Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್ನಲ್ಲಿ ನೀರು ಸೋರುವಿಕೆಯಾಗುತ್ತಿದ್ದು, ಈ ಘಟಕದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ಕಾಮಗಾರಿ ಮುಕ್ತಾಯವಾಗುವವರೆಗೂ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.
Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ ಮಾಡದಿದ್ದರೆ ಮುಂದೆ ಒಂದು ದಿನ ವಿಪತ್ತನ್ನು ಎದುರಿಸಬೇಕಾಗುತ್ತದೆ ಈಗಾಗಲೇ ವಾಯುಮಾಲಿನ್ಯ ಶಬ್ದ ಮಾಲಿನ್ಯ ಜಲ ಮಾಲಿನ್ಯದಿಂದ ಪರಿಸರ ವಿನಾಶದತ್ತ ಹೋಗುತ್ತಿದೆ ಶುದ್ಧವಾದ ಗಾಳಿ ನೀರು ಸಿಗುತ್ತಿಲ್ಲ ಇದರಿಂದ ನಮ್ಮ ಜೀವಿತ ಅವಧಿ ಕಡಿಮೆಯಾಗುತ್ತಿದೆ ಎಂದು ರೋಟರಿ ಶಿವಮೊಗ್ಗ ಈಸ್ಟಿನ ನೂತನ ಅಧ್ಯಕ್ಷರಾದ ಡಿಕೆ ಶೇಷಗಿರಿಯವರು ವಿಷಾದ ವ್ಯಕ್ತಪಡಿಸಿದರು ಅವರು ಇಂದು ಬೆಳಿಗ್ಗೆ ನಗರದ ಹೊರವಲಯದಲ್ಲಿ ಇರುವ ರೋಟರಿ ಬಯೋ ಡೈವರ್ಸಿಟಿ ಪಾರ್ಕಿನಲ್ಲಿ ಪದಗ್ರಹಣದ ಸಮಾರಂಭದ ಅಂಗವಾಗಿ ಸಸಿಗಳನ್ನು ನೆಡುತ್ತಾ ಮಾತನಾಡಿದರು. ಬಯೋ ಡೈವರ್ಸಿಟಿ ಪಾರ್ಕಿನ ಚೇರ್ಮನ್ ಹಾಗೂ ರೋಟರಿ ಮಾಜಿ ಜಿಲ್ಲಾ ಗವರ್ನರ್ ಪ್ರೊಫೆಸರ್ ಎ ಎಸ್ ಚಂದ್ರಶೇಖರ್ ಅವರು ಮಾತನಾಡುತ್ತಾ ಈ 20 ಎಕರೆ ಜಾಗದಲ್ಲಿ ಇವಾಗಲೇ 5000ಕ್ಕೂ ಹೆಚ್ಚು ಒಳ್ಳೆ ಒಳ್ಳೆಯ ಸಸಿಗಳನ್ನು ಎಲ್ಲಾ ರೋಟರಿ ಸಂಸ್ಥೆಗಳ ಸಹಕಾರದಿಂದ ನೆಟ್ಟಿದ್ದೇವೆ ಎಂದು ನೋಡಿದರು ಇದೇ ಸಂದರ್ಭದಲ್ಲಿ ಕಾರ್ಯದರ್ಶಿ ಹಾಗೂ ಮಾಜಿ ಸಹಾಯಕ ಗವರ್ನರ್ ಎಂಪಿ ಆನಂದಮೂರ್ತಿ ಅವರು ಮಾತನಾಡುತ್ತಾ ನಿಮ್ಮ ನಿಮ್ಮ ಶುಭ ಸಂದರ್ಭದಲ್ಲಿ ನಿಮ್ಮ ನೆನಪಿಗಾಗಿ ಗಿಡ ಮರಗಳನ್ನು ನೀಡುವುದರ ಮುಖಾಂತರ ಸುಂದರವಾದ ವಾತಾವರಣ ಹಾಗೂಸುಂದರ ನಗರವನ್ನು ನಿರ್ಮಾಣ ಮಾಡೋಣ ಎಂದು ನುಡಿದರು Rotary Shivamogga ಮಾಜಿ ಸಹಾಯಕ ಗವರ್ನರ್ಜಿ ವಿಜಯಕುಮಾರ್ ಅವರು ಮಾತನಾಡುತ್ತಾ ಗಿಡ ಮರಗಳನ್ನು ನೆಡುವುದರ ಜೊತೆಗೆ ಅವುಗಳನ್ನು ಸರಿಯಾಗಿ ಸಂರಕ್ಷಣೆ ಮಾಡಬೇಕು ಹಾಗೆ ಮಕ್ಕಳಲ್ಲಿ ಪರಿಸರ ಪ್ರಜ್ಞೆಯನ್ನು ಮೂಡಿಸುವುದು ತುಂಬಾ ಅಗತ್ಯವಾಗಿದೆ ಎಂದು ನುಡಿದರು ಸಮಾರಂಭದಲ್ಲಿ ರೋಟರಿ ಶಿವಮೊಗ್ಗ ಈಸ್ಟ್ ನ ಕಾರ್ಯದರ್ಶಿ ಆರ್ ಮನೋಹರ್. ಮಾಜಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಅರುಣ್ ದೀಕ್ಷಿತ್ ಗಣೇಶ್ ಎಸ್. ಡಾಕ್ಟರ್ ಧನಂಜಯ ರಾಂಪುರ. ನಿರ್ದೇಶಕರುಗಳಾದ. ಸಂಜೀವ್ ಝೋನಲ್ ಲೆಫ್ಟಿನೆಂಟ್ ಮಹೇಶ್ ಆಲೆಮನೆ. ರೊಟೇರಿಯನ್ ದತ್ತಾತ್ರಿ. ರಮೇಶ್.ಶಂಕರ್. ಚಂದ್ರ ನಾಯಕ.ಹಾಗೂ ಸದಸ್ಯರು ಉಪಸ್ಥಿತರಿದ್ದರು
Nisarga Women’s Association, Shivamogga ನಿಸರ್ಗ ಮಹಿಳಾ ಮಂಡಳಿಯಿಂದ ಗರ್ಭಿಣಿಯರಿಗೆ ಮಡಿಲು ತುಂಬುವ ಶಾಸ್ತ್ರ ಕಾರ್ಯಕ್ರಮ.
Nisarga Women’s Association, Shivamogga ಸಿದ್ದೇಶ್ವರ ನಗರದ ನಿಸರ್ಗ ಮಹಿಳಾ ಮಂಡಳಿ ಯಿಂದ ಗರ್ಭಿಣಿ ಸ್ತ್ರೀಯರಿಗೆ ಮಡಿಲು ತುಂಬುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾರ್ಯಕ್ರಮ ತುಂಬಾ ಅರ್ಥಪೂರ್ಣವಾಗಿ ನೆರವೇರಿತು ಕಾರ್ಯಕ್ರಮದಲ್ಲಿ ಮಂಡಳಿ ಯ ಅಧ್ಯಕ್ಷರಾದ ಸುಮಾ ಮಂಜುನಾಥ್. ಉಪಾಧ್ಯಕ್ಷರಾದ ನೇತ್ರಾವತಿ ಶ್ರೀಮತಿ ಭಾಗ್ಯ ಮೋಹನ ರೆಡ್ಡಿ, ಅನಿತಾ ರವಿಶಂಕರ್ ಹಾಗೂ ಮಂಡಳಿಯ ಪದಾಧಿಕಾರಿಗಳು. ಎಲ್ಲಾ ಸದಸ್ಯರು ಭಾಗವಹಿಸಿ, ಸಂಭ್ರಮಿಸಿದರು
Justice G.A. Manjunatha ಮಕ್ಕಳ ಸಮಸ್ಯೆಗಳಿಗೆ ನ್ಯಾಯ ಒದಗಿಸಲು ದೇಶದಲ್ಲೇ ಮೊಟ್ಟ ಮೊದಲಿಗೆ ರಾಜ್ಯದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರ- ನ್ಯಾ.ಜಿ.ಎ. ಮಂಜುನಾಥ್.
Justice G.A. Manjunatha ಸುರಕ್ಷಿತ, ಸ್ನೇಹಪರ ವಾತಾವರಣದಲ್ಲಿ ಮಕ್ಕಳ ಸಮಸ್ಯೆಗಳಿಗೆ ನ್ಯಾಯ ಒದಗಿಸಲು ಉಚಿತ ಕಾನೂನು ಸಲಹಾ ಕೇಂದ್ರವನ್ನು ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಜಿಲ್ಲೆಯಲ್ಲಿ ಸ್ಥಾಪಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ಜಿ.ಎ ತಿಳಿಸಿದರು.
ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಮಕ್ಕಳ ಕಲ್ಯಾಣ ಸಮಿತಿಯಲ್ಲಿನ ಮಕ್ಕಳಿಗೆ ಮತ್ತು ಪೋಷಕರಿಗಾಗಿ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಉಚಿತ ಕಾನೂನು ಸಲಹಾ ಕೇಂದ್ರವನ್ನು ಗುರುವಾರದಂದು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರ ಜೀವನದಲ್ಲಿ ಬಾಲ್ಯ ಅತಿ ಮುಖ್ಯ ಪಾತ್ರ ವಹಿಸುತ್ತದೆ. ಅದು ಮನುಷ್ಯನ ಜೀವನವನ್ನೇ ನಿರ್ಧರಿಸುತ್ತದೆಯಾದ್ದರಿಂದ ಮಕ್ಕಳಿಗೆ ಉತ್ತಮ ಬಾಲ್ಯ ಒದಗಿಸುವುದು ಅತ್ಯವಶ್ಯವಾಗಿದೆ. ಉತ್ತಮ ಬಾಲ್ಯ ಪಡೆದ ಮಕ್ಕಳು ಸರ್ವಾಂಗೀಣ ಅಭಿವೃದ್ದಿ ಹೊಂದಿ, ದೇಶದ ಪ್ರಗತಿಯಲ್ಲಿ ಕೊಡುಗೆ ನೀಡುವವರಾಗುತ್ತಾರೆ.
ಹಲವಾರು ಕಾರಣಗಳಿಂದ ಪೋಷಕರಿಂದ, ಕುಟುಂಬಗಳಿAದ ದೂರ ಉಳಿಯುವ ಪ್ರಸಂಗ ಒದಗಿ ಬರುವ ಮಕ್ಕಳಿಗೆ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಮಾರ್ಗದರ್ಶನ, ಕಾನೂನಿನ ನೆರವು ಒದಗಿಸುವ ಉದ್ದೇಶದಿಂದ ಉಚಿತ ಕಾನೂನು ಸಲಹಾ ಕೇಂದ್ರವನ್ನು ಸ್ಥಾಪನೆ ಮಾಡಲಾಗಿದ್ದು, ಸಮಿತಿ ಮುಂದೆ ಬರುವ ಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಅವರ ಕಾನೂನುಬದ್ಧ ಹಕ್ಕುಗಳ ಬಗ್ಗೆ ಉಚಿತವಾಗಿ ಸಲಹೆ ನೀಡಲಾಗುವುದು ಎಂದರು.
Justice G.A. Manjunatha ಮಕ್ಕಳು ಮತ್ತು ಮಹಿಳೆಯರ ಹಕ್ಕುಗಳ ಸಂರಕ್ಷಣೆಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಸದಾ ಮುಂದಿರುತ್ತದೆ ಎಂದ ಅವರು ಸಂಘರ್ಷಕ್ಕೆ ಒಳಗಾದ, ಕಾನೂನಿನ ಅವಶ್ಯಕತೆ ಇರುವ ಮಕ್ಕಳಿಗೆ ಕೇಂದ್ರದ ವತಿಯಿಂದ ಉತ್ತಮ ಸಲಹೆ, ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಎಂ. ಎಸ್. ಪ್ರಾಸ್ತಾವಿಕ ನುಡಿಗಳನ್ನಾಡಿ, ಮನೆ ಮನೆಗೆ ನ್ಯಾಯ ಒದಗಿಸಬೇಕು ಹಾಗೂ ಎಲ್ಲ ಜನರನ್ನು ತಲುಪಬೇಕೆಂಬ ಉದ್ದೇಶದಿಂದ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯ ನಿರ್ವಹಿಸುತ್ತಿದೆ. ಪ್ರಾಧಿಕಾರವು ಮಕ್ಕಳ ಸ್ನೇಹಿ ಕಾನೂನು ಸೇವೆ 2024 ನ್ನು ಸಹ ಒದಗಿಸಿದ್ದು ಆರೈಕೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳಿಗೆ ಸಲಹೆ, ಸಲವತ್ತುಗಳು ಮತ್ತು ಉಚಿತವಾಗಿ ಕಾನೂನು ನೆರವು ನೀಡಲಾಗುತ್ತದೆ.
ಉಚಿತ ಕಾನೂನು ಸಲಹಾ ಕೇಂದ್ರದಲ್ಲಿ ಆರೈಕೆ, ರಕ್ಷಣೆ ಅಗತ್ಯವಿರುವ ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಹಾಗೂ ಕಾನೂನು ಪ್ರಕ್ರಿಯೆಗಳ ಬಗ್ಗೆ ಅರಿವಿಲ್ಲದ ಬಡ ಮತ್ತು ಅಸಹಾಯಕ ಮಕ್ಕಳಿಗೆ ಸುಲಭವಾಗಿ ನ್ಯಾಯ ಸಿಗುವಂತೆ ಮಾಡಲು ಉಚಿತ ಕಾನೂನು ಸಲಹಾ ಕೇಂದ್ರವನ್ನು ಸ್ಥಾಪಿಸಲಾಗಿದೆ.
ಕೇಂದ್ರವು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಬರುವ ಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಅವರ ಕಾನೂನುಬದ್ಧ ಹಕ್ಕುಗಳ ಬಗ್ಗೆ ಉಚಿತವಾಗಿ ಸಲಹೆ ನೀಡುವುದು. ನ್ಯಾಯಾಲಯಗಳಲ್ಲಿ ಅಥವಾ ಇತರ ಪ್ರಾಧಿಕಾರಗಳ ಮುಂದೆ ಮಕ್ಕಳ ಪರವಾಗಿ ವಾದಿಸಲು ಉಚಿತ ಸರ್ಕಾರಿ ವಕೀಲರನ್ನು ನಿಯೋಜಿಸಲಾಗುವುದು. ಪೋಕ್ಸೋ ಪ್ರಕರಣದಲ್ಲಿ ನೆರವು, ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳಿಗೆ ತಕ್ಷಣದ ಕಾನೂನು ರಕ್ಷಣೆ, ಪರಿಹಾರ ಮತ್ತು ನ್ಯಾಯಾಲಯದ ಪ್ರಕ್ರಿಯೆಗಳಲ್ಲಿ ವಿಶೇಷ ಕಾಳಜಿಯೊಂದಿಗೆ ಸಹಾಯ ಮಾಡುವುದು ಸೇರಿದಂತೆ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ನೆರವಾಗಲಿದೆ ಎಂದ ಅವರು ರಾಷ್ಟಿçÃಯ ಕಾನೂನು ಸೇವಾ ಸಹಾಯವಾಣಿ ಸಂಖ್ಯೆ 15100 ನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತಾಜುದ್ದೀನ್ ಖಾನ್ ಮಾತನಾಡಿ, ಉಚಿತ ಕಾನೂನು ಸಲಹಾ ಕೇಂದ್ರವು ರಾಷ್ಟçದಲ್ಲೇ ಮೊಟ್ಟಮೊದಲ ಬಾರಿಗೆ ನಮ್ಮ ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿದ್ದು, ಕಾನೂನಿನ ಅರಿವಿಲ್ಲದೆ, ಶೋಷಣೆಗೆ ಒಳಗಾಗುತ್ತಿರುವ ಮಕ್ಕಳಿಗೆ ನೆರವು, ರಕ್ಷಣೆ ನೀಡಲಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕೈಜೋಡಿಸಿದಾಗ ಮಕ್ಕಳ ಹಕ್ಕುಗಳ ರಕ್ಷಣೆ ಸಾಧ್ಯವಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಶಶಿರೇಖಾ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಪ್ರತಿ ದಿನ ಜಿಲ್ಲೆಯಾದ್ಯಂತ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರು ಮತ್ತು ಮಕ್ಕಳನ್ನು ಎಲ್ಲರೂ ಗೌರವಯುತವಾಗಿ ಕಂಡಲ್ಲಿ ಅಪರಾಧಗಳೇ ಕಡಿಮೆಯಾಗುತ್ತವೆ ಎಂದ ಅವರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಮಹಿಳೆಯರು ಮತ್ತು ಮಕ್ಕಳ ರಕ್ಷಣೆಯಲ್ಲಿ ಸದಾ ಬೆಂಬಲವಾಗಿ, ಸಹಕಾರ ನೀಡುತ್ತಾ ಬಂದಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲರಾದ ವನಿತ ಎನ್.ಎಸ್., ಮಕ್ಕಳ ಕಲ್ಯಾಣ ಸಮಿತಿ, ಬಾಲ ನ್ಯಾಯ ಮಂಡಳಿಯ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸರ್ಕಾರಿ ಬಾಲಕಿಯರ ಬಾಲಮಂದಿರದ ಅಧೀಕ್ಷಕರಾದ ಜ್ಯೋತಿಕಲಾ ಸ್ವಾಗತಿಸಿದರು. ಸರ್ಕಾರಿ ಬಾಲಕರ ಬಾಲಮಂದಿರದ ಅಧೀಕ್ಷಕರಾದ ಸಾವಿತ್ರಾ ತುಮರಿಕೊಪ್ಪ ವಂದನಾರ್ಪಣೆ ಮಾಡಿದರು.
Keladi Shivappanayaka University of Agricultural ಡಾ.ಧನಂಜಯ.ಕುಲಪತಿ.ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ.ಇರುವಕ್ಕಿ.
Keladi Shivappanayaka University of Agricultural ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿ: ಡಾ. ಎಂ. ವಿ. ಧನಂಜಯ
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೂತನ ಕುಲಪತಿಗಳಾಗಿ ಡಾ. ಎಂ. ವಿ. ಧನಂಜಯ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಐಸಿಎಆರ್-ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ (Iಅಂಖ-IIಊಖ) ಸಸ್ಯ ತಳಿಅಭಿವೃದ್ಧಿ ವಿಭಾಗದ ಪ್ರಧಾನ ವಿಜ್ಞಾನಿಯಾಗಿರುವ ಡಾ. ಎಂ. ವಿ. ಧನಂಜಯ ಅವರು ಭಾರತದ ಪ್ರಮುಖ ತೋಟಗಾರಿಕಾ ವಿಜ್ಞಾನಿಗಳು, ನಾವೀನ್ಯತೆಕಾರರು ಮತ್ತು ಸಾಂಸ್ಥಿಕ ನಾಯಕರಲ್ಲಿ ಒಬ್ಬರಾಗಿದ್ದಾರೆ. ಸುಮಾರು ೩೦ ವರ್ಷಗಳ ಸುದೀರ್ಘ ಹಾಗೂ ವಿಶಿಷ್ಟ ಸೇವಾವಧಿಯಲ್ಲಿ, ಅವರು ತೋಟಗಾರಿಕಾ ಸಂಶೋಧನೆ, ಸಸ್ಯ ತಳಿವರ್ಧನೆ, ಬೀಜ ವ್ಯವಸ್ಥೆ, ತಂತ್ರಜ್ಞಾನ ವಾಣಿಜ್ಯೀಕರಣ, ಉದ್ಯಮಶೀಲತೆ ಅಭಿವೃದ್ಧಿ ಮತ್ತು ಸಾಂಸ್ಥಿಕ ನಿರ್ವಹಣೆಗೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಇವರ ಈ ಕಾರ್ಯಗಳು ದೇಶಾದ್ಯಂತದ ರೈತರು, ನವೋದ್ಯಮಗಳು (ಸ್ಟಾರ್ಟ್ಅಪ್ಗಳು) ಮತ್ತು ತೋಟಗಾರಿಕಾ ಕ್ಷೇತ್ರಕ್ಕೆ ಅಪಾರ ಪ್ರಯೋಜನವನ್ನು ಒದಗಿಸಿವೆ.
ಅವರ ಈ ಮಹೋನ್ನತ ಕೊಡುಗೆಗಳನ್ನು ಗುರುತಿಸಿ, ಅವರಿಗೆ ಪ್ರತಿಷ್ಠಿತ ‘ಡಾ. ಎಂ.ಎಚ್. ಮರಿಗೌಡ ರಾಷ್ಟ್ರೀಯ ದತ್ತಿ ಪ್ರಶಸ್ತಿ’ (೨೦೨೨-೨೩) ಮತ್ತು ‘ಡಾ. ಕಲ್ಲಯ್ಯ ಕೃಷ್ಣಮೂರ್ತಿ ರಾಷ್ಟ್ರೀಯ ಪ್ರಶಸ್ತಿ’ (೨೦೨೩-೨೪) ನೀಡಿ ಗೌರವಿಸಲಾಗಿದೆ. ಸಂಶೋಧನೆ, ಬೋಧನೆ ಮತ್ತು ವಿಸ್ತರಣಾ ಕ್ಷೇತ್ರಗಳಲ್ಲಿನ ಅತ್ಯುತ್ತಮ ಸಾಧನೆಗಾಗಿ ಅವರು ೧೪ ಬಾರಿ ಗೌರವಿಸಲ್ಪಟ್ಟಿದ್ದಾರೆ. ಅಲ್ಲದೆ, ಯುಎಎಸ್ ಬೆಂಗಳೂರು, ಯುಎಎಸ್ ಧಾರವಾಡ, ಯುಎಎಸ್ ರಾಯಚೂರು, ಕೆಎಸ್ಎನ್ಯುಎಎಚ್ಎಸ್ ಶಿವಮೊಗ್ಗ ಮತ್ತು ತುಮಕೂರು ವಿಶ್ವವಿದ್ಯಾಲಯ ಸೇರಿದಂತೆ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಗೌರವಾನ್ವಿತ ಡಾಕ್ಟರೇಟ್ ಪದವಿಗಳನ್ನು ಪ್ರದಾನ ಮಾಡಲು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಇವರನ್ನು ಆರು ಬಾರಿ ‘ತಜ್ಞರ ಪರಿಶೀಲನಾ ಸಮಿತಿ’ಗೆ ನಾಮನಿರ್ದೇಶನ ಮಾಡಿದ್ದಾರೆ.
ಡಾ. ಧನಂಜಯ ಅವರು ೧೮ ತೋಟಗಾರಿಕಾ ತಳಿಗಳನ್ನು ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಿದ್ದಾರೆ. ಇವುಗಳಲ್ಲಿ ಭಾರತದ ಮೊದಲ ‘ಗಮ್ಮಿ ಸ್ಟೆಮ್ ಬ್ಲೈಟ್’ (ಕಾಂಡ ಕೊಳೆ ರೋಗ) ನಿರೋಧಕ ಸೋರೆಕಾಯಿ ತಳಿಯಾದ ‘ಅರ್ಕಾ ಶ್ರೇಯಸ್’, ಅತಿ ಹೆಚ್ಚು ಇಳುವರಿ ನೀಡುವ ಫ್ಲೋರಿಬಂಡಾ ಗುಲಾಬಿ ತಳಿ ‘ಅರ್ಕಾ ಸವಿ’, ಮತ್ತು ಮಹಿಳಾ ಉದ್ಯಮಿಗಳಿಗೆ ಹೊಸ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸಿರುವ ಮೌಲ್ಯವರ್ಧಿತ ಗುಲಾಬಿ ಚಹಾದ ತಳಿ ‘ಅರ್ಕಾ ಪರಿಮಳ’ ಪ್ರಮುಖವಾಗಿವೆ. ಅವರ ವೈಜ್ಞಾನಿಕ ಸಾಧನೆಗಳಲ್ಲಿ PPಗಿ&ಈಖಂ (ಸಸ್ಯ ತಳಿಗಳು ಮತ್ತು ರೈತರ ಹಕ್ಕುಗಳ ರಕ್ಷಣೆ ಕಾಯ್ದೆ) ಅಡಿಯಲ್ಲಿ ಸಂರಕ್ಷಿಸಲ್ಪಟ್ಟ ೫ ತಳಿಗಳು, ಓಃPಉಖ (ರಾಷ್ಟ್ರೀಯ ಸಸ್ಯ ಜೀವರೂಪ ಸಂಪನ್ಮೂಲ್ ಬ್ಯೂರೋ) ನಲ್ಲಿ ನೋಂದಾಯಿಸಲ್ಪಟ್ಟ ೧೯ ಜೀವರೂಪಗಳು (ಜರ್ಮ್ಪ್ಲಾಸಂ) ಸೇರಿವೆ. ಜೊತೆಗೆ ಅವರು ಸುಮಾರು ₹೨೯ ಕೋಟಿ ಮೌಲ್ಯದ ಸಂಶೋಧನಾ ಯೋಜನೆಗಳನ್ನು ನಿರ್ವಹಿಸಿದ್ದಾರೆ, ಸಿಎಸ್ಆರ್ (ಅSಖ) ಉಪಕ್ರಮಗಳ ಮೂಲಕ ₹೧೨ ಕೋಟಿಗೂ ಹೆಚ್ಚು ಹಣವನ್ನು ಕ್ರೋಢೀಕರಿಸಿದ್ದಾರೆ, ೧೦೦ ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು, ೭ ಪುಸ್ತಕಗಳು, ೧೯ ಪುಸ್ತಕದ ಅಧ್ಯಾಯಗಳು, ೧೦೨ ಶೈಕ್ಷಣಿಕ ವೀಡಿಯೊಗಳನ್ನು ಪ್ರಕಟಿಸಿದ್ದಾರೆ ಮತ್ತು ಹಲವಾರು ಎಂ.ಎಸ್ಸಿ. ಹಾಗೂ ಪಿಎಚ್.ಡಿ. ಸಂಶೋಧಕರಿಗೆ ಮಾರ್ಗದರ್ಶನ ನೀಡಿದ್ದಾರೆ.
Keladi Shivappanayaka University of Agricultural ಭಾರತ ಸರ್ಕಾರದ ಓIಆಊI ತಂತ್ರಜ್ಞಾನ ವ್ಯವಹಾರ ಇನ್ಕ್ಯುಬೇಟರ್) ನ ಸಿಇಒ (ಅಇಔ) ಆಗಿ, ಡಾ. ಎಂ. ವಿ. ಧನಂಜಯ ಅವರು ಭಾರತದ ಪ್ರಮುಖ ಕೃಷಿ-ನವೋದ್ಯಮ ಪರಿಸರ ವ್ಯವಸ್ಥೆಯನ್ನು ನಿರ್ಮಿಸಿದ್ದಾರೆ. ಇದು ₹೧೭.೦೫ ಕೋಟಿ ವಹಿವಾಟು ಸಾಧಿಸಿದೆ, ೧೦೦ ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳಿಗೆ ಬೆಂಬಲ ನೀಡಿದೆ, ೯೩ ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಿದೆ ಮತ್ತು ೩,೫೦೦ ಕ್ಕೂ ಹೆಚ್ಚು ಉದ್ಯಮಿಗಳಿಗೆ ತರಬೇತಿ ನೀಡಿದೆ. ಅಲ್ಲದೆ ಸರ್ಕಾರದ ಮೂಲಕ ₹೧೪ ಕೋಟಿ ಆರ್ಥಿಕ ನೆರವನ್ನು ಒದಗಿಸಿದ್ದು, ₹೭ ಕೋಟಿ ಮೌಲ್ಯದ ಮೂಲಸೌಕರ್ಯವನ್ನು ಸೃಷ್ಟಿಸಿದೆ. ಔಓಆಅ, ಉeಒ, ಹಾಪ್ಕಾಮ್ಸ್ (ಊಔPಅಔಒS), ಬಿಗ್ಹಾಟ್ (ಃigಊಚಿಚಿಣ), ಐಮ್ಕಾರ್ಟ್ (ಂIಒಏAಖಖಿ), ಇಂಡಿಯಾ ಪೋಸ್ಟ್ ಮತ್ತು ಎಚ್ಡಿಎಫ್ಸಿ ಬ್ಯಾಂಕ್ಗಳೊAದಿಗೆ ಕಾರ್ಯತಂತ್ರದ ಪಾಲುದಾರಿಕೆಯನ್ನು ಸ್ಥಾಪಿಸಿದೆ. ಇವರ ಈ ಪ್ರಯತ್ನಗಳಿಂದಾಗಿ Iಅಂಖ-IIಊಖ ತಂತ್ರಜ್ಞಾನಗಳು ೬೫,೬೫೮ ಹೆಕ್ಟೇರ್ ಪ್ರದೇಶಕ್ಕೆ ವಿಸ್ತರಿಸಿದ್ದು, ತಂತ್ರಜ್ಞಾನ ವಾಣಿಜ್ಯೀಕರಣ, ಮಹಿಳಾ ಉದ್ಯಮಶೀಲತೆ ಮತ್ತು ನಾವೀನ್ಯತೆ ಆಧಾರಿತ ಕೃಷಿ ಉದ್ಯಮಗಳನ್ನು ಉತ್ತೇಜಿಸಿದೆ. Iಅಂಖ-IIಊಖ ನ ತರಕಾರಿ ಬೀಜ ಘಟಕದ ನೋಡಲ್ ಅಧಿಕಾರಿಯಾಗಿ, ಅವರು ಆನ್ಲೈನ್ ಬೀಜ ಪೋರ್ಟಲ್ಗಳು, ಡಿಜಿಟಲ್ ಮಾರ್ಕೆಟಿಂಗ್, ಬೀಜ ವಿತರಣಾ ಯಂತ್ರಗಳು (ವೆಂಡಿAಗ್ ಮೆಷಿನ್), ಸಹಭಾಗಿತ್ವದ ಬೀಜ ಉತ್ಪಾದನೆ ಮತ್ತು ರಾಷ್ಟ್ರೀಯ ಬೀಜ ನಿಗಮ ಹಾಗೂ ರಾಜ್ಯ ಸರ್ಕಾರಗಳೊಂದಿಗೆ ಸಹಭಾಗಿತ್ವ ಹೊಂದುವ ಮೂಲಕ ಭಾರತದ ಸಾರ್ವಜನಿಕ ಬೀಜ ವಿತರಣಾ ವ್ಯವಸ್ಥೆಯನ್ನು ಆಧುನೀಕರಿಸಿದ್ದಾರೆ. ಇದರ ಪರಿಣಾಮವಾಗಿ ೮೪.೯ ಟನ್ ತರಕಾರಿ ಬೀಜಗಳ ಉತ್ಪಾದನೆ ಮತ್ತು ಮಾರಾಟವಾಗಿದ್ದು, ೧.೫೯ ಲಕ್ಷ ತರಕಾರಿ ಕಿಟ್ಗಳನ್ನು ವಿತರಿಸಲಾಗಿದೆ ಹಾಗೂ ₹೨೦.೭೩ ಕೋಟಿಗೂ ಹೆಚ್ಚು ಆದಾಯ ಗಳಿಸುವ ಮೂಲಕ ರಾಷ್ಟ್ರೀಯ ಬೀಜ ಭದ್ರತೆಯನ್ನು ಗಣನೀಯವಾಗಿ ಬಲಪಡಿಸಲಾಗಿದೆ.
ಒಬ್ಬ ದಕ್ಷ ಆಡಳಿತಗಾರರಾಗಿ, ಡಾ. ಧನಂಜಯ ಅವರು ರಾಷ್ಟ್ರೀಯ ತೋಟಗಾರಿಕಾ ಮೇಳಗಳನ್ನು (೨೦೨೦, ೨೦೨೧, ೨೦೨೪ ಮತ್ತು ೨೦೨೫), ಅಂತರರಾಷ್ಟ್ರೀಯ ಸಮ್ಮೇಳನಗಳು, ಸೆಮಿನಾರ್ಗಳು, ಕಾರ್ಯಾಗಾರಗಳು ಮತ್ತು ಕೃಷಿ ಮೇಳಗಳನ್ನು ಯಶಸ್ವಿಯಾಗಿ ಆಯೋಜಿಸಿದ್ದಾರೆ. ಇವುಗಳ ಮೂಲಕ ತಂತ್ರಜ್ಞಾನ ಪ್ರಸರಣ ಮತ್ತು ರೈತರ ತಲುಪುವಿಕೆಯನ್ನು ಉತ್ತೇಜಿಸುವ ಜೊತೆಗೆ ₹೩.೪೫ ಕೋಟಿ ಪ್ರಾಯೋಜಕತ್ವವನ್ನು (Sಠಿoಟಿsoಡಿshiಠಿs) ಕ್ರೋಢೀಕರಿಸಿದ್ದಾರೆ. ವಿಶೇಷವಾಗಿ, “ಸ್ಟಾರ್ಟ್-ಅಪ್ ಮತ್ತು ಸ್ಟ್ಯಾಂಡ್-ಅಪ್ ಇಂಡಿಯಾ” ಎಂಬ ವಿಷಯದ ಅಡಿಯಲ್ಲಿ ಹೈಬ್ರಿಡ್ (ಆಫ್ಲೈನ್ ಮತ್ತು ವರ್ಚುವಲ್) ಮಾದರಿಯಲ್ಲಿ ನಡೆಸಲಾದ ರಾಷ್ಟ್ರೀಯ ತೋಟಗಾರಿಕಾ ಮೇಳ (ಓಊಈ-೨೦೨೧), ₹೧೦೦.೩೫ ಲಕ್ಷ ಹಣವನ್ನು ಸಂಗ್ರಹಿಸಿತು, ೨೫೭ ತಂತ್ರಜ್ಞಾನಗಳು ಮತ್ತು ೧೧ ಭಾಷೆಗಳಲ್ಲಿ ೨೦೦ ಶೈಕ್ಷಣಿಕ ವೀಡಿಯೊಗಳನ್ನು ಪ್ರದರ್ಶಿಸಿತು. ಇದು ೨೨ ಸಂಸ್ಥೆಗಳು, ೭೨೧ ಕೃಷಿ ವಿಜ್ಞಾನ ಕೇಂದ್ರಗಳು (ಏಗಿಏs) ಮತ್ತು ೬೦೦ ರೈತ ಉತ್ಪಾದಕ ಸಂಸ್ಥೆಗಳನ್ನು (ಈPಔs) ಒಳಗೊಂಡ ೧೧ ತಾಂತ್ರಿಕ ಅವಧಿಗಳನ್ನು ಆಯೋಜಿಸಿತು, ೭ ಒಡಂಬಡಿಕೆಗಳಿಗೆ (ಒoUs) ಚಾಲನೆ ನೀಡಿತು ಮತ್ತು ೧೨ ದೇಶಗಳಲ್ಲಿ ೫.೭೨ ಮಿಲಿಯನ್ ಜನರನ್ನು ತಲುಪುವ ಮೂಲಕ ಡಿಜಿಟಲ್ ಕೃಷಿ ವಿಸ್ತರಣೆ ಮತ್ತು ತಂತ್ರಜ್ಞಾನ ವರ್ಗಾವಣೆಯಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸಿತು.
ಅಂತರರಾಷ್ಟ್ರೀಯ ಮಟ್ಟದಲ್ಲಿ, ಅವರು ಬ್ಯಾಂಕಾಕ್ನಲ್ಲಿ ನಡೆದ ಏಷ್ಯನ್ ಸೊಲನೇಸಿಯಸ್ ಮತ್ತು ಕುಕುರ್ಬಿಟ್ ರೌಂಡ್ ಟೇಬಲ್ (ಂPSA) ನ ಅಧ್ಯಕ್ಷರಾಗಿ ಮತ್ತು ಮುಖ್ಯ ಭಾಷಣಕಾರರಾಗಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಹಲವಾರು ಅಂತರರಾಷ್ಟ್ರೀಯ ವೈಜ್ಞಾನಿಕ ಗೋಷ್ಠಿಗಳ ಅಧ್ಯಕ್ಷತೆ ವಹಿಸಿದ್ದಾರೆ, ಹಲವು ರಾಷ್ಟ್ರೀಯ ತಜ್ಞರ ಸಮಿತಿಗಳು ಮತ್ತು ಶಾಸನಬದ್ಧ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ತೋಟಗಾರಿಕಾ ಸಂಶೋಧನೆ, ಬೀಜ ವ್ಯವಸ್ಥೆ, ನಾವೀನ್ಯತೆ, ಸ್ಟಾರ್ಟ್ಅಪ್ ಇನ್ಕ್ಯುಬೇಶನ್ ಮತ್ತು ಕೃಷಿ ನೀತಿಯಲ್ಲಿ ತಮ್ಮ ನಾಯಕತ್ವವನ್ನು ಮುಂದುವರೆಸಿದ್ದಾರೆ. ತಮ್ಮ ಪ್ರವರ್ತಕ ಕಾರ್ಯಗಳ ಮೂಲಕ, ಡಾ. ಎಂ. ವಿ. ಧನಂಜಯ ಅವರು ಸ್ವಾವಲಂಬಿ, ಸುಸ್ಥಿರ ಮತ್ತು ಜಾಗತಿಕವಾಗಿ ಸ್ಪರ್ಧಾತ್ಮಕ ಭಾರತೀಯ ತೋಟಗಾರಿಕಾ ಕ್ಷೇತ್ರವನ್ನು ನಿರ್ಮಿಸುವಲ್ಲಿ ನಿರಂತರವಾಗಿ ಮತ್ತು ಅಮೂಲ್ಯವಾದ ಕೊಡುಗೆಯನ್ನು ನೀಡುತ್ತಿದ್ದಾರೆ.
MESCOM ಜುಲೈ11. ಶಿವಮೊಗ್ಗದ ಕೆಇಬಿ ಸರ್ಕಲ್, ಬಾಪೂಜಿ ನಗರ ,ರೈಲ್ವೆ ಸ್ಟೇಷನ್ ರಸ್ತೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ.
MESCOM ಶಿವಮೊಗ್ಗ ನಗರ ಉಪವಿಭಾಗ-1 ರ ವ್ಯಾಪ್ತಿಯಲ್ಲಿ ನಗರದ ಕೆಇಬಿ ಸರ್ಕಲ್ ಬಳಿ ವಿದ್ಯುತ್ ಕಂಬ ಬದಲಾವಣೆ ಕಾಮಗಾರಿ ಇರುವುದರಿಂದ ಜು. 11 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಕೆಇಬಿ ಸರ್ಕಲ್, ಬಾಪೂಜಿನಗರ, ರೈಲ್ವೆ ಸ್ಟೇಷನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Keladi Shivappanayaka University of Agricultural ಡಾ.ಧನಂಜಯ, ಇರುವಕ್ಕಿ ಕೃಷಿ ವಿವಿಯ ನೂತನ ಕುಲಪತಿ. ರಾಜ್ಯಪಾಲರ ನೇಮಕಾತಿ ಆದೇಶ.
Keladi Shivappanayaka University of Agricultural ಇಲ್ಲಿನ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಹಿರಿಯ ವಿಜ್ಞಾನಿ ಡಾ. ಎಂ. ವಿ. ಧನಂಜಯ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ.ಡಾ. ಧನಂಜಯ ಅವರ ಪ್ರಮುಖ ಸಾಧನೆಗಳು
ಡಾ. ಧನಂಜಯ ಅವರು ತೋಟಗಾರಿಕಾ ಕ್ಷೇತ್ರದ ವಿವಿಧ 18 ನೂತನ ತಳಿಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಇದರಲ್ಲಿ ದೇಶದ ಮೊದಲ ಕಾಂಡ ಕೊಳೆ ರೋಗ ನಿರೋಧಕ ಸೋರೆಕಾಯಿ ತಳಿ ಅರ್ಕಾ ಶ್ರೇಯಸ್, ಅತಿ ಹೆಚ್ಚು ಇಳುವರಿ ನೀಡುವ ಗುಲಾಬಿ ತಳಿ ಅರ್ಕಾ ಸವಿ ಹಾಗೂ ಗುಲಾಬಿ ಚಹಾದ ತಳಿ ಅರ್ಕಾ ಪರಿಮಳ ಪ್ರಮುಖವಾಗಿವೆ. ಇವರ ನೇತೃತ್ವದಲ್ಲಿ ₹29 ಕೋಟಿ ಮೌಲ್ಯದ ಸಂಶೋಧನಾ ಯೋಜನೆಗಳು ಅನುಷ್ಠಾನಗೊಂಡಿದ್ದು, 100ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ.ಭಾರತ ಸರ್ಕಾರದ ಬೆಸ್ಟ್-Keladi Shivappanayaka University of Agricultural ಹಾರ್ಟ್ ತಂತ್ರಜ್ಞಾನ ವ್ಯವಹಾರ ಇನ್ಯುಬೇಟರ್ ಸಿಇಒ ಆಗಿ ಡಾ. ಧನಂಜಯ ಅವರು ಕಾರ್ಯನಿರ್ವಹಿಸಿದ್ದಾರೆ. 100ಕ್ಕೂ ಹೆಚ್ಚು ಕೃಷಿ ನವೋದ್ಯಮಗಳಿಗೆ ಬೆಂಬಲ ನೀಡಿದ್ದಾರೆ. ಅಲ್ಲದೆ, ತರಕಾರಿ ಬೀಜ ಘಟಕದ ನೋಡಲ್ ಅಧಿಕಾರಿಯಾಗಿ ಆನ್ಲೈನ್ ಬೀಜ ಪೋರ್ಟಲ್ ಮತ್ತು ಬೀಜ ವಿತರಣಾ ಯಂತ್ರಗಳ ಮೂಲಕ ಸಾರ್ವಜನಿಕ ಬೀಜ ವಿತರಣಾ ವ್ಯವಸ್ಥೆಯನ್ನು ಆಧುನೀಕರಿಸಿದ ಹೆಗ್ಗಳಿಕೆ ಹೊಂದಿದಾರೆ.
Government Tool Room & Training Centre ಜಿಟಿಟಿಸಿ – ಕೌಶಲ್ಯಾಭಿವೃದ್ಧಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ.
Government Tool Room & Training Centre 2026-27ನೇ ಸಾಲಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ)ದಲ್ಲಿ ಎಐಟಿಟಿ- ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ದಿ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಐಟಿಐ ಪೂರೈಸಿದವರಿಗೆ 4 ತಿಂಗಳ ಸಿ.ಏನ್.ಸಿ. ಆಪರೇಟರ್ – ವರ್ಟಿಕಲ್ ಮಷಿನ್ನಿಂಗ್ ಸೆಂಟರ್, ಡಿಪ್ಲೋಮ /ಬಿ.ಇ ಪೂರೈಸಿದವರಿಗೆ 4 ತಿಂಗಳ ಸಿ ಏನ್ ಸಿ ಪ್ರೋಗ್ರಾಮರ್ /ಪ್ರೊ-ಇ / ಆಟೋ ಕ್ಯಾಡ್/ ಐಓಟಿ, ಎಸ್.ಎಸ್.ಎಲ್.ಸಿ. ಪೂರೈಸಿದವರಿಗೆ 4 ತಿಂಗಳ ಮಿಲ್ಲರ್/ಟರ್ನರ್ ಹಾಗೂ 12 ತಿಂಗಳ ಟೂಲ್ ರೂಮ್ ಮಷಿನಿಸ್ಟ್ ತರಬೇತಿಗಳನ್ನು ನೀಡಲಾಗುವುದು. ತರಬೇತಿ ಮುಗಿದ ನಂತರ ತಾಂತ್ರಿಕ Government Tool Room & Training Centre ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶವನ್ನು ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳಿಗೆ ರೂ. 2500/- ಶಿಷ್ಯವೇತನ ನೀಡಲಾಗುವುದು. ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ವಯಸ್ಸು, ವಿದ್ಯಾರ್ಹತೆಯ ದಾಖಲಾತಿಗಳು ಹಾಗು ವೈಯಕ್ತಿಕ ವಿವರಗಳೊಂದಿಗೆ ಪ್ರಾಂಶುಪಾಲರು, ಜಿಟಿಟಿಸಿ, ಪ್ಲಾಟ್ ನಂ.ಸಿಎ 38,ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ ಇಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ. ಸಂ: 08182-246054/9448307027/ 9449286543 ಗಳನ್ನು ಸಂಪರ್ಕಿಸಬಹುದೆಂದು ಸಂಸ್ಥೆಯ ಪ್ರಾಂಶುಪಾಲರು ತಿಳಿಸಿರುತ್ತಾರೆ.
Department Of Horticulture Karnataka ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಭದ್ರಾವತಿ ತೋಟಗಾರಿಕೆ ಇಲಾಖೆ ಪ್ರಕಟಣೆ.
Department Of Horticulture Karnataka ಭದ್ರಾವತಿ ತೋಟಗಾರಿಕೆ ಇಲಾಖೆಯಿಂದ 2026-27 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಹನಿ ನೀರಾವರಿ/ತುಂತುರು ನೀರಾವರಿ, ತೋಟಗಾರಿಕೆಯಲ್ಲಿ ಯಾಂತ್ರೀಕರಣ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ತಾಳೆಬೆಳೆ ಯೋಜನೆ, ಜೇನು ಸಾಕಾಣಿಕೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ ಮುಂತಾದ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲಾಗುತ್ತಿದ್ದು,ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ನಿಗದಿತ ನಮೂನೆಯ ಅರ್ಜಿಗಾಗಿ ಭದ್ರಾವತಿ ತೋಟಗಾರಿಕೆ ಇಲಾಖೆ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು. 31 ರೊಳಗಾಗಿ ಸಲ್ಲಿಸುವಂತೆ ಹಾಗೂ ಈ ಕಾರ್ಯಕ್ರಮಗಳಿಗೆ ಜೇಷ್ಠತೆ ಮತ್ತು ಮೀಸಲಾತಿಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
Department Of Horticulture Karnataka ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. ಕಸಬಾ-1 -9591134415, ಕಸಬಾ -2 – 8317333375, ಕೂಡ್ಲಿಗೆರೆ-7975537143, ಹೊಳೆಹೊನ್ನೂರು-1 – 8317404476, ಹೊಳೆಹೊನ್ನೂರು-2 – 9591134415, ಹೊಳೆಹೊನ್ನೂರು-3 -8317404476 ನ್ನು ಸಂಪರ್ಕಿಸಬಹುದೆಂದು ಭದ್ರಾವತಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Animal Husbandry and Sericulture Department-Karnataka ರಬ್ಬರ್ ನೆಲಹಾಸು ಮತ್ತು ಸೈಲೇಜ್ ಬ್ಯಾಗ್ ವಿತರಿಸಲು ಆಸಕ್ತರಿಂದ ಅರ್ಜಿ ಆಹ್ವಾನ.
Animal Husbandry and Sericulture Department-Karnataka ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು 2025-26ನೇ ಸಾಲಿನ ತಾಲ್ಲೂಕು ಪಂಚಾಯತ್ ಅನುದಾನದಡಿ ವೈಜ್ಞಾನಿಕ ತಾಂತ್ರಿಕತೆ ಪರಿಚಯ ಕಾರ್ಯಕ್ರಮದಡಿ ರಬ್ಬರ್ ನೆಲಹಾಸು ಮತ್ತು ಸೈಲೇಜ್ ಬ್ಯಾಗ್ ವಿತರಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಹೈನುಗಾರಿಕೆಯಲ್ಲಿ ಅನುಭವವುಳ್ಳ, ಕನಿಷ್ಠ 2 ರಾಸುಗಳನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಸ್ಥಳೀಯ ಪಶುವೈದ್ಯರಿಂದ ದೃಢೀಕರಣ ಪತ್ರ ಪಡೆದಿರಬೇಕು. ಸರ್ಕಾರದ ನಿಯಮಾನುಸಾರ ಮಹಿಳೆಯರಿಗೆ, ಅಂಗವಿಕಲರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗುವುದು. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ, ಶಿವಮೊಗ್ಗ ಗ್ರಾಮಾಂತರ ಮತ್ತು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಒಟ್ಟು 37 ಫಲಾನುಭವಿಗಳಿಗೆ ಸೌಲಭ್ಯ ಲಭಿಸಲಿದ್ದು, ಪ್ರತಿ ಫಲಾನುಭವಿಯು ಫ್ರೂಟ್ ಐಡಿ ಹೊಂದಿರಬೇಕಾಗುತ್ತದೆ.
Animal Husbandry and Sericulture Department-Karnataka ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಪಶುವೈದ್ಯಾಧಿಕಾರಿಗಳ ಕಚೇರಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜು. 18 ರೊಳಗಾಗಿ ಸಲ್ಲಿಸುವಂತೆ ಮುಖ್ಯ ಪಶುವೈದ್ಯಾಧಿಕಾರಿ ಡಾ. ಪ್ರಸನ್ನ ಕೆ.ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
