Wednesday, May 6, 2026
Wednesday, May 6, 2026
Home Blog Page 34

Rotary Shivamogga ರಕ್ತದಾನವು ಮಹತ್ವದ ಸೇವೆ- ಡಿ.ಎಸ್.ಅರುಣ್

0

Rotary Shivamogga ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ವತಿಯಿಂದ, ರೋಟರಿ ರಕ್ತ ಕೇಂದ್ರ ಹಾಗೂ ಆಶಾಜ್ಯೋತಿ ಬ್ಲಡ್ ಸೆಂಟರ್ ಅವರ ಸಂಯುಕ್ತ ಆಶ್ರಯದಲ್ಲಿ, ಶಿವಮೊಗ್ಗ ಡಿ.ಪಿ.ಡಿ.ಎ. ಮಾಜಿ ಅಧ್ಯಕ್ಷರು ಮತ್ತು ಖ್ಯಾತ ರಕ್ತದಾನಿಗಳಾದ ಕೀರ್ತಿಶೇಷ ಎಸ್.ಜಿ. ಯಜ್ಞ ನಾರಾಯಣರವರ ಸ್ಮರಣಾರ್ಥವಾಗಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ವಿಧಾನ ಪರಿಷತ್ತಿ ಸದಸ್ಯ ಡಿ.ಎಸ್.ಅರುಣ್ ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ರಕ್ತದಾನವು ಜೀವ ಉಳಿಸುವ ಮಹತ್ವದ ಸೇವೆಯಾಗಿದ್ದು, ಸಮಾಜದಲ್ಲಿ ಪ್ರತಿಯೊಬ್ಬರೂ ಇದರಲ್ಲಿ ತೊಡಗಿಸಿಕೊಳ್ಳಬೇಕು ಎಂದು ಡಿ.ಎಸ್.ಅರುಣ್ ಕರೆ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಸಂಘದ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ವೇಳೆ ಸಂಘದ ಮಾಜಿ ಅಧ್ಯಕ್ಷರು ಮಾತನಾಡಿ, ಡಿ.ಹೆಚ್. ಶಂಕರಮೂರ್ತಿ ಅವರು ಸಂಘದ ಸಭಾಭವನ ನಿರ್ಮಾಣಕ್ಕಾಗಿ ನೀಡಿದ ₹5 ಲಕ್ಷ ಅನುದಾನವನ್ನು ಸ್ಮರಿಸಿ, ಅವರ ಸಹಕಾರವನ್ನು ಕೃತಜ್ಞತೆಯಿಂದ ಉಲ್ಲೇಖಿಸಿದರು.

Rotary Shivamogga ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ, ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಎಸ್.ಪಿ. ಮಧುಕರ್, ADC ಸಹಾಯಕ ಔಷಧ ನಿಯಂತ್ರಕರಾದ ಡಾ. ಎಸ್.ವಿ. ವೀರೇಶ್ ಬಾಬು, ಶ್ರೀಮತಿ ವಿ. ವಿಶಾಲಾಕ್ಷಿ, ಔಷಧ ಮಾರಾಟ ಪ್ರತಿನಿಧಿಗಳ ಸಂಘದ ಅಧ್ಯಕ್ಷರಾದ ಅಶೋಕ ಎಸ್.ಜಿ., ಜಿಲ್ಲಾ ಫಾರ್ಮಸಿಸ್ಟ್ ಅಸೋಸಿಯೇಷನ್ ಅಧ್ಯಕ್ಷರಾದ ಗಣೇಶ್ ಎಸ್. ರಾವ್ ಸೇರಿದಂತೆ ಹಲವು ಗಣ್ಯರು ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

B.Y. Raghavendra ಕೇಂದ್ರ ಸಚಿವರೊಂದಿಗೆ ಅಡಿಕೆ ಕೃಷಿಕರ ಸಮಸ್ಯೆ ಚರ್ಚಿಸಿದ ಬಿ.ವೈ.ರಾಘವೇಂದ್ರ

0

B.Y. Raghavendra ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾನ್ ಜಿ ಅವರನ್ನು
ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ನವದೆಹಲಿಯಲ್ಲಿ ಭೇಟಿ ಮಾಡಿದ್ದರು.
ಅಡಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿ, ಅಡಿಕೆ ಕೃಷಿಕರ ಭವಿಷ್ಯದ ಬಗ್ಗೆ ಕಾಳಜಿ ತಾಳಲು ಸಚಿವರ ಗಮನ ಸೆಳೆದರು.

WHO/IARC ವರ್ಗೀಕರಣ ಹಾಗೂ ಕೊಲಂಬೊ ಘೋಷಣೆಯ ನಂತರದ ಬೆಳವಣಿಗೆಗಳ ಬಗ್ಗೆ ಗಮನ ಸೆಳೆದರು. ಅಲ್ಲದೇ ಇದು ರೈತರು ಮತ್ತು ಗ್ರಾಮೀಣ ಜೀವನೋಪಾಯದ ಮೇಲೆ ಬೀರುವ ಪರಿಣಾಮವನ್ನು ಸಂಸದರು ಒತ್ತಿಹೇಳಿದರು

B.Y. Raghavendra ಮಾನ್ಯ ಸಚಿವರು ವಿಷಯವನ್ನು ಸಕಾರಾತ್ಮಕವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದ ಬಿ.ವೈ‌ರಾಘವೇಂದ್ರ ಸಚಿವರ ಭೇಟಿಯ ಬಗ್ಗೆ
ಹರ್ಷ ವ್ಯಕ್ತಪಡಿಸಿದ್ದಾರೆ.

S.N. Channabasappa ಬಿಜಿಪಿ ಸ್ಥಾಪನಾ ದಿನ: ಮೋದೀಜಿ ಅವರ “ವಿಕಸಿತ ಭಾರತ” ಸಂಕಲ್ಪದ ಮೂಲಕ ಪಕ್ಷವು ಹೊಸ ಎತ್ತರಕ್ಕೆ ಜಿಗಿದಿದೆ- ಎಸ್.ಎನ್.ಚನ್ನಬಸಪ್ಪ

0

S.N. Channabasappa ರಾಷ್ಟ್ರಪ್ರೇಮದ ಪಯಣಕ್ಕೆ 47 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ, ‘ದೇಶವೇ ಮೊದಲು’ ಎಂಬ ಮಂತ್ರದೊಂದಿಗೆ ಮುನ್ನಡೆಯುತ್ತಿರುವ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾದ ಭಾರತೀಯ ಜನತಾ ಪಾರ್ಟಿಯ ‘ಸ್ಥಾಪನಾ ದಿನವನ್ನು ಇಂದು ಶಿವಮೊಗ್ಗದ ಜಿಲ್ಲಾ ಕಾರ್ಯಾಲಯದಲ್ಲಿ ಅತ್ಯಂತ ಸಡಗರದಿಂದ ಆಚರಿಸಲಾಯಿತು.

ಸಂಘಟನೆಯ ಉದಾತ್ತ ಪರಂಪರೆ ಸ್ಮರಣೆ:
ಪಕ್ಷದ ಧ್ವಜಾರೋಹಣ ನೆರವೇರಿಸಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಂಘಟನೆಯ ಪರಂಪರೆಯನ್ನು ಸ್ಮರಿಸಿದ ಶಾಸಕರು, “ಅಂತ್ಯೋದಯದ ಆಶಯವನ್ನು ಹೊತ್ತು ಜನಸಂಘದಿಂದ ಜನಾರ್ದನನ ಸೇವೆಯವರೆಗೆ ಪಕ್ಷವು ಬೆಳೆದು ಬಂದಿದೆ. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ಹಾಕಿದ ಸಿದ್ಧಾಂತದ ಅಡಿಪಾಯ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಸಮರ್ಥ ನೇತೃತ್ವದಲ್ಲಿ ‘ವಿಕಸಿತ ಭಾರತ’ದ ಸಂಕಲ್ಪದೊಂದಿಗೆ ಪಕ್ಷವು ಇಂದು ಹೊಸ ಎತ್ತರಕ್ಕೆ ಜಿಗಿಯುತ್ತಿದೆ,” ಎಂದು ಅಭಿಪ್ರಾಯಪಟ್ಟರು.

ಈ ಸಂಭ್ರಮದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಶ್ರೀ ದತ್ತಾತ್ರಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿದ್ದರಾಮಣ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಹಾಗೂ ಮಾಜಿ ಶಾಸಕರಾದ ಶ್ರೀ ಅಶೋಕ್ ನಾಯಕ್ ಅವರು ಉಪಸ್ಥಿತರಿದ್ದರು.

S.N. Channabasappa ಕಾರ್ಯಕ್ರಮದಲ್ಲಿ ಜಿಲ್ಲೆ ಹಾಗೂ ನಗರದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ನೂರಾರು ನಿಷ್ಠಾವಂತ ಕಾರ್ಯಕರ್ತರು ಪಾಲ್ಗೊಂಡು ಪಕ್ಷದ ಬಲವರ್ಧನೆಯ ಸಂಕಲ್ಪ ಮಾಡಿದರು.

Chamber of Commerce Shivamogga ಸಂಗೀತದಿಂದ ಖಿನ್ನತೆ ದೂರವಾಗಿ ಜೀವನೋತ್ಸಾಹ ಮೂಡುತ್ತದೆ- ಎಸ್.ಆರ್.ಮಂಜುನಾಥ್

0

Chamber of Commerce Shivamogga ತಂತ್ರಜ್ಞಾನ ಯುಗದಲ್ಲಿ ನಮ್ಮ ವೃತ್ತಿಯ ಜೊತೆಗೆ ಸಂಗೀತವಿರಬೇಕು. ಸಂಗೀತದಿಂದ ಖಿನ್ನತೆ ದೂರವಾಗುತ್ತದೆ ಹಾಗೂ ಜೀವನೋತ್ಸಾಹ ಮೂಡುತ್ತದೆ. ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಆರ್.ಮಂಜುನಾಥ್ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಶಿವಮೊಗ್ಗ ಶಿಕ್ಷಕರ ಗಾಯನ ವೇದಿಕೆಯಿಂದ ಆಯೋಜಿಸಿದ್ದ ಗಾಯನ ಸಮ್ಮಿಲನ 2 ಕಾರ್ಯಕ್ರಮದಲ್ಲಿ ಮಾತನಾಡಿ, ಸುಮಧುರವಾದ ಸಂಗೀತ ಆಲಿಸುವಿಕೆಯು ಮನಸ್ಸನ್ನು ಮುದ ಗೊಳಿಸುವದರ ಜೊತೆಗೆ ಸಂತೋಷಗೊಳಿಸುತ್ತದೆ. ಸಂಗೀತ ಕಲಿಯುವುದರಿಂದ ಏಕಾಗ್ರತೆ ಮತ್ತು ಕ್ರಿಯಾಶೀಲತೆ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಶಿಕ್ಷಕರು ಕಾಲಕಾಲಕ್ಕೆ ಈ ರೀತಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಚಿತ್ರಗೀತೆ, ಭಾವಗೀತೆ ಹಾಗೂ ಜಾನಪದ ಗೀತೆಗಳನ್ನು ಹಾಡಬೇಕು. ಇಂತಹ ಸಾಂಸ್ಕೃತಿಕ ವೇದಿಕೆಗಳು ಅತ್ಯಂತ ಅವಶ್ಯಕ ಎಂದರು.
, ಸಂಗೀತ ಆಸಕ್ತರು ಗುರುಗಳ ಮಾರ್ಗದರ್ಶನದಲ್ಲಿ ನಿರಂತರ ಅಭ್ಯಾಸ ಮಾಡಬೇಕು. ಜೀವನ ಸುಂದರಗೊಳಿಸಲು ಸಂಗೀತ ನೆರವಾಗುತ್ತದೆ ಎಂದು ಹೇಳಿದರು.
Chamber of Commerce Shivamogga ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಸಂಗೀತ ಆಲಿಸುವುದರಿಂದ ಮನಸ್ಸು ಸಂತಸಗೊಂಡು ಒತ್ತಡಮುಕ್ತರಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಸಂಗೀತ ಮನುಷ್ಯನ ಮನಸ್ಸಿಗೆ ಮತ್ತು ತರುವ ದಿವ್ಯ ಔಷದ. ಸಂಗೀತಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಎಂದು ತಿಳಿಸಿದರು.
ಎಸ್.ಆರಮಂಜುನಾಥ್ ಹಾಗೂ ಜಿ.ವಿಜಯಕುಮಾರ್. ಶ್ರೀಮತಿ ಶಶಿರೇಖಾ. ಕುಬೇರ ನಾಯಕ್ ಅವರನ್ನು ಸನ್ಮಾನಿಸಲಾಯಿತು.
ಶಿವಮೊಗ್ಗ ಶಿಕ್ಷಕರ ಗಾಯನ ವೇದಿಕೆ ಸಂಸ್ಥಾಪಕ, ಆಯೋಜಕರಾದ ಶಿಕ್ಷಕ ಬಿ.ಕುಬೇರ್ ನಾಯ್ಕ್ ಸ್ವಾಗತಿಸಿದರು. ಶಿಕ್ಷಣ ಸಂಯೋಜಕಿ ಕೆ.ಕೆ.ಶಶಿರೇಖಾ ವಂದನಾರ್ಪಣೆ ನಡೆಸಿಕೊಟ್ಟರು. ರಾಜ್ಯ, ರಾಷ್ಟ್ರಮಟ್ಟದ ಕ್ರೀಡೆ, ಸಂಗೀತ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಗೌರವಿಸಲಾಯಿತು. ಶಿಕ್ಷಕಿ ಸುಮ ಪರಶುರಾಮ್ ಮತ್ತಿತರರು ಹಾಜರಿದ್ದರು.

ಹೊಸನಗರ ವಿಧಾನ ಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹ: ಹಿರಿಯ ರಾಜಕಾರಣಿ ಬಿ.ಸ್ವಾಮಿರಾವ್ ನೇತೃತ್ವದಲ್ಲಿ ಪಾದಯಾತ್ರೆ

0

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ಹೊಸನಗರದಿಂದ ರಿಪ್ಪನ್ ಪೇಟೆವರೆಗೆ 45 ಕಿ.ಮೀ. ಬೃಹತ್ಪಾದಯಾತ್ರೆ ಆರಂಭಗೊಂಡಿದೆ.

ಹೊಸನಗರದ ಮೂಲ ಗದ್ದೆ ಮಠದ ಅಭಿನವ ಶ್ರೀ ಚನ್ನಬಸವ ಸ್ವಾಮೀಜಿ, ಶಾಸಕ ಬಿ ಸ್ವಾಮಿ ರಾವ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಅವರ ನೇತೃತ್ವದಲ್ಲಿ ಪಾದಯಾತ್ರೆ ಆರಂಭಗೊಂಡಿದೆ.

ಹೊಸನಗರ ತಾಲೂಕು ಅಭಿವೃದ್ಧಿಗಾಗಿ ಕ್ಷೇತ್ರ ಮರು ಸ್ಥಾಪನೆಗೆ ಒತ್ತಾಯಿಸಲಾಯಿತು. ಜನಪ್ರತಿನಿಧಿಗಳು ಸೇರಿದಂತೆ ಸಾವಿರಾರು ಜನರು ಪಾದಯಾತ್ರೆಯಲ್ಲಿ ಪಕ್ಷತೀತವಾಗಿ ಭಾಗಿಯಾಗಿದ್ದಾರೆ.

ಬಹಿರಂಗ ಸಮಾವೇಶದ ಬಳಿಕ ರಿಪ್ಪನ್ ಪೇಟೆಯಲ್ಲಿ ಪಾದಯಾತ್ರೆ ಕೊನೆಗೊಳ್ಳಲಿದೆ.

ಕಾಡು ಹಂದಿ ಕಾಟ ತಪ್ಪಿಸಲು ಇಟ್ಟ ಕಚ್ಚಾ ಬಾಂಬ್ ಸಿಡಿದು ಮಹಿಳೆ ಗಾಯಾಳು

0

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆವಟೂರಿನಲ್ಲಿ
ಕಾಡು ಹಂದಿಗೆ ಅಡಿಕೆಯಲ್ಲಿ ಇಟ್ಟಿದ್ದ ಕಚ್ಚಾ ಬಾಂಬ್ ಸಿಡಿದು ಮಹಿಳೆಗೆ ಗಾಯವಾಗಿರುವ ಘಟನೆ ನಡೆದಿದೆ.

ಹಂದಿ ಶಿಕಾರಿ ಮಾಡಲು ಇಟ್ಟಿದ್ದ ಸಿಡಿಯುವ ಕಚ್ಚಾ ಬಾಂಬ್ ಸಿಡಿದು ಮಹಿಳೆ
ಕೈಯ ಐದು ಬೆರಳುಗಳಿಗೆ ಸಂಪೂರ್ಣ ಹಾನಿ ಉಂಟಾಗಿದೆ.

ತೋಟದಲ್ಲಿ ಹಂದಿ ಶಿಕಾರಿ ಮಾಡಲು ಅಡಿಕೆ ಒಳಗೆ ಇಟ್ಟಿದ್ದ ಕಚ್ಚಾ ಬಾಂಬ್ ಅನ್ನು
ನಾಯಿ ಕಚ್ಚಿಕೊಂಡು ಮನೆಯ ಅಂಗಳಕ್ಕೆ ತಂದಿದೆ.

ಅದನ್ನು ಮುಟ್ಟಿದ ಕಮಲಮ್ಮ ಅವರ ಕೈ ಸಂಪೂರ್ಣ ಸುಟ್ಟು ಗಾಯಗಳಾಗಿವೆ.

ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರಿದೀಪ- ಎಸ್.ಎನ್.ಚನ್ನಬಸಪ್ಪ

0

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ ಬೆಳವಣಿಗೆಗಾಗಿ ಶ್ರಮಿಸಿದ ಶ್ರೇಷ್ಠವ್ಯಕ್ತಿ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಡಾ. ಬಾಬು ಜಗಜೀವನ್ ರಾಮ್ ರವರ 119 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಗಜೀವನ್ ರಾಮ್ ಅವರು ಕೇವಲ ರಾಜಕಾರಣಿಯಾಗಿರದೆ, ದಲಿತರ ಮತ್ತು ಶೋಷಿತರ ಹಕ್ಕುಗಳಿಗಾಗಿ ಶ್ರಮಿಸಿದ ಮಹಾನ್ ನಾಯಕ.
ಬಾಬೂಜಿರವರು ದೇಶಕ್ಕೆ ಪೂರಕವಾದ ನಿಲುವುಗಳನ್ನು ತಂದು ಕೊಟ್ಟ ಶ್ರೇಷ್ಠ ವ್ಯಕ್ತಿ. ಮಲಹೊರುವ ಅನಿಷ್ಟ ಪದ್ಧತಿ ನಿಷೇಧಿಸುವಲ್ಲಿ ಅಗ್ರಗಣ್ಯರಾಗಿ ನಿಂತವರು. ದಲಿತ ಸಮುದಾಯದಿಂದ ಬಂದು ದೇಶದ ಅತ್ಯುನ್ನತ ಸ್ಥಾನಗಳನ್ನು ಅಲಂಕರಿಸಿದ ಇವರು, ಸಮಾನತೆಗಾಗಿ ನಡೆಸಿದ ಹೋರಾಟ ಅವಿಸ್ಮರಣೀಯವಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು ಹಾಗೂ ಅವರ ಆಶಯಗಳನ್ನು ಮುಂದೆ ತೆಗೆದುಕೊಂಡು ಹೋಗಬೇಕು ಎಂದರು.
ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ,ಯಾವುದೇ ವ್ಯಕ್ತಿಯನ್ನು ಸಂಕುಚಿತ ಮನೋಭಾವನೆಯಿಂದ ನೋಡಬಾರದು.‌ ಶೋಷಿತರ ಧ್ವನಿಯಾಗಿದ್ದ ಬಾಬೂಜಿಯವರನ್ನು ನಾವು ಸಮಾಜದ ಶ್ರೇಷ್ಟ ವ್ಯಕ್ತಿಯನ್ನಾಗಿ ಸ್ವೀಕರಿಸಿ ಅವರ ತತ್ವಗಳು, ಕೊಡುಗೆಗಳನ್ನು ಮಾರ್ಗಸೂಚಿಗಳಾಗಿ ನಮ್ಮಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ದೇಶ ಕಟ್ಟುವ ಕಾರ್ಯದಲ್ಲಿ ಒಗ್ಗೂಡಿ ದೇಶವನ್ನು ಮುನ್ನಡೆಸಬೇಕು.
1936 ರಿಂದ 1986 ರವರೆಗೆ 50 ವರ್ಷ ಶಾಸಕಾಂಗದಲ್ಲಿ ಜನರಿಗೋಸ್ಕರ ನಿರಂತರ ಕಾರ್ಯ ನಿರ್ವಹಿಸಿದಂತಹ ಉನ್ನತ ವ್ಯಕ್ತಿ ಬಾಬೂಜಿ. ಕಾರ್ಮಿಕ, ಕೃಷಿ, ರಕ್ಷಣಾ ಸಚಿವರಾಗಿ, ಉಪ ಪ್ರಧಾನಿಯಾಗಿ, ವಿಭಿನ್ನ ಕ್ಷೇತ್ರದಲ್ಲಿ ಕಾನೂನು ಮಾಡಿ ಸಾಮಾಜಿಕ‌ ಕಳಕಳಿ ಮೆರೆದರು ಎಂದು ಸ್ಮರಿಸಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜು ಜೀವಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸತೀಶ್ ಜಿ. ಕೆ. ವಿಶೇಷ ಉಪನ್ಯಾಸ ನೀಡಿ ಮಾತನಾಡಿ, 1935 ರಿಂದ ರಾಜಕೀಯ ರಂಗಕ್ಕೆ ಪ್ರವೇಶ ನೀಡಿ ದೇಶದಲ್ಲಿ ಸಕ್ರಿಯ ರಾಜಕೀಯ ವ್ಯವಸ್ಥೆ ನಿರ್ಮಿಸುವಲ್ಲಿ ಪ್ರಮುಖ ರಾದವರು ಬಾಬುಜಿರವರು. ಅಸ್ಪೃಶ್ಯ ಸಮಾಜದಲ್ಲಿ ಜನಿಸಿದ ಇವರು ತಮ್ಮ ನಿರಂತರ ಶ್ರಮದಿಂದ ಮೇಲ್ಮಟ್ಟಕ್ಕೆ ಬಂದು ಅಸ್ಪೃಶ್ಯತೆಯಿಂದ ಬಳಲುತ್ತಿದ್ದ ಕೋಟ್ಯಂತರ ಜನರ ಬದುಕು ಕಟ್ಟುವಲ್ಲಿ ಯಶಸ್ವಿಯಾದರು. ಕಾರ್ಮಿಕರನ್ನೆಲ್ಲ ಒಗ್ಗೂಡಿಸಿ ಎಲ್ಲರಿಗೂ ಪರಿಚಿತರಾದರು. ತಮ್ಮ ಹಕ್ಕುಗಳ ರಕ್ಷಣೆಗಾಗಿ
Babu Jagjivanram ರೈತರನ್ನು ಮತ್ತು ಕಾರ್ಮಿಕರನ್ನು ಜಾಗೃತ ಗೊಳಿಸುವ ಕಾರ್ಯ ಕೈಗೊಂಡರು. ದಲಿತರ, ಕಾರ್ಮಿಕರ ಮಕ್ಕಳಿಗಾಗಿ ಉಚಿತ ಶಿಕ್ಷಣವನ್ನು ಘೋಷಣೆ ಮಾಡಿದರು. ಕಾರ್ಮಿಕ ಮಂತ್ರಿಯಾಗಿ ಕಾರ್ಮಿಕರಿಗೆ ನ್ಯಾಯ ಒದಗಿಸಲು ಹೋರಾಟ ನಡೆಸಿ, ಅವರಿಗೆ ಕನಿಷ್ಠ ವೇತನ ಕಾಯ್ದೆ ಮತ್ತು ಭವಿಷ್ಯ ನಿಧಿ ವ್ಯವಸ್ಥೆಯನ್ನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ.,ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಲ್ಲೇಶಪ್ಪ.ಡಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್.ಹೆಚ್, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Bharat Scouts and Guides ಹೃದಯ ಕ್ರಿಯೆ ನಿಂತಾಕ್ಷಣ ಸಿಪಿಆರ್ ಮಾಡುವ ಕ್ರಮಗಳ ಬಗ್ಗೆ ಎಲ್ಲರಲ್ಲೂ ಅರಿವಿರಲಿ- ಡಾ.ಬಿ.ವಿ.ಚಂಪಾ

0

Bharat Scouts and Guides ಹೃದಯ ಮತ್ತು ಉಸಿರಾಟ ನಿಲ್ಲಿಸಿದಾಗ ತಕ್ಷಣ ನೀಡುವ ತುರ್ತು ಚಿಕಿತ್ಸೆ ಕಾರ್ಡಿಯೋಪಲ್ಮನರಿ ರಿಸಸ್ಸಿಟೇಶನ್ ( ಸಿಪಿಆರ್ ) ಆಗಿದೆ. ಇದು ವ್ಯಕ್ತಿಯ ಜೀವ ಉಳಿಸಲು ಸಹಾಯ ಮಾಡುತ್ತದೆ ಎಂದು ಸಿಮ್ಸ್ ಶಿವಮೊಗ್ಗ ಅರಿವಳಿಕೆ ವಿಭಾಗ ಮುಖ್ಯಸ್ಥೆ, ಪ್ರಾಧ್ಯಾಪಕಿ ಡಾ. ಬಿ.ವಿ.ಚಂಪಾ ಹೇಳಿದರು.

ಜಿಲ್ಲಾ ಸ್ಕೌಟ್ ಭವನದಲ್ಲಿ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ವ್ಯಕ್ತಿ ಪ್ರತಿಕ್ರಿಯಿಸದಿದ್ದರೆ, ಉಸಿರಾಟ ಇಲ್ಲದಿದ್ದರೆ, ಹೃದಯ ಬಡಿತ ಕಾಣದಿದ್ದರೆ ಸಿಪಿಆರ್ ಮಾಡಬೇಕು. ಮೊದಲು ವ್ಯಕ್ತಿಯನ್ನು ಸಮತಟ್ಟಾದ ಸ್ಥಳದಲ್ಲಿ ಮಲಗಿಸಬೇಕು. ಎದೆ ಮಧ್ಯದಲ್ಲಿ ಕೈಗಳನ್ನು ಇಟ್ಟು ಒತ್ತಡ ನೀಡಬೇಕು. ನಿಮಿಷಕ್ಕೆ 100–120 ಬಾರಿ ಒತ್ತಡ ಹಾಕಬೇಕು. ಒತ್ತಡದ ಆಳ 5–6 ಸೆಂ.ಮೀ ಇರಬೇಕು. 30 ಚೆಸ್ಟ್ ಕಂಪ್ರೆಸನ್, 2 ಬಾರಿ ರೆಸ್ಕೂö್ಯ ಬ್ರಿಥ್ ಟೇಕ್ ಮಾಡಬೇಕು. ಆಂಬುಲೆನ್ಸ್ ಬರುವವರೆಗೆ ಮುಂದುವರಿಸಬೇಕು. ತಕ್ಷಣ ಸಿಪಿಆರ್ ಪ್ರಾರಂಭಿಸಿದರೆ ಜೀವ ಉಳಿಯುವ ಸಾಧ್ಯತೆ ಹೆಚ್ಚು. ಎಂದು ತಿಳಿಸಿದರು.

ಸಹ ಪ್ರಾಧ್ಯಾಪಕಿ ಡಾ ಯಶೋಧ ವಿ, ಶಿಕಾರಿಪುರ ತಾಲೂಕು ಅರಿವಳಿಕೆ ತಜ್ಞ ಡಾ ವಿನಯ್, ಡಾ ತೇಜಸ್, ಡಾ ಅಭಿಷೇಕ್, ಶುಶ್ರೂಷಾಧಿಕಾರಿ ಗಣೇಶ್ , ಸಿಬ್ಬಂದಿ ವರ್ಗ, ದರ್ಶನ್ ಹಾಗೂ ಸಚಿನ್ ಹಾಜರಿದ್ದರು

Bharat Scouts and Guides ಸಂಯೋಜಕ ರಾಜೇಶ್ ವಿ ಅವಲಕ್ಕಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ ವಂದಿಸಿದರು. ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯ್ ಕುಮಾರ್, ಸಹಾಯಕ ಜಿಲ್ಲಾ ಆಯುಕ್ತ ಮಲ್ಲಿಕಾರ್ಜುನ ಕಾನೂರ್, ಸಹಾಯಕ ರಾಜ್ಯ ಸಂಘಟನಾ ಆಯುಕ್ತೆ ಸುಮನಾ ಶೇಖರ್, ಹಿರಿಯ ಗೈಡರ್ ಶಾಂತಮ್ಮ, ಹಿರಿಯ ಸ್ಕೌಟರ್ ರುದ್ರಪ್ಪ ಚೀಲೂರ್, ಎನ್. ಡಿ. ಆರ್. ಎಫ್. ತಂಡದ ಮುಖ್ಯಸ್ಥ ವಿವೇಕ್ ಮತ್ತು ಇತರೆ ಸದಸ್ಯರು ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಭಾಗಗಳಿಂದ 162 ವಿದ್ಯಾರ್ಥಿಗಳು ಭಾಗವಹಿಸಿದ್ದರು.

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

0

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ, ಎಸ್. ವಿ. ಬಡಾವಣೆ, ಮೆಸ್ಕಾಂ ಕಛೇರಿಯಲ್ಲಿ ಏಪ್ರಿಲ್- 07 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.

MESCOM ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;.9480841339.

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

0

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ ಶವ ಪತ್ತೆಯಾಗಿದೆ. ಆತನ ಚಹರೆ 5.3 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋದಿ ಮೈಬಣ್ಣ, ದುಂಡುಮುಖ ಹೊಂದಿದ್ದು, ಮೈಮೇಲೆ ಬಟ್ಟೆಗಳಿರುವುದಿಲ್ಲ.

ಈ ಮೃತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ತುಂಗಾನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.