Friday, March 20, 2026
Friday, March 20, 2026
Home Blog Page 3

Media Academy Award ಮಾಧ್ಯಮಗಳು ಯುದ್ಧ ನಿಲ್ಲಿಸುವ ಬದಲು ಮುಂದುವರೆಸಲು ಪ್ರೋತ್ಸಾಹ ನೀಡುತ್ತಿವೆ- ಡಾ.ಡಿ.ಎಸ್.ಪೂರ್ಣಾನಂದ

0

Media Academy Award ಯಾವುದೇ ಪತ್ರಕರ್ತನೊಳಗೆ ಮನುಷ್ಯತ್ವ ಇಲ್ಲದಿದ್ದರೆ ಆತ ನಿಜವಾದ ಪತ್ರಕರ್ತನಾಗಲಾರ. ಮನುಷ್ಯತ್ವ ಇಲ್ಲದಾಗ ಮಾತ್ರ ಪತ್ರಕರ್ತ ಯಾವುದೇ ಸಾವನ್ನು ಸಂಭ್ರಮಿಸಬಹುದು ಎಂದು ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಡಿ.ಎಸ್.ಪೂರ್ಣಾನಂದ ಅಭಿಪ್ರಾಯಪಟ್ಟರು.
ಈ ಸಲದ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಹಿನ್ನೆಲೆಯಲ್ಲಿ ವಿಭಾಗವು ಆಯೋಜಿಸಿದ ಸನ್ಮಾನ ಹಾಗೂ ‘ವಿಶ್ವದ ಓದು: ವಿಮರ್ಶಾತ್ಮಕ ಪತ್ರಿಕೋದ್ಯಮದ ದೃಷ್ಟಿಕೋನ’ ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಭೂಮಿ ಯಾರಿಗೂ ಸೇರಿಲ್ಲ. ಯಾವುದೇ ಸಮುದಾಯ ಒಂದು ಪ್ರದೇಶ ಅಥವಾ ದೇಶ ತಮಗೆ ಸೇರಿದ್ದು ಎಂದು ಪ್ರತಿಪಾದನೆ ಮಾಡುವುದು ತಪ್ಪು. ಅವರವರ ಅನುಕೂಲಕ್ಕಾಗಿ ಗಡಿಗಳನ್ನು ನಿರ್ಮಿಸಿದ್ದೇವೆಯೇ ಹೊರತು ಅವು ನ್ಯಾಯಯುತ ಗಡಿಗಳಲ್ಲ ಎಂದು ಅವರು ತಿಳಿಸಿದರು.
ಇರಾನ್ ಮತ್ತು ಇಸ್ರೇಲ್, ಅಮೆರಿಕ ನಡುವೆ ನಡೆಯುವುದು ಯದ್ಧವಲ್ಲ. ಅದು ಜನಾಂಗೀಯ ಹತ್ಯೆ. ಇದು ಇತಿಹಾಸದಿಂದಲೂ ನಡೆದು ಬಂದಿದೆ. ನಾಯಕರ ಪ್ರತಿಷ್ಠೆಗಾಗಿ ಸಾಮಾನ್ಯ ಜನರ ಹತ್ಯೆ ನಡೆಯುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.
ಶಸ್ತ್ರಾಸ್ತ್ರ ತಯಾರಿಸುವ ಕಂಪನಿಗಳು ವಿಶ್ವದ ದೊಡ್ಡ ಉದ್ಯಮಿಗಳ ಒಡೆತನದಲ್ಲಿವೆ. ಅವರ ಒಡೆತನದಲ್ಲಿ ಬಹುಭಾಗ ಮಾಧ್ಯಮ ಸಂಸ್ಥೆಗಳಿವೆ. ಆದ್ದರಿಂದ ಮಾಧ್ಯಮಗಳು ಯುದ್ಧವನ್ನು ನಿಲ್ಲಿಸುವ ಬದಲು ಮುಂದುವರಿಸಲು ಪ್ರೋತ್ಸಾಹ ನೀಡುತ್ತಿವೆ ಎಂದು ಅಭಿಪ್ರಾಯ ತಿಳಿಸಿದರು.
Media Academy Award ಹಿಂದೆ ಯುರೋಪ್ ದೇಶಗಳ ನಿಯಂತ್ರಣದಲ್ಲಿ ವಸಾಹತು ದೇಶಗಳಿದ್ದರೆ, ಇಂದು ಅಮೆರಿಕ ಇಡೀ ವಿಶ್ವವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ವಿಶ್ವದ ಹೆಚ್ಚಿನ ರಾಷ್ಟ್ರಗಳಲ್ಲಿ ಅಮೆರಿಕದ ಸೇನಾ ನೆಲೆಗಳಿವೆ ಎಂದರು.
ಇಂದು ಮುಖ್ಯವಾಹಿನಿಯ ಮಾಧ್ಯಮಗಳು ವಾಸ್ತವವಾಂಶ ವರದಿ ಮಾಡಲು ವಿಫಲರಾದರೂ ಕೆಲವು ಸ್ವತಂತ್ರ ಮಾಧ್ಯಮಗಳು ಆ ಕೆಲಸ ಮಾಡುತ್ತಿವೆ. ಸ್ವತಂತ್ರ ಧ್ವನಿ ದೊಡ್ಡ ಸಂಖ್ಯೆಯಲ್ಲಿ ಬಂದರೆ ಯಾವುದೇ ಬದಲಾವಣೆ ಸಾಧ್ಯ ಎಂದು ಅವರು ಹೇಳಿದರು.
ವಿಭಾಗದ ಅಧ್ಯಕ್ಷರಾದ ಪ್ರೊ. ವರ್ಗೀಸ್ ಪಿ.ಎ., ಪ್ರಾಧ್ಯಾಪಕರಾದ ಪ್ರೊ. ಸತೀಶ್ ಕುಮಾರ್ ಅಂಡಿಂಜೆ, ಪ್ರೊ.ಸತ್ಯಪ್ರಕಾಶ್ ಎಂ.ಆರ್. ಅವರು ಈ ಸಂದರ್ಭದಲ್ಲಿ ಮಾತನಾಡಿದರು. ವಿದ್ಯಾರ್ಥಿನಿ ಕು.ಪ್ರಗತಿ ವಂದಿಸಿದರು. ವಿಭಾಗದ ಉಪನ್ಯಾಸಕರು, ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

B.Y. Raghavendra ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಾವೆಲ್ಲ ಬದ್ಧರಾಗಿದ್ದೇವೆ- ಬಿ.ವೈ.ರಾಘವೇಂದ್ರ

0

B.Y. Raghavendra ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯದ ಅಭಿವೃದ್ಧಿ ಹಾಗೂ ಹಿತಾಸಕ್ತಿಗಳಿಗೆ ಸಂಬಂಧಿಸಿದ ಪ್ರಮುಖ ಸಭೆಯಲ್ಲಿ
ಶಿವಮೊಗ್ಗ ಸಂಸದರಾದ ಬಿ .ವೈ. ರಾಘವೇಂದ್ರ ಅವರು ಭಾಗವಹಿಸಿದರು.

ನಮ್ಮ ರಾಜ್ಯದ ಮೂಲಸೌಕರ್ಯ ವೃದ್ಧಿ, ಕೈಗಾರಿಕಾ ಪ್ರಗತಿ ಮತ್ತು ಸಾರ್ವಜನಿಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿದರು.

ಕರ್ನಾಟಕವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸಲು ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಲು ಬದ್ಧರಾಗಿದ್ದೇವೆ ಎಂದು ಹೇಳಿದರು.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ರಾಜ್ಯದ ಸಮಗ್ರ ವಿಕಾಸವೇ ನಮ್ಮ ಮುಖ್ಯ ಗುರಿ ಎಂದು ತಿಳಿಸಿದರು.

Madhu Bangarappa ಮಾರ್ಚ್ 20 ರೊಳಗೆ ಉಪನ್ಯಾಸಕರ ಬ್ಯಾಂಕ್ ಖಾತೆಗೆ ಬಾಕಿ ಹಣ ಜಮಾಣೆ. ಮೌಲ್ಯಮಾಪನ ಬಹಿಷ್ಕರಿಸುವ ” ಬ್ಲಾಕ್ ಮೇಲ್ ” ತಂತ್ರ ಬೇಡ- ಮಧು ಬಂಗಾರಪ್ಪ

0

Madhu Bangarappa ಇಂದು ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಸನ್ಮಾನ್ಯ ಸದಸ್ಯರಾದ ಶ್ರೀ ಎಸ್.ಎಲ್. ಭೋಜೇಗೌಡ ಹಾಗೂ ಶ್ರೀ ಪುಟ್ಟಣ್ಣ ಅವರು ಪ್ರಸ್ತಾಪಿಸಿದ ದ್ವಿತೀಯ ಪಿಯುಸಿ ಮೌಲ್ಯಮಾಪನ ಮತ್ತು ಉಪನ್ಯಾಸಕರ ಬೇಡಿಕೆಗಳ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರು ಎಸ್. ಮಧು ಬಂಗಾರಪ್ಪನವರು ವಿಧಾನ ಪರಿಷತ್ ನಲ್ಲಿ ತಿಳಿಸಿದರು.

ಕಳೆದ ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮೌಲ್ಯಮಾಪನ ಭತ್ಯೆಯನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಇದೇ ತಿಂಗಳ 20ನೇ ತಾರೀಖಿನೊಳಗೆ ಎಲ್ಲಾ ಉಪನ್ಯಾಸಕರ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆಯಾಗುವುದು. ಪಿಯು ಆಡಳಿತ ನಿಯಂತ್ರಣವನ್ನು ಜಿ.ಪಂ. ಸಿಇಒಗಳಿಗೆ ವಹಿಸುವ ಪ್ರಸ್ತಾವನೆಯನ್ನು ಸದ್ಯಕ್ಕೆ ನಮ್ಮ ಸರ್ಕಾರ ಕೈಬಿಟ್ಟಿದೆ. ಈ ಬಗ್ಗೆ ಶಿಕ್ಷಕರು ಆತಂಕಪಡುವ ಅಗತ್ಯವಿಲ್ಲ.

Madhu Bangarappa ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಲು ಸರ್ಕಾರದ ಬಾಗಿಲು ಸದಾ ತೆರೆದಿದೆ. ಆದರೆ, ಬೇಡಿಕೆಗಳಿಗಾಗಿ ಪರೀಕ್ಷಾ ಮೌಲ್ಯಮಾಪನವನ್ನು ಬಹಿಷ್ಕರಿಸುವಂತಹ ‘ಬ್ಲಾಕ್ ಮೇಲ್’ ತಂತ್ರಗಳನ್ನು ಸರ್ಕಾರ ಒಪ್ಪುವುದಿಲ್ಲ. ನಮಗೆ ನಮ್ಮ ರಾಜ್ಯದ ಲಕ್ಷಾಂತರ ಮಕ್ಕಳ ಹಿತದೃಷ್ಟಿ ಮತ್ತು ಅವರ ಭವಿಷ್ಯವೇ ಸರ್ವೋಚ್ಚ. ಶಿಕ್ಷಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಕರಿಸಬೇಕು ಎಂದು ವಿನಂತಿಸುತ್ತೇನೆ ಎಂದರು.

ಗ್ಯಾಸ್ ಕೊರತೆಯಲ್ಲೂ ಒಲೆ ಹೂಡಿ ಅಡುಗೆ ತಯಾರಿ : ಡಾ.ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಾಹಸ

0

ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಹುಟ್ಟು ಹಬ್ಬಕ್ಕೂ ಯುದ್ಧದ ಎಫೆಕ್ಟ್ ತಟ್ಟಿದೆ.

ಶಿವಮೊಗ್ಗದ ಪುನಿತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಗ್ಯಾಸ್ ನ ತೊಂದರೆ ಉಂಟಾಗಿತ್ತು.

ಎರಡು ಸಾವಿರ ಜನರಿಗೆ ಊಟದ ವ್ಯವಸ್ಥೆಗೆ ಮಾಡಲಾಗಿದ್ದು, ಗ್ಯಾಸ್ ಇಲ್ಲದೇ ಅಭಿಮಾನಿಗಳು ಪರದಾಡಿದ್ದಾರೆ.

ಗ್ಯಾಸ್ ಇಲ್ಲದೇ ಅಡುಗೆ ಅಭಿಮಾನಿಗಳು ಸೌದೆಯಲ್ಲಿ ಅಡಿಗೆ ಮಾಡಿದ್ದಾರೆ.
ರೈಸ್ ಬಾತ್ , ಪಾನಕ ಸೇರಿದಂತೆ ಹಲವು ಆಹಾರ ತಯಾರಿ ಮಾಡಿದ್ದಾರೆ‌.

ಗ್ಯಾಸ್ ಕೊರತೆಯಿಂದ ಹೆಚ್ಚುವರಿ ಹಣ ಖರ್ಚಾಗಿದ್ದು, ಸೌದೆಯ ಬೆಲೆ ಗಗನಕ್ಕೇರಿದೆ.
ಮೊದಲು 10 ಕೆಜಿ ಸೌದೆಗೆ 50 ರೂಪಾಯಿ ಇದ್ದ ಸೌದೆ ಈಗ 90 ರೂಪಾಯಿಗೆ ಏರಿಕೆಯಾಗಿದೆ.

Shivamogga – Bhadravati Urban Development Authority ಶ್ರೀವಿನಾಯಕ‌ ದೇವಾಲಯ ಪ್ರತಿಷ್ಠಾಪನಾ ಮಹೋತ್ಸವ : ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ

0

Shivamogga – Bhadravati Urban Development Authority ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ ವಜ್ರೇಶ್ವರಿ ವಿನಾಯಕ ದೇವಾಲಯದಲ್ಲಿ ” ಶ್ರೀ ಮಹಾಗಣಪತಿ ಸ್ಥಿರಮೂರ್ತಿ ಪ್ರತಿಷ್ಠಾಪನೆಯ 22ನೇ ವರ್ಷದ ವಾರ್ಷಿಕೋತ್ಸವ” ಅಂಗವಾಗಿ ಗಣ ಹೋಮ ಕುಂಭಾಭಿಷೇಕ ಪೂಜಾ ಕಾರ್ಯಕ್ರಮಗಳು ಹಾಗೂ ವಾಸನ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಆಯೋಜನೆ ಮಾಡಿದ್ದ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್ಎಸ್ ಸುಂದರೇಶ್ ಅವರು ಚಾಲನೆ ನೀಡಿದರು.

Shivamogga – Bhadravati Urban Development Authority ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ವಜ್ರೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ದೇವರಾಜ್ , ಸಿಟಿ ಕೋ ಆಪರೇಟಿನ ಬ್ಯಾಂಕಿನ ಅಧ್ಯಕ್ಷರಾದ ಕೆ.ರಂಗನಾಥ್, ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ನರಸಿಂಹ ಗಂಧದ ಮನೆ, ಪ್ರಮುಖರಾದ ಸಿ ರವಿ, ಕೆಆರ್ ಸುರೇಶ್, ಕೇಶವಮೂರ್ತಿ ,ಶಿವು ಎಸ್.ಸೋಮೇಶ್, ಪುರುಷೋತ್ತಮ್ ,ದಾನೇಶ್ ,ಕೇಶವಮೂರ್ತಿ, ಕಾತಿ ರಘು, ಮಾರುತಿ ಸಿ, ರಾಜೇಶ್ ಮಂದಾರ, ವಿನಯ್, ಬಸವರಾಜ್,ಸಂದೀಪ್ ದೇವಸ್ಥಾನದ ಪ್ರಧಾನ ಅರ್ಚಕರಾದ ಯೋಗೀಶ್ ಉಡುಪ ಹಾಗೂ ಸಮಿತಿಯ ಸದಸ್ಯರುಗಳು ಹೊಸಮನೆ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.

Akashavani Bhadravati ಭದ್ರಾವತಿ ಆಕಾಶವಾಣಿ ವಸಂತೋತ್ಸವ ಯುವಕವಿಗೋಷ್ಠಿ : ಕವಿಗಳಿಗೆ ಕವಿತೆ ಕಳಿಸಲು ಪ್ರಕಟಣೆ

0

Akashavani Bhadravati ಆಕಾಶವಾಣಿ ಭದ್ರಾವತಿಯಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ / ಯುವತಿಯರಿಂದ ವಸಂತೋತ್ಸವ ಯುವಕವಿ ಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗಿದೆ.
ಕವನ ಕಳುಹಿಸುವವರು ವಸಂತಮಾಸದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆ ಹಾಗೂ ವಸಂತಮಾಸಕ್ಕೆ ಸಂಬಂಧಿಸಿದಂತೆ ಕವನಗಳನ್ನು ಕಳುಹಿಸಬಹುದಾಗಿದೆ. Akashavani Bhadravati 18 ರಿಂದ 35 ರ ವಯೋಮಾನದವರು ಈ ಕವಿಗೋಷ್ಥಿಗೆ ಕವನಗಳನ್ನು ಏಪ್ರಿಲ್ 15 ರೊಳಗಾಗಿ ನಿಲಯ ನಿರ್ದೇಶಕರು, ವಸಂತೋತ್ಸವ ಯುವಕವಿಗೋಷ್ಠಿ ವಿಭಾಗ, ಆಕಾಶವಾಣಿ, ಜೆ.ಪಿ.ಎಸ್.ಕಾಲೋನಿ ಭದ್ರಾವತಿ 577302 ಗೆ ಕಳುಹಿಸಬಹುದಾಗಿದ್ದು ಆಯ್ಕೆಯಾದ ಕವನಗಳನ್ನು ಬರೆದ ಕವಿಗಳೆ ಶ್ರೋತೃಗಳ ಸಮ್ಮುಖದಲ್ಲಿ ಪ್ರಸ್ತುತ ಪಡಿಸಲು ಅವಕಾಶ ಕಲ್ಪಿಸಲಾಗುವುದು ಹಾಗು ಕವನಗಳನ್ನು ಗಾಯನ ರೂಪದಲ್ಲಿ ಆಕಾಶವಾಣಿಯ ಕಲಾವಿದರಿಂದ ವೇದಿಕೆಯಲ್ಲಿ ಪ್ರಸ್ತುತಪಡಿಸಲಾಗುವುದು ಎಂದು ಕಾರ್ಯಕ್ರಮದ ಮುಖ್ಯಸ್ಥ ಎಸ್.ಆರ್. ಭಟ್ ತಿಳಿಸಿರುತ್ತಾರೆ.

Sahyadri Narayana Multi Specialty Hospital ಅಪರೂಪದ ಕಾಯಿಲೆ, “ಮೈಯಾಸ್ಥೆನಿಕ್ ಕ್ರೈಸಿಸ್” ಪೀಡಿತ ರೋಗಿಗೆ ಚಿಕಿತ್ಸೆ: ಶಿವಮೊಗ್ಗ ಸಹ್ಯಾದ್ರಿ ಎನ್.ಎಚ್.ಆಸ್ಪತ್ರೆ ವೈದ್ಯರ ಸಾಧನೆ

0

Sahyadri Narayana Multi Specialty Hospital ಅಪರೂಪದ ಆಟೋ ಇಮ್ಯೂನ್ (ನರ ಮತ್ತು ಸ್ನಾಯು ಸಂಬಂಧಿ) ಕಾಯಿಲೆಗೆ ಚಿಕಿತ್ಸೆ ನೀಡಲು ಆರಂಭವಾದ ಸಂಕೀರ್ಣ ಶಸ್ತ್ರಚಿಕಿತ್ಸೆಯೊಂದು, ನೋಡನೋಡುತ್ತಿದ್ದಂತೆ ಜೀವನ ಮತ್ತು ಮರಣದ ನಡುವಿನ ಹೋರಾಟವಾಗಿ ಬದಲಾಯಿತು. ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರ ತಂಡ, 48 ವರ್ಷದ ರೋಗಿಯನ್ನು ಉಸಿರಾಟ ವೈಫಲ್ಯದ ಅಂಚಿನಿಂದ ಪಾರುಮಾಡುವಲ್ಲಿ ಯಶಸ್ವಿಯಾಗಿದ್ದು, ಸಂಕೀರ್ಣ ವೈದ್ಯಕೀಯ ಸವಾಲನ್ನು ಗೆದ್ದು ರೋಗಿಗೆ ಮರುಜೀವ ನೀಡಿದೆ.
ಕನ್ಸಲ್ಟೆಂಟ್ ನ್ಯೂರಾಲಜಿಸ್ಟ್ ಡಾ. ಹಂಸ ಕೆ.ಎಂ. ಅವರ ನೇತೃತ್ವದಲ್ಲಿ ನಡೆದ ಈ ಚಿಕಿತ್ಸೆಯು, ‘ಮೈಯಾಸ್ಥೆನಿಕ್ ಕ್ರೈಸಿಸ್’ (ಉಸಿರಾಟವನ್ನು ನಿಯಂತ್ರಿಸುವ ಸ್ನಾಯುಗಳು ಹಠಾತ್ತನೆ ವಿಫಲವಾಗುವ ತುರ್ತು ಸ್ಥಿತಿ) ನಂತಹ ಸಂದರ್ಭಗಳಲ್ಲಿ ತ್ವರಿತ ರೋಗನಿರ್ಣಯ ಮತ್ತು ವಿವಿಧ ವಿಭಾಗಗಳ ವೈದ್ಯರ ಸಮನ್ವಯದ ಚಿಕಿತ್ಸೆ ಎಷ್ಟು ಮುಖ್ಯ ಎಂಬುದನ್ನು ತೋರಿಸಿಕೊಟ್ಟಿದೆ.
​ಏನಿದು ಪ್ರಕರಣ?
ಸ್ನಾಯುಗಳ ದೌರ್ಬಲ್ಯ ಮತ್ತು ವಿಪರೀತ ಆಯಾಸದ ಸಮಸ್ಯೆಯೊಂದಿಗೆ ರೋಗಿ ಮೊದಲು ನ್ಯೂರಾಲಜಿ ಹೊರರೋಗಿ ವಿಭಾಗಕ್ಕೆ (OPD) ಬಂದಿದ್ದರು ಎಂದು ಡಾ. ಹಂಸ ತಿಳಿಸಿದರು. ತಪಾಸಣೆ ನಡೆಸಿದಾಗ ಅವರಿಗೆ ‘ಮೈಯಾಸ್ಥೇನಿಯಾ ಗ್ರಾವಿಸ್’ (ದೀರ್ಘಕಾಲದ ನರ ಮತ್ತು ಸ್ನಾಯು ಸಂಬಂಧಿತ ಕಾಯಿಲೆ) ಇರುವುದು ದೃಢಪಟ್ಟಿತು. ಹೆಚ್ಚಿನ ಸ್ಕ್ಯಾನಿಂಗ್ ನಡೆಸಿದಾಗ ಅವರ ಎದೆಯ ಭಾಗದಲ್ಲಿ 12 ಸೆಂ.ಮೀ.ಗೂ ದೊಡ್ಡದಾದ ಗಡ್ಡೆ (ಮೀಡಿಯಾಸ್ಟಿನಲ್ ಮಾಸ್) ಇರುವುದು ಕಂಡುಬಂತು.
ಆರಂಭಿಕ ಬಯಾಪ್ಸಿ ವರದಿಯು ಇದು ಲಿಂಫೋಮಾ ಇರಬಹುದು ಎಂದು ಸೂಚಿಸಿತ್ತಾದರೂ, ವೈದ್ಯಕೀಯ ತಂಡವು ಆಳವಾದ ತಪಾಸಣೆಗೆ ಮುಂದಾಯಿತು. ಇಮ್ಯುನೊಹಿಸ್ಟೊಕೆಮಿಸ್ಟ್ರಿ (IHC) ಪರೀಕ್ಷೆಯ ಮೂಲಕ ಇದು ‘ಥೈಮೋಮಾ’ (ಥೈಮಸ್ ಗ್ರಂಥಿಯ ಗೆಡ್ಡೆ) ಎಂದು ಖಚಿತಪಡಿಸಿಕೊಳ್ಳಲಾಯಿತು. ಇದು ಸಾಮಾನ್ಯವಾಗಿ ಮೈಯಾಸ್ಥೇನಿಯಾ ಗ್ರಾವಿಸ್‌ಗೆ ಸಂಬಂಧಿಸಿರುತ್ತದೆ.​ಮೊದಲಿಗೆ ಔಷಧಗಳ ಮೂಲಕ ರೋಗಿಯನ್ನು ಸ್ಥಿರಗೊಳಿಸಿದ ನಂತರ, ಯಶಸ್ವಿಯಾಗಿ ‘ಥೈಮೆಕ್ಟಮಿ’ ಮಾಡಲಾಯಿತು. ಎದೆಯ ಎಲುಬಿನ ಹಿಂಭಾಗದಲ್ಲಿರುವ ಥೈಮಸ್ ಗ್ರಂಥಿಯನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕುವುದೇ ಈ ಪ್ರಕ್ರಿಯೆ. ಸಿಟಿವಿಎಸ್ (CTVS) ಶಸ್ತ್ರಚಿಕಿತ್ಸಕರಾದ ಡಾ. ಬಾಲಸುಬ್ರಮಣಿ ಆರ್‌ ಅವರು ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿದರು.
ಶಸ್ತ್ರಚಿಕಿತ್ಸೆಯ ನಂತರದ ಸವಾಲು
ಆದರೆ, ಹೋರಾಟ ಇಲ್ಲಿಗೆ ಮುಗಿದಿರಲಿಲ್ಲ. ಶಸ್ತ್ರಚಿಕಿತ್ಸೆಯ ಒತ್ತಡದಿಂದಾಗಿ ರೋಗಿಯು ‘ಮೈಯಾಸ್ಥೆನಿಕ್ ಕ್ರೈಸಿಸ್‌’ಗೆ ತುತ್ತಾದರು. ಅವರ ಉಸಿರಾಟದ ಸ್ನಾಯುಗಳು ತೀವ್ರವಾಗಿ ದುರ್ಬಲಗೊಂಡವು. ತಕ್ಷಣವೇ ಚಿಕಿತ್ಸೆ ನೀಡದಿದ್ದರೆ ಪ್ರಾಣಕ್ಕೇ ಕುತ್ತು ತರುವಂತಹ ಉಸಿರಾಟ ವೈಫಲ್ಯದ ಸ್ಥಿತಿ ಎದುರಾಯಿತು.”ಪರಿಸ್ಥಿತಿಯ ಗಂಭೀರತೆಯನ್ನು ಅರಿತ ವೈದ್ಯರ ತಂಡ ತಕ್ಷಣ ಕಾರ್ಯಪ್ರವೃತ್ತವಾಯಿತು. ಶಸ್ತ್ರಚಿಕಿತ್ಸೆಯ ಒತ್ತಡವು ಇಂತಹ ವಿಷಮ ಸ್ಥಿತಿಯನ್ನು ಪ್ರಚೋದಿಸುವುದು ತಿಳಿದಿರುವ ವಿಷಯವೇ, ಹೀಗಾಗಿ ಇಲ್ಲಿ ವೇಗವೇ ಮದ್ದು,” ಎಂದು ಡಾ. ಹಂಸ ಹೇಳಿದರು. ರೋಗಿಯನ್ನು ತಕ್ಷಣವೇ ಐಸಿಯುಗೆ (ICU) ದಾಖಲಿಸಿ, ಕೃತಕ ಉಸಿರಾಟದ ವ್ಯವಸ್ಥೆಯನ್ನು (ಇಂಟ್ಯೂಬೇಷನ್) ಅಳವಡಿಸಲಾಯಿತು.
​ಸಮನ್ವಯ ಚಿಕಿತ್ಸೆಯಿಂದ ಚೇತರಿಕೆ
ನಂತರದ ಚೇತರಿಕೆ ಪ್ರಕ್ರಿಯೆಯು ‘ಸಮನ್ವಯ ವೈದ್ಯಕೀಯ ಚಿಕಿತ್ಸೆ’ಗೆ ಅತ್ಯುತ್ತಮ ಉದಾಹರಣೆಯಂತಿದೆ. ನೆಫ್ರಾಲಜಿಸ್ಟ್ ಡಾ. ರವಿ ಅವರು ಅದೇ ದಿನ ಪ್ಲಾಸ್ಮಾಫೆರೆಸಿಸ್ (ರಕ್ತದಲ್ಲಿನ ಪ್ರತಿಕಾಯಗಳನ್ನು ಶುದ್ಧೀಕರಿಸುವ ಪ್ರಕ್ರಿಯೆ) ಆರಂಭಿಸಿದರು. ಕ್ರಿಟಿಕಲ್ ಕೇರ್ ಅರಿವಳಿಕೆ ತಜ್ಞ ಡಾ. ದೀಪಕ್ ಶೆಟ್ಟಿ ಅವರು ವೆಂಟಿಲೇಟರ್ ನಿರ್ವಹಣೆ ಮಾಡಿದರೆ, ಶ್ವಾಸಕೋಶ ತಜ್ಞ ಡಾ. ಅಜಯ್ ಅವರು ಶ್ವಾಸಕೋಶದ ಕಾರ್ಯಕ್ಷಮತೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಕೃತಕ ಉಸಿರಾಟದ ಕೊಳವೆ ತೆಗೆಯಲು (extubation) ಮಾರ್ಗದರ್ಶನ ನೀಡಿದರು.​ಕೇವಲ ಯಂತ್ರಗಳಲ್ಲದೆ, ದೈಹಿಕ ಚಿಕಿತ್ಸೆಗೂ ಒತ್ತು ನೀಡಲಾಯಿತು. ನ್ಯೂರೋ ಫಿಸಿಯೋಥೆರಪಿಸ್ಟ್ ನವನೀದನ್ ಕೃಷ್ಣನ್ ಅವರು ಎದೆ ಮತ್ತು ಕೈಕಾಲುಗಳಿಗೆ ಅಗತ್ಯವಾದ ಫಿಸಿಯೋಥೆರಪಿ ನೀಡಿದರೆ, ಸ್ಪೀಚ್ ಥೆರಪಿಸ್ಟ್ ಜೀವನ್ ಅವರು ರೋಗಿಯು ಸುರಕ್ಷಿತವಾಗಿ ಆಹಾರ ನುಂಗುವ ಸಾಮರ್ಥ್ಯ ಮರಳಿ ಪಡೆಯಲು ಶ್ರಮಿಸಿದರು.
​ಈ ಸಂಘಟಿತ ಪ್ರಯತ್ನಕ್ಕೆ ಫಲ ಸಿಕ್ಕಿತು. ಮೂರು ಸುತ್ತಿನ ಪ್ಲಾಸ್ಮಾಫೆರೆಸಿಸ್ ಮತ್ತು ತೀವ್ರ ನಿಗಾ ಘಟಕದ ಆರೈಕೆಯ ನಂತರ ರೋಗಿಯ ಉಸಿರಾಟದ ಶಕ್ತಿ ಮರಳಿತು. 4ನೇ ದಿನದಂದು ಅವರನ್ನು ವೆಂಟಿಲೇಟರ್‌ನಿಂದ ಹೊರತೆಗೆಯಲಾಯಿತು, 5ನೇ ದಿನದಂದು ವಾರ್ಡ್‌ಗೆ ಸ್ಥಳಾಂತರಿಸಿ, ನಂತರ ಸುಸ್ಥಿತಿಯಲ್ಲಿ ಡಿಸ್ಚಾರ್ಜ್ ಮಾಡಲಾಯಿತು.
​Sahyadri Narayana Multi Specialty Hospital ಈ ಬಗ್ಗೆ ಮಾತನಾಡಿದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ವರ್ಗೀಸ್ ಪಿ. ಜಾನ್, “ಅತ್ಯಂತ ಸಂಕೀರ್ಣ ವೈದ್ಯಕೀಯ ಸವಾಲುಗಳನ್ನು ನಿಖರತೆ ಮತ್ತು ಕಾಳಜಿಯಿಂದ ನಿಭಾಯಿಸಲು ನಾವು ಬದ್ಧರಾಗಿದ್ದೇವೆ. ತಕ್ಷಣದ ಮತ್ತು ಉನ್ನತ ಮಟ್ಟದ ಚಿಕಿತ್ಸೆ ಅಗತ್ಯವಿರುವ ಮೈಯಾಸ್ಥೇನಿಯಾ ಗ್ರಾವಿಸ್ ಪ್ರಕರಣಗಳನ್ನು ನಿರ್ವಹಿಸುವ ನಮ್ಮ ಸಾಮರ್ಥ್ಯಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಭಾಗದಲ್ಲಿ ಸುಧಾರಿತ ನರರೋಗ ಚಿಕಿತ್ಸೆಗೆ ನಮ್ಮ ಆಸ್ಪತ್ರೆ ಪ್ರಮುಖ ತಾಣವಾಗಿದೆ ಎಂಬುದನ್ನು ಇದು ಸಾಬೀತುಪಡಿಸಿದೆ,” ಎಂದು ಹರ್ಷ ವ್ಯಕ್ತಪಡಿಸಿದರು, ಹಾಗೂ ಈ ಕ್ಲೀಷ್ಠಕರ ಶಸ್ತ್ರ ಚಿಕಿತ್ಸೆಯಲ್ಲಿ ಬಾಗವಹಿಸಿದ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗಳನ್ನು ಅಭಿನಂದಿಸಿದರು.

Shiralakoppa Police ವ್ಯಕ್ತಿ ನಾಪತ್ತೆ. ಶಿರಾಳಕೊಪ್ಪ ಪೊಲೀಸ್ ಠಾಣೆ ಮಾಹಿತಿ ಪ್ರಕಟಣೆ

0

Shiralakoppa Police ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಬಿದರಿಕೊಪ್ಪ ವಾಸಿ ಶೋಭಾಬಾಯಿ ಎಂಬುವವರ ಪತಿ ಗಣೇಶನಾಯ್ಕ್ ಎಂಬ 40 ವರ್ಷದ ವ್ಯಕ್ತಿ ಮಾ.04 ರಂದು ಮನೆಯಿಂದ ಶಿರಾಳಕೊಪ್ಪಕ್ಕೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಗೋದಿ ಮೈಬಣ್ಣ ಹೊಂದಿದ್ದು, ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಪ್ಯಾಂಟ್ ಹಾಗೂ ನೀಲಿ ಬಣ್ಣದ ಅಂಗಿ ಧರಿಸಿರುತ್ತಾರೆ.
ಈತನ ಬಗ್ಗೆ ಸುಳಿವು ದೊರೆತಲ್ಲಿ ಶಿರಾಳಕೊಪ್ಪ ಪೊಲೀಸ್ ಠಾಣೆ ದೂ.ಸಂ.: 8722983310/ 9480803367 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

ಮಾರ್ಚ್ 23. ಜಿಲ್ಲಾಡಳಿತದಿಂದ ಶರಣ ಶ್ರೀದೇವರ ದಾಸಿಮಯ್ಯ ಜಯಂತಿ ಆಚರಣೆಗೆ ಆಯೋಜನೆ

0

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನೇಕಾರ ಸಮುದಾಯಗಳ ಒಕ್ಕೂಟ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಾ. 23 ರ ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಹೊನ್ನಾಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಡಾ. ಶಿವಪ್ಪ ಡಿ. ಇವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದೆ.

ನೀರಿನ ಕಂದಾಯ ಪಾವತಿಗೆ ಮಾರ್ಚ್ 22 ರಂದು ವಿಶೇಷ ಕೌಂಟರ್ ವ್ಯವಸ್ಥೆ

0

ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ಶಿವಮೊಗ್ಗ ಇವರ ವತಿಯಿಂದ 2025-26 ನೇ ಸಾಲಿನ ಮಾರ್ಚ್ 22 ರ ಭಾನುವಾರದಂದು ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ಕೆಳಕಂಡ ಸ್ಥಳಗಳಲ್ಲಿ ತೆರೆಯಲಾಗಿದೆ.
ರಾಗಿಗುಡ್ಡ ಕೊನೆ ಬಸ್‌ಸ್ಟಾಪ್ ಹತ್ತಿರ, ಗೋಪಾಳ ಕೊನೆ ಬಸ್‌ಸ್ಟಾಪ್ ಹತ್ತಿರ, ಗಾಂಧೀಬಜಾರ್ ಬಸವೇಶ್ವರ ದೇವಸ್ಥಾನದ ಆವರಣ, ಅಶೋಕನಗರ ನಂದಿನ ಬೂತ್, ಪೊಲೀಸ್ ಕ್ವಾಟ್ರಸ್ ಹತ್ತಿರ ಹಾಗೂ ಗಾಡಿಕೊಪ್ಪ ಸರ್ಕಾರಿ ಶಾಲೆ ಹತ್ತಿರ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗಿದೆ. ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ಅಂತಹವರ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಬೇಕೆಂದು ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.