Thursday, May 7, 2026
Thursday, May 7, 2026
Home Blog Page 53

Shivamogga – Bhadravati Urban Development Authority ಶ್ರೀವಿನಾಯಕ‌ ದೇವಾಲಯ ಪ್ರತಿಷ್ಠಾಪನಾ ಮಹೋತ್ಸವ : ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ

0

Shivamogga – Bhadravati Urban Development Authority ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ ವಜ್ರೇಶ್ವರಿ ವಿನಾಯಕ ದೇವಾಲಯದಲ್ಲಿ ” ಶ್ರೀ ಮಹಾಗಣಪತಿ ಸ್ಥಿರಮೂರ್ತಿ ಪ್ರತಿಷ್ಠಾಪನೆಯ 22ನೇ ವರ್ಷದ ವಾರ್ಷಿಕೋತ್ಸವ” ಅಂಗವಾಗಿ ಗಣ ಹೋಮ ಕುಂಭಾಭಿಷೇಕ ಪೂಜಾ ಕಾರ್ಯಕ್ರಮಗಳು ಹಾಗೂ ವಾಸನ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಆಯೋಜನೆ ಮಾಡಿದ್ದ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್ಎಸ್ ಸುಂದರೇಶ್ ಅವರು ಚಾಲನೆ ನೀಡಿದರು.

Shivamogga – Bhadravati Urban Development Authority ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ವಜ್ರೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ದೇವರಾಜ್ , ಸಿಟಿ ಕೋ ಆಪರೇಟಿನ ಬ್ಯಾಂಕಿನ ಅಧ್ಯಕ್ಷರಾದ ಕೆ.ರಂಗನಾಥ್, ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ನರಸಿಂಹ ಗಂಧದ ಮನೆ, ಪ್ರಮುಖರಾದ ಸಿ ರವಿ, ಕೆಆರ್ ಸುರೇಶ್, ಕೇಶವಮೂರ್ತಿ ,ಶಿವು ಎಸ್.ಸೋಮೇಶ್, ಪುರುಷೋತ್ತಮ್ ,ದಾನೇಶ್ ,ಕೇಶವಮೂರ್ತಿ, ಕಾತಿ ರಘು, ಮಾರುತಿ ಸಿ, ರಾಜೇಶ್ ಮಂದಾರ, ವಿನಯ್, ಬಸವರಾಜ್,ಸಂದೀಪ್ ದೇವಸ್ಥಾನದ ಪ್ರಧಾನ ಅರ್ಚಕರಾದ ಯೋಗೀಶ್ ಉಡುಪ ಹಾಗೂ ಸಮಿತಿಯ ಸದಸ್ಯರುಗಳು ಹೊಸಮನೆ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.

Akashavani Bhadravati ಭದ್ರಾವತಿ ಆಕಾಶವಾಣಿ ವಸಂತೋತ್ಸವ ಯುವಕವಿಗೋಷ್ಠಿ : ಕವಿಗಳಿಗೆ ಕವಿತೆ ಕಳಿಸಲು ಪ್ರಕಟಣೆ

0

Akashavani Bhadravati ಆಕಾಶವಾಣಿ ಭದ್ರಾವತಿಯಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ / ಯುವತಿಯರಿಂದ ವಸಂತೋತ್ಸವ ಯುವಕವಿ ಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗಿದೆ.
ಕವನ ಕಳುಹಿಸುವವರು ವಸಂತಮಾಸದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆ ಹಾಗೂ ವಸಂತಮಾಸಕ್ಕೆ ಸಂಬಂಧಿಸಿದಂತೆ ಕವನಗಳನ್ನು ಕಳುಹಿಸಬಹುದಾಗಿದೆ. Akashavani Bhadravati 18 ರಿಂದ 35 ರ ವಯೋಮಾನದವರು ಈ ಕವಿಗೋಷ್ಥಿಗೆ ಕವನಗಳನ್ನು ಏಪ್ರಿಲ್ 15 ರೊಳಗಾಗಿ ನಿಲಯ ನಿರ್ದೇಶಕರು, ವಸಂತೋತ್ಸವ ಯುವಕವಿಗೋಷ್ಠಿ ವಿಭಾಗ, ಆಕಾಶವಾಣಿ, ಜೆ.ಪಿ.ಎಸ್.ಕಾಲೋನಿ ಭದ್ರಾವತಿ 577302 ಗೆ ಕಳುಹಿಸಬಹುದಾಗಿದ್ದು ಆಯ್ಕೆಯಾದ ಕವನಗಳನ್ನು ಬರೆದ ಕವಿಗಳೆ ಶ್ರೋತೃಗಳ ಸಮ್ಮುಖದಲ್ಲಿ ಪ್ರಸ್ತುತ ಪಡಿಸಲು ಅವಕಾಶ ಕಲ್ಪಿಸಲಾಗುವುದು ಹಾಗು ಕವನಗಳನ್ನು ಗಾಯನ ರೂಪದಲ್ಲಿ ಆಕಾಶವಾಣಿಯ ಕಲಾವಿದರಿಂದ ವೇದಿಕೆಯಲ್ಲಿ ಪ್ರಸ್ತುತಪಡಿಸಲಾಗುವುದು ಎಂದು ಕಾರ್ಯಕ್ರಮದ ಮುಖ್ಯಸ್ಥ ಎಸ್.ಆರ್. ಭಟ್ ತಿಳಿಸಿರುತ್ತಾರೆ.

Sahyadri Narayana Multi Specialty Hospital ಅಪರೂಪದ ಕಾಯಿಲೆ, “ಮೈಯಾಸ್ಥೆನಿಕ್ ಕ್ರೈಸಿಸ್” ಪೀಡಿತ ರೋಗಿಗೆ ಚಿಕಿತ್ಸೆ: ಶಿವಮೊಗ್ಗ ಸಹ್ಯಾದ್ರಿ ಎನ್.ಎಚ್.ಆಸ್ಪತ್ರೆ ವೈದ್ಯರ ಸಾಧನೆ

0

Sahyadri Narayana Multi Specialty Hospital ಅಪರೂಪದ ಆಟೋ ಇಮ್ಯೂನ್ (ನರ ಮತ್ತು ಸ್ನಾಯು ಸಂಬಂಧಿ) ಕಾಯಿಲೆಗೆ ಚಿಕಿತ್ಸೆ ನೀಡಲು ಆರಂಭವಾದ ಸಂಕೀರ್ಣ ಶಸ್ತ್ರಚಿಕಿತ್ಸೆಯೊಂದು, ನೋಡನೋಡುತ್ತಿದ್ದಂತೆ ಜೀವನ ಮತ್ತು ಮರಣದ ನಡುವಿನ ಹೋರಾಟವಾಗಿ ಬದಲಾಯಿತು. ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರ ತಂಡ, 48 ವರ್ಷದ ರೋಗಿಯನ್ನು ಉಸಿರಾಟ ವೈಫಲ್ಯದ ಅಂಚಿನಿಂದ ಪಾರುಮಾಡುವಲ್ಲಿ ಯಶಸ್ವಿಯಾಗಿದ್ದು, ಸಂಕೀರ್ಣ ವೈದ್ಯಕೀಯ ಸವಾಲನ್ನು ಗೆದ್ದು ರೋಗಿಗೆ ಮರುಜೀವ ನೀಡಿದೆ.
ಕನ್ಸಲ್ಟೆಂಟ್ ನ್ಯೂರಾಲಜಿಸ್ಟ್ ಡಾ. ಹಂಸ ಕೆ.ಎಂ. ಅವರ ನೇತೃತ್ವದಲ್ಲಿ ನಡೆದ ಈ ಚಿಕಿತ್ಸೆಯು, ‘ಮೈಯಾಸ್ಥೆನಿಕ್ ಕ್ರೈಸಿಸ್’ (ಉಸಿರಾಟವನ್ನು ನಿಯಂತ್ರಿಸುವ ಸ್ನಾಯುಗಳು ಹಠಾತ್ತನೆ ವಿಫಲವಾಗುವ ತುರ್ತು ಸ್ಥಿತಿ) ನಂತಹ ಸಂದರ್ಭಗಳಲ್ಲಿ ತ್ವರಿತ ರೋಗನಿರ್ಣಯ ಮತ್ತು ವಿವಿಧ ವಿಭಾಗಗಳ ವೈದ್ಯರ ಸಮನ್ವಯದ ಚಿಕಿತ್ಸೆ ಎಷ್ಟು ಮುಖ್ಯ ಎಂಬುದನ್ನು ತೋರಿಸಿಕೊಟ್ಟಿದೆ.
​ಏನಿದು ಪ್ರಕರಣ?
ಸ್ನಾಯುಗಳ ದೌರ್ಬಲ್ಯ ಮತ್ತು ವಿಪರೀತ ಆಯಾಸದ ಸಮಸ್ಯೆಯೊಂದಿಗೆ ರೋಗಿ ಮೊದಲು ನ್ಯೂರಾಲಜಿ ಹೊರರೋಗಿ ವಿಭಾಗಕ್ಕೆ (OPD) ಬಂದಿದ್ದರು ಎಂದು ಡಾ. ಹಂಸ ತಿಳಿಸಿದರು. ತಪಾಸಣೆ ನಡೆಸಿದಾಗ ಅವರಿಗೆ ‘ಮೈಯಾಸ್ಥೇನಿಯಾ ಗ್ರಾವಿಸ್’ (ದೀರ್ಘಕಾಲದ ನರ ಮತ್ತು ಸ್ನಾಯು ಸಂಬಂಧಿತ ಕಾಯಿಲೆ) ಇರುವುದು ದೃಢಪಟ್ಟಿತು. ಹೆಚ್ಚಿನ ಸ್ಕ್ಯಾನಿಂಗ್ ನಡೆಸಿದಾಗ ಅವರ ಎದೆಯ ಭಾಗದಲ್ಲಿ 12 ಸೆಂ.ಮೀ.ಗೂ ದೊಡ್ಡದಾದ ಗಡ್ಡೆ (ಮೀಡಿಯಾಸ್ಟಿನಲ್ ಮಾಸ್) ಇರುವುದು ಕಂಡುಬಂತು.
ಆರಂಭಿಕ ಬಯಾಪ್ಸಿ ವರದಿಯು ಇದು ಲಿಂಫೋಮಾ ಇರಬಹುದು ಎಂದು ಸೂಚಿಸಿತ್ತಾದರೂ, ವೈದ್ಯಕೀಯ ತಂಡವು ಆಳವಾದ ತಪಾಸಣೆಗೆ ಮುಂದಾಯಿತು. ಇಮ್ಯುನೊಹಿಸ್ಟೊಕೆಮಿಸ್ಟ್ರಿ (IHC) ಪರೀಕ್ಷೆಯ ಮೂಲಕ ಇದು ‘ಥೈಮೋಮಾ’ (ಥೈಮಸ್ ಗ್ರಂಥಿಯ ಗೆಡ್ಡೆ) ಎಂದು ಖಚಿತಪಡಿಸಿಕೊಳ್ಳಲಾಯಿತು. ಇದು ಸಾಮಾನ್ಯವಾಗಿ ಮೈಯಾಸ್ಥೇನಿಯಾ ಗ್ರಾವಿಸ್‌ಗೆ ಸಂಬಂಧಿಸಿರುತ್ತದೆ.​ಮೊದಲಿಗೆ ಔಷಧಗಳ ಮೂಲಕ ರೋಗಿಯನ್ನು ಸ್ಥಿರಗೊಳಿಸಿದ ನಂತರ, ಯಶಸ್ವಿಯಾಗಿ ‘ಥೈಮೆಕ್ಟಮಿ’ ಮಾಡಲಾಯಿತು. ಎದೆಯ ಎಲುಬಿನ ಹಿಂಭಾಗದಲ್ಲಿರುವ ಥೈಮಸ್ ಗ್ರಂಥಿಯನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕುವುದೇ ಈ ಪ್ರಕ್ರಿಯೆ. ಸಿಟಿವಿಎಸ್ (CTVS) ಶಸ್ತ್ರಚಿಕಿತ್ಸಕರಾದ ಡಾ. ಬಾಲಸುಬ್ರಮಣಿ ಆರ್‌ ಅವರು ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿದರು.
ಶಸ್ತ್ರಚಿಕಿತ್ಸೆಯ ನಂತರದ ಸವಾಲು
ಆದರೆ, ಹೋರಾಟ ಇಲ್ಲಿಗೆ ಮುಗಿದಿರಲಿಲ್ಲ. ಶಸ್ತ್ರಚಿಕಿತ್ಸೆಯ ಒತ್ತಡದಿಂದಾಗಿ ರೋಗಿಯು ‘ಮೈಯಾಸ್ಥೆನಿಕ್ ಕ್ರೈಸಿಸ್‌’ಗೆ ತುತ್ತಾದರು. ಅವರ ಉಸಿರಾಟದ ಸ್ನಾಯುಗಳು ತೀವ್ರವಾಗಿ ದುರ್ಬಲಗೊಂಡವು. ತಕ್ಷಣವೇ ಚಿಕಿತ್ಸೆ ನೀಡದಿದ್ದರೆ ಪ್ರಾಣಕ್ಕೇ ಕುತ್ತು ತರುವಂತಹ ಉಸಿರಾಟ ವೈಫಲ್ಯದ ಸ್ಥಿತಿ ಎದುರಾಯಿತು.”ಪರಿಸ್ಥಿತಿಯ ಗಂಭೀರತೆಯನ್ನು ಅರಿತ ವೈದ್ಯರ ತಂಡ ತಕ್ಷಣ ಕಾರ್ಯಪ್ರವೃತ್ತವಾಯಿತು. ಶಸ್ತ್ರಚಿಕಿತ್ಸೆಯ ಒತ್ತಡವು ಇಂತಹ ವಿಷಮ ಸ್ಥಿತಿಯನ್ನು ಪ್ರಚೋದಿಸುವುದು ತಿಳಿದಿರುವ ವಿಷಯವೇ, ಹೀಗಾಗಿ ಇಲ್ಲಿ ವೇಗವೇ ಮದ್ದು,” ಎಂದು ಡಾ. ಹಂಸ ಹೇಳಿದರು. ರೋಗಿಯನ್ನು ತಕ್ಷಣವೇ ಐಸಿಯುಗೆ (ICU) ದಾಖಲಿಸಿ, ಕೃತಕ ಉಸಿರಾಟದ ವ್ಯವಸ್ಥೆಯನ್ನು (ಇಂಟ್ಯೂಬೇಷನ್) ಅಳವಡಿಸಲಾಯಿತು.
​ಸಮನ್ವಯ ಚಿಕಿತ್ಸೆಯಿಂದ ಚೇತರಿಕೆ
ನಂತರದ ಚೇತರಿಕೆ ಪ್ರಕ್ರಿಯೆಯು ‘ಸಮನ್ವಯ ವೈದ್ಯಕೀಯ ಚಿಕಿತ್ಸೆ’ಗೆ ಅತ್ಯುತ್ತಮ ಉದಾಹರಣೆಯಂತಿದೆ. ನೆಫ್ರಾಲಜಿಸ್ಟ್ ಡಾ. ರವಿ ಅವರು ಅದೇ ದಿನ ಪ್ಲಾಸ್ಮಾಫೆರೆಸಿಸ್ (ರಕ್ತದಲ್ಲಿನ ಪ್ರತಿಕಾಯಗಳನ್ನು ಶುದ್ಧೀಕರಿಸುವ ಪ್ರಕ್ರಿಯೆ) ಆರಂಭಿಸಿದರು. ಕ್ರಿಟಿಕಲ್ ಕೇರ್ ಅರಿವಳಿಕೆ ತಜ್ಞ ಡಾ. ದೀಪಕ್ ಶೆಟ್ಟಿ ಅವರು ವೆಂಟಿಲೇಟರ್ ನಿರ್ವಹಣೆ ಮಾಡಿದರೆ, ಶ್ವಾಸಕೋಶ ತಜ್ಞ ಡಾ. ಅಜಯ್ ಅವರು ಶ್ವಾಸಕೋಶದ ಕಾರ್ಯಕ್ಷಮತೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಕೃತಕ ಉಸಿರಾಟದ ಕೊಳವೆ ತೆಗೆಯಲು (extubation) ಮಾರ್ಗದರ್ಶನ ನೀಡಿದರು.​ಕೇವಲ ಯಂತ್ರಗಳಲ್ಲದೆ, ದೈಹಿಕ ಚಿಕಿತ್ಸೆಗೂ ಒತ್ತು ನೀಡಲಾಯಿತು. ನ್ಯೂರೋ ಫಿಸಿಯೋಥೆರಪಿಸ್ಟ್ ನವನೀದನ್ ಕೃಷ್ಣನ್ ಅವರು ಎದೆ ಮತ್ತು ಕೈಕಾಲುಗಳಿಗೆ ಅಗತ್ಯವಾದ ಫಿಸಿಯೋಥೆರಪಿ ನೀಡಿದರೆ, ಸ್ಪೀಚ್ ಥೆರಪಿಸ್ಟ್ ಜೀವನ್ ಅವರು ರೋಗಿಯು ಸುರಕ್ಷಿತವಾಗಿ ಆಹಾರ ನುಂಗುವ ಸಾಮರ್ಥ್ಯ ಮರಳಿ ಪಡೆಯಲು ಶ್ರಮಿಸಿದರು.
​ಈ ಸಂಘಟಿತ ಪ್ರಯತ್ನಕ್ಕೆ ಫಲ ಸಿಕ್ಕಿತು. ಮೂರು ಸುತ್ತಿನ ಪ್ಲಾಸ್ಮಾಫೆರೆಸಿಸ್ ಮತ್ತು ತೀವ್ರ ನಿಗಾ ಘಟಕದ ಆರೈಕೆಯ ನಂತರ ರೋಗಿಯ ಉಸಿರಾಟದ ಶಕ್ತಿ ಮರಳಿತು. 4ನೇ ದಿನದಂದು ಅವರನ್ನು ವೆಂಟಿಲೇಟರ್‌ನಿಂದ ಹೊರತೆಗೆಯಲಾಯಿತು, 5ನೇ ದಿನದಂದು ವಾರ್ಡ್‌ಗೆ ಸ್ಥಳಾಂತರಿಸಿ, ನಂತರ ಸುಸ್ಥಿತಿಯಲ್ಲಿ ಡಿಸ್ಚಾರ್ಜ್ ಮಾಡಲಾಯಿತು.
​Sahyadri Narayana Multi Specialty Hospital ಈ ಬಗ್ಗೆ ಮಾತನಾಡಿದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ವರ್ಗೀಸ್ ಪಿ. ಜಾನ್, “ಅತ್ಯಂತ ಸಂಕೀರ್ಣ ವೈದ್ಯಕೀಯ ಸವಾಲುಗಳನ್ನು ನಿಖರತೆ ಮತ್ತು ಕಾಳಜಿಯಿಂದ ನಿಭಾಯಿಸಲು ನಾವು ಬದ್ಧರಾಗಿದ್ದೇವೆ. ತಕ್ಷಣದ ಮತ್ತು ಉನ್ನತ ಮಟ್ಟದ ಚಿಕಿತ್ಸೆ ಅಗತ್ಯವಿರುವ ಮೈಯಾಸ್ಥೇನಿಯಾ ಗ್ರಾವಿಸ್ ಪ್ರಕರಣಗಳನ್ನು ನಿರ್ವಹಿಸುವ ನಮ್ಮ ಸಾಮರ್ಥ್ಯಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಭಾಗದಲ್ಲಿ ಸುಧಾರಿತ ನರರೋಗ ಚಿಕಿತ್ಸೆಗೆ ನಮ್ಮ ಆಸ್ಪತ್ರೆ ಪ್ರಮುಖ ತಾಣವಾಗಿದೆ ಎಂಬುದನ್ನು ಇದು ಸಾಬೀತುಪಡಿಸಿದೆ,” ಎಂದು ಹರ್ಷ ವ್ಯಕ್ತಪಡಿಸಿದರು, ಹಾಗೂ ಈ ಕ್ಲೀಷ್ಠಕರ ಶಸ್ತ್ರ ಚಿಕಿತ್ಸೆಯಲ್ಲಿ ಬಾಗವಹಿಸಿದ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗಳನ್ನು ಅಭಿನಂದಿಸಿದರು.

Shiralakoppa Police ವ್ಯಕ್ತಿ ನಾಪತ್ತೆ. ಶಿರಾಳಕೊಪ್ಪ ಪೊಲೀಸ್ ಠಾಣೆ ಮಾಹಿತಿ ಪ್ರಕಟಣೆ

0

Shiralakoppa Police ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಬಿದರಿಕೊಪ್ಪ ವಾಸಿ ಶೋಭಾಬಾಯಿ ಎಂಬುವವರ ಪತಿ ಗಣೇಶನಾಯ್ಕ್ ಎಂಬ 40 ವರ್ಷದ ವ್ಯಕ್ತಿ ಮಾ.04 ರಂದು ಮನೆಯಿಂದ ಶಿರಾಳಕೊಪ್ಪಕ್ಕೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಗೋದಿ ಮೈಬಣ್ಣ ಹೊಂದಿದ್ದು, ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಪ್ಯಾಂಟ್ ಹಾಗೂ ನೀಲಿ ಬಣ್ಣದ ಅಂಗಿ ಧರಿಸಿರುತ್ತಾರೆ.
ಈತನ ಬಗ್ಗೆ ಸುಳಿವು ದೊರೆತಲ್ಲಿ ಶಿರಾಳಕೊಪ್ಪ ಪೊಲೀಸ್ ಠಾಣೆ ದೂ.ಸಂ.: 8722983310/ 9480803367 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

ಮಾರ್ಚ್ 23. ಜಿಲ್ಲಾಡಳಿತದಿಂದ ಶರಣ ಶ್ರೀದೇವರ ದಾಸಿಮಯ್ಯ ಜಯಂತಿ ಆಚರಣೆಗೆ ಆಯೋಜನೆ

0

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನೇಕಾರ ಸಮುದಾಯಗಳ ಒಕ್ಕೂಟ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಾ. 23 ರ ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಹೊನ್ನಾಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಡಾ. ಶಿವಪ್ಪ ಡಿ. ಇವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದೆ.

ನೀರಿನ ಕಂದಾಯ ಪಾವತಿಗೆ ಮಾರ್ಚ್ 22 ರಂದು ವಿಶೇಷ ಕೌಂಟರ್ ವ್ಯವಸ್ಥೆ

0

ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ಶಿವಮೊಗ್ಗ ಇವರ ವತಿಯಿಂದ 2025-26 ನೇ ಸಾಲಿನ ಮಾರ್ಚ್ 22 ರ ಭಾನುವಾರದಂದು ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ಕೆಳಕಂಡ ಸ್ಥಳಗಳಲ್ಲಿ ತೆರೆಯಲಾಗಿದೆ.
ರಾಗಿಗುಡ್ಡ ಕೊನೆ ಬಸ್‌ಸ್ಟಾಪ್ ಹತ್ತಿರ, ಗೋಪಾಳ ಕೊನೆ ಬಸ್‌ಸ್ಟಾಪ್ ಹತ್ತಿರ, ಗಾಂಧೀಬಜಾರ್ ಬಸವೇಶ್ವರ ದೇವಸ್ಥಾನದ ಆವರಣ, ಅಶೋಕನಗರ ನಂದಿನ ಬೂತ್, ಪೊಲೀಸ್ ಕ್ವಾಟ್ರಸ್ ಹತ್ತಿರ ಹಾಗೂ ಗಾಡಿಕೊಪ್ಪ ಸರ್ಕಾರಿ ಶಾಲೆ ಹತ್ತಿರ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗಿದೆ. ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ಅಂತಹವರ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಬೇಕೆಂದು ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

DVS College of Arts, Science ಹೊಸ ರೀತಿಯ ಶಿಕ್ಷಣ ಅಗತ್ಯ. ಬದಲಾವಣೆಗೆ ನಾವು ಸನ್ನದ್ಧರಾಗಬೇಕು: ಪ್ರೊ.ಶರತ್ ಅನಂತ ಮೂರ್ತಿ

0

DVS College of Arts, Science ವಿಜ್ಞಾನ ಮತ್ತು ತಂತ್ರಜ್ಞಾನ ಅಳವಡಿಸಿಕೊಳ್ಳುವುದರಿಂದ ಹೊಸತನದ ಕಲಿಕೆ ಸಾಧ್ಯ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಭೌತಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದ ಅಂತರಶಿಸ್ತೀಯ ಸಂಶೋಧನೆ ಮತ್ತು ನಾವೀನ್ಯತೆ ವಿಷಯ ಕುರಿತ ಎರಡು ದಿನದ ರಾಷ್ಟ್ರೀಯ ವಿಜ್ಞಾನ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಹೊಸ ಆಲೋಚನೆಗಳು, ಹೊಸ ರೀತಿಯ ಶಿಕ್ಷಣ ನಮ್ಮ ದೇಶಕ್ಕೆ ಬಹುಮುಖ್ಯವಾಗಿ ಅಗತ್ಯವಾಗಿದೆ. ನಾವು ಹೊಸ ಬದಲಾವಣೆಗೆ ಸನ್ನದ್ಧರಾಗಬೇಕು. ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಧನಾತ್ಮಕ ಉಪಯೋಗಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ಎಚ್.ಕೇಶವ ಮಾತನಾಡಿ, ಸಂಶೋಧನೆ ಮತ್ತು ನಾವೀನ್ಯತೆ ಬಹುಪ್ರಾಮುಖ್ಯವಾದ ವಿಚಾರ. ಹೊಸ ವಿಚಾರಕ್ಕೆ, ಹೊಸತನಕ್ಕೆ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ವಿಜ್ಞಾನಿ ಡಾ. ಸಿ.ವಿ.ಯೇಳಮಗ್ಗದ ಮಾತನಾಡಿ, ಹೊಸ ಆವಿಷ್ಕಾರಗಳ ಬಗ್ಗೆ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ನಮ್ಮ ಎದುರು ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಐಐಟಿ ಧಾರವಾಡ ಡೀನ್ ಡಾ. ಎಸ್.ಎಂ.ಶಿವಪ್ರಸಾದ್ ಮಾತನಾಡಿ, ಸಂಶೋಧನಾ ಕ್ಷೇತ್ರದಲ್ಲಿನ ಹೊಸ ಸಾಧ್ಯತೆಗಳ ವಿದ್ಯಾರ್ಥಿಗಳು ಅಧ್ಯಯನ ನಡೆಸಬೇಕು ಎಂದು ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಬಸಪ್ಪಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಕೃತಿ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

DVS College of Arts, Science ಎಸ್‌ಪಿಆರ್‌ಒಸಿ ಮಾಜಿ ಗ್ರೂಪ್ ನಿರ್ದೇಶಕ ಎಚ್.ಡಿ.ಆನಂದ, ಸ್ಕೂಲ್ ಆಫ್ ಸೈನ್ಸಸ್‌ನ ಡಾ. ಎಸ್.ಆರ್.ರಮೇಶ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎಂ.ಆರ್.ಹರೀಶ್ ಕುಮಾರ್, ದೇಶೀಯ ಸಮಿತಿ ಆಡಳಿತ ಮಂಡಳಿ, ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು.

D.S.Arun ಕುವೆಂಪು ವಿವಿ ಕುಲಸಚಿವರ ವಿರುದ್ಧ ಭ್ರಷ್ಠಾಚಾರ ಆರೋಪ: ಸರ್ಕಾರ ಮದ್ಯೆ ಪ್ರವೇಶಿಸಬೇಕು- ಶಾಸಕ ಡಿ.ಎಸ್.ಅರುಣ್

0

ಮಲೆನಾಡು ಭಾಗದ ಹಾಗೂ ಶಿವಮೊಗ್ಗ ಜಿಲ್ಲೆಯ ಹೆಮ್ಮೆಯಾಗಿರುವ ಕುವೆಂಪು ವಿಶ್ವವಿದ್ಯಾಲಯ ಗೌರವ ಮತ್ತು ಘನತೆಗೆ ಧಕ್ಕೆಯಾಗುವಂತಹ ಬೆಳವಣಿಗೆಗಳ ಕುರಿತು ವಿಧಾನ ಪರಿಷತ್‌ನಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ಅವರು, ವಿಶ್ವವಿದ್ಯಾಲಯದ ಆಡಳಿತದಲ್ಲಿ ಉಂಟಾಗಿರುವ ಗೊಂದಲಗಳು ಹಾಗೂ ಕುಲಸಚಿವರ ವಿರುದ್ಧ ಕೇಳಿಬರುತ್ತಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್‌ನ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು,ಕುವೆಂಪು ವಿಶ್ವವಿದ್ಯಾಲದ ಕುಲಸಚಿವರ ವಿರುದ್ಧ ವಿವಿಧ ಹಗರಣಗಳು ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದಂತಹ ಗಂಭೀರ ಆರೋಪಗಳು ಕೇಳಿಬಂದಿರುವುದು ಅತ್ಯಂತ ಚಿಂತಾಜನಕ ವಿಷಯವಾಗಿದೆ ಎಂದು ಹೇಳಿದರು.

ಅಲ್ಲದೆ, ಕುಲಸಚಿವರು ಹಾಗೂ ಕುಲಪತಿಗಳ ನಡುವೆ ಹೊಂದಾಣಿಕೆ ಕೊರತೆಯಿರುವುದು ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆ ಮತ್ತು ಶೈಕ್ಷಣಿಕ ವಾತಾವರಣದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.

ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುವೆಂಪು ವಿಶ್ವವಿದ್ಯಾಲಯದ ಘನತೆ ಮತ್ತು ವಿಶ್ವಾಸವನ್ನು ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ಯಾವುದೇ ರೀತಿಯ ಗೊಂದಲಗಳು ಮತ್ತು ಆರೋಪಗಳು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ತಕ್ಷಣ ಸ್ಪಷ್ಟ ಕ್ರಮ ಕೈಗೊಳ್ಳಬೇಕು ಎಂದು ಅವರು ದೃಢವಾಗಿ ತಿಳಿಸಿದರು.

D.S.Arun ಈ ವಿಷಯದ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವರು ತಕ್ಷಣ ಗಮನ ಹರಿಸಿ, ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ವಿಶ್ವವಿದ್ಯಾಲಯದ ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಶಿಸ್ತನ್ನು ಕಾಪಾಡಿ ಸಂಸ್ಥೆಯ ಗೌರವವನ್ನು ಉಳಿಸಬೇಕೆಂದು ಅವರು ಒತ್ತಾಯಿಸಿದರು.

ಈ ವಿಷಯದ ಕುರಿತು ಉನ್ನತ ಶಿಕ್ಷಣ ಸಚಿವರು ಪ್ರತಿಕ್ರಿಯಿಸಿ, ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇನೆ ಎಂದು ತಿಳಿಸಿ,ತಕ್ಷಣ ಅಗತ್ಯ ಕ್ರಮ ಕೈಗೊಂಡು ಸಂಬಂಧಿಸಿದ ಅಧಿಕಾರಿಯನ್ನು ವರ್ಗಾವಣೆ ಮಾಡಲು ನಿರ್ದೇಶನ ನೀಡಿದ್ದೇನೆ ಎಂದು ಭರವಸೆ ನೀಡಿದರು.

Chamber Of Commerce Shivamogga ತರೀಕೆರೆ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಎಸ್.ಶಂಕರನಾರಾಯಣರಿಗೆ ಸನ್ಮಾನ

0

Chamber Of Commerce Shivamogga ಸಾಹಿತಿ ಹಾಗೂ ಬೆಂಗಳೂರು ಆಕಾಶವಾಣಿ ಮುಖ್ಯಸ್ಥರಾದ ಡಾ. ಎ.ಎಸ್.ಶಂಕರ ನಾರಾಯಣ ರವರಿಗೆ ಈ ಬಾರಿ ತರೀಕೆರೆ ತಾಲೂಕಿನ 19 ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಲ, ಭದ್ರಾವತಿ ಶಿವಮೊಗ್ಗ ಆಕಾಶವಾಣಿ ಕೇಳುಗರ ಬಳಗ, ಆರ್ ಜೆ ಬಳಗ, ನನ್ನ ಕನಸಿನ ಶಿವಮೊಗ್ಗ ಸಂಸ್ಥೆಗಳ ವತಿಯಿಂದ ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಎಂ.ಎನ್.ಸುಂದರರಾಜ್ ರವರು ಮಾತನಾಡಿ, ಸನ್ಮಾನಿತರಿಗೆ ಈ ಗೌರವ ಸಿಕ್ಕಿರೋದು ತುಂಬಾ ಸಂತೋಷದ ವಿಷಯ. ಅವರಿಂದ ಇನ್ನೂ ಹೆಚ್ಚಿನ ಸಾಹಿತ್ಯವನ್ನು ನಾವೆಲ್ಲ ನಿರೀಕ್ಷಿಸುತ್ತಿದ್ದೇವೆ ಎಂದು ತಿಳಿಸಿದರು.

ಜಿಲ್ಲಾ ಸರ್ವೋದಯ ಮಂಡಲದ ಅಧ್ಯಕ್ಷರಾದ ಆರ್.ಮನೋಹರ್ ಮೂಲತಃ ತರೀಕೆರೆಯವರೇ ಆದ ಶಂಕರ್ ನಾರಾಯಣ್ ತಮ್ಮ ಬರಹದ ಮೂಲಕ ಆಕಾಶವಾಣಿ ಸಂದರ್ಶನಗಳ ಮೂಲಕ ನಾಡಿಗೆ ಚಿರಪರಿಚಿತರಾಗಿದ್ದಾರೆ. ಅವರ ಸಾಹಿತ್ಯ ಸೇವೆ ಹೀಗೆಯೇ ಮುಂದುವರೆಯಲಿ ಎಂದು ಶುಭ ಹಾರೈಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಶಂಕರ ನಾರಾಯಣ ಅವರ ಸಾಧನೆ ಸಾಕಷ್ಟು ಇದೆ. ಅವರ ಸಾಧನೆಗೆ ಸಿಕ್ಕ ಮನ್ನಣೆ ಇದು. ಅವರ ಸಾಹಿತ್ಯ ಕೃಷಿ ಇನ್ನೂ ಹೆಚ್ಚು ಹೆಚ್ಚು ಆಗಲಿ ಎಂದು ಶುಭ ಹಾರೈಸಿದರು.

Chamber Of Commerce Shivamogga ಇದೇ ಸಂದರ್ಭದಲ್ಲಿ ನನ್ನ ಕನಸಿನ ಶಿವಮೊಗ್ಗ ವೇದಿಕೆಯ ಎನ್.ಗೋಪಿನಾಥ್, ಆಕಾಶವಾಣಿ ಕೇಳುಗರ ಬಳಗದ ಚಿಕ್ಕಪ್ಪ ರಾಮೇಶ್ವರ, ಆಕಾಶವಾಣಿ ಆರ್ ಜೆ ಗಳಾದ ಗಣೇಶ್ ಕೆಂಚನಾಳ, ಸರ್ವೋದಯ ಮಂಡಲದ ಬಸವರಾಜಪ್ಪ, ರುದ್ರಪ್ಪ ಚೀಲೂರ್, ಪ್ರೊಫೆಸರ್ ಸತ್ಯನಾರಾಯಣ, ಬಿಂದು ವಿಜಯ ಕುಮಾರ ಉಪಸ್ಥಿತರಿದ್ದರು.

ತರೀಕೆರೆ ತಾಲೂಕಿನ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ದೊರೆತಿರುವುದು ಸೌಭಾಗ್ಯ. ತಮ್ಮ ಅಧಿಕಾರ ಅವಧಿಯಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿಗೆ ಹೆಚ್ಚು ಒತ್ತು ನೀಡುತ್ತೇನೆ ಎಂದು ಬೆಂಗಳೂರಿನ ಆಕಾಶವಾಣಿ ಮುಖ್ಯಸ್ಥರಾದ ಡಾ. ಎ.ಎಸ್.ಶಂಕರ ನಾರಾಯಣ ಅವರು ತಿಳಿಸಿದ್ದಾರೆ.

B.Y. Raghavendra ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗಿ

0

B.Y. Raghavendra ನವದೆಹಲಿಯಲ್ಲಿ ನಡೆದ ಕೇಂದ್ರ ಗೃಹ ಇಲಾಖೆಗೆ ಸಂಬಂಧಿಸಿದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು

B.Y. Raghavendra ಗೃಹ ವ್ಯವಹಾರ ಸಚಿವಾಲಯ ಮತ್ತು ಈಶಾನ್ಯ ಪ್ರದೇಶ ಅಭಿವೃದ್ಧಿ ಸಚಿವಾಲಯದ ಅನುದಾನ ಬೇಡಿಕೆಗಳ (2026–27) ಕರಡು ವರದಿಗಳನ್ನು ಮತ್ತು ಸಮಿತಿಯ ಹಿಂದಿನ ಶಿಫಾರಸುಗಳ ಕುರಿತು ತೆಗೆದುಕೊಂಡ ಕ್ರಮ ವರದಿಗಳನ್ನು ಪರಿಗಣಿಸಲು ಮತ್ತು ಅಂಗೀಕರಿಸಲು ಸಮಿತಿಯ ಸಭೆ ಏರ್ಪಡಿಸಲಾಗಿತ್ತು.