Tuesday, March 24, 2026
Tuesday, March 24, 2026
Home Blog Page 491

Indira Gandhi ನಮ್ಮ ಪಂಚ ಗ್ಯಾರಂಟಿಗಳು ಶ್ರೀಮತಿ ಇಂದಿರಾ ಗಾಂಧಿಯವರಿಂದ ಪ್ರೇರಣೆ ಪಡೆದಿವೆ- ಸಿಎಂ ಸಿದ್ಧರಾಮಯ್ಯ

0

Indira Gandhi ಸರ್ವರಿಗೂ ಸಮಪಾಲು ನೀಡುವ ಸ್ವಾವಲಂಬಿ ಮತ್ತು ಜಾತ್ಯತೀತ ಭಾರತದ ರೂವಾರಿ ಶ್ರೀಮತಿ ಇಂದಿರಾಗಾಂಧಿಯವರನ್ನು ಅವರ ಹುಟ್ಟುಹಬ್ಬದ ದಿನ ಗೌರವದಿಂದ ನೆನೆಯುತ್ತೇನೆ. ಅವರ ಬಡವರ ಪರವಾದ ಕಾಳಜಿ ಮತ್ತು ಅಭಿವೃದ್ಧಿಯ ಮುನ್ನೋಟದಿಂದ ನಾನು ಪ್ರೇರಿತನಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.

ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ನಮ್ಮ ಪಂಚ ಗ್ಯಾರಂಟಿ ಯೋಜನೆಗಳು ಕೂಡಾ ಶ್ರೀಮತಿ ಇಂದಿರಾಗಾಂಧಿಯವರಿಂದ ಪ್ರೇರಣೆ ಪಡೆದಿವೆ. ಬಡವರ ಬಗ್ಗೆ ಅವರ ಹೃದಯ ಸದಾ ಮಿಡಿಯುತ್ತಿತ್ತು. ಗರೀಬಿ ಹಟಾವೋ ಎಂದು ಹೇಳುತ್ತಾ ಬಡತನದ ವಿರುದ್ಧ ಅವರು ಸಮರವನ್ನೇ ಸಾರಿದ್ದರು.

Indira Gandhi ಪ್ರಧಾನ ಮಂತ್ರಿಯಾಗಿ ಬ್ಯಾಂಕ್ ರಾಷ್ಟ್ರೀಕರಣ, ಭೂ ಸುಧಾರಣೆ, ಸಾರ್ವಜನಿಕ ಕ್ಷೇತ್ರದ ಉದ್ಯಮಗಳ ಸ್ಥಾಪನೆಯೂ ಸೇರಿದಂತೆ ಅವರು ದಿಟ್ಟತನದಿಂದ ಕಾರ್ಯರೂಪಕ್ಕೆ ತಂದಿದ್ದ ಜನಪರ ನೀತಿ-ನಿರ್ಧಾರಗಳು ನಮ್ಮ ಕಣ್ಣಮುಂದೆಯೇ ಬುಡಮೇಲು ಆಗುತ್ತಿದೆ. ಈ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಶ್ರೀಮತಿ ಇಂದಿರಾಗಾಂಧಿಯವರ ಬದುಕು ಮತ್ತು ಚಿಂತನೆ ನಮಗೆಲ್ಲ ಪ್ರೇರಣೆಯಾಗಲಿ.

ಜಿಲ್ಲೆಯಲ್ಲಿನ ಕೆಲವು ಪಂಚಾಯತ್ ಗಳಿಗೆ ಉಪ ಚುನಾವಣೆ‌ ಪ್ರಯುಕ್ತ ಆಯಾ ಸ್ಥಳಗಳ ಶಾಲೆಗಳಿಗೆ ರಜೆ ಘೋಷಣೆ

0

ನ.23 ರಂದು ಶಿವಮೊಗ್ಗ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲಾಗುತ್ತಿದ್ದು, ಚುನಾವಣಾ ಕ್ಷೇತ್ರಗಳಲ್ಲಿನ ಮತದಾನ ಕೇಂದ್ರಗಳು ಬಹುತೇಕ ಶಾಲೆಗಳಾಗಿವೆ. ಮತದಾನದ ಸಮಯದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಗಮಿಸುವುದರಿಂದ ಜನದಟ್ಟಣೆಯಾಗಿ ಮತದಾನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮತದಾನ ಕೇಂದ್ರವಿರುವ ಶಾಲೆಗಳಿಗೆ ನ. 23 ರ ಶನಿವಾರದಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ಶಿವಮೊಗ್ಗ ತಾಲೂಕಿನ ದೇವಕಾತಿಕೊಪ್ಪದ ಸ.ಕಿ.ಪ್ರಾ.ಶಾಲೆ ಮತ್ತು ಹೊಳಲೂರು ಅಂಗನವಾಡಿ ಕೇಂದ್ರ ಜನತಾ ಕಾಲೋನಿ. ಭದ್ರಾವತಿ ತಾಲೂಕಿನ ಬಾರಂದೂರು ಸ. ಹಿ.ಪ್ರಾ.ಶಾಲೆ (ಉತ್ತರಭಾಗ). ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿ ಸ.ಹಿ.ಪ್ರಾ.ಶಾಲೆ. ಶಿಕಾರಿಪುರ ತಾಲೂಕಿನ ತರಲಘಟ್ಟ ಸ.ಹಿ.ಪ್ರಾ.ಶಾಲೆ, ಶಿಕಾರಿಪುರದ ಸ.ಉರ್ದು ಹಿ.ಪ್ರಾ.ಶಾಲೆ ಖಾಜಿ ಮೊಹಲ್ಲ ಹಾಗೂ ಶಿರಾಳಕೊಪ್ಪದ ಸ.ಉರ್ದು ಹಿ.ಪ್ರಾ.ಶಾಲೆ ಆಜಾದ್ ವೃತ್ತ. ಸಾಗರ ತಾಲೂಕಿನ ಕುದರೂರು ಸ.ಹಿ.ಪ್ರಾ.ಶಾಲೆ ಕೊ.ಸಂ.1 ಈ ಶಾಲೆಗಳಲ್ಲಿ ನ.23 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿದೆ.

Department of Youth Empowerment and Sports ಜಾರ್ಖಂಡ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಅಥ್ಲೆಟಿಕ್ ಸ್ಪರ್ಧೆಗೆ ಶಿವಮೊಗ್ಗದ ಅಪೂರ್ವ & ಅರೋನ್ ಆಯ್ಕೆ

0

Department of Youth Empowerment and Sports ನ.15 ಮತ್ತು 16 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದೊಳಗಿನ ಬಾಲಕ/ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ಪ್ರಥಮ ಮತ್ತು 80 ಮೀ ಹರ್ಡಲ್ಸ್ನಲ್ಲಿ ದ್ವಿತೀಯ ಸ್ಥಾನ ಗಳಿಸಿದ ಆರೋನ್ ಹಾಗೂ 600 ಮೀ ಓಟದಲ್ಲಿ ಪ್ರಥಮ ಸ್ಥಾನಗಳಿಸಿದ ಅಪೂರ್ವ ಇವರುಗಳು ಜಾರ್ಖಂಡ್‌ನ ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಅಥ್ಲೆಟಿಕ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
Department of Youth Empowerment and Sports ಈ ಕ್ರೀಡಾಪಟುಗಳು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯದಲ್ಲಿ ಅಥ್ಲೆಟಿಕ್ಸ್ ತರಬೇತುದಾರ ಬಾಳಪ್ಪ ಮಾನೆಯವರಿಂದ ದೈನಂದಿನ ತರಬೇತಿ ಪಡೆಯುತ್ತಿದ್ದಾರೆ. ವಿಜೇತರಾದ ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ

D. S. Arun ಗೋಮಾತೆಯನ್ನ ಫೂಜಿಸುವ ಮೂಲಕ ಶಾಸಕ ಅರುಣ್ ಜನ್ಮದಿನ ಆಚರಣೆ

0

D. S. Arun ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ 52ನೇ ಜನ್ಮದಿನವನ್ನು ವಿವಿಧ ಸಮಾಜಮುಖಿ ಸೇವಾ ಕಾರ್ಯಗಳ ಮುಖಾಂತರ ಜನ್ಮದಿನ ಆಚರಿಸಿಕೊಂಡರು.
ಎಂಎಲ್‌ಸಿ ಡಿ.ಎಸ್.ಅರುಣ್ ಜನ್ಮದಿನದ ಪ್ರಯುಕ್ತ ಸ್ನೇಹಿತರ ಜತೆಗೂಡಿ ರಕ್ತದಾನ ಮಾಡಿದರು. ಈವರೆಗೂ ಅರುಣ್ ಅವರು 42 ಬಾರಿ ರಕ್ತದಾನ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ ಕುಮಾರ್ ಮಾತನಾಡಿ, ಜನ್ಮದಿನ ಅರ್ಥಪೂರ್ಣ ಆಗಬೇಕಾದರೆ ಮನುಕುಲದ ಸೇವೆ ಜತೆಯಲ್ಲಿ ಸಮಾಜಮುಖಿ ಆಲೋಚನೆ ಹೊಂದಿರಬೇಕು. ಜನ್ಮದಿನ ಸೇರಿದಂತೆ ವಿಶೇಷ ದಿನಗಳಲ್ಲಿ ಆರೋಗ್ಯವಂತ ಜನರು ರಕ್ತದಾನ ಮಾಡಲು ಮುಂದಾಗಬೇಕು. ಇದರಿಂದ ತುಂಬಾ ಅನುಕೂಲವಾಗುತ್ತದೆ ಎಂದು ತಿಳಿಸಿದರು.
D. S. Arun ಬುಧವಾರ ಬೆಳಗ್ಗೆ ಹುಣಸೋಡು ಗೋಶಾಲೆಯಲ್ಲಿ ಗೋಮಾತೆ ಪೂಜೆ ನೆರವೇರಿಸಿದರು. ಹುಲ್ಲು ಹಿಂಡಿ ಹಾಗೂ ಧನಸಹಾಯ ನೀಡಿ ಕುಟುಂಬದ ಸದಸ್ಯರು ಹಾಗೂ ಎಲ್ಲ ಸ್ನೇಹಿತರೊಂದಿಗೆ ಗೋಪೂಜೆ ಮಾಡಿದರು.
ಬೆಳಗ್ಗೆ ರವೀಂದ್ರ ನಗರದ ಶ್ರೀ ಬಲಮುರಿ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅನೇಕ ಸ್ನೇಹಿತರು, ಸಂಘ ಸಂಸ್ಥೆಯ ಪದಾಧಿಕಾರಿಗಳು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರನ್ನು ಸನ್ಮಾನಿಸಿ ಶುಭ ಹಾರೈಸಿದರು.
ರೋಟರಿ ರಕ್ತ ನಿಧಿ ಟ್ರಸ್ಟ್ ಮಾಜಿ ಚೇರ್ಮನ್ ಜಗನ್ನಾಥ್, ಮನೋಜ್, ಅಮರ್ ಶೆಟ್ಟಿ, ಸುರೇಶ್ ಸಿಂಗ್, ಕಿರಣ್, ನಾಗರಾಜ್, ರಾಘವೇಂದ್ರ ಪೈ, ನಾಗರಾಜ್ ಶೆಟ್ಟರ್, ಮುರುಗನ್, ಸಂತೋಷ್ ಕುಮಾರ್, ರಾಜೇಶ್ ಗೌಡ, ಪ್ರತಿಭಾ ಅರುಣ್, ಸುಕನ್, ಸುಪ್ರೀತಾ ಹಾಗೂ ಸ್ನೇಹಿತರು ಉಪಸ್ಥಿತರಿದ್ದರು.

Gajanur Jawahar Navodaya Vidyalaya ಗಾಜನೂರು ನವೋದಯ ಶಾಲೆ 9 & 11 ನೇ ತರಗತಿ ಪ್ರವೇಶ ಪರೀಕ್ಷೆ ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ವಿಸ್ತರಣೆ

0

Gajanur Jawahar Navodaya Vidyalaya ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ 9 ಮತ್ತು 11 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನ.26 ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ವೆಬ್‌ಸೈಟ್ 9 ನೇ ತರಗತಿಗೆ https://cbseitms.nic.in/2024/nvsix ಮತ್ತು 11 ನೇ ತರಗತಿಗೆ https://cbseitms.nic.in/2024/nvsxi_11ರ ಮೂಲಕ ನವೆಂಬರ್ 26 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Dinesh Gundurao ಉಚಿತ ಎರಡನೇ ವೈದ್ಯಕೀಯ ಸಲಹೆ ಪಡೆಯಲು ಇನ್ನುಮುಂದೆ ಉಚಿತ ಸಹಾಯವಾಣಿ- ಸಚಿವ ದಿನೇಶ್ ಗುಂಡೂರಾವ್

0

Dinesh Gundurao ಸಂಕೀರ್ಣ ಶಸ್ತ್ರಚಿಕಿತ್ಸೆಗಳ ಬಗ್ಗೆ ಆತಂಕ ಅಥವಾ ಅನಿಶ್ಚಿತತೆ ಹೊಂದಿರುವ ರೋಗಿಗಳಿಗೆ “ಉಚಿತ ಎರಡನೇ ವೈದ್ಯಕೀಯ ಅಭಿಪ್ರಾಯಗಳನ್ನು” ಒದಗಿಸಲು ಆರೋಗ್ಯ ಸೌಧದಲ್ಲಿ ಒಂದು ಅದ್ಭುತ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ ಎಂದು ಅಸರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು ಈ ಸೌಲಭ್ಯಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು
.

ಶಸ್ತ್ರಚಿಕಿತ್ಸೆಗೆ ಒಳಗಾಗುವ ಮೊದಲು ರೋಗಿಗಳು ಎರಡನೇ ಅಭಿಪ್ರಾಯವನ್ನು ಪಡೆಯುವುದು ಅಗತ್ಯವಾಗಿರುತ್ತದೆ. ಕೆಲವು ಸಂದರ್ಭಗಳಲ್ಲಿ, ಶಸ್ತ್ರಚಿಕಿತ್ಸೆ ಅಗತ್ಯವಿಲ್ಲದಿರಬಹುದು. ಆದ್ದರಿಂದ, ತಜ್ಞ ವೈದ್ಯರು ಶಸ್ತ್ರಚಿಕಿತ್ಸೆ ಅಗತ್ಯವಿದೆಯೇ, ಶಸ್ತ್ರಚಿಕಿತ್ಸೆಗೆ ಪರ್ಯಾಯಗಳು ಮತ್ತು ಇತರ ಸಂಬಂಧಿತ ವಿಷಯಗಳ ಬಗ್ಗೆ ಸಲಹೆ ನೀಡುತ್ತಾರೆ. ಆರಂಭದಲ್ಲಿ, ಮೊಣಕಾಲು ಬದಲಿ ಮತ್ತು ಸೊಂಟದ ಬದಲಾವಣೆಯಂತಹ ಕಾರ್ಯವಿಧಾನಗಳಿಗೆ ಸಲಹೆ ಲಭ್ಯವಿರುತ್ತದೆ.

Dinesh Gundurao ತಜ್ಞ ವೈದ್ಯರೊಂದಿಗೆ ಸಮಾಲೋಚಿಸಲು ನೀವು ಸಹಾಯವಾಣಿ 1800 4258 330 ಗೆ ಕರೆ ಮಾಡಬಹುದು. ಈ ಸಹಾಯವಾಣಿಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ 24/7 ನಿರ್ವಹಿಸುತ್ತದೆ. ಸಮಾಲೋಚನೆಗಾಗಿ ನೀವು WhatsApp ಮೂಲಕ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಬಹುದು.

ಇಂತಹ ಕಾರ್ಯಕ್ರಮವನ್ನು ದೇಶದಲ್ಲೇ ಪ್ರಥಮವಾಗಿ ಜಾರಿಗೊಳಿಸುತ್ತಿರುವುದು ನಮ್ಮ ಸರಕಾರವಾಗಿದ್ದು, ರಾಜ್ಯದ ಜನತೆ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಶಸ್ತ್ರಚಿಕಿತ್ಸೆಯ ಬಗ್ಗೆ ನಿಮಗೆ ಯಾವುದೇ ಸಂದೇಹಗಳಿದ್ದರೆ, ಕರೆ ಮಾಡಿ ಮತ್ತು ಉಚಿತ ತಜ್ಞರ ಸಲಹೆ ಪಡೆಯಿರಿ.

ನಿಮ್ಮ ಆರೋಗ್ಯ ನಮ್ಮ ಆದ್ಯತೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

VISL Bhadravati ಭದ್ರಾವತಿ ವಿಐಎಸ್ ಎಲ್ ನಿಂದ ಪರಿಸರ ನಡಿಗೆ ಕಾರ್ಯಕ್ರಮ

0

VISL Bhadravati ವಿಐಎಸ್‌ಎಲ್ ಸಂಸ್ಥೆಯ ಆವರಣದಲ್ಲಿರುವ ಇಸ್ಪಾತ್ ಭವನದ ಮುಂಭಾಗ ಕಾರ್ಯಪಾಲಕ ನಿರ್ದೇಶಕ ಶ್ರೀ ಬಿ.ಎಲ್.ಚಂದ್ವಾನಿರವರು ಪರಿಸರ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇವರೊಂದಿಗೆ ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಶ್ರೀ ಜೆ. ಜಗದೀಶ್, ಅಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ ಮತ್ತು ಶ್ರೀ ಪಾರ್ಥಸಾರಥಿ ಮಿಶ್ರಾ, ಅಧ್ಯಕ್ಷರು, ವಿಐಎಸ್‌ಎಲ್ ಅಧಿಕಾರಿಗಳ ಸಂಘ ಉಪಸ್ಥಿತರಿದ್ದರು. ಶ್ರೀ ಹರಿಶಂಕರ್, ಮಹಾಪ್ರಬಂಧಕರು (ಸುರಕ್ಷತೆ) ಪರಿಸರ ನೀತಿಯನ್ನು ಓದಿದರು ಹಾಗೂ ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಸಾರ್ವಜನಿಕ ಸಂಪರ್ಕ), ಶ್ರೀಮತಿ ಶೋಭಾ ಶಿವಶಂಕರನ್, ಮಹಾಪ್ರಬಂಧಕರು (ಹಣಕಾಸು ಮತ್ತು ಲೆಖ್ಖ) ಮತ್ತು ಶ್ರೀ ಎಲ್. ಕುಥಲನಾಥನ್, ಸಹಾಯಕ ಮಹಾಪ್ರಬಂಧಕರು (ವಿಜಿಲೆನ್ಸ್) ಪರಿಸರ ಪ್ರತಿಜ್ಞೆಗಳನ್ನು ಕ್ರಮವಾಗಿ ಕನ್ನಡ, ಹಿಂದಿ ಮತ್ತು ಆಂಗ್ಲಭಾಷೆಯಲ್ಲಿ ಬೋಧಿಸಿದರು. ಪರಿಸರ ಕಾಳಜಿ ಮೂಡಿಸುವ ಸಲುವಾಗಿ ಪರಿಸರ ನಡಿಗೆಯನ್ನು ಕೈಗೊಳ್ಳಲಾಗಿತ್ತು. ಶ್ರೀ ಉನ್ನೀಕೃಷ್ಣನ್, ಸಹಾಯಕ ಮಹಾಪ್ರಬಂಧಕರು (ಹಣಕಾಸು) ಪ್ರಾರ್ಥಿಸಿದರು, ಶ್ರೀ ವಿಕಾಸ ಬಸೇರ್, ಸಹಾಯಕ ಮಹಾಪ್ರಬಂಧಕರು (ನೀರು ಸರಬರಾಜು ಮತ್ತು ಪರಿಸರ ನಿರ್ವಹಣೆ) ಸ್ವಾಗತಿಸಿ ಶ್ರೀ ನಂದನ, ಕಿರಿಯ ಪ್ರಬಂಧಕರು ವಂದಿಸಿದರು.

ಪರಿಸರ ಮಾಸಾಚರಣೆ-೨೦೨೪ ನವೆಂಬರ್ ೧೯ ರಿಂದ ಡಿಸೆಂಬರ್ ೧೮, ೨೦೨೪ರ ವರೆಗಿದ್ದು ಅದರ ಅಂಗವಾಗಿ ಪರಿಸರದ ಬಗ್ಗೆ ಕಾಳಜಿಯನ್ನು ಮೂಡಿಸುವ ಉದ್ದೇಶದಿಂದ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆ, ಪರಿಸರ ರಸಪ್ರಶ್ನೆ ಮತ್ತು ಘೋಷವಾಕ್ಯ ಬರೆಯುವ ಸ್ಪರ್ಧೆಗಳನ್ನ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಮತ್ತು ಶಾಲಾ ಮಕ್ಕಳಿಗಾಗಿ ಆಯೋಜಿಸಲಾಗಿದೆ.
ಭದ್ರಾವತಿಯ ಶಾಲಾ ವಿಧ್ಯಾರ್ಥಿಗಳಿಗಾಗಿ ಆಯೋಜಿಸಿರುವ ಸ್ಪರ್ಧೆಗಳ ವಿವರ ಈ ಕೆಳಕಂಡAತಿದೆ.

೫ನೇ ತರಗತಿಯಿಂದ ೭ನೇ ತರಗತಿ
ಪ್ರಬಂಧ ಸ್ಪರ್ಧೆ (ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ)
ದಿನಾಂಕ: ೨೩-೧೧-೨೦೨೪,
ಸಮಯ: ಮಧ್ಯಾನ್ಹ ೩.೦೦ ಘಂಟೆ
ಸ್ಥಳ: ವಿಐಎಸ್‌ಎಲ್ ಕ್ರೀಡಾಂಗಣ
೮ನೇ ತರಗತಿಯಿಂದ ೧೦ನೇ ತರಗತಿ
ರಸಪ್ರಶ್ನೆ ಸ್ಪರ್ಧೆ (ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ)

VISL Bhadravati ಪ್ರತಿ ಶಾಲೆಯಿಂದ ಪ್ರತಿ ವಿಭಾಗದಲ್ಲಿ ೫ ವಿದ್ಯಾರ್ಥಿಗಳಿಗೆ ಸೀಮಿತವಾಗಿರಿಸಲಾಗಿದೆ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಅಧಿಕಾರಿಗಳು ಭಾಗವಹಿಸಲು ಅನುಮತಿಸಿರುವ ಅಧೀಕೃತ ಪತ್ರಗಳನ್ನು ತರಬೇಕಾಗಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ಮೊಬೈಲ್ ಸಂಖ್ಯೆ: 9480829062 / 9480829202

ನಮ್ಮ ಭೂಮಿ – ಪುನಃಸ್ಥಾಪನೆ, ಮರುಭೂಮಿ ಮತ್ತು ಬರ ಸ್ಥಿತಿಸ್ಥಾಪಕತ್ವವಾಗಿದ್ದು ಈ ವರ್ಷದ ಪರಿಸರ ಮಾಸಾಚರಣೆಯ ಧ್ಯೇಯವಾಗಿರಿಸಲಾಗಿದೆ. ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ತಮ್ಮ ಸಂದೇಶದಲ್ಲಿ ನಾವೆಲ್ಲರೂ ಒಗ್ಗೂಡಿ ಮರುಭೂಮಿಯಾಗುವುದನ್ನು ಬರವನ್ನು ತಡೆಯುವುದು ಹಾಗೂ ಭೂಮಿ ಪುನಃಸ್ಥಾಪನೆಯನ್ನು ಸಹ ಸಂಯುಕ್ತವಾಗಿ ಸಾಧಿಸಬಹುದು ಎಂದು ತಿಳಿಸಿದರು.

ಶ್ರೀ ಬಿ.ಎಲ್. ಚಂದ್ವಾನಿ ತಮ್ಮ ಭಾಷಣದಲ್ಲಿ ಭೂಮಿಯ ಅವನತಿ, ಮರುಭೂಮಿ ಮತ್ತು ಬರಗಾಲದ ಸಮಸ್ಯೆಗಳು ಉಲ್ಬಣಗೊಳ್ಳುವುದರಿಂದ ನೈಸರ್ಗಿಕ ಪರಿಸರ ವ್ಯವಸ್ಥೆಗೆ ಮಾತ್ರವಲ್ಲದೆ ಪ್ರಪಂಚದಾದ್ಯAತ ಸಮುದಾಯಗಳ ಜೀವನೋಪಾಯ, ಆರೋಗ್ಯ ಮತ್ತು ಯೋಗಕ್ಷೇಮಕ್ಕೂ ಸಂಕಷ್ಟ ಉಂಟುಮಾಡಿದೆ ಎಂದರು.

ಈ ಕಾರ್ಯಕ್ರಮವನ್ನು ಸೈಲ್-ವಿಐಎಸ್‌ಎಲ್ ನ ಪರಿಸರ ನಿರ್ವಹಣಾ ವಿಭಾಗವು ಆಯೋಜಿಸಿತ್ತು.

Spandana Sagara Corporation ನವೆಂಬರ್ 21 . ಸಾಗರದಲ್ಲಿ ಬ್ರೆಕ್ಟ್ ಕವಿತೆಗಳ ರಂಗಪ್ರಯೋಗ

0

Spandana Sagara Corporation ಸ್ಪಂದನ( ರಿ) ಸಾಗರ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ
ದಿನಾಂಕ 21:11:24 ರ ಗುರುವಾರ ಬೆಳಿಗ್ಗೆ 12 ಗಂಟೆಗೆ ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಏಕವ್ಯಕ್ತಿ ರಂಗಪ್ರಯೋಗ ಹಮ್ಮಿಕೊಂಡಿದೆ.
ಥಿಯೇಟರ್ -ರಿ- ಆಕ್ಟ್ ಪ್ರಸ್ತುತಪಡಿಸುವ , ರಂಗಾಯಣ ಪದವೀಧರ , ಕಿರುತೆರೆ ನಟ, ಉದಯ ಅಂಕರವಳ್ಳಿ ಅಭಿನಯಿಸುವ ಬ್ರೆಕ್ಟ್ ಕವಿತೆಗಳ ಅನಾವರಣವಿರುವ ಈ ರಂಗಪ್ರಯೋಗವನ್ನು ನೀನಾಸಂ ಪಧವೀಧರ ಹಾಗೂ ರಂಗಶಿಕ್ಷಕರಾಧ ಡಾ.ವೆಂಕಟೇಶ್ವರ ಇವರು ನಿರ್ದೇಶಿಸಿರುತ್ತಾರೆ.
Spandana Sagara Corporation ಇಂದಿರಾಗಾಂಧಿ ಕಾಲೇಜಿನ ಇಂಗ್ಲೀಷ್ ವಿಭಾಗದ ಸಹಕಾರದೊಂದಿಗೆ ಈ ಪ್ರಯೋಗ ನಡೆಯಲಿದೆ.
ಆಸಕ್ತರು ಆಗಮಿಸಲು ಕೋರಲಾಗಿದೆ ಎಂದು
ಸ್ಪಂದನದ ಪರವಾಗಿ.
ಕಾರ್ಯದರ್ಶಿಗಳಾದ
ಶಿವಕುಮಾರ್ ಉಳವಿ ಕೋರಿದ್ದಾರೆ.

DVS College of Arts and Science  ಕನಸುಗಳ ಸಾಕಾರಕ್ಕೆ ಶಿಕ್ಷಣ ಪಡೆಯುವ ಹಂತದಿಂದಲೇ ಪ್ರಯತ್ನಿಸಬೇಕು- ಎಸ್.ಪಿ.ದಿನೇಶ್

0

DVS College of Arts and Science  ಶಿಕ್ಷಣದಲ್ಲಿ ಪ್ರಗತಿ ಸಾಧಿಸುವುದು ಉತ್ತಮ ಜೀವನ ರೂಪಿಸಿಕೊಳ್ಳಲು ನೆರವಾಗುತ್ತದೆ ಎಂದು ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಅಭಿಪ್ರಾಯಪಟ್ಟರು.

ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಲಾ ಕಾಲೇಜಿನ ಹಂತದಲ್ಲಿಯೇ ನೀವು ಅಧ್ಯಯನ ಮಾಡುವ ಆಸಕ್ತಿ ವಿಷಯಗಳ ಬಗ್ಗೆ ಅರಿತುಕೊಳ್ಳಬೇಕು. ನಿಮ್ಮ ಇಷ್ಟದ ವಿಷಯದಲ್ಲಿ ಉನ್ನತ ಪದವಿ ಪಡೆಯಬೇಕು. ಇದರಿಂದ ಭವಿಷ್ಯದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ನಿಮ್ಮ ಕನಸುಗಳನ್ನು ಸಾಕಾರಗೊಳಿಸಲು ಶಿಕ್ಷಣ ಪಡೆಯುವ ವೇಳೆಯಿಂದಲೇ ಹಂತ ಹಂತವಾಗಿ ಪ್ರಯತ್ನ ಆರಂಭಿಸಬೇಕು ಎಂದು ತಿಳಿಸಿದರು.

DVS College of Arts and Science ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೆ.ಭಾಸ್ಕರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಜೀವನದಲ್ಲಿ ವಿದ್ಯಾಭ್ಯಾಸ, ಓದು ತುಂಬಾ ಮುಖ್ಯ. ಎಲ್ಲರೂ ತಮ್ಮ ಗುರಿಯನ್ನು ಸಾಧಿಸುವಲ್ಲಿ ಮುನ್ನುಗ್ಗುವ ಅಭಿಲಾಷೆ ಹೊಂದಬೇಕು. ಗುರು ಹಿರಿಯರ ಮಾರ್ಗದರ್ಶನ ಪಡೆದು ಯಶಸ್ಸಿನತ್ತ ಮುನ್ನಡೆಯಬೇಕು. ನಿಮ್ಮ ಗುರಿ ಸಾಧಿಸುವ ಜತೆಯಲ್ಲಿ ಸಮಾಜಮುಖಿ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ದ್ವಿತೀಯ, ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿಗಳು ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತಿಸಿದರು. ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಖಜಾಂಚಿ ಬಿ.ಗೋಪಿನಾಥ್, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಿ.ಇ.ರುದ್ರೇಶ್, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

The Karnataka State Forest Industries Corporation Limited ಕರ್ನಾಟಕ ಅರಣ್ಯ ನಿಗಮದ ₹1.08 ಕೋಟಿ ಲಾಭಾಂಶದ ಚೆಕ್ ‘ಸಿಎಂ’ಗೆ ಹಸ್ತಾಂತರಿಸಿದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ

0

The Karnataka State Forest Industries Corporation Limited ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದಿಂದ 1.08 ಕೋಟಿ ರೂ. ಲಾಭಾಂಶದ ಚೆಕ್ಕನ್ನು ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಸನ್ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.