Saturday, February 7, 2026
Saturday, February 7, 2026
Home Blog Page 31

Actor Yash ಯಶಸ್ವಿ ” ಯಶ್”ಗೆಬರ್ತ್ ಡೇ ‘ಗುಡ್ ವಿಶ್’

0

Actor Yash ನವೀನ್ ಕುಮಾರ್ ಗೌಡ ಅಂದ್ರೆ ಕನ್ನಡಿಗರಿಗೆ ಯಾರೀತ ಅಂತ ಹುಬ್ಬೇರಿಸಬಹುದು. ಅದು ಸಹಜ. ಸಿನಿಮಾರಂಗದಲ್ಲಿ ಪ್ರವೇಶಮಾಡುವಾಗ ಹೆಸರು ಬದಲಿಸುವ ಸಂಪ್ರದಾಯ‌ ನಡೆದು ಬಂದಿದೆ. ಅದರಂತೆ ನವೀನ್ ಕುಮಾರ್ ಕನ್ನಡ ಬೆಳ್ಳಿತೆರೆಯ ಮೇಲೆ ಮಿಂಚಿದಾಗ ಹೆಸರು ಬದಲಾಯಿತು.
ಒಂದು ಸಿನಿಮಾದಿಂದ ಮತ್ತೊಂದಕ್ಕೆ ಪಟಪಟನೇ ಚಿಮ್ಮುತ್ತಾ ಬಂದ ಪ್ರತಿಭಾವಂತ ‘ಯಶ್ ‘ ಈಗ ಜನಜನಿತ.
ಕೆಜಿಎಫ್ ಚಿತ್ರವಂತೂ ಕನ್ಮಚಿತ್ರ ಜಗತ್ತೊಂದೇ ಅಲ್ಲ ಭಾರತೀಯ ಚಿತ್ರರಂಗದ ಹಿರಿಯಣ್ಣಗಳೂ ಬೆರಗಾಗುವಂತೆ ಮಾಡಿದ್ದು ಈಗ ಇತಿಹಾಸ.
Actor Yash ಇಂದು “ಯಶ್” ಜನ್ಮದಿನ .
ಹಾಗಂದೇ ಅವರ ಅಭಿಮಾನಿಗಳಿಗೆಲ್ಲಾ ಸಂಭ್ರಮದ ಕ್ಷಣ.
ಯಶ್..ಕೇವಲ ಸಿನಿಮಾ ಹೆಸರು ಗಳಿಕೆ
ಒಂದೇ ಅಲ್ಲ. ಆರ್ಥಿಕ‌”ಗಳಿಕೆ” ಯನ್ನೂ
ಸಮಾಜಕ್ಕೆ “ಯಶೋಮಾರ್ಗ”ದ ಮೂಲಕ ಹಂಚುತ್ತಿದ್ದಾರೆ.
ಕನ್ನಡದ ಬಹುಪಾಲು ಜನಪ್ರಿಯ ಚಿತ್ರನಟರು ಹೀಗೆ ಒಂದಿಲ್ಲೊಂದು ಸಾಮಾಜಿಕ ಸ್ಪಂದನ ಉಳ್ಳವರಾಗಿದ್ದಾರೆ.
ಡಾ.ರಾಜ್, ಡಾ.ಶಿವರಾಜ್ ಕುಮಾರ್, ಡಾ.ಪುನೀತ್ ರಾಜ್ ಕುಮಾರ್, ದರ್ಶನ್,ಅಂಬರೀಶ್, ಹೀಗೆ ಪಟ್ಟಿ ಬೆಳೆಸಬಹುದು.

ಹ್ಯಾಪಿ ಬರ್ತ್ ಡೆ ಯಶ್….

Department of Railway ಸಂಕ್ರಾಂತಿ ವಿಶೇಷ ತಾಳಗುಪ್ಪ- ಯಶವಂತಪುರ ನಡುವೆ ವಿಶೇಷ ರೈಲುಗಳ ಸಂಚಾರ

0

Department of Railway ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06585 ಯಶವಂತಪುರ-ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ದಿನಾಂಕ 13.01.2026 ರಂದು (ಮಂಗಳವಾರ) ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗಿನ ಜಾವ 04:45ಕ್ಕೆ ತಾಳಗುಪ್ಪ ತಲುಪಲಿದೆ. ಇದರ ಜೋಡಿ ರೈಲು, ರೈಲು ಸಂಖ್ಯೆ 06586 ತಾಳಗುಪ್ಪ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ದಿನಾಂಕ 14.01.2026 ರಂದು (ಬುಧವಾರ) ಬೆಳಿಗ್ಗೆ 10:00ಕ್ಕೆ ತಾಳಗುಪ್ಪದಿಂದ ಹೊರಟು, ಅಂದೇ ಸಂಜೆ 05:15ಕ್ಕೆ ಯಶವಂತಪುರ ತಲುಪಲಿದೆ.

ಈ ವಿಶೇಷ ರೈಲು ಥಮ ದರ್ಜೆ ಎಸಿ (1), ಎಸಿ ಟು ಟೈರ್ (2), ಎಸಿ ತ್ರೀ-ಟೈರ್ (6), ಸ್ಲೀಪರ್ ಕ್ಲಾಸ್ (8), ಜನರಲ್ ಸೆಕೆಂಡ್ ಕ್ಲಾಸ್ (3) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿಗಳು ಸೇರಿದಂತೆ 22 ಬೋಗಿಗಳನ್ನು ಒಳಗೊಂಡಿರುತ್ತದೆ.

ಅದೇ ರೀತಿ, ರೈಲು ಸಂಖ್ಯೆ 06587 ಯಶವಂತಪುರ-ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ದಿನಾಂಕ 23.01.2026 ರಂದು (ಶುಕ್ರವಾರ) ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗಿನ ಜಾವ 04:45ಕ್ಕೆ ತಾಳಗುಪ್ಪ ತಲುಪಲಿದೆ. ಇದರ ಜೋಡಿ ರೈಲು, ರೈಲು ಸಂಖ್ಯೆ 06588 ತಾಳಗುಪ್ಪ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ದಿನಾಂಕ ರೈಲು 24.01.2026 ರಂದು (ಶನಿವಾರ) ಬೆಳಿಗ್ಗೆ 10:00ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 05:15 ಕ್ಕೆ ಯಶವಂತಪುರ ತಲುಪಲಿದೆ.

Department of Railway ಈ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ ಸಂಚರಿಸುವಾಗ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿವೆ.

ಈ ವಿಶೇಷ ರೈಲು ಪ್ರಥಮ ದರ್ಜೆ ಕಮ್ ಎಸಿ ಟು ಟೈರ್ (1), ಎಸಿ ತ್ರೀ-ಟೈರ್ (2), ಸ್ಲೀಪರ್ ಕ್ಲಾಸ್ (10), ಜನರಲ್ ಸೆಕೆಂಡ್ ಕ್ಲಾಸ್ (5) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿಗಳು ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.

ಪ್ರಯಾಣಿಕರು ಈ ವಿಶೇಷ ರೈಲು ಸೇವೆಯ ಲಾಭವನ್ನು ಪಡೆದುಕೊಳ್ಳಲು ಹಾಗೂ ಮುಂಚಿತವಾಗಿ ತಮ್ಮ ಪ್ರಯಾಣವನ್ನು ಯೋಜಿಸಲು ಕೋರಲಾಗಿದೆ.

Shivamogga Traffic Police ಸಂಚಾರಿ ಠಾಣೆ ಮುಖ್ಯಪೇದೆ ಜಕ್ರಿಯಾ ನೇಣಿಗೆ ಶರಣು

0

Shivamogga Traffic Police ಶಿವಮೊಗ್ಗ ಪಶ್ಚಿಮ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಮುಖ್ಯ ಪೇದೆ
ಜಕ್ರಿಯಾ (55)ನೇಣು ಹಾಕಿಕೊಂಡಿದ್ದಾರೆ.

ಕಳೆದ ರಾತ್ರಿ ಠಾಣೆಯಲ್ಲಿ ನೇಣು ಹಾಕಿಕೊಂಡ ಜಕ್ರಿಯಾ ಇಹಲೋಕ ತ್ಯಜಿಸಿದ್ದಾರೆ.

ಇತ್ತೀಚೆಗಷ್ಟೇ ಎಎಸ್ಐ ಆಗಿ ಬಡ್ತಿ ಆದೇಶ ಪಡೆದಿದ್ದ ಜಕ್ರಿಯಾ ಅವರು
ಬಡ್ತಿ ನಿರಾಕರಿಸಿ ಮುಖ್ಯ ಪೇದೆ ಹುದ್ದೆಯಲ್ಲೇ ಮುಂದುವರಿದಿದ್ದರು.
ಕಳೆದ ನಾಲ್ಕೈದು ವರ್ಷದಿಂದ ಪಶ್ಚಿಮ ಟ್ರಾಫಿಕ್ ಠಾಣೆಯಲ್ಲಿ
ಜಕ್ರಿಯಾ ಕರ್ತವ್ಯ ನಿರ್ವಹಿಸುತ್ತಿದ್ದ‌ರು.

Shivamogga Traffic Police ಸ್ಥಳಕ್ಕೆ ಎಸ್ಪಿ ನಿಖಿಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Department of Empowerment of the Disabled and Senior Citizens ಸಾಧನ ಯೋಜನೆಯಡಿ ಪ್ರೋತ್ಸಾಹ ಧನ ಪಡೆಯಲು ವಿಶೇಷಚೇತನರಿಂದ ಅರ್ಜಿ ಆಹ್ವಾನ

0

Department of Empowerment of the Disabled and Senior Citizens ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಸಾಧನ ಯೋಜನೆಯಡಿ ಪ್ರೋತ್ಸಾಹ ಧನ ಪಡೆಯಲು ವಿಶೇಷ ಚೇತನರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಜಿಲ್ಲೆಯ ಅರ್ಹ ಆಸಕ್ತ ವಿಶೇಷ ಚೇತನರು ಸೇವಾಸಿಂಧು ತಂತ್ರಾಂಶ https://sevasindhuservices.kanranatak.gov.in ಪೋರ್ಟಲ್ ಮೂಲಕ ಅಥವಾ ಗ್ರಾಮಾ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಹಾಗೂ ನೇರವಾಗಿಯು ತಮ್ಮ ಲಾಗಿನ್ ಬಳಸಿ ಜ. 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Department of Empowerment of the Disabled and Senior Citizens ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251676 ಅಥವಾ ತಾ.ಪಂ/ಗ್ರಾ.ಪಂ.ನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ/ ಯುಆರ್‌ಡಬ್ಲ್ಯೂ/ ವಿಆರ್‌ಡಬ್ಲ್ಯೂ ಗಳನ್ನು ಸಂರ್ಕಿಸುವುದು.
ಶಿವಮೊಗ್ಗ ಎಂ.ಆರ್.ಡಬ್ಲ್ಯೂ- ಮಲ್ಲಿಕಾರ್ಜುನ್-9980150110, ಭದ್ರಾವತಿ ಎಂ.ಆರ್.ಡಬ್ಲ್ಯೂ -ದಿನೇಶ್ -7899137243, ತೀರ್ಥಹಳ್ಳಿ ಎಂ.ಆರ್.ಡಬ್ಲ್ಯೂ- ದಿವಾಕರ್-9480767638, ಶಿಕಾರಿಪುರ ಎಂ.ಆರ್.ಡಬ್ಲ್ಯೂ- ಹುಚ್ಚರಾಯಪ್ಪ – 9741161346, ಹೊಸನಗರ ಎಂ.ಆರ್.ಡಬ್ಲ್ಯೂ- ರವಿಕುಮಾರ್ -9731922693, ಸಾಗರ ಎಂ.ಆರ್.ಡಬ್ಲ್ಯೂ- ಶ್ಯಾಮ್ ಸುಂದರ್ -9535247757 ಇವರುಗಳನ್ನು ಸಂಪರ್ಕಿಸುವುದು.

Shivamogga City Water Supply and Drainage Board ನೀರಿನ ಕಂದಾಯ ಸ್ವೀಕೃತಿಗೆ ಜನವರಿ 11 ರಂದು ಕೆಲವು ಸ್ಥಳಗಳಲ್ಲಿ ವಿಶೇಷ ಕೌಂಟರ್

0

Shivamogga City Water Supply and Drainage Board ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಜ. 11 ರಂದು ನಗರದ ಕೆಲವು ಸ್ಥಳಗಳಲ್ಲಿ ವಿಶೇಷ ಕರ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.

ವಿನೋಬನಗರ ಪೊಲೀಸ್ ಠಾಣೆ ಎದುರು ಪೊಲೀಸ್ ಚೌಕಿ ಹತ್ತಿರ, ರವೀಂದ್ರನಗರ ಗಣಪತಿ ದೇವಸ್ಥಾನದ ಹತ್ತಿರ, ಸೋಮಿನಕೊಪ್ಪ ರಸ್ತೆ ಪೆಟ್ರೋಲ್ ಬಂಕ್ ಹತ್ತಿರ-ದೇವರಾಜ ಅರಸ್ ಬಡಾವಣೆ, ಹರಿಗೆ ಗಣಪತಿ ದೇವಸ್ಥಾನದ ಹತ್ತಿರ, ಗುಂಡಪ್ಪಶೆಡ್ ಮಾಸ್ತಾಂಬಿಕ ದೇವಸ್ಥಾನದ ಪಾರ್ಕ್ ಹತ್ತಿರ. ಈ ಸ್ಥಳಗಳಲ್ಲಿ ಕೌಂಟರ್ ತೆರೆಯಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

Shimoga District Registration and Stamps Department ಡಿಜಿಟಲ್ ಇ- ಸ್ಟಾಂಪ್ ವ್ಯವಸ್ಥೆ ಜಾರಿಗೆ ಎಲ್ಲಾ ಉಪನೋಂದಣಿ ಕಛೇರಿಗಳಲ್ಲಿ ತರಬೇತಿ‌ ಕಾರ್ಯ

0

Shimoga District Registration and Stamps Department ಶಿವಮೊಗ್ಗ ಜಿಲ್ಲಾ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಹೊಸದಾಗಿ ಅನುಷ್ಟಾನಗೊಳಿಸುತ್ತಿರುವ ಡಿಜಿಟಲ್ ಇ-ಸ್ಯಾಂಪ್ ವ್ಯವಸ್ಥೆಯನ್ನು ಜಾರಿಗೊಳಿಸುತ್ತಿದ್ದು, ಈ ಕುರಿತು ಎಲ್ಲಾ ತಾಲೂಕು ಉಪನೊಂದಣಿ ಕಚೇರಿಗಳಲ್ಲಿ ವಿವಿಧ ದಿನಾಂಕಗಳಂದು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜ. 08 ರಂದು ಬೆಳಗ್ಗೆ 11.30ಕ್ಕೆ ತೀರ್ಥಹಳ್ಳಿ, ಮದ್ಯಾಹ್ನ 3.30ಕ್ಕೆ ಹೊಸನಗರ ಮತ್ತು ಸಂಜೆ 5.00ಕ್ಕೆ ಸಾಗರ. ಜ. 09 ರಂದು ಮದ್ಯಾಹ್ನ 12.00ಕ್ಕೆ ಸೊರಬ ಮತ್ತು ಮದ್ಯಾಹ್ನ 2.20 ಕ್ಕೆ ಶಿಕಾರಿಪುರ. ಜ. 13 ರಂದು ಬೆಳಗ್ಗೆ 11.00ಕ್ಕೆ ಭದ್ರಾವತಿ ಮತ್ತು ಮದ್ಯಾಹ್ನ 2.30ಕ್ಕೆ ಶಿವಮೊಗ್ಗ ಉಪನೋಂದಣಿ ಕಚೇರಿಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಸಾರ್ವಜನಿಕರು, ಪತ್ರ ಬರಹಗಾರರು ಮತ್ತು ವಕೀಲು ಈ ತರಬೇತಿಯಲ್ಲಿ ಭಾಗವಹಿಸುವಂತೆ ಜಿಲ್ಲಾ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.

District Consumer Disputes Redressal Commission ಅನಾರೋಗ್ಯದ ಕೋಳಿಮರಿ ವಿತರಣೆ.ಗ್ರಾಹಕರಿಗೆ ಪರಿಹಾರ ನೀಡಲು ಕೋರ್ಮಲ ಹ್ಯಾಚರೀಸ್ ಗೆ ಆದೇಶ

0

District Consumer Disputes Redressal Commission ಅನಾರೋಗ್ಯವಾಗಿರುವ ಕೋಳಿಮರಿಗಳನ್ನು ವಿತರಿಸಿ ನಷ್ಟ ಉಂಟು ಮಾಡಿದ ಎದುರುದಾರ ಕೋರ್ಮಲ ಹ್ಯಾಚರೀಸ್, ಕೆ.ಆರ್ ರಸ್ತೆ ಬೆಂಗಳೂರು ಇವರು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.

ತಬಸುಮ್ ಸುಲ್ತಾನ ಶಿವಮೊಗ್ಗ ಇವರು ಕೋರ್ಮಲ ಹ್ಯಾಚರೀಸ್, ಕೆ.ಆರ್ ರಸ್ತೆ ಬೆಂಗಳೂರು ಇವರ ವಿರುದ್ದ ದೂರನ್ನು ಸಲ್ಲಿಸಿ ದಿ: 24-12-2024 ರಂದು ರೂ.1,63,200 ಗಳನ್ನು ಪಾವತಿಸಿ 4896 ಬ್ರಾಯಲರ್ ಕೋಳಿ ಮರಿಗಳನ್ನು ಖರೀದಿಸಿದ್ದರು.

ದಿ: 25-12-2024 ರಂದು ಎದುರುದಾರರು ದೂರುದಾರರಿಗೆ ಕೋಳಿಮರಿಗಳನ್ನು ಕೊಡುವಾಗ ಸುಮಾರು 145 ಮರಿಗಳು ಸತ್ತಿರುತ್ತವೆ. ಈ ವಿಷಯವನ್ನು ಎದುರುದಾರರಿಗೆ ತಿಳಿಸಿದಾಗ ಎದುರುದಾರರು ಸತ್ತ ಕೋಳಿಮರಿಗಳ ಹಣವನ್ನು ಹಿಂದಿರುಗಿಸುವುದಾಗಿ ತಿಳಿಸಿರುತ್ತಾರೆ.

ನಂತರದಲ್ಲಿ ದೂರುದಾರರು ಕೋಳಿಮರಿಗಳಿಗೆ ಔಷಧಿ ಮತ್ತು ಆಹಾರವನ್ನು ನೀಡುತ್ತಾ ಬಂದರೂ 03 ವಾರಗಳಲ್ಲಿ ಸುಮಾರು 900 ರಿಂದ 950 ಮರಿಗಳು ಸಾವನಪ್ಪಿರುತ್ತವೆ ಹಾಗೂ ಸುಮಾರು 250 ಮರಿಗಳು 1.2 ರಿಂದ 1.3 ಕೆ ಜಿ ಒಳಗೆ ತೂಕವನ್ನು ಹೊಂದಿರುತ್ತವೆ.

ಈ ವಿಷಯವನ್ನು ದೂರುದಾರರು ಎದುರುದಾರರಿಗೆ ಆಗಾಗ್ಗೆ ತಿಳಿಸಿದ್ದು ಎದುರುದಾರರು ಸಾವನ್ನಪ್ಪಿರುವ ಕೋಳಿಮರಿಗಳ ಮೌಲ್ಯವನ್ನು ಹಿಂದುರಿಗಿಸಿ ಕೊಡುವುದಾಗಿ ಭರವಸೆ ನೀಡಿ, 215+145 ಮರಿಗಳ ಮೊತ್ತ ರೂ.12,240 ಮಾತ್ರ ಹಿಂದಿರುಗಿಸಿರುತ್ತಾರೆ. ನಂತರ ಕರೆ ಮಾಡಿದರೆ ನಂಬರ್ ಬ್ಲಾಕ್ ಮಾಡಿರುತ್ತಾರೆ.
ಆದ್ದರಿಂದ ದೂರುದಾರರು ಎದುರುದಾರರು ಅನಾರೋಗ್ಯವಾಗಿರುವ ಕೋಳಿ ಮರಿಗಳನ್ನು ವಿತರಿಸಿ ನಷ್ಟಕ್ಕೆ ಕಾರಣರಾಗಿದ್ದು ಹಾಗೂ ಸೇವಾ ನ್ಯೂನ್ಯತೆ ಎಸಗಿರುವುದಕ್ಕಾಗಿ ತಮಗೆ ಸೂಕ್ತ ಪರಿಹಾರ ನೀಡುವಂತೆ ಕೋರಿ ಆಯೋಗಕ್ಕೆ ದೂರು ಸಲ್ಲಿಸಿರುತ್ತಾರೆ.

District Consumer Disputes Redressal Commission ಆಯೋಗವು ದೂರುದಾರರು ಮತ್ತು ಎದುರುದಾರರು ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಪರಿಶೀಲಿಸಿ, ಉಭಯ ಪಕ್ಷಗಾರರ ವಾದ-ವಿವಾದಗಳನ್ನು ಆಲಿಸಿ, ಎದುರುದಾರರು ದೂರುದಾರರಿಗೆ ಸರಬರಾಜು ಮಾಡಿರುವ ಕೋಳಿಮರಿಗಳ ಆರೋಗ್ಯ ಗುಣಮಟ್ಟದಲ್ಲಿ ಕೊರತೆ ಇರುವುದನ್ನು ಪರಿಗಣಿಸಿ ಎದುರುದಾರರು ದೂರುದಾರರಿಗೆ ರೂ.25000 ಗಳ ವಾರ್ಷಿಕ ಶೇ.9 ರ ಬಡ್ಡಿಯನ್ನು ಸೇರಿಸಿ ದಿ: 13-01-2025 ರಿಂದ ಈ ಆದೇಶವಾದ 45 ದಿನಗಳ ಒಳಗೆ ಪಾವತಿಸಬೇಕು.

ತಪ್ಪಿದಲ್ಲಿ ವಾರ್ಷಿಕ ಶೇ.12 ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ನೀಡುವವರೆಗೆ ಪಾವತಿಸಬೇಕು ಹಾಗೂ ರೂ.10,000 ಗಳನ್ನು ದೂರಿನ ಖರ್ಚುವೆಚ್ಚಕ್ಕಾಗಿ ಈ ಆದೇಶವಾದ 45 ದಿಗನಳ ಒಳಗಾಗಿ ಪಾವತಿಸಬೇಕು. ತಪ್ಪಿದಲ್ಲಿ ವಾರ್ಷಿಕ ಶೇ.12 ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ನೀಡುವವರೆಗೆ ಪಾವತಿಸಬೇಕೆಂದು ಆಯೋಗದ ಅಧ್ಯಕ್ಷರಾದ ಶಿವಣ್ಣ ಮತ್ತು ಸದಸ್ಯ

Department of Agriculture & Farmers Welfare ರಾಜ್ಯದ ಕೃಷಿ ಅಭಿವೃದ್ಧಿಗೆ ಅನುದಾನ & ಯೋಜನೆ ಅನುಮೋದನೆಗೆ ಕೇಂದ್ರ ಸಚಿವರನ್ನ ಭೇಟಿ ಮಾಡಿದ ಕೃಷಿಸಚಿವ ಚಲುವರಾಯಸ್ವಾಮಿ

0

Department of Agriculture & Farmers Welfare ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ರಾಜ್ಯದ ರೈತ ಸಮುದಾಯದ ಹಿತಕ್ಕಾಗಿ ಬಾಕಿ ಇರುವ ಹಲವು ಮಹತ್ವದ ವಿಷಯಗಳನ್ನು ತುರ್ತಾಗಿ ಪರಿಹರಿಸುವಂತೆ ಮನವಿ ಮಾಡಿದರು.

ರಾಜ್ಯದ ಕೃಷಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಹೆಚ್ಚುವರಿ ಅನುದಾನ, ಬಿಡುಗಡೆಯಾಗದ ನಿಧಿ, ಯೋಜನೆಗಳ ಅನುಮೋದನೆ ಹಾಗೂ ಇತರ ಸಮಸ್ಯೆಗಳನ್ನು ವಿವರವಾಗಿ ಚರ್ಚಿಸಿದ ಅವರು, ಸಭೆಯಲ್ಲಿ ಹಲವಾರು ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದಿಟ್ಟರು..

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (PM-RKVY)

ಈ ಯೋಜನೆ ಅಡಿಯಲ್ಲಿ ರೈತರ ಹೆಚ್ಚುತ್ತಿರುವ ಯಾಂತ್ರೀಕರಣ ಬೇಡಿಕೆಯನ್ನು ಗಮನಿಸಿ PM-RKVY-SMAM ಯೋಜನೆಯಡಿ ಈ ವರ್ಷಕ್ಕೆ ಹೆಚ್ಚುವರಿ 250 ಕೋಟಿ ರೂಪಾಯಿ ಅನುದಾನವನ್ನು ಕೋರಿದರು. ಅದೇ ರೀತಿ ಮಳೆಯ ಮೇಲೆ ಅವಲಂಬಿತವಾಗಿರುವ ಕರ್ನಾಟಕದ ಕೃಷಿಯಲ್ಲಿ ಆಗಾಗ ಬೆಳೆ ನಷ್ಟಗಳನ್ನು ತಪ್ಪಿಸಲು ಸೂಕ್ಷ್ಮ ನೀರಾವರಿ ಯೋಜನೆಗೆ (PM-RKVY-PDMC) ಹೆಚ್ಚುವರಿ 250 ಕೋಟಿ ರೂಪಾಯಿ ಬೇಕು ಎಂದು ತಿಳಿಸಿದರು..

ಮೂಲಸೌಕರ್ಯ ಕೇಂದ್ರಿತ ಯೋಜನೆಗಳನ್ನು ಪೂರ್ಣಗೊಳಿಸಲು PM-RKVY-DPR ಅಡಿ 9.45 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ಬಿಡುಗಡೆಗೆ ಮನವಿ ಮಾಡಿದರು. ಇದಲ್ಲದೆ PM-RKVY-DPR ಮತ್ತು SMAM ಅಡಿ 2025-26ರಲ್ಲಿ ಬಿಡುಗಡೆಯಾಗಬೇಕಾದ ಬಾಕಿ ನಿಧಿಯನ್ನು ತುರ್ತಾಗಿ ನೀಡುವಂತೆ ಕೋರಿದರು..

ಡಿಪಿಆರ್‌ನಲ್ಲಿ 21.17 ಕೋಟಿ ಮತ್ತು SMAMನಲ್ಲಿ 1.512 ಕೋಟಿ ಸೇರಿ ಒಟ್ಟು 22.682 ಕೋಟಿ ರೂಪಾಯಿ ಕೊರತೆ ಇರುವುದನ್ನು ಮನವರಿಕೆ ಮಾಡಿದರು. 2024-25ರಲ್ಲಿ ಬಾಕಿ ಇದ್ದ 152.98 ಕೋಟಿ ರೂಪಾಯಿ ಬಿಲ್‌ಗಳನ್ನು 2025-26ರಲ್ಲಿ ಪಾವತಿಸಿದ್ದರಿಂದ ಈ ವರ್ಷದ ಅನುದಾನದಲ್ಲಿ ಹೆಚ್ಚಿನ ಕೊರತೆ ಉಂಟಾಗಿದೆ ಎಂದು ವಿವರಿಸಿದರು..

ಡಿಜಿಟಲ್ ಕ್ರಾಪ್ ಸರ್ವೇಗೆ ಕೇಂದ್ರ ಅನುಮೋದಿಸಿದ 25.704 ಕೋಟಿ ರೂಪಾಯಿಯಲ್ಲಿ SCSP ಮತ್ತು TSP ಅಡಿ ಬಿಡುಗಡೆಯಾದ 3.10 ಕೋಟಿ ರೂಪಾಯಿಯನ್ನು ಸಾಮಾನ್ಯ ಶೀರ್ಷಿಕೆಯಡಿ PFMS ಮೂಲಕ ಬಿಡುಗಡೆ ಮಾಡಿ ಹಣದ ಹರಿವನ್ನು ಸುಗಮಗೊಳಿಸುವಂತೆ ಮನವಿ ಮಾಡಿದರು.

ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಪೌಷ್ಟಿಕತಾ ಅಭಿಯಾನ (NFSNM) ಅಡಿ ಹಸಿರು ಗೊಬ್ಬರ ಬೀಜ ವಿತರಣೆಗೆ ಅನುಮೋದನೆ, ಎತ್ತುಗಳಿಂದ ಎಳೆಯುವ ಉಪಕರಣಗಳು, ಸ್ಥಳೀಯ ನಿರ್ದಿಷ್ಟ ಹಸ್ತಕ್ಷೇಪಗಳಿಗೆ ಅನುಮತಿ ಕೋರಿದರು. ಹಿಂಗಾರು 2025-26ಗೆ ದ್ವಿದಳ ಧಾನ್ಯಗಳ ಅತ್ಮನಿರ್ಭರತಾ ಯೋಜನೆಯ ಪರಿಷ್ಕೃತ ಕ್ರಿಯಾ ಯೋಜನೆ ಸಲ್ಲಿಸಲಾಗಿದ್ದು, ನ್ಯೂಟ್ರಿಸಿರಿಯಲ್ಸ್ ಅಡಿ ಅಂತರರಾಷ್ಟ್ರೀಯ ವ್ಯಾಪಾರ ಮೇಳಕ್ಕೆ ರಾಜ್ಯದ ಕೆಟಿಪಿಪಿ ಕಾಯ್ದೆಯಂತೆ ಹಣ ಬಳಸಲು ಅನುಮತಿ ಕೋರಲಾಯಿತು.
ಎನ್‌ಎಮ್‌ಇಒ-ಒಎಸ್ ಅಡಿ ಖಾಸಗಿ ಸೂರ್ಯಕಾಂತಿ ಹೈಬ್ರಿಡ್ ಬೀಜಗಳಾದ ADV-363, PAC-334, GK-2002 ಮತ್ತು GK-2008 ಬಳಸಲು ಅನುಮತಿ ಕೋರಿದರು..

Department of Agriculture & Farmers Welfare ರೈತಸಿರಿ ಯೋಜನೆಯನ್ನು ರಾಜ್ಯ ನಿಯಮಗಳಂತೆ ಮಿಲ್ಲೆಟ್ ರೈತರಿಗೆ DBT ಮೂಲಕ ಪ್ರೋತ್ಸಾಹ ನೀಡುವ ರೀತಿಯಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ಮಾಡುವಂತೆ ಮನವಿ ಮಾಡಿದರು. ಆಗಸ್ಟ್-ನವೆಂಬರ್ 2025ರ ಅವಧಿಗೆ 31,340 ಅರ್ಹ ಫಲಾನುಭವಿಗಳಿಗೆ ಪಿಎಂ ಕಿಸಾನ್ ಸಹಾಯಧನ ಬಿಡುಗಡೆಯಾಗದಿರುವುದನ್ನು ತಿಳಿಸಿ ತಕ್ಷಣ ಸರಿಪಡಿಸುವಂತೆ ಕೋರಿದರು. ಬೆಂಗಳಗ್ರಾಮ್ (ಚಣ)ಗೆ RMS 2025-26ಗೆ MSP ಅನುಷ್ಠಾನ ಹಾಗೂ ಮೆಕ್ಕೆಗೆ KMS 2025-26ಗೆ PDPS ಅನುಷ್ಠಾನಕ್ಕೆ ಅನುಮೋದನೆ ಕೋರಲಾಯಿತು.

ಜಲಾನಯನ ಅಭಿವೃದ್ಧಿ ಘಟಕ 2.0ರಲ್ಲಿ ರಾಜ್ಯ ದೇಶದಲ್ಲಿ ಮೊದಲ ಸ್ಥಾನದಲ್ಲಿದ್ದು, PMKSY-WDC 3.0 ಅಡಿ 10.28 ಲಕ್ಷ ಹೆಕ್ಟೇರ್ ಜಲಾನಯನ ಮತ್ತು 193 ಸ್ಪ್ರಿಂಗ್‌ಶೆಡ್ ಯೋಜನೆಗಳಿಗೆ ಅನುಮೋದನೆ ಕೋರಲಾಯಿತು. ಮಣ್ಣು ಆರೋಗ್ಯ ಕಾರ್ಯಕ್ರಮದ ಅಡಿ ರದ್ದಾಗಿರುವ 4.18 ಕೋಟಿ ರೂಪಾಯಿ ಬಿಡುಗಡೆಗೆ ಒತ್ತಾಯಿಸಿದರು. REWARD ಅಭಿಯಾನವನ್ನು ಜೂನ್ 2027ರವರೆಗೆ ವಿಸ್ತರಿಸುವಂತೆ ಮನವಿ ಮಾಡಿದರು. ಮಂಡ್ಯದ ಹೊಸ ಕೃಷಿ ವಿಶ್ವವಿದ್ಯಾಲಯಕ್ಕೆ ICAR ಅಡಿ ಹೊಸ AICRP ಪ್ರಸ್ತಾವಗಳು ಮತ್ತು ಅನುದಾನಗಳಿಗೆ ಬೆಂಬಲ ಕೋರಿದರು..

ಇದಲ್ಲದೆ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯಗಳ ಬಲವರ್ಧನೆಗಾಗಿ ಹೊಸ ಯೋಜನೆ ರೂಪಿಸುವುದು, ಸಬ್ಸಿಡಿ ರಸಗೊಬ್ಬರಗಳಿಗೆ ಫ್ರೈಟ್ ಆನ್ ರೋಡ್ ಸೌಲಭ್ಯ ನೀಡುವುದು ಹಾಗೂ ಫರ್ಟಿಲೈಸರ್ ಫ್ಲೈಯಿಂಗ್ ಸ್ಕ್ವಾಡ್ ವರದಿಗಳಲ್ಲಿ ಸಹಿ-ಸೀಲ್ ಅಗತ್ಯತೆಯ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದರು.

ಈ ಭೇಟಿಯ ಸಂದರ್ಭದಲ್ಲಿ ರಾಜ್ಯದ ರೈತರ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸುವಂತೆ ಮನವಿ ಮಾಡಿದ ಚಲುವರಾಯಸ್ವಾಮಿ ಅವರು, ಕೇಂದ್ರದ ಬೆಂಬಲದಿಂದ ಕರ್ನಾಟಕದ ಕೃಷಿ ವಲಯವು ಇನ್ನಷ್ಟು ಬಲಗೊಳ್ಳುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Scouts and Guides ಸ್ಕೌಟ್ಸ್ & ಗೈಡ್ಸ್ ನಲ್ಲಿ ಭಾಗವಹಿಸುವಿಕೆ: ನಾಯಕತ್ವ ಗುಣ ವೃದ್ಧಿಗೆ ಪ್ರೇರಕ- ರಾಜೇಶ್ ಅವಲಕ್ಕಿ

0

Scouts and Guides ಶಾಲೆಯಲ್ಲಿ ಮಕ್ಕಳು ಪಠ್ಯಪುಸ್ತಕ ತರಬೇತಿ ಜೊತೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ನಂತಹ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನಾಯಕತ್ವ ಗುಣ ವೃದ್ಧಿಸುತ್ತದೆ ಎಂದು ಸ್ಕೌಟ್ಸ್ ಆಂಡ್ ಗೈಡ್ಸ್ ನ ಸ್ಥಳೀಯ ಸಂಸ್ಥೆಗಳ ಕಾರ್ಯದರ್ಶಿ ರಾಜೇಶ್ ಅವಲಕ್ಕಿ ಹೇಳಿದರು.

ಮೇರಿ ಇಮ್ಯಾಕ್ಯುಲೇಟ್ ಹೈಯರ್ ಪ್ರೈಮರಿ ಸ್ಕೂಲ್ ಓಲ್ಡ್ ಸ್ಟೂಡೆಂಟ್ಸ್ 1982ರ ಬ್ಯಾಚ್ ವಿದ್ಯಾರ್ಥಿಗಳಿಂದ ಶಾಲೆಯ 20 ಮಕ್ಕಳಿಗೆ ಗೈಡ್ಸ್ ಮಕ್ಕಳ ಯೂನಿಫಾರ್ಮ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಹಾಗೂ ಸಮಾಜದಲ್ಲಿ ಬದುಕುವ ರೀತಿ ಕಲಿಸಿಕೊಡುತ್ತದೆ. ಕೌಶಲ್ಯದ ಜೊತೆ ಮನುಕುಲ ಸೇವೆ ಕಲ್ಪಿಸುವ ಸ್ಕೌಟ್ಸ್ ಆಂಡ್ ಗೈಡ್ಸ್ ಇಂದಿನ ಕಾಲಘಟ್ಟಕ್ಕೆ ಪ್ರಸ್ತುತ ಎಂದು ತಿಳಿಸಿದರು.

ಶಾಲೆಯ ಪ್ರಾಚಾರ್ಯ ಸಿಸ್ಟರ್ ಬೆನಿಕ್ಟ ಡಿಸೋಜಾ ಮಾತನಾಡಿ, ಶಿಕ್ಷಣ ಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದು, ದೇಶವಿದೇಶದಲ್ಲಿ ಖ್ಯಾತಿ ಹೊಂದಿದ್ದಾರೆ. ಆದರೆ ಕಡಿಮೆ ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರ ನೆನೆದು ಈ ಶಿಕ್ಷಣ ಸಂಸ್ಥೆಗೆ ಅಪಾರ ಸೇವೆ ಸಲ್ಲಿಸುತ್ತ ಬಂದಿದ್ದಾರೆ. 1982ರಲ್ಲಿ ಓದಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅವರ ಈ ಶಾಲೆಗೆ ಸ್ವಯಂ ಪ್ರೇರಿತರಾಗಿ ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣೆ ಮತ್ತು ಸಮವಸ್ತ್ರಗಳ ಕೊಡುಗೆ, ವಿದ್ಯಾರ್ಥಿಗಳ ವಾರ್ಷಿಕ ಶುಲ್ಕ ಸಹಾಯ ಮಾಡುತ್ತಿದ್ದಾರೆ. ಇವರ ಸೇವೆ ಶಿಕ್ಷಣ ಸಂಸ್ಥೆಗೆ ನಿರಂತರವಾಗಿ ಮುಂದುವರೆಯಬೇಕು ಎಂದು ತಿಳಿಸಿದರು.

Scouts and Guides ಕಾರ್ಯಕ್ರಮದ ನಿರೂಪಣೆಯನ್ನು ಕ್ರಿಸ್ಟಿನಾ ಶೀಲ ನೆರವೇರಿಸಿದರು. ರವಿ ಕೋಟೋಜಿ, 1982ನೇ ಸಾಲಿನ ವಿದ್ಯಾರ್ಥಿಗಳಾದ ಸಂತೋಷ್, ಧರ್ಮೇಂದ್ರ ಸಿಂಗ್, ಜಾನಿ ಜೋಸೆಫ್, ಟ್ರೆಸ್ಸಿ ಫರ್ನಾಂಡಿಸ್, ಕ್ರಿಸ್ಟಫರ್ ನಟರಾಜ್, ಅಲ್ಲುಲ್ಲ ಖಾನ್, ಸುಹಾಸ್ ಇತರರು ಭಾಗವಹಿಸಿದ್ದರು.

DC Shivamogga ಕೈಗಾರಿಕಾ ವಸಾಹತಿನಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಕ್ರಮ : ಡೀಸಿ‌ ಪ್ರಭುಲಿಂಗ ಕವಳಿಕಟ್ಟಿ

0

DC Shivamogga ಶಿವಮೊಗ್ಗ ನಗರದ ಹೊರವಲಯ ಹಾಗೂ ತಾಲೂಕುಗಳಲ್ಲಿರುವ ಕೈಗಾರಿಕಾ ವಸಾಹತು ಪ್ರದೇಶಗಳಲ್ಲಿ ನೀರು, ವಿದ್ಯುತ್‌, ರಸ್ತೆ, ಬೀದಿದೀಪ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ 194ನೇ ಏಕಗವಾಕ್ಷಿ ಸಮಿತಿ ಮತ್ತು ಜಿಲ್ಲಾ ಮಟ್ಟದ 27ನೇ ಕೈಗಾರಿಕಾ ಸ್ಪಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕೈಗಾರಿಕೋದ್ಯಮಿಗಳ ಸಮಸ್ಯೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲು
ಶೀಘ್ರದಲ್ಲಿ ದಿನಾಂಕ ನಿಗಧಿಗೊಳಿಸಿ, ಸಭೆ ಆಯೋಜಿಸಲಾಗುವುದು ಎಂದರು. ಕೈಗಾರಿಕಾ ವಸಾಹತು ಪ್ರದೇಶಗಳಲ್ಲಿ ಶೌಚಾಲಯ, ಸ್ವಚ್ಚತೆ, ನೀರು ಸರಬರಾಜು ಮತ್ತಿತರ ಅಗತ್ಯ ವಿಷಯಗಳಿಗಾಗಿ ಮಹಾನಗರಪಾಲಿಕೆ ಆಯುಕ್ತರು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಮಂಡ್ಲಿ ಕೈಗಾರಿಕಾ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಪಾಲಿಕೆಯಿಂದ ಈ ಹಿಂದೆ ಆಯೋಜಿಸಲಾಗಿದ್ದ ಇ-ಖಾತಾ ಅಭಿಯಾನವನ್ನು ಮತ್ತೊಮ್ಮೆ ಆಯೋಜಿಸುವಂತೆಯೂ ಸೂಚಿಸಿದರು.

ಸೋಗಾನೆ ಕೈಗಾರಿಕಾ ಪ್ರದೇಶದ ಅಭಿವೃದ್ಧಿಪಡಿಸಲು ಹಾಗೂ ಅತಿಕ್ರಮಣವನ್ನು ತೆರವುಗೊಳಿಸಲು ಅಗತ್ಯ ಸಹಕಾರ ನೀಡುವಂತೆ ಹಾಗೂ ತ್ವರಿತವಾಗಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಕೈಗೊಂಡ ನಿರ್ಣಯದ ವರದಿಯನ್ನು ಕೂಡಲೇ ಒದಗಿಸುವಂತೆ KIADB ಅಧಿಕಾರಿಗಳಿಗೆ ಸೂಚಿಸಿದರು.


ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯ ಘಟಕಗಳಲ್ಲಿನ ಉತ್ಪನ್ನಗಳ ರಪ್ತು ವಹಿವಾಟನ್ನು ಹೆಚ್ಚಿಸಲು ಅನುಕೂಲವಾಗುವಂತೆ ಜಿಲ್ಲಾ ವ್ಯಾಪ್ತಿಯಲ್ಲಿನ ಕೈಗಾರಿಕಾ ವಸಾಹತುಗಳಲ್ಲಿ ಖಾಲಿ ಇದ್ದ ನಿವೇಶನಗಳ ಹಂಚಿಕೆಗಾಗಿ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಸ್ಥಳೀಯರಿಗೆ, ಈಗಾಗಲೇ ಕೈಗಾರಿಕೆಗಳನ್ನು ಆರಂಭಿಸಿದವರಿಗೆ ಹಾಗೂ ಸ್ಥಳೀಯವಾಗಿ ಲಭ್ಯವಾಗುವ ಕಚ್ಚಾವಸ್ತುಗಳನ್ನು ಬಳಸಿಕೊಂಡು ವಸ್ತುಗಳನ್ನು ಉತ್ಪಾದಿಸುವ ಘಟಕಗಳು ಸೇರಿದಂತೆ ಇಲಾಖೆಯ ಇತರ ಮಾನದಂಡಗಳನ್ನು ಅನುಸರಿಸಿ, ಹಂಚಿಕೆ ಮಾಡಲಾಗಿದ್ದುದನ್ನು ಕೂಲಂಕಶವಾಗಿ ಪರಿಶೀಲಿಸಿ ಅನುಮೋದನೆ ನೀಡಿದರು.

ಸಿದ್ಲೀಪುರ ಕೈಗಾರಿಕಾ ವಸಾಹತುವಿನಲ್ಲಿ 07ನಿವೇಶನಗಳಿಗಾಗಿ 11ಮಂದಿ, ಸಾಗರದ ಯಲಗಳಲೆಯಲ್ಲಿನ 01ನಿವೇಶನಕ್ಕಾಗಿ 04ಮಂದಿ ಹಾಗೂ ಹೊಸನಗರದ ಕೆರೆಹಳ್ಳಿಯಲ್ಲಿನ 11 ನಿವೇಶನಗಳಿಗಾಗಿ 07ಮಂದಿ ಕೈಗಾರಿಕೋದ್ಯಮಿಗಳು ಅರ್ಜಿ ಸಲ್ಲಿಸಿದ್ದರು. ಸಾಗರ ರಸ್ತೆಯಲ್ಲಿರುವ ಕೆ.ಎಸ್.ಎಸ್.ಐ.ಡಿ.ಸಿ. ಕೈಗಾರಿಕಾ ವಸಾಹತುವಿಗೆ ಸಂಬಂಧಿಸಿದಂತೆ ನಿತ್ಯದ ಕೆಲಸಗಳಿಗಾಗಿ ಆಗಮಿಸುವ ಕಾರ್ಮಿಕರು, ಸಾರ್ವಜನಿಕರು ಹಾಗೂ ವಾಹನಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಅಲ್ಲದೇ ಕೈಗಾರಿಕಾ ಪ್ರದೇಶಕ್ಕೆ ಬರುವ ವಾಹನಗಳ ಸಂಚಾರಕ್ಕೆ ತೀವ್ರ ತರಹದ ಅಡಚಣೆ ಉಂಟಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪೊಲೀಸ್‌ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದು, ಅಗತ್ಯ ಕೈಗೊಳ್ಳಲಾಗುವುದು ಎಂದರು.

ಮಂಡ್ಲಿ-ಕಲ್ಲೂರು ಮತ್ತು ಮಾಚೇನಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಹೆಚ್ಚಿನ ವಿದ್ಯುತ್‌ಬೇಡಿಕೆ ಇದ್ದು, ಮೆಸ್ಕಾಂ ಅಥವಾ ಕೆ.ಐ.ಎ.ಡಿ.ಬಿ. ಅವರು ಕಲ್ಪಿಸಿಕೊಡಬೇಕು. ಈ ಬಗ್ಗೆ ಅಗತ್ಯವಿರುವ ಭೂಮಿಯ ಲಭ್ಯತೆ ಇದ್ದು, ವಿದ್ಯುತ್‌ಪ್ರಸರಣ ಉಪಕೇಂದ್ರ ಆರಂಭಿಸಬೇಕಾದ ಅಗತ್ಯವಿದೆ. ಈ ಪ್ರದೇಶದಲ್ಲಿ ಇ.ಎಸ್.ಐ.ಚಿಕಿತ್ಸಾಲಯ ತೆರೆಯಬೇಕು ಎಂದು ಕೈಗಾರಿಕೋದ್ಯಮಿಗಳಾದ ಗೋಪಿನಾಥ್‌ ಅವರು ತಿಳಿಸಿದರು.

DC Shivamogga ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಶ್ರೀಮತಿ ಶಿಲ್ಪಾ ಅವರು ಮಾತನಾಡಿ, ಫೌಂಡ್ರಿ ಘಟಕಗಳಿಂದ ಉತ್ಪತ್ತಿಯಾಗುವ ಮರಳಿನ ತ್ಯಾಜ್ಯವನ್ನು ಸಂಸ್ಕರಿಸಿ ಪುನರ್‌ಬಳಕೆ ಮಾಡಿಕೊಳ್ಳಬಹುದಾಗಿದೆ ಅಲ್ಲದೇ ಇಟ್ಟಿಗೆ ತಯಾರಿಕೆಯಲ್ಲಿ, ರಸ್ತೆ ನಿರ್ಮಾಣ ಮಿಶ್ರಣಗಳಲ್ಲಿ ಮರುಬಳಕೆ ಮಾಡಿಕೊಳ್ಳಬಹುದಾಗಿದೆ. ತ್ಯಾಜ್ಯ ಮರಳಿನ ಸಂಸ್ಕರಣಾ ಘಟಕವನ್ನು ಅಳವಡಿಸಿಕೊಳ್ಳುವುದರಿಂದ ಮರಳಿನ ತ್ಯಾಜ್ಯ ರಸ್ತೆ ಬದಿಗಳಲ್ಲಿ, ಇತರೆ ಜಲಮೂಲಗಳಲ್ಲಿ ಎಸೆಯುವುದರಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮಗಳುಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಅಲ್ಲದೇ ಸದರಿ ತ್ಯಾಜ್ಯವನ್ನು ತಮ್ಮ ಘಟಕಗಳ ಆವರಣ ಅಥವಾ ಅವರ ನಿವೇಶನಗಳಲ್ಲಿಯೇ ವಿಲೇ ಮಾಡಿಕೊಳ್ಳಬಹುದಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್‌, ಶಿವಮೊಗ್ಗ ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಸುರೇಶ್‌, ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್‌, ಮಲ್ಲಿಕಾರ್ಜುನ, ರಾಮಾಚಾರ್‌, ವಿಶ್ವೇಶ್ವರಯ್ಯ, ಬೆನಕಪ್ಪ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.