Wednesday, May 6, 2026
Wednesday, May 6, 2026
Home Blog Page 32

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

0

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು, ಹೋರಾಟ ಸಮಿತಿಯ ಪ್ರಮುಖರು ಹಾಗೂ ಸಾವಿರಾರು ಸಾರ್ವಜನಿಕರೊಂದಿಗೆ ಪಾಲ್ಗೊಂಡು ಜನರ ಭಾವನೆಗಳಿಗೆ ಸಾಕ್ಷಿಯಾಗಲಾಯಿತು. ಈ ಪವಿತ್ರ ಹೋರಾಟದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಮೂಲಕ ಹೊಸನಗರದ ಸ್ವಾಭಿಮಾನದ ಧ್ವನಿಗೆ ಬೆಂಬಲ ಸೂಚಿಸಲಾಯಿತು.

ಹೊಸನಗರಕ್ಕೆ ತನ್ನದೇ ಆದ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು ಎಂಬುದು ಈ ಭಾಗದ ಪ್ರತಿಯೊಬ್ಬರ ಆಶಯವಾಗಿದೆ. ಈ ಕುರಿತು ಸರ್ಕಾರದ ಮಟ್ಟದಲ್ಲಿ ಹಾಗೂ ಕ್ಷೇತ್ರ ಪುನರ್ ವಿಂಗಡಣಾ ಆಯೋಗದ ಮುಂದೆ ಸೂಕ್ತವಾಗಿ ಪ್ರಸ್ತಾವನೆ ಸಲ್ಲಿಸಿ, ನ್ಯಾಯ ಒದಗಿಸಲು ನಾವು ಸಂಪೂರ್ಣವಾಗಿ ಬದ್ಧರಾಗಿದ್ದೇವೆ. ಜನರ ಈ ಒಕ್ಕೊರಲ ಧ್ವನಿಗೆ ನಾವು ಸದಾ ಜೊತೆಯಾಗಿರುತ್ತೇವೆ ಎಂದರು.
B.Y. Raghavendra ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಶ್ರೀ ಮ.ನಿ.ಪ್ರ ಅಭಿನವ ಚನ್ನಬಸವ ಶ್ರೀಗಳು, ಹುಂಚ ಜೈನ ಮಠದ ಶ್ರೀ ಶ್ರೀ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಶ್ರೀಗಳು, ನಾರಾಯಣಗುರು ಸಂಸ್ಥಾನ ಮಠದ ಶ್ರೀ ಶ್ರೀ ರೇಣುಕಾನಂದ ಶ್ರೀಗಳು, ಮುಸ್ಲಿಂ ಧರ್ಮ ಗುರುಗಳು, ಹೋರಾಟದ ರುವಾರಿಗಳು ಮಾಜಿ ಶಾಸಕರಾದ ಶ್ರೀ ಬಿ.ಸ್ವಾಮಿರಾವ್, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧು ಬಂಗಾರಪ್ಪ, ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ, ಶ್ರೀ ಬೇಳೂರು ಗೋಪಾಲ ಕೃಷ್ಣ, ಮಾಜಿ ಸಚಿವರಾದ ಶ್ರೀ ಹರತಾಳು ಹಾಲಪ್ಪ, ಶ್ರೀ ವೀರೇಶ್ ಆಲವಳ್ಳಿ, ಶ್ರೀ ಕಲಗೋಡು ರತ್ನಾಕರ್, ಶ್ರೀ ಎನ್ ಆರ್ ದೇವಾನಂದ್, ಶ್ರೀ ವರ್ತೆಶ್, ಶ್ರೀ ಆರ್. ಚಾಬುಸಾಬ್ ಶ್ರೀ ಬಿ ಜಿ ಚಂದ್ರಮೌಳಿ, ಶ್ರೀಬಂಡಿ ರಾಮಚಂದ್ರ ಹಾಗೂ ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

0

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ 5/4/2026 ರಂದು ಶಿವಮೊಗ್ಗನಗರದ ಕುವೆಂಪು ರಂಗಮಂದಿರದ ಹಿಂಭಾಗದ NES ಕ್ರೀಡಾ ಆವರಣದಲ್ಲಿ ದಿನಾಂಕ 5/4/2026 ರಂದು ವಿದ್ಯುಕ್ತವಾಗಿ ಪ್ರಾರಂಭಿಸಲಾಯಿತು.
ಶ್ರೀ ಐಡಿಯಲ್ ಗೋಪಾಲಕೃಷ್ಣ, DCA ಸಂಸ್ಥೆಯ ಸಹಾ ಕಾರ್ಯದರ್ಶಿ ರವರು ಉದ್ಘಾಟನಾ ಕಾರ್ಯಕ್ರಮದ ಅತಿಥಿ ಗಳಾದ ಶ್ರೀ ಸುಧೀಂದ್ರ ರಾವ್, ಶ್ರೀ ನಾಗರಾಜ ಶೆಣೈ,ಸಂಸ್ಥೆಯ ಅಧ್ಯಕ್ಷ ರಾದ ಡಿ. ಆರ್. ನಾಗರಾಜ್, ಕಾರ್ಯದರ್ಶಿ ಹೆಚ್. ಎಸ್. ಸದಾನಂದ ಹಾಗೂ ತರಬೇತಿ ಶಿಬಿರದ ಮುಖ್ಯತರಬೇತುದಾರರದ ನಿತ್ಯಾನಂದ ಪೈ ರವರನ್ನು,ವೇದಿಕೆಗೆ ಸ್ವಾಗತಿಸಿದರು. ಉಪಸ್ಥಿತರಿದ್ದ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರನ್ನು, ಸಂಸ್ಥೆಯ ಹಿರಿಯ ಸದಸ್ಯರನ್ನು, ಶಿಬಿರಾರ್ಥಿಗಳನ್ನು, ಪಾಲಕರು /ಪೋಷಕರನ್ನು ಸ್ವಾಗತಿಸಿ ಸಂಸ್ಥೆಯ ಪರಿಚಯ, ಬೆಳೆದುಬಂದ ಹಾದಿ, ಸಂಸ್ಥೆ ವತಿಯಿಂದ ಬೆಳೆದ ಆಟಗಾರರ ವಿವರ,ಇವರಲ್ಲಿ ರಾಜ್ಯ ತಂಡ ಪ್ರತಿನಿಧಿಸಿದವರ ವಿವರ ಎಲ್ಲರಿಗೂ ಪರಿಚಯ ಮಾಡಿಕೊಟ್ಟರು.
ಶ್ರೀಯುತ ಸುಧೀಂದ್ರ ರಾವ್, ಆಕಾಶವಾಣಿಯ ಕಾರ್ಯಕ್ರಮ ಕಾರ್ಯನಿರ್ವಾಹಕ ಅಧಿಕಾರಿ (ನಿವೃತ್ತ )ರವರು ತರಬೇತಿ ಶಿಬಿರವನ್ನು ಉದ್ಘಾಟನೆ ಮಾಡುತ್ತಾ,ಸದರಿಯವರು ತಮ್ಮ ಉದ್ಘಾಟನಾ ಮಾತುಗಳಲ್ಲಿ ತಾವು ಚಿಕ್ಕವರಾಗಿದ್ದಾಗ, ಆಗಿನ ದಿನಪತ್ರಿಕೆಗಲ್ಲಿ DCA ತಂಡದ ವಿಜಯ ವಾರ್ತೆ ಓದುತಿದ್ದನ್ನು ಸ್ಮರಿಸಿಕೊಂಡು, ಸಂಸ್ಥೆಯ ಹಿರಿಯ ಸದಸ್ಯರುಗಳಾದ ನಾರಾಯಣ ಭಟ್, ಪುಟ್ಟಪ್ಪ, ನಾಣಿ ರವರನ್ನು ನೆನೆಪಿಸಿಕೊಂಡು ಸದರಿಯವರು ಸಂಸ್ಥೆ ಕಟ್ಟುವಲ್ಲಿ ಹಾಗೂ ಬೆಳೆಸುವಲ್ಲಿ ತೆಗೆದುಕೊಂಡ ಶ್ರಮದ ಬಗ್ಗೆ ಶ್ಲಾಘೀಸಿದರು.
ಇದೆ ಪರಂಪರೆಯನ್ನು ಮುಂದುವರಿಸುತ್ತಿರುವ ಹಾಗೂ ಇದಕ್ಕಾಗಿ ತಮ್ಮ ಸಮಯವನ್ನು ಮೀಸಲಿಡುತ್ತಿರುವ ಈಗಿನ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಸದಸ್ಯರುಗಳಿಗೆ ಅಭಿನಂದಿಸಿದರು.
ಮಕ್ಕಳಿಗೆ ತರಬೇತಿಯಲ್ಲಿ ಉತ್ತಮ ಆಟಕಲಿತು ಮುಂದೆ ತಾವು ಬೆಳೆಯಲು ಹಾಗೂ ಸಂಸ್ಥೆಗೆ ಯಶಸ್ಸು ತರುವಂತೆ ಶುಭ ಹಾರೈಸಿ ತರಬೇತಿ ಶಿಬರಕ್ಕೆ ಶುಭ ಹಾರೈಸಿದರು.
ಮಕ್ಕಳಲ್ಲಿ ಉತ್ಸಾಹ ಬೆಳೆಯಲು 5 ಓವರ್ ಗಳ ಚುಟುಕು ಪಂದ್ಯಾವಳಿಯನ್ನು ತರಬೇತಿ ಸಮಯದಲ್ಲಿ ಆಯೋಜಿಸಲು ಸಲಹೆ ನೀಡಿದರು.
ಇನ್ನೊರ್ವ ಅತಿಥಿಗಳಾದ ಶ್ರೀಯುತ ನಾಗರಾಜ ಶೆಣೈ ರವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಪ್ರತಿದಿನ ಬೆಳಿಗ್ಯೆ ಬೇಗನೆ ಏಳುವ ಕುರಿತು ತಿಳಿಸಿ ಇದರಿಂದಾಗುವ ಪ್ರಯೋಜನ ತಿಳಿಸಿದರು. ಇದರಿಂದ ಒಳ್ಳೆಯ ಆರೋಗ್ಯ, ಬುದ್ದಿ ಹಾಗೂ ದಿನವಿಡಿ ಲವಲವಿಕೆಯಿಂದ ಇರಬಹುದಾಗಿದ್ದು ದಿನವಿಡಿ ಉಲ್ಲಾಸದಿಂದಿರಬಹುದೆಂದು ತಿಳಿಸುತ್ತಾ ತರಬೇತಿಯಲ್ಲಿ ಉತ್ತಮ ಆಟ ಕಲಿಯುವಂತೆ ಶುಭಹಾರೈಸಿದರು.
ಸಂಸ್ಥೆಯ ಅಧ್ಯಕ್ಷರಾದ ಶ್ರೀ ಡಿ. ಆರ್. ನಾಗರಾಜ್ ರವರು ಮಾತನಾಡುತ್ತಾ ತರಬೇತಿ ಶಿಬಿರದಲ್ಲಿ ಸಂಸ್ಥೆವತಿಯಿಂದ ನೀಡುವ ಸವಲತ್ತು, ತರಬೇತಿ, ಸಮವಸ್ತ್ರ ಹಾಗೂ ತರಬೇತಿಯ ನಂತರ ಪ್ರತಿದಿನ ನೀಡುವ ಹಾಲು ಹಾಗೂ ಬನ್ನು ಗಳ ವಿವರ ಅತಿಥಿಗಳಿಗೆ ಹಾಗೂ ನೆರೆದಿದ್ದ ಶಿಬಿರಾರ್ಥಿಗಳಿಗೆ, ಪಾಲಕರಿಗೆ ತಿಳಿಸುತ್ತಾ ಶಿವಮೊಗ್ಗದಲ್ಲಿ ಅತೀ ಕಡಿಮೆ ಮೊತ್ತದಲ್ಲಿ ಸಂಸ್ಥೆಯು ನೀಡುತ್ತಿರುವ ಸೇವೆಬಗ್ಗೆ ವಿವರಿಸಿದರು.
ಈ ಸಮಯದಲ್ಲಿ ಕೆಲವು ಮಕ್ಕಳಿಗೆ ಉದ್ಘಾಟನೆಯ ಸಂಕೇತವಾಗಿ ಸಮವಸ್ತ್ರ ಹಾಗೂ ಟೋಪಿ ನೀಡಲಾಯಿತು.
ಶ್ರೀಯುತ ಅನಿಲ್ ಪಾಟೀಲ್ ರವರು ಎಲ್ಲರಿಗೂ ವಂದನಾರ್ಪಣೆ ಸಲ್ಲಿಸಿದರು.
ಶ್ರೀ. ಗೋಪಾಲಕೃಷ್ಣ ರವರು ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆ ಮಾಡಿದರು.ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯರಾದ KL ಸುಬ್ರಮಣ್ಯ. DN ರಮಾನಂದ್. DV ರಾಮಚಂದ್ರ. ರಘುಪ್ರಸಾದ್ ಮನ್ ಮೋಹನ್
ತರಬೇತಿ ಶಿಬಿರದ ತರಬೇತುದಾರರದ ಮಿಥುನ್, ಗಣೇಶ್, ಅರ್ಜುನ್, ರವಿ, ಸಚ್ಚಿನ್ ರವರು ಹಾಜರಿದ್ದರು.

Acharya Tulsi National College of Commerce ಮೇ1. ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳ ಸಮಾಗಮ

0

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 1ರಂದು ಬೆಳಗ್ಗೆ 10.30ಕ್ಕೆ ಹಳೇಯ ವಿದ್ಯಾರ್ಥಿಗಳ ಸಂಘದಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಎಟಿಎನ್‌ಸಿಸಿ ಕಾಲೇಜು 60ನೇ ವರ್ಷಕ್ಕೆ ಕಾಲಿಡುತ್ತಿದ್ದು, ಎಲ್ಲಾ ಹಳೆಯ ವಿದ್ಯಾರ್ಥಿಗಳಿಗೆ ನಾವು ಓದಿದ ಕಾಲೇಜ್ ಎಂಬ ಹೆಮ್ಮೆ ಇರುವುದು ಸಹಜ. ಬಹಳಷ್ಟು ಹಳೆಯ ವಿದ್ಯಾರ್ಥಿಗಳಿಗೆ ಮತ್ತೆ ಕಾಲೇಜಿಗೆ ಭೇಟಿ ನೀಡಬೇಕೆಂಬ ಹಂಬಲ ಇರುತ್ತದೆ. ಆದರೆ ಯಾವುದೇ ವಿಷಯ ಇಲ್ಲದೆ ಹೋಗುವುದು ಅಸಂಭವ.
ಸಮಯ ಅವಕಾಶ ದೊರಕಿದರೆ ಸಾಕೆಂದು ಹಲವರು ಹಂಬಲಿಸುತ್ತಾರೆ. ಈ ನಿಟ್ಟಿನಲ್ಲಿ ನಮ್ಮ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹಳೆಯ ವಿದ್ಯಾರ್ಥಿ ಬಳಗದ ವತಿಯಿಂದ ಎಟಿಎನ್‌ಸಿಸಿ ಕಾಲೇಜಿನಲ್ಲಿ ಓದಿದ ಎಲ್ಲಾ ಸಾಲಿನ ವಿದ್ಯಾರ್ಥಿಗಳನ್ನು ಕಾಲೇಜಿನ ಆವರಣಕ್ಕೆ ಪ್ರತಿ ವರ್ಷ ಮೇ 1ರಂದು ಆಹ್ವಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವ ಸಲುವಾಗಿ ಈ ಸಾಲಿನಲ್ಲಿ ಪ್ರಥಮ ಪ್ರಯತ್ನವಾಗಿ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Acharya Tulsi National College of Commerce ಮೇ 1ರಂದು ಬೆಳಗ್ಗೆ 10.30ಕ್ಕೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹಾಜರಾಗುವವರು ಅರ್ಜಿ ನಮೂನೆ ಭರ್ತಿ ಮಾಡಿ ಮಾಹಿತಿ ನೀಡಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿಕೊಳ್ಳುವ ಮೂಲಕ ತಮ್ಮ ತರಗತಿ ಮಿತ್ರರನ್ನು ಹಾಗೂ ಇತರ ಸ್ನೇಹಿತರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬಹುದು. ಮಾಹಿತಿಗೆ ಮೊಬೈಲ್ ಸಂಖ್ಯೆ 9844809533, 9449808608, 9844665591 ಸಂಪರ್ಕಿಸಬಹುದಾಗಿದೆ.

ರಿಪ್ಪನ್ ಪೇಟೆಯ ಆಸ್ಪತ್ರೆ ಮತ್ತು ವಿದ್ಯಾರ್ಥಿನಿಲಯಕ್ಕೆ ಡೀಸಿ ಪ್ರಭುಲಿಂಗ ಕವಳಿಕಟ್ಟಿ ಭೇಟಿ

0

ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೋಮವಾರ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರಿಗೆ ಸಿಗುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರದ ಕಾರ್ಯನಿರ್ವಹಣೆ, ಅಗತ್ಯ ಔಷಧಿಗಳ ದಾಸ್ತಾನು ಇದೆಯೇ ಎಂಬುದನ್ನು ಪರಿಶೀಲಿಸಿದ ಅವರು ರೋಗಿಗಳೊಂದಿಗೆ ಕೇಂದ್ರದಿಂದ ದೊರಕುತ್ತಿರುವ ಸೌಲಭ್ಯಗಳ ಕುರಿತು ಮಾತನಾಡಿದರು.
ಬಳಿಕ ಹತ್ತಿರದ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಮೊದಲು ಅಡುಗೆ ಕೋಣೆ ಮತ್ತು ದಾಸ್ತಾನು ಕೊಠಡಿಯನ್ನು ವೀಕ್ಷಿಸಿದರು. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಖುದ್ದಾಗಿ ಪರಿಶೀಲನೆ ನಡೆಸಿದರು. ಮೆನುವಿನಂತೆ ಆಹಾರ ನೀಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿ, ಶುಚಿಗೊಳಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಲು ಸೂಚಿಸಿದರು.
ನಿಲಯದ ಆವರಣ ಮತ್ತು ಶೌಚಾಲಯಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ವಾರ್ಡನ್‌ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಸಂವಾದ: ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಓದಿಗೆ ಪೂರಕವಾದ ವಾತಾವರಣವಿದೆಯೇ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿದೆಯೇ ಎಂದು ವಿಚಾರಿಸಿದರು.

ನಿರುದ್ಯೋಗಿ ವಿದ್ಯಾವಂತರೆ,ಗಮನಿಸಿ..! ಏಪ್ರಿಲ್ 9. ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ

0

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.09 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಮುತ್ತೂಟ್ ಮನಿ ಮತ್ತು ಮಾರುತಿ ಸುಜುಕಿ (ಅರೇನಾ) ಕಂಪನಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಪಿಯುಸಿ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರಾಗಿಗುಡ್ಡ ಪ್ರದೇಶ ಜನತೆಯ ಸಮಸ್ಯೆ ನಿವಾರಿಸಿದ ಪಾಲಿಕೆ ಆಯುಕ್ತರಿಗೆ ಅಭಿನಂದನೆ ಸಲ್ಲಿಸಿದ ಕರವೆ ಜನಮನ ಸಂಘಟನೆ

0

ಮಹಾನಗರ ಪಾಲಿಕೆಯ ಆಯುಕ್ತರಾದ ಸನ್ಮಾನ್ಯ ಮಾಯಣ್ಣ ಗೌಡರು, ಕರವೇ, ಜನ ಮನ ರಾಜ್ಯ ಸಂಘಟನೆಯ ಮನವಿಗೆ ಸ್ಪಂದಿಸಿ ರಾಗಿಗುಡ್ಡ ಭಾಗದ ಸಮಸ್ಯೆಯನ್ನು ಪರಿ ಹರಿಸಿರುತ್ತಾರೆ. ಅವರಿಗೆ ನಮ್ಮ ಸಂಘಟನೆಯ ವತಿಯಿಂದ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿ ಮಾತನಾಡಿದ ಜನ ಮನ ಸಂಘಟನೆಯ ರಾಜ್ಯಧ್ಯಕ್ಷರಾದ ಕೆ ಜನಾರ್ಧನ್ ಸಾಲಿಯನ್ ರವರು ಆಯುಕ್ತರ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಮಾಯಣ್ಣ ಗೌಡರ ಸೇವೆಯ ಅಗತ್ಯತೆ ನಮ್ಮ ಶಿವಮೊಗ್ಗ ನಗರಕ್ಕೆ ತುಂಬಾ ಅವಶ್ಯವಾಗಿದ್ದು, ಇದೇ ರೀತಿಯ ಸೇವಾ ಸಹಕಾರವನ್ನು ನಮಗೆ ನೀಡಲಿ ಎಂದರು. ಇವರೊಂದಿಗೆ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್ ಮಾಲತೇಶ್, ಮತ್ತು ಪದಾಧಿಕಾರಿಗಳಾದ ರಾಮವಿ, ರಾಮಣ್ಣ ರಾಗಿಗುಡ್ಡ,ಮತ್ತಿತರರು ಭಾಗವಹಿಸಿದ್ದರು.

Department of Agriculture ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯ ರಸಗೊಬ್ಬರ ಖರೀದಿಸಲು ಎಫ್ ಐ ಡಿ ಸಂಖ್ಯೆ ಕಡ್ಡಾಯ

0

ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್‌ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ.

2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ ಜಾರಿಗೆ ಬರಲಿದ್ದು, ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಗೊಬ್ಬರ ಮಾರಾಟವಾಗುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ.

ಕೆ-ಕಿಸಾನ್ ತಂತ್ರಾಂಶದ ಬಳಕೆ: ರೈತರು ತಮ್ಮ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಎಷ್ಟು ಪ್ರಮಾಣದ ಗೊಬ್ಬರ ಅಗತ್ಯವಿದೆಯೋ ಅಷ್ಟನ್ನು ಮಾತ್ರ ‘ಕೆ-ಕಿಸಾನ್’ ತಂತ್ರಾಂಶದ ಮೂಲಕ ವಿತರಿಸಲಾಗುವುದು.

ಹೊಸ ಎಫ್‌ಐಡಿ ನೋಂದಣಿ: ಇದುವರೆಗೆ ಫಾರ್ಮರ್ ಐಡಿ ಹೊಂದಿರದ ರೈತರು ತಕ್ಷಣವೇ ತಮ್ಮ ದಾಖಲೆಗಳಾದ ಪಹಣಿ, ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ನೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬೇಕು.

ಸರ್ವೆ ನಂಬರ್ ಜೋಡಣೆ: ಈಗಾಗಲೇ ಎಫ್‌ಐಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೆ ನಂಬರ್‌ಗಳನ್ನು ಅದಕ್ಕೆ ಜೋಡಣೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

Department of Agriculture ಮಾರಾಟಗಾರರಿಗೆ ಎಚ್ಚರಿಕೆ: ಅಧಿಕೃತ ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಎಫ್‌ಐಡಿ ನಮೂದಿಸಿಯೇ ಗೊಬ್ಬರ ಮಾರಾಟ ಮಾಡಬೇಕು. ಈ ಸಂಬಂಧ ಇಲಾಖಾಧಿಕಾರಿಗಳಿಗೆ ತರಬೇತಿ ಹಾಗೂ ಮಾಹಿತಿ ನೀಡಲಾಗಿದೆ. ಚಿಲ್ಲರೆ ರಸಗೊಬ್ಬರ ಮಾರಾಟಗಾರರು ತಮ್ಮ ಎಲ್ಲ ಓ ಫಾರಂ ನವೀಕರಣಗೊಳಿಸಿಕೊಳ್ಳಬೇಕು. ಒಂದು ವೇಳೆ ಮಾರಾಟಗಾರರು ಓ ಫಾರಂ ಗಳ ನೋಂದಣಿ ಇಲ್ಲದೇ ಮಾರಾಟ ಮಾಡಿದಲ್ಲಿ, ನಿಯಮ ಮೀರಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಥವಾ ಕೃಷಿಯೇತರ ಉದ್ದೇಶಕ್ಕೆ ಗೊಬ್ಬರ ನೀಡಿದರೆ ಅಂತಹ ಮಾರಾಟಗಾರರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕುಂಸಿ ಮೆಸ್ಕಾಂ ವಿದ್ಯುತ್ ಉಪ ವಿಭಾಗದ ಹಾರ್ನಳ್ಳಿ, ರಾಮನಗರ ಸುತ್ತಮುತ್ತ ಕಾಮಗಾರಿ ನಿಮಿತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

0

ಕುಂಸಿ ಉಪವಿಭಾಗದ ಹಾರ್ನಳ್ಳಿ ಶಾಖಾ ವ್ಯಾಪಿಯಲ್ಲಿ ಎಲ್.ಟಿ ರೀ-ಕಂಡರಿಂಗ್ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಾದ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ವಿಠಗೊಂಡನಕೊಪ್ಪ, ವೀರಣ್ಣನಬೇನವಳ್ಳಿ, ಕೆಸುವಿನ ಕಟ್ಟೆ, ಸೇವಲಾಲ್ ನಗರ, ಯರೆಕೊಪ್ಪ ಚಾಮೇನಹಳ್ಳಿ, ನಾಗರಭಾವಿ ಹಾಗೂ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ಏ. 8 ರಂದು ಬೆಳಗ್ಗೆ 10:00 ರಿಂದ ಸಂಜೆ 6:00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Department of Agriculture ಮೆಕ್ಕೆಜೋಳ ಬೆಳೆಗೆ ವಿಮೆ ಪರಿಹಾರ ಪಡೆಯದ ರೈತರು ಆಕ್ಷೇಪಣೆ ಸಲ್ಲಿಸಲು ಅವಕಾಶ

0

Department of Agriculture 2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ ಅಡಿಯಲ್ಲಿ ಮೆಕ್ಕೆಜೋಳ ಬೆಳೆಗೆ ವಿಮೆ ಮಾಡಿಸಿ, ತಾಂತ್ರಿಕ ಕಾರಣಗಳಿಂದ ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಕೃಷಿ ಇಲಾಖೆ ಅವಕಾಶ ನೀಡಿದೆ.

ಬೆಳೆ ಸಮೀಕ್ಷೆಯ ಫೋಟೋಗಳು ಮತ್ತು ವಿಮೆ ಮಾಡಿಸಿದ ಬೆಳೆಗಳ ನಡುವೆ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಕೆಲವು ಅರ್ಜಿಗಳನ್ನು ವಿಮಾ ಸಂಸ್ಥೆಯು ತಿರಸ್ಕರಿಸಿದೆ.

ಇಂತಹ ತಿರಸ್ಕೃತಗೊಂಡ ಅರ್ಜಿಗಳ ಪಟ್ಟಿಯನ್ನು ಆಯಾ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.
ಯಾವ ರೈತರಿಗೆ ಇನ್ನೂ ವಿಮೆ ಪರಿಹಾರ ಬಂದಿಲ್ಲವೋ, ಅವರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪಟ್ಟಿಯನ್ನು ಪರಿಶೀಲಿಸಬೇಕು.

ತಮ್ಮ ಹೆಸರು ತಿರಸ್ಕೃತ ಪಟ್ಟಿಯಲ್ಲಿದ್ದರೆ, 2024ರ ಮುಂಗಾರು ಹಂಗಾಮಿನ ಪಹಣಿ (ಇದರಲ್ಲಿ ವಿಮೆ ಮಾಡಿಸಿದ ಬೆಳೆ ನಮೂದಾಗಿರಬೇಕು), ಬೆಂಬಲ ಬೆಲೆ ಯೋಜನೆಯಲ್ಲಿ ಪ್ರಯೋಜನೆ ಪಡೆದಿರುವ ಬಗ್ಗೆ ರಸೀದಿ, ಪಶು ಆಹಾರ ಘಟಕಕ್ಕೆ ನೀಡಿದ ಬಗ್ಗೆ ಅಥವಾ ಎಪಿಎಂಸಿ ಮಾರುಕಟ್ಟೆಗೆ ಉತ್ಪನ್ನಗಳನ್ನು ಮಾರಾಟ ಮಾಡಿದ ರಸೀದಿಗಳೊಂದಿಗೆ ಲಿಖಿತ ಮನವಿಯನ್ನು ಸಲ್ಲಿಸಬಹುದು.

Department of Agriculture ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನಾಂಕವಾಗಿದೆ. ಸಲ್ಲಿಕೆಯಾದ ಮನವಿಗಳನ್ನು ತಾಲೂಕು ಮಟ್ಟದ ತಹಶೀಲ್ದಾರರ ಅಧ್ಯಕ್ಷತೆಯ ಸಮಿತಿಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿವಮೊಗ್ಗ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

District Consumer Disputes Redressal Commission ಹೊಸನಗರ ಕೆನರಾ ಬ್ಯಾಂಕ್ ಸೇವಾ ನ್ಯೂನತೆ, ಗ್ರಾಹಕರಿಗೆ ಪರಿಹಾರ ನೀಡಲು ಆಯೋಗದ ತೀರ್ಪು

0

District Consumer Disputes Redressal Commission ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಎಂ. ಗುಡ್ಡೆಕೊಪ್ಪ ವಾಸಿ ಧನಂಜಯ ಎಂ.ವಿ. ಎಂಬುವವರು ಹೊಸನಗರ ಕೆನರಾ ಬ್ಯಾಂಕ್ ಶಾಖೆಯ ಮೇಲೆ ತಮ್ಮ ಒಡಿ ಖಾತೆ ಹಣ ಕಡಿತಗೊಳಿಸಿ, ಹಣವನ್ನು ಹಿಂದುರುಗಿಸದೇ ಸೇವಾನ್ಯೂನತೆಯನ್ನು ಎಸಗಿದ ಬಗ್ಗೆ ನೀಡಿದ ದೂರಿನ ಕುರಿತು ವಿಚಾರಣೆ ನಡೆಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಹಣವನ್ನು ಹಿಂದುರುಗಿಸುವಂತೆ ಆದೇಶಿಸಿ ತೀರ್ಪು ನೀಡಿದೆ.

ದೂರುದಾರರು ಎದುರುದಾರ ಬ್ಯಾಂಕಿನಲ್ಲಿ ಒಡಿ ಖಾತೆ ಹೊಂದಿದ್ದು, ರೂ. 2.80 ಲಕ್ಷದ ಸೌಲಭ್ಯ ಪಡೆದಿರುತ್ತಾರೆ. ಜೂನ್ 2024 ರಲ್ಲಿ ಯಾವುದೇ ಮುನ್ಸೂಚನೆಯಿಲ್ಲದೆ ಈ ಖಾತೆಯಿಂದ ರೂ. 3,89,544/- ಹಣ ಕಡಿತವಾಗಿ ಉಳಿಕೆ ಮೊತ್ತ ಸೊನ್ನೆ ತೋರಿಸುತ್ತಿದ್ದು, ಈ ವಿಷಯವಾಗಿ ಬ್ಯಾಂಕ್‌ನ್ನು ಸಂಪರ್ಕಿಸಿದಾಗ ವ್ಯವಸ್ಥಾಪಕರು 2 ದಿನಗಳೊಳಗಾಗಿ ಹಣವನ್ನು ಹಿಂದುರುಗಿಸುವುದಾಗಿ ತಿಳಿಸಿರುತ್ತಾರೆ.

ಆದರೆ ಹಣವನ್ನು ಹಿಂದಿರುಗಿಸದಿರುವುದರಿಂದ 2025ರಲ್ಲಿ ಲೀಗಲ್ ನೋಟೀಸ್ ನೀಡಿದ್ದು, ಅದಕ್ಕೂ ಎದುರುದಾರರು ಯಾವುದೇ ಪ್ರತ್ಯುತ್ತರ ನೀಡದೆ ಸೇವಾನ್ಯೂನತೆ ಎಸಗಿರುತ್ತಾರೆ ಎಂದು ಆಯೋಗಕ್ಕೆ ದೂರನ್ನು ಸಲ್ಲಿಸಿರುತ್ತಾರೆ.
District Consumer Disputes Redressal Commission ಆಯೋಗವು ದೂರನ್ನು ದಾಖಲಿಸಿಕೊಂಡು ಎದುರುದಾರರಿಗೆ ನೋಟೀಸ್ ನೀಡಿದ್ದು, ಎದುರುದಾರರು ಆಯೋಗಕ್ಕೆ ತಮ್ಮ ವಕೀಲರ ಮೂಲಕ ಹಾಜರಾಗಿದ್ದು, ಎರಡೂ ಪಕ್ಷಗಾರರು ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲಾತಿಗಳನ್ನು ಪರಿಶೀಲಿಸಿ, ವಾದ ವಿವಾದವನ್ನು ಆಲಿಸಿ, ಎದುರುದಾರರು ದೂರದಾರರ ಒಡಿ ಖಾತೆಯಿಂದ ಹಣವನ್ನು ಕಡಿಗೊಳಿಸಿ ಹಿಂತಿರುಗಿಸದೆ ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ತೀರ್ಮಾನಿಸಿ, ದೂರನ್ನು ಭಾಗಶಃ ಪುರಸ್ಕರಿಸಿ, ಎದುರುದಾರರು ದೂರುದಾರರ ಖಾತೆಯಲ್ಲಿದ್ದ ರೂ.3,89,554 /- ಗಳಿಗೆ ದಿ: 18/02/2025 ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ. 9ರ ಬಡ್ಡಿಯನ್ನು ಸೇರಿಸಿ, ಪೂರ್ತಿ ಹಣ ಪಾವತಿಸುವವರೆಗೆ ನೀಡತಕ್ಕದ್ದು, ಹಾಗೂ ರೂ. 1,00,000/- ಗಳನ್ನು ಮಾನಸಿಕ ವೇದನೆಗೆ ಪರಿಹಾರವಾಗಿ ಮತ್ತು ರೂ. 10,000/- ಗಳನ್ನು ದೂರಿನ ಖರ್ಚು ವೆಚ್ಚಕ್ಕಾಗಿ ಈ ಆದೇಶವಾದ 45 ದಿನಗಳೊಳಗಾಗಿ ದೂರುದಾರರಿಗೆ ಪಾವತಿಸುವಂತೆ ತಪ್ಪಿದ್ದಲ್ಲಿ ವಾರ್ಷಿಕ ಶೇ. 12ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಮಾ. 31 ರಂದು ಆದೇಶಿಸಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಗಂಗಾಧರ ನಾಯ್ಕ್ ಎಂ.ಟಿ. ತಿಳಿಸಿದ್ದಾರೆ.