Tuesday, March 3, 2026
Tuesday, March 3, 2026
Home Blog Page 326

Klive Special Editorial ಪಾಕಿಸ್ತಾನಕ್ಕೆ ಫೈನಲ್ ಟಚ್

0

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನ ಬೇಕಾಬಿಟ್ಟಿ ಕೊಲೆಮಾಡಿದ ಘಟನೆಯು ಪ್ರಪಂಚಾದ್ಯಂತ ಖಂಡಿಸಲ್ಪಟ್ಟಿದೆ.
ಟಿ.ಆರ್.ಎಫ್. ನ ಸೈಫುಲ್ಲಾ ಖಾಲೀದ್ ನೀಡಿರುವ ಹೇಳಿಕೆಯಂತೂ ಹಾಸ್ಯಸ್ಪದವಾಗಿದೆ. 2026 ರಲ್ಲಿ ಕಾಶ್ಮೀರ ಕ್ಜೆ ಸ್ವಾತಂತ್ರ್ಯ ಕೊಡಿಸುತ್ತಾನಂತೆ
ಈಗಾಗಲೇ ಗುರುತಿಸಿದ ಎರಡು
ಉಗ್ರರ ಮನೆಗಳನ್ನ ಧ್ವಂಸಮಾಡಲಾಗಿದೆ.
ಕೇಂದ್ರ ಸರ್ಕಾರವು ಪಾಕಿಸ್ತಾನದ ವಿರುದ್ಧ
ಪ್ರಬಲ ಪ್ರತಿರೋಧ ಮತ್ತು ಸಿಡಿಲಿನಂತಹ
ಕ್ರಮಗಳನ್ನ ಕೈಗೊಂಡಿದೆ.
ದೆಲಿಯಲ್ಲಿನ ವರ್ತಕರು ಇಡೀ ಬಜಾರನ್ನ ಬಂದ್ ಮಾಡಿ ” ಹಮ್ ಮೋದೀಜಿ ಕೆ ಸಾಥ್ ಹೈ” ಎಂಬ ಘೋಷಣೆ ಕೂಗಿದ್ದಾರೆ.
ಸರ್ವಪಕ್ಷಗಳ ಸಭೆಯಲ್ಲೂ ಸಹ‌ ಮೋದಿ ಅವರಿಗೆ ಎಲ್ಲ ರೀತಿಯ ಸಹಕಾರವನ್ನ ‌ವ್ಯಕ್ತಪಡಿಸಲಾಗಿದೆ.

ಪಹಲ್ಗಾಮ್ ನಲ್ಲಿನ ಪರಿಸ್ಥಿತಿ ಛಿದ್ರಛಿದ್ರವಾಗಿದೆ. ಅಲ್ಲಿನ ಸಾಮಾಜಿಕ ಬದುಕೇ ಅಸ್ತವ್ಯಸ್ತ.
ಪ್ತವಾಸಿಗರನ್ನ ನೆಚ್ಚಿಕೊಂಡು ಬಾಳ್ವೆ ಮಾಡುತ್ತಿದ್ದ ಬಾಡಿಗೆ ವಾಹನಗಳ ಚಾಲಕರೀಗ ದುಡಿಮೆ ನಿಂತು ಕಂಗಾಲಾಗಿದ್ದಾರೆ.
ಸುಂದರ ಜಲವಿಹಾರದ ‘ದಾಲ್ ಲೇಕ್ ‘ ಬಿಕೋ ಎನ್ನುತ್ತಿದೆ.
ಅಲಂಕೃತ ದೋಣಿಗಳು ಬರಸಿಡಿಲಿಗ ಸಿಕ್ಕಂತೆ
ನಿಶ್ಚಲವಾಗಿವೆ.
ದಾಲ್ ಸರೋವರದ ನೀರು ,ಅಲೆಗಳೇಳದೆ ಸ್ಥಬ್ಧ.
ನಯನ ಮನೋಹರ ವಾಗಿದ್ದ ಭೂದೃಶ್ಯಕ್ಕೀಗ ಪ್ರೇತ ಕಳೆ.

ಪಹಲ್ಗಾಮ್ ಬಳಿಯ ಆಸ್ಪತ್ರೆ ಸುಸಜ್ಜಿತವಾಗಿದ್ದಲ್ಲಿ ಕನಿಷ್ಢ ಐದು ಮಂದಿಯ ಪ್ರಾಣವುಳಿಯುತ್ತಿತ್ತು.
ಆಸ್ಪತ್ರೆ ಹದಿನೈದು ವರ್ಷಗಳಿಂದ ಸರಿಯಾಗಿ ನಡೆಯುತ್ತಿಲ್ಲ. ನಾವು ರಕ್ತವನ್ನಾದರೂ ನೀಡಿ ಜನರ ಪ್ರಾಣ ಉಳಿಸಲು ಸಿದ್ಧರಿದ್ದೆವು ಎಂದು ಅಲ್ಲಿನ ಸ್ಥಳೀಯರು ಘಟಿಸಿಹೋದ ಶ್ಮಶಾನ ಸದೃಶ ಸನ್ನಿವೇಶದ ಬಗ್ಗೆ ಮರುಕಪಡುತ್ತಾರೆ.

Klive Special Editorial ಒಂದು‌ ಸೂಕ್ಷ್ಮ ವಿಚಾರವನ್ನ ಇಲ್ಲಿ‌ ಗಮನಿಸಬಹುದು‌.
ಜಮ್ಮು,ಕಾಶ್ಮೀರದ ಜನತೆ ಹೊಸದೊಂದು ರಾಜಕೀಯ ವ್ಯವಸ್ಥೆಗೆ ಹೊಂದಿಕೊಂಡಿದ್ದರು.
ಕಳೆದ ದಿನಗಳಲ್ಲಿ ಅನುಭವಿಸಿದ ಕಷ್ಟಕಾರ್ಪಣ್ಯಗಳು ಮರೆಯಾದವು ಎಂದು ನಿಟ್ಟುಸಿರು ಚೆಲ್ಲಿದ್ದರು. ದೈನಿಕ ಜೀವನ ಪ್ರಫುಲ್ಲವಾಗುತ್ತಿತ್ತು…
ಅನ್ನುವಷ್ಟರಲ್ಲೇ ಈ
ಭೀಕರ ಪ್ರಕರಣ ಜರುಗಿದೆ.
ಆಂತರಿಕ ಶತ್ರು‌ನಾಶವಾಗಿದ್ದ. ನೆರೆಹೊರೆ ಸೌಹಾರ್ದ
ಬೆಸೆಯಲಾರಂಭಿಸಿತ್ತು.

ಆದರೆ ಹೊರಗಿನ ಕರಾಳ ಕೈ ಈ ವಾತಾವರಣವನ್ನ. ಕದಕಿ, ಮಲಿನಮಾಡಿದಂತಾಗಿದೆ.
ಸ್ಥಳೀಯರಾರೂ ಸರ್ಕಾರದ ವ್ಯವಸ್ಥೆಯ ಬಗ್ಗೆ ಅಸಮಾಧಾನ ತೋರಿಸಿಲ್ಲ. ಆದರೆ ಟೀಕೆ ಟಿಪ್ಪಣಿಗಳು ಬಂದಿವ. ಪ್ರಜಾಪ್ರಭುತ್ವದಲ್ಲಿ ಇದು ಸ್ವಾಭಾವಿಕ.

ಪಾಕ್ ತನ್ನ ವಾಯುಪ್ರದೇಶದಲ್ಲಿ ಭಾರತೀಯ ವಿಮಾನಗಳ ಸಂಚಾರಕ್ಕೆ ನಿಷೇಧ ಹೇರಿದೆ. ಗಡಿ ನಿಯಂತ್ರಣ ರೇಖೆಯಲ್ಲಿ ಸಣ್ಣಪುಟ್ಟ ಗುಂಡು ಹಾರಿಸುವ ಕ್ಯಾತೆ ತೆಗೆದಿದಿದೆ.
ಆದರೆ ಕುಸಿದ ಆರ್ಥಿಕತೆಯ ನಡುವೆಯೂ ಅದರ ಒಣಜಂಭ ಮಾತ್ರ ನಿಂತಿಲ್ಲವಲ್ಲ.

ಮದ್ದುಗುಂಡುಗಳ ಯುದ್ದದ ಬದಲಿಗೆ ಭಾರತ ಜಲಸ್ಥಂಭನ
( ಸಿಂಧು ನದಿ ಒಪ್ಪಂದ ತಡೆ) , ಪಾಕ್ ನಾಗರಿಕರ ವೀಸಾ ರದ್ದತಿ, ಗಡಿ ಮುಚ್ಚುವಿಕೆ ಮುಂತಾಗಿ‌ ಪಾಕಿಸ್ತಾನದ ಮೂಗು ಹಿಡಿಯುವ ಶಾಸ್ತಿ ಮಾಡಿದೆ.
ಮೂಗು ಮುಚ್ಚಿದರೆ ಉಸಿರಿಗೆ ಬಾಯಿ ತೆರೆಯಲೇ ಬೇಕಲ್ಲ.!!

CM Siddharamaiah ಪಹಲ್ಗಾಮ್ ನರಮೇಧ.ರಾಜ್ಯ ಸಚಿವ ಸಂಪುಟ ದಿಂದ ಖಂಡನಾ ನಿರ್ಣಯ- ಸಿದ್ಧರಾಮಯ್ಯ

0

CM Siddharamaiah ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ನಮ್ಮ ಸರ್ಕಾರವು ತೀವ್ರವಾಗಿ ಖಂಡಿಸುತ್ತದೆ. ಎಲ್ಲ ಮೃತರಿಗೆ ರಾಜ್ಯದ ಜನರ ಪರವಾಗಿ ಸಂತಾಪ ಸಲ್ಲಿಸಲು ತೀರ್ಮಾನಿಸಿದೆ. ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಜಾಲತಾಣ x ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಉಗ್ರರ ದಾಳಿಗಳನ್ನು ಮನುಷ್ಯ ಕುಲದ ಮೇಲೆ ನಡೆಸುತ್ತಿರುವ ಭೀಬತ್ಸ ಕೃತ್ಯಗಳು ಎಂದು ತೀರ್ಮಾನಿಸಬೇಕು. ಎಲ್ಲ ರೀತಿಯ ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಲು ಇಡೀ ದೇಶ ಒಂದಾಗಿ ನಿಂತು ಶ್ರಮಿಸಬೇಕು.

ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಲು ತೀರ್ಮಾನಿಸಲಾಗಿದೆ.

CM Siddharamaiah ಮುಂದೆ ಈ ರೀತಿಯ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ಸರ್ಕಾರವು ರಾಜ್ಯದ ಜನರ ಪರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಇಂದು ನಡೆದ ಸಂಪುಟ ಸಭೆಯು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

0

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಿದ್ದೇನೆ. ಭಾರತದಲ್ಲಿ ನೆಲೆಸಿರುವ ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಇಲಾಖೆ ರಾಜ್ಯಗಳಿಗೆ ಸೂಚನೆ ನೀಡಿದೆ. ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಕೂಡದು. ಪಹಲ್ಗಾಮ್ ಘಟನೆ ಅತ್ಯಂತ ಹೇಯ ಹಾಗೂ ಅಮಾನುಷವಾದುದ್ದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತ್ ಸಡಿಲಗೊಳಿಸಬಾರದಿತ್ತು. ಇಲ್ಲಿ ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ.ಎಂದು ಮಲೆಮಾದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತಾಡುತ್ತಿದ್ದರು

ಮಲೆಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳು ಹಾಗು ಚಾಮರಾಜನಗರ ಜಿಲ್ಲೆಗೆ ಅಗತ್ಯವಿರುವ ಪ್ರಮುಖ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗತ್ತದೆ

ಘಟನೆ ನಡೆದ ಬಳಿಕ ಕ್ರಮ ತೆಗೆದುಕೊಳ್ಳುವುದು ಬೇರೆ. ಘಟನೆಯಾಗದಂತೆ ತೆಗೆದುಕೊಳ್ಳುವ ಕ್ರಮಗಳು ಬೇರೆ. ಅದನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು.

CM siddharamaih ಪುಲ್ವಾಮಾದಲ್ಲಿ 40 ಸೈನಿಕರು ಪ್ರಾಣತೆತ್ತರು. ಈ ಘಟನೆಯಲ್ಲಿ 28 ಜನ ನಾಗರಿಕರು ಮೃತರಾಗಿದ್ದಾರೆ. ಇದನ್ನು ತಪ್ಪಿಸಲು ಕ್ರಮ ವಹಿಸಬೇಕಿತ್ತು. ಇಂಥ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಉಗ್ರರು ಯಾವುದೇ ಧರ್ಮಕ್ಕೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ, ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಾವು, ನಮ್ಮ ಸರ್ಕಾರ ಕೊಡುತ್ತದೆ ಮದು ತಿಳಿಸಿದರು

Rotary Shivamogga ರೋಟರಿ ಸಂಸ್ಥೆಯಿಂದ ‌ನಿಸ್ವಾರ್ಥ ಸೇವೆ- ಜಿ.ಕಿರಣ್ ಕುಮಾರ್

0

Rotary Shivamogga ರೋಟರಿ ಸಂಸ್ಥೆಯು ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸೇವೆ ಮಾಡುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್ ಹೇಳಿದರು.
ಬಿಆರ್‌ಪಿಯ ರಾಷ್ಟ್ರೀಯ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ನಾರಾಯಣ ಹೃದಯಾಲಯ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಆರೋಗ್ಯದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ರೋಟರಿ ಸಂಸ್ಥೆಯ ಸಮಾಜಮುಖಿ ಕಾರ್ಯಕ್ರಮಗಳನ್ನು ವಿವರಿಸುತ್ತಾ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನದಲ್ಲಿ ಮಹತ್ತರ ಸೇವೆ ಸಲ್ಲಿಸಿದೆ. ರಸ್ತೆ ಸುರಕ್ಷತಾ, ಹಸಿರು ಮತ್ತು ನೀರಿನ ಜಾಗೃತಿ, ಶಿಕ್ಷಣ ಮತ್ತು ಕಾನೂನಿನ ಅರಿವು, ಮತ್ತು ಆರೋಗ್ಯ ಮತ್ತು ಸ್ವಚ್ಛತಾ ಕಾರ್ಯಕ್ರಮಗಳ ಬಗ್ಗೆ ರೋಟರಿ ಸಂಸ್ಥೆಯು ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
Rotary Shivamogga ಶಿಬಿರಾರ್ಥಿಗಳು ಇಂತಹ ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣ , ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಮಾರ್ಪಡುವಲ್ಲಿ ಸಹಕಾರಿಯಾಗಿದೆ. ಉತ್ತಮ ಬಾಂಧವ್ಯ ಬೆಳೆಯುತ್ತದೆ. ವಿದ್ಯಾರ್ಥಿ ಶಕ್ತಿ ರಾಷ್ಟ್ರದ ಶಕ್ತಿ ಎಂದರು.
ಹಿರಿಯ ತಜ್ಞ ವೈದ್ಯ ಡಾ. ಶ್ರೀವತ್ಸ ಮಾತನಾಡಿ, ಹೃದಯ, ಶ್ವಾಸಕೋಶದ ಬಗ್ಗೆ ವಿಶೇಷ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. 80ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದರು.
ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಮಂಜುನಾಥ್ ಡಿ ಎಸ್ ಹಾಗೂ ನಾರಾಯಣ ಹೃದಯಾಲಯದ ವೈದ್ಯಾಧಿಕಾರಿ ಡಾ. ಅಭಿಲಾಶ್ ಹಾಗೂ ಗಣೇಶ್, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಈಶ್ವರ ಬಿವಿ ಹಾಗೂ ಮಾಜಿ ವಲಯ ಸೇನಾನಿ ಧರ್ಮೇಂದ್ರ ಸಿಂಗ್ ಹಾಗೂ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಸಿಬ್ಬಂದಿ ಉಪಸಿತರಿದ್ದರು.

Karnataka Minorities Development Corporation ಅರಿವು ಯೋಜನೆ, ಸಾಲ ಸೌಲಭ್ಯ ಪಡೆಯಲು ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಪ್ರಕಟಣೆ

0

Karnataka Minorities Development Corporation 2025-26 ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಸಮುದಾಯ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(ಕೆಇಎ) ಆಯ್ಕೆಯಾಗುವ ಫ್ರೆಶ್/ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅರಿವು ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೃತ್ತಿಪರ ಕೋರ್ಸ್ಗಳಾದ ಎಂಬಿಬಿಎಸ್, ಬಿಡಿಎಸ್, ಬ್ಯಾಚುಲರ್ ಆಫ್ ಆಯುಷ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬ್ಯಾಚುಲರ್ ಆಫ್ ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ, ಫಾರ್ಮಸಿ, ಅಗ್ರಿಕಲ್ಚರ್ ಸೈನ್ಸ್, ವೆಟರ್ನರಿ ಹಾಗೂ ಫಾರ್ಮ್ ಸೈನ್ಸ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಈ ಸೌಲಭ್ಯವನ್ನು ಒದಗಿಸಲಾಗುತ್ತದೆ.

Karnataka Minorities Development Corporation ಮೇ.5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, www.kmdconline.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಎಸ್‌ಎಸ್‌ಎಲ್‌ಸಿ ಮಾರ್ಕ್ಸ್ ಕಾರ್ಡ್/ಪಿಯುಸಿ ಮಾರ್ಕ್ಸ್ ಕಾರ್ಡ್, ಆಧಾರ್ ಕಾರ್ಡ್, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ(8 ಲಕ್ಷ ಒಳಗಿದ್ದವರಿಗೆ), ವಿದ್ಯಾರ್ಥಿ/ ಪೋಷಕರ ಫೋಟೋ, ಸಿಇಟಿ/ನೀಟ್ ಹಾಲ್ ಟಿಕೆಟ್, ಇಂಡೆಮ್ನಿಟಿ ಬಾಂಡ್/ನೋಟರಿ, ವಿದ್ಯಾರ್ಥಿ ಮತ್ತು ಪೋಷಕರ ಸೆಲ್ಫ್ ಡಿಕ್ಲರೇಷನ್ ಲೆಟರ್ ಈ ಎಲ್ಲಾ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಅಚ್ಚುತರಾವ್ ಲೇ ಔಟ್, 4ನೇ ತಿರುವು, ನಂಜಪ್ಪ ಆಸ್ಪತ್ರೆ ಮುಂಭಾಗ ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182228262 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪರು ತಿಳಿಸಿದ್ದಾರೆ.

Jog Falls ಪ್ರವಾಸಿಗರೇ, ಗುಡ್ ನ್ಯೂಸ್, ಜೋಗ ಜಲಪಾತ ವೀಕ್ಷಿಸಲು ಮೇ1 ರಿಂದ ಅವಕಾಶ

0

Jog Falls ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.

ಮೇ 01 ರಿಂದ ಸಾರ್ವಜನಿಕರ ಹಾಗೂ ಪ್ರವಾಸಿಗರಿಗೆ ಜೋಗ ಜಲಪಾತದ ವೀಕ್ಷಣೆಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರಿದ ಮುಖ್ಯ ಕಾರ್ಯ ನಿರ್ವಹಣಾದಿಕಾರಿಗಳು ತಿಳಿಸಿದ್ದಾರೆ.

S.N.Chennabasappa ಇಡೀ ಶಿವಮೊಗ್ಗವೇ ಒಟ್ಟಾಗಿ ಮೃತ ಮಂಜುನಾಥ್ ರಾವ್ ಗೆ ಶ್ರದ್ಧಾಂಜಲಿ ಸಲ್ಲಿಸಿದೆ- ಶಾಸಕ ಚೆನ್ನಿ

0

S.N.Chennabasappa ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಸಂಭವಿಸಿದ ಹೇಡಿ ಭಯೋತ್ಪಾದಕರ ಭಯಾನಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಶಿವಮೊಗ್ಗದ ಪ್ರವಾಸಿಗ ಶ್ರೀ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರವು ಇಂದು ಶಿವಮೊಗ್ಗ ನಗರಕ್ಕೆ ಆಗಮನದ ಸಂದರ್ಭದಲ್ಲಿ ಸಕಲ ಗೌರವಗಳೊಂದಿಗೆ ನಮನ ಸಲ್ಲಿಸಲಾಯಿತು.

ಸಾಮಾನ್ಯ ನಾಗರಿಕನಾಗಿ ಪ್ರವಾಸಕ್ಕೆ ಹೊರಟಿದ್ದ ಮಂಜುನಾಥ್ ರಾವ್ ಅವರು, ಭಯೋತ್ಪಾದಕ ಮುಸಲ್ಮಾನರ ಇಂತಹ ಹೇಡಿತನದ ಕೃತ್ಯಕ್ಕೆ ಹತರಾಗಿರುವುದು ಇಡೀ ಶಿವಮೊಗ್ಗದಲ್ಲಿ ಆಘಾತದ ಛಾಯೆ ಹರಡಿದ್ದು, ಇಡೀ ಶಿವಮೊಗ್ಗ ಒಗ್ಗಟ್ಟಾಗಿ ದಾಳಿಯಲ್ಲಿ ಮಡಿದ ಮಂಜುನಾಥ್ ಅವರನ್ನು ಶ್ರದ್ಧಾಪೂರ್ವಕವಾಗಿ ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಿದೆ.

ಅಂತಿಮ ದರ್ಶನದ ವೇಳೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸಂಸದರಾದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್ ಅರುಣ್, ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಜಗದೀಶ್, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು, ಬಿಜೆಪಿ-ಪರಿವಾರ ಸಂಘಟನೆಗಳ ಪ್ರಮುಖರು, ಸಾವಿರಾರು ಕಾರ್ಯಕರ್ತರು ಹಾಗೂ ಶಿವಮೊಗ್ಗದ ನಾಗರಿಕರು ಭಾಗಿಯಾಗಿ ಗೌರವಪೂರ್ವಕವಾಗಿ ಅಂತಿಮ ನಮನವನ್ನು ಸಲ್ಲಿಸಿದ್ದಾರೆ.

ಇಡೀ ನಗರ ಶೋಕಾಚ್ಛನ್ನವಾಗಿದ್ದು, ಅವರ ಅಂತಿಮ ಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿ, ದೇಶಕ್ಕಾಗಿ ಬಲಿಯಾದ ಮಂಜುನಾಥ್ ಅವರ ತ್ಯಾಗವನ್ನು ಸ್ವರಿಸುತ್ತಾ, ರಸ್ತೆಗಳಲ್ಲಿ ಜನರು ದಾರಿಯುದ್ದಕ್ಕೂ ನಿಂತು, “ಮಂಜುನಾಥ್ ರಾವ್ ಅಮರ್ ರಹೇ” ಎಂಬ ಘೋಷಣೆಗಳೊಂದಿಗೆ ಶ್ರದ್ಧಾಪೂರ್ವಕವಾಗಿ ನಮನ ಸಲ್ಲಿಸಿದ್ದಾರೆ.

ಯಾವುದೇ ಅಡೆತಡೆಗಳಿಲ್ಲದೆ ಅವರ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರುವಲ್ಲಿ ಸಹಕರಿಸಿದ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರಿಗೆ, ಅವರ ಕುಟುಂಬದವರ ಯೋಗ ಕ್ಷೇಮ ನೋಡಿಕೊಂಡು ಸುರಕ್ಷಿತವಾಗಿ ಕರ್ನಾಟಕಕ್ಕೆ ಕರೆತಂದ ಶ್ರೀ ತೇಜಸ್ವಿ ಸೂರ್ಯ ಅವರಿಗೆ, ರಾಜ್ಯ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರಿಗೆ ಹಾಗೂ ಕೇಂದ್ರ-ರಾಜ್ಯದ ನಾಯಕರಿಗೆ ಈ ಸಂದರ್ಭದಲ್ಲಿ ಶಿವಮೊಗ್ಗದ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ.

ಅವರ ಕುಟುಂಬದವರೊಂದಿಗೆ ಈ ದುಃಖದ ಸಂದರ್ಭದಲ್ಲಿ ನಾವು ಸದಾ ಇದ್ದೇವೆ ಎಂಬ ಭರವಸೆಯನ್ನು ನೀಡುತ್ತಾ, ಭಗವಂತನು ಅವರಿಗೆ ಈ ದುಃಖವನ್ನು ಭರಿಸುವ ಆತ್ಮಸ್ಥೈರ್ಯ, ಶಕ್ತಿ ಮತ್ತು ಸಮಾಧಾನವನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.


Dr. Rajkumar ಡಾ.ರಾಜ್ ಅವರಿಗಿದ್ದಷ್ಟು ಅಭಿಮಾನಿಗಳು ಬೇರೆ ಯಾವ ನಟರಿಗೂ ಇಲ್ಲ: ವಿ.ಮೂರ್ತಿ

0

Dr. Rajkumar ವರನಟ ನಟಸಾರ್ವಭೌಮ ಕನ್ನಡದ ಮೇರು ನಟ ಡಾಕ್ಟರ್ ರಾಜಕುಮಾರ್ ಕನ್ನಡ ಚಿತ್ರರಂಗಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಕನ್ನಡ ನಾಡು ನುಡಿ ಭಾಷೆ ಹಾಗೂ ಕನ್ನಡಕ್ಕಾಗಿ ಹೋರಾಡಿದ ಏಕೈಕ ನಟ ಎಂದರೆ ಅವರೇ ರಾಜಕುಮಾರ್ ಎಂದು ಜ್ವಾಲಾಮುಖಿ ಡಾಕ್ಟರ್ ರಾಜಕುಮಾರ್ ಸಂಘ ನಗರ ಘಟಕ ಅಧ್ಯಕ್ಷರಾದ ವಿ.ಮೂರ್ತಿಯವರು ಅಭಿಮತ ವ್ಯಕ್ತಪಡಿಸಿದರು.

ಡಾಕ್ಟರ್ ರಾಜಕುಮಾರ್ ಅವರ 96ನೇಯ ಜನ್ಮದಿನದ ಅಂಗವಾಗಿ ಸೀನಪ್ಪ ಶೆಟ್ಟಿ ಸರ್ಕಲ್ ನಲ್ಲಿ ತಮ್ಮ ಅಭಿಮಾನಿ ಬಳಗದವರೊಂದಿಗೆ ರಾಜಕುಮಾರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಕನ್ನಡ ಚಿತ್ರರಂಗದಲ್ಲಿ ಎಂತಹ ಪಾತ್ರಕ್ಕೂ ಸೈ ಎನಿಸುವ ರಾಜ ಅವರು. ನಮಗೆ ತಿಳಿದ ಹಾಗೆ ಕನ್ನಡ ಚಿತ್ರರಂಗದಲ್ಲಿ ಇವರಷ್ಟು ಅಭಿಮಾನಿ ಬಳಗ ಬೇರೆ ಯಾವ ಚಿತ್ರರಂಗದಲ್ಲೂ ಇಲ್ಲ. ಗೋಕಾಕ್ ಚಳುವಳಿಯಲ್ಲಿ ಕನ್ನಡಿಗರ ಎದೆಯಲ್ಲಿ ಕನ್ನಡತನವನ್ನು ಉಳಿಸುವಲ್ಲಿ ಹೋರಾಟ ಮಾಡಿದ ಕನ್ನಡದ ಒಬ್ಬ ಸಂತ. ಅಪ್ರತಿಮ ಹಾಡುಗಾರ, ಯೋಗಪಟು ಹಾಗೂ ಸಮಾಜಮುಖಿಯಾಗಿ ಹಲವಾರು ಸೇವೆಗಳನ್ನು ಮಾಡಿದಂತಹ ಡಾಕ್ಟರ್ ರಾಜಕುಮಾರ್ ಅವರು ಇಂದಿಗೂ ಕನ್ನಡಿಗರ ಹೃದಯದಲ್ಲಿ ಅಚ್ಚರಿಯದೆ ಉಳಿದಿದ್ದಾರೆ ಎಂದು ನುಡಿದರು.

ಜ್ವಾಲಾಮುಖಿ ಡಾಕ್ಟರ್ ರಾಜಕುಮಾರ್ ನಗರ ಘಟಕ ಸಂಘದ ಗೌರವಾಧ್ಯಕ್ಷರಾದ ಟಿ.ಆರ್.ಅಶ್ವಥ್ ನಾರಾಯಣ್ ಶೆಟ್ಟಿ ಅವರು ಐವತ್ತು ಕೆಜಿ ಕೇಕ್ ಕಟ್ ಮಾಡಿ ಸಾರ್ವಜನಿಕರಿಗೆ ವಿತರಿಸಿ ಮಾತನಾಡಿದ ಅವರು, ರಾಜಕುಮಾರ ಅವರ ವ್ಯಕ್ತಿತ್ವಕ್ಕೆ ಅವರೇ ಸಾಟಿ. ಅವರಿಗೆ ಕನ್ನಡದ ಬಗ್ಗೆ ಇದ್ದಂತಹ ಅಭಿಮಾನ ಎಂದು ಮರೆಯಲು ಸಾಧ್ಯವಿಲ್ಲ. ಕನ್ನಡ ಚಿತ್ರರಂಗದ ಒಬ್ಬ ದೇವತಾ ಮನುಷ್ಯ. ಇಂತಹ ವ್ಯಕ್ತಿಯನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಸೊರಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

Dr. Rajkumar ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ನಾಗಭೂಷಣ್, ಪ್ರಧಾನ ಕಾರ್ಯದರ್ಶಿ ದೇವರಾಜ್, ಕಾರ್ಯದರ್ಶಿ ಮಹೇಶ್, ನಿರ್ದೇಶಕರಗಳಾದ ದೇವೇಂದ್ರಪ್ಪ, ಗೋಪಿನಾಥ್, ನರಸಿಂಹ, ನಟೇಶ್ ಹಾಗೂ ಶ್ರೀನಿಧಿ ಸಂಸ್ಥೆಯ ಉದ್ಯಮಿಗಳು ಹಾಗೂ ಕೆಲಸಗಾರರು ಮತ್ತು ಸಾರ್ವಜನಿಕರು ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ರಾಜಕುಮಾರ್ ಅವರ ಗೀತೆಗಳು ಹೇಳುವುದರ ಜೊತೆಗೆ ಸಂಭ್ರಮಿಸಿದರು.


Department of Youth Empowerment and Sports ಶಿವಮೊಗ್ಗ ಕ್ರೀಡಾಸಂಕೀರ್ಣದಲ್ಲಿ ಈಜು, ಸ್ಕೇಟಿಂಗ್, ಲಾನ್ ಟೆನಿಸ್ ಬೇಸಿಗೆ ಶಿಬಿರ

0

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಗರದ ಸ್ವಾಮಿ ವಿವೇಕಾನಂದ ಬಡಾವಣೆಯ ಕ್ರೀಡಾ ಸಂಕೀರ್ಣದಲ್ಲಿ ಮಕ್ಕಳಿಗಾಗಿ 3ನೇ ಹಂತದಲ್ಲಿ ಬೇಸಿಗೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಈ ಬೇಸಿಗೆ ಶಿಬಿರವು ಮೇ 02 ರಿಂದ 25 ರವರೆಗೆ 21 ದಿನಗಳು ನಡೆಯಲಿದ್ದು, ವಿಶೇಷವಾಗಿ ಈಜು, ಸ್ಕೇಟಿಂಗ್ ಮತ್ತು ಲಾನ್ ಟೆನ್ನಿಸ್ ಕ್ರೀಡೆಗಳಲ್ಲಿ ನುರಿತ ಕ್ರೀಡಾ ತರಬೇತುದಾರರಿಂದ ಬೆಳಿಗ್ಗೆ ಮತ್ತು ಸಂಜೆಯ ಅವಧಿಯಲ್ಲಿ ತರಬೇತಿ ನೀಡಲಾಗುವುದು. ವಿಶೇಷವಾಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರೀಕರಿಗೆ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗುವುದು. Department of Youth Empowerment and Sports ವಾರದ ಕೊನೆಯ ಶನಿವಾರ ಮತ್ತು ಭಾನುವಾರಗಳಂದು ಈಜು ತರಬೇತಿಯನ್ನು ಪಡೆಯುವ ಅವಕಾಶವಿದ್ದು, ಪ್ರತೀ ಭಾನುವಾರ ಸಹ ಈಜು ತರಬೇತಿಯನ್ನು ಪಡೆಯಬಹುದಾಗಿದೆ. ವಸತಿಶಾಲೆ/ ಪ್ರೌಢಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲಿನಲ್ಲಿ ಅಂದರೆ ಜೂನ್ ತಿಂಗಳ ಪ್ರಾರಂಭದಲ್ಲಿ ವಾರಕ್ಕೆ ಒಂದು ದಿನ ಅಥವಾ ಎರಡು ದಿನದ ತರಬೇತಿಯನ್ನು ಪಡೆಯುವ ಅವಕಾಶವನ್ನು ನೀಡಲಾಗುತ್ತಿದ್ದು, ಆಸಕ್ತ ಶಾಲಾ/ಕಾಲೇಜುಗಳು ಹೆಚ್ಚಿನ ಮಾಹಿತಿಯನ್ನು ಪಡೆದು ಇದರ ಸದುಪಯೋಗವನ್ನು ಪಡೆದುಕೊಳ್ಳುವುದು.ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳಲಿಚ್ಚಿಸುವ ಕ್ರೀಡಾಸಕ್ತರು ಮಾಹಿತಿಗಾಗಿ ಮೊ.9743820293, 6362200751 (ಈಜು), 7760921936 (ಸ್ಕೇಟಿಂಗ್), 8374335635 (ಟೆನ್ನಿಸ್) ಇವರನ್ನು ಸಂಪರ್ಕಿಸುವಂತೆ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

CM Siddharamaiah ಪಹಲ್ಗಾಂ ನಿಂದ ಉಳಿದ 180‌ ಕನ್ನಡಿಗರು ಕರ್ನಾಟಕಕ್ಕೆ ಸುರಕ್ಷಿತವಾಗಿ ಕರೆತಂದ ಸಚಿವ‌ ಸಂತೋಷ್ ಲಾಡ್

0

CM Siddharamaiah ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಆದೇಶದ ಮೇರೆಗೆ
ಕಾಶ್ಮೀರದ ಪಹಲ್ಗಾಮ್ ನಲ್ಲಿ ಸಿಲುಕಿದ್ದ ಕಾರ್ಮಿಕ ಸಚಿವರುಕನ್ನಡಿಗರನ್ನು ಕರೆತಂದಿದ್ದಾರೆ.

ಸಿಎಂ ಸೂಚನೆ ಮೇರೆಗೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಚಿವ ಸಂತೋಷ್ ಲಾಡ್ ಅವರು ಪಹಲ್ಗಮ್ನಿಂದ ಸುಮಾರು 180 ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತಂದಿದ್ದಾರೆ.

ಬುಧವಾರ ಬೆಳಗಿನ ಜಾವ 3.00 ಕ್ಕೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಚಿವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಕನ್ನಡಿಗರನ್ನು ಕರೆತಂದಿದ್ದಾರೆ.