Wednesday, May 6, 2026
Wednesday, May 6, 2026
Home Blog Page 38

B.Y. Raghavendra ಶಿಕಾರಿಪುರದ ಶ್ರೀ ಹುಚ್ಚರಾಯಸ್ವಾಮಿ ರಥೋತ್ಸವ ನಾಡಿನ ಸಾಂಸ್ಕೃತಿಕ ಸೊಬಗನ್ನ ಎತ್ತಿ ಹಿಡಿದಿದೆ- ಬಿ.ವೈ.ರಾಘವೇಂದ್ರ

0

ಶಿಕಾರಿಪುರದಲ್ಲಿ ಜರುಗಿದ ಸಾಂಪ್ರದಾಯಿಕ ರಥೋತ್ಸವದಲ್ಲಿ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳೂ ಆದ ಹಾಗೂ ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರು, ಸಂಸದ ಬಿ. ವೈ.ರಾಘವೇಂದ್ರ ಮತ್ತು ಶಿಕಾರಿಪುರ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಅವರು ಮತ್ತು ಅವರ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದು ಧನ್ಯರಾದರು.

ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳ ಹರ್ಷೋದ್ಗಾರದ ನಡುವೆ ಸಾಗಿದ ರಥೋತ್ಸವವು ನಾಡಿನ ಸಾಂಸ್ಕೃತಿಕ ಸೊಬಗನ್ನು ಎತ್ತಿ ಹಿಡಿದಿದೆ.
ಈ ಸಂದರ್ಭದಲ್ಲಿ ರಥಕ್ಕೆ ಭಕ್ತಿಪೂರ್ವಕ ಸಂಸದ ಬಿ.ವೈ.ರಾಘವೇಂದ್ರ ಪೂಜೆ ಸಲ್ಲಿಸಿ, ಸಮಸ್ತ ಜನಕುಲಕ್ಕೆ ಒಳಿತಾಗಲಿ, ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು..

B.Y. Raghavendra ಸ್ವಾಮಿಯ ಕೃಪಾಶೀರ್ವಾದ ಸದಾ ನಮ್ಮೆಲ್ಲರ ಮತ್ತು ಕ್ಷೇತ್ರದ ಜನತೆಯ ಮೇಲಿರಲಿ ಎಂದು ಸಂಸದ ಬಿ.ವೈ.ರಾಘವೇಂದ್ರ ಪೂಜೆ ಸಲ್ಲಿಸದರು.

S.N. Channabasappa ಮಳೆಗೆ ಸಿಕ್ಕ ವಿವಿಧ ಬಡಾವಣೆಗಳಿಗೆ ಶಾಸಕ ಚನ್ನಬಸಪ್ಪ ಭೇಟಿ: ಶಾಶ್ವತ ಪರಿಹಾರಕ್ಕೆ ಸೂಚನೆ

0

S.N. Channabasappa ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ತೊಂದರೆಗೊಳಗಾದ ಶ್ರೀ ರಾಮನಗರ, ಕೆಂಚಪ್ಪ ಬಡಾವಣೆ ಹಾಗೂ ಶರಾವತಿ ನಗರದ ವಿವಿಧ ಭಾಗಗಳಿಗೆ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಬಡಾವಣೆಗಳಲ್ಲಿ ಮಳೆನೀರು ಸರಾಗವಾಗಿ ಹರಿಯದೆ ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಹಾನಿಯಾಗಿರುವುದನ್ನು ಗಮನಿಸಿದ ಶಾಸಕರು, ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಸಕರ ಪ್ರಮುಖ ಸೂಚನೆಗಳು:
ಶಾಶ್ವತ ಪರಿಹಾರ: ಮುಂಬರುವ ಮಳೆಗಾಲದ ವೇಳೆಗೆ ಯಾವುದೇ ಬಡಾವಣೆಯಲ್ಲಿ ನೀರು ನಿಲ್ಲದಂತೆ ರಾಜಕಾಲುವೆ ಹಾಗೂ ಚರಂಡಿಗಳ ದುರಸ್ತಿಯನ್ನು ಕಾರ್ಯವನ್ನು ಕೈಗೊಳ್ಳಬೇಕು.

ಹೂಳೆತ್ತುವ ಕಾರ್ಯ: ಮಳೆಗಾಲಕ್ಕೂ ಮುನ್ನವೇ ನಗರದ ಪ್ರಮುಖ ಚರಂಡಿಗಳಲ್ಲಿ ಹೂಳೆತ್ತುವ ಪ್ರಕ್ರಿಯೆ ಪೂರ್ಣಗೊಳ್ಳಬೇಕು.

ತ್ವರಿತ ಸ್ಪಂದನೆ: ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ತಕ್ಷಣದ ಪರಿಹಾರ ಕಾರ್ಯಗಳಿಗೆ ವಿಶೇಷ ತಂಡಗಳನ್ನು ರಚಿಸಬೇಕು.

S.N. Channabasappa ಬಳಿಕ ಮಾತನಾಡಿದ ಶಾಸಕರು, “ಜನಸಾಮಾನ್ಯರು ಮಳೆಯಿಂದಾಗಿ ಸಂಕಷ್ಟಕ್ಕೀಡಾಗುತ್ತಿರುವುದು ವಿಷಾದನೀಯ. ಈ ಸಮಸ್ಯೆಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜನರ ಸುರಕ್ಷತೆಯ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ,” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಬಡಾವಣೆಯ ಪ್ರಮುಖರು ಉಪಸ್ಥಿತರಿದ್ದರು.

S.N. Channabasappa ಯುವ ಕಂಟೆಂಟ್ ಕ್ರಿಯೇಟರುಗಳು ಶಿವಮೊಗ್ಗದ ಸಾಂಸ್ಕೃತಿಕ ವೈಭವ ಪರಿಚಯಿಸಲಿ- ಶಾಸಕ ಚನ್ನಬಸಪ್ಪ

0

S.N. Channabasappa ಶಿವಮೊಗ್ಗ ನಗರದ ಶಾಂತಿ, ಸುಭದ್ರತೆ ಹಾಗೂ ಸೋಷಿಯಲ್ ಮೀಡಿಯಾ ವೇದಿಕೆಗಳ ಜವಾಬ್ದಾರಿಯುತ ಬಳಕೆಯ ಕುರಿತು ಇಂದು ಶಿವಮೊಗ್ಗದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ವಿಶೇಷ ಸಮಾಲೋಚನಾ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಪಾಲ್ಗೊಂಡು ಮಾರ್ಗದರ್ಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಬಿ. ನಿಖಿಲ್ ಅವರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ, ‘ಅನವರತ ಫೌಂಡೇಶನ್’ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲೆಯ ಪ್ರಮುಖ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳು ಮತ್ತು ಕಂಟೆಂಟ್ ಕ್ರಿಯೇಟರ್‌ಗಳು ಭಾಗವಹಿಸಿದ್ದರು.

ಸಭೆಯಲ್ಲಿ ನಗರದ ಸಂಚಾರ ನಿಯಮಗಳ ಜಾಗೃತಿ, ಸೈಬರ್ ಸುರಕ್ಷತೆ ಮತ್ತು ಗಾಂಜಾ ಗೆ ಸಂಬಂಧಿಸಿದಂತ ವಿಷಯಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕಂಟೆಂಟ್ ಕ್ರಿಯೇಟರ್‌ಗಳು ಕೈಜೋಡಿಸುವ ಕುರಿತು ಚರ್ಚಿಸಲಾಯಿತು.

ನಮ್ಮ ನಗರದ ಸಾಂಸ್ಕೃತಿಕ ವೈಭವ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಜಗತ್ತಿಗೆ ಪರಿಚಯಿಸುವ ಮೂಲಕ ‘ಸಕಾರಾತ್ಮಕ ಶಿವಮೊಗ್ಗ’ವನ್ನು ನಿರ್ಮಿಸಲು ಯುವ ಕ್ರಿಯೇಟರ್‌ಗಳಿಗೆ ಶಾಸಕರು ಕರೆ ನೀಡಿದರು.

S.N. Channabasappa ಸಭೆಯಲ್ಲಿ ಇನ್‌ಫ್ಲುಯೆನ್ಸರ್‌ಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಹಾಗೂ ಜಿಲ್ಲಾಡಳಿತದೊಂದಿಗೆ ಸದಾ ಸಹಕರಿಸುವುದಾಗಿ ಭರವಸೆ ನೀಡಿದರು.

ಶಿವಮೊಗ್ಗದ ಅಶೋಕ ವೃತ್ತದಲ್ಲಿ ಸರಣಿ ಅಪಘಾತ, ಹಲವು ಮಂದಿಗೆ ತೀವ್ರ ಪೆಟ್ಟು, ಗಾಯ

0

ಶಿವಮೊಗ್ಗ ನಗರದ ಬಸ್ ನಿಲ್ದಾಣದ ಬಳಿ ಅಶೋಕ ವೃತ್ತದಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಕೆಎಸ್’ಆರ್’ಟಿಸಿ ಬಸ್‌’ವೊಂದು ವೇಗವಾಗಿ ಆಟೋಗೆ ಡಿಕ್ಕಿ ಹೊಡೆದು, ನಂತರ ಕಿಯಾ ಕಾರು ಹಾಗೂ ಶಾಲಾ ಬಸ್‌’ಗೆ ಡಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಘಟನೆಯಲ್ಲಿ ಆಟೋ ಚಾಲಕ ರಾಜು ಎನ್ನುವವರಿಗೆ ಗಂಭೀರ ಗಾಯಗಳಾಗಿದೆ. ಎಡಗೈ, ಎಡಗಾಲು, ಸೊಂಟ ಹಾಗೂ ಎದೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಿಎಚ್ ರಸ್ತೆಯ ಅಶೋಕ ವೃತ್ತದಲ್ಲಿ ರೆಡ್‌ ಸಿಗ್ನಲ್ ಇದ್ದುದರಿಂದ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಈ ವೇಳೆ ಎಎ ವೃತ್ತದ ಕಡೆಯಿಂದ ವೇಗವಾಗಿ ಬಂದ ಕೆಎಸ್‌’ಆರ್’ಟಿಸಿ ಬಸ್ ಮೊದಲು ಆಟೋಗೆ ಡಿಕ್ಕಿ ಹೊಡೆದಿದೆ. ನಂತರ ಆಟೋವನ್ನು ತಳ್ಳಿಕೊಂಡು ಕಿಯಾ ಕಾರು, ನಂತರ ಶಾಲಾ ಬಸ್‌’ಗೆ ಡಿಕ್ಕಿ ಹೊಡೆದಿದೆ.
ಅತಿ ವೇಗದಿಂದ ಬಸ್ ಡಿಕ್ಕಿ ಹೊಡೆದು ಕಾರು ಹಾಗೂ ಬಸ್ ನಡುವೆ ಸಿಲುಕಿದ ಪರಿಣಾಮ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಿಯಾ ಕಾರು ಸಹ ಬಹಳಷ್ಟು ಹಾನಿಯಾಗಿದೆ. ನಂತರ ಮುಂದಿದ್ದ ಶಾಲಾ ಬಸ್‌’ಗೆ ಡಿಕ್ಕಿ ಹೊಡೆದಿದೆ.
ಘಟನೆ ಸಂಭವಿಸಿದ ತಕ್ಷಣ ಸ್ಪಂದಿಸಿದ ಸಾರ್ವಜನಿಕರು, ಕಿಯಾ ಕಾರು ಚಾಲಕ ಸುದೀಪ್ ಶೆಟ್ಟಿ, ಶಾಲಾ ಬಸ್ ಚಾಲಕ ಖಾಸಿಂ ಷರೀಫ್‌ ಹಾಗೂ ಕೆಎಸ್‌’ಆರ್’ಟಿಸಿ ಬಸ್ ಕಂಡಕ್ಟರ್ ಕರಿಬಸಪ್ಪ ಅವರು ಆಟೋದಲ್ಲಿ ಸಿಲುಕಿದ್ದ ಚಾಲಕನನ್ನು ಹೊರಕ್ಕೆ ತೆಗೆದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೆಎಸ್’ಆರ್’ಟಿಸಿ ಬಸ್‌ ಚಾಲಕ ದೇವರಾಜ್ ಅವರ ಅತಿ ವೇಗ ಹಾಗೂ ನಿರ್ಲಕ್ಷತನದ ಚಾಲನೆಯೇ ಘಟನೆಗೆ ಕಾರಣ ಎಂದು ವರದಿಯಾಗಿದೆ.
ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಹಾಗೂ ಎಫ್‌ಐಆರ್ ದಾಖಲಾಗಿದೆ.

Karnataka Sanga ಏಪ್ರಿಲ್ 3. ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ವಿಶೇಷ. ಶತಾವಧಾನಿ ಡಾ.ಗಣೇಶ್ ನೇತೃತ್ವದಲ್ಲಿ “ಅಷ್ಟಾವಧಾನ”

0

Karnataka Sanga ದಿನಾಂಕ 03ನೇ ಏಪ್ರಿಲ್ 2026ರ ಶುಕ್ರವಾರ ಸಂಜೆ 5;00ಕ್ಕೆ ಹಸೂಡಿ ವೆಂಕಟ ಶಾಸ್ತ್ರೀ ಸಾಹಿತ್ಯ ಭವನದಲ್ಲಿ ಪದ್ಮಭೂಷಣ ಶತಾವಧಾನಿ ಡಾ. ಆರ್. ಗಣೇಶ್, ಬಹುಶ್ರುತ ವಿದ್ವಾಂಸರು, ಬೆಂಗಳೂರು ಮತ್ತು ತಂಡದವರಿಂದ ‘ಅಷ್ಟಾವಧಾನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಘದ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರೀ ಮತ್ತು ಕಾರ್ಯದರ್ಶಿ ವಿನಯ್ ಶಿವಮೊಗ್ಗ ವಿನಂತಿಸಿರುತ್ತಾರೆ.

Adichunchanari Branch ಆದಿಚುಂಚನಗಿರಿ ಶಾಖಾಮಠದ ಸಮಾಜಮುಖಿ ಕಾರ್ಯಗಳ ಮೂಲಕ ಸುಂದರ ಬದುಕನ್ನ ರೂಪಿಸಿಕೊಳ್ಳಲು ಸಾಧ್ಯವಾಗಿದೆ – ಶ್ರೀಮಾದಾರ ಚೆನ್ನಯ್ಯ ಶ್ರೀ

0

Adichunchanari Branch ಸಾಮರಸ್ಯ ಸಹಬಾಳ್ವೆ ಹಾಗೂ ನಮ್ಮ ಹಿತಕರ ಪರಿಸ್ಥಿತಿಯ ಬದುಕು ರೂಪಿತಗೊಳ್ಳಲು ನಮ್ಮ ಧರ್ಮ ಹಾಗೂ ಪರಂಪರೆ ಕಾರಣ ಈ ನಿಟ್ಟಿನಲ್ಲಿ ನಮ್ಮ ಧರ್ಮವನ್ನು ಹಾಗೂ ಎಲ್ಲಾ ಧರ್ಮಗಳನ್ನು ಪ್ರೀತಿಸುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ದೇಶಕ್ಕೆ ಮಾದರಿಯಾದ ಒಂದು ಕೇಂದ್ರವಾಗಿದೆ ಎಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಮಠದ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ ತಿಳಿಸಿದರು.
ಶರಾವತಿ ನಗರದ ಶ್ರೀ ಆದಿಚುಂಚನರಿ ಶಾಖಾಮಠದಲ್ಲಿ ನಡೆದ, ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾದ ವಾರ್ಷಿಕೋತ್ಸವ,೨೭ನೇ ವರ್ಷದ ಸರಳ ಸಾಮೂಹಿಕ ವಿವಾಹ ಹಾಗೂ ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ, ದಂಪತಿಗಳು ಹಾಗೂ ನೂತನ ದಂಪತಿಗಳಿಗೆ ಆಶೀರ್ವಚನ ಸಮಾಜ ಮುಖಿಯಾದ ಕಾರ್ಯಕ್ರಮಗಳ ಮೂಲಕ ನಮ್ಮ ದೇಶದಲ್ಲಿ ನಾವು ಸುಂದರ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯವಾಗಿದೆ ಎಂದರು.
ಶ್ರೀ ಮಠ ನಿಜಕ್ಕೂ ದೇಶದಲ್ಲಿ ಸಮಾನತೆ ಕಟ್ಟುವ ಕೆಲಸ ಮಾಡಿದೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಸರ್ವಧರ್ಮ ಸಮಾನತೆಯನ್ನು ಸಾರಿದಂತವರಾಗಿದ್ದು, ನಂತರದ ಶ್ರೀಗಳು ಇಡಿ ಮಹಾಸಂಸ್ಥಾನವನ್ನು ಇಡೀ ವಿಶ್ವದಲ್ಲೇ ಪವಿತ್ರ ಕ್ಷೇತ್ರವನ್ನಾಗಿ ಮಾಡಿರುವುದು ಹೆಮ್ಮೆಯ ಸಂಗತಿ ಎಂದರು. ಹಸಿವು ಎಂಬುದು ಹೇಳಿದಾಗ ಮಾತ್ರ ಗೊತ್ತಾಗುತ್ತದೆ ಅದನ್ನು ನೋಡಿದಾಗ ತಿಳಿಯಲು ಸಾಧ್ಯವಿಲ್ಲ ಹಾಗೆಯೇ ನಮ್ಮ ಜ್ಞಾನದ ಹಸಿವು, ಧರ್ಮದ ಹಸಿವು ಹಾಗೂ ತತ್ವದ ಹಸುವು ಹೆಚ್ಚಾಗಬೇಕು ಎಂದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ತಮ್ಮ ಆಶೀರ್ವಚನದಲ್ಲಿ ಇಡೀ ವಿಶ್ವದಲ್ಲಿ ನಮ್ಮ ಧರ್ಮ ಹಾಗೂ ಸಂಸ್ಕೃತಿಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಬೇರೆ ದೇಶಗಳನ್ನು ಹೋಲಿಕೆ ಮಾಡಿ ನೋಡಿದಲ್ಲಿ ನಮ್ಮ ಸಂಸ್ಕೃತಿ ಹಾಗೂ ಸಂಸ್ಕಾರ ಎಲ್ಲರಿಗೂ ಮಾರ್ಗದರ್ಶನ ವಾಗುವ ಮೂಲ ತತ್ವವಾಗಿರುವುದು ಸಂತೋಷದ ವಿಷಯ ಎಂದರು ೨೭ನೇ ವರ್ಷದ ಶ್ರೀ ಕಾಲಭೈರವೇಶ್ವರ ದೇವಸ್ಥಾನದ ವಾರ್ಷಿಕೋತ್ಸವ ಸರಳ ಸಾಮೂಹಿಕ ವಿವಾಹ ಹಾಗೂ ಸುವರ್ಣ ವರ್ಷ ಮುಗಿಸಿದ ದಂಪತಿಗಳ ಸನ್ಮಾನ ಸಮಾರಂಭ ನಿಜಕ್ಕೂ ಅತ್ಯಂತ ಶ್ರೇಷ್ಠ ಹಾಗೂ ಹಿರಿಮೆಯ ಕಾರ್ಯಕ್ರಮ ಎಂದು ಹೇಳಿದರು.
ಆಸ್ಟ್ರೇಲಿಯಾ ಪ್ರವಾಸದ ಕುರಿತು ಮಾತನಾಡುತ್ತ ನಮ್ಮ ಸಂಸ್ಕೃತಿಯು ಗತಕಾಲದ ಯುಗಯುಗಗಳ ಐತಿಯ್ಯವನ್ನು ಬೀರುವಂತಹ ಮೂಲತತ್ವವನ್ನು ಒಳಗೊಂಡಿದೆ.ಅದೇ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅಲ್ಲಿನ ಜನ ತಮ್ಮ ಇತಿಹಾಸದ ಬಗ್ಗೆ ಹೇಳಿಕೊಳ್ಳಲು ಹಿಂಜರಿರುತ್ತಾರೆ ಏಕೆಂದರೆ ಬ್ರಿಟಿಷರು ಅಂದು ತಪ್ಪು ಮಾಡಿದವರನ್ನು ಗಡಿಪಾರು ಮಾಡುತ್ತಿದ್ದ ಸ್ಥಳ ಇದಂತೆ ಎಂದರು. ನವದಂಪತಿಗಳು ಸುವರ್ಣ ವರ್ಷ ಮುಗಿಸಿದ ಹಿರಿಯ ದಂಪತಿಗಳ ಆಶೀರ್ವಾದ ಪಡೆಯಬೇಕು ಅವರು ಬದುಕನ್ನು ರೂಪಿಸಿಕೊಂಡು, ಕಟ್ಟಿಕೊಂಡ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳಬೇಕು ಗೃಹಸ್ಥಾಶ್ರಮ ನಿಮ್ಮ ಜೀವನದಲ್ಲಿ ಉತ್ತಮವಾಗಿ ಬೆಳೆಯಲಿ ಎಂದರು.
ದಸರಿ ಘಟ್ಟ ಶಾಖಾ ಮಠದ ಶ್ರೀ ಚಂದ್ರಶೇಖರ್ನಾಥ ಸ್ವಾಮೀಜಿ, ಶಿವಮೊಗ್ಗ ಶಾಖಾ ಮಠದ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಹಾಗೂ ಶ್ರೀ ಕ್ಷೇತ್ರದ ಶಾಖಾ ಮಠದ ಪೂಜ್ಯರು ದಿವ್ಯ ಉಪಸ್ಥಿತಿ ವಹಿಸಿದ್ದರು.
ಕಾರ್ಯ ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ,ಶಾಸಕ ಹಾಗೂ ಹೆಸರಾಂತ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಮಾತನಾಡಿ, ಶ್ರೀಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ಇಂತಹ ಕಾರ್ಯಕ್ರಮವನ್ನು ಮಾಡುತ್ತಿರುವುದು ಅತ್ಯಂತ ಸ್ವಾಗತಾರ್ಹ ಎಂದರು.50 ರಿಂದ 60 ವರ್ಷಗಳ ಕಾಲ ಸತಿಪತಿಗಳಾಗಿ ಜೀವನ ನಡೆಸುವ ಮೂಲಕ ಇಂದಿನ ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ ಎಂದ ಡಾಕ್ಟರ್ ಸರ್ಜಿ ಇತ್ತೀಚಿನ ವರ್ಷಗಳಲ್ಲಿ ಯುವ ಸಮೂಹ ಪ್ರೀತಿಯಿಂದ ಮದುವೆಯಾಗಿ, ಅಷ್ಟೇ ದ್ವೇಷದಿಂದ ವಿಚ್ಛೇದನವನ್ನು ಪಡೆದುಕೊಳ್ಳುತ್ತಿರುವುದು ಅತ್ಯಂತ ವಿಪರ್ಯಾಸವಾಗಿದೆ. ಹಿರಿಯರ ಜೀವನ ಇಂದಿನ ಯುವಕರಿಗೆ ಮಾರ್ಗದರ್ಶನವಾಗಿದ್ದು,ಇವರುಗಳ ಜೀವನದ ಪುಸ್ತಕವನ್ನು ನಿರ್ಮಿಸುವ ಮೂಲಕ ಯುವ ಸಮೂಹಕ್ಕೆ ನೀಡಬೇಕು ಎಂದು ಸಲಹೆ ನೀಡಿದರು.
Adichunchanari Branch ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ,ಹಿಂದೂ ಸಮಾಜದಲ್ಲಿ ಮಾತ್ರ ಇಂತಹ ಸಂಸ್ಕೃತಿಯನ್ನು ಕಾಣಲು ಸಾಧ್ಯವಾಗಿದೆ. ಅನೇಕ ಕಷ್ಟ ಸುಖಗಳನ್ನ ಸಮನಾಗಿ ಎದುರಿಸಿ ಸುದೀರ್ಘ ವರ್ಷಗಳ ಕಾಲ ಸಂಸಾರ ಮಾಡಿದಂತಹ ದಾಂಪತ್ಯ ಜೀವನವನ್ನು ನಡೆಸಿದಂತಹ ಸತಿಪತಿಗಳಿಗೆ ಸನ್ಮಾನ ಮಾಡುತ್ತಿರುವುದು ಅತ್ಯಂತ ಸಂತೋಷಕರ ಹಾಗೂ ಶ್ಲಾಘನೀಯ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
ಏನೇ ಕಷ್ಟ ಸುಖ ಬಂದರೂ ನಾವುಗಳು ಒಟ್ಟಾಗಿ ಇರುತ್ತೇವೆ ಎಂಬುದೇ ಈ ಸುದೀರ್ಘ ಜೀವನದ ಗುಟ್ಟಾಗಿದೆ ಸಮಾಜದಲ್ಲಿ ಇಂತಹ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಿದೆ. ಶ್ರೀ ಆದಿಚುಂಚನಗಿರಿ ಮಠದ ವತಿಯಿಂದ ಹಿರಿಯ ದಂಪತಿಗಳನ್ನ ಸನ್ಮಾನಿಸುತ್ತಿರುವ ಕಾರ್ಯ ಅತ್ಯಂತ ಸ್ವಾಗತ ಎಂದು ಹೇಳಿದರು.
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ, ಹಿಂದೂ ಸಮಾಜದಲ್ಲಿ ಸುಧೀರ್ಘ ಜೀವನ ನಡೆಸಿದ ಪತಿ ಪತ್ನಿಯರನ್ನ ಒಂದೆಡೆ ಸೇರಿಸಿ ಸನ್ಮಾನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಹೇಳಿದರು.
ಗಂಡನ ಅಭಿವೃದ್ಧಿ ಹೆಂಡತಿಯ ಪ್ರಾರ್ಥನೆಯಿಂದ ಆಗುತ್ತದೆ.ಪ್ರತಿ ಹಂತದಲ್ಲಿ ಹಾಗೂ ಸಂದರ್ಭದಲ್ಲಿ ಪತ್ನಿ ಯಾದವಳು ತನ್ನ ಗಂಡನ ಶ್ರೇಯಸ್ಸನ್ನ ಬಯಸುತ್ತಾಳೆ, ದೇವರಲ್ಲಿ ಕೂಡ ಇದನ್ನೇ ಪ್ರಾರ್ಥಿಸುತ್ತಾಳೆ, ಆದ್ದರಿಂದ ಗಂಡನ ಅಭಿವೃದ್ಧಿಯಲ್ಲಿ ಹೆಂಡತಿಯ ಪಾತ್ರವಿರುತ್ತದೆ ಎಂದು ಹೇಳಿದರು.
ದುಶ್ಚಟಗಳಿಂದ ಹೊರಬಂದು ಸುಖ ಸಂಸಾರ ನಡೆಸಿದಂತಹ ಅನೇಕ ಘಟನೆಗಳು ನಾವು ನೋಡಬಹುದು ಆದರೆ ಇತ್ತೀಚಿನ ದಿನಗಳಲ್ಲಿ ದೂರದರ್ಶನಗಳಲ್ಲಿ ಎರಡು ಮೂರು ಮದುವೆ ಆಗುವಂತಹ ಮನರಂಜನ ಕಾರ್ಯಕ್ರಮಗಳನ್ನ ಪ್ರಸಾರ ಮಾಡುತ್ತಿರುವುದು ಇತರರಿಗೆ ಪ್ರೇರಣೆಯಾಗುವ ಸಾಧ್ಯತೆ ಇದೆಟಿ ಇಂತಹ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು ಇದು ಒಳ್ಳೆಯ ಬೆಳವಣಿಗೆಯಲ್ಲ.ಇದರಿಂದ ಯುವ ಸಮೂಹ ದಾರಿ ತಪ್ಪುವ ಸಾಧ್ಯತೆ ಇದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಗೃಹ ಮಂತ್ರಿ, ತೀರ್ಥ ಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ,ರೇಷ್ಮೆ ಮತ್ತು ವಿದ್ಯುತ್ ಕೈಮಗ್ಗ ನಿಗಮದ ಅಧ್ಯಕ್ಷ ಚೇತನ್ ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ರಮೇಶ ಹೆಗಡೆ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಧರ್ಮೇಶ್ ಸಿರಿಬೈಲು, ಕೆ. ಇ. ಕಾಂತೇಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Draupadi Murmu ರಾಜ್ಯದ ಭೇಟಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಭವ್ಯ ಸ್ವಾಗತ ಕೋರಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

0

Draupadi Murmu 2026ನೇ ಏಪ್ರಿಲ್ 1 ರಂದು ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿರುವ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 119 ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಮಯದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಇಲಾಖೆಯ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ‌ಮಹಾನಿರ್ದೇಶಕರಾದ ಡಾ.ಎಂ.ಎ. ಸಲೀಮ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ, ಸೇರಿದಂತೆ ಹಿರಿಯ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

Draupadi Murmu ನಂತರ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಲೋಕ ಭವನಕ್ಕೆ ತೆರಳಿದರು.

DC Shivamogga ಭಾರತ ಜನಗಣತಿ – 2027 ಅಂಗವಾಗಿ ರಾಜ್ಯದಲ್ಲಿ ” ಮನೆಗಳ ಪಟ್ಟಿ & ಮನೆ ಗಣತಿ ಕಾರ್ಯ ಏಪ್ರಿಲ್ 16 ರಿಂದ ಮೇ 15 ವರೆಗೆ ನಡೆಯಲಿದೆ

0

DC Shivamogga ಭಾರತದ ಜನಗಣತಿ-2027ರ ಅಂಗವಾಗಿ ಕರ್ನಾಟಕದಲ್ಲಿ ಮೊದಲ ಹಂತದ ‘ಮನೆಗಳ ಪಟ್ಟಿ ಮತ್ತು ಮನೆ ಗಣತಿ’ ಪ್ರಕ್ರಿಯೆಯು ದಿನಾಂಕ 16.04.2026 ರಿಂದ 15.05.2026 ರವೆರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
ಒಟ್ಟು 30 ದಿನಗಳ ಕಾಲ ನಡೆಯುವ ಈ ಗಣತಿಯಲ್ಲಿ ಮನೆಗಳ ಸ್ಥಿತಿಗತಿ, ಲಭ್ಯವಿರುವ ಸೌಲಭ್ಯಗಳು ಹಾಗೂ ಆಸ್ತಿಪಾಸ್ತಿಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ದಿ: 1-04-2026 ರಿಂದ 15-04-2026 ರವರೆಗೆ
‘ಸ್ವಯಂ ಗಣತಿ’ ಆಯ್ಕೆ ಲಭ್ಯವಿದೆ.
ಸ್ವಯಂ ಗಣತಿ ಮಾಡುವ ವಿಧಾನ:
ಅಧಿಕೃತ ಪೋರ್ಟಲ್‌ನಲ್ಲಿ ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಆಗುವುದು.
ನಿಮ್ಮ ಸ್ಥಳವನ್ನು ಆಯ್ಕೆ ಮಾಡಿ, ನಕ್ಷೆಯಲ್ಲಿ ಮನೆಯನ್ನು ಗುರುತಿಸುವುದು.
ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಸಬ್ಮಿಟ್ ಮಾಡುವುದು.
ಸಲ್ಲಿಕೆಯ ನಂತರ ಲಭಿಸುವ SE ID(ಎಸ್ಇ ಐಡಿ) ಅನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು. ಹಾಗೂ ಗಣತಿದಾರರು ಭೇಟಿ ನೀಡಿದಾಗ ಅವರಿಗೆ ತೋರಿಸಬೇಕು.
DC Shivamogga ಗಣತಿದಾರರು ಮತ್ತು ಮೇಲ್ವಿಚಾರಕರ ಕ್ಷೇತ್ರ ಭೇಟಿ :
ಏಪ್ರಿಲ್ 16ರಿಂದ ಮೇ 15ರವರೆಗೆ ಗಣತಿದಾರರು ಪ್ರತಿಯೊಂದು ಮನೆಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಸ್ವಯಂ ಗಣತಿ ಮಾಡಿಕೊಂಡವರು ತಮ್ಮಲ್ಲಿರುವ ಎಸ್ ಇ‌ ಐಡಿ ಅನ್ನು ಗಣತಿದಾರರಿಗೆ ತೋರಿಸಿ ದತ್ತಾಂಶವನ್ನು ಪರಿಶೀಲಿಸಿಕೊಳ್ಳಬಹುದು. ಒಂದು ವೇಳೆ ಸ್ವಯಂ ಗಣತಿ ಮಾಡದಿದ್ದಲ್ಲಿ, ಗಣತಿದಾರರೇ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ.
ಸಾರ್ವಜನಿಕರು, ಅಧಿಕಾರಿಗಳು, ಮತ್ತು ಸಿಬ್ಬಂದಿಗಳು https://se.census.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಸ್ವಯಂ‌ ಗಣತಿಯಲ್ಲಿ ಭಾಗವಹಿಸುಂತೆ ಜಿಲ್ಲಾಡಳಿತ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ತಾಲೂಕು ಆಡಳಿತ, ಸ್ಥಳೀಯ ಸಂಸ್ಥೆ ಅಥವಾ ಜಿಲ್ಲಾಡಳಿತದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

S.N. Channabasappa ಆದಿಚುಂಚನಗಿರಿ ಮಠದ ಜನಪರ ಕಾರ್ಯಗಳು ಸಮಾಜದ ಸ್ವಾಸ್ಥ್ಯ ಕಾಪಾಡುತ್ತಿವೆ- ಎಸ್.ಎನ್.ಚನ್ನಬಸಪ್ಪ

0

S.N. Channabasappa ಸರಳತೆಯೇ ಸಂಸ್ಕೃತಿ, ಹಿರಿಯರ ಅನುಭವವೇ ಆಸ್ತಿ : ಆದಿಚುಂಚನಗಿರಿ ಮಠದಲ್ಲಿ ಸಾಮೂಹಿಕ ವಿವಾಹ ಹಾಗೂ ಶ್ರೀ ಕಾಲಭೈರವೇಶ್ವರ ದೇವಸ್ಥಾನದ ವಾರ್ಷಿಕೋತ್ಸವ ಸಂಭ್ರಮ!

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖಾ ಮಠದಲ್ಲಿ ಇಂದು ಪೂಜ್ಯಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಹಾಗೂ 27ನೇ ವರ್ಷದ ಸರಳ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಅತ್ಯಂತ ಹರ್ಷದಿಂದ ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ದಶಕಗಳ ಕಾಲ ಸುಖಮಯ ದಾಂಪತ್ಯ ನಡೆಸಿದ ಆದರ್ಶ ಹಿರಿಯ ದಂಪತಿಗಳನ್ನು ಸನ್ಮಾನಿಸುವ ಮೂಲಕ ಅವರನ್ನ ಗೌರವಿಸಲಾಯಿತು.

S.N. Channabasappa ಪೂಜ್ಯ ಸ್ವಾಮೀಜಿಯವರ ಆಶೀರ್ವಚನಗಳು ಮತ್ತು ಮಠದ ಈ ಜನಪರ ಕಾರ್ಯಗಳು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ಶಾಸಕ ಚೆನ್ನಿ ಹೇಳಿದರು. ನವದಂಪತಿಗಳ ಜೀವನ ಸುಖಮಯವಾಗಿರಲಿ ಹಾಗೂ ಭಗವಂತನ ಕೃಪೆ ಸದಾ ಎಲ್ಲರ ಮೇಲಿರಲಿ ಎಂದು ಈ ಸಂದರ್ಭದಲ್ಲಿ ಪ್ರಾರ್ಥಿಸಲಾಯಿತು.

MESCOM ಏಪ್ರಿಲ್ 2 , ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ 1ರ ಕಛೇರಿಯಲ್ಲಿ ಜನಸಂಪರ್ಕ ಸಭೆ

0

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-01 , ಸರ್ವಜ್ಞ ವೃತ್ತ, ಬಾಲರಾಜ್ ಅರಸ್ ರಸ್ತೆ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿಯಲ್ಲಿ ಏ.02. ರಂದು ಬೆಳಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.