Sunday, February 8, 2026
Sunday, February 8, 2026
Home Blog Page 38

S. N. Channabasappa ಜನವರಿ 3. ಸುಂದರ ಸಂಜೆ ತೆಪ್ಪೋತ್ಸವ ನೋಡಲು ಬನ್ನಿ- ಶಾಸಕ ಚೆನ್ನಿ ಆಹ್ವಾನ

0

S. N. Channabasappa ಶಿವಮೊಗ್ಗ ನಗರದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹೆಗ್ಗುರುತಾಗಿರುವ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರಸ್ತುತ ಶ್ರೀ ಸೀತಾರಾಮ ಕಲ್ಯಾಣ ಶತಮಾನೋತ್ಸವದ ಸಂಭ್ರಮ ಮನೆಮಾಡಿದೆ.
ಳಈ ಅಭೂತಪೂರ್ವ ಸಂಭ್ರಮದ ಅಂಗವಾಗಿ ಇಂದು ದಿನಾಂಕ 03.01.2026ರ ಶನಿವಾರ ಸಂಜೆ ಪವಿತ್ರ ತುಂಗಾ ನದಿಯ ಮಡಲಿನಲ್ಲಿ ಭವ್ಯ ‘ತೆಪ್ಪೋತ್ಸವ’ ಕಾರ್ಯಕ್ರಮ ಜರುಗಲಿದ್ದು, ನಗರದ ಸಮಸ್ತ ಭಕ್ತಾದಿಗಳು ಭಾಗವಹಿಸಬೇಕೆಂದು ಈ ಮೂಲಕ ಆಮಂತ್ರಿಸುತ್ತೇನೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚೆನ್ನಬಸಪ್ಪ ತಿಳಿಸಿದ್ದಾರೆ.

ಕೆಳದಿ ಅರಸರ ಕಾಲದಿಂದಲೂ ಐತಿಹಾಸಿಕ ಮಹತ್ವ ಪಡೆದಿರುವ ಹಳೆಯ ಶಿವಮೊಗ್ಗದ ಕೋಟೆ ಪ್ರದೇಶವು ಹಿಂದೂ ಸಂಸ್ಕೃತಿಗೆ ಶಕ್ತಿ ಕೇಂದ್ರವಾಗಿ ಗುರುತಿಸಿಕೊಂಡಿದೆ. ಇಲ್ಲಿನ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯವು ಭಕ್ತರ ಶ್ರದ್ಧಾಕೇಂದ್ರವಾಗಿದ್ದು, ಈಗ ಶತಮಾನೋತ್ಸವದ ಹೊಸ್ತಿಲಲ್ಲಿದೆ. ದಕ್ಷಿಣಾಭಿಮುಖವಾಗಿ ಹರಿಯುವ ಪುಣ್ಯನದಿ ತುಂಗಾ ತೀರದಲ್ಲಿ ಈ ದೇವಾಲಯವು ಇರುವುದು ನಗರದ ಸೌಭಾಗ್ಯ. ಕಳೆದ 74 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ಈ ತೆಪ್ಪೋತ್ಸವವು, ಶಿವಮೊಗ್ಗದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ ಎಂದಿದ್ದಾರೆ.

S. N. Channabasappa ಸೂರ್ಯಾಸ್ತದ ಮನಮೋಹಕ ಹೊತ್ತಿನಲ್ಲಿ, ವಿದ್ಯುತ್ ದೀಪಗಳಿಂದ ಶೃಂಗರಿಸಲ್ಪಟ್ಟ ಭವ್ಯ ತೆಪ್ಪದಲ್ಲಿ ಶ್ರೀ ಸೀತಾರಾಮ ಲಕ್ಷ್ಮಣ ಹಾಗೂ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಗಳು ತುಂಗಾ ನದಿಯಲ್ಲಿ ವಿಹರಿಸುವ ದೃಶ್ಯ ಅತ್ಯಂತ ನಯನಮನೋಹರವಾಗಿರುತ್ತದೆ. ನದಿಯ ಅಲೆಗಳ ಮೇಲೆ ತೇಲಿಬರುವ ದೈವಿಕ ಕಳೆಯನ್ನು ಕಣ್ತುಂಬಿಕೊಳ್ಳಲು ಪ್ರತಿವರ್ಷ ಸಾವಿರಾರು ಭಕ್ತರು ತುಂಗಾ ತೀರಕ್ಕೆ ಆಗಮಿಸುತ್ತಾರೆ. ಪಟಾಕಿಗಳ ಸಂಭ್ರಮ, ಮಂತ್ರಘೋಷ ಹಾಗೂ ಭಕ್ತರ ಜೈಕಾರದ ನಡುವೆ ನಡೆಯುವ ಈ ಕಾರ್ಯಕ್ರಮವು ಕೇವಲ ಧಾರ್ಮಿಕ ವಿಧಿಯಲ್ಲ, ಇದು ಶಿವಮೊಗ್ಗದ ಭಾವೈಕ್ಯತೆ ಮತ್ತು ಸಂಭ್ರಮದ ಸಂಕೇತವಾಗಿದೆ ಎಂದು ತಿಳಿಸಿದ್ದಾರೆ.

ನಮ್ಮ ನಗರದ ಇತಿಹಾಸ ಮತ್ತು ಪರಂಪರೆಯನ್ನು ಎತ್ತಿ ಹಿಡಿಯುವ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿಸಿದ್ದಾರೆ.

Gurudutt Hegde ಎಲ್ಲರ ಸಹಕಾರವು ನನನ್ನು ಉತ್ತಮ ಜಿಲ್ಲಾಧಿಕಾರಿಯನ್ನಾಗಿಸಿದೆ- ಗುರುದತ್ತ ಹೆಗಡೆ.

0

Gurudutt Hegde ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು, ನೌಕರರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಮಾಧ್ಯಮದವರು, ಸಾರ್ವಜನಿಕರು ಅತ್ಯುತ್ತಮ ಸಹಕಾರ ನೀಡಿ ನನ್ನನ್ನು ಉತ್ತಮ ಜಿಲ್ಲಾಧಿಕಾರಿಯಾಗಿ ಮಾಡಿದ್ದಾರೆಂದು ಆರೋಗ್ಯ ಇಲಾಖೆ ಆಯುಕ್ತರಾಗಿ ಪದೋನ್ನತಿ ಹೊಂದಿದ ನಿಕಟಪೂರ್ವ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ನುಡಿದರು.
ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಜಿಲ್ಲೆಯ ವತಿಯಿಂದ ಶನಿವಾರ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲೆಯ ನಿಕಟಪೂರ್ವ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅವರಿಗೆ ಬೀಳ್ಕೊಡುಗೆ ಹಾಗೂ ನೂತನ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಮತ್ತು ನೂತನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಅವರಿಗೆ ಸ್ವಾಗತ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪರಿಭಾವಿತ(ಡೀಮ್ಡ್) ಅರಣ್ಯ ಪ್ರದೇಶ ಸುಮಾರು 7000 ಎಕರೆಗೆ ಸಂಬAಧಿಸಿದ ವಿಷಯ ಬಗೆಹರಿಸಲು ಸಾಕಷ್ಟು ಕೆಲಸಗಳಾಗಿದ್ದು ಇದೀಗ ತಂಡ ರಚಿಸಲಾಗಿದೆ. ಹಾಗೂ ನೆನೆಗುದಿಗೆ ಬಿದ್ದಿದ್ದ ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಕೆಲಸ ತಾರ್ಕಿಕ ಅಂತ್ಯ ತಲುಪುತ್ತಿರುವುದು ಉತ್ತಮ ವಿಷಯ. ಅರಣ್ಯ ಇಲಾಖೆಯಲ್ಲಿ ಎಲ್ಲ ಅಧಿಕಾರಿಗಳು ಅತ್ಯುತ್ತಮವಾಗಿ ಬೆಂಬಲ ನೀಡಿದ್ದಾರೆ. ಸುಲಭವಾಗಿ ಕೆಲಸಗಳನ್ನು ಮಾಡುವ ಮೂಲಕ ಸಹಕಾರ ನೀಡಿದ್ದಾರೆ ಎಂದು ಶ್ಲಾಘಿಸಿದರು.
ಜಿಲ್ಲೆಯ ಎಸ್‌ಪಿ ಯಾಗಿದ್ದ ಮಿಥುನ್ ಕುಮಾರ್ ನನಗೆ ಶಕ್ತಿ ಮತ್ತು ಸಹಕಾರ ನೀಡಿದ್ದರು. ಅವರು ಕಷ್ಟಕರವಾದ ಕೆಲಸಗಳನ್ನು ಕೈಗೆತ್ತಿಕೊಂಡು ಮಾಡುತ್ತಿದ್ದರು. ಡ್ರಗ್ಸ್ ಮತ್ತು ಅಪರಾಧ ವಿಷಯ ನಿರ್ವಹಣೆಯಲ್ಲಿ ಉತ್ತಮ ನಿರ್ಣಯ ತೆಗೆದುಕೊಳ್ಳುತ್ತಿದ್ದರು. ಅವರಿಗೆ ಧನ್ಯವಾದಗಳು.
ಜಿ.ಪಂ ಸಿಇಓ ಹೇಮಂತ್, ಕೆಲಸದಲ್ಲಿ ಅತಿ ಆಸಕ್ತಿ ಇರುವ ಅಧಿಕಾರಿ. ತುಂಬಾ ಮುತುವರ್ಜಿ ತೆಗೆದುಕೊಂಡು ಕೆಲಸ ಮಾಡುವ ಗುಣ ಹೊಂದಿದ್ದಾರೆ. ವಿನೂತನವಾದ ಕೆಲಸಗಳನ್ನು ಶ್ರಮ ವಹಿಸಿ ಮಾಡುತ್ತಾರೆ. ಮಿಷನ್ ಸುರಕ್ಷಾ ಅಭಿಯಾನವನ್ನು ಅತ್ಯಂತ ಪರಿಣಾಮಕಾರಿಯಾಗಿ ಮಾಡುತ್ತಿದ್ದಾರೆ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘ ಉತ್ತಮವಾಗಿ ಕೆಲಸ ಮಾಡುತ್ತಿದೆ. ನೌಕಕರಿಗೆ ಉತ್ತೇಜನ ನೀಡುತ್ತಿದೆ. ಎಲ್ಲ ಇಲಾಖೆಗಳು ಅತ್ಯುತ್ತಮ ಕೆಲಸ ಮಾಡಿ ಬೆಂಬಲ ನೀಡಿದ್ದೀರಿ. ನೂತನವಾಗಿ ಬಂದಿರುವ ಡಿಸಿ ಮತ್ತು ಎಸ್‌ಪಿ ಗಳು ಉತ್ತಮ ಅನುಭವ ಇರುವ ಅಧಿಕಾರಿಗಳು. ಜಿಲ್ಲೆಯಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಾರೆ. ಅವರಿಗೂ ಸಹ ನಿಮ್ಮೆಲ್ಲರ ಬೆಂಬಲ ಹೀಗೇ ಇರಲಿ. ನನ್ನ ಹೆಸರಿಗೆ ಕಾರಣ ಈ ಜಿಲ್ಲೆ: ಸಾಗರ ಹತ್ತಿರ ವರದಾಶ್ರಮದ ಶ್ರೀಧರ ಸ್ವಾಮಿಗಳ ಅನುಯಾಯಿಗಳು ನನ್ನ ತಂದೆ ತಾಯಿ. ನಾನು ದತ್ತ ಜಯಂತಿಯAದು ಹುಟ್ಟಿದ ಕಾರಣ ಗುರುದತ್ತ ಎಂದು ಹೆಸರಿಟ್ಟಿದ್ದು ಈ ಜಿಲ್ಲೆ ನನಗೆ ಹೆಸರನ್ನು ನೀಡಿರುವುದನ್ನು ಸದಾ ಸ್ಮರಿಸುತ್ತೇನೆ ಎಂದರು.

ಗುರುದತ್ ಹೆಗಡೆ ಸರ್ ಜಿಲ್ಲೆಯ ಅರಣ್ಯ ವಿಷಯಗಳನ್ನು ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದು, ಉತ್ತಮ ಬೆಂಬಲ ನೀಡಿದ್ದರು. ಅವರು ಸಹೃದಯಿಯಾಗಿದ್ದು ಜಿಲ್ಲೆಯ ಯಾವುದೇ ರೀತಿಯ ಸಮಸ್ಯೆಗಳು, ಕೆಲಸಗಳಲ್ಲಿ ಸಹಕಾರಿಯಾಗಿದ್ದರು. ಡೀಮ್ಡ್ ಫಾರೆಸ್ಟ್ ವಿಷಯದಲ್ಲಿ ಸಮನ್ವಯ ಸಾಧಿಸಿ, ತಂಡಗಳನ್ನು ರಚಿಸುವ ಮೂಲಕ ಕಾರ್ಯವನ್ನು ಸುಲಲಿತಗೊಳಿಸಿದರು. ಹಾಗೂ ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ವಿಷಯದಲ್ಲಿ ಸಹ ಉತ್ತಮ ಕಾರ್ಯವೆಸಗಿ ಈ ವಿಷಯ ಒಂದು ತಾರ್ಕಿಕ ಹಂತಕ್ಕೆ ತಲುಪಿಸಲು ಸಹಕಾರಿಯಾಗಿದ್ದಾರೆ. ದೀರ್ಘ ಕಾಲೀಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಉತ್ತಮ ಮಾರ್ಗದರ್ಶನ ನೀಡಿದ್ದಾರೆ. ಹಾಗೆಯೇ ನೂತನ ಜಿಲ್ಲಾಧಿಕಾರಿಗಳು ಮತ್ತು ವರಿಷ್ಟಾಧಿಕಾರಿಗಳು ಸಹ ಜಿಲ್ಲೆಯಲ್ಲಿ ಉತ್ತಮ ಆಡಳಿತ ನಡೆಸುವರೆಂಬ ಭರವಸೆ ಕೆ.ಟಿ.ಹನುಮಂತಪ್ಪ, ಸಿಸಿಎಫ್

ಗುರುದತ್ತ ಹೆಗಡೆಯವರು ‘ಮ್ಯಾನ್ ಆಫ್ ಗ್ರೇಟ್ ವ್ಯಾಲ್ಯೂಸ್’ ಎನ್ನಬಹುದು. ಕರ್ತವ್ಯ ಮತ್ತು ಕುಟುಂಬ ಎರಡನ್ನು ಸಮತೋಲನದಲ್ಲಿ ತೆಗೆದುಕೊಂಡು ಹೋಗುವ ವ್ಯಕ್ತಿತ್ವ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವ ವಿಷಯದಲ್ಲಿ ಪೊಲೀಸ್ ಇಲಾಖೆಗೆ ಬೆನ್ನೆಲುಬಾಗಿ ಜೊತೆ ನಿಂತಿದ್ದರು. ಅವರು ಅಧೀನ ಅಧಿಕಾರಿ, ನೌಕರರಿಗೆ ಉತ್ತಮವಾಗಿ ಕೆಲಸ ಹಂಚಿಕೆ, ನಿಯೋಜನೆ ಮಾಡುತ್ತಾ ಎಲ್ಲರಿಗೂ ಸ್ಪೂರ್ತಿಯಾಗಿದ್ದರು. – ಜಿ.ಕೆ.ಮಿಥುನ್ ಕುಮಾರ್, ಡಿಸಿಪಿ ಈಶಾನ್ಯ(ಶಿವಮೊಗ್ಗದಿಂದ ವರ್ಗಾವಣೆಗೊಂಡ ಎಸ್‌ಪಿ-ವಿಡಿಯೋ ಮೂಲಕ)

‘ದಿ ಬೆಸ್ಟ್ ಡಿಸಿ’ ಜೊತೆ ಕೆಲಸ ಮಾಡುವ ಅವಕಾಶ ನನಗೆ ದೊರೆತಿದ್ದು ನನ್ನ ಪುಣ್ಯ. ಯಾವುದೇ ರೀತಿಯ ಕ್ಲಿಷ್ಟಕರ ಸಮಸ್ಯೆಗಳಿದ್ದರೂ ಸರಳವಾದ ಪರಿಹಾರಗಳನ್ನು ಹುಡುಕುತ್ತಿದ್ದರು. ಕಿರಿಯ ಅಧಿಕಾರಿಗಳಿಗೆ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಸ್ವಾತಂತ್ರö್ಯ ನೀಡಿದ್ದು, ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶ ನಿಡುತ್ತಿದ್ದುದು ನಮಗೆ ಸ್ಪೂರ್ತಿಯಾಗಿತ್ತು. ಅವರು ಸದ್ಗುಣಿ ಮತ್ತು ಸರಳ ಜೀವಿಗಳು. ಕೆಲಸಗಳ ಆದ್ಯತೆಯನ್ನು ಚೆನ್ನಾಗಿ ಅರಿತಿದ್ದರು. ಡಿಸಿ ಮತ್ತು ಎಸ್ಪಿ ಇಬ್ಬರೂ ಜೋಡೆತ್ತಿನ ರೀತಿಯಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಸೇರಿದಂತೆ ಎಲ್ಲ ಕೆಲಸ ಕಾರ್ಯಗಳನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಿದ್ದಾರೆ. ನೂತನವಾಗಿ ಆಗಮಿಸಿರುವ ಡಿಸಿ ಮತ್ತು ಎಸ್‌ಪಿ ಗಳು ಸಹ ಅನುಭವಿಗಳು. ನಮಗೆ ಉತ್ತಮವಾಗಿ ಸಹಕರಿಸಿ ಅತ್ಯುತ್ತಮ ಆಡಳಿತ ನಡೆಸುತ್ತಾರೆಂಬ ನಂಬಿಕೆ ಇದೆ.

  • ಹೇಮಂತ್ ಎನ್, ಜಿ.ಪಂ. ಸಿಇಓ
    ಗುರುದತ್ತ ಹೆಗಡೆಯವರು ಓರ್ವ ದಕ್ಷ, ಪ್ರಾಮಾಣಿಕ ಆಡಳಿತಗಾರ. ಜನರ ಸೇವೆಯಲ್ಲಿ ಅತ್ಯಂತ ಕಳಕಳಿ, ಬದ್ದತೆ ಹೊಂದಿದ್ದು ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬೆರೆಯುತ್ತಾ ಕೆಲಸ ಮಾಡುತ್ತಿದ್ದರು. ಅವರು ತಮ್ಮ ಅವಧಿಯಲ್ಲಿ ಜಿಲ್ಲೆಯಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡಿದ್ದಾರೆ. ಸರ್ಕಾರಿ ನೌಕರರ ವಿಚಾರದಲ್ಲಿ ಅವರ ನಿಲುವು ಸಹ ಉತ್ತಮವಾಗಿದೆ.
    ಸಿ.ಎಸ್.ಷಡಕ್ಷರಿ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು(ವಿಡಿಯೋ ಮೂಲಕ ಸಂದೇಶ)
    ಗುರುದತ್ತ ಹೆಗಡೆಯವರು, ಜಿಲ್ಲೆಯಲ್ಲಿನ ಸಮಸ್ಯೆಗಳ ವಿಷಯಗಳನ್ನು ಸಮರ್ಥವಾಗಿ ಎದುರಿಸಿ, ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಸಕಾರಾತ್ಮಕ ಗುಣಗಳನ್ನು ಹೊಂದಿರುವ ಇವರು ಎಲ್ಲ ಕೆಲಸ ಕಾರ್ಯಗಳನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಿ, ಎಲ್ಲರ ಪ್ರೀತಿ ಪಾತ್ರರಾಗಿದ್ದಾರೆ. ಹಾಗೂ ನೂತನ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಮತ್ತು ನೂತನ ಎಸ್‌ಪಿ ನಿಖಿಲ್ ಅವರು ಸಹ ಉತ್ತಮ ಅಧಿಕಾರಿಗಳಾಗಿದ್ದು, ತಮ್ಮ ಸಹಕಾರ ಸದಾ ಇರಲಿ.
    • – ಮೋಹನ್ ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ

ಜಿಲ್ಲೆಯಲ್ಲಿನ ಅರಣ್ಯ ವಿಷಯಗಳು ಜಟಿಲವಾಗಿದ್ದು, ಅರಣ್ಯ ಮತ್ತು ಕಂದಾಯ ಇಲಾಖೆಗಳ ಸಮನ್ವಯತೆ ಹೇಗಿರಬೇಕೆಂದು ಒಂದು ನಿರ್ದಿಷ್ಟ ಮಾನದಂಡ ಒದಗಿಸಿದ್ದರು. ಒಂದು ತಂಡವಾಗಿ ಕೆಲಸ ನಿರ್ವಹಿಸುವ ರೀತಿ ಅತ್ಯುತ್ತಮವಾಗಿತ್ತು.

  • ಅಜ್ಜಯ್ಯ, ಡಿಸಿಎಫ್

Gurudutt Hegde ಗುರುದತ್ತ ಹೆಗಡೆ ಸರ್ ಅತ್ಯುತ್ತಮ ಆಡಳಿತಗಾರ ಎಂದೂ ಯಾವ ಅಧಿಕಾರಿಗೂ ಗದರಿಸದೇ ವಿಶ್ವಾಸದಿಂದ ಕೆಲಸ ಪಡೆಯುವ ವಿಶಿಷ್ಟ ಶೈಲಿ ರೂಢಿಸಿಕೊಂಡಿದ್ದರು. ಕಿರಿಯ ಅಧಿಕಾರಿಗಳಲ್ಲಿ ನಂಬಿಕೆ ಹೊಂದಿದ್ದರು. ಆರೋಗ್ಯ ಇಲಾಖೆಯಲ್ಲಿನ ಅವರ ಮುಂದಿನ ಹುದ್ದೆ ಪ್ರಮುಖ ಮತ್ತ ಸವಾಲಿನ ಹುದ್ದೆಯಾಗಿ ಸಮರ್ಥವಾಗಿ ನಿರ್ವಹಿಸಲಿದ್ದಾರೆ.

  • ಡಾ.ನಟರಾಜ್, ಡಿಹೆಚ್‌ಓ
    ಹೆಗಡೆ ಸರ್, ಶಾಂತಿ ಮಂತ್ರದಿAದಲೇ ಜಿಲ್ಲೆಯಲ್ಲಿ ಅತ್ಯುತ್ತಮ ಆಡಳಿತ ನಡೆಸಿ ಸಮೃದ್ದಿ ನೀಡಿದ್ದಾರೆ. ಉತ್ತಮ ಆಡಳಿತ ಕೌಶಲ್ಯ ಹೊಂದಿದ್ದಾರೆ. ಎಲ್ಲರೊಟ್ಟಿಗೆ ಸ್ನೇಹದಿಂದ ಕೆಲಸ ತೆಗೆದುಕೊಳ್ಳುತ್ತಿದ್ದರು. ಜಿಲ್ಲಾಡಳಿತವೇ ಒಂದು ಕುಟುಂಬ ಎಂದು ಕಾರ್ಯ ನಿರ್ವಹಿಸಬೇಕೆಂಬುದನ್ನು ತೋರಿಸಿಕೊಟ್ಟ ಮಾದರಿ ಆಡಳಿತಗಾರ.
  • ಧರ್ಮಪ್ಪ, ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ
    ನೂತನ ಎಸ್ ಪಿ ನಿಖಿಲ್ ಬಿ ಮಾತನಾಡಿ, ಗುರುದತ್ತ ಹೆಗಡೆಯವರು ಎಲ್ಲರಿಗೂ ನಿಲುಕುವಂತಹ ದಕ್ಷ ಅಧಿಕಾರಿ. ಹಾಗೂ ಉತ್ತÀ್ತಮ ಮಾರ್ಗದರ್ಶಕರು ಕೂಡ ಆಗಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕನ್ನಡ ಐಚ್ಚಿಕ ತೆಗೆದುಕೊಳ್ಳಲು ಅವರೇ ಸ್ಪೂರ್ತಿ. ಜಿಲ್ಲೆಯಲ್ಲಿ ಅವರು ಅಧ್ಬುತ ಕೆಲಸ ಮಾಡಿದ್ದು ಅದು ನಿಮ್ಮೆಲ್ಲರ ಸಹಕಾರದಿಂದ ಸಾಧ್ಯವಾಗಿದ್ದು, ಮುಂದೆಯೂ ಕೂಡ ನಿಮ್ಮ ಸಹಕಾರ ಪೊಲೀಸ್ ಇಲಾಖೆ ಜೊತೆ ಸದಾ ಇರಲಿ ಎಂದು ಕೋರಿದರು.
    ನೂತನ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ, ಎಲ್ಲ ಇಲಾಖೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಮಾಧ್ಯಮಗಳೊಂದಿಗೆ ಅನ್ಯೋನ್ಯತೆ ಮತ್ತು ಸಮನ್ವಯತೆಯೊಂದಿಗೆ ಕೆಲಸ ಮಾಡುವ ಹಂಬಲ ಹೊಂದಿದ್ದು ಎಲ್ಲ ಇಲಾಖೆಗಳು ಒಂದು ಕುಟುಂಬವಾಗಿ ಕಾರ್ಯವೆಸಗೋಣ ಎಂದರು.
    ಕಾರ್ಯಕ್ರಮದಲ್ಲಿ ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ್, ಪ್ರೊಬೇಷನರಿ ಅಧಿಕಾರಿ ನಾಗೇಂದ್ರದ್ರ ಬಾಬು, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಎಸಿಗಳಾದ ಸತ್ಯನಾರಾಯಣ, ಯತೀಶ್, ಜಿಲ್ಲೆಯ ಅಧಿಕಾರಿಗಳು, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು, ನೌಕರರು ಪಾಲ್ಗೊಂಡಿದ್ದರು.

Shimoga News ಜನವರಿ 7. ಒಕ್ಕಲಿಗರ ಮಹಿಳಾ ವೇದಿಕೆ ಆಶ್ರಯದಲ್ಲಿ ಮಲೆನಾಡು ಮೇಳ.

0

Shimoga News ಪಂಪ ನಗರದಲ್ಲಿರುವ ಜಿಲ್ಲಾ ಒಕ್ಕಲಿಗರ ಮಹಿಳಾ ಸಮುದಾಯ ಭವನದಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಜನವರಿ 7ರಂದು ಬೆಳಗ್ಗೆ 9.30ಕ್ಕೆ ಮಲೆನಾಡು ಮೇಳ ಆಯೋಜಿಸಲಾಗಿದೆ.
ವಿದ್ಯಾ ನಾಗೇಶ್, ಪ್ರಭಾ ಶ್ರೀನಾಥ್ ಅವರು ಮಲೆನಾಡು ಮೇಳ ಉದ್ಘಾಟಿಸುವರು. ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ರಮೇಶ್ ಹೆಗಡೆ ಅಧ್ಯಕ್ಷತೆ ವಹಿಸುವರು. ಕಾರ್ಯನಿರ್ವಾಹಕ ಅಭಿಯಂತರ ಬಿ.ಇ.ವಿರೇಂದ್ರ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಉಪಸ್ಥಿತರಿರುವರು. ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ಅಧ್ಯಕ್ಷೆ ಪ್ರೇಮಾ ವೆಂಕಟೇಶ್, ಕಾರ್ಯದರ್ಶಿ ಕಾವ್ಯ ಸತೀಶ್, ಖಜಾಂಚಿ ಸೌರಭ ಹರ್ಷ ಹಾಗೂ ಸಂಘದ ಸದಸ್ಯನಿಯರು ಉಪಸ್ಥಿತರಿರುವರು.
Shimoga News ಕಾಂಚಿಪುರಂನಿಂದ ಬರುತ್ತಿರುವ ರೇಷ್ಮೆ ಸೀರೆಗಳ ನೇರ ಮಾರಾಟ, ಫ್ಯಾನ್ಸಿ ಸೀರೆಗಳು, ಡ್ರೆಸ್, ಬೆಡ್ ಲೈನರ್, ಗೃಹಪಯೋಗಿ ವಸ್ತುಗಳು, ಅಲಂಕಾರಿಕ ಸಾಮಾಗ್ರಿಗಳು, ಮನೆಯಲ್ಲಿ ತಯಾರಿಸಿದ ರುಚಿಕರ ಸಸ್ಯಾಹಾರಿ ಹಾಗೂ ಮಾಂಸಾಹಾರಿ ತಿನಿಸುಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಹಳೆಯ ಝರಿ ಸೀರೆಯನ್ನು ಒಳ್ಳೆಯ ಬೆಲೆಯಲ್ಲಿ ತೆಗೆದುಕೊಳ್ಳಲಾಗುವುದು. ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುತ್ತಿರುವ ಮಹಿಳಾ ಉದ್ಯಮಿಗಳನ್ನು ಹುರಿದುಂಬಿಸಲು ಪ್ರತಿ ವರ್ಷ ಮೇಳ ಆಯೋಜಿಸಲಾಗುತ್ತಿದೆ ಎಂದು ಸ್ಟಾಲ್ ನಿರ್ವಾಹಕರಾದ ಅಂಜು ಸುರೇಶ್ ಹಾಗೂ ಸುಪ್ರಿಯಾ ರಾಮಪ್ಪ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9964022158, 7019659461, 9945770711 ಸಂಪರ್ಕಿಸಬಹುದಾಗಿದೆ.

Shimoga News ಶಿವಮೊಗ್ಗದ ಮಳಿಗೆ ಬಾಡಿಗೆದಾರರ ಸಂಘದಿಂದ ಧನ್ಯವಾದ ‌ಅರ್ಪಣೆ.

0

Shimoga News ಶಿವಮೊಗ್ಗ ನಗರದ ಶಿವಪ್ಪನಾಯಕ ಮಾರುಕಟ್ಟೆ ಮಳಿಗೆ ಬಾಡಿಗೆದಾರರಿಗೆ ತಾಲೂಕು ಆಫಿಸ್ ರಸ್ತೆ ಮತ್ತು ಎಲ್‌ಎಲ್‌ಆರ್ ರಸ್ತೆಯಲ್ಲಿ ಎರಡು ವರ್ಷದ ಹಿಂದೆ ಹೊಸ ಕಟ್ಟಡದಲ್ಲಿ ಸಿಗುವ ಜಾಗದ ಕನಸು ಈಗ ನನಸಾಗಿದ್ದು, ಇದಕ್ಕೆ ಕಾರಣರಾದ ಶಾಸಕ ಎಸ್.ಎನ್. ಚನ್ನಬಸಪ್ಪ, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಹಾಗೂ ಈ ಹಿಂದೆ ಇದಕ್ಕಾಗಿ ಶ್ರಮಿಸಿದ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸೇರಿದಂತೆ ಇನ್ನಿತರ ಅಧಿಕಾರಿಗಳು ಮತ್ತು ಗಣ್ಯರಿಗೆ ಶಿವಪ್ಪನಾಯಕ ಮಾರುಕಟ್ಟೆ ಮಳಿಗೆ ಬಾಡಿಗೆದಾರರ ಸಂಘದ ಸಹ ಕಾರ್ಯದರ್ಶಿ ಚೂಡಾಮಣಿ ಕೃತಜ್ಞತೆ ಸಲ್ಲಿಸಿದ್ದಾರೆ.

Guru Basava Mahaswamiji ಪರಮ ತಪಸ್ವಿ ಶ್ರೀ ಗುರುಬಸವ ಮಹಾಸ್ವಾಮೀಜಿ

0

Guru Basava Mahaswamiji ಸಕಲರಿಗೆ  ಲೇಸನೇ ಬಯಸುವ  ಆಕಾಂಕ್ಷಿಗಳಾದ ಹನ್ನೆರಡನೆಯ ಶತಮಾನದ ಶಿವಶರಣರು ಕಲ್ಯಾಣ ಕ್ರಾಂತಿಯ ನಂತರ ತಮ್ಮ ಅಮೂಲ್ಯ  ನುಡಿ ಸಂಪತ್ತಾದ  ವಚನಗಳ ಓಲೆ ಕಟ್ಟುಗಳನ್ನು ರಕ್ಷಿಸಲು ತಮ್ಮ ತಲೆಯ ಮೇಲೆ   ಹೊತ್ತುಕೊಂಡು  ಕರ್ನಾಟಕದ ನಾಲ್ಕು  ಮೂಲೆಗಳಿಗೆ ಗುಂಪು ಗುಂಪಾಗಿ ಹೊರಟರು. ಅಕ್ಕನಾಗಮ್ಮ ಮತ್ತು  ಚನ್ನ ಬಸವಣ್ಣನವರ ಜೊತೆಗೆ ಕೆಲ  ಶರಣ ಶರಣೆಯರು ಉಳವಿಯ ಕಡೆ  ಸಾಗಿದರೆ, ಮತ್ತೆ ಕೆಲವರು ಆಂಧ್ರ ನಾಡಿನ ಕಡೆ ಹೊರಟರು. ಇನ್ನು  ಕೆಲವರು ದಕ್ಷಿಣದ ಚಿಕ್ಕಮಗಳೂರು ಸಕಲೇಶಪುರದ ಕಡೆ ಸಾಗಿದರು. ಮತ್ತೆ ಕೆಲವರು  ತಮಿಳುನಾಡಿನ  ಗಡಿ ಭಾಗದ ಚಾಮರಾಜನಗರ ಮಲೆ ಮಹದೇಶ್ವರ ಬೆಟ್ಟನಾಡಿನ ಕಡೆಗೆ  ನಡೆದರು. 
ಈ ರೀತಿ ನಾಡಿನ ನಾನಾ ಕಡೆ ಚದುರಿ ಹೋದ ಶರಣರಲ್ಲಿ ಒಬ್ಬರಾದ ಗಂಗಾಧರಯ್ಯನವರು  ದಕ್ಷಿಣದ ಕಡೆ ಸಾಗಿ ಬಂದು ಈಗಿನ Guru Basava Mahaswamiji ಶಿವಮೊಗ್ಗ ನಗರಕ್ಕೆ ಸಮೀಪವಿರುವ  ಯಲವಟ್ಟಿ ಗ್ರಾಮದ ಪಕ್ಕದಲ್ಲಿರುವ ಹಸಿರು ಪರಿಸರದ ನಡುವೆ ತಲೆ ಎತ್ತಿ ನಿಂತಿರುವ ಚಿಕ್ಕ ಬೆಟ್ಟದ ಮೇಲೆ ಇದ್ದ ಗವಿಯೊಂದರಲ್ಲಿ ನೆಲೆ ನಿಂತು ಅನುಷ್ಠಾನ  ಮಾಡುತ್ತಿದ್ದರು. ಅವರು ಪೂಜೆಯನ್ನು  ಮಾಡುತ್ತಿದ್ದ ಸಮಯದಲ್ಲಿ  ಎರಡು   ಪುನುಗಿನ ಬೆಕ್ಕುಗಳು  ಆ ಬೆಟ್ಟದ  ಗವಿಯಲ್ಲಿ ದ್ದವು.  ಅವುಗಳಲ್ಲಿ  ಒಂದು ಗಂಟೆ ಬಾರಿಸುವ  ಮತ್ತೊಂದು ಜಾಗಟೆ ಸದ್ದು ಮಾಡುತ್ತಾ ಅಲ್ಲಿ  ಅನುಷ್ಠಾನ ಮಾಡುತ್ತಿದ್ದ ಗುರುಗಳು   ಮಮತೆ ಯಿಂದ ನೀಡುತ್ತಿದ್ದ  ಹಾಲಿನ  ಪ್ರಸಾದವನ್ನು  ಸೇವಿಸುತ್ತಿದ್ದವು ಎಂಬುದು ಅಲ್ಲಿಯ ಗ್ರಾಮದ ಹಿರಿಯರು  ತಲೆ ತಲಾಂತರದಿಂದ ಕೇಳಿ ಬಂದಿದ್ದ  ಕಥೆಯಾಗಿತ್ತು. ಆದುದರಿಂದ ಗುರುಗಳು ಇದ್ದ  ಮಠ ಕಲ್ಲಿನ ಗವಿಮಠವಾಗಿದ್ದುದು ಬೆಕ್ಕಿನಕಲ್ಮಠ ಎಂದು  ಹೆಸರಾಯಿತು.
ಇದು ಗ್ರಾಮದವರು ಹೇಳಿ ಕೇಳಿ ಬಂದ ಜನಜನಿತ ಕಥೆಯಾದರೆ, ಇತಿಹಾಸ ಸಂಶೋಧಕರು ಮತ್ತೊಂದು ರೀತಿಯಲ್ಲಿ  ತಿಳಿಸುತ್ತಾರೆ. ಬಹುಪೂರ್ವದಲ್ಲಿ ಬೌದ್ಧ ಭಿಕ್ಷುಗಳು ಇಲ್ಲಿ ಧ್ಯಾನ ಮಾಡುತ್ತಿದ್ದದ್ದು ಇದಾಗಿತ್ತು.  ಆ  ಬೌದ್ಧ ಭಿಕ್ಷುಗಳು ಇದ್ದ ಸ್ಥಳ  ಇದಾಗಿದ್ದು ಗ್ರಾಮಸ್ಥರ ಮಾತಿನಲ್ಲಿ ಭಿಕ್ಷುಗಳು ಇದ್ದ ಮಠ ಭಿಕ್ಷು ಬಿಕ್ಕು ಎಂದಾಗಿ ಕಡೆಗೆ …ಕಡೆಗೆ ಬಿಕ್ಕುಗಳ ಮಠ, ಬೆಕ್ಕಿನ ಕಲ್ಮಠ ಆಗಿ ಅಪಭ್ರಂಶವಾಗಿರಬಹುದು.

Kuvempu ಸರ್ವೋದಯ ಸಮಾನತೆ ಕುವೆಂಪು ಅವರ ಸಂದೇಶ ಸಾರ್ವಕಾಲಿಕ- ಕಡಿದಾಳ್ ಪ್ರಕಾಶ್

0

Kuvempu ಶಿವಮೊಗ್ಗ ಎಲ್ಲಾ ಸಮಾಜಗಳಿಗೆ ಹಾಗೂ ಎಲ್ಲಾ ಕಾಲಕ್ಕೂ ಸಲ್ಲುವ ವಿಶ್ವಮಾನ ಸಂದೇಶವನ್ನು ಕುವೆಂಪು ಅವರು ನೀಡಿದ್ದಾರೆ ಎಂದು ರಾಷ್ಟ್ರಕವಿ ಕುವೆಂಪು ಪ್ರತಿಷ್ಠನದ ಸಮ ಕಾರ್ಯದರ್ಶಿ ಕಡಿದಾಳ್‌ ಪ್ರಕಾಶ್‌ ಹೇಳಿದ್ದಾರೆ.

ಶಿವಮೊಗ್ಗ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ನೇಟಿವ್‌ ಥಿಯೇಟರ್‌ ನ ʻಬಾ ಇಲ್ಲಿ ಸಂಭವಿಸುʼ ವಿಭಿನ್ನ ರಂಗ ಪ್ರಯೋಗಕ್ಕೆ ಚಾಲನೆ ನೀಡಿ ಮಾತನಾಡಿದರು.

ಕುವೆಂಪು ಅವರ 121ನೇ ಜನ್ಮದಿನ ಹಾಗೂ ವಿಶ್ವಮಾನವ ದಿನಾಚರಣೆ ಅಂಗವಾಗಿ ಈ ಪ್ರದರ್ಶನ ಆಯೋಜನೆ ಮಾಡಲಾಗಿತ್ತು.

ನಮಗೆ ಬೇಕಾದುದು ಆ ಮತ ಈ ಮತ ಅಲ್ಲ, ಮನುಜ ಮತ. ಆ ಪಥ, ಈ ಪಥ ಅಲ್ಲ ವಿಶ್ವಪಥ. ನಮಗೆ ಬೇಕಾದದ್ದು ಸರ್ವರ ಉದಯ. ಸರ್ವೋದಯ ಎಂದು ಕುವೆಂಪು ಹೇಳಿದ್ದಾರೆ. ಇದು ವರ್ತಮಾನಕ್ಕೆ ಅತ್ಯಂತ ಅಗತ್ಯವಾಗಿ ಬೇಕಾಗಿರುವ ಚಿಂತನೆಯಾಗಿದೆ. ಇಂಥ ಆಶಯಗಳನ್ನು ಸಮಾಜದ ಎಲ್ಲಾ ವರ್ಗಗಳಿಗೂ ಮುಟ್ಟಿಸುವ ಪ್ರಯತ್ನ ನಿರಂತರವಾಗಬೇಕು ಎಂದರು.

Kuvempu ಕುವೆಂಪು ಅವರು ಎಲ್ಲಾ ಕಾಲಕ್ಕೂ ಎಲ್ಲಾ ಸಮಾಜಕ್ಕೂ ಪ್ರಸ್ತುತವಾಗುವ ಸಾಹಿತಿ. ಈ ನಿಟ್ಟಿನಲ್ಲಿ ಕುವೆಂಪು ಅವರ ಸಾಹಿತ್ಯ, ನಾಟಕ, ವಿಚಾರ ಸಾಹಿತ್ಯವನ್ನು ಯುವಜನತೆಗೆ ಮುಟ್ಟಿಸುವ ಪ್ರಯತ್ನಗಳು ಎಲ್ಲೇ ನಡೆಯುವ ಚಟುವಟಿಕೆಗಳನ್ನು ಪ್ರತಿಷ್ಠಾನ ಬೆಂಬಲಿಸುತ್ತದೆ ಎಂದು ಹೇಳಿದರು.

ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಮೊಗ್ಗ ರಂಗಾಯಣ ಸಹಕಾರದಲ್ಲಿ ಈ ಪ್ರದರ್ಶನ ಆಯೋಜಿಸಲಾಗಿತ್ತು. ʻಬಾ ಇಲ್ಲಿ ಸಂಭವಿಸುʼ ಕುವೆಂಪು ಕೃತಿಗಳಲ್ಲಿನ ಪ್ರಮುಖ ಪಾತ್ರಗಳ ವಿಭಿನ್ನ ರಂಗಪ್ರಸ್ತುತಿಯನ್ನು ಪತ್ರಕರ್ತ ಆರ್‌.ಎಸ್.‌ ಹಾಲಸ್ವಾಮಿ ನಿರ್ದೇಶನ ಮಾಡಿದ್ದರು. ತೀರ್ಥಹಳ್ಳಿಯ ಶ್ರೀಪಾದ್‌ ಹಾಗೂ ಶಿವಕುಮಾರ್‌ ಅವರು ಸಂಗೀತ ನೀಡಿದ್ದರು.

ಶಂಕರ್‌ ಬೆಳಲಕಟ್ಟೆ ಅವರು ರಂಗ ಸಜ್ಜಿಕೆ ಹಾಗೂ ಬೆಳಕಿನ ವಿನ್ಯಾಸ ರೂಪಿಸಿದ್ದರು. ಡಾ. ನಾಗಭೂಷಣ್‌, ಡಾ. ಭಾರತೀ ದೇವಿ, ಡಾ. ಹರ್ಷಿತಾ, ಭಾಗ್ಯ ಎಂ.ಟಿ. ಮಲ್ಲಿಕಾರ್ಜುನ ತುರವನೂರು, ಕೀರ್ತನಾ, ನದಿ ಹೆಚ್‌.ಪಿ. ಪ್ರಮುಖ ಪಾತ್ರ ನಿರ್ವಹಿಸಿದ್ದರು.

District Health and Family Welfare Department Shimoga ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ.

0

District Health and Family Welfare Department Shimoga ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ಬ್ಯಾಕೋಡು, ತುಮರಿ, ತಡಗಳಲೆ, ಕಾರ್ಗಲ್, ತಾಳಗುಪ್ಪ, ಇಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ & ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್ ಪದವೀಧರ ಅಭ್ಯರ್ಥಿಗಳ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.

ಖಾಲಿ ಇರುವ ಬ್ಯಾಕೋಡು, ತುಮರಿ, ತಡಗಳಲೆ, ಕಾರ್ಗಲ್, ತಾಳಗುಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆದ್ಯತೆ ಮೇರೆಗೆ ನೇಮಕಾತಿ ಆದೇಶ ನೀಡಲಾಗುವುದು.

District Health and Family Welfare Department Shimoga ಆಸಕ್ತ ಅಭ್ಯರ್ಥಿಗಳು ಜ.056 ರಂದು ಬೆಳಿಗ್ಗೆ 11:00ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಬಿ.ಹೆಚ್ ರಸ್ತೆ ಶಿವಮೊಗ್ಗ ಇಲ್ಲಿ ತಮ್ಮ ವಿಧ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವ ಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂ:08182-222382 ಅನ್ನು ಸಂಪರ್ಕಿಸಬಹುದಾಗಿದೆ.

Narendra Modi ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ. ರಾಜ್ಯ ಸರ್ಕಾರದ ಕಾರ್ಯದರ್ಶಿ ,ಶ್ರೀಮತಿ ಶಾಲಿನಿ ರಜನೀಶ್ ಭಾಗವಹಿಸಿದ್ದ ಏಕೈಕ ಮಹಿಳೆ.

0

Narendra Modi ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇತ್ತೀಚೆಗೆ 2025 ನೇ ಡಿಸೆಂಬರ್ 26 ರಿಂದ 28 ರ ವರೆಗೆ ನವದೆಹಲಿಯಲ್ಲಿ ನಡೆದ ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿಯವರಾದ ಡಾ. ಶಾಲಿನಿ ರಜನೀಶ್ ಅವರು ಏಕೈಕ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಮೂರು ದಿನಗಳ ಕಾಲ ನಡೆದ ಈ ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಭಾಗವಹಿಸಿದ್ದರು.

ಈ ಸಮ್ಮೇಳನವು ರಾಷ್ಟ್ರೀಯ ಅಭಿವೃದ್ಧಿ ಆದ್ಯತೆಗಳ ಕುರಿತು ರಚನಾತ್ಮಕ ಮತ್ತು ನಿರಂತರ ಸಂವಾದದ ಮೂಲಕ ಕೇಂದ್ರ–ರಾಜ್ಯ ಪಾಲುದಾರಿಕೆಯನ್ನು ಬಲಪಡಿಸುವ ಗುರಿಯನ್ನು ಹೊಂದಿತ್ತು.

ಸಹಕಾರಿ ಒಕ್ಕೂಟ ಪರಿಕಲ್ಪನೆಯ ಭಾಗವಾಗಿ, ಈ ಸಮ್ಮೇಳನವು ಕೇಂದ್ರ ಮತ್ತು ರಾಜ್ಯಗಳು ಸಹಕರಿಸುವ ಮಹತ್ವದ ವೇದಿಕೆಯಾಗಿದ್ದು, ದೇಶದ ಮಾನವ ಸಂಪನ್ಮೂಲ ಸಾಮರ್ಥ್ಯವನ್ನು ಹೆಚ್ಚಿಸಲು ಹಾಗೂ ಸಮಗ್ರ ಭವಿಷ್ಯಕ್ಕಾಗಿ ಸುಸ್ಥಿರ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು ಏಕೀಕೃತ ಮಾರ್ಗಸೂಚಿಗಳನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ.

Narendra Modi ಈ ಸಮ್ಮೇಳನವು ‘ವಿಕಸಿತ ಭಾರತಕ್ಕಾಗಿ ಮಾನವ ಬಂಡವಾಳ’ ಎಂಬ ವಿಷಯದ ಮೇಲೆ ಕೇಂದ್ರೀಕೃತವಾಗಿದ್ದು, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಅನುಸರಿಸಬೇಕಾದ ಅತ್ಯುತ್ತಮ ವಿಧಾನಗಳು ಮತ್ತು ತಂತ್ರಗಳನ್ನು ಪ್ರಸ್ತಾಪಿಸಿದೆ.

ಸಮ್ಮೇಳನದಲ್ಲಿ ಆರಂಭಿಕ ಬಾಲ್ಯ ಶಿಕ್ಷಣ, ಶಾಲಾ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉನ್ನತ ಶಿಕ್ಷಣ, ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳು ಸೇರಿದಂತೆ ಐದು ಪ್ರಮುಖ ಕ್ಷೇತ್ರಗಳ ವಿಷಯಗಳ ಮೇಲೆ ವಿವರವಾದ ಚರ್ಚೆಗೆ ವಿಶೇಷ ಒತ್ತು ನೀಡಲಾಯಿತು. ಅಲ್ಲದೆ ‘ಆಡಳಿತದಲ್ಲಿ ತಂತ್ರಜ್ಞಾನ – ಅವಕಾಶಗಳು, ಅಪಾಯಗಳು ಮತ್ತು ತಗ್ಗಿಸುವಿಕೆ’, ಸ್ಮಾರ್ಟ್ ಪೂರೈಕೆ ಸರಪಳಿಗಳು, ‘ಒಂದು ರಾಜ್ಯ – ಒಂದು ವಿಶ್ವದರ್ಜೆಯ ಪ್ರವಾಸಿ ತಾಣ’, ಆತ್ಮನಿರ್ಭರ ಭಾರತ ಹಾಗೂ ಸ್ವದೇಶಿ ಚಿಂತನೆಗಳು ಸೇರಿದಂತೆ ಆರು ಮಹತ್ವದ ವಿಷಯಗಳನ್ನೂ ಕೇಂದ್ರೀಕರಿಸಲಾಗಿತ್ತು.

Visvesvaraya Iron and Steel Plant ಭದ್ರಾವತಿ ವಿಐಎಸ್ಎಲ್ ನಿವೃತ್ತರ ಕಲ್ಯಾಣ ಕೇಂದ್ರಕ್ಕೆ ನೂತನ ಅಧ್ಯಕ್ಷರಾಗಿ ಬಿ.ಜಿ. ರಾಮಲಿಂಗಯ್ಯ ಆಯ್ಕೆ

0

Visvesvaraya Iron and Steel Plant ಡಿಸೆಂಬರ್ 28 ,2025/ರಂದು ಭದ್ರಾವತಿ VISL ನಿವೃತ್ತ ನೌಕರರ ಕಲ್ಯಾಣ ಕೇಂದ್ರಕ್ಕೆ ಚುನಾವಣೆ ನಡೆಯಿತು, ೨೯೦೯ ಸದಸ್ಯರಲ್ಲಿ ೯೮೭ ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಿದ್ದರು, ೦೧.೦೧.೨೬ ರಂದು ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು,
೫ ವರ್ಷಗಳ ಅವಧಿಗೆ‌ ಈ ಸಮಿತಿಯು ಕಾರ್ಯ ನಿರ್ವಹಿಸುತ್ತದೆ.
ಫಲಿತಾಂಶ ಹೀಗಿದೆ..
೧. ಅಧ್ಯಕ್ಷ : ರಾಮಲಿಂಗಯ್ಯ ಬಿಜಿ
೨. ಉಪಾಧ್ಯಕ್ಷ : ಮಂಜುನಾಥ ಬಿ

೩.ಜನರಲ್ ಸೆಕ್ರೆಟರಿ: ಅಡವೀಶಯ್ಯ ಎಸ್
೪. ಕಾರ್ಯದರ್ಶಿ :ಹನುಮಂತ ರಾವ್ ಎಸ್
೫. ಕಾರ್ಯದರ್ಶಿ ;ಶ್ರೀನಿವಾಸ ಬಿ ಎನ್ (ಹೊಸದಾಗಿ ಆಯ್ಕೆಯಾದವರು)
೬. ಖಜಾಂಚಿ : ಕೆಂಪಯ್ಯ
ಸದಸ್ಯರು
೧. ಶಂಕರ್ ಜಿ
೨. ರವೀಂದ್ರ ರೆಡ್ಡಿ ಬಿ ಕೆ
೩. ಬೈರಪ್ಪ ಎಸ್ ಎಸ್
೪. ರಾಮಪ್ಪ ವಿ ಎಂ
ಹೊಸದಾಗಿ ಆಯ್ಕೆಯಾದ ಸದಸ್ಯರು
೧. ಚಂದ್ರ ಮೋಹನ್
೨. ನಂಜುಂಡೆ ಗೌಡ ಎಸ್ ಇ
೩. ಈಶ್ವರಪ್ಪ ಎ
೪. ರಾಜ
೫. ನರಸಿಂಹ ಚಾರ್ ಎಸ್

Madhu Bangarappa ಜನವರಿ 3 & 8 ರಿಂದ ಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗೆ ನಿರಂತರ ನೀರು ಹರಿಸಲಾಗುತ್ತದೆ- ಮಧು ಬಂಗಾರಪ್ಪ.

0

Madhu Bangarappa ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತ ನಿರ್ಣಯ ಕೈಗೊಳ್ಳಲಾಯಿತು.

ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಬೇಸಿಗೆ ಬೆಳೆಗೆ ನೀರು ಹರಿಸುವ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅ‍ಧ್ಯಕ್ಷತೆ ವಹಿಸಿದ್ದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಮಾತನಾಡಿ, ಮುಂದಿನ ಬೇಸಿಗೆ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಆಗದಂತೆ ಅವಶ್ಯಕವಾಗಿರುವ ನೀರನ್ನು ಒದಗಿಸಲು ಮತ್ತು ನಗರ ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರನ್ನು ಪೂರೈಸುವುದನ್ನು ಗಮನದಲ್ಲಿಟ್ಟುಕೊಂಡು ನೀರನ್ನು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದವರು ನುಡಿದರು.

ಅಚ್ಚುಕಟ್ಟು ವ್ಯಾಪ್ತಿಯ ನಾಲೆ, ಕೆರೆಗಳಲ್ಲಿ ತುಂಬಿರುವ ಹೂಳನ್ನು ನರೇಗಾ ಯೋಜನೆಯಡಿ ತೆಗೆಯಿಸಬಹುದಾದರೂ ಪಟ್ಟಣ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿನ ನಾಲೆ, ಕೆರೆಗಳಲ್ಲಿನ ಹೂಳನ್ನು ತೆಗೆಯಿಸುವುದು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ನಿರೀಕ್ಷೆಯಂತೆ ಸಕಾಲದಲ್ಲಿ ಜಲಾಶಯದಿಂದ ಹರಿಸುವ ನೀರು ನಿಗಧಿತ ಗುರಿ ತಲುಪುತ್ತಿಲ್ಲ. ಆದ್ದರಿಂದ ಪ್ರಾಧಿಕಾರದ ನೀರಾವರಿ ಇಂಜಿನಿಯರ್‌ರವರು ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತು ಪ್ರಸ್ತಾವನೆಯನ್ನು ತಯಾರಿಸಿ ಕೂಡಲೇ ಸಲ್ಲಿಸಬೇಕು. ಈ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಅವರಲ್ಲಿ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

· ಜಲಾಶಯದ ಎಡ ಮತ್ತು ಬಲದಂಡೆ ನಾಲಾ ವ್ಯಾಪ್ತಿಯಲ್ಲಿನ ಸಾಗುವಳಿದಾರರಿಗೆ ಹಾಗೂ ಹೊಸದಾಗಿ ತೋಟ ಮಾಡಿರುವ ಬೆಳೆಗಾರರಿಗೆ ಇಂದಿನಿಂದಲೇ ನೀರಿನ ಅಗತ್ಯವಿದೆ. ವಿಳಂಬವಾದಲ್ಲಿ ಲಕ್ಷಾಂತರ ಅಡಿಕೆ ಗಿಡಗಳು ನಾಶವಾಗುವ ಸಂಭವವಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನೀರಿನ ಹರಿವನ್ನು ನಿಯಂತ್ರಿಸಿ, ನೀರನ್ನು ಒದಗಿಸಬಹುದಾದ ಸಾಧ್ಯತೆಗಳ ಬಗ್ಗೆ ಪರಿಶೀಲಿಸಬೇಕು. -ಬಸವರಾಜಪ್ಪ, ರೈತ ಮುಖಂಡರು, ಶಿವಮೊಗ್ಗ.

Madhu Bangarappa ಗೋಂದಿ ಭಾಗದ ಕಾಲುವೆಗಳು ಎತ್ತರದ ಪ್ರದೇಶದಲ್ಲಿವೆ ಅಲ್ಲದೆ ಆ ಭಾಗದ ಕೆರೆ-ಕಾಲುವೆಗಳಲ್ಲಿ ಹೂಳು ತುಂಬಿಕೊಂಡಿರುವುದರಿಂದ ನೀರಿನ ಹರಿವು ಸಮರ್ಪಕವಾಗಿಲ್ಲದ ಕಾರಣ ಅಚ್ಚುಕಟ್ಟುದಾರರಿಗೆ ನೀರು ತಲುಪದಿರುವ ಬಗ್ಗೆ ಆಕ್ಷೇಪಣೆಗಳಿರುವುದನ್ನು ಗಮನಿಸಲಾಗಿದೆ. ಅಲ್ಲಿನ ಬೆಳೆಗಾರರಿಗೆ ಅಗತ್ಯವಿರುವಷ್ಟು ಪ್ರಮಾಣದ ನೀರನ್ನು ಸಕಾಲದಲ್ಲಿ ಒದಗಿಸಲು ಭದ್ರಾ ಇಂಜಿನಿಯರ್‌ರವರು ಪರಿಶೀಲಿಸಿ ಕ್ರಮ ವಹಿಸಬೇಕು ಎಂದರು.

ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿನ ನಾಲೆಗಳ ದುರಸ್ತಿಗೆ ಈಗಾಗಲೇ ಸಾಕಷ್ಟು ಅನುದಾನ ಬಿಡುಗಡೆಗೊಳಿಸಿದೆ. ಇನ್ನಷ್ಟು ಅನುದಾನದ ಅಗತ್ಯವಿದ್ದು, ಸಂಬಂಧಿಸಿದ ಅಧಿಕಾರಿಗಳು ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ, ಸರ್ಕಾರಕ್ಕೆ ಸಲ್ಲಿಸಿದಲ್ಲಿ ಅನುದಾನ ಬಿಡುಗಡೆಗೊಳಿಸಲು ಪ್ರಯತ್ನಿಸಲಾಗುವುದು ಎಂದರು.

· .ಹಲವು ದಶಕಗಳ ಹಿಂದೆ ನಿರ್ಮಿಸಲಾಗಿದ್ದ ಹಾಗೂ ಪ್ರಸ್ತುತ ಶಿಥಿಲಾವಸ್ತೆಯಲ್ಲಿರುವ ನಾಲೆ, ದಂಡೆಗಳ ದುರಸ್ತಿಗೆ ಅನುದಾನ ಬಿಡುಗಡೆಗೊಳಿಸಿ, ಕಾಮಗಾರಿ ಆರಂಭಿಸಿರುವುದು ರೈತರಲ್ಲಿ ಸಂತಸ ತಂದಿದೆ. ಅದಕ್ಕಾಗಿ ಸರ್ಕಾರಕ್ಕೆ ಧನ್ಯವಾದಗಳು.

· ಎ.ಬಿ.ಕರಿಬಸಪ್ಪ, ರೈತರು.

ಸಭೆಯಲ್ಲಿ ಉಪಸ್ಥಿತರಿದ್ದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ|| ಅಂಶುಮಂತ್‌ಅವರು ಮಾತನಾಡಿ, ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಸಮೀಪದ ಸಾಗುವಳಿದಾರರಿಗೆ ನೀರು ದೊರೆಯುತ್ತಿರುವಂತೆಯೇ ದೂರದ ರೈತರ ಒಣಭೂಮಿಗೆ ನೀರು ಹರಿಸಬೇಕಾಗಿರುವುದು ಪ್ರಾಧಿಕಾರದ ಹೊಣೆಯಾಗಿದೆ. ನೈಸರ್ಗಿಕವಾಗಿ ದೊರೆಯುತ್ತಿರುವ ಅಮೂಲ್ಯ ಜಲವನ್ನು ಮಿತವಾಗಿ ಬಳಸಿಕೊಳ್ಳಬೇಕು. ಮಾನವೀಯ ನೆಲೆಯಲ್ಲಿ ಎಲ್ಲ ರೈತರ ಹಿತಸುಖ ಕಾಯುವ ನಿಟ್ಟಿನಲ್ಲಿ ಚಿಂತಿಸಬೇಕು. ನೀರನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಬೇಕು. ವ್ಯರ್ಥವಾಗಿ ಹರಿದು ಹೋಗುವಂತಾಗಬಾರದು. ನೀರಿನ ಮಿತಬಳಕೆ ಬಗ್ಗೆ ಎಲ್ಲರಲ್ಲೂ ಜಾಗೃತಿ ಇರಬೇಕು. ಪ್ರಾಧಿಕಾರದ ನಿರ್ಣಯಗಳಿಗೆ ಎಲ್ಲರೂ ಬದ್ಧರಾಗಿರಬೇಕು ಎಂದರು.

ಸಭೆಯಲ್ಲಿ ಶಾಸಕ ಎಸ್.ಎನ್.‌ಚನ್ನಬಸಪ್ಪ, ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡರ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ, ಆರ್.ಪ್ರಸನ್ನಕುಮಾರ್‌, ಅಭಿಯಂತರರಾದ ರವಿಕುಮಾರ್‌, ರವಿಚಂದ್ರ ಸೇರಿದಂತೆ ದಾವಣಗೆರೆ, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳ ನೀರಾವರಿ ಇಲಾಖೆಯ ಅಧಿಕಾರಿಗಳು, ರೈತ ಮುಖಂಡರು ಭಾಗವಹಿಸಿದ್ದರು.