Sunday, February 8, 2026
Sunday, February 8, 2026
Home Blog Page 46

CM Siddharamaih ತಾಂಡ ಮತ್ತು ಗೊಲ್ಲರಹಟ್ಟಿಗಳ 1.08 ಲಕ್ಷ ನಿವಾಸಿಗಳಿಗೆ ಹಕ್ಕು ಪತ್ರ ನೀಡಲಾಗಿದೆ- ಸಿದ್ಧರಾಮಯ್ಯ

0

CM Siddharamaih ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ ನೀಡುವ ಕೆಲಸ ಪ್ರಗತಿಯಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಈ ಕಾನೂನು 2017ರಲ್ಲಿ ತಿದ್ದುಪಡಿ ಆದ ನಂತರ 2023ರ ಮೇ ವರೆಗೆ 6 ವರ್ಷಗಳಲ್ಲಿ 1.08 ಲಕ್ಷ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿತ್ತು. ಮೇ 2023 ರಿಂದ 2025ರವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ನೀಡಲಾಗಿದೆ. ಮೇ 2025ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ, 2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ.

ದಶಕಗಳ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯ ಕಂದಾಯ ಗ್ರಾಮ ರಚನೆ ಅಭಿಯಾನದ ಮುಖಾಂತರ ನಡೆಯುತ್ತಿದೆ. ದಾಖಲೆ ರಹಿತ ವಸತಿ ಪ್ರದೇಶ ಮತ್ತು ಮನೆಗಳನ್ನು ಗುರುತಿಸಿ ಸರ್ವೆ ಮಾಡಿ, ದಾಖಲೆಗಳನ್ನು ತಯಾರಿಸಿ, ಅಧಿಸೂಚನೆ ಹೊರಡಿಸಿ, ಹಕ್ಕುಪತ್ರ ನೀಡಿ, ಕ್ರಯಪತ್ರದಂತೆ ನೋಂದಣಿ ಮಾಡಿ ಸ್ಥಳೀಯ ಸಂಸ್ಥೆಯಲ್ಲಿ ಪಕ್ಕಾ ಖಾತೆ ಮಾಡುವುದರ ಮುಖಾಂತರ ಸಂಪೂರ್ಣ ಮಾಲಿಕತ್ವದ ಗ್ಯಾರಂಟಿ ನೀಡುವ ಈ ಕಾರ್ಯ ರಾಜ್ಯಾದ್ಯಂತ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದೆ.

CM Siddharamaih ಬಹುತೇಕ ಬಡ ಕುಟುಂಬಗಳೇ ಇದರ ಫಲಾನುಭವಿಗಳಾಗಿದ್ದಾರೆ. ಯಾರಿಂದಲೂ ಅರ್ಜಿಗೆ ಕಾಯದೆ, ಕಂದಾಯ ಇಲಾಖೆಯ ಅಧಿಕಾರಿಗಳೇ ಸ್ವತಃ ಜನರ ಮನೆ ಬಾಗಿಲಿಗೆ ಹೋಗಿ ಇಷ್ಟೂ ಕೆಲಸವನ್ನು ಮಾಡಿಕೊಡುತ್ತಿದ್ದಾರೆ. ಇದರಲ್ಲಿ ಆಗಿರುವ ಪ್ರಗತಿಯನ್ನುಒಳಗೊಂಡರೆ ಒಟ್ಟು 4 ಲಕ್ಷ ಕುಟುಂಬಗಳಿಗೆ ಶಾಶ್ವತ ನೆಮ್ಮದಿ ನೀಡಿದಂತಾಗುತ್ತದೆ ಎಂದು ಹೇಳಿದ್ದಾರೆ.

B.Y.Raghavendra ಪ್ರಕೃತಿಯೊಂದಿಗೆ ಅವಿನಾಭಾವ ಬೆಸೆಯುವ ಆಯುರ್ವೇದ, ವಿಶ್ವಕ್ಕೆ ಭಾರತದ ಕೊಡುಗೆ- ಬಿ.ವೈ.ವಿಜಯೇಂದ್ರ

0

B.Y.Raghavendra ಆಯುರ್ವೇದ ಎನ್ನುವುದು ಕೇವಲ ವೈದ್ಯಕೀಯ ಚಿಕಿತ್ಸಾ ಪದ್ಧತಿ ಮಾತ್ರವಲ್ಲ, ಅದು ರೋಗ ಬರದಂತೆ ತಡೆಯುವ ಪ್ರಾಚೀನ ಭಾರತದ ಜೀವನ ವಿಧಾನವೂ ಹೌದು. ಪ್ರಕೃತಿಯೊಂದಿಗೆ ಮನುಷ್ಯರ ಅವಿನಾಭಾವ ಸಂಬಂಧ ಬೆಸೆಯುವ ಆಯುರ್ವೇದ ವಿಶ್ವಕ್ಕೆ ಭಾರತದ ಕೊಡುಗೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ 2ನೇ ‘ಆಯುರ್ವೇದ ವಿಶ್ವ ಶೃಂಗಸಭೆ’ಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ,ಶಾಸಕ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿದ್ದರು.

B.Y.Raghavendra ಈ ಸಂದರ್ಭದಲ್ಲಿ ಹರಿಹರಪುರ ಪರಮಪೂಜ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು, ರಾಮಕೃಷ್ಣ ಮಠದ ಅಧ್ಯಕ್ಷರಾದ ಪೂಜ್ಯ ಶ್ರೀ ಶ್ರೀ ಸ್ವಾಮಿ ನಿತ್ಯಸ್ಥಾನಾನಂದರು, ಗೌರಿಗದ್ದೆಯ ಪೂಜ್ಯ ಶ್ರೀ ಅವದೂತ ವಿನಯ್ ಗುರೂಜಿಗಳು ದಿವ್ಯಸಾನ್ನಿಧ್ಯ ವಹಿಸಿದ್ದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ.ವಿ.ಸದಾನಂದ ಗೌಡ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Klive Special Article ನಿಮ್ಮೂರು ಇತಿಹಾಸ ನಿಮಗೆಷ್ಟು ಗೊತ್ತು? ಬೆಳಗುತ್ತಿ ಅರಸರು

0

ಭಾಗ- 3

ಲೇ: ದಿಲೀಪ್ ನಾಡಿಗ್

Klive Special Article ಸಂತೆಬೆನ್ನೂರಿನ ಕೆಂಗ ಹನುಮಂತನೂ, ತರೀಕೆರೆ ಪಾಳೆಯಗಾರರು ದಂಗೆ ಎದ್ದು ಸ್ವತಂತ್ರರಾದರು, ಆಗ ಬೆಳಗುತ್ತಿ ಅರಸ ದಾಸಪ್ಪನು ಇವರ ಹುಟ್ಟಡಗಿಸಲು ಬಂಕಾಪುರದ ರಂಗರಾಯನ ಸಹಾಯ ಕೇಳಿದ್ಸು ರಂಗರಾಯನು ದಾಸಪ್ಪನಿಂದ ಐದುಸಾವಿರ ರೂಪಾಯಿ ಪಡೆದು ತಟಸ್ಥ ನಾದನು. ನಂತರದಲ್ಲಿ ದಾಸಪ್ಪನು ಬೀಜಾಪುರದ ಸುಲ್ತಾನನ ಸಹಾಯ ಕೇಳಲು ಸುಲ್ತಾನನು ಬಿಲಾವರ್ ಖಾನನೆಂಬ ಸೇನಾಪತಿಯನ್ನು ಕಳುಹಿಸಿದನು. ಆದರೆ ಬಿಲಾವರ್ ಖಾನನು ಬೆಳಗುತ್ತಿ ಯನ್ನು ವಶಪಡಿಸಿಕೊಂಡು ಬೀಜಾಪುರದ ಆಡಳಿತಕ್ಕೆ ಸೇರಿಸಿದನು. ಬಿಲಾವರ್ ಖಾನ್ ಸುಲ್ತಾನನ ಆದೇಶದಂತೆ ದಾಸಪ್ಪನಿಗೆ ಹಾಗೂ ಅವನ ವಂಶಜರಿಗೆ ಜೀವನೋಪಾಯಕ್ಕಾಗಿ ಉಡುಗಣಿ, ಮಹಾದೇವ ಪುರ, ಹಾರನಹಳ್ಳಿ, ಚಂದ್ರಗುತ್ತಿ 7 ತಾಲ್ಲೂಕ್ ಗಳನ್ನು 86 ಗ್ರಾಮಗಳನ್ನು ನೀಡಿದನೆಂದು ಬೆಳಗುತ್ತಿ ಯ ಕೈಫಿಯತ್ತಿನಲ್ಲಿ ಉಲ್ಲೇಖವಾಗಿದೆ. ದಾಸಪ್ಪನ ಮಗನಾದ ಇಮ್ಮಡಿ ವೆಂಕಟಾದ್ರಿ ಯು ಬಿಲಾವರ್ ಖಾನನನ್ನು ಬೆಳಗುತ್ತಿಯಿಂದ (ಕ್ರಿ.ಶ. 1571 ರಿಂದ ಕ್ರಿ.ಶ. 1616) ಒದ್ದು ಓಡಿಸಿ ಒಂಬತ್ತು ಲಕ್ಷ ರೂಪಾಯಿ ವರಹಗಳ ನಾಡನ್ನು ವಶಪಡಿಸಿಕೊಂಡು ತನ್ನ ಎರಡನೆ ಪತ್ನಿಯ ಮಗನಾದ ಚೌಡಗೌಡನನ್ನು ಆಡಳಿತ ನಡೆಸಲು ನೇಮಿಸಿದನು. ಇವನ‌ಮಗನಾದ ಸದಾಶಿವ ನನ್ನು ಸರ್ವಾಧಿಕಾರಿ ಯನ್ನಾಗಿ ಮಾಡಿ “ರಾಮಬಾಣ” ವೆಂಬ ಪಟ್ಟದಾನೆಯನ್ನು ನೀಡಿದನು. ಇದು ಸೊಂಡಿಲಿನಿಂದ ಮಣ್ಣನ್ನು ತೆಗೆದು ತೂರುತ್ತಿದ್ದದ್ದನ್ನು ಕಂಡ ಅರಮನೆಯ ಗುರುಗಳು ಇದು ಬೆಳಗುತ್ತಿಯ ಅವನತಿಯ ಸಂಕೇತ ವೆಂದು ಹೇಳಿದ್ದು ಸುಳ್ಳಾಗದೆ ಬೀಜಾಪುರದಿಂದ ಮತ್ತೆ ಬಂದ ಬಿಲಾವರ್ ಖಾನನು ಪುನಃ ಬೆಳಗುತ್ತಿ ಯನ್ನು ವಶಪಡಿಸಿಕೊಂಡು ಮತ್ತೆ 86 ಗ್ರಾಮಗಳನ್ನು ನೀಡಿದನು.

Klive Special Article ಬೆಳಗುತ್ತಿ ಯನ್ನು ಕ್ರಿ.ಶ. 1611 ರಿಂದ ಕ್ರಿ.ಶ. 1622 ರವರೆಗೆ ಎರಡನೆ ವೆಂಕಟಾದ್ರಿ ಯ ಮಗನಾದ ತಿಮ್ಮಪ್ಪನು ಕ್ರಿ.ಶ. 1623 ರಿಂದ ಕ್ರಿ.ಶ. 1642 ರವರೆಗೆ ದೊಡ್ಡಪ್ಪನಾಯಕನು ಕ್ರಿ.ಶ. 1642 ರಿಂದ ಕ್ರಿ.ಶ. 1643 ರವರೆಗೆ ನರಸಪ್ಪ ಮತ್ತು ಕ್ರಿ.ಶ. 1644 ರಿಂದ ಕ್ರಿ.ಶ. 1666 ರವರೆಗೆ ರಾಘವಪ್ಪನು ಆಳಿದರು. ಈ ನಡುವೆ ಸಿಸ್ತಿನ ಶಿವಪ್ಪನಾಯಕನು ಕ್ರಿ.ಶ. 1645 ರಲ್ಲಿ ಬೆಳಗುತ್ತಿ ಯನ್ನು ವಶಪಡಿಸಿಕೊಂಡು ಕೆಳದಿ ರಾಜ್ಯಕ್ಕೆ ಸೇರಿಸಿಕೊಂಡನು. ಮುಂದೆ ಕ್ರಿ.ಶ. 1668 ರಿಂದ ಕ್ರಿ.ಶ. 1707 ರವರೆಗೆ ವೆಂಕಟಪ್ಪನೂ ಕ್ರಿ.ಶ. 1708ರಿಂದ ಕ್ರಿ.ಶ. 1762 ರವರೆಗೆ ರಾಜರ್ಶಿ 2ನೇ ತಿಮ್ಮಪ್ಪನೂ ಕೆಳದಿಯ ಅಧೀನದಲ್ಲಿ ಆಳಿದರು. 3ನೇ ತಿಮ್ಮಪ್ಪನು ಇವರ ಅಧೀನದಲ್ಲಿ ಕ್ರಿ.ಶ. 1763 ರವರೆಗೆ ಸಣ್ಣ ಸೈನ್ಯವನ್ನು ಇಟ್ಟುಕೊಂಡಿದ್ದನು.

ಮುಂದುವರೆಯುತ್ತದೆ.

ದಿಲೀಪ್ ನಾಡಿಗ್

ಕಾರ್ಯದರ್ಶಿ
ಮಲೆನಾಡು ಇತಿಹಾಸ ಸಂಶೋಧನಾ ಮತ್ತು ಅಧ್ಯಯನ ವೇದಿಕೆ (ರಿ), ಶಿವಮೊಗ್ಗ.
6361124316.

Bangalore International Film Festival 2026 ಜನವರಿ 29 ರಿಂದ ಬೆಂಗಳೂರಿನಲ್ಲಿ 17 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ, ನಟ ಪ್ರಕಾಶ್ ರಾಜ್ “ಬ್ರಾಂಡ್ ಅಂಬಾಸಿಡರ್”

0

Bangalore International Film Festival 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ.

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ  *ಶ್ರೀ ಪ್ರಕಾಶ್ ರಾಜ್ ಅವರನ್ನು
17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಆಗಿ ನೇಮಿಸಲಾಗಿದೆ.

ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ
ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ.

ಈ ಬಾರಿಯ ಚಲನಚಿತ್ರೋತ್ಸವದಲ್ಲಿ
ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ.

ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕಿನ್‌ಗಳಲ್ಲಿ ಚಿತ್ರೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ.

ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ.

ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31, 2025 ಕಡೆಯ ದಿನಾಂಕವಾಗಿರುತ್ತದೆ.

17ನೇ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಜಾಜಿನಗರದ ಲುಲು  ಮಾಲ್, ಜೊತೆಗೆ
ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಚಲನಚಿತ್ರಗಳ ಪ್ರದರ್ಶನವಿರಲಿದೆ.

ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನಗಳಿರಲಿವೆ.

ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶದ ಅತ್ಯುತ್ತಮ ಚಲನಚಿತ್ರಗಳು 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ. ಕಾನ್ಸ್ (ಫ್ರಾನ್ಸ್), ಬರ್ಲಿನ್ (ಜರ್ಮನಿ, ವೆನಿಸ್ (ಇಟಲಿ), ಕಾರ್ಲೋವಿ ವೇರಿ (ಜೆಕ್‌ ರಿಪಬ್ಲಿಕ್, ಲೊಕಾರ್ನೂ (ಸಿಟ್ಟರ್ಲೆಂಡ್), ರಾಟರ್‌ಡ್ಯಾಮ್ (ನೆದರ್ ಲ್ಯಾಂಡ್), ಬೂಸಾನ್ (ದಕ್ಷಿಣ ಕೂರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಒಂದೇ ಕಡೆ ಸಿನಿಮಾ ಪ್ರಿಯರಿಗೆ ವೀಕ್ಷಿಸಲು ದೊರೆಯಲಿವೆ.

ಜೊತೆಗೆ ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶದ ಅತ್ಯುತ್ತಮ ಚಲನಚಿತ್ರಗಳು ಸಹ ನಮ್ಮ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

Bangalore International Film Festival ಪೋಲಿಷ್ ಕಲ್ಪರಲ್ ಸೆಂಟರ್, ನವದೆಹಲಿ, ಗೋಥೆ ಇನ್ಸಿಟ್ಯೂಟ್ – ಮ್ಯಾಕ್ಸ್ ಮುಲ್ಲರ್ ಭವನ, ಬೆಂಗಳೂರು, ಅಲಿಯಾನ್ಸ್ ಫ್ರಾಂಸೇ – ಫ್ರೆಂಚ್ ಇನ್ಸಿಟ್ಯೂಟ್ ಹಾಗೂ ರಾಯಲ್ ಥೈಲ್ಯಾಂಡ್ ಕಾನ್ಸುಲೇಟ್‌ನವರು ಅವರ ದೇಶಗಳ ಅತ್ಯುತ್ತಮ ಚಲನಚಿತ್ರಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ನೀಡುತ್ತಿದ್ದಾರೆ.

ಹಾಗೆಯೇ ಪೋಲಿಷ್ ಕಲ್ಬರಲ್ ಸೆಂಟರ್ ಸಹಯೋಗದಲ್ಲಿ ಪೊಲೆಂಡ್‌ನ ಖ್ಯಾತ ನಿರ್ದೇಶಕರಾದ ಅಂದ್ರೆ ವಾಜ್ಞಾ ಅವರ ಶತಮಾನೋತ್ಸವ ಸ್ಮರಣಾರ್ಥವಾಗಿ ಅವರ ಆಯ್ದ ಚಲನಚಿತ್ರಗಳ ವಿಶೇಷ ಪುನರಾವಲೋಕನ (Retrospective), ಈ ಬಾರಿ ಚಿತ್ರೋತ್ಸವದಲ್ಲಿ ಆಯೋಜಿಸಲಾಗಿದೆ.

ಇದರೊಂದಿಗೆ ಅಲಿಯಾನ್ಸ್ ಫ್ರಾಂಸೇ ಬೆಂಗಳೂರು ಹಾಗೂ ಫ್ರೆಂಚ್ ಇನ್ಸಿಟ್ಯೂಟ್ ಇನ್ ಇಂಡಿಯಾ ಸಹಯೋಗದಲ್ಲಿ ಆಫ್ರಿಕಾ ಸಿನಿಮಾಗಳ ಇತಿಹಾಸವನ್ನು ದಾಖಲಿಸುವ ವಿಶೇಷ ಚಲನಚಿತ್ರಗಳ ಸರಣಿಯನ್ನೂ ಈ ವರ್ಷದ ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುತ್ತಿದೆ.

ಈ ಬಾರಿ ಚಿತ್ರೋತ್ಸವದ ಫಿಲಂ ಅಕಾಡೆಮಿಕ್ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಲು ಅನುಕೂಲವಾಗುವಂತೆ ಚಿತ್ರೋತ್ಸವದ ಪ್ರಧಾನ ಕೇಂದ್ರದಲ್ಲಿ ವಿಶೇಷ ವೇದಿಕೆ ಇರಲಿದೆ.

ಇದೇ ವೇದಿಕೆಯ ಆವರಣದಲ್ಲಿ 91 ವರ್ಷಗಳ ವರ್ಣ ರಂಜಿತ, ಸ್ಮರಣೀಯ ಸಿನಿಮಾ ಸಂಸ್ಕೃತಿಯ ಇತಿಹಾಸವಿರುವ ಕನ್ನಡ ಚಿತ್ರರಂಗದ ಮೈಲಿಗಲ್ಲುಗಳನ್ನು ಬಿಂಬಿಸುವ ವೈವಿಧ್ಯಮಯ ಛಾಯಾಚಿತ್ರ ಪ್ರದರ್ಶನವನ್ನು ಸಹ ಏರ್ಪಡಿಸಲಾಗುತ್ತದೆ.

ಅನುದಾನ
2025-26 ನೇರ ಸಾಲಿನ 17ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಏರ್ಪಡಿಸಲು  ರೂ.‌ 7ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದೆ.

ಸಮಾರೋಪ ಸಮಾರಂಭ ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ,
ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ,
ವಾರ್ತಾ ಇಲಾಖೆಯ ಕಾರ್ಯದರ್ಶಿ ಬಿ ಬಿ ಕಾವೇರಿ, ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್,
ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಅಕಾಡೆಮಿ ಸದಸ್ಯರು, ಸಂಘಟನಾ ಸಮಿತಿ ಸದಸ್ಯರು , ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಉಪಸ್ಥಿತರಿದ್ದರು.

S.N.Chennabasappa ದ್ವೇ಼ಷ ಭಾಷಣ ಪ್ರತಿಬಂಧಕ ವಿಧೇಯಕವು ಸಂವಿಧಾನ ವಿರೋಧಿ- ಶಾಸಕ ಎಸ್.ಎನ್.ಚನ್ನಬಸಪ್ಪ

0

S.N.Chennabasappa ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ತರುತ್ತಿರುವ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿದೇಯಕ-2025’ ಕೇವಲ ಒಂದು ವರ್ಗದ ಓಲೈಕೆಗಾಗಿ ರೂಪಿಸಿರುವ ಕರಾಳ ಕಾನೂನಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುವ ಈ ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ, ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಯ ವಿರುದ್ಧ ಜನಾಗ್ರಹ ವ್ಯಕ್ತಪಡಿಸಿ, ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮಾನ್ಯ ರಾಜ್ಯಪಾಲರಿಗೆ ಈ ಕೂಡಲೇ ಈ ವಿದೇಯಕವನ್ನು ತಡೆಹಿಡಿಯುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.

S.N.Chennabasappa ಈ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಜಗದೀಶ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ನಾಗರಾಜ್, ಶ್ರೀ ಜ್ಞಾನೇಶ್ವರ, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಗ್ರಾಮಾಂತರ ಅಧ್ಯಕ್ಷರಾದ ಶ್ರೀ ಸಿಂಗನಹಳ್ಳಿ ಸುರೇಶ್, ಮಾಜಿ ಶಾಸಕರಾದ ಶ್ರೀ ಅಶೋಕ್ ನಾಯ್ಕ್ ಸೇರಿದಂತೆ ಜಿಲ್ಲಾ ಹಾಗೂ ನಗರದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಧ್ವನಿ ಎತ್ತಿದರು.

Rotary Shivamogga ಕ್ರೀಡೆಗಳಲ್ಲಿ ಪಾಲ್ಗೊಂಡರೆ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ- ಚಂದ್ರಶೇಖರ್

0

Rotary Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಚಂದ್ರಶೇಖರ್ ಹೇಳಿದರು.

ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ರೋಟರಿ ಜಿಲ್ಲಾ ಮಲೆನಾಡು ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಕ್ರೀಡೆ, ಫಿಟ್‌ನೆಸ್, ಆರೋಗ್ಯ ಹಾಗೂ ರೋಟರಿಯ ಸೇವಾ ಮೌಲ್ಯಗಳ ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಸೊಗಾನೆ ಗ್ರಾಮದ ಬಾಸ್ಕೆಟ್‌ಬಾಲ್ ತಾರೆ ಸಹನಾ ಗೌಡ ಅವರನ್ನು ಎಲ್ಲ ಸ್ಪರ್ಧಾಳುಗಳ ಸಮ್ಮುಖದಲ್ಲಿ ವಿಶೇಷವಾಗಿ ಗೌರವಿಸಲಾಯಿತು. ಕ್ರೀಡೆಯನ್ನೇ ಜೀವನ ಗುರಿಯನ್ನಾಗಿ ಮಾಡಿಕೊಂಡಿರುವ ಸಹನಾ ಅವರು ಮಹಿಳಾ ಏಷ್ಯಾ ಕಪ್ 2021 ಹಾಗೂ 19ನೇ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ.

ರಾಷ್ಟ್ರೀಯ ಚಾಂಪಿಯನ್‌ಶಿಪ್, ಖೇಲೋ ಇಂಡಿಯಾ ಯೂತ್ ಗೇಮ್ಸ್ ಮತ್ತು ಆಲ್ ಇಂಡಿಯಾ ಟೂರ್ನಮೆಂಟ್‌ಗಳಲ್ಲಿ ಕರ್ನಾಟಕ ಪರವಾಗಿ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಶಿಸ್ತು ಮತ್ತು ಪರಿಶ್ರಮದ ಗೌರವವಾಗಿ ಭಾರತ ಸರ್ಕಾರ ಇನ್‌ಕಮ್ ಟ್ಯಾಕ್ಸ್ ಆಫೀಸರ್ ಆಗಿ ನೇಮಕ ನೀಡಿರುವುದು ವಿಶೇಷ.

Rotary Shivamogga ರೋಟರಿ ಜಿಲ್ಲಾ ನಿಯೋಜಿತ ಗವರ್ನರ್ ವಸಂತ್ ಹೋಬಳಿದಾರ್, ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ನಾಗರಾಜ್ ಎಸ್.ಆರ್, ಜಿಲ್ಲಾ ಸ್ಪೋರ್ಟ್ಸ್ ಚೇರ್ಮನ್ ರವಿ ಕೋಟೋಜಿ, ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಅಧ್ಯಕ್ಷ ವಿಶ್ವನಾಥ ನಾಯಕ, ಇವೆಂಟ್ ಚೇರ್ಮನ್ ಸಿ.ಎನ್.ಮಲ್ಲೇಶ್, ಶಂಕರ್, ಆನಂದ್ ಮೂರ್ತಿ, ಸರ್ಜಾ ಜಗದೀಶ್ ಉಪಸ್ಥಿತರಿದ್ದರು.

Shivaganga Yoga Center ಮಾನಸಿಕ ನೆಮ್ಮದಿಗೆ ಪೂಜೆ ಪುನಸ್ಕಾರ ಅಗತ್ಯ- ಬಿಂದು ವಿಜಯ್ ಕುಮಾರ್

0

Shivaganga Yoga Center ಪ್ರತಿ ವರ್ಷ ಧನುರ್ಮಾಸ ಪೂಜೆಯ ವಿಷ್ಣುವಿನ ಆರಾಧನೆಗೆ ಶ್ರೇಷ್ಠವಾದ ಮಾಸ. ಮಾನಸಿಕ ನೆಮ್ಮದಿಗೆ ಪೂಜೆ ಪುನಸ್ಕಾರ ಅಗತ್ಯ ಎಂದು ಕೃಷಿ ಶಿವಮೊಗ್ಗ ನಗರದ ಶಿವಗಂಗಾ ಯೋಗ ಕೇಂದ್ರದ ಯೋಗ ಶಿಬಿರಾರ್ಥಿ ಬಿಂದು ವಿಜಯಕುಮಾರ್ ಹೇಳಿದರು.

ಕೃಷಿ ನಗರ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಧನುರ್ಮಾಸದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸೂರ್ಯೋದಯಕ್ಕಿಂತ ಮುನ್ನ ಈ ಪವಿತ್ರವಾದ ಪೂಜೆಯನ್ನು ಮಾಡುವುದರಿಂದ ಇಷ್ಟಾರ್ಥಗಳು, ಸುಖ, ಸಮೃದ್ಧಿ.ಮುಕ್ತಿ ದೊರೆಯುತ್ತದೆ ಎಂದರು.

Shivaganga Yoga Center ಧನುರ್ಮಾಸ ಪೂಜೆಯ ಆಚರಣೆಯಿಂದ ಮನಕ್ಕೆ, ಮನೆತನಕ್ಕೆ ಒಳ್ಳೆಯದಾಗುವುದರ ಜೊತೆಗೆ ಈ ಪೂಜಾ ವಿಧಾನದಲ್ಲಿ ಪಾಲ್ಗೊಂಡವರಿಗೂ ಸಹ ಫಲಗಳು ಪ್ರಾಪ್ತಿಯಾಗುತ್ತದೆ ಎಂದ ಅವರು, ಪ್ರತಿದಿನ ಈ ಒಂದು ತಿಂಗಳ ಕಾಲ ಈ ಧನುರ್ಮಾಸದಲ್ಲಿ
ಕೃಷಿ ನಗರ ಹಾಗೂ ಬಸವೇಶ್ವರ ನಗರದ ನಿವಾಸಿಗಳು ಮಹಿಳಾ ಸಂಘದವರು ಮತ್ತು ಶಕ್ತಿ ಗಣಪತಿ ದೇವಸ್ಥಾನದ ಮಹಿಳಾ ಮಂಡಳಿಯವರು ಈ ಪೂಜಾ ಕಾರ್ಯಗಳಲ್ಲಿ ಪಾಲ್ಗೊಳ್ಳು ತ್ತಿರುವುದು, ಜೊತೆಗೆ ಪ್ರತಿ ದಿನ ವಿಷ್ಣುವಿಗೆ ಪ್ರಿಯವಾದ.ಕಾರ ಪೊಂಗಲ್ ಸಿಹಿ ಪೊಂಗಲ್ ಪ್ರಸಾದ ಮಾಡಿ ಎಲ್ಲರಿಗೂ ವಿತರಣೆ ಮಾಡುತ್ತಿರುವುದು ಅನುಕರಣೀಯ ಎಂದರು.

ಕಾರ್ಯಕ್ರಮದಲ್ಲಿ ತೇಜಸ್ವಿನಿ, ವಾಣಿ, ಶೋಭಾ, ಕಲ್ಪನಾ, ಭುವನ, ದೀಪ, ಪೂರ್ಣಿಮಾ ಮತ್ತು ಮೀನ ಭಾಗವಹಿಸಿದ್ದರು.

Karnataka Sangha Shivamogga ದಿ. ರಂಗನಾಯಕಮ್ಮ ಗಣೇಶರಾವ್ ಸ್ಮಾರಕ ಕನ್ನಡ ಭಾವಗೀತೆ ಗಾಯನ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

0

Karnataka Sangha Shivamogga ದಿನಾಂಕ 27ನೇ ಡಿಸೆಂಬರ್ 2025ರ ಶುಕ್ರವಾರ ಸಂಜೆ 5:30ಕ್ಕೆ ಹಸೂಡಿ ವೆಂಕಟ ಶಾಸ್ತ್ರೀ ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ಡಾ. ಶಿವಮೊಗ್ಗ ಸುಬ್ಬಣ್ಣ ಅವರ ಸಹೋದರರು ಮತ್ತು ಸಹೋದರಿ ಸ್ಥಾಪಿಸಿರುವ ದಿ|| ರಂಗನಾಯಕಮ್ಮ ಗಣೇಶರಾವ್ ದತ್ತಿನಿಧಿ ಪ್ರಾಯೋಜಿತ ದಿ. 29-11-2025ರಂದು ನಡೆದ ಕನ್ನಡ ಭಾವಗೀತೆ ಗಾಯನ ಸ್ಪರ್ಧೆ ವಿಜೇತರಿಗೆ ‘ಬಹುಮಾನ ವಿತರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮುಖ್ಯ ಅತಿಥಿಗಳಾಗಿ ಶ್ರೀ ಪಂಚಮ ಹಳಿಬಂಡಿ, ಪ್ರಸಿದ್ಧ ಗಾಯಕರು, ಬೆಂಗಳೂರು ಇವರು ಭಾಗವಹಿಸಲಿದ್ದು, ಬಹುಮಾನ ವಿತರಣೆಯ ನಂತರ ‘ಭಾವ ಸಂಧ್ಯಾ’ ಆಯ್ದ ಭಾವಗೀತೆಗಳ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Department of Kannada and Culture ರಾಜ್ಯಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಶಿವಮೊಗ್ಗ ಜಿಲ್ಲೆಯ ಹಲವು ಕಲಾವಿದರ ಆಯ್ಕೆ-ಪ್ರಕಟಣೆ

0

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೇಂದ್ರ ಕಚೇರಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಿ. 22 ಮತ್ತು 23 ರಂದು ನಡೆದ ವಲಯ ಮಟ್ಟದ ಕಲಾ ಪ್ರತಿಭೋತ್ಸವದ ವಿವಿಧ ಸ್ಪರ್ಧೆಗಳ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯ ಕಲಾವಿದರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಬಾಲಪ್ರತಿಭೆ ಸ್ಪರ್ಧೆಯ ಚಿತ್ರಕಲೆಯಲ್ಲಿ ಮೌಂಟ್ ಕಾರ್ಮೆಲ್ ಶಾಲೆಯ ದಿಶಾಂತ್ ಎಂ.ಕೆ, ಜಾನಪದ ಗೀತೆಯಲ್ಲಿ ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯ ಹೊನಲು ಎಸ್., ಹಿಂದೂಸ್ತಾನಿ/ಕ.ವಾದ್ಯ ಸಂಗೀತದಲ್ಲಿ ಸುಮೇರು ವಿ. ಸಕಲೇಶಪುರ, ಹಿಂದೂಸ್ತಾನಿ/ಕ. ಸಂಗೀತ ಹಾಡುಗಾರಿಕೆಯಲ್ಲಿ ಪಿ.ಇ.ಎಸ್. ಶಾಲೆಯ ಜೀವಿತ ಮೌನೇಶ್ ಆಯ್ಕೆಯಾದವರು.

Department of Kannada and Culture ಕಿಶೋರ ಪ್ರತಿಭೆ ಸ್ಪರ್ದೆಯ ಶಾಸ್ತ್ರೀಯ ನೃತ್ಯದಲ್ಲಿ ತೀರ್ಥಹಳ್ಳಿ ವಾಗ್ದೇವಿ ಪ್ರೌಢಶಾಲೆಯ ದಿತಿ ಹೆಚ್.ಎಸ್., ಸುಗಮ ಸಂಗೀತದಲ್ಲಿ ಪಿ.ಇ.ಎಸ್. ಶಾಲೆಯ ನವನೀತ ರಾಜ್ ಆಯ್ಕೆಯಾದವರು ಯುವಪ್ರತಿಭೆ ಸ್ಪರ್ಧೆಯ ಸುಗಮ ಸಂಗೀತ ದಲ್ಲಿ ಸೊರಬದ ಭುವನ್, ಆಶುಭಾಷಣದಲ್ಲಿ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಶಿವಮೊಗ್ಗದ ವಿಸ್ಮಿತ ವಿ., ಹಿಂದೂಸ್ತಾನಿ/ಕ. ಸಂಗೀತ ಹಾಡುಗಾರಿಕೆಯಲ್ಲಿ ಶಿವಮೊಗ್ಗದ ಚಿನ್ಮಯಿ ನಾಗೇಂದ್ರ ಆಯ್ಕೆಯಾದವರು.

Dr. Dhananjaya Sarji ಒತ್ತಡ ನಿವಾರಣೆಗೆ ಒಳ್ಳೆಯ ಸ್ನೇಹಿತರೇ ದಿವ್ಯೌಷಧ- ಡಾ.ಧನಂಜಯ ಸರ್ಜಿ

0

Dr. Dhananjaya Sarji ಒತ್ತಡ ನಿವಾರಣೆಗೆ ಒಳ್ಳೆಯ ಸ್ನೇಹಿತರೆ ನಿಜವಾದ ಔಷಧ ಎಂದು ಬಣ್ಣಿಸಿದರು ವಿಧಾನ ಪರಿಷತ್ ಸದಸ್ಯ ಡಾ. ಧನಜಂಯ ಸರ್ಜಿ.
ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಗುರುವಾರ ಆಯೋಜಿಸಿದ್ದ ಎಂಸಿಸಿ ಕಪ್ ಸೀಸನ್-೩ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಹಸಿವಾಗ್ತಿಲ್ಲ, ನಿದ್ದೆ ಬರ್‍ತಿಲ್ಲ, ಜೀರ್ಣ ಆಗ್ತಿಲ್ಲ… ಎಂದು ಹೀಗೆ ಪ್ರತಿಯೊಂದಕ್ಕೂ ಮಾತ್ರೆ ಕೊಡಿ ಎಂದು ವೈದ್ಯರನ್ನು ಎಡತಾಕುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಸ್ನೇಹಿತರು, ಕುಟುಂಬದ ಸದಸ್ಯರೊಂದಿಗೆ ಒಳ್ಳೆಯ ಸಮಯ ಕಳೆಯುವುದೇ ಇಂತಹ ಸಮಸ್ಯೆಗಳಿಗೆ ದಿವ್ಯೌಷಧ. ಪ್ರತಿಯೊಂದಕ್ಕೂ ಔಷಧಗಳನ್ನು ಅವಲಂಬಿಸುವುದು ಸೂಕ್ತವಲ್ಲ ಎಂದು ಕಿವಿಮಾತು ಹೇಳಿದರು.
ಇತ್ತೀಚೆಗೆ ಹೃದಯಾಘಾತ ಹೆಚ್ಚಾಗುತ್ತಿದೆ. ಸಣ್ಣ ಸಣ್ಣ ವಯಸ್ಸಿನವರು ಉಸಿರು ಚೆಲ್ಲುತ್ತಿದ್ದಾರೆ. ಆದಕಾರಣ ವ್ಯಾಂiiಲ್ಲಿ, ವಾಕಿಂಗ್, ಧ್ಯಾನದತ್ತ ಗಮನ ಹರಿಸಬೇಕು. ನಿತ್ಯ ವಾಕಿಂಗ್ ಮಾಡಬೇಕು. ಬೆಳಿಗ್ಗೆ ಎದ್ದ ಬಳಿಕ ಒಂದು ತಾಸು ಆಗುವವರೆಗೂ, ಮಲಗುವ ಒಂದು ತಾಸು ಮೊದಲು, ಊಟ ಮಾಡುವಾಗ ಮೊಬೈಲ್ ನೋಡಬಾರದು ಎಂದರು.
Dr. Dhananjaya Sarji ನಮ್ಮ ಆಲೋಚನೆಗಳು ಸದಾ ಉತ್ತುಂಗದಲ್ಲಿರಬೇಕು. ಒಳ್ಳೆಯ ಆಲೋಚನೆಗಳು ದೇಶ ಕಟ್ಟಲು ಪೂರಕ. ನಮ್ಮ ಹೆಜ್ಜೆಗಳು ಸದಾ ಗೆಲುವಿನೆಡೆಗೆ ಇರಬೇಕು ಎಂದು ಉತ್ಸಾಹದ ನುಡಿಗಳನ್ನಾಡಿದರು ಶಾಸಕ ಎಸ್.ಎನ್.ಚೆನ್ನಬಸಪ್ಪ.
ಕ್ರೀಡೆಗಳು ಜೀವನದ ಪಾಠ ಕಲಿಸುತ್ತವೆ. ಇಂದಿನಗಳಲ್ಲಿ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದರು ಜಿಲ್ಲಾ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೇಖ್ಯಾ ನಾಯ್ಕ್.
ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ಡಿ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಹಿಂದುಳಿದ ವರ್ಗಗಳ ಸಂಯೋಜಕ ಜಿ.ಡಿ.ಮಂಜುನಾಥ್, ಉದ್ಯಮಿ ಟಿ.ಎಸ್.ಸಿದ್ದೇಶ್, ಬಿಜೆಪಿ ನಗರ ಘಟಕದ ಉಪಾಧ್ಯಕ್ಷ ಎಸ್.ಕುಮಾರ್, ಸಂಘದ ಹಿರಿಯ ಸದಸ್ಯರಾದ ಮೋಹನ್ ಶೆಟ್ಟಿ, ಚಂದ್ರಣ್ಣ, ಎಂ.ಗೋವಿಂದರಾಜು ಸೇರಿದಂತೆ ಅನೇಕುರು ಉಪಸ್ಥಿತರಿದ್ದರು.