Thursday, May 7, 2026
Thursday, May 7, 2026
Home Blog Page 42

Samiksha Reddy ಸಿಂಹಧಾಮ ಮೃಗಾಲಯದಲ್ಲಿ ಡಾ.ಸಮೀಕ್ಷಾ ರೆಡ್ಡಿ ಸಾವು: ನ್ಯಾಯಾಂಗ ತನಿಖೆಯಾಗಲಿ- ಡಾ.ಬಿ.ಎಸ್.ಪವಿತ್ರಾ.

0

Samiksha Reddy ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವು: ತಪ್ಪತಸ್ಥರ ವಿರುದ್ಧ ಕಾನೂನು ಕ್ರಮ- ನ್ಯಾಯಾಂಗ ತನಿಖೆಗೆ ಭಾರತೀಯ ಮಹಿಳಾ ಪಶುವೈದ್ಯರ ಸಂಘ ಒತ್ತಾಯ
ಶಿವಮೊಗ್ಗ: ಶಿವಮೊಗ್ಗ ಮೃಗಾಲಯ, ಹುಲಿ ಮತ್ತು ಸಿಂಹ ಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಹೊಣೆಗಾರಿಕೆ ಅತ್ಯಗತ್ಯ ಇಂತಹ ಪರಿಸ್ಥಿತಿಗೆ ತಳ್ಳಿದವರನ್ನು ತನಿಖೆಯಿಂದ ಗುರುತಿಸಿ ಕಾನೂನು ಕ್ರಮ ಜರುಗಿಸಬೇಕು ಹಾಗೂ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಭಾರತೀಯ ಮಹಿಳಾ ಪಶುವೈದ್ಯರ ಸಂಘದ ರಾಜ್ಯ ಘಟಕ ಒತ್ತಾಯಿಸಿದೆ.

ಡಾ. ಸಮೀಕ್ಷಾ ರೆಡ್ಡಿಯವರ ಸಾವಿನ ಕುರಿತಾಗಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ನೀಡುತ್ತಿರುವ ಮಾಧ್ಯಮ ಹೇಳಿಕೆಗಳು, ಪತ್ರಿಕಾ ಪ್ರಕಟಣೆ ಮತ್ತು ಸಾಂದರ್ಭಿಕ ಸನ್ನಿವೇಶಗಳು ಗೊಂದಲದಿಂದ ಕೂಡಿದೆ. ಪಕ್ಷಿಗೆ ಕೇವಲ ಒಂದು ಸಾಮಾನ್ಯ ಆಂಟಿಬಯೋಟಿಕ್ ಫಾಲೋ ಅಪ್ ಚಿಕಿತ್ಸೆಗೆ ತಡರಾತ್ರಿ 11.30ಕ್ಕೆ ಡಾ. ಸಮೀಕ್ಷಾ ರೆಡ್ಡಿ ಅವರನ್ನು ಕಳುಹಿಸಿರುವುದು ಸರಿಯಲ್ಲ.

ಯಾವುದೇ ಚಿಕಿತ್ಸೆಗೆ ಒಬ್ಬಂಟಿ ಪಶು ವೈದ್ಯರನ್ನು ಅದರಲ್ಲೂ ಮಹಿಳಾ ಪಶು ವೈದ್ಯರನ್ನು ವನ್ಯಜೀವಿ ಚಿಕಿತ್ಸೆಗೆ ತಡರಾತ್ರಿಯಲ್ಲಿ ನಗರ ವ್ಯಾಪ್ತಿಯ ಹೊರಗಿರುವ ಪ್ರದೇಶದಲ್ಲಿರುವ ಮೃಗಾಲಯಕ್ಕೆ ಕಳುಹಿಸಿದ್ದು ಏಕೆ? ಚಿಕಿತ್ಸೆಗೆ ವೈದ್ಯರ ಅವಶ್ಯಕತೆ ಜೊತೆ ಸಿಬ್ಬಂದಿ ಅವಶ್ಯಕತೆ ತಿಳಿಯಲಿಲ್ಲವೇ?

ಶಿವಮೊಗ್ಗ ಮೃಗಾಲಯ, ಹುಲಿ ಮತ್ತು ಸಿಂಹ ಧಾಮದ ಕಾರ್ಯನಿರ್ವಾಹಕ ನಿರ್ದೇಶಕರಾದ ಅಮರಾಕ್ಷರವರ ಹೇಳಿಕೆ ಆಧರಿಸಿ ಹೇಳುವುದಾದರೆ ತರಬೇತಿ ಅವಧಿಯಲ್ಲಿದ್ದ, ಅತೀ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದ ಡಾ. ಸಮೀಕ್ಷಾ ರೆಡ್ಡಿ ಅವರನ್ನು ಒಬ್ಬಂಟಿಯಾಗಿ ಅಲ್ಲಿಗೆ ಕಳುಹಿಸಿರುವುದು ಯಾವ ದೃಷ್ಟಿಕೋನದಿಂದಲೂ ಸರಿಯಲ್ಲ ನೈತಿಕವಾಗಿಯೂ ಅಥವಾ ವೃತ್ತಿಪರವಾಗಿಯೂ ಅಂಗೀಕರಿಸಲು ಸಾಧ್ಯವಿರುವುದಿಲ್ಲ. ಸಂಬಂಧಿಸಿದ ಅಧಿಕಾರಿಯ ಬೇಜವಾಬ್ದಾರಿತನದ ಹೇಳಿಕೆಗಳು ಒಂದು ಪಕ್ಷಿಯ ಜೀವಕ್ಕೆ ಇರುವ ಬೆಲೆ ಮಡಿದ ಪಶುವೈದ್ಯೆಗೆ ಇಲ್ಲವೆಂದು ಬಿಂಬಿಸುತ್ತದೆ.
ಅಲ್ಲದೆ ಡಾ. ಸಮೀಕ್ಷಾರವರಿಗೆ ಯಾವುದೇ ವೇತನ ಕೂಡ ಪಾವತಿ ಮಾಡಿರುವುದಿಲ್ಲ ಎಂದು ತಿಳಿದು ಬಂದಿದೆ. ಇಡೀ ಘಟನಾವಳಿಯ ಸಿಸಿಟಿವಿ ದೃಶ್ಯಾವಳಿಯನ್ನು ಸಂಪೂರ್ಣವಾಗಿ ಪರಿಶೀಲಿಸಬೇಕು. ಡಾ. ಸಮೀಕ್ಷಾ ರೆಡ್ಡಿ ಅವರ ಜೊತೆ ತೆರಳಿದ ಡ್ರೈವರನ್ನು ತನಿಖೆಗೆ ಒಳಪಡಿಸಬೇಕು. ಘಟನೆಯ ಕುರಿತಂತೆ ನ್ಯಾಯಾಂಗ ತನಿಖೆ ನಡೆಸಬೇಕು.
ಈ ಹಿಂದೆಯೂ ಕೂಡ ಈ ರೀತಿ ರಾತ್ರಿ ಸಮಯದಲ್ಲಿ ಡಾ. ಸಮೀಕ್ಷಾ ರೆಡ್ಡಿಯವರನ್ನು ಇಂತಹ ಚಿಕಿತ್ಸೆಗಳಿಗೆ ಹಲವು ದಿನಗಳಿಂದ ಕಳುಹಿಸುತ್ತಿದ್ದರು ಎಂಬುದು ಕಾರ್ಯನಿರ್ವಾಹಕ ನಿರ್ದೇಶಕರು ನೀಡಿರುವ ಹೇಳಿಕೆಯಿಂದಲೇ ತಿಳಿಯುತ್ತದೆ. ಆದ್ದರಿಂದ ಡಾ. ಸಮೀಕ್ಷಾ ರೆಡ್ಡಿಯವರ ಅನುಪಸ್ಥಿತಿಯಲ್ಲಿ ಅವರನ್ನು ‘ಅತಿ ಉತ್ಸಾಹಿ’ ಎಂದು ವರ್ಣಿಸುವುದು ಆಕ್ಷೇಪಾರ್ಹ. ತಮ್ಮ ಬೇಜವಾಬ್ದಾರಿತನವನ್ನು ಮೃಗಾಲಯದ ಆಡಳಿತ ಡಾ. ಸಮೀಕ್ಷಾ ರೆಡ್ಡಿ ಅವರ ಹೆಗಲಿಗೆ ಹೊರಿಸಿ ಜಾರಿಕೊಳ್ಳುವ ನಡೆಯನ್ನು ಸಂಘ ಖಂಡಿಸುತ್ತದೆ.

ಮಾನ್ಯ ಅರಣ್ಯ ಸಚಿವರು ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವಾಗ ಯಾವುದೇ ಎಸ್‌ಓಪಿಗಳು ಅರಣ್ಯ ಇಲಾಖೆಯಲ್ಲಿ ಲಭ್ಯವಿಲ್ಲ ಎಂದಿರುವುದು ಅರಣ್ಯ ಇಲಾಖೆಯ ವೈಫಲ್ಯದ ಧ್ಯೋತಕವಾಗಿದ್ದು, ಪಶುವೈದ್ಯರ ಜೀವಕ್ಕೆ ಬೆಲೆಯಿಲ್ಲದಂತಾಗಿದೆ.

Samiksha Reddy ಸಂಘಕ್ಕೆ ಬಂದಿರುವ ಮಾಹಿತಿ ಪ್ರಕಾರ ರಾಜ್ಯ ಸರ್ಕಾರ ಮಹಿಳಾ ಉದ್ಯೋಗಿಗಳ ಹಿತರಕ್ಷಣೆ ಕಾಪಾಡಲು ನೀಡಿರುವ ಋತುಚಕ್ರ ರಜೆಯನ್ನು ಕೂಡ ತಿರಸ್ಕರಿಸುವ ಮನಸ್ಥಿತಿ ಅಲ್ಲಿನ ಮೇಲಾಧಿಕಾರಿಯಾದ ಅಮರಾಕ್ಷರರವರಿಗೆ ಇರುವುದು ಖಂಡನೀಯ. ಮೃಗಾಲಯದಲ್ಲಿರುವ ಅವ್ಯವಸ್ಥೆಯ ಬಗ್ಗೆ ಆಗಿಂದಾಗ್ಗೆ ಡಾ. ಸಮೀಕ್ಷಾ ರೆಡ್ಡಿ ಅವರು ಇ ಮೇಲ್ ಮುಖಾಂತರ ಮೇಲಾಧಿಕಾರಿಗಳಿಗೆ ಕಳವಳ ವ್ಯಕ್ತಪಡಿಸಿರುತ್ತಾರೆ. ಅದನ್ನು ಹತ್ತಿಕ್ಕುವ ಅನೇಕ ಪ್ರಯತ್ನಗಳು ಕೂಡ ಅಲ್ಲಿನ ಅಲ್ಲಿನ ಮೇಲಾಧಿಕಾರಿರವರು ಮಾಡಿರುವುದಾಗಿ ತಿಳಿದುಬಂದಿದೆ.

ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿಗೆ ಕೇವಲ ಕ್ಷಮೆಯಾಚನೆ ಅಥವಾ ವನ್ಯಜೀವಿಗಳಿಗೆ ಅವರ ಹೆಸರಿಡುವುದರಿಂದ ಮಾತ್ರವೇ ಪರಿಹಾರ ಸಿಗುವುದಿಲ್ಲ. ಈ ಬಗ್ಗೆ ಸೂಕ್ತ ತನಿಖೆಯಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸರ್ಕಾರದಿಂದ ಡಾ. ಸಮೀಕ್ಷಾ ಅವರಿಗೆ ಗೌರವ ಬಿರುದನ್ನು ನೀಡಬೇಕೆಂದು ಸಂಘದ ಉಪಾಧ್ಯಕ್ಷೆ ಡಾ. ಪವಿತ್ರ ಬಿ.ಎಸ್. ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

0

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಶ್ರೀ ರಾಮನವಮಿ ಹಬ್ಬದ ಪ್ರಯುಕ್ತ ಎಪಿಎಂಸಿ ಆಟೋ ಚಾಲಕರು ಹಾಗೂ ಮಲೆನಾಡು ಆರ್ ಎಂ ಸಿ ಆಟೋ ಚಾಲಕರ ಸಂಘದ ವತಿಯಿಂದ ಈ ದಿವಸ ಪಾನಕ ಹಾಗೂ ಕೋಸಂಬರಿ ವಿತರಿಸುವುದರ ಮೂಲಕ ಸಾವಿರಾರು ಸಂಖ್ಯೆಯಲ್ಲಿ ಬಂದ ಭಕ್ತರಿಗೆ ಪ್ರಸಾದ ವಿನಿಯೋಗ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಯಿತು . ಈ ಒಂದು ಸಂದರ್ಭದಲ್ಲಿ ಪ್ರಮುಖರಾದ ಪ್ರಫುಲ್ಲ ಚಂದ್ರ ಹೆಚ್. ( ಕರ್ನಾಟಕ ನಾಡು ರಕ್ಷಣಾ ವೇದಿಕೆ ಆಟೋ ಘಟಕ ನಗರ ಅಧ್ಯಕ್ಷರು ) ಹಾಗೂ (ಮಲೆನಾಡು ಆರ್ ಎಂ ಸಿ ಆಟೋ ನಿಲ್ದಾಣದ ಅಧ್ಯಕ್ಷರು ) ಹಾಗೂ( ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ).ಚಂದ್ರಪ್ಪ ಟಿ. (ಶ್ರೀ ಆಂಜನೇಯ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷರು )( ಮಲೆನಾಡು ಆರ್ ಎಂ ಸಿ ಆಟೋ ನಿಲ್ದಾಣದ ಗೌರವಾಧ್ಯಕ್ಷರು ). ಪ್ರಕಾಶ್ ಟಿ. Kote SeethaRamanjaneya Temple ನಾಗ್ಯಾ ನಾಯಕ್. ನಾಗೇಶ್. ರವಿ ಅಣ್ಣ. ಆಕಾಶ್. ಪ್ರೇಮ್ ಕುಮಾರ್. ರಂಗನಾಥ್. ಮಂಜು ನಾಯಕ್. ರವಿ. ರುದ್ರೇಶ್. ಪರಶುರಾಮ್. ಭಾಷಣ.( ಮಲೆನಾಡು ಆರ್ ಎಮ್ ಸಿ ಆಟೋ ನಿಲ್ದಾಣದ ಉಪಾಧ್ಯಕ್ಷರು ). ಯತೀಶ. ಶಿವಕುಮಾರ್. ಶ್ಯಾಮ್ ಭೋವಿ. ಹೊನ್ನಪ್ಪ. ಲೋಕೇಶ್.ಕುಮಾರ್. ಪ್ರವೀಣ. ವಿಜಯ್ ಕುಮಾರ್ (ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಉಪಾಧ್ಯಕ್ಷರು ).ಹಾಗೂ ಇನ್ನಿತರ ಪ್ರಮುಖರು ಈ ಒಂದು ಅದ್ದೂರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿಶೇಷವೇನೆಂದರೆ ಗೋಪಾಲನಗರದಲ್ಲಿ ಭಜನೆಯಲ್ಲಿ ಪ್ರಸಿದ್ಧಿಯಾಗಿರುವ ರಂಗಣ್ಣ ಹಾಗೂ ತಂಡದವರಿಂದ ಭಜನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

0

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ಕುವೆಂಪು ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಅಗ್ನಿ ಬನ್ನಿರಾಯ ಸ್ವಾಮಿ ಜಯಂತಿ ಕಾರ್ಯಕ್ರಮವನ್ನು‌ ತಿಗಳ ಸಮಾಜದ ಮುಖಂಡರು ಹಾಗೂ ಅಧಿಕಾರಿಗಳು ಉದ್ಘಾಟಿಸಿದರು.
ಈ ವೇಳೆ ಸಮಾಜದ ಮುಖಂಡರಾದ ಆನಂದ್ ಮಾತನಾಡಿ, ಅಗ್ನಿ ವಂಶ ಕ್ಷತ್ರಿಯರ ಕುಲ ಪುರುಷರಾದ ಶ್ರೀ ಅಗ್ನಿ ಬನ್ನಿರಾಯನ ಇತಿಹಾಸವನ್ನು ನಾವೆಲ್ಲಾ ತಿಳಿದುಕೊಳ್ಳಬೇಕು. ನಮ್ಮ ಮೂಲ ಪುರುಷರ ತತ್ವಗಳು, ಆದರ್ಶಗಳನ್ನು ಅನುಸರಿಸಿ, ಮುಂದುವರೆಸಿಕೊಂಡು ಹೋಗೋಣವೆಂದು ಕರೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್ ಮಾತನಾಡಿ, ಅಗ್ನಿ ವಂಶ ಕ್ಷತ್ರಿಯರ ಕುಲ ಪುರುಷರಾದ ಶ್ರೀ ಅಗ್ನಿ ಬನ್ನಿರಾಯನ ಇತಿಹಾಸವನ್ನು ನಾವು ಅಗ್ನಿಪುರಾಣದಲ್ಲಿ ಕಾಣಬಹುದು. ಭೂಮಂಡಲದಲ್ಲಿ ಅರಾಜಕತೆ ತಾಂಡವವಾಡುತ್ತಿದ್ದಾಗ ಸಮಸ್ತ ಜೀವ ಸಂಕುಲವನ್ನು ರಕ್ಷಿಸುವ ಸಂದಂರ್ಭ ಒದಗಿ ಬರುತ್ತದೆ. ಅಂತಹ ಸಮಯದಲ್ಲಿ ಶಂಭು ಮಹರ್ಷಿಗಳ ನೇತೃತ್ವದಲ್ಲಿ ಸಪ್ತ ಮಹರ್ಷಿಗಳು ಸೇರಿ ಇದೀಗ ಮೌಂಟ್ ಅಬು ಎಂದು ಕರೆಯಲಾಗುವ ಅರ್ಬುದಾಂಚಲ ಪರ್ವತದ Department of Kannada and Culture ಮೇಲೆ ಯಾಗವನ್ನು ನಡೆಸುತ್ತಾರೆ. ಅಲ್ಲಿಗೆ ಆಗಮಿಸಿದ ತ್ರಿಮೂರ್ತಿಗಳು ಯಾಗಕ್ಕೆ ಕಾಮಧೇನುವಿನ ತುಪ್ಪದಿಂದ ಆಹುತಿಯನ್ನು ನೀಡುತ್ತಾರೆ. ಮಾತ್ರವಲ್ಲದೆ ಪರಶಿವನು ತನ್ನ ಮೂರನೇ ಕಣ್ಣಿನಲ್ಲಿ ಮೂಡಿದ ಹನಿಯನ್ನು ಕೆಂದಾವರೆ ಪುಷ್ಪದೊಡನೆ ಯಜ್ಞಕುಂಡಕ್ಕೆ ಅರ್ಪಣೆ ಮಾಡುತ್ತಾರೆ. ಆಗ ಶಿವನ ಅಂಶದಿಂದ ಮೀನ ಮಾಸ ಉತ್ತರ ನಕ್ಷತ್ರದ ದಿನದಂದು ಪ್ರಜ್ವಲಿಸುವ ಅಗ್ನಿಯಿಂದ ಕುದುರೆಯ ಮೇಲೆ ಕುಳಿತು ಪ್ರತ್ಯಕ್ಷರಾದವರೇ ಶ್ರೀ ಅಗ್ನಿ ಬನ್ನಿ ಮಹಾರಾಜರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ‌ ಸಮಾಜದ ಮುಖಂಡರಾದ ಸಿದ್ದಲಿಂಗಪ್ಪ ಆನಂದ್, ವೆಂಕಟೇಶ್, ಅನಿತಾ, ಶೃತಿ ಇತರರು ಹಾಜರಿದ್ದರು.

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

0

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ವ್ಯತ್ಯಾಸ ಕಾಣುವುದಕ್ಕೆ ಜಾಗತಿಕ ಮಟ್ಟದಲ್ಲಿ ನಡೆಯುವ ಸಮಸ್ಯೆಗಳು ಕಾರಣ ಎಂದು ಮೈತ್ರಿ ಮೈ ಜ್ಯೂವೆಲ್ ಸಿಇಒ ಸೆಂಥಿಲ್ ವೆಲನ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಪೂರ್ವದ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ 2026ರಲ್ಲಿ ಚಿನ್ನ ಮತ್ತು ಬೆಳ್ಳಿ ಅಪಾಯಗಳು, ಲಾಭಗಳು ಮತ್ತು ವಾಸ್ತವ ಮಾರುಕಟ್ಟೆ ಪ್ರವೃತ್ತಿ, ಭವಿಷ್ಯದ ದೃಷ್ಟಿಕೋನದ ಬಗ್ಗೆ ಮಾತನಾಡಿ,
ಯುದ್ಧ ಹಾಗೂ ಇನ್ನಿತರ ಕಾರಣಗಳು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಣದುಬ್ಬರದ ವ್ಯವಸ್ಥೆಗಳಲ್ಲಿ ಬದಲಾವಣೆಯು ಚಿನ್ನ, ಬೆಳ್ಳಿ ಹೆಚ್ಚಿನ ದರ ಆಗುವುದಕ್ಕೆ ಸಾಧ್ಯವಾಗಿದೆ. ಜನಸಾಮಾನ್ಯರು ಚಿನ್ನ ಮತ್ತು ಬೆಳ್ಳಿಯನ್ನು ಕೊಳ್ಳುವ ಸಾಮರ್ಥ್ಯ ಕುಂಠಿತಗೊಂಡಿದೆ. ಆದರೂ ಕೂಡ ಮದುವೆ, ಜನ್ಮದಿನ ಕಾರ್ಯಕ್ರಮಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬಹಳ ಅವಶ್ಯಕತೆ ಇದೆ ಎಂದು ತಿಳಿಸಿದರು.
ಚಿನ್ನ ಮತ್ತು ಬೆಳ್ಳಿಯ ದರಗಳು ಒಂದು ವಿಶೇಷ ಆಗಿರುವ ಸಂದರ್ಭದಲ್ಲಿ ಅಂದರೆ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಏರುಪೇರು ಆದ ಸಂದರ್ಭದಲ್ಲಿ ದರಗಳು ಹೆಚ್ಚು ಮತ್ತು ಕಡಿಮೆ ಆಗುವ ಸಾಧ್ಯತೆ ಇರುತ್ತದೆ. ಆದರೂ ಕೂಡ ಹಿಂದಿನ ಕಾಲದಲ್ಲಿ ಪ್ರತಿಯೊಬ್ಬರೂ ಕೂಡ ಚಿನ್ನ ಬೆಳ್ಳಿ ತರಿಸುತ್ತಿದ್ದಾರೆ. ಅಮೆರಿಕ ದೇಶ ಚಿನ್ನ ಸಂಗ್ರಹಣೆಯಲ್ಲಿ ಪ್ರಥಮ ಸ್ಥಾನ ಹೊಂದಿದೆ. ಆದರೆ ಭಾರತ ಏಳನೇ ಸ್ಥಾನವನ್ನು ಹೊಂದಿರತಕ್ಕದ್ದು ಕಾರಣ ಭಾರತೀಯ ನಾಗರಿಕರು ಚಿನ್ನಾಭರಣ ಪ್ರಿಯರು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್ ಡಿ ಮಾತನಾಡಿ, ಪ್ರಸ್ತುತ ಪರಿಸ್ಥಿತಿಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಹೆಚ್ಚಾಗಿರುವುದರಿಂದ ಜನಸಾಮಾನ್ಯರು ಕೊಳ್ಳುವ ಸಂಖ್ಯೆ ಕಡಿಮೆಯಾಗಿದೆ. ಆದರೂ ಚಿನ್ನ ಯಾವಾಗಲೂ ಕೂಡ ಬೆಲೆಯುಳ್ಳ ವಸ್ತುವಾಗಿದೆ. ಆದ್ದರಿಂದ ಚಿನ್ನ ಮತ್ತು ಬೆಳ್ಳಿ ಒಂದು ಫ್ಯಾಶನ್ ಆಗಿ ಬೆಳೆದಿದೆ ಎಂದು ಹೇಳಿದರು.
Rotary Club Shimoga ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ್ ಮಾತನಾಡಿ, ಚಿನ್ನ ಒಂದು ಆಪತ್ಬಾಂಧವ ಇದ್ದಹಾಗೆ. ಒಂದು ಶಿಕ್ಷಣಕ್ಕಾಗಲಿ, ಒಂದು ಮನೆ ಕಟ್ಟಿಸಲು ಮತ್ತು ಯಾವುದೇ ಒಂದು ಕಷ್ಟದ ಪರಿಸ್ಥಿತಿಯಲ್ಲಿ ಚಿನ್ನ ತುಂಬಾ ಸಹಕಾರಿಯಾಗಲಿದೆ ಎಂದರು.
ರೋಟರಿ ಶ್ರೀಕಾಂತ್, ಮಹೇಶ್, ಕೇಶವಪ್ಪ, ಗಣೇಶ್, ಶ್ರೀನಿವಾಸ್ ಗೌಡ, ಗಂಗಪ್ಪ, ರಾಮೇಶ್ವರ, ಚಂದ್ರಶೇಖರಯ್ಯ, ಅರುಣ್ ದೀಕ್ಷಿತ್, ಬದರಿನಾಥ್, ಸಪ್ನ ಬದರಿನಾಥ್ ಮತ್ತಿತರರಿದ್ದರು.

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

0

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ ವ್ಯಸನ: ಸಮಾಜ ವಿರೋಧಿ ಚಟುವಟಿಕೆಗಳನ್ನು ನಿಯಂತ್ರಿಸಲು ‘ವಿಶೇಷ ಕಾರ್ಯಪಡೆ’ ರಚಿಸಲು ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ.

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ವಯಸ್ಕರು ಮಾದಕ ವ್ಯಸನಕ್ಕೆ ಬಲಿಯಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಮತ್ತು ಹಿಂದೂ ಸಮಾಜದ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆಗಳನ್ನು ತಡೆಯಲು ಸರ್ಕಾರ ಕೂಡಲೇ ಪೊಲೀಸ್ ಇಲಾಖೆಯಲ್ಲಿ ‘ವಿಶೇಷ ಕಾರ್ಯಪಡೆ’ ರಚಿಸಬೇಕು ಎಂದು ಶಿವಮೊಗ್ಗ ನಗರ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಇಂದು ವಿಧಾನಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು.

ಸದನದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಕುರಿತು ಮಾತನಾಡಿದ ಶಾಸಕರು, “ರಾಜ್ಯದಲ್ಲಿ ಮಾದಕ ದ್ರವ್ಯಗಳ ಜಾಲ ಹೆಮ್ಮರವಾಗಿ ಬೆಳೆಯುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಅಪ್ರಾಪ್ತರು ಇದಕ್ಕೆ ಬಲಿಯಾಗುತ್ತಿದ್ದಾರೆ. ಇದರ ಪರಿಣಾಮವಾಗಿ ಯುವಜನತೆ ದಾರಿ ತಪ್ಪಿ ಸಂಕೇತ್ ಹತ್ಯೆಯಂತಹ ಭೀಕರ ಅಪರಾಧಗಳಲ್ಲಿ ಭಾಗಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅಮಾಯಕ ಯುವಕರನ್ನು ಅಪರಾಧ ಲೋಕಕ್ಕೆ ಎಳೆಯುತ್ತಿರುವ ಶಕ್ತಿಗಳ ಹಿಂದೆ ಇರುವ ಸಮಾಜ ವಿರೋಧಿ ಜಾಲವನ್ನು ಬೇರುಸಹಿತ ಕಿತ್ತೊಗೆಯಬೇಕಿದೆ,” ಎಂದರು.

S. N. Channabasappa ಇದೇ ಸಂದರ್ಭದಲ್ಲಿ ಹಿಂದೂ ಸಮಾಜದ ಮೇಲಾಗುತ್ತಿರುವ ದಾಳಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, “ಹಿಂದೂಗಳ ಮನೆಗಳು, ಹಬ್ಬಗಳು ಮತ್ತು ಸಾಂಸ್ಕೃತಿಕ ಮೆರವಣಿಗೆಗಳನ್ನೇ ಗುರಿಯಾಗಿಸಿಕೊಂಡು ನಿರಂತರವಾಗಿ ಕಲ್ಲು ತೂರಾಟಗಳು ನಡೆಯುತ್ತಿವೆ. ಹಿಂದುಗಳ ಮೇಲೆ ನಡೆಯುತ್ತಿರುವ ಇಂತಹ ದೌರ್ಜನ್ಯಗಳು ಸಮಾಜದ ಶಾಂತಿಯನ್ನು ಕದಡುತ್ತಿವೆ. ಇಂತಹ ಕೃತ್ಯಗಳ ಹಿಂದೆ ಇರುವ ಕೈಗಳನ್ನು ಪತ್ತೆ ಹಚ್ಚಲು ಕೇವಲ ತನಿಖೆ ಸಾಲದು, ಇದಕ್ಕಾಗಿಯೇ ವಿಶೇಷ ಕಾರ್ಯಪಡೆ ರಚನೆಯಾಗಬೇಕು,” ಎಂದು ಪ್ರತಿಪಾದಿಸಿದರು.

Sonia Gandhi ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಶೇಷ ಪೂಜೆ

0

Sonia Gandhi ಇಂದು ಶಿವಮೊಗ್ಗ ನಗರ ಯುವ ಕಾಂಗ್ರೆಸ್ ವತಿಯಿಂದ AICC ಮಾಜಿ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ಸೋನಿಯಾ ಗಾಂಧಿಯವರ ಆರೋಗ್ಯವು ಶೀಘ್ರ ಚೇತರಿಕೆ ಕಂಡು ಈ ದೇಶಕ್ಕೆ ಇನ್ನಷ್ಟು ಸೇವೆ ಮಾಡುವ ಶಕ್ತಿ ಆ ಭಗವಂತ ಕರುಣಿಸಲಿ ಎಂದು ಶಿವಮೊಗ್ಗ ನಗರದ ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಎನ್ ರಮೇಶ್, ಹಾಪ್ ಕಾಮ್ಸ್ ಅಧ್ಯಕ್ಷರಾದ ಆರ್ ವಿಜಯ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ, ನಗರ ಯುವ ಕಾಂಗ್ರೆಸ್ Sonia Gandhi ಅಧ್ಯಕ್ಷರಾದ ಚರಣ್, ಹೊಳೆ ಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್, ಪ್ರಧಾನ ಕಾರ್ಯದರ್ಶಿ ಗೌತಮ್, ಆಕಾಶ್, ಚಂದ್ರೋ ಜಿ ವಿಷ್ಣುಕುಮಾರ್, ಅಭಿಷೇಕ್, ಅನಂತ, ತೌಸಿಫ್, ಅಜಯ್, ಯೋಗೀಶ್, ರವಿ, ಸಂಕೇತ್, ಸಂಜಯ್, ಗುರುಪ್ರಸಾದ್ ಹಾಗೂ ಅನೇಕ ಕಾರ್ಯಕರ್ತರು ಭಾಗಿಯಾಗಿದ್ದರು.

Breaking News ಆಕಸ್ಮಿಕ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

0

Breaking News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮಿಪದ ಬರುವೆ ಗ್ರಾಮದಲ್ಲಿ
ಘಟನೆ ನಡೆದಿದೆ.
ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ SSLC ವಿದ್ಯಾರ್ಥಿ.
ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಮೃತ ವಿದ್ಯಾರ್ಥಿ
ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ವಿದ್ಯಾರ್ಥಿ
ಬಳಿಕ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ.
ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ.
ನಂತರ ಸ್ಥಳೀಯರು ಯುವಕನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ

ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದಾನೆ ಎಂದು ವೈದ್ಯರಿಂದ
ಧೃಡಪಟ್ಟಿದೆ.

Breaking News ಮೃತ ವಿದ್ಯಾರ್ಥಿ ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದು,
ಮೂರು ಪಬ್ಲಿಕ್ ಪರೀಕ್ಷೆಗಳಿಗೆ ಹಾಜರಾಗಿದ್ದ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – ತನಿಖೆ ಆರಂಭವಾಗಿದೆ

CM Siddharamaih ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ- ಮುಖ್ಯಮಂತ್ರಿ ಸಿದ್ಧರಾಮಯ್ಯ.

0

CM Siddharamaih ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು ಸಾಧ್ಯವಿಲ್ಲ, ಜನ ಕಲ್ಯಾಣ ಹಾಗೂ ಅಭಿವೃದ್ಧಿಗಾಗಿ ಸಾಲ ಮಾಡಬೇಕು. ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ. ನಮ್ಮ ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು.

ನಾನು ಎಂದೂ ಸಾಲ ಮಾಡಬಾರದು ಎಂದು ಹೇಳಿಲ್ಲ. ಹೇಳುವುದೂ ಇಲ್ಲ. ಆದರೆ ಮಾಡುವ ಸಾಲ ಜನರ ಕಲ್ಯಾಣಕ್ಕಾಗಿ ಮತ್ತು ನಾಡಿನ ಅಭಿವೃದ್ಧಿಗಾಗಿ ಬಳಕೆಯಾಗಿದೆಯೇ ಎಂಬುದು ಮುಖ್ಯ.
ಎಂದು
ಬಜೆಟ್‌ ಕುರಿತ ಚರ್ಚೆಗೆ ವಿಧಾನ ಪರಿಷತ್‌ನಲ್ಲಿ ಮುಖ್ಯಮಂತ್ರಿ ಉತ್ತರಿಸಿದರು.

CM Siddharamaih 2008 ರಿಂದ 2013 ರವರೆಗೆ ಇದ್ದ ಬಿಜೆಪಿಯೂ ಸಾಲ ಮಾಡಿದೆ. ಆದರೆ, ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿಲ್ಲ, ಅಭಿವೃದ್ಧಿಯೂ ಶೂನ್ಯ. ಹಾಗಿದ್ರೂ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಲ ಮಾಡಿದ್ದು ಏಕೆ? ಎಂದು ಪ್ರತಿಪಕ್ಷಕ್ಕೆ‌ ಮುಖ್ಯಮಂತ್ರಿಗಳು ಅಧಿವೇಶನದಲ್ಲಿ ಮಾತಿನ ಈಟಿ ತಿವಿದರು.

Shri Mahavir Jayanti ಮಾರ್ಚ್ 30. ಶ್ರೀಮಹಾವೀರ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಜ್ಜು.

0

Shri Mahavir Jayanti ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ ಸಮಾಜದ ವಿವಿಧ ಸಂಘಟನೆಗಳು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಾ.30 ರ ಸಂಜೆ 4.30ಕ್ಕೆ ನಗರದ ಕುವೆಂಪು ರಂಗಮAದಿರದಲ್ಲಿ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, Shri Mahavir Jayanti ಪ್ರಾಧಿಕಾರಗಳ ಅಧ್ಯಕ್ಷರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳುವರು. ಸಾಗರದ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ವಿ.ಟಿ.ಸ್ವಾಮಿ ಇವರು ವಿಶೇಷ ಉಪನ್ಯಾಸ ನೀಡುವರು.

Davangere By Election ಸಾದಿಕ್ ಪೈಲ್ವಾನ್ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ.

0

Davangere By Election ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲದ ಕಾರಣ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ

ಅವರು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರು. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ. ಅವರು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ.
ನಿನ್ನೆ 11 ಜನ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಎಲ್ಲರಿಗೂ ಧನ್ಯವಾದಗಳು. ‌

Davangere By Election ಶಾಸಕ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಹಿಂಪಡೆಯುವಂತೆ ಮನವೊಲಿಸಲು ಸಾಧ್ಯವಾಗಲಿಲ್ಲ. ವಿಧಾನಪರಿಷತ್ ನಲ್ಲಿ ಉತ್ತರ ನೀಡಬೇಕಿದ್ದರಿಂದ ನಾನು ಖುದ್ದು ಭೇಟಿ ನೀಡಲಾಗಿಲ್ಲ.

ಸಾದಿಕ್ ಪೈಲ್ವಾನ್ ಅವರು ಕಾಂಗ್ರೆಸ್ ನಲ್ಲಿ ಸುಮಾರು 40 ವರ್ಷಗಳಿಂದ ಇದ್ದು, ಪಕ್ಷದ ಕಟ್ಟಾಳು. ದಾವಣಗೆರೆಯಲ್ಲಿ 70 ಸಾವಿರ ಮುಸ್ಲಿಂ ಮತದಾರರಿದ್ದು, ಸಮುದಾಯದವರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಹೈಕಮಾಂಡ್ ಇದನ್ನು ಪರಿಶೀಲಿಸಿ ಮೃತರಾದವರ ಕುಟುಂಬದವರಿಗೆ ಟಿಕೆಟ್ ನೀಡುವ ಪದ್ಧತಿಯಂತೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡಿದೆ ಎಂದು ಸಿದ್ಧರಾಮಯ್ಯ ಪಕ್ಷದ ನಿಲುವನ್ನ ಸ್ಪಷ್ಟಪಡಿಸಿದ್ದಾರೆ.