Wednesday, March 18, 2026
Wednesday, March 18, 2026
Home Blog Page 438

Department of Kannada and Culture ಜನವರಿ 19 ಜಿಲ್ಲಾಡಳಿತದಿಂದ ವೇಮನ ಜಯಂತಿ

0

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ರೆಡ್ಡಿ ಸಂಘ ಇವರ ಸಹಯೋಗದೊಂದಿಗೆ ಜ.19 ರ ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರಲ್ಲಿ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೆರವೇರಿಸುವರು. ವಿಶೇಷ ಅಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಪಾಲ್ಗೊಳ್ಳಲಿದ್ದಾರೆ.

Department of Kannada and Culture ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾ ರೆಡ್ಡಿ ಸಂಘದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಪಾಲಿಕೆ ಆಯುಕ್ತರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮಲ್ಲಿ ನಿವೃತ್ತ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಗೌರವ ಕಾರ್ಯದರ್ಶಿ ಆರ್.ರತ್ನಯ್ಯ ಉಪನ್ಯಾಸ ನೀಡುವರು.

Pre University Institutes ರಾಷ್ಟ್ರೀಯ ಆದಾಯ ಹೆಚ್ಚಿಸುವ ಉದ್ದಿಮೆ ಕೈಗೊಳ್ಳಿ- ಡಾ.ಮಂಜುನಾಥ್

0

Pre University Institutes ರಾಷ್ಟ್ರೀಯ ಆದಾಯ ಹೆಚ್ಚಿಸುವಂತಹ ಉದ್ದಿಮೆಗಳನ್ನು ಕೈಗೊಳ್ಳುವ ಕಡೆಗೆ ವಿಜ್ಞಾನ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಹಿರಿಯ ಪತ್ರಕರ್ತ ಡಾ ಎಚ್ ಬಿ ಮಂಜುನಾಥ ಕರೆಕೊಟ್ಟರು. ಧ ರಾ ಮ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಾ ದೇಶದಲ್ಲಿ ವಾರ್ಷಿಕ ಸುಮಾರು ಒಂದೂವರೆ ಕೋಟಿ ವಿದ್ಯಾರ್ಥಿಗಳು ಪಿ ಯು ಪರೀಕ್ಷೆ ತೆಗೆದುಕೊಳ್ಳುತ್ತಾರೆ, ಇವರಲ್ಲಿ ಶೇಕಡ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಪದವೀಧರರಾಗುತ್ತಾರೆ, ಇವರಿಗೆಲ್ಲಾ ನೌಕರಿ ಕೊಡಲು ಯಾವುದೇ ಸರ್ಕಾರದಿಂದಲೂ ಸಾಧ್ಯವಿಲ್ಲ, ಹಾಗೆ ಕೊಟ್ಟರೂ ಎಲ್ಲರಿಗೂ ಸಂಬಳ ಕೊಡಲು ಸಂಪನ್ಮೂಲ ಇರುವುದಿಲ್ಲ, ಆದ್ದರಿಂದ ಅಂತರಿಕ ಉತ್ಪಾದನೆ ಹಾಗೂ ರಾಷ್ಟ್ರೀಯ ಆದಾಯ ಹೆಚ್ಚಿಸುವಂತಹ ಉದ್ದಿಮೆಗಳನ್ನು ಕೈಗೊಳ್ಳುವ ಕಡೆಗೆ ಯುವಕ ಯುವತಿಯರು ಗಮನಹರಿಸಬೇಕು ಎಂದು ಹೇಳಿದರು.

Pre University Institutes ಪಠ್ಯೇತರ ಚಟುವಟಿಕೆಗಳ ಸಮಾರೋಪ ಎಂದರೆ ಇಲ್ಲಿಗೆ ಇದು ಸಾಕು ನಾಳೆಯಿಂದ ಪರೀಕ್ಷೆಗಾಗಿ ಓದಿನ ಕಡೆಗೆ ಪೂರ್ಣ ಗಮನ ಕೊಡಿ ಎಂದು ಹೇಳುವ ಕಾರ್ಯಕ್ರಮ ಎಂದರು. ಸಮಾರಂಭದ ಅತಿಥಿಗಳಾಗಿ ಮಾತನಾಡಿದ ಧರಾಮ ಪದವಿ ಕಾಲೇಜು ಪ್ರಾಂಶುಪಾಲೆ ಶ್ರೀಮತಿ ಎಂ ಪಿ ರೂಪಶ್ರೀಯವರು ಪ್ರತಿ ವಿದ್ಯಾರ್ಥಿಯೂ ತಾನು ಓದುತ್ತಿರುವುದು ತನ್ನ ಭವಿಷ್ಯಕ್ಕಾಗಿ ಎಂದು ತಿಳಿದು ಕೊಳ್ಳಬೇಕು, ಇದಕ್ಕೆ ಏಕಾಗ್ರತೆ ಹಾಗೂ ಆತ್ಮವಿಶ್ವಾಸ ಅವಶ್ಯ ಎಂದರು. ಅಧ್ಯಕ್ಷ ಸ್ಥಾನದಿಂದ ಕಾಲೇಜಿನ ಪಿಯು ವಿಭಾಗದ ಪ್ರಾಂಶುಪಾಲ ಜೆ ಶಿವಪ್ಪನವರು ಮಾತನಾಡುತ್ತಾ ಪ್ರತಿ ವಿದ್ಯಾರ್ಥಿಯೂ ತಾನು ಸಮರ್ಥ ಎಂಬ ದೃಢ ಭಾವನೆಯಿಂದ ಸಾಧನೆ ಮಾಡಬೇಕು ಎಂದರು. ವಿದ್ಯಾರ್ಥಿ ಸಂಘದ ಹರ್ಷವರ್ಧನ ಅಕ್ಕಿ ಹಾಗೂ ಹೆಚ್ ಎಸ್ ಮೇಘನಾ ಉಪಸ್ಥಿತರಿದ್ದು ಅನುಷಾ ಎಮ್, ಐಶ್ವರ್ಯ ಆರ್ ಪ್ರಾರ್ಥನೆ ಹಾಡಿದರು. ರಮ್ಯಾ ಬಿ ಸ್ವಾಗತ ಕೋರಿದರೆ ಇಂದೂ ಆರ್ ಅತಿಥಿಗಳ ಪರಿಚಯ ಮಾಡಿದರು. ಉಪನ್ಯಾಸಕರುಗಳಾದ ಕೆ ಜಿ ಶ್ವೇತಾ, ಶೋಭಾ ಟಿ, ರಶ್ಮಿ ಎ ಆರ್ ಬಹುಮಾನ ವಿತರಣೆ ನಿರ್ವಹಿಸಿದರೆ ರುದ್ರೇಶ್ ಮುಂತಾದವರು ಸಹಕರಿಸಿದರು. ಕೆ ರಂಗಮ್ಮ ಮೇಘನಾ ನಿರೂಪಿಸಿದ ಕಾರ್ಯಕ್ರಮದಲ್ಲಿ ವಂದನೆಗಳನ್ನು ಎ ಗಗನ್ ಅರ್ಪಿಸಿದರು. ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಪ್ರಸ್ತುತಿಗಳು ನೆರವೇರಿದವು.

Rotary Club Shivamogga ಭಾರತದ ಆಧ್ಯಾತ್ಮಿಕ ಶಕ್ತಿ, ಸ್ವಾಮಿ ವಿವೇಕಾನಂದರು- ಜಿ.ಕಿರಣ್ ಕುಮಾರ್

0

Rotary Club Shivamogga ಯುವ ಸಮೂಹವನ್ನು ಜಾಗೃತಗೊಳಿಸಿದ ಭಾರತದ ಆಧ್ಯಾತ್ಮಿಕದ ಪ್ರೇರಕಶಕ್ತಿ ಸ್ವಾಮಿ ವಿವೇಕಾನಂದರು ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಜಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆಯಲ್ಲಿ ಮಾತನಾಡಿ, ಭವ್ಯ ಭಾರತ ನಿರ್ಮಾಣದ ಸಂಕಲ್ಪ ತೊಟ್ಟ ಅದಮ್ಯ ಚೇತನ ಸ್ವಾಮಿ ವಿವೇಕಾನಂದರು ಮೂರು ಶ್ರೇಷ್ಠ ಸಾಲುಗಳನ್ನು ಹೇಳಿದ್ದರು. ನಿಮ್ಮನ್ನು ಸಹಾಯ ಮಾಡಿದವರನ್ನು ಎಂದು ಮರೆಯಬೇಡಿ, ನಿಮ್ಮನ್ನು ನಂಬಿದವರಿಗೆ ಎಂದು ಮೋಸ ಮಾಡಬೇಡಿ, ನಿಮ್ಮನ್ನ ಪ್ರೀತಿಸಿದವರಿಗೆ ಎಂದು ದ್ವೇಷಿಸಬೇಡಿ ಎಂದಿದ್ದರು. ಯುವ ಸಮೂಹಕ್ಕೆ ಸ್ಪೂರ್ತಿಯಾಗಿದ್ದರು ಎಂದು ತಿಳಿಸಿದರು.
Rotary Club Shivamogga ಸ್ವಾಮಿ ವಿವೇಕಾನಂದರು ಪಾಶ್ಚಿಮಾತ್ಯ ದೇಶಗಳಿಗೆ ತೆರಳಿ ನಮ್ಮ ದೇಶದ ವೇದಾಂತ ಮತ್ತು ಯೋಗ ತತ್ವ ಜ್ಞಾನಗಳ ಪರಿಚಯಿಸುತ್ತಿದ್ದರು. ಸ್ವಾಮಿ ವಿವೇಕಾನಂದರ 162ನೇ ಜಯಂತಿಯನ್ನು ರೋಟರಿ ಕ್ಲಬ್ ಸೆಂಟ್ರಲ್ ನಲ್ಲಿ ಆಚರಿಸುತ್ತಿರುವುದು ತುಂಬಾ ಹೆಮ್ಮೆಯ ವಿಷಯ ಎಂದರು.
ಸ್ವಾಮಿ ವಿವೇಕಾನಂದರ ಆದರ್ಶಗಳು ಎಂದಿಗೂ ಅಜರಾಮರ. ದಿನಕ್ಕೊಮ್ಮೆ ನಿಮ್ಮೊಂದಿಗೆ ಮಾತನಾಡಿ ಇಲ್ಲದಿದ್ದರೆ ಈ ಜಗತ್ತಿನಲ್ಲಿ ಅತ್ಯುತ್ತಮ ವ್ಯಕ್ತಿಯನ್ನು ಭೇಟಿಯಾಗುವುದು ತಪ್ಪಿಸಿಕೊಳ್ಳುತ್ತೀರಿ, ನೀವು ಒಳಗಿನಿಂದಲೇ ಬೆಳೆಯಬೇಕು. ಯಾರು ನಿಮಗೆ ಕಲಿಸಲು ಸಾಧ್ಯವಿಲ್ಲ, ಯಾರು ನಿಮ್ಮನ್ನು ಆಧ್ಯಾತ್ಮಿಕರಾಗಿ ಮಾಡಲಾಗುವುದಿಲ್ಲ, ನಿಮ್ಮ ಆತ್ಮವನ್ನು ಹೊರತುಪಡಿಸಿ, ಬೇರೆ ಯಾರು ಇಲ್ಲ. ನಮ್ಮ ಆಲೋಚನೆಗಳು ನಮ್ಮನ್ನು ರೂಪಿಸುತ್ತದೆ ಎನ್ನುವ ಸ್ವಾಮಿ ವಿವೇಕಾನಂದರ ಮಾತುಗಳು ಇಂದಿಗೂ ಯುವ ಜನತೆಗೆ ಸ್ಪೂರ್ತಿಯಾಗಿದೆ ಎಂದು ಹೇಳಿದರು.
ರೋಟರಿ ಕ್ಲಬ್ ಶಿಮೊಗ್ಗ ಸೆಂಟ್ರಲ್ ಪದಾಧಿಕಾರಿಗಳ ಸಭೆಯಲ್ಲಿ ಕಾರ್ಯದರ್ಶಿ ಈಶ್ವರ್, ಖಜಾಂಚಿ ಬಸವರಾಜ್, ಸಹ ಕಾರ್ಯದರ್ಶಿ ಜಯಶೀಲ ಶೆಟ್ಟಿ, ರವಿ ಕೂಟೊಜಿ ಧರ್ಮೇಂದ್ರ ಸಿಂಗ್, ರಮೇಶ್ ಎನ್, ಸಂತೋಷ್ ಬಿ ಎ, ಚಿದಾನಂದಯ್ಯ, ಚುಡಾಮಣಿ ಪವಾರ್, ಚಂದ್ರು ಜೆಪಿ, ಸತೀಶ್, ಧನಂಜಯ್, ನಿರಂಜನ್, ವಿಶ್ವನಾಥ್ ಕಾರ್ಯಕಾರಿ ಮಂಡಳಿಯ ಎಲ್ಲಾ ಸದಸ್ಯರು ಭಾಗವಹಿಸಿದ್ದರು.

Republic Day ಗಣರಾಜ್ಯೋತ್ಸವ ಪೂರ್ವಭಾವಿ ಸಭೆ

0

Republic Day ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಸ್ಥಾನ ಗಳಿಸಿದ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮತ್ತು ಸ್ಥಾನ ಗಳಿಸಿದ ಕ್ರೀಡಾಪಟುಗಳನ್ನು ಸನ್ಮಾನಿಸಲು ಜ.10 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆರವರ ಅಧ್ಯಕ್ಷತೆಯಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Republic Day 2024 ರ ಜನವರಿ ಯಿಂದ 2025 ರ ಜನವರಿವರೆಗೆ ಒಂದು ವರ್ಷದ ಅವಧಿಯಲ್ಲಿ ಅಂತರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಜಿಲ್ಲೆಯಿಂದ ಭಾಗವಹಿಸಿ ಸ್ಥಾನ ಗಳಿಸಿರುವ ಪ್ರತಿಭಾನ್ವಿತ ಕ್ರೀಡಾಪಟುಗಳು ತಮ್ಮ ಸ್ವ ವಿವರವುಳ್ಳ ಅರ್ಜಿಯೊಂದಿಗೆ ಭಾಗವಹಿಸಿದ ಪ್ರಶಸ್ತಿ ಪತ್ರಗಳ ನಕಲುಗಳನ್ನು ದೃಢೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಯವ ಸಬಲೀಕರಣ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಈ ಕಚೇರಿಗೆ ಜ.20 ರೊಳಗಾಗಿ ಸಲ್ಲಿಸಬೇಕು ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Urban Development Authority ಸೈಟು ನೀಡುವ ಸುಳ್ಳು ಹೇಳಿಕೆಗೆ ಮರುಳಾಗಬೇಡಿ ಸೂಡಾ ಎಚ್ಚರಿಕೆ

0

Urban Development Authority ಕೆಲವು ವ್ಯಕ್ತಿಗಳು ಸೂಡಾ ನಿವೇಶನ ಮಂಜೂರು ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿದ್ದು ಇಂತಹ ಯಾವುದೇ ಆಮಿಷಕ್ಕೆ ಸಾರ್ವಜನಿಕರು ಒಳಗಾಗದೇ ಇರುವಂತೆ ಸೂಡಾ ತಿಳಿಸಿದೆ.

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಕುರಿತು ಪ್ರಕಟಣೆ ಹೊರಡಿಸಿ 2024 ರ ಡಿ.05 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಅರ್ಜಿ ಸಲ್ಲಿಸುವ ಅವಧಿ ಈಗಾಗಲೇ ಮುಗಿದಿರುತ್ತದೆ.

ನಿವೇಶನ ಹಂಚಿಕೆ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಪ್ರಾಧಿಕಾರದಿಂದ ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ನಿವೇಶನ ಹಂಚಿಕೆ ನಿಯಮದಂತೆ ಪರಿಶೀಲಿಸಲು ಕ್ರಮ ವಹಿಸಲಾಗುವುದು.
Urban Development Authority ಆದರೆ ಕೆಲವು ವ್ಯಕ್ತಿಗಳು ಸಾರ್ವಜನಿಕರಿಗೆ ನಿವೇಶನಗಳನ್ನು ಮಂಜೂರಾತಿ ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿರುತ್ತದೆ. ಇಂತಹ ಹಣ/ಯಾವುದೇ ಆಮಿಷಗಳಿಗೆ ಒಳಗಾಗದೇ ಇರಲು ಪ್ರಾಧಿಕಾರ ತಿಳಿಸಿದೆ. ಒಂದು ವೇಳೆ ಇಂತಹ ಯಾವುದೇ ಆಮಿಷಗಳಿಗೆ ತಾವು ಒಳಗಾದಲ್ಲಿ ಈ ಪ್ರಾಧಿಕಾರವು ಜವಾಬ್ದಾರಿಯಾಗಿರುವುದಿಲ್ಲವೆಂದು ಈ ಮೂಲಕ ತಿಳಿಸಲಾಗಿದೆ ಎಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಮತ್ತು ಆಯುಕ್ತರಾದ ವಿಶ್ವನಾಥ ಮುದಜ್ಜಿ ತಿಳಿಸಿದ್ದಾರೆ.

Inner Wheel Shivamogga ಅಸ್ವಸ್ಥರು, ಅಶಕ್ತರಿಗೆ ಮಾಡಿದ ಸೇವರ ಸಾರ್ಥಕ – ಜ್ಯೋತಿ ಬೆನಕಪ್ಪ

0

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕವಾಗಬೇಕಾದರೆ ಸರಿಯಾದ ಫಲಾನುಭವಿಗಳನ್ನು ಹುಡುಕಿ ಗುರುತಿಸಿ ನೀಡಬೇಕು ಅದರಲ್ಲೂ ಮಾನಸಿಕ ಅಸ್ವಸ್ಥರು ಅಶಕ್ತರಿಗೆ ಮಾಡಿದ ಸೇವೆ ಸಾರ್ಥಕ ಎಂದು ಇನ್ನರ್ ವೀಲ್ ಶಿವಮೊಗ್ಗ ಪೂರ್ವ ಸಂಸ್ಥೆಯ ಸದಸ್ಯರಾದ ಶ್ರೀಮತಿ ಜ್ಯೋತಿ ಬೆನಕಪ್ಪ ಅಭಿಮತ ವ್ಯಕ್ತಪಡಿಸಿದರು. ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಇನ್ನರ್ ವಿಲ್ ಡೇ ಕಾರ್ಯಕ್ರಮದಲ್ಲಿ ಆಧುನಿಕ ಮಾದರಿಯ ವಿತ್ ಕಮೋಡ್ ಇರುವ ವೀಲ್ ಛೇರ್ ದೇಣಿಗೆಯಾಗಿ ನೀಡಿ ಮಾತನಾಡಿದರು.

ದಾನ ಮಾಡುವ ಕೈ ಎಂದು ಸೋಲುವುದಿಲ್ಲ ಸೇವೆ ನಮ್ಮನ್ನು ಸದಾ ಕಾಪಾಡುತ್ತದೆ ಎಂದ ಅವರು ಇಂತಹವರನ್ನು ಗುರುತಿಸಿ ಸಹಾಯತ್ತ ನೀಡೋಣ ಎಂದು ನುಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇನ್ನರ್ ವೀಲ್ ಶಿವಮೊಗ್ಗ ಪೂರ್ವದ ಅಧ್ಯಕ್ಷರಾದ ಶ್ರೀಮತಿ ವಾಗ್ದೇವಿ ಬಸವರಾಜ್ ಅವರು ವಹಿಸಿ ಮಹಿಳೆಯರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ತಮ್ಮ ಪ್ರತಿಬೆ ಅನಾವರಣಗೊಳ್ಳುವವರ ಜೊತೆಗೆ ಸಮಾಜಮುಖಿಯಾಗಿ ತೊಡಗಿಸಿಕೊಳ್ಳಲು ಅವಕಾಶ ಸಿಗುತ್ತದೆ ಎಂದು ನುಡಿದರು.

Inner Wheel Shivamogga ಇನ್ನರ್ ವೀಲ್ ಸಂಸ್ಥೆ ಸ್ಥಾಪನೆಯಾಗಿ 101 ವರ್ಷ ಕಳೆದಿದ್ದು ಈಗಾಗಲೇ ಪ್ರಪಂಚಾದ್ಯಂತ ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡುತ್ತಾ ತನ್ನದೇ ಆದ ಇತಿಹಾಸ ಸೃಷ್ಟಿ ಮಾಡಿದೆ ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಮಾಜಿ ಅಧ್ಯಕ್ಷರಾದ ಬಿಂದು ವಿಜಯ ಕುಮಾರ್ ಇನ್ನರ್ ವೀಲ್ ಜಿಲ್ಲಾ ಉಪಾಧ್ಯಕ್ಷರಾದ ಶಬರಿ ಕಡಿದಾಳ್. ರೋಟರಿ ಮಾಜಿ ಸಹಾಯಕ ಗವರ್ನರ್ ಸುನಿತಾ ಶ್ರೀಧರ್. ಮಾಜಿ ಜಿಲ್ಲಾ ಚೇರ್ಮನ್ ಸುಧಾ ಪ್ರಸಾದ್. ಕಾರ್ಯದರ್ಶಿ ಲತಾ ಸೋಮಶೇಖರ್ ಹಾಗೂ ಇನ್ನರ್ ವೀಲ್ ಸದಸ್ಯರು ಉಪಸ್ಥಿತರಿದ್ದರು.

Ambigara Chowdaiya ಜನವರಿ 21. ಅಂಬಿಗರ ಚೌಡಯ್ಯ ಜಯಂತಿ

0

Ambigara Chowdaiya ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಜ.21 ರ ಬೆಳಿಗ್ಗ 11 ಗಂಟೆಗೆ ನಗರದ ಕುವೆಂಪು ರಂಗಮಂದಿರಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೆರವೇರಿಸುವರು. ವಿಶೇಷ ಅಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ತಂಗಡಗಿ ಶಿವರಾಜ್ ಸಂಗಪ್ಪ ಪಾಲ್ಗೊಳ್ಳುವರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಗಂಗಾ ಮತಸ್ಥರ ಸಮಾಜ ಅಧ್ಯಕ್ಷರು, ತಾಲ್ಲೂಕು ಗಂಗಾ ಮತಸ್ಥರ ಸಮಾಜ ಅಧ್ಯಕ್ಷರು, ಜಿಲ್ಲಾ ಮೊಗವೀರರ ಸಂಘ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಸತ್ಯನಾರಾಯಣ ಉಪನ್ಯಾಸ ನೀಡುವರು.

Shivamogga Rotary Club ಸಕಾಲದಲ್ಲಿ ಮೂಳೆ ಸಾಂದ್ರತೆ ಪರೀಕ್ಷೆ ಮಾಡಿಸಿ- ಡಾ.ಎಚ್.ಸಿ.ಶಿವಕುಮಾರ್

0

Shivamogga Rotary Club 40 ವರ್ಷಗಳ ನಂತರ ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳುವುದರ ಜೊತೆಗೆ ಸಕಾಲದಲ್ಲಿ ಮೂಳೆ ಸಾಂದ್ರತೆ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮ್ಯಾಕ್ಸ್ ಆಸ್ಪತ್ರೆಯ ಖ್ಯಾತ ಕೀಲು ಮೂಳೆ ತಜ್ಞರಾದ ರೋಟೇರಿಯನ್ ಡಾ. ಶಿವಕುಮಾರ್ ಹೆಚ್ ಸಿ ತಿಳಿಸಿದರು ಅವರು ಇಂದು ಶಿವಮೊಗ್ಗ ರೋಟರಿ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾದ ಉಚಿತ ಮೂಳೆ ತಪಾಸಣೆ, ಶಿಬಿರ ಉದ್ಘಾಟಿಸಿ ಮಾತನಾಡಿದರು. ಇಂದು ಶೇಕಡ 30ರಷ್ಟು ಜನರು ಮೂಳೆ ತೊಂದರೆಯಿಂದ ಬಳಲುತ್ತಿದ್ದಾರೆ. ಪ್ರಾರಂಭಿಕ ಹಂತದಲ್ಲಿಯೇ ಕಾಯಿಲೆ ಪತ್ತೆ ಹಚ್ಚಿ ಸಕಾಲದಲ್ಲಿ ಚಿಕಿತ್ಸೆ ಪಡೆದುಕೊಂಡರೆ ರೋಗ ಗುಣಪಡಿಸಿಕೊಳ್ಳಬಹುದು ಎಂದು ತಿಳಿಸಿದರು.

Shivamogga Rotary Club ಪ್ರತಿನಿತ್ಯ ವ್ಯಾಯಾಮ ಯೋಗ ಪ್ರಾಣಾಯಾಮ ಹಾಗೂ ಪೌಷ್ಟಿಕಾಂಶ ಆಹಾರ ಪದಾರ್ಥಗಳ ಸೇವನೆಯಿಂದ ಕೀಲು ಮೂಳೆಗಳು ಸದೃಢವಾಗಿರುತ್ತವೆ. ಆದ್ದರಿಂದ ಇಂತಹ ಶಿಬಿರದಲ್ಲಿ ಸಾರ್ವಜನಿಕರು ಭಾಗವಹಿಸಿ ಉಚಿತವಾಗಿ ಮೂಳೆ ಸಾಂದ್ರತೆ ತಪಾಸಣೆ ಮಾಡಿಸಿಕೊಳ್ಳುವುದರ ಜೊತೆಗೆ ಅಗತ್ಯ ಮಾಹಿತಿ ಪಡೆದುಕೊಳ್ಳಬೇಕು ಎಂದು ನುಡಿದರು ಅಧ್ಯಕ್ಷರಾದ ಕೆ ಸೂರ್ಯನಾರಾಯಣ ಉಡುಪ ಮಾತನಾಡುತ್ತಾ ಇಂತಹ ಪರೀಕ್ಷೆ ಬೇರೆಡೆ ಮಾಡಿಸಿಕೊಂಡಾಗ 2000 ದಿಂದ 3000 ಖರ್ಚಾಗುತ್ತೆ ಆದರೆ ಇಲ್ಲಿ ಸಂಪೂರ್ಣವಾಗಿ ಉಚಿತವಾಗಿ ಮಾಡುತ್ತಿರುವುದರಿಂದ ಇಂತಹ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು ಕಾರ್ಯದರ್ಶಿ ಎನ್ ಜಿ ಉಷಾ ಮಾಜಿ ಸಹಾಯಕ ಗೌರ್ನರ್ ವಿಜಯಕುಮಾರ್ ಜಿ ಮಹಾಬಲೇಶ್ವರ ಭಟ್ ಎನ್ ವಿ ಭಟ್ ಗಾಯತ್ರಿ ಸುಮತಿಂದ್ರ ಸಿ

ವಿಜಯಕುಮಾರ್ ಕಿಶೋರ್ ಶೀರ್ ನಾಳಿ ಶೈಲಿನ್ ಮುಂತಾದ ರೋಟರಿ ಸದಸ್ಯರು ಸದಸ್ಯರು ಆಸ್ಪತ್ರೆ ಸಿಬ್ಬಂದಿಯವರು ಉಪಸ್ಥಿತರಿದ್ದರು ೯೦ ಜನ ನಾಗರಿಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಂಡರು.

S.N.Chennabasappa ಶಿವಮೊಗ್ಗದ ಶಾರದಮ್ಮ ಲೇಔಟ್ ನಲ್ಲಿ ಶಾಸಕರಿಂದ ಮಾಸಿಕ ಸಭೆ

0

S.N.Chennabasappa ಶಿವಮೊಗ್ಗ ನಗರದ ಶಾಸಕರಾದ ಎಸ್. ಎನ್. ಚನ್ನಬಸಪ್ಪ ಅವರು ನಗರದ ಸೋಮಿನಕೊಪ್ಪದಲ್ಲಿರುವ ಶಾರದಾ ಲೇಔಟ್ ಗೆ ಜಲ ಮಂಡಳಿಯ ಅಧಿಕಾರಿಗಳು ಹಾಗೂ ಆರೋಗ್ಯ ನಿರೀಕ್ಷಕರೊಂಡಿಗೆ ಭೇಟಿ ನೀಡಿ, ಬಿ.ಎನ್ ಶಾರದಮ್ಮ ಲೇಔಟ್ ನಿವಾಸಿಗಳ ಸಂಘದ ಮಾಸಿಕ ಸಭೆಯಲ್ಲಿ ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.

S.N.Chennabasappa ಈ ಸಂದರ್ಭದಲ್ಲಿ ಬಡಾವಣೆಯಲ್ಲಿರುವಂತಹ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಸ್ಥಳೀಯರಿಂದ ಮಾಹಿತಿ ಪಡೆದು, ಶೀಘ್ರವೇ ಸಮಸ್ಯೆಯನ್ನು ಪರಿಹರಿಸಲು ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಿದರು.

DYSP Gajanana Vamana Sutara ಡಿವೈಎಸ್ ಪಿ ವಾಮನ ಸುತಾರ ಅವರಿಗೆ ಬೀಳ್ಕೊಡಿಗೆ

0

DYSP Gajanana Vamana Sutara ಶಿವಮೊಗ್ಗ ಪಟ್ಟಣ ಪಂಚಾಯತ್ ವತಿಯಿಂದ ತೀರ್ಥಹಳ್ಳಿಯಿಂದ ವರ್ಗಾವಣೆಗೊಂಡಿರುವ ಡಿವೈಎಸ್ಪಿ ಗಜಾನನ ವಾಮನ ಸುತಾರ ಅವರಿಗೆ ಗೌರವಿಸಲಾಯಿತು.

DYSP Gajanana Vamana Sutara ತೀರ್ಥಹಳ್ಳಿಯಲ್ಲಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.
ಜನಸ್ನೇಹಿ ಅಧಿಕಾರಿ ಆಗಿದ್ದ ಗಜಾನನ ವಾಮನ ಸುತಾರ ಅವರನ್ನು ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ