ಸಾಗರ ಕ್ಷೇತ್ರ ಜಿಲ್ಲಾ ಕೇಂದ್ರ ಮಾಡಬೇಕು ಎಂದು ಜಿಲ್ಲಾ ಹೋರಾಟ ಸಮಿತಿ ನೀಡಿರುವ ನಿಬಂಧ ಕರೆಗೆ ಸಾಗರ ಸಂಪೂರ್ಣ ಬಂದ ಆಗಿದೆ , ಬೆಳಂಬೆಳಗ್ಗೆ ಸಾಗರದ ವಿವಿಧ ವೃತಗಳಲ್ಲಿ ತಯಾರಿಗೆ ಬೆಂಕಿ ಹಚ್ಚಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುವ ದೃಶ್ಯ ಕಂಡು ಬಂದಿದೆ .
ಸಾಗರ್ ಕೋರ್ಟ್ ಸಮೀಪ, ಐತಪ್ಪ ಸರ್ಕಲ್, ಸೇರಿದಂತೆ ವಿವಿಧ ಕಡೆ ಬೆಂಕಿ ಹಚ್ಚಲಾಗಿದೆ.
ವಿಪಶ್ಶನ ಧ್ಯಾನದಿಂದ ಸಾತ್ವಿಕ ಗುಣಗಳ ವೃದ್ಧಿ, ಸಮಾಜದಲ್ಲಿ ಪರಸ್ಪರ ಶಾಂತು ನೆಮ್ಮದಿ; ಹಾಲಯ್ಯ ಶ್ರೀವಿರಕ್ತಮಠ
ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಯೋಗ, ಧ್ಯಾನ ರಹದಾರಿ ಎಂದು ಯೋಗಾಚಾರ್ಯ
ಹಾಲಯ್ಯ ಶ್ರೀವಿರಕ್ತಮಠ ತಿಳಿಸಿದರು.
ಶ್ರೀ ಶಿವಗಂಗಾಯೋಗಕೇಂದ್ರದ ವತಿಯಿಂದ ಕುವೆಂಪು ರಸ್ತೆ ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ರಾಘವ ಸಭಾಂಗಣದಲ್ಲಿ
ವಿಶ್ವಧ್ಯಾನ ದಿನ ಆಚರಣೆ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಅನಾಪಾನ ಸತಿ ಮತ್ತು ವಿಪಶ್ಯನ ಧ್ಯಾನ
ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಆಧುನಿಕತೆಯ ಭರಾಟೆಯಲ್ಲಿ ಒತ್ತಡದ ಜೀವನ ಹಾಗೂ ಮಾನವೀಯ ಮೌಲ್ಯಗಳ ಪತನದಿಂದಾಗಿ ಪರಸ್ಪರ ಸಂಬಂಧಗಳು ಮರೆಯಾಗುತ್ತಿವೆ. ಹೀಗಾಗಿ ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿ ಇಲ್ಲದಂತಾಗಿದೆ. ಈ ಎಲ್ಲಾ ಸಮಸ್ಯೆಗಳಿಂದ ಪಾರಾಗಲು ವಿಪಶ್ಯನ ಧ್ಯಾನ ಸಹಕಾರಿ ಎಂದರು.
ಮನಸ್ಸಿನಲ್ಲಿ ತಾಮಸ, ರಾಜಸಿಕ ಮತ್ತು ಸಾತ್ವಿಕ ಮನಸ್ಸು ಹೀಗೆ ಮೂರು ಗುಣಲಕ್ಷಣಗಳು ಕಾಣಬಹುದು. ತಾಮಸ ಗುಣವು ಇದು ಜಡತ್ವ, ಅಜ್ಞಾನ, ಸೋಮಾರಿತನ ಮತ್ತು ಕತ್ತಲೆಯ ಸ್ವರೂಪವನ್ನು ಸೂಚಿಸುತ್ತದೆ. ಇದು ನಿಷ್ಕ್ರಿಯತೆ, ಉದಾಸೀನತೆ ಮತ್ತು ಭ್ರಮೆಯನ್ನು ಪ್ರತಿನಿಧಿಸುತ್ತದೆ.
ಸಾತ್ವಿಕ ಮನಸ್ಸು ಶುದ್ಧತೆ, ಶಾಂತಿ, ಸಂತೋಷ ಮತ್ತು ಜ್ಞಾನದಿಂದ ಕೂಡಿದ್ದು, ಸರಳತೆ, ಉನ್ನತ ಆಲೋಚನೆಗಳು ಮತ್ತು ಆಧ್ಯಾತ್ಮಿಕತೆ ಕಡೆಗೆ ಒಲವು ತೋರುತ್ತದೆ. ರಾಜಸಿಕ ಮನಸ್ಸು ಚಡಪಡಿಕೆ, ಆಸೆಗಳು ಮತ್ತು ಕ್ರಿಯೆಗೆ ಪ್ರಚೋದಿಸುತ್ತದೆ.
ಪ್ರಸ್ತುತ ತಾಮಸ, ರಾಜಸಿಕ ಗುಣಗಳು ವಿಜೃಂಭಿಸುತ್ತಿದ್ದು ಸಾತ್ವಿಕ ಗುಣಗಳು
ಮರೆಯಾಗುತ್ತಿವೆ. ನಿರಂತರವಾಗಿ ವಿಪಶ್ಯನ ಧ್ಯಾನದಿಂದ ಮನುಷ್ಯರಲ್ಲಿ ಸಾತ್ವಿಕ ಗುಣಗಳು ವೃದ್ಧಿಯಾಗಿ ಸಮಾಜದಲ್ಲಿ ಪರಸ್ಪರ ಶಾಂತಿ ನೆಮ್ಮದಿ ನೆಲೆಸುತ್ತದೆ ಎಂದು ತಿಳಿಸಿದರು.
ಪ್ರಸ್ತುತ ಕಾಲಘಟ್ಟದಲ್ಲಿ ಧ್ಯಾನದ ಮಹತ್ವವನ್ನು ಎಲ್ಲರಿಗೂ ತಿಳಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರು ಶ್ರಮಿಸಬೇಕಿದೆ ಎಂದರು.
ಶ್ರೀ ಶಿವಗಂಗಾ ಯೋಗ ಕೇಂದ್ರದ ರಾಘವ , ಬಸವನಗುಡಿ , ರೋಟರಿ ರಾಜೇಂದ್ರ ನಗರ, ರವೀಂದ್ರ ನಗರ ಸಂಜೆ ಮತ್ತು ವಿಕಾಸ ಕೇಂದ್ರ ಸರ್ಕಾರಿ ನೌಕರರ ಭವನ ಯೋಗ ಶಾಖೆಗಳ ಯೋಗ ಬಂಧುಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಯೋಗಾಚಾರ್ಯ
ಡಾ. ಸಿ. ವಿ.ರುದ್ರಾರಾಧ್ಯ ಇದ್ದರು.
ಯೋಗ ಗುರು ಪ್ರೊ. ಎಚ್. ಕೆ. ಹರೀಶ್ ಸರ್ವರನ್ನು ಸ್ವಾಗತಿಸಿದರು.ಯೋಗಗುರು ಇಳಂಗೋವನ್ ಪ್ರಾಣಾಯಾಮ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಯೋಗ ಬಂಧುಗಳಾದ. ಜಿ ವಿಜಯಕುಮಾರ್. ನರಸೋಜಿ ರಾವ್. ಮಹೇಶ್. ಸುಜಾತ. ಗಾಯತ್ರಿ. ಶೈಲಜ. ಶೋಭಾ. ಉಷಾ. ಸುಬ್ರಮಣಿ. ಶ್ರೀನಿವಾಸ್
ಉಪಸ್ಥಿತರಿದ್ದರು.
MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ
MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ, ಪಾಲನೆ ಮತ್ತುನಿರ್ವಹಣೆ ಗ್ರಾಮೀಣ ಉಪವಿಭಾಗ, ಬಾಲರಾಜ್ ಅರಸ್ ರಸ್ತೆ, ರೈಲ್ವೆ ಸ್ಟೇಷನ್ ಹತ್ತಿರ ಇಲ್ಲಿ ಡಿ. 18 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ
Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ಡಿ.12 ರಂದು ಇನ್ಸ್ಪೈರ್ ಎಂಬ ವಿನೂತನ ಕಾರ್ಯಕ್ರಮದಡಿ ಇಗ್ನೆಂಟ್ ಮೈಂಡ್ & ಇಗ್ನೆಂಟ್ ಪಾಸಿಟಿವಿಟಿ ಎಂಬ ಘೋಷವಾಕ್ಯದೊಂದಿಗೆ ಆನ್ಲೈನ್ ಪಾಡ್ಕಾಸ್ಟ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ 32 ಮುರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು 183 ವಿದ್ಯಾರ್ಥಿ ನಿಲಯಗಳ 5 ನೇ ತರಗತಿಯಿಂದ ಪದವಿ/ಇಂಜಿನಿಯರಿಂಗ್/ಸ್ನಾತಕೋತ್ತರ ಓದುತ್ತಿರುವ ಸುಮಾರು 13 ರಿಂದ 15 ಸಾವಿರ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಮಕ್ಕಳ ಮಾನಸಿಕ ಒತ್ತಡ ನಿರ್ವಹಣೆ ತಜ್ಞರು ಹಾಗೂ ಆಪ್ತಸಮಾಲೋಚಕರಾದ ಆರ್ ನಾಗೇಶ್ ಇವರು ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿರ್ವಹಣೆ, ಆತ್ಮಜ್ಞಾನ, ಕೌಶಲ್ಯಗಳು, ಕನಸುಗಳು, ಕ್ರಿಯಾಶೀಲತೆ, ಸೃಜನಶೀಲತೆ, ಕಲಿಕೆ, ವಿದ್ಯಾರ್ಥಿಗಳ ನಡವಳಿಕೆ, ಒಳ್ಳೆಯ ಹವ್ಯಾಸಗಳು ಮತ್ತು ಕೆಟ್ಟ ಹವ್ಯಾಸಗಳಿಂದಾಗುವ ಪರಿಣಾಮಗಳು, ಹಠಮಾರಿತನದಿಂದಾಗುವ ದುಷ್ಪರಿಣಾಮಗಳು, ಜೀವನದಲ್ಲಿ ಒಳ್ಳೆಯ ಆದರ್ಶಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು, ವಿದ್ಯಾರ್ಥಿಗಳ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಧ್ಯೇಯ ಹಾಗೂ ಗುರಿ ಹಾಗೂ ನೀವಂದುಕೊಂಡಂತೆ ನೀವಾಗಿ ‘ಬಿದ ದ ಪರ್ಸನ್ ಆಫ್ ಯುವರ್ ಚಾಯ್ಸ್-ಗೋಲ್ ಸೆಟ್ಟಿಂಗ್ ಕುರಿತು ವಿವರಣೆ ನೀಡಿದರು.
Scheduled Castes Welfare Department ಈ ಆನ್ಲೈನ್ ಪಾಡ್ಕಾಸ್ಟ್ ವಿಡಿಯೋ ಸಂವಾದದಲ್ಲಿ ಜಿ.ಪಂ ಸಿಇಓ ಹೇಮಂತ್ ಎನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರೀತಿ ಭಾಗವಹಿಸಿದ್ದರು.
Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ
Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಕಾಂತ ಬಿರಾದರರವರು ಭೌತಶಾಸ್ತ್ರ ವಿಷಯದಲ್ಲಿ ಡಾ. ಚಂದ್ರಶೇಖರ ಎಂ.ಎನ್. ಮತ್ತು ಪ್ರೋ. ದೇವಿದಾಸ್ ಜಿ.ಬಿ ಅವರ ಮಾರ್ಗದರ್ಶನದಲ್ಲಿ ಸಂಶೋಧಿಸಿದ “ಸಿಂಥೇಸಿಸ್ ಆಂಡ್ ಕ್ಯಾರೇಕ್ಟರೈಜೇಷನ್ ಆಫ್ ಹ್ಯವಿ ಮೆಟಲ್ ಆಕ್ಸೈಡ್ ಡೋಪ್ಡ್ ಬೋರೇಟ್ ಗ್ಲಾಸೆಸ್ ಫಾರ್ ರೇಡಿಯೇಷನ್ ಶೀಲ್ಡಿಂಗ್ ಅಪ್ಲಿಕೇಷನ್” ಎಂಬ ಪ್ರಬಂಧಕ್ಕೆ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯವು ಪಿಹೆಚ್ಡಿ ನೀಡಿ ಗೌರವಿಸಿದೆ.
ಇವರು ತಮ್ಮ ಪ್ರಬಂಧದಲ್ಲಿ ಕಿರಣ ರಕ್ಷಣೆಗೆ ಸೂಕ್ತವಾದ ನವೀನ ಬೊರೇಟ್ ಗ್ಲಾಸ್ ವಸ್ತುಗಳ ಅಭಿವೃದ್ಧಿ ಮತ್ತು ಅವುಗಳ ಗುಣಲಕ್ಷಣಗಳನ್ನು ಸಂಶೋಧಿಸಿದ್ದಾರೆ. ಈ ಅಧ್ಯಯನವು ಕಿರಣ ರಕ್ಷಣಾ ವಸ್ತುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ವಿಷಯದಲ್ಲದಿ ಮಹತ್ವದ ಮಾಹಿತಿಯನ್ನು ಒದಗಿಸುತ್ತದೆ.
ಭವಿಷ್ಯದಲ್ಲಿ ಯಂತ್ರಗಳು, ವೈದ್ಯಕೀಯ ಉಪಕರಣಗಳು ಮತ್ತು ಇತರ ರೇಡಿಯೇಷನ್ ಅಪ್ಲಿಕೇಶನ್ಗಳಿಗೆ ಬಳಸಬಹುದಾದ ಶಿಲ್ಡಿಂಗ್ ವಸ್ತುಗಳ ಅಭಿವೃದ್ಧಿಗೆ ದಾರಿತೋರಬಹುದೆಂದು ಶ್ರೀಕಾಂತ ಬಿರಾದರ ತಿಳಿಸಿದ್ದಾರೆ.
Kuvempu University ಶ್ರೀಕಾಂತ ಬಿರಾದರರಿಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ, ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಲು ಅಭಿನಂದಿಸಿದ್ದಾರೆ. ಸಂಶೋಧನೆಗೆ ಸಹಕರಿಸಿದ ಗುರುಗಳು, ಕಾಲೇಜು ಮತ್ತು ಮನೆಯವರ ಬೆಂಬಲಕ್ಕೆ ಶ್ರೀಕಾಂತ ಬಿರಾದರ ಧನ್ಯವಾದ ತಿಳಿಸಿದ್ದಾರೆ.
Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ
Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಇವರು ಡಿ.19 ಮತ್ತು 20 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.
ಡಿ.19 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರಿ 9 ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಡಿ.20 ರ ಬೆಳಿಗ್ಗೆ 11 ಕ್ಕೆ ಜಿ.ಪಂ ಸಭಾಂಗಣ/ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.30 ಕ್ಕೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡು ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದಿಂದ ನಿರ್ಗಮಿಸುವರು ಎಂದು ರಾಜ್ಯ ಮಾಹಿತಿ ಆಯುಕ್ತರ ಆಪ್ತ ಸಹಾಯಕರು ತಿಳಿಸಿದ್ದಾರೆ.
DC Shivamogga ಸ್ವಾಮಿ ವಿವೇಕಾನಂದ ಜಯಂತಿಗೆ ಜಿಲ್ಲಾಡಳಿತದಿಂದ ಯುವಜನತೆಗೆ ಮಾರ್ಗದರ್ಶಿ ಕಾರ್ಯಕ್ರಮ ಆಯೋಜನೆ.- ಗುರುದತ್ತ ಹೆಗಡೆ
DC Shivamogga ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ, ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ಸೈಬರ್ ಕ್ರೈಂ ಕುರಿತು ಅರಿವು, ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಕನ್ನಡ ಸಾಹಿತ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಕುರಿತು ಚರ್ಚಿಸಲು ಮಂಗಳವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶೇಷವಾಗಿ ಈ ಬಾರಿ ನಾಲ್ಕು ವಿಭಾಗಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಯುವಜನತೆಯ ಮುಂದಿನ ವೃತ್ತಿ ಜೀವನಕ್ಕೆ ಅನುಕೂಲವಾಗುವಂತಹ ಮಾರ್ಗದರ್ಶನ ಕಾರ್ಯಕ್ರಮಗಳು, ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳು ಜೊತೆಗೆ ಕನ್ನಡ ಭಾಷೆ, ಸಾಹಿತ್ಯದ ಕುರಿತು ವಿದ್ಯಾರ್ಥಿಗಳಿಗೆ ಕಾರ್ಯಕ್ರಮಗಳನ್ನು ನಡೆಸಲಾಗುವುದು.
ತಾಲ್ಲೂಕು ಮಟ್ಟದಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಡಿ ಬರುವ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ವಾಲಿಬಾಲ್, ಕಬಡ್ಡಿ, ಚೆಸ್, ಅಥ್ಲೆಟಿಕ್ಸ್ ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಚಿತ್ರಕಲೆ, ಗೀತಗಾಯನ ಮತ್ತು ಚರ್ಚಾ ಸ್ಪರ್ಧೆಗಳನ್ನು ಏರ್ಪಡಿಸಿ ಅಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು.
ಹಾಗೂ ಎಲ್ಲಾ ತಾಲ್ಲೂಕುಗಳಲ್ಲಿ ಸರ್ಕಾರಿ ಮತ್ತು ಅನುದಾನಿತ ಪದವಿ ವಿದ್ಯಾರ್ಥಿಗಳಿಗೆ ನಾಗರಿಕ ಸೇವೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾರ್ಗದರ್ಶನ, ಮಾದಕ ವಸ್ತುಗಳ ದುಷ್ಪರಿಣಾಮ, ಸೈಬರ್ ಕ್ರೈಂ ಸೇರಿದಂತೆ ವಿವಿಧ ವಿಷಯ ಕುರಿತು ಕಾರ್ಯಾಗಾರ, ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ವಿದ್ಯಾರ್ಥಿಗಳಿಗೆ ವಿವಿಧ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ತಿಳಿಸಿದ ಅವರು ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯು ಕಲ್ಯಾಣ ಇಲಾಖೆಗಳೊಂದಿಗೆ ಸಮನ್ವಯದೊಂದಿಗೆ ನಿಗದಿತ ದಿನಾಂಕಗಳಂದು ಸ್ಪರ್ಧೆಗಳು ಮತ್ತು ಕಾರ್ಯಾಗಾರ ನಡೆಸುವಲ್ಲಿ ಭಾಗಿಯಾಗಬೇಕು. ಹಾಗೂ ಜಯಂತಿ ಯಶಸ್ಸಿಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
DC Shivamogga ಜಿ.ಪಂ ಸಿಇಓ ಹೇಮಂತ್ ಎನ್ ಮಾತನಾಡಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಎಲ್ಲ ತಾಲ್ಲೂಕುಗಳ ವಸತಿಶಾಲೆಗಳ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಮತ್ತು ಅನುದಾನಿತ ಪದವಿ ವಿದ್ಯಾರ್ಥಿಗಳಿಗೆ ಪ್ರೊಬೇಷನರಿ ಅಧಿಕಾರಿಗಳು, ಸಂಪನ್ಮೂಲ ವ್ಯಕ್ತಿಗಳಿಂದ ಸಿವಿಲ್ ಸರ್ವಿಸಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಕೆರಿಯರ್ ಮಾರ್ಗದರ್ಶನವನ್ನು ನೀಡಲಾಗುವುದು. ಹಾಗೂ ತಾಲ್ಲೂಕುಗಳಿಗೆ ಖುದ್ದು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಹಾಗೂ ತಾವೂ ಸಹ ಭೇಟಿ ನೀಡಿ, ಕೆರಿಯರ್ ಮಾರ್ಗದರ್ಶನದಲ್ಲಿ ಪಾಲ್ಗೊಳ್ಳುತ್ತೇವೆ. ಜ.12 ರಂದು ಕುವೆಂಪು ರಂಗಮಂದಿರದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮದಲ್ಲಿಯೂ ವೃತ್ತಿ ಮಾರ್ಗದರ್ಶನ ಮತ್ತು ಮಾದಕ ವಸ್ತು ದುಷ್ಪರಿಣಾಮ, ಸೈಬರ್ ಕ್ರೈಂ ಮತ್ತು ಇತರೆ ವಿಷಯಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಸಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ, ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಪ್ರತಿ ತಾಲ್ಲೂಕುಗಳಲ್ಲಿ ನಿಗದಿತ ದಿನಾಂಕಗಳಂದು ವಸತಿಶಾಲೆಗಳ ಪಿಯು ಮತ್ತು ಪದವಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಬಳಸಿದರೆ ಆಗುವ ದುಷ್ಪರಿಣಾಮಗಳು, ಸೈಬರ್ ಕ್ರೈಂ ಮತ್ತು ಇತರೆ ಅಪರಾಧಗಳ ಕುರಿತು ಜಾಗೃತಿ ಮೂಡಿಸಲು ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರಗಳನ್ನು ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ
B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ರಾಜಕಾರಣಿಗಳು, ಮಾಜಿ ಸಚಿವರು ಮತ್ತು ಪ್ರಭಾವಿ ರಾಜಕೀಯ ಧುರೀಣರಾಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪನವರ ಅಗಲಿಕೆಯ ಸುದ್ದಿ ಅತೀವ ಆಘಾತವನ್ನು ತಂದಿದೆ ಎಂದು ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ಅವರು ಸಂತಾಪ ಸೂಚಿಸಿದ್ದಾರೆ.
ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಇಡೀ ಸಮಾಜಕ್ಕೆ ಅವರ ನೇತೃತ್ವ, ಮಾರ್ಗದರ್ಶನ, ಅವರ ಕೊಡುಗೆ ಅಸಾಧಾರಣವಾದದ್ದು. ನಾಡಿನ ರಾಜಕೀಯ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಪಕ್ಷಾತೀತವಾಗಿ ಅವರು ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ಅವರ ಅಗಲಿಕೆಯಿಂದ ಸಮಾಜ ತನ್ನ ಮೇರು ನಾಯಕನನ್ನು ಕಳೆದುಕೊಂಡಿದೆ. ವೈಯಕ್ತಿಕವಾಗಿ ನಮ್ಮ ಕುಟುಂಬದ ಒಬ್ಬ ಹಿರಿಯರನ್ನು ಕಳೆದುಕೊಂಡ ದುಃಖ ನಮಗಾಗಿದೆ ಎಂದಿದ್ದಾರೆ.
B.Y. Raghavendra ವಿಶೇಷವಾಗಿ, ಅವರ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿವೆ. ಸಾವಿರಾರು ಜನರಿಗೆ ಆರೋಗ್ಯ ಸೇವೆ ನೀಡಿದ್ದಾರೆ. ಅವರ ಸಮಾಜ ಸೇವೆ ಕೂಡ ಅಸಾಧಾರಣವಾದದ್ದು. ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿ ಅವರ ಮಾರ್ಗದರ್ಶನವನ್ನು, ನೇತೃತ್ವವನ್ನು ನಾವು ಮರೆಯುವುದು ಸಾಧ್ಯವೇ ಇಲ್ಲ! ಒಬ್ಬ ದೂರದೃಷ್ಟಿಯ ನಾಯಕನ, ಮುತದ್ಧಿ ಧುರೀಣರನ್ನು, ರಾಜ್ಯ ಒಬ್ಬ ಅಪರೂಪದ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ವೈಯಕ್ತಿಕವಾಗಿ, ನನಗೆ ಅವರ ಮಾರ್ಗದರ್ಶನಗಳನ್ನು, ಪ್ರೀತಿ, ಆತ್ಮೀಯತೆ, ಆಶೀರ್ವಾದಗಳನ್ನು ಶಬ್ದಗಳಲ್ಲಿ ವಿವರಿಸುವುದು ಸಾಧ್ಯವಿಲ್ಲ.ದಿವಂಗತ ನಾಯಕರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತಾ, ಅವರ ಕುಟುಂಬ ಸದಸ್ಯರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ಹಿರಿಯರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ ಎಂದು ಕೋರುತ್ತಾ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ.
ಆಯನೂರು ಸಮೀಪದ ಬಿಲ್ಗುಣಿಯಲ್ಲಿ ಭತ್ತದ ಹುಲ್ಲಿನ ಲೋಡ್ ಇದ್ದ ಟ್ರ್ಯಾಕ್ಟರ್ ಗೆ ವಿದ್ಯುತ್ ತಗುಲಿ ಬೆಂಕಿ ಅವಘಡ
ಭತ್ತದ ಹೊರೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ತಗುಲಿದ ವಿದ್ಯುತ್ ತಂತಿ : 20 ಕ್ವಿಂಟಾಲ್ ಭತ್ತ ಸುಟ್ಟು ಭಸ್ಮವಾಗಿದೆ.
ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಬಿಲ್ಗುಣಯಲ್ಲಿ ಈ ಘಟನೆ ನಡೆದಿದೆ.
ಭತ್ತದ ಹೊರೆ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಗೆ
ಕಂಬದಿಂದ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ
ಭತ್ತದ ಹೊರೆಗಳು
ಬೆಂಕಿ ಹೊತ್ತಿಕೊಂಡು ಉರಿದಿವೆ.
ತಮ್ಮಡಿಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬಿಲ್ಗುಣಿ ಘಂಟೆತವರು ರಸ್ತೆಯಲ್ಲಿ ಅವಘಡ ಸಂಭವಿಸಿದೆ.
ಅಗ್ನಿ ಅವಘಡದಲ್ಲಿ ಸುಮಾರು ಒಂದು ಎಕರೆ ಪ್ರದೇಶದ ಭತ್ತದ ಪೈರು ನಾಶದಿಂದ
ರೈತನಿಗೆ ಸಾವಿರಾರು ರೂಪಾಯಿ ನಷ್ಟವಾಗಿದೆ ಎಂದು ವರದಿಯಾಗಿದೆ.
ನಿನ್ನೆ ಮಧ್ಯಾಹ್ನ ಸಂಭವಿಸಿದ ಈ ಅನಾಹುತದಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈ ದುರಂತಕ್ಕೆ ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ನೇರ ಕಾರಣ ಎಂದು ಗ್ರಾಮಸ್ಥರು
ಗಂಭೀರ ಆರೋಪಮಾಡಿದ್ದಾರೆ.
