ಡಿಸಿಸಿ ಬ್ಯಾಂಕ್ ನಿರ್ದೇಶಕರು, ರಾಜ್ಯ ಕಾಂಗ್ರೆಸ್ನ ನಾಯಕರಾದ ಎಂ. ಶ್ರೀಕಾಂತ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಕೋಟೆ ಶ್ರೀ ಮಾರಿಕಾಂಬಾ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಸಲಿಸಲಾಯಿತು. ಹಾಗೂ ಬೃಹತ್ ರಕ್ತದಾನ ಶಿಬಿರವನ್ನು ರಾಮಣ್ಣ ಶ್ರೇಷ್ಠಿ ಪಾರ್ಕ್ನ ಗಣಪತಿ ದೇವಸ್ಥಾನದಲ್ಲಿ ನಡೆಸಲಾಯಿತು. ಈ ಶಿಬಿರದಲ್ಲಿ 100 ಕೂ ಹೆಚ್ಚು ಜನ ರಕ್ತ ದಾನವನು ಮಾಡಿದರು. ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂಡ್ಲೆ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾಜಿ ಉಪ ಮೇಯರ್ ಎಚ್ . ಪಾಲಾಕ್ಷಿ , ಹಾಪ್ಕಾಮ್ಸ್ ನಿರ್ದೇಶಕ ಡಾ . ಶರತ್ ಮರಿಯಪ್ಪ , ಬಸವರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನಿಲ್ , ಸತೀಶ್, ಶಿವಮೂರ್ತಿ, ಚಂದ್ರಶೇಖರ್, ಭಾಸ್ಕರ್, ಸಂತೋಷ್, ಅನಿಲ್, ಸಂದೀಪ್, ಭರತ್, ರಾಘವೇಂದ್ರ, ಮಸ್ಕನ್, ಮಂಜುನಾಥ್, ರಘು ಗೌಡ, ಶಿವಕುಮಾರ್, ಸಂದೇಶ್ ಸೇರಿದಂತೆ ಹಲವರಿದ್ದರು.
National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ
National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಹ ಸಾಮಾನ್ಯ ಮತ್ತು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಿದೆ.
“ಸಮಗ್ರ ಪೋಷಕಾಂಶ ನಿರ್ವಹಣೆ ಹಾಗೂ ಸಮಗ್ರ ರೋಗ \ ಕೀಟ ನಿಯಂತ್ರಣ” ಕಾರ್ಯಕ್ರಮದಡಿ ಜೈವಿಕ ಗೊಬ್ಬರವಾದ ಅರ್ಕ ಮೈಕ್ರೋಬಿಯಲ್ ಕನ್ಸಾರ್ಷಿಯಮ್ ಪರಿಕರವನ್ನು ಮತ್ತು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಲಘು ಪೋಷಕಾಂಶಗಳ ಮಿಶ್ರಣ ಅಥವಾ ಬೆಳೆ ಸ್ಪೇಷಲ್ ಪರಿಕರವನ್ನು ವಿತರಿಸಲಾಗುತ್ತಿದೆ.
ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಬುಕ್, ಆರ್ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರ ನಕಲುಗಳೊಂದಿಗೆ ಶಿಕಾರಿಪುರ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.
National Horticulture Mission Scheme ಹೆಚ್ಚಿನ ಮಾಹಿತಿಗಾಗಿ ತಮ್ಮ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ
S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ ಬದಲು, ಹಳೆಯ ‘ಮತಪತ್ರ’ (Ballot Paper) ಪದ್ಧತಿಯನ್ನು ಮರಳಿ ಜಾರಿಗೆ ತರಲು ಸರ್ಕಾರವು ವಿಧೇಯಕ ತಿದ್ದುಪಡಿ ಮಾಡುತ್ತಿರುವುದನ್ನು ಶಿವಮೊಗ್ಗ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಇಂದು ವಿಧಾನಸಭೆಯಲ್ಲಿ ತೀವ್ರವಾಗಿ ವಿರೋಧಿಸಿ, ಸರ್ಕಾರದ ಗಮನ ಸೆಳೆದರು.
ಈ ಕುರಿತು ಸದನದಲ್ಲಿ ಮಾತನಾಡಿದ ಶಾಸಕರು, “ಜಗತ್ತು ತಂತ್ರಜ್ಞಾನದಲ್ಲಿ ಅಸಾಧಾರಣ ಪ್ರಗತಿ ಸಾಧಿಸುತ್ತಿದೆ. ಇಡೀ ವಿಶ್ವವೇ ಭಾರತದ ಡಿಜಿಟಲ್ ಕ್ರಾಂತಿಯನ್ನು ಮಾದರಿಯಾಗಿ ಸ್ವೀಕರಿಸುತ್ತಿರುವ ಈ ಸಂದರ್ಭದಲ್ಲಿ, ನಾವು ಮತಯಂತ್ರಗಳ (EVM) ಮೇಲೆ ಅನಗತ್ಯ ಅನುಮಾನ ವ್ಯಕ್ತಪಡಿಸಿ ದಶಕಗಳ ಹಿಂದಿನ ಹಳೆಯ ಪದ್ಧತಿಗೆ ಮರಳುತ್ತಿರುವುದು ಅತ್ಯಂತ ವಿಪರ್ಯಾಸದ ಸಂಗತಿ. ಇದು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಾವು ಪ್ರಗತಿಯತ್ತ ಸಾಗುವ ಬದಲು ಹಿನ್ನಡೆ ಅನುಭವಿಸುತ್ತಿದ್ದೇವೆ ಎನ್ನುವುದಕ್ಕೆ ಸಾಕ್ಷಿಯಾಗಿದೆ,” ಎಂದು ಆತಂಕ ವ್ಯಕ್ತಪಡಿಸಿದರು.
S.N. Channabasappa ಮತಯಂತ್ರಗಳ ಬಳಕೆ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ವೇಗ ಮತ್ತು ನಿಖರತೆಯನ್ನು ತಂದಿದೆ. ಇದನ್ನು ಕೈಬಿಟ್ಟು ಮತ್ತೆ ಮತಪತ್ರಗಳ ಕಾಲಕ್ಕೆ ಹೋಗುವುದು ಚುನಾವಣಾ ಅಕ್ರಮಗಳಿಗೆ ಎಡೆಮಾಡಿಕೊಟ್ಟಂತೆ ಎಂಬ ಆಕ್ಷೇಪವನ್ನು ವ್ಯಕ್ತಪಡಿಸಿದ ಅವರು, ಸರ್ಕಾರವು ಈ ತಿದ್ದುಪಡಿ ನಿರ್ಧಾರವನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.
MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ
MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;.9480880595.
Manasadhara Trust ಸರ್ಕಾರಿ ಶಾಲಾ ಮಕ್ಕಳಿಗಾಗಿ ಮನಃಸ್ಫೂರ್ತಿ ಬೇಸಿಗೆ ಶಿಬಿರ
Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ವಿಶೇಷ ಶಾಲೆ(ರಿ) ಮತ್ತು ಕಲಿಕಾ ಕೇಂದ್ರ ಹಾಗೂ ನಮ್ಮ ಹಳ್ಳಿ ಥಿಯೇಟರ್(ರಿ) ರವರ ಸಹಯೋಗದೊಂದಿಗೆ 6 ರಿಂದ 9 ನೇ ತರಗತಿಯ ಸರ್ಕಾರಿ ಶಾಲೆ ಮಕ್ಕಳಿಗಾಗಿ “ಮನಃಸ್ಫೂರ್ತಿ ಶಿಬಿರ – 2026” ಅನ್ನು ಆಯೋಜಿಸಲಾಗಿದ್ದು, ಈ ಶಿಬಿರವು ದಿನಾಂಕ : 13/04/2026 ರಿಂದ 25/04/2026 ರವರೆಗೆ ಪ್ರತಿ ದಿನ ಬೆಳಿಗ್ಗೆ 9:30 ರಿಂದ ಸಂಜೆ 4:00 ರವರೆಗೆ ಇರುತ್ತದೆ.
ಶಿಬಿರದಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಮೌಲ್ಯಯುತ ಶಿಕ್ಷಣ, ಸಾಂಸ್ಕೃತಿಕ ಕಾರ್ಯಕ್ರಮಗಳು, ಹಾಡುಗಾರಿಕೆ, ಹಾಸ್ಯ ಕಥೆ, ನಾಟಕ, ಚಿತ್ರಕಲೆ, ನೃತ್ಯ, ಜಾದು, ಮೇಕಪ್, ಯೋಗ, ಧ್ಯಾನ, ಅರಿವು, ಸಿನಿಮಾ ವೀಕ್ಷಣೆ, ಕ್ಲೇ ಮಾಡೆಲ್, ಪ್ರವಾಸ, ತೊಗಲು ಗೊಂಬೆ, ಯಕ್ಷಗಾನ, ಓರಿಗಾಮಿ, ಚಿತ್ರಕಲೆ, ಮೂಕಾಭಿನಯ, ಆರೋಗ್ಯ, ಸಾಮಾನ್ಯ ಜ್ಞಾನ ಮತ್ತು ಮಕ್ಕಳ ಹಕ್ಕುಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು. ಶಿಬಿರವು ಸಂಪೂರ್ಣವಾಗಿ ಉಚಿತವಾಗಿದ್ದು, 6 ರಿಂದ 9 ನೇ ತರಗತಿಯ 60 ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಅವಕಾಶವಿರುತ್ತದೆ. Manasadhara Trust ಆಸಕ್ತ ಮಕ್ಕಳ ಪೋಷಕರು ಏಪ್ರಿಲ್ 4 ರೊಳಗೆ ಶಿವಮೊಗ್ಗದ ಜೆ ಪಿ ಎನ್ ರಸ್ತೆಯ ಮಾನಸ ನರ್ಸಿಂಗ್ ಹೋಂ ಬಳಿಯ ಮನಃಸ್ಫೂರ್ತಿ ಕಲಿಕಾ ಕೇಂದ್ರದಲ್ಲಿ ಹೆಸರು ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮನಃಸ್ಫೂರ್ತಿ ಕಛೇರಿ 8867540973 / ಶಿಬಿರದ ಸಂಚಾಲಕರಾದ ಶ್ರೀ ಯುತ ಮಂಜುನಾಥ್ ಸ್ವಾಮಿ 9845014229 / ಶ್ರೀಮತಿ ರಂಗನಾಯಕಿ 9663645373 ಇವರನ್ನು ಸಂಪರ್ಕಿಸಬೇಕಾಗಿ ಮನಃಸ್ಫೂರ್ತಿಯ ಶೈಕ್ಷಣಿಕ ನಿರ್ದೇಶಕರಾದ ಡಾ.ಪ್ರೀತಿ.ವಿ.ಶಾನ್ ಭಾಗ್ ಪ್ರಕಟಣೆಯಲ್ಲಿ ಕೋರಿದ್ದಾರೆ.
India Scouts and Guides ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ
India Scouts and Guides ಸಮಾಜದ ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಟ್ರಾಫಿಕ್ ಪೊಲೀಸ್ ವೈ.ಸುರೇಶ್ ಕುಮಾರ್ ಹೇಳಿದರು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಹಾಗೂ ಜಿಲ್ಲಾ ಸಂಸ್ಥೆ ಶಿವಮೊಗ್ಗ, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಬೆಂಗಳೂರು ಸಹಯೋಗದಲ್ಲಿ ಶಿವಮೊಗ್ಗ ಸ್ಕೌಟ್ಸ್ ಭವನದಲ್ಲಿ ಆಯೋಜಿಸಿದ್ದ ಯುವ ಆಪತ್ ಮಿತ್ರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಶಿಬಿರದಲ್ಲಿ ಮಾತನಾಡಿ, ಪ್ರತಿನಿತ್ಯ ರಸ್ತೆಯಲ್ಲಿ ಸಾವಿರಾರು ಜನರು ತಮ್ಮ ಅಮೂಲ್ಯವಾದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ರಸ್ತೆ ಅಪಘಾತಗಳನ್ನು ತಪ್ಪಿಸಲು ನಾವು ನೀವೆಲ್ಲರೂ ನಿಯಮಗಳನ್ನು ಪಾಲಿಸಲೇಬೇಕು ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ವ್ಹೀಲಿಂಗ್ ಮಾಡುವುದು, ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದ ಅಪಘಾತಗಳ ಪ್ರಮಾಣ ಸಂಖ್ಯೆ ಹೆಚ್ಚುತ್ತಿದೆ. ಯುವಜನರು ವಾಹನ ಓಡಿಸುವಾಗ ಏಕಾಗ್ರತೆಯಿಂದ ಎಚ್ಚರಿಕೆ ವಹಿಸಬೇಕು ಎಂದರು.
ಈಗಾಗಲೇ ಶಿವಮೊಗ್ಗದಲ್ಲಿ ನಾಲ್ಕು ಸಾವಿರ ಸಿಸಿ ಕ್ಯಾಮರಾಗಳು ಚಾಲನೆಯಲ್ಲಿವೆ. ಬರುವ ದಿನಗಳಲ್ಲಿ ಹೊಸ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯವರು ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಇಂತಹ ಜಾಗೃತಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ತಿಳಿಸುವುದರ ಮುಖಾಂತರ ಅಪಘಾತಗಳನ್ನು ತಪ್ಪಿಸಬೇಕು. 18 ವರ್ಷದ ಒಳಗಿನ ಮಕ್ಕಳು ವಾಹನ ಓಡಿಸಿದರೆ ವಾಹನದ ಮಾಲೀಕರಿಗೆ 25,000 ರೂ. ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು.
ವಾಹನವನ್ನು ಸರಿಯಾಗಿ ಅಭ್ಯಾಸ ಮಾಡಿ ಪರವಾನಿಗೆ ಪಡೆದು ವಾಹನ ಚಲಾಯಿಸಬೇಕು. ದ್ವಿಚಕ್ರ ವಾಹನದಲ್ಲಿ ಇಬ್ಬರು ಮಾತ್ರ ಸವಾರಿ ಮಾಡಬೇಕು. ಹೆಲ್ಮೇಟ್ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದರು.
India Scouts and Guides ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಇಂತಹ ಜಾಗೃತಿ ಕಾರ್ಯಕ್ರಮಗಳಿಂದ ಜಿಲ್ಲೆಯ 19 ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಬಹಳ ಉಪಯೋಗವಾಗುತ್ತದೆ. ಸಾಕಷ್ಟು ಅಪಘಾತಗಳನ್ನು ಸಹ ತಪ್ಪಿಸಬಹುದಾಗಿದೆ. ವಿದ್ಯಾರ್ಥಿಗಳು ಇಂತಹ ಶಿಬಿರದ ಉಪಯೋಗವನ್ನು ಪಡೆದುಕೊಳ್ಳಬೇಕು. ಈ ಒಂದು ವಾರಗಳ ಕಾಲ ನಡೆಯುವ ವಿವಿಧ ರೀತಿಯ ಶಿಬಿರಗಳಲ್ಲಿ ಪಾಲ್ಗೊಂಡು ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ನುಡಿದರು.
ಜಿಲ್ಲಾ ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ರಾಜೇಶ್ ಅವಲಕ್ಕಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಸುಮನಾ ಶೇಖರ್, ಗೈಡ್ ಆಯುಕ್ತೆ ಲಕ್ಷ್ಮೀ ಕೆ.ರವಿ, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ಮಲ್ಲಿಕಾರ್ಜುನ್ ಕಾನೂರ್ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
B.Y. Raghavendra ಯೋಜನೆಗಳು-ಬ್ಯಾಂಕಿಂಗ್ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು : ಬಿ.ವೈ.ರಾಘವೇಂದ್ರ
B.Y. Raghavendra ಪ್ರತಿಯೊಬ್ಬ ನಾಗರೀಕರಿಗೆ ಆರ್ಥಿಕ ಸಬಲೀಕರಣ ನೀಡಬೇಕೆಂಬ ಉದ್ದೇಶದಿಂದ ಅನುಷ್ಟಾನಗೊಳಿಸಲಾಗಿರುವ ಯೋಜನೆಗಳನ್ನು ಹಾಗೂ ಬ್ಯಾಂಕಿಂಗ್ ಸೇವೆಗಳನ್ನು ಸರಳಗೊಳಿಸಿ ಜನಸಾಮಾನ್ಯರಿಗೆ ತಲುಪಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಡಿಸಿಸಿ ಮತ್ತು ಡಿಎಲ್ಆರ್ಸಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬ್ಯಾಂಕುಗಳ ಮೂಲಕ ಸರ್ಕಾರದ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದ್ದು ಬ್ಯಾಂಕ್ಗಳ ಸೇವೆ ಸ್ಮರಣೀಯವಾಗಿರುತ್ತದೆ. ಸರ್ಕಾರದ ಪ್ರತಿಯೊಂದು ಸೌಲಭ್ಯವು ಜಿಲ್ಲೆಯ ಕಟ್ಟಕಡೆಯ ವ್ಯಕ್ತಿಗೂ ತಲುಪುಂತಾಗಬೇಕು. ಬ್ಯಾಂಕಿಂಗ್ ಸೇವೆಗಳನ್ನು ಜನಸಾಮಾನ್ಯರಿಗೆ ನಿಲುಕುವಂತೆ ಸರಳಗೊಳಿಸಿ ನೀಡಬೇಕೆಂದು ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಿದ ಅವರು ಪಿಎಂ ಕಿಸಾನ್, ಪಿಎಂ ಮುದ್ರಾ, ಪಿಎಂ ಸ್ವನಿಧಿ, ಎಸ್ಸಿ/ಎಸ್ಟಿ, ಮಹಿಳೆ ಮತ್ತು ಅಲ್ಪಸಂಖ್ಯಾತರಿಗಾಗಿ ಇರುವ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಪಿಎಂ ವಿಶ್ವಕರ್ಮ ಯೋಜನೆಯಡಿ ಬ್ಯಾಂಕುಗಳಲ್ಲಿ ಸುಮಾರು ಅರ್ಧದಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಯಾವ ಕಾರಣಕ್ಕೆ ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ಬ್ಯಾಂಕ್ ಅಧಿಕಾರಿಗಳು ಮತ್ತೊಮ್ಮೆ ಪರಿಶೀಲಿಸಿ, ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಸಾಲ, ಶಿಕ್ಷಣ ಸಾಲ, ವಸತಿ ಯೋಜನೆಯಡಿ ಸಾಲ ವಿತರಣೆಗೆ ಆದ್ಯತೆ ನೀಡಬೇಕು ಎಂದರು.
ಬ್ಯಾಂಕ್ಗಳ ಅಧಿಕಾರಿಗಳು ಸಭೆಗೆ ಹಾಜರಾಗಿ ಮಾಹಿತಿ ನೀಡಬೇಕು. 260 ಬ್ರಾಂಚ್ಗಳಲ್ಲಿ ಮಾತ್ರ ಡಿಎಲ್ಸಿಸಿ ಸಭೆ ಆಗಿದೆ. 85 ಬ್ರಾಂಚ್ಗಳಲ್ಲಿ ಆಗಿಲ್ಲ. ನಿಯಮಿತವಾಗಿ ಸಭೆಗಳನ್ನು ಕೈಗೊಂಡು ಕ್ರಮ ವಹಿಸಬೇಕೆಂದು ಇದೇ ವೇಳೆ ತಿಳಿಸಿದರು.
ಮಾ.24 ರಿಂದ 26 ರವರೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಪಿಎಂ ವಿಶ್ವಕರ್ಮ ವಸ್ತು ಪ್ರದರ್ಶನ ಮತ್ತು ವ್ಯಾಪಾರ ಮೇಳ ಏರ್ಪಡಿಸಲಾಗಿದ್ದು ಇಲ್ಲಿ ಒಟ್ಟು 50 ಮಳಿಗೆಗಳನ್ನು ತೆರೆಯಲಾಗುತ್ತಿದೆ.
ಫಲಾನುಭವಿಗಳು ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಹಾಗೂ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲಾ ಬ್ಯಾಂಕುಗಳು ಕೈಜೋಡಿಸಬೇಕೆಂದು ಎಂದು ಮನವಿ ಮಾಡಿದರು.
ಕೆನರಾ ಬ್ಯಾಂಕ್ ಡಿಜಿಎಂ ಮತ್ತು ಪ್ರಾದೇಶಿಕ ಮುಖ್ಯಸ್ಥರಾದ ದೇವರಾಜ್ ಆರ್ ಮಾತನಾಡಿ, 2025 ರ ಡಿಸೆಂಬರ್ ಅಂತ್ಯಕ್ಕೆ ಕೃಷಿ ಕ್ಷೇತ್ರದಲ್ಲಿ ಶೇ.74.26 ಪ್ರಗತಿ ಸಾಧನೆ ಮಾಡಿದ್ದು 2024 ನೇ ಸಾಲಿಗಿಂತ ಶೇ.31.26 ಪ್ರಗತಿ ಸಾಧಿಸಲಾಗಿದೆ. ಎಂಎಸ್ಎಂಇ ವಲಯದಲ್ಲಿ ಶೇ.80.03 ಪ್ರಗತಿ ಸಾಧಿಸಿದ್ದು 2024 ನೇ ಸಾಲಿಗಿಂತ ಶೇ.11.49 ಹೆಚ್ಚು ಪ್ರಗತಿ ಸಾಧಿಸಲಾಗಿದೆ.
ವಸತಿ ಸಾಲ ವಿತರಣೆ ಪ್ರಗತಿ ಕಡಿಮೆಯಾಗಿದ್ದು, ಆದ್ಯತೆ ಮೇಲೆ ಸಾಲ ವಿತರಣೆಗೆ ಬ್ಯಾಂಕುಗಳು ಕ್ರಮ ವಹಿಸಬೇಕು. ಪಿಎಂ ವಿಶ್ವಕರ್ಮ ಯೋಜನೆಯಡಿ ತಿರಸ್ಕೃತಗೊಂಡ ಅರ್ಜಿಗಳನ್ನು ಪರಿಶೀಲಿಸಿ, ಮಂಜೂರು ಮಾಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಜಿ.ಪಂ ಸಿಇಓ ಹೇಮಂತ್ ಎನ್ ಮಾತನಾಡಿ, ಬ್ಯಾಂಕುಗಳು ಪ್ರಧಾನಮಂತ್ರಿ ವಿಶ್ವಕರ್ಮ, ಮುದ್ರಾ ಸೇರಿದಂತೆ ಪಿಎಂ ಸಾಲ/ಸೌಲಭ್ಯ ನೀಡುವ ಯೋಜನೆಗಳಡಿ ಬಂದಂತಹ ಅರ್ಜಿಗಳನ್ನು ಸಮರ್ಪಕವಾಗಿ ಪರಿಶೀಲಿಸಿ ಮಂಜೂರು ಮಾಡಬೇಕು. ಪಿ.ಎಂ. ವಿಶ್ವಕರ್ಮ ಯೋಜನೆಯಡಿ 10994 ಅರ್ಜಿಗಳು ಸ್ವೀಕೃತವಾಗಿದ್ದು 5169 ಅರ್ಜಿಗಳು ಮಂಜೂರಾಗಿವೆ. ಶೇ.50 ರಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಇದಕ್ಕೆ ಸಮರ್ಪಕವಾದ ಕಾರಣಗಳನ್ನು ಒದಗಿಸುವ ವರದಿಯನ್ನು ಬ್ಯಾಂಕುವಾರು ನೀಡಬೇಕು. ವಿವಿಧ ಯೋಜನೆಯಡಿ ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ, ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
B.Y. Raghavendra ಪಿ ಎಂ ಸ್ವನಿಧಿ ಯೋಜನೆಯಡಿ ಮೊದಲನೇ ಹಂತದ ಸಾಲ ವಿತರಣೆ ಪ್ರಗತಿ ಚೆನ್ನಾಗಿದೆ. 2 ಮತ್ತು ಮೂರನೇ ಭಾಗದ ಸಾಲ ಪ್ರಗತಿ ಮತ್ತು ಪ್ರಕ್ರಿಯೆ ನಿಧಾನವಾಗಿದೆ. ಇದನ್ನು ಚುರುಕುಗೊಳಿಸಿ, ಪ್ರಗತಿ ಸಾಧಿಸಬೇಕು ಎಂದು ಸೂಚನೆ ನೀಡಿದರು.
ಎಲ್ಲ ಬ್ಯಾಂಕುಗಳು ಕಿಸಾನ್ ಕ್ರೆಡಿಟ್ ಕಾಡ್ಗಳನ್ನು ಸಮರ್ಪಕವಾಗಿ ನಿಗದಿತ ಗುರಿಯನ್ವಯ ವಿತರಣೆ ಮಾಡಬೇಕು. ಪ್ರಗತಿ ಸಾಧಿಸದ, ಹಾಗೂ ಕಡಿಮೆ ಪ್ರಗತಿ ಮಾಡಿರುವ ಬ್ಯಾಂಕುಗಳು ಈ ಕುರಿತು ಕೂಡಲೇ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದರು.
ಹಣಕಾಸು ಸಾಕ್ಷರತಾ ಕೇಂದ್ರ(ಎಫ್ಎಲ್ಸಿ)ಗಳು ಹಾಗೂ ಸೆಂಟರ್ ಫಾರ್ ಫೈನಾನ್ಶಿಯಲ್ ಲಿಟರಸಿಗಳು ಪರಿಣಾಮಕಾರಿಯಾಗಿ ಆಯ್ದ ಸ್ಥಳಗಳಲ್ಲಿ ಶಿಬಿರಗಳನ್ನು, ಸಭೆಗಳನ್ನು ನಡೆಸಿ ಬ್ಯಾಂಕ್ ಖಾತೆ ತೆರೆಯುವುದು, ವಿವಿಧ ಯೋಜನೆಗಳು ಸೇರಿದಂತೆ ಹಣಕಾಸು ವಿಷಯದಲ್ಲಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.
ಪಿಎಂ ಫಾರ್ಮಲೈಸೇಷನ್ ಆಫ್ ಮೈಕ್ರೊ ಫುಡ್ ಪ್ರಾಸೆಸಿಂಗ್ ಎಂಟರ್ಪ್ರೈಸಸ್ ಯೋಜನೆಯಡಿ ಶಿವಮೊಗ್ಗಕ್ಕೆ 200 ಗುರಿ ನೀಡಲಾಗಿದ್ದು 114 ಸಾಧನೆ ಸಾಧಿಸಿದ್ದು, ಬಾಕಿ ಉಳಿದ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ತಿಳಿಸಿದರು.
ಪಿಎಂಜೆಜೆಬಿವೈ, ಪಿಎಂಎಸ್ಬಿವೈ, ಕೆವಿಐಬಿ ಪ್ರಾಯೋಜಿತ ಪಿಎಂಇಜಿಪಿ ಯೋಜನೆಗಳಡಿ ಗುರಿಯನ್ವಯ ಸಾಧನೆ ಮಾಡಬೇಕು. ಪಿಎಂ ಯೋಜನೆಗಳು/ಕಾರ್ಯಕ್ರಮಗಳ ಪ್ರಗತಿಯಲ್ಲಿ ಹಿಂದೆ ಇರುವ ಬ್ಯಾಂಕುಗಳು ಸೂಕ್ತ ಕ್ರಮ ಕೈಗೊಂಡು ನಿಗದಿತ ಪ್ರಗತಿಯನ್ನು ಸಾಧಿಸಬೇಕು. ಯಾವುದೇ ಸಾಲ/ಸೌಲಭ್ಯ/ಅರಿವು ನೀಡುವ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜಿ.ಪಂ ಸಹಕಾರ ಎಂದಿಗೂ ಇದೆ. ಆಶಾ, ಅಂಗನವಾಡಿ ಸಹಾಯಕರು, ಪಂಚಾಯಿತಿ ಸಹಾಯಕರ ಸಹಾಯವನ್ನು ಸಹ ಪಡೆಯಬಹುದು ಎಂದರು.
ಸಭೆಯಲ್ಲಿ ಪಿಎಂಇಜಿಪಿ, ಪಿಎಂ ಸೂರ್ಯ ಘರ್ ಪಿಎಂ ಎಫ್ಎಂಇ ಯೋಜನೆಯಡಿ 15 ಫಲಾನುಭವಿಗಳಿಗೆ ಶಾಮಿಯಾನ, ರೋಟಿ ಮೇಕರ್, ಶಿಕ್ಷಣಕ್ಕೆ ಸಂಬಂಧಿಸಿದ ಸಾಲದ ಚೆಕ್ನ್ನು ವಿತರಿಸಲಾಯಿತು.
ಸಭೆಯಲ್ಲಿ ಆರ್ಬಿಐ ಲೀಡ್ ಜಿಲ್ಲಾ ಅಧಿಕಾರಿ ಸೂರಜ್ ಎಸ್, ನಬಾರ್ಡ್ ಜಿಲ್ಲಾ ಅಭಿವೃದ್ದಿ ಪ್ರಬಂಧಕ ಶರತ್ ಗೌಡ, ಲೀಡ್ ಬ್ಯಾಂಕ್ ಮ್ಯಾನೇಜರ್ ಹನುಮಂತಪ್ಪ ಪಿ, ವಿವಿಧ ಬ್ಯಾಂಕುಗಳ ಅಧಿಕಾರಿಗಳು ಹಾಜರಿದ್ದರು.
N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ
N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ ಲಕ್ಷಾಂತರ ರೈತಾಪಿ ಕುಟುಂಬಗಳ ಆಶೋತ್ತರಗಳಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಸಚಿವರಾದ ಚೆಲುವರಾಯಸ್ವಾಮಿಯವರು ತಿಳಿಸಿದ್ದಾರೆ.
ಕಳೆದ ವರ್ಷ ಕೃಷಿ ಇಲಾಖೆಯ ಸುಮಾರು 945 ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಯನ್ನು KPSC ಮೂಲಕ ನಡೆಸಲು ಆದೇಶಿಸಲಾಗಿತ್ತು.
ಆದರೆ, ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಇರಬೇಕು ಮತ್ತು ಶೀಘ್ರವಾಗಿ ನೇಮಕಾತಿ ನಡೆಯಬೇಕು ಎಂಬುದು ರಾಜ್ಯದ ಸಾವಿರಾರು ಅಭ್ಯರ್ಥಿಗಳ ಮನವಿ ಹಾಗೂ ಒತ್ತಾಯವಾಗಿತ್ತು.
ಈ ನ್ಯಾಯಯುತ ಬೇಡಿಕೆಯನ್ನು ಪರಿಗಣಿಸಿ, KPSC ಮೂಲಕ ನೇಮಕಾತಿ ನಡೆಸುವ ಹಳೆಯ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇಂದು ರದ್ದುಗೊಳಿಸಿದ್ದೇವೆ ಎಂದಿದ್ದಾರೆ.
N. Chaluvaraya Swamy ಈ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಇನ್ನು ಮುಂದೆ KEA ಮೂಲಕವೇ ನಡೆಸಲು ಅಧಿಕೃತವಾಗಿ ಆದೇಶ ಹೊರಡಿಸಿದ್ದೇವೆ ಎಂದಿದ್ದಾರೆ.
ಪಾರದರ್ಶಕತೆ ಮತ್ತು ಅರ್ಹತೆಗೆ ಆದ್ಯತೆ ನೀಡುವುದು ನಮ್ಮ ಬದ್ಧತೆ. ಗ್ರಾಮೀಣ ಭಾಗದ, ಕೃಷಿ ಕುಟುಂಬದ ಹಿನ್ನೆಲೆಯುಳ್ಳ ಪ್ರತಿಭಾವಂತ ಯುವಕರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ
University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ ಮತ್ತು ಪುಷ್ಪಕೃಷಿಯನ್ನು ಚಾಂಪಿಯನ್ ಸೇವಾ ವಲಯಗಳಲ್ಲಿ ಒಂದು ಎಂದು ಸರ್ಕಾರ ಗುರುತಿಸಿದ್ದು, ಈ ವಲಯದ ಈ ಕುರಿತು ಹೆಚ್ಚಿನ ಚರ್ಚೆ, ಅಧ್ಯಯನ ನಡೆಸಿ, ಕಾರ್ಯರೂಪಕ್ಕೆ ತರುವ ಕೆಲಸ ಆಗಬೇಕೆಂದು ಐಎಸ್ಓಹೆಚ್ ನ ಅಧ್ಯಕ್ಷರು ಹಾಗೂ ಹರಿಯಾಣದ ಎಂಹೆಚ್ಯು ಕುಲಪತಿಗಳಾದ ಡಾ.ಎಸ್.ಕೆ.ಮಲ್ಹೋತ್ರಾ ತಿಳಿಸಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಭಾರತೀಯ ಅಲಂಕಾರಿಕ ತೋಟಗಾರಿಕೆ ಸಂಘ, ಐಸಿಎಆರ್-ಐಎಆರ್ಐ ನವದೆಹಲಿ, ಐಸಿಎಆರ್-ಪುಷ್ಪ ಕೃಷಿ ಸಂಶೋಧನಾ ನಿರ್ದೇಶನಾಲಯ ಪುಣೆ, ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಐಸಿಎಆರ್-ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಬೆಂಗಳೂರು ಈ ಸಂಸ್ಥೆಗಳ ಸಹಯೋಗದೊಂದಿಗೆ ಮಾರ್ಚ್ 23 ರಿಂದ 25 ರವರೆಗೆ ಶಿವಮೊಗ್ಗದ ನವಿಲೆ ಕೃಷಿ ಮಹಾವಿದ್ಯಾಲದ ಆವರಣದಲ್ಲಿ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ವಿಕಸಿತ ಭಾರತ@2047ರ ಪುಷ್ಪ ಕೃಷಿ ಮತ್ತು ಭೂದೃಶ್ಯ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊರಹೊಮ್ಮುವ ನೋಟ ಹೊಂದಿದೆ. ಆದರೆ ಇದನ್ನು ಸಾಧಿಸಲು ಹವಾಮಾನ ಬದಲಾವಣೆಯಂತಹ ಹಲವಾರು ಸವಾಲುಗಳಿವೆ. ಮಣ್ಣಿನಲ್ಲಿನ ಇಂಗಾಲದ ಡೈ ಆಕ್ಸೆöÊಡ್ ಪ್ರಮಾಣ, ಹಸಿರು ಮನೆ ಅನಿಲಗಳ ಪ್ರಮಾಣವನ್ನು ತಗ್ಗಿಸುವುದು ಹೇಗೆಂದು ಚಿಂತಿಸಬೇಕಿದೆ. ಹಸಿರುಮನೆ ಅನಿಲಗಳನ್ನು ಶೇ.15 ರಿಂದ ಶೇ.5 ಕ್ಕೆ ಇಳಿಸಬೇಕಿದೆ. ಸುಸ್ಥಿರ ಕೃಷಿ ಪದ್ದತಿಗಳನ್ನು ಅಳವಡಿಸಿಕೊಂಡು ಈ ಪರಿಣಾಮಗಳನ್ನೆಲ್ಲ ತಗ್ಗಿಸಬೇಕಿದೆ. ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಲು ಶ್ರಮಿಸಬೇಕಿದೆ. ಕೃಷಿಯಲ್ಲಿ ಆಧುನಿಕತೆ, ಎಐ ಬಳಕೆ ಮತ್ತು ಯಂತ್ರೋಪಕರಣಗಳನ್ನು ಹೆಚ್ಚಿಸಬೇಕಿದೆ ಎಂದರು.
ರಸ್ತೆಗಳಲ್ಲಿ, ಅವೆನ್ಯು, ಬ್ಯಾಕ್ಯಾರ್ಡ್ಗಳಲ್ಲಿ ಬೆಳೆಯಲಾಗುತ್ತಿರುವ ಈ ಪುಷ್ಪಗಳು, ಅಲಂಕಾರಿಕ ಸಸ್ಯಗಳು ವಾತಾವರಣದಲ್ಲಿನ ಕಾರ್ಬನ್ ಡೈ ಆಕ್ಸೆöÊಡ್ನ್ನು ಕಡಿಮೆ ಮಾಡುವ ಶಕ್ತಿ ಹೊಂದಿದ್ದು ಇದನ್ನು ಗುರುತಿಸಲಾಗುತ್ತಿಲ್ಲ. ಇದನ್ನು ಗುರುತಿಸಿ ಈ ಕುರಿತು ಅಧ್ಯಯನ ಮಾಡಬೇಕಿದೆ. ನಾವು ಸಮ್ಮೇಳನದಲ್ಲಿ ಇಂತಹ ವಿಷಯಗಳನ್ನು ಚರ್ಚಿಸಿ, ಅದನ್ನು ಕಾರ್ಯಗತಗೊಳಿಸುವ ಕೆಲಸವನ್ನು ಮಾಡುತ್ತೇವೆ. ಇಂತಹ ಸಮ್ಮೇಳನದ ಮೂಲಕವೇ ಅನೇಕ ಮಾರ್ಗಸೂಚಿಗಳನ್ನು ರಚಿಸಲಾಗಿದೆ. ವರ್ಟಿಕಲ್ ಗಾರ್ಡನಿಂಗ್, ಹೈಡ್ರೋಫೋನಿಕ್ಸ್ಗಳನ್ನು ಮಾರ್ಗಸೂಚಿಗಳಲ್ಲಿ ಸೇರ್ಪಡೆಗೊಳಿಸಲಾಗಿದೆ ಎಂದರು.
University of Agricultural 1919 ರಲ್ಲಿ ಇಂಡಿಯನ್ ಸೊಸೈಟಿ ಆಫ್ ಆರ್ನಮೆಂಟಲ್ ಹಾರ್ಟಿಕಲ್ಚರ್ ರಚನೆಯಾಗಿದ್ದು, ಅಲಂಕಾರಿಕ ಸಸ್ಯಗಳು ಮತ್ತು ಪುಷ್ಪಕೃಷಿ ಕುರಿತು ಭಾಗೀದಾರರಲ್ಲಿ ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ. ಅರ್ಬನ್, ಪೆರಿ ಅರ್ಬನ್ ತೋಟಗಾರಿಕೆ, ಗ್ರಾಮೀಣ ತೋಟಗಾರಿಕೆ, ಬಲ್ಬಸ್ ಹೂವು ಬೆಳೆ, ಬಯೋ ಡೈವರ್ಸಿಟಿ ಸೇರಿದಂತೆ ಹಲವಾರು ತೋಟಗಾರಿಕಾ ವಿಷಯಗಳಿಗೆ ಸಂಬAಧಿಸಿದAತೆ ಬೇರೆ ಬೇರೆ ನಗರಗಳಲ್ಲಿ ಸಮ್ಮೇಳನಗಳನ್ನು ನಡೆಸಲಾಗಿದ್ದು, ಪುಷ್ಪಕೃಷಿ ಮತ್ತು ಭೂದೃಶ್ಯ ಕುರಿತು ಇಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಿ, ಅತ್ಯುತ್ತಮವಾಗಿ ಸಮ್ಮೇಳನ ಆಯೋಜಿಸಲಾಗಿದೆ ಎಂದರು.
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿಯ ವೈಎಸ್ ಆರ್ ತೋಟಗಾರಿಕಾ ವಿಶ್ವವಿದ್ಯಾಲಯದ ನಿಕಟಪೂರ್ವ ಕುಲಪತಿಗಳಾದ ಡಾ.ಟಿ.ಜಾನಕಿರಾಮ್ ಮಾತನಾಡಿ, ದೇಶದಲ್ಲಿ 371 ಮಿಲಿಯನ್ ಟನ್ ತೋಟಗಾರಿಕಾ ಉತ್ಪನ್ನಗಳನ್ನು ಬೆಳೆಯಲಾಗುತ್ತಿದೆ. ತಂತ್ರಜ್ಞಾನ ಅಭಿವೃದ್ದಿ, ಸರ್ಕಾರದ ನಿಯಮಗಳು, ರೈತರ ಭಾಗವಹಿಸುವಿಕೆ, ರೈತ ಕೇಂದ್ರಗಳು ಇವರೆಲ್ಲರ ಸಹಕಾರದಿಂದ ಈ ಅಭಿವೃದ್ದಿ ಸಾಧಿಸಲಾಗಿದೆ.
ಪುಷ್ಪ ಕೃಷಿಯು ಕೃಷಿ ವಿದ್ಯಾರ್ಥಿಗಳ ದೃಷ್ಟಿಯಿಂದ ಸಹ ಪ್ರಮುಖ ಪಾತ್ರ ವಹಿಸುತ್ತದೆ. ಕೌಶಲ್ಯ ಅಭಿವೃದ್ಧಿಗೆ, ಹೊಸ ಸ್ಟಾರ್ಟ್ ಅಪ್ಗಳ ಆರಂಭಕ್ಕೆ ಅನುಕೂಲಕರವಾಗಿದೆ. ಸ್ವಂತ ಉದ್ಯಮ ಒದಗಿಸುವ ಜೊತೆ ಇತರರಿಗೂ ಉದ್ಯೋಗ ನೀಡುತ್ತಿದೆ. ಪುಷ್ಪಕೃಷಿಯಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಕೃತಕ ಬುದ್ದಿಮತ್ತೆ ಬಳಕೆ ಕೂಡ ಬಹಳ ಮುಖ್ಯವಾಗಿದ್ದು, ಇದರಿಂದ ಪುಷ್ಪ ಕೃಷಿ ಮತ್ತು ಉದ್ಯಮವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ದಿಪಡಿಸಬಹುದು ಎಂದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಅನೇಕ ಹೊಸ ಪ್ರಯೋಗಗಳನ್ನು ಮಾಡಿ ಯಶಸ್ಸು ಸಾಧಿಸುತ್ತಿದೆ. ವಿಶ್ವವಿದ್ಯಾಲಯ ಅಭಿವೃದ್ದಿಪಡಿಸಿರುವ ಸಹ್ಯಾದ್ರಿ ಕೆಂಪುಮುಕ್ತಿ ಅಕ್ಕಿ ತಳಿ ಬಹಳ ಪ್ರಸಿದ್ದಿಯಾಗಿದ್ದು ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಇದನ್ನು ಬೆಳೆಯುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ಲಾಘಿಸಿದರು.
ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಹಾಗೂ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕರಾದ ಡಾ.ಬಿ. ಹೇಮ್ಲಾ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಪುಷ್ಪಕೃಷಿಯು ಜಾಗತಿಕವಾಗಿ ಮಲ್ಟಿ ಬಿಲಿಯನ್ ಡಾಲರ್ ಉದ್ಯಮವಾಗಿ ಹೊರಹೊಮ್ಮಿದ್ದು, ಇದರಿಂದ 55 ಬಿಲಿಯನ್ ಡಾಲರ್ ಆದಾಯ ಬರುತ್ತಿದೆ. 10 ಮಿಲಿಯನ್ ಜನರಿಗೆ ಉದ್ಯೋಗ ಒದಗಿದೆ. ಭಾರತ ದೇಶ ಪುಷ್ಪಕೃಷಿಯಲ್ಲಿ ಚೀನಾದ ನಂತರ ಎರಡನೇ ದೊಡ್ಡ ದೇಶವಾಗಿದೆ. 2.97 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಪುಷ್ಪಕೃಷಿ ಮಾಡಲಾಗುತ್ತಿದೆ.
ಹಲವಾರು ಕಮರ್ಷಿಯಲ್ ಪ್ಲಾಂಟ್ಗಳನ್ನು ಬೆಳೆಯಲಾಗುತ್ತಿದ್ದು ಪುಷ್ಪಕೃಷಿಯಲ್ಲಿ ದೇಶವು ಸುಮಾರು ರೂ. 2000 ಕೋಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ಹಲವು ಜಿಲ್ಲೆಗಳು ತಮ್ಮದೇ ಆದ ವಿಶೇಷ ಪುಷ್ಪಕೃಷಿ ವಲಯಗಳನ್ನು ಅಭಿವೃದ್ದಿಪಡಿಸಿವೆ. ಮಲ್ಲಿಗೆ ಕೃಷಿ ಹಲವರಿಗೆ ಉದ್ಯೋಗ ನೀಡಿದ್ದು ಹೂವಿನ ಹಡಗಲಿ ಮಲ್ಲಿಗೆ ಮೈಸೂರು, ಉಡುಪಿ, ಮಧುರೈ ಮಲ್ಲಿಗೆ ಸೇರಿದಂತೆ ಹಲವು ಮಲ್ಲಿಗೆ ಬೆಳೆಗಳು ಜಿಐ ಟ್ಯಾಗ್ ಪಡೆದಿವೆ. ಕರ್ನಾಟಕವು ಭಾರತದ ವಾಣಿಜ್ಯ ಪುಷ್ಪ ಕೃಷಿಯ ರಾಜಧಾನಿ ಎಂದೇ ಹೆಸರಾಗಿದ್ದು ಅಂತಾರಾಷ್ಟ್ರೀಯ ಗುಣಮಟ್ಟದ ಹೂವುಗಳನ್ನು ವೈಜ್ಞಾನಿಕವಾಗಿ ಬೆಳೆದು ರಫ್ತು ಮಾಡುವ ಬೃಹತ್ ಉದ್ಯಮವಾಗಿ ಬೆಳೆದಿದೆ ಎಂದು ತಿಳಿಸಿದರು.
ಐಸಿಎಆರ್-ಐಎಆರ್ಐ ನಿಕಟಪೂರ್ವ ಡೀನ್ ಮತ್ತು ಮುಖ್ಯಸ್ಥ (ಎಫ್ಎಲ್ಎಸ್ )ರಾದ ಡಾ.ಎಸ್.ಎಸ್.ಸಿಂಧು, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್.ಸಿ.ಜಗದೀಶ ಮಾತನಾಡಿದರು.
ಸಮ್ಮೇಳನದಲ್ಲಿ ಭಾರತೀಯ ಅಲಂಕಾರಿಕ ತೋಟಗಾರಿಕೆ ಸಂಘದ ವತಿಯಿಂದ 5 ಮಂದಿ ಪುಷ್ಪ ಕೃಷಿ ವಿಜ್ಞಾನಿಗಳಿಗೆ ಫೆಲೋಷಿಪ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇಬ್ಬರು ಪಿಎಚ್.ಡಿ. ವಿದ್ಯಾರ್ಥಿಗಳಿಗೆ ಡಾಕ್ಟೋರಲ್ ಸಂಶೋಧನಾ ಪ್ರಬಂಧಕ್ಕೆ ಅತ್ಯುತ್ತಮ ಸಂಶೋಧನಾ ಪ್ರಬಂಧ ಪ್ರಶಸ್ತಿಯನ್ನು ಹಾಗೂ 4 ಮಂದಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಸಂಶೋಧನಾ ಪ್ರಬಂಧಕ್ಕೆ ಅತ್ಯುತ್ತಮ ಪ್ರಬಂಧ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಹಾಗೂ ಇಬ್ಬರಿಗೆ ಅತ್ಯುತ್ತಮ ಸಂಶೋಧನಾ ಪ್ರಬಂಧ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಸಮ್ಮೇಳನದಲ್ಲಿ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವರಾಜ್, ಡಾ.ಬಿ.ಕೆ ಕುಮಾರಸ್ವಾಮಿ, ಹೆಚ್ ಡಿ ದೇವಿಕುಮಾರ್, ಜೆ.ಜಿ.ಕಾವೇರಿಯಪ್ಪ, ಹೆಚ್ ಎಸ್ ಶಶಾಂಕ್, ಕೃಷಿ ವಿರ್ಸವವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.
ದೇಶದ ವಿವಿಧ ರಾಜ್ಯಗಳ ವಿದ್ಯಾರ್ಥಿಗಳು, ವಿಜ್ಞಾನಿಗಳು, ಕಾರ್ಪೂರೇಟರ್ ವಲಯದ ತಜ್ಞರು, ಪ್ರಗತಿಪರ ರೈತರು, ಉದ್ದಿಮೆದಾರರು, ಮಾರುಕಟ್ಟೆ ತಜ್ಞರು ಹಾಗೂ ಪುಷ್ಪ ಕೃಷಿ ರೈತರು, ಆಸಕ್ತರು ಭಾಗವಹಿಸಿದ್ದರು.
ಪತ್ರಿಕಾ ವಿತರಕರಿಗೆ ಬದುಕಿದ್ದಾಗಲೇ ಆರೋಗ್ಯ ಪರಿಹಾರ & ವಿಮಾ ಸೌಲಭ್ಯ ನೀಡಿ- ಮಾಲತೇಶ್
ಪತ್ರಿಕಾ ವಿತರಕರಿಗೆ ಸತ್ತ ಮೇಲೆ ಅಪಘಾತ ವಿಮೆ ನೀಡುವ ಬದಲು ಇದ್ದಾಗ ಆರೋಗ್ಯ ಪರಿಹಾರ ಅಥವಾ ವಿಮೆಗಳನ್ನು ನೀಡಿ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಮಾಲತೇಶ್ ಮಾತನಾಡಿ
ಪ್ರತಿನಿತ್ಯ ಬೆಳಗಿನ ಜಾವ ಎಲ್ಲರೂ ಏಳುವ ಮುಂಚೆ ನಾವು ಸಮಾಜ ಮತ್ತು ಸರ್ಕಾರ, ರಾಜಕೀಯ ಗಣ್ಯರುಗಳ ಹಾಗೂ ರಾಜ್ಯ, ದೇಶ,ವಿದೇಶದ ಸುದ್ದಿಗಳನ್ನು ಹೊತ್ತು ತಂದು ಮನೆ ಮನೆ ಬಾಗಿಲಿಗೆ ತಲುಪಿಸುವ ಮಹತ್ವದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇವೆ ನಮ್ಮ ಜೀವನ ಶೋಚನೀಯವಾಗಿದೆ. ಅದೇ ರೀತಿ ನಮ್ಮ ರಾಜ್ಯಾಧ್ಯಕ್ಷ ಶಂಭುಲಿಂಗ ರವರಿಗೆ ಜಿ. ಬಿ ಸಿಂಡ್ರೋಮ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ ಕೂಡಲೆ ಸರ್ಕಾರ ಇತ್ತ ಪರಿಹಾರ ನೀಡಬೇಕು ಎಂದರು.
ಪತ್ರಿಕ ವಿತರಕ ಸಂಘದ ಗೌರವಾಧ್ಯಕ್ಷ ಹುಲಿಗಿ ಕೃಷ್ಣ ಮಾತನಾಡಿ, ಕನಿಷ್ಠ ಕಾರ್ಮಿಕ ಇಲಾಖೆ ಸೌಲಭ್ಯನೂ ಸಹ ನಮಗೆ ದೊರೆಯದೆ, ಅನ್ಯಾಯವಾಗಿದ್ದು ಎಲ್ಲಾ ಪತ್ರಿಕ ವಿತರಿಕರಿಗೂ ಆರೋಗ್ಯ ವಿಮೆ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಉಚಿತ ನೆರವಿನ ರೀತಿಯಲ್ಲಿ ಹೊಸ ಚಿಂತನೆ ಮಾಡಿ ಪತ್ರಿಕ ವಿತರಕರ ಜೀವನ ಸ್ಪೂರ್ತಿಯಾಗಿ ಎಂದರು.
ಜಯ ಕರ್ನಾಟಕ ಜನಪರ ವೇದಿಕೆ ಶಿಕಾರಿಪುರ ತಾಲೂಕು ಅಧ್ಯಕ್ಷ ಶಿವಯ್ಯ ಎನ್ ಶಾಸ್ತ್ರಿ ಮಾತನಾಡಿ, ಪತ್ರಿಕಾ ವಿತರಕರ ಜೀವನ ಬಹಳಷ್ಟು ಕಷ್ಟದಲ್ಲಿದ್ದು ಸರ್ಕಾರ ವಿಶೇಷವಾದ ಅನುದಾನ ಮತ್ತು ಸೌಲಭ್ಯಗಳನ್ನು ನೀಡುವ ಮುಖಾಂತರ ಇಡೀ ದೇಶಕ್ಕೆ ಮಾದರಿಯಾಗಿ ಸಮಾಜದ ಹಾಗೂಹೋಗುಗಳ ವಿಷಯ ಮತ್ತು ಸುದ್ದಿಯನ್ನು ತಲುಪಿಸುವ ವಿತರಕರ ಬದುಕು ಕಟ್ಟಿಕೊಳ್ಳಲು ಹೊಸ ಕಾನೂನು ಜಾರಿಗೆ ತಂದ ಸಮಾಜಕ್ಕೆ ಸ್ಪೂರ್ತಿಯಾಗಿ ಎಂದು ಆಗ್ರಹಿಸಿದರು.
ಪ್ರಧಾನ ಕಾರ್ಯದರ್ಶಿ ನಜೀರ್ ಅಹ್ಮದ್, ಪದಾಧಿಕಾರಿಗಳಾದ ಪರಶುರಾಮ್ ರಾವ್, ಮಲ್ಲಿಕಾರ್ಜುನ್ ಭದ್ರಾವತಿ , ಪಾರ್ಥಿಬನ್, ರಾಮು ಜಿ, ಚಂದ್ರಶೇಖರ್, ಪ್ರತಾಪ್, ಶರತ್, ಧನಂಜಯ್, ಅಜೀ ಉಲ್ಲಾ, ಪ್ರಾಣೇಶ್, ಸಂಗಮೇಶ್ವರ್, ಜಯ ಕರ್ನಾಟಕ ಜನಪರ ವೇದಿಕೆಯ ತಾಲೂಕು ಕಾರ್ಯದರ್ಶಿ ಇಮ್ರಾನ್, ಕರವೇ ಜನಮನ ರಾಜ್ಯ ಸಂಘಟನೆ ಪದಾಧಿಕಾರಿಗಳು, ಇದ್ದರು.
