Monday, February 9, 2026
Monday, February 9, 2026
Home Blog Page 53

ಪ್ರವಾಸಿ ಆಕರ್ಷಣೆ ಪಡೆದ ” ಚೆಲ್ ಸ್ನೇಕ್ ಹೆಡ್” ಮೀನು

0

ಸುಮಾರು 80 ವರ್ಷಗಳ ಕಾಲ ಕಾಣೆಯಾಗಿದ್ದ ವಿರಳ ತಾಜಾ ನೀರಿನ ಮೀನು ‘ಚೆಲ್ ಸ್ನೇಕ್‌ಹೆಡ್’ ಭಾರತದ ಹಿಮಾಲಯ ಪ್ರದೇಶದಲ್ಲಿ ವಿಜ್ಞಾನಿಗಳು ಮತ್ತೆ ಪತ್ತೆಹಚ್ಚಿದ್ದಾರೆ.

ಈ ಮೀನಿನ ವೈಜ್ಞಾನಿಕ ಹೆಸರು Channa amphibeus..

ಈ ಮೀನು ಕೊನೆಯದಾಗಿ 1933 ರಲ್ಲಿ ದಾಖಲಾಗಿತ್ತು. ಆ ನಂತರ ದಶಕಗಳ ಕಾಲ ಇದರ ಯಾವುದೇ ಪತ್ತೆ ಅಥವಾ ದೃಢ ದಾಖಲೆ ದೊರಕಿರಲಿಲ್ಲ. ಈ ಕಾರಣದಿಂದ ಇದನ್ನು ಅಳಿವಿನಂಚಿನಲ್ಲಿರುವ ಅಥವಾ ನಾಶವಾಗಿರಬಹುದಾದ ಪ್ರಭೇದ ಎಂದು ಪರಿಗಣಿಸಲಾಗಿತ್ತು.

ಇತ್ತೀಚೆಗೆ, ಸಂಶೋಧಕರು ಹಿಮಾಲಯದ ಚೆಲ್ ನದಿ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಅಧ್ಯಯನ ನಡೆಸಿದಾಗ, ಈ ಮೀನಿನ ಮೂರು ಜೀವಂತ ಮಾದರಿಗಳನ್ನು ಗುರುತಿಸಲು ಸಾಧ್ಯವಾಯಿತು. ಸ್ಥಳೀಯ ಗ್ರಾಮೀಣ ಸಮುದಾಯದ ಸದಸ್ಯರು ಈ ಮೀನನ್ನು ಸಾಮಾನ್ಯವಾಗಿ ಹಿಡಿದು ಉಪಯೋಗಿಸುತ್ತಿದ್ದರು ಎಂಬ ಮಾಹಿತಿಯೇ ಈ ಮಹತ್ವದ ಪುನಃ ಪತ್ತೆಗೆ ಪ್ರಮುಖ ಸುಳಿವಾಯಿತು.

ಚೆಲ್ ಸ್ನೇಕ್‌ಹೆಡ್ ಮೀನು ತನ್ನ ವಿಶಿಷ್ಟ ದೇಹಾಕೃತಿ, ಹಸಿರು ಛಾಯೆಯ ಸ್ಕೇಲ್ಸ್ ಹಾಗೂ ಹಳದಿ ಪಟ್ಟಿಗಳಿಂದ ಗುರುತಿಸಬಹುದು. ಇದು ಇತರ ಸ್ನೇಕ್‌ಹೆಡ್ ಮೀನಿಗಿಂತ ಗಾತ್ರದಲ್ಲಿ ದೊಡ್ಡದು ಮತ್ತು ಅಪರೂಪದ ಲಕ್ಷಣಗಳನ್ನು ಹೊಂದಿದೆ.

ಈ ಪುನಃ ಪತ್ತೆ ಭಾರತದ ಜೈವ ವೈವಿಧ್ಯ ಸಂರಕ್ಷಣೆಯ ದೃಷ್ಟಿಯಿಂದ ಅತ್ಯಂತ ಮಹತ್ವದ ಸಾಧನೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಇದು ಹಿಮಾಲಯದ ನದಿ ಪರಿಸರಗಳ ಸಂರಕ್ಷಣೆಗೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ ಎಂಬುದನ್ನೂ ಒತ್ತಿಹೇಳುತ್ತದೆ.

ಜಾಗತಿಕ ಅಪರೂಪದ ಜೀವಿ ಬೆಂಗಳೂರಿನ ಅಕ್ವೇರಿಯಂ ಪ್ಯಾರಡೈಸ್‌ನಲ್ಲಿ ನೆಲೆಸಿದೆ

ಫನ್ ವರ್ಲ್ಡ್ ಪ್ರಸ್ತುತಪಡಿಸುವ ಭಾರತದ ಅತಿದೊಡ್ಡ ಅಕ್ವೇರಿಯಂ ಪ್ಯಾರಡೈಸ್, ಬೆಂಗಳೂರಿನ ಪ್ರಮುಖ ಜಲಜೀವಿ ಆಕರ್ಷಣೆಯೊಂದಾಗಿ, ಜಗತ್ತಿನ ಅತ್ಯಂತ ಅಪರೂಪದ ತಾಜಾ ನೀರಿನ ಮೀನುಗಳಲ್ಲಿ ಒಂದಾದ ಚೆಲ್ ಸ್ನೇಕ್‌ಹೆಡ್ (Channa amphibeus) ಸಾರ್ವಜನಿಕ ಪ್ರದರ್ಶನಕ್ಕೆ ತಂದಿರುವುದನ್ನು ಹೆಮ್ಮೆಯಿಂದ ಘೋಷಿಸುತ್ತದೆ.

ಪ್ರಸ್ತುತ ಜಗತ್ತಿನಾದ್ಯಂತ ಕೇವಲ ನಾಲ್ಕು ಮಾದರಿಗಳು ಮಾತ್ರ ದಾಖಲಾಗಿರುವುದರಿಂದ, ಈ ಅಪರೂಪದ ಸೇರ್ಪಡೆ ಬೆಂಗಳೂರು ನಗರಕ್ಕೆ ಐತಿಹಾಸಿಕ ಸಾಧನೆ ಹಾಗೂ ಜಾಗತಿಕ ತಾಜಾ ನೀರಿನ ಸಂರಕ್ಷಣೆಯ ಕ್ಷೇತ್ರದಲ್ಲಿ ಮಹತ್ವದ ಕ್ಷಣವಾಗಿದೆ.

ಒಂದು ಕಾಲದಲ್ಲಿ ಅಳಿವಿನ ಅಂಚಿನಲ್ಲಿದೆ ಎಂದು ಭಾವಿಸಲ್ಪಟ್ಟ ಚೆಲ್ ಸ್ನೇಕ್‌ಹೆಡ್, ಅತ್ಯಂತ ಅಪರೂಪದ ಹಾಗೂ ಸೀಮಿತ ತಾಜಾ ನೀರಿನ ವಾಸಸ್ಥಳಗಳಿಗೆ ಮೂಲವಾದ ಜೀವಿ. ಇದರ ಅಕ್ವೇರಿಯಂ ಪ್ಯಾರಡೈಸ್‌ನಲ್ಲಿ ಇರುವಿಕೆ, ಜಗತ್ತಿನ ಕೆಲವೇ ಆರಿಸಿಕೊಂಡ ಸ್ಥಳಗಳ ಪೈಕಿ ಬೆಂಗಳೂರನ್ನು ಸೇರಿಸುತ್ತದೆ, ಈ ಅತ್ಯಂತ ಅಪರೂಪದ ಮೀನಿನ ಸಂರಕ್ಷಣೆಯ ಹೊಣೆ ಹೊತ್ತಿರುವ ಸ್ಥಳಗಳಾಗಿವೆ.

“ಇದು ಕೇವಲ ಅಕ್ವೇರಿಯಂ ಪ್ಯಾರಡೈಸ್‌ಗೆ ಮಾತ್ರವಲ್ಲ, ಬೆಂಗಳೂರು ನಗರಕ್ಕೂ ಹೆಮ್ಮೆಯ ಕ್ಷಣ,” ಎಂದು ಸಂಸ್ಥೆಯ ಸನ್ನಿ ಸಬರ್ವಾಲ್ ತಿಳಿಸಿದ್ದಾರೆ. “ಜಗತ್ತಿನ ಕೇವಲ ನಾಲ್ಕು ಚೆಲ್ ಸ್ನೇಕ್‌ಹೆಡ್‌ಗಳಲ್ಲಿ ಒಂದನ್ನು ಇಲ್ಲಿ ಪ್ರದರ್ಶಿಸುವುದು, ಸಂರಕ್ಷಣೆ, ಹೊಣೆಗಾರ ಅಕ್ವೇರಿಯಂ ಕ್ರಮಗಳು ಮತ್ತು ಸಾರ್ವಜನಿಕ ಶಿಕ್ಷಣದ ಮೇಲಿನ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.”

ಚೆಲ್ ಸ್ನೇಕ್‌ಹೆಡ್ ಅದರ ಸಹಜ ವಾಸಸ್ಥಳವನ್ನು ಹೋಲುವಂತೆ ವೈಜ್ಞಾನಿಕವಾಗಿ ವಿನ್ಯಾಸಗೊಳಿಸಿದ, ನಿಯಂತ್ರಿತ ಪರಿಸರದಲ್ಲಿ ಪಾಲಿಸಲಾಗುತ್ತಿದ್ದು, ಇದರ ಆರೋಗ್ಯ ಮತ್ತು ಕಲ್ಯಾಣಕ್ಕೆ ಅತ್ಯುತ್ತಮ ಪರಿಸ್ಥಿತಿಯನ್ನು ಒದಗಿಸಲಾಗುತ್ತಿದೆ. ಅಪರೂಪದ ಹಾಗೂ ಅಪಾಯದಲ್ಲಿರುವ ತಾಜಾ ನೀರಿನ ಜೀವಿಗಳ ಕುರಿತು ಸಂಶೋಧನೆ ಮತ್ತು ಜಾಗೃತಿ ಮೂಡಿಸಲು, ಅಕ್ವೇರಿಯಂ ಪ್ಯಾರಡೈಸ್ ನಿರಂತರವಾಗಿ ಜಲಜೀವಿ ತಜ್ಞರು ಮತ್ತು ಸಂರಕ್ಷಣಾ ಪರಿಣಿತರೊಂದಿಗೆ ಸಹಕರಿಸುತ್ತಿದೆ.

ಈ ಅಪೂರ್ವ ಜಾಗತಿಕ ಪ್ರದರ್ಶನ ಮತ್ತು ಮನಮುಟ್ಟುವ ಜೀವಂತ ಜಲ ಪ್ರದರ್ಶನಗಳೊಂದಿಗೆ, ಅಕ್ವೇರಿಯಂ ಪ್ಯಾರಡೈಸ್ ತನ್ನನ್ನು ಬೆಂಗಳೂರು ನಗರದ ಅತ್ಯಂತ ವಿಶಿಷ್ಟ ಕುಟುಂಬ ಹಾಗೂ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾಗಿ ಮತ್ತಷ್ಟು ಬಲಪಡಿಸಿದೆ.

ಅಕ್ವೇರಿಯಂ ಪ್ಯಾರಡೈಸ್ ಕುರಿತು : – ಬೆಂಗಳೂರು ನಗರದಲ್ಲಿರುವ ಅಕ್ವೇರಿಯಂ ಪ್ಯಾರಡೈಸ್, ಸಂರಕ್ಷಣೆ, ಶಿಕ್ಷಣ ಮತ್ತು ಆಕರ್ಷಕ ಜಲಜೀವಿ ಅನುಭವಗಳಿಗೆ ಸಮರ್ಪಿತವಾಗಿದೆ. ಅಪರೂಪದ ಹಾಗೂ ವಿಶಿಷ್ಟ ಜೀವಿಗಳನ್ನು ಪ್ರದರ್ಶಿಸುವುದರೊಂದಿಗೆ, ನೈತಿಕ ಹಾಗೂ ಜಾಗತಿಕ ಮಟ್ಟದ ಆರೈಕೆಯ ಮೂಲಕ ಜಲಜೀವ ವೈವಿಧ್ಯದ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿದೆ.

District Legal Services Authority ಮಕ್ಕಳಲ್ಲಿ ಲೈಂಗಿಕ ಅರಿವು,ಬಾಲ್ಯ ವಿವಾಹ, ಹಾಗೂ ಫೋಕ್ಸೋ ವಿಚಾರಗಳ ಅರಿವು ಮೂಡಿಸಬೇಕು- ಎನ್.ಹೇಮಂತ್

0

District Legal Services Authority ಶಿಕ್ಷಕರು ಮತ್ತು ವೈದ್ಯರು ಪ್ರತಿ ತಿಂಗಳು ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸುವ ಮೂಲಕ ಮಕ್ಕಳಿಗೆ ಲೈಂಗಿಕ ಶಿಕ್ಷಣ, ಬಾಲ್ಯ ವಿವಾಹ ಹಾಗೂ ಪೋಕ್ಸೊ ವಿಚಾರಗಳ ಕುರಿತು ಅರಿವು ಮೂಡಿಸಬೇಕು ಎಂದು ಜಿ.ಪಂ ಸಿಇಓ ಹೇಮಂತ್.ಎನ್ ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಮಿಷನ್ ಸುರಕ್ಷಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ಮತ್ತು ವೈದ್ಯರು ಮಿಷನ್ ಸುರಕ್ಷಾ ಕಾರ್ಯಾಗಾರದ ಸೂಕ್ಷ್ಮತೆಯನ್ನು ಅರಿತುಕೊಳ್ಳಬೇಕು. ಜಿಲ್ಲೆಯಲ್ಲಿ 146 ಪೋಕ್ಸೊ ಪ್ರಕರಣಗಳು ದಾಖಲಾಗಿದೆ. ಹಾಗೂ ಬಾಲ್ಯ ವಿವಾಹದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಇದನ್ನು ತಡೆಗಟ್ಟಲು, ಅಗತ್ಯವಾದ ತರಬೇತಿಯನ್ನು ಈ ಕಾರ್ಯಾಗಾರದಲ್ಲಿ ನೀಡಲಿದ್ದು, ಇದನ್ನು ಸಂಪೂರ್ಣವಾಗಿ ಶಿಕ್ಷಕರು ಬಳಕೆ ಮಾಡಿಕೊಂಡು ಶಾಲೆಯಲ್ಲಿ ಮಕ್ಕಳಿಗೆ ಕೂಡ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಇಂದಿನ ಮಕ್ಕಳಿಗೆ ಲೈಂಗಿಕ ಶಿಕ್ಷಣ ಮತ್ತು ಆಪ್ತ ಸಮಾಲೋಚನೆಗೆ ಒಳಪಡಿಸುವುದು ಬಹು ಮುಖ್ಯವಾಗಿದೆ. ಶಾಲೆ, ಮನೆ ಹಾಗು ಸಮಾಜದಲ್ಲಾಗುವ ಅನೇಕ ಘಟನೆಗಳು ಅವರ ಮೇಲೆ ಪರಿಣಾಮ ಬೀರುತ್ತದೆ. ಅದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ತಪ್ಪು ದಾರಿಯನ್ನು ತುಳಿಯುವ ಸಾಧ್ಯತೆ ಇರುತ್ತದೆ. ಹಾಗಾಗಿ ಶಿಕ್ಷಕರ ಹಾಗೂ ವೈದ್ಯರು ಪ್ರತಿ ಮಕ್ಕಳಿಗೆ ಆಪ್ತ ಸಮಾಲೋಚನೆ ಮಾಡುವ ಮೂಲಕ ಅವರ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮಾಡಬೇಕು.
ಸಂಕುಚಿತ ಭಾವನೆ ತೆಗೆದು ಹಾಕುವುದು, ಶಿಕ್ಷಕರು ಮತ್ತು ವೈದ್ಯರು ಪ್ರತಿ ತಿಂಗಳು ಆಪ್ತ ಸಮಾಲೋಚನೆ ಮಾಡುವುದು ಹಾಗೂ ಬಾಲ್ಯ ವಿವಾಹದ ಮೇಲೆ ಏರಿರುವ ಮೂಡನಂಭಿಕೆ ಹೋಗಲಾಡಿಸುವುದು ಈ ಕಾರ್ಯಾಗಾರದ ಉದ್ದೇಶವಾಗಿದ್ದು, ಆ ನಿಟ್ಟಿನಲ್ಲಿ ಶಿಕ್ಷಕರು, ವೈದ್ಯರು ಕೆಲಸ ಮಾಡಬೇಕು. ಈ ಕುರಿತು ಕಾವಲು ಸಮಿತಿಯಲ್ಲಿ, ಗ್ರಾಮ ಪಂಚಾಯಿತಿಯ ಮಕ್ಕಳ ಸಭೆಯಲ್ಲಿ ಚರ್ಚೆಯಾಗಬೇಕು. ಶಿಕ್ಷಣ ಇಲಾಖೆ ಇದರ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಜಾಹೀರಾತು ಸಿದ್ದಪಡಿಸಿ ಜಾಗೃತಿ ಮೂಡಿಸಬೇಕು. ಇಂತಹ ಕೆಲಸಗಳು ನಿರಂತವಾಗಿ ನಡೆದರೆ ಮಾತ್ರ ಬಾಲ್ಯವಿವಾಹ ಹಾಗೂ ಪೋಕ್ಸೋ ಪ್ರಕರಣಗಳು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಪೊಲೀಸ್ ಇನ್ಸ್ಪೆಕ್ಟರ್ ಗುರುರಾಜ್ ಮಾತನಾಡಿ, ನೈತಿಕವಾಗಿ ಮಕ್ಕಳು ಸದೃಢರಾಗಲು ತಂದೆ ತಾಯಿಯಂದಿರಷ್ಟೇ ಶಿಕ್ಷಕರ ಪಾತ್ರವೂ ಮುಖ್ಯವಾಗಿದೆ. ಆದರೆ ಇತ್ತೀಚೆಗೆ ಮಕ್ಕಳ ಅಪರಾಧ ಪ್ರಕರಣದಲ್ಲಿ ಶಿಕ್ಷಕರುಗಳು ಎರಡನೇ ಆರೋಪಿಯಾಗಿ ಬದಲಾಗುತ್ತಿದ್ದಾರೆ. ಶಾಲೆಗಳಲ್ಲಿ ಮಕ್ಕಳ ಮೇಲೆ ಆಗುವ ದೌರ್ಜನ್ಯವನ್ನು ಶಿಕ್ಷಕರ ಬಳಿ ಬಂದು ಹೇಳಿದರೂ ಶಿಕ್ಷಕರು ಅದನ್ನು ನಿರ್ಲಕ್ಷ್ಯ ವಹಿಸುತ್ತಿರುವ ಕಾರಣ ಪೋಕ್ಸೋ ಸೆಕ್ಷನ್ 21 ರಡಿಯಲ್ಲಿ 2 ನೇ ಆರೋಪಿಯಾಗಿ ದಾಖಲಾಗುತ್ತಿದ್ದಾರೆ. ಈ ಬಗ್ಗೆ ಎಲ್ಲಾ ಶಿಕ್ಷಕರು ಅರಿತುಕೊಳ್ಳಬೇಕು. ಇಂತಹ ವಿಚಾರ ಶಿಕ್ಷಕರ ಗಮನಕ್ಕೆ ಬಂದ ಕೂಡಲೇ 112 ಅಥವಾ ಮಕ್ಕಳ ಸಹಾಯವಾಣಿ 1098 ಗೆ ಸಂಪರ್ಕಿಸಿ ದೂರು ನೀಡಬೇಕು. ಮಕ್ಕಳಿಗೂ ಸಹ ಸಹಾಯವಾಣಿಯ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಮಕ್ಕಳ ಹೊಣೆಗಾರಿಕೆ ಶಿಕ್ಷಕರದಾಗಿದ್ದು, ಅವರಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್, ಇತರೆ ವಿಷಯಗಳ ಬಗ್ಗೆ ತಿಳಿಸಬೇಕು. ಅಶ್ಲೀಲ ಪದಗಳ ಬಳಕೆ, ಖಾಸಗಿ ಅಂಗಗಳನ್ನು ಮುಟ್ಟುವುದು, ಖಾಸಗಿ ವಿಡಿಯೋ, ಫೋಟೋ ಹಂಚಿಕೆ ಮಾಡುವುದು ತಪ್ಪು. ಇಂತಹ ಅಪರಾಧ ಕೃತ್ಯ ಮಾಡಿದರೆ 67 ಬಿ ಐಐಟಿ ಪ್ರಕಾರ ಶಿಕ್ಷೆ ನೀಡಲಾಗುತ್ತದೆ ಎಂಬ ಕಾನೂನಿನ ಮಾಹಿತಿಯನ್ನು ಮಕ್ಕಳಿಗೆ ತಿಳಿಸಬೇಕು ಎಂದರು.
District Legal Services Authority ಡಾ.ವೀಣಾಭಟ್ ಉಪನ್ಯಾಸ ನೀಡಿ, ಸಮಾಜವು ಶಿಕ್ಷಿತವಾಗುತ್ತಿದ್ದರೂ ಬಾಲ ಗರ್ಭಿಣಿಯರ ಪ್ರಕರಣಗಳು ಮಾತ್ರ ಕಡಿಮೆಯಾಗುತ್ತಿಲ್ಲ. ಮಕ್ಕಳಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆ ವ್ಯಾಪಕವಾಗುತ್ತಿದೆ. ಇದರಿಂದಾಗಿ ಮಕ್ಕಳು ಹಾದಿ ತಪ್ಪುತ್ತಿದ್ದಾರೆ. ಗಂಡು ಹೆಣ್ಣು ಅನ್ನದೇ ಎಲ್ಲಾ ಮಕ್ಕಳಿಗೂ ಇದರ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ನೈತಿಕ ಶಿಕ್ಷಣದ ಜೊತೆಗೆ ಲೈಂಗಿಕ ಶಿಕ್ಷಣವೂ ಮಕ್ಕಳಿಗೆ ಅವಶ್ಯಕವಾಗಿದೆ. ಬಾಲ್ಯ ವಿವಾಹ, ಪೋಕ್ಸೋ ಕೃತ್ಯಗಳ ಬಗ್ಗೆ ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸಬೇಕು ಎಂದರು.
ಹದಿಹರೆಯದಲ್ಲಿ ದೈಹಿಕವಾಗಿ, ಮಾನಸಿಕವಾಗಿ, ಭಾವನ್ಮಾತಕ, ಸಾಮಾಜಿಕ ಹಾಗೂ ನೈತಿಕವಾಗಿ ಬದಲಾವಣೆ ಉಂಟಾಗಲಿದ್ದು, ಸರಿಯಾದ ಮಾರ್ಗದರ್ಶನ ಇಲ್ಲದಿದ್ದರೆ ಇದು ಅಸುರಕ್ಷಿತ ಲೈಂಗಿಕತೆಗೆ ಕಾರಣವಾಗಿ ಇದರಿಂದ ಗರ್ಭದಾರಣೆ, ಲೈಂಗಿಕ ಸೋಂಕು, ಹೆಚ್‌ಐವಿ/ಏಡ್ಸ್ ಕಾಯಿಲೆಗಳಿಗೆ ತುತ್ತಾಗುವಂತೆ ಮಾಡಬಹುದು. ಇನ್ನೊಂದೆಡೆ ಜಾಗತೀಕರಣದಿಂದ ಉಂಟಾಗಿರುವ ಪ್ಲಾಸ್ಟಿಕ್ ಬಳಕೆಗಳು ಅದರಿಂದ ಬಿಡುಗಡೆಯಾಗುವ ರಾಸಾಯನಿಕ ಅಂಶಗಳು ಮಕ್ಕಳ ಶರೀರಕ್ಕೆ ಸೇರಿ ಹಾರ್ಮೋನ್‌ನಲ್ಲಿ ಏರುಪೇರಾಗುತ್ತಿದ್ದು, ಇದು ಮಕ್ಕಳ ದೇಹದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿರ್ಯಾ ಎಂ.ಎಸ್.ಸಂತೋಷ್, ಜಿ ಪಂ ಯೋಜಾನಾಧಿಕಾರಿ ನಂದಿನಿ, ಬಿಇಓ ರಮೇಶ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಚಂದ್ರಶೇಖರ್, ತಾಲ್ಲೂಕು ಇಓ ಪರಮೇಶ್ವರಪ್ಪ, ವಿವಿಧ ತಾಲ್ಲೂಕಿನ ಶಿಕ್ಷಕರುಗಳು, ನೋಡಲ್ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿ ಮೃತ ಶೇಖರಪ್ಪ ಎಂಬುವವರ ಶವ ಇರಿಸಿದೆ: ಕುಂಸಿ ಪೊಲೀಸ್ ಠಾಣೆ ಪ್ರಕಟಣೆ

0

ತುಮಕೂರು ದಿಬ್ಬೂರು ರಸ್ತೆ ವಾಸಿ ಶೇಖರಪ್ಪ ಎಂಬುವವರ ಮಗ ರಾಜು ಎಂಬ 37 ವರ್ಷ ವ್ಯಕ್ತಿ ಡಿ. 09 ರಂದು ಕುಂಸಿ ಆಸ್ಪತ್ರೆಗೆ ಎದೆಯುರಿ ಎಂದು ಸ್ವಯಂ ದಾಖಲಾಗಿದ್ದು, ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಡಿ.12 ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತೆಗೆ ಅಂಬುಲೆನ್ಸ್ ಮೂಲಕ ಕಳುಹಿಸಿದ್ದು, ಮಾರ್ಗ ಮಧ್ಯೆ ಮೃತ ಪಟ್ಟಿರುತ್ತಾರೆ.

ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಈ ವ್ಯಕ್ತಿಯು 5.8 ಅಡಿ ಎತ್ತರ, ದೃಢಕಾಯ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಮೈಮೇಲೆ ಮೆರೂನ್ ಕಲರ್ ಶರ್ಟ್, ಕ್ರೀಮ್ ಕಲರ್ ಪ್ಯಾಂಟ್ ಧರಿಸಿರುತ್ತಾನೆ.

ಈ ಮೃತನ ವಾರಸುದಾರರ ಬಗ್ಗೆ ಸುಳಿವು ದೊರೆತಲ್ಲಿ ಕುಂಸಿ ಪೊಲೀಸ್ ಠಾಣೆ ದೂ.ಸಂ.: 9480803351/ 08182-261412/ 261413 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

Chikmagalur Institute of Medical Sciences ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಖರೀದಿಸಿರುವ ಔಷಧಿ ಟೆಂಡರ್ ಬಗ್ಗೆ ಪರಿಶೀಲಿಸಲು ತಜ್ಞರ ಸಮಿತಿ ರಚನೆ : ಸಚಿವ ಡಾ.ಶರಣಪ್ರಕಾಶ ಪಾಟೀಲ್

0

Chikmagalur Institute of Medical Sciences ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಖರೀದಿಸಿರುವ ಔಷಧಿ ಟೆಂಡರ್ ಬಗ್ಗೆ ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು. ಸದರಿ ಸಮಿತಿ ನೀಡುವ ವರದಿ ಆಧರಿಸಿ ಮುಂದಿನ ಕ್ರಮವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ. ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ: ಶರಣಪ್ರಕಾಶ ಆರ್.ಪಾಟೀಲ ತಿಳಿಸಿದರು.

ಅವರು ವಿಧಾನ ಪರಿಷತ್ ನಲ್ಲಿ ಶಾಸಕರಾದ ಸಿ.ಟಿ.ರವಿ, ಭಾರತಿ ಶೆಟ್ಟಿ, ಕೇಶವ ಪ್ರಸಾದ್, ಪ್ರತಾಪ್ ಸಿಂಹ ನಾಯಕ್ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದರು.

ಕೊಡಗು, ಹಾವೇರಿ, ರಾಯಚೂರು ಮೆಡಿಕಲ್ ಕಾಲೇಜುಗಳಲ್ಲಿ ಕರೆದಿರುವ ಟೆಂಡರ್ ಮೊತ್ತಕ್ಕೂ ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನಲ್ಲಿ ಕರೆದಿರುವ ಟೆಂಡರ್ ಮೊತ್ತಕ್ಕೂ ಔಷಧಗಳ ದರಗಳಲ್ಲಿ ವ್ಯತ್ಯಾಸ ಕಂಡು ಬಂದಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಅವಶ್ಯವಿದ್ದ ರೂ.4.90 ಕೋಟಿ ಮೊತ್ತದ ಔಷಧಗಳ ಪೈಕಿ ತುರ್ತು ಅವಶ್ಯವಿದ್ದ ರೂ.36 ಲಕ್ಷ ಮೊತ್ತದ ಔಷಧಗಳ ಸರಬರಾಜನ್ನು ಮಾತ್ರ ಪಡೆದು, ಉಳಿದ ಔಷಧಗಳ ಸರಬರಾಜು ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿರುತ್ತದೆ. ಔಷಧಗಳ ದರಗಳು ಹೆಚ್ಚಳವಾಗಿರುವ ಬಗ್ಗೆ, ಮತ್ತೊಮ್ಮೆ ಸಮಗ್ರವಾಗಿ ಪರಿಶೀಲಿಸಲು ತಜ್ಞರ ಸಮಿತಿಯೊಂದನ್ನು ರಚಿಸಿ, ವರದಿ ಪಡೆದು, ಮುಂದಿನ ಅಗತ್ಯ ಕ್ರಮ ವಹಿಸಲಾಗುವುದು ಎಂದು ಅವರು ಸದನಕ್ಕೆ ವಿವರಿಸಿದರು.

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ದಿನಾಂಕ:31-03-2025 ರವರೆಗೆ ಕೆ.ಎಸ್ .ಡಿ.ಎಲ್.ಎಸ್. ವತಿಯಿಂದ ಉಚಿತವಾಗಿ ಜೀವ ರಕ್ಷಕ ಔಷಧಗಳನ್ನು ಸರಬರಾಜು ಪಡೆಯಲಾಗುತ್ತಿದ್ದು, ಸದರಿ ಔಷಧಿಗಳನ್ನು ಹೊರತುಪಡಿಸಿ, ಅವಶ್ಯಕವಿರುವ 204 ಜೀವರಕ್ಷಕ ಔಷಧಿಗಳನ್ನು 2024-25ನೇ ಸಾಲಿಗೆ ಟೆಂಡರ್ ಮುಖೇನ ಖರೀದಿಸಲಾಗಿದ್ದು, ಜಿಲ್ಲಾ ಆಸ್ಪತ್ರೆಯು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರಗೊಂಡ ನಂತರ 2025-26ನೇ ಸಾಲಿಗೆ 1 ವರ್ಷದ ಅವಧಿಗೆ ಜಾರಿಗೆ ಬರುವಂತೆ ಕ್ಲಿನಿಕಲ್ ವಿಭಾಗದ ಮುಖ್ಯಸ್ಥರುಗಳು ನೀಡಿರುವ ಬೇಡಿಕೆ ಪಟ್ಟಿಯಂತೆ ಅತ್ಯುತ್ತಮ ಗುಣಮಟ್ಟದ 416 ಜೀವ ರಕ್ಷಕ ಔಷಧಿಗಳನ್ನು ಪಡೆಯಲು ನಿಯಮಾನುಸಾರ ಟೆಂಡರ್ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿರುತ್ತದೆ.

ಈ ಹಂತದಲ್ಲಿ, 2024-25ನೇ ಸಾಲಿನಲ್ಲಿ ಜಿಲ್ಲಾಸ್ಪತ್ರೆಗೆ ಟೆಂಡರ್ ಮೂಲಕ ಖರೀದಿ ಮಾಡಲಾದ ಔಷಧಗಳ ದರಗಳನ್ನು ವೈದ್ಯಕೀಯ ಸಂಸ್ಥೆಯಲ್ಲಿ ಪ್ರಸಕ್ತ ಟೆಂಡರ್ ಕರೆಯಲಾಗಿರುವ ಔಷಧಗಳ ದರಗಳೊಂದಿಗೆ ಹೋಲಿಕೆ ಮಾಡಲಾಗಿ ಕೆಲವೊಂದು ಔಷಧಗಳ ಬೆಲೆಯಲ್ಲಿ ಗಣನೀಯ ವ್ಯತ್ಯಾಸ ಕಂಡು ಬಂದಿರುತ್ತದೆ. ಹಾಗೆಯೆ, ಕೊಡಗು, ಹಾವೇರಿ ಮತ್ತು ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ ಔಷಧಗಳನ್ನು ಟೆಂಡರ್ ಮೂಲಕ ಖರೀದಿಸಲಾಗುವ ದರಗಳನ್ನು ಪರಿಶೀಲಿಸಲಾಗಿ, ಕೆಲವೊಂದು ಔಷಧಗಳ ದರಗಳಲ್ಲಿ ಹೆಚ್ಚಳ ಕಂಡು ಬಂದಿರುತ್ತದೆ.

Chikmagalur Institute of Medical Sciences ಸಾಮಾನ್ಯವಾಗಿ, ವೈದ್ಯಕೀಯ ಕಾಲೇಜುಗಳ ಬೋಧಕ ಆಸ್ಪತ್ರೆಗಳಲ್ಲಿ ವಿವಿಧ ರೀತಿಯ ಹಾಸಿಗೆ ಸಾಮಥ್ರ್ಯವಿದ್ದು, ಆಯಾಯ ಸಂಸ್ಥೆಗಳು ಉಪಯೋಗಿಸುವ ಔಷಧ/ವಸ್ತುಗಳ ಬ್ರಾಂಡ್/ಕಂಪನಿ ಹಾಗೂ ಸಂಗ್ರಹಿಸುವ ಪ್ರಮಾಣ ಇತ್ಯಾದಿಗಳು ಒಂದು ಸಂಸ್ಥೆಗೂ ಮತ್ತೊಂದು ಸಂಸ್ಥೆಗೂ ವ್ಯತ್ಯಾಸವಾಗುವುದರಿಂದ ಎಲ್ಲಾ ವೈದ್ಯಕೀಯ ಸಂಸ್ಥೆಗಳು ಏಕರೂಪ ದರದಲ್ಲಿ ಔಷಧಗಳನ್ನು ಸಂಗ್ರಹಿಸಲು ಸಾಧ್ಯವಾಗುವುದಿಲ್ಲ. ಬದಲಿಗೆ, ಔಷಧಿ/ವಸ್ತುಗಳ ಪರಿಮಾಣ, ಗುಣಮಟ್ಟ, ಸಂಯೋಜನೆ (Composition) ಇತ್ಯಾದಿ ಆಧಾರದ ಮೇಲೆ ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳಲ್ಲಿ ದರಗಳನ್ನು ನಿಗದಿಪಡಿಸಿ, ವಿವಿಧ ಸ್ಥಳಗಳಲ್ಲಿ ವಿವಿಧ ದರಗಳಲ್ಲಿ ಔಷಧಗಳನ್ನು ಖರೀದಿಸಲಾಗುತ್ತದೆ ಎಂದು ತಿಳಿಸಿದರು.


ನೀರಾವರಿಗೆ ಅಕ್ರಮ ನೀರು ಬಳಕೆ;ತನಿಖೆ ನಡೆಸಲು ತಂಡ ರಚನೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

0

ಮಹಾರಾಷ್ಟ್ರ ರಾಜ್ಯವು ನೀರಾವರಿ ಯೋಜನೆಗಳಿಗೆ ಅಕ್ರಮವಾಗಿ ನೀರು ಬಳಕೆ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯದ ಅಧಿಕಾರಿಗಳ ಪ್ರತ್ಯೇಕ ತಂಡ ರಚನೆ ಮಾಡಿ, ವರದಿ ಪಡೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದರು.

ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಡಾ. ತಳವಾರ್ ಸಾಬಣ್ಣ ಅವರ ನಿಯಮ 33 ರ ಸೂಚನೆಗೆ ಉತ್ತರಿಸಿ ಮಾತನಾಡಿದರು.

ಕೃಷ್ಣ ಜಲವಿವಾದ ನ್ಯಾಯಾಧಿಕರಣ- 1 (ಬಚಾವತ್ ನ್ಯಾಯಾಧಿಕರಣ) 1976 ರಲ್ಲಿ ಅಂತಿಮ ತೀರ್ಪಿನ Clause-IX(A)(ii)(b) ಪ್ರಕಾರ ಮಹಾರಾಷ್ಟ್ರ ರಾಜ್ಯವು ಭೀಮಾ ನದಿಯಿಂದ 95 ಟಿಎಂಸಿಗಿಂತ ಹೆಚ್ಚಾಗಿ ನೀರನ್ನು ಬಳಸಬಾರದೆಂದು ಹಾಗೂ 3)(iii) ಪ್ರಕಾರ ಕರ್ನಾಟಕ ರಾಜ್ಯವು ಭೀಮಾ ಮುಖ್ಯ ನದಿಯಿಂದ 15 ಟಿಎಂಸಿಗಿಂತ ಹೆಚ್ಚು ಬಳಸಬಾರದೆಂದು ನಿಬರ್ಂಧವಿದೆ. ಸದರಿ ಅಂತಿಮ ತೀರ್ಪಿನಲ್ಲಿ ಕಣಿವೆ ಮಾಡಿರುವ ಒಟ್ಟಾರೆ ಹಂಚಿಕೆಯಲ್ಲಿ ಯಾವುದೇ ರಾಜ್ಯವು ಇನ್ನೊಂದು ರಾಜ್ಯಕ್ಕೆ ಬಿಡುಗಡೆ ಮಾಡುವ ಕುರಿತು ಆದೇಶವಿರುವುದಿಲ್ಲ.

ಜಲವಿವಾದ ನ್ಯಾಯಾಧಿಕರಣ-1 ವಿಧಿಸಿರುವ ನಿರ್ಬಂಧಕ್ಕೆ ಒಳಪಟ್ಟು ಕಣಿವ ಯೋಜನೆಗಳನ್ನು ಕೈಗೊಂಡಿರುತ್ತವೆ.

ಸೀನಾ ನದಿಯು ಮಹಾರಾಷ್ಟ್ರದ ಭೀಮಾ ನದಿಯ ಒಂದು ಉಪನದಿಯಾಗಿದೆ. ಕೃಷ್ಣ ಜಲವಿವಾದ ನ್ಯಾಯಾಧೀಕರಣ-॥ ರ ಮುಂದೆ ಮಹಾರಾಷ್ಟ್ರ ರಾಜ್ಯವು ಸಲ್ಲಿಸಿರುವ ಮಾಹಿತಿಯ ಪ್ರಕಾರ ಮಹಾರಾಷ್ಟ್ರ, ರಾಜ್ಯವು ಉಜ್ಜನಿ ಜಲಾಶಯದಿಂದ ನೀರನ್ನು ಸೀನಾ ನದಿಗೆ ತಿರುವುಗೊಳಿಸುತ್ತಿದೆ ಹಾಗೂ ಸದರಿ ಯೋಜನೆಯನ್ನು ಮಹಾರಾಷ್ಟ್ರ ರಾಜ್ಯಕ್ಕೆ ಮುಖ್ಯ ಭೀಮಾ ನದಿಯಲ್ಲಿ ನೀರನ್ನು ಬಳಸಲು ವಿಧಿಸಿರುವ ನಿಬರ್ಂಧದಡಿಯಲ್ಲಿ ಕೈಗೊಂಡಿರುವುದಾಗಿ ತಿಳಿದು ಬಂದಿದೆ.

ಕರ್ನಾಟಕ ರಾಜ್ಯವು ಕೃಷ್ಣ ಜಲವಿವಾದ ನ್ಯಾಯಾಧಿಕರಣ- 2 ರ ಮುಂದೆ ಭೀಮಾ ನದಿ ಉಪ ಕೊಳ್ಳದಲ್ಲಿನ ಬಳಕೆಗಾಗಿ 12 ಟಿ.ಎಂ.ಸಿ. ಹೆಚ್ಚುವರಿ ನೀರಿನ ಬೇಡಿಕೆಯನ್ನು ಮಂಡಿಸಿತ್ತು. ಆದರೆ ನ್ಯಾಯಾಧಿಕರಣವು ರಾಜ್ಯದ ಬೇಡಿಕೆಯನ್ನು ಪರಿಗಣಿಸಿರುವುದಿಲ್ಲ. ಕೃμÁ್ಣ ಜಲವಿವಾದ ನ್ಯಾಯಾಧಿಕರಣ-2 ರ ಆದೇಶದನ್ವಯ ಮಹಾರಾಷ್ಟ್ರ ರಾಜ್ಯವು 3 ಟಿ.ಎಂ.ಸಿ. ನೀರನ್ನು ನದಿಯಲ್ಲಿನ ಕನಿಷ್ಠ ಹರಿವಿಗಾಗಿ ಬಿಡುಗಡೆ ಮಾಡಬೇಕಾಗಿದ್ದು, ಇದರಲ್ಲಿ ವಾರ್ಷಿಕ (ಡಿಸೆಂಬರ್ ನಿಂದ ಮೇ ಅಂತ್ಯದವರೆಗೆ) ಭೀಮಾ ನದಿಯಲ್ಲಿ 1 ಟಿ.ಎಂ.ಸಿ. ನೀರನ್ನು ಮಹಾರಾಷ್ಟ್ರ ಕರ್ನಾಟಕ ಗಡಿ ಪ್ರದೇಶದ ತಾಕಳಿ ಮಾಪನ ಕೇಂದ್ರದಲ್ಲಿ ನದಿಯಲ್ಲಿನ ಕನಿಷ್ಠ ಹರಿವಿಗಾಗಿ ಹರಿಸಬೇಕೆಂದು ಸೂಚಿಸಲಾಗಿದೆ. ಈ ಪ್ರಮಾಣದ ನೀರನ್ನು ಇತರೆ ಉದ್ದೇಶಗಳಿಗೆ ಬಳಸಲು ರಾಜ್ಯಕ್ಕೆ ಅವಕಾಶವಿರುವುದಿಲ್ಲ. ಸದರಿ ಕೃಷ್ಣಜಲವಿವಾದ ನ್ಯಾಯಾಧಿಕರಣ-2 ರ ಆದೇಶವು ಗೆಜೆಟ್ ಪ್ರಕಟಣೆ ಆಗಬೇಕಾಗಿದೆ.

ಮಹಾರಾಷ್ಟ್ರ ರಾಜ್ಯವು ಕರ್ನಾಟಕ ರಾಜ್ಯಕ್ಕೆ ನಿಯಂತ್ರಿತ ಬಿಡುಗಡೆ (Regulated releases) ಮಾಡಲು ನ್ಯಾಯಮೂರ್ತಿ ಬಚಾವತ್ ರವರ ಆಯೋಗದ ವರದಿಯಲ್ಲಿ ಆದೇಶವಿರುವುದಿಲ್ಲ. ಹಾಗೂ ಕಣಿವೆ ರಾಜ್ಯಗಳು ಕುಡಿಯುವ ನೀರಿಗೆ ಹಾಗೂ ಕೈಗಾರಿಕೆಗಳಿಗೆ ಅಗತ್ಯವಿರುವ ನೀರನ್ನು ಹಂಚಿಕೆಯಾಗಿರುವ ಪ್ರಮಾಣದಲ್ಲೇ ಭರಿಸಬೇಕಾಗಿದೆ.

ಸಾಮಾನ್ಯ ವರ್ಷ (Normal Year) ಗಳಲ್ಲಿ ಭೀಮಾ ನದಿ ಪಾತ್ರದಡಿ ನೀರಿನ ಕೊರತೆ ಕಂಡುಬಂದಿರುವುದಿಲ್ಲ. ಕೊರತೆಯಾದ ಜಲ ವರ್ಷಗಳಲ್ಲಿ ಕುಡಿಯುವ ಹಾಗೂ ಇತರೆ ಅಗತ್ಯಗಳಿಗೆ ನೀರನ್ನು ಮಹಾರಾಷ್ಟ್ರ ರಾಜ್ಯದಿಂದ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಭೀಮಾ ನದಿ 786 ಕಿ.ಮೀ.ಗಳ ಒಟ್ಟು ಹರಿವಿನಲ್ಲಿ ಕರ್ನಾಟಕದಲ್ಲಿ 206 ಕಿ.ಮೀ. ಹರಿಯುವ ಭೀಮಾ ನದಿ ನೀರನ್ನು ನಂಬಿಕೊಂಡು 164 ಹಳ್ಳಿಗಳ ಜನರು ಬದುಕುತ್ತಿದ್ದಾರೆ. 1976ರಲ್ಲಿ ನ್ಯಾ.ಬಚಾವತ್ ಆಯೋಗದ ತೀರ್ಪಿನಂತೆ ಮಹಾರಾಷ್ಟ್ರಕ್ಕೆ 95 ಟಿಎಂಸಿ ಮತ್ತು ಕರ್ನಾಟಕ್ಕೆ 15 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಬೇಕಿತ್ತು. ಮಹಾರಾಷ್ಟ್ರ ರಾಜ್ಯ ಭೀಮಾ ನದಿಯ ನೀರನ್ನು ಅಕ್ರಮವಾಗಿ ಸುರಂಗ ಮಾರ್ಗದ ಮೂಲಕ ಸೀನಾ ನದಿಗೆ ಸೇರಿಸಿಕೊಳ್ಳುವುದರ ಜೊತೆಗೆ ಅನಧಿಕೃತ ಬ್ಯಾರೇಜ್ ಗಳನ್ನು ನಿರ್ಮಿಸಿ 95 ಟಿಎಂಸಿ ಗಿಂತಲೂ ಹೆಚ್ಚಿನ ನೀರನ್ನು ಬಳಸಿಕೊಳ್ಳುತ್ತಿದ್ದಾರೆ. ಇದು ನ್ಯಾ.ಬಚಾವತ್ ಆಯೋಗದ ತೀರ್ಪಿನ ಉಲ್ಲಂಘನೆಯಾಗಿದೆ. ಉಜನಿ ಅಣೆಕಟ್ಟೆಯಿಂದ ಡೆಡ್ ಸ್ಟೋರೇಜ್ ನೀರನ್ನು ಬಳಕೆ ಮಾಡುತ್ತಾರೆ. ಆದರೆ ಕರ್ನಾಟಕಕ್ಕೆ ಬಿಡುತ್ತಿಲ್ಲ. v ಬೇಸಿಗೆ ಕಾಲದಲ್ಲಿ ನದಿ ನೀರಿನ ಕೊರತೆಯಿಂದ ರೈತರು ಬೆಳೆದ ಲಕ್ಷಾಂತರ ಎಕರೆ ಕಬ್ಬು ಮತ್ತು ಇತರೆ ಬೆಳೆಗಳು ಒಣಗಿ ಹೋಗಿ ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕಳೆದ ವರ್ಷದ ಬೇಸಿಗೆಯಲ್ಲಿ ಭೀಮಾನದಿ ನೀರು ಸಂಪೂರ್ಣ ಬತ್ತಿಹೋಗಿದ್ದರಿಂದ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಯ ಜನರ ಕುಡಿಯುವ ನೀರು, ರೈತರ ಬೆಳೆಗಳಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗಿತ್ತು. ಪ್ರತಿ ವರ್ಷ ಭೀಮಾ ತೀರದ ಜನರು ಒಟ್ಟಾಗಿ ಅಮರಣಾಂತರ ಉಪವಾಸ ಸತ್ಯಾಗ್ರಹ ಮಾಡಿ ಕುಡಿಯಲು ಬೇಕಾಗುವ ನೀರನ್ನು ಬಿಡಿಸಿಕೊಳ್ಳುತ್ತಿದ್ದಾರೆ. ಕನಿಷ್ಠ ಕುಡಿಯುವ ನೀರಿಗೂ ಸಂಕಷ್ಟಕ್ಕೆ ಸಿಲುಕುತ್ತಿರುವ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಯ ಜನರಿಗೆ 15 ಟಿಎಂಸಿ ನೀರನ್ನು ಸಮರ್ಪಕವಾಗಿ ಬಳಕೆಯಾಗಲು ಹಾಗೂ ಮಹಾರಾಷ್ಟ್ರದ ಅಕ್ರಮ ನೀರಾವರಿ ಯೋಜನೆಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಕುರಿತು ಡಾ.ತಳವಾರ್ ಸಾಬಣ್ಣ ಅವರು ಕೋರಿದ್ದರು.

D. K. Shivakumar ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರ ವಾಸ್ತವ ಪರಿಸ್ಥಿತಿ ಅಧ್ಯಯನಕ್ಕೆ ಪ್ರತ್ಯೇಕ ಸಮಿತಿ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ

0

D. K. Shivakumar ಪ್ರತ್ಯೇಕವಾದ ಸಮಿತಿಯೊಂದನ್ನು ರಚಿಸಿ, ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರ ವಾಸ್ತವ ಪರಿಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ಅವರಿಗೆ ಸಹಾಯಹಸ್ತ ಕಲ್ಪಿಸುವುದಾಗಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಹೇಳಿದರು.

ಕೃಷ್ಣ ಮೇಲ್ದಂಡೆ ಯೋಜನೆಯಡಿಯಲ್ಲಿ ವಸತಿ ಹಾಗೂ ಜಮೀನುಗಳನ್ನು ಕಳೆದುಕೊಂಡ ರೈತರಿಗೆ ಪುನರ್ ವಸತಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ನಿಯಮ 330ರ ಮೇರೆಗೆ ಸದಸ್ಯರಾದ ನಿರಾಣಿ ಹಣಮಂತಪ್ಪ ರುದ್ರಪ್ಪ ಹಾಗೂ ಪಿ.ಹೆಚ್. ಪೂಜಾರ್ ಅವರು ಪರಿಷತ್ತಿನಲ್ಲಿ ಗುರುವಾರ ಮಂಡಿಸಿದ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರವು ಸಂತ್ರಸ್ಥರ ನೆರವಿಗೆ ಬದ್ಧವಾಗಿದೆ ಎಂದು ತಿಳಿಸಿದರು.

D. K. Shivakumar ಕೃಷ್ಣ ಮೇಲ್ದಂಡೆ ಯೋಜನೆಯ ಪ್ರದೇಶದ ಸಂತ್ರಸ್ತರಿಗೆ ಸಮಾಜದಲ್ಲಿ ಗೌರವ ಸಿಗುತ್ತಿಲ್ಲ. ಇಲ್ಲಿವರೆಗೆ ಈ ಭಾಗದಲ್ಲಿ ಶೇ.50ರಷ್ಡು ಮಾತ್ರ ನೀರಾವರಿಯಾಗಿದ್ದು, ಇದುವರೆಗೆ ಪೂರ್ಣ ಪ್ರಮಾಣದಲ್ಲಿ ನೀರಾವರಿ ಆಗಿರುವುದಿಲ್ಲ. ಇದುವರೆಗೆ 146 ಪುನರ್ವಸತಿ ಕೇಂದ್ರಗಳಿಗೆ ಅಧಿಕಾರಿಗಳು ಸರಿಯಾಗಿ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಏನಾಗಿದೆ ಎಂದು ನೋಡಿಲ್ಲ. ಇನ್ನೂ 20 ವರ್ಷಗಳ ಕಳೆದರೆ ಅಲ್ಲಿನ ಜನ ಘೇರಾವು ಹಾಕುವ ಪರಿಸ್ಥಿತಿ ಬರಬಹುದು. ಆಣೆಕಟ್ಟು ವಿಸ್ತರಣೆಯಿಂದಾಗಿ ಬಾಧಿತವಾದ ಗ್ರಾಮಗಳಲ್ಲಿನ ಸಂತ್ರಸ್ಥರ ಪರಿಸ್ಥಿತಿ ಸರಿ ಇಲ್ಲ ಎಂದು ಸದಸ್ಯರಾದ ಪಿ ಎಚ್ ಪೂಜಾರ ಹಾಗೂ ನಿರಾಣಿ ಹಣಮಂತ ರುದ್ರಪ್ಪ ಅವರು ಸದನದಲ್ಲಿ ನೋವು ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಸಹಕಾರ ಕೋರಿ 7 ನಿರ್ಣಯಗಳಿಗೆ ವಿಧಾನಸಭೆಯಲ್ಲಿ ಅಂಗೀಕಾರ

0

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ಗುರುವಾರದ ವಿಧಾನಸಭೆ ಕಲಾಪದಲ್ಲಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಹಕಾರ ಕೋರಿದ 7 ನಿರ್ಣಯಗಳಿಗೆ ಸರ್ವಾನುಮತದ ಅಂಗೀಕಾರ ದೊರೆಯಿತು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಬೆಂಗಳೂರು ಪ್ರದೇಶದಲ್ಲಿನ ರಾಷ್ಟ್ರೀಯ ಪ್ರಾಮುಖ್ಯತೆ ಸಂಸ್ಥೆಗಳನ್ನು ಉತ್ತರ ಕರ್ನಾಟಕ್ಕೆ ಸ್ಥಳಾಂತರ ಮಾಡುವುದು, ಕೃಷ್ಣಾ ಜಲವಿವಾದ ನ್ಯಾಯಧೀಕರಣ-2 ತೀರ್ಪಿನ ಕುರಿತು ಅಧಿಸೂಚನೆ ಹೊರಡಿಸುವುದು, ಮಹಾರಾಷ್ಟ್ರದ ವಿದರ್ಭ ಅಭಿವೃದ್ಧಿಗೆ ಮಂಡಳಿಗೆ ಕೇಂದ್ರ ಸರ್ಕಾರ ಪ್ರತಿವರ್ಷ ನೀಡುವ ಆರ್ಥಿಕ ನೆರವಿನ ಮಾದರಿಯಲ್ಲಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಗೆ ಪ್ರತಿವರ್ಷ ರೂ.5000 ಕೋಟಿ ಆರ್ಥಿಕ ನೆರವು ನೀಡುವುದು, ರಾಜ್ಯದಿಂದ ಹೆಚ್ಚಿನ ಎಥೆನಾಲ್ ಖರೀದಿಸುವುದು, ಕಳಸಾ ಬಂಡೋರಿ ಯೋಜನೆ ಅನುಷ್ಠಾನಕ್ಕೆ ಮಂಜೂರಾತಿ ನೀಡುವುದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಶೇ.50 ರಿಂದ ಶೇ.56ರಷ್ಟು ಹೆಚ್ಚಿಸಿದ ಮೀಸಲಾತಿ ಪ್ರಮಾಣದ ಅಧಿಸೂಚನೆ ಮತ್ತು ಆದೇಶಗಳನ್ನು ಭಾರತ ಸಂವಿಧಾನ ಅನುಸೂಚಿ-9 ಸೇರಿಸುವಂತೆ ಕೋರಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಸದನದಲ್ಲಿ ನಿರ್ಣಯಗಳನ್ನು ಮಂಡಿಸಿದರು.

ಚರ್ಚೆ ಬಳಿಕ ಸದನವು ಸರ್ವಾನುಮತದಿಂದ ನಿರ್ಣಯಗಳನ್ನು ಅಂಗೀಕರಿಸಿತು. ಈ ನಿರ್ಣಯಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು.

ಡಿಸೆಂಬರ್ 20 ಮತ್ತು 21 ರಂದು ರೋಟರಿ ಡಿಸ್ಟ್ರಿಕ್ಟ್ ಮಲೆನಾಡು ಕ್ರೀಡೋತ್ಸವ

0

Rotary Club ಶಿವಮೊಗ್ಗ ನಗರವು ಬರುವ ಡಿಸೆಂಬರ್ 20 ಮತ್ತು 21 ರಂದು ಕ್ರೀಡೇಗಷ್ಟೇ ಅಲ್ಲ, ಸೇವೆ, ಆರೋಗ್ಯ ಮತ್ತು ಸ್ನೇಹದ ಹಬ್ಬಕ್ಕೆ ಸಾಕ್ಷಿಯಾಗಲಿದೆ.

ರೋಟರಿ ಡಿಸ್ಟ್ರಿಕ್ಟ್ 3182ರ ಆಶ್ರಯದಲ್ಲಿ, ಜಿಲ್ಲಾ ಗವರ್ನರ್ ರೊಟೇರಿಯನ್ ಶ್ರೀ ಕೆ. ಪಾಲಾಕ್ಷ ಅವರ ಮಾರ್ಗದರ್ಶನದಲ್ಲಿ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಅವರ ಆತಿಥ್ಯದಲ್ಲಿ ಈ ಜಿಲ್ಲಾ ಮಟ್ಟದ ಮಲೆನಾಡು ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ. ನಾಲ್ಕು ಜಿಲ್ಲೆಗಳ ರೋಟರಿ ಕ್ಲಬ್‌ಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಈ ಕ್ರೀಡಾಕೂಟವು, ರೋಟರಿ ಪರಿವಾರಕ್ಕೆ ಒಂದು ಕ್ರೀಡಾ ಹಬ್ಬವಾಗಿಯೇ ರೂಪುಗೊಳ್ಳುತ್ತಿದೆ.

ಈ ಎರಡು ದಿನಗಳ ಕ್ರೀಡೋತ್ಸವದಲ್ಲಿ ನಾಲ್ಕು ಜಿಲ್ಲೆಗಳ 87 ರೋಟರಿ ಕ್ಲಬ್‌ಗಳಿಂದ ಸುಮಾರು 500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದು, ವರ್ಷಪೂರ್ತಿ ಸಮಾಜದ ಸೇವೆಗಳಲ್ಲಿ ನಿರತರಾಗಿರುವ ರೊಟೇರಿಯನ್ಸ್ ಮತ್ತು ಅವರ ಕುಟುಂಬದವರು, ಆರೋಗ್ಯ ಕಾಪಾಡಿಕೊಳ್ಳುವ ಜಾಗೃತಿ ಸಂದೇಶವನ್ನು ಕ್ರೀಡೆಗಳ ಮೂಲಕ ಸಾರುತ್ತಿದ್ದಾರೆ.

ವಿವಿಧ ಕ್ರೀಡಾ ಸ್ಪರ್ಧೆಗಳು

ಕ್ರಿಕೆಟ್, ವಾಲಿಬಾಲ್, ತ್ರೋಬಾಲ್, ಶಟಲ್ ಬ್ಯಾಡ್ಮಿಂಟನ್, ಚೆಸ್, ಕ್ಯಾರಂ ಹಾಗೂ ಅಥ್ಲೆಟಿಕ್ಸ್ ಸೇರಿದಂತೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು, ಎಲ್ಲಾ ವಯೋಮಾನದ ರೋಟರಿ ಪರಿವಾರದ ಸದಸ್ಯರಿಗೆ ಆಟಗಾರರಾಗಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಇದು ಕೇವಲ ಸ್ಪರ್ಧೆಯಲ್ಲ, ಆರೋಗ್ಯಕರ ಜೀವನಶೈಲಿಯ ಪ್ರೇರಣೆಯೂ ಹೌದು.

ಉದ್ಘಾಟನಾ ಸಮಾರಂಭ

ದಿನಾಂಕ: 20 ಡಿಸೆಂಬರ್ 2025
ಸ್ಥಳ: ಪಿ.ಇ.ಎಸ್. ಕಾಲೇಜು ಕ್ರೀಡಾಂಗಣ, ಶಿವಮೊಗ್ಗ
ಸಮಯ: ಸಂಜೆ 4.00

Rotary Club ಈ ಜಿಲ್ಲಾ ಕ್ರೀಡೋತ್ಸವವನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ
ರೊಟೇರಿಯನ್ ಡಿ.ಎಸ್. ಅರುಣ್, ವಿಧಾನ ಪರಿಷತ್ ಸದಸ್ಯರು
ರೊಟೇರಿಯನ್ ಡಾ. ಧನಂಜಯ ಸರ್ಜಿ, ವಿಧಾನ ಪರಿಷತ್ ಸದಸ್ಯರು
ಹಾಗೂ ಶಿವಮೊಗ್ಗದ ಹೆಮ್ಮೆ, ಅಂತಾರಾಷ್ಟ್ರೀಯ ಶಟಲ್ ಬ್ಯಾಡ್ಮಿಂಟನ್ ಆಟಗಾರ ಪೃಥ್ವಿ ಕೆ. ರಾಯ್ ಅವರು ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅವರಿಗೆ ವಿಶೇಷ ಗೌರವ ಸನ್ಮಾನ ನೆರವೇರಲಿದೆ.

ಅನೇಕ ಮಾಜಿ ಜಿಲ್ಲಾ ಗವರ್ನರ್‌ಗಳು, ಜಿಲ್ಲಾ ಪದಾಧಿಕಾರಿಗಳು ಹಾಗೂ ರೋಟರಿ ನಾಯಕರು ಈ ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

ದಿನಾಂಕ: 21 ಡಿಸೆಂಬರ್ 2025ರಂದು
ನೆಹರು ಕ್ರೀಡಾಂಗಣದಲ್ಲಿ ಮಧ್ಯಾಹ್ನ 3.00ಗಂಟೆಗೆ

ಸಮಾರೋಪ ಸಮಾರಂಭ ನಡೆಯಲಿದೆ
ಚನ್ನಬಸಪ್ಪ, ಶಾಸಕರು
ಕೆ. ಎಸ್. ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ ರುದ್ರೇಗೌಡ ಎಸ್., ಮಾಜಿ ವಿಧಾನ ಪರಿಷತ್ ಸದಸ್ಯರು
ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಶಿವಮೊಗ್ಗದ ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್ ಆಟಗಾರ್ತಿ ಕುಮಾರಿ ಸಹನಾ ಮೋಹನ್ ಅವರನ್ನು ವಿಶೇಷ ಅತಿಥಿಯಾಗಿ ಗೌರವಿಸಿ ಸನ್ಮಾನಿಸಲಾಗುತ್ತದೆ.

ಈ ಮಹತ್ವದ ಜಿಲ್ಲಾ ಕ್ರೀಡೋತ್ಸವವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾ ಸಮಿತಿಯ ಚೇರ್ಮನ್ ರೊಟೇರಿಯನ್ ರವಿ ಕೂಟೋಜಿ, ಇವೆಂಟ್ ಚೇರ್ಮನ್ ರೊಟೇರಿಯನ್ ಸಿ.ಎನ್. ಮಲ್ಲೇಶ್, ಅಸಿಸ್ಟಂಟ್ ಗವರ್ನರ್ ರೊಟೇರಿಯನ್ ಕೆ.ಪಿ. ಶೆಟ್ಟಿ,
ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಅಧ್ಯಕ್ಷ ರೊಟೇರಿಯನ್ ಕೆ.ಎಸ್. ವಿಶ್ವನಾಥ ನಾಯಕ ಮತ್ತು ಕ್ಲಬ್‌ನ ಎಲ್ಲಾ ಸದಸ್ಯರು ಹಾಗೂ ಪದಾಧಿಕಾರಿಗಳು ರೋಟರಿ ಪರಿವಾರದ ಎಲ್ಲಾ ಸದಸ್ಯರು, ಕುಟುಂಬಸ್ಥರು ಮತ್ತು ಕ್ರೀಡಾಭಿಮಾನಿಗಳು ಬಂದು ಭಾಗವಹಿಸಲು ಹೃದಯಪೂರ್ವಕವಾಗಿ ಆಹ್ವಾನಿಸಿದೆ.
ಈ ಎರಡು ದಿನಗಳ ಜಿಲ್ಲಾ ಮಟ್ಟದ ಮಲೆನಾಡು ಕ್ರೀಡೋತ್ಸವ–2025 ಕಾರ್ಯಕ್ರಮದ ಎಲ್ಲಾ ಅಧಿಕೃತ ಸಮಾರಂಭಗಳಿಗೆ ರೋಟರಿ ಡಿಸ್ಟ್ರಿಕ್ಟ್ 3182ರ ಜಿಲ್ಲಾ ಗವರ್ನರ್ ರೊಟೇರಿಯನ್ ಶ್ರೀಯುತ ಕೆ. ಪಾಲಾಕ್ಷ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

Tiger and Lion Safari ಡಿ.23 ಮತ್ತು 30 ರ ಮಂಗಳವಾರದಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ವೀಕ್ಷಣೆಗೆ ಆಹ್ವಾನ

0

Tiger and Lion Safari ಕ್ರಿಸ್‌ಮಸ್ ರಜೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ಡಿ.23 ಮತ್ತು 30 ರ ಮಂಗಳವಾರವೂ ಸಹ ತೆರೆದಿರುತ್ತದೆ.
Tiger and Lion Safari ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

Belagavi City Corporation ಮುಖ್ಯಮಂತ್ರಿಗಳಿಂದ ಇ-ಖಾತಾ ಲೋಕಾರ್ಪಣೆ, ಪೌರಕಾರ್ಮಿಕರಿಗೆ ನೇಮಕಾತಿ ಆದೇಶ, ಮನೆಗಳ ಹಕ್ಕುಪತ್ರಗಳ ವಿತರಣೆ

0

Belagavi City Corporation ಬೆಳಗಾವಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಸುವರ್ಣಸೌಧದಲ್ಲಿ ಇ-ಖಾತಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಅವರು ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳುÀ ಮತ್ತು ಮನೆಯ ಹಕ್ಕುಪತ್ರಗಳ ವಿತರಣೆಗೆ ಸಹ ಅವರು ಚಾಲನೆ ನೀಡಿದರು. ಸಮಾರಂಭದಲ್ಲಿ ಇ ಖಾತಾ ಕೈಪಿಡಿ ಬಿಡುಗಡೆ ಮಾಡಲಾಯಿತು.

ಇದೆ ವೇಳೆ ಬೆಳಗಾವಿಯ 127 ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರ ವಿತರಣೆ ಸಂಬಂಧ ಸಾಂಕೇತಿಕವಾಗಿ 10 ಜನರಿಗೆ ನೇಮಕಾತಿ ಆದೇಶ ಪತ್ರ ನೀಡಲಾಯಿತು. ಅದೇ ರೀತಿ ವಿಜಯಪುರದ ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು.

ಅದೇ ರೀತಿ ವಿಜಯಪುರದ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ 60 ಪೌರ ಕಾರ್ಮಿಕರಿಗೆ ಮನೆಯ ಸ್ವಾಧೀನ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಸಮಾರಂಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಸಾರ್ವಜನಿಕರ ಆಸ್ತಿ ದಾಖಲೆಯನ್ನು ಮತ್ತಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಇ-ಖಾತಾ ಸೇವೆ ಒದಗಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ತಿಳಿಸುವೆ. ನಗರಾಭಿವೃದ್ಧಿ ಮತ್ತು ನಗರ ಯೋಜನೆಯ ಸಚಿವರು ಉತ್ತಮ ಕಾರ್ಯ ಮಾಡಿದ್ದಾರೆ ಎಂದರು.

ಪೌರ ಕಾರ್ಮಿಕರ ಸೇವೆ ಅತ್ಯಂತ ಅನನ್ಯವಾಗಿದ್ದು, ಅವರು ನೆಮ್ಮದಿಯಾಗಿರುವಂತೆ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ಮತ್ತು ಮನೆಯ ಹಕ್ಕುಗಳ ಪತ್ರ ವಿತರಣೆ ಮಾಡಿರುವುದು ರಾಜ್ಯ ಸರ್ಕಾರ ಮತ್ತು ಪೌರಾಡಳಿತ ಸಚಿವರ ಉತ್ತಮ ಕಾರ್ಯಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಈ ವೇಳೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಭೈರತಿ ಸುರೇಶ ಅವರು ಮಾತನಾಡಿ, ಇ-ಆಸ್ತಿ ತಂತ್ರಾಂಶದ ಮೂಲಕವೇ ಕಡ್ಡಾಯವಾಗಿ ಇ-ಖಾತಾ ನೀಡಲು 2016ರಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಅದರಂತೆ ರಾಜ್ಯದ 320 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈವರೆಗೆ ಆಸ್ತಿ ಮಾಲೀಕರು ಇ-ಆಸ್ತಿ ತಂತ್ರಾಂಶದ ಮೂಲಕ ಅಂದಾಜು 29 ಲಕ್ಷ ಇ ಆಸ್ತಿಗಳಿಗೆ ಇ-ಖಾತಾ ಪಡೆದಿರುತ್ತಾರೆ. ಈ ಅಭಿಯಾನದ ಮುಂದುವರೆದ ಭಾಗವಾಗಿ ಇ-ಆಸ್ತಿ ತಂತ್ರಾಂಶವನ್ನು ಸರಳೀಕರಣಗೊಳಿಸಲಾಗಿದೆ. ಆಸ್ತಿ ಮಾಲೀಕರು ಯಾವುದೇ ಮಧ್ಯವರ್ತಿಗಳಿಲ್ಲದೇ ಹಾಗೂ ಯಾವುದೇ ಅಧಿಕಾರಿ ಸಿಬ್ಬಂದಿಯನ್ನು ಸಂಪರ್ಕಿಸದೇ ತಮ್ಮ ಮನೆಯಲ್ಲಿ ಕುಳಿತು ಸರಳವಾಗಿ ಸುಲಭವಾಗಿ ಇ-ಖಾತಾ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಈ ಗೃಹಭಾಗ್ಯ ಯೋಜನೆಗೆ ಒಟ್ಟು 6119 ಫಲಾನುಭವಿಗಳನ್ನು ಗುರುತಿಸಲಾಗಿದೆ. ರಾಜ್ಯ ಸರ್ಕಾರ ಇದಕ್ಕಾಗಿ 326 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದು, ಇದುವರೆಗೆ 4159 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಬೆಳಗಾವಿಯಲ್ಲಿ 172 ಮತ್ತು ವಿಜಯಪುರದಲ್ಲಿ 133 ಮನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Belagavi City Corporation ಪೌರಕಾರ್ಮಿಕರ ವಿಶೇಷ ನೇಮಕಾತಿ: ಪೌರಕಾರ್ಮಿಕರ ಹೊರಗುತ್ತಿಗೆ ಪದ್ಧತಿಯನ್ನು 2017 ರಲ್ಲಿ ಸ್ಥಗಿತಗೊಳಿಸಿ, ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದವರಿಗೆ ವಿಶೇಷ ನೇಮಕಾತಿಯಡಿ ಅವಕಾಶ ನೀಡಲಾಗುತ್ತಿದೆ. ವಿವಿಧ ಹಂತಗಳಲ್ಲಿ ಸಾವಿರಾರು ಪೌರಕಾರ್ಮಿಕರ ನೇಮಕಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 127 ಮತ್ತು ವಿಜಯಪುರದಲ್ಲಿ 66 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಿರುವುದು ಸಂತಸದ ವಿಚಾರ. ಇನ್ನೂ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದ ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗಣಿಕೀಕೃತ ಖಾತಾ ನೀಡುವ ಉದ್ದೇಶದಿಂದ 2016 ರಿಂದ ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾ ನೀಡುವ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. 2019 ರಿಂದ ಮಹಾನಗರಪಾಲಿಕೆಗಳಲ್ಲಿ ಇದನ್ನು ಕಡ್ಡಾಯಗೊಳಿಸಲಾಗಿದೆ. ಇದುವರೆಗೆ ರಾಜ್ಯಾದ್ಯಂತ ಸುಮಾರು 29 ಲಕ್ಷ ಇ-ಖಾತಾಗಳನ್ನು ಸೃಜಿಸಲಾಗಿದೆ. ಇದರಲ್ಲಿ 25,03,385 ಎ-ಖಾತಾ ಮತ್ತು 4,39,889 ಬಿ-ಖಾತಾಗಳು ಸೇರಿವೆ ಎಂದರು.

ಅಧಿಕೃತ ಆಸ್ತಿಗಳ ಜೊತೆಗೆ, ಕಂದಾಯ ಭೂಮಿ ಮತ್ತು ಅನುಮೋದನೆಯಾಗದ ಬಡಾವಣೆಗಳಲ್ಲಿನ ಆಸ್ತಿಗಳಿಗೂ ಇ-ಖಾತಾ ನೀಡಲು ಕಾಯ್ದೆಗೆ ತಿದ್ದುಪಡಿ ತಂದು ಬಿ-ಖಾತಾ ನೀಡಲು ಅವಕಾಶ ಕಲ್ಪಿಸಲಾಗಿದೆ. ದಿನಾಂಕ 10-09-2024ರ ಪೂರ್ವದಲ್ಲಿ ನೋಂದಣಿಯಾದ ಅನಧಿಕೃತ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಅವಕಾಶವಿದೆ. ನಾಗರಿಕರು ತಮ್ಮ ಆಸ್ತಿ ವಿವರಗಳನ್ನು ಆನ್ಲೈನ್ನಲ್ಲಿ ವೀಕ್ಷಿಸಿ, ವಿವರಗಳು ಸರಿಯಿದ್ದರೆ ನೇರವಾಗಿ ಅಂತಿಮ ಇ-ಖಾತೆಯನ್ನು ಪಡೆಯಬಹುದು. ವ್ಯತ್ಯಾಸಗಳಿದ್ದಲ್ಲಿ ಆನ್ಲೈನ್ ಮೂಲಕವೇ ಮಾಹಿತಿ ಸಲ್ಲಿಸಿ ಸರಿಪಡಿಸಿಕೊಳ್ಳಬಹುದು ಎಂದರು.

ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಮಾತನಾಡಿ, ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿದೆ. ನಮೂದಿಸಿದ ಮಾಹಿತಿಯ ನಿಖರತೆಯನ್ನು ನಗರ ಸ್ಥಳೀಯ ಸಂಸ್ಥೆಗಳು ಪರಿಶೀಲಿಸುತ್ತವೆ. ಅಂತಿಮ ಇ-ಖಾತಾವನ್ನು ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ಪಡೆಯಬಹುದಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪೌರ ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು, ಅದರಂತೆ ಈಗಾಗಲೇ ಸಾವಿರಾರು ಫಲಾನುಭವಿಗಳಿಗೆ ಮನೆ ಕೊಡುವ ಕಾರ್ಯ ರಾಜ್ಯದಲ್ಲಿ ಚಾಲ್ತಿಯಲ್ಲಿದೆ. ಬಡವರ ಮೇಲಿನ ಕಾಳಜಿಯಿಂದಾಗಿ ಮಾನ್ಯ ಮುಖ್ಯಮಂತ್ರಿಗಳು ಈ ಬಾರಿ ಮತ್ತೆ 180 ಹೊಸ ಇಂದಿರಾ ಕ್ಯಾಂಟಿನ್ ನೀಡಿದ್ದಾರೆ ಎಂದು ಸಚಿವರು ತಿಳಿಸಿದರು.

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆಸಿಫ್ ಸೇಠ್ ಅವರು ಮಾತನಾಡಿದರು. ಸಮಾರಂಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಡಾ.ಎಂ.ಬಿ.ಪಾಟೀಲ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಪೊನ್ನಣ್ಣ, ಕೂಡ್ಲಿಗಿ ಶಾಸಕ ಶ್ರೀನಿವಾಸ, ವಿಧಾನಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ನಸೀರ್ ಅಹ್ಮದ್, ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರರಾದ ಮಂಗೇಶ ಪವಾರ, ಉಪ ಮಹಾಪೌರರಾದ ವಾಣಿ ಜೋಶಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ತುμÁರ ಗಿರಿನಾಥ, ಸರ್ಕಾರದ ಕಾರ್ಯದರ್ಶಿಗಳಾದ ದೀಪಾ ಚೋಳನ್ ಸೇರಿದಂತೆ ಪ್ರಭುಲಿಂಗ ಕವಳಿಕಟ್ಟಿ, ಡಾ.ಸೆಲ್ವಮಣಿ ಆರ್ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಯ ಸದಸ್ಯರು ಮತ್ತು ಇನ್ನೀತರರು ಉಪಸ್ಥಿತರಿದ್ದರು.