Sunday, February 8, 2026
Sunday, February 8, 2026
Home Blog Page 47

ಸೊರಬದಲ್ಲಿ ಸಡಗರ ಸಂಭ್ರಮದ ಕ್ರಿಸ್ ಮಸ್ ಆಚರಣೆ

0

ಸೊರಬ ಪಟ್ಟಣ ಸೇರಿ ತಾಲೂಕಿನಾದ್ಯಂತ ಗುರುವಾರ ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ ಏಸುಕ್ರಿಸ್ತನ ಜನ್ಮದಿನ ಕ್ರಿಸ್‌ಮಸ್ ಹಬ್ಬವನ್ನು ಕ್ರೈಸ್ತರು ಸಡಗರ-ಸಂಭ್ರಮದಿಂದ ಆಚರಿಸಿದರು.

ಬೆಳಗ್ಗೆಯಿಂದಲೇ ಮಕ್ಕಳು ಹೊಸ ಉಡುಪುಗಳು ತೊಟ್ಟು ಸಂಭ್ರಮಿಸಿದರೆ, ಮನೆಗಳಲ್ಲಿ ಕ್ರಿಸ್‌ಮಸ್ ಟ್ರೀ ರಚಿಸಿ ವಿದ್ಯುತ್ ದೀಪ ಮತ್ತು ವಿವಿಧ ಬಣ್ಣಗಳ ಹಾಳೆಗಳಿಂದ ಶೃಂಗರಿಸಿದ ದೃಶ್ಯ ಕಂಡುಬಂದಿತು.

ಪಟ್ಟಣದ ಹೊಸಪೇಟೆ ಬಡಾವಣೆಯ ಸಂತ ಸೆಬಾಸ್ಟಿಯನ್ ಚರ್ಚ್‌ನ್ನು ವಿದ್ಯುತ್ ದೀಪಗಳಿಂದ ಶೃಂಗರಿಸಿ, ಚರ್ಚ್‌ನ ಮುಂಭಾಗದಲ್ಲಿ ನಿರ್ಮಿಸಿದ ಏಸುವಿನ ಜನ್ಮವೃತ್ತಾಂತ ಸಾರುವ ಗೋದಲಿ ಎಲ್ಲರ ಗಮನ ಸೆಳೆಯಿತು. ಕ್ರೈಸ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿ, ಕೇಕ್ ಮತ್ತು ಸಿಸಿ ಹಂಚುವ ಮೂಲಕ ಸಂತಸ ಹಂಚಿಕೊಂಡರು

ಸಂತ ಸೆಬಾಸ್ಟಿಯನ್ ಚರ್ಚ್‌ನ ಧರ್ಮಗುರು ಫಾದರ್ ರಾಬರ್ಟ್ ಡಿ’ಮೆಲ್ಲೊ ಧರ್ಮ ಸಂದೇಶ ನೀಡಿ, ಕ್ರಿಸ್‌ಮಸ್ ಹಬ್ಬ ಪ್ರೀತಿಯ ಸಂಕೇತವಾಗಿದೆ. ಜಾತಿ-ಮತ ತಾರತಮ್ಯವಿಲ್ಲದೇ ಸುಖ ಶಾಂತಿಯಿಂದ ದೇಶೀಯ ಸಂಸ್ಕೃತಿಯಲ್ಲಿ ಬೆರೆತು ರಾಷ್ಟ್ರೀಯ ಏಕತೆಯನ್ನು ಉಂಟು ಮಾಡುತ್ತದೆ. ಕ್ರಿಸ್ತಜಯಂತಿಯ ಮಹೋತ್ಸವವನ್ನು ಸಂತ ಸೆಬಾಸ್ಟಿಯಾನರ ದೇವಾಲಯದಲ್ಲಿ ನಡುರಾತ್ರಿಯಲ್ಲಿ ಸಾಂಭ್ರಮಿಕ ದಿವ್ಯ ಬಲಿಪೂಜೆಯಲ್ಲಿ ಆಚರಿಸಲಾಗಿದೆ. ಕ್ರಿಸ್ತಜಯಂತಿ ದೇವನ ಪ್ರೀತಿಯ ಹೃದಯದ ಒಂದು ಮಿಡಿತ. ಮನುಜನ ಮೇಲಿನ ಪ್ರೀತಿಯ ತುಡಿತ. ತನ್ನ ಮಗನನ್ನೇ ಜಗತ್ತಿಗೆ ಧಾರೆ ಎರೆದ ಅಪರಿಮಿತ ಪ್ರೀತಿ, ಕ್ರಿಸ್ತ ಜಯಂತಿ ಮಮಕಾರದ ಆಗರವಾಗಿರುವ ದೇವರ ಪ್ರೀತಿಯನ್ನು ಅನುಭವಿಸಿ ನಾನದರ ನೆರಳಾದಾಗ, ನಮ್ಮ ಹೃದಯ ಪ್ರೇಮದಿಂದ ಕ್ರಿಸ್ತನನ್ನು ನೀಡಲು ಮುಂದಾದಾಗ ನೈಜ ಕ್ರಿಸ್ತಜಯಂತಿಯ ಆಚರಣೆಯಾಗುತ್ತದೆ ಎಂದರು.

ಸೂರ್ಯ ಮುಳುಗಿ ಕತ್ತಲು ಜಗತ್ತನ್ನು ಆವರಿಸಿದಾಗ, ಕತ್ತಲು ಆವರಿಸಿದ್ದರೂ, ಕ್ರಿಸ್‌ಮಸ್‌ ನಡುರಾತ್ರಿಯಲ್ಲಿ ಬೆಳಕಿನ ಆಗಮನವಾಯಿತು. ಬೆಳಕಿನಲ್ಲಿ ನಡೆಯಲು, ಬೆಳಕಿನ ರಾಜ್ಯದ ಸದಸ್ಯರಾಗಲು ಕ್ರಿಸ್ತ ಜಯಂತಿ ಪ್ರೇರಣೆಯಾಯಿತು. ಚೈತನ್ಯದ ಸೆಲೆ ಮೂಡಿತು. ನಿಸ್ತೇಜ ಜೀವನಕ್ಕೆ ಜೀವದ ಸಂಚಾರವಾಯಿತು. ಪ್ರಭುಯೇಸು ಜಗಜ್ಯೋತಿಯಾಗಿ ಭುವಿಯ ಅಂಧಕಾರ ನೀಗಿಸಿದರು. ಕ್ರಿಸ್‌ಮಸ್‌ ಮನುಜನ ಬದುಕನ್ನು ಜ್ಯೋತಿಯಾಗಿ ಆಲಂಗಿಸಿ ಪ್ರೀತಿಯ ಸಿಂಚನವೆರೆದ ಹಬ್ಬ. ಕ್ರಿಸ್‌ಮಸ್ ನಮ್ಮ ಬದುಕಿನ ಬೆಳಕಿನ ಹಬ್ಬ ಎಂಬುವುದಾಗಿ ಸಾರಿದರು ಎಂದರು.

ಪಟ್ಟಣದ ಸಮಸ್ತ ಕ್ರೈಸ್ತ ಭಕ್ತಾದಿಗಳು, ಧಾರ್ಮಿಕ ಸಹೋದರಿಯರು ಬಲಿಪೂಜೆಯಲ್ಲಿ ಭಾಗಿಯಾಗಿ ಕ್ರಿಸ್ತಜಯಂತಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು. ಬಲಿಪೂಜೆಯ ಬಳಿಕ ಶುಭಾಶಯ ವಿನಿಮಯ ಮತ್ತು ಕೇಕ್ ನೀಡಲಾಯಿತು.

ಆನವಟ್ಟಿಯ ಕ್ರಿಸ್ತುರಾಜ ಆಶ್ರಮ, ಇಂಡುವಳ್ಳಿಯ ಚರ್ಚ್ ಸೇರಿದಂತೆ ತಾಲೂಕಿನ ಎಲ್ಲಾ ಚರ್ಚ್‌ಗಳಲ್ಲೂ ವಿಶೇಷ ಪ್ರಾರ್ಥನೆಗಳು ಜರುಗಿದವು. ಕ್ರೈಸ್ತರ ಮನೆ ಮುಂಭಾಗದಲ್ಲಿ ಏಸುವಿನ ಜನ್ಮ ವೃತ್ತಾಂತ ಸಾರುವ ಗೋದಲಿಗಳನ್ನು ನಿರ್ಮಿಸಲಾಗಿತ್ತು. ಕ್ರೈಸ್ತರು ಮಾತ್ರವಲ್ಲದೇ ಸರ್ವ ಧರ್ಮಿಯರು ಕ್ರಿಸ್‌ಮಸ್ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

Madhu Bangarappa ಎಲೆಚುಕ್ಕೆ ರೋಗ: ವಿಜ್ಞಾನಿಗಳಿಂದ ಮಾರ್ಗದರ್ಶನ ಪಡೆದು ಹತೋಟಿ ಕ್ರಮ- ಮಧು ಬಂಗಾರಪ್ಪ

0

Madhu Bangarappa ಮಲೆನಾಡು ಪ್ರದೇಶದಲ್ಲಿ ತೀವ್ರತರವಾಗಿರುವ ಅಡಿಕೆ ಎಲೆಚುಕ್ಕೆ ರೋಗದಿಂದಾಗಿ ಸಣ್ಣ ರೈತರಿಗೆ ತುಂಬಾ ತೊಂದರೆಯಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ವಿಜ್ಞಾನಿಗಳಿಂದ ಮಾರ್ಗದರ್ಶನ ಪಡೆದು ಹತೋಟಿ ಕ್ರಮ ಕೈಗೊಳ್ಳುತ್ತಿದ್ದು ರೈತರಿಗೆ ಈ ಬಗ್ಗೆ ಹೆಚ್ಚಿನ ತಿಳುವಳಿಕೆ ನೀಡುವುದು ಅತಿ ಅವಶ್ಯಕವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಎಲೆ ಚುಕ್ಕೆ ರೋಗ ನಿಯಂತ್ರಣ ಮತ್ತು ಇತರೆ ವಿಷಯ ಕುರಿತು ಚರ್ಚಿಸಲು ವಿಜ್ಞಾನಿಗಳು ಮತ್ತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆಗಾಲದಲ್ಲಿ ಹೆಚ್ಚಾಗಿ ಹರಡುವ ಎಲೆ ಚುಕ್ಕೆ ರೋಗ ನಿಯಂತ್ರಣ ದುಬಾರಿಯಾಗಿದೆ. ರೋಗ ನಿಯಂತ್ರಣ ಕ್ರಮಕ್ಕೆ ಕೇಂದ್ರ ಮತ್ತು ರಾಜ್ಯ ಕ್ರಮವಾಗಿ ಶೇ.60 ಮತ್ತು 40 ಹಣ ನೀಡಲು ಸಿದ್ದವಿದ್ದು, ಮುಖ್ಯವಾಗಿ ರೋಗ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ವಿಜ್ಞಾನಿಗಳ ಅಭಿಪ್ರಾಯ ಮತ್ತು ಮಾರ್ಗದರ್ಶನದ ಮೇಲೆ ಮಾರ್ಗಸೂಚಿಯನ್ನು ತಯಾರಿಸಲಾಗುತ್ತಿದೆ.

ಇಲಾಖೆಗಳು, ಗ್ರಾ.ಪಂ, ಸಹಕಾರ ಸಂಘಗಳು, ಅಡಿಕೆ ಮಾರಾಟ ಸಹಕಾರ ಸಂಘಗಳ ಮೂಲಕ ರೈತರಿಗೆ ಈ ರೋಗ ನಿಯಂತ್ರಣ ಮತ್ತು ವಿಜ್ಞಾನಿಗಳು ತಯಾರಿಸಿದ ಮಾರ್ಗಸೂಚಿಗಳನ್ನು ಅನುಸರಿಸುವ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ.

ಅರ್ಧ, ಮುಕ್ಕಾಲು ಎಕರೆ ಹೊಂದಿರುವ ಸಣ್ಣ ಸಣ್ಣ ರೈತರಿಗೆ ಈ ರೋಗದಿಂದಾಗಿ ತುಂಬಾ ತೊಂದರೆಯಾಗುತ್ತಿದ್ದು ರೋಗ ನಿಯಂತ್ರಣಕ್ಕಾಗಿ ಎಲ್ಲರೂ ಸೇರಿ ಒಂದು ತಂಡವಾಗಿ ಕಾರ್ಯ ನಿರ್ವಹಿಸುವ ಮೂಲಕ ಸಹಕರಿಸಬೇಕೆಂದರು.

ಅತಿ ಹೆಚ್ಚು ಕೆಪಿಎಸ್ ಶಾಲೆ : ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ 900 ಕೆಪಿಎಸ್ ಶಾಲೆಗಳನ್ನು ಸುಮಾರು ರೂ.3500 ಕೋಟಿ ಅನುದಾನದಲ್ಲಿ ತೆರೆಯಲಾಗುತ್ತಿದ್ದು, ಇದೊಂದು ದೊಡ್ಡ ಮತ್ತು ಶೈಕ್ಷಣಿಕ ಕ್ಷೇತ್ರದ ಅತ್ಯುತ್ತಮ ಯೋಜನೆಯಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 11 ಕೆಪಿಎಸ್ ಶಾಲೆಗಳಿದ್ದು, ಹೊಸದಾಗಿ 19 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಲಾಗಿದೆ.

ಇಂತಹ ದೊಡ್ಡ ಯೋಜನೆಗೆ ಶಿವಮೊಗ್ಗದಲ್ಲಿಯೇ ಮಾನ್ಯ ಮುಖ್ಯಮಂತ್ರಿಗಳಿAದ ಚಾಲನೆ ಕೊಡಿಸುವ ಯೋಜನೆ ಇದೆ. ಇದೇ ವೇಳೆ ಆಡಳಿತ ಭವನ, ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡುವುದು, ಅರಣ್ಯ ಸಮಸ್ಯೆಗಳಿಗೆ ಪರಿಹಾರೋಪಾಯ ಸೇರಿದಂತೆ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಚಾಲನೆ ಕೊಡಿಸುವ ಬಗ್ಗೆ ಯೋಜಿಸಲಾಗುತ್ತಿದೆ ಎಂದರು.

ಕೊಳಚೆ ಪ್ರದೇಶ ನಿವಾಸಿಗಳಿಗೆ ಹಕ್ಕುಪತ್ರ : ಜಿಲ್ಲೆಯಲ್ಲಿರುವ ಎಲ್ಲ ಕೊಳಚೆ ಪ್ರದೇಶಗಳನ್ನು ಗುರುತಿಸಿ ಅವರಿಗೆ ಹಕ್ಕುಪತ್ರ ನೀಡುವ ಮೂಲಕ ಮುಖ್ಯವಾಹಿನಿಗೆ ತರಲು ಆಂದೋಲನದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

Madhu Bangarappa ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಕೊಳಚೆ ಪ್ರದೇಶಗಳನ್ನು ಗುರುತಿಸಿ ಅವರಿಗೆ ಹಕ್ಕುಪತ್ರ, ಇ-ಸ್ವತ್ತು ನೀಡಲು ಕ್ರಮ ಜರುಗಿಸುವಂತೆ ಡಿಯುಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು 15 ದಿನಗಳ ಒಳಗೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ಲಂ ಗಳನ್ನು ಗುರುತಿಸಿ ಕ್ರಮ ವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಜಿಲ್ಲೆಯನ್ನು ಕೊಳಚೆ ಪ್ರದೇಶಮುಕ್ತ ಜಿಲ್ಲೆಯನ್ನಾಗಿ ಮಾಡುವ ಮೂಲಕ ಮಾದರಿ ಜಿಲ್ಲೆಯಾಗಿಸಲು ಎಲ್ಲರೂ ಸಹಕರಿಸಬೇಕು ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಜಿ.ಪಂ ಸಿಇಓ ಹೇಮಂತ್ ಎನ್, ಸಿಸಿಎಫ್ ಹನುಮಂತಪ್ಪ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಮಾಜಿ ವಿಧಾನ ಪರಿಷತ್ ಶಾಸಕರಾದ ಪ್ರಸನ್ನಕುಮಾರ್, ಕೃಷಿ ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ದೇವಿಕುಮಾರ್, ಎಸಿ ಸತ್ಯನಾರಾಯಣ, ಡಿಯುಡಿಸಿ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು, ಸ್ಲಂ ಬೋರ್ಡ್ ಅಧಿಕಾರಿಗಳು, ಡಿಡಿಪಿಐ, ಇತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಹೊಸಮನೆ ಶ್ರೀನರಸಿಂಹ ದೇಗುಲದಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜೆ

0

ಶಿವಮೊಗ್ಗ ಹೊಸಮನೆ ನಾಲ್ಕನೇ ತಿರುವಿನ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದಲ್ಲಿ ದೇವಸ್ಥಾನ ಸಮಿತಿ ವತಿಯಿಂದ ಡಿ. 30ರಂದು ಇಡೀ ದಿನ ವೈಕುಂಠ ಏಕಾದಶಿಯ ವಿಶೇಷ ಪೂಜೆ, ಆರಾಧನೆ, ಭರತನಾಟ್ಯ, ಸಂಗೀತ ಕಾರ್ಯಕ್ರಮ ಸೇರಿದಂತೆ ವಿವಿಧ ಪ್ರಮುಖರ ಧಾರ್ಮಿಕ ಸಭೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.
ಡಿಸೆಂಬರ್ 30ರ ಮಂಗಳವಾರ ಬೆಳಿಗ್ಗೆ 9:00 ಗಂಟೆಯಿಂದ ಪೂಜಾ ವಿಧಿ ವಿಧಾನ ಆರಂಭಗೊಳ್ಳಲಿದ್ದು, ಮಧ್ಯಾಹ್ನ 12:30 ಕ್ಕೆ ಮಹಾಮಂಗಳಾರತಿ ನಡೆಯಲಿದೆ.
ಸಂಜೆ 6 ರಿಂದ ಸಪ್ತಸ್ವರ ಟ್ರಸ್ಟ್ ನ ಸಂಗೀತ ಕಲಾವಿದರಿಂದ ಸಂಗೀತ ಲಹರಿ ಭಕ್ತಿಗೀತೆಗಳ ಪ್ರಸ್ತುತತೆ ನಡೆಯಲಿದೆ.
ತದನಂತರ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವರ ನವರೂಪದ ಭರತನಾಟ್ಯ ಕಾರ್ಯಕ್ರಮವನ್ನು ಪ್ರತಿಭಾವಂತ ಪುಟಾಣಿ ಕಲಾವಿದರು ನಡೆಸಿಕೊಡಲಿದ್ದಾರೆ.
ಮಧ್ಯಾಹ್ನ ಪೂಜೆಯ ನಂತರ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ. ಎಸ್ ,ಈಶ್ವರಪ್ಪ, ಸಚಿವ ಮಧು ಬಂಗಾರಪ್ಪ, ಸಂಸದ ಬಿ ವೈ ರಾಘವೇಂದ್ರ, ಶಾಸಕರಾದ ಚನ್ನಬಸಪ್ಪ ಡಿಎಸ್ ಅರುಣ್, ರುದ್ರೆಗೌಡ, ಮಂಜುನಾಥಗೌಡ, ಸೂಡಾಧ್ಯಕ್ಷ ಸುಂದರೇಶ್ ಸೇರಿದಂತೆ ವಿವಿಧ ಗಣ್ಯರು ಆಗಮಿಸಿದ್ದಾರೆ.
ಕಾರ್ಯಕ್ರಮಕ್ಕೆ ಸರ್ವರನ್ನು ದೇವಸ್ಥಾನ ಸಮಿತಿಯ ಗೌರವಾಧ್ಯಕ್ಷ ಸುರೇಶ್ ಬಾಳೆಗುಂಡಿ, ಅಧ್ಯಕ್ಷ ಗಣೇಶ್ ಎಲ್, ಉಪಾಧ್ಯಕ್ಷ ಬಸವರಾಜ್ ಎಂ.ಆರ್., ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಧಾನ ಅರ್ಚಕರಾದ ಶ್ರೀನಿವಾಸ ಮೂರ್ತಿ ಹಾಗೂ ಪದಾಧಿಕಾರಿಗಳು ಸ್ವಾಗತಿಸಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಲು ಕೋರಲಾಗಿದೆ.

Backward Classes Welfare Department 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವಿದ್ಯಾರ್ಥಿಗಳಿಗೆ ಮಾಹಿತಿ

0

Backward Classes Welfare Department 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕಡೆಯ ದಿನಾಂಕವನ್ನು ದಿ:30/01/2026 ರವರೆಗೆ ವಿಸ್ತರಿಸಲಾಗಿದೆ.

ಆಸಕ್ತರು ವೆಬ್‌ಸೈಟ್ https://ssp.postmatric.karnataka.gov.in ಮೂಲಕ ಜ.30 ರೊಳಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Backward Classes Welfare Department ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ: 8050770005, ಇ-ಮೇಲ್ bcwdhelpline@gmail.com ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in ಅಥವಾ ದೂ.ಸಂ: 1902 ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

MESCOM ಡಿಸೆಂಬರ್ 26.ಸೋಮಿನಕೊಪ್ಪ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಆಲ್ಕೋಳ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ. 26 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಸೋಮಿನಕೊಪ್ಪ, ಹೊಂಗಿರಣ ಲೇಔಟ್, ಗೋಕುಲ್ ಲೇಔಟ್, ಸಹ್ಯಾದ್ರಿನಗರ, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಲೇಔಟ್, ವೆಟರ‍್ನರಿ ಕಾಲೇಜು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ತಿಳಿಸಿದೆ.

Gavisiddeshwara Fair Festival ಭಕ್ತಿ, ಶ್ರದ್ದೆ ಮತ್ತು ದಾಸೋಹಗಳ ಸಂಕೇತ, ಕೊಪ್ಪಳ ಶ್ರೀಗವಿಸಿದ್ಧೇಶ್ವರ ಜಾತ್ರೆ-ಮುರಳೀಧರ ನಾಡಿಗೇರ್

0

Gavisiddeshwara Fair Festival ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವವು 2026ರ ಜನವರಿ 5ರಿಂದ ಆರಂಭವಾಗಿ 15 ದಿನಗಳ ಕಾಲ ಭವ್ಯವಾಗಿ ಜರುಗಲಿದೆ. ಈ ಬಾರಿಯ ಜಾತ್ರೆಯಲ್ಲಿ ಸುಮಾರು ಎಂಟು ಲಕ್ಷಕ್ಕೂ ಅಧಿಕ ಭಕ್ತ ಸಮೂಹ ಆಗಮಿಸುವ ನಿರೀಕ್ಷೆಯಿದ್ದು, ಅದಕ್ಕೆ ತಕ್ಕಂತೆ ಜಿಲ್ಲಾಡಳಿತ ಹಾಗೂ ಗವಿಸಿದ್ದೇಶ್ವರ ಸಂಸ್ಥಾನವು ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

ಸಂಸ್ಥಾನದ ಶ್ರೀ ಗವಿಮಠದ ಜಾತ್ರೆ ಪ್ರತಿವರ್ಷವೂ ವಿಭಿನ್ನ, ವಿಶಿಷ್ಟ ಹಾಗೂ ಅರ್ಥಪೂರ್ಣವಾಗಿ ನಡೆಯುತ್ತಿದ್ದು, ಈ ಬಾರಿ ಆಧುನಿಕತೆಯ ಸ್ಪರ್ಶದೊಂದಿಗೆ 2026ರ ಮಹಾಜಾತ್ರೆಯ ಆಹ್ವಾನವನ್ನು ಶ್ರೀಮಠದ ಭಕ್ತರಿಗೆ ನೇರವಾಗಿ ತಲುಪಿಸುವ ಸತ್ಕಾರ್ಯಕ್ಕೆ ಕೈಹಾಕಲಾಗಿದೆ.

ಡಿಜಿಟಲ್ ತಂತ್ರಜ್ಞಾನದಲ್ಲಿ ಜಾತ್ರೆಯ ಆಹ್ವಾನ
ಜನವರಿ 05, 06 ಹಾಗೂ 07ರಂದು ನಡೆಯುವ ಅಜ್ಜನ ಜಾತ್ರೆಗೆ ಭಕ್ತರನ್ನು ಆಹ್ವಾನಿಸುವ ದೃಶ್ಯವನ್ನು ಡ್ರೋನ್ ಕ್ಯಾಮರಾ ಮೂಲಕ ಸೆರೆಹಿಡಿದು, ಡಿಜಿಟಲ್ ತಂತ್ರಜ್ಞಾನ ಬಳಸಿ ತಯಾರಿಸಲಾದ ಟ್ರೇಲರ್ ಸಾಂಗ್ ಅನ್ನು ಇಂದು 19-12-2025 ಬೆಳಿಗ್ಗೆ 09:00 ಗಂಟೆಗೆ ಶ್ರೀಮಠದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿರುವ ಸೇವಕರಿಂದ ಬಿಡುಗಡೆಗೊಳಿಸಲಾಗಿದೆ. ಇದು ಈ ವರ್ಷದ ಜಾತ್ರೆಯ ವಿಶೇಷ ಆಕರ್ಷಣೆಯಾಗಿದೆ.

ಈ ಟ್ರೇಲರ್ ಸಾಂಗ್‌ನಲ್ಲಿರುವ “ಭಕ್ತಿಯ ಮನೆ ಮನಗಳಲ್ಲಿ ಮುಕ್ತಿಯ ಕೆನೆ ನೆನಹಿನಲ್ಲಿ ಓಂಕಾರವು ಕೋಟೆ ಕಟ್ಟಿ
ಬೆಟ್ಟಗಳು ಧ್ಯಾನದಲಿ ಸಿದ್ಧ ಪುರುಷ ಗವಿಸಿದ್ದನೇ ಇಷ್ಟ ಪ್ರಾಣ ಭಾವದಲ್ಲಿ ಜಾತ್ರೋತ್ಸವ ನಮ್ಮ ಯಾತ್ರೋತ್ಸವ”
ಎಂಬ ಅಧ್ಯಾತ್ಮಪೂರ್ಣ, ಭಕ್ತಿಭಾವ ತುಂಬಿದ ಸಾಹಿತ್ಯಕ್ಕೆ ಕೊಪ್ಪಳದ ಗಾಯಕ ಸದಾಶಿವ ಪಾಟೀಲರು ಜೀವ ತುಂಬಿದ್ದಾರೆ.

ಈ ಹಾಡಿನಲ್ಲಿ ಶ್ರೀ ಶಿವಶಾಂತವೀರ ಹಾಗೂ ಶ್ರೀ ಮರಿಶಾಂತವೀರ ಮಹಾಸ್ವಾಮಿಗಳ ಮೂರ್ತಿಶಿಲ್ಪಗಳು, ಚಿಕೇನಕೊಪ್ಪದ ಶರಣರ ದೀರ್ಘದಂಡ ನಮಸ್ಕಾರ, ಜಾತ್ರೆಯ ಮಹಾದಾಸೋಹದ ಸಿದ್ಧತೆ, ಪ್ರಸಾದ ಸೇವನೆ, ಹಾಗೂ ಶ್ರೀಗವಿಮಠದ ವಿವಿಧ ಸೇವಕರ ಸೇವಾ ಕಾರ್ಯಗಳು ಮನಮುಟ್ಟುವಂತೆ ಚಿತ್ರಿತವಾಗಿವೆ. ಜೊತೆಗೆ ಪ್ರಾಕೃತಿಕ ಬೆಟ್ಟ-ಗುಡ್ಡಗಳು, ಕೆರೆಗಳು ಮತ್ತು ಸಹಜ ವೈಭವದ ದೃಶ್ಯಗಳನ್ನು ಸಂಯೋಜಿಸಿ ಟ್ರೇಲರ್ ಸಾಂಗ್ ಮೂಲಕ ಭಕ್ತರಿಗೆ ಜಾತ್ರೆಯ ಆಹ್ವಾನ ನೀಡಲಾಗಿದೆ.

ಈ ಬಾರಿಯ ಜಾತ್ರೆಯ ವಿಶೇಷ ಆಕರ್ಷಣೆಗಳು
ಪ್ರತಿ ವರ್ಷದಂತೆ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ
ಕೃಷಿ ಮೇಳ, ತಾರಸಿ ತೋಟ (ಟೆರೇಸ್ ಗಾರ್ಡನ್), ಫಲ-ಪುಷ್ಪ ಪ್ರದರ್ಶನ
ರಕ್ತದಾನ ಶಿಬಿರ, ರಂಗೋಲಿ ಪ್ರದರ್ಶನ ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳು ಆಯೋಜನೆಯಾಗಲಿದೆ.

Gavisiddeshwara Fair Festival ವಿಶೇಷ ಅನ್ನದಾಸೋಹ
ದೇಶದ ಅನೇಕ ಮಠಗಳು ಅನ್ನದಾಸೋಹಕ್ಕೆ ಹೆಸರುವಾಸಿಯಾಗಿದ್ದರೂ, ಶ್ರೀ ಗವಿಸಿದ್ದೇಶ್ವರ ಮಠವು ತನ್ನ ವಿಭಿನ್ನ ಮತ್ತು ವಿಶಿಷ್ಟ ಅನ್ನದಾಸೋಹದ ಮೂಲಕ ಖ್ಯಾತಿ ಪಡೆದಿದೆ. ಈ ಬಾರಿ ಸಹ ಸರಳ, ಸುರಕ್ಷಿತ ಮತ್ತು ಆರೋಗ್ಯಕರ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಮೊದಲ ದಿನದಿಂದ ಕೊನೆಯ ದಿನದವರೆಗೂ ಮಠದ ವತಿಯಿಂದ ಹಾಗೂ ಭಕ್ತಾದಿಗಳ ಸಹಕಾರದಿಂದ ವಿಶೇಷ ಅನ್ನದಾಸೋಹ ನಡೆಯಲಿದೆ.ಪ್ರತಿ ವರ್ಷ ಕೀಪ್ಪಳ ಮತ್ತು ಸುತ್ತಮುತ್ತಲಿನ ಕಾರ್ಖಾನೆಗಳ ಸಹಕಾರದಿಂದ ನೆಡೆಸಲಾಗುತ್ತಿದ್ದ ಜಾತ್ರೆ ಈಬಾರ ಕಾರ್ಖಾನೆಗಳ ಸಹಕಾರ ಮತ್ತು ಧನ ಸಹಾಯಕ್ಕೆ ಮುಂದಾಗದಂತೆ ಶ್ರೀಗಳು ಭಕ್ತರಿಗೆ ತಿಳಿಸಿದ್ದರೆ.

ನೀರಿನ ವ್ಯವಸ್ಥೆ
70 ನಲ್ಲಿಇರುವ ಎರಡು ನೀರಿನ ಕಟ್ಟೆಗಳು, 50 ನಲ್ಲಿಇರುವ ಇನ್ನೊಂದು ಕಟ್ಟೆಯನ್ನು ಸಿದ್ಧಗೊಳಿಸಲಾಗಿದೆ. 250-300 ಭಕ್ತರು ಏಕಕಾಲಕ್ಕೆ ನೀರನ್ನು ಸೇವಿಸುವ ಬೃಹತ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಸಿಹಿ ಪದಾರ್ಥವಾದ ಮಾದಲಿ ಈ ನಾಡಿನ ವಿಶೇಷ ತಿನಿಸಾಗಿದೆ. ಜಾತ್ರೆಯ ವಿಶೇಷವೂ ಹೌದು ಅದಕ್ಕೆಂದೆ 166 ಅಡಿ ವಿಸ್ತೀರ್ಣದ 3, 206 ಅಡಿ ವಿಸ್ತೀರ್ಣದ 3 ಕಟ್ಟೆಗಳು ಒಟ್ಟು 6 ಮಾದಲಿ ಕಟ್ಟೆಗಳು ನಿರ್ಮಾಣಗೊಂಡಿವೆ. ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೆಕವಾಗಿ ಕೌಂಟರ್‌ಗಳನ್ನು ಪ್ರಸಾದ ನೀಡಿಸಿಕೊಳ್ಳಲಿಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ 4 ಪ್ರವೇಶ ದ್ವಾರಗಳು, 65 ಅಡಿಯ ಅನ್ನ ಸಂಗ್ರಹಣಾ ಕಟ್ಟೆ ನಿರ್ಮಿಸಲಾಗಿದೆ.

ಪೊಲೀಸ್‌ ಕಣ್ಗಾವಲು
ಪ್ರತಿದಿನ ಪ್ರಸಾದದ ಉಸ್ತುವಾರಿ ಹಾಗೂ ಪರಿಶೀಲನೆಗಾಗಿ ಆಹಾರ ಇಲಾಖೆಯ ಅಧಿಕಾರಿಗಳು, ಪೊಲೀಸರು ಇರುತ್ತಾರೆ. ಪ್ರಸಾದ ನಿಲಯದ ಸುತ್ತಲೂ ಪೊಲೀಸ್‌ ಕಣ್ಗಾವಲು ಇದ್ದು, ತಂತಿ ಬೇಲಿ ಅಳವಡಿಸಲಾಗಿದೆ. ಮಹಾದಾಸೋಹದಲ್ಲಿಭಕ್ತರ ಸುರಕ್ಷತೆಗಾಗಿ ಹೊರ, ಓಳಾಂಗಣ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜಾತ್ರಾಮಹೋತ್ಸವ ಮಹಾದಾಸೋಹದಲ್ಲಿಒಂದು ದಿನಕ್ಕೆ ಸುಮಾರು 300 ರಿಂದ 400ರವರೆಗೆ ಭಕ್ತರು ಪ್ರಸಾದ ತಯಾರಿಸಲಿದ್ದಾರೆ. ಪ್ರಸಾದ ವಿತರಣೆಯಲ್ಲಿಸುಮಾರು 500 ರಿಂದ 600 ಭಕ್ತರು ಪಾಲ್ಗೊಳ್ಳುವರು. ಜಾತ್ರಾಮಹೋತ್ಸವ ಪ್ರಾರಂಭದಿಂದ ಮುಕ್ತಾಯದ ವರೆಗೆ ಪ್ರಸಾದ ನಿಲಯದಲ್ಲಿಸುಮಾರು 25 ಸಾವಿರ ಭಕ್ತರು ನಾನ ಸೇವೆಯಲ್ಲಿಪಾಲ್ಗೊಳ್ಳುವರು. ಜಾತ್ರೆಯ ಪ್ರಾರಂಭದಿಂದ ಮುಕ್ತಾಯದವರೆಗೆ ಸುಮಾರು 15 ರಿಂದ 18 ಲಕ್ಷ ಭಕ್ತರು ಪ್ರಸಾದ ಸ್ವೀಕರಿಸುವ ನಿರೀಕ್ಷೆ ಇದೆ.

ಗವಿಮಠದ ಐತಿಹಾಸಿಕ ಹಿನ್ನೆಲೆ – ಗುಡದಯ್ಯನಿಂದ ಗವಿಸಿದ್ದನಾಗುವವರೆಗೆ
ಶಾಲಿವಾಹನ ಶಕ 1008ರಲ್ಲಿ ರುದ್ರಮುನಿ ಶಿವಯೋಗಿಗಳಿಂದ ಸ್ಥಾಪಿತವಾದ ಶ್ರೀ ಗವಿಮಠವು ಇದುವರೆಗೆ 18 ಪೀಠಾಧಿಪತಿಗಳನ್ನು ಕಂಡಿದೆ. 11ನೇ ಪೀಠಾಧಿಪತಿ ಗವಿಸಿದ್ದೇಶ್ವರ ಸ್ವಾಮೀಜಿ ಕಾಯಕ, ಪೂಜೆ ಹಾಗೂ ಅನುಷ್ಠಾನ ತತ್ವಗಳಿಂದ ಪ್ರಸಿದ್ಧರಾದವರು. ಲಿಂಗದ ಬೆಳಕಿನಲ್ಲೇ ಲೀನವಾಗಿ ಸಜೀವ ಸಮಾಧಿ ಹೊಂದಿದ ಗವಿಸಿದ್ದೇಶ್ವರರ ಗದ್ದುಗೆ ಮಠದ ಹೃದಯವಾಗಿದೆ.

ಮೂಲತಃ ಗುಡದಯ್ಯ ಎಂಬ ಹೆಸರಿನಿಂದ ಪ್ರಸಿದ್ಧರಾಗಿದ್ದ ಗವಿಸಿದ್ದೇಶ್ವರರು, ಮಳೆಮಲ್ಲೇಶ್ವರ ಬೆಟ್ಟದಲ್ಲಿ ಧ್ಯಾನಾಸಕ್ತರಾಗಿದ್ದರು. ಅವರ ಪವಾಡ ಶಕ್ತಿಯಿಂದ ಹಸುವನ್ನು ಬದುಕಿಸಿದ ಘಟನೆ ಅವರ ಮಹಿಮೆಯನ್ನು ಬೆಳಗಿಸಿದೆ. ಬಳಿಕ ಗವಿಮಠದ 11ನೇ ಪೀಠಾಧಿಪತಿಯಾಗಿ ನೇಮಕಗೊಂಡು ಸಮಾಜೋದ್ಧಾರ ಕಾರ್ಯಗಳಲ್ಲಿ ತೊಡಗಿದರು. ಕ್ರಿ.ಶ. 1816ರಲ್ಲಿ ಗುರುಗಳಿಗಾಗಿ ನಿರ್ಮಿಸುತ್ತಿದ್ದ ಸಮಾಧಿಯ ಮೇಲೆಯೇ ಧ್ಯಾನಗೈಯುತ್ತಲೇ ಲಿಂಗೈಕ್ಯರಾದರು. ಆ ದಿನವನ್ನೇ ಗವಿಸಿದ್ದೇಶ್ವರ ಜಾತ್ರೆಯಾಗಿ ಆಚರಿಸಲಾಗುತ್ತಿದೆ.

ಕೈಲಾಸ ಮಂಟಪ ಮತ್ತು ಜಾತ್ರೆಯ ವೈಭವ
ಕೈಲಾಸ ಮಂಟಪದಲ್ಲಿ ನಾಡಿನ ಹರ-ಗುರು-ಚರಮೂರ್ತಿಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮಗಳು ಜರುಗಲಿದ್ದು, ಪರಿಸರ ಸ್ನೇಹಿ ಮತ್ತು ನೈಸರ್ಗಿಕ ವೇದಿಕೆ ಇದರ ವಿಶೇಷತೆ.

ಜಾತ್ರೆಯ ಸಂದರ್ಭದಲ್ಲಿ ನಡೆಯುವ ಕಡುಬಿನ ಕಾಳಗ (ಮದ್ದು ಸುಡುಮದು), ಗವಿಮಠದ ಕೆರೆಯಲ್ಲಿ ನಡೆಯುವ ತೆಪ್ಪೋತ್ಸವ, ಹಾಗೂ ಪ್ರತಿದಿನ ವಿಭಿನ್ನ ಪ್ರಸಾದ ವ್ಯವಸ್ಥೆಗಳು ಭಕ್ತರನ್ನು ಆಕರ್ಷಿಸುತ್ತವೆ.

ಒಟ್ಟಾರೆ, ಪರಿಸರ, ಆರೋಗ್ಯ ಮತ್ತು ಭಕ್ತರ ಮೇಲಿನ ಕಾಳಜಿಯನ್ನು ಪ್ರಧಾನವಾಗಿಟ್ಟುಕೊಂಡ ಗವಿಸಿದ್ದೇಶ್ವರ ಜಾತ್ರೆ ಈ ಭಾಗದ ನಡದಾಡುವ ದೈವದಂತೆ ಪರಿಣಮಿಸಿದೆ.

ಕೊಪ್ಪಳದ ಗವಿಸಿದ್ದೇಶ್ವರ (ಅಜ್ಜನ ಜಾತ್ರೆ) ಜಾತ್ರೆಯ ಮಹಾರಥೋತ್ಸವ ಜನವರಿ 5, 2026 ರಂದು ನಡೆಯಲಿದೆ, ಇದು ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧವಾಗಿದೆ, ಲಕ್ಷಾಂತರ ಭಕ್ತರು ಸೇರಿ ದಾಸೋಹ ಸ್ವೀಕರಿಸುತ್ತಾರೆ ಮತ್ತು ಅದ್ಧೂರಿ ಮೆರವಣಿಗೆಗಳು, ಕಲಾ ಕಾರ್ಯಕ್ರಮಗಳು ಇರುತ್ತವೆ. ಜಾತ್ರೆಯ ಸಮಯದಲ್ಲಿ ನಿರಂತರವಾಗಿ 15 ದಿನಗಳ ಕಾಲ ಉಚಿತ ಪ್ರಸಾದ (ದಾಸೋಹ) ನೀಡಲಾಗುತ್ತದೆ.
5-6 ಸಾವಿರ ಭಕ್ತರಿಗೆ ಏಕಕಾಲದಲ್ಲಿ ಪ್ರಸಾದ ಸ್ವೀಕರಿಸಲು 6 ಎಕರೆ ವಿಸ್ತೀರ್ಣದ ವ್ಯವಸ್ಥೆ, 76 ಕೌಂಟರ್‌ಗಳು, ದೊಡ್ಡ ಅಡುಗೆ ಕೋಣೆಗಳು, ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗಿದೆ. ಯಾವುದೇ ಔಪಚಾರಿಕ ಸಮಿತಿಯಿಲ್ಲದೆ ಭಕ್ತರಿಂದಲೇ ಆಯೋಜಿಸಲ್ಪಡುತ್ತದೆ.

ಕಾಶಿಗೆ ಹೋಗಲಾಗದವರು ಕೊಪ್ಪಳದ ಅಜ್ಜನ ಜಾತ್ರೆಗೆ ಬನ್ನಿ – ಕಣ್ಣು ತುಂಬಿಸಿಕೊಂಡು ಅಜ್ಜನ ಆಶೀರ್ವಾದ ಪಡೆಯಿರಿ.

ಮುರಳೀಧರ್ ನಾಡಿಗೇರ್
9008017727

Breaking News ಜವರಗೊಂಡನಹಳ್ಳಿ ಬಳಿ ಬಸ್ – ಕಂಟೈನರ್ ಲಾರಿ ಭೀಕರ ಅಪಘಾತ. 9 ಬಸ್ ಪ್ರಯಾಣಿಕರ ಸಜೀವ ದಹನ.

0

Breaking News ಚಿತ್ರದುರ್ಗ ಜಿಲ್ಲೆಯ ಗೋರ್ಲರ್ಡ್ಕು ಕ್ರಾಸ್ ಬಳಿ ಬಸ್ ಲಾರಿ ಅಪಘಾತ ಸಂಭವಿಸಿದೆ.
ಮುಂಜಾನೆ 2-05 ಗಂಟೆ ಸುಮಾರಿಗೆ ಈ ಘಟನೆ ನಡೆದಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ನಿದ್ದೆಗಣ್ಣಿನಲ್ಲಿದ್ದ ಲಾರಿ ಡ್ರೈವರ್ ಎದುರು ಬರುತ್ತಿದಗದ ಸೀಬರ್ಡ್ ಹೆಸರಿನ ಬಸ್ಸಿಗೆ ಮುಖಾಮುಖಿ ಡಿಕ್ಕಿ ಹೊಡೆದರ ಪರಿಣಾಮ
ಬಸ್ ನ ಡಿಸೆಲ್ ಟ್ಯಾಂಕ್ ಸ್ಫೋಟಿಸಿ ಭುಗಿಲ್ಲನೆ ಬೆಂಕಿ ಹೊತ್ತಿಕೊಂಡಿದೆ.
ಬಸ್ಸಿಗೆ ಒಂದೇ ಹೊರಬಾಗಿಲು ಇದ್ದ ಕಾರಣ ಸ್ಥಳಲ್ಲೆ ಒಂಭತ್ತು ಮಂದಿ ಪ್ರಯಾಣಿಕರು ಧಿಗ್ಗನೆ ಎದ್ದ ಬೆಂಕಿಯ ಕೆನ್ನಾಲಿಗೆಯಿಂದ ಪಾರಾಗಲಾರದೇ ಸುಟ್ಟು ಕರಕಲಾಗಿದ್ದಾರೆ. ದೇಹಗಳು
ಗುರುತೇ ಸಿಗದಂತಾಗಿದೆ
ಎಂದು ಸ್ಥಳೀಯ ಪರಿಹಾರ ಕ್ರಮ ಕೈಗೊಂಡಿರುವ ಅಧಿಕಾರಿಗಳು ಹೇಳಿದ್ದಾರೆ.

Breaking News ಚಿತ್ರದುರ್ಗದ ಗೊರ್ಲಡ್ಕು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಗಾಯಾಳುಗಳಿಗೆ 50,000 ರೂ. ನೆರವು ನೀಡಲಾಗುವುದು ಎಂದು ಪ್ರಧಾನಿ ಸಚಿವಾಲಯ ಪ್ರಕಟಿಸಿದೆ. .

Karnataka Skill Development Authority ಸಮಯ ಪಾಲನೆ- ಸಂವಹನ, ವ್ಯಕ್ತಿತ್ವ ವಿಕಸನ& ವೃತ್ತಿ ಕೌಶಲ್ಯ ಕಾರ್ಯಾಗಾರ.

0

Karnataka Skill Development Authority ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ನೌಕರರ, ವಾಹನ ಚಾಲಕರ ಮತ್ತು ಗ್ರೂಪ್ ಡಿ ನೌಕರರ ಸಂಘ, ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಿ. 27 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸಮಯ ಪಾಲನೆ -ಸಂವಹನ, ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಕೌಶಲ್ಯ ಕಾರ್ಯಾಗಾರ ಹಾಗೂ 2025-29ನೇ ಸಾಲಿಗೆ ನೂತನವಾಗಿ ಆಯ್ಕೆಯಾಗಿರುವ ಶಿವಮೊಗ್ಗ ಜಿಲ್ಲೆ, ವಿಶೇಷ ಘಟನ ಮತ್ತು ಜಿಲ್ಲೆಯ ಎಲ್ಲಾ ತಾಲೂಕು ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ, ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಬೋಧಕೇತರ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ಬೋಧಕೇತರ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಶಿವಮೊಗ್ಗ ಜಿಲ್ಲಾ ಸಂಘದ ಮಹಾಸಭೆಯನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ Karnataka Skill Development Authority ಉದ್ಘಾಟಿಸುವರು. ಕ.ರಾ.ಸಾ.ಶಿ.ಇ.ಲಿ.ನೌ.,ವಾ.ಚಾ.ಮತ್ತು ಗ್ರೂ.ಡಿ.ನೌಕರರ ಸಂಘದ ಜಿಲ್ಲಾಧ್ಯಕ್ಷ ಕಿರಣ್ ಎಸ್.ಕೆ. ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಪದಗ್ರಾಹಿ ಪದಾಧಿಕಾರಿಗಳಿಗೆ ಸನ್ಮಾನ ಮಾಡಲಿದ್ದಾರೆ. ಕ.ರಾ.ಸ.ನೌ.ಸಂ.ಜಿಲ್ಲಾಧ್ಯಕ್ಷ ಅರ್.ಮೋಹನ್ ಕುಮಾರ್ ನಿವೃತ್ತ ಬೋಧಕೇತರ ನೌಕರರಿಗೆ ಸನ್ಮಾನ ಮಾಡಲಿದ್ದಾರೆ. ಕ.ರಾ.ಸಾ.ಶಿ.ಇ.ಲಿ.ನೌ.,ವಾ.ಚಾ.ಮತ್ತು ಗ್ರೂ.ಡಿ.ನೌಕರರ ಸಂಘದ ರಾಜ್ಯಾಧ್ಯಕ್ಷ ನವೀನ ಎಸ್.ಆರ್. ಇವರು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಿದ್ದಾರೆ. ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಿದ್ದಬಸಪ್ಪ ಬಿ.ಇವರು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು ಪಾಲ್ಗೊಳ್ಳಲಿದ್ದಾರೆ

Karnataka Rajyotsava  ತೀರ್ಥಹಳ್ಳಿಯಲ್ಲಿ ವರ್ಣಮಯ ಕನ್ನಡ ರಾಜ್ಯೋತ್ಸವ

0

Karnataka Rajyotsava ತೀರ್ಥಹಳ್ಳಿಯ ಪ್ರತಿಷ್ಠಿತ ಮಲೆನಾಡು ಯುವಕರ ಸೇವಾ ಸಂಸ್ಥೆಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್.ಎಂ. ವಿಶ್ವೇಶ್ವರಯ್ಯ ಪುತ್ಥಳಿಗೆ ಮತ್ತು ಕರ್ನಾಟಕ ರತ್ನ ಪುನಿತ್ ರಾಜ್‌ಕುಮಾರ್ ಸ್ಮರಣೆ ನಿಮಿತ್ತ ಅವರ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಹಲವು ಪ್ರಶಸ್ತಿ ಪಡೆದಿರುವ ಶಿವಮೊಗ್ಗ ನಗರದ ಮಯೂರಿ ನೃತ್ಯ ಕೇಂದ್ರದ ಸಂಸ್ಥಾಪಕಿ ವಿದೂಶಿ ಶ್ರೀಮತಿ ಶ್ವೇತಾ ಪ್ರಕಾಶ್ ಅವರಿಗೆ ರಾಷ್ಟ್ರಕವಿ ಕುವೆಂಪು ಸದ್ಭವನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾಜಿ ಉಪ ಮುಖ್ಯಮಂತ್ರಿ
Karnataka Rajyotsava ಕೆ.ಎಸ್. ಈಶ್ವರಪ್ಪ, ರಾಷ್ಟ್ರ ಬಳಗದ ಯುವ ಮುಖಂಡ ಕೆ.ಇ. ಕಾಂತೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಕೆ. ಮರಿಯಪ್ಪ, ಲಕ್ಷ್ಮೀ ಟ್ರ್ಯಾಕ್ಟರ್ ಮಾಲೀಕರಾದ ಕೆ. ರವೀಂದ್ರ ಸಂಸ್ಥೆಯ ಅದ್ಯಕ್ಷ ಕುಬೇರ ಮತ್ತು ಪದಾಧಿಕಾರಿಗಳು ಹಾಜರಿದ್ದರು.

Shimoga News ಕನ್ನಡ ಬಾರದ ಸರ್ಕಾರಿ ನೌಕರರಿಗಾಗಿ ಅಂಚೆಮೂಲಕ ಕನ್ನಡ ಶಿಕ್ಷಣ ಯೋಜನೆ: ಅರ್ಜಿಗಳ ಆಹ್ವಾನ

0

Shimoga News ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲಾ ಸರ್ಕಾರಿ ನೌಕರರಿಗಾಗಿ ಒಂದು ವರ್ಷದ ಅಂಚೆ ಮುಲಕ ಕನ್ನಡ ಶಿಕ್ಷಣ ಯೋಜನೆಯನ್ನು ನಡೆಸುತ್ತಿದ್ದು, ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲಾ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವ ವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟಿçÃಕೃತ ಬ್ಯಾಂಕುಗಳ ನೌಕರರುಗಳಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗಿನ ಅವರ ಕಚೇರಿಯ ಗೈರು ಹಾಜರಿಯನ್ನು ಅನ್ಯಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊAಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಕರ್ನಾಟಕ ಸರ್ಕಾರದ ಅಧಿಸೂಚನೆಯಂತೆ ವಿನಾಯಿತಿ ನೀಡಲಾಗುವುದು.
Shimoga News ಈ ಯೋಜನೆಯನ್ನು ಸಾರ್ವಜನಿಕರಿಗೂ ವಿಸ್ತರಿಸಲಾಗಿದ್ದು, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ 18-50 ವಯೋಮಿತಿಯ ಆಸಕ್ತರು ಭರ್ತಿ ಮಾಡಿದ ಅರ್ಜಿಯೊಂದಿಗೆ ರೂ. 250/- ಡಿ.ಡಿ.ಯನ್ನು ಕಳುಹಿಸಬೇಕು. ನೋಂದಾಯಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಪ್ರಭಾರಿ ಅಧಿಕಾರಿಗಳು, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006, ದೂ.ಸಂ.0821-2345128 ಇವರಿಗೆ 5.00 ರೂ.ಗಳ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸ ಹೊಂದಿರುವ ಲಕೋಟೆಯನ್ನು ಕಳುಹಿಸಿ ಅರ್ಜಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ದಿ: 10/01/2026 ರೊಳಗಾಗಿ ಸಲ್ಲಿಸುವಂತೆ ಪ್ರಭಾರಿ ಅಧಿಕಾರಿ ಡಾ.ಪಿ.ಆರ್. ಧರ್ಮೇಶ್ ಫನಾಂಡಿಜ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.