Thursday, March 5, 2026
Thursday, March 5, 2026
Home Blog Page 351

Shivaganga Yoga Center ಯೋಗ ಪ್ರಾಣಾಯಾಮ ಧ್ಯಾನ ಆರೋಗ್ಯ‌ ರಕ್ಷಣೆಯಲ್ಲಿ ಅತ್ಯಂತ ಪರಿಣಾಮಕಾರಿ- ಡಾ.ಸಿ.ವಿ. ರುದ್ರಾರಾಧ್ಯ

0

Shivaganga Yoga Center ನಮ್ಮ ಒತ್ತಡದ ಬದುಕಿನಲ್ಲಿ ನಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಲು ಉತ್ತಮ ಜೀವನ ಶೈಲಿ ಆರೋಗ್ಯ ಪದ್ಧತಿ ಜೊತೆಗೆ ಯೋಗ ಪ್ರಾಣಾಯಾಮ ಧ್ಯಾನ ಅತ್ಯಂತ ಪರಿಣಾಮಕಾರಿಯಾಗಿ ನಮ್ಮ ಆರೋಗ್ಯವನ್ನು ಸಂರಕ್ಷಿಸುತ್ತದೆ ಎಂದು ಶಿವಗಂಗಾ ಯೋಗ ಕೇಂದ್ರದ ಯೋಗಾಚಾರ್ಯ ಡಾ. ಸಿ. ವಿ. ರುದ್ರಾರಾಧ್ಯ ರವರು ಅಭಿಮತ ವ್ಯಕ್ತಪಡಿಸಿದರು.

ಅವರು ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಗೆ ಭೇಟಿ ನೀಡಿ ಶಿಬಿರಾರ್ಥಿಗಳನ್ನ ಕುರಿತು ಮಾತನಾಡಿದರು ಯೋಗ ಹಾಗೂ ಪ್ರಾಣಾಯಾಮ ಧ್ಯಾನದಿಂದ ಮನುಷ್ಯನಿಗೆ ದೈಹಿಕ ಮಾನಸಿಕ ಹಾಗೂ ಆಧ್ಯಾತ್ಮಿಕ ಮತ್ತು ಬೌದ್ಧಿಕ ಜೊತೆಗೆ ಮನಃಶಾಂತಿ ಲಭಿಸುತ್ತದೆ ಎಂದು ನುಡಿದರು.

ಪ್ರತಿನಿತ್ಯ ಒಂದು ಗಂಟೆಗಳ ಕಾಲ ನಾವು ಯೋಗವನ್ನು ಮಾಡುವುದರಿಂದ ನೂರಾರು ಲಾಭಗಳಿವೆ. ನಮ್ಮ ದೈಹಿಕ ಚಟುವಟಿಕೆಗಳಲ್ಲಿ ಸದಾ ಉತ್ಸಾಹ ಲವಲವಿಕೆ ಹಾಗೂ ಮುಖದಲ್ಲಿ ಕಾಂತಿ ಹೆಚ್ಚಿಸುತ್ತದೆ. ಪ್ರತಿಯೊಬ್ಬರು ಯೋಗವನ್ನು ಮಾಡುವುದರ ಮುಖಾಂತರ ರೋಗವನ್ನು ಮುಂದೂಡಬಹುದು. ಶಿವಮೊಗ್ಗ ನಗರದಲ್ಲಿ 34 ಕಡೆ ಉಚಿತವಾಗಿ ಯೋಗ ಪ್ರಾಣಯಾಮ ಧ್ಯಾನದ ತರಗತಿಗಳು ನಡೆಯುತ್ತಲಿದ್ದು ವಿಶೇಷವಾಗಿ ಈ ಬೇಸಿಗೆಯಲ್ಲಿ 21 ದಿನಗಳ ಶಿಬಿರಗಳನ್ನು ಸಹ ಆಯೋಜನೆ ಮಾಡುತ್ತಿದ್ದೇವೆ. ಇದರ ಸದುಪಯೋಗವನ್ನು ಸಾರ್ವಜನಿಕರು ಹಾಗೂ ನಮ್ಮ ಶಿಬಿರಾರ್ಥಿಗಳು ಪಡೆದುಕೊಳ್ಳಬೇಕು ಎಂದು ನುಡಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗಕ್ಕೆ ವಿಶೇಷವಾದ ಸ್ಥಾನಮಾನವಿದೆ ಔಷಧಿಯಿಂದ ಗುಣಪಡಿಸಲಾಗದ ಕಾಯಿಲೆಗಳಿಗೆ ಯೋಗದಿಂದ ಪರಿಹಾರವನ್ನು ಕಂಡುಕೊಳ್ಳಬಹುದು. ಬ್ರಾಹ್ಮಿ ಮುಹೂರ್ತದಲ್ಲಿ ಮಾಡುವ ಈ ಯೋಗ ನಮ್ಮಲ್ಲಿ ಸಕಾರಾತ್ಮಕ ಭಾವನೆಯನ್ನು ಮೂಡಿಸುತ್ತದೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಟ್ರಸ್ಟಿಗಳಾದ ಹೆಚ್. ಎಂ. ಚಂದ್ರಶೇಖರಯ್ಯನವರು ಮಾತನಾಡುತ್ತಾ ಯೋಗ ಮಾಡುವುದರಿಂದ ದೇಹದಲ್ಲಿ ರಕ್ತ ಸಂಚಲನೆ ಚೆನ್ನಾಗಿ ಆಗುವುದರಿಂದ ಹೃದಯಘಾತದ ಪ್ರಮಾಣ ಕಡಿಮೆ ಇದರಿಂದ ಖಿನ್ನತೆ ಹಾಗೂ ಬೇಸರ ದೂರವಾಗುತ್ತದೆ ಆದ್ದರಿಂದ ಯೋಗವನ್ನು ಮನೆ ಮನೆಗೆ ಎಲ್ಲಾ ಮನಸ್ಸುಗಳಿಗೆ ತಲುಪಿಸುವಂತಹ ಕೆಲಸ ನಮ್ಮಿಂದ ಆಗಬೇಕು ಎಂದು ಕರೆ ನೀಡಿದರು.

ರಾಘವ ಶಾಖೆಯ ಯೋಗ ಶಿಕ್ಷಕರಾದ ಜಿ.ಎಸ್. ಓಂಕಾರ್ ವರು ಮಾತನಾಡುತ್ತಾ. ನಗರದಲ್ಲಿ ಉಚಿತವಾಗಿ ನಡೆಸುತ್ತಿರುವ ತರಗತಿಗಳಲ್ಲಿ ಯೋಗ ಪ್ರಾಣಯಾಮ ಸಾವಿರಾರು ಜನರು ಪ್ರತಿನಿತ್ಯ ಅಭ್ಯಾಸ ಮಾಡುತ್ತಿರುವುದು ನಮ್ಮ ಸಂಸ್ಥೆಗೆ ಒಂದು ಹೆಮ್ಮೆ ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕರಾಗ ವಿಜಯ ಕೃಷ್ಣ, ಸುಜಾತಾ ಮಧುಕೇಶ್ವರ್, ಹರೀಶ್, ಆನಂದ್ ಗಾಯತ್ರಿ ಅಶೋಕ್, ವಿಜಯಕುಮಾರ್, ಜಿ ನರಸೋಜಿ ರಾವ್, ಶಂಕರ್, ಶ್ರೀನಿವಾಸ್, ಸತೀಶ್ ಸುಬ್ರಮಣಿ,ಮಹೇಶ್, ಮುಂತಾದ ಪ್ರಮುಖರು ಉಪಸ್ಥಿತರಿದ್ದರು.

Government First Grade College ಹೊಳೆ ಹೊನ್ನೂರಿನಲ್ಲಿ ಏಪ್ರಿಲ್ 4 ರಂದು “ಬೌದ್ದಿಕ ಆಸ್ತಿ‌ ಹಕ್ಕು” ಕಾರ್ಯಾಗಾರ

0

Government First Grade College ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಳೆಹೊನ್ನೂರು, ಭದ್ರಾವತಿ ತಾಲ್ಲೂಕು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಆಯೋಜಿಸುವ ‘ಬೌದ್ದಿಕ ಆಸ್ತಿ ಹಕ್ಕು : ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರ’ವನ್ನು ಏ.04 ರ ಬೆಳಿಗ್ಗೆ 10 ಕ್ಕೆ ಹೊಳೆಹೊನ್ನೂರಿನ ಸರ್ಕಾರಿ ಪ್ರ.ದ.ಕಾಲೇಜಿನ ಹೊನ್ನಸಿರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಇವರು ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರು ಹಾಗೂ ಸಿಡಿಸಿ ಅಧ್ಯಕ್ಷರಾದ ಶಾರದಾ ಪರ‍್ಯಾನಾಯ್ಕ, ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿಯ ಜಂಟಿ ನಿರ್ದೇಶಕ ಪ್ರೊ.ಕೇಶವ ಹೆಚ್, ಪರಿಸರ ತಜ್ಞರಾದ ಪ್ರೊ.ಬಿ.ಎಂ ಕುಮಾರಸ್ವಾಮಿ, ಬಂಧನ್ ಬ್ಯಾಂಕ್‌ನ ವ್ಯವಸ್ಥಾಪಕ ಪ್ರಕಾಶ್ ಎಂ ಪಾಲ್ಗೊಳ್ಳುವರು.

Government First Grade College ಹೊಳೆಹೊನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರತಿಭಾ ಕೆ ಆರ್ ಅಧ್ಯಕ್ಷತೆ ವಹಿಸುವರು.
ಹಾಸನದ ಸರ್ಕಾರಿ ಕಾನೂನು ಕಾಲೇಜಿನ ಸಹ ಪ್ರಾಧ್ಯಾಪಕರಾದ ಅರುಂಧತಿ ಭಾರತದಲ್ಲಿ ಬೌದ್ದಿಕ ಆಸ್ತಿ ಹಕ್ಕು ಕುರಿತು ಹಾಗೂ ಎಸ್‌ಸಿಕೆ ಅಸೋಸಿಯೇಟ್ಸ್ನ ಐಪಿ ಅಟಾರ್ನಿ ಸಾಧ್ವಿ ಸಿ ಕಾಂತ್ ಬೌದ್ದಿಕ ಆಸ್ತಿ ಹಕ್ಕು ಮತ್ತು ಸಂಶೋಧನೆಗಳ ಕುರಿತು ಮಾತನಾಡುವರು. ಐಕ್ಯುಸಿ ಸಂಚಾಲಕರಾದ ಡಾ.ಭಾರತಿ ದೇವಿ ಪಿ, ಡಾ ಆಸ್ಮಾ ಮೇಲಿನಮನಿ, ಸಂಘಟನಾ ಸಮಿತಿ ಸದಸ್ಯರು, ಬೋಧಕ, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಪಾಲ್ಗೊಳ್ಳುವರು.

CM Siddharamaiah ರಾಜ್ಯಕ್ಕೆ ರಾಷ್ಡ್ರೀಯ ಹೆದ್ದಾರಿ ಸಂಪರ್ಕ ಜಾಲ‌ ವೃದ್ಧಿಗೆ ಸಹಕಾರ ನೀಡಿದ ಸಚಿವ‌‌ ಗಡ್ಕರಿ ಅವರಿಗೆ‌ ಸಿದ್ಧರಾಮಯ್ಯ ಅಭಿನಂದನೆ

0

CM Siddharamaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು.

ಪತ್ರದ ವಿವರ:

ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಕರ್ನಾಟಕ ರಾಜ್ಯದ ಪರವಾಗಿ ಅಭಿನಂದಿಸುತ್ತೇನೆ. ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾಗಿರುವ ಕೆಳಕಂಡ ಪ್ರಮುಖ ಯೋಜನೆಗಳ ವಿವರ ಇಂತಿದೆ.

  1. ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಮಣಿಪಾಲ್ ಆಸ್ಪತ್ರೆ ಜಂಕ್ಷನ್ (ಮೈಸೂರು ನಗರ)ದಲ್ಲಿ ಫ್ಲೈಓವರ್ ನಿರ್ಮಾಣ.
  2. 30.35 ಕಿ.ಮೀ. ಉದ್ದದ ಹುಬ್ಬಳ್ಳಿ ಧಾರವಾಡ ಷ್ಟಪಥ ಬೈಪಾಸ್ ನಿರ್ಮಾಣ
  3. ರಾ.ಹೆ 369 ಇ( ಸಿಗಂದೂರು ಸೇತುವೆ) ರಲ್ಲಿ ಶರಾವತಿ ಹಿನ್ನೀರಿನ ಮೇಲೆ ಪ್ರಮುಖ ಸೇತುವೆ ನಿರ್ಮಾಣ.
  4. ರಾ.ಹೆ.167 ಹಗರಿ-ಜೆಡ್ಚೆರ್ಲಾ ಸೆಕ್ಷನ್ ನಲ್ಲಿ ಕೃಷ್ಣಾ ನದಿ ಮೇಲೆ 180.865 ಕಿ.ಮೀ.ನಲ್ಲಿ ಪ್ರಮುಖ ಸೇತುವೆ ನಿರ್ಮಾಣ.
  5. ಹೊಸಪೇಟೆ ಯಿಂದ ಬಳ್ಳಾರಿ ಸೆಕ್ಷನ್ ನ ಹಳೆಯ ರಾ.ಹೆ-63(ಹೊಸ ರಾ.ಹೆ-67) ನ ಕಿ.ಮಿ.340+640 (ಬಳ್ಳಾರಿ ನಗರ ಮಿತಿಯಲ್ಲಿನ ಸುಧಾ ಕ್ರಾಸ್) ನಲ್ಲಿ LC-110E ಬದಲಿಗೆ 2-ಲೇನ್ ROB ನಿರ್ಮಾಣ.
  6. ರಾ.ಹೆ.150ಎ ರಲ್ಲಿನ ಸಿಂದಿಗೆರಿ-ಬಳ್ಳಾರಿ ಸೆಕ್ಷನ್ನ ಕಿ.ಮೀ.235.00 ರಿಂದ 254.800ವರೆಗೆ Two Lane with Paved Shoulders ಗೆ ಅಗಲೀಕರಣ ಯೋಜನೆ.

CM Siddharamaiah ಕರ್ನಾಟಕ ಸರ್ಕಾರವು ರಾಜ್ಯದ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಜಾಲದ ಅಭಿವೃದ್ಧಿಯನ್ನು ಬೆಂಬಲಿಸುತ್ತಿದ್ದು, ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕಂದಾಯ ಇಲಾಖೆಯೊಂದಿಗೆ ಹಾಗೂ ಅರಣ್ಯ ತೀರುವಳಿ ಪ್ರಕ್ರಿಯೆ ತ್ವರಿತಗೊಳಿಸಲು ಅರಣ್ಯ ಇಲಾಖೆಯೊಂದಿಗೆ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿದೆ. ನೀರು ಹಾಗೂ ವಿದ್ಯುತ್ ಸಂಪರ್ಕ ಸೇರಿದಂತೆ Utility Shifting ಕಾರ್ಯವನ್ನು ಚುರುಕುಗೊಳಿಸಲು ಸಂಬಂಧಪಟ್ಟ ಇಲಾಖೆಗೊಂದಿಗೆ ಸಭೆ ನಡೆಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ.

10,000 ಪಿ.ಯು.ಸಿ ಗಿಂತಲೂ ಸಂಚಾರ ತೀವ್ರತೆ ಹೆಚ್ಚಿರುವ ಇರುವ ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ರಾಜ್ಯದ ಸಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಈ ಕೆಳಕಂಡ ಯೋಜನೆಗಳನ್ನು ಮಂಜೂರು ಮಾಡಬೇಕೆಂದು ಮಾನ್ಯ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವರಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

  1. ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಮೈಸೂರಿನ ರಾಷ್ಟ್ರೀಯ ಹೆದ್ದಾರಿ -275ರಲ್ಲಿ 9 ಗ್ರೇಡ್ ಸಪರೇಟರ್ಗಳ ನಿರ್ಮಾಣ.
  2. ರಾಷ್ಟ್ರೀಯ ಹೆದ್ದಾರಿ -75 ( ಹಳೆಯ ರಾ.ಹೆ 48) ರ ಶಿರಾಡಿ ಘಾಟ್ ನ 237+000 ರಿಂದ 263+000 ( ಮಾರನಹಳ್ಳಿಯಿಂದ ಅಡ್ಡಹೊಳೆ ಸೆಕ್ಷನ್) ವರೆಗೆ ಸುರಂಗ ನಿರ್ಮಾಣ ಮಾಡುವ ಮೂಲಕ ಮಂಗಳೂರು ಬಂದರು (ದೇಶದ 7 ನೇ ಅತಿ ದೊಡ್ಡ ಬಂದರು) ಮತ್ತು ರಾಜ್ಯ ರಾಜಧಾನಿ ಬೆಂಗಳೂರಿನ ನಡುವೆ ಸಂಪರ್ಕವನ್ನು ಸುಧಾರಿಸುವುದು.
  3. ಪುಣೆ- ಬೆಂಗಳೂರು ಗ್ರೀನ್ ಫೀಲ್ಡ್ ಎಕ್ಸ್ ಪ್ರೆಸ್ ವೇ ನ್ನು ಶೀಘ್ರವಾಗಿ ಮಂಜೂರು ಮಾಡುವುದು.
  4. ಮುಂಬರಲಿರುವ ವಾರ್ಷಿಕ ಯೋಜನೆ 20205-26 ರಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು 24000 ಕೋಟಿಗಳಿಗೆ ಹೆಚ್ಚಿಸಿ ಇಮಂಜೂರು ಮಾಡುವುದು.
  5. ಬೆಂಗಳೂರಿ ನಗರದ ಹೆಬ್ಬಾಳ ಜಂಕ್ಷನ್ ನ ರಾಷ್ಟ್ರೀಯ ಹೆದ್ದಾರಿ- 44 ರಲ್ಲಿ ಮೇಲ್ಸೇತುವೆ ನಿರ್ಮಾಣ.
  6. ತಾತ್ವಿಕವಾಗಿ ಘೋಷಿತವಾಗಿರುವ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಆದ್ಯತೆ ಮೇಲೆ ಮೇಲ್ದರ್ಜೆಗೇರಿಸುವುದು.
  7. ಬೆಂಗಳೂರು ನಗರದಲ್ಲಿ ಮೈಸೂರು ರಸ್ತೆಯನ್ನು ಸಂಪರ್ಕಿಸುವ ಸುರಂಗದ ನಿರ್ಮಾಣ ( ರಾ.ಹೆ- 275) ಮತ್ತು ಹೊಸೂರು ರಸ್ತೆ ( ರಾ.ಹೆ-48 ಮತ್ತು ರಾ.ಹೆ-75) ( ಎಲೆಕ್ಟ್ರಾನಿಕ್ ಸಿಟಿ) ಮಾರ್ಗವಾಗಿ ತುಮಕೂರು ರಸ್ತೆ (ರಾ.ಹೆ-48), ಬಳ್ಳಾರಿ ರಸ್ತೆ ( ರಾ.ಹೆ-44) ಮತ್ತು ಹಳೆ ಮದ್ರಾಸು ರಸ್ತೆ ( ಹಳೆ ರಾ.ಹೆ -4)
  8. ಬೆಳಗಾವಿ ನಗರ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಬೆಳಗಾವಿ ನಗರದ ರಾ.ಹೆ-4 ರಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ
  9. ಕಲಬುರ್ಗಿ-ವಾಡಿ-ಯಾದಗಿರಿ-ಕೆಂದೆಚೂರ್-ಜಡ್ ಚೇರ್ಲಾ ವಿಭಾಗದಲ್ಲಿ ಚತುಷ್ಪಥ ರಸ್ತೆ ನಿರ್ಮಿಸಿ ರಸ್ತೆ ಅಗಲೀಕರಣ ಕೈಗೊಳ್ಳುವುದು.
  10. ರಾಜ್ಯದ ಯಾದಗಿರಿ ಜಿಲ್ಲೆಯಲ್ಲಿ ರಾ.ಹೆ 150ಎ ( ಜೇವರ್ಗಿ- ಚಾಮರಾಜನಗರ ವಿಭಾಗ) ರಲ್ಲಿ ಭೀಮರಾಯನಗುಡಿ ಮತ್ತು ಶಹಪುರ ಪಟ್ಟಣ ಕ್ಕೆ 2 ಎಲ್+ ಪಿಎಸ್ ಗ್ರೀನ್ ಫೀಲ್ಡ್ ಸಂಯೋಜಿತ ಬೈಪಾಸ್ ನಿರ್ಮಾಣ
  11. ಕರ್ನಾಟಕ ರಾಜ್ಯದಲ್ಲಿ ಎಸ್ ಪಿ ಯು ಆರ್ ಅಡಿಯಲ್ಲಿ ರಾ.ಹೆ-752ಕೆ ನಿಂದ ರಾ.ಹೆ -65 ವರೆಗೆ ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವುದು
  12. ಕರ್ನಾಟಕ ರಾಜ್ಯದಲ್ಲಿ ಎಸ್ ಪಿ ಯು ಆರ್ ಅಡಿಯಲ್ಲಿ ದೇವಲ್ ಗಾಣಗಾಪುರದಿಂದ ಪಂಡರಾಪುರವರೆಗಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವುದು ಈ ಎಲ್ಲಾ ಪ್ರಸ್ತಾವನೆಗಳನ್ನು ಪರಿಗಣಿಸಿ ಮಂಜೂರಾತಿಗಳನ್ನು ನೀಡಲು ಸಂಬಂಧಿಸಿದವರಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಪತ್ರದಲ್ಲಿ ಕೋರಿದ್ದಾರೆ.

Department of Social Welfare ಏಪ್ರಿಲ್ 5 ರಂದು ಡಾ.ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆಗೆ ಜಿಲ್ಲಾಡಳಿತ ಸಜ್ಜು

0

Department of Social Welfare ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಏ.05 ರ ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್‌ರವರ 118 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಎಸ್ ಇವರ ಘನ ಉಪಸ್ಥಿತಿ ಇರಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ, ಭದ್ರಾವತಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ/ಕೆಆರ್‌ಐಡಿಎಲ್ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ, ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಇವರು ನೆರವೇರಿಸುವರು.

Department of Social Welfare ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಳ್ಳುವರು. ಮೈಸೂರಿನ ಸಾಹಿತಿಗಳು ಹಾಗೂ ಸಮುದಾಯ ಚಿಂತಕರಾದ ದಾಸನೂರು ಕೂಸಣ್ಣ ವಿಶೇಷ ಉಪನ್ಯಾಸ ನೀಡುವರು. ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಸೈನ್ಸ್ ಮೈದಾನದಿಂದ ಅಮೀರ್ ಅಹ್ಮದ್ ಸರ್ಕಲ್, ಗೋಪಿ ಸರ್ಕಲ್ ಮಾರ್ಗವಾಗಿ ಕುವೆಂಪು ರಂಗಮಂದಿರದವೆಗೆ ಡಾ.ಬಾಬು ಜಗಜೀವನರಾಮ್‌ರವರ ಭಾವಚಿತ್ರ ಮೆರವಣಿಗೆ ಇರಲಿದೆ.

Department of Kannada and Culture ಯಾರೇ ಆಗಲಿ‌ ದುಡಿಯದೇ ಬದುಕಬಾರದು ಎಂಬ ಸಂದೇಶ ಸಾರಿದವರು ದೇವರ ದಾಸೀಮಯ್ಯ- ಸಿ‌.ಎಸ್.ಚಂದ್ರಭೂಪಾಲ್

0

Department of Kannada and Culture ನೇಯ್ಗೆಯ ಮೂಲಕ ಮನುಕುಲಕ್ಕೆ ಕಾಯಕದ ದಾರಿ ತೋರಿದ ಮಹಾನ್ ಪುರುಷ ಶ್ರೀ ದೇವರ ದಾಸಿಮಯ್ಯನವರು ನೇಯ್ಗೆಯಲ್ಲಿಯೇ ದೇವರನ್ನು ಕಾಣುತ್ತಿದ್ದರು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ಬಣ್ಣಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನೇಕಾರ ಸಮುದಾಯಗಳ ಒಕ್ಕೂಟ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದಾಸಿಮಯ್ಯನವರು 10 – 11 ನೇ ಶತಮಾನದ ಮೊಟ್ಟ ಮೊದಲ ವಚನಕಾರರು. ಇವರನ್ನು ವಚನಗಳ ಸಂಸ್ಥಾಪಕರು ಅಥವಾ ವಚನಗಳ ತಂದೆ ಎಂದೆನ್ನಬಹುದು. ಇವರು ದೇವರ ಅಂಗದಿಂದ ಜನಿಸಿದವರೆಂಬ ನಂಬಿಕೆಯಿಂದ ದೇವಾಂಗ ಎಂದು ಕರೆಯಲಾಗುತ್ತದೆ. ಹಾಗೂ ದೇವಲ ಮಹರ್ಷಿ ಎಂದೂ ಕರೆಯಲಾಗುತ್ತದೆ.
ಯಾರೇ ಆಗಲೀ ದುಡಿಯದೆ ಬದುಕಬಾರದು ಎನ್ನುತ್ತಿದ್ದ ಅವರು ನೇಯ್ಗೆಯಲ್ಲಿಯೇ ದೇವರನ್ನು ಕಾಣುತ್ತಿದ್ದರು. ಬದುಕಿನ ಬಂಡಿ ಸಾಗಿಸುವ ಪ್ರಕ್ರಿಯೆಯಲ್ಲಿ ಸುಳ್ಳು ಹೇಳಬಾರದು, ವಂಚನೆ ಮಾಡಬಾರದು. ಆಸೆ, ಆಮಿಷಗಳಿಗೆ ಗುರಿಯಾಗಬಾರದು. ಮಾನವನ 9 ರಂಧ್ರಗಳನ್ನು ಹತೋಟಿಯಲ್ಲಿಟ್ಟುಕೊಂಡು ಜೀವನ ನಡೆಸಬೇಕು ಎನ್ನುತ್ತಿದ್ದರು.
ಕಾಯಕವನ್ನೇ ನಂಬಿ ಬದುಕುತ್ತಿರುವ ಹಿಂದುಳಿದ ನೇಕಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕಿದೆ. ಆಗ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹೀಗೆ ಸರ್ವಾಂಗೀಣ ಅಭಿವೃದ್ದಿ ಸಾಧ್ಯವಾಗುತ್ತದೆ ಎಂದರು.
ಸಾಹಿತಿಗಳು ಹಾಗೂ ಸಂಶೋಧಕರಾದ ಬಾಗೂರು ಆರ್ ನಾಗರಾಜಪ್ಪ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ನೇಕಾರ ಸಮಾಜದ ಸಂಸ್ಕೃತಿಯ ಪ್ರತೀಕವಾಗಿ ದೇವರ ದಾಸಿಮಯ್ಯ ಜಯಂತಿಯನ್ನು ಆಚರಿಸಲಾಗುತ್ತಿದೆ. ಇವರು ಆದ್ಯ ವಚನಕಾರ ಮತ್ತು ಮೊದಲನೇ ಬಂಡಾಯ ವಚನಕಾರರು. ದಾಸಿಮಯ್ಯರ ಕುರಿತಾದ ಆಧಾರಗಳನ್ನು ಪ್ರಾಚೀನ ಶಿಲಾ ಶಾಸನ, ಪುರಣಾಗಳಿಂದ ಪಡೆಯಬಹುದು. 11 ನೇ ಶತಮಾನದ ಅವಧಿಯ 7 ಪುಷ್ಕರಿಣಿಗಳು, ಮುದನೂರಿನ 25 ಶಾಸನಗಳಲ್ಲಿ ಕಾಣಬಹುದು.
Department of Kannada and Culture ಸೀರೆ ನೇಯುತ್ತಾ ತಮ್ಮ ಪ್ರಾಪಂಚಿಕ ಜೀವನದಲ್ಲಿ ಸಂಸಾರ ಸಾಗಿಸುತ್ತಾ, ಭಕ್ತಿ ಮಾರ್ಗವೇ ಉನ್ನತ ಎಂದು ಸಾರಿದವರು. ರಾಮನಾಥನ ಆರಾಧಕರಾದ ಇವರು ‘ರಾಮನಾಥ’ ಎನ್ನುವ ನಾಮಾಂಕಿತವನ್ನು ಕೊಟ್ಟು ಅನೇಕ ವಚನಗಳನ್ನು ರಚಿಸಿದ್ದಾರೆ. ತಮ್ಮ ಕಷ್ಟದಲ್ಲಿಯೂ ದಾಸೋಹ ನಡೆಸುತ್ತಿದ್ದ ಇವರು ಮುಂದೆ ತವನಿಧಿ ವರ ಪಡೆದು ಪವಾಡ ಪುರುಷರಾಗುತ್ತಾರೆ ಎಂದು ತಿಳಿಸಿದರು.
ಜಿಲ್ಲಾ ದೇವಾಂಗ ಸಂಘದದ ಅಧ್ಯಕ್ಷ ಟಿ.ರಾಜೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ನೇಕಾರ ಸಮಾಜದವರು ಸಂಘಟಿತರಾಗಬೇಕು. ನಮ್ಮದು ತುಳಿತಕ್ಕೆ ಒಳಗಾದ ಸಮಾಜವಾಗಿದ್ದು ನಮ್ಮ ಸಮುದಾಯಕ್ಕೆ ಇದುವರೆಗೆ ಯಾವುದೇ ಮೀಸಲಾತಿ ಸಿಕ್ಕಲ್ಲ. ಈ ನಿಟ್ಟಿನಲ್ಲಿ ನಾವೆಲ್ಲ ಒಗ್ಗಟ್ಟಾಗಬೇಕೆಂದು ಕರೆ ನೀಡಿದರು.
ಜಿಲ್ಲಾ ಪಟ್ಟಸಾಲಿ ಸಂಘದ ಅಧ್ಯಕ್ಷ ಕಾಂತೇಶ ಕದರಮಂಡಲಗಿ, ಮಲೆನಾಡು ದೇವಾಂಗ ಸಂಘದ ಅಧ್ಯಕ್ಷ ಪಿ.ಆರ್.ಗಿರಿಯಪ್ಪ, ಜಿಲ್ಲಾ ಪದ್ಮಸಾಲಿ ಸಂಘದ ಅಧ್ಯಕ್ಷ ಜೆ.ರಾಮಕೃಷ್ಣಪ್ಪ, ಬನಶಂಕರಿ ಮಹಿಳಾ ಸಂಘದ ಅಧ್ಯಕ್ಷೆ ಜಯಮ್ಮ, ಕುರುಹಿನ ಶೆಟ್ಟಿ ಸಂಘದ ಅಧ್ಯಕ್ಷ ಶಿವಾನಂದ ಶೆಟ್ಟಿ, ಸಮಾಜದ ಮುಖಂಡರಾದ ಸತೀಶ್ ಕುಮಾರ್, ವಿನಾಯಕ್, ನೇಕಾರ ಸಮುದಾಯಗಳ ಒಕ್ಕೂಟದ ಪದಾಧಿಕಾರಿಗಳು, ಇತರೆ ಮುಖಂಡರು, ಶಿವಮೊಗ್ಗ ತಹಶೀಲ್ದಾರ್ ರಾಜೀವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಪಾಲ್ಗೊಂಡಿದ್ದರು.

Police Flag Day ಸಮಾಜದ ಶಾಂತಿ- ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಠೆ ‌& ಪ್ರಾಮಾಣಿಕ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ-ಪುಟ್ಟುಸಿಂಗ್

0

Police Flag Day ಮೂರ್ನಾಲ್ಕು ದಶಕಗಳ ಸುದೀರ್ಘ ಅವಧಿಯಲ್ಲಿ ಹಿರಿಯ ಅಧಿಕಾರಿಗಳ ಸಕಾಲಿಕ ಮಾರ್ಗದರ್ಶನ ಮತ್ತು ಸೂಕ್ತ ಸಲಹೆಯಿಂದಾಗಿ ಸಲ್ಲಿಸಿದ ಪೊಲೀಸ್‌ ಸೇವೆ ತೃಪ್ತಿಕರವೆನಿಸಿದೆ ಎಂದು ನಿವೃತ್ತ ಎ.ಎಸ್ಐ ವಿ.ಎನ್.ಪುಟ್ಟುಸಿಂಗ್‌ ಅವರು ಹೇಳಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್‌ ಘಟಕವು ನಗರದ ಪೊಲೀಸ್‌ ಕವಾಯತು ಮೈದಾನದಲ್ಲಿ ಪೊಲೀಸ್‌ ಧ್ವಜ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ತಮ್ಮ ಸೇವಾ ಅವಧಿಯಲ್ಲಿ ಕಾರ್ಯಕ್ಷೇತ್ರದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟನಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ ಹೆಮ್ಮೆ ನನಗಿದೆ ಎಂದ ಅವರು, ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಪ್ರತಿ ಅಧಿಕಾರಿ-ಸಿಬ್ಬಂಧಿಯೂ ಭಯ ಮತ್ತು ಒತ್ತಡದಿಂದ ಮುಕ್ತಗೊಂಡು ಕೆಲಸ ನಿರ್ವಹಿಸಬೇಕು ಎಂದವರು ನುಡಿದರು.
ಸದಾ ಕಾಲ ಆರೋಗ್ಯವನ್ನು ಕಾಪಾಡಿಕೊಂಡು ಲವಲವಿಕೆಯಿಂದ ಕಾರ್ಯನಿರ್ವಹಿಸಿದ ತೃಪ್ತಭಾವ ಹೊಂದುವಂತೆ ಸಲಹೆ ನೀಡಿದ ಅವರು ಪೊಲೀಸರು ತಮ್ಮ ದೈನಂದಿನ ಕರ್ತವ್ಯದ ಜೊತೆಗೆ ಕುಟುಂಬದ ಬಗ್ಗೆಯೂ ಕಾಳಜಿ ವಹಿಸಬೇಕು. ಇಲಾಖೆಯು ಪೊಲೀಸ್‌ ಅಧಿಕಾರಿ-ಸಿಬ್ಬಂಧಿಗಳಿಗಾಗಿ ನೀಡಿದ ಆರೋಗ್ಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದವರು ನುಡಿದರು.
ಸಮಾರಂಭದಲ್ಲಿ ಸರ್ವರನ್ನು ಸ್ವಾಗತಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌ ಅವರು ವಾರ್ಷಿಕ ವರದಿ ವಾಚಿಸಿ, ಇಲಾಖೆಯು ನಿವೃತ್ತ ಪೊಲೀಸ್ ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಟಾನಗೊಳಿಸಿದೆ. ಪೊಲೀಸ್ ಸಿಬ್ಬಂದಿಗಳ ಕಲ್ಯಾಣ ಕಾರ್ಯಕ್ರಮ ಹಾಗೂ ಪೊಲೀಸರ ಸೇವೆ, ತ್ಯಾಗ, ಬಲಿದಾನಗಳ ಸ್ಮರಣಾರ್ಥವಾಗಿ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಗುತ್ತಿದ್ದು, 1984ರಿಂದ ಪ್ರತಿ ವರ್ಷ ಏಪ್ರಿಲ್ 2ರಂದು ಆಚರಿಸಲಾಗುತ್ತಿದೆ ಎಂದರು.
ಪೊಲೀಸ್‌ ಧ್ವಜದಿಂದ ಸಂಗ್ರಹವಾಗುವ ಹಣದಲ್ಲಿ ಶೇ.50ರಷ್ಟನ್ನು ಪೊಲೀಸರ ಕ್ಷೇಮನಿಧಿಗೆ ಅರ್ಪಿಸಲಾಗುವುದು. ಆ ನಿಧಿಯನ್ನು ಕಾಯಿಲೆಯಿಂದ ಬಳಲುತ್ತಿರುವ ಪೊಲೀಸ್‌ ಸಿಬ್ಬಂಧಿಗಳಿಗೆ, ನಿವೃತ್ತರ ಗೌರವಾರ್ಥ ಮತ್ತು ಮೃತ್ತ ಸಿಬ್ಬಂಧಿಗಳಿಗೆ ಸಹಾಯಧನವಾಗಿ ಬಳಸಿಕೊಳ್ಳಲಾಗುವುದು ಎಂದರು.
Police Flag Day ಕಾರ್ಯಕ್ರಮದಲ್ಲಿ ಪೊಲೀಸ್ ಧ್ವಜವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌ ಸೇರಿದಂತೆ ಆಹ್ವಾನಿತ ಗಣ್ಯರು ಬಿಡುಗಡೆಗೊಳಿಸಿದರು. ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳಾಗಿದ್ದ ಅನಿಲ್‌ಕುಮಾರ್‌ ಭೂಮರೆಡ್ಡಿ, ಕಾರಿಯಪ್ಪ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಧ್ಚಜ ದಿನಾಚರಣೆಯ ಅಂಗವಾಗಿ 6 ಪೊಲೀಸ್ ತಂಡಗಳು ನಿಧಾನ ಹಾಗೂ ತೀವ್ರಗತಿಯ ಪಥಸಂಚಲನ ನಡೆಸಿದವು. ಆರ್.ಪಿ.ಐ. ಪ್ರಶಾಂತ್ ಪಥ ಸಂಚಲನದ ನೇತೃತ್ವ ವಹಿಸಿದ್ದರು. ಸಶಸ್ತ್ರ ಮೀಸಲು ಪಡೆಯ ಸಬ್‌ಇನ್ಸ್‌ಫೆಕ್ಟರ್‌ ಲಕ್ಷ್ಮಣ್‌ ಅವರ ನೇತೃತ್ವದಲ್ಲಿ ಆಕರ್ಷಕ ಪೊಲೀಸ್‌ ಬ್ಯಾಂಡ್‌ ಕಾರ್ಯಕ್ರಮಕ್ಕೆ ಮೆರಗು ತಂದಿತ್ತು.

Rotary ಮಕ್ಕಳ ಸುಪ್ತ ಪ್ರತಿಭೆ‌ ಹೊರಹಾಕಲು ‌ಕ್ರಿಯಾಶೀಲ‌ ಚಟುವಟಿಕೆಗಳು ಪೂರಕ- ಎಸ್.ಸಿ.ರಾಮಚಂದ್ರ

0

Rotary ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಕ್ರಿಯಾಶೀಲ ಚಟುವಟಿಕೆಗಳು ತುಂಬಾ ಪೂರಕ ಎಂದು ನಿವೃತ್ತ ಕಾರ್ಮಿಕ ಅಧಿಕಾರಿ ರೂ.ಣಿ.ಷ ಛಾರಟಿ/ಬಿಲ್ ಟ್ರಸ್ಟ್ ನ ಕಾರ್ಯದರ್ಶಿ ಎಸ್.ಸಿ.ರಾಮಚಂದ್ರ ಅಭಿಮತ ವ್ಯಕ್ತಪಡಿಸಿದರು.

ಶಿವಮೊಗ್ಗದ ರಾಜೇಂದ್ರ ನಗರದಲ್ಲಿರುವ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಚಿಕ್ಕ ಮಕ್ಕಳ ಗ್ರಾಜುಯೇಷನ್ ಸೆರಮನಿ 2024-25’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಮಕ್ಕಳಿಗೆ ಕಲಿಕೆಯ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಕಲೆ ಬಹಳ ಮುಖ್ಯ. ಚಿಕ್ಕ ಮಕ್ಕಳಿಗೆ ಈಗ ಗ್ರಾಜುಯೇಷನ್ ಡೇ ಅವರ ಜೀವನದಲ್ಲಿ ಸದಾ ಹಸಿರಾಗಿರುತ್ತದೆ ಎಂದು ನುಡಿದರು.

ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಹಿಂದೆ ಪದವಿ ಪಡೆದಾಗ ಈ ರೀತಿ ಕೋರ್ಟ್ ಹಾಗೂ ಪೇಟ ಹಾಕಿ ಗೌರವಿಸಿದ್ದನ್ನು ಮರೆಯಲು ಆಗುವುದಿಲ್ಲ. ಇಂದಿನ ಮಕ್ಕಳಿಗೆ ಈ ರೀತಿ ಗ್ರಾಜುಯೇಷನ್ ಡೇ ಮಾಡುವುದರಿಂದ ಚಿಕ್ಕ ಮಕ್ಕಳ ಪೋಷಕರು ಮತ್ತು ಮಕ್ಕಳಿಗೆ ಆತ್ಮವಿಶ್ವಾಸ ಹಾಗೂ ಉತ್ಸಾಹ ಹೆಚ್ಚುತ್ತದೆ. ಇದರಿಂದ ಅವರ ಕಲಿಕಾ ಸಾಮರ್ಥ್ಯವು ಕೂಡ ಹೆಚ್ಚುತ್ತದೆ ಎಂದು ಅಭಿಮತ ವ್ಯಕ್ತಪಡಿಸಿದರು.

Rotary ಇದೇ ಸಂದರ್ಭದಲ್ಲಿ ಟ್ರಸ್ಟಿನ ಕಾರ್ಯದರ್ಶಿ ನಾಗವೇಣಿ.ಎಸ್.ಆರ್ ಮಾತನಾಡಿ, ಇಂದು ಮಕ್ಕಳು ತುಂಬಾ ಬುದ್ಧಿವಂತರು ಮತ್ತು ಪರಿಣಿತರು ಇದ್ದಾರೆ. ಹಾಗಾಗಿ ಮಕ್ಕಳಿಗೆ ಶಿಕ್ಷಕರು ಹಾಗೂ ಪೋಷಕರು ಓದಲು ಹುರಿದುಂಬಿಸಬೇಕು. ಆಗ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ಹೇಳಿದರು.

ಗ್ರಾಜುಯೇಷನ್ ಡೇ ಸಮಾರಂಭ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಸೂರ್ಯನಾರಾಯಣ, ಶಿಕ್ಷಕರು ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

University of Agricultural & Horticultural Sciences ಏಪ್ರಿಲ್ 14 ರಿಂದ ಮೇ15 ವರೆಗೆ ಬೇಕರಿ‌ ಉತ್ಪನ್ನಗಳ‌ ತಯಾರಿಕಾ ಕೌಶಲ್ಯ ತರಬೇತಿ‌‌ ಕಾರ್ಯಾಗಾರ

0

University of Agricultural & Horticultural Sciences ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ದಿ:15/04/2025 ರಿಂದ ದಿ:14/05/2025 ರವರೆಗೆ 30 ದಿನಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ.

ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್, ಮಸಾಲ ಬಿಸ್ಕತ್, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್, ಪೀನಟ್ ಕುಕಿಸ್, ವೆನಿಲಾ ಬಟನ್, ಬನಾನಾ ಕೇಕ್, ಕೋಕೊನಟ್ ಕ್ಯಾಸಲ್ಸ, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಬ್ಲಾಕ್ ಫಾರೆಸ್ಟ್ ಕೇಕ್, ಸ್ವಿಸ್ ರೋಲ್, ಜೆಲ್ ಕೇಕ್, ಬಟರ್ ಐಸಿಂಗ್, ಮಸಾಲಾ ಡೋನಟ್, ಮಿಲ್ಕ್ ಬ್ರೆಡ್, ಬ್ರೌನಬ್ರೆಡ್, ಫಿಜ್ಜಾ, ಪಪ್ ಪೇಸ್ಟ್ರೀ, ಡ್ಯಾನಿಷ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಉತ್ಪನ್ನಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು.

ತರಬೇತಿ ಶುಲ್ಕ ರೂ. 4500/- ಆಗಿದ್ದು, ಊಟ ಮತ್ತು ವಸತಿ ಸೌಲಭ್ಯ ಇರುವುದಿಲ್ಲ.
ಈ ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವವರು ದಿ:13/04/2025 ರೊಳಗಾಗಿ ಡಾ. ಜಯಶ್ರೀ ಎಸ್.-9449187763, ಜಯಶಂಕರ-9686555897 ಇವರುಗಳನ್ನು ದೂರವಾಣಿ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ

CM Siddharamaiah ಪದಕ ಪಡೆದವರು ಬೇರೆಯವರಿಗೆ ಪ್ರೇರಣೆಯಾಗಬೇಕು- ಸಿದ್ಧರಾಮಯ್ಯ

0

CM Siddharamaiah ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ, ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧ ಹೊಂದಿದೆ.

ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿ ಅವರು ಮಾತನಾಡುತ್ತಿದ್ದರು.

ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು. ನಿಮ್ಮ‌ ಶ್ರಮ ಮತ್ತು ಸೇವೆ ಶ್ಲಾಘನೀಯ.ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು.
ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು.

ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು.
ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು ಕಿವಿಮಾತು ಹೇಳಿದರು.

ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಹೆಮ್ಮೆಯ ವಿಷಯ.

CM Siddharamaiah ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ಧ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ಧವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದು‌ ಸಿದ್ಧರಾಮಯ್ಯ ತಿಳಿಸಿದರು.

ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ವಿಜೇತ ಪೊಲೀಸ್ ಸಿಬ್ಬಂದಿಗಳಿಗೆ ಗೌರವಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

MESCOM ಏಪ್ರಿಲ್ 5, ಶಿವಮೊಗ್ಗ ಮೆಸ್ಕಾಂ ಉಪವಿಭಾಗ-1 ಕಚೇರಿಯಲ್ಲಿ‌ ಜನಸಂಪರ್ಕ ಸಭೆ

0

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -1 ಕಛೇರಿಯಲ್ಲಿ ಏ. 05 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ; 9448289448.