Wednesday, May 6, 2026
Wednesday, May 6, 2026
Home Blog Page 39

Keladi Shivappa Nayaka Agriculture University ಏಪ್ರಿಲ್ 8 ರಿಂದ ಶಿವಮೊಗ್ಗದ ಕೃಷಿ ಕಾಲೇಜಿನ ಆವರಣದಲ್ಲಿ ವಿವಿಧ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ.

0

Keladi Shivappa Nayaka Agriculture University ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಏಪ್ರಿಲ್ 08 ರಿಂದ ಮೇ 07 ರವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ದಿ ತರಬೇತಿಯನ್ನು ಆಯೋಜಿಸಲಾಗಿದೆ.

ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್ ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ್ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಪ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದ್ದು, ಆಸಕ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಏ.07 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕು. ತರಬೇತಿ ಸಮಯದಲ್ಲಿ ಊಟ ಮತ್ತು ವಸತಿ ಸೌಲಭ್ಯ ಇರುವುದಿಲ್ಲ.
Keladi Shivappa Nayaka Agriculture University ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. ಮೊ.ಸಂ. I 9449187763 ಮತ್ತು ಜಯಶಂಕರ 9686555897 ಇವರುಗಳನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Shivamogga Police ಏಪ್ರಿಲ್ 6. ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನಗಳ ಬಹಿರಂಗ ಹರಾಜು.

0

Shivamogga Police ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 08 ವಿವಿಧ ವಾಹನಗಳನ್ನು 1ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಶಿವಮೊಗ್ಗರವರ ಆದೇಶದಂತೆ ಏ.06 ರ ಬೆಳಿಗ್ಗೆ 10 ಗಂಟೆಗೆ ಜಯನಗರ ಠಾಣಾ ಆವರಣದಲ್ಲಿ ಯಥಾಸ್ಥಿತಿಯಾಗಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ನಿಗಧಿತ ಅವಧಿಯಲ್ಲಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

Breaking News ಸಿಡಿಲು ಬಡಿದು ಶಿವಮೊಗ್ಗ ಸನಿಹದ ರಾಮನಗರದಲ್ಲಿ ಚಿಕನ್ ಅಂಗಡಿ ಮಾಲೀಕರ ಸಾವು.

0

Breaking News ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲೀಕ ಸಾವನಪ್ಪಿದ್ದಾನೆ. ಸೋಮವಾರ ಸುರಿದ ಸಿಡಿಲು, ಗುಡುಗು ಮಳೆಗೆ ವ್ಯಕ್ತಿ ಬಲಿಯಾಗಿದ್ದಾನೆ.
ಶೇಕ್ ಮುಜೀಬ್ ಎಂಬ 45 ವರ್ಷದ ವ್ಯಕ್ತಿ ಶಿವಮೊಗ್ಗ ತಾಲೂಕಿನ ರಾಮನಗರದಲ್ಲಿ ಚಿಕನ್ ಅಂಗಡಿಯಲ್ಲಿದ್ದಾಗ ಸಿಡಿಲು ಬಡಿದಿದೆ. ಸಿಡಿಲು ಬಡಿದ ಹೊಡೆತಕ್ಕೆ ಚಿಕನ್ ಅಂಗಡಿ ಮಾಲೀಕ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Breaking News ಶೇಕ್ ಮುಜೀಬ್ ಹಾರನಹಳ್ಳಿ ನಿವಾಸಿಯಾಗಿದ್ದು, ರಾಮನಗರದಲ್ಲಿ ಚಿಕನ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಅಂಗಡಿ ಪಕ್ಕದಲ್ಲಿದ್ದ ಮರಕ್ಕೆ ಸಿಡಿಲು ಬಡಿದು ಅಲ್ಲೇ ಇದ್ದ
ಶೇಕ್ ಮುಜೀಬ್ ಗೆ ಸಿಡಿಲು ಬಡಿದಿದೆ.

Madhu Bangarappa ಸೊರಬದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಗಳನ್ನವಿತರಿಸಿದ ಸಚಿವ ಮಧು ಬಂಗಾರಪ್ಪ.

0

Madhu Bangarappa  ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ಜನತೆಯ ಸುರಕ್ಷತೆ ಹಾಗೂ ಸಾರ್ವಜನಿಕ ಸೇವೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಹಾಗೂ ವಿವಿಧ ಇಲಾಖೆಗಳ ಅನುದಾನದಡಿ ಮಂಜೂರಾದ ನಾಲ್ಕು ಹೊಸ ವಾಹನಗಳನ್ನು ಇಂದು ಸೊರಬ ಪೊಲೀಸ್ ಠಾಣೆಯ ಆವರಣದಲ್ಲಿ ಲೋಕಾರ್ಪಣೆಗೊಳಿಸಲಾಯಿತು.

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರು ನೂತನ ವಾಹನವನ್ನು ಚಲಾಯಿಸಿದರು.

ಅವರೊಂದಿಗೆ ಪ್ರಯಾಣಿಸುವ ಮೂಲಕ ವಾಹನವನ್ನು ಅಧಿಕೃತವಾಗಿ ಚಾಲನೆ ಮಾಡಲಾಯಿತು.

Madhu Bangarappa ಪೊಲೀಸ್ ಇಲಾಖೆಗೆ ಹೊಸ ವಾಹನಗಳ ಸೇರ್ಪಡೆಯಿಂದಾಗಿ ಅಪರಾಧ ತಡೆ ಮತ್ತು ತುರ್ತು ಸಂದರ್ಭಗಳಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಲು ಅನುಕೂಲವಾಗಲೆಂದು ಸೊರಬ ಪೊಲೀಸ್ ಠಾಣೆಗೆ ಎರಡು ವಾಹನಗಳು, ಆನವಟ್ಟಿ ಭಾಗದ ಜನರ ಸುರಕ್ಷತೆಗಾಗಿ ಒಂದು ವಾಹನ ಹಾಗೂ ಪಶುಪಾಲನಾ ಇಲಾಖೆಗೆ ಒಂದು ವಾಹನ ಸೇರಿದಂತೆ ಒಟ್ಟು ನಾಲ್ಕು ವಾಹನಗಳನ್ನು ನೀಡಲಾಗಿದೆ. ಈ ವಾಹನಗಳು ಇಂದಿನಿಂದಲೇ ಕಾರ್ಯಾರಂಭ ಮಾಡಲಿವೆ.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಪ್ರಮುಖರು ಉಪಸ್ಥಿತರಿದ್ದರು.

Backward Classes Welfare Department ಪ್ರತಿಷ್ಠಿತ ಶಾಲೆಗಳ 6 ನೇ ತರಗತಿಗೆ ಅರ್ಹತಾ ಪರೀಕ್ಷೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ.

0

Backward Classes Welfare Department  2026-27 ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಪ್ರತಿಷ್ಟಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆ ಮೂಲಕ 6ನೇ ತರಗತಿಯ 18 ಸ್ಥಾನಗಳಿಗೆ ದಾಖಲಿಸಿಕೊಳ್ಳಲು 5ನೇ ತರಗತಿಯಲ್ಲಿ 60% ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಏ. 15 ರಿಂದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರುಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 04 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Backward Classes Welfare Department  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಎಲ್ಲಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಗಳ ಕಚೇರಿ, ದೂ.ಸಂ: 08182-200266/ 9482762350/ 7022796636 ಗಳನ್ನು ಸಂಪರ್ಕಿಸುವುದು.

K. H. Muniyappa ಪ್ರತಿದಿನ ರಾಜ್ಯದಲ್ಲಿ 4 ಲಕ್ಷ ಗೃಹಬಳಕೆ ಮತ್ತು 18 ಸಾವಿರ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ವಿತರಣೆ- ಸಚಿವ ಕೆ.ಹೆಚ್. ಮುನಿಯಪ್ಪ

0

K. H. Muniyappa ರಾಜ್ಯಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ ಸುಮಾರು 18 ಸಾವಿರ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ. ಗೃಹ ಬಳಕೆದಾರರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ.

K. H. Muniyappa ನಗರ ಪ್ರದೇಶಗಳ ಗೃಹ ಬಳಕೆದಾರರಿಗೆ ಪ್ರತಿ 25 ದಿನಗಳಿಗೊಮ್ಮೆ ಒಂದು ಸಿಲಿಂಡರ್‌ ವಿತರಿಸಲಾಗುತ್ತಿದ್ದರೆ, ಗ್ರಾಮೀಣ ಪ್ರದೇಶದಲ್ಲಿ 45 ದಿನಗಳಿಗೊಮ್ಮೆ ಒಂದು ಸಿಲಿಂಡರ್‌ ಪೂರೈಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

Shivamogga Police ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಿಗೆ ರಿಫ್ಲೆಕ್ಟರ್ ಕ್ಯಾಟ ಐಸ್ & ಸೋಲಾರ್ ರೋಡ್ ಸ್ಟಡ್ ಅಳವಡಿಕೆ.

0

Shivamogga Police ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ ವಾಹನ ಸವಾರರ ಸುರಕ್ಷಿತ ಸಂಚಾರಕ್ಕಾಗಿ ಮತ್ತು ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಗೂ ರಾತ್ರಿ ಸಮಯದಲ್ಲಿ ರಸ್ತೆಯು ಸ್ಪಷ್ಟವಾಗಿ ಕಾಣುವಂತೆ ಮಾಡಲು ಮತ್ತು ಗೋಚರತೆಯನ್ನು ಹೆಚ್ಚಿಸುವ ಹಿನ್ನಲೆಯಲ್ಲಿ, ಶಿವಮೊಗ್ಗ ನಗರದ 14 ಟ್ರಾಫಿಕ್ ಸಿಗ್ನಲ್ ಸರ್ಕಲ್ ಗಳಲ್ಲಿ ಹಾಗೂ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳು ಮತ್ತು ರಸ್ತೆ ಹಂಪ್ಸ್ ಇರುವ ಸ್ಥಳಗಳಲ್ಲಿ ರಿಫ್ಲೆಕ್ಟರ್ ಕ್ಯಾಟ್ ಐಸ್ ಗಳನ್ನು ಮತ್ತು ಸೋಲಾರ್ ರೋಡ್ ಸ್ಟಡ್ ಗಳನ್ನು ಅಳವಡಿಸಲಾಗಿರುತ್ತದೆ.

Shivamogga Police ಸಾರ್ವಜನಿಕರು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಜೊತೆಗೆ, ಎಲ್ಲಾ ವಾಹನ ಸವಾರರು ತಮ್ಮ ಸುರಕ್ಷತೆಗಾಗಿ ಅಗತ್ಯ ಸಂಚಾರ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.

JCI Shivamogga ರಕ್ತದಾನದಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿ- ಸತೀಶ್ ಚಂದ್ರ.

0

JCI Shivamogga ರಕ್ತದಾನ ಮಾಡುವುದರಿಂದ ಹೃದಯಾಘಾತ ಪ್ರಮಾಣ ಕಡಿಮೆ ಆಗುವ ಜತೆಯಲ್ಲಿ ಸದಾ ಆರೋಗ್ಯದಿಂದ ಇರಲು ಸಾಧ್ಯ ಎಂದು ಜೆಸಿಐ ವಲಯ ಮಾಜಿ ಉಪಾಧ್ಯಕ್ಷ ಸತೀಶ್ ಚಂದ್ರ ಹೇಳಿದರು.

ಶಿವಮೊಗ್ಗ ನಗರದ ಎಲ್‌ಎಲ್‌ಆರ್ ರಸ್ತೆಯಲ್ಲಿರುವ ಎಸ್‌ಎಸ್ ಎಂಟರ್‌ಪ್ರೈಸಸ್ ಆವರಣದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ, ಪರಿಪೂರ್ಣ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ವೃತ್ತಿಯ ಜೊತೆಗೆ ಸಮಾಜ ಸೇವೆಯು ಅತಿ ಮುಖ್ಯ. ರಕ್ತದಾನ ಮಾಡುವುದು ಪುಣ್ಯದ ಕೆಲಸ. ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ರಕ್ತದ ಬೇಡಿಕೆ ಇದ್ದು, ಅವುಗಳನ್ನು ನೀಗಿಸಲು ಇಂತಹ ರಕ್ತದಾನ ಶಿಬಿರ ತುಂಬಾ ಅವಶ್ಯಕತೆ ಇದೆ ಎಂದು ತಿಳಿಸಿದರು.

ಮೂಢನಂಬಿಕೆಯಿಂದ ಸಾಕಷ್ಟು ಜನ ರಕ್ತದಾನ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ದಾನದಿಂದ ಹೊಸ ರಕ್ತ ನಮ್ಮ ದೇಹದಲ್ಲಿ ಉತ್ಪತ್ತಿಯಾಗಿ ಸದಾ ಆರೋಗ್ಯವಂತರಾಗಿರುತ್ತೇವೆ ಎಂದು ಹೇಳಿದರು.

ಸ್ವಯಂಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ ಮಾಜಿ ಅಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ನಾವು ಮಾಡುವ ಪವಿತ್ರವಾದ ರಕ್ತದಾನದಿಂದ ನಾಲ್ಕು ಜನರ ಪ್ರಾಣವನ್ನು ಉಳಿಸಬಹುದಾಗಿದೆ. ಆದ್ದರಿಂದ ಪ್ರತಿಯೊಬ್ಬ ಯುವಜನರು ರಕ್ತದಾನ ಮಾಡುವುದರ ಮುಖಾಂತರ ಸದೃಢವಾದ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡೋಣ. ರಕ್ತದಾನದಿಂದ ಏಕಾಗ್ರತೆ ಜಾಸ್ತಿಯಾಗುತ್ತದೆ ಎಂದು ಹೇಳಿದರು.

ಮೈತ್ರಿ ಮೈ ಜುವೆಲರ್ಸ್ ಸಿಇಒ ಸೆಂಥಿಲ್ ವೇಲನ್ ಮಾತನಾಡಿ, ಸಮಾಜದಲ್ಲಿ ಅತ್ಯಂತ ಶ್ರೇಷ್ಠವಾದ ದಾನ ಎಂದರೆ ಅದು ರಕ್ತದಾನ. ನಾವು ರಕ್ತದಾನ ಮಾಡುವುದರ ಜೊತೆಗೆ ಇತರರನ್ನು ಪ್ರೇರೇಪಿಸಬೇಕು ಎಂದು ತಿಳಿಸಿದರು.

JCI Shivamogga  ಜೆಸಿಐ ಸಂಸ್ಥೆಯ ವಲಯ ನಿರ್ದೇಶಕ ಜಿ.ಗಣೇಶ ಮಾತನಾಡಿ, ಕೇವಲ ದಾನಿಗಳ ದೇಹದಿಂದ ಮಾತ್ರ ರಕ್ತವನ್ನು ದಾನವಾಗಿ ಪಡೆಯಬಹುದು. ಕೃತಕವಾಗಿ ರಕ್ತವನ್ನು ಸೃಷ್ಟಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಸಂತೋಷ್ ಮಾತನಾಡಿ, ಜೆಸಿಐ ಸಂಸ್ಥೆ ವತಿಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳ ಜೊತೆಗೆ ರಕ್ತದಾನದ ಬಗ್ಗೆ ಅರಿವು ಜಾಗೃತಿ ಹಾಗೂ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

120 ಬಾರಿ ರಕ್ತದಾನ ಮಾಡಿದ ಧರಣೇಂದ್ರ ದಿನಕರ್, 47 ಬಾರಿ ರಕ್ತದಾನ ಮಾಡಿದ ಜಿ.ವಿಜಯಕುಮಾರ್, 51 ಬಾರಿ ರಕ್ತದಾನ ಮಾಡಿದ ಸೆಂಥಿಲ್ ವೆಲನ್ ಅವರಿಗೆ ಸನ್ಮಾನಿಸಲಾಯಿತು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ನಿರ್ದೇಶಕ ಮಂಜುನಾಥ್ ಅಪ್ಪಾಜಿ, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಪದಾಧಿಕಾರಿಗಳು ಹಾಗೂ ರಕ್ತದಾನಿಗಳು ಉಪಸ್ಥಿತರಿದ್ದರು.

S. N. Channabasappa ಭಗವಾನ್ ಮಹಾವೀರರು ಮನುಕುಲಕ್ಕೇ ಮಾದರಿ- ಶಾಸಕ ಎಸ್.ಎನ್.ಚನ್ನಬಸಪ್ಪ.

0

S. N. Channabasappa ತ್ಯಾಗ ಎಂದರೆ ಏನೆಂದು ತೋರಿಸಿದ ಭಗವಾನ್ ಮಹಾವೀರರು ಅಹಿಂಸೆ ಮತ್ತು ಸತ್ಯದ ಮಾರ್ಗವನ್ನು ಜಗತ್ತಿಗೆ ಸಾರಿದ ಮಹಾನ್ ಜ್ಞಾನಿ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ ಸಮಾಜದ ವಿವಿಧ ಸಂಘಟನೆಗಳು ಶಿವಮೊಗ್ಗ ಇವರುಗಳ
ಸಂಯುಕ್ತಾಶ್ರಯದಲ್ಲಿ ಸೋಮವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಾರಾಜರಾಗಿದ್ದ ವ್ಯಕ್ತಿ, ತ್ಯಾಗಮಯಿಯಾಗಿ ಜೀವನದ ಪರಮೋಚ್ಚ ಮೌಲ್ಯಗಳನ್ನು ಸಮಾಜಕ್ಕೆ ನೀಡಿದರು. 24 ನೇ ತೀರ್ಥಂಕರರಾಗಿ ಜೀವನಮೌಲ್ಯಗಳನ್ನು, ವಿಚಾರಗಳನ್ನು‌ ಧಾರೆ ಎರೆದರು.
ತಮ್ಮ 30ನೇ ವಯಸ್ಸಿನಲ್ಲಿ ಸಂಸಾರ ಸುಖವನ್ನು ತ್ಯಜಿಸಿ ಸನ್ಯಾಸಿಯಾದ ಇವರು
12 ವರ್ಷಗಳ ಕಾಲ ಕಠಿಣ ತಪಸ್ಸು ಮಾಡಿದ ನಂತರ, ಅವರಿಗೆ ಪರಿಪೂರ್ಣ ಜ್ಞಾನ ಪ್ರಾಪ್ತಿಯಾಗುತ್ತದೆ. ಇಂದ್ರಿಯಗಳನ್ನು ಗೆದ್ದಿದ್ದರಿಂದ ಅವರನ್ನು ಜಿನ’ ಮತ್ತು ಮಹಾವೀರ ಎಂದು ಕರೆಯಲಾಗುತ್ತದೆ.
ಅವರು ಅವರಿಗಾಗಿ ಬದುಕಲಿಲ್ಲ.‌ ಸಮಾಜಕ್ಕಾಗಿ ಬದುಕಿದರು. ಅಹಿಂಸೆ, ಸತ್ಯ, ಅಸ್ತೇಯ, ಅಪರಿಗ್ರಹ, ಬ್ರಹ್ಮಚರ್ಯ ಈ ಪಂಚ ಮಹಾವ್ರತಗಳನ್ನು ಅನುಸರಿಸುವ ಮೂಲಕ‌ ಮನುಕುಲಕ್ಕೇ ಮಾದರಿಯಾದ ಇವರು, ಎಲ್ಲರೂ ಇವನ್ನು ಅನುಸರಿಸುವಂತೆ ಕರೆ ನೀಡಿದರು.
ಆಸ್ತಿ ಮಾಡುವುದಕ್ಕಿಂತ ನಮ್ಮ ಮಕ್ಕಳನ್ನೇ ಸಮಾಜದ ಆಸ್ತಿ‌ ಮಾಡುವಂತೆ ತಿಳಿಸಿ ಹೋದ ಇವರೇ ಸಮಾಜಕ್ಕೆ ಒಂದು ಸಂದೇಶವಾಗಿದ್ದಾರೆ.
ಜೈನ ಸಮಾಜಕ್ಕೆ ಕೇಳಿದ್ದನ್ನು ಕೊಡುವಂತಹ ಶಕ್ತಿ ಇದ್ದು, ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದ ಅವರು ತ್ಯಾಗವೇ ನಮ್ಮ ಧ್ಯೇಯವಾಗಬೇಕು ಎಂದರು.
ಸಾಗರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಿ.ಟಿ.ಸ್ವಾಮಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಮಹಾವೀರರು ಜೈನ ಧರ್ಮದ 24ನೇ ಮತ್ತು ಕೊನೆಯ ತೀರ್ಥಂಕರರಾಗಿದ್ದು ಇವರ ಮೂಲ ಹೆಸರು ವರ್ಧಮಾನ.
ಅವರ ಸಂದೇಶಗಳನ್ನು ಮೆಲುಕು ಹಾಕುವ ದಿನ ಇದಾಗಿದೆ. ಅವರ ಬಗ್ಗೆ ಮಾತನಾಡುತ್ತಾ ಮನಸ್ಸುಗಳನ್ನು ಕಟ್ಟುವ, ಬೆಸೆಯುವ ಕಲ್ಯಾಣ ಕಾರ್ಯ ಆಗಬೇಕಿದೆ.
ಸತ್ಯವನ್ನು ಹುಡುಕಾಡಿದವರು ಮಹಾವೀರರು. ಸುಳ್ಳು, ಅಸತ್ಯದ ಕಾಲದಲ್ಲಿ ಸತ್ಯಕ್ಕಾಗಿ, ಜನರ ಕಲ್ಯಾಣಕ್ಕಾಗಿ ಎಲ್ಲವನ್ನು ತ್ಯಾಗ ಮಾಡಿದರು.
ಆತ್ಮ ಸಂಬಂಧಕ್ಕೆ ಜೈನ‌ ಧರ್ಮ ಬಹಳ ಪ್ರಾಮುಖ್ಯತೆ ನೀಡುತ್ತದೆ.
ಪಂಚಾನಣುವ್ರತ ಆಚರಣೆಯನ್ನು ಹೃದಯಕ್ಕೆ ಇಳಿಸಿಕೊಂಡಾಗ ನಿಜವಾದ ಮನುಷ್ಯರಾಗುತ್ತೇವೆ.
ಬದುಕನ್ನು‌ ಬದುಕಲಿಕ್ಕೆ ಬಿಡಬೇಕೆಂಬ ಸತ್ಯ ಸಾರಿದ್ದಾರೆ. ಇವತ್ತಿನಿಂದಲೇ ಅವರ ಆಲೋಚನೆಗಳನ್ನು ಅಳವಡಿಸಿಕೊಂಡರೆ ನಮ್ಮ ಜೀವನ ಸಾರ್ಥಕ.
S. N. Channabasappa ವೇದಗಳ ಕಾಲಕ್ಕಿಂತ ಮುಂಚೆ ಜೈನ ಧರ್ಮ ಅಸ್ತಿತ್ವದಲ್ಲಿ ಇತ್ತು. ಜೈನ ಧರ್ಮ ತ್ಯಾಗ, ಅಹಿಂಸೆಯ ಅನುಸರಣೆಯನ್ನು ಯಾವತ್ತೂ ಮಾಡುತ್ತಾ ಬಂದಿದೆ.
ಭಗವಾನ್ ಮಹಾವೀರರು ಕರ್ಮ ಸಿದ್ಧಾಂತಗಳನ್ನು ಬಹಳ ಸೂಕ್ಷ್ಮವಾಗಿ ಹೇಳಿದ್ದಾರೆ.‌ ಬದುಕನ್ನು ಶಾಂತ ಮತ್ತು ಸುಂದರಗೊಳಿಸುವ ವಿಚಾರಧಾರೆಗಳನ್ನು ನೀಡಿದ್ದಾರೆ. ನಾವು ಮುಂದಿನ ಪೀಳಿಗೆಗೆ, ಮಕ್ಕಳಿಗೆ ಮಹಾವೀರರ ಅಹಿಂಸಾ ತತ್ವ, ತ್ಯಾಗ, ಸತ್ಯದಂತಹ ವಿಚಾರಗಳನ್ನು ಧಾರೆ ಎರೆಯಬೇಕಿದೆ. ಸಂಬಂಧಗಳನ್ನು ಬೆಸೆದು, ಸಂಸ್ಕಾರವಂತರಾಗಬೇಕಿದೆ.
ಪ್ರಸ್ತುತದ ಸಂದರ್ಭಕ್ಕೆ ಮದ್ದು ಮಹಾವೀರರ ಅಹಿಂಸಾ ತತ್ವದಲ್ಲಿದ್ದು ಎಲ್ಲೆಡೆ ಇದನ್ನು ಹರಡಬೇಕಿದೆ ಎಂದು ಕರೆ ನೀಡಿದರು.
ಪ್ರಸ್ತುತ ಜೈನರ ಜನಸಂಖ್ಯೆ ಕಡಿಮೆ ಇದೆ. ದೇಶದಲ್ಲಿ ಸುಮಾರು ೪೫ ರಿಂದ ೫೦ ಲಕ್ಷ ಜನ ಮಾತ್ರ ಇದ್ದಾರೆ.‌ ಆದರೆ ಜೈನರು ವ್ಯಾಪಾರ, ಉದ್ಯೋಗ, ಜಿಎಸ್ ಟಿ ಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಶೇ. ೩೨.೫ ರಷ್ಟು ಆರ್ಥಿಕ ಬೆಂಬಲ‌ ದೇಶಕ್ಕೆ ನೀಡಿದ್ದಾರೆ.
ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸುವ ಹಾಗೂ ವಿವಿಧ ಕಾರ್ಯಕ್ರಮಗಳ ಮೂಲಕ ಮಕ್ಕಳಿಗೆ ಮಹಾವೀರರ ಬಗ್ಗೆ ತಿಳಿಸಬೇಕಿದೆ ಎಂದರು.
ಜಿಲ್ಲಾ ದಿಗಂಬರ ಜೈನ ಸಂಘದ ಅಧ್ಯಕ್ಷರಾದ ಜಯರಾಜ ಬಿ ಪಾಂಡಿ, ಸಮಾಜದ ಮುಖಂಡರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್, ಅಧಿಕಾರಿಗಳು ಪಾಲ್ಗೊಂಡಿದ್ದರು.

“Scotch” National Award ರಾಜ್ಯ ಸಾರಿಗೆ ಸಂಸ್ಥೆಗೆ “ಸ್ಕಾಚ್ “ರಾಷ್ಟ್ರೀಯ ಪ್ರಶಸ್ತಿ.

0

“Scotch” National Award ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮಕ್ಕಾಗಿ ಕೆಎಸ್‌ಆರ್‌ಟಿಸಿಗೆ ಸ್ಕಾಚ್‌ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ತಂತ್ರಜ್ಞಾನ ಆಧಾರಿತ ನೇಮಕಾತಿ ವ್ಯವಸ್ಥೆ, ಸ್ವಯಂ ಚಾಲಿತ ಚಾಲನಾ ಪರೀಕ್ಷೆ, ಆನ್‌ಲೈನ್‌ ಪರೀಕ್ಷೆಗಳು, ದಾಖಲೆಗಳ ಡಿಜಿಟಲ್ ಪರಿಶೀಲನೆ, ವೆಬ್‌ ಕ್ಯಾಸ್ಟಿಂಗ್, ಅಟೋ ಜನರೇಟಡ್ ಅಂಕಪಟ್ಟಿ ನೀಡುವ ಮೂಲಕ 2,000 ಚಾಲಕ‌/ ನಿರ್ವಾಹಕರು, 300 ತಾಂತ್ರಿಕ ಸಿಬ್ಬಂದಿ, 441 ಅನುಕಂಪ‌ ಆಧಾರದಲ್ಲಿ‌ ಹುದ್ದೆಗಳನ್ನು ನೇಮಕಾತಿ ಮಾಡಲಾಗಿದೆ. ಜೊತೆಗೆ ಆರು ತಿಂಗಳಲ್ಲಿ 12,000ಕ್ಕೂ ಹೆಚ್ಚು ಸಿಬ್ಬಂದಿಗೆ ಪರಿಣಾಮಕಾರಿ ತರಬೇತಿ ನೀಡಲಾಗಿದೆ.