Monday, March 2, 2026
Monday, March 2, 2026
Home Blog Page 315

DC Shivamogga ಶಿವಮೊಗ್ಗದಲ್ಲಿ ಮೇ 18 ರಿಂದ 20 ವರೆಗೆ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ & ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ- ಗುರುದತ್ತ ಹೆಗಡೆ

0

DC Shivamogga ಶಿವಮೊಗ್ಗ ಜಿಲ್ಲಾಡಳಿತವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಮೇ 18ರಿಂದ 20ರವರೆಗೆ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗದಲ್ಲಿ ಏರ್ಪಡಿಸಲು ಉದ್ದೇಶಿಸಲಾಗಿದೆ.

ಕ್ರೀಡಾಕೂಟವು ಯಶಸ್ವಿಯಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ-2025ರ ಕುರಿತು ಏರ್ಪಡಿಸಲಾಗಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 15000ಕ್ಕೂ ಹೆಚ್ಚಿನ ನೌಕರ ಕ್ರೀಡಾಪಟುಗಳು ಆಗಮಿಸುವ ನಿರೀಕ್ಷೆಯಿದ್ದು, ಅವರ ವಸತಿ ಹಾಗೂ ಊಟೋಪಹಾರ ಮತ್ತು ಸಾರಿಗೆ ವ್ಯವಸ್ಥೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ನಗರದ ನೆಹರೂ ಕ್ರೀಡಾಂಗಣ, ಜೆ.ಎನ್.ಎನ್.ಸಿ.ಇ. ಕಾಲೇಜು ಮತ್ತು ಗೋಪಾಳದ ಕ್ರೀಡಾಸಂಕೀರ್ಣಗಳಲ್ಲಿ ವಿವಿಧ ಕ್ರೀಡೆಗಳನ್ನು ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಇದರೊಂದಿಗೆ ನಗರದ ಕುವೆಂಪು ರಂಗಮಂದಿರ ಮತ್ತು ಡಾ|| ಬಿ.ಆರ್.ಅಂಬೇಡ್ಕರ್‌ಭವನಗಳಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲು ಸ್ಥಳಗಳನ್ನು ಗುರುತಿಸಲಾಗಿದೆ.

ಅಲ್ಲದೇ ಅಗತ್ಯವಿದ್ದಲ್ಲಿ ಇನ್ನಷ್ಟು ಸಮನಾಂತರ ವೇದಿಕೆಗಳನ್ನು ಸೃಜಿಸಲು ಉದ್ದೇಶಿಸಲಾಗಿದೆ ಎಂದರು.
ಮೂರು ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟವು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಜೊತೆಗೆ ಆಹ್ವಾನಿತ ಕ್ರೀಡಾಪಟುಗಳು ಸ್ಥಳೀಯ ನಾಗರೀಕರಿಗಾಗಿ ಮನೋರಂಜನಾ ಕಾರ್ಯಕ್ರಮಗಳನ್ನು ನಡೆಸಲು ಉದ್ಧೇಶಿಲಾಗಿದೆ.

ಕಾರ್ಯಕ್ರಮಗಳು ನಡೆಯುವ ಈ ಮೂರು ದಿನಗಳ ಕಾಲ ಯಾವುದೇ ಅಡಚಣೆ ಉಂಟಾಗದಂತೆ ನಿರಂತರವಾಗಿ ವಿದ್ಯುತ್‌ ಒದಗಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಅಲ್ಲದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸುವ ಉದ್ದೇಶದಿಂದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್‌ ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಕ್ರೀಡಾಕೂಟದ ವ್ಯವಸ್ಥಿತ ನಿರ್ವಹಣೆಗಾಗಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಅದರ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಲಾಗಿದೆ. ಕ್ರೀಡೆಗಳಲ್ಲಿ ಉತ್ತಮ ಹಾಗೂ ನುರಿತ ತೀರ್ಪುಗಾರರನ್ನು ನೇಮಿಸಲು ಉದ್ದೇಶಿಸಲಾಗಿದೆ. ಅಗತ್ಯವಿದ್ದಲ್ಲಿ ನೆರೆಯ ಜಿಲ್ಲೆಗಳ ನುರಿತ ತೀರ್ಪುಗಾರರನ್ನು ಬಳಸಿಕೊಳ್ಳಲು ಯತ್ನಿಸಲಾಗುವುದು ಎಂದ ಅವರು, ಕ್ರೀಡಾಪಟುಗಳಿಗೆ ಅನುಕೂಲವಾಗುವಂತೆ ಹಾಗೂ ಅವರು ತಂಗುವ ಸ್ಥಳಕ್ಕೆ ಹೋಗಿ ಬರಲು ಸಾರಿಗೆ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಅಲ್ಲದೇ ಈ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಕ್ರೀಡಾಪಟುಗಳ ಆರೋಗ್ಯ, ಆಕಸ್ಮಿಕ ಅಗ್ನಿ ಅವಘಡ ಸೇರಿದಂತೆ ತಕ್ಷಣದ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಹಾಗೂ ತುರ್ತು ಮಾಹಿತಿಗಾಗಿ ಸಂಪರ್ಕಿಸಲು ಅಧಿಕಾರಿಗಳೊಬ್ಬರನ್ನು ನೇಮಿಸಲಾಗುವುದು. ಕಾರ್ಯಕ್ರಮವನ್ನು ಇನ್ನಷ್ಟು ಅಚ್ಚುಕಟ್ಟಾಗಿ ರೂಪಿಸುವಲ್ಲಿ ಎನ್.ಎಸ್.ಎಸ್., ಎನ್.ಸಿ.ಸಿ., ಸ್ಕೌಟ್‌ ಮತ್ತು ಗೈಡ್ಸ್‌ಗಳ ಸಹಕಾರವನ್ನು ಪಡೆದುಕೊಳ್ಳಲಾಗುವುದು ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ಈಗಾಗಲೇ ರಾಜ್ಯ ಮಟ್ಟದ ಕ್ರೀಡಾ ಇಲಾಖೆಯ ಆಯುಕ್ತರೊಂದಿಗೆ ಮೊದಲ ಸುತ್ತಿನ ಸಮಾಲೋಚನಾ ಸಭೆ ನಡೆಸಲಾಗಿದ್ದು, ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅಂತೆಯೇ ಆತಿಥೇಯ ಜಿಲ್ಲೆ ಶಿವಮೊಗ್ಗದಲ್ಲೂ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ಕರೆದು ಸುದೀರ್ಘವಾಗಿ ಚರ್ಚಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದ ಮೊದಲ ದಿನ ಸಂಜೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಆಗಮಿಸಲಿರುವರು. ಅಂತೆಯೇ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರು ಆಗಮಿಸಲಿರುವರು.

ಈ ಉದ್ಘಾಟನಾ ಕಾರ್ಯಕ್ರಮದ ನಂತರ ನಾಡಿನ ಹೆಸರಾಂತ ಗಾಯಕ ರಾಜೇಶ್‌ಕೃಷ್ಣನ್‌ ಅವರಿಂದ ಸಂಗೀತ ಸಂಜೆ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಅದೇ ದಿನ ರಾಜ್ಯದ ಬೇರೆಬೇರೆ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾಪಟುಗಳು ನೋಂದಣಿ ಮಾಡಿಕೊಂಡು ವಸತಿ ಸ್ಥಳದ ಮಾಹಿತಿ ಪಡೆದುಕೊಳ್ಳುವರು ಎಂದವರು ತಿಳಿಸಿದರು.
ಮೇ 19ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ನಿರಂತರವಾಗಿ ವಿವಿಧ ಸಮನಾಂತರ ವೇದಿಕೆಗಳನ್ನು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿವೆ. ಅದೇ ದಿನ ಸಂಜೆ ಜಾನಪದ ದಿಬ್ಬಣ ಎಂಬ ನಾಡಿನ ಜನಪದ ಕಲಾತಂಡಗಳಿಂದ ಕಾರ್ಯಕ್ರಮ ವೈವಿಧ್ಯ ಕಾರ್ಯಕ್ರಮ ಆಯೋಜಿಸಲಾಗಿದ್ದು, ಹೆಸರಾಂತ ಜನಪದ ಕಲಾತಂಡಗಳು ಆಗಮಿಸಲಿವೆ. ಮೇ 20ರಂದು ಎಂದಿನಂತೆ ಬೆಳಿಗ್ಗೆಯಿಂದ ಸಂಜೆಯವರೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿವೆ. ಅಂದು ಸಂಜೆ ಸಮಾರೋಪ ಸಮಾರಂಭವು ಆಹ್ವಾನಿತ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ಪ್ರತಿದಿನ ಸಂಜೆ ನಡೆಯುವ ಮನೋರಂಜನಾ ಕಾರ್ಯಕ್ರಮಗಳಲ್ಲಿ ಆಹ್ವಾನಿತ ಕ್ರೀಡಾಳುಗಳು, ಸ್ಥಳೀಯ ನೌಕರರು, ಅವರ ,ಕುಟುಂಬದವರು ಸೇರಿದಂತೆ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಮೋಹನ್‌ಕುಮಾರ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Chamber of Commerce Shivamogga ವಾಣಿಜ್ಯ ವಾಹನಗಳ ಜೀಮಾನ ತೆರಿಗೆ ಏರಿಕೆಯಿಂದ ವಾಣಿಜ್ಯೋಮಕ್ಕೆ ನಷ್ಟದ ಹೊಡೆತ – ಬಿ.ಗೋಪಿನಾಥ್

0

Chamber of Commerce Shivamogga ರಾಜ್ಯ ಸರ್ಕಾರವು ವಾಣಿಜ್ಯ ವಾಹನಗಳ ಜೀವಮಾನ ತೆರಿಗೆ ನೋಂದಣಿ ಶುಲ್ಕವನ್ನು ಹೆಚ್ಚಿಸಿರುವ ಬಗ್ಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಕಳವಳ ವ್ಯಕ್ತಪಡಿಸಿದೆ.

ಈಗಾಗಲೇ ವಿದ್ಯುತ್ ದರ, ನೀರಿನ ಶುಲ್ಕ, ಆಸ್ತಿ ತೆರಿಗೆ, ಕಸ ಸಂಗ್ರಹ ಶುಲ್ಕ, ಸಾರಿಗೆ ಸಂಬಂಧಿತ ವೆಚ್ಚಗಳ ಹೆಚ್ಚಳದಿಂದ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. ಈ ಸತತ ದರ ಏರಿಕೆಗಳಿಂದ ಒಟ್ಟಾರೆ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮದ ವ್ಯವಹಾರಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆಯ ಪರಿಣಾಮ ಬೀರಲಿದೆ. ವಿಶೇಷವಾಗಿ ಸಣ್ಣ, ಅತಿ ಸಣ್ಣ, ಮತ್ತು ಮಧ್ಯಮ ಗಾತ್ರದ ಎಂ ಎಸ್ ಎಂ ಇ ಉದ್ಯಮಗಳು ದರ ಏರಿಕೆಯಿಂದ ಹೆಚ್ಚಾದ ವೆಚ್ಚಗಳ ಪರಿಣಾಮದಿಂದ ಉದ್ಯಮವನ್ನು ನಡೆಸಲು ಕಷ್ಟಪಡುತ್ತಿವೆ. ಎಂಎಸ್‌ಎಂಇಗಳ ಅಸ್ತಿತ್ವಕ್ಕೆ ಅಪಾಯ ಉಂಟುಮಾಡುತ್ತಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಆತಂಕ ವ್ಯಕ್ತಪಡಿಸಿದ್ದಾರೆ.

ವಾಣಿಜ್ಯ ವಾಹನಗಳ ನೋಂದಣಿ ಶುಲ್ಕದಲ್ಲಿನ ಹೆಚ್ಚಳವು ಸಾರಿಗೆ ಮತ್ತು ಪೂರೈಕೆ ಸರಪಳಿಗಳ ವೆಚ್ಚಗಳನ್ನು ಹೆಚ್ಚಿಸುತ್ತದೆ. ಅಂತಿಮವಾಗಿ ಸಿದ್ಧಪಡಿಸಿದ ಸರಕು ಮತ್ತು ಸೇವೆ ಬೆಲೆ ಹೆಚ್ಚಾಗಿ ಉದ್ಯಮ ಮತ್ತು ಗ್ರಾಹಕನ ಮೇಲೆ ಮೇಲೆ ಪರಿಣಾಮ ಬೀರುತ್ತದೆ. ಮದ್ಯದ ಬೆಲೆಗಳ ಹೆಚ್ಚಳದಿಂದ ಜಿಲ್ಲಾ ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ನಿರೀಕ್ಷೆಯಿದೆ. ನಾವುಗಳು ಸರ್ಕಾರದ ತನ್ನ ಆದಾಯವನ್ನು ಹೆಚ್ಚಿಸುವ ಅಗತ್ಯವನ್ನು ಅರ್ಥಮಾಡಿಕೊಂಡಿದ್ದರೂ ದರ ಹೆಚ್ಚಳದ ಕ್ರಮಗಳು ಈ ಸಮಯದಲ್ಲಿ ಸೂಕ್ತವಲ್ಲ. ಇದರಿಂದ ವ್ಯಾಪಾರ ಮತ್ತು ವಾಣಿಜ್ಯೋದ್ಯಮಗಳ ಮೇಲೆ ಹೆಚ್ಚಿನ ಹೊರೆ ಬೀಳದಂತೆ ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಬೆಂಬಲಿಸುವ ಸಮತೋಲಿತ ಪರಿಹಾರಗಳನ್ನು ಕಂಡುಕೊಳ್ಳಲು ಸರ್ಕಾರವು ಉದ್ಯಮದ ಪಾಲುದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂವಾದದಲ್ಲಿ ತೊಡಗಿಸಿಕೊಳ್ಳಬೇಕೆಂದು ನಾವುಗಳು ಒತ್ತಾಯಿಸುತ್ತೇವೆ ಎಂದು ಬಿ.ಗೋಪಿನಾಥ್ ತಿಳಿಸಿದ್ದಾರೆ.

Chamber of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಬೆಳವಣಿಗೆಗಳ ಅನುಕೂಲಕರ ವಾತಾವರಣ ಮುಂದುವರಿಯಲು ಸರ್ಕಾರದೊಂದಿಗೆ ಸಹಕರಿಸಲು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸದಾ ಸಿದ್ಧವಾಗಿದೆ ಎಂದು ಬಿ.ಗೋಪಿನಾಥ್ ತಿಳಿಸಿದ್ದಾರೆ.

JCI ಪೌರ ಕಾರ್ಮಿಕರಿಗೆ ಹೆಚ್ಚಿನ ಮೂಲಭೂತ ಸೌಕರ್ಯ ಒದಗಿಸುವ ಅಗತ್ಯವಿದೆ- ಡಾ.ಆರ್.ಅನುರಾಧ ಪಟೇಲ್

0

JCI ಪೌರ ಕಾರ್ಮಿಕರು ಸ್ವಚ್ಛತಾ ಕಾರ್ಯಕ್ರಮ ಮಾಡುವಂತಹ ಸಂದರ್ಭದಲ್ಲಿ ಸಮಾಜದ ಪ್ರತಿಯೊಬ್ಬರು ಅವರಿಗೆ ಸಹಕರಿಸುವುದರ ಮೂಲಕ ಸ್ವಚ್ಛ ಭಾರತ ಆಂದೋಲನಕ್ಕೆ ಸಹಕರಿಸಿದಂತಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಮಿಕರಿಗೆ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವ ಅವಶ್ಯಕತೆ ಇದೆ ಎಂದು ಪ್ರೊ. ಡಾ. ಆರ್.ಅನುರಾಧ ಪಟೇಲ್ ಹೇಳಿದರು.

ಜೆ.ಸಿ.ಐ ಸಮೃದ್ಧಿ ಘಟಕದಿಂದ ಅಧ್ಯಕ್ಷರಾದ ಜೆಸಿ ನರಸಿಂಹಮೂರ್ತಿ ಅವರು ಹಮ್ಮಿಕೊಂಡಿದ್ದ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, 18 ಹಾಗೂ 19ನೇ ಶತಮಾನದಲ್ಲಿ ಕೈಗಾರಿಕೀಕರಣ ಆದಂತಹ ಸಂದರ್ಭದಲ್ಲಿ ಕಾರ್ಮಿಕರು 12 ರಿಂದ 15 ಗಂಟೆಗಳವರೆಗೆ ನಿರಂತರವಾಗಿ ಕೆಲಸ ಮಾಡಬೇಕಾಗಿತ್ತು. ಅಂತಹ ಸಂದರ್ಭದಲ್ಲಿ ಅವರಿಗೆ ಯಾವ ಮೂಲಭೂತ ಸೌಕರ್ಯಗಳು ಇರಲಿಲ್ಲ. ಇದರ ವಿರುದ್ಧ ಸಂಘಟಿತರಾಗಿ ಹೋರಾಟ ಪ್ರಾರಂಭಿಸಿದರು. ಅವರು ಮೇ 1 ರಿಂದ ಪ್ರತಿಭಟನೆ ಪ್ರಾರಂಭಿಸಿದ ಕಾರಣ ಮೇ 1 ರಂದು ಕಾರ್ಮಿಕರ ದಿನಾಚರಣೆ ಎಂದು ಆಚರಣೆ ಪ್ರಾರಂಭವಾಯಿತು. ಇದರ ಮುಖ್ಯ ಉದ್ದೇಶ 15 ಗಂಟೆಯಿಂದ ಎಂಟು ಗಂಟೆಗಳಿಗೆ ಕೆಲಸಗಳನ್ನು ಸೀಮಿತಗೊಳಿಸುವುದು ಮತ್ತು ಅವರಿಗೆ ವಿಶೇಷವಾಗಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡುವುದಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಮಿಕರಿಗೆ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವ ಅವಶ್ಯಕತೆ ಇದೆ. ಹಾಗೆ ಅವರು ಸ್ವಚ್ಛತಾ ಕಾರ್ಯಕ್ರಮ ಮಾಡುವಂತಹ ಸಂದರ್ಭದಲ್ಲಿ ಸಮಾಜದ ಪ್ರತಿಯೊಬ್ಬರು ಅವರಿಗೆ ಸಹಕರಿಸುವುದರ ಮೂಲಕ ಸ್ವಚ್ಛ ಭಾರತ ಆಂದೋಲನಕ್ಕೆ ಸಹಕರಿಸಿದಂತಾಗುವುದು ಎಂದು ನುಡಿದರು.

JCI ಅಧ್ಯಕ್ಷರಾದ ಜೆಸಿ ನರಸಿಂಹಮೂರ್ತಿಯವರು ಪೌರಕಾರ್ಮಿಕರಾದ ಲಕ್ಷ್ಮಮ್ಮ, ಅಣ್ಣಪ್ಪ, ವೆಂಕಟೇಶ್ ರವರಿಗೆ ಶಾಲು ಹೊದಿಸಿ, ಹಾರ ಹಾಕಿ, ಹಣ್ಣು ಮತ್ತು ಸ್ವೀಟ್ ಕೊಟ್ಟು ಸನ್ಮಾನಿಸಿದರು. ಕಾರ್ಯದರ್ಶಿಯಾದ ಜೆಸಿ ಗಾಯತ್ರಿ ಯಲ್ಲಪ್ಪಗೌಡರವರು ಸ್ವಾಗತಿಸಿ, ಜೆಸಿ ಲೋಲಾ ವಂದಿಸಿದರು. ಈ ಕಾರ್ಯಕ್ರಮಕ್ಕೆ ಜೆಸಿ ಅನಿತಾ ಸಿರಿಲ್, ಜೆಸಿ ಅಶ್ವಿನಿ, ಜೆಸಿ ಸುಮಾ, ಜೆಸಿ ಸರಳ, ಜೆಸಿ ಅನ್ನಪೂರ್ಣ, ರಶ್ಮಿ ಮುಂತಾದವರು ಭಾಗವಹಿಸಿದ್ದರು.

Sri Lakshmi Narasimha Temple ಹೊಸಮನೆ ಶ್ರೀಲಕ್ಷ್ಮೀನರಸಿಂಹ ದೇಗುಲದಲ್ಲಿ ಶ್ರೀನರಸಿಂಹ ಜಯಂತ್ಯುತ್ಸವ

0

Sri Lakshmi Narasimha Temple ಶಿವಮೊಗ್ಗ ಹೊಸಮನೆ ನಾಲ್ಕನೇ ತಿರುವಿನ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಹಾಗೂ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಯಂತೋತ್ಸವ ಸಮಾರಂಭ ಮೇ 11ರ ಭಾನುವಾರದಂದು ನಡೆಯಲಿದೆ ಎಂದು ಪ್ರಧಾನ ಅರ್ಚಕರಾದ ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 9:00ಗಂಟೆಗೆ ಶ್ರೀ ಸುಮುಖಭಟ್ಟ ಅವರ ನೇತೃತ್ವದಲ್ಲಿ ಗುರು ಪ್ರಾರ್ಥನೆ, ಪೂಜೆ ನಡೆಯಲಿದ್ದು ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವರ ಸಾಮೂಹಿಕ ಹೋಮ ನಡೆಯಲಿದೆ. ಮಧ್ಯಾಹ್ನ 12:30ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗವಿರುತ್ತದೆ ಎಂದಿದ್ದಾರೆ.
Sri Lakshmi Narasimha Temple ಸಂಜೆ 6ರಿಂದ ಶಿವಮೊಗ್ಗದ ಸಪ್ತ ಸ್ವರ ಟ್ರಸ್ಟ್ ತಂಡದಿಂದ ಭಕ್ತಿಗೀತೆಗಳ ಕಾರ್ಯಕ್ರಮ ಹಾಗೂ ದಾವಣಗೆರೆ ನಮನ ಅಕಾಡೆಮಿಯ ಕುಮಾರಿ ಹಂಸಿಕ ಅವರಿಂದ ಶ್ರೀ ನರಸಿಂಹ ಸ್ವಾಮಿ ದೇವರ ನವರೂಪದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.
ಈ ದಿನದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ, ಸಂಸದ ಬಿ. ವೈ. ರಾಘವೇಂದ್ರ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಾಜಿ ಶಾಸಕರಾಧ ಕೆ ಬಿ ಪ್ರಸನ್ನ ಕುಮಾರ್, ಎಸ್ ರುದ್ರೇಗೌಡ, ಎಂ ಎ ಡಿ ಬಿ ಅಧ್ಯಕ್ಷ ಮಂಜುನಾಥಗೌಡ, ಶಾಸಕರಾದ ಚನ್ನಬಸಪ್ಪ, ಡಿಎಸ್ ಅರುಣ್, ಧನಂಜಯ ಸರ್ಜಿ, ಪ್ರಮುಖರಾದ ಆರ್. ಪ್ರಸನ್ನ ಕುಮಾರ್, ಪಿಐ ರವಿ ಪಾಟೀಲ್, ರೇಖಾ ರಂಗನಾಥ್ ಹಾಗೂ ಇತರರು ಆಗಮಿಸಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಲು ಕೋರಿದ್ದಾರೆ.

CM Siddharamaih ಕುಡಿಯುವ ನೀರಿನ ಬವಣೆ ತಪ್ಪಿಸಲು ಸಿದ್ಧರಾಮಯ್ಯನವರಿಂದ ‌ಜಿಲ್ಲಾಧಿಕಾರಿಗಳಿಗೆ ಸೂಚನೆಗಳು

0

CM Siddharamaih ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವಿಡಿಯೋ ಸಂವಾದ ನಡೆಸಿದ್ದಾರೆ
ಜಿಲ್ಲಾಧಿಕಾರಗಳಿಗೆ ಒಂದಷ್ಟು ಸಲಹೆ, ಸೂಚನೆಗಳನ್ನು ನೀಡಿದರು. ಅವು ಈ ಕೆಳಗಿನಂತಿವೆ

  • ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಕುಡಿಯುವ ನೀರಿನ ನಿರ್ವಹಣೆಗೆ ಯಾವುದೇ ಹಣಕಾಸಿನ ಕೊರತೆ ಇರುವುದಿಲ್ಲ. ಪಂಚಾಯತ್ ರಾಜ್ ಇಲಾಖೆಗೆ 60 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ.
  • ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ ಫೋರ್ಸ್ ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಬೇಕು.
  • ಪ್ರತಿ ವರ್ಷ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸಬೇಕು.
  • ಅಗತ್ಯಬಿದ್ದರೆ ಮಾತ್ರ ಬೋರ್‌ವೆಲ್‌ಗಳನ್ನು ಕೊರೆಯಬೇಕು. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಬೋರ್‌ವೆಲ್ ಕೊರೆದು ವೆಚ್ಚ ಮಾಡಬಾರದು.
  • ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ವಾಡಿಕೆಗಿಂತ ಶೇಕಡಾ 55ರಷ್ಟು ಮಾನ್ಸೂನ್ ಪೂರ್ವ ಮಳೆ ಹೆಚ್ಚಾಗಿದೆ. ವಾಡಿಕೆಗಿಂತ ಯಾವುದೇ ಜಿಲ್ಲೆಯಲ್ಲಿ ಕಡಿಮೆ ಮಳೆ ದಾಖಲಾಗಿಲ್ಲ.
  • 27 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಎಲ್ಲಾ ಜಲಾಶಯಗಳಲ್ಲಿ ಶೇ.50ರಿಂದ ಶೇ.60 ರಷ್ಟು ಹೆಚ್ಚಿನ ನೀರಿನ ಸಂಗ್ರಹವಿದೆ.
  • ಈ ವರ್ಷ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  • ಮಾನ್ಸೂನ್ ವಿಳಂಬವಾದರೆ 6,319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಎಂದು ಗುರುತಿಸಲಾಗಿದೆ.
  • ಪ್ರಸ್ತುತ 551 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 123 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅಗತ್ಯ ಸಂದರ್ಭದಲ್ಲಿ ನೀರು ಪಡೆಯಲು ಈಗಾಗಲೇ 3ಸಾವಿರ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದ್ದು, 480 ಬೋರ್‌ವೆಲ್‌ಗಳನ್ನು ಖಾಸಗಿಯವರಿಂದ ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ.

CM Siddharamaih ರಾಜ್ಯದ ಯಾವುದೇ ಒಂದು ಹಳ್ಳಿಯಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ವ್ಯವಸ್ಥೆಯನ್ನು ಈಗಲೇ ಮಾಡಬೇಕು.

ಈ ಎಲ್ಲಾ ಅಂಶಗಳನ್ನ ರಾಜ್ಯದ ಎಲ್ಲಾ ಜಿಲ್ಲಾಡಳಿತವು ಪಾಲಿಸಿದರೆ ನೀರಿನ ಬರದ ಬವಣೆ ತಪ್ಪಿಸ ಬಹುದಾಗಿದೆ.

Madhu Bangarappa ಜಾತಿ & ಜನಗಣತಿ ನಡೆಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಸ್ವಾಗತ- ಸಚಿವ ಮಧು‌ ಬಂಗಾರಪ್ಪ

0

Madhu Bangarappa ಕೇಂದ್ರ ಸರ್ಕಾರ ಜಾತಿ ಮತ್ತು ಜನಗಣತಿ ನಡೆಸಲು ಮುಂದಾಗಿರುವ
ಈ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ರಾಜ್ಯ ಶಾಲಾ ಶಿಕ್ಷಣ ಸಚಿವ‌ ಮಧು‌ಬಂಗಾರಪ್ಪ ಕೇಂದ್ರದ ನಿರ್ಧಾರವನ್ನ ಸ್ವಾಗತಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ
ಇದರಿಂದ ದೇಶದ ಜನರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯುತ್ತದೆ ಎಂದು ಹೇಳಿದರು

ಇದನ್ನೇ ರಾಜ್ಯ ಸರ್ಕಾರ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದೆ
ವಿರೋಧ ಪಕ್ಷದವರು ಟೀಕೆಯ ನಂತರವೂ ಈ ನಿರ್ಧಾರ ತೆಗೆದುಕೊಂಡಿದ್ದಾರೆ
ರಾಜ್ಯ ಸರ್ಕಾರ ಅನುಸರಿಸಿದ ಮಾನದಂಡವನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು

Madhu Bangarappa ಬೇಕಾದರೆ ಇದಕ್ಕೆ ಇನ್ನಷ್ಟು ಅಂಶಗಳನ್ನು ಸೇರಿಸಿದರೆ ಒಳ್ಳೆಯದು
ಗಣತಿ ಮೂಲಕ ಜನರ ತೆರಿಗೆ ಹಣ ಯಾವ ರೀತಿ ಬಳಕೆಯಾಗುತ್ತಿದೆ ಎಂದು ಗೊತ್ತಾಗಬೇಕು ಎಂದೂ ಕೂಡ ಒತ್ತಿಹೇಳಿದರು.

ಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ.
ಕೇಂದ್ರದ ಗಣತಿ ಮೂಲಕ ದೇಶದ ಜನರ ಜೀವನಮಟ್ಟದ ಮಾಹಿತಿ ಸಿಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರ ನೀಡಿದರು.

ಇಲಾಖೆಯಲ್ಲಿನ ನೂತನ ಕ್ರಮಗಳ ಬಗ್ಗೆ ಮಾತನಾಡಿ
ಈ ಬಾರಿ ಎಐ ಆಧಾರಿತ ಭಾಷಾ ಕಲಿಕೆಗೆ ಗಮನ ಹರಿಸಲಾಗುತ್ತದೆ ಎಂದು ಸಚಿವ‌ ಮಧು‌ಬಂಗಾರಪ್ಪ‌ ತಿಳಿಸಿದರು.

Siddaramaiah ಇಂದಿನಿಂದ ಮೂರು ಹಂತಗಳಲ್ಲಿ ಪರಿಶಿಷ್ಠಜಾತಿ ಒಳಮೀಸಲಾತಿ ಸಮೀಕ್ಷೆ ಆರಂಭ- ಸಿದ್ಧರಾಮಯ್ಯ.

0

Siddaramaiah ಒಳ‌ಮೀಸಲಾತಿ ಜಾರಿಗೆ ನಾವು ಬದ್ಧರಾಗಿದ್ದು, ಇಂದಿನಿಂದ ಮೂರು ಹಂತಗಳಲ್ಲಿ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ.

Siddaramaiah ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ ಎಂದು ಪತ್ರಿಕಾಗೋಷ್ಢಿಯಲ್ಲಿ ಸಿದ್ಧರಾಮಯ್ಯ ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಎಚ್.ಕೆ.ಮುನಿಯಪ್ಪ
ಸಮಾಜ ಕಲ್ಯಾಣ ಸಚಿವ
ಡಾ.ಮಹದೇವಪ್ಪ, ಮುಂತಾದ‌ಗಣ್ಯರು‌‌ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Karnataka Examination Results 2025 ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಮೂವರ ಸಾಧನೆಯಿಂದ ಜಿಲ್ಲೆಯ ಕೀರ್ತಿ ಹೆಚ್ಚಾಗಿದೆ- ಮಧು ಬಂಗಾರಪ್ಪ

0

Karnataka Examination Results 2025 ಇದೇ ವೇಳೆ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆ ರಾಜ್ಯದಲ್ಲಿ 4 ನೇ ಸ್ಥಾನ ಪಡೆದಿದ್ದು, ಜಿಲ್ಲೆಯ ಗೋಪಾಳದ ರಾಮಕೃಷ್ಣ ವಿದ್ಯಾಲಯದ ನಿತ್ಯ ಎಂ ಕುಲಕರ್ಣಿ, ಪ್ರಿಯದರ್ಶಿನಿ ಶಾಲೆಯ ನಮನ ಹಾಗೂ ಆದಿಚುಂಚನಗಿರಿ ವಿದ್ಯಾ ಸಂಸ್ಥೆಯ ಸಹಿಷ್ಣು ಎಂಬ ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.
2024-25 ರ ಪರೀಕ್ಷೆ 1 ರ ಫಲಿತಾಂಶವು ಕಳೆದ ಸಾಲಿಗಿಂತ ಶೇ.8.5 ರಷ್ಟು ಅಧಿಕವಾಗಿದೆ. ಈ ವರ್ಷ ಶೇ.75 ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆ(ಶೇ.60) ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ್ದಾರೆ. ಕಳೆದ ವರ್ಷ ಶೇ.54 ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದಿದ್ದರು. ಈ ಬಾರಿ ಶೇ.75 ರಷ್ಟು ಆರ್‌ಟಿಇ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಉತ್ತಮ ಫಲಿತಾಂಶ ಬರಲು ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಯನ್ನು ಈ ಬಾರಿ ತರಲಾಗಿತ್ತು. ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಸಂಜೆ ಹೊತ್ತು ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲಾಗಿತ್ತು. ಅಣಕು ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲಾಗಿತ್ತು. ಜಿಲ್ಲಾಡಳಿತ, ಜಿ.ಪಂ, ಇತರೆ ಇಲಾಖೆಗಳು ಹಾಗೂ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳ ಪರಿಶ್ರಮದಿಂದ ಉತ್ತಮ ಫಲಿತಾಂಶ ಬಂದಿದ್ದು, ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು.
ಗ್ರಾಮೀಣ, ಹಿಂದುಳಿದ, ರೈತರು ಮತ್ತು ಬಡ ಮಕ್ಕಳಿಗೆ ಅನುಕೂಲವಾಗಲೆಂದು ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆ ಕಟ್ಟಲು ಯಾವುದೇ ಶುಲ್ಕವನ್ನು ವಿಧಿಸಿಲ್ಲ. ಜೊತೆಗೆ ಆನ್‌ಲೈನ್ ನಲ್ಲೇ ತಕ್ಷಣ ಪರೀಕ್ಷೆ ತೆಗೆದುಕೊಳ್ಳುವ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು ಇದು ಅತ್ಯಂತ ಯಶಸ್ಸು ಕಂಡಿದೆ.
ಪಿಯುಸಿ ಯಲ್ಲಿ ಕಳೆದ ಬಾರಿ 36 ಸಾವಿರ ವಿದ್ಯಾರ್ಥಿಗಳು ಇಂಪ್ರೂವ್‌ಮೆAಟ್‌ಗೆ ನೋಂದಣಿ ಮಾಡಿಸಿದ್ದರೆ ಈ ಬಾರಿ 79 ಸಾವಿರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಈವರೆಗೆ 64,600 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಎರಡನೇ ಪರೀಕ್ಷೆಗೆ ದಾಖಲಾಗಿದ್ದು, ಮೂರು ಪರೀಕ್ಷೆಗಳ ಸೂತ್ರ ಯಶಸ್ಸು ಕಂಡಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದAದೇ ಪರೀಕ್ಷೆ-2 ಬರೆಯಲು ನೋಂದಣಿ ಆರಂಭಿಸಿದ್ದು ಅಂದೇ ಪರೀಕ್ಷೆ 2 ಮತ್ತು ಪರೀಕ್ಷೆ 3 ರ ದಿನಾಂಕಗಳನ್ನು ಪ್ರಕಟಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ದಿನಾಂಕ: 26-05-2025 ರಿಂದ 02-06-2025 ಹಾಗೂ ಪರೀಕ್ಷೆ-3
ದಿ: 23-06-2025 ರಿಂದ 30-06-2025 ರವರೆಗೆ ನಡೆಯಲಿದೆ ಎಂದು ತಿಳಿಸಿದರು.
Karnataka Examination Results 2025 ಸರ್ಕಾರಿ ಶಾಲೆಗಳಿಗೆ ಸುಮಾರು 11 ಸಾವಿರ ಹಾಗೂ ಅನುದಾನಿಕ ಶಾಲೆಗಳಿಗೆ 6500 ಸೇರಿದಂತೆ ಸುಮಾರು 17 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಈ ವೇಳೆ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ತಾಲ್ಲೂಕು ಅಧ್ಯಕ್ಷ ಹೆಚ್.ಎಂ ಮಧು, ಮಾಜಿ ವಿಧಾನಪರಿಷತ್ ಶಾಸಕ ಆರ್.ಪ್ರಸನ್ನಕುಮಾರ್, ಮುಖಂಡರಾದ ಕಲಗೋಡು ರತ್ನಾಕರ ಸೇರಿದಂತೆ ಇತರೆ ಮುಖಂಡರು ಪಾಲ್ಗೊಂಡಿದ್ದರು.

Madhu Bangarappa ಜಿಪಿಎಸ್ & ಟ್ರ್ಯಾಕಿಂಗ್ ಉಪಕರಣ ಅಳವಡಿಕೆ ಆದೇಶ ರದ್ದುಪಡಿಸಲು ಸಚಿವರಲ್ಲಿ ಚಾಲಕರ ಸಂಘದ ಮನವಿ

0

Madhu Bangarappa ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಸೋಮವಾರದಂದು ನಗರದ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.
ಶಿವಮೊಗ್ಗ-ಭದ್ರಾವತಿ ಮೀಟರ್ ಟ್ಯಾಕ್ಸಿ ಅಸೋಸಿಯೇಷನ್‌ನವರು ತಮ್ಮ ಟ್ಯಾಕ್ಸಿಗಳಿಗೆ ಜಿಪಿಎಸ್ ಮತ್ತು ಟ್ರಾö್ಯಕಿಂಗ್ ವ್ಯವಸ್ಥೆ ಅಳವಡಿಕೆ ಮಾಡಬೇಕೆಂಬ ಆದೇಶವಿರುತ್ತದೆ. ಈ ವ್ಯವಸ್ಥೆ ಇಲ್ಲದಿದ್ದಲ್ಲಿ ಆರ್‌ಟಿಓ ಕಚೇರಿಯಿಂದ ಎಫ್‌ಸಿ ಮಾಡಿಸಲು ಬರುವುದಿಲ್ಲ. ಆದರೆ ಈ ವ್ಯವಸ್ಥೆ ಅಳವಡಿಕೆಯಿಂದ ಟ್ಯಾಕ್ಸಿ ನಡೆಸುವವರಿಗೆ ಅಧಿಕ ಖರ್ಚು ಬರುತ್ತದೆ. ಹಾಗೂ ಈ ಟ್ಯಾಕ್ಸಿಗಳು ಶಿವಮೊಗ್ಗ ಮತ್ತು ಭದ್ರಾವತಿ ನಡುವೆ ಮಾತ್ರ ಕಾರ್ಯಾಚರಣೆ ಮಾಡುತ್ತಿರುವ ಕಾರಣ ಮತ್ತು ಅಧಿಕ ಖರ್ಚು ಆಗುವುದರಿಂದ ಸದರಿ ವ್ಯವಸ್ಥೆಯನ್ನು ರದ್ದುಪಡಿಸಿ ಅನುಕೂಲ ಮಾಡಿಕೊಡಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು.
ಪ್ರಿಯಾಂಕ ಬಡಾವಣೆ ನಿವಾಸಿಗಳ ಹಿತರಕ್ಷಣಾ ವೇದಿಕೆಯ ಸದಸ್ಯರು ಪ್ರಿಯಾಂಕ ಬಡಾವಣೆಯಲ್ಲಿ ಉದ್ದ ಮತ್ತು ಅಡ್ಡ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿಸಿಕೊಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ತೆಲುಗು ಅರುಂಧತಿ ಆದಿಕರ್ನಾಟಕ ಸಮಾಜದವರು ನಗರದ 27 ನೇ ವಾರ್ಡಿನಲ್ಲಿ ಅರ್ಧಕ್ಕೆ ನಿಲ್ಲಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಪೂರ್ಣಗೊಳಿಸಲು ರೂ.50 ಲಕ್ಷ ಅನುದಾನವನ್ನು ಮಂಜೂರು ಮಾಡಬೇಕೆಂದು ಕೋರಿದರು.
Madhu Bangarappa ಬನಶಂಕರಿ ಬಡಾವಣೆಯ ಆಂಜನೇಯ ಸಮಿತಿಯವರು ದೇವಸ್ಥಾನ ನಿರ್ಮಿಸಲು ಅನುದಾನ ನೀಡುವಂತೆ ಕೋರಿದರು. ಹಾಗೂ ಉದ್ಯೋಗ ಒದಗಿಸುವಂತೆ ಕೋರಿ ಇಬ್ಬರು ಮಹಿಳೆಯರು ಅರ್ಜಿ ನೀಡಿದರು. ಸಚಿವರು 10 ಕ್ಕೂ ಅಧಿಕ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.

Labour Day ಮೇ 6. ರಾಜ್ಯ ಸರ್ಕಾರಿ ನೌಕರರ ದಿನಾಚರಣೆ.ಸರ್ವೋತ್ತಮ. ಪ್ರಶಸ್ತಿ ಪ್ರದಾನ ಸಮಾರಂಭ

0

Labour Day ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಸಂಘವು ಮೇ 06 ರ ಮಂಗಳವಾರದAದು ಡಿ.ಸಿ.ಕಾಂಪೌAಡ್‌ನಲ್ಲಿರುವ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ 2023ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕ್ರೀಡಾಕೂಟದಲ್ಲಿ ವಿಜೇತರಾದ ಸರ್ಕಾರಿ ನೌಕರರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಸಮಾರಂಭದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪನವರು ನೆರವೇರಿಸಲಿದ್ದಾರೆ. ಶಾಸಕ ಎಸ್.ಎನ್.ಚನ್ನಬಸಪ್ಪನವರು ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಲಿದ್ದು, ಸಂಸದ ಬಿ.ವೈ.ರಾಘವೇಂದ್ರ, ಕೆ.ಆರ್.ಐ.ಡಿ.ಎಲ್ ಅಧ್ಯಕ್ಷರು ಹಾಗೂ ಬಿ.ಕೆ.ಸಂಗಮೇಶ್ವರ, ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಶಾಸಕ ಗೋಪಾಲಕೃಷ್ಣ ಬೇಳೂರು, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿರವರು ಹಾಗೂ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಗಣ್ಯರು ಮತ್ತು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.
Labour Day ಕರ್ನಾಟಕ ನಾಗರೀಕ ಸೇವೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ವಿಶೇಷ ಸಾಧನೆ ಮಾಡಿದ 10 ಜನ ಸರ್ಕಾರಿ ಅಧಿಕಾರಿ-ನೌಕರರಿಗೆ 2023ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಏಪ್ರಿಲ್ 05 ಮತ್ತು 06 ರಂದು ನಡೆದ ಕ್ರೀಡಾಕೂಟದಲ್ಲಿ ವಿಜೇತರಾದ ಸರ್ಕಾರಿ ನೌಕರರಿಗೆ ಬಹುಮಾನ ವಿತರಣೆ ಮಾಡಲಾಗುವುದು. ವಿಜೇತರಾದ ಜಿಲ್ಲೆಯ ಸರ್ಕಾರಿ ನೌಕರರು ಮಧ್ಯಾಹ್ನ 3.30 ಕ್ಕೆ ಸರಿಯಾಗಿ ಸರ್ಕಾರಿ ನೌಕರರ ಭವನದಲ್ಲಿ ಹಾಜರಿದ್ದು, ಪ್ರಮಾಣ ಪತ್ರಗಳನ್ನು ಸ್ವೀಕರಿಸುವುದು..
ಈ ಸಮಾರಂಭದಲ್ಲಿ ಭಾಗವಹಿಸುವ ಅಧಿಕಾರಿ ಹಾಗೂ ನೌಕರರಿಗೆ ಓಓಡಿ ಸೌಲಭ್ಯವನ್ನು ಜಿಲ್ಲಾಧಿಕಾರಿಗಳು ಮಂಜೂರು ಮಾಡಿರುತ್ತಾರೆ. ಜಿಲ್ಲೆಯ ಸರ್ಕಾರಿ ನೌಕರರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್‌ಕುಮಾರ್ ಕೋರಿರುತ್ತಾರೆ.