Thursday, May 7, 2026
Thursday, May 7, 2026
Home Blog Page 55

Madhu Bangarappa ಗ್ರಾಮೀಣ ಭಾಗದ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರ ಶಿಕ್ಷಣ ಅರ್ಧಕ್ಕೆ ನಿಲ್ಲಬಾರದು- ಮಧು ಬಂಗಾರಪ್ಪ

0

ಶೈಕ್ಷಣಿಕ ಅಭಿವೃದ್ಧಿ ಹಾಗೂ ವಿದ್ಯಾರ್ಥಿನಿಯರ ಉನ್ನತ ಭವಿಷ್ಯದ ದೃಷ್ಟಿಯಿಂದ ನನ್ನ ಮತಕ್ಷೇತ್ರ ಸೊರಬ ಪಟ್ಟಣದಲ್ಲಿ ಸುಮಾರು ₹5.47 ಕೋಟಿ ವೆಚ್ಚದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಶಾಲಾ ಶಿಕ್ಷಣ ಸಚಿವ ಮಧುಬಂಗಾರಪ್ಪ ನೆರವೇರಿಸಿದರು.

ಗ್ರಾಮೀಣ ಭಾಗದ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿನಿಯರಿಗೆ ಶಿಕ್ಷಣ ಅರ್ಧಕ್ಕೆ ನಿಲ್ಲಬಾರದು ಎಂಬ ಉದ್ದೇಶದಿಂದ ಸುಸಜ್ಜಿತ ವಸತಿ ನಿಲಯವನ್ನು ನಿರ್ಮಿಸಲಾಗುತ್ತಿದೆ.

Madhu Bangarappa ಶಿಕ್ಷಣದಿಂದ ಮಾತ್ರ ಸಮಾಜದ ಬದಲಾವಣೆ ಮಾಡಲು ಸಾಧ್ಯ ಆದ್ದರಿಂದ ವಿದ್ಯಾರ್ಥಿನಿಯರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಸಚಿವರು ತಿಳಿಸಿದರು

Madhu Bangarappa ಕೇವಲ ₹5 ಕ್ಕೆ ತಿಂಡಿ.₹10 ಕ್ಕೆ ಊಟ ಸಿಗಲಿದ್ದು ನಿರ್ಗತಿಕರು,ಕೂಲಿ ಕಾರ್ಮಿಕರು ಇಂದಿರಾ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಿ- ಮಧು ಬಂಗಾರಪ್ಪ

0

Madhu Bangarappa ಶಿಕಾರಿಪುರ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ “ಇಂದಿರಾ ಕ್ಯಾಂಟಿನ್” ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ‌ ಉದ್ಘಾಟಿಸಿದರು.
ನಂತರ ಮುಖಂಡರೊಂದಿಗೆ ಉಪಹಾರ ಸವಿದರು.
ಬಳಿಕ ವೇದಿಕೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಸಚಿವರು ಮಾತನಾಡಿದರು. 2013ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾರಿಗೆ ತಂದ ‘ಅನ್ನಭಾಗ್ಯ’ ಯೋಜನೆ ಇಂದಿಗೂ ಬಡವರ ಪಾಲಿಗೆ ಆಸರೆಯಾಗಿದೆ. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕಿಂತಲೂ ಬಡವರ ಮತ್ತು ಹಸಿದವರ ಹಿತಾಸಕ್ತಿಗೆ ಆದ್ಯತೆ ನೀಡುತ್ತಾ ಬಂದಿದೆ. ಇಂದಿರಾ ಗಾಂಧಿಯವರ ಕಾಲದಿಂದಲೂ ಹಸಿವು ಮುಕ್ತ ಸಮಾಜ ನಿರ್ಮಾಣ ಮಾಡುವುದು ನಮ್ಮ ಪಕ್ಷದ ಮೂಲ ಮಂತ್ರವಾಗಿದೆ.

ಮಾಜಿ ಮುಖ್ಯಮಂತ್ರಿಗಳು ನನ್ನ ತಂದೆ ಶ್ರೀ ಎಸ್. ಬಂಗಾರಪ್ಪನವರು ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಿದ್ದು, ಭೂರಹಿತರಿಗೆ ಭೂಮಿ ಮಂಜೂರು ಮಾಡಿದ್ದು ಹಾಗೂ ಗ್ರಾಮೀಣ ಕೃಪಾಂಕದಂತಹ ಐತಿಹಾಸಿಕ ತೀರ್ಮಾನಗಳು ಬಂಗಾರಪ್ಪನವರ ಬಡವರ ಪರ ಕಾಳಜಿಯನ್ನು ಎತ್ತಿ ತೋರಿಸುತ್ತದೆ. ಅವರ ಆಶಯದಂತೆಯೇ ನಾವು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಕೇವಲ ₹5ಕ್ಕೆ ತಿಂಡಿ ಹಾಗೂ ₹10ಕ್ಕೆ ಗುಣಮಟ್ಟದ ಊಟ ಸಿಗಲಿದ್ದು ಪಟ್ಟಣದ ನಿರ್ಗತಿಕರು, ಕೂಲಿ ಕಾರ್ಮಿಕರು ಮತ್ತು ಸಾರ್ವಜನಿಕರು ಈ ಇಂದಿರಾ ಕ್ಯಾಂಟಿನ್ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
. ಇದೇ ವೇಳೆ ಹೆಚ್ಚಿನ ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು.

Madhu Bangarappa ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶ್ರೀ ವಿರೇಶ್, ತಹಶೀಲ್ದಾರ್ ಶ್ರೀಮತಿ ವಾಣಿ, ಪುರಸಭೆ ಮುಖ್ಯಾಧಿಕಾರಿ ಶ್ರೀ ಭರತ್ ಹಾಗೂ ಮುಖಂಡರುಗಳಾದ ಶ್ರೀ ಗೋಣಿ ಮಾಲತೇಶ್, ಶ್ರೀ ದರ್ಶನ್ ಉಳ್ಳಿ, ಶ್ರೀ ರಾಘವೇಂದ್ರ ನಾಯ್ಕ್, ಶ್ರೀಮತಿ ಪುಷ್ಪ ಸೇರಿದಂತೆ ಜನಪ್ರತಿನಿಧಿಗಳು, ಮುಖಂಡರುಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.

MESCOM ಮಾರ್ಚ್ 17. ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

0

MESCOM ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.17 ರಂದು ಸಮಯ ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ;. 94482895

Madhu Bangarappa ನೂತನ ಜೆಸಿಬಿ ಯಂತ್ರದ ಸೇರ್ಪಡೆಯಿಂದ ಕಾಮಗಾರಿಗಳು ಮತ್ತಷ್ಟು ಸುಗಮ- ಮಧು ಬಂಗಾರಪ್ಪ

0

Madhu Bangarappa ಎಸ್. ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ತಾಲೂಕಿನ ಆನವಟ್ಟಿ ಪಟ್ಟಣ ಪಂಚಾಯಿತಿಯಲ್ಲಿ ಸ್ವಚ್ಛಭಾರತ್ ಅಭಿಯಾನದ ಅನುದಾನದಡಿ ಸುಮಾರು 38 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಖರೀದಿಸಲಾದ ನೂತನ ಜೆಸಿಬಿ ಯಂತ್ರವನ್ನು ಮಧು ಬಂಗಾರಪ್ಪನವರು ಉದ್ಘಾಟಿಸಿದರು.

ಆನವಟ್ಟಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ನಂತರ ಪಟ್ಟಣದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಈ ಯಂತ್ರದ ಸೇರ್ಪಡೆಯಿಂದ ಕೆಲಸಗಳು ಮತ್ತಷ್ಟು ಸುಗಮವಾಗಲಿವೆ. ಪಟ್ಟಣದ ವ್ಯಾಪ್ತಿಯಲ್ಲಿ ಚರಂಡಿ ಹೂಳೆತ್ತುವುದು, ಘನತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆ ಮತ್ತು ತುರ್ತು ನಾಗರಿಕ ಸೇವೆಗಳಿಗಾಗಿ ಇದನ್ನು ಬಳಸಲಾಗುವುದು ಎಂದು ತಿಳಿಸಿದರು.

Madhu Bangarappa ಈ ವೇಳೆ ಜನಪ್ರತಿನಿಧಿಗಳು, ಮುಖಂಡರುಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Madhu Bangarappa ವಿದ್ಯಾರ್ಥಿಗಳಲ್ಲಿನ ವೈಜ್ಞಾನಿಕ- ಶೈಕ್ಷಣಿಕ ಪ್ರತಿಭೆ ಅನಾವರಣಕ್ಕೆ” ಡಿಜಿಟಲ್ ಸ್ಟುಡಿಯೊ” ಆರಂಭಿಸುವ ಉದ್ದೇಶವಿದೆ- ಮಧು ಬಂಗಾರಪ್ಪ.

0

Madhu Bangarappa ವಿದ್ಯಾರ್ಥಿಗಳಲ್ಲಿನ ವೈಜ್ಞಾನಿಕ- ಶೈಕ್ಷಣಿಕ ಪ್ರತಿಭೆ ಅನಾವರಣಗೊಳಿಸಲು ವೇದಿಕೆಯನ್ನು ಒದಗಿಸುವ ‘ಡಿಜಿಟಲ್ ಸ್ಟುಡಿಯೋ’ ಆರಂಭಿಸುವ ಉದ್ದೇಶ ಹೊಂದಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ನುಡಿದರು.
ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗಾಗಿ ಮಲ್ಲಿಗೇನಹಳ್ಳಿಯ
ಸನ್ನಿಧಿ ಸೆಂಟರ್ ಫಾರ್ ಪ್ಯಾಸ್ಟರಲ್ ರಿನೀವಲ್ ಚರ್ಚ್ ಇಲ್ಲಿ ಏರ್ಪಡಿಸಲಾಗಿದ್ದ ‘ ನಾನು ವಿಜ್ಞಾನಿ’ ತರಬೇತಿ ಕಾರ್ಯಾಗಾರದಲ್ಲಿ ಶವಿವಾರ ಸಂಜೆ ಭಾಗವಹಿಸಿ ಮಾತನಾಡಿದರು.
ಈಗಾಗಲೇ ಡಿಜಿಟಲ್ ಸ್ಟುಡಿಯೋಗಾಗಿ ರೂ. ೧೫ ಲಕ್ಷ ಮೀಸಲಿಡಲಾಗಿದೆ. ಇಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಸಣ್ಣ ಸಣ್ಣ ವಿಡಿಯೋ ತುಣುಕುಗಳ‌ ಮೂಲಕ ಪ್ರದರ್ಶಿಸಬೇಕು. ಆ ವಿಡಿಯೋಗಳನ್ನು ಯೂಟ್ಯೂಬ್ ನಲ್ಲಿ ಹಂಚಿಕೊಳ್ಳಲಾಗುವುದು. ಆಗ ವಿದ್ಯಾರ್ಥಿಗಳ ರೀಲ್ಸ್ ಗೀಳು ಸಹ ಕಡಿಮೆಯಾಗಲಿದ್ದು, ವಿನೂತನ ವೈಜ್ಞಾನಿಕ ಆವಿಷ್ಕಾರಗಳು, ಇತರೆ ವಿಷಯ ಕಲಿಕೆ ಕಡೆ ಹೆಚ್ಚಿನ ಗಮನ ಹರಿಯಲಿದೆ ಎಂದರು.
ಜಿ.ಪಂ ಸಿಇಓ ಹೇಮಂತ್ ಎನ್ ಮಾತನಾಡಿ, ಈ ತರಬೇತಿ‌ ಮೂಲಕ ಗ್ರಾಮೀಣ ಜ್ಞಾನ ಕೇಂದ್ರಗಳನ್ನು ಕೌತುಕದ ವಿಜ್ಞಾನ ಕಲಿಕಾ ಕೇಂದ್ರಗಳನ್ನಾಗಿ ಪರಿವರ್ತಿಸುವ ಗುರಿಯನ್ನು ಹೊಂದಲಾಗಿದ್ದು ಅರಿವು ಕೇಂದ್ರದ ಗ್ರಂಥಪಾಲಕರಿಗಾಗಿ ನಾನು ವಿಜ್ಞಾನಿ ಎಂಬ ವಿಜ್ಞಾನ ಮತ್ತು ಖಗೋಳಶಾಸ್ತ್ರ ಕಾರ್ಯಾಗಾರವನ್ನು ಯಶಸ್ವಿಯಾಗಿ ಪ್ರಾರಂಭಿಸುವ ಮೂಲಕ ವೈಜ್ಞಾನಿಕ ಮನೋಭಾವವನ್ನು ಬೆಳೆಸುವಲ್ಲಿ ಪ್ರವರ್ತಕ ಹೆಜ್ಜೆಯನ್ನು ಇಡಲಾಗಿದೆ.
Madhu Bangarappa ಈ ಪ್ರಾಯೋಗಿಕ ಅನುಭವದಲ್ಲಿ, ಗ್ರಂಥಪಾಲಕರು ತಮ್ಮದೇ ಆದ ದೂರದರ್ಶಕಗಳನ್ನು ವಿನ್ಯಾಸಗೊಳಿಸಿ, ತಯಾರಿಸಿದ್ದಾರೆ ಹಾಗೂ ಇವುಗಳ‌ಮೂಲಕ ಗ್ರಹಗಳು ಮತ್ತು ಉಪಗ್ರಹಗಳನ್ನು ವೀಕ್ಷಿಸಬಹುದಾಗಿದೆ.
ಈ ಭವಿಷ್ಯದ ಉಪಕ್ರಮದ ಭಾಗವಾಗಿ, ಶಿವಮೊಗ್ಗದಾದ್ಯಂತ ವಿಜ್ಞಾನ ಕ್ಲಬ್‌ಗಳನ್ನು ಸ್ಥಾಪಿಸಲಾಗುವುದು. ಗ್ರಂಥಪಾಲಕರು ಹವ್ಯಾಸಿ ಖಗೋಳಶಾಸ್ತ್ರಜ್ಞರಾಗಿ ಹೊಸ ಪಾತ್ರವನ್ನು ವಹಿಸಿಕೊಳ್ಳುತ್ತಾರೆ, ವಿದ್ಯಾರ್ಥಿಗಳು ಮತ್ತು ಗ್ರಾಮೀಣ ಸಮುದಾಯಗಳು ಬ್ರಹ್ಮಾಂಡದ ಅದ್ಭುತಗಳನ್ನು ಅನ್ವೇಷಿಸಲು ಮತ್ತು ವೈಜ್ಞಾನಿಕ ಕುತೂಹಲವನ್ನು ಬೆಳೆಸಲು ಮಾರ್ಗದರ್ಶನ ನೀಡುತ್ತಾರೆಂದು ಭರವಸೆ ವ್ಯಕ್ತಪಡಿಸಿದರು.
ವಿಜ್ಞಾನಿಗಳು ಮಾತನಾಡಿ, ಟೆಲಿಸ್ಕೋಪ್ ಗಳಿಗೆ ಬಹಳ ಬೇಡಿಕೆ ಇದೆ. ಗ್ರಂಥಪಾಲಕರೇ ಸಿದ್ದಪಡಿಸಿರುವ ಈ ಟೆಲಿಸ್ಕೋಪ್ ಮೂಲಕ ರಾತ್ರಿಯಲ್ಲಿ‌ ನಕ್ಷತ್ರಗಳು, ಚಲಿಸುತ್ತಿರವ ಸ್ಯಾಟಲೈಟ್ಗಳು, ಈಗ ಗುರು ಗ್ರಹವನ್ನು ಈ ಟೆಲಿಸ್ಕೋಪ್ ಮೂಲಕ ಹತ್ತಿರದಿಂದ ಕಾಣಬಹುದು.
ಗುರುಗ್ರಹ ೪೦ ಪಟ್ಟು ಹತ್ತಿರ ಕಾಣುತ್ತದೆ, ಪಶ್ಚಿಮ ಘಟ್ಟದಲ್ಲಿ‌ನ ಆಕಾಶ ಅದ್ಭುತವಾಗಿ ಕಾಣು ತ್ತದೆ ಎಂದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಸಿಇಓ ಹೇಮಂತ್ ಎನ್, ಸನ್ನಿಧಿ ಸೆಂಟರ್ ಫಾರ್ ಪ್ಯಾಸ್ಟರಲ್ ರಿನೀವಲ್ ಚರ್ಚ್ ಮುಖ್ಯಸ್ಥ ಫಾ.ಪಿಂಟೋ, ವಿಜ್ಞಾನಿಗಳು, ಗ್ರಂಥಪಾಲಕರು, ಮುಂತಾದವರು ಉಪಸ್ಥಿತರಿದ್ದರು.

B. Y. Raghavendra “ನಾನು ವಿಜ್ಞಾನಿ” ಇಂತಹ ಆತ್ಮವಿಶ್ವಾಸ ಮೂಡಿಸುವ ಕಾರ್ಯಕ್ರಮಕ್ಕೆ ಬೆಂಬಲವಿದೆ- ಸಂಸದ ಬಿ.ವೈ.ರಾಘವೇಂದ್ರ.

0

B. Y. Raghavendra ನಮ್ಮ ಶಿವಮೊಗ್ಗ ಜಿಲ್ಲಾ ಪಂಚಾಯತ್‌ನ ‘ಅರಿವು ಕೇಂದ್ರ’ದ ಮೂಲಕ ಹಮ್ಮಿಕೊಂಡಿರುವ ವಿಜ್ಞಾನ ಜಾಗೃತಿಯ ಅಪೂರ್ವ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅತಿಥಿಯಾಗಿ ಭಾಗವಹಿಸಿದ್ದರು.

ಜಿಲ್ಲಾ ಪಂಚಾಯತ್ ಸಿಇಒ ಶ್ರೀ ಹೇಮಂತ್ ಎನ್ (IAS) ಅವರ ಸಮ್ಮುಖದಲ್ಲಿ, ಗ್ರಾಮೀಣ ಭಾಗದ ಗ್ರಂಥಪಾಲಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಅರ್ಥಪೂರ್ಣ ಸಂವಾದ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ ಅವರು ಈ ಸಂವಾದದಲ್ಲಿ ಪಾಲ್ಗೊಂಡಿದ್ದರು.

B. Y. Raghavendra ತಾವೇ ಸ್ವತಃ ಟೆಲಿಸ್ಕೋಪ್ ತಯಾರಿಸಿದ ಗ್ರಂಥಪಾಲಕರ ಉತ್ಸಾಹ ಹಾಗೂ ಮಕ್ಕಳ ವೈಜ್ಞಾನಿಕ ಮಾದರಿಗಳು ಶಿವಮೊಗ್ಗವು ವೈಜ್ಞಾನಿಕವಾಗಿ ಜಾಗೃತಗೊಂಡ ಸಮಾಜವಾಗಿ ಹೊರಹೊಮ್ಮುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಗ್ರಾಮೀಣ ಭಾಗದ ಮಕ್ಕಳಲ್ಲಿ ‘ನಾನು ವಿಜ್ಞಾನಿ’ ಎನ್ನುವ ಆತ್ಮವಿಶ್ವಾಸ ಮೂಡಿಸುತ್ತಿರುವ ಈ ವಿನೂತನ ಪ್ರಯತ್ನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಬಿ.ವೈ.ರಾಘವೇಂದ್ರ ಹೇಳಿದರು.

Priyank Kharge ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಿಸಲು ಮುಂಜಾಗ್ರತಾ ಕ್ರಮ- ಪ್ರಿಯಾಂಕ್ ಖರ್ಗೆ.

0

Priyank Kharge ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ.

◆ ನೀರು ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಫ್ಲಶಿಂಗ್ ಮತ್ತು ಆಳಗೊಳಿಸಿ ನೀರಿನ ಮೂಲಗಳನ್ನು ಹೆಚ್ಚಿಸಬೇಕು.
◆ ಕೊಳವೆಬಾವಿಗಳನ್ನು ಕೊರೆಯುವುದು ಅತ್ಯಗತ್ಯವೆಂದು ಕಂಡು ಬಂದಲ್ಲಿ, ಸಂಬಂಧಪಟ್ಟ ಭೂವಿಜ್ಞಾನಿಗಳ ವರದಿಯನುಸಾರ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಕಾಮಗಾರಿಗಳನ್ನು ಕೈಗೊಳ್ಳಬೇಕು.
◆ ಕುಡಿಯುವ ನೀರಿನ ಸಮಸ್ಯೆಯನ್ನು ದೈನಂದಿನ ಆಧಾರದ ಮೇಲೆ ಮೇಲ್ವಿಚಾರಣೆ ಮಾಡಲು ಕ್ರಮವಹಿಸಬೇಕು.
ಶುದ್ಧ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಗ್ರಾಮ ಮಟ್ಟದಲ್ಲಿ ಪ್ರಾಥಮಿಕ ಹಂತವಾಗಿ ಎಲ್ಲಾ ಕುಡಿಯುವ ನೀರಿನ ಮೂಲಗಳ ಮಾದರಿಗಳನ್ನು, ಪ್ರತಿ ಗ್ರಾಮದಲ್ಲಿ ಕನಿಷ್ಠ 3 ನಳ ನೀರು ಸಂಪರ್ಕಗಳ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು ಕೈಗೊಂಡು ಮಾಹಿತಿ ದಾಖಲಿಸಬೇಕು ಎಂದು ಸೂಚಿಸಲಾಗಿದೆ.
◆ ರಾಜ್ಯದಲ್ಲಿ ಈಗಾಗಲೆ 21 ಜಿಲ್ಲೆಗಳ 144 ತಾಲ್ಲೂಕುಗಳಲ್ಲಿನ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುತ್ತದೆ, ಇವುಗಳ ಪೈಕಿ 31 ಗ್ರಾಮಗಳಿಗೆ 96 ಟ್ಯಾಂಕರ್‌ಗಳ ಮುಖಾಂತರ ಹಾಗೂ 152 ಗ್ರಾಮಗಳಿಗೆ 154 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಲಾಗಿದೆ.

Priyank Kharge 2026ನೇ ಸಾಲಿನ ಬೇಸಿಗೆಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅವಶ್ಯವಿರುವ ಮೊತ್ತವನ್ನು ಕೇಂದ್ರ ಹಾಗೂ ರಾಜ್ಯಗಳ ಬರ ಪರಿಹಾರ ನಿಧಿ ಹಾಗೂ ಇಲಾಖೆಯ ಟಾಸ್ಕ್‌ಫೋರ್ಸ್‌ ಅಡಿ ಸಂಯೋಜಿತಗೊಳಿಸಿ ಬಳಸಿಕೊಂಡು ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸಲು ಸೂಚಿಸಲಾಗಿದೆ.

Madhu Bangarappa ಬಡವರು & ಶ್ರಮಿಕರು ಹಸಿವಿನಿಂದ ಇರಬಾರದು ಎಂಬ ಉದಾತ್ತ ಉದ್ದೇಶದ ಹಿನ್ನೆಲೆಯಿಂದ ಇಂದಿರಾ ಕ್ಯಾಂಟೀನ್ ಚಾಲನೆ- ಮಧು ಬಂಗಾರಪ್ಪ.

0

Madhu Bangarappa ಬಡವರು ಮತ್ತು ಶ್ರಮಿಕ ವರ್ಗದವರು ಹಸಿವಿನಿಂದ ಇರಬಾರದು ಎಂಬ ಉದಾತ್ತ ಉದ್ದೇಶದಿಂದ ನಮ್ಮ ಸರ್ಕಾರ ಇಂದಿರಾ ಕ್ಯಾಂಟೀನ್ ಯೋಜನೆಗೆ ಮರುಜೀವ ನೀಡಿದೆ. ಈ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣವೇ ನಮ್ಮ ಮುಖ್ಯ ಗುರಿ ಎಂದು ಶಾಲಾ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
​ಅವರು ಭಾನುವಾರ ಆನವಟ್ಟಿಯಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಅನ್ನು ಲೋಕಾರ್ಪಣೆಗೊಳಿಸಿ ಸಾರ್ವಜನಿಕರನ್ನುದ್ದೇಶಿಸಿ ಅವರು ಮಾತನಾಡಿದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪ್ರಮುಖವಾಗಿದ್ದ 20 ಅಂಶಗಳ ಕಾರ್ಯಕ್ರಮದ ಆಶಯದಂತೆ, ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ರೂ.5 ಮತ್ತು 10 ರೂ.ಗಳ ಅತ್ಯಲ್ಪ ದರದಲ್ಲಿ ಗುಣಮಟ್ಟದ ಆಹಾರ ನೀಡುವ ಮೂಲಕ ಜನಸಾಮಾನ್ಯರ ಪರವಾಗಿ ನಿಂತಿದೆ. ಇದರಿಂದ ಹಸಿದವರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಆಹಾರ ಕೈಗೆಟುಕುವ ದರದಲ್ಲಿ ಮತ್ತು ಸಕಾಲದಲ್ಲಿ ಸಿಗುವುದರಿಂದ ಶ್ರಮಿಕ ವರ್ಗದವರಿಗೂ ಸಾಕಷ್ಟು ಅನುಕೂಲವಾಗಿದೆ ಎಂದರು.
​ ಜಿಲ್ಲೆಯಲ್ಲಿ ಈಗಾಗಲೇ 16 ಇಂದಿರಾ ಕ್ಯಾಂಟೀನ್‌ಗಳ ಗುರಿ ಹೊಂದಲಾಗಿದ್ದು, ಶನಿವಾರ ಹೊಳೆಹೊನ್ನೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡಿ ಇಂದು ಆನವಟ್ಟಿಯಲ್ಲಿ ಉದ್ಘಾಟಿಸಲಾಗಿದೆ. ಮತ್ತು ಶಿಕಾರಿಪುರದಲ್ಲಿ ಕಾರ್ಯಾರಂಭ ಮಾಡಲಿದೆ ಎಂದರು.
Madhu Bangarappa ಪಂಚ ಗ್ಯಾರಂಟಿಗಳ ಶಕ್ತಿ: ರಾಜ್ಯದ ಜನತೆಗೆ ಕೇವಲ ಅಕ್ಕಿ ಮಾತ್ರವಲ್ಲದೆ, ಗೃಹಲಕ್ಷ್ಮಿ ಯೋಜನೆಯಡಿ 2,000 ರೂ. ಗೌರವಧನ ಹಾಗೂ ಉಚಿತ ವಿದ್ಯುತ್ ನೀಡುವ ಮೂಲಕ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ಇದು ಸರ್ಕಾರದ ಕೊಡುಗೆಯಲ್ಲ, ಜನರ ಹಕ್ಕು ಎಂದು ಸಚಿವರು ಪ್ರತಿಪಾದಿಸಿದರು.
ಪಂಪ್‌ಸೆಟ್ ಸಕ್ರಮ: ರೈತರ ಹಿತದೃಷ್ಟಿಯಿಂದ ಬಾಕಿ ಇರುವ ಬೋರ್‌ವೆಲ್ ಪಂಪ್‌ಸೆಟ್‌ಗಳ ಸಕ್ರಮ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಸಚಿವರು ಸ್ವತಃ ಕ್ಯಾಂಟೀನ್ ಆಹಾರ ಸವಿಯುವ ಮೂಲಕ ಗುಣಮಟ್ಟವನ್ನು ಪರಿಶೀಲಿಸಿದರು.
​ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದರು.

Shivanand Patil ಯಶವಂತಪುರದಲ್ಲಿ ಶೀಘ್ರವೇ ಟೆಕ್ಸ್ ಟೈಲ್ ಪಾರ್ಕ್ ಶಂಕುಸ್ಥಾಪನೆ- ಜವಳಿ ಸಚಿವ ಶಿವಾನಂದ ಪಾಟೀಲ್.

0

Shivanand Patil ಪಾರಂಪರಿಕ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಉತ್ಪನ್ನಗಳಿಗೆ ನಮ್ಮಲ್ಲೇ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಯಶವಂತಪುರದಲ್ಲಿರುವ ಇಲಾಖೆಯ ಒಂದೂವರೆ ಎಕರೆ ಪ್ರದೇಶದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ,ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ರಾಜಾಜಿನಗರದ ಡಾ. ಬಿ.ಆರ್‌. ಅಂಬೇಡ್ಕರ್‌ ಸ್ಟೇಡಿಯಂನಲ್ಲಿ 14 ದಿನಗಳ ಭಾರತೀಯ ಕೈಮಗ್ಗ ಪರಂಪರೆ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಜೊತೆ ಚರ್ಚಿಸಿ ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಪಾರಂಪರಿಕ ಕಲೆ ನಶಿಸಿ ಹೋಗುತ್ತಿದೆ. ಈ ಕಲೆಯನ್ನು ಉಳಿಸಿ ಬೆಳೆಸಲು ಉತ್ಪನ್ನಗಳಿಗೆ ಸ್ಥಳೀಯ ಮಾರುಕಟ್ಟೆ ಕಲ್ಪಿಸಬೇಕಾಗಿದೆ. ಯಶವಂತಪುರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಟ್ಟಡದಲ್ಲಿ ಕೈಮಗ್ಗ ಉತ್ಪನ್ನಗಳು, ಚನ್ನಪಟ್ಟಣದ ಗೊಂಬೆ, ಕುಂಬಾರಿಕೆ ಸೇರಿದಂತೆ ಎಲ್ಲ ರೀತಿಯ ಪಾರಂಪರಿಕ ಕಲೆಯ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ರಾಜ್ಯದ ಕೈಮಗ್ಗ ಉತ್ಪನ್ನಗಳು ಹೊರ ರಾಜ್ಯಗಳಲ್ಲಿ ಬೇರೆ ಬೇರೆ ಬ್ರಾಂಡ್‌ಗಳಲ್ಲಿ ಮಾರಾಟವಾಗುತ್ತಿವೆ. ನಮ್ಮದೇ ಉತ್ಪನ್ನಗಳು ಬೇರೆ ರಾಜ್ಯಗಳಿಂದ ಬೇರೆ ಬ್ರಾಂಡ್‌ಗಳ ರೂಪದಲ್ಲಿ ರಾಜ್ಯಕ್ಕೆ ಬರುತ್ತಿವೆ. ಸ್ಥಳೀಯವಾಗಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದರೆ ಈ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೈಮಗ್ಗ ಕೇವಲ ಉತ್ಪಾದನಾ ಕ್ಷೇತ್ರವಷ್ಟೇ ಅಲ್ಲ, ಅದು ಭಾರತದ ಸಾಂಸ್ಕೃತಿಕ ಗುರುತು. ಕೈಗಾರಿಕೆ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವ ಜೀವಂತ ಸಂಪ್ರದಾಯ ಎಂದು ಸಚಿವರು ಬಣ್ಣಿಸಿದರು.

ನಮ್ಮ ನೇಕಾರರು ಪೀಳಿಗೆಯಿಂದ ಪೀಳಿಗೆಗೆ ತಂತ್ರಜ್ಞಾನ ಹಾಗೂ ವಿನ್ಯಾಸವನ್ನು ಸಂರಕ್ಷಣೆ ಮಾಡಿಕೊಂಡು ಬಂದಿದ್ದು, ಅದರ ಫಲವಾಗಿ ಭಾರತೀಯ ಕೈಮಗ್ಗ ಉತ್ಪನ್ನಗಳು ವಿಶ್ವದಾದ್ಯತ ಪ್ರಶಂಸೆಗೆ ಪಾತ್ರವಾಗಿವೆ ಎಂದರು.

Shivanand Patil ಕಾವೇರಿ ಹ್ಯಾಂಡ್‌ ಲೂಮ್‌ ಅಧ್ಯಕ್ಷ ಬಿ.ಜೆ. ಗಣೇಶ್‌ ಅವರು ಕೈಮಗ್ಗ ಉತ್ಪನ್ನಗಳು ಸೇರಿ ಸಾಂಪ್ರದಾಯಿಕ ಕಲೆಯ ಎಲ್ಲ ಉತ್ಪನ್ನಗಳು ಒಂದೇ ಸೂರಿನಡಿ ಸಿಗುವಂತೆ ಮಾರುಕಟ್ಟೆ ಕಲ್ಪಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಮಾಡಿದರು.

ಜವಳಿ ಇಲಾಖೆ ಅಧಿಕಾರಿಗಳಾದ ಪ್ರಭಾ ಕರಣ್‌, ಪ್ರಕಾಶ್‌, ಯೋಗೇಶ್‌ ಉಪಸ್ಥಿತರಿದ್ದರು.

ಮೇಳದಲ್ಲಿ 80 ಮಳಿಗೆಗಳಿದ್ದು, ರಾಜ್ಯದ ಕೈಮಗ್ಗ ಉತ್ಪನ್ನಗಳೊಂದಿಗೆ ಕಾಶ್ಮೀರ, ಹರಿಯಾಣ, ರಾಜಸ್ಥಾನ ಹಾಗೂ ಇತರ ಹಲವು ರಾಜ್ಯಗಳ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿದೆ.

• ಅಂತಿಮ ಹಂತದಲ್ಲಿ ಜವಳಿ ನೀತಿ
2026-30 ಅವಧಿಯ ನೂತನ ಜವಳಿ ನೀತಿ ಅಂತಿಮ ಹಂತಕ್ಕೆ ಬಂದಿದೆ. ಮೆಗಾ ಮತ್ತು ಮಿನಿ ಇಂಡಸ್ಟ್ರೀಸ್‌ಗಳನ್ನು ಒಂದೇ ಸೂರಿನ ಅಡಿಯಲ್ಲಿ ತರುವ ಪ್ರಯತ್ನ ನಡೆದಿದೆ ಎಂದು ಶಿವಾನಂದ ಪಾಟೀಲ ಹೇಳಿದರು.

ಕಲಬುರಗಿಯಲ್ಲಿ ನಿರ್ಮಾಣವಾಗುತ್ತಿರುವ ಪಿಎಂ ಮಿತ್ರ ನೂಲಿನಿಂದ ಬಟ್ಟೆ ಹಂತದವರೆಗೆ ಎಲ್ಲ ಚಟುವಟಿಕೆಗಳು ಪಾರ್ಕ್‌ನಲ್ಲಿ ಒಂದೇ ಸೂರಿನ ಅಡಿಯಲ್ಲಿ ಬರಲಿವೆ. ಈ ಯೋಜನೆ ಅನುಷ್ಠಾನವಾದರೆ ಕರ್ನಾಟಕದಲ್ಲಿ ಮೈಲಿಗಲ್ಲಾಗಲಿದೆ ಎಂದರು.

ಫೋಟೋ ಕ್ಯಾಪ್ಷನ್‌

  1. ಬೆಂಗಳೂರಿನಲ್ಲಿ ಆಯೋಜಿಸಿರುವ ಭಾರತೀಯ ಕೈಮಗ್ಗ ಪರಂಪರೆ ಪ್ರದರ್ಶನ ಉದ್ಘಾಟಿಸಿದ ಸಚಿವ ಶಿವಾನಂದ ಪಾಟೀಲ ಅವರು ಮಳಿಗೆಗಳಿಗೆ ಭೇಟಿ ನೀಡಿ ಕೈಮಗ್ಗ ಉತ್ಪನ್ನಗಳನ್ನು ವೀಕ್ಷಿಸಿದರು.
  2. ಕೈಮಗ್ಗದಲ್ಲಿ ವರನಟ ಡಾ. ರಾಜಕುಮಾರ್‌ ಮತ್ತು ಪುನೀತ್‌ ರಾಜಕುಮಾರ್‌ ಅವರ ಭಾವಚಿತ್ರ ನೇಯ್ದ ಬಟ್ಟೆಯನ್ನು ವೀಕ್ಷಿಸಿದ ಸಚಿವ ಶಿವಾನಂದ ಪಾಟೀಲ ಅವರು ನೇಕಾರರಿಂದ ಮಾಹಿತಿ ಪಡೆದರು.

Shimoga News ಮೈಕ್ರೋಪ್ಲಾಸ್ಟಿಕ್ ಇಂದು ನಮ್ಮ ರಕ್ತಪ್ರವಾಹವನ್ನ ತಲುಪಿ ಗಂಭೀರ ಆರೋಗ್ಯ ಸಮಸ್ಯೆ ತಂದೊಡ್ಡಿದೆ- ಉಮಾರೆಡ್ಡಿ

0

Shimoga News ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಮ್ಮ ಮುಂದೆ ಇರುವ ಗಂಭೀರ ಸಮಸ್ಯೆಯಾಗಿದೆ. ಜಾಗತಿಕವಾಗಿ, ಗೊಬ್ಬರವಾಗುವ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಇದನ್ನು ಪರಿಹರಿಸುವುದು ಒಂದು ಪ್ರಮುಖ ಮತ್ತು ತುರ್ತು ಸಮಸ್ಯೆಯಾಗಿದೆ ಎಂದು ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷೆ ಉಮಾ ರೆಡ್ಡಿ ತಿಳಿಸಿದರು.

ಶಿವಮೊಗ್ಗದ ಗಾಜನೂರಿನ ಸಮೀಪದಲ್ಲಿರುವ ಎಕೊವಿನ್ ನಿಯೋಧ್ಯಂ ನವೋದ್ಯಮದ ಮುಖ್ಯ ಪಾಲುದಾರರಾದ ಶ್ರೀಮತಿ ಸುನೀತ ಗಣೇಶ ಅಂಗಡಿಯವರ ಜೈವಿಕ ಪ್ಲಾಸ್ಟಿಕ್ ಉತ್ಪಾದನಾ ತಯಾರಿಕಾ ಘಟಕಕ್ಕೆ ಭೇಟಿ ನೀಡಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ ಗಣೇಶ ಅಂಗಡಿ ಇವರಿಂದ ಸನ್ಮಾನಿತರಾಗಿ ಮಾತನಾಡಿದ ಅವರು, ಇದು ಮೆಕ್ಕೆಜೋಳವನ್ನು ಬಳಸಿಕೊಂಡು ಜೈವಿಕ ವಿಘಟನೀಯ ಪ್ಲಾಸ್ಟಿಕ್ ಉತ್ಪಾದನಾ ಘಟಕವಾಗಿದೆ. ಇದು ಪ್ಲಾಸ್ಟಿಕ್‌ಗೆ ಬಾಳಿಕೆ ಬರುವ ಮತ್ತು ಆಹಾರ-ಸುರಕ್ಷಿತ ಪರ್ಯಾಯವನ್ನು ನೀಡುತ್ತದೆ. ನಮಗೆ ಪರ್ಯಾಯವಿಲ್ಲದಿದ್ದರೆ ಪ್ಲಾಸ್ಟಿಕ್ ಬಳಕೆಯನ್ನು ತಡೆಯಲು ಯಾವುದೇ ಮಾರ್ಗವಿಲ್ಲ. ದೊಡ್ಡ ಬ್ರ್ಯಾಂಡ್ ಗಳು ಸೆಣಬು ಮತ್ತು ಬಟ್ಟೆ ಚೀಲಗಳನ್ನು ಖರೀದಿಸಬಹುದಾದರೂ, ಭಾರತೀಯ ಮಾರುಕಟ್ಟೆಯ ಬಹುಭಾಗವನ್ನು ಒಳಗೊಂಡಿರುವ ಮಧ್ಯಮ ಮತ್ತು ಸಣ್ಣ ವ್ಯವಹಾರಗಳು ಪ್ಲಾಸ್ಟಿಕ್ ಚೀಲಗಳನ್ನು ಬಳಸುತ್ತಲೇ ಇವೆ ಎಂದರು.

ಪ್ಲಾಸ್ಟಿಕ್ ಮಾಲಿನ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಜಲಚರಗಳು ಮತ್ತು ಪ್ರಾಣಿಗಳ ಮೇಲೆ ಪರಿಣಾಮ ಬೀರುವುದಕ್ಕೆ ಮಾತ್ರ ಸೀಮಿತವಾಗಿಲ್ಲ. ಇಂದು, ಮೈಕ್ರೋಪ್ಲಾಸ್ಟಿಕ್ ನಮ್ಮ ರಕ್ತಪ್ರವಾಹವನ್ನು ತಲುಪಿದೆ. ಬಾಟಲಿ ನೀರಿನಲ್ಲಿ ಮೈಕ್ರೋಪ್ಲಾಸ್ಟಿಕ್ ಗಳಿವೆ. ಇದನ್ನು ಪರಿಹರಿಸುವುದು ಒಂದು ಪ್ರಮುಖ ಮತ್ತು ತುರ್ತು ಸಮಸ್ಯೆಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸನ್ಮಾನಿತ ಎಫ್ ಕೆ ಸಿ ಸಿ ಐ ಉಪಾಧ್ಯಕ್ಷ ಸಾಯಿ ರಾಮ್ ಪ್ರಸಾದ್ ಮಾತನಾಡಿ, ಶಿವಮೊಗ್ಗದಲ್ಲಿ ಇಂತಹ ತಂತ್ರಜ್ಞಾನ ಮತ್ತು ನಾವೀನ್ಯತೆ ಸಂಬಂಧಿತ ನವೋದ್ಯಮಗಳು ನಾವೀನ್ಯತೆಗೆ ಉತ್ತೇಜನ ನೀಡಲು ಅನುದಾನಗಳು ಮತ್ತು ಪ್ರೋತ್ಸಾಹಕಗಳ ಅವಶ್ಯಕತೆಯಿದೆ ಎಂದರು.

Shimoga News ಸನ್ಮಾನಿತ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಮಹಿಳಾ ಕೈಗಾರಿಕೋದ್ಯಮಿಗಳೇ ನಿಮ್ಮ ಮೇಲೆ ನೀವು ನಂಬಿಕೆ ಇಡಬೇಕು. ನಿಮ್ಮ ಕನಸುಗಳನ್ನು ಸಾಧಿಸಿ ಮತ್ತು ನಿಮ್ಮ ದೃಢನಿಶ್ಚಯದಿಂದ ಸಾಧನೆ ಮಾಡಿರಿ. ಮಹಿಳೆಯ ದೃಢಸಂಕಲ್ಪವು ಯಾವುದೇ ಸವಾಲನ್ನು ಜಯಿಸಬಹುದು. ಸಬಲೀಕರಣಗೊಂಡ ಮಹಿಳೆಯರು ಮಹಿಳೆಯರನ್ನು ಸಬಲೀಕರಣಗೊಳಿಸುತ್ತಾರೆ ಎಂದು ತಿಳಿಸಿದರು.

ಸಂಸ್ಥೆಯ ಪಾಲುದಾರರಾದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ ಗಣೇಶ ಅಂಗಡಿ ಮಾತನಾಡಿ, ಪ್ಲಾಸ್ಟಿಕ್ ಮುಕ್ತಗೊಳಿಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿ, ಶಿವಮೊಗ್ಗ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ದೃಷ್ಟಿಕೋನದತ್ತ ಶ್ರಮಿಸುವುದನ್ನು ಮುಂದುವರಿಸುತ್ತೇನೆ ಎಂದು ತಿಳಿಸಿದರು.

ಇದೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್ ರವರನ್ನು ಸನ್ಮಾನಿಸಲಾಯಿತು.

ಕೋಟ್:

ನಾವು ಪ್ಲಾಸ್ಟಿಕ್ ಬ್ಯಾಗ್ ಗಳನ್ನು ಕಡಿಮೆ ಮಾಡಿ ಬಯೋ ರಿಫಾರ್ಮ್ ಬ್ಯಾಗ್ ಬಳಸಿ ಪರಿಸರ ಮಾಲಿನ್ಯ ಕಡಿಮೆ ಮಾಡಬೇಕಿದೆ.

  • ಬಿ.ಗೋಪಿನಾಥ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ