J.S. Chidananda Gowda ಪಟ್ಟಣದ ಪುರಸಭೆ ಮುಂಭಾಗದ ವೃತ್ತಕ್ಕೆ ರೈತ ವೃತ್ತ ಎಂದು ನಾಮಕರಣ ಮಾಡಬೇಕು, ರೈತ ದಿನಾಚರಣೆಯನ್ನು ಹಬ್ಬದಂತೆ ಆಚರಿಸಬೇಕು ಹಾಗೂ ಹೋರಿ ಹಬ್ಬಕ್ಕೆ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ, ಗೋ ಸಂರಕ್ಷಣಾ ಹೋರಾಟ ಸಮಿತಿ ಹಾಗೂ ಜನಪದ ಕ್ರೀಡೆ ಹೋರಿ ಹಬ್ಬ ಆಚರಣಾ ಸಮಿತಿ ವತಿಯಿಂದ ಹಬ್ಬದ ಹೋರಿಗಳೊಂದಿಗೆ ವಿಶೇಷವಾಗಿ ರಾಷ್ಟಿçÃಯ ರೈತ ದಿನಾಚರಣೆ ಆಚರಿಸಲಾಯಿತು.
ನೇತೃತ್ವ ವಹಿಸಿದ್ದ ಸಮಿತಿಯ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಮಾತನಾಡಿ, ನಾಡಿಗೆ ಅನ್ನ ನೀಡುವ ರೈತರನ್ನು ಗೌರವಿಸುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರೀಕರ ಕರ್ತವ್ಯವಾಗಿದೆ. ಈಗಾಗಲೇ ಕಳೆದ ಒಂದು ದಶಕದಿಂದ ಹೋರಾಟ ಮಾಡಲಾಗುತ್ತಿದ್ದು, ಪಟ್ಟಣದ ಪುರಸಭೆ ಮುಂಭಾಗದ ವೃತ್ತಕ್ಕೆ ರೈತ ವೃತ್ತ ಎಂದು ನಾಮಕರಣ ಮಾಡಬೇಕು ಹಾಗೂ ಜನಪದ ಕ್ರೀಡೆ ಹೋರಿ ಹಬ್ಬಕ್ಕೆ ಸರ್ಕಾರ ಮಾನ್ಯತೆ ನೀಡಬೇಕು. ವಿದೇಶಿ ಕ್ರೀಡೆಗಳಿಗೆ ಕ್ರೀಡಾಂಗಣ ಮಾಡುವ ಸರ್ಕಾರ ರೈತರ ಜನಪದ ಕ್ರೀಡೆಯಾದ ಹೋರಿ ಹಬ್ಬಕ್ಕೂ ಪ್ರತಿ ತಾಲೂಕಿನಲ್ಲಿ ಕ್ರೀಡಾಂಗಣ ಮಾಡಬೇಕು ಎಂದು ಆಗ್ರಹಿಸಲಾಗುತ್ತಿದೆ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಶಿಕಾರಿಪುರದ ಅವರ ನಿವಾಸಕ್ಕೆ ತೆರಳಿ ಸಹ ಮನವಿ ಸಲ್ಲಿಸಲಾಗಿದೆ. ಮಾತ್ರವಲ್ಲದೆ, ರೈತ ದಿನಾಚರಣೆಗೆ ಆಗ್ರಹಿಸಿ ಇತ್ತೀಚೆಗೆ ಬೆಳಗಾವಿ ಅಧಿವೇಶನಕ್ಕೆ ತೆರಳಿ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರಿಗೂ ಮನವಿ ಮಾಡಲಾಗಿದೆ. ರೈತರಿಗೆ ಗೌರವಿಸುವ ನಿಟ್ಟಿನಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಸಮಿತಿಯ ಗೌರವಾಧ್ಯಕ್ಷ ಕೆ. ಪ್ರಭಾಕರ ರಾಯ್ಕ್ಕರ್ ಮಾತನಾಡಿ, ದೇಶದಲ್ಲಿ ವಿವಿಧ ಆಚರಣೆಗಳನ್ನು ನಡೆಸಲಾಗುತ್ತಿದೆ. ಆದರೆ, ರೈತ ದಿನಾಚರಣೆಗೆ ತಾತ್ಸರದ ಮನೋಭಾವ ಸಲ್ಲದು. ಸಮಿತಿಯಿಂದ ಹಲವಾರು ಹೋರಾಟಗಳನ್ನು ಮಾಡಲಾಗುತ್ತಿದೆ. ರೈತ ವೃತ್ತ ಹಾಗೂ ರೈತ ದಿನಾಚರಣೆಗೆ ಆಗ್ರಹಿಸಿ ಅನೇಕ ಮನವಿಗಳನ್ನು ಸಲ್ಲಿಸಲಾಗಿದೆ. ರೈತರು ಕೃಷಿ ಚಟುವಟಿಕೆಗಳು ಮುಗಿದ ಮೇಲೆ ದೀಪಾವಳಿ ನಂತರದಲ್ಲಿ ಹೋರಿ ಹಬ್ಬ ಮಾಡುತ್ತಾರೆ. ಅದಕ್ಕೆ ಸರ್ಕಾರ ಅನುಮತಿ ನೀಡಬೇಕು ಎಂದರು.
J.S. Chidananda Gowda ಜನಪದ ಕ್ರೀಡೆ ಹೋರಿ ಹಬ್ಬ ಆಚರಣಾ ಸಮಿತಿ ಜಿಲ್ಲಾ ಕಾರ್ಯದರ್ಶಿ ಷಣ್ಮುಖಪ್ಪ ಹರಗಿ ಮಾತನಾಡಿ, ರೈತರು ಹೋರಿಗಳನ್ನು ತಮ್ಮ ಮಕ್ಕಳಂತೆ ಸಾಕುತ್ತಾರೆ. ಈಗಾಗಲೇ ತಮಿಳುನಾಡಿನಲ್ಲಿ ಜಲ್ಲಿಕಟ್ಟು, ಕರಾವಳಿ ಭಾಗದಲ್ಲಿ ಕಂಬಳಕ್ಕೆ ಮಾನ್ಯತೆ ನೀಡಲಾಗಿದೆ. ಆದರೆ, ರೈತರ ಜನಪದ ಕ್ರೀಡೆಯಾದ ಹೋರಿ ಹಬ್ಬಕ್ಕೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದೆ. ಸಮಿತಿಯಿಂದ ಹೈಕೋರ್ಟ್ ಮೊರೆ ಸಹ ಹೋಗಲಾಗಿದೆ. ರೈತ ದಿನಾಚರಣೆ ಆಚರಿಸುವ ಜೊತೆಗೆ ಹೋರಿ ಹಬ್ಬಕ್ಕೆ ಸರ್ಕಾರ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಇದಕ್ಕೂ ಮೊದಲು ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದಿAದ ಮುಖ್ಯರಸ್ತೆ ಮಾರ್ಗವಾಗಿ ಪುರಸಭೆ ಮುಂಭಾಗದ ವರೆಗೆ ಮೆರವಣಿಗೆ ನಡೆಸಲಾಗಯಿತು. ಮೆರವಣಿಗೆಯಲ್ಲಿ ಕೊಡಕಣಿ ಡೇಂಜರ್ ಬಸವ, ಹಳೇಸೊರಬದ ಜೀವದ ಒಡೆಯ, ಮರೂರು ತಾರಕಾಸುರ, ಪುಟ್ಟನಹಳ್ಳಿ ಮಲೆನಾಡ ಸಿರಿ, ಹಳೇಸೊರಬ ಶ್ರೀಕೃಷ್ಣ ಹೆಸರಿನ ಹೋರಿಗಳು ಪಾಲ್ಗೊಂಡಿದ್ದವು. ಪುರಸಭೆ ಮುಖ್ಯಾಧಿಕಾರಿ ಚಂದನ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರೇಂದ್ರಗೌಡ ಜೇಡಗೇರಿ, ಉಪಾಧ್ಯಕ್ಷರಾದ ನಾಗಪ್ಪ ಬಿದರಗೇರಿ, ಶರತ್ ಸ್ವಾಮಿ, ಕುರುಬ ಸಮಾಜದ ಮುಖಂಡ ತಿಪ್ಪಣ್ಣ, ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ವಿಶ್ವನಾಥ ಗೌಡ, ಡಿ. ಶಿವಯೋಗಿ, ಯುವ ಮುಖಂಡರಾದ ಅರುಣ ಬೆಳಕು, ರವಿ ಕೇಸರಿ ಯಡಗೊಪ್ಪ, ಧರ್ಮಪ್ಪ, ಕುಮಾರ, ನಾಗರಾಜ ಜೇಡಗೇರಿ, ಪ್ರಮುಖರಾದ ಲಿಂಗರಾಜ ಹಳೇಸೊರಬ, ಮುಕುಂದಪ್ಪ ಕೊಡಕಣಿ, ಜನಾರ್ಧನ, ಮೋಹನ, ಈಶ್ವರ, ಅಭಿಷೇಕ್, ಶ್ರೀಕಾಂತ, ಪ್ರಮೋದ, ಲಕ್ಷ÷್ಮಣ, ಕಿರಣ್ ಮರೂರು, ಸಂತೋಷ್, ಅವಿನಾಷ್, ಆದರ್ಶ, ಪ್ರವೀಣ್ ಪುಟ್ಟನಹಳ್ಳಿ, ಮಂಜುನಾಥ, ನಿತೀನ್, ಹೇಮಂತ್, ರೋಹಿತ್, ಜಗದೀಶ್ ಹಳೇಸೊರಬ ಇತರರಿದ್ದರು.
J.S. Chidananda Gowda ನಾಡಿಗೆ ಅನ್ನನೀಡುವ ರೈತನನ್ನ ಎಲ್ಲರೂ ಗೌರವಿಸಬೇಕು- ಜೆ.ಎಸ್.ಚಿದಾನಂದ ಗೌಡ.
Shimoga News ದೇಶದಲ್ಲೇ ಕರ್ನಾಟಕವು ಪ್ರವಾಸಿಗರನ್ನ ಆಕರ್ಷಿಸುತ್ತಿದೆ- ಎನ್.ಗೋಪಿನಾಥ್.
Shimoga News ಪ್ರಾಕೃತಿಕ ಹಾಗೂ ಐತಿಹಾಸಿಕವಾಗಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶವಿರುವ ಜಿಲ್ಲೆ ಶಿವಮೊಗ್ಗ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಮಾತನಾಡಿದರು.
ಭಾರತದಲ್ಲಿಯೇ ಕರ್ನಾಟಕ ರಾಜ್ಯವು ಶಿಲ್ಪಕಲೆ, ಐತಿಹಾಸಿಕ ಪ್ರದೇಶಗಳು, ಪ್ರಕೃತಿದತ್ತ ಕೊಡುಗೆಯಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಬೆಟ್ಟ, ಗುಡ್ಡ, ನದಿ ತೊರೆಯಿಂದ ಶಿವಮೊಗ್ಗ ಜಿಲ್ಲೆ ಅತ್ಯಂತ ಶ್ರೀಮಂತವಾಗಿದೆ. ಇದರಿಂದ ಇಲ್ಲಿಯೂ ಪ್ರವಾಸಕ್ಕೆ ಹೆಚ್ಚಿನ ಅವಕಾಶವಿದೆ ಎಂದು ತಿಳಿಸಿದರು.
ಪ್ರಾದೇಶಿಕವಾಗಿ ನಗರಗಳು ಅಭಿವೃದ್ಧಿ ಹೊಂದಲು ಪ್ರವಾಸೋದ್ಯಮ ಹೆಚ್ಚಿನ ಆರ್ಥಿಕ ನೆರವು ನೀಡುತ್ತದೆ. ಇದರಿಂದ ಹಲವಾರು ರೀತಿಯ ನೆರವು ಹರಿದು ಬರುವುದರಿಂದ, ಗುಡಿ ಕೈಗಾರಿಕೆ, ಹೋಟೆಲ್ ಉದ್ಯಮ, ಸ್ಥಳಿಯ ಆಹಾರ, ಪ್ರವಾಸಿ ವಾಹನಗಳಿಗೆ ನೇರವಾಗಿ ಸಹಾಯ ದೊರಕುತ್ತದೆ ಎಂದರು.
ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಡಿ.ಎಸ್.ಶಂಕರಪ್ಪ ಅವರನ್ನು ಸನ್ಮಾನಿಸಲಾಯಿತು. ನಂತರ ಮಾತನಾಡಿ, ಮೂರು ವರ್ಷ ಬಹಳ ಸಹಕಾರ ಕೊಟ್ಟು ಯಶಸ್ವಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ವತಿಯಿಂದ ಅಂಡಮಾನ್, ಶ್ರೀಲಂಕ, ಹಿಮಾಲಯ ಚಾರಣಗಳನ್ನು ಆಯೋಜಿಸಿದ್ದೇವೆ. ಸರ್ಕಾರದ ವತಿಯಿಂದ ವೀಕ್ ಎಂಡ್ ಕಾರ್ಯಕ್ರಮ ಆಯೋಜಿಸಲು ಸಲಹೆ ನೀಡಿದಾಗ ಜಿಲ್ಲಾಧಿಕಾರಿಗಳು ವೇದಿಕೆಯಿಂದ ಪ್ರಾರಂಭಿಸಿದಲ್ಲಿ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದರು. ಬಸ್ ಮಾಲೀಕರ ಸಂಘದ ಅಧ್ಯಕ್ಷ ರಂಗಪ್ಪ ಅವರ ಸಹಕಾರದಿಂದ ಸತತವಾಗಿ ನಾಲ್ಕು ಭಾನುವಾರ ಬಹಳ ಕಡಿಮೆ ಖರ್ಚಿನಲ್ಲಿ ಪ್ರವಾಸ ಏರ್ಪಡಿಲಾಗಿತ್ತು ಎಂದು ತಿಳಿಸಿದರು.
Shimoga News ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ಅ.ನಾ.ವಿಜಯೇಂದ್ರ ರಾವ್ ಮಾತನಾಡಿ, ಪ್ರಾರಂಭದಲ್ಲಿ ಉತ್ತಮ ಆರಂಭ ಕಂಡ ನಮ್ಮ ವೇದಿಕೆ ನಂತರ ಸ್ವಲ್ಪ ಹಿನ್ನೆಡೆಗೆ ಬಂದಾಗ ಅಧಿಕಾರ ವಹಿಸಿಕೊಂಡ ಶಂಕರಪ್ಪ ಅವರು ಅತ್ಯುತ್ತಮ ಕಾರ್ಯ ಮಾಡಿ ಮುನ್ನಡೆಸಿದ್ದಾರೆ. ಇನ್ನೂ ಅನೇಕ ಕಡೆಗೆ ಪ್ರವಾಸ ಏರ್ಪಡಿಸಿ ಯಾವುದೆ ಲಾಭ ಗಳಿಕೆ ಪಡೆಯದೆ ಪ್ರವಾಸಿಗರಿಗೆ ಉತ್ತಮ ವ್ಯವಸ್ಥೆಯ ಹಾಗೂ ಅತ್ಯಂತ ಕಡಿಮೆ ದರದಲ್ಲಿ ಪ್ರವಾಸವನ್ನು ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಕಾರ್ಯಕ್ರಮ ಹಮ್ಮಿಕೊಳ್ಳುವ ಅಭಿಲಾಷೆಯನ್ನು ಹೊಸ ಅಧ್ಯಕ್ಷರು ಹೊಂದಿದ್ದಾರೆ. ಅವರಿಗೆ ಉತ್ತಮ ಸಹಕಾರವನ್ನು ಹೊಸ ಆಡಳಿತ ಮಂಡಳಿ ನೀಡುವುದಾಗಿ ತಿಳಿಸಿದರು.
ಹೊಸ ಆಡಳಿತ ಮಂಡಳಿಯ ಆಯ್ಕೆಯನ್ನು ವಸಂತ್ ಹೋಬಳಿದಾರ್ ಘೋಷಿಸಿದರು. ಅಧ್ಯಕ್ಷರಾಗಿ ಎನ್.ಗೋಪಿನಾಥ್, ಕಾರ್ಯದರ್ಶಿಯಾಗಿ ಜಿ.ವಿಜಯಕುಮಾರ್ ಸಹಕಾರ್ಯದರ್ಶಿ ಅ.ನಾ.ವಿಜಯೇಂದ್ರ ರಾವ್, ಖಚಾಂಚಿ ನಿರ್ಮಲ ಕಾಶಿ, ನಿರ್ದೇಶಕರಾಗಿ ಲಕ್ಷ್ಮೀ ನಾಗೇಶ್, ಪ್ರೇಮ ಹೆಗ್ಡೆ, ಮಲ್ಲಿಕಾರ್ಜುನ್ ಕಾನೂರ್, ರವೀಂದ್ರ, ಮನೋಹರ್ ಆಯ್ಕೆಯಾದರು.
ಯೂತ್ ಹಾಸ್ಟೆಲ್ಸ್ ತರುಣೋಣದಯ ಘಟಕ, ಶಿವಮೊಗ್ಗ ಸೈಕಲ್ ಕ್ಲಬ್, ಬೈಕ್ ಕ್ಲಬ್, ಇತಿಹಾಸ ವೇದಿಕೆ ಅಧ್ಯಕ್ಷ, ಕಾರ್ಯದರ್ಶಿ ಸಲಹಾ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಲು ಆಹ್ವಾನಿತರಾಗಿರುತ್ತಾರೆ. ದಿಲೀಪ್ ನಾಡಿಗ್ ಸ್ವಾಗತಿಸಿದರು. ಉಷಾ ಪ್ರಾರ್ಥಿಸಿದರು. ಮಹದೇವಸ್ವಾಮಿ ವಂದಿಸಿದರು.
Canara Bank ಕೆನರಾ ಬ್ಯಾಂಕ್, ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತ ಅಣಬೆ ಕೃಷಿ ಕಲಿಕಾ ಚಟುವಟಿಕೆ.
Canara Bank ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿ:05/01/2026 ರಿಂದ 10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ.
ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
Canara Bank ಆಸಕ್ತಿಯುಳ್ಳ ಅಭ್ಯರ್ಥಿಗಳು ಡಿ. 30ರಂದು ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಡಿ. 30 ರೊಳಗೆ ಸಂಸ್ಥೆಯ ದೂರವಾಣಿ ಸಂಖ್ಯೆ 8970476050/ 9591514154/ 9686248369/ 6363139123/ 9505894247 ಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆAದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Shimoga News ಸಂಗೀತ ರಸಿಕರನ್ನ ರಂಜಿಸಿದ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ
Shimoga News ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ ೧೧೫ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ಆರ್.ಬಿ. ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸುವರು. ಗೋಪಾಳದ ಶ್ರೀ ಶಾರದಾ ಶಂಕರ ಭಜನಾ ಮಂಡಳಿಯಿಂದ ಭಜನಾ ಸೇವೆ ಮತ್ತು ಆಶ್ರಮದ ಅಂಧ ಮಕ್ಕಳಿಂದ ಪ್ರಾರ್ಥನೆ ಮತ್ತು ಹುಬ್ಬಳ್ಳಿಯ ಹಿಂದೂಸ್ಥಾನಿ ಗಾಯಕ ನಿಜಗುಣಿ ಮಂಗಿ ಅವರಿಂದ ಸಂಗೀತ ಸೇವೆ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ರಾಮಣ್ಣ ಭಜಂತ್ರಿ ಶಹನಾಯ, ವೀರಭದ್ರಯ್ಯ ಶಾಸ್ತ್ರಿಗಳಿಂದ ವೇದಘೋಷ ಹಾಗೂ ಹಿರಿಯ ತಬಲ ಕಲಾವಿದರಾದ ಪಂ. Shimoga News ಆರ್. ತುಕಾರಾಮ್ ರಂಗಧೋಳ್ ವಿನಾಯಕ್ ಭಟ್ ಅವರ ತಬಲ ಸೇವೆ ಹಾಗೂ ಸಿದ್ದಣ್ಣ ಬಡಿಗಾರ್ ಅವರು ಆರ್ಮೋನಿಯಂ ನೊಂದಿಗೆ ಸಾಥ್ ನೀಡಲಿದ್ದಾರೆ. ಸಂಗೀತ ಶಿಕ್ಷಕಿ ನಾದಶ್ರೀ ಫಕೀರಯ್ಯ ಕಾರ್ಯಕ್ರಮ ಶಾಸ್ತ್ರಿ ಅವರು ನಿರೂಪಿಸಿದರು.
Gurudutt Hegde ಕಾರ್ಮಿಕನ ಮೇಲೆ ಪೊಲೀಸ್ ಅಧಿಕಾರಿ ಹಲ್ಲೆ: ಸೂಕ್ತ ಕ್ರಮಕ್ಕಾಗಿಕಾಂಗ್ರೆಸ್ ಕಾರ್ಯಕರ್ತರ ಆಗ್ರಹ
Gurudutt Hegde ಹೊರ ಊರುಗಳಿಂದ ಬಂದು, ತುತ್ತು ಅನ್ನಕ್ಕಾಗಿ ಹೋಟೆಲ್ಗಳಲ್ಲಿ ಕ್ಲೀನರ್ಗಳಾಗಿ ಕೆಲಸ ಮಾಡುವ ಕಾರ್ಮಿಕನ ಮೇಲೆ ಮೊನ್ನೆ ರಾತ್ರಿ ಏಕಾಏಕಿ ಹಲ್ಲೆ ಮಾಡಿದ ದೊಡ್ಡಪೇಟೆ ಪೋಲೀಸ್ ಠಾಣೆಯ ಪೋಲೀಸ್ ಅಧಿಕಾರಿಯ ವರ್ತನೆ ನಾಗರೀಕ ಸಮಾಜ ತಲೆತಗ್ಗಿಸುವಂಥದ್ದು. ಸಮಯ ಮೀರಿ ಹೋಟೆಲ್ ವ್ಯಾಪಾರವನ್ನು ನಡೆಸುತ್ತಿರುವ ಹೋಟೆಲ್ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೆ, ಹೋಟೆಲ್ಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ ಹಲ್ಲೆ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂಬುದನ್ನು ಸಾರ್ವಜನಿಕರ ವಲಯದ ಪ್ರಶ್ನೆಯಾಗಿದೆ
ನಗರದಲ್ಲಿ ಯುವಕರು ಗಾಂಜಾ ವ್ಯಸನಿಗಳಾಗಿ ಸಾರ್ವಜನಿಕ ವಲಯದಲ್ಲಿ ಕಿರಿಕಿರಿ ಉಂಟು ಮಾಡುತ್ತಾ ಭಯದ ವಾತಾವರಣ ಸೃಷ್ಟಿಸಿದ್ದು, ಜೊತೆಗೆ ಶಿವಮೊಗ್ಗ ನಗರ ಸೇರಿದಂತೆ ಹೊರವಲಯ, ಗ್ರಾಮೀಣ ಪ್ರದೇಶದ ಗಡಿ ಭಾಗದಲ್ಲಿ ಅಕ್ರಮವಾಗಿ ಎಗ್ಗಿಲ್ಲದೆ ಯಾವುದೇ ಕಾನೂನಿನ ಭಯವಿಲ್ಲದೆ ಕಾನೂನುಬಾಹಿರ ಇಸ್ಪೀಟ್ ಆಟಗಳ ಚಟುವಟಿಕೆ ಸರಾಗವಾಗಿ ನಡೆಯುತ್ತಿದ್ದು, ಇದನ್ನು ನಿಯಂತ್ರಿಸಬೇಕಾದ ಪೋಲೀಸ್ ಇಲಾಖೆಯ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿಗಳೇ ಇಸ್ಪೀಟ್ ಅಡ್ಡೆಗಳಿಗೆ ರಕ್ಷಣಾ ಕವಚದಂತೆ ರಕ್ಷಣೆ ನೀಡುತ್ತಿದ್ದಾರೆಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಇಸ್ಪೀಟು ಅಡ್ಡೆಗಳಿಂದ ಹಲವು ಕುಟುಂಬಗಳು ಮನೆ-ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದು, ತಂದೆ-ತಾಯಿ, ಹೆಂಡತಿ-ಮಕ್ಕಳು ಕಣ್ಣೀರಿಡುತ್ತಾ ಸರ್ಕಾರ ಮತ್ತು ಪೋಲೀಸ್ ಇಲಾಖೆಗೆ ಶಾಪ ಹಾಕುತ್ತಿದ್ದು, ಕೆಲವು ಯುವಕರು ಇಸ್ಪೀಟ್ ಆಟದಲ್ಲಿ ತೊಡಗಿಸಿಕೊಂಡು ನಷ್ಟ ಅನುಭವಿಸಿ, ನಂತರ ಅಪರಾಧ ಕೃತ್ಯಗಳಲ್ಲಿ ಭಾಗವಹಿಸುತ್ತಿರುವುದು ಅತ್ಯಂತ ಕಳವಳದ ಸಂಗತಿ. ಇಂತಹ ಹಲವು ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾದ ಪೋಲೀಸ್ ಇಲಾಖೆಯ ಕೆಲವೇ ಅಧಿಕಾರಿಗಳು, ತುತ್ತು ಅನ್ನಕ್ಕಾಗಿ ಕೆಲಸ ಮಾಡುವ ಹೋಟೆಲ್ ಕಾರ್ಮಿಕರ ಮೇಲೆ ಹಲ್ಲೆ ನಡೆಸುವುದು ಎಷ್ಟರಮಟ್ಟಿಗೆ ಸರಿ. ಕೂಡಲೇ ಮಾನ್ಯ ಜಿಲ್ಲಾ ರಕ್ಷಣಾಧಿಕಾರಿಗಳು ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಮಾಡಿದ ಪೋಲೀಸ್ ಅಧಿಕಾರಿ ವಿರುದ್ಧ ಕಾನೂನುಕ್ರಮ ಕೈಗೊಳ್ಳಬೇಕು,
Gurudutt Hegde ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಇಸ್ಪೀಟು ಅಡ್ಡೆಗಳ ಮೇಲೆ ದಾಳಿ ನಡೆಸಿ ಸಂಪೂರ್ಣ ಬಂದ್ ಮಾಡಿಸಬೇಕು. ಇನ್ನು ಹತ್ತು ದಿನಗಳಲ್ಲಿ ಕ್ರಮ ತೆಗೆದುಕೊಳ್ಳದೇ ಹೋದಲ್ಲಿ, ಶಿವಮೊಗ್ಗ ಯುವ ಕಾಂಗ್ರೆಸ್ನಿಂದ ಸ್ಥಳೀಯ ನಾಗರೀಕರೊಂದಿಗೆ ನಾವುಗಳೇ ಮುತ್ತಿಗೆ ಹಾಕಲಾಗುವುದು. ಮುಂದಾಗುವ ಎಲ್ಲಾ ಅನಾಹುತಗಳಿಗೆ ಜಿಲ್ಲಾಡಳಿತವೇ ನೇರ ಹೊಣೆಯಾಗುವುದೆಂದು ಎಚ್ಚರಿಸುತ್ತಿದ್ದೇವೆ
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್ ನ ಹೆಚ್ ಪಿ ಗಿರೀಶ್, ಹಾಪ್ ಕಾಮ್ಸ್ ನಿರ್ದೇಶಕ ಎಸ್ ಎಮ್ ಶರತ್ ಮರಿಯಪ್ಪ, ಗ್ಯಾರಂಟಿ ಪ್ರಾಧಿಕಾರದ ಸದಸ್ಯರಾದ ಎಸ್ ಕುಮಾರೇಶ್,ಎಸ್ ಬಸವರಾಜ್, ಯುವ ಕಾಂಗ್ರೆಸ್ ನ ಪದಾಧಿಕಾರಿಗಳಾದ ಪುಷ್ಪಕ್ ಕುಮಾರ್, ಎಂ ರಾಕೇಶ್, ಮೋಹನ್ ಸೋಮಿನಕೊಪ್ಪ, ರಾಹುಲ್ ಸಿಗೆಹಟ್ಟಿ, ಸಚಿನ್, ರಾಜೇಶ್ ಮಂದಾರ, ಅಧ್ಯಾನ್ ಪಾಷಾ, ಎಸ್ ಜೆ, ಮಿಥುನ್ , ಸಂಜಯ್, ಪ್ರಜ್ವಲ್, ಕಿರಣ್ ರಂಗೇಗೌಡ, ವೆಂಕಟೇಶ್ ಕಲ್ಲೂರು, ನಿತಿನ್ ಇತರರು ಇದ್ದರು
Christmas ಹದಿನೇಳು ವರ್ಷಗಳಿಂದ “ಆಶಾಕಿರಣ” ದಲ್ಲಿ ಹರ್ಷದ ಕ್ರಿಸ್ ಮಸ್ ಆಚರಣೆ- ಫಾ.ಸ್ಕ್ಯಾನಿಡಿಸೋಜಾ.
Christmas 2025 ಭರವಸೆಯ ವರ್ಷ ಮುಗಿದು ಹೊಸ ವರ್ಷದ ಆಚರಣೆಯ ಸಂಭ್ರಮದಲ್ಲಿ ಇದ್ದೇವೆ ಹೊಸ ವರ್ಷ ಎಲ್ಲರ ಬಾಳಲ್ಲಿ ಬೆಳಕನ್ನು ಹಾಗೂ ಸುಖ ಸಂತೋಷವನ್ನು ತರಲಿ ಎಂದು ಸೆಕ್ರೆಟ್ ಚರ್ಚಿನ ಪ್ರಧಾನ ಗುರುಗಳಾದ ಫಾದರ್ ಸ್ಕ್ಯಾನಿ ಡಿಸೋಜ ಅವರು ನುಡಿದರು ಅವರು ಇಂದು ಆಶಾ ಕಿರಣದಲ್ಲಿ ಬುದ್ಧಿಮಾಂದ್ರ ಮಕ್ಕಳ ಜೊತೆಗೆ ಕೇಕ್ ಕಟ್ ಮಾಡಿ ಸಿಹಿ ವಿತರಿಸಿ ಆಶೀರ್ವದಿಸಿ ಮಾತನಾಡಿದರು 17 ವರ್ಷಗಳಿಂದ ನಿರಂತರವಾಗಿ ಹೊಸ ವರ್ಷವನ್ನು ಆಶಾ ಕಿರಣದಲ್ಲಿ ಆಚರಣೆ ಮಾಡುತ್ತ ಆರ್ಥಿಕ ಸಹಾಯವನ್ನು ನೀಡುತ್ತಾ ಆಚರಿಸುತ್ತಾ ಬಂದಿದ್ದೇವೆ ಎಂದು ನುಡಿದರು ಇದೇ ಸಂದರ್ಭದಲ್ಲಿ ಕ್ರಿಶ್ಚಿಯನ್ ಮುಖಂಡರು ಹಾಗೂ Christmas ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿನ್ನಪ್ಪನವರು ಮಾತನಾಡುತ್ತಾ ಯೇಸುವಿನ ಕರುಣೆ ದಯೆ ಆಶೀರ್ವಾದ ಸದಾ ಮಕ್ಕಳ ಮೇಲೆ ಇರಲಿ ಕ್ರಿಸ್ಮಸ್ ಹಬ್ಬವನ್ನು ಸಡಗರ ಸಂಭ್ರಮದಿಂದ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್. ನಾದನ್. ವಾರ್ಡನ್ ಚಂದ್ರಯ್ಯ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು
Shimoga Christmas ಶಿವಮೊಗ್ಗದಲ್ಲಿ ಕ್ರಿಸ್ ಮಸ್ ವಿಶೇಷದ ಚಿತ್ತಾಕರ್ಷಕ ನಕ್ಷತ್ರ ತಯಾರಿಕಾ ಸ್ಪರ್ಧೆ.
Shimoga Christmas ದಿ ಒರಿಜಿನಲ್ ಆಭರಣ ಜ್ಯುವೆಲ್ಲರ್ಸ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಆಭರಣ ಕ್ರಿಸ್ಮಸ್ ನಕ್ಷತ್ರ ತಯಾರಿಕೆ ಸ್ಪರ್ಧೆ ಕಾರ್ಯಕ್ರಮವನ್ನು ಯೇಸುವಿನ ಪವಿತ್ರ ಹೃದಯ ಪ್ರಧಾನಾಲಯದ ಉಪ ಗುರು ಫಾದರ್ ಜಾನ್ಸನ್ ಆರ್ ಹಾಗೂ ಮೇರಿ ಸ್ಯಾಂತೋಮ್ ಫಾದರ್ ಸಾಜನ್ ಉದ್ಘಾಟಿಸಿದರು. ನಕ್ಷತ್ರ ತಯಾರಿಕೆ ಸ್ಪರ್ಧೆಗೆ 50 ಜನ ಭಾಗವಹಿಸಿ 25 ಸಾಂಪ್ರದಾಯಿಕ Shimoga Christmas ನಕ್ಷತ್ರಗಳನ್ನು ತಯಾರಿಕೆ ಮಾಡಿದ್ದರು. ಪ್ರಥಮ, ದ್ವಿತೀಯ ಮತ್ತು ತೃತಿಯ ಬಹುಮಾನ ವಿತರಿಸಲಾಯಿತು. ಭಾಗವಹಿಸಿದವರಿಗೆ ಎಲ್ಲರಿಗೂ ಹಬ್ಬದ ಉಡುಗೊರೆ ಗಿಫ್ಟ್ ವೊಚರ್ ಕೊಡುವುದರ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.
B. Y. Raghavendra ದ್ವೇಷ ಭಾಷಣ ಕಾಯಿದೆ ಜಾರಿಗೆ ತರದಿರಲು ಆಗ್ರಹಿಸಿಸಂಸದ ರಾಘವೇಂದ್ರ ಪ್ರತಿಭಟನೆಯಲ್ಲಿ ಭಾಗಿ.
B. Y. Raghavendra ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025ರ ವಿರುದ್ಧ ಇಂದು ಶಿಕಾರಿಪುರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಂಸದ ರಾಘವೇಂದ್ರ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ರಾಜ್ಯದ ಘನತೆವೆತ್ತ ರಾಜ್ಯಪಾಲರು ಈ ಕರಾಳ ಮಸೂದೆಗೆ ಅಂಗೀಕಾರ ನೀಡದಂತೆ ಮಾನ್ಯ ತಹಶೀಲ್ದಾರ್ ಅವರ ಮೂಲಕ ಮನವಿ ಪತ್ರ ಸಲ್ಲಿಸಿದರು.
B. Y. Raghavendra ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ, ಶಿಕಾರಿಪುರ ತಾಲೂಕು ಕಚೇರಿ ಮುಂಭಾಗ ನಡೆದ ಈ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.
S. N. Channabasappa ಶಾಲಾ ವಾರ್ಷಿಕೋತ್ಸವ : ವಿದ್ಯಾರ್ಥಿಗಳ ಸುಪ್ತಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ- ಶಾಸಕ ಚನ್ನಬಸಪ್ಪ.
S. N. Channabasappa ರೋಟರಿ ಪೂರ್ವ ಆಂಗ್ಲ ಮಾದ್ಯಮ ಶಾಲೆಯ ವಾರ್ಷಿಕೊತ್ಸವ ಸಮಾರಂಭವನ್ನು ದಿನಾಂಕ ೨೦-೧೨-೨೦೨೫ರಂದು ನಗರದ ಅಂಬೇಡ್ಕರ್ ಭವನದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ನಗರದ ಜನಪ್ರಿಯ ಶಾಸಕರಾದ ಶ್ರೀ ಎಸ್ ಎನ್ ಚನ್ನಬಸಪ್ಪ (ಚನ್ನಿ) ನವರು ವಾರ್ಷಿಕೊತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಾ ಶಾಲಾ ವಾರ್ಷಿಕೊತ್ಸವವು ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಸಾಂಸ್ಕೃತಿಕ ಸಂಭ್ರಮಗಳ ಅನಾವರಣಕ್ಕೆ ಸೂಕ್ತವೇದಿಕೆಯೆಂದು, ರೋಟರಿ ಶಾಲೆಯು ಸುಮಾರು ೪೫ ವರ್ಷಗಳ ಹಿಂದಿನಿಂದಲೂ ನಗರದಲ್ಲಿ ಒಂದು ಪ್ರತಿಷ್ಟಿತ ಶಾಲೆಯಾಗಿದ್ದು, ಗುಣಮಟ್ಟದ ಶಿಕ್ಷಣ, ಮತ್ತು ಮೌಲ್ಯಯುತ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆಯೆಂದು,ಈ ಶಾಲೆಯಲ್ಲಿ ಪೊಷಕರಿಂದ ಯಾವುದೇ ರೀತಿಯ ಡೊನೇಷನ್ ತೆಗೆದುಕೊಳ್ಳದೆ ಇರುವುದು ಈ ಶಾಲೆಯ ವೆಶಿಷ್ಟÀ್ಟವಾಗಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳ ಪೊಷಕರು ಪಡೆದುಕೊಳ್ಳಬೇಕೆಂದು ತಿಳಿಸುತ್ತಾ ಶಿಕ್ಷಣವು ಕೂಡ ಇಂದಿನ ದಿನಮಾನಸಗಳಲ್ಲಿ ಒಂದು ವಾಣಿಜ್ಯೋದ್ಯಮ ಹಂತಕ್ಕೆ ಬಂದಿದ್ದು ಈ ನಿಟ್ಟಿನಲ್ಲಿ ರೋಟರಿ ಆಂಗ್ಲ ಮಾದ್ಯಮ ಶಾಲೆಯು ನಗರದಲ್ಲಿ ಒಂದು ಮಾದರಿ ಶಾಲೆಯಾಗಿರುತ್ತದೆಂದು ತಿಳಿಸಿದರು. ಇದೇ ಸಂದAರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕೆಂದು ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರದ ಸ್ಚಚ್ಚತೆಯ ¨ಗ್ಗೆ ಗಮನ ನಿಡುವುದರ ಜೊತೆಗೆ ಪ್ಲಾಸ್ಟಿಕ್ ನ್ನು ಬಳಸದಂತೆ ಸಾರ್ವಜನಕರಿಗೆ ಅರಿವು ಮೂಡಿಸುವ ಮನೊಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕೆಂದು ಕರೆನೀಡಿದರು.
ಸಮಾರಂಭದ ಅದ್ಯಕ್ಷತೆಯನ್ನು ರೋಟರಿ ಪೂರ್ವ ಎಜುಕೇಶನಲ್ & ಛಾರಿಟಬಲ್ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ರೊ. ಶ್ರೀ ಕೆ ಬಿ ರವಿಶಂಕರ್ ವಹಿಸಿದ್ದು ಸಮಾರಂಭದಲ್ಲಿ ಹಾಜರಿದ್ದ ಪೋಷಕರನ್ನು ಕುರಿತು ಮಾತನಾಡುತ್ತಾ ಪ್ರತಿವರ್ಷದಂತೆ ಈ ವರ್ಷವೂ ಶಾಲಾ ವಾರ್ಷಿಕೊತ್ಸವ ಸಮಾರಂಭವನ್ನು ಅತ್ಯಂತ ವಿಜೃಂಬಣೆಯಿಂದ ಆಚರಿಸಲಾಗುತ್ತಿದ್ದು, ಶಾಲೆಯ ಸಾಂಸೃತಿಕ ವೈಭವನ್ನು ಪ್ರಕಟಿಸುವ ಶಾಲಾ ಹಬ್ಬ ಇದಾಗಿರುತ್ತದೆಂದು ತಿಳಿಸಿತ್ತಾ ಕಳೆದ ಎರಡು ವರ್ಷಗಳಿಂದಲು ಎಸ್ ಎಸ್ ಎಲ್ ಸಿಯಲ್ಲಿ ೧೦೦ ಕ್ಕೆ ೧೦೦ ಫಲಿತಾಂಶವು ಬರುತ್ತಿದ್ದು ಈ ಭಾರಿ ೧೦೦ ಕ್ಕೆ ೧೦೦ ಫಲಿತಾಂಶ ಬರಲು ಎಲ್ಲಾ ರೀತಿ ಕ್ರಮಗಳನ್ನು ಆಡಳಿತ ಮಂಡಳಿ ಈಗಾಗಲೇ ಕೈಗೊಂಡಿರುತ್ತದೆAದು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪೊಷಕರು ಕೂಡ ಹೆಚ್ಚಿನ ಗಮನವಹಿಸಬೇಕೆಂದು ಕರೆ ನೀಡಿದರು.
ಸಮಾರಂಭದ ಇನ್ನೊರ್ವ ಮುಖ್ಯ ಅತಿಥಿಯಾಗಿ ಆಗಮಿಸಿರುವ ಶ್ರೀಯುತ ರಮೇಶ್ ಕ್ಷೇತ್ರ ಶಿಕ್ಷಾಣಾಧಿಕಾರಿಗಳು ಇವರು ಮಾತನಾಡುತ್ತಾ ಸಮಾರಂಭದ ಉದ್ಘಾಟನೆ ಮಾಡಿದ್ದ ಶಾಸಕರ ಅಭಿಪ್ರಾಯವನ್ನು ತಾವು ಕೂಡ ಅನುಮೊದಿಸುವುದಾಗಿ ಈ ಶಾಲೆಯಲ್ಲಿ ಯಾವುದೇ ರೀತಿಯ ಡೊನೇಷನ್ ಇಲ್ಲದೆ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳುತ್ತಿರುವುದು ಈ ಶಾಲೆಯ ಹೆಗ್ಗಳಿಕೆ ಯಾಗಿರುತ್ತದೆಂದು ತಿಳಿಸುತ್ತಾ ಈಗಾಗಲೇ ಈ ಶೈಕ್ಷಣಿಕ ವರ್ಷದ ಮುಕ್ತಾಯ ಹಂತಕ್ಕೆ ಬಂದಿರುವ ಪ್ರಯುಕ್ತ ವಿದ್ಯಾರ್ಥಿಗಳೆಲ್ಲರೂ ತಮ್ಮ ಓದಿಗೆ ಹೆಚ್ಚಿನ ಗಮನ ನೀಡಬೇಕೆಂದು ಕರೆನೀಡಿದರು.
ಈ ಸಮಾರಂಭದಲ್ಲಿ ಟ್ರಸ್ಟಿನ ಕಾರ್ಯದರ್ಶಿಯಾದ ರೊ. ಎಸ್ ಸಿ ರಾಮಚಂದ್ರರವರು ಮಾತನಾಡುತ್ತಾ ರೋಟರಿ ಆಂಗ್ಲ ಮಾದ್ಯಮ ಶಾಲೆಯಲ್ಲಿ ಇರುವ ಶಿಕ್ಷಕರೆಲ್ಲರೂ ನುರಿತ ಮತ್ತು ಹೆಚ್ಚಿನ ಅನುಭವವುಳ್ಳವರಾಗಿದ್ದು ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದ್ದು ಮುಂಬರುವ ದಿನಗಳಲ್ಲಿ ಈ ಶಾಲೆಗೆ ಹೆಚ್ಚಿನ ಸಂಖೆಯಲ್ಲಿ ವಿದ್ಯಾರ್ಥಿಗಳು ದಾಖಲಾಗಲು ಹಾಜರಿರುವ ಪೊಷಕರೆಲ್ಲರು ಸಹಕರಿಸಬೇಕೆಂದು ಕರೆನೀಡಿದರು.
S. N. Channabasappa ಶಾಲೆಯ ಪ್ರಿನ್ಸಿಪಾಲ್ ಶ್ರೀ ಸೂರ್ಯನಾರಾಯಣ್ ಆರ್ ರವರು ಶಾಲಾ ವಾರ್ಷಿಕ ವರದಿಯನ್ನು ಮಂಡಿಸುತ್ತಾ ಈ ಶೈಕ್ಷಿಣಿಕ ವರ್ಷದಲ್ಲಿ ನಡೆಸಲಾದ ಕಾರ್ಯ ಚಟುವಟಿಕೆಗಳ ಸಮಗ್ರ ಮಾಹಿತಿಗಳನ್ನು ಸಭೆಯಲ್ಲಿ ಮಂಡಿಸುತ್ತಾ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಕೂಡ ಹೆಚ್ಚಿನ ಒತ್ತು ನೀಡಲಾಗಿದೆಯೆಂದು ತಿಳಿಸಿದರು.
ಸಮಾರಂಭದಲ್ಲಿ (ಜೆ.ಎನ್,ಎನ್,ಸಿ) ತಾಂತ್ರಿಕ ಕಾಲೇಜಿನ ಪ್ರೋಫೆಸರ್ ಶ್ರೀಯುತ ಸುನೀಲ್ ಎಮ್ ಡಿ ಯವರು ಪ್ರತಿ ವರ್ಷದಂತೆ ಈ ವರ್ಷವು ಶಾಲಾ ವಾರ್ಷಿಕೊತ್ಸವ ಸಮಾರಂಭದಲ್ಲಿ ಹಾಜರಿದ್ದು ಬಡಮಕ್ಕಳ ವಿದ್ಯಾರ್ಜೆನೆಗೆ ಅನುಕೂಲವಾಗುವಂತೆ ರೂ ೧೦,೦೦೦ ಗಳ ದೇಣಿಗೆಯನ್ನು ನೀಡಿ ಮಾತನಾಡುತ್ತಾ ತಾವು ಕೂಡ ರೋಟರಿ ಶಾಲೆಯಲ್ಲಿಯೇ ತಮ್ಮ ಹೈಸ್ಕೂಲ್ವರೆಗೆನ ವಿದ್ತಾರ್ಥಿ ಜೀವನವನ್ನು ಕಳೆದಿದ್ದು ಈ ಸಮಾರಂಭದಲ್ಲಿ ಬಾಗವಹಿಸುವುದು ತಮಗೆ ಹೆಮ್ಮೆಯ ವಿಷಯವೆಂದು ತಿಳಿಸುತ್ತಾ ಕಳೆದ ಬಾರಿ ಎಸ್ ಎಸ್ ಎಲ್ ಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಿ ಪ್ರೋತ್ಸಾಹಿಸಿದರು.
ಈ ಸಮಾರಂಭದಲ್ಲಿ ಉಪಾದ್ಯಕ್ಷರುಗಳಾದ ರೊ. ಶ್ರೀಮತಿ ನಾಗವೇಣಿ ಎಸ್ ಆರ್ ,ರೊ. ಸುರೇಶ್ ಕುಮಾರ್ ,ಖಜಾಂಚಿ ಮಂಜುನಾಥ ಎನ್ ಬಿ ಮತ್ತು ಜಂಟಿ ಕಾರ್ಯದರ್ಶಿಗಳಾದ ವಿಜಯ್ ಕುಮಾರ್ ಜಿ ,ಡಾ|| ಅರುಣ್ ಎಮ್ ಎಸ್ ರವರು ಹಾಜರಿದ್ದು, ವಿದ್ಯಾರ್ಥಿಗಳಿಗೆ ಹಿತವಚನ ನೀಡಿzರು ಮತ್ತು ಸಮಾರಂಭದಲ್ಲಿ ಟ್ರಸ್ಟಿಗಳಾದ ಪೇಟ್ರನ್ ಟ್ರಸ್ಟಿ ಕಡಿದಾಳ್ ಗೋಪಾಲ್, ಹೇಮಂತ್ ಎಮ್ ಸಿ, ಪ್ರವೀಶ್ ಡಿ ,ಚಂದ್ರಶೇಖರಯ್ಯ ಎಮ್, ಹಾಜರಿದ್ದು ಸಮಾರಂಭದ ಮೆರಗನ್ನು ಹೆಚ್ಚಿಸಿದರು. ಸಭಾಕಾರ್ಯ ಕ್ರಮದನಂತರ ಎಲ್ ಕೆ ಜಿ ಯಿಂದ ಹತ್ತನೆ ತರಗತಿಯ ವಿದ್ಯಾರ್ಥಿಗಳು ಮತ್ತು ಶಾಲೆಯ ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರೆಲ್ಲರೂ ಸೇರಿ ವೈವಿದ್ಯಮಯ ಸಾಂಸೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟು ಶಾಲಾ ಸಾಂಸೃತಿಕ ವೈಭªವÀನ್ನು ಅನಾವರಣಗೊಳಿಸಿದರು. ಸಮಾರಂಭದ ನಿರೂಪಣೆಯನ್ನು ಹರ್ಷಿತ ಸಹ ಶಿಕ್ಷಕಿ ನಡೆಸಿದ್ದು ಕೊನೆಯಲ್ಲಿ ದೀಪಿಕಾ ಪಿ ಸಹಶಿಕ್ಷಕಿ ಇವರ ವಂದನಾರ್ಪಣೆಯೊಂದಿಗೆ ಸಮಾರಂಭವನ್ನು ಮುಕ್ತಾಯವಾಯಿತು.
Sacred Heart High School ಸೇಕ್ರೆಡ್ ಹಾರ್ಟ್ ಪ್ರೌಢಶಾಲೆಯ ವಜ್ರ ಮಹೋತ್ಸವ: ಹಳೇ ವಿದ್ಯಾರ್ಥಿಗಳ ಸಮ್ಮಿಲನ.
Sacred Heart High School ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಯ ವಜ್ರ ಮಹೋತ್ಸವದ ಅಂಗವಾಗಿ ಹಳೆಯ ವಿದ್ಯಾರ್ಥಿಗಳ ಸಮ್ಮಿಲನವನ್ನು ದಿನಾಂಕ 21-12-2025 ರಂದು ಹಮ್ಮಿಕೊಳ್ಳಲಾಗಿತ್ತು. ಅಂದು ಬೆಳಗ್ಗೆ ಹಳೆಯ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಂಜೆ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ನಟ ವಿಜಯ್ ರಾಘವೇಂದ್ರ, ಶ್ರೀಯುತ ಕುಮಾರ್ ಬಂಗಾರಪ್ಪ, ಡಾ. ಧನಂಜಯ ಸರ್ಜಿ, ಶ್ರೀಯುತ ಸಿ. ಎಸ್ ಷಡಾಕ್ಷರಿ, ಶ್ರೀಯುತ ಯೋಗೇಶ್ ಹೆಚ್ ಸಿ, ಶ್ರೀಯುತ ಬಳ್ಳೆಕೆರೆ ಸಂತೋಷ್, ಶ್ರೀಯುತ ಹರ್ಷ ಎನ್,ಎಸ್ ಚಿನ್ನಪ್ಪ ಹಾಗೂ ಹಳೆಯ Sacred Heart High School ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಆಡಳಿತ ಮಂಡಳಿಯ ಮುಖ್ಯಸ್ಥರ ಪ್ರಸನ್ನತೆಯಲ್ಲಿ ಅಂದಿನ ಕಾರ್ಯಕ್ರಮ ಪ್ರಾರಂಭವಾಯಿತು. ಬಳಿಕ ಹಳೆಯ ವಿದ್ಯಾರ್ಥಿಗಳ ಪರಿಚಯ ಹಾಗೂ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು. ಬಳಿಕ ಅದ್ದೂರಿ ಭೋಜನದೊಂದಿಗೆ ಈ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
