Saturday, February 7, 2026
Saturday, February 7, 2026
Home Blog Page 33

District Legal Services Authority ಅಪಾಯ & ಸಂಕಷ್ಟ ಪರಿಸ್ಥಿತಿಯಲ್ಲಿನ ಮಹಿಳೆ ಮತ್ತು ಮಕ್ಕಳ ರಕ್ಷಣೆ “ಅಕ್ಕ ಪಡೆ” ಯ ಪ್ರಾಥಮಿಕ ಉದ್ದೇಶ- ಬಿ.ನಿಖಿಲ್.

0

District Legal Services Authority ಸಮಾಜಘಾತುಕ ಶಕ್ತಿಗಳು ಮಹಿಳೆಯರು ಮತ್ತು ಮಕ್ಳಳಿಗೆ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಯಾವುದೇ ರೀತಿಯ ದೌರ್ಜನ್ಯವೆಸಗುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ‘ಅಕ್ಕ’ ಪಡೆ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ತಿಳಿಸಿದರು..
ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಯೋಗದಲ್ಲಿ ನೂತನವಾಗಿ ರಚಿಸಲಾಗಿರುವ ‘ಅಕ್ಕ ಪಡೆ’ ಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ಅಪಾಯದಲ್ಲಿರುವ ಮತ್ತು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕ ಪಡೆಯ ಪ್ರಾಥಮಿಕ ಉದ್ದೇಶವಾಗಿದೆ. ಇಡೀ ರಾಜ್ಯದಲ್ಲಿ ಬೇರೆ ಬೇರೆ ಹೆಸರಲ್ಲಿ ಈ ಪಡೆ ಕೆಲಸ ಮಾಡುತ್ತಿದೆ. ವಿಶೇಷವಾಗಿ ಶಾಲಾ ಕಾಲೇಜು ಹೆಣ್ಣುಮಕ್ಕಳು, ಮಹಿಳೆಯರ ರಕ್ಷಣೆಗಾಗಿ ಹಾಗೂ ಅವರಿಗೆ ಮಾನಸಿಕ ಧೈರ್ಯ ನೀಡಲು ಪಡೆ ರಚನೆಯಾಗಿದೆ.
ಪ್ರತಿ ದಿನ ಎರಡು ಪಾಳಿಗಳಲ್ಲಿ ಅಕ್ಕ ಪಡೆ ಕೆಲಸ ಮಾಡಲಿದೆ. ಈ ಪಡೆ ಕಾರ್ಯನಿರ್ವಹಣೆಗಾಗಿ ಹೊಸ ವಾಹನವನ್ನು ನೀಡಿದ್ದು, ಈ ವಾಹನವು ಪಡೆಯೊಂದಿಗೆ ಶಾಲಾ-ಕಾಲೇಜು, ಜನ ನಿಭಿಡ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲಿದೆ. ಸಹಾಯವಾಣಿ ಸಂಖ್ಯೆಗಳಾದ 112 ಮತ್ತು 1098 ಕುರಿತು ಹಾಗೂ ಕಾನೂನುಗಳ ಬಗ್ಗೆಯೂ ಜಾಗೃತಿ ಮೂಡಿಸಲಿದೆ. ಮಹಿಳಾ ಗೃಹರಕ್ಷಕಿಯರು ಹಾಗೂ ಮಹಿಳಾ ಅಧಿಕಾರಿಗಳನ್ನೇ ಈ ಪಡೆಗೆ ನೇಮಿಸಲಾಗಿದ್ದು, ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಮತ್ತು ಸ್ವತಂತ್ರವಾಗಿ ಮಾತನಾಡಿ, ಅಕ್ಕ ಪಡೆಯ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. ನಂತರ ಅವರು ಸಭೆಯಲ್ಲಿ ಮಾತನಾಡಿ, ತರಬೇತಿ ಪಡೆದ ಅಕ್ಕ ಪಡೆಯು ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ಮತ್ತು ಮಹಿಳೆಯರು ಮತ್ತು ಮಕ್ಕಳನ್ನು ಒಳಗೊಂಡ ಸಂಕಷ್ಟದ ಕರೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತದೆ. ಕಿರುಕುಳ, ಕೌಟುಂಬಿಕ ಹಿಂಸೆ, ಈವ್ ಟೀಸಿಂಗ್ ಅಥವಾ ಯಾವುದೇ ರೀತಿಯ ದೌರ್ಜನ್ಯ ಎದುರಿಸುತ್ತಿರುವ ಮಹಿಳೆಯರು ಮತ್ತು ಹದಿ ಹರೆಯದ ಹೆಣ್ಣು ಮಕ್ಕಳು, ಬಾಲ ಕಾರ್ಮಿಕ ಪದ್ದತಿ, ಭಿಕ್ಷಾಟನೆ, ಮಾದಕ ದ್ರವ್ಯ ಅಥವಾ ನಿಂದನೆಗೆ ಒಳಗಾದ ಮಕ್ಕಳು ಈ ಯೋಜನೆಯ ಉದ್ದೇಶಿತ ಫಲಾನುಭವಿಗಳಾಗಿದ್ದು, ಅಕ್ಕ ಪ್ರತಿ ದಿನ ಎರಡು ಪಾಳಿಗಳಲ್ಲಿ ನಗರ ಮತ್ತು ಹೊರವಲಯದ ಬಸ್ ನಿಲ್ದಾಣ, ಮಾರ್ಕೆಟ್, ದೇವಸ್ಥಾನ, ಪಾರ್ಕ್ಗಳು, ಶಾಲಾ-ಕಾಲೇಜುಗಳ ಬಳಿ, ಲೇಡಿಸ್ ಹಾಸ್ಟೆಲ್, ಜನ ನಿಭಿಡ ಪ್ರದೇಶಗಳು, ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ನಿರ್ವಹಣೆ ಮಾಡಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

District Legal Services Authority ಅಕ್ಕ ಪಡೆ ರಚನೆಯು ಮಹಿಳಾ ಸಬಲೀಕರಣದೆಡೆ ಬಹು ದೊಡ್ಡ ಹೆಜ್ಜೆಯಾಗಿದೆ. ಮಹಿಳೆ ಸಬಲವಾಗಲು ಸರಿಯಾದ ಶಿಕ್ಷಣ ಅಗತ್ಯವಿದ್ದು, ಶಾಲಾ-ಕಾಲೇಜುಗಳಿಗೆ ಹೋಗಿ ಬರುವ ವೇಳೆ ಹಾಗೂ ಸಾಮಾಜಿಕ ಜೀವನದಲ್ಲಿ ಆಕೆಗೆ ಸುರಕ್ಷಿತ ವಾತಾವರಣ ಬೇಕು. ಇಂತಹ ವಾತಾವರಣವನ್ನು ಅಕ್ಕ ಪಡೆ ನಿರ್ಮಿಸಲು ಸಹಕಾರಿಯಾಗಿದೆ.
ಜಿಲ್ಲೆಯಲ್ಲಿ ಹೆಣ್ಣುಮಕ್ಕಳು, ಮಹಿಳೆಯರಿಗೆ ಕಿರುಕುಳ ನೀಡುವಂತಹ ಘಟನೆಗಳು ಕಡಿಮೆ ಇದೆ. ಆದರೂ ಕೆಲವು ಇಂತಹ ಘಟನೆಗಳು ನಡೆಯುತ್ತಿರುತ್ತವೆ. ಸಮ್ಮಿತಿಯ ಪ್ರಕರಣಗಳಲ್ಲಿ ತದನಂತರ ಹೆಣ್ಣುಮಕ್ಕಳಿಗೆ ಫೋಟೊ , ವಿಡಿಯೋ ತೋರಿಸಿ ಬ್ಲಾಕ್‌ಮೇಲ್ ಮಾಡುವಂತಹ ಅಪರಾಧಗಳೂ ನಡೆಯುತ್ತಿದ್ದ್ದು, ಅಕ್ಕ ಪಡೆಯಿಂದ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬಹುದಾಗಿದೆ.
ಪೋಕ್ಸೋ ಪ್ರಕರಣಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ‘ಅಕ್ಕ’ ಸಹಕಾರಿಯಾಗಲಿದೆ. ಹೆಣ್ಣುಮಕ್ಕಳು ತಮಗಾದ ಅನ್ಯಾಯ, ಕಿರುಕುಳ, ದೌರ್ಜನ್ಯ ಕುರಿತು ಅಂಜಿಕೆ ಇಲ್ಲದೇ, ಧೈರ್ಯದಿಂದ ಹೇಳಬೇಕು. ಸಹಾಯವಾಣಿ ಸಂಖ್ಯೆ 112 ಮತ್ತು 1098 ಗೆ ಕರೆ ಮಾಡಿ ತಿಳಿಸಬಹುದು. ಹೀಗೆ ಕರೆ ಮಾಡಿದವರ ಮಾಹಿತಿ, ಕರೆ ಮಾಡಿದ ವಿಷಯಗಳನ್ನೆಲ್ಲ ಗೌಪ್ಯವಾಗಿ ಇಡಲಾಗುವುದು. ಆದ್ದರಿಂದ ತೊಂದರೆಗಳನ್ನು ನಿರ್ಭೀತಿಯಿಂದ ಹೇಳಿಕೊಳ್ಳಿರಿ. ಹಾಗೂ ನಿರ್ಭಯವಾಗಿ ಅಕ್ಕ ಪಡೆ ಸೌಲಭ್ಯವನ್ನು ಬಳಸಿಕೊಳ್ಳಿರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆದ ಸಂತೋಷ್ ಎಂ ಎಸ್, ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಎಸ್‌ಪಿ ಕಾರಿಯಪ್ಪ, ಕೆಎಸ್‌ಆರ್ ಪಿ ಕಮಾಂಡೆಂಟ್ ಯುವಕುಮಾರ್, ಗೃಹರಕ್ಷಕ ಕಮಾಂಡೆಂಟ್ ಚೇತನ್, ಡಿವೈಎಸ್‌ಪಿ ಬಾಬು ಅಂಜಿನಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಶಶಿರೇಖಾ, ಡಿಸಿಪಿಓ ಮಂಜುನಾಥ್, ಡಾ.ಸಂತೋಷ್ ಕುಮಾರ್, ಡಿಡಿಪಿಯು, ಡಿಡಿಪಿಐ, ಕಾಲೇಜು ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Shivamogga District Chamber of Commerce and Industry ಮಹಿಳೆಯರು ಸ್ವಾವಲಂಬಿಗಳಾಗಲು ಪ್ರೋತ್ಸಾಹ ಮತ್ತು ಬೆಂಬಲ ಅಗತ್ಯವಿದೆ : ರಮೇಶ್ ಹೆಗಡೆ

0

Shivamogga District Chamber of Commerce and Industry ಉದ್ಯಮ, ಆಹಾರ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಪ್ರೋತ್ಸಾಹ ಹಾಗೂ ಬೆಂಬಲ ನೀಡುವ ಅಗತ್ಯವಿದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ರಮೇಶ್ ಹೆಗಡೆ ಹೇಳಿದರು.
ಪಂಪ ನಗರದ ಗುತ್ತ್ಯಪ್ಪ ಕಾಲೋನಿಯಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಆಯೋಜಿಸಿದ್ದ ಅಂತರ ರಾಜ್ಯ ಮಟ್ಟದ ಮಲೆನಾಡು ಮೇಳ2026 ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿ ಉನ್ನತ ಸ್ಥಾನಗಳನ್ನು ಅಲಂಕರಿಸುತ್ತಿದ್ದಾರೆ ಎಂದು ತಿಳಿಸಿದರು. ಮಹಿಳೆಯರು ಸ್ವಾವಲಂಬಿಗಳಾಗಬೇಕು ತಮ್ಮ ಬದುಕಿನ ಜಂಜಾಟದೊಂದಿಗೆ ಇಂತಹ ಮೇಳಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಹಿಳೆಯರು ಸಮಾಜದಲ್ಲಿ ಪರಿಪೂರ್ಣತೆಯನ್ನು ಹೊಂದುತ್ತಾರೆ ಎಂದು ನುಡಿದರು.
ಒಕ್ಕಲಿಗರ ಮಹಿಳಾ ವೇದಿಕೆಯ ಅಧ್ಯಕ್ಷರಾದ ಪ್ರೇಮಾ ವೆಂಕಟೇಶ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ , ಇಂತಹ ಮೇಳಗಳ ಆಯೋಜನೆಯಿಂದ ಸಮಾಜದ ಎಲ್ಲರೊಂದಿಗೆ ಓಡನಾಟ ಸಂಪರ್ಕ ಹೆಚ್ಚಲಿದ್ದು, ಆರ್ಥಿಕವಾಗಿ ಸಬಲರಾಗುತ್ತಾರೆ ಎಂದರು. ಶಿವಮೊಗ್ಗ ಜಿಲ್ಲೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್, ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯಮಟ್ಟದ ಮಲೆನಾಡು ಮೇಳ ಆಯೋಜಿಸಿದ್ದು, ಈ ಮೇಳದಲ್ಲಿ ಗೃಹಪಯೋಗಿ ವಸ್ತುಗಳು, ಅಲಂಕಾರಿಕ ಸಾಮಾಗ್ರಿಗಳು, ಮನೆಯಲ್ಲಿ ತಯಾರಿಸಿದ ರುಚಿಕರ ಸಸ್ಯಾಹಾರಿ ಹಾಗು ಮಾಂಸಾಹಾರಿ ತಿನುಸುಗಳ ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ ಈ ಬಾರಿಯ ತುಂಬಾ ವಿಶೇಷ ಅಂದರೆ ವಾರಣಾಸಿಯಿಂದ ವಿಶೇಷ ಬನಾರಸ್ಸು ಸ್ಯಾರಿ ಅಂಗಡಿಯವರು ಬೆಂಗಳೂರು ಮಂಗಳೂರು ಮಡಿಕೇರಿ ಹಾಸನ ದಿಂದ ಮಹಿಳೆಯರೇ ತಯಾರು ಮಾಡಿದ ಕರಕುಶಲ ವಸ್ತುಗಳು ಮಳಿಗೆ ಹಾಕಿರುವುದು ತುಂಬಾ ವಿಶೇಷವಾಗಿದೆ ಎಂದು ನುಡಿದರು.
Shivamogga District Chamber of Commerce and Industry ಒಕ್ಕಲಿಗರ ಮಹಿಳಾ ವೇದಿಕೆಯ ಕಾವ್ಯ ಸತೀಶ್ ಮಾತನಾಡಿ, ಮಹಿಳೆಯರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಹಂತ ಹಂತವಾಗಿ ಸಾಧನೆ ಮಾಡುತ್ತಿದ್ದು, ಕುಟುಂಬ, ಸ್ನೇಹಿತ ವರ್ಗ ಹಾಗೂ ಎಲ್ಲರ ಸಹಕಾರದಿಂದ ಇನ್ನಷ್ಟು ಸಾಧನೆ ಮಾಡಬೇಕು ಎಂದು ಆಶಿಸಿದರು.
ಬೆಂಗಳೂರು, ಬೇಲೂರು, ಕೊಪ್ಪ, ಶೃಂಗೇರಿ, ಜಯಪುರ, ತರೀಕೆರೆ, ಭದ್ರಾವತಿ, ಸಾಗರ, ತೀರ್ಥಹಳ್ಳಿ. ವಾರಣಾಸಿ ಹಾಸನ ಮಡಿಕೇರಿ ಮಂಗಳೂರು, ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳೆಯರು ಸ್ಟಾಲ್‌ಗಳನ್ನು ಹಾಕಿದ್ದರು. ಮನೆಯಲ್ಲಿ ತಯಾರಿಸಿದ ಹಿಟ್ಟು ಉಂಡೆ, ಹುಲ್ಲಿಂದ ತಯಾರಿಸಿದ ಬುಟ್ಟಿಗಳು, ಮನೆಯಲ್ಲಿ ತಯಾರಿಸಿದ ತಿಂಡಿಗಳು ವೈನ್. ಕೇಕ್ ಬಹಳ ದೊಡ್ಡ ಸಾಂಪ್ರದಾಯಿಕ ಉಡುಗೆ ತೊಡುಗೆಗಳು, ಸಸ್ಯಾಹಾರಿ ಹಾಗೂ ಮಾಂಸಾಹಾರಿ ತಿನಿಸುಗಳ ಸ್ಟಾಲ್‌ಗಳು ಇದ್ದವು.
ಡಾಕ್ಟರ್ ಸೌರಭ ಹರ್ಷ , ಖಜಾಂಜಿ ಮಾಮ್ ಕೋಸಿನ ಇಂಜಿನಿಯರ್ ವೀರೇಂದ್ರ ಸುಪ್ರಿಯಾ ರಾಮಪ್ಪ, ಅಂಜು ಸುರೇಶ್, ಅರ್ಚನಾ, ಪ್ರಭಾ ಶ್ರೀನಾಥ್. . ವಿಜಯ ನಾಗೇಶ್. ಡಾಕ್ಟರ್ ಶ್ರೀಕಾಂತ್. ಛಾಯಕ್ಕ ದೇವಂಗಿ ಸುಜಯಾ ಪುರುಷೋತ್ತಮ್ , ಹಾಗೂ. ಇನ್ನರ್ವಿಲ್ ಮಾಜಿ ಅಧ್ಯಕ್ಷರಾದ ಬಿಂದು ವಿಜಯ ಕುಮಾರ್ ಕಾರ್ಯಕಾರಿ ಸಮಿತಿಯವರು ಸಂಘದ ಸದಸ್ಯೆಯರು ಉಪಸ್ಥಿತರಿದ್ದರು.

Bharat Scouts And Guides ಶಿವಮೊಗ್ಗ ಸ್ಕೌಟ್ಸ್ & ಗೈಡ್ಸ್ ಘಟಕದಿಂದ ನೂತನ ಡೀಸಿ ಪ್ರಭುಲಿಂಗ ಕವಳಿಕಟ್ಟಿ ಅವರಿಗೆ ಅಭಿನಂದನೆ

0

Bharat Scouts And Guides ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಗೌರವಾಧ್ಯಕ್ಷರು ಹಾಗೂ ನೂತನ ಜಿಲ್ಲಾಧಿಕಾರಿಗಳಾಗಿ ಶಿವಮೊಗ್ಗಕ್ಕೆ ಆಗಮಿಸಿ ಅಧಿಕಾರ ವಹಿಸಿಕೊಂಡ ಪ್ರಭುಲಿಂಗ ಕವಳಿಕಟ್ಟಿ ಸರ್.ರವರಿಗೆ ಭಾರತ್ ಸ್ಕೌಟ್ಸ್ & ಗೈಡ್ಸ್ ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆ ವತಿಯಿಂದ ಆತ್ಮೀಯವಾಗಿ ಅಭಿನಂದಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಇದೇ ತಿಂಗಳು ದಿನಾಂಕ 10 ಮತ್ತು 11ರಂದು. ಸ್ಕೌಟ್ಸ್ ಅಂಡ್ ಗೈಡ್ಸ್ ನ ಶತಮಾನೋತ್ಸವ ಹಾಗೂ ಜಿಲ್ಲಾ ಮಟ್ಟದ ರ್ಯಾಲಿ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಆಮಂತ್ರಣ ಪತ್ರಿಕೆ ನೀಡಿ ವಿನಂತಿಸಿಕೊಳ್ಳಲಾಯಿತು. Bharat Scouts And Guides ಕಾರ್ಯಕ್ರಮದಲ್ಲಿ ಪ್ರಧಾನ ಆಯುಕ್ತರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ್. ಕೇಂದ್ರ ಸ್ಟಾನಿಕ ಆಯುಕ್ತರುಗಳಾದ ಜಿ ವಿಜಯಕುಮಾರ್. ಕೆ ರವಿ. ಎಸ್ ಜಿ ಆನಂದ್. ಮಲ್ಲಿಕಾರ್ಜುನ ಖಾನೂರ್. ಜಿಲ್ಲಾ ಕಾರ್ಯದರ್ಶಿ ಕೆ ವಿ ಚಂದ್ರಶೇಖರಯ್ಯ ಜಿಲ್ಲಾ ಖಜಾಂಚಿ. ಚೂಡಾಮಣಿ ಈ ಪವಾರ್. ಜಿಲ್ಲಾ ತರಬೇತಿ ಆಯುಕ್ತರಾದ ಚಂದ್ರಶೇಖರಯ್ಯ ಕೃಷ್ಣ ಸ್ವಾಮಿ. ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಸಂಪೂರ್ಣ ಸಹಕಾರ ನೀಡಲು ಕೇಳಿಕೊಳ್ಳಲಾಯಿತು.

JCI Shivamogga ಜೆಸಿಐ ಸಂಸ್ಥೆಯು ಸಮಾಜಕ್ಕೆ ಯುವ ನಾಯಕರನ್ನು ತರುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ- ಭರತ್ ಎನ್ ಆಚಾರ್ಯ

0

JCI Shivamogga ಯುವ ಜನರು ಜೆಸಿಐ ಸಂಸ್ಥೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ತಮ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಭರತ್ ಎನ್ ಆಚಾರ್ಯ ಹೇಳಿದರು.

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ, ಯುವ ಜನರಿಗೆ ಜೆಸಿಐ ಸಂಸ್ಥೆ ಅತ್ಯುತ್ತಮ ಸಂಸ್ಥೆಯಾಗಿದ್ದು, ಯುವ ನಾಯಕರನ್ನು ಸಮಾಜಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು.

ವಲಯ 24ರ ಅಧ್ಯಕ್ಷ ಸಿ.ಎ.ಮಧುಸೂದನ್ ನಾವಡ ಮಾತನಾಡಿ, ಜೋನ್ 24ಕ್ಕೆ ಸುವರ್ಣ ಕಾಲ ಇದಾಗಿದ್ದು, ಕರ್ನಾಟಕದ ಭರತ್ ಎನ್.ಆಚಾರ್ಯ ಅವರು ನಮ್ಮ ರಾಷ್ಟ್ರೀಯ ನಾಯಕನಾಗಿದ್ದು, ಅನುಷ್ ಗೌಡ ಅವರು ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕಗೊಂಡಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಹೇಳಿದರು.

ನಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸುವುದರ ಜೊತೆಗೆ ಸಂಸ್ಥೆಗೆ ಸಮರ್ಪಕವಾಗಿ ಸೇವೆ ಸಲ್ಲಿಸಲು ಅತ್ಯುತ್ತಮ ಅವಕಾಶವನ್ನು ನೀಡಿವೆ. ಯುವಜನತೆಯನ್ನು ತೊಡಗಿಸಿಕೊಳ್ಳುವ ಮೂಲಕ, ಅವರಿಗೆ ಜೀವನದಲ್ಲಿ ಬೆಳೆಯಲು ವಿವಿಧ ಅವಕಾಶಗಳನ್ನು ಕಲ್ಪಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಈ ದಿಕ್ಕಿನಲ್ಲಿ ಸಂಘಟನೆಯೊಂದಿಗೆ ಕೈಜೋಡಿಸಿ ಕಾರ್ಯನಿರ್ವಹಿಸುವುದು ನಮಗೆ ಅಪಾರ ಸಂತೋಷ ಹಾಗೂ ಗೌರವದ ವಿಷಯವಾಗಿದೆ ಎಂದು ತಿಳಿಸಿದರು.

ವಲಯ ಉಪಾಧ್ಯಕ್ಷ ಅಮೃತ್ ಸಿ ಮಾತನಾಡಿ, ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಯಾಗಿ ಜೆಸಿಐ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

JCI Shivamogga ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ನೂತನ ಅಧ್ಯಕ್ಷೆ ಗಾನವಿ ಸುದರ್ಶನ್ ಅವರು ಬಡ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕಾಗಿ ದೇಣಿಗೆ ನೀಡಿದರು. ಜೆಸಿ ಇಲ್ಲದ ಜಿಲ್ಲೆಗಳಲ್ಲಿ ಜೆಸಿ ಹುಟ್ಟು ಹಾಕುವ ಪ್ರಯತ್ನವನ್ನು ಮಾಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಜೆಸಿಐ ಚಿತ್ರದುರ್ಗ ಫೋರ್ಟ್ ಎನ್ನುವ ಹೊಸ ಘಟಕವನ್ನು ರಾಯಲ್ಸ್ ವತಿಯಿಂದ ನೀಡಲಾಯಿತು.

ತಾಯಿಮನೆ ಸುದರ್ಶನ್, ರಾಜೇಶ್ ಕೀಳಂಬಿ, ಉದಯ್ ಕಡಂಬ, ಚಂದ್ರಹಾಸ್ ಶೆಟ್ಟಿ, ಕಿರಣ್, ಅನುಷ್ ಗೌಡ, ಗೌರೀಶ್, ಸ್ಮಿತಾ ಮೋಹನ್, ತೇಜಸ್ವಿನಿ ಪ್ರಶಾಂತ್, ನಿರ್ಮಲ, ಶ್ವೇತ ಪ್ರಶಾಂತ್, ತುಷಾರ್, ಮೋಹನ್ ಕಲ್ಪತರು, ಶೋಭಾ ಸತೀಶ್, ಸುರೇಖಾ ಮುರಳಿಧರ್, ಪುಷ್ಪ ಶೆಟ್ಟಿ, ಪ್ರತಿಮಾ ಡಾಕಪ್ಪ, ಭಾರತಿ ರಾಮಕೃಷ್ಣ, ಲಿಂಗರಾಜ್ ನಾಯ್ಕ್, ಗಿರಿ ಮಲ್ಲಿಕಾ ಇತರರಿದ್ದ

Consumer Disputes Redressal Commission ವಿಮಾ ಮೊತ್ತ ಪರಿಹಾರ ನೀಡದೇ ವಿಳಂಬ ದೂರುದಾರರ ಪರ ತೀರ್ಪಿತ್ತ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ

0

Consumer Disputes Redressal Commission ಶಿವಮೊಗ್ಗದ ಲಷ್ಕರ್ ಮೊಹಲ್ಲಾ ನಿವಾಸಿ ಇರ್ಫಾನ್ ಪಾಷ ಎಂಬುವವರು ಚೆನೈನ ಚೋಳ ಎಂಎಸ್ ಜನರಲ್ ಇನ್ಸೂರನ್ಸ್ ಕಂ.ಲಿ., ಮತ್ತು ಶಿವಮೊಗ್ಗದ ಚೋಳ ಎಂಎಸ್ ಜನರಲ್ ಇನ್ಸೂರನ್ಸ್ ಕಂ.ಲಿ., ಇವರುಗಳ ವಿರುದ್ದ ದ್ವಿಚಕ್ರ ವಾಹನದ ವಿಮಾ ಸೌಲಭ್ಯ ನೀಡುವಲ್ಲಿನ ಸೇವಾ ನ್ಯೂನತೆ ಕುರಿತು ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವಿಮಾ ಕಂಪೆನಿಯು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ.

ದೂರುದಾರರು ತಾವು ಖರೀದಿಸಿದ ಸುಜುಕಿ ಎಕ್ಸೆಸ್ ದ್ವಿಚಕ್ರ ವಾಹನಕ್ಕೆ ಎದುರುದಾರರಿಂದ ವಿಮೆಯನ್ನು ಮಾಡಿಸಿದ್ದು, 2024ರ ಅಕ್ಟೋಬರ್‌ನಲ್ಲಿ ವಾಹನಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋಗಿತ್ತು. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಶಿವಮೊಗ್ಗದ ಎದುರುದಾರರಿಗೆ ವಾಹನದ ಎಲ್ಲಾ ದಾಖಲೆಗಳನ್ನು ಸಲ್ಲಿಸಿ ವಿಮೆಯನ್ನು ಪಾವತಿಸಲು ಕೋರಿರುತ್ತಾರೆ.

ಆದರೆ ಎದುರುದಾರರು ಈ ಕುರಿತು ವಿಮೆ ಮೊತ್ತ ಪಾವತಿಸದಿರುವುದರಿಂದ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿರುತ್ತಾರೆ.

Consumer Disputes Redressal Commission ದೂರನ್ನು ದಾಖಲಿಸಿಕೊಂಡ ಆಯೋಗವು ಎದುರುದಾರರಿಗೆ ನೋಟಿಸ್ ನೀಡಿದ್ದು, ಎದುರುದಾರರು ವಕೀಲರ ಮೂಲಕ ಹಾಜರಾಗಿ ತಕರಾರು ಸಲ್ಲಿಸಿರುತ್ತಾರೆ.
ದೂರುದಾರರು ಮತ್ತು ಎದುರುದಾರರು ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ ಮತ್ತು ಉಭಯ ಪಕ್ಷಗಾರರ ವಕೀಲರ ವಾದವನ್ನು ಆಲಿಸಿ, ಎದುರುದಾರರು ಸೇವಾ ನ್ಯೂನತೆ ಎಸಗಿರುವುದಾಗಿ ಪರಿಗಣಿಸಿ ದೂರುದಾರರು ಸಲ್ಲಿಸಿರುವ ದೂರನ್ನು ಭಾಗಶಃ ಪುರಸ್ಕರಿಸಿ, ಎದುರುದಾರರು ವಾಹನದ ಐಡಿವಿ ಮೌಲ್ಯ ರೂ. 88,053/- ಗಳನ್ನು ಹಾಗೂ ರೂ. 10,000/-ಗಳನ್ನು ದೂರಿನ ಖರ್ಚುವೆಚ್ಚಕ್ಕಾಗಿ ವಾರ್ಷಿಕ ಶೇ. 9 ರ ಬಡ್ಡಿಯನ್ನು ಸೇರಿಸಿ, 2025 ಜನವರಿಯಿಂದ ಅನ್ವಯವಾಗುವಂತೆ ಈ ಆದೇಶವಾದ 45 ದಿನಗಳೊಳಗಾಗಿ ದೂರುದಾರರಿಗೆ ಪಾವತಿಸುವಂತೆ ತಪ್ಪಿದ್ದಲ್ಲಿ ವಾರ್ಷಿಕ ಶೇ. 12ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಡಿ.31 ರಂದು ಆದೇಶಿಸಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಗಂಗಾಧರ ನಾಯ್ಕ್ ಎಂ.ಟಿ. ತಿಳಿಸಿದ್ದಾರೆ.

District Chamber of Commerce and Industry ಸಂಗೀತ ಕಲಿಕೆಯಿಂದ ಏಕಾಗ್ರತೆ ಮತ್ತು ಕ್ರಿಯಾಶೀಲತೆ ವೃದ್ಧಿ- ಎಸ್.ಆರ್.ಮಂಜುನಾಥ್

0

District Chamber of Commerce and Industry ಒತ್ತಡದ ಕಾರ್ಯ ಹಾಗೂ ಜೀವನಶೈಲಿಯಿಂದ ಹೊರಬರಲು ಸಂಗೀತ ಆಲಿಸುವಿಕೆ ಮತ್ತು ಕಲಿಕೆಯು ಸಹಕಾರಿಯಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಆರ್.ಮಂಜುನಾಥ್ ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಶಿವಮೊಗ್ಗ ಶಿಕ್ಷಕರ ಗಾಯನ ವೇದಿಕೆಯಿಂದ ಆಯೋಜಿಸಿದ್ದ ಗಾಯನ ಸಮ್ಮಿಲನ 1 ಕಾರ್ಯಕ್ರಮದಲ್ಲಿ ಮಾತನಾಡಿ, ಸುಮಧುರವಾದ ಸಂಗೀತ ಆಲಿಸುವಿಕೆಯು ಮನಸ್ಸನ್ನು ಸಂತೋಷಗೊಳಿಸುತ್ತದೆ. ಸಂಗೀತ ಕಲಿಯುವುದರಿಂದ ಏಕಾಗ್ರತೆ ಮತ್ತು ಕ್ರಿಯಾಶೀಲತೆ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಶಿಕ್ಷಕರು ಕಾಲಕಾಲಕ್ಕೆ ಈ ರೀತಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಚಿತ್ರಗೀತೆ, ಭಾವಗೀತೆ ಹಾಗೂ ಜಾನಪದ ಗೀತೆಗಳನ್ನು ಹಾಡಬೇಕು. ಇಂತಹ ಸಾಂಸ್ಕೃತಿಕ ವೇದಿಕೆಗಳು ಅತ್ಯಂತ ಅವಶ್ಯಕ ಎಂದರು.

ರಾಗರಂಜಿನಿ ಟ್ರಸ್ಟ್ ಸ್ವರ ಸಂಯೋಜಕ ಪ್ರಹ್ಲಾದ್ ದೀಕ್ಷಿತ್ ಮಾತನಾಡಿ, ಸಂಗೀತ ಆಸಕ್ತರು ಗುರುಗಳ ಮಾರ್ಗದರ್ಶನದಲ್ಲಿ ನಿರಂತರ ಅಭ್ಯಾಸ ಮಾಡಬೇಕು. ಜೀವನ ಸುಂದರಗೊಳಿಸಲು ಸಂಗೀತ ನೆರವಾಗುತ್ತದೆ ಎಂದು ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಸಂಗೀತ ಆಲಿಸುವುದರಿಂದ ಮನಸ್ಸು ಸಂತಸಗೊಂಡು ಒತ್ತಡಮುಕ್ತರಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

District Chamber of Commerce and Industry ಎಸ್.ಆರ್.ಮಂಜುನಾಥ್, ಪ್ರಹ್ಲಾದ್ ದೀಕ್ಷಿತ್ ಹಾಗೂ ಜಿ.ವಿಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಶಿವಮೊಗ್ಗ ಶಿಕ್ಷಕರ ಗಾಯನ ವೇದಿಕೆ ಸಂಸ್ಥಾಪಕ, ಆಯೋಜಕರಾದ ಶಿಕ್ಷಕ ಬಿ.ಕುಬೇರ್ ನಾಯ್ಕ್ ಸ್ವಾಗತಿಸಿದರು. ಶಿಕ್ಷಣ ಸಂಯೋಜಕಿ ಕೆ.ಕೆ.ಶಶಿರೇಖಾ ವಂದನಾರ್ಪಣೆ ನಡೆಸಿಕೊಟ್ಟರು. ರಾಜ್ಯ, ರಾಷ್ಟ್ರಮಟ್ಟದ ಕ್ರೀಡೆ, ಸಂಗೀತ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಗೌರವಿಸಲಾಯಿತು. ಶಿಕ್ಷಕಿ ಸುಮಾ ಮತ್ತಿತರರು ಹಾಜರಿದ್ದರು.

Akhila Bharatiya Sahitya Parishath ಪರಿಸರ ರಕ್ಷಣೆ ಕುರಿತ ಕವಿತೆ ರಚಿಸಲು ಕವಿಗಳಿಗೆ ಅಭಾಸಾಪ ಆಹ್ವಾನ

0

Akhila Bharatiya Sahitya Parishath ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಶಿವಮೊಗ್ಗ ಶಾಖೆಯ ವತಿಯಿಂದ ಜನವರಿ ೧೦ರ ಶನಿವಾರ ಸಂಜೆ ೫.೩೦ ಗಂಟೆಗೆ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವು ವಿನೋಬಾ ನಗರದ ವಿಕಾಸ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ನಡೆಯಲಿದೆ.
ಈ ಬಾರಿ ಕವಿಗೋಷ್ಠಿಗೆ “ಪರಿಸರ ರಕ್ಷಣೆ” ವಿಷಯವನ್ನು ನಿಗದಿಪಡಿಸಲಾಗಿದ್ದು, ಕವಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ಕವಿತೆಗಳನ್ನು ರಚಿಸಿ ಪ್ರಸ್ತುತಪಡಿಸಲು ಕೋರಲಾಗಿದೆ. ಪರಿಷತ್ತಿನ ಕವಿತಾ ರಚನಾ ಕಮ್ಮಟದಲ್ಲಿ ಛಂದೋಬದ್ಧ ರಚನೆಗಳ ಕುರಿತು ತರಬೇತಿ ಪಡೆದ ಕವಿಗಳು ಛಂದೋಬದ್ಧ ಕವಿತೆಗಳೊಂದಿಗೆ ಗೋಷ್ಠಿಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಇತರೆ ಕವಿಗಳು ತಮ್ಮದೇ ಶೈಲಿಯ ಕವಿತೆಗಳನ್ನು ವಾಚಿಸಬಹುದಾಗಿದೆ.
ಕವಿಗೋಷ್ಠಿಯನ್ನು ಖ್ಯಾತ ವೈದ್ಯಕೀಯ ಲೇಖಕ ಹಾಗೂ ಹಿರಿಯ ಕುಟುಂಬ ಸಲಹಾ ವೈದ್ಯರಾದ ಡಾ. ಕೃಷ್ಣ ಎಸ್. ಭಟ್ ಅವರು ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಶಿವಮೊಗ್ಗ ಶಾಖೆಯ ಅಧ್ಯಕ್ಷ ಡಾ. ಸುಧೀಂದ್ರ ವಹಿಸಲಿದ್ದಾರೆ.
Akhila Bharatiya Sahitya Parishath ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತರಾದ ಕವಿಗಳು ಸುರೇಶ್ ಭಟ್ ಅವರನ್ನು ಮೊಬೈಲ್ ಸಂಖ್ಯೆ ೯೪೪೮೩ ೦೩೭೪೦ರಲ್ಲಿ ಸಂಪರ್ಕಿಸುವಂತೆ ಸಂಘಟಕರು ತಿಳಿಸಿದ್ದಾರೆ. ಸಾಹಿತ್ಯಾಸಕ್ತರಿಗೆ ಕಾರ್ಯಕ್ರಮಕ್ಕೆ ಆದರದ ಸ್ವಾಗತವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Department of Agriculture ಪೂರ್ವಿಕರು ಮಾಡುತ್ತಿದ್ದ ಹಳೆಯ ಖಾದ್ಯಗಳು ಆರೋಗ್ಯಕರ, ಅದನ್ನ ಸಿದ್ಧಪಡಿಸುವಲ್ಲಿ ಉತ್ತೇಜನ ಅವಶ್ಯವಿದೆ- ಕಿರಣ್ ಕುಮಾರ್.

0

Department of Agriculture ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ಪೌಷ್ಟಿಕಾಂಶಗಳಿAದ ಕೂಡಿದೆ. ಹಾಗೂ ನಮ್ಮ ಪೂರ್ವಿಕರು ತಯಾರಿಸುತ್ತಿದ್ದ ಹಳೆಯ ಖಾದ್ಯಗಳು ಆರೋಗ್ಯಕರವಾಗಿದ್ದು, ಅವುಗಳನ್ನು ಉತ್ತೇಜಿಸುವ ಅವಶ್ಯಕತೆ ಇದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ಕಿರಣ್ ಕಮಾರ್ ತಿಳಿಸಿದರು.
ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ಶಿವಮೊಗ್ಗದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಆಯೋಜಿಸಿದ್ದ “ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ” ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಿರಿಧಾನ್ಯಗಳಲ್ಲಿ ಉತ್ತಮ ಕಾರ್ಬೋಹೈಡ್ರೇಟ್, ನಾರು, ಪ್ರೋಟಿನ್ ಮತ್ತು ಖನಿಜಗಳು ಇದ್ದು ಉತ್ತಮ ಆಹಾರವಾಗಿದೆ. ವಿಶೇಷವಾಗಿ ಸಕ್ಕರೆ ಖಾಯಿಲೆ ಇರುವವರಿಗೆ ಒಳ್ಳೆಯ ಆಹಾರ. ಸಿರಿಧಾನ್ಯಗಳಿಗೆ ಉತ್ತೇಜನ ನೀಡುವುದರೊಂದಿಗೆ ಇದರ ಮೌಲ್ಯವರ್ಧನೆ ಸಹ ಅಷ್ಟೇ ಮುಖ್ಯವಾಗಿದೆ. ಆದ್ದರಿಂದ ಪ್ರತಿ ವರ್ಷ ಸಿರಿಧಾನ್ಯ ಖಾದ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತಿದೆ.
ಜಿಲ್ಲೆಯಲ್ಲಿ ಸಿರಿಧಾನ್ಯ ಬೆಳೆ ತೀರಾ ಕಡಿಮೆ. ಆದರೆ ಬಳಕೆದಾರರ ಸಂಖ್ಯೆ ಹೆಚ್ಚಿದ್ದು, ಸಿರಿಧಾನ್ಯದ ವಿವಿಧ ರೀತಿಯ ಖಾದ್ಯಗಳ ತಯಾರಿಕೆ, ಬಳಕೆ ಮಾಡಲಾದ ಸಿರಿಧಾನ್ಯಗಳ ವಿವರ ಸೇರಿದಂತೆ ಖಾದ್ಯಗಳ ಸಂಪೂರ್ಣ ವಿವರಗಳೊಂದಿಗೆ ಸ್ಪರ್ಧಾಳುಗಳು ಉತ್ತಮವಾಗಿ ಖಾದ್ಯಗಳನ್ನು ಪ್ರದರ್ಶಿಸಿದ್ದಾರೆ. ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯವಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಅಭ್ಯರ್ಥಿಗಳು ಒಟ್ಟು 38 ಜನರು ಸ್ಪರ್ಧಿಸಿದ್ದಾರೆ.
ಮರೆತುಹೋದ ಖಾದ್ಯಗಳಲ್ಲಿ ಮಲೆನಾಡು ಭಾಗದಲ್ಲಿ ತಯಾರಿಸುವ ಬಾಣಂತಿಯರ ಖಾದ್ಯಗಳು ಎಲ್ಲರ ಗಮನ ಸೆಳೆದಿದ್ದು, ಜೋಳದ ಗುಗ್ಗರಿ, ನವಣೆ ಖಿಲ್ಸ, ಸಜ್ಜೆ ಮಾದಲಿ, ಸುಕ್ಕಿನುಂಡೆ, ಕಡುಬುಗಳು, ಗಾರ್ಗೆಯಂತಹ ಅನೇಕ ಮರೆತು ಹೋದ ಖಾದ್ಯಗಳನ್ನು ಸ್ಪರ್ಧಾಳುಗಳು ವಿಶೇಷವಾಗಿ ತಯಾರಿಸಿದ್ದಾರೆ. ಸ್ಪರ್ಧೆಯ ನಿಯಮದಂತೆ ತಿನಿಸುಗಳನ್ನು ಮನೆಯಲ್ಲಿಯೇ ತಯಾರಿಸಿ ಪಾಕ ಸ್ಪರ್ಧೆ ನಡೆಯುವ ಸ್ಥಳದಲ್ಲಿ ಪ್ರದರ್ಶಿಸಿದ್ದಾರೆ.
Department of Agriculture ಮರೆತು ಹೋದ ಖಾದ್ಯ, ಸಿರಿಧಾನ್ಯ ಸಿಹಿ ಮತ್ತು ಖಾರ ಮೂರು ವಿಭಾಗಗಳಲ್ಲಿ ಕ್ರಮವಾಗಿ ಪ್ರಥಮ ಸ್ಥಾನಕ್ಕೆ ರೂ.5000, ದ್ವಿತೀಯ ಸ್ಥಾನಕ್ಕೆ ರೂ.3000 ಹಾಗೂ ತೃತೀಯ ಸ್ಥಾನಕ್ಕೆ ರೂ.2000 ಬಹುಮಾನವನ್ನು ನೀಡಲಾಗುವುದು ಎಂದರು.
ಸ್ಪರ್ಧೆಯಲ್ಲಿ ಸಿರಿಧಾನ್ಯದ ಸಿಹಿ ಮಂಡಿಗೆ, ಹುರುಳಿ ಉಂಡೆ ಮತ್ತು ಸಾಮೆ ಅಡೆ ಪಾಯಸ, ಹುರುಳಿ ಲೇಹ್ಯಗಳು, ನವಣೆ ಕಡಬು, ಸಿರಿಧಾನ್ಯಗಳ ಮಫಿನ್, ಕೇಕ್ ಬಿಸ್ಕತ್ತು, ನವಣೆ ತೊಡೆದೇವು, ಸಿರಿಧಾನ್ಯ ಮಿಠಾಯಿಗಳು, ಕರಡಿ ಸೊಪ್ಪಿನ ಚಟ್ನಿ, ಬಾಳೆ ಮೂತಿ ಖಾರ(ಬಾಣಂತಿಯರಿಗೆ), ಪೊಂಗಲ, ಪರೋಟ, ಕಡುಬು, ಗಾರ್ಗೆ, ನವಧಾನ್ಯ ಮುದ್ದೆ, ಜೋಳ ಗುಗರಿ, ನವಣೆ ಖಿಲ್ಸ, ಸಿರಿಧಾನ್ಯ ಬರ್ಫಿ, ಮಾಲದಿ, ಸಿರಿಧಾನ್ಯ ಹೋಳಿಗೆ, ಉಂಡೆಗಳನ್ನು ತಯಾರಿಸಿ ಪ್ರದರ್ಶಿಸಿದ್ದು, ವೈವಿಧ್ಯಮಯವಾಗಿ ಅಲಂಕಾರಗೊಳಿಸಿ ಪ್ರದರ್ಶಿಸಿದ ರೀತಿ ಕಣ್ಮನ ಸೆಳೆದು, ಅಡುಗೆಯ ಘಮ ಬಾಯಲ್ಲಿ ನೀರೂರಿಸುವಂತಿತ್ತು.
ಕಾರ್ಯಕ್ರಮದಲ್ಲಿ ಉಪ ಕೃಷಿ ನಿದೇಶಕರಾದ ಮಂಜುಳಾ , ಲೋಕೇಶ್, ಸಹಾಯಕ ಕೃಷಿ ನಿರ್ದೇಶಕರಾದ ಕಾಶಿನಾಥ, ಸುನೀತಾ ಇತರೆ ಅಧಿಕಾರಿಗಳು, ಸ್ಪರ್ಧಿಗಳು ಪಾಲ್ಗೊಂಡಿದ್ದರು.

Karnataka Ex-Servicemen Association ಮಾಜಿ ಸೈನಿಕರ ಪ್ರತಿಭಾವಂತ ಮಕ್ಕಳಿಗೆ ಪುರಸ್ಕರಿಸಿ ಗೌರವ ಅರ್ಪಣೆ

0

Karnataka Ex-Servicemen Association ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ವಾರ್ಷಿಕ ಮಹಾಸಭೆ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಸಲಾಯಿತು.

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ಪತ್ನಿಯರನ್ನು (ವೀರನಾರಿಯರು) ಗೌರವಿಸಲಾಯಿತು.

ಅವರ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಕಾನೂನು ನೆರವು ಮತ್ತು ಆರ್ಥಿಕ ಭದ್ರತೆ ನೀಡಲು ನಿರ್ಣಯಿಸಲಾಯಿತು.

ಮಾಜಿ ಸೈನಿಕರ ಪೋಷಕರನ್ನು ಹಾಗೂ ಸಂಘದ ಹಿರಿಯ ಮಾಜಿ ಸೈನಿಕರನ್ನು ಅವರ ಅಮೂಲ್ಯ ಸೇವೆಗಾಗಿ ಸನ್ಮಾನಿಸಲಾಯಿತು.

ಎಸ್‌ಎಸ್‌ಎಲ್‌ಸಿ (10th) ಮತ್ತು ಪಿಯುಸಿ (PUC) ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಾಜಿ ಸೈನಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.

ಪ್ರತಿಯೊಬ್ಬ ಮಾಜಿ ಸೈನಿಕನಿಗೂ ಆರೋಗ್ಯ ಮತ್ತು ಸಾಮಾಜಿಕ ಸೌಲಭ್ಯಗಳು ತಲುಪುವಂತೆ ಸಂಘವು ಬೆಂಬಲ ನೀಡಲಿದೆ ಎಂದು ಘೋಷಿಸಲಾಯಿತು.

Karnataka Ex-Servicemen Association 2024-25ನೇ ಸಾಲಿನ ಆಯವ್ಯಯ ಮತ್ತು ಆಡಿಟ್ ವರದಿಯನ್ನು ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಮಧ್ಯಾಹ್ನದ ಭೋಸಭೆಯ ಕಾರ್ಯಕಲಾಪಗಳು ಮುಗಿದ ನಂತರ, ಬಂದಿದ್ದ ಎಲ್ಲಾ ಸದಸ್ಯರಿಗೂ, ಸನ್ಮಾನಿತರಿಗೂ ಹಾಗೂ ಅತಿಥಿಗಳಿಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಸೌಹಾರ್ದಯುತ ಭೋಜನದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿತು.

DC Shivamogga ಮಾದಕ ವಸ್ತು ಮಾರಾಟ ಸೇವನೆ, ಕಳ್ಳ ಸಾಗಣೆ ವಿರುದ್ಧ ಜನಜಾಗೃತಿ ಮಾಡೋಣ- ಪ್ರಭುಲಿಂಗ ಕವಳಿಕಟ್ಟಿ

0

DC Shivamogga ದೇಶದ ರಕ್ಷಣೆ, ಸ್ವಸ್ಥ ಸಮಾಜ ನಿರ್ಮಾಣ, ಭಾರತದ ಭವ್ಯಭವಿಷ್ಯಕ್ಕಾಗಿ ಮಾದಕ ವಸ್ತುಗಳ ವ್ಯಸನ, ಮಾರಾಟ ಮತ್ತು ಕಳ್ಳಸಾಗಾಣೆ ವಿರುದ್ಧ ಜನಜಾಗೃತಿಗೊಳಿಸಲು ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಸಂಕಲ್ಪ ಮಾಡುವಂತೆ ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.
ಅವರು ಪರಿವರ್ತನಾ ಟ್ರಸ್ಟ್, ಬೆಂಗಳೂರು, ಜಿಲ್ಲಾಡಳಿತ, ರೋಟರಿ ಸಂಸ್ಥೆ ಶಿವಮೊಗ್ಗದ ವಿವಿಧ ವಲಯಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಡ್ರಗ್ಸ್ ಮುಕ್ತ ಕರ್ನಾಟಕ ಜನಜಾಗೃತಿ ವಾಹನಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಸಹಜ ಕುತೂಹಲದಿಂದ ನಿಧಾನವಾಗಿ ಆರಂಭಗೊಳ್ಳುವ ಮಾದಕ ವಸ್ತುಗಳ ಸೇವನೆ, ಕೊನೆಯಲ್ಲಿ ಚಟವಾಗಿ ಪರಿಣಮಿಸಲಿದೆ. ಇದರಿಂದಾಗಿ ಅಸಂಖ್ಯಾತ ಯುವಕ-ಯುವತಿಯರು ತಮಗೆ ಅರಿವಿಲ್ಲದೆಯೆ ಅಮೂಲ್ಯವಾದ ಭವಿಷ್ಯವನ್ನು ಯಾತನಾಮಯವಾಗಿಸಿಕೊಳ್ಳುತ್ತಿದ್ದಾರೆ ಎಂದರು.
ಮನೋರಂಜನೆ, ಹವ್ಯಾಸಿ ಕ್ಲಬ್ ಗಳು, ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಅಭಿವೃದ್ದಿಯಾದಂತೆ ಪರಿಸರದ ಮೇಲೆ ಆಗಿರುವ ಪ್ರಭಾವ, ಅದರ ಪರಿಣಾಮಗಳು ಗೋರವಾಗಿವೆ. ಇಂದಿನ ಯುವ ಪೀಳಿಗೆ ಮಾದಕ ವಸ್ತುಗಳ ಮೋಹಕ್ಕೆ ಒಳಗಾಗದಂತೆ ಮುನ್ನೆಚ್ಚರಿಕೆ ಕ್ರಮ ಅಗತ್ಯವಾಗಿದೆ. ಮಾನಸಿಕ ಸ್ಥಿಮಿತತೆ ಕಳೆದುಕೊಳ್ಳದೆ ಇರುವಂತೆ ಯುವಕರ ಗಮನ ಕೇಂದ್ರೀಕರಿಸಬೇಕಾದ ಅಗತ್ಯವಿದೆ. ನೈತಿಕ ಸ್ವಭಾವವೂ ಬದಲಾಗದಂತೆ ನೋಡಿಕೊಳ್ಳಬೇಕಾದ ಅಗತ್ಯ ಸಮಾಜ ಹಾಗೂ ಪೋಷಕರ ಮೇಲಿದೆ ಎಂದರು.
ಮಾದಕ ವ್ಯಸನ ಎಂಬ ಮಾಯಾಜಾಲಕ್ಕೆ ಬೀಳುವ ಮೊದಲು ಅದನ್ನು ಬಲವಾಗಿ ಕಟ್ಟಿಹಾಕಬೇಕಾಗಿದೆ. ಅದಕ್ಕಾಗಿ ಇಡಿ ಸಮಾಜವೇ ಎಚ್ಚೆತ್ತುಕೊಳ್ಳಬೇಕಾದ ಅಗತ್ಯವಿದೆ. ಜಾಗೃತ ಸಮಾಜ ನಿರ್ಮಿಸುವಲ್ಲಿ ಹಾಗೂ ಭಾರತದ ಭವಿಷ್ಯವನ್ನು ಸಂರಕ್ಷಿತಗೊಳಸುವ ರೂಪಿಸುವ ಇಂತಹ ಕಾರ್ಯಕ್ರಮಗಳಲ್ಲಿ ಎಲ್ಲರ ಭಾಗವಹಿಸುವಿಕೆ ಅಗತ್ಯವಾಗಿದೆ ಎಂದರು.
ಮಾದಕ ವಸ್ತು ವ್ಯವನಿಗಳನ್ನು ಮಾತ್ರವಲ್ಲದೇ ಅವರ ಮೂಲಕ ಇಡೀ ಸಮಾಜವನ್ನು ಆವರಿಸಿಕೊಂಡು ವಿನಾಶದಂಚಿಗೆ ಕೊಂಡೊಯ್ಯುತ್ತದೆ. ಭವ್ಯ ಇತಿಹಾಸ, ಸಾಂಸ್ಕೃತಿಕ-ಆಧ್ಯಾತ್ಮಿಕ ಪರಂಪರೆ ಹೊಂದಿರುವ ಈ ನಾಡಿನಲ್ಲಿ ಹಿರಿಯರ ಆಶಯದಂತೆ ನಡೆದುಕೊಳ್ಳುವ, ಅನುಸರಿಸುವ ಅಗತ್ಯವಿದೆ ಎಂದರು.
DC Shivamogga ಮದ್ಯ, ಮಾದಕ ವಸ್ತುಗಳ ನಿಯಂತ್ರಣ, ನಶೆ ಮುಕ್ತ ಸಮಾಜ ನಿರ್ಮಾಣ ಎಂಬ ಹೆಸರಿನಲ್ಲಿ ಅನೇಕ ಜನಜಾಗೃತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಲೇ ಇವೆ. ಆದರೆ, ಇನ್ನೊಂದು ಕಡೆಯಲ್ಲಿ ಮದ್ಯದಂಗಡಿಗಳಿಗೆ ಸರ್ಕಾರವೇ ಪರವಾನಿಗೆ ನೀಡುತ್ತಿದೆ. ಎಂತಹ ವಿಪರ್ಯಾಸ. – ಎಸ್.ಎನ್.ಚನ್ನಬಸಪ್ಪ, ಶಾಸಕರು. ಶಿವಮೊಗ್ಗ ನಗರ.
ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕಿಶ್ ಬಾನು , ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ.., ಚಂದ್ರಶೇಖರ್, ಹರ್ಷಕಾಮತ್, ಬಿ.ಜಿ.ಧನರಾಜ್, ಶ್ರೀಮತಿ ಭಾರತಿ ಚಂದ್ರಶೇಖರ್, ಸುದರ್ಶನ್, ಉದಯಕದಂಬ, ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.