Saturday, February 7, 2026
Saturday, February 7, 2026
Home Blog Page 36

MESCOM ಜನವರಿ 6.ತೀರ್ಥಹಳ್ಳಿ ಮೆಸ್ಕಾಂ ಉಪ ವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

0

MESCOM ತೀರ್ಥಹಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜ. 06 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನ ಸಂಪರ್ಕಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;.9448289508.

MESCOM ಜನವರಿ 7. ಎಮ್, ಆರ್.ಎಸ್. ವಿದ್ಯುತ್ ಕೇಂದ್ರ ತ್ರೈಮಾಸಿಕ ನಿರ್ವಹಣೆ: ಹೊಳೆಹೊನ್ನೂರು ಸುತ್ತ ಕೆಲವೆಡೆ ವಿದ್ಯುತ್ ನಿಲುಗಡೆ.

0

MESCOM ಶಿವಮೊಗ್ಗ ಎಂ.ಆರ್.ಎಸ್. 220/11 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜ.07 ರಂದು ಬೆಳಗ್ಗೆ 09.00 ರಿಂದ ಸಂಜೆ 4.30 ರವರೆಗೆ ಹೊಳೆಹೊನ್ನೂರು, ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, MESCOM ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಮತ್ತು ಹಾಗೂ ಇನ್ನಿತರೆ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Kuvempu University ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾಗಿ ಪ್ರಾಚಾರ್ಯ ಡಾ.ಎಂ.ವೆಂಕಟೇಶ್

0

Kuvempu University ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

Kuvempu University ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ ಪ್ರಕಾರ ಕುಲಪತಿಗಳಿಗೆ ಪ್ರದತ್ತವಾದ ಅಧಿಕಾರದ ಅನ್ವಯ ವಿಶ್ವವಿದ್ಯಾಲಯ ವ್ಯಾಪ್ತಿಯ ಸಂಯೋಜಿತ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಅವರನ್ನು ಸೇವಾ ಜೇಷ್ಠತೆ ಆಧಾರದ ಮೇಲೆ 2026ರ ಜನವರಿ 9ರಿಂದ ಅನ್ವಯ ಆಗುವಂತೆ ಒಂದು ವರ್ಷದ ಅವಧಿಗೆ ಅಥವಾ ವಯೋನಿವೃತ್ತಿ ದಿನಾಂಕದವರೆಗೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ಕುವೆಂಪು ವಿವಿ ಕುಲಪತಿ ನಾಮನಿರ್ದೇರ್ಶನ ಗೊಳಿಸಿದ್ದಾರೆ.

Shimoga News ಗ್ರಾಮೀಣ ಕ್ರೀಡಾಕೂಟಗಳಿಂದ ಪ್ರತಿಭಾವಂತರಿಗೆ ಅವಕಾಶ- ಎಚ್.ಗಣಪತಿ ಹುಲ್ತಿಕೊಪ್ಪ.

0

Shimoga News ಶ್ರೀ ರೇಣುಕಾಂಬ ದೇವಿಯ ತಪ್ಪಲಿನಲ್ಲಿರುವ ಬಸ್ತಿಕೊಪ್ಪ ಗ್ರಾಮದ ಯುವಕರು ಇಚ್ಛಾಶಕ್ತಿಯಿಂದ ಕ್ರೀಡೆಗಳನ್ನು ಆಯೋಜಿಸುತ್ತಿರುವುದು ಸಾಮಾಜಿಕ ಸ್ವಸ್ಥದ ದೃಷ್ಟಿಯಿಂದ ಶ್ಲಾಘನೀಯ ಎಂದು ತಾಪಂ ಮಾಜಿ ಅಧ್ಯಕ್ಷ ಎಚ್. ಗಣಪತಿ ಹುಲ್ತಿಕೊಪ್ಪ ಹೇಳಿದರು.

ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಬಸ್ತಿಕೊಪ್ಪ ಗ್ರಾಮದಲ್ಲಿ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡ ಕ್ರಿಕೆಟ್ ಟೂರ್ನಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಯುವಕರಲ್ಲಿ ಸೂಕ್ತವಾಗಿರುವ ಪ್ರತಿಭೆಯನ್ನು ಹೊರ ಚಿಮ್ಮಿಸಲು ಇಂತಹ ಕ್ರೀಡಾಕೂಟಗಳು ಅತ್ಯಂತ ಸಹಕಾರಿಯಾಗಿದ್ದಾವೆ. ಯುವಕರು ಸಂಘಟಿತರಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಆರೋಗ್ಯದ ಬೆಳವಣಿಗೆ ಸದೃಢವಾಗುತ್ತದೆ. ಎಂದ ಅವರು ಬಹಳಷ್ಟು ವರ್ಷಗಳ ಹಿಂದೆ ನಾನು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಬಸ್ತಿಕೊಪ್ಪ ಗ್ರಾಮದ ಜನರು ಅತೀ ಹೆಚ್ಚಿನ ಮತಗಳನ್ನು ನೀಡಿ ನನ್ನ ಗೆಲುವಿಗೆ ಪ್ರಮುಖ ಕಾರಣೀಭೂತರಾಗಿದ್ದಾರೆ. ಈ ಗ್ರಾಮದ ಜನರ ಪ್ರೀತಿ ಮತ್ತು ವಿಶ್ವಾಸ ದೊಡ್ಡದು, ಗ್ರಾಮದ ಋಣವನ್ನು ತೀರಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ತಿಳಿಸಿದರು.

Shimoga News ಬಸ್ತಿಕೊಪ್ಪ ಗ್ರಾಮವು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಹಾಗೂ ಶಿಕ್ಷಣ ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ಎಸ್. ಮಧು ಬಂಗಾರಪ್ಪನವರ ಮೇಲೆ ವಿಶೇಷ ಅಭಿಮಾನ ಹೊಂದಿರುವ ಗ್ರಾಮವಾಗಿದೆ. ಗ್ರಾಮದ ರಸ್ತೆ ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಚಿವರಾದ ಮಧು ಬಂಗಾರಪ್ಪ ಅವರು ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ. ಈಗಾಗಲೇ ಗ್ರಾಮದ ಅಭಿವೃದ್ಧಿಗಾಗಿ 1 ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿದ್ದಾರೆ ಎಂದರು.

ಕಾಂಗ್ರೆಸ್ ಮುಖಂಡ ಕತವಾಯಿ ಚಂದ್ರಪ್ಪ ಮಾತನಾಡಿ ಗ್ರಾಮೀಣ ಕ್ರೀಡಾಪಟುಗಳಿಗೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ಇಂತಹ ಪ್ರಯತ್ನಗಳು ನಿರಂತರ ನಡೆಯಲಿ ಎಂದು ಹಾರೈಸಿದರು. ಶಿಕ್ಷಣ ಸಚಿವರು ಗ್ರಾಮಕ್ಕೆ ಮಂಜೂರು ಮಾಡಿರುವ ಅನುದಾನದಿಂದ ಗ್ರಾಮವು ಪ್ರಗತಿ ಹೊಂದಲಿದೆ ಎಂದರು.

ಸಭಾ ಕಾರ್ಯಕ್ರಮದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಎಂ.ಪಿ ರತ್ನಾಕರ, ಸದಸ್ಯರಾದ ಲಕ್ಷ್ಮಿ ಚಂದ್ರಪ್ಪ, ಕಾಂಗ್ರೆಸ್ ಮುಖಂಡ ಚಂದ್ರಪ್ಪ ಕತವಾಯಿ ಮಾತನಾಡಿದರು. ಗ್ರಾಮದ ಹಿರಿಯರು, ಪ್ರಮುಖರು ಹಾಗೂ ಬಸ್ತಿಕೊಪ್ಪ ಗೆಳೆಯರ ಬಳಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Shimoga News ಮಾಹಿತಿ ಅಯೋಗದಿಂದ ರಾಜ್ಯ ಆಡಳಿತದಲ್ಲಿ ಪಾರದರ್ಶಕತೆ ಪ್ರಯತ್ನ- ಡಾ.ಹರೀಶ್ ಕುಮಾರ್.

0

Shimoga News ಕರ್ನಾಟಕ ರಾಜ್ಯದಲ್ಲಿ ಅಕ್ಟೋಬರ್ 12, 2005ರಲ್ಲಿ ಅಸ್ತಿತ್ವಕ್ಕೆ ಬಂದ ಮಾಹಿತಿ ಆಯೋಗವು ಆಡಳಿತದಲ್ಲಿ ಪಾರದರ್ಶಕತೆ ಮತ್ತು ಬದ್ಧತೆಯನ್ನು ತರುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾದ ಡಾ.ಹರೀಶ್‌ಕುಮಾರ್ ತಿಳಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಇಂದು ನಗರದ ಜಿ.ಪಂ.ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ-2005 ಕುರಿತ ಜಾಗೃತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಅಧ್ಯಯನ ಮತ್ತು ಸಾಮಾನ್ಯ ತಿಳುವಳಿಕೆ ಇರಬೇಕು. ಮಾಹಿತಿ ಬಯಸಿ ಸಲ್ಲಿಕೆಯಾಗುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಕಾಯ್ದೆಯಲ್ಲಿ ಲಭ್ಯವಿರುವ ಸೆಕ್ಷನ್‌ಗಳ ಆಧಾರದ ಮೇಲೆ ಉತ್ತರ ಮತ್ತು ಮಾಹಿತಿಯನ್ನು ಒದಗಿಸಬೇಕು. ಕಳೆದ ಹತ್ತು ವರ್ಷಗಳಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ವಯ ಮಾಹಿತಿ ನೀಡುವಲ್ಲಿ ವಿಳಂಬ, ಸರಿಯಾದ ಮಾಹಿತಿ ನೀಡದಿರುವುದು ಹಾಗೂ ಇತರ ಕಾರಣಗಳಿಂದಾಗಿ ರೂ.೧೦ ಕೋಟಿಯಷ್ಟು ದಂಡವು ಸರ್ಕಾರಿ ಅಧಿಕಾರಿಗಳಿಂದ ಆಯೋಗಕ್ಕೆ ಜಮೆ ಆಗಿದೆ.

Shimoga News ಆದ್ದರಿಂದ ಮಾಹಿತಿ ಅಧಿಕಾರಿಗಳು ಮಾಹಿತಿ ಕೋರಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಾಲಮಿತಿಯಲ್ಲಿ ಉತ್ತರ ಒದಗಿಸಬೇಕೆಂದು ಅವರು ಹೇಳಿದರು.
ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರು ಮಾಹಿತಿ ಕೋರಿ ಸಲ್ಲಿಸುವ ಅರ್ಜಿಗಳನ್ನು ಅರ್ಜಿ ಸಲ್ಲಿಕೆಯಾದ ೩೦ ದಿನಗಳಲ್ಲಿ ವಿಲೇವಾರಿ ಮಾಡಬೇಕು. ಮಾಹಿತಿ ಕೇಳಿ ಯಾವುದೇ ವ್ಯಕ್ತಿಯು ಸರ್ಕಾರದ ಉದ್ಯೋಗ, ಸೌಲಭ್ಯಗಳ ಬಗ್ಗೆ ಮಾಹಿತಿ ಕೇಳಿ ಅರ್ಜಿ ಸಲ್ಲಿಸಿದ್ದಲ್ಲಿ ಮಾಹಿತಿ ನೀಡಬೇಕಾಗುತ್ತದೆ. ಅಧಿಕಾರಿಯ ಹೆಸರು ಮತ್ತು ಹುದ್ದೆ ಸಾರ್ವಜನಿಕ ದಾಖಲೆಯಾಗಿರುವುದರಿಂದ ಅವುಗಳನ್ನು ನೀಡಬೇಕಾಗುತ್ತದೆ. ಯಾವುದೇ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಅಥವಾ ತನಿಖೆ ಮುಕ್ತಾಯವಾಗಿ ಅಂತಿಮ ವರದಿ ಸಲ್ಲಿಸದಿರುವ ಅಥವಾ ತನಿಖೆ ಮುಕ್ತಾಯವಾದ ಬಗ್ಗೆ ಸಂಬಂಧಿಸಿದ ಅಧಿಕಾರಿ ಅಥವಾ ಸಂಸ್ಥೆ ದೃಢೀಕರಣ ನೀಡದ ಹೊರತು ಯಾವುದೇ ಮಾಹಿತಿಯನ್ನು ನೀಡುವಂತಿಲ್ಲ. ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಕಾಯ್ದೆ ಮತ್ತು ಕಾನೂನುಗಳ ಸಾಮಾನ್ಯ ಜ್ಞಾನವು ಅಗತ್ಯವಾಗಿದೆ ಎಂದರು.

ಮಾಹಿತಿ ಹಕ್ಕು ಕಾಯ್ದೆ 2005 ರಲ್ಲಿ ಜಾರಿಗೆ ಬಂದಿದ್ದರೂ ಸಹ ಹಿಂದಿನ 20 ವರ್ಷಗಳ ಮಾಹಿತಿಗಳಿಗೂ ಈ ಕಾಯ್ದೆ ಅನ್ವಯವಾಗುತ್ತದೆ. ಕಳೆದ 20 ವರ್ಷಗಳಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಉಚ್ಚ ನ್ಯಾಯಾಲಯ ಹಾಗೂ ಸರ್ವೋಚ್ಚ ನ್ಯಾಯಾಲಯಗಳಿಂದ ಹಲವಾರು ಆದೇಶಗಳು ಬಂದಿವೆ. ಈ ಆದೇಶಗಳು ಮಾಹಿತಿ ಹಕ್ಕು ಕಾಯ್ದೆ ಅನ್ವಯ ಅಳವಡಿಕೆ ಹಾಗೂ ವಿಸ್ತರಣೆಗಳಿಗೆ ಸಾಕಷ್ಟು ಬಲ ತುಂಬಿವೆ ಎಂದು ತಿಳಿಸಿದರು.
ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ. ಮಾತನಾಡಿ, ಮಾಹಿತಿ ಅಧಿಕಾರಿಗಳು ಮಾಹಿತಿ ಕೋರಿ ಬಂದ ಅರ್ಜಿಗಳಿಗೆ ಕಾಯ್ದೆಯನ್ವಯ ಪರಿಶೀಲಿಸಿ ನಿಯಮಾನುಸಾರ ವಿಲೇವಾರಿ ಮಾಡಬೇಕು. ಅರ್ಜಿಗಳ ವಿಲೇವಾರಿಯಲ್ಲಿ ಜಿಲ್ಲೆ ಪ್ರಥಮ ಸ್ಥಾನಕ್ಕೆ ಬರುವಂತೆ ಆಶಿಸಿದ ಅವರು, ಕೇವಲ ಸಿಸಿ ಟಿ.ವಿ.ದೃಶ್ಯಗಳು ಪ್ರಕರಣಗಳ ಬಗ್ಗೆ ಅಂತಿಮ ಆರೋಪ ಪಟ್ಟಿ, ಯಾವ ವ್ಯಕ್ತಿ ಮೇಲೆ ಎಷ್ಟು ಪ್ರಕರಣಗಳಿವೆ ಎಂಬುದು ಸೇರಿದಂತೆ ವೈಯಕ್ತಿಕ ಹಾಗೂ ವ್ಯಕ್ತಿಗತ ಮಾಹಿತಿಯನ್ನು ನೀಡುವಾಗ ಮಾಹಿತಿ ಹಕ್ಕು ಕಾಯ್ದೆಯಲ್ಲಿನ ಸೆಕ್ಷನ್‌ಗಳನ್ನು ಸರಿಯಾಗಿ ತಿಳಿದು ಅರ್ಥೈಸಿಕೊಂಡು ಮುಂದುವರಿಯಬೇಕು. ಯಾವ ಮಾಹಿತಿ ನೀಡಲು ಅವಕಾಶವಿದೆ ಮತ್ತು ಯಾವುದನ್ನು ನೀಡಲು ಅವಕಾಶವಿಲ್ಲ ಎಂಬುದರ ಬಗ್ಗೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ತಿಳುವಳಿಕೆ ಇರಬೇಕು ಎಂದು ಹೇಳಿದರು.

Keladi Shivappa Nayaka University ಕೃಷಿ ವಿವಿಯಿಂದ ಒಂದು ತಿಂಗಳು ಬೇಕರಿ ವಿವಿಧ ಉತ್ಪನ್ನಗಳ ತಯಾರಿಕಾ ಕೌಶಲ್ಯ ತರಬೇತಿ.

0

Keladi Shivappa Nayaka University ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ದಿ:12/01/2026 ರಿಂದ ದಿ:10/02/2026 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್‌ಕೇಕ್, ಪೇಸ್ಟ್ರಿ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ ಬ್ರೆಡ್, ಬನ್, ರಸ್ಕ್, ಫಿಜ್ಜಾ, ಪಪ್‌ಪೇಸ್ಟಿç, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.

Keladi Shivappa Nayaka University ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಜ.10 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ತಿಳಿಸಿದ್ದಾರೆ.

ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸಬಹುದಾಗಿದೆ.

Karate World Championships ಶಿವಮೊಗ್ಗದಲ್ಲಿ 3ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾವಳಿ.

0

Karate World Championships ಕರಾಟೆಯು ಆತ್ಮವಿಶ್ವಾಸ ಮತ್ತು ಕ್ರೀಡಾತ್ಮಕತೆ ಹೆಚ್ಚಿಸುವ ಕ್ರೀಡೆಯಾಗಿದೆ. 3ನೇ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ 2025ರ ಜನವರಿ 11ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಈ ಕ್ರೀಡಾಕೂಟವನ್ನು ಸಹ್ಯಾದ್ರಿ ಶಿವಮೊಗ್ಗ ಡಿಸ್ಟಿಕ್ ಸ್ಪೋರ್ಟ್ಟ್ಸ್ ಕರಾಟೆ ಅಸೋಸಿಯೇಷನ್ ನ ಆಯೋಜಕರಾದ ಸೆನ್ಸೈ ನವೀನ್ , ಸೆನ್ಸೈ ಸಾಧಿಕ್ , ಸೆನ್ಸೈ ಮಂಜುನಾಥ್ ರವರು ಆಯೋಜಿಸಿರುತ್ತಾರೆ.

ಈ ಕ್ರೀಡಾಕೂಟಕ್ಕೆ1,200ಕ್ಕೂ ಹೆಚ್ಚು ಕ್ರೀಡಾ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ತಮಿಳುನಾಡು, ತೆಲಂಗಾಣ, ಪಂಜಾಬ್‌, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಸ್ಪರ್ಧಾಳುಗಳು ಆಗಮಿಸುತ್ತಿದ್ದಾರೆ. ಬರುವಂತಹ ಕ್ರೀಡಾಪಟುಗಳಿಗೆ ಊಟ ಮತ್ತು ವಸತಿ ಸೌಲಭ್ಯವನ್ನು ಒದಗಿಸಲಾಗುವುದು. ಹಾಗೂ ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಿಜೇತರಾದಂತಹ ವಿದ್ಯಾರ್ಥಿಗಳಿಗೆ ಆಕರ್ಷಕವಾದ ಟ್ರೋಫಿ ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು.

ಈ ಮಹತ್ವದ ಚಾಂಪಿಯನ್‌ಶಿಪ್‌ನಲ್ಲಿ ಕ್ರೀಡಾಪಟುಗಳು ತಾವು ಪಡೆದ ಕೌಶಲ್ಯವನ್ನು ಪ್ರದರ್ಶಿಸಲು ತಯಾರಾಗಿದ್ದಾರೆ.

ಈ ಕ್ರೀಡೆಯು ಕ್ರೀಡಾ ಪ್ರಿಯರ ಮನ ಸೆಳೆಯಲಿರುವುದು ನಿಶ್ಚಿತ. ಕಾರ್ಯಕ್ರಮವನ್ನು ಉದ್ಘಾಟಿಸಲು ಗಣ್ಯ ಅತಿಥಿಗಳು ಆಗಮಿಸುತ್ತಿದ್ದು , ಈ ಮಹತ್ವದ ಕ್ಷಣವನ್ನು ಅನೇಕ ಗಣ್ಯರು ಗೌರವಿಸಲಿದ್ದಾರೆ.

Karate World Championships ಮಾನ್ಯ ಶಿಕ್ಷಣ ಸಚಿವರದ ಮಧು ಬಂಗಾರಪ್ಪ ನವರು ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿರುವರು. ಶಿವಮೊಗ್ಗ ಜಿಲ್ಲೆಯ ಶಾಸಕರಾದ ಬಿ.ಎಸ್. ಚೆನ್ನಬಸಪ್ಪನವರು, ಈ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸುತ್ತಾರೆ. ಡಿ.ಎಸ್.ಅರುಣ್ ಸರ್ , ವಿಧಾನ ಪರಿಷತ್ ಸದಸ್ಯರು ಶಿವಮೊಗ್ಗ ಹಾಗೂ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.

ಈ ಚಾಂಪಿಯನ್‌ಶಿಪ್ ಕೇವಲ ಸ್ಪರ್ಧೆಗಷ್ಟೇ ಸೀಮಿತವಾಗಿರದೆ, ಏಕತೆ, ಶಿಸ್ತಿನ ಮತ್ತು ಶ್ರೇಷ್ಠತೆಯ ಹಬ್ಬವಾಗಿದೆ. ವಿವಿಧ ವಿಭಾಗಗಳಲ್ಲಿ ಸ್ಪರ್ಧಿಗಳು ತಮ್ಮ ಕೌಶಲ್ಯ, ಸಾಧನೆ ಮತ್ತು ಕ್ರೀಡಾತ್ಮಕತೆಯನ್ನು ಪ್ರದರ್ಶಿಸುತ್ತಾರೆ. ಸಹ್ಯಾದ್ರಿ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಈ ಕಾರ್ಯಕ್ರಮವನ್ನು ಸ್ಮರಣೀಯವಾಗಿಸುವ ಗುರಿಯೊಂದಿಗೆ ಕೆಲಸ ಮಾಡುತ್ತಿದೆ, ಕಠಿಣ ಪರಿಶ್ರಮ ಮತ್ತು ನಿರಂತರ ಪ್ರಯತ್ನಗಳ ಮಹತ್ವವನ್ನು ಉತ್ತೇಜಿಸುತ್ತಿದೆ.

ಕರಾಟೆ ಪ್ರಿಯರು ಮತ್ತು ಕ್ರೀಡಾಭಿಮಾನಿಗಳು ಈ ಅದ್ಭುತ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ಪರ್ಧೆಗಳ ರೋಮಾಂಚನ ಮತ್ತು ಪ್ರೇರಣಾದಾಯಕ ಕ್ಷಣಗಳನ್ನು ಸಾಕ್ಷಿಯಾಗಲು ಆಹ್ವಾನಿತರಾಗಿದ್ದಾರೆ.

B. Y. Raghavendra ಸಂಸದ ರಾಘವೇಂದ್ರರಿಗೆ” ಶ್ರೀಗುರುಬಸವಶ್ರೀ” ಪ್ರಶಸ್ತಿ ಪ್ರದಾನ.

0

B. Y. Raghavendra ಶಿವಮೊಗ್ಗದ ಶ್ರೀ ಬೆಕ್ಕಿನಕಲ್ಮಠದಲ್ಲಿ ಆರಂಭಗೊಂಡಿರುವ ಪರಮ ತಪಸ್ವಿ ಲಿಂ. ಶ್ರೀ ಗುರುಬಸವ ಮಹಾಸ್ವಾಮಿಗಳವರ 114ನೇ ಪುಣ್ಯ ಸ್ಮರಣೋತ್ಸವ, 556ನೇ ಶಿವಾನುಭವ ಗೋಷ್ಠಿ ಹಾಗೂ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಸಂಸದ ಬಿ.ವೈ‌.ರಾಘವೇಂದ್ರ ಪಾಲ್ಗೊಂಡಿದ್ದರು.

ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಈ ಪವಿತ್ರ ಸಮಾರಂಭದಲ್ಲಿ, ಸಂಸದ ರಾಘವೇಂದ್ರರಿಗೆ “ಗುರುಬಸವಶ್ರೀ” ಪ್ರಶಸ್ತಿಯನ್ನ ನೀಡಲಾಯಿತು..
ಈ ಸನ್ಮಾನವನ್ನು ಪೂಜ್ಯರ ಪ್ರಸಾದ ಮತ್ತು ಆಶೀರ್ವಾದವೆಂದು ಭಾವಿಸುತ್ತೇನೆ. ಅತ್ಯಂತ ವಿನಮ್ರತೆಯಿಂದ ಸ್ವೀಕರಿಸಿದ್ದೇನೆ.
ಈ ಗೌರವಕ್ಕೆ ನಾನು ಸದಾ ಆಭಾರಿ ಎಂದು ಪ್ರಶಸ್ತಿ ಸ್ವೀಕರಿಸಿ ಸಂಸದ ರಾಘವೇಂದ್ರ ನುಡಿದರು.

B. Y. Raghavendra ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಬೋಜೇಗೌಡರು, ಶ್ರೀ ಎಸ್. ರುದ್ರೇಗೌಡರು, ಡಾ ಧನಂಜಯ್ ಸರ್ಜಿ , ಶ್ರೀ ಜ್ಯೋತಿಪ್ರಕಾಶ್ ಸೇರಿದಂತೆ ವೇದಿಕೆಯ ಮೇಲೆ ಅನೇಕ ಗಣ್ಯರು ಹಾಗೂ ಮಠದ ಭಕ್ತವೃಂದದವರು ಉಪಸ್ಥಿತರಿದ್ದರು.

Rotary Club Shivamogga ಹೃದಯಾಘಾತವಾದ ಮೊದಲ ಮೂವತ್ತು ನಿಮಿಷ ಬಂಗಾರದ ಸಮಯ.ತಕ್ಷಣ ಆಸ್ಪತ್ರೆಗೆ ಸೇರಿಸಿ- ಡಾ.ವಿ.ಎಲ್.ಎಸ್. ಕುಮಾರ್.

0

Rotary Club Shivamogga ನಮ್ಮ ದೇಶದಲ್ಲಿ ರಸ್ತೆ ಅಫಘಾತದಲ್ಲಿ ಹೆಚ್ಚಾಗಿದ್ದು, ಅಪಘಾತದಲ್ಲಿ ಮರಣ ಹೊಂದಿರುವವರ ಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ.

ಹೃದಯಾಘಾತಜಲ್ಲಿ ಎರಡನೇ ಸ್ಥಾನದಲ್ಲಿದೆ. ಆದ್ದರಿಂದ ಜಾಗೃತಿ ಅವಶ್ಯಕ ಎಂದು ರೋಟರಿ ಕ್ಲಬ್ ಜ್ಯೂಬಿಲಿಯ ಡಾ.ವಿ.ಎಲ್. ಎಸ್. ಕುಮಾರ್ ತಿಳಿಸಿದರು.

ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಆಯೋಜಿಸಿದ್ದ, ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿದ ಮಾತನಾಡಿದರು.

ರೋಟರಿ ಕ್ಲಬ್ ಹುಟ್ಟಿದ ಮಗುವಿಗೆ ಫಲ್ಸ್ ಪೋಲಿಯೋ ನೀಡುತ್ತದೆ. ವಿದ್ಯಾಭ್ಯಾಸಕ್ಕೆ ಶಾಲೆ ನಡೆಸುತ್ತಿದೆ. ಆರೋಗ್ಯಕ್ಕೆ ಜಿಮ್ ಇದೆ. ರಕ್ತದ ಅವಶ್ಯಕತೆಗೆ ಬ್ಲಡ್ ಬ್ಯಾಂಕ್ ಇದೆ. ಇದರೊಂದಿಗೆ ಚಿತಾಗಾರ ನಡೆಸುತ್ತಿದೆ. ಹೀಗೆ ರೋಟರಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿ ಕೊಂಡಿದೆ ಎಂದರು.

ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ ನಮ್ಮದು. ಆದ್ದರಿಂದ ಎಲ್ಲದರಲ್ಲಿಯೂ ಜಾಗ್ರತೆ ವಹಿಸಬೇಕಾಗಿದೆ. ಎಲ್ಲಾ ಕಡೆ ಹೆಚ್ಚು ಆಸ್ವತ್ರೆ ಇವೆ. ಕಾರಣ ಆರೋಗ್ಯ. ದೈಹಿಕ, ಮಾನಸಿಕ, ಸಾಮಾಜಿಕ, ಔದ್ಯೋಗಿಕ, ಕೌಟುಂಬಿಕ, ವೈಯಕ್ತಿಕ ಹೀಗೆ ಹಲವಾರು ಕಾರಣದಿಂದ ಅನಾರೋಗ್ಯ ಉಂಟಾಗುತ್ತಿದೆ.ಉತ್ತಮ ಆರೋಗ್ಯಕ್ಕೆ 8 ಗಂಟೆ ನಿದ್ದೆ, ಕುಟುಂಬದೊಂದಿಗೆ ಸಮಯ ಕಳೆಯಬೇಕು. ದುರಭ್ಯಾಸ ಬಿಟ್ಟು , ಯೋಗ-ದ್ಯಾನ, ಶುದ್ದ ಗಾಳಿ ಅವಶ್ಯಕ. ಗಂಗಾಸ್ಥಾನ ತುಂಗಾಪಾನ ಎನ್ನುತ್ತಿದ್ದರು, ಇಂದು ಚರಂಡಿ ನೀರಿಗಿಂತ ಕೆಟ್ಟದಾಗಿ ತುಂಗಾ ಬದಲಾಗಿದೆ ಎಂದು ಹೇಳಿದರು.

Rotary Club Shivamogga ಪ್ಲಾಸ್ಟಿಕ್ ಉಪಯೋಗದಿಂದ ಕ್ಯಾನ್ಸರ್ ಅತ್ಯಧಿಕವಾಗಿ ಹರಡುತ್ತಿದೆ. ಪ್ರತಿ ದಿನ ಹತ್ತು ಜನರು ಕ್ಯಾನ್ಸರ್ ಆಸ್ಪತ್ರೆಗೆ ಬರುತ್ತಿದ್ದಾರಂತೆ.
ಹೃದಯಾಘಾತ ಆದಾಗ ಏನು ಮಾಡಬೇಕೆಂದು ತಿಳಿದುಕೊಳ್ಳಿ, ಹೃದಯ ದಿಂದ ಮೆದುಳಿಗೆ ಆಮ್ಲಜನಕ ಇಲ್ಲದೆ ಏಳು ನಿಮಿಷ ಇರಬಲ್ಲದು. ಹೃದಯಾಘಾತ ಆದ ತಕ್ಷಣ ಪ್ರಥಮ ಚಿಕಿತ್ಸೆ ಅಗತ್ಯ, ಉಸಿರಾಟ ಪುನ: ಚಾಲನೆಗೆ ತರಬೇಕು. ಹೊಟ್ಟೆ ಎರಿಳಿತ ನೋಡಿ, ಕುತ್ತಿಗೆ ಸಮೀಪ ಎರಡು ಬೆರಳು ಇಟ್ಟು ನೋಡಬಹುದು ಹತ್ತು ಸೆಕೆಂಡ್ ನಲ್ಲಿ ಪರೀಕ್ಷಿಸಿ, ಸಿಪಿಆರ್ ಎಲ್ಲರೂ ಅರಿತುಕೊಳ್ಳಿ, ಇದರಿಂದ ಪ್ರಾಣ ಉಳಿಸಬಹುದು. ಮುವತ್ತು ನಿಮಿಷ ಬಂಗಾರದ ಸಮಯ ತಕ್ಷಣ ಆಸ್ವತ್ರೆಗೆ ಸೇರಿಸಬೇಕು. ಹೃದಾಘಾ ತವಾದವರಿಗೆ “ಮಲಗಿಸ ಬೇಡಿ, ನೀರು ಕುಡಿಸಬೇಡಿ” ಕುರ್ಚಿಮೇಲೆ ಕುಳ್ಳರಿಸಿ, ಎತ್ತುಕೊಂಡು ಹೋಗಿ, ನಡೆಯಲು ಬಿಡಬಾರದು ಎಂದು ತಿಳಿ ಹೇಳಿದರು.

ಹೃದಯಾಘಾತವಾದವರಿಗೆ ಹೇಳ ಬೇಡಿ, ಕೆಮ್ಮಲು ಹೇಳಿ, ಆಸ್ವತ್ರೆಗೆ ಹೋಗುವವರೆಗೆ, ದೀರ್ಘಶ್ವಾಸ ತೆಗೆದು ಕೊಳ್ಳಲು ತಿಳಿಸಬೇಕು. ಅಸ್ಪ್ರೀನ್ ಮಾತ್ರೆ ಜಗಿಯಲು ಕೊಡಬೇಕು.ಸ್ಟ್ರೋಕ್ ಸಹ ಹೆಚ್ಚಾಗುತ್ತದೆ, ಮಾತನಾಡುವಾಗ ಮುಖ ಒಂದು ಕಡೆ ಸೇರುವುದು, ಮಾತನಾಡಲು ತೊಂದರೆ ಯಾದರೆ, ಮೂರು ಗಂಟೆಯೊಳಗೆ ಆಸ್ಪತ್ರೆಗೆ ಹೋಗಬೇಕು. ಪಿಡ್ಸ್ ಬಂದಾಗ ಎರಡು ನಿಮಿಷ ಮಾತ್ರ ಮೈಕೈ ಅಲುಗಾಡಿಸುತ್ತಾರೆ, ಸುತ್ತಲೂ ಯಾವುದೇ ಅಡೆತಡೆ ಬರದಂತೆ ನೋಡಿ ಕೊಳ್ಳಬೇಕು. ನೊರೆ ಒಳಗೆ ಹೊಗದಂತೆ, ಮಗ್ಗಲು ಮಾಡಿ ಮಲಗಿಸಿ, ಒರೆಸಬೇಕು . ಬಾಯಿಗೆ ಏನನ್ನು ಕೊಡಬಾರದು ಎಂದು ತಿಳಿಸಿದರು.

ಬಿ.ಎಸ್.ಅಶ್ವಥ್ ಅಧ್ಯಕ್ಷತೆ ವಹಿಸಿ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ಕಾರ್ಯದರ್ಶಿ ರೇವಣ ಸಿದ್ದಪ್ಪ ವಂದಿಸಿದರು.

Shimoga News ಜಿಲ್ಲೆ ಮತ್ತು ‌ನಗರಪಾಲಿಕೆಯ ಅಧಿಕಾರಿಗಳು ಆಹಾರ ಸುರಕ್ಷತೆ ಕಾಪಾಡಲು ಅನುಸರಿಸುವ ಕ್ರಮಗಳ ಬಗ್ಗೆ ಉನ್ನತ ಮಟ್ಟದ ಸಭೆ.

0

Shimoga News ಮಾನ್ಯ ಉಪ ವಿಭಾಗಾಧಿಕಾರಿಗಳು ಹಾಗೂ ಅಂಕಿತ ಅಧಿಕಾರಿಗಳು ಎಫ್ ಎಸ್ ಎಸ್ಎ ಶಿವಮೊಗ್ಗ ಇವರ ಅಧ್ಯಕ್ಷತೆಯಲ್ಲಿ ಆಹಾರ ತಯಾರಿಕೆ, ಸಂಗ್ರಹಣೆ,ಸಾಗಾಣಿಕೆ ಮತ್ತು ಮಾರಾಟ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಆಹಾರ ಸುರಕ್ಷತಾಧಿಕಾರಿಗಳು, ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕರು,ತೂಕ ಮತ್ತು ಅಳತೆ ಇಲಾಖೆ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆಯ NULM ವಿಭಾಗದ ಅಧಿಕಾರಿಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯನ್ನು ನಡೆಸಿದರು.

Shimoga News ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಹಾರ ತಯಾರಿಸುವ ಘಟಕಗಳ ವಿವರಗಳನ್ನು ತುರ್ತಾಗಿ ಪಟ್ಟಿ ಮಾಡಿ ಮಾಹಿತಿಯನ್ನು ನೀಡಲು ಸೂಚಿಸಿದರು.

ಧ್ವನಿ ಮುದ್ರಿಕೆಯ ಮುಖಾಂತರ ಮಹಾನಗರ ಪಾಲಿಕೆಯ ವಾಹನಗಳ ಮೂಲಕ ವ್ಯಾಪಕ ಪ್ರಚಾರ /ಅರಿವು ಮೂಡಿಸಲು ಸೂಚಿಸಿದರು.