರೀ ಓಂ ಶಕ್ತಿ ಮತ್ತು ಮುತ್ತು ಮಾರಮ್ಮ ದೇವಸ್ಥಾನಗಳಿಗೆ ಭೇಟಿ ನೀಡಿ, ದೇಶ ಮತ್ತು ನಾಡಿನ ಒಳಿತಿಗಾಗಿ ಕಾರ್ಯಕರ್ತರೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತದನಂತರ ಭವ್ಯ ಮೆರವಣಿಗೆಯ ಮೂಲಕ ವಾಸ್ತವ್ಯದ ಮನೆಗೆ ಭೇಟಿ ನೀಡಿದ ಅವರು, ಆಶ್ರಯ ಬಡಾವಣೆಯ ಮಹಿಳಾ ಪ್ರಮುಖರು ಹಾಗೂ ವಿವಿಧ ಜನಪರ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ ಕುಂದುಕೊರತೆಗಳನ್ನು ಆಲಿಸಿದರು.
ಬಳಿಕ, ಆಶ್ರಯ ಬಡಾವಣೆಯ ಪ್ರಮುಖರಾದ ಶ್ರೀ ಮಂಜುನಾಥ್ ಅವರ ನಿವಾಸದಲ್ಲಿ ಕ್ಷೇತ್ರದ ವಿಶೇಷ ಗಣ್ಯರು ಹಾಗೂ ಕೀ-ವೋಟರ್ಸ್ (Key Voters) ಜೊತೆ ಶಿವಮೊಗ್ಗ ನಗರದ ಮುಂದಿನ ಸಮಗ್ರ ಪ್ರಗತಿ ಹಾಗೂ ಸಂಘಟನೆಯ ಬಲವರ್ಧನೆ ಕುರಿತು ಮಹತ್ವದ ಸಮಾಲೋಚನೆ ನಡೆಸಲಾಯಿತು.
ಬೂತ್ ಮಟ್ಟದ ಸಂಘಟನಾ ಚರ್ಚೆ:
ಅಭಿಯಾನದ ಮುಂದುವರಿದ ಭಾಗವಾಗಿ ವಾರ್ಡ್ ನಂಬರ್ 02ರ ಬೂತ್ ಸಂಖ್ಯೆ 27ರ ಬೂತ್ ಅಧ್ಯಕ್ಷರಾದ ಶ್ರೀ ಶಿವಶಂಕರ್ ಅವರ ನಿವಾಸಕ್ಕೂ ಭೇಟಿ ನೀಡಿದ ಶಾಸಕರು, ಮುಂಬರುವ ದಿನಗಳಲ್ಲಿ ತಳಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸುವ ನಿಟ್ಟಿನಲ್ಲಿ ಪ್ರಮುಖ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.
ದಿನದ ಕೊನೆಯ ಹಂತವಾಗಿ ಬೂತ್ ಅಧ್ಯಕ್ಷರಾದ ಶ್ರೀಮತಿ ಶಾಂತಮ್ಮ ಅವರ ನಿವಾಸದಲ್ಲಿ ಕುಟುಂಬದ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕರು ಪ್ರೀತಿಯ ಸಹಭೋಜನ ಸವಿದರು.
ಈ ವಿಶೇಷ ಬೂತ್ ವಾಸ್ತವ್ಯ ಅಭಿಯಾನದಲ್ಲಿ ಭಾಜಪ ಜಿಲ್ಲಾಧ್ಯಕ್ಷರಾದ ಶ್ರೀ ಎನ್.ಕೆ. ಜಗದೀಶ್, ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಶ್ರೀ ನಾಗರಾಜ್, ಶ್ರೀ ಪ್ರಭಾಕರ್, ಶ್ರೀ ಮಂಜುನಾಥ ನವಲೆ, ಶ್ರೀ ಪ್ರದೀಪ್ ಹೊನ್ನಪ್ಪ, ಶ್ರೀ ದೀನ್ ದಯಾಳ್, ಶ್ರೀಮತಿ ಆಶಾ ಚಂದ್ರಪ್ಪ, ಶ್ರೀ ಚಂದ್ರಪ್ಪ, ಶ್ರೀ ಲಕ್ಷ್ಮಿಕಾಂತ್ ಭಟ್, ಶ್ರೀ ಕುಮಾರ್ ಗಾಡಿಕೊಪ್ಪ, ಶ್ರೀ ರವೀಂದ್ರ ಸೇರಿದಂತೆ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಉತ್ಸಾಹಿ ಕಾರ್ಯಕರ್ತ ಬಂಧುಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಸಾಗರ ರೈಲ್ವೇ ನಿಲ್ದಾಣದಲ್ಲಿನ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸಂಸದ ರಾಘವೇಂದ್ರ ಅವರಿಂದ ಪರಿಶೀಲನೆ
ಸಾಗರ ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸಂಸದ ರಾಘವೇಂದ್ರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ನಿಲ್ದಾಣದ ಮೂಲಸೌಕರ್ಯಗಳ ಪ್ರಗತಿ ಪರಿಶೀಲನೆ ನಡೆಸಿ, ಅಗತ್ಯ ಸುಧಾರಣೆಗಳ ಬಗ್ಗೆ ಚರ್ಚಿಸಿದರು.
ಅಲ್ಲದೆ, ಸ್ಥಳೀಯ ಸಾರ್ವಜನಿಕರು ಹಾಗೂ ಪ್ರಯಾಣಿಕರನ್ನು ಭೇಟಿ ಮಾಡಿ, ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ರೈಲ್ವೆ ಸೌಲಭ್ಯಗಳ ಮೇಲ್ದರ್ಜೀಕರಣದ ಕುರಿತು ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಹೆಚ್. ಹಾಲಪ್ಪ ಹರತಾಳು, ಪ್ರಮುಖರಾದ ಶ್ರೀ ಮೇಘರಾಜ್ ಟಿ.ಡಿ, ಶ್ರೀ ಗಣೇಶ್ ಪ್ರಸಾದ್ ಕೆ.ಆರ್, ಶ್ರೀಮತಿ ಮಧುರ ಶಿವಾನಂದ ಹಾಗೂ ಪಕ್ಷದ ಪ್ರಮುಖರು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
Shivaganga Yoga Center ಉನ್ನತ ಸಾಧನೆಗೆ ಯೋಗ , ಧ್ಯಾನ ಹಾಗೂ ಕಠಿಣ ಪರಿಶ್ರಮ ರಹದಾರಿ- ಸಿ.ಎಸ್.ಷಡಾಕ್ಷರಿ
Shivaganga Yoga Center ಉತ್ತಮ ಆರೋಗ್ಯ ಮನುಷ್ಯನಿಗೆ ಅಮೂಲ್ಯ ಆಸ್ತಿ. ಉನ್ನತ ಸಾಧನೆಗೆ ಯೋಗ, ಧ್ಯಾನ ಹಾಗೂ ಕಠಿಣ ಪರಿಶ್ರಮ
ರಹದಾರಿಯಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು.
ಬಸವನಗುಡಿಯ ಸರ್ಕಾರಿ ನೌಕರರ ವಿಕಾಸ ಕೇಂದ್ರದ ಸಭಾಂಗಣದಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರ ವತಿಯಿಂದ ನಡೆದ ಸರ್ಕಾರಿ ನೌಕರರ ವಿಕಾಸ ಕೇಂದ್ರ ಶಿವಮೊಗ್ಗ ಯೋಗ ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಉತ್ತಮ ಆರೋಗ್ಯ ಇದ್ದಲ್ಲಿ ಮಾತ್ರ ಸಾಧನೆ ಮಾಡಲು ಸಾಧ್ಯ. ಹೀಗಾಗಿ ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಉನ್ನತ ಸಾಧನೆಗೆ ಯೋಗ, ಧ್ಯಾನ ಸಹಕಾರಿ. ಸಮಾಜಮುಖಿ, ಜನಪರ ಕಾರ್ಯಕ್ಕೆ ಸಹಕಾರ ನೀಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಇಂಥಹ ಶಿಬಿರದ ಯಶಸ್ಸಿಗೆ ಅಗತ್ಯ ಬೆಂಬಲ ನೀಡಲಾಗುವುದು ಎಂದರು.
ಶಿವಗಂಗಾ ಯೋಗ ಕೇಂದ್ರದ ಕಾರ್ಯಾಧ್ಯಕ್ಷ, ಯೋಗಾಚಾರ್ಯ ಡಾ. ಸಿ.ವಿ. ರುದ್ರಾರಾಧ್ಯರು ಮಾತನಾಡಿ,
ಆಧುನಿಕ ಯುಗದಲ್ಲಿ ಒತ್ತಡದ ಜೀವನ ಶೈಲಿ, ಕ್ರಮಬದ್ಧವಲ್ಲದ ಆಹಾರ ಸೇವನೆಯಿಂದಾಗಿ ಹಲವರು ವಿವಿಧ ರೋಗಗಳಿಂದ ನರಳುವಂತಾಗಿದೆ. ಇದಕ್ಕೆಲ್ಲಾ ಯೋಗ ಪರಿಹಾರ. ಯೋಗ ಜೀವನದ ಅವಿಭಾಜ್ಯ ಅಂಗವಾಗಬೇಕು. ದಿನಕ್ಕೆ ಒಂದು ಗಂಟೆ ನಿರಂತರವಾಗಿ ಯೋಗ ಮಾಡುವುದರಿಂದ ಹಾಗೂ ಸಕಾರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಳ್ಳುವುದರಿಂದ ಆರೋಗ್ಯಪೂರ್ಣ ಜೀವನ ನಡೆಸಲು ಸಾಧ್ಯ ಎಂದು ತಿಳಿಸಿದರು.
. ಮನುಷ್ಯನಿಗೆ ಬಿಪಿ, ಶುಗರ್ ಬಂದರೆ ಹಲವು ರೋಗಗಳಿಗೆ ಆಹ್ವಾನ ನೀಡಿದಂತೆ. ಹೀಗಾಗಿ ಪ್ರಸ್ತುತ ಸಂದರ್ಭದಲ್ಲಿ ಈ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುವುದು ಎಲ್ಲರಿಗೂ ಅನಿವಾರ್ಯ ಮತ್ತು ಅತ್ಯಗತ್ಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ, ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷ ಎಸ್. ರುದ್ರೇಗೌಡ್ರು ಮಾತನಾಡಿ, ಪ್ರತಿಯೊಬ್ಬರು ಯೋಗ ಶಿಕ್ಷಣ ಪಡೆದು ರೋಗದಿಂದ ಮುಕ್ತರಾಗಬೇಕು. ಪ್ರತಿದಿನ ನಾವು ಸರಳ ಯೋಗಾಭ್ಯಾಸವನ್ನು ಕಾಲಮಿತಿ ಅನುಗುಣವಾಗಿ ಕನಿಷ್ಠ ಅರ್ಧ ಗಂಟೆಯಾದರೂ ತಪ್ಪದೇ ಮಾಡಿದರೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಯಾವುದೇ ಔಷಧಿ, ಖರ್ಚಿಲ್ಲದೆ ಆರೋಗ್ಯ ಪಡೆಯುವ ಸುಲಭ ವಿಧಾನ. ಭಾರತದ ಯೋಗ ಪರಂಪರೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ನೂರಾರು ದೇಶಗಳು ನಮ್ಮ ಯೋಗ ಪದ್ಧತಿಯನ್ನು ಅನುಸರಿಸುತ್ತಿದ್ದಾರೆ. ಯೋಗದಿಂದ ಕೆಲಸದಲ್ಲಿ ಕಾರ್ಯದಕ್ಷತೆ ಹೆಚ್ಚುವುದರಿಂದ ದೇಶದ ಆರ್ಥಿಕ ಪ್ರಗತಿಗೂ ಇದು ಬುನಾದಿಯಾಗಿದೆ ಎಂದು ತಿಳಿಸಿದರು.
Shivaganga Yoga Center ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್ ಮಾತನಾಡಿ, ಮನುಷ್ಯನಿಗೆ ಯೋಗ, ವಾಕಿಂಗ್, ಕ್ರೀಡೆ ಯಾವುದಾದರೂ ದೈಹಿಕ ಕಸರತ್ತು ಅಗತ್ಯ. ಇದರಿಂದ ಆರೋಗ್ಯ ವೃದ್ಧಿಯಾಗುವುದಲ್ಲದೆ ಮನಸ್ಸಿಗೆ ಶಾಂತಿ, ಉತ್ಸಾಹ ದೊರೆಯುತ್ತದೆ. ಪ್ರತಿಯೊಬ್ಬರೂ ಯೋಗದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಶಿವಗಂಗಾ ಯೋಗ ಕೇಂದ್ರದ ಕಾರ್ಯದರ್ಶಿಗಳಾದ ಎಚ್. ಎo. ಚಂದ್ರಶೇಖರಯ್ಯ ಮಾತನಾಡಿ, ಯೋಗದಿಂದ ಶಿಸ್ತು, ಸಂಯಮ, ತಾಳ್ಮೆ ಮೂಡುವುದರಿಂದ ವ್ಯಕ್ತಿತ್ವ ವಿಕಸನಕ್ಕೆ ಇದು ಪೂರಕವಾಗಿದೆ. ಯುವಜನತೆ ಯೋಗಾಭ್ಯಾಸವನ್ನು ರೂಡಿ ಸಿಕೊಳ್ಳುವುದರಿಂದ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕರಾದ ವಿಜಯ ಬಾಯರ್, ಜಿ.ಎಸ್. ಓಂಕಾರ್, ಎಚ್.ಎಸ್. ಹರೀಶ್, ಕೇಶವಮೂರ್ತಿ, ಕೃಷ್ಣ ಹಾಗೂ ಇಳoಗೋವನ್ ಅವರಿಗೆ ಸನ್ಮಾನಿಸಲಾಯಿತು.
Karnataka State Road Transport Corporation ವಿದ್ಯಾರ್ಥಿಗಳಿಗೆ ಸಿಹಿಸುದ್ದಿ!. ಉಚಿತ/ ರಿಯಾಯಿತಿ ಬಸ್ ಪಾಸ್ ವಿತರಣೆ ಆರಂಭ
Karnataka State Road Transport Corporation ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ಪಾಸ್ ವಿತರಣಾ ಕಾರ್ಯವನ್ನು ಮೇ ತಿಂಗಳಿನಿಂದ ಆರಂಭಿಸಿದ್ದು, ಸರ್ಕಾರದ ಆದೇಶದಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಜೂ. 12 ರಿಂದ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದೆ.
ಉಚಿತ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು URL-https://sevasindhu.karnataka.gov.in/buspassservices ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ವಿದ್ಯಾರ್ಥಿ ಬಸ್ಪಾಸ್ ವಿತರಣೆಯಲ್ಲಿ ಹಾಲಿ ಅನುಸರಿಸುತ್ತಿರುವ ನಿಯಮಾವಳಿಗಳನ್ನು ಮುಂದುವರೆಸಲಾಗಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ವಿತರಿಸಲಾಗಿರುವ ವಿದ್ಯಾರ್ಥಿ ಬಸ್ಪಾಸ್ಗಳು ಯಥಾವತ್ತಾಗಿ ಚಾಲ್ತಿಯಲ್ಲಿರುತ್ತವೆ. ಆದಾಗ್ಯು ವಿದ್ಯಾರ್ಥಿಗಳು ಪಾವತಿಸಿರುವ ಮೊತ್ತವನ್ನು ಹಿಂದಿರುಗಿಸಲಾಗುವುದು. Karnataka State Road Transport Corporation ರಾಜ್ಯ ವಾಸವಿದ್ದು, ನೆರೆ ರಾಜ್ಯಗಳಲ್ಲಿ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ನೆರೆ ರಾಜ್ಯಗಳಲ್ಲಿ (ರಾಜ್ಯದ ಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್ಪಾಸ್ ಪಡೆಯಬಹುದಾಗಿದೆ. ಈಗಾಗಲೇ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಪಡೆದು ವಿತರಿಸಲಾದ ಪಾಸ್ಗಳ ಸಂಪೂರ್ಣ ಶುಲ್ಕವನ್ನು 15 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರುಪಾವತಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪಾಸ್ ವಿತರಣಾ ಕೌಂಟರ್ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://ksrtc.karnataka.gov.in / student passನಲ್ಲಿ ಒದಗಿಸಲಾಗಿದೆ.
ಶಿಕಾರಿಪುರ ಅಂಬ್ಲಿಗೊಳ ಸನಿಹ ಕಾರು ಅಗ್ನಿಗಾಹುತಿ
ಶಿಕಾರಿಪುರ ತಾಲೂಕಿನ ಅಂಬಲಿಗೋಳ ಸಮೀಪ ಹೆದ್ದಾರಿಯಲ್ಲಿ ಆಕ್ಮಸಿಕ ಬೆಂಕಿ ತಗುಲಿ ಕಾರು ಹೊತ್ತಿ ಉರಿದಿದೆ.
ಶಿಕಾರಿಪುರದಿಂದ ಆಯನೂರು ಸಮೀಪದ ಹಣಗೆರೆ ಕಟ್ಟೆಗೆ ತೆರಳುತ್ತಿದ್ದ ಕಾರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕಾರಿನಲ್ಲಿ ಓರ್ವ ಪುರುಷ ಹಾಗೂ ಮೂವರು ಮಹಿಳೆಯರು ಹಾಗೂ ಮಕ್ಕಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡು ಕಾರು ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಶಿಕಾರಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸಾಧಕರಾದ ಡಾ.ಕೆ.ವಿ.ಅಕ್ಷರ ಮತ್ತು ಶ್ರಾವ್ಯಾ ಸಾಗರ್ ಅವರಿಗೆ ಹಾರ್ದಿಕ ಸನ್ಮಾನ
ವರದಾಮೂಲವೂ ಒಂದು ಐತಿಹಾಸಿಕ ಪ್ರಸಿದ್ಧ ಕ್ಷೇತ್ರವಾಗಿದೆ. ಇಲ್ಲಿ ಹುಟ್ಟಿ ಹರಿಯುತ್ತಿರುವ ನದಿ ಲಕ್ಷಾಂತರ ಜನರ ನೀರಿನ ದಾಹ ಹಾಗೂ ಕೃಷಿಕರ ಬವಣೆಯನ್ನು ನೀಗುತ್ತಿದೆ. ಇದು ಹರಿಯುವ ಕಡೆಯಲ್ಲ ಅರಣ್ಯ, ಕೆರೆ, ಕಾಲುವೆಗಳು ತುಂಬಿ ಜನರ ಜೀವನೋಪಾಯಕ್ಕೆ ಹೇತುವಾಗಿದೆ. ನದಿಯ ಇಕ್ಕೆಲಗಳೂ ಜೀವವೈವಿದ್ಯದ ತಾಣವಾಗಿದ್ದು ಅಪರೂಪದ ಜೀವಿಗಳನ್ನು ಕಾಣುತ್ತೇವೆ. ವೈವಿದ್ಯಮಯವಾದ ಭತ್ತದ ತಳಿಗಳು, ಸಾಂಬಾರು ಗಿಡಗಳು, ಅಡಿಕೆ, ತೆಂಗು, ಏಲಕ್ಕಿ ಎಲ್ಲ ಬೆಳೆಯನ್ನು ಬೆಳೆಯಬಹುದಾದ ಹದವಾದ ವಾತಾವರಣ ಹಾಗೂ ಮಣ್ಣನ್ನು ಹೊಂದಿದೆ. ಅಭಿವೃದ್ಧಿಯ ಹೆಸರಿನಲ್ಲಿ ಈ ನದಿಯ ಹರಿವು ಹಾಗೂ ಪಾತ್ರ ಇಕ್ಕದಾಗುತ್ತಿರುವುದರಿಂದ ಇಲ್ಲಿನ ಜೀವರಾಶಿಗಳು ಸಸ್ಯ ಪ್ರಬೇಧಗಳು ಅಳಿವಿನಂಚಿಗೆ ಸಾಗುತ್ತಿವೆ ಎಂಬುದು ದುರಾದೃಷ್ಟ. ಭೂಮಿಯ ಮೇಲಿನ ಸಸ್ಯ, ನದಿ, ಕೆರೆಗಳ ಜೊತೆ ಜೊತೆಗೆ ನಾವು ಬದುಕಿದಲ್ಲಿ ಮಾತ್ರ ನಮ್ಮ ಜೀವನ ಹಸನಾಗುತ್ತದೆ. ಇವುಗಳಿಗೂ ಜೀವವಿದೆ ಎಂಬುದನ್ನು ಅರಿತು ಅವುಗಳ ಸಂರಕ್ಷಣೆ ಹಿಂದಿಗಿಂತ ಇಂದು ಅತ್ಯಂತ ತುರ್ತಾಗಿದೆ. ಈಗಾಗಲೇ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳಿಂದಾಗಿ ಕೆಲವು ನದಿಗಳು ನೀರೇ ಇಲ್ಲದೆ, ನೀರಿದ್ದೂ ಉಪಯೋಗಕ್ಕೆ ಬಾರದ ಸ್ಥಿತಿ ತಲುಪಿ ಕಾಣೆಯಾಗಿವೆ. ಇವುಗಳ ಸಂರಕ್ಷಣೆ ಯಾರೊಬ್ಬರಿಂದ ಸಾಧ್ಯವಿಲ್ಲದ ಮಾತು. ಇಡೀ ವ್ಯವಸ್ಥೆ ಈ ದಿಶೆಯಲ್ಲಿ ಎಚ್ಚೆತ್ತುಕೊಂಡು ಪರಿಸರವನ್ನು ಕಾಪಾಡಿಕೊಂಡು ಬರಬೇಕಾಗಿದೆ ಎಂದು ರಂಗಕರ್ಮಿ, ನೀನಾಸಮ್ ನಿರ್ದೇಶಕರಾದ ಕೆ.ವಿ. ಅಕ್ಷರ ಕರೆ ನೀಡಿದರು. ಕುವೆಂಪು ವಿಶ್ವವಿದ್ಯಾಲಯ ಈ ಸಾಲಿನಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ ಅಂಗವಾಗಿ ಶ್ರೀ ವರದಾಂಬಾ ಸೇವಾ ಪ್ರತಿಷ್ಠಾನ, ಶ್ರೀ ಕ್ಷೇತ್ರ ವರದಾಮೂಲ ಅವರು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕರ್ನಾಟಕದ ಜೀವವೈವಿದ್ಯಮಂಡಳಿಯು ಕೊಡಮಾಡುವ ಈ ಬಾರಿಯ ರಾಜ್ಯ ಜೀವವೈವಿದ್ಯ ಪ್ರಶಸ್ತಿಪುರಸ್ಕೃತ “ವರದಾ ನದಿ ಸಾಕ್ಷ್ಯ ಚಿತ್ರದ ನಿರ್ದೇಶಕಿ ಹಾಗೂ ನಿರ್ಮಾಪಕರಾದ ಶ್ರೀಮತಿ ಶ್ರಾವ್ಯಾ ಸಾಗರ್ ಅವರನ್ನೂ ಸಹ ಸನ್ಮಾನಿಸಲಾಯಿತು.
ಗೌರವ ಪುರಸ್ಕೃತರಿಬ್ಬರೂ ನಮ್ಮ ಊರಿನ ಹೆಮ್ಮೆಯಾಗಿದ್ದಾರೆ. ಪುಟ್ಟ ಪುಟ್ಟ ಹಳ್ಳಿಗಳಲ್ಲಿದ್ದುಕೊಂಡೇ ರಾಜ್ಯ, ರಾಷ್ಟ್ರ ಮಟ್ಟಗಳಲ್ಲಿ ಹೆಸರು ಮಾಡುತ್ತಿರುವ ಇವರನ್ನು ಸನ್ಮಾನಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಇವರುಗಳ ಸಾಧನೆ ಸಾಕಷ್ಟು ಯುವಜನರಿಗೆ ಪ್ರೇರಣೆಯಾಗಲಿ ಎಂಬುದು ನಮ್ಮೆಲ್ಲರ ಆಶಯ ಎಂದು ಜೀವವೈವಿದ್ಯ ಮಂಡಳಿಯ ನಿಕಟಪೂರ್ವ ಸದಸ್ಯ ಕವಲಕೋಡು ವೆಂಕಟೇಶ್ ಅವರು ಸನ್ಮಾನಿತರನ್ನು ಪರಿಚಯಿಸುತ್ತಾ ತಿಳಿಸಿದರು.
ಕಾರ್ಯಕ್ರಮದ ಮೊದಲು ಕುಮಾರಿ ಧಾತ್ರಿ ಅರಣಕುಮಾರ್ ಪ್ರಾರ್ಥಿಸಿದರು, ವರದಾಂಬಾ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ಟಿ.ಎಸ್. ಗಣಪತಿ ಎಲ್ಲರನ್ನು ಸ್ವಾಗತಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವರದಾಂಬಾ ಸೇವಾ ಪ್ರತಿಷ್ಠಾನದ ಅಧ್ಯಕ್ಷ ರಮೇಶ ಮೇಲಿನಮನೆ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ ಹಾಗೂ ವರದಾಂಬಾ ವ್ಯವಸ್ಥಾಪನಾ ಸಮಿತಿಗಳ ಅಧ್ಯಕ್ಷ ವ.ಶಂ. ರಾಮಚಂದ್ರ ಭಟ್, ಪ್ರಗತಿಪರ ಕೃಷಿಕ ನಾಗೇಂದ್ರ ಸಾಗರ್, ಸಾಗರ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ವಿ.ಜಿ. ಶ್ರೀಧರ್, ಗ್ರಾಮಪಂಚಾಯ್ತಿ ಭೀಮನಕೋಣೆ ನಿಕಟಪೂರ್ವ ಅಧ್ಯಕ್ಷ ವಿ.ಕೆ. ಮಂಜುನಾಥ ಶೆಟ್ಟಿ ಭಾಗವಹಿಸಿದ್ದರು. ಸೇವಾ ಪ್ರತಿಷ್ಠಾನದ ಸದಸ್ಯರಾದ ಅಶೋಕ ಶಡ್ತಿಕೆರೆ, ಅರುಣ್ಕುಮಾರ್ ಮೇಲಿನ ಕವಲಕೋಡು, ಸತೀಶ ಎಲ್.ವಿ., ನಾಗರಾಜ ವಿ.ಟಿ., ಅಲ್ಲದೆ ಊರಿನ ಗಣ್ಯರು ನಾಗರೀಕರು ಸಭೆಯಲ್ಲಿ ಉಪಸ್ಥಿತರಿದ್ದರು.
ಸನ್ಮಾನ ಕಾರ್ಯಕ್ರಮದ ನಂತರ ಮಲೆನಾಡು ಗಮಕ ಕಲಾ ಟ್ರಸ್ಟ್ (ರಿ.) ಸಾಗರ ಇವರಿಂದ “ವಿಶ್ವರೂಪ ದರ್ಶನ” (ಕುಮಾರ ವ್ಯಾಸ ಭಾರತದ ಆಯ್ದ ಭಾಗವನ್ನು) ಗಮಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿ.ವಿ. ಅಶೋಕ್ಕುಮಾರ್ ಹೆಗ್ಗೋಡು ಅವರ ಕಾವ್ಯ ವಾಚನವನ್ನು ಕಟ್ಟಿನಕೆರೆ ಕೆ.ಎಂ. ರವೀಂದ್ರ ಅವರು ವ್ಯಾಖ್ಯಾನಿಸಿದರು.
