Sunday, February 8, 2026
Sunday, February 8, 2026
Home Blog Page 39

Shimoga News ಮಾನ,ಅಭಿಮಾನ,ಸ್ವಾಭಿಮಾನ ಇರದ ಜೀವನ ವ್ಯರ್ಥ- ಟಿ.ಹೆಚ್.ಹಾಲೇಶಪ್ಪ.

0

Shimoga News ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗ, ಮಹಾನಗರ ಪಾಲಿಕೆಯ ಆವರಣದಲ್ಲಿ 208 ನೇ ವರ್ಷದ ಭೀಮ ಕೋರೆಗಾವ್ ವಿಜಯೋತ್ಸವನ್ನು “ದಲಿತರ ಸಾಮಾಜಿಕ ಸಮಾನತೆ ದಿನ”ವನ್ನಾಗಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಮೈಸೂರು ವಿಭಾಗೀಯ ಸಂಚಾಲಕರಾದ ಟಿ.ಹೆಚ್. ಹಾಲೇಶಪ್ಪನವರು ಮಾನ, ಅಭಿಮಾನ, ಸ್ವಾಭಿಮಾನ ಇರದ ಜೀವನ ಅನರ್ಥ. ಡಾ. ಬಿಆರ್ ಅಂಬೇಡ್ಕರ್ ಅವರ ಜಾಗೃತಿ ಹೋರಾಟ ನಮಗೆ ಬೆಳಕಾಗಲಿ ಎಂದು ತಿಳಿಸಿದರು. ಗೌತಮ ಬುದ್ಧರ ಪಂಚಶೀಲ ತತ್ವಗಳು, ಅಷ್ಟಾಂಗ ಮಾರ್ಗಗಳು ನಮ್ಮೆಲ್ಲರ ಬದುಕನ್ನು ಉಜ್ವಲ ಗೊಳಿಸಲು ಹಾಗೂ ಸ್ವಾಭಿಮಾನದ ಭಾರತ ರಾಷ್ಟ್ರ ನಿರ್ಮಾಣದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಭಾರತೀಯ ಸಂವಿಧಾನವೇ ಈ ದೇಶದ ಧರ್ಮ ಗ್ರಂಥ ತಿಳಿಸಿದರು.
Shimoga News ಪರಮಪೂಜ್ಯ ಮ. ನಿ. ಪ್ರ. ಶ್ರೀ ಬಸವಲಿಂಗ ಮಹಾಸ್ವಾಮಿಗಳು, ಚಿತ್ರರಗಿ ಶ್ರೀ ವಿಜಯಮಾಂತೇಶ್ವರ ಸಿದ್ದಯ್ಯನ ಕೋಟೆ ಶಾಖಾ ಮಠ, ಮೊಳಕಾಲ್ಮೂರು, ಚಿತ್ರದುರ್ಗ ಜಿಲ್ಲೆ ಇವರು ಸಾನಿಧ್ಯ ವಹಿಸಿದ್ದರು.
 ವಿಜಯೋತ್ಸವದ ಸಮಾರಂಭದಲ್ಲಿ ಚಲವಾದಿ ಮಹಾಸಭಾ ಹಿರಿಯರಾದ ಸಾವಕ್ಕನವರು, ಕದಸಂಸ ಅಂಬೇಡ್ಕರ್ ವಾದ ಜಿಲ್ಲಾ ಹಾಗೂ ತಾಲೂಕು ಮುಖಂಡರಾದ ಶೇಷಪ್ಪ ಹುಣಸೊಡು, ಎಂ ಆರ್ ಶಿವಕುಮಾರ್ ಆಸ್ತಿ, ಹಕ್ಕಿ ಪಿಕ್ಕಿ ಸಮುದಾಯದ ಜಗ್ಗು, ಆನಂದಪ್ಪ.ಎ.ಡಿ, ಸೂಗೂರು ಪರಮೇಶ್, ರಂಗಸ್ವಾಮಿ.ಎಲ್, ಕಲ್ಲಿಹಾಳ್ ಹನುಮಂತಪ್ಪ ಮಹಿಳಾ ಮುಖಂಡ ಶ್ರೀಮತಿ ಮೀನೂ, ಮತ್ತಿತರು ಭಾಗವಹಿಸಿದ್ದರು.

S. N. Channabasappa ಜಕಣಾಚಾರಿಯಂತಹ ಮಹಾಶಿಲ್ಪಿಯ ಜನ್ಮನೀಡಿದ ಅವರ ತಾಯಿಗೆ ನಮ್ಮ ನಮನಗಳು- ಎಸ್.ಎನ್.ಚನ್ನಬಸಪ್ಪ.

0

S. N. Channabasappa ಅಮರಶಿಲ್ಪಿ ಜಕಣಾಚಾರಿಗಳು ಭಗವಂತ ಈ ನಾಡಿಗೆ ನೀಡಿದ ವರವಾಗಿದ್ದು, ಬೇಲೂರು, ಹಳೇಬೀಡಿನ ಶಿಲ್ಪಕಲೆಗಳು ಜಗತ್ಪ್ರಸಿದ್ದಿಯಾಗಲು ಇವರೇ ಕಾರಣಕರ್ತರು ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಸ್ಮರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಶ್ವಕರ್ಮ ಮಹಾಸಭಾ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಲ್ಪಕಲೆಯೇ ಇಲ್ಲದ ಜಗತ್ತನ್ನು ಊಹಿಸಲೂ ಸಾಧ್ಯವಿಲ್ಲ. ಶಿಲ್ಪಕಲೆ ಭಗವಂತ ನಮಗೆ ನೀಡಿದ ವರ. ಜಕಣಾಚಾರಿಯಂತಹ ಮಹಾನ್ ಶಿಲ್ಪಿಯನ್ನು ನೀಡಿದ ಅವರ ತಾಯಿಗೆ ನಮ್ಮ ನಮನಗಳು. ನಮ್ಮದು ಶಿಲ್ಪಕಲೆ, ಸಾಹತ್ಯ, ಭವ್ಯ ಸಾಂಸ್ಕೃತಿಕ ನೆಲಗಟ್ಟಿನ ನಾಡು. ಅನೇಕ ಸಾಧು-ಸಂತರು, ದಾರ್ಶನಿಕರು ಭವ್ಯವಾದ ಭಾರತ ದೇಶ ಕಟ್ಟಲು ತಮ್ಮನ್ನು ತಾವೇ ಧಾರೆ ಎರೆದುಕೊಂಡಿದ್ದು, ಅವರನ್ನೆಲ್ಲ ನಾವು ಸದಾ ಸ್ಮರಿಸಬೇಕು.
ಬೇಲೂರು, ಹಳೇಬೀಡು, ಸೋಮನಾಥಪುರ, ಶೃಂಗೇರಿ, ಬಾದಾಮಿ, ಬನವಾಸಿ ಹೀಗೆ ರಾಜ್ಯದೆಲ್ಲೆಡೆ ವಿಶೇಷ ಶಿಲ್ಪಕಲೆಗಳ ಸುಂದರ ಇತಿಹಾಸವನ್ನು ನಾವು ಹೊಂದಿದ್ದೇವೆ. ನಮ್ಮದು ದೇವ ನಿರ್ಮಿತ ದೇಶ, ಇದಕ್ಕೆ ಹುಟ್ಟಿದ ದಿನಾಂಕವಿಲ್ಲ. ಹಾಗೆಯೇ ಸಾವಿನ ದಿನಾಂಕವೂ ಇಲ್ಲದ ಚಿರಸ್ಥಾಯಿ ನಮ್ಮ ನೆಲೆವೀಡು. ಇದೇ ರೀತಿ ನಮ್ಮ ಅಮರಶಿಲ್ಪಿ ಜಕಣಾಚಾರಿಗಳೂ ಸಹ ಎಂದಿಗೂ ಅಮರ. ಇಂತಹ ಸಮಾಜದಲ್ಲಿ ನೀವು ಜನ್ಮ ಪಡೆದಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ.
ನಗರದ ಫ್ಲೈಓವರ್ ಅಥವಾ ಯಾವುದಾದರೂ ಮುಖ್ಯ ವೃತ್ತಕ್ಕೆ ಅಮರಶಿಲ್ಪಿ ಜಕಣಾಚಾರಿಗಳ ಹೆಸರನ್ನು ನಾಮಕರಣ ಮಾಡಬೇಕೆಂದು ಸಮಾಜದವರು ಮನವಿ ಮಾಡಿದ್ದೀರ. ಅಮರಶಿಲ್ಪಿಗಳ ಹೆಸರನ್ನು ನಾಮಕರಣ ಮಾಡುವುದು ನಮ್ಮ ಕರ್ತವ್ಯ ಕೂಡ ಆಗಿದೆ. ಇಲಾಖೆಯಿಂದ ಒಂದು ಪ್ರಸ್ತಾವನೆಯನ್ನು ಸಲ್ಲಿಸಿರಿ, ಖಂಡಿತವಾಗಿಯೂ ಅವರ ಹೆಸರನ್ನು ನಗರದ ಆಯಕಟ್ಟಿನ ಜಾಗಕ್ಕೆ ನಾಮಕರಣ ಮಾಡಲು ಸಹಕರಿಸುವುದಾಗಿ ಭರವಸೆ ನೀಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ್ ಮಾತನಾಡಿ, ಅಮರಶಿಲ್ಪಿ ಜಕಣಾಚಾರಿಗಳು ಈ ದೇಶದ ಶಿಲ್ಪಕಲೆಗೆ ಅಪಾರ ಕೊಡುಗೆಯನ್ನಿತ್ತಿದ್ದು ಎಂದಿಗೂ ಸ್ಮರಣೀಯರು. ಇಂತಹ ಸಮಾಜದಲ್ಲಿ ಜನಿಸಿದ ನೀವೇ ಪುಣ್ಯವಂತರು. ನಿಮ್ಮ ಸಮಾಜ ಯಾವತ್ತೂ ಇತರೆ ಸಮಾಜಗಳನ್ನು ಅತ್ಯಂತ ಗೌರವ, ಪ್ರೀತಿ, ವಿಶ್ವಾಸದಿಂದ ಕಾಣುತ್ತಾ ಬಂದಿದ್ದು, ಜಕಣಾಚಾರಿಯವರ ಹೆಸರನ್ನು ನಗರದ ಪ್ರಮುಖ ವೃತ್ತಕ್ಕೆ ನಾಮಕರಣ ಮಾಡಲು ತಮ್ಮ ಸಂಪೂರ್ಣ ಸಹಕಾರ ಇದ್ದು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.

S. N. Channabasappa ರಾಣೆಬೆನ್ನೂರಿನ ಶ್ರೀ ವಿಶ್ವವಿಭು ರೇಕಿ ಧ್ಯಾನಪೀಠದ ಮೌನೇಶ್ವರ ಆಚಾರ್ಯ ಇವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ವಿಶ್ವಕರ್ಮ ಪರಂಪರೆ ಪ್ರತಿಭಾವಂತರ, ತಂತ್ರಜ್ಞಾನರ, ಪಂಚವೇದದ, ಪಂಚ ಶಕ್ತಿ, ಪಂಚ ವಿಜ್ಞಾನಗಳ ಪರಂಪರೆ ಹೊಂದಿದೆ. ಶಿಲ್ಪಗಳ ರಚನೆಯಿಂದ ಸೌಂದರ್ಯದ ಬೀಡು ಮತ್ತು ಭಕ್ತಿಯ ನೆಲೆಯನ್ನಾಗಿ ಈ ನಾಡನ್ನು ರೂಪಿಸಿದೆ.
ತಮ್ಮ ಮಹಾನ್ ಶಿಲ್ಪಗಳ ಮೂಲಕ ಭಕ್ತಿಯ ಬೀಜ ಬಿತ್ತಿದ ಮಹತ್‌ಶಿಲ್ಪಿ ಜಕಣಾಚಾರಿ. ವಿಶ್ವಕರ್ಮ ಪರಂಪರೆ ಪ್ರಾಚೀನವಾದ ಐದು ವೇದಗಳನ್ನು ಮಾನ್ಯ ಮಾಡುತ್ತದೆ. ಮತ್ತು ಅದಕ್ಕೆ ತಕ್ಕಂತೆ ಆಚರಣೆಗಳು ಇರುತ್ತವೆ. ದೇವಶಿಲ್ಪ ಮತ್ತು ಮಾನವ ಶಿಲ್ಪ ಎಂಬ ಪ್ರಕಾರಗಳಿದ್ದು ವೇದಗಳ ಆಚರಣೆ ಅನುಸಾರ ಈ ಶಿಲ್ಪಕಲೆಗಳನ್ನು ಕೆತ್ತಲಾಗುತ್ತದೆ ಎಂದು ಮಾಹಿತಿ ನೀಡಿದ ಅವರು ಅಮರಶಿಲ್ಪಿ ಜಕಣಾಚಾರಿಗಳ ಜೀವನ ಚರಿತ್ರೆ ಕುರಿತು ವಿವರಣೆ ನೀಡಿದರು.

ಜಿಲ್ಲಾ ವಿಶ್ವಕರ್ಮ ಮಹಾಸಭಾದ ಗೌರವ ಅಧ್ಯಕ್ಷ ಸತ್ಯನಾರಾಯಣ, ಜಿಲ್ಲಾ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಅಗರದಹಳ್ಳಿ ನಿರಂಜನಮೂರ್ತಿ, ವಿಶ್ವಕರ್ಮ ಸಮಾಜದ ಅನ್ನಪೂರ್ಣ ಕಾಳಾಚಾರ್, ರಮೇಶ್, ಶ್ರೀನಿವಾಸಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್, ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

PM Scholarship Scheme ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ.

0

PM Scholarship Scheme 2025-26ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ದಿ:15/01/2026 ರವರೆಗೆ ವಿಸ್ತರಿಸಲಾಗಿದ್ದು, ಕೇಂದ್ರೀಯ ಸೈನಿಕ ಮಂಡಳಿ ಮತ್ತು ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನವನ್ನು ಪಡೆಯದಿರುವ ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿಯನ್ನು ಸಲ್ಲಿಸಬಹುದುದಾಗಿರುತ್ತದೆ.

PM Scholarship Scheme ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಲ್ಲಿ ಶುಲ್ಕ ರಹಿತ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಕೊನೆಯ ಜ. 15 ರೊಳಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಗೆ ಸಲ್ಲಿಸುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸುವುದು.

MESCOM ಜನವರಿ 3 & 4 .ಶಿವಮೊಗ್ಗ ರವೀಂದ್ರನಗರ , ವಿನಾಯಕ ನಗರ ಸುತ್ತಮುತ್ತ ವಿದ್ಯುತ್ ನಿಲುಗಡೆ. ಮೆಸ್ಕಾಂ ಪ್ರಕಟಣೆ.

0

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ 2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರುವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜ.03 ಮತ್ತು 04 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ರವೀಂದ್ರನಗರ, ವಿನಾಯಕನಗರ, ಹನುಮಂತನಗರ, ಗಾಂಧಿನಗರ, ಸವಳಂಗರಸ್ತೆ, ರಾಜೇಂದ್ರ ನಗರ, ವೆಂಕಟೇಶನಗರ ಹಾಗೂ ಇನ್ನಿತರೆ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Bike Accident ಪೊಲೀಸ್ ವಾಹನಕ್ಕೆ ಬೈಕ್ ಢಿಕ್ಕಿ. ಪೊಲೀಸ್ ಸಿಬ್ಬಂದಿಯಿಂದಲೇ ಸವಾರನಿಗೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ವ್ಯವಸ್ಥೆ.

0

Bike Accident ಶಿವಮೊಗ್ಗ ಜಿಲ್ಲೆಯ ಸಾಗರದ ಕೆಎಸ್ ಆರ್ ಟಿ ಸಿ ಡಿಪೋ ಮುಂಭಾಗದಲ್ಲಿ ಬೈಕ್ ಸವಾರನೊಬ್ಬ ಪೋಲಿಸ್ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.

ಪೋಲಿಸ್ ಜೀಪ್ನಲ್ಲಿ ಇದ್ದ ಹೆಡ್ ಕಾನ್ಸ್ಟೆಬಲ್ ಶ್ರೀದರ್ ಮತ್ತು ಚಾಲಕ ಮೇಘರಾಜ್ ರಿಂದ ಬೈಕ್ ಸವಾರನ ರಕ್ಷಣೆ ಮಾಡಲಾಗಿದೆ.

ಬೈಕ್ ಸವಾರರನಿಗೆ ಗಾಯಗಳಾಗಿದ್ದು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Karnataka Rajyotsava ಕನ್ನಡಿಗರ ಹೆಮ್ಮೆ ಮತ್ತು ಭಾಷಾ ಪ್ರೇಮ ಉಳಿಸುವಲ್ಲಿ ಹೋರಾಟ ಮಾಡಿದ್ದೇವೆ- ತಾಯ್ನಾಡು ರಾಘವೇಂದ್ರ.

0

Karnataka Rajyotsava ಕನ್ನಡ ನಾಡು, ನುಡಿ, ಗಡಿ ವಿಷಯದಲ್ಲಿ ತೊಂದರೆಗಳು ಎದುರಾದಾಗ ಪ್ರತಿಯೊಬ್ಬ ಕನ್ನಡಿಗರು ಜಾತಿ,ಮತಗಳ ತೊರೆದು ಒಗ್ಗಟ್ಟಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆಯ ಸಂಸ್ಥಾಪಕ ಅಧ್ಯಕ್ಷ ತಾಯ್ನಾಡು ರಾಘವೇಂದ್ರ ಕರೆ ನೀಡಿದರು.

ಸೊರಬ ತಾಲೂಕಿನ ಬಾಡದ ಬೈಲು ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1ರಂದು ಆಚರಿಸಲಾಗುತ್ತದೆ, ಇದು ರಾಜ್ಯದ ಸ್ಥಾಪನೆಯ ದಿನವಾಗಿದೆ, 1956ರಲ್ಲಿ ಭಾಷಾವಾರು ಪ್ರಾಂತ್ಯಗಳ ಪುನರ್‌ವಿಂಗಡಣೆಯ ನಂತರ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ರಾಜ್ಯವನ್ನು ರಚಿಸಲಾಗಿದ್ದು ಆದರೆ ಶಾಶ್ವತ ಕನ್ನಡ ಹೃದಯದಲ್ಲಿರಲು ವರ್ಷಪೂರ್ತಿ ಕನ್ನಡ ರಾಜ್ಯೋತ್ಸವ ಆಚರಿಸುವಂತಾಗಬೇಕು ಎಂದರು.

ನಮ್ಮ ಕರವೇ ಗಜ ಸೇನೆ ಸಂಘಟನೆಯು ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ. ರಾಜ್ಯದ ಏಕೀಕರಣ ಮತ್ತು ಅಭಿವೃದ್ಧಿಗೆ ಅನೇಕ ಹೋರಾಟಗಳನ್ನು ಮಾಡಿದೆ. ಕನ್ನಡಿಗರ ಹೆಮ್ಮೆ ಮತ್ತು ಭಾಷಾ ಪ್ರೇಮವನ್ನು ಉಳಿಸುವಲ್ಲಿ ಹೋರಾಟವನ್ನು ಮಾಡಿದ್ದೇವೆ ಎಂದರು.

Karnataka Rajyotsava ರಾಜ್ಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳು ನಡೆಸಿದ್ದೇವೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಪ್ರೋತ್ಸಾಹಿಸುವ ಹೋರಾಟ ಮಾಡಿದ್ದೇವೆ. ನಮ್ಮ ಕರವೇ ಗಜ ಸೇನೆ ಸಂಘಟನೆ ವತಿಯಿಂದ ಕೋವಿಡ್ ಅಂತ ಸಮಯದಲ್ಲಿ ಉಚಿತ 20 ಅಂಬುಲೆನ್ಸ್ ಸೇವೆಗಳನ್ನು ನೀಡಿದ್ದೇವೆ. ರಾಜ್ಯದಲ್ಲಿ 3000 ಸಾವಿರ ವಿವಿಧ ಕಂಪನಿಗಳ ಒಡಂಬಡಿಕೆಯೊಂದಿಗೆ ಕಿದ್ವಾಯಿ, ನಿಮಾನ್ಸ್ ಸೇರಿದಂತೆ ಕೆಲವು ಆಸ್ಪತ್ರೆಗಳಿಗೂ ಸಹ ಉಚಿತ ಸೇವೆಯನ್ನು ನೀಡುತ್ತಿದ್ದೇವೆ. ಇತ್ತೀಚಿಗೆ ಬೆಂಗಳೂರಿನಲ್ಲಿ ನಮ್ಮ ಕರವೇ ಗಜ ಸೇನೆ ವತಿಯಿಂದ ಸಂತೋಷ್ ಗುರೂಜೀ ರವರ ಮಾರ್ಗದರ್ಶನದಲ್ಲಿ ನಡೆದ ಡಿಂಡಿಮ ಉತ್ಸವದಲ್ಲಿ 96 ನಿಮಿಷದಲ್ಲಿ 3000 ಜನರೊಂದಿಗೆ ಬಾರಿಸು ಕನ್ನಡ ಡಿಂಡಿಮ ಹಾಡಿಗೆ ಗಿನ್ನಿಸ್ ದಾಖಲೆ ನೋಬೆಲ್ ಪ್ರಶಸ್ತಿಯು ಸಹ ಬಂದಿದೆ. ನೊಂದವರ ನೆರವಿಗೆ ಬಂದಿದ್ದೇವೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ್ದೇವೆ. ಕನ್ನಡಿಗರ ಮೇಲೆ ಅನ್ಯ ಅನ್ಯ ಬಾಷಿಕ ರಿಂದ ಆಗುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿದ್ದೇವೆ. ಹೀಗೆ ಕನ್ನಡ ನಾಡಿನಲ್ಲಿ ಕನ್ನಡಿಗರ ಸೇವೆಗೆ ಹಗಲಿರುಳು ನಮ್ಮ ಸಂಘಟನೆ ಸೆಮಿಸುತ್ತಿದೆ ಎಂದರು.‌

ಈ ಸಂದರ್ಭದಲ್ಲಿ ಕರವೇ ಗಜ ಸೇನೆ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಉಚಿತ ಪೆನ್ಸಿಲ್ ಪೆನ್ನುಗಳನ್ನು ನೀಡಲಾಯಿತು ಹಾಗೂ ಊರಿನ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜ ಸೇವಕ ಡಾ. ಎಚ್.ವಿ. ಜ್ಞಾನೇಶ್ ನೆರವೇರಿಸಿದರು. ನಿವೃತ್ತ ಐಎಎಸ್ ಅಧಿಕಾರಿ ಶಿವಪ್ಪ, ರಾಜ್ಯ ಕರವೇ ಕರವೇ ಗಜ ಸೇನೆ ಕಾರ್ಮಿಕ ಘಟಕದ ಅಧ್ಯಕ್ಷ ಕೇಶವ ಮೂರ್ತಿ ಪೆಟ್ಕರ್, ಕಾನೂನು ಘಟಕದ ಅಧ್ಯಕ್ಷ, ಜಗದೀಶ್ ಗೌಡ, ರಾಜ್ಯ ಕರವೇ ಗಜ ಸೇನೆ ಕಾರ್ಯದರ್ಶಿ ಎಚ್. ಆರ್. ತೀರ್ಥೇಶ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್, ಗ್ರಾಮ ಪಂಚಾಯಿತಿ ಸದಸ್ಯ ತಿರುಪತಿ, ತಾಲೂಕು ಗಜ ಸೇನೆ ಅಧ್ಯಕ್ಷ ಅಂಕಿತ್ ಗೌಡ, ಡಾ. ಪ್ರಭು ಕೆ. ಸಾಹುಕಾರ್, ಡಾ. ವಾಜಿದ್, ಕರವೇ ಗಜ ಸೇನೆ ಬಾಡದ ಬೈಲು ಅಧ್ಯಕ್ಷ. ಎಂ. ಲೋಕೇಶ್ ಸೇರಿದಂತೆ ಪ್ರಮುಖರಿದ್ದರು.

Shimoga News ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕರಾಗಿ ಎಸ್.ಪಿ.ಶೇಷಾದ್ರಿ ಆಯ್ಕೆ.

0

Shimoga News ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೆಶಕರಾಗಿ ಅವಿರೋಧವಾಗಿ ಆಯ್ಕೆಯಾದ ನಮ್ಮ ಸಂಘದ ನಿರ್ದೇಶಕರೂ ಹಾಗೂ ಕರ್ನಾಟಕ ರಾಜ್ಯ ಜೀವವೈವಿಧ್ಯ ಮಂಡಳಿಯ ಮಾಜಿ ಛೇರ್ಮನ್ ಆದಂತಹ ಶ್ರೀ.ಎಸ್.ಪಿ. ಶೇಷಾದ್ರಿ ಯವರನ್ನು ಶಿವಮೊಗ್ಗ ಹೌಸಿಂಗ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ.ಎಸ್.ಕೆ.ಮರಿಯಪ್ಪನವರು, ಸನ್ಮಾಸಿದರು.

Shimoga News ಈ ಸಂದರ್ಭದಲ್ಲಿ ಸೊಸೈಟಿಯ ಖಜಾಂಚಿಯಾದ ಶ್ರೀ.ಕೆ.ರಂಗನಾಥ್, ನಿರ್ದೇಶಕರಾದ ಶ್ರೀ.ಹೆಚ್.ಬಿ.ನಟರಾಜಶಾಸ್ತ್ರಿ, ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Department of Soldiers Welfare and Rehabilitation ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ.

0

Department of Soldiers Welfare and Rehabilitation 2025-26ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ದಿ:15/01/2026 ರವರೆಗೆ ವಿಸ್ತರಿಸಲಾಗಿದ್ದು, ಕೇಂದ್ರೀಯ ಸೈನಿಕ ಮಂಡಳಿ ಮತ್ತು ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನವನ್ನು ಪಡೆಯದಿರುವ ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿಯನ್ನು ಸಲ್ಲಿಸಬಹುದುದಾಗಿರುತ್ತದೆ.

Department of Soldiers Welfare and Rehabilitation ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಲ್ಲಿ ಶುಲ್ಕ ರಹಿತ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಕೊನೆಯ ಜ. 15 ರೊಳಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಗೆ ಸಲ್ಲಿಸುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸುವುದು

Inner Wheel Club of Shimoga ವಿದ್ಯಾರ್ಥಿಗಳು ಗುರುಹಿರಿಯರೊಂದಿಗೆಗೌರವದಿಂದ ನಡೆದುಕೊಳ್ಳಬೇಕು- ವಾಣಿ ಪ್ರವೀಣ್

0

Inner Wheel Club of Shimoga ವಿದ್ಯಾರ್ಥಿಗಳು ಗುರು ಹಿರಿಯರೊಂದಿಗೆ ಗೌರವದಿಂದ ನಡೆದುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಇನ್ನರ್ ವ್ಹೀಲ್ ಶಿವಮೊಗ್ಗ ಪೂರ್ವ ಕ್ಲಬ್ ಮಾಜಿ ಅಧ್ಯಕ್ಷೆ ವಾಣಿ ಪ್ರವೀಣ್ ಹೇಳಿದರು.

ಸರ್ವೋದಯ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ನಿರಂತರ ಪರಿಶ್ರಮ ವಹಿಸಿ ಅಧ್ಯಯನ ನಡೆಸಿದರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ತಿಳಿಸಿದರು.

ಕಿರುತೆರೆ ನಟ, ರಂಗಭೂಮಿ ಕಲಾವಿದ ಚಂದ್ರಶೇಖರ ಶಾಸ್ತ್ರಿ ಮಾತನಾಡಿ, ಬಡತನವನ್ನು ಮೆಟ್ಟಿ ನಿಲ್ಲಬಹುದಾದ ಶಕ್ತಿಯನ್ನು ನೀಡಬಹುದಾದ ಏಕೈಕ ಮಾರ್ಗವೆಂದರೆ ಅದು ಶಿಕ್ಷಣ ಮಾತ್ರ ಎಂದು ತಿಳಿಸಿದರು.

ಶಿಕ್ಷಣ ಸಂಸ್ಥೆಯ ಖಜಾಂಚಿ ಚಂದ್ರಹಾಸ್ ಪಿ.ರಾಯ್ಕರ್ ಸಮಾರಂಭದ ಸಮಾರೋಪ ಭಾಷಣ ನೆರವೇರಿಸಿದರು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಬಹಳ ಮುಖ್ಯವಾಗುತ್ತವೆ ಎಂದರು.

Inner Wheel Club of Shimoga ಸರ್ವೋದಯ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಎಚ್.ಎಂ.ಮಧು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಲಭ್ಯವಾಗುವ ಸ್ಪರ್ಧಾತ್ಮಕ ಹಾಗೂ ಸಾಂಸ್ಕೃತಿಕ ಮತ್ತು ಸಾಮಾಜಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ಮುನ್ನಡೆದಾಗ ಮಾತ್ರ ಶಿಕ್ಷಣದ ಉದ್ದೇಶ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಕಿರುತೆರೆ ನಟ, ರಂಗಭೂಮಿ ಕಲಾವಿದ ಚಂದ್ರಶೇಖರ ಶಾಸ್ತ್ರಿ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಪಿ.ಜಿ.ರವಿಕುಮಾರ್ ಪ್ರಾಸ್ತಾವಿಕ ಭಾಷಣ ಮಾಡಿದರು. ವಿದ್ಯಾರ್ಥಿ ಸಂಘದ ವಿದ್ಯಾರ್ಥಿ ಕಾರ್ಯದರ್ಶಿ ಅಕ್ಷತಾ ಉಪಸ್ಥಿತರಿದ್ದರು.

Sport of athletics ರಾಷ್ಟ್ರೀಯ ಅಥ್ಲೆಟಿಕ್ ಸ್ಪರ್ಧೆಗೆ ಶಿವಮೊಗ್ಗದ ಎಸ್.ಆಕಾಶ್ ಆಯ್ಕೆ.

0

Sport of athletics ಮಂಗಳೂರಿನಲ್ಲಿ ನಡೆದ ಆಲ್ ಇಂಡಿಯಾ ಯೂನಿ ವರ್ಸಿಟಿ, ನ್ಯಾಷನಲ್ ಅಥ್ಲೆಟಿಕ್ಸ್ ಆಯ್ಕೆ ಪ್ರಕ್ರಿಯ 400 ಮೀ. ಮತ್ತು 4×400 ಅಥ್ಲೆಟಿಕ್ಸ್ ರಿಲೆಯಲ್ಲಿ ಶಿವಮೊಗ್ಗ ನಗರದ ಪೆಸಿಟ್ ಕಾಲೇಜಿನ ಎಂಬಿಎ ವಿದ್ಯಾರ್ಥಿ ಎಸ್. ಆಕಾಶ್ ಅವರು ಆಯ್ಕೆಯಾಗಿದ್ದಾರೆ.
ಈ ಪ್ರತಿಭಾನ್ವಿತ ನಗರದ ಗಾಂಧಿಬಜಾರಿನ ಶ್ರೀ ಕಾಳಿಕಾಪರಮೇಶ್ವರಿ ಸೊಸೈಟಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಎ. ಸತೀಶ್ ಆಚಾರ್ ಮತ್ತು ಸುನಿತಾ ದಂಪತಿಗಳ ಪುತ್ರರಾಗಿದ್ದಾರೆ. ಇವರು ನಾಗಾರ್ಜುನ್ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ