Madhu Bangarappa ಬಡವರಿಗೆ ಸೂರು ಒದಗಿಸುವ ಆಶ್ರಯ, ಆರಾಧನಾ, ಅಕ್ಷಯ, ರೈತರ ಪಂಪ್ಸೆಟ್ಗೆ ಉಚಿತ ವಿದ್ಯುತ್ ಹೀಗೆ ಬಡವರ ಏಳ್ಗೆಗಾಗಿ ಹಲವಾರು ಯೋಜನೆಗಳನ್ನು ನೀಡಿದ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರ ಹೆಸರನ್ನು ಗೋಪಾಲಗೌಡ ಬಡಾವಣೆಯ ರಸ್ತೆಗೆ ನಾಮಕರಣ ಮಾಡುವ ಕಾರ್ಯಕ್ರಮ ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.
ಗೋಪಾಲಗೌಡ ಬಡಾವಣೆಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಮಹಾನಗರಪಾಲಿಕೆ ವ್ಯಾಪ್ತಿಯ ಆಲ್ಕೊಳ ವೃತ್ತದಿಂದ ಡಿ.ವಿ.ಜಿ. ವೃತ್ತದವರೆಗೆ 100ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಬಂಗಾರಪ್ಪ ರಸ್ತೆ ಎಂದು ನಾಮ ಫಲಕ ಉದ್ಘಾಟನೆ ಮತ್ತು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿAದ 290 ಮನೆಗಳಿಗೆ ಹಕ್ಕುಪತ್ರಗಳ ವಿತರಣೆ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಮನೆಗಳ ಕೀ ಹಸ್ತಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರ ಯೋಜನೆಗಳು, ಕಾರ್ಯಕ್ರಮಗಳು ಸದಾ ಹಸಿರಾಗಿವೆ. ಹಕ್ಕುಪತ್ರಗಳನ್ನು ವಿತರಣೆ ಮಾಡುವುದರಲ್ಲಿ ಕೂಡ ಅವರ ಚಿಂತನೆ ಇದೆ. ಗೋಪಾಲಗೌಡರ ಜಯಂತಿಯAದು ಬಂಗಾರಪ್ಪ ರಸ್ತೆ ನಾಮಕರಣವಾಗುತ್ತಿರುವುದು ಹಿರಿಯ ಚೇತನಗಳ ಆಶೀರ್ವಾದವಾಗಿದೆ ಹಾಗೂ ಉಸ್ತುವಾರಿ ಸಚಿವನಾಗಿ ಈ ಕಾರ್ಯಕ್ರಮ ಉದ್ಘಾಟಿಸುತ್ತಿರುವುದಕ್ಕೆ ನನಗೆ ಹೆಮ್ಮೆ ಮತ್ತು ನನ್ನ ಪುಣ್ಯ ಎಂದ ಅವರು ಬಂಗಾರಪ್ಪನವರ ತತ್ವ, ಸಿದ್ದಾಂತಗಳನ್ನು ಅನುಸರಿಸಿಕೊಂಡು ಹೋಗುತ್ತಿದ್ದೇನೆ ಎಂದರು.
ಆಶ್ರಯ, ಆರಾಧನಾ, ಗ್ರಾಮೀಣ ಕೃಪಾಂಕ ಯೋಜನೆಗಳು ರೈತರ 20 ಹೆಚ್ಪಿ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಿ ರೈತರ ನೆರವಿಗೆ ಬಂದಿರುವುದನ್ನು ನಾವು ಸದಾ ಸ್ಮರಿಸಬೇಕು. ಈ ಯೋಜನೆಗಳಿಂದ ರೈತರು ಆರ್ಥಿಕವಾಗಿ ಸುಧಾರಣೆಯಾಗುತ್ತಿರುವುದನ್ನು ನೋಡಿ ಸಂತೋಷವಾಗುತ್ತದೆ.
ಮಾನವೀಯತೆ ಸೇರಿದಂತೆ ಜೀವನಕ್ಕೆ ಅಗತ್ಯವಾದ ಎಲ್ಲವನ್ನು ನೀಡುವ ಶಿಕ್ಷಣ ಬಹಳ ಮುಖ್ಯವೆಂದು ಹೇಳುತ್ತಿದ್ದ ಬಂಗಾರಪ್ಪನವರು ಅಂದು ಒಂದು ಅದ್ಭುತ ಕಾರ್ಯಕ್ರಮ ತಂದರು. 90 ರ ದಶಕದಲ್ಲಿ ಬಡ ವರ್ಗಕ್ಕೆ ಶಿಕ್ಷಣ ಬಹಳ ಕಷ್ಟವಾಗಿತ್ತು. ಅಂತಹ ಸಂದರ್ಭದಲ್ಲಿ ಶಾಲೆಗೆ ಬರುವ ಮಕ್ಕಳಿಗೆ ಪ್ರತಿ ದಿನ ರೂ. 1 ನ್ನು ಅವರ ತಾಯಿಯ ಕೈಯಲ್ಲಿ ನೀಡುವ ಯೋಜನೆ ಜಾರಿಗೆ ತಂದು, ಬಡವರ ಮಕ್ಕಳು ಶಾಲೆಗೆ ಬರುವಂತೆ ಮಾಡಿದರು ಎಂದ ಅವರು ಲೋಹಿಯಾ, ಗೋಪಾಲಗೌಡರು, ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಇವರನ್ನೆಲ್ಲ ನಾವು ಸ್ಮರಿಸಲೇಬೇಕು. ಇವರ ಚಿಂತನೆಗಳು, ಅವರು ಮಾಡಿದ ಕೆಲಸಗಳು ಜೀವಂತವಾಗಿವೆ.
1000 ಕೆಪಿಎಸ್ ಶಾಲೆ : ಎಲ್ ಕೆಜಿಯಿಂದ 12 ನೇ ತರಗತಿವರೆಗೆವರೆಗೆ ಉಚಿತವಾಗಿ ಒಂದೇ ಸೂರಿನಡಿ ಶಿಕ್ಷಣ ಮತ್ತು ಉಚಿತ ಸಾರಿಗೆ ವ್ಯವಸ್ಥೆ, ಕಂಪ್ಯೂಟರ್, ಕೌಶಲ್ಯಾಭಿವೃದ್ದಿ, ಕಲೆ ಇತರೆ ಪೂರಕ ಶಿಕ್ಷಣವನ್ನು ನೀಡುವ 1000 ಕೆಪಿಎಸ್ ಶಾಲೆಗಳಿಗೆ ಗುದ್ದಲಿಪೂಜೆಯನ್ನು ಏಪ್ರಿಲ್ ಅಂತ್ಯದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಶಿವಮೊಗ್ಗದಲ್ಲಿಯೇ ನೆರವೇರಿಸುವರು ಎಂದ ಅವರು ಜಿಲ್ಲಾ ಆಸ್ಪತ್ರೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್ಗಳನ್ನು ತರುವ ಹಾಗೂ ಉಳಿದವರಿಗೆ ಹಕ್ಕುಪತ್ರಗಳನ್ನು ನೀಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
Madhu Bangarappa ಶಾಸಕರಾದ ಎಸ್.ಎನ್. ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೋಪಾಲಗೌಡ ಬಡಾವಣೆಯ ರಸ್ತೆಗೆ ಬಂಗಾರಪ್ಪನವರ ಹೆಸರನ್ನು ನಾಮಕರಣ ಮಾಡಿರುವುದು ಸಂತಸದ ವಿಷಯ. ಅಂದುಕೊAಡAತೆ ಕಾರ್ಯ ನಿರ್ವಹಣೆ ಮಾಡಿತ್ತಿದ್ದ ಧೀಮಂತ ವ್ಯಕ್ತಿ ಅವರು. ಎಂದಿಗೂ ಜಾತಿಗೆ ಅವರು ಅಂಟಿಕೊAಡಿರಲಿಲ್ಲ. ರಾಜ್ಯದ ಕಟ್ಟಕಡೆಯ ವ್ಯಕ್ತಿಯ ಬಗ್ಗೆ ಸದಾ ಚಿಂತಿಸುತ್ತಿದ್ದ ಅವರು ಅಕ್ಷಯ, ಆರಾಧನಾ, ಆಶ್ರಯದಂತಹ ಉತ್ತಮ ಯೋಜನೆಗಳನ್ನು ನೀಡಿದ ಶ್ರೇಷ್ಟ ನಾಯಕ. ಬಂಗಾರಪ್ಪನವರು ಬಡವರಿಗೆ ಸೂರು ಒದಗಿಸಲು ತಂದ ಆಶ್ರಯ ಯೋಜನೆಯಡಿ ಬಡವರಿಗೆ ಹಕ್ಕುಪತ್ರಗಳನ್ನು ನೀಡಲಾಗುತ್ತಿದೆ. ಇನ್ನೂ ಹಲವರಿಗೆ ನೀಡಬೇಕಿದೆ.
ಕೆರೆ ಕಟ್ಟೆಗಳ ಜಾಗವನ್ನು ರಕ್ಷಿಸುವ ಅಗತ್ಯವಿದೆ. ದೊಡ್ಡ ದೊಡ್ಡ ಕಟ್ಟಡಗಳು ಕೆರೆಗಳ ಜಾಗದಲ್ಲಿ ನಿರ್ಮಾಣವಾಗಿದ್ದು ಇದಕ್ಕೆ ಪರಿಹಾರ ಹುಡುಕಬೇಕಿದೆ ಎಂದ ಅವರು ಬಡವರ ಪರವಾಗಿ ನಾವೆಲ್ಲಾ ಒಟ್ಟಾಗಿ ಹೋಗೋಣ ಎಂದರು.
ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ, ಹಕ್ಕುಪತ್ರ ಇಲ್ಲದೆ ಭಯದಲ್ಲಿ ಜೀವನ ನಡೆಸುತ್ತಿದ್ದ ಜನರಿಗೆ ಹಕ್ಕುಪತ್ರ ನೀಡುವ ಮೂಲಕ ಧೈರ್ಯ ತುಂಬಲಾಗುತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಶ್ರಮಿಸುತ್ತಿದ್ದಾರೆ ಎಂದರು.
ಕರ್ನಾಟಕ ರಾಜ್ಯ ಎಸಿ/ಎಸ್ಟಿ ಅಲೆಮಾರಿಗಳ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ ಮಾತನಾಡಿ, ರೂ.100 ಕೋಟಿ ಅನುದಾನವನ್ನು ಅಲೆಮಾರಿಗಳ ಅಭಿವೃದ್ದಿಗೆ ಮೀಸಲಿಡಲಾಗಿದೆ. ಅಲೆಮಾರಿಗಳ ಮಕ್ಕಳಿಗೆ ನಾಲ್ಕು ಶಾಲೆಗಳನ್ನು ನಿರ್ಮಿಸಲು ಅವಕಾಶ ನೀಡಲಾಗಿದ್ದು, ಅದರಲ್ಲಿ ಒಂದು ಶಾಲೆಯನ್ನು ಜಿಲ್ಲೆಗೆ ತರಲು ಸಚಿವರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ(ವಿದ್ಯುತ್ ಮಗ್ಗಗಳ) ನಿಗಮದ ಅಧ್ಯಕ್ಷರಾದ ಚೇತನ್ ಕೆ ಮಾತನಾಡಿ, ಬಡವರಿಗೆ ಸೂರು ಒದಗಿಸಲು ಆಶ್ರಯ ಯೋಜನೆ ಜಾರಿಗೆ ತಂದ ಧೀಮಂತ ನಾಯಕರಾದ ಬಂಗಾರಪ್ಪನವರ ಹೆಸರನ್ನು ಅವರ ಗುರುಗಳಾದ ಸಮಾಜವಾದಿ ಹೋರಾಟಗಾರರಾದ ಗೋಪಾಲಗೌಡರ ಬಡಾವನೆಯಲ್ಲಿ ನಾಮಕರಣವಾಗುತ್ತಿರುವುದು ಅತ್ಯಂತ ಸಂತಸದ ವಿಚಾರವಾಗಿದೆ ಎಂದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ, ಡಾ.ಜಿ.ಡಿ.ನಾರಾಯಣಪ್ಪ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿAದ 290 ಮನೆಗಳಿಗೆ ಹಕ್ಕುಪತ್ರಗಳ ವಿತರಣೆ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಮನೆಗಳ ಕೀ ಹಸ್ತಾಂತರ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ನಿಖಿಲ್, ಪಾಲಿಕೆ ಆಯುಕ್ತ ಮಾಯಣ್ಣಗೌಡ, ಇತರೆ ಮುಖಂಡರು ಪಾಲ್ಗೊಂಡಿದ್ದರು.
Madhu Bangarappa ಗೋಪಾಲಗೌಡರ ಜಯಂತಿಯಂದು ಬಂಗಾರಪ್ಪ ರಸ್ತೆ ನಾಮಕರಣ: ಹಿರಿಯರ ಆಶೀರ್ವಾದವಾಗಿದೆ- ಮಧುಬಂಗಾರಪ್ಪ.
Madhu Bangarappa ಡಾ.ಅಂಬೇಡ್ಕರ್ ವಿದ್ಯಾರ್ಥಿ ನಿಲಯವು ಸಾವಿರಾರು ಬಾಲಕಿಯರ ಶಿಕ್ಷಣಕ್ಕೆ ಭದ್ರ ಆಸರೆ- ಮಧು ಬಂಗಾರಪ್ಪ
Madhu Bangarappa ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಲೋಕೋಪಯೋಗಿ ಇಲಾಖೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ “ಬೊಮ್ಮನಕಟ್ಟೆ ಹಾಗೂ ಊರುಗಡೂರು” ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ “ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ” ಕಟ್ಟಡವನ್ನು ಸನ್ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಎಸ್.ಮಧು ಬಂಗಾರಪ್ಪ ಅವರು ಉದ್ಘಾಟಿಸಿ, ಮಾತನಾಡಿದರು.
ಶಿಕ್ಷಣವು ಕೇವಲ ಅಕ್ಷರ ಜ್ಞಾನವಲ್ಲ, ಅದು ಬದುಕಿನ ದಾರಿ. ನಮ್ಮ ಗ್ರಾಮೀಣ ಭಾಗದ ಪ್ರತಿಭಾವಂತ ಹೆಣ್ಣುಮಕ್ಕಳು ಮೆಟ್ರಿಕ್ ನಂತರ ಉನ್ನತ ಶಿಕ್ಷಣಕ್ಕಾಗಿ ನಗರ ಪ್ರದೇಶಗಳಿಗೆ ಬಂದಾಗ, ಅವರಿಗೆ ಎದುರಾಗುವ ಮೊದಲ ಸವಾಲೇ ಸುರಕ್ಷಿತ ವಸತಿ. ಆ ಕೊರತೆಯನ್ನು ನೀಗಿಸಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಇಂದು ಉದ್ಘಾಟನೆಗೊಂಡಿರುವ ಈ ವಿದ್ಯಾರ್ಥಿ ನಿಲಯವು ಕೇವಲ ಒಂದು ಕಟ್ಟಡವಾಗಿರದೇ ಇದು ಸಾವಿರಾರು ಬಾಲಕಿಯರ ಶೈಕ್ಷಣಿಕ ಕನಸುಗಳಿಗೆ ಭದ್ರವಾದ ಆಸರೆ ಕಲ್ಪಿಸಲಿದೆ. ಈ ಸುಸಜ್ಜಿತ ಮತ್ತು ಸುರಕ್ಷಿತವಾದ ಈ ಪರಿಸರದಲ್ಲಿ ನಮ್ಮ ವಿದ್ಯಾರ್ಥಿನಿಯರು ಯಾವುದೇ ಆತಂಕವಿಲ್ಲದೆ ವಿದ್ಯಾಭ್ಯಾಸ ಮಾಡಿ, ನಾಡಿನ ಹೆಮ್ಮೆಯ ಪ್ರಜೆಗಳಾಗಿ ಹೊರಹೊಮ್ಮಲಿ ಎನ್ನುವುದೇ ನನ್ನ ಆಶಯವಾಗಿದೆ ಎಂದು ತಿಳಿಸಿದರು.
Madhu Bangarappa ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಶ್ ಬಾನು, ನಿಗಮದ ಅಧ್ಯಕ್ಷರಾದ ಶ್ರೀ ಚೇತನ್ ಗೌಡ, ಶ್ರೀಮತಿ ಜಿ.ಪಲ್ಲವಿ, ಜಿಲ್ಲಾಧಿಕಾರಿಗಳಾದ ಶ್ರೀ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ ಸಿಇಓ ಶ್ರೀ ಹೇಮಂತ್ ಸೇರಿದಂತೆ ಇತರೆ ಗಣ್ಯರು ಹಾಜರಿದ್ದರು.
Madhu Bangarappa ನೈತಿಕ ವಿಜ್ಞಾನ ಬೋಧನೆ ಪ್ರಸ್ತುತ ವರ್ಷದಲ್ಲೇ ಮರುಜಾರಿ: ಪಠ್ಯದಲ್ಲಿರಂಗಶಿಕ್ಷಣ ಅಳವಡಿಸಲು ಚಿಂತನೆ.- ಮಧು ಬಂಗಾರಪ್ಪ.
Madhu Bangarappa ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳ ಮಾನಸಿಕ ವಿಕಸನಕ್ಕಾಗಿ ರಂಗಶಿಕ್ಷಣವನ್ನು ಅಳವಡಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಇದರೊಂದಿಗೆ ದಶಕಗಳಿಂದ ಸ್ಥಗಿತಗೊಂಡಿದ್ದ ನೈತಿಕ ವಿಜ್ಞಾನ ವಿಷಯವನ್ನು ಈ ವರ್ಷದಿಂದಲೇ ಮರುಜಾರಿಗೊಳಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.
ಶಿವಮೊಗ್ಗದ ರಂಗಾಯಣದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಪಿ. ಲಂಕೇಶ್ ಬಯಲು ರಂಗಮಂದಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ 25-30 ವರ್ಷಗಳಿಂದ ಶಾಲಾ ಪಠ್ಯದಲ್ಲಿ ಇಲ್ಲದ ‘ನೈತಿಕ ವಿಜ್ಞಾನ’ ವಿಷಯವನ್ನು 1 ರಿಂದ 10 ನೇ ತರಗತಿಯವರೆಗೆ ಈ ವರ್ಷದಿಂದಲೇ ಪರಿಚಯಿಸಲಾಗುತ್ತಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಇದರ ಮೂಲ ಉದ್ದೇಶವಾಗಿದೆ ಎಂದರು.
ಸಾಂಸ್ಕೃತಿಕ ಕೆಪಿಎಸ್ ಶಾಲೆಗಳು: ಮೈಸೂರಿನಲ್ಲಿ ಕಲೆ ಮತ್ತು ಸಂಸ್ಕೃತಿಗೆ ವಿಶೇಷ ಒತ್ತು ನೀಡುವ ನಿಟ್ಟಿನಲ್ಲಿ ಪ್ರತ್ಯೇಕ ‘ಕಲೆ ಕರ್ನಾಟಕ ಪಬ್ಲಿಕ್ ಶಾಲೆ’ (KPS) ಆರಂಭಿಸಲು ಯೋಜನೆ ರೂಪಿಸಲಾಗಿದೆ. ಇಲ್ಲಿನ ಹಾಸ್ಟೆಲ್ ವ್ಯವಸ್ಥೆಯಡಿ ಪ್ರತಿಭಾವಂತ ಮಕ್ಕಳಿಗೆ ರಂಗಭೂಮಿ, ಸಂಗೀತ ಮತ್ತು ಜಾನಪದ ಕಲೆಗಳ ತರಬೇತಿ ನೀಡಲಾಗುವುದು ಎಂದರು.
ಶಿಕ್ಷಕರ ನೇಮಕಾತಿ: ಇಲಾಖೆಯಲ್ಲಿನ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ರಂಗ ಶಿಕ್ಷಕರನ್ನು ಅತಿಥಿ ಶಿಕ್ಷಕರ ಮಾದರಿಯಲ್ಲಿ ನೇಮಿಸಿಕೊಳ್ಳುವ ಬಗ್ಗೆಯೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.
ಇಂದಿನ ರೀಲ್ಸ್ ಮತ್ತು ಸಾಮಾಜಿಕ ಜಾಲತಾಣಗಳ ಹಾವಳಿಯಿಂದ ಮಕ್ಕಳು ದಾರಿ ತಪ್ಪದಂತೆ ತಡೆಯಲು ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿದ್ದು ರಂಗ ಶಿಕ್ಷಣಕ್ಕೆ ಉತ್ತೇಜಿಸಿ ಅನುಷ್ಟಾನ ಮಾಡಬೇಕಾಗಿದೆ ಎಂದರು.
ಕುವೆಂಪು ಅವರ ಆಶಯದಂತೆ ಮಕ್ಕಳನ್ನು ‘ವಿಶ್ವಮಾನವ’ರನ್ನಾಗಿ ರೂಪಿಸಲು ಕಲೆ ಮತ್ತು ಸಾಹಿತ್ಯ ಪೂರಕವಾಗಿವೆ, ಈ ನಿಟ್ಟಿನಲ್ಲಿ ಶಾಲಾ ಹಂತದಿಂದಲೇ ಕಲೆ ಮತ್ತು ಸಂಸ್ಕೃತಿ, ರಂಗಾಸಕ್ತಿ ಮೂಡಿಸಲು ಶಿಕ್ಷಣ ಇಲಾಖೆ ಪರಿಣಾಮಕಾರಿಯಾಗಿ ಕ್ರಮ ವಹಿಸಲಿದೆ. ಶಾಲೆಗಳಲ್ಲಿ ಸಂಗೀತ, ಚಿತ್ರಕಲಾ ವಿಶೇಷ ಶಿಕ್ಷಕರ ನೇಮಕಾತಿಗೆ ಅವಕಾಶ ಇದೆ. ಆದರೂ ಸಹ ಮಕ್ಕಳಲ್ಲಿ ರಂಗಾಸಕ್ತಿ ಮೂಡಿಸಲು ತರಬೇತಿಗೆ ರಂಗಾಯಣದ ಸೇವೆ ಪಡೆಯಲಾಗುತ್ತದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ.ಮಂಜುನಾಥ್ ಸ್ವಾಮಿ ಬಿ.ಎಸ್ ಮಾತನಾಡಿ
Madhu Bangarappa ಯಾವುದೇ ನಾಡಿನ ನಿಜವಾದ ಶ್ರೀಮಂತಿಕೆ ಅಲ್ಲಿನ ಪ್ರಕೃತಿ ಮತ್ತು ಸಂಸ್ಕೃತಿಯಲ್ಲಿ ಅಡಗಿರುತ್ತದೆ. ಇಂತಹ ಸಂಸ್ಕೃತಿಯನ್ನು ಪೋಷಿಸಿ ಬೆಳೆಸುವಲ್ಲಿ ಶಿವಮೊಗ್ಗ ರಂಗಾಯಣದ ಕೊಡುಗೆ ಅಪಾರವಾಗಿದ್ದು, ನೂತನ ಪಿ.ಲಂಕೇಶ್ ಅವರ ಹೆಸರಿನ ಬಯಲು ರಂಗಮಂದಿರದಲ್ಲಿ ಇರುವ ಸೌಲಭ್ಯಗಳು ರಂಗಚಟುವಟಿಕೆಗಳಿಗೆ ಮತ್ತಷ್ಟು ಶಕ್ತಿ ತುಂಬಲಿವೆ.
ರಂಗಭೂಮಿಯು ಕೇವಲ ಮನರಂಜನೆಯಲ್ಲ, ಅದು ಸಮಾಜದಲ್ಲಿ ಭಾವೈಕ್ಯತೆಯನ್ನು ಮೂಡಿಸುವ ಪ್ರಬಲ ಮಾಧ್ಯಮವಾಗಿದೆ. ವಿಶೇಷವಾಗಿ ಯುವ ಪೀಳಿಗೆಗೆ ರಂಗಭೂಮಿಯ ಅರಿವು ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ.
ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್ ಮತ್ತು ರೀಲ್ಸ್ಗಳ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಶಾಲೆಗಳಲ್ಲಿ ನಾಟಕ ಪ್ರದರ್ಶನಗಳ ಮೂಲಕ ಅವರಲ್ಲಿ ಸಾಂಸ್ಕೃತಿಕ ಪ್ರಜ್ಞೆ ಮೂಡಿಸಬೇಕು. ಕಲಾವಿದರ ಶ್ರಮ ಮತ್ತು ಕಲೆಗೆ ಗೌರವ ನೀಡುವ ವಾತಾವರಣ ನಿರ್ಮಾಣವಾಗಬೇಕು ಎಂದರು.
ರಾಜ್ಯದ ಆರು ರಂಗಾಯಣಗಳಲ್ಲಿ ಶಿವಮೊಗ್ಗ ರಂಗಾಯಣವು ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದೆ. ಮೈಸೂರು ರಂಗಾಯಣದ ಮಾದರಿಯಲ್ಲಿಯೇ ಶಿವಮೊಗ್ಗ ರಂಗಾಯಣವು ಜನರಿಗೆ ನಾಟಕಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗುತ್ತಿದೆ.
ಸರ್ಕಾರವು ಸೌಲಭ್ಯಗಳನ್ನು ನೀಡಬಹುದು, ಆದರೆ ರಂಗಾಯಣದ ಯಶಸ್ಸು ಅಲ್ಲಿನ ಜನಪ್ರತಿನಿಧಿಗಳು, ಆಡಳಿತ ಮಂಡಳಿ ಮತ್ತು ಸಾರ್ವಜನಿಕರ ಸಕ್ರಿಯ ಸಹಭಾಗಿತ್ವದ ಮೇಲೆ ಅವಲಂಬಿತವಾಗಿದೆ. ಎಲ್ಲರೂ ಕೈಜೋಡಿಸಿದಾಗ ಮಾತ್ರ ಸಾಂಸ್ಕೃತಿಕ ಕೇಂದ್ರಗಳು ಜೀವಂತವಾಗಿರಲು ಸಾಧ್ಯ ಎಂದರು.
ಶಾಸಕರಾದ ಆರಗ ಜ್ಞಾನೇಂದ್ರ ಮಾತನಾಡಿದರು. ಕಾರ್ಯಕ್ರಮದಲ್ಲಿ ನಾಟಕ ಅಕಾಡೆಮಿ ಅಧ್ಯಕ್ಷರಾದ ನಾಗರಾಜಮೂರ್ತಿ, ರಂಗಾಯಣ ಮಾಜಿ ನಿರ್ದೇಶಕರಾದ ಸಂದೇಶ್ ಜವಳಿ, ಎಂ.ಗಣೇಶ್, ಇಕ್ಬಾಲ್ ಅಹ್ಮದ್,
ಮಲ್ಲಿಕಾರ್ಜುನ ಕಡಕೋಳ, ಚಂದ್ರೇಗೌಡರು, ಕಾಂತೇಶ್ ಕದರಮಂಡಲಗಿ,
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ರಂಗಾಯಣದ ಆಡಳಿತಾಧಿಕಾರಿ ಡಾ.ಶೈಲಜಾ, ರಂಗ ಸಮಾಜದ ಸದಸ್ಯರು ಹಾಜರಿದ್ದರು.
Information and Public Relations Department ಶಿವಮೊಗ್ಗ ಜಿಲ್ಲಾ ಪ್ರಭಾರ ಹಿರಿಯ ಸಹಾಯಕ ನಿರ್ದೇಶಕರಾಗಿ ಬಿ.ಧನಂಜಯ ಅಧಿಕಾರ ಸ್ವೀಕಾರ
Information and Public Relations Department ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರ ಹುದ್ದೆಯ ಪ್ರಭಾರವನ್ನು ಧನಂಜಯ.ಬಿ ಇವರು ಶುಕ್ರವಾರ ವಹಿಸಿಕೊಂಡಿರುವರು.
ಇವರಿಗೆ ಸಂಬಂಧಿಸಿದ ಸರ್ಕಾರಿ, ಅರೆ ಸರ್ಕಾರಿ ಹಾಗೂ ಇವರಿಗೆ ಸಂಬಂಧಿಸಿದ ಪತ್ರ ವ್ಯವಹಾರವನ್ನು ಇವರ ಹೆಸರು ಮತ್ತು ಹುದ್ದೆಯ ಹೆಸರಿನಲ್ಲಿ ಕಳುಹಿಸಲು ತಿಳಿಸಲಾಗಿದೆ.
DC Shivamogga ಮಕ್ಕಳ ಬಗ್ಗೆ ಬಹಳ ಸೂಕ್ಷ್ಮವಾಗಿ ನಡೆದುಕೊಳ್ಳಿ. ಮಕ್ಕಳು ಅಪರಾಧಗಳಿಗೆ ಒಳಗಾಗದಂತೆ ಕಾರ್ಯ ನಿರ್ವಹಿಸಿ:ಪ್ರಭುಲಿಂಗ ಕವಳಿಕಟ್ಟಿ
DC Shivamogga ಮಕ್ಕಳಲ್ಲಿ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯದ ಕುರಿತು ಪರಿಣಾಮಕಾರಿಯಾಗಿ ಅರಿವು ಮೂಡಿಸುವ ಜೊತೆಗೆ ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಅಧಿಕಾರಿಗಳಿಗೆ ತಿಳಿಸಿದರು.
ಶಿವಮೊಗ್ಗ ಜಿಲ್ಲಾಡಳಿತ, ಜಿ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯತ್, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಿಷನ್ ಸುರಕ್ಷಾ ಅಭಿಯಾನದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಕ್ಕಳಿಗಾಗಿ ಹಾಗೂ ಸಮಾಜಕ್ಕಾಗಿ ಮಾಡುತ್ತಿರುವ ಸೇವೆ ಎಂದು ತಿಳಿದು ನಿಯಮಿತವಾಗಿ ಈ ಕಾರ್ಯ ನಿರ್ವಹಣೆಯಲ್ಲಿ ತೊಡಗಬೇಕೆಂದರು.
ಮಕ್ಕಳ ಜೀವನ ಅತ್ಯಮೂಲ್ಯವಾಗಿದ್ದು ಅವರನ್ನು ನಾವು ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಇತರೆ ಅಪರಾಧಗಳಿಂದ ರಕ್ಷಣೆ ಮಾಡಿ, ಕಡ್ಡಾಯವಾಗಿ ಶಾಲೆಗೆ ದಾಖಲಾಗುವಂತೆ ಮಾಡಬೇಕು. ಪೋಕ್ಸೊ ಪ್ರಕರಣ ಆಗದಂತೆ, ಮಾದಕ ವಸ್ತುಗಳಿಂದ ಮಕ್ಕಳನ್ನು ದೂರವಿರುವಂತೆ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು. ಮಗುವಿನ ಬೆಳವಣಿಗೆ ಹಾಗೂ ಶೈಕ್ಷಣಿಕ ಅವಕಾಶಗಳನ್ನು ಅರಿತು ಅಧಿಕಾರಿಗಳು ಸಂವೇದನಾಶೀಲತೆಯಿಂದ ನಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿ ತಾಲ್ಲೂಕಿನಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಮಿಷನ್ ಸುರಕ್ಷಾ ಪರಿಶೀಲನಾ ಸಭೆಗಳನ್ನು ನಡೆಸಲಾಗುತ್ತಿದೆ.
ಸಂಕಷ್ಟಕ್ಕೀಡಾದ, ಮಾನಸಿಕವಾಗಿ ನೊಂದ ಮಕ್ಕಳಿಗೆ ಸಾಂತ್ವನ ಮತ್ತು ನೆರವು ನೀಡುವ ‘ಟೆಲಿ ಮನಸ್’ ಸಹಾಯವಾಣಿ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಮಕ್ಕಳಿಗೆ ನಿಯಮಗಳನ್ನು ಪಾಲಿಸುವುದನ್ನು ಕಲಿಸಬೇಕು. ಈ ಎಲ್ಲ ಸಮಗ್ರ ವಿಷಯಗಳನ್ನು ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಮನದಟ್ಟು ಮಾಡುವ ಉದ್ದೇಶದಿಂದ ಪ್ರತಿ ತಾಲ್ಲೂಕು ಪರಿಶೀಲನೆ ಮಾಡಲಾಗುತ್ತಿದೆ. ಅಧಿಕಾರಿಗಳು ಈ ವಿಷಯಗಳ ಗಂಭೀರತೆ ಅರ್ಥ ಮಾಡಿಕೊಂಡು, ಯಾವುದೇ ಲೋಪವಾಗದಂತೆ ಕಾರ್ಯವೆಸಗಬೇಕು ಎಂದರು.
ಜಿಲ್ಲೆಯಲ್ಲಿ 907 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಈ ಮಕ್ಕಳನ್ನು ಮತ್ತೆ ಶಾಲೆಗೆ ದಾಖಲಿಸುವ ಕೆಲಸ ಅತ್ಯಂತ ಪರಿಣಾಮಕಾರಿಯಾಗಿ ಮಾಡಬೇಕು. ಮೇ ತಿಂಗಳಿಂದಲೇ ಶಾಲಾ ಮುಖ್ಯೋಪಾಧ್ಯಾಯರು ದುರ್ಬಲ ಮಕ್ಕಳನ್ನು ಗುರುತಿಸಿ ಪಟ್ಟಿ ಮಾಡಿ, ಮಕ್ಕಳ ಕಲ್ಯಾಣ ಸಮಿತಿ ಮುಂದೆ ತರಬೇಕು. ಆಪ್ತಸಮಾಲೋಚನೆಗೆ ಒಳಪಡಿಸುವುದು ಸೇರಿದಂತೆ ಶಾಲೆಗೆ ದಾಖಲಿಸಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಜಿ.ಪಂ ಸಿಇಓ ಹೇಮಂತ್ ಎನ್ ಮಾತನಾಡಿ, ಖಾಸಗಿ ಶಾಲೆಯವರು ಎಸ್ಎಸ್ಎಲ್ಸಿ ಯಲ್ಲಿ ತಮ್ಮ ಶಾಲೆಗೆ ಉತ್ತಮ ಫಲಿತಾಂಶ ಬರಬೇಕೆಂಬ ಉದ್ದೇಶದಿಂದ 9 ನೇ ತರಗತಿಗೆ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಶಾಲೆಯಿಂದ ಹೊರಗೆ ಕಳುಹಿಸಬಾರದು. ಶಿಕ್ಷಣದ ಗುರಿ, ಪಾಠದೊಂದಿಗೆ, ಆಟ ಮತ್ತು ಊಟವೂ ಆಗಿರಬೇಕು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆ ತರಲೇಬೇಕು. ಶಿಕ್ಷಣ ಸಚಿವರೂ ಕೂಡ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದರು.
DC Shivamogga ಶಿವಮೊಗ್ಗ ತಾಲ್ಲೂಕಿನಲ್ಲಿ ಆಧಾರ್ ಇಲ್ಲದ 11000 ಮಕ್ಕಳಿದ್ದಾರೆ. ಅಪಾರ್ ಐಡಿ ಇಲ್ಲದ 13213 ಮಕ್ಕಳಿದ್ದಾರೆ. ಆಧಾರ್ ಮತ್ತು ಅಪಾರ್ ಐಡಿ ಸೃಜಿಸಲು ಜನನ ಪ್ರಮಾಣ ಪತ್ರ ಮಾಡಿಸಿಕೊಡಬೇಕು. ಆದ್ದರಿಂದ ಈ ದಾಖಲೆಗಳನ್ನು ಮಾಡಿಸಲು ಎಲ್ಲ ಶಾಲೆಗಳಲ್ಲಿ ಮೇ, ಜೂನ್ ಮಾಹೆಯಲ್ಲಿ ಮಕ್ಕಳ ಜಾತಿ ಪ್ರಮಾಣ ಪತ್ರ ಮಾಡಿಸಲು ಕ್ರಮ ವಹಿಸಬೇಕು.
ಮುಖ್ಯೋಪಾಧ್ಯಾಯರು ಮಕ್ಕಳ ಜನನ ಪ್ರಮಾಣ ಪಡೆಯಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಅರ್ಜಿಗಳನ್ನು ಸಿದ್ದಪಡಿಸಿ ಕಳುಹಿಸಬೇಕು. ನಂತರ ಆಧಾರ್ , ಅಪಾರ್ ಗೆ ಕ್ರಮ ವಹಿಸಬೇಕು ಎಂದರು.
ಶಾಲೆಗಳಲ್ಲಿ ರಿಪೇರಿ ಮತ್ತು ಉಪಯೋಗಕ್ಕೆ ಬಾರದ ಶೌಚಾಲಯಗಳ ಪಟ್ಟಿ ಮಾಡಬೇಕು. ಶಿವಮೊಗ್ಗ ತಾಲ್ಲೂಕಿನಲ್ಲಿ ಶೌಚಾಲಯ ಇಲ್ಲದ 172 ಶಾಲಾ ಮಕ್ಕಳ ಮನೆಗಳಿದ್ದು ಪಾಲಿಕೆ ಮತ್ತು ಸ್ಥಳೀಯ ಸಂಸ್ಥೆ ವತಿಯಿಂದ ಶೌಚಾಲಯ ಕಟ್ಟಿಸಲು ಕ್ರಮ ವಹಿಸಬೇಕೆಂದು ಸೂಚಿಸಿದರು.
ಮಕ್ಕಳಲ್ಲಿ ಎಲ್ಲ ರೀತಿಯಿಂದ ಅರಿವು ಮೂಡಿಸುವ ಕಾವಲು ಸಮಿತಿ ಸಭೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಪಿಡಿಓ ಗಳು ಶೌಚಾಲಯ ಇಲ್ಲದ ಮನೆಗಳನ್ನು ಗುರುತಿಸಿ, ಸ್ವಯಂ ಅರ್ಜಿ ಹಾಕಿ ಪಂಚತಂತ್ರ ಯೋಜನೆಯಡಿ ಶೌಚಾಲಯ ಕಟ್ಟಿಸಿಕೊಡಲು ಕ್ರಮ ವಹಿಸಬೇಕು.
ವಿದ್ಯಾರ್ಥಿ ವೇತನ ಪಡೆಯಲು ಬಾಕಿ ಇರುವ ಮಕ್ಕಳಿಗೆ ಸಂಬಂಧಿಸಿದಂತೆ ಎಲ್ಲ ಶಾಲೆಗಳ ಪ್ರಾಂಶುಪಾಲರು ಅರ್ಜಿ ಸಲ್ಲಿಸಲು ಅವಕಾಶ ಇದೆ. ಅಭಿಯಾನದ ಮಾದರಿಯಲ್ಲಿ ಜಾತಿ ಪ್ರಮಾಣ ಪತ್ರ ಮಾಡಿಸಲು ಕ್ರಮ ವಹಿಸಿ ಎಲ್ಲ ಮಕ್ಕಳು ವಿದ್ಯಾರ್ಥಿವೇತನ ಇತರೆ ಸೌಲಭ್ಯ ಪಡೆಯಲು ಸಾಧ್ಯವಾಗುವಂತೆ ಮಾಡಬೇಕು. ಪ್ರಗತಿ ಮತ್ತು ಅಂತರ ಇಲಾಖೆ ಸಮನ್ವಯಕ್ಕಾಗಿ ಪ್ರತಿ ತಿಂಗಳ ಮೊದಲ ಮಂಗಳ ವಾರ ಕಾವಲು ಸಮಿತಿ ಸಭೆ ನಡೆಸಿ ಕ್ರಮ ವಹಿಸಬೇಕು.
ಮಕ್ಕಳ ಸಾಕ್ಷರತಾ ಕ್ಲಬ್ ಚಟುವಟಿಕೆಗಳು ತುಂಬಾ ಮುಖ್ಯವಾಗಿದ್ದು, ಪೋಷಕರ-ಶಿಕ್ಷಕರ ಸಭೆ ನಡೆಸಿ, ಮಕ್ಕಳ ನಡವಳಿಕೆ ಸಮಸ್ಯೆಗಳನ್ನು ಗುರುತಿಸಿ ಸರಿಪಡಿಸಬೇಕು. ಬಾಲ್ಯ ವಿವಾಹ, ಪೋಕ್ಸೊ ಅಪರಾಧದ ಬಗ್ಗೆ, ಬಹು ಮುಖ್ಯವಾಗಿ ಮಕ್ಕಳ ಮೇಲಿನ ದೌರ್ಜನ್ಯ ಎಂದರೇನು ಎಂಬುದನ್ನು ಸಮರ್ಪಕವಾಗಿ ಮತ್ತು ನಿರಂತರವಾಗಿ ಮಕ್ಕಳಿಗೆ ತಿಳಿಸಬೇಕು. ಚಿತ್ರಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಿಸಬೇಕು
ಶಿವಮೊಗ್ಗ ತಾಲ್ಲೂಕಿನಲ್ಲಿ 29 ಬಾಲ್ಯ ವಿವಾಹ ಪ್ರಕರಣಗಳಿದ್ದು, 15 ವಿವಾಹ ನಡೆದಿದ್ದು, 14 ವಿವಾಹ ತಡೆಯಲಾಗಿದೆ. 09 ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆ. ಇನ್ನುಳಿದ 20 ಮಕ್ಕಳನ್ನು ಶಾಲೆಗೆ ಕರೆತರಲೇಬೇಕು. ಹಾಗೆ ಕ್ರಮ ವಹಿಸಬೇಕು. ಮುಖ್ಯ ಶಿಕ್ಷಕರು ಹಾಗೂ ಪಿಡಿಓ ಮನೆಯಲ್ಲಿರುವ ಮಕ್ಕಳನ್ನು ಶಾಲೆಗೆ ಸೇರಿಸಬೇಕು.
ತಾಲ್ಲೂಕಿನಲ್ಲಿ 85 ಲೈಂಗಿಕ ದೌರ್ಜನ್ಯ (ಪೋಕ್ಸೊ) ಪ್ರಕರಣ ದಾಖಲಾಗಿದ್ದು ಮಕ್ಕಳ ಮೇಲಿನ ಅಪರಾಧ ತಡೆಯಲು ಕಾವಲು ಸಮಿತಿ ಸಭೆಗಳಲ್ಲಿ, ಮಕ್ಕಳ ಗ್ರಾಮ ಸಭೆಗಳಲ್ಲಿ ಪರಿಣಾಮಕಾರಿಯಾಗಿ ಮಕ್ಕಳಲ್ಲಿ ಅರಿವು ಮೂಡಿಸಬೇಕು ಎಂದರು.
ಜಿಲ್ಲಾಧಿಕಾರಿಗಳು, ಮಕ್ಕಳ ಜೀವನ ಹಾಳಾಗ್ತಾ ಇದೆ. ನಾವು ಕೇವಲ ಅಂಕಿ ಸಂಖ್ಯೆಗಳಲ್ಲಿ ಈ ಪ್ರಕರಣಗಳನ್ನು ನೋಡದೆ, ಮಾನವೀಯತೆಯಿಂದ ಕೆಲಸ ಮಾಡಬೇಕು ಎಂದರು.
ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 11 ಮಕ್ಕಳ ಪೈಕಿ 6 ಮಕ್ಕಳನ್ನು ಎನ್ ಆರ್ ಸಿ ಗೆ ದಾಖಲಿಸಲಾಗಿದೆ. 3 ಮಕ್ಕಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲ ತೀವ್ರ ಅಪೌಷ್ಟಿಕತೆಯ ಮಕ್ಕಳ ಮನೆಯನ್ನು ವೈದ್ಯರು ಪ್ರತಿ ತಿಂಗಳು ಕಡ್ಡಾಯವಾಗಿ ಭೇಟಿ ಮಾಡಿ ಪರಿಶೀಲಿಸಬೇಕು ಎಂದು ಸೂಚಿಸಿದರು. ವಿಕಲಚೇತನ ಮಕ್ಕಳಿಗೆ ಅಗತ್ಯವಾದ ನೆರವನ್ನು ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ‘ಪಬ್ಲಿಕ್ ಐ ವಾಟ್ಸಾಪ್ ಗ್ರೂಪ್’ ಟೆಲಿ ಮನಸ್ ಸಹಾಯವಾಣಿ 14416 ರ ಕುರಿತಾದ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾಹಿತಿ ನೀಡಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತಾಜುದ್ದೀನ್ ಖಾನ್ ಮಕ್ಕಳ ಬಗೆಗಿನ ಅಪರಾಧಗಳ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರಾದ ಕೆ ಮಾಯಣ್ಣ ಗೌಡ, ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಹತ್ತು ತಿಂಗಳ ತೋಟಗಾರಿಕಾ ತರಬೇತಿಗೆ ಆಸಕ್ತ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
2026-27ನೇ ಸಾಲಿಗೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 02/05/2026 ರಿಂದ 28/02/2027 ರವರೆಗೆ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 13 ರವರೆಗೆ ಅರ್ಜಿಗಳನ್ನು ತೋಟಗಾರಿಕೆ ಇಲಾಖೆಯ ವೆಬ್ಸೈಟ್https://horticulturedir.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳುಬಹುದು ಅಥವಾ ಜಿಲ್ಲೆಯ ತೋಟಗಾರಿಕೆ ಹಿರಿಯ ಸಹಾಯ ನಿರ್ದೇಶಕರು(ರಾಜ್ಯವಲಯ) ಇವರ ಕಚೇರಿಯಿಂದ ಅಥವಾ ಆಯಾ ತಾಲ್ಲೂಕಿನಲ್ಲಿರುವ ತೋಟಗಾರಿಕೆ ಇಲಾಖೆಯ ಕಚೇರಿಯಿಂದ ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಭರ್ತಿಮಾಡಿದ ಅರ್ಜಿಯನ್ನು ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಯು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-222794/ 9686950460 ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Klive Special Article ಪರೀಕ್ಷೆಯ ಸಮಯ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಒಂದಿಷ್ಟು ಮಾಹಿತಿ- ತಾಜುದ್ದೀನ್ ಖಾನ್
Klive Special Article ಇನ್ನೇನು ಕೆಲವೇ ದಿನಗಳಲ್ಲಿ SSLC ಪರೀಕ್ಷೆಗಳು ಆರಂಭವಾಗಲಿವೆ. ಪ್ರತಿಯೊಬ್ಬ ವಿದ್ಯಾರ್ಥಿಯ ವಿದ್ಯಾಭ್ಯಾಸದ ಪ್ರಯಾಣದಲ್ಲಿ SSLC ಪರೀಕ್ಷೆ ಒಂದು ಮಹತ್ವದ ಹಂತವಾಗಿದೆ. ಇದು ಕೇವಲ ಜ್ಞಾನವನ್ನು ಪರೀಕ್ಷಿಸುವುದಷ್ಟೇ ಅಲ್ಲ, ಆತ್ಮವಿಶ್ವಾಸ, ತಯಾರಿ ಮತ್ತು ದೃಢನಿಶ್ಚಯವನ್ನು ಪರೀಕ್ಷಿಸುವ ಪ್ರಮುಖ ಅವಕಾಶವೂ ಆಗಿದೆ.
ಪರೀಕ್ಷೆ ಹತ್ತಿರವಾಗುತ್ತಿದ್ದಂತೆ ವಿದ್ಯಾರ್ಥಿಗಳ ಜೊತೆಗೆ ಪೋಷಕರಲ್ಲಿಯೂ ಆತಂಕ ಹೆಚ್ಚಾಗುವುದು ಸಹಜ. ಒಂದು ವರ್ಷದ ಕಾಲ ನಿರಂತರವಾಗಿ ಪರಿಶ್ರಮ ಪಟ್ಟಿರುವ ತಮ್ಮ ಮಕ್ಕಳಿಗೆ ಉತ್ತಮ ಫಲಿತಾಂಶ ಬರಬೇಕು ಎಂಬ ಆಶೆಯು ಪ್ರತಿಯೊಬ್ಬ ಪೋಷಕರಲ್ಲಿಯೂ ಇರುತ್ತದೆ. ವಿದ್ಯಾರ್ಥಿಗಳಿಗೂ ಕೂಡ ಎಲ್ಲವನ್ನೂ ಓದಿದ್ದೇನೆ ಎಂಬ ನಂಬಿಕೆ ಇದ್ದರೂ, ಪರೀಕ್ಷೆಯ ಸಂದರ್ಭದಲ್ಲಿ ಮರೆತುಹೋಗಬಹುದೇ ಎಂಬ ಭಯ ಉಂಟಾಗುವುದು ಸಹಜ. ಆದ್ದರಿಂದ ಈ ಸಮಯದಲ್ಲಿ ಸರಿಯಾದ ತಯಾರಿ ಮತ್ತು ಆತ್ಮಸ್ಥೈರ್ಯ ಬಹಳ ಮುಖ್ಯ.
ಪರೀಕ್ಷೆಗೆ ತಯಾರಾಗುವ ಕೆಲವು ಮುಖ್ಯ ಸಲಹೆಗಳು
ಪರೀಕ್ಷೆಗೆ ಇನ್ನು ಕೆಲವೇ ದಿನಗಳು ಉಳಿದಿರುವ ಕಾರಣ ವಿದ್ಯಾರ್ಥಿಗಳು ತಮ್ಮ ತಯಾರಿಯನ್ನು ಸರಿಯಾದ ರೀತಿಯಲ್ಲಿ ಮುಂದುವರಿಸಬೇಕು.
- ಸರಿಯಾದ ಯೋಜನೆ:
ವಿದ್ಯಾರ್ಥಿಗಳು ಓದಿನ ಕುರಿತು ಸ್ಪಷ್ಟವಾದ ಯೋಜನೆಯನ್ನು ರೂಪಿಸಬೇಕು. ಯಾವ ವಿಷಯದಲ್ಲಿ ಅಂಕಗಳು ಕಡಿಮೆ ಬರುತ್ತಿವೆ ಎಂಬುದನ್ನು ಗಮನಿಸಿ ಆ ವಿಷಯಕ್ಕೆ ಹೆಚ್ಚು ಸಮಯ ಮೀಸಲಿಡಬೇಕು. - ವಿಷಯವಾರು ಸಮಯ ನಿರ್ಧಾರ:
ಪ್ರತಿ ವಿಷಯಕ್ಕೂ ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿ ನಿಯಮಿತವಾಗಿ ಅಧ್ಯಯನ ಮಾಡುವುದು ಉತ್ತಮ. - ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ ಬಳಕೆ ಕಡಿಮೆ:
ಪರೀಕ್ಷೆ ಸಮಯದಲ್ಲಿ ಮೊಬೈಲ್, ವಾಟ್ಸಾಪ್, ಇನ್ಸ್ಟಾಗ್ರಾಮ್, ಫೇಸ್ಬುಕ್, ಯೂಟ್ಯೂಬ್ ಮುಂತಾದ ಸೋಶಿಯಲ್ ಮೀಡಿಯಾ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು. ಅನಗತ್ಯ ಸಮಯ ವ್ಯರ್ಥವಾಗುವುದನ್ನು ತಪ್ಪಿಸಬೇಕು. - ಧ್ಯಾನ ಮತ್ತು ಮನಶಾಂತಿ:
ನಿರಂತರ ಅಧ್ಯಯನದಿಂದ ಮಾನಸಿಕ ಒತ್ತಡ ಹೆಚ್ಚಾಗಬಹುದು. ಆದ್ದರಿಂದ ಪ್ರತಿದಿನ ಸ್ವಲ್ಪ ಸಮಯ ಧ್ಯಾನ ಅಥವಾ ಪ್ರಾಣಾಯಾಮ ಮಾಡುವುದರಿಂದ ಏಕಾಗ್ರತೆ ಹೆಚ್ಚುತ್ತದೆ. - ಕೀ ನೋಟ್ಸ್ ತಯಾರಿ:
ಪ್ರತಿ ವಿಷಯದಲ್ಲಿರುವ ಪ್ರಮುಖ ಅಂಶಗಳು, ಸೂತ್ರಗಳು, ಹೆಸರುಗಳು ಮತ್ತು ದಿನಾಂಕಗಳನ್ನು ಕೀ ನೋಟ್ಸ್ ರೂಪದಲ್ಲಿ ಬರೆಯುವುದರಿಂದ ಅವುಗಳನ್ನು ಸುಲಭವಾಗಿ ನೆನಪಿನಲ್ಲಿ ಇಟ್ಟುಕೊಳ್ಳಬಹುದು. - ಕಥೆಯ ರೂಪದಲ್ಲಿ ಮನನ:
ಓದಿದ ವಿಷಯಗಳನ್ನು ಕಥೆಯ ರೂಪದಲ್ಲಿ ಮನಸ್ಸಿನಲ್ಲಿ ಮನನ ಮಾಡುವುದರಿಂದ ನೆನಪಿನಲ್ಲಿ ಉಳಿಯಲು ಸಹಾಯವಾಗುತ್ತದೆ. - ಅಧ್ಯಯನಕ್ಕೆ ಸೂಕ್ತ ಸ್ಥಳ:
ಮನೆಯಲ್ಲಿ ಶಾಂತವಾದ ಸ್ಥಳವನ್ನು ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡಬೇಕು. ಟಿವಿ, ಮೊಬೈಲ್ ಮತ್ತು ಇತರೆ ಮನೋರಂಜನಾ ಸಾಧನಗಳಿಂದ ದೂರವಿರಬೇಕು. - ನಿರಂತರ ಪುನರಾವರ್ತನೆ:
ಪ್ರತಿ ದಿನ ಓದಿದ ವಿಷಯಗಳನ್ನು ಪುನರಾವರ್ತನೆ ಮಾಡುವುದರಿಂದ ವಿಷಯ ಸ್ಪಷ್ಟವಾಗುತ್ತದೆ. - ಮಧ್ಯೆ ಚಿಕ್ಕ ವಿಶ್ರಾಂತಿ:
ಒಂದು ಗಂಟೆ ಓದಿದ ನಂತರ ಕೆಲವು ನಿಮಿಷಗಳ ವಿರಾಮ ತೆಗೆದುಕೊಳ್ಳುವುದು ಉತ್ತಮ. ಸ್ವಲ್ಪ ನಡಿಗೆ ಮಾಡಿದರೆ ಮನಸ್ಸು ಚೈತನ್ಯವಾಗುತ್ತದೆ. - ಹಿಂದಿನ ಪ್ರಶ್ನೆಪತ್ರಿಕೆ ಅಭ್ಯಾಸ:
ಹಿಂದಿನ 5 ರಿಂದ 10 ವರ್ಷಗಳ ಪ್ರಶ್ನೆಪತ್ರಿಕೆಗಳನ್ನು ಅಭ್ಯಾಸ ಮಾಡುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. - ಸಮರ್ಪಕ ನಿದ್ರೆ:
ಪರೀಕ್ಷೆ ಸಮಯದಲ್ಲಿ ಅನೇಕ ವಿದ್ಯಾರ್ಥಿಗಳು ಕಡಿಮೆ ನಿದ್ರೆ ಮಾಡುತ್ತಾರೆ. ಆದರೆ ಪ್ರತಿದಿನ ಕನಿಷ್ಠ 6 ರಿಂದ 8 ಗಂಟೆಗಳ ನಿದ್ರೆ ಅಗತ್ಯ. - ಆರೋಗ್ಯಕರ ಆಹಾರ:
ಹೊರಗಿನ ಜಂಕ್ ಫುಡ್ ತಿನ್ನುವುದನ್ನು ತಪ್ಪಿಸಿ ಮನೆಯಲ್ಲೇ ಸಿದ್ಧಪಡಿಸಿದ ಆರೋಗ್ಯಕರ ಆಹಾರವನ್ನು ಸೇವಿಸಬೇಕು. - ಏಕಾಗ್ರತೆ ಅತ್ಯಂತ ಮುಖ್ಯ:
ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಮನಸ್ಸಿನ ಏಕಾಗ್ರತೆ ಬಹಳ ಮುಖ್ಯ.
ಪರೀಕ್ಷೆ ದಿನದ ತಯಾರಿ
ಪರೀಕ್ಷೆ ದಿನ ವಿದ್ಯಾರ್ಥಿಗಳು ಮುಂಚಿತವಾಗಿ ಹಾಲ್ ಟಿಕೆಟ್, ಪೆನ್ನುಗಳು, ನೀರಿನ ಬಾಟಲ್ ಹಾಗೂ ಅಗತ್ಯ ವಸ್ತುಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಇದರಿಂದ ಅನಗತ್ಯ ಆತಂಕ ತಪ್ಪುತ್ತದೆ.
ಪರೀಕ್ಷೆ ಸಂದರ್ಭದಲ್ಲಿ ಇತರ ವಿದ್ಯಾರ್ಥಿಗಳೊಂದಿಗೆ ಹೋಲಿಕೆ ಮಾಡಿಕೊಳ್ಳುವುದು ಸರಿಯಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯ ಸಾಮರ್ಥ್ಯ ವಿಭಿನ್ನವಾಗಿರುತ್ತದೆ. ತಾವು ಓದಿದ ವಿಷಯಗಳನ್ನು ಆತ್ಮವಿಶ್ವಾಸದಿಂದ ಬರೆಯುವುದೇ ಮುಖ್ಯ.
ಒಂದು ವಿಷಯದ ಪರೀಕ್ಷೆ ಮುಗಿದ ನಂತರ ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುವುದಕ್ಕಿಂತ ಮುಂದಿನ ಪರೀಕ್ಷೆಗೆ ತಯಾರಿ ನಡೆಸುವುದು ಉತ್ತಮ.
ಪೋಷಕರ ಪಾತ್ರ
Klive Special Article ಪರೀಕ್ಷೆಯ ಸಮಯದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳು ಒತ್ತಡಕ್ಕೆ ಒಳಗಾಗದಂತೆ ಅವರಿಗೆ ಧೈರ್ಯ ಮತ್ತು ಪ್ರೋತ್ಸಾಹ ನೀಡಬೇಕು. ಮನೆಯಲ್ಲಿ ಶಾಂತವಾದ ವಾತಾವರಣವನ್ನು ನಿರ್ಮಿಸಿ ಮಕ್ಕಳ ಅಧ್ಯಯನಕ್ಕೆ ಸಹಕಾರ ನೀಡಬೇಕು.
ಮಕ್ಕಳ ಮೇಲೆ ಅನಗತ್ಯ ಒತ್ತಡ ಹಾಕದೆ, ಅವರು ಓದಿದ ವಿಷಯಗಳನ್ನು ಧೈರ್ಯದಿಂದ ಬರೆಯಲು ಉತ್ತೇಜಿಸುವುದು ಅತ್ಯಂತ ಮುಖ್ಯ.
ಪರೀಕ್ಷೆಯನ್ನು ಭಯದಿಂದ ನೋಡುವುದಕ್ಕಿಂತ ತಮ್ಮ ಪರಿಶ್ರಮವನ್ನು ತೋರಿಸಲು ಸಿಕ್ಕಿರುವ ಅವಕಾಶ ಎಂದು ನೋಡಬೇಕು. ಆತ್ಮವಿಶ್ವಾಸ ಮತ್ತು ನಿರಂತರ ಪರಿಶ್ರಮ ಇದ್ದರೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಫಲಿತಾಂಶ ಪಡೆದು ಉಜ್ವಲ ಭವಿಷ್ಯದತ್ತ ಸಾಗಬಹುದು.
ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಹಾರ್ದಿಕ ಶುಭಾಶಯಗಳು.
ತಾಜುದ್ದೀನ್ ಖಾನ್
ಅಧ್ಯಕ್ಷರು
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ(ನ್ಯಾಯಪೀಠ)
ಶಿವಮೊಗ್ಗ ಜಿಲ್ಲೆ
9538832526
S. Madhu Bangarappa ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಮಾಹಿತಿ
S. Madhu Bangarappa ಶಿವಮೊಗ್ಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರು ಮಾ.14 ಮತ್ತು 15 ರಂದು ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮಾ.14 ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಜಿಲ್ಲೆಯ ಹೊಳೆಹೊನ್ನೂರು ತಾಲ್ಲೂಕಿನಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ ನೆರವೇರಿಸುವರು. ಬೆ 11.30 ಕ್ಕೆ ಜಿಲ್ಲೆಯ ಮಹಾನಗರಪಾಲಿಕೆ ವ್ಯಾಪ್ತಿಯ ಆಲ್ಕೋಳ ವೃತ್ತದಿಂದ ಡಿ.ವಿ.ಜಿ ವೃತ್ತದವರೆಗೆ 100 ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಬಂಗಾರಪ್ಪ ರಸ್ತೆ ಎಂಬ ನಾಮ ಫಲಕ ಉದ್ಘಾಟನೆ ಮತ್ತು ಗೋಪಾಲಗೌಡ ಬಡಾವಣೆಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 290 ಮನೆಗಳಿಗೆ ಹಕ್ಕುಪತ್ರ ವಿತರಣೆ ಮತ್ತು ಆಶ್ರಯ ಯೋಜನೆ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಮನೆಗಳ ಕೀ ಹಸ್ತಾಂತರ ಕಾರ್ಯಕ್ರಮ ಕೈಗೊಂಡು ಮಧ್ಯಾಹ್ನ 1.30 ಕ್ಕೆ ಬೊಮ್ಮನಕಟ್ಟೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ ಮಾಡಲಿದ್ದಾರೆ ಮತ್ತು ಸಂಜೆ 4.00 ಗಂಟೆಗೆ ಸುವರ್ಣ ಸಂಸ್ಕೃತಿ ಭವನ ಆವರಣ, ರಂಗಾಯಣ ಇಲ್ಲಿ ನೂತನವಾಗಿ ನಿರ್ಮಾಣವಾಗಿರುವ ‘ಪಿ.ಲಂಕೇಶ್’ ಬಯಲು ರಂಗಮಂದಿರ ಉದ್ಘಾಟನೆ ಹಾಗೂ ಸಂಜೆ 5.00 ಗಂಟೆಗೆ ಚಾಲುಕ್ಯನಗರದ ಸಾಹಿತ್ಯಗ್ರಾಮದಲ್ಲಿ ಜಿಲ್ಲೆಯ ಇಪ್ಪತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಮಾರ್ಚ್15 ರ ಭಾನುವಾರದಂದು ಬೆಳಗ್ಗೆ 9.30 ಕ್ಕೆ ಸೊರಬ ತಾಲ್ಲೂಕಿನ ಆನವಟ್ಟಿ ಇಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ ನೆರವೇರಿಸುವರು. ಬೆಳಿಗ್ಗೆ 10.30 ಕ್ಕೆ ಸೊರಬ ತಾಲ್ಲೂಕಿನ ಚಿತ್ರಟ್ಟೆಹಳ್ಳಿಯಲ್ಲಿ ಕರ್ನಾಟಕ ರಾಜ್ಯ ಖನಿಜಗಳ ನಿಯಮಿತದ ಸಿ.ಎಸ್.ಆರ್ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಗ್ರಾಮೀಣ ಬಸ್ ನಿಲ್ದಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
S. Madhu Bangarappa ಬೆಳಿಗ್ಗೆ 11.00 ಕ್ಕೆ ಸೊರಬದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಕಟ್ಟಡ ಗುದ್ದಲಿ ಪೂಜೆ ಹಾಗೂ ಅಕ್ಷರದಾಸೋಹ ನಿವೃತ್ತ ಅಡುಗೆ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮ ಸಮಾರಂಭ ಹಾಗೂ 2025-26ನೇ ಸಾಲಿನ ಮೀನುಗಾರಿಕೆ ಇಲಾಖೆಯ 30 ಫಲಾನುಭವಿಗಳಿಗೆ ಮೀನುಗಾರಿಕೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 12 ಗಂಟೆಗೆ ಶಿಕಾರಿಪುರದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಎಲ್ಲಾ ಯುವಜನರೂ ಸ್ವಪ್ರೇರಣೆಯಿಂದ ರಕ್ತನೀಡಿ, ಪವಿತ್ರ ರಕ್ತದಾನಿಗಳಾಗಿ- ಡಿ.ಆರ್.ಸಂದೀಪ್.
ರಕ್ತದಾನ ಶ್ರೇಷ್ಠದಾನ ರಕ್ತದಾನ ಪವಿತ್ರದಾನ ರಕ್ತದಾನಕ್ಕಿಂತ ಬೇರೆ ದಾನ ಮತ್ತೊಂದಿಲ್ಲ ಎಂದು ಶಂಕರ್ ನಾರಾಯಣ ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್ ನ ಅಭಿಯಂತರರಾದ ಸಂದೀಪ್ ಡಿಆರ್ ನುಡಿದರು. ಅವರು ಜೋಗದ ಶಂಕರ್ ನಾರಾಯಣ ಕನ್ಸ್ಟ್ರಕ್ಷನ್ ಪ್ರವೇಟ್ ಲಿಮಿಟೆಡ್ ಶಿವಮೊಗ್ಗ ರೆಡ್ ರಕ್ತ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಚಾಲನೆ ನೀಡಿ ಮಾತನಾಡಿದರು. ಇಂದು ಸಕಾಲದಲ್ಲಿ ರಕ್ತ ಸಿಗದೇ ಸಾಕಷ್ಟು ಜನ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಯುವ ಯುವತಿಯರು ಮುಂದೆ ಬಂದು ರಕ್ತದಾನ ಮಾಡಿ ಪವಿತ್ರ ರಕ್ತದಾನಿಗಳಾಗಬೇಕೆಂದು ಕರೆ ನೀಡಿದರು 120 ಬಾರಿ ರಕ್ತದಾನ ಮಾಡಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಧರಣೇಂದ್ರ ದಿನಕರ್ ಅವರು ರಕ್ತದಾನದಿಂದ ದೀರ್ಘಾಯುಷ್ಯವುಳ್ಳವರಾಗಬಹುದು ಹಾಗೂ ಸದಾ ಆರೋಗ್ಯವಂತರಾಗಿ ಬದುಕಬಹುದು ಹಾಗೆ ಪ್ರತಿನಿತ್ಯ ನಾವು ಲವಲವಿಕೆಯಿಂದ ಇರಲು ಸಾಧ್ಯ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಕಾರ್ಯ ನಿರ್ವಾಹಕ ಅಭಿಯಂತರರಾದ ಉಮಾಪತಿ ಅವರು ಮಾತನಾಡುತ್ತಾ ಇಂದು ಮೂಢನಂಬಿಕೆಯಿಂದ ಸಾಕಷ್ಟು ಜನ ರಕ್ತದಾನ ಮಾಡಲು ಹಿಂಜರಿಯುತ್ತಿದ್ದಾರೆ ರಕ್ತದಾನ ಮಾಡುವುದರಿಂದ ಲಾಭವೇ ಹೆಚ್ಚು ಹೊರೆತು ನಮಗೆ ಯಾರಿಗೂ ನಷ್ಟವಾಗುವುದಿಲ್ಲ ನಮ್ಮ ದೇಹ ಮನಸ್ಸು ಸದಾ ಸದೃಢವಾಗಿರುತ್ತದೆ ಎಂದು ಕರೆ ನೀಡಿದರು. ಮತ್ತೊಬ್ಬ ಮುಖ್ಯ ಅತಿಥಿಗಳಾದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಜಗದೀಶ್ ಅವರು ಮಾತನಾಡುತ್ತಾ ಈ ದಿನ ಸಾಕಷ್ಟು ಜನ ಹೊರ ರಾಜ್ಯದ ಕಾರ್ಮಿಕರು ರಕ್ತದಾನ ಮಾಡುವುದರ ಮುಖಾಂತರ ಮಾನವೀಯತೆಯನ್ನು ಮೆರೆದಿದ್ದಾರೆ ಸದೃಢವಾದ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ರಕ್ತದಾನ ಒಂದು ಶ್ರೇಷ್ಠ ಕಾರ್ಯವಾಗಿದೆ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮ್ಯಾನೇಜರ್ ಸುರೇಶ್. ಶೃತಿ ಎಸ್ ಕೆ. ಶಿವಮೊಗ್ಗ ರೆಡ್ ಕ್ರಾಸ್ ಸಂಜೀವಿನಿ ಬ್ಲಡ್ ಬ್ಯಾಂಕಿನ ಪದಾಧಿಕಾರಿಗಳು. ರಕ್ತದಾನಿಗಳು ಉಪಸ್ಥಿತರಿದ್ದು 60ಕ್ಕೂ ಹೆಚ್ಚು ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ದಾನಿಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು
S. Kumar Bangarappa ರಾಜ್ಯದಲ್ಲಿ ಬ್ಯಾಡ್ಮಿಂಟನ್ ಕ್ಷೇತ್ರ ಇನ್ನಷ್ಟು ಎತ್ತರಕ್ಕೇರಲಿ : ಎಸ್. ಕುಮಾರ್ ಬಂಗಾರಪ್ಪ
S. Kumar Bangarappa ಗ್ರಾಮೀಣ ಪ್ರದೇಶಗಳಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟ ಮಾತ್ರವಲ್ಲದೆ ಒಲಂಪಿಕ್ ಕ್ರೀಡೆಯಲ್ಲಿ ಪ್ರತಿನಿಧಿಸುವಂತಹ ಪ್ರತಿಭೆಗಳಿದ್ದಾರೆ. ರಾಜ್ಯದಲ್ಲಿ ಬ್ಯಾಡ್ಮಿಂಟನ್ ಕ್ಷೇತ್ರ ಇನ್ನಷ್ಟು ಎತ್ತರಕ್ಕೇರಲಿ ಎಂಬ ಉದ್ದೇಶ ಹೊಂದಲಾಗಿದೆ ಎಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.
ಪಟ್ಟಣದ ಖಾಸಿಗಿ ಬಸ್ ನಿಲ್ದಾಣ ಸಮೀಪದ ಬಿಜೆಪಿ ಕಚೇರಿಯಲ್ಲಿ ಸೊರಬ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಕ್ರೀಡಾ ಕ್ಷೇತ್ರಕ್ಕೆ, ವಿಶೇಷವಾಗಿ ಬ್ಯಾಡ್ಮಿಂಟನ್ ಕ್ರೀಡೆಯ ಅಭಿವೃದ್ಧಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಳೆದ ಏಳು ದಶಕಗಳಿಂದ ಸಾವಿರಾರು ಪ್ರತಿಭಾವಂತ ಆಟಗಾರರನ್ನು ರೂಪಿಸಿದೆ. ಪದ್ಮಶ್ರೀ ಪ್ರಕಾಶ್ ಪಡುಕೋಣೆ, ಲಕ್ಷ್ಯ ಸೇನ್ ಸೇರಿದಂತೆ ಅನೇಕ ಶ್ರೇಷ್ಠ ಆಟಗಾರರು ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದರು.
S. Kumar Bangarappa ಯುವ ಆಟಗಾರರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಅತ್ಯಾಧುನಿಕ ಮೂಲಸೌಕರ್ಯ, ವೈಜ್ಞಾನಿಕ ತರಬೇತಿ ಮತ್ತು ಸಮಗ್ರ ಬೆಂಬಲ ಅಗತ್ಯವಾಗಿದೆ. ತರಬೇತಿ ಕೇಂದ್ರಗಳ ಸ್ಥಾಪನೆ, ಜೊತೆಗೆ ಜಿಲ್ಲೆ ಮತ್ತು ಗ್ರಾಮೀಣ ಪ್ರದೇಶಗಳ ಪ್ರತಿಭೆಗಳ ಉತ್ತೇಜನಕ್ಕೆ ಸರ್ಕಾರದ ಸಹಕಾರವನ್ನು ನೀಡಬೇಕು. ಪಟ್ಟಣದ ಖಾಸಗಿ ಬಸ್ ನಿಲ್ದಾಣ ಮೇಲ್ಬಾಗದಲ್ಲಿ ಕ್ರೀಡಾಂಗಣ ನಿರ್ಮಿಸಲಾಗಿತ್ತು. ಅದಕ್ಕೆ ನೆಲ ಹಾಸು ಮಾಡಬೇಕಿದೆ. ಈ ಬಗ್ಗೆ ಸರ್ಕಾರ ಗಮನ ನೀಡಬೇಕು. ತಾಲೂಕಿನ ಬ್ಯಾಡ್ಮಿಂಟನ್ ಆಟಗಾರರು ಸಂಸ್ಥೆಯನ್ನು ನೋಂದಣಿ ಮಾಡಬೇಕು ಎಂದು ತಿಳಿಸಿದರು.
ಸೊರಬ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸೈಯದ್ ಅಕಿಲ್, ಕಾರ್ಯದರ್ಶಿ ಎಂ.ಪಿ. ರಾಘವೇಂದ್ರ, ಮುಹಮ್ಮದ್ ಯಾಸೀನ್, ಮುಹಮ್ಮದ್ ಸಫಾನ್, ಮುಹಮ್ಮದ್ ಆಸೀಫ್, ಅಬ್ದುಲ್ ಗಫಾರ್, ಸೈಯದ್ ಶಫೀರ್ ಸೇರಿದಂತೆ ಇತರರಿದ್ದರು.
