Wednesday, May 6, 2026
Wednesday, May 6, 2026
Home Blog Page 30

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

0

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯೋಗವು (ECI) ನಮ್ಮ ಸರ್ಕಾರಕ್ಕೆ ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿರುವುದು ಚುನಾವಣಾ ಆಯೋಗದ ಪಕ್ಷಪಾತಿತನವನ್ನು ತೋರಿಸುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

CM Siddharamaiah ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ಅಲ್ಲಿನ ಬಿಜೆಪಿ ಸರ್ಕಾರ ನಗದು ವರ್ಗಾವಣೆ ಯೋಜನೆಗಳ ಜಾರಿಮಾಡಿದಾಗ ಕಣ್ಮುಚ್ಚಿ ಕೂತಿದ್ದ ಚುನಾವಣಾ ಆಯೋಗ, ಕಳೆದ ಎರಡೂ ಮುಕ್ಕಾಲು ವರ್ಷದಿಂದ ಜಾರಿಯಿರುವ ಗ್ಯಾರಂಟಿ ಯೋಜನೆಗಳ ಲೆಕ್ಕಕೇಳಿ ನಮ್ಮನ್ನು ಬೆದರಿಸಲು ಹೊರಟಿದೆ. ಇಂಥ ಗೊಡ್ಡು ಬೆದರಿಕೆ ಬಗ್ಗುವವರು ನಾವಲ್ಲ.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಆಗಿ ತಮ್ಮ ಅನಿಸಿಕೆಯನ್ನ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಸಂಶಯಾಸ್ಪದ ರೀತಿಯಲ್ಲಿ ಶಿವಮೊಗ್ಗದ ಯುವಕನ ಸಾವು

0

ಶಿವಮೊಗ್ಗದ ತುಂಗಾನಗರ ಬಳಿಯ ಕಾಮತ್ ಲೇ ಔಟ್ ನಲ್ಲಿ ಯುವಕನೊಬ್ಬ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ನಡೆದಿದೆ.

24 ವರ್ಷದ ಮಂಜುನಾಥ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಅಡಿಕೆ ಆರಿಸುವ ಕೆಲಸ, ಗಾರೆ ಹಾಗೂ ಶಿಲ್ಪಿ ಮಾಡ್ತಿದ್ದ ಮಂಜುನಾಥ್ ಅವರು
ಒಂದು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಸೋಕೋ ಟೀಮ್ ಹಾಗೂ ಪೊಲೀಸರ ಭೇಟಿ- ಪರಿಶೀಲನೆ ನಡೆಸಿದ್ದಾರೆ.

ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ‌

ಶಿವಮೊಗ್ಗದ ದೋಸೆ ಪ್ರಿಯರಿಗೆ “ಗ್ಯಾಸ್ ಟ್ರಬಲ್ ” ಟಿಫಿನ್ ಮಿಸ್‌ ಆಗ್ತಿದೆಯ,??

0

ಮಲೆನಾಡಿನಲ್ಲಿಯೂ ಕೂಡ ಇರಾನ್ ಇಸ್ರೇಲ್ ಹಾಗೂ ಅಮೇರಿಕ ಯುದ್ಧದ ಬಿಸಿ ತಟ್ಟಿದೆ. ಶಿವಮೊಗ್ಗದ ಹಳೆಯ ಹಾಗೂ ಪ್ರಸಿದ್ಧ ಪಲ್ಲವಿ ಹೋಟೆಲ್ ನಲ್ಲೂ ದೋಸೆಗಾಗಿ ತಿಂಡಿ ಪ್ರಿಯರು ಪರದಾಡುವಂತಾಗಿದೆ.

ಕಳೆದ 28 ವರ್ಷಗಳಿಂದ ಶಿವಮೊಗ್ಗದ ಪಲ್ಲವಿ ಹೋಟೆಲ್ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಸಿಗುವ ದೋಸೆ ಹಾಗೂ ಪೂರಿಗೆ ತಿಂಡಿ ಪ್ರಿಯರಿದ್ದಾರೆ. ಈಗ ಗ್ಯಾಸ್ ಸಿಗದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರು ಸೌದೆ ಒಲೆಗೆ ಮೊರೆ ಹೋಗಿದ್ದಾರೆ. ಆದ್ದರಿಂದ ಇಡ್ಲಿ ಹಾಗೂ ಊಟ ಟೀ ಮಾತ್ರ ಸಿಗುತ್ತಿದೆ. ಗ್ಯಾಸ್ ಸಿಗದಿದ್ದಕ್ಕೆ ಮೆನುವಿನಲ್ಲಿ ಹಲವು ತಿಂಡಿಗಳನ್ನು ಕಟ್ ಮಾಡಲಾಗಿದೆ.

ಜಿಲ್ಲೆಯಾದ್ಯಂತ ಜಾನುವಾರುಗಳಿಗೆ‌ ಕಾಲುಬಾಯಿ ರೋಗ ವಿರುದ್ಧ ಏಪ್ರಿಲ್ 23 ರಿಂದ ಲಸಿಕಾ ಅಭಿಯಾನ- ಪ್ರಭುಲಿಂಗ ಕವಳಿಕಟ್ಟಿ

0

ಶಿವಮೊಗ್ಗ ಜಿಲ್ಲೆಯಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಏಪ್ರಿಲ್ 23 ರಿಂದ 9ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ 9ನೇ ಸುತ್ತಿನ ಕಾಲು ಮತ್ತು ಜ್ವರ ಲಸಿಕಾ ಕಾರ್ಯಕ್ರಮದ ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಾನುವಾರುಗಳಲ್ಲಿ ಕಾಲು ಮತ್ತು ಬಾಯಿರೋಗ(ಎಫ್‌ಎಂಡಿ) ತಡೆಗಟ್ಟಲು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಉಚಿತವಾಗಿ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆಗಳನ್ನು ನೀಡಲಾಗುತ್ತದೆ. ಇದೇ ಏಪ್ರಿಲ್ 23 ರಿಂದ ಮೇ 22 ರವರೆಗೆ ಒಟ್ಟು 30 ದಿನಗಳ ಕಾಲ ಜಿಲ್ಲೆಯಾದ್ಯಂತ ಈ ಅಭಿಯಾನ ನಡೆಯಲಿದ್ದು 2030 ರ ವೇಳೆಗೆ ದೇಶದಿಂದ ಕಾಲುಬಾಯಿ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ.
ಜಿಲ್ಲೆಯ ಅಂಕಿ-ಅAಶ : ಜಿಲ್ಲೆಯಲ್ಲಿ 3,86,030 ಹಸುಗಳು ಹಾಗೂ 80,622 ಎಮ್ಮೆಗಳು ಸೇರಿ ಒಟ್ಟು 4,66,652 ಜಾನುವಾರುಗಳಿದ್ದು ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಜಿಲ್ಲೆಯಾದ್ಯಂತ ಒಟ್ಟು 477 ಲಸಿಕೆದಾರರನ್ನು ನೇಮಕ ಮಾಡಲಾಗಿದೆ.
ಜಿಲ್ಲೆಯಲ್ಲಿ 532715 ಡೋಸ್ ಲಸಿಕೆ ದಾಸ್ತಾನು ಮಾಡಲಾಗಿದ್ದು, ಲಸಿಕಾ ಕಾರ್ಯಕ್ರಮವು ಪ್ರತಿದಿನ ಬೆಳಿಗ್ಗೆ 7 ರಿಂದ 11 ಗಂಟೆಯವರೆಗೆ ನಡೆಯಲಿದೆ. ಲಸಿಕೆ ಹಾಕುವ ಸಮಯದಲ್ಲಿ ರೈತರ ಆಧಾರ್ ಸಂಖ್ಯೆ ಹಾಗೂ ಜಾನುವಾರುಗಳ ಕಿವಿ ಓಲೆ(ಟ್ಯಾಗ್ ನಂಬರ್) ವಿವರಗಳನ್ನು ಕಡ್ಡಾಯವಾಗಿ ಪಡೆಯಲಾಗುವುದು ಎಂದ ಅವರು ಇದನ್ನು ‘ಭಾರತ್ ಪಶುಧನ್’ ತಂತ್ರಾAಶದಲ್ಲಿ ಅಪ್‌ಲೋಡ್ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಲಸಿಕೆ ಹಾಕಿದ ನಂತರ ಯಾವುದೇ ವ್ಯತಿರಿಕ್ತ ಪರಿಣಾಮಗಳು ಕಂಡುಬAದಲ್ಲಿ ತಕ್ಷಣದ ಚಿಕಿತ್ಸೆಗಾಗಿ ತುರ್ತು ಔಷಧಿಗಳನ್ನು ಸಿದ್ಧಪಡಿಸಿಕೊಳ್ಳಲು ಸೂಚಿಸಿದ ಅವರು ಗ್ರಾ.ಪಂ ಗಳ ಹಳ್ಳಿಗಳಲ್ಲಿ ವಾರ್ಡ್ಗಳಲ್ಲಿ, ಲಸಿಕೆ ನೀಡುವ ಬಗ್ಗೆ ಹೆಚ್ಚಿನ ಪ್ರಚಾರ ನೀಡುವಂತೆ ತಿಳಿಸಿದರು.
ಮನೆ ಬಾಗಿಲಿಗೆ ಲಸಿಕೆ : ಪಶುಪಾಲನಾ ಇಲಾಖೆಯ ಸಿಬ್ಬಂದಿಗಳು ರೈತರ ಮನೆಬಾಗಿಲಿಗೆ ಬಂದು ಉಚಿತವಾಗಿ ಲಸಿಕೆ ಹಾಕಲಿದ್ದು, ಜಿಲ್ಲೆಯ ಎಲ್ಲಾ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಬಾಬುರತ್ನ, ಡಿಯುಡಿಸಿ ಯೋಜನಾ ನಿರ್ದೇಶಕ ರಂಗಸ್ವಾಮಿ, ಇತರೆ ಅಧಿಕಾರಿಗಳು ಹಾಜರಿದ್ದರು.

ಶಿವಮೊಗ್ಗ ರಾಗಿಗುಡ್ಡ ಪ್ರದೇಶವಾಸಿ ಮಹಿಳೆ ನಾಪತ್ತೆ. ಪೊಲೀಸ್ ಪ್ರಕಟಣೆ

0

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಗಿಗುಡ್ಡ ವಾಸಿ ಜಿಯಾವುಲ್ಲಾ ಎಂಬುವವರ ಪತ್ನಿ ಮಾಲನ್ ಜಹಾನ್ ಎಂಬ 29 ವರ್ಷ ಮಹಿಳೆ ಮಾ. 30 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆಯ ಚಹರೆ ಕೋಲುಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, 5.5 ಅಡಿ ಎತ್ತರವಿರುತ್ತಾರೆ. ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.
ಈಕೆಯ ಬಗ್ಗೆ ಸುಳಿವು ದೊರೆತಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಅಥವಾ ಕಂಟ್ರೋಲ್ ರೂಂ. ದೂ.ಸಂ.: 100/ 08182-261400/261418/ 9480803332/ 9480803350 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

District Legal Services Authority ಮಾನಸಿಕ ಅಸ್ವಸ್ಥರಿಗೆ ವೈದ್ಯಕೀಯ, ಆರೋಗ್ಯ, ಆಸ್ತಿ ರಕ್ಷಣೆ ನಿಟ್ಟಿನಲ್ಲಿ ಕಾನೂನು ಸೇವೆಗಳಿವೆ, ಸದ್ಬಳಕೆ ಮಾಡಿ- ನ್ಯಾ.ಜಿ.ಎ.ಮಂಜುನಾಥ್.

0

District Legal Services Authority ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವರಿಗೆ ವಿಶಿಷ್ಟ ಹಕ್ಕುಗಳಿವೆ. ಅವರುಗಳ ಆರೋಗ್ಯ, ಆಸ್ತಿ ರಕ್ಷಣೆ ಮಾಡಿಕೊಳ್ಳಲು ಕಾನೂನಿನ ಸೇವೆಗಳಿದ್ದು ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಂಜುನಾಥ್ ಜಿ.ಎ. ತಿಳಿಸಿದರು.
ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ ಹಾಗೂ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ, ಸಿಮ್ಸ್ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಮಾನಸಿಕ ಆರೋಗ್ಯ ವಿಮರ್ಶ ಮಂಡಳಿಯ ಕಚೇರಿಯಲ್ಲಿ ತೆರೆಯಲಾಗಿರುವ ಉಚಿತ ಕಾನೂನು ಸೇವಾ ಕೇಂದ್ರದ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು.
ಮಾನಸಿಕ ಅಸ್ವಸ್ಥತೆಗೆ ಒಳಗಾದ ವ್ಯಕ್ತಿಗಳ ವೈದ್ಯಕೀಯ, ಆರೋಗ್ಯ, ಆಸ್ತಿ ರಕ್ಷಣೆಯ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರದಡಿ ಸಹಾಯ ಲಭ್ಯವಿದ್ದು, ಅದರ ಸದ್ಭಳಕೆ ಪಡೆದುಕೊಳ್ಳಬೇಕು. ಹಾಗೂ ಯಾರೇ ಆಗಲಿ ತಾವು ಮಾಡುವ ಕೆಲಸವನ್ನು ಶ್ರದ್ದೆ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಮಾಡಬೇಕು ಎಂದು ಕರೆ ನೀಡಿದರು. .
ಸಿಮ್ಸ್ ನಿರ್ದೇಶಕರಾದ ಡಾ.ವಿರೂಪಾಕ್ಷಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯ ಮಾನಸಿಕ ಆರೋಗ್ಯ ವಿಮರ್ಶ ಮಂಡಳಿಯ ಕಚೇರಿಯಲ್ಲಿ ಕಾನೂನು ಸಲಹಾ ಕೇಂದ್ರವನ್ನು ಸ್ಥಾಪಿಸಿರುವುದು ಬಹಳ ಉಪಯುಕ್ತವಾಗಿದ್ದು, ಇಂತಹ ಕಾರ್ಯಕ್ರಮಗಳ ಮಾಹಿತಿಯು ಎಲ್ಲಾ ಜನರಿಗೆ ತಲುಪಬೇಕು ಹಾಗೂ ಅಗತ್ಯವಿದ್ದವರು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಧೀಶರಾದ ಸಂತೋಷ್ ಎಂ ಎಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಶಿವಮೊಗ್ಗ ನಗರದಲ್ಲಿ ಸಾರ್ವಜನಿಕರಿಗೆ ಕಾನೂನು ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಿಡಿಪಿಓ ಕಚೇರಿ, ಮೆಗ್ಗಾನ್ ಆಸ್ಪತ್ರೆಯ ಎಆರ್‌ಟಿ ಕ್ಲಿನಿಕ್, ಬಾಲ ನ್ಯಾಯ ಮಂಡಳಿ, ಜಿಲ್ಲಾ ಸೈನಿಕ್ ಬೋರ್ಡ್, ಹಿರಿಯ ನಾಗರಿಕರ ಸಹಾಯವಾಣಿ, ಕೇಂದ್ರ ಕಾರಾಗೃಹ ಹಾಗೂ ಮಹಿಳಾ ಕೇಂದ್ರ ಕಾರಾಗೃಹ ಹಾಗೂ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನುರಿತ ವಕೀಲರನ್ನು ಕಾನೂನು ಸಲಹಾ ಕೇಂದ್ರಗಳಿಗೆ ನಿಯೋಜಿಸಲಾಗಿದ್ದು, ಇವರ ಸೇವೆಯನ್ನು ಪಡೆಯಬಹುದು.
ಅಲ್ಲದೆ ಮಕ್ಕಳು ಕಾಣೆಯಾದ ಬಗ್ಗೆ ದೂರು ನೀಡಲು ಬಂದವರಿಗೆ ಹಾಗೂ ಮಹಿಳೆಯರಿಗೆ ಹಾಗೂ ಕಾನೂನು ನೆರವನ್ನು ಬಯಸುವ ಬಂಧಿತರಾದ ಆರೋಪಿಗಳಿಗೆ ಕಾನೂನು ಸೇವೆಗಳ ಬಗ್ಗೆ ಮಾಹಿತಿಯನ್ನು ನೀಡಲು ದೊಡ್ಡಪೇಟೆ ಪೊಲೀಸ್ ಠಾಣೆ, ತುಂಗಾನಗರ ಪೊಲೀಸ್ ಠಾಣೆ ಹಾಗೂ ಮಹಿಳಾ ಪೊಲೀಸ್ ಠಾಣೆಯಲ್ಲಿ ತಲಾ ಒಬ್ಬ ಅರೆಕಾಲಿಕ ಕಾನೂನು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
District Legal Services Authority ಮಾನಸಿಕ ಅಸ್ವಸ್ಥರಿಗೆ ಉಚಿತ ಕಾನೂನಿನ ನೆರವು ನೀಡಲು ಹಾಗೂ ಘನತೆಯಿಂದ ಬದುಕಲು ನಮ್ಮ ಪ್ರಾಧಿಕಾರವು ಉಚಿತವಾಗಿ ವಕೀಲರನ್ನು ನೇಮಿಸಿದ್ದು, ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಉಚಿತ ಕಾನೂನಿನ ಸಲಹೆ ಪಡೆಯಬಹುದು ಎಂದರು.
ಕಾರ್ಯಕ್ರಮದಲ್ಲಿ ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ತಿಮ್ಮಪ್ಪ ಟಿ.ಡಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಗೀತಾ, ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ. ರಾಮ್ ಪ್ರಸಾದ್, ಶುಶ್ರೂಷಕಾಧೀಕ್ಷಕಿ ಶೇಷಮ್ಮ, ಮಾನಸಿಕ ಆರೋಗ್ಯ ವಿಮರ್ಶ ಮಂಡಳಿಯ ಸದಸ್ಯರಾದ ರಜನಿ ಪೈ, ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ ಸದಸ್ಯರಾದ ಶುಭ್ರತ, ನರ್ಸಿಂಗ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇಂದೇ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಣೆ

0

ದ್ವಿತೀಯ ಪಿಯು ಫಲಿತಾಂಶ ಇಂದು ಮಧ್ಯಾಹ್ನ 3ಕ್ಕೆ ಪ್ರಕಟವಾಗಲಿದೆ. ಇದೇ ಮೊದಲ ಬಾರಿ ಫಲಿತಾಂಶದ ಜತೆಗೇ ಅಂಕಪಟ್ಟಿಯೂ ಲಭ್ಯವಿದ್ದು, ಡಿಜಿಲಾಕರ್‌ನಿಂದ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಫಲಿತಾಂಶವನ್ನು karresults.nic.in ಜಾಲತಾಣ ಹಾಗೂ ಕರ್ನಾಟಕ ಒನ್‌ ಮೊಬೈಲ್‌ ಆ್ಯಪ್‌ ಮೂಲಕ ಪಡೆಯುಬಹುದು. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ವಾಟ್ಸ್‌ ಆ್ಯಪ್‌, ಎಸ್‌ಎಂಎಸ್‌ ಮೂಲಕವೂ ಫಲಿತಾಂಶವನ್ನು ರವಾನಿಸಲಾಗುವುದು.

ಜಿಲ್ಲೆಯ ಆಯ್ದ ತಾಲ್ಲೂಕುಗಳಲ್ಲಿ ಯುವನಿಧಿ ಗ್ಯಾರಂಟಿ ಯೋಜನೆ ಪ್ರಚಾರ ಕಾರ್ಯಕ್ರಮ

0

ಶಿವಮೊಗ್ಗ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಏ. 13 ರಂದು ಸ.ಪ್ರ.ದ.ಕಾಲೇಜು- ಶಿಕಾರಿಪುರ, ಏ. 15 ರಂದು ಕೊಡಚಾದ್ರಿ ಪ್ರ.ದ.ಕಾಲೇಜು -ಹೊಸನಗರ , ಏ.16 ರಂದು ಸ.ಪ್ರ.ದ.ಕಾಲೇಜು -ಸೊರಬ, ಏ.17 ರಂದು ಸ.ಪ್ರ.ದ.ಕಾಲೇಜು -ತೀರ್ಥಹಳ್ಳಿ, ಏ.22 ರಂದು ಸರ್.ಎಂ.ವಿ. ಪ್ರ.ದ.ಕಾಲೇಜು- ಭದ್ರಾವತಿ ಹಾಗೂ ಏ. 24 ರಂದು ಸ.ಪ್ರ.ದ.ಕಾಲೇಜು – ಸಾಗರ ಈ ಎಲ್ಲಾ ಸ್ಥಳಗಳಲ್ಲಿ ಯುವನಿಧಿ ಗ್ಯಾರಂಟಿ ಯೋಜನೆಯ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ ಕೆ.ಡಿ. ತಿಳಿಸಿರುತ್ತಾರೆ

Kuvempu University ಮುದ್ರಣ ಮಾಧ್ಯಮದಲ್ಲಿ ಬರವಣಿಗೆ ಕೌಶಲ, ಮುಖ್ಯ. ವರದಿಗಾರಿಕೆ ತುಂಬಾ ಜವಾಬ್ದಾರಿಯುಳ್ಳದ್ದು- ಶರತ್ ಕುಮಾರ್ ಉದಯವಾಣಿ

0

Kuvempu University ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ “ವೃತ್ತಿಪರ ಪತ್ರಕರ್ತರ ಸವಾಲುಗಳು” ಎನ್ನುವ ವಿಷಯದ ಕುರಿತು ಶರತ್ ಕುಮಾರ್ ಅವರು ವಿಶೇಷ ಉಪನ್ಯಾಸ ನೀಡಿದರು.
ಮುದ್ರಣ ಮಾಧ್ಯಮದಲ್ಲಿ ಕೆಲಸ ಮಾಡುವುದು ತುಂಬಾ ಸವಾಲು ಆಗಿರುತ್ತದೆ. ಪತ್ರಕರ್ತರಿಗೆ ಸಮಯ ನಿರ್ವಹಣೆ ಮಾಡುವುದು ತಿಳಿದಿರಬೇಕು. ಸೂಕ್ಷ್ಮ ವಿಚಾರಗಳ ಕುರಿತು ವರದಿ ಮಾಡುವಾಗ ಜವಾಬ್ದಾರಿಯಿಂದ ಮಾಡಬೇಕು ಮತ್ತು ಗಂಭೀರ ವಿಚಾರದ ಕುರಿತು ಜಾಗೃತರಾಗಿರಬೇಕು ಎಂದು ತಿಳಿಸಿದರು.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ತುಂಬಾ ಅವಕಾಶಗಳಿವೆ ಮತ್ತು ಮುದ್ರಣ ಮಾಧ್ಯಮಕ್ಕೆ ಹೋಗುವವರಿಗೆ ಬರವಣಿಗೆ ಕೌಶಲ್ಯ ತುಂಬಾ ಮುಖ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳಿದರು.
Kuvempu University ವಿಭಾಗದ ಹಳೆಯ ವಿದ್ಯಾರ್ಥಿ ಆಗಿದ್ದ ಶರತ್ ಕುಮಾರ್ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024 ನೇ ಸಾಲಿನ ಬಿ ಜಿ ತಿಮ್ಮಪ್ಪಯ್ಯ ಪ್ರಶಸ್ತಿಗೆ ಭಾಜನರಾದ ಕಾರಣ ವಿಭಾಗದ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಭಾಗದ ಮುಖ್ಯಸ್ಥರಾದ ಡಾ. ವರ್ಗೀಸ್ ಪಿ.ಎ ವಹಿಸಿದ್ದರು.ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರಾದ ಡಾ. ಸತೀಶ್ ಕುಮಾರ್,ಡಾ.ಸತ್ಯ ಪ್ರಕಾಶ್ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಮುಬೀನಾ ಬಾನು ಕಾರ್ಯಕ್ರಮವನ್ನು ನಿರೂಪಿಸಿದರು. ಭಾರ್ಗವಿ ಜಿ.ಆರ್ ಪ್ರಾರ್ಥಿಸಿ, ತಾರಾ ವಂದಿಸಿದರು.

DC Shivamogga ಗಣತಿ ಸಂದರ್ಭದಲ್ಲಿ ಕುಟುಂಬದ ಮಾಹಿತಿ,ಜಾತಿ,ಉಪಜಾತಿ,ಹೆಸರುಗಳ ಗೊಂದಲ ಆಗದಂತೆ ಜಾಗ್ರತೆಯಿಂದ ಕಾರ್ಯ ನಿರ್ವಹಿಸಿ- ಪ್ರಭುಲಿಂಗ ಕವಳಿಕಟ್ಟಿ

0

DC Shivamogga ಜನ ಗಣತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ನಿಖರವಾಗಿ ನಡೆಸುವಂತೆ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿಳಾದ ಪ್ರಭುಲಿಂಗ ಕವಳಿಕಟ್ಟಿಯವರು ನಿರ್ದೇಶನ ನೀಡಿದರು.
ಶಿವಮೊಗ್ಗ ನಗರದ ಬಿ ಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಶಿವಮೊಗ್ಗ ಗ್ರಾಮಾಂತರ ವಿಭಾಗದ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗಣತಿ ಸಂದರ್ಭದಲ್ಲಿ ಪ್ರತಿಯೊಂದು ಕುಟುಂಬದ ಸದಸ್ಯರು ನೀಡುವ ಮಾಹಿತಿ ಅತ್ಯಂತ ನಿಖರವಾಗಿರಬೇಕು. ಉಪಜಾತಿ ಮತ್ತು ಪರ್ಯಾಯ ಹೆಸರುಗಳ ಬಗ್ಗೆ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದ ಅವರು ಸ್ವಯಂ ಗಣತಿ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.
DC Shivamogga ಜಿಲ್ಲೆಯ ಪ್ರತಿಯೊಂದು ಮನೆ ಮತ್ತು ಪ್ರದೇಶದ ನಿವಾಸಿಗಳನ್ನು ಈ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಒಳಪಡಿಸಬೇಕು. ಯಾವುದೇ ಒಂದು ಕುಟುಂಬವೂ ಗಣತಿಯಿಂದ ವಂಚಿತವಾಗಬಾರದು ಎಂದು ತಿಳಿಸಿದ ಅವರು ಗಣತಿಗಾಗಿ ಬಳಸಲಾಗುವ ಡಿಜಿಟಲ್ ಪೋರ್ಟಲ್‌ಗಳಲ್ಲಿ ದತ್ತಾಂಶವನ್ನು ದಾಖಲಿಸುವಾಗ ತಾಂತ್ರಿಕ ದೋಷಗಳಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.
ಸಾರ್ವಜನಿಕರು ನೀಡುವ ವೈಯಕ್ತಿಕ ಮತ್ತು ಸಾಮಾಜಿಕ ಮಾಹಿತಿಯ ಗೌಪ್ಯತೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಭರವಸೆ ನೀಡಿದ ಅವರು ತಹಶೀಲ್ದಾರ್‌ಗಳು, ಮೇಲ್ವಿಚಾರಕರು ಮತ್ತು ಗಣತಿದಾರರು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಶಿವಮೊಗ್ಗ ತಹಶೀಲ್ದಾರ್ ರಾಜೀವ್, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.