Thursday, May 7, 2026
Thursday, May 7, 2026
Home Blog Page 40

ಶಿವಮೊಗ್ಗದಲ್ಲಿ ಹಳ್ಳಕ್ಕೆ ಉಳಿದ ಬಸ್ : 30ಕ್ಕೂ ಹೆಚ್ಚು ಪ್ರಮಾಣಿಕರಿಗೆ ಗಾಯ

0

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿ ಕಾಗೆಹಳ್ಳ ಗ್ರಾಮದಲ್ಲಿ ಹಳ್ಳಕ್ಕೆ ಬಸ್ ಉರುಳಿರುವ ಘಟನೆ ನಡೆದಿದೆ.

ಚಲಿಸುತ್ತಿದ್ದ ಖಾಸಗಿ ಬಸ್ ಏಕಾಏಕಿ ಹಳ್ಳಕ್ಕೆ ಉರುಳಿ ಬಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಈ ಅಪಘಾತದಿಂದ ಭಾರೀ ದೊಡ್ಡ ಅವಘಡವಾಗಿದ್ದು, ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚನ್ನಗಿರಿಯಿಂದ ಭದ್ರಾವತಿಗೆ ಬರುತ್ತಿದ್ದ ಶ್ರೀ ರೇಣುಕಾಂಬ ಖಾಸಗಿ ಬಸ್ ಕಾಗೆಹಳ್ಳ ಬಳಿ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಉರುಳಿದೆ.

ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಇದರಿಂದಾಗಿ ಅಪಘಾತದಲ್ಲಿ ಬಸ್‌ ತೀವ್ರವಾಗಿ ಹಾನಿಗೊಳಗಾಗಿದೆ. ಬಸ್ ಡ್ರೈವರ್ ನಿರ್ಲಕ್ಷದಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಉಪನ್ಯಾಸಕ ಸುರೇಶ್ ಅವರ ದಾರುಣ ಮರಣ.ಸುಟ್ಟು ಕರುಕಲಾದ ಸ್ಥಿತಿಯಲ್ಲಿ ದೇಹ ಪತ್ತೆ

0

ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಘಟನೆ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಇವರು ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಶನಿವಾರ ಮನೆಯಿಂದ ಹೊರಟಿದ್ದ ಶಿವಕುಮಾ‌ರ್ ಅವರು ಮನೆಯವರಿಗೆ ಮದುವೆ ಕಾರ್ಯಕ್ರಮಕ್ಕೆ ಹೋಗುತ್ತಿರುವುದಾಗಿ ಹೇಳಿದ್ದರು ಎನ್ನಲಾಗಿದೆ.

ಆದರೆ, ಭಾನುವಾರ ಬೆಳಿಗ್ಗೆ ಅವರದೇ ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿದ್ದು, ಘಟನೆ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಅವರ ತೋಟದಲ್ಲೇ ಶವ ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಮೃತದೇಹ ಭಾಗಶಃ ಸುಟ್ಟು ಕರಕಲಾಗಿತ್ತು ಎನ್ನಲಾಗಿದೆ. ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರುಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲೇ ಮೃತ ವ್ಯಕ್ತಿಯ ಬೈಕ್ ಮತ್ತು ಬ್ಯಾಗ್‌’ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಕ್ಕಳಲ್ಲಿ ಧಾರ್ಮಿಕ ಅರಿವು ಮೂಡಿಸಿದರೆ ಸಮಾಜದಲ್ಲಿ ಒಳ್ಳೆ ವ್ಯಕ್ತಿಗಳಾಗುತ್ತಾರೆ- ರಾಮಲಿಂಗಪ್ಪ

0

ಮಕ್ಕಳಲ್ಲಿ ಬಾಲ್ಯದಿಂದ ಶಿಕ್ಷಣದ ಜೊತೆಯಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಮನೋಭಾವನೆ ಬೆಳೆಸುವಲ್ಲಿ ಪೋಷಕರ ಪಾತ್ರ ಮುಖ್ಯ ಆಗಿರುತ್ತದೆ ಎಂದು ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ರಾಮಲಿಂಗಪ್ಪ ಹೇಳಿದರು.

ಗೋಪಾಳದ ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಧಾರ್ಮಿಕ ಅರಿವು ಮೂಡಿಸುವುದಿಂದ ಮಕ್ಕಳು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ ಎಂದು ತಿಳಿಸಿದರು.

ಸುಸಂಸ್ಕೃತ ಹಾಗೂ ಸದೃಢವಾದ ಸಮಾಜ ನಿರ್ಮಾಣ ಮಾಡುವಲ್ಲಿ ಮಕ್ಕಳ ಪಾತ್ರ ತುಂಬಾ ಪ್ರಮುಖ. ಬಾಲ್ಯದಿಂದಲೇ ಮಕ್ಕಳಿಗೆ ಈ ರೀತಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಅವರಲ್ಲಿ ಒಳ್ಳೆಯ ವ್ಯಕ್ತಿತ್ವ ಹಾಗೂ ಆಲೋಚನೆ ನಿರ್ಮಾಣವಾಗುತ್ತದೆ. ನಮ್ಮ ದೇವಸ್ಥಾನ ಸಮಿತಿಯಿಂದ ಎಲ್ಲಾ ಹಬ್ಬ ಹಾಗೂ ಆಯಾ ಸಮಯಕ್ಕೆ ಸರಿಯಾಗಿ ಬರುವ ಕಾರ್ಯಕ್ರಮಗಳು ಆಯೋಜಿಸುವುದರ ಮುಖಾಂತರ ದೇವಸ್ಥಾನ ಒಂದು ಧಾರ್ಮಿಕ ಕ್ಷೇತ್ರವಾಗಿದೆ ಎಂದು ತಿಳಿಸಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ನಾಗಸುಬ್ರಹ್ಮಣ್ಯ ದೇವಸ್ಥಾನ ನಗರದಲ್ಲಿ ಒಂದು ಮಾದರಿಯಾಗಿದೆ. ಸುಸಂಸ್ಕೃತವಾದ ಕಾರ್ಯಕ್ರಮಗಳನ್ನು ಮಾಡುವುದರ ಜೊತೆಗೆ ವಿದ್ಯಾರ್ಥಿಗಳ ಪ್ರತಿಭೆಗೆ ಅನಾವರಣಕ್ಕೆ ಪೂರಕವಾಗಿದೆ. ಆದ್ದರಿಂದ ಪೋಷಕರು ಇಂತಹ ಕಾರ್ಯಕ್ರಮಗಳಿಗೆ ಮಕ್ಕಳನ್ನು ಪ್ರೇರೇಪಿಸಿ ತೊಡಗಿಸಿಕೊಳ್ಳಬೇಕು. ಮಕ್ಕಳು ದೇವಸ್ಥಾನಗಳಿಗೆ ಬರುವುದೇ ಒಂದು ಪವಿತ್ರವಾದ ಕೆಲಸವಾಗಿದೆ ಎಂದು ಹೇಳಿದರು.

ಪ್ರಧಾನ ಅರ್ಚಕ ಸಂದೇಶ ಉಪಾಧ್ಯ ಮಾತನಾಡಿ, ವಾರದಲ್ಲಿ ಎರಡು ದಿನ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ರೀತಿಯ ಕಾರ್ಯಕ್ರಮದಿಂದ ರಾಮಾಯಣ ಹಾಗೂ ಮಹಾಭಾರತದ ಬಗ್ಗೆ ಅರಿವು ಮೂಡುತ್ತದೆ. ರಾಮೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡು ಪ್ರತಿಭೆ ಅನಾವರಣಗೊಳಿಸಿದರು.

ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿ, ಅರ್ಚಕ ವೃಂದದ ಸಹಯೋಗದೊಂದಿಗೆ ರಾಮ ನವಮಿ ಕಾರ್ಯಕ್ರಮದ ಪ್ರಯುಕ್ತ ಮಕ್ಕಳಿಗೆ ಹಾಡು, ರಾಮಾಯಣದ ಪಾತ್ರದ ವೇಷ ಭೂಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು.

ಶಾಲಿನಿ, ಸುಜಾತಾ, ರಾಧಾ, ನಾಡಿಗ್, ವಿಜಯ್ ಕುಮಾರ್, ರಮಾಮಣಿ ಇತರರಿದ್ದರು.

ಶಿವಮೊಗ್ಗದಲ್ಲಿ ಕರ್ತವ್ಯನಿರತ ಪವರ್ ಮ್ಯಾನ್, ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಸಾವು

0

ಶಿವಮೊಗ್ಗ ಪಟ್ಟಣದ ಕೆಇಬಿ ಸ್ಟೇಷನ್ ಎದುರು ವಿದ್ಯುತ್ ಲೈನ್ ಸರಿಪಡಿಸುವ ಕೆಲಸದಲ್ಲಿ ತೊಡಗಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕರ್ತವ್ಯದ ಅವಧಿಯಲ್ಲಿ 110/11 ಕೆವಿ ಸ್ಟೇಷನ್ ನಲ್ಲಿ ಲೈನ್ ದುರಸ್ತಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕರೆಂಟ್ ಶಾಕ್ ಆಗಿದ್ದು, ಪವರ್ ಮ್ಯಾನ್ ಹರೀಶ್ (೪೫) ವಿದ್ಯತ್ ತಗಲಿ ಸಾವನ್ನಪ್ಪಿದ್ದಾರೆ.

ಮೃತ ಹರೀಶ್ ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಹರೀಶ್ ನನ್ನು ಕಳೆದುಕೊಂಡಿರುವ ಕುಟುಂಬವು ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜಾಂಬವಂತನ ದಿಢೀರ್ ಭೇಟಿ!.

0

ಶಿವಮೊಗ್ಗದ ಸೋಗಾನೆಯಲ್ಲಿ ಇರುವ ಶಿವಮೊಗ್ಗ ವಿಮಾನ ಏರ್ಪೋರ್ಟ್ ಗೆ ಕರಡಿಯೊಂದು ನುಗ್ಗಿರುವ ಘಟನೆ ನಡೆದಿದೆ.

ಕಾಜಿನಕಟ್ಟೆಯ ಜ್ಯೋತಿ ನಗರದಿಂದ ಏರ್ಪೋರ್ಟ್ ಗೆ ಕರಡಿ ನುಗ್ಗಿದ್ದು, ಕರಡಿ ಕಂಡು ವಿಮಾನ ನಿಲ್ದಾಣದ ಸಿಬ್ಬಂದಿಗಳು ಅಲರ್ಟ್ ಆಗಿದ್ದಾರೆ.

ಏರ್ಪೋರ್ಟ್ ಅಧಿಕಾರಿಗಳು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ಕರಡಿ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಪ್ರಯತ್ನಿಸಿದ್ದಾರೆ.

ಏಪ್ರಿಲ್1. ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿನ ತಾತ್ಕಾಲಿಕ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ.

0

ಶಿವಮೊಗ್ಗ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಅಧೀನದಲ್ಲಿರುವ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಹುದ್ದೆಗಳ ವಿವರ: ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಒಟ್ಟು 09 ಹುದ್ದೆಗಳು ಇದ್ದು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ (ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ) ಆಯ್ಕೆ ಮಾಡಲಾಗುವುದು.
ಎಂ.ಬಿ.ಬಿ.ಎಸ್ (MBBS) ಪದವೀಧರರಾಗಿರಬೇಕು.

ಜಿಲ್ಲೆಯ ಬ್ಯಾಕೋಡು, ತುಮರಿ, ಕಾರ್ಗಲ್, ತಾಳಗುಪ್ಪ, ತಡಗಳಲೆ, ಮೂಡಿದೋಡಿಕೊಪ್ಪ, ಚಂದ್ರಗುತ್ತಿ, ಬೆಟ್ಟಬಸವಾನಿ ಹಾಗೂ ರಿಪ್ಪನಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಯೋಜಿಸಲಾಗುವುದು.

ಸಂದರ್ಶನದ ವಿವರ: ದಿನಾಂಕ: 01/04/2026 ರಂದು ಸಮಯ: ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಬಿ.ಹೆಚ್ ರಸ್ತೆ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನ ನಡೆಯಲಿದೆ.

ಒಂದು ಪಕ್ಷ ಹುದ್ದೆಗಳು ಪೂರ್ಣ ಭರ್ತಿಯಾಗದಿದ್ದಲ್ಲಿ ಪ್ರತಿ ದಿನ ಇದೇ ವೇಳೆ ಮತ್ತು ಸ್ಥಳದಲ್ಲಿ ಹುದ್ದೆಗಳು ಭರ್ತಿ ಆಗುವವರೆಗೆ ನೇರ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ವೇಳೆ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಮತ್ತು ದಾಖಲೆಗಳ ಒಂದು ಸೆಟ್ ನಕಲು ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳನ್ನು ತರಬೇಕು.

ಹೆಚ್ಚಿನ ಮಾಹಿತಿಗಾಗಿ ನೇರವಾಗಿ ಕಚೇರಿಗೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ: 08182-222382 ಅನ್ನು ಸಂಪರ್ಕಿಸಬಹುದು ಎಂದು ಡಿಹೆಚ್ ಓ ಡಾ. ನಟರಾಜ್ ತಿಳಿಸಿದ್ದಾರೆ.

Bharat Scouts and Guides, ರಾಜ್ಯದ ವಿಪತ್ತು ನಿರ್ವಹಣಾ ಪಡೆಯು ಹಲವೆಡೆ ಹುಡುಕಾಟ ಮತ್ತು ರಕ್ಷಣಾ ಕಾರ್ಯಮಾಡಿ ಜನರನ್ನ ಉಳಿಸಿದೆ- ತರಬೇತಿದಾರ ದೇವರಾಜ್.

0

Bharat Scouts and Guides, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಸಂಸ್ಥೆ, ಶಿವಮೊಗ್ಗ ಜಿಲ್ಲಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಗ್ನಿ ಮತ್ತು ತುರ್ತು ಸೇವಾ ಇಲಾಖೆ, ಪೊಲೀಸ್ ಇಲಾಖೆ ಇವರುಗಳ ಸಹಯೋಗದಲ್ಲಿ ಇತ್ತೀಚಿಗೆ ಜಿಲ್ಲಾ ಸ್ಕೌಟ್ ಭವನ, ಶಿವಮೊಗ್ಗ ದಲ್ಲಿ ಜಿಲ್ಲೆಯ ವಿವಿಧ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಯುವ ವಿಪತ್ತು ಮಿತ್ರ ತರಬೇತಿಯಲ್ಲಿ ಕಾರವಾರದಿಂದ ಆಗಮಿಸಿದ್ದ ಎನ್. ಡಿ. ಆರ್. ಎಫ್.ತುಕಡಿಯ ಹಿರಿಯ ತರಬೇತಿದಾರ ಶ್ರೀ ದೇವರಾಜ್ ರವರು ಮಾತನಾಡುತ್ತಿದ್ದರು.

ಅವರು 2006ರಲ್ಲಿ ಸ್ಥಾಪಿತ ವಾದ ಎನ್. ಡಿ. ಆರ್. ಎಫ್., ದೇಶದಾದ್ಯಂತ ಒಟ್ಟು 12 ಬೆಟಾಲಿಯುನ್ ಹೊಂದಿದ್ದು, ಕರ್ನಾಟಕ 10ನೇ ಬೆಟಾಲಿಯನ್, ವಿಜಯವಾಡಕ್ಕೆ ಸೇರಿದ್ದು ಇದುವರೆಗೂ ಕರ್ನಾಟಕ ರಾಜ್ಯದ ಹಲವಾರು ಕಡೆಗಳಲ್ಲಿ ಹುಡುಕಾಟ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡು ಬಹಳಷ್ಟು ಜನರನ್ನು ಉಳಿಸಿದೆ ಎಂದರು.

ಆಪತ್ತು ಮಿತ್ರ ತರಬೇತಿಯು
” ಭಾರಿ ದುರ್ಘಟನೆಗಳ ಪರಿಣಾಮಗಳಿಗೆ ನಾವು ಹೇಗೆ ತಯಾರಿ ನಡೆಸುತ್ತೇವೆ, ಪ್ರತಿಕ್ರಿಯೆ ನೀಡುತ್ತೇವೆ ಮತ್ತು ಅದರಿಂದ ಏನು ಕಲಿಯುತ್ತೇವೆ ” ಎಂಬ ಪ್ರಕ್ರಿಯೆಯಾಗಿದೆ ಎಂದರು.

ರಕ್ಷಣಾ ಪಡೆಗಳು ಬರುವ ಮುಂಚಿತವಾಗಿ ಸ್ಥಳೀಯರು ಅದರಲ್ಲೂ ತರಬೇತಿ ಹೊಂದಿದ ಯುವಕ / ಯುವತಿಯರು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ತಯಾರು ಮಾಡುವುದೇ ಈ ಯುವ ಆಪತ್ತು ಮಿತ್ರ ಯೋಜನೆಯ ಮೂಲ ಉದ್ದೇಶ ಎಂದು ತಿಳಿಸಿದರು.

ತರಬೇತಿ ಅವಧಿಯಲ್ಲಿ ಸಿ. ಪಿ. ಆರ್., ಪ್ರಾಥಮಿಕ ಮಟ್ಟದ ಶೋಧನೆ ಮತ್ತು ರಕ್ಷಣೆ, ರೋಗಿಯನ್ನು ಹೊತ್ತೋಯುವುದು, ಸಮುದಾಯ ಆಧಾರಿತ ಅರೋಗ್ಯ ಪ್ರಥಮ ಚಿಕಿತ್ಸೆ, ಮೃದು ಆಂಗಾಶದ ಗಾಯ, ಮುಂತಾದ ವಿಚಾರಗಳ ಬಗ್ಗೆ ತಂಡವು ತಿಳಿಸಿಕೊಟ್ಟಿತು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ ರವರು ಶಿಬಿರಾರ್ರ್ಥಿಗಳು ಈ ಶಿಬಿರದ ಸಂಪೂರ್ಣ ಲಾಭ ಪಡೆದುಕೊಳ್ಳಿ ಎಂದು ಹಾರೈಸಿದರು.

Bharat Scouts and Guides, ಶಿಬಿರದ ಸಂಯೋಜಕರಾದ ಶ್ರೀ ರಾಜೇಶ್ ವಿ ಅವಲಕ್ಕಿ ರವರು ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಶ್ರೀ ಕೆ. ವಿ. ಚಂದ್ರಶೇಖರಯ್ಯ ವಂದಿಸಿದರು. ಕೇಂದ್ರ ಸ್ಥಾನಿಕ ಆಯುಕ್ತ ಶ್ರೀ ಜಿ. ವಿಜಯ್ ಕುಮಾರ್, ಸಹಾಯಕ ಜಿಲ್ಲಾ ಆಯುಕ್ತ ಶ್ರೀ ಮಲ್ಲಿಕಾರ್ಜುನ ಕಾನೂರ್, ಸಹಾಯಕ ರಾಜ್ಯ ಸಂಘಟನಾ ಆಯುಕ್ತೆ ಶ್ರೀಮತಿ ಸುಮನಾ ಶೇಖರ್, ಹಿರಿಯ ಗೈಡರ್ ಶ್ರೀಮತಿ ಶಾಂತಮ್ಮ, ಹಿರಿಯ ಸ್ಕೌಟರ್ ಶ್ರೀ ರುದ್ರಪ್ಪ ಚೀಲೂರ್, ಎನ್. ಡಿ. ಆರ್. ಎಫ್. ತಂಡದ ಮುಖ್ಯಸ್ಥ ಶ್ರೀ ವಿವೇಕ್ ಮತ್ತು ಇತರೆ ಸದಸ್ಯರು ಉಪಸ್ಥಿತರಿದ್ದರು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 162 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

0

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು ಅಹಿಂಸಾ ಧರ್ಮ ಪ್ರತಿಪಾದಕರಾದ ಭಗವಾನ್ ಶ್ರೀ ಮಹಾವೀರ ಜಯಂತಿಯ ಅಂಗವಾಗಿ ದಾರ್ಶನಿಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿಹಿ ವಿತರಿಸುವ ಮುಖಾಂತರ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ ರಂಗನಾಥ್ ಮಾತನಾಡಿ ಭಗವಾನ್ ಶ್ರೀ ಮಹಾವೀರರ ಜನನದ ಸಮಯದಲ್ಲಿ, ದೇಶದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಪರಿಸ್ಥಿತಿ ಅತ್ಯಂತ ಅನಿಶ್ಚಿತವಾಗಿತ್ತು.

ಮಹಿಳೆಯರು ಮತ್ತು ಕೆಳವರ್ಗದವರನ್ನು ದಮನಿಸಲಾಗುತ್ತಿತ್ತು. ಧರ್ಮದ ಸ್ವರೂಪವು ಬಾಹ್ಯ ಆಡಂಬರ ಮತ್ತು ಪ್ರದರ್ಶನದಲ್ಲಿ ಸಿಲುಕಿಕೊಂಡಿತ್ತು ಮತ್ತು ಜಾತಿವಾದದ ಪ್ರಭಾವವು ಬೆಳೆಯುತ್ತಿತ್ತು.

ಅಂತಹ ಸಮಯದಲ್ಲಿ, ಭಗವಾನ್ ಮಹಾವೀರರು ಜೈನ ಧರ್ಮದ 24ನೇ ತೀರ್ಥಂಕರಾಗಿ ಇಡೀ ಜಗತ್ತಿಗೆ ಅಹಿಂಸಾ ಧರ್ಮವನ್ನು ಪ್ರತಿಪಾದಿಸುತ್ತ ಎಲ್ಲರೂ ಸಹಬಾಳ್ವೆ, ಸಹಕಾರ ಸೇವಾಮನೋಭಾವದ ಜೀವನವನ್ನು ನಡೆಸಬೇಕೆಂದು ಸಾರಿದರು. ಇಂತಹ ಮಹಾನ್ ದಾರ್ಶನಿಕರ ಜೀವನ ತತ್ವ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಉತ್ತಮ ಸಮಾಜದ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಗೌರವ ಸಂಚಾಲಕರಾದ ಸಿ ರವಿ, ಸಂಚಾಲಕರುಗಳಾದ ಕೆ ಆರ್ ಸುರೇಶ್, ಹೆಚ್‌.ಪಿ. ಗಿರೀಶ್, ಮದನ್ ಸಿಂಗ್, ಮಹೇಂದ್ರ ಜೈನ್, ರಾಜೇಶ್ ಮಂದಾರ, ಆಚಾರಿ ಗೋಪಿ, ಟಿ ಗುರುಪ್ರಸಾದ್, ಕೆ ಎಲ್ ಪವನ್, ರಜನಿಕಾಂತ್, ಆರ್ ಕಿರಣ್, ಕೇಬಲ್ ಲೋಕೇಶ್, ಜಯಪ್ರಕಾಶ್, ಸುಬ್ರಮಣಿ, ನಂದನ್, ಶ್ರೀಕಾಂತ್, ರಾಘವೇಂದ್ರ, ಮನ್ವಿಕ್ ಜೈನ್ ಇತರರು ಉಪಸ್ಥಿತರಿದ್ದರು.

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

0

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ ಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಹೇಳಿದರು.
ಅವರು ಇಂದು ಭಾರತ ಸರ್ಕಾರ, ಆಯುಷ್ ಸಚಿವಾಲಯ, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ, ನವದೆಹಲಿ, ಶ್ರೀ ಆದಿಚುಂಚಬಗಿರಿ ಶಿಕ್ಷಣ ಟ್ರಸ್ಟ್ (ರಿ) ಶಿವಮೊಗ್ಗ. ಹಾಗೂ ಶ್ರೀ ವೇದವ್ಯಾಸ ಯೋಗ ಪ್ರತಿಷ್ಠಾನ (ರಿ), ಮೈಸೂರು ಇವರ ಸಹಯೋಗದೊಂದಿಗೆ ಇಂದು ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ಯೋಗೋತ್ಸವ – ೨೦೨೬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಅವರು, ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಯೋಗ ಶಿಬಿರವನ್ನು ಉದ್ಘಾಟಿಸಿದರು. ಪ್ರತಿಯೊಬ್ಬರ ಆರೋಗ್ಯ ಚೆನ್ನಾಗಿದ್ದರೆ ಸದೃಢವಾದ ಮತ್ತು ಭವ್ಯ ಭಾರತವನ್ನು ಕಟ್ಟಬಹುದಾಗಿದೆ ಎಂದು ಹೇಳಿದರು.
ಪ್ರಸ್ತುತ ದಿನಮಾನಗಳಲ್ಲಿ ಶುದ್ದವಾದ ಗಾಳಿಗೂ ಕೂಡ ಪರಿತಪಿಸುವಂತಾಗಿದೆ. ಶ್ವಾಸ ನಿಶ್ವಾಸದ ಮೇಲೆ ನಮ್ಮ ಬದುಕು ನಿಂತಿದೆ. ಸರಿಯಾದ ಮಾರ್ಗದರ್ಶನದಲ್ಲಿ ನಾವುಗಳೂ ಯೋಗಾಭ್ಯಾಸ ಮಾಡಿದ್ದೇ ಆದರೆ ಯಾವುದೇ ಮದ್ದಿಲ್ಲದೇ ರೋಗವನ್ನು ಹೋಗಲಾಡಿಸಬಹುದಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಯೋಗದ ಅಭ್ಯಾಸವನ್ನು ಮಾಡಿಕೊಳ್ಳಬೇಕು ಎಂದರು.
ಯೋಗಾಭ್ಯಾಸ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಆಗ ಮಾತ್ರ ನಮ್ಮ ದೇಹ ಗಟ್ಟಿಮುಟ್ಟಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ , ಮೈಸೂರಿನ ಶ್ರೀ ವೇದವ್ಯಾಸ ಯೋಗ ಪ್ರತಿಷ್ಠಾನದ ಅಧ್ಯಕ್ಷ ಡಾ. ವಸಂತಕುಮಾರ್ ಪೈ Adichunchabagiri Education Trust ಅವರು ಈ ಕಾರ್ಯಕ್ರಮಕ್ಕೆ ಶುಭ ಪ್ರಶಂಸೆಗೈಯುತ್ತಾ ವಿಶ್ವಮಾನ್ಯತೆ ಪಡೆದ ಯೋಗಕ್ಕೆ ಈಗ ಯೋಗ ಬಂದಿದೆ ಎಂದರು. ಯೋಗದಿಂದ ಸ್ವಾಸ್ಥ್ಯದ ಜೊತೆಗೆ, ಸರ್ವಾಂಗೀಣ ವ್ಯಕ್ತಿತ್ವವನ್ನು ನಿರ್ಮಿಸಿಕೊಳ್ಳಲು ಸಾಧ್ಯ ಎಂದರು.
ರಾಷ್ಟ್ರೀಯ ಯೋಗ ಸಂಚಾಲಕ ರಾಘವೇಂದ್ರ ಪೈ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಮೂಹಿಕ ಯೋಗಾಭ್ಯಾಸ, ಯೋಗ ವಿಚಾರ ಸಂಕಿರಣ. ಯೋಗ ಪ್ರದರ್ಶನ,ಯೋಗದಿಂದ ಆಗುವ ಪ್ರಯೋಜನಗಳ ಬಗ್ಗೆ ಸವಿಸ್ತಾರ ಬಗ್ಗೆ ತಿಳಿಸಿದರು.
ಇಂದು ಯೋಗದಲ್ಲಿ ೪೦೦ ಕ್ಕೂ ಹೆಚ್ಚಿನ ಯೋಗಪಟುಗಳು ಭಾಗವಹಿಸಿದ್ದರು. ಭಾಗವಹಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.
ಇದೇ ಸಂಧರ್ಭದಲ್ಲಿ ಸಂದರ್ಭದಲ್ಲಿ ಯೋಗಪಟುಗಳಾದ ಶ್ರೀ ಬ.ಮ. ಶ್ರೀಕಂಠ ಇವರಿಗೆ ಯೋಗಭೂಷಣ ಪ್ರಶಸ್ತಿ ಹಾಗೂ ಡಾ. ಮಣೂರು ಪ್ರಭಾಕರ ಪ್ರಭು ಇವರಿಗೆ ಕರ್ಮಯೋಗ ಭೂಷಣ ಪ್ರಶಸ್ತಿಯನ್ನು ಜೀವಮಾನದ ಸಾಧನೆಗಾಗಿ ರಾಷ್ಟ್ರೀಯ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Shimoga Pesit College ಅಂತರ ಕಾಲೇಜು ಅಥ್ಲೆಟ್ಸ್ ಸ್ಪರ್ಧೆಯಲ್ಲಿ ಪೆಸಿಟ್ ಕಾಲೇಜಿಗೆ ಕೀರ್ತಿ ತಂದ ಎಸ್.ಆಕಾಶ್

0

Shimoga Pesit College ಕಳೆದ ಮಾ. 26ರಿಂದ 29ರವರೆಗೆ ತಿಪಟೂರು ಕಲ್ಪತರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಆಯೋಜಿಸಿದ್ದ 27ನೇ ರಾಜ್ಯಮಟ್ಟದ ಇಂಟರ್ ಕಾಲೇಜು ಅಥ್ಲೆಟಿಕ್ ಚಾಂಪಿಯನ್ ಶಿಪ್‌ನಲ್ಲಿ ಶಿವಮೊಗ್ಗದ ಪೆಸಿಟ್ ಕಾಲೇಜಿನ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿ ಆಕಾಶ್ ಎಸ್. ಅವರು 400ಮೀಟರ್ ಹರ್ಡಲ್ಸ್‌ನಲ್ಲಿ ದ್ವಿತೀಯ ಸ್ಥಾನ ಹಾಗೂ 400 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ಪೆಸಿಟ್ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಇವರಿಗೆ ನಾಗಾರ್ಜುನ ಅವರು ತರಬೇತುದಾರರಾಗಿದ್ದಾರೆ. ಈ ಪ್ರತಿಭಾನ್ವಿತ ಕಾಳಿಕಾ ಪರಮೇಶ್ವರಿ ಸಹಕಾರ ಸಂಘದ ಉಪಾಧ್ಯಕ್ಷರಾದ ಎ. ಸತೀಶ್ ಮತ್ತು ಸುನಿತಾ ದಂಪತಿಗಳ ಪುತ್ರರಾಗಿದ್ದಾರೆ.