Thursday, May 7, 2026
Thursday, May 7, 2026
Home Blog Page 48

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

0

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ ಕಾರಂತ ಸಾಧಕ ಸ್ತ್ರೀ ಮಹಿಳಾ ಪುರಸ್ಕಾರ ವನ್ನ ಶಿವಮೊಗ್ಗದ ಭರತನಾಟ್ಯ ಕಲಾವಿದೆ
ಶ್ರೀಮತಿ ವರದಾ ಐತಾಳ್ ಸ್ವೀಕರಿಸಿದರು.

Yakshagana ಶಿವಮೊಗ್ಗದ ಶ್ರೀಮತಿ ವರದಾ ಮಧುಸೂದನ ಐತಾಳ್ ಅವರಿಗೆ ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ನೀಡುವ ಸಾಧಕಿಯರ ಪ್ರಶಸ್ತಿ ನೀಡಲಾಯಿತು.

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

0

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶನಿವಾರ ಸಂಭ್ರಮದಿಂದ ರಂಜಾನ್ (ಈದ್-ಉಲ್-ಫಿತ್ರ್) ಹಬ್ಬವನ್ನು ಆಚರಿಸಿದರು.

ಹಬ್ಬದ ಅಂಗವಾಗಿ ದಾನ ನೀಡುವುದರ ಮೂಲಕ ಆಚರಣೆಗೆ ಹೆಚ್ಚಿನ ಅರ್ಥ ನೀಡಲಾಯಿತು. ಚಿಣ್ಣರು ಹೊಸ ಬಟ್ಟೆ ಧರಿಸಿ ಸಂಭ್ರಮಿಸಿದರು.

ಬಂಧು-ಮಿತ್ರರ ಮನೆಗೆ ಭೇಟಿ ನೀಡಿ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಗಳಲ್ಲಿ ವಿವಿಧ ಬಗೆಯ ಖಾಧ್ಯಗಳನ್ನು ತಯಾರಿಸಿ, ಸ್ನೇಹಿತರು, ಸಂಬಂಧಿಗಳ ಒಡಗೂಡಿ ಸಹ ಭೋಜನ ಮಾಡಿದರು.
ಪಟ್ಟಣದ ಮಾರ್ಕೆಟ್ ರಸ್ತೆಯ ಜಾಮಿಯಾ ಮಸೀದಿ, ಕಾನುಕೇರಿಯ ಅಹಲೇ ಸುನ್ನತ್‌ವಲ್ ಜಮಾತ್ ಜಾಮಿಯಾ ಮಸೀದಿ ಸೇರಿದಂತೆ ತಾಲೂಕಿನ ವಿವಿಧ ಮಸೀದಿಗಳಲ್ಲಿ ಮಸ್ಲೀಮರು ಪ್ರಾರ್ಥನೆ ಸಲ್ಲಿಸಿದರು. ನಂತರ ಮಸೀದಿಯಿಂದ ಈದ್ಗಾ ಮೈದಾನಕ್ಕೆ ಮೆರವಣಿಗೆ ಮೂಲಕ ತೆರಳಿ ಸಾಮೂಹಿಕ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ಮಾರ್ಕೆಟ್ ರಸ್ತೆಯ ಜಾಮೀಯಾ ಮಸೀದಿಯ ಧರ್ಮಗುರು ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ ಧರ್ಮ ಸಂದೇಶ ನೀಡಿ, ಕಳೆದ ಒಂದು ತಿಂಗಳು ಕಾಲ ಕಠಿಣ ಉಪವಾಸ ವ್ರತದ ನಂತರ ಹಬ್ಬವನ್ನು ಆಚರಿಸಲಾಗುತ್ತಿದೆ. ಉಪವಾಸ ತಿಂಗಳಿನಲ್ಲಿ ದೇಹ, ಮನಸ್ಸು ಮತ್ತು ಆತ್ಮವನ್ನು ಸಮತೋಲನದಲ್ಲಿ ರೂಪಿಸುವ ಅಪೂರ್ವ ಅವಕಾಶವಾಗಿದೆ.

Ramadan ನಿಶ್ಚಯವಾಗಿಯೂ ಅಲ್ಲಾಹ್ ಸಹನಶೀಲರ ಜೊತೆಗಿದ್ದಾನೆ. ಒಳ್ಳೆಯದನ್ನು ಮಾಡಿದರೆ, ಅದರಿಂದ ಒಳಿತನ್ನು ಕಾಣಬಹುದು. ರಂಜಾನ್‌ನ ಅತ್ಯಂತ ಸುಂದರ ಅಂಶವೆಂದರೆ ದಾನ. ವ್ಯಕ್ತಿಯು ತಾನು ಗಳಿಸಿದ ಸಂಪತ್ತಿನಲ್ಲಿ ಒಂದು ಭಾಗವನ್ನು ದಾನ ನೀಡುವುದಾಗಿದೆ. ಸಮಾಜದಲ್ಲಿ ಶಾಂತಿ – ಸೌಹಾರ್ದಯುತವಾಗಿ ಪ್ರತಿಯೊಬ್ಬರು ಬಾಳಬೇಕು. ಯುವ ಜನತೆ ದುಶ್ಚಟಗಳಿಂದ ದೂರವಿದ್ದು, ಸನ್ಮಾರ್ಗದ ಹಾದಿಯಲ್ಲಿ ನಡೆಯಬೇಕು ಎಂದರು.

ಜಾಮೀಯಾ ಮಸೀದಿಯ ಅಂಜುಮಾನ್ ಇಸ್ಮಾಹುಲ್ ಮುಸ್ಲೀಮಿನ್ ಕಮಿಟಿಯ ಅಧ್ಯಕ್ಷ ಸೈಯದ್ ಅಬ್ದುಲ್ ರೆಹಮಾನ್, ಕಾರ್ಯದರ್ಶಿ ಮುಹಮ್ಮದ್ ಸಲೀಂ ಮಾತನಾಡಿ, ಹಬ್ಬದ ಶುಭ ಸಂದೇಶ ತಿಳಿಸಿದರು. ಮುಸ್ಲಿಂ ಸಮಾಜದವರು ವಿಶ್ವ ಶಾಂತಿಗಾಗಿ ಪ್ರಾರ್ಥನೆ ಮಾಡಿದ್ದು ವಿಶೇಷವಾಗಿತ್ತು.

ಕಮಿಟಿಯ ಉಪಾಧ್ಯಕ್ಷ ಟಿ. ವಝೀರ್ ಆಹ್ಮದ್, ಜಂಟಿ ಕಾರ್ಯದರ್ಶಿ ಸೈಯದ್ ಖದೀರ್, ಯು. ಸೈಯದ್ ಇಮ್ರಾನ್, ಶಫಾಯತ್ ವುಲ್ಲಾ, ಅಯೂಬ್ ಖಾನ್, ಮಕ್ಬೂಲ್ ಆಹ್ಮದ್, ಪ್ರಮುಖರಾದ ಡಾ. ಸೈಯದ್ ಹಾಷಂ, ಎಂ. ಬಶೀರ್ ಆಹ್ಮದ್, ಅತೀಕ್ ವುರ್ ರೆಹಮಾನ್, ಎನ್. ನೂರ್ ಆಹ್ಮದ್, ಯು. ಫಯಾಜ್ ಆಹ್ಮದ್, ಯು. ಸೈಯದ್ ಸ್ವಾಲೇಹ, ಮೆಹಬೂಬ್ ಅಲಿ, ರಿಯಾಜ್ ಮೌಲಾನ, ಪತ್ರಕರ್ತ ಮುಹಮ್ಮದ್ ಆರೀಫ್, ಸೈಯದ್ ಶಾಹೀದ್, ಸಿರಾಜುದ್ದೀನ್, ಟಿ. ಸಮೀವುಲ್ಲಾ, ಸುಜಾಯತ್‌ವುಲ್ಲಾ, ಮುಹಮ್ಮದ್ ಸಾಜೀದ್ ಸೇರಿದಂತೆ ಸಾವಿರಾರು ಮುಸ್ಲಿಂ ಸಮಾಜದವರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

0

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ ಭಾರಿಯ ಬೇಸಿಗೆ ರಜೆ ನಿಮಿತ್ತ ಮಾ. 25ರಿಂದ ಏಪ್ರೀಲ್ 02ರವರೆಗೆ ಪ್ರತಿ ದಿನ ಬೆಳಿಗ್ಗೆ 10.30ರಿಂದ 11.30 ರವರೆಗೆ, ಸಂಜೆ5ರಿಂದ 6ಗಂಟೆವರೆಗೆ ರವೀಂದ್ರನಗರ ದಲ್ಲಿರುವ (ಶ್ರೀನಿವಾಸ ಕೃಪ) ಶಾಖೆಯಲ್ಲಿ ಎರಡು ಬ್ಯಾಚ್‌ಗಳಲ್ಲಿ ಚೆಸ್ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.

Chess ಪ್ರತಿ ಬ್ಯಾಚ್‌ನಲ್ಲಿ 10ಮಕ್ಕಳಿಗೆ ಮಾತ್ರ ಅವಕಾಶವಿದೆ. ಮಾಹಿತಿಗೆ ಹಾಗೂ ಹೆಸರು ನೊಂದಾಯಿಸಲು ಪ್ರಾಣೇಶ್ ಯಾದವ್ ಮೊ. 92424 01702, 9743819678ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

Ugadi ಸೊರಬದಿಂದ ಚಂದ್ರಗುತ್ತಿವರೆಗೆ ವಕೀಲರ ಬಳಗದಿಂದ ಪಾದಯಾತ್ರೆ.

0

Ugadi ಯುಗಾದಿ ಹಬ್ಬದ ಅಂಗವಾಗಿ ತಾಲೂಕಿನ ವಕೀಲರ ಬಳಗದ ವತಿಯಿಂದ ಪಟ್ಟಣದ ಪುರ ದೈವ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದಿAದ ಶಕ್ತಿ ಪೀಠ ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ದೇವಿ ಸನ್ನಿಧಿವರೆಗೆ ಎರಡನೇ ವರ್ಷದ ಪಾದಯಾತ್ರೆ ನಡೆಸಲಾಯಿತು.
ಶ್ರೀ ದೇವಿಗೆ ಪೂಜೆ ಸಲ್ಲಿಸಿ, ದರ್ಶನಾಶೀರ್ವಾದ ಪಡೆಯುವ ಜೊತೆಗೆ ಉತ್ತಮ ಮಳೆ ಬೆಳೆಯಾಗಲಿ, ರೈತಾಪಿ ಸಮೂಹ ಸಮೃದ್ಧಿಯಾಗಿರಲಿ, ನಾಡಿನಲ್ಲಿ ಸುಖ-ಶಾಂತಿ ನೆಲೆಸಿರಲಿ ಎಂದು ವಕೀಲರ ಬಳಗದಿಂದ ಪ್ರಾರ್ಥಿಸಲಾಯಿತು. ಪಾದಯಾತ್ರೆಯಲ್ಲಿ ವಕೀಲರ ಮಕ್ಕಳು ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ತಾಲೂಕು ವಕೀಲರ ಸಂಘದ ಉಪಾಧ್ಯಕ್ಷ ಕೆ.ಎಚ್. ಚಂದ್ರಶೇಖರ್, ಮಾಜಿ ಅಧ್ಯಕ್ಷ ಸಿ.ವೈ. ಅಶೋಕ್, ಮಾಜಿ ಕಾರ್ಯದರ್ಶಿ ಎಸ್. ಅರುಣ್, ವಕೀಲರಾದ ಎಚ್. ಆನಂದ್, ಕೆ.ಪಿ. ಮಾರುತಿ, ಕೆ.ಎಸ್. ಪರಶುರಾಮ, ಎಚ್.ಇ. ಸತ್ಯನಾರಾಯಣ, ಶರತ್ ಯಂಕೇನ್, ಆಶೀಕ್ ನಾಗಪ್ಪ, ಯು.ಕೆ. ಗುರುಮೂರ್ತಿ, ಟಿ.ಜಿ. ಸೋಮಶೇಖರ, ಪ್ರಮುಖರಾದ ಹೂವಪ್ಪ ಯಂಕೇನ್, ಏಕಾಂತ ಮತ್ತಿತರರಿದ್ದರು.
Ugadi ೨೦ ಸೊರಬ ೦೧: ಸೊರಬ ಪಟ್ಟಣದಲ್ಲಿ ವಕೀಲರ ಬಳಗದಿಂದ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದಿAದ ಚಂದ್ರಗುತ್ತಿಯ ಶಕ್ತಿಪೀಠ ಶ್ರೀ ರೇಣುಕಾಂಬ ಸನ್ನಿಧಿವರೆಗೆ ಯುಗಾದಿ ಹಬ್ಬದ ನಿಮಿತ್ತ ಪಾದಯಾತ್ರೆ ನಡೆಸಲಾಯಿತು.

DC shivamogga ಹಣದಾಸೆಗೆ ಸರ್ಕಾರಿ ದಾಖಲೆಗಳ ನಕಲಿ ಸೃಷ್ಟಿಸುವವರ ಬಗ್ಗೆ ಜಾಗರೂಕರಾಗಿರಿ- ‘ಡೀಸಿ ‘ಪ್ರಭುಲಿಂಗ ಕವಳಿಕಟ್ಟಿ.

0

DC shivamogga ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ‌ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಲು ಪ್ರಯತ್ನಿಸುತ್ತಿದ್ದ ಸಾಗರ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳ ವಿರುದ್ದ ಈಗಾಗಲೇ ಎಫ್ ಐ ಆರ್ ದಾಖಲಿಸಿ, ವಿಚಾರಣೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಇಂತಹ ವಿಚಾರಗಳಿಂದ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಸಾಗರ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಜಮೀನು ಮಂಜೂರು ಮಾಡಿಸುವುದಾಗಿ ಖಾಸಗಿ‌ ವ್ಯಕ್ತಿಗಳಿಂದ ಹಣ ಪಡೆದು ಸರ್ಕಾರಿ ದಾಖಲೆಗಳನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಸಾಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರು ಬಯಲಿಗೆಳೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ಆರು ಜನ ಆರೋಪಿಗಳ ವಿರುದ್ದ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ವಿಚಾರಣೆ ಆರಂಭಿಸಲಾಗಿದೆ.
ಮಾರ್ಚ್ 18ರ ಬುಧವಾರ ಮಧ್ಯಾಹ್ನ ತಹಶೀಲ್ದಾರ್ ಕಚೇರಿಯ ದಾಖಲೆ ಕೊಠಡಿಯ ಮೇಲ್ವಿಚಾರಕರು ಹಳೆಯ ಮಂಜೂರಾತಿ ಪತ್ರಗಳನ್ನು ತಿದ್ದುಪಡಿ ಮಾಡುತ್ತಿರುವುದನ್ನು ತಹಶೀಲ್ದಾರ್ ಅವರು ಖುದ್ದಾಗಿ ಗಮನಿಸಿದ್ದಾರೆ.

DC shivamogga ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ನಕಲಿ ದಾಖಲೆ ಸೃಷ್ಟಿಸುವ ಕೆಲಸ ಇಲ್ಲಿ ನಡೆಯುತ್ತಿತ್ತು.

ಸಾಗರ ತಹಶಿಲ್ದಾರ್ ಕಚೇರಿಯಲ್ಲಿ ಈ ಕಾರ್ಯವೆಸಗುತ್ತಿದ್ದವರ ವಿರುದ್ದ ಸೂಕ್ತ ಕಾನೂನು ಕ್ರಮ‌ ಕೈಗೊಳ್ಳಲಾಗುತ್ತಿದ್ದು , ಹೀಗೆ ಯಾವುದೇ ಸರ್ಕಾರಿ ದಾಖಲೆಗಳನ್ನು ನಕಲು ಮಾಡಿ, ಜಮೀನು ಮಂಜೂರು ಮಾಡಲು ಬರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಅವರು ಮನವಿ‌ ಮಾಡಿದ್ದಾರೆ.

Rangayana Shimoga ರಂಗಾಯಣ ಆಹ್ವಾನಿಸಿದ್ದ ಬೇಸಿಗೆ ಶಿಬಿರದ ತರಬೇತಿದಾರರ ಆಯ್ಕೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

0

Rangayana Shimoga ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ರಂಗತರಬೇತಿ, ನಾಟಕ ನಿರ್ದೇಶನ ಮಾಡಲು ರಂಗಭೂಮಿಯ ಹಿನ್ನೆಲೆಯುಳ್ಳ 06 ನಾಟಕ ನಿರ್ದೇಶಕರು ಮತ್ತು 06 ಜನ ಸಹಾಯಕ ನಿರ್ದೇಶಕರ ಆಯ್ಕೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾ. 16 ರಿಂದ ಮಾ. 30ರವರೆಗೆ ವಿಸ್ತರಿಸಲಾಗಿದೆ ಎಂದು ರಂಗಾಯಣದ ಆಡಳಿತಾಧಿಕಾರಿ ಡಾ. ಶೈಲಜಾ ಎ.ಸಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Rangayana Shimoga ಹೆಚ್ಚಿನ ಮಾಹಿತಿಗಾಗಿ ರಂಗಾಯಣ, ಶಿವಮೊಗ್ಗ ಕಛೇರಿ, ದೂರವಾಣಿ ಸಂಖ್ಯೆ 08182-256353, 7975229166 ಯನ್ನು ಸಂಪರ್ಕಿಸಬಹುದಾಗಿದೆ.

International Day of Forests ಉತ್ತಮ ಗಾಳಿ,ನೀರು,ಬೆಳಕು ದೊರೆಯಲು ಅರಣ್ಯ ಉಳಿಸಬೇಕು- ಬಿ.ವೈ‌.ರಾಘವೇಂದ್ರ.

0

International Day of Forests ವಿಶ್ವ ಅರಣ್ಯ ದಿನವಾದ ಇಂದು ಅಂತರ್ಜಲ ವೃದ್ಧಿ ಹಾಗೂ ಉತ್ತಮ ಮಳೆಗಾಗಿ ನಾವು ಕಾಡು, ಬೆಟ್ಟ-ಗುಡ್ಡಗಳ ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದೆ. ಉತ್ತಮ ಗಾಳಿ, ನೀರು, ಬೆಳಕು ದೊರೆಯಲು ಅರಣ್ಯ ಉಳಿಸಬೇಕಾಗಿದೆ ಎಂದು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಬನ್ನಿ, ಅರಣ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸೋಣ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.

S. N. Channabasappa ಕೊಳಚೆ ಪ್ರದೇಶ ವಾಸಿಗಳಿಗೆ ಇರುವ ತಾಂತ್ರಿಕ ಅಡೆತಡೆ ನಿವಾರಿಸಿ,ಹಕ್ಕುಪತ್ರ ವಿತರಿಸಿ- ಎಸ್.ಎನ್.ಚನ್ನಬಸಪ್ಪ.

0

S. N. Channabasappa ಶಿವಮೊಗ್ಗ ನಗರದ 6 ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಇರುವ ತಾಂತ್ರಿಕ ಅಡೆತಡೆಗಳನ್ನು ತಕ್ಷಣ ನಿವಾರಿಸುವಂತೆ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ವಸತಿ ಸಚಿವರಿಗೆ ಒತ್ತಾಯಿಸಿದರು.

ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಶಾಸಕರು ಈ ವಿಷಯದ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಸಭಾಧ್ಯಕ್ಷರ ಸೂಚನೆಯಂತೆ ಇಂದು ವಿಧಾನಸೌಧದಲ್ಲಿ ವಸತಿ ಸಚಿವ ಶ್ರೀ ಜಮೀರ್ ಅಹ್ಮದ್ ಖಾನ್ ಅವರ ನೇತೃತ್ವದಲ್ಲಿ ವಿಶೇಷ ಸಭೆ ನಡೆಯಿತು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಖಾರಾಬು ಕಟ್ಟೆ, ಕೆರೆ ಅಂಗಳ ಹಾಗೂ ಸರ್ಕಾರಿ ಜಮೀನುಗಳಲ್ಲಿ ದಶಕಗಳಿಂದ ನೆಲೆಸಿರುವ ಕುಟುಂಬಗಳಿಗೆ ಕಾನೂನುಬದ್ಧ ಭದ್ರತೆ ಒದಗಿಸುವ ಕುರಿತು ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಯಿತು.

S. N. Channabasappa ಸಭೆಯಲ್ಲಿ ಉಪಸ್ಥಿತರಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಶ್ರೀ ಪ್ರಭುಲಿಂಗ ಕವಲಿಕಟ್ಟಿ ಅವರು, ಜಮೀನು ಲಭ್ಯತೆ ಮತ್ತು ವರ್ಗಾವಣೆ ಪ್ರಕ್ರಿಯೆಯಲ್ಲಿರುವ ಕಾನೂನು ತೊಡಕುಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಆಶ್ರಯ ಯೋಜನೆಯಡಿ ಮನೆಗಳ ನಿರ್ಮಾಣ ಮತ್ತು ಹಕ್ಕುಪತ್ರ ವಿತರಣೆಗೆ ಆದ್ಯತೆ ನೀಡುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ವಸತಿ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು ಹಾಗೂ ಕೊಳಗೇರಿ ಮಂಡಳಿಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಬಡವರಿಗೆ ಮೂಲಭೂತ ಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿರಬೇಕು ಎಂದು ಶಾಸಕರು ಈ ಸಂದರ್ಭದಲ್ಲಿ ತಿಳಿಸಿದರು.

ಎಸ್ಎಸ್ಎಲ್ ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 22429 ವಿದ್ಯಾರ್ಥಿಗಳ ಹಾಜರಾತಿ- ಮಂಜುನಾಥ್.ಡಿಡಿಪಿಐ.

0

ದಿನಾಂಕ :18-03-2026 ರ ಇಂದು ಜಿಲ್ಲೆಯಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಒಟ್ಟು 22621ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 22429 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ.
ಒಟ್ಟು 192 ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ ಎಂದು ಡಿಡಿಪಿಐ ಮಂಜುನಾಥ್ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಅಲ್ಲಮಪ್ರಭು ಜಯಂತಿ ಆಚರಣೆ

0

ನಮ್ಮೂರ ಬಳಗ – ಶಿವಮೊಗ್ಗ ವತಿಯಿಂದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್ ನಲ್ಲಿ) ಶಿವಶರಣ, ವಚನ ಶ್ರೇಷ್ಠ, 12ನೇ ಶತಮಾನದಲ್ಲಿ ಜಗಜ್ಯೋತಿ ಬಸವೇಶ್ವರರ ಸಂಸತ್ ಪರಿಕಲ್ಪನೆಯ ಅನುಭವ ಮಂಟಪದ ಶೂನ್ಯಸಿಂಹಾಸನದ ಪ್ರಥಮ ಅಧ್ಯಕ್ಷರಾದ “ಶ್ರೀ ಅಲ್ಲಮಪ್ರಭು ದೇವರು ಅವರ ಜಯಂತಿಯ” ಅಂಗವಾಗಿ ಶರಣರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ. ರಂಗನಾಥ್, ಗೌರವ ಸಂಚಾಲಕರಾದ ನಾಗರಾಜ್ ಕಂಕಾರಿ, ಹೆಚ್, ಪಾಲಾಕ್ಷಿ ,ಸಿ ರವಿ ಸಂಚಾಲಕರುಗಳಾದ ಕೆ.ಆರ್ .ಸುರೇಶ್, ಹೆಚ್ ಪಿ ಗಿರೀಶ್, ಆರ್ ಕಿರಣ್, ವಿನಯ್, ರಾಜೇಶ್ ಮಂದಾರ, ಟಿ ಗುರುಪ್ರಸಾದ್, ರಜನಿಕಾಂತ್, ಆಚಾರಿ ಗೋಪಿ, ರಾಘವೇಂದ್ರ, ಎಸ್ ಶಿವು, ದಿವಾಕರ್, ಕೆ ಎಲ್ ಪವನ್, ಕೇಬಲ್ ಲೋಕೇಶ್ , ರಾಜೀವ್ ರಾಯ್ಕರ್, ಸುಬ್ರಮಣಿ,ಶರತ್ ಚಂದ್ರ, ದಿನೇಶ್, ಮಂಜುನಾಥ್, ಮನ್ವಿಕ್ ಜೈನ್, ಕಿರಣ್, ಸುಹಾಸ್, ಇತರರು ಇದ್ದರು.