Wednesday, May 6, 2026
Wednesday, May 6, 2026
Home Blog Page 37

ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲು ” ಅಲಂಕಾರ್. ಶೋ ಫಾರ್ ವಿಮೆನ್”- ಅಂಜು ಸುರೇಶ್

0

ಶಿವಮೊಗ್ಗ ನಗರದ ಬಾಲರಾಜ್ ರಸ್ತೆಯಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಏಪ್ರಿಲ್ 4ರಂದು ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ “ಅಲಂಕಾರ ದ ಶೋ ಫಾರ್ ವುಮೆನ್” ಪ್ರದರ್ಶನ ಮತ್ತು ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ. ಕಂಚಿ ಸೀರೆಗಳು, ಬನಾರಸ್ ಸೀರೆಗಳು, ಡಿಸೈನರ್ ಸೀರೆಗಳು, ಡಿಸೈನರ್ ರವಿಕೆಗಳು, ಕುರ್ತಾ ಸೆಟ್‌ಗಳು, ಜ್ಯೂವೆಲ್ಲರಿ, ಬೆಡ್‌ಲೈನ್ಸ್, ಹ್ಯಾಂಡ್ ಬ್ಯಾಗ್ಸ್, ಗೃಹೋಪಯೋಗಿ ವಸ್ತುಗಳು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಲಭ್ಯವಿದೆ. ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಮೇಳ ಆಯೋಜನೆ ಮಾಡಲಾಗಿದ್ದು, ವೈವಿಧ್ಯಮಯ ಸ್ಟಾಲ್‌ಗಳನ್ನು ತೆರೆಯಲಾಗಿರುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಬೇಕು ಎಂದು ಆಯೋಜಕರಾದ ಅಂಜು ಸುರೇಶ್ ಮತ್ತು ಸುಪ್ರಿಯಾ ತಿಳಿಸಿದ್ದಾರೆ.

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

0

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ನಡೆಯದೇ ಸಾರ್ವಜನಿಕ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವ ವಿಷಯವನ್ನು ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್ ಅವರು ಸರ್ಕಾರದ ಗಮನಕ್ಕೆ ತಂದರು.

ಘನ ತ್ಯಾಜ್ಯ ವಿಲೇವಾರಿ ವ್ಯವಸ್ಥೆಯಲ್ಲಿ ಭಾರೀ ಅವ್ಯವಸ್ಥೆಗಳು ಕಂಡುಬರುತ್ತಿದ್ದು, ಈ ವ್ಯವಸ್ಥೆ ಕ್ರಮೇಣ ಮಾಫಿಯಾ ಸ್ವರೂಪಕ್ಕೆ ತಿರುಗುತ್ತಿದೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದರು. ಕಸ ಸಂಸ್ಕರಣೆ ವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿಲ್ಲದೆ, ಅಧಿಕಾರಿಗಳ ಹೊಣೆಗಾರಿಕೆಯ ಕೊರತೆ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾನ್ಯ ಶಾಸಕರು ಟೀಕಿಸಿದರು.

ರಾಜ್ಯದಲ್ಲಿ ಉತ್ಪತ್ತಿಯಾಗುವ ಕಸದ ಪ್ರಮಾಣದ ಲೆಕ್ಕಾಚಾರದಲ್ಲಿಯೇ ದೊಡ್ಡ ಮಟ್ಟದ ಅಸಂಗತತೆ ಇದೆ ಎಂದು ಪ್ರಶ್ನಿಸಿದರು. 100 ಟನ್ ಕಸ ಉತ್ಪತ್ತಿಯಾದರೆ ಕೇವಲ 50 ಟನ್ ಮಾತ್ರ ದಾಖಲಾಗುತ್ತಿದೆ ಎಂಬುದು ಗಂಭೀರ ಅನುಮಾನಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಹೆಚ್ಚಿನ ಪ್ರಮಾಣದ ಕಸವನ್ನು ಡಂಪಿಂಗ್ ಯಾರ್ಡ್‌ಗಳಿಗೆ ಕಳುಹಿಸಲಾಗುತ್ತಿದ್ದು, ಮರುಬಳಕೆ ಹಾಗೂ ಉಪ ಉತ್ಪನ್ನಗಳ ಅಭಿವೃದ್ಧಿಗೆ ಯಾವುದೇ ಆದ್ಯತೆ ನೀಡಲಾಗುತ್ತಿಲ್ಲವೆಂದು ಅವರು ಆರೋಪಿಸಿದರು. ಅಲ್ಲದೇ, ಹೆಚ್ಚುವರಿ ಕಸವನ್ನು ಗ್ರಾಮೀಣ ಪ್ರದೇಶಗಳಲ್ಲಿ ಸುರಿಯುತ್ತಿರುವ ಘಟನೆಗಳತ್ತ ಗಮನ ಸೆಳೆದು, ಇದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಹಾಗೂ ಪೌರಾಡಳಿತ ಇಲಾಖೆಗಳ ಸಮನ್ವಯದ ಮೂಲಕ ಕಟ್ಟುನಿಟ್ಟಾಗಿ ನಿಯಂತ್ರಿಸಬೇಕೆಂದು ಒತ್ತಾಯಿಸಿದರು.

ಇ-ವೆಸ್ಟ್ ಹಾಗೂ ಮೆಡಿಕಲ್ ವೆಸ್ಟ್‌ನಂತಹ ಅಪಾಯಕಾರಿ ತ್ಯಾಜ್ಯಗಳ ನಿರ್ವಹಣೆಯಲ್ಲಿಯೂ ನಿರ್ಲಕ್ಷ್ಯ ಮುಂದುವರಿದಿದ್ದು, ಇದರ ಪರಿಣಾಮವಾಗಿ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಹಾಗೂ ಪರಿಸರಕ್ಕೆ ದೀರ್ಘಕಾಲಿಕ ಹಾನಿ ಸಂಭವಿಸುತ್ತಿದೆ ಎಂದು ಎಚ್ಚರಿಸಿದರು.
D.S. Arun 2016ರ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು ಜಾರಿಯಾದು ದಶಕವಾಗುತ್ತಿದ್ದರೂ ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
ಘನ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಮಾಫಿಯಾ ಪ್ರಭಾವದಿಂದ ಮುಕ್ತಗೊಳಿಸಿ, ಜನಾರೋಗ್ಯ ಮತ್ತು ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ತಕ್ಷಣವೇ ಪಾರದರ್ಶಕ, ಕಟ್ಟುನಿಟ್ಟಾದ ಮತ್ತು ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಬೇಕೆಂದು ಡಿ.ಎಸ್. ಅರುಣ್ ಅವರು ಸರ್ಕಾರವನ್ನು ಎಚ್ಚರಿಸಿದರು.

ಕರ್ತವ್ಯದಲ್ಲಿ ನಿಷ್ಠೆ ತೋರಿದರೆ ಇಲಾಖೆಗೆ ಉತ್ತಮ ಹೆಸರು.ಆತ್ಮತೃಪ್ತಿ- ಎ.ಎಸ್.ರಾಜಕುಮಾರ್

0

ಸಮಯ ಪ್ರಜ್ಞೆ ಮತ್ತು ನಿಷ್ಟೆಯಿಂದ ಕರ್ತವ್ಯದಲ್ಲಿ ತೊಡಗಿದರೆ ಇಲಾಖೆಗೆ ಉತ್ತಮ ಹೆಸರು ಬರುವುದರೊಂದಿಗೆ ಪ್ರಶಂಸೆ, ಆತ್ಮತೃಪ್ತಿ ಲಭಿಸುತ್ತದೆ ಎಂದು ಪೂರ್ವ ಸಂಚಾರಿ ಪೊಲೀಸ್ ಠಾಣೆ ನಿವೃತ್ತ ಎ ಎಸ್ ಐ ರಾಜಕುಮಾರ ಹೇಳಿದರು.
ಶಿವಮೊಗ್ಗ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗಾಗಿ ಹಗಲಿರುಳು ದುಡಿಯುವ ಆರಕ್ಷಕ ಪಡೆಯ ಕರ್ತವ್ಯ ಸೇವೆ ನೆನೆಯುವ ದಿನ ಇದಾಗಿದೆ. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿಗಳ ಪದಕವನ್ನು ಏಪ್ರಿಲ್ 2 ರಂದು ಮತ್ತು ಕರ್ತವ್ಯ ಮಾಡುತ್ತಲೇ ನಿಧನ ಹೊಂದಿದವರನ್ನು ಸ್ಮರಿಸಲು ಅ.21 ರಂದು ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದ್ದು, ಪೊಲೀಸ್ ಇಲಾಖೆಗೆ ಇವೆರೆಡು ವಿಶೇಷ ದಿನಗಳಾಗಿವೆ.
ಜಿಲ್ಲೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿ ಶಾಂತಿ ಸ್ಥಾಪನೆಗೆ ಕೊಡುಗೆಯನ್ನಿತ್ತ ಪೊಲೀಸ್ ಪಡೆಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು ದಕ್ಷತೆ, ಸಮಯ ಪ್ರಜ್ಞೆಯಿಂದ ದುಡಿದ ಪೊಲೀಸ್ ನೌಕರರ ಕುಂದುಕೊರತೆಗಳನ್ನು ಆಲಿಸಿ ಭದ್ರತೆಯನ್ನು ಒದಗಿಸುವಂತೆ ಇದೇ ವೇಳೆ ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್.ಬಿ ಮಾತನಾಡಿ, ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗಾಗಿಯೇ ನಿವೃತ್ತ ಪೊಲೀಸ್ ಕಲ್ಯಾಣ ನಿಧಿ ಸ್ಥಾಪಿಸಲಾಗಿದೆ. ಇದರ ಪ್ರಯುಕ್ತವಾಗಿ ಈ ದಿನದಂದು ಪೊಲೀಸ್ ಸಾಂಕೇತಿಕ ಧ್ವಜಗಳನ್ನು ಪೊಲೀಸ್ ಅಧಿಕಾರಿಗಳಿಗೆ, ಆಹ್ವಾನಿತ ಉನ್ನತ ಅಧಿಕಾರಿಗಳಿಗೆ, ಗಣ್ಯರಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಿ ಸಂಗ್ರಹವಾಗಿ ಬಂದ ಹಣದಲ್ಲಿ ಶೇ. 50 ರಷ್ಟು ಹಣವನ್ನು ನಿವೃತ್ತ ಕ್ಷೇಮಾಭಿವೃದ್ದಿ ನಿಧಿಗೆ ಮತ್ತು ಶೇ.50 ರಷ್ಟನ್ನು ಕೇಂದ್ರ ಕಲ್ಯಾಣ ನಿಧಿಗೆ ಜಮಾ ಮಾಡಲಾಗುವುದು ಎಂದರು.
2025 ನೇ ಸಾಲಿನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಕಲ್ಯಾಣ ನಿಧಿಗೆ ರೂ. 26,96,870 ಹಣವನ್ನು ಸಂಗ್ರಹಣೆ ಮಾಡಲಾಗಿದೆ. ಇದರಲ್ಲಿ ಶೇ.50 ರಷ್ಟನ್ನು ಕೇಂದ್ರ ಕಲ್ಯಾಣ ನಿಧಿಗೆ ಜಮೆ ಮಾಡಲಾಗಿದೆ. ನಿವೃತ್ತ ಅಧಿಕಾರಿಗಳು ಮರಣ ಹೊಂದಿದಾಗ ಅವರ ಅಂತ್ಯ ಸಂಸ್ಕಾರ ನಿರ್ವಹಣೆಗಾಗಿ ಈ ಕಲ್ಯಾಣ ನಿಧಿಯಿಂದ ರೂ. 10 ಸಾವಿರ ಹಣವನ್ನು ನೀಡಲಾಗುತ್ತಿದೆ. 2025 ನೇ ಸಾಲಿನಲ್ಲಿ 17 ಜನ ಅಧಿಕಾರಿ/ಸಿಬ್ಬಂದಿಗಳಿಗೆ ರೂ. 1,70,000 ಹಣವನ್ನು ಅಂತ್ಯಸಂಸ್ಕಾರಕ್ಕೆ ನೀಡಲಾಗಿದೆ.
2025-26 ನೇ ಸಾಲಿನಲ್ಲಿ ಒಟ್ಟು 93 ಜನ ನಿವೃತ್ತ ಅಧಿಕಾರಿ, ಸಿಬ್ಬಂದಿಗಳಿಗೆ ನಿವೃತ ಕಲ್ಯಾಣ ನಿಧಿನಿಯಿಂದ ರೂ.3,29,000 ಗಳನ್ನು ವೈದ್ಯಕೀಯ ಚಿಕಿತ್ಸೆ ವೆಚ್ಚಕ್ಕಾಗಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ 70 ವರ್ಷ ಮೇಲ್ಪಟ್ಟ ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಹಾಗೂ 2013 ರಲ್ಲಿ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದ ಪೂರ್ವ ಸಂಚಾರಿ ಪೊಲೀಸ್ ಠಾಣೆ ನಿವೃತ್ತ ಎ ಎಸ್ ಐ ರಾಜಕುಮಾರರವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕಾರಿಯಪ್ಪ, ಹಿರಿಯ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಪೊಲೀಸ್ ಪಬ್ಲಿಕ್ ಶಾಲೆಯಲ್ಲಿನ ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಜಿ‌ ಆಹ್ವಾನ

0

ಶಿವಮೊಗ್ಗ ನಗರದ ಮಾಚೇನಹಳ್ಳಿಯಲ್ಲಿರುವ 8ನೇ ಪಡೆ, ಕೆ.ಎಸ್.ಆರ್.ಪಿ ಘಟಕದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇಂಗ್ಲಿಷ್ ಶಿಕ್ಷಕರ ಹುದ್ದೆ, 02 ಸಂಖ್ಯೆ, ವಿದ್ಯಾರ್ಹತೆ ಬಿಎ/ಎಂಎ ಮತ್ತು ಬಿಡ್ ಆಗಿರಬೇಕು. ಸಮಾಜ ವಿಜ್ಞಾನ ಶಿಕ್ಷಕರು 02 ಸಂಖ್ಯೆ, ಬಿಎ/ಎಂಎ ಮತ್ತು ಬಿಎಡ್. ನರ್ಸರಿ ಶಿಕ್ಷಕರ ಹುದ್ದೆ 01 ಸಂಖ್ಯೆ, ಎನ್‌ಟಿಟಿ/ಇಸಿಸಿಇ/ಎಂಟಿಟಿ. ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ 01 ಸಂಖ್ಯೆ, ಬಿಪಿಎಡ್/ಎಂಪಿಎಡ್. ಸಂಗೀತ ಶಿಕ್ಷಕರ ಹುದ್ದೆ 01 ಸಂಖ್ಯೆ, ಸಂಗೀತದಲ್ಲಿ ಡಿಪ್ಲೊಮಾ ಆಗಿರಬೇಕು.
ಪೂರ್ಣ ಮಾಹಿತಿಯುಳ್ಳ ಅರ್ಜಿಯನ್ನು ಏಪ್ರಿಲ್ 7 ರೊಳಗೆ ಶಾಲೆಯ ಇಮೇಲ್ ವಿಳಾಸ pps8bnksrp@gmail.com ಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ : 9480805961, 6363570450 ಗೆ ಕರೆ ಮಾಡಬಹುದು ಎಂದು ಕೆಎಸ್‌ಆರ್‌ಪಿ 8ನೇ ಪಡೆ ಕಮಾಂಡೆAಟ್ ಎಸ್ ಯುವಕುಮಾರ್ ತಿಳಿಸಿದ್ದಾರೆ.

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

0

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ ಸಂಕೇತ್‌ನ ಸಮಾಧಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯ ಮತ್ತು ಅಸಹನೀಯವಾಗಿದ್ದು, ಇದು ವಿಕೃತ ಮನಸ್ಥಿತಿಯ ಪರಮಾವಧಿಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಘಟನಾ ಸ್ಥಳವಾದ ಊರುಗಡೂರನ ರುದ್ರಭೂಮಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು, ಮೃತ ಬಾಲಕನ ತಂದೆಗೆ ಧೈರ್ಯ ತುಂಬಿದರು.

ಸ್ಥಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, “ಸತ್ತ ಮೇಲೆಯೂ ಹಗೆತನ ಸಾಧಿಸುವ ಇಂತಹ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ ಎಂದಿಗೂ ಸಹಿಸುವುದಿಲ್ಲ. ಸಂಕೇತ್ ತಂದೆಯ ಬೆನ್ನಿಗೆ ನಿಂತು ನಾನು ಸ್ಪಷ್ಟವಾಗಿ ಹೇಳಿದ್ದೇನೆ — ನಿಮ್ಮೊಂದಿಗೆ ನಾವಿದ್ದೇವೆ ಮತ್ತು ಇಡೀ ಹಿಂದೂ ಸಮಾಜವಿದೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು,” ಎಂದು ತಿಳಿಸಿದರು.

ಸಂಕೇತ್ ಹತ್ಯೆಯಾದ ಸಮಯದಲ್ಲಿ ಸಾಂತ್ವನ ಹೇಳಲು ‘ಕ್ಯಾಂಡಲ್ ಮಾರ್ಚ್’ ನಡೆಸಿದ್ದ ಮುಸ್ಲಿಂ ಸಮಾಜದ ಮುಖಂಡರು, ಇಂದು ಸಮಾಧಿ ಧ್ವಂಸವಾಗಿರುವ ಈ ಹೇಯ ಕೃತ್ಯಕ್ಕೆ ಏನು ಉತ್ತರ ನೀಡುತ್ತಾರೆ? ಸಂಕೇತ್‌ನನ್ನು ಹತ್ಯೆ ಮಾಡಿದವರು ನಶೆಯಲ್ಲಿದ್ದರು ಎಂದು ಹೇಳಲಾಗಿತ್ತು, ಅವರು ಈಗ ಜೈಲಿನಲ್ಲಿದ್ದಾರೆ. ಆದರೆ, ಈಗ ಈ ಸಮಾಧಿಯನ್ನು ಹಾಳು ಮಾಡಿದವರ ತಲೆಯಲ್ಲಿದ್ದ ಆ ‘ಕೋಮುವಾದಿ ನಶೆ’ ಯಾವುದು?” ಎಂದು ಶಾಸಕರು ಪ್ರಶ್ನಿಸಿದರು.

S.N. Channabasappa ಶಿವಮೊಗ್ಗದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡಲು ಯತ್ನಿಸುವ ಇಂತಹ ಪುಂಡಾಟಿಕೆಗಳನ್ನು ಹತ್ತಿಕ್ಕಲು ನಾವು ಬದ್ಧರಾಗಿದ್ದೇವೆ. ಈ ಘಟನೆಯ ಹಿಂದೆ ಇರುವ ತಪ್ಪಿತಸ್ಥರನ್ನು ತಕ್ಷಣವೇ ಗುರುತಿಸಿ ಅವರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಲು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಾವು ವಿಶ್ರಮಿಸುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಅದ್ಧೂರಿಯಾಗಿ‌ ನಡೆದ ಶ್ರೀಬಸವೇಶ್ವರ ಸ್ವಾಮಿಯ ರಥೋತ್ಸವ

0

ಶ್ರೀ ಅಕ್ಕನ ಹುಣ್ಣಿಮೆಯ ಪ್ರಯುಕ್ತ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘ ದ ವತಿಯಿಂದ ಶ್ರೀ ಬಸವೇಶ್ವರ ಸ್ವಾಮಿ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮತ್ತು ಮಹಾಪೂಜೆ ಕಾರ್ಯಕ್ರಮ ನೆರವೇರಿತು ಹಾಗೆ ಶರಬಿ ಗುಗ್ಗುಳ ಮತ್ತು ಕೆಂಡದಾರ್ಚನೆ ಕಾರ್ಯಕ್ರಮದೊಂದಿಗೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಓಕಳಿ ಮತ್ತು ರಾಜಭೀದಿ ಉತ್ಸವ ನೆರವೇರಿತು. ಮೆರವಣಿಗೆಯಲ್ಲಿ ಶ್ರೀ ಅಕ್ಕಮಹಾದೇವಿಯ ಭಾವಚಿತ್ರದ ಉತ್ಸವ ನೆರವೇರಿತು ಹಾಗೆ ಬಸವೇಶ್ವರ ಸ್ವಾಮಿ ರಥೋತ್ಸವದಲ್ಲಿ ದಿವಂಗತ ಉಡುಗಣಿ ಶೇಖರಪ್ಪ ಮತ್ತು ಮಕ್ಕಳು ಪಾನಕ ಸೇವೆ ನೆರವೇರಿಸಿದರು ಕೋಸಂಬರಿ ಸೇವೆಯನ್ನು ದಿವಂಗತ ಬಿಜಿ ಮಲ್ಲೇಶಪ್ಪ ಹಾಗೂ ದೇವಂಗತ ಬಿಜಿ ಗಂಗಾಧರಪ್ಪ ಮಕ್ಕಳು ದಿವಂಗತ ಎಸ್ ಪಿ ಶಾಂತಪ್ಪ ಮತ್ತು ಮಕ್ಕಳು ಇವರುಗಳು ನೆರವೇರಿಸಿ ಕೊಟ್ಟರು. ಕಾರ್ಯಕ್ರಮದಲ್ಲಿ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್ ಎಸ್ ಜ್ಯೋತಿಪ್ರಕಾಶ್. ನಿರ್ದೇಶಕರಾದ ಪಿ ರುದ್ರೇಶ್. ಮಹೇಶ್ ಮೂರ್ತಿ. ಮರುಳೆಶ್. ಹೆಚ್ ವಿ ಮಹೇಶ್ವರಪ್ಪ. ಶಿವಾನಂದ್. ಮಹೇಶ್ವರಪ್ಪ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ರುದ್ರಪ್ಪ ಚಿಲೂರು ಸಮಾಜದ ಭಕ್ತರು ಉಪಸ್ಥಿತರಿದ್ದರು ಕಾರ್ಯಕ್ರಮದ ನಂತರ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಮಾಡಲಾಯಿತು.

ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಂಡಸಿನ ಶವ ಪತ್ತೆ.ಮಾಹಿತಿ ಪ್ರಕಟಣೆ

0

ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಹಳಿಯ ಪಕ್ಕದಲ್ಲಿ ಸುಮಾರು 35 ವರ್ಷದ ಗಂಡಸಿನ ಶವ ಪತ್ತೆಯಾಗಿದೆ. ಆತನ ಚಹರೆ 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಎಡಗೈ ಮೇಲೆ ಜಿ. ರತ್ನಮ್ಮ ಮತ್ತು ಬಲಗೈ ಮೇಲೆ ಸಂಗೀತಾ ಜಿ.ಅಣ್ಣಪ್ಪ ಎಂದು ಕನ್ನಡದಲ್ಲಿ ಹಚ್ಚೆ ಗುರುತು ಇರುತ್ತದೆ. ಕೊರಳಲ್ಲಿ ರುದ್ರಾಕ್ಷಿ ಮಾಲೆ ಇರುತ್ತದೆ. ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಈ ಮೃತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ದೂ.ಸಂ.: 08182-222974/ 9480802124 ಗಳನ್ನು ಸಂಪರ್ಕಿಸುವಂತೆ ಪೊಲೀಸ್ ತಿಳಿಸಿದೆ.

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

0

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಅತ್ಯುತ್ತಮ ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.
ಲೇಖಕರು/ಪ್ರಕಾಶಕರು/ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ರಿಜಿಸ್ಟರ್ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ ದಿ:30/06/2026 ರೊಳಗೆ ತಲುಪುವಂತೆ ಕಳುಹಿಸಬೇಕು.
2025ನೇಯ ವರ್ಷದ ಅತ್ಯುತ್ತಮ ಕೃತಿಗಳಿಗೆ ಬಹುಮಾನ :- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2025ನೆಯ ವರ್ಷದ ಪುಸ್ತಕ ಬಹುಮಾನ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2025ರ ಜನವರಿ 01 ರಿಂದ 2025ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2025 ಎಂದು ಮುದ್ರಿತವಾಗಿರಬೇಕು.
ಕಾವ್ಯ, ನವಕವಿಗಳ ಪ್ರಥಮ ಕವನಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತಪ್ರತಿ (30 ವರ್ಷ ಒಳಗಿನ ಯುವಕವಿಗಳ ಅಪ್ರಕಟಿತ ಕವನ ಸಂಕಲನದ ಹಸ್ತಪ್ರತಿಯನ್ನು ಕಳಿಸಿಕೊಡಬೇಕು. (ಚಿ.ಶ್ರೀನಿವಾಸರಾಜು ದತ್ತಿನಿಧಿ ಬಹುಮಾನಕ್ಕಾಗಿ), ಕಾದಂಬರಿ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಚದುರಂಗ ದತ್ತಿನಿಧಿ ಬಹುಮಾನಗಳಿಗಾಗಿ), ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ)(ಅಕಾಡೆಮಿ ಮಸ್ತಕ ಬಹುಮಾನ ಹಾಗೂ ವಿ.ಸೀತಾರಾಮಯ್ಯ ಸೋದರಿ ಇಂದಿರಾ ದತ್ತಿನಿಧಿ ಬಹುಮಾನಗಳಿಗಾಗಿ), ಪ್ರವಾಸ ಸಾಹಿತ್ಯ, ಜೀವನಚರಿತ್ರೆ / ಆತ್ಮಕಥೆ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನಗಳಿಗಾಗಿ), ಸಾಹಿತ್ಯ ವಿಮರ್ಶೆ (ಸಾಹಿತ್ಯಚರಿತ್ರೆ, ಸಾಹಿತ್ಯತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ) (ಅಕಾಡೆಮಿ ಮಸ್ತಕ ಬಹುಮಾನ ಹಾಗೂ ಪಿ. ಶ್ರೀನಿವಾಸರಾವ್ ದತ್ತಿನಿಧಿ ಬಹುಮಾನಗಳಿಗಾಗಿ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿಂಗ್, ವೈದ್ಯ, ಭೂ, ಖಗೋಳ, ಗೃಹವಿಜ್ಞಾನ, ಪರಿಸರ), ಮಾನವಿಕ (ಜಾನಪದ, ಇತಿಹಾಸ, ರಾಜ್ಯ ಶಾಸ್ತ್ರ, ಸಮಾಜಶಾಸ್ತ್ರ, ಮಾನವಶಾಸ್ತ್ರ, ಮನಃಶಾಸ್ತ್ರ, ಭಾಷಾಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭಂಡಾರ ವಿಜ್ಞಾನ, ಸಮೂಹಸಂವಹನ, ಧಾರ್ಮಿಕ, ದಾರ್ಶನಿಕ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ) / ಸಂಶೋಧನೆ (ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಗಳಿಗೆ ಸಂಬಂಧಿಸಿದ ಸಂಶೋಧನೆ), ವೈಚಾರಿಕ / ಅಂಕಣ ಬರಹ (ಅಕಾಡೆಮಿ ಪುಸ್ತಕ ಬಹುಮಾನ ಹಾಗೂ ಬಿ.ವಿ. ವೀರಭದ್ರಪ್ಪ ದತ್ತಿನಿಧಿ ಬಹುಮಾನಗಳಿಗಾಗಿ), ಅನುವಾದ-1 (ಇಂಗ್ಲಿಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಸೃಜನ/ಸೃಜನೇತರ ಕೃತಿಗಳು (ಎಲ್ ಗುಂಡಪ್ಪ ಮತ್ತು ಶಾರದಮ್ಮ ದತ್ತಿನಿಧಿ ಬಹುಮಾನಗಳಿಗಾಗಿ), ಅನುವಾದ-2 (ಕನ್ನಡದಿಂದ ಭಾರತೀಯ ಭಾಷೆಗಳಿಗೆ ಅನುವಾದಗೊಂಡ ಸೃಜನ/ಸೃಜನೇತರ ಕೃತಿಗಳು), ಲೇಖಕರ ಮೊದಲ ಸ್ವತಂತ್ರಕೃತಿ (2025ರಲ್ಲಿ ಮುದ್ರಣಗೊಂಡ ಮೊದಲ ಸ್ವತಂತ್ರಕೃತಿ. ಖಾತರಿಪಡಿಸಲು ದೃಢೀಕರಣ ಪತ್ರ ಲಗತ್ತಿಸಬೇಕು.) (ಅಕಾಡೆಮಿ ಮಸ್ತಕ ಬಹುಮಾನ ಹಾಗೂ ಮಧುರಚೆನ್ನ ದತ್ತಿನಿಧಿ ಬಹುಮಾನಗಳಿಗಾಗಿ) (ಕಾವ್ಯ ಪ್ರಕಾರವನ್ನು ಹೊರತುಪಡಿಸಿ), ಕನ್ನಡದಿಂದ ಇಂಗ್ಲೀಷಿಗೆ ಅನುವಾದ (ಅಮೆರಿಕನ್ನಡ ದತ್ತಿನಿಧಿ ಬಹುಮಾನಕ್ಕಾಗಿ), ದಾನ ಸಾಹಿತ್ಯ (ದಾಸ ಸಾಹಿತ್ಯಕುರಿತ ಸೃಜನ/ ಸೃಜನೇತರ ಕೃತಿಗಳು) (ಶ್ರೀಮತಿ ಜಲಜಾ ಶ್ರೀಪತಿ ಆಚಾರ್ಯಗಂಗೂರ್ ದತ್ತಿನಿಧಿ ಬಹುಮಾನಕ್ಕಾಗಿ), ಸಂಕೀರ್ಣ (ಮೇಲಿನ ಯಾವುದೇ ಪ್ರಕಾರಕ್ಕೆ ಹೊಂದಿಕೊಳ್ಳದ ವಿಶಿಷ್ಟ ಕೃತಿಗಳು), ಗಜಲ್ ಕಾವ್ಯ (ನಾಡೋಜ ಡಾ. ಶಾಂತರಸ ಗಜಲ್ ಕಾವ್ಯ ದತ್ತಿ ಬಹುಮಾನಕ್ಕಾಗಿ). ಕುವೆಂಪು ಅವರ ಕೃತಿಗಳು ಮತ್ತು ಆಶಯಗಳ ಹಿನ್ನೆಲೆಯಲ್ಲಿ ರಚನೆಗೊಂಡ ಕನ್ನಡ ಸಾಹಿತ್ಯದ ಯಾವುದೇ ಪ್ರಕಾರದ ಪುಸ್ತಕ (ಬಾ ಇಲ್ಲಿ ಸಂಭವಿಸು-ಶ್ರೀಮತಿ ಕೆ.ಎಲ್. ಲಕ್ಷ್ಮಮ್ಮ ಮತ್ತು ಪ್ರೊ. ಶಿವರಾಮಯ್ಯ ದತ್ತಿನಿಧಿ ಬಹುಮಾನಕ್ಕಾಗಿ).
Karnataka Sahitya Academy ಬಹುಮಾನಕ್ಕಾಗಿ ಪರಿಗಣಿಸಲ್ಪಡದ ಕೃತಿಗಳು : ಮರುಮುದ್ರಣವಾದ ಪುಸ್ತಕಗಳು. ಪಿಎಚ್.ಡಿ. ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು. ಪಠ್ಯಪುಸ್ತಕಗಳು. ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು. ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು. ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು.
ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ. ಬಹುಮಾನಕ್ಕಾಗಿ ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.
ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ www.sahithyaacademy.karnataka.gov.in ಅನ್ನು ಸಂಪರ್ಕಿಸಬಹುದೆಂದು ಕನ್ನಡ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ತಿಳಿಸಿದ್ದಾರೆ.

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

0

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ ಮಂಡನೆ, ವಿಮರ್ಶಾ ಸಾಮರ್ಥ್ಯ, ವಾಕ್ಚಾತುರ್ಯ, ಸಂವಹನ ಕೌಶಲ್ಯ, ನೀತಿ ರೂಪಿಸುವ ಸಾಮರ್ಥ್ಯ ಇರುವವರನ್ನು ಉತ್ತಮ ನಾಯಕ ಎಂದು ಪರಿಗಣಿಸಲಾಗುತ್ತದೆ. ನಾಯಕತ್ವ ಗುಣ ರೂಪಿಸುಕೊಳ್ಳುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿಯಾಗಿದೆ ಎಂದು ಸಹ ಎಂದು ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಜೆ.ಎಂ. ನಾಗಯ್ಯ ಹೇಳಿದರು

ತಾಳಗುಂದದಲ್ಲಿರುವ ಶ್ರೀ ವೀರಭದ್ರೇಶ್ವರ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಏಪ್ರಿಲ್ 2ರ ಗುರುವಾರ ಬೆಳಿಗ್ಗೆ ಸದರಿ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ 2025- 26ನೇ ಸಾಲಿನ ಸಾಂಸ್ಕೃತಿಕ ವೇದಿಕೆ ಮತ್ತು ವಿದ್ಯಾರ್ಥಿ ಸಂಸತ್ತು ಉದ್ಘಾಟನೆ ಹಾಗೂ ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ ಕಾಲೇಜಿನ ಹಂತದಲ್ಲಿ ವಿದ್ಯಾರ್ಥಿ ಸಂಸತ್ತು ರೂಪಿಸಿರುವುದು ಉತ್ತಮ ಫಲಿತಾಂಶ ನೀಡುತ್ತಿದೆ. ಪ್ರಜಾಪ್ರಭುತ್ವದ ಆಶಯಗಳು ಬಲವರ್ಧನೆಗೊಳ್ಳಲು ವಿದ್ಯಾರ್ಥಿ ಸಂಸತ್ತು ಸಹಕಾರಿಯಾಗಿದೆ ಎಂದರು.

ಶಿಕ್ಷಣವನ್ನು ಪರ ಹಾಗೂ ಅಪರ ವಿದ್ಯೆ ಎಂದು ವಿಂಗಡಿಸಬಹುದಾಗಿದೆ. ಆತ್ಮಜ್ಞಾನ ಹಾಗೂ ಆತ್ಮ ವಿಕಸನಕ್ಕೆ ಪಡೆಯುವ ವಿದ್ಯೆಯನ್ನು ಪರ ವಿದ್ಯೆ ಎಂದೂ ಲೌಕಿಕ ಸುಖಕ್ಕೆ ಸಾಧಕವನ್ನಾಗಿ ಕಲಿಯುವ ವಿದ್ಯೆಯನ್ನು ಅಪರ ವಿದ್ಯೆ ಎಂದು ಪರಿಗಣಿಸಬಹುದಾಗಿದೆ. ಹಿಂದಿನ ಕಾಲದಲ್ಲಿ ಪರ ವಿದ್ಯೆ ಎಂದರೆ ಶಿಕ್ಷಣವನ್ನು ಆತ್ಮಜ್ಞಾನ ಅಥವಾ ಮೋಕ್ಷ ಪಡೆಯಲು ಅಧ್ಯಯನ ಮಾಡುತ್ತಿದ್ದರು. ಆದರೆ ಆಧುನಿಕ ಕಾಲಘಟ್ಟದಲ್ಲಿ ಪರ ಹಾಗೂ ಅಪರ ವಿದ್ಯೆಗಳೆರೆಡೂ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಶ್ರೀ ವೀರಭದ್ರೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಪರಮೇಶ ಹ. ಮಸಲವಾಡ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಧಾರವಾಡದ ಹುರಿಕಡ್ಲಿ ಅಜ್ಜ ಮಹಿಳಾ ಪದವಿ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯರಾದ ಡಾ. ರಾಜೇಶ್ವರಿ ಸಾಲಿ, ಹಂಸಭಾವಿ ಎಂಎಎಸ್‌ಸಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಎಂ.ಎA. ಅಕ್ಕಿ, ವಿಶೇಷ ಆಹ್ವಾನಿತರಾಗಿ ಶ್ರೀ ವೀರಭದ್ರೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಜೆ.ಪಿ. ಸುನೀಲ್ ಕುಮಾರ ಆಗಮಿಸಿದ್ದರು.

Karnataka University ಸಾಂಸ್ಕೃತಿಕ ವೇದಿಕೆ ಕಾರ್ಯಾಧ್ಯಕ್ಷ ವೈ.ಹೆಚ್. ರಾಜು, ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಪಿ.ಹೆಚ್. ಮಾಲತೇಶ, ಎಂ. ಸುಚಿತ್ರಾ, ಎಂ. ವಿನಾಯಕ, ಬಿ. ಭೂಮಿಕಾ ಮತ್ತಿತರರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದವರಿಗೆ ಡಿ. ಗುರುರಾಜ್ ಪ್ರಮಾಣ ವಚನ ಬೋಧಿಸಿದರು. ಪ್ರೊ.ಜೆ.ಎಂ. ನಾಗಯ್ಯ ಮತ್ತು ಡಾ. ರಾಜೇಶ್ವರಿ ಸಾಲಿ ಅವರನ್ನು ಅಭಿನಂದಿಸಲಾಯಿತು.

Chamber of commerce shivamogga ಸರಕು ಮತ್ತು ಸೇವಾ ತೆರಿಗೆ ಪ್ರಕರಣ ಮೇಲ್ಮನವಿಗೆ ಶಿವಮೊಗ್ಗದಲ್ಲಿ ಮತ್ತೊಂದು ನ್ಯಾಯಪೀಠ ಸ್ಥಾಪಿಸಿ- ಬಿ.ಗೋಪಿನಾಥ್

0

Chamber of commerce shivamogga ಸರಕು ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯ ಮತ್ತೊಂದು ಪೀಠವನ್ನು ಶಿವಮೊಗ್ಗದಲ್ಲಿ ಸ್ಥಾಪಿಸುವಂತೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮನವಿ ಮಾಡಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆ ಸಿ ಸಿ ಐ) ಸಭಾಂಗಣದಲ್ಲಿ ಆಯೋಜಿಸಿದ್ದ ಶಿವಮೊಗ್ಗ ಜಿಲ್ಲಾ ಸಮನ್ವಯ ಸಂವಾದಾತ್ಮಕ ಸಭೆಯಲ್ಲಿ ಮಾತನಾಡಿ, ಸರಕು ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ರಾಜ್ಯ ಪೀಠ ಅರೆ ನ್ಯಾಯಾಂಗ ಪ್ರಾಧಿಕಾರವಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ವಾಣಿಜ್ಯ ತೆರಿಗೆ ವಿಭಾಗವು ಮೊದಲಿನಿಂದಲೂ ಹಾಸನ ಮತ್ತು ಚಿಕ್ಕಮಗಳೂರು ಸೇರಿದಂತೆ ಮೂರು ಜಿಲ್ಲೆಗಳ ಮಲೆನಾಡು ವಿಭಾಗಿಯ ಕಚೇರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಅತಿ ಹೆಚ್ಚು ಸರಕು ಮತ್ತು ಸೇವಾ ತೆರಿಗೆಯ ವ್ಯಾಜ್ಯಗಳ ಮೇಲ್ಮನವಿ ಅರ್ಜಿಯನ್ನು ಸ್ವೀಕರಿಸುತ್ತಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆ ಇದೆ. ಸುತ್ತಮುತ್ತಲಿನ ಇನ್ನೂ 3-4 ಜಿಲ್ಲೆಗಳನ್ನು ಸೇರಿಸಿಕೊಂಡು ಶಿವಮೊಗ್ಗವನ್ನು ಕೇಂದ್ರಿಕರಿಸಿ ಬೆಂಗಳೂರಿನ ಜತೆ ಮತ್ತೊಂದು ಮೇಲ್ಮನವಿ ನ್ಯಾಯಮಂಡಳಿಯನ್ನು ರಚಿಸಿದರೆ ಇಲ್ಲಿನ ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪರಿಸರ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬೇಕು. ಟ್ರಕ್, ಬಸ್ ಟರ್ಮಿನಲ್, ಬಹುಹಂತದ ಕೌಶಲ್ಯಾಭಿವೃದ್ಧಿ ಕೇಂದ್ರ, ಶಿವಮೊಗ್ಗ-ಭದ್ರಾವತಿ ಪೊಲೀಸ್ ಆಯುಕ್ತರ ಕಚೇರಿ, ಆಹಾರ ಪದಾರ್ಥಗಳ ಸಂಸ್ಕರಣ ಘಟಕ ಹಾಗೂ ಶೀತಲ ಶೇಖರಣಾ ಘಟಕ ಸ್ಥಾಪನೆ, ಆಯಷ್ ಯೂನಿವರ್ಸಿಟಿಗೆ ಅನುದಾನ, ತುಂಗಾ ಮತ್ತು ಭದ್ರಾ ನದಿಯ ನೀರು ಸ್ವಚ್ಛತೆಗೆ ಒಂದು ವಿಶೇಷ ಯೋಜನೆ, ಕರಕುಶಲ ವಸ್ತುಗಳ ಪ್ರೋತ್ಸಾಹಕ್ಕಾಗಿ ಕಲಾಗ್ರಾಮ, ಅಮ್ನೆಸ್ಟಿ ಸ್ಕೀಮ್, ಸ್ಯಾಟ್ ಲೈಟ್ ಬಸ್ ಸ್ಟಾಂಡ್, ವಿ ಐ ಎಸ್ ಎಲ್, ಎಂ.ಪಿ.ಎಂ ಕೈಗಾರಿಕೆ ಪುನರಾರಂಭ, ಕೈಗಾರಿಕಾ ವಸಾಹತುಗಳ ಅಭಿವೃದ್ಧಿ, ಫುಡ್ ಪಾರ್ಕ್ ಸ್ಥಾಪನೆ, ಕೈಗಾರಿಕಾಗಳ ವೇತನ ಕಾಯ್ದೆ ಅಧಿಸೂಚನೆ ಸಮಸ್ಯೆ, ವಾಣಿಜ್ಯ ಹಾಗೂ ಕೈಗಾರಿಕಾ ಚಟುವಟಿಕೆಗಳನ್ನು ಏಕೀಕೃತ ನೋಂದಣಿ ಮಾಡಲು ಬೇಕಾದ ವ್ಯವಸ್ಥೆ, ಹೂಡಿಕೆಗಳನ್ನು ಆಕರ್ಷಿಸುವ ಸಲುವಾಗಿ ಮೂಲಸೌಕರ್ಯಗಳ ಅಭಿವೃದ್ಧಿ, ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಬಂಡವಾಳ, ಮಾರ್ಗದರ್ಶನ ಮತ್ತು ಮೂಲಸೌಕರ್ಯ ಬೆಂಬಲ, ಸಂಶೋಧನಾ ಸಂಸ್ಥೆಗಳ ಸ್ಥಾಪನೆ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಹಾಗೂ ರಾಜ್ಯದ ಶ್ರೇಯೋಭಿವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು ಪರಿಹರಿಸರಬೇಕು ಎಂದು ಮನವಿ ಮಾಡಿದರು.

Chamber of commerce shivamogga ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷೆ ಉಮಾ ರೆಡ್ಡಿ, ಉಪಾಧ್ಯಕ್ಷ ಸಾಯಿರಾಮ್ ಪ್ರಸಾದ್, ಸಮನ್ವಯ ಅಧ್ಯಕ್ಷ ಹಿರೇಮಠ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್, ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ ಉಪಸ್ಥಿತರಿದ್ದರು.