Shimoga News ಮುಂಡರಗಿಯ ಕಲಾ ಶಿಕ್ಷಣ ಸಂಸ್ಕೃತಿ ಪ್ರತಿಷ್ಠಾನವು ಶಿಕ್ಷಕ ದಿನಾಚರಣೆಯ ಅಂಗವಾಗಿ ರಾಜ್ಯದ ಮೂರು
ಶಿಕ್ಷಕರಿಗೆ ,’2024ರ ಮಕ್ಕಳಸ್ನೇಹಿ ಶಿಕ್ಷಕ’ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದು ಶಿವಮೊಗ್ಗದ ಲಕ್ಷ್ಮಿ ಎಸ್., ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 5000 ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದೆಂದು ಪ್ರತಿಷ್ಠಾನದ ಪ್ರಕಟಣೆಯಲ್ಲಿ ತಿಳಿಸಸಲಾಗಿದೆ.
ಈ ಪ್ರಶಸ್ತಿಯ ವಿಶೇಷವೆಂದರೆ,
ಯಾವುದೇ ರೀತಿ ಅರ್ಜಿ ಹಾಕಿಸಿಕೊಳ್ಳದ ರಾಜ್ಯಾದ್ಯಂತ ಇರುವ ನಮ್ಮ ಗೆಳೆಯರು, ಆಯಾ ಭಾಗದ ಅಧಿಕಾರಿಗಳು, ಶಿಕ್ಷಕರೊಂದಿಗೆ ಮಾತುಕತೆ ನಡೆಸಿ ಮಕ್ಕಳ ಸ್ನೇಹಿಯಾಗಿ, ನಾವಿನ್ಯಯುತ ಸೃಜನಾತ್ಮಕ ಪ್ರಯೋಗ, ಚಟುವಟಿಕೆಗಳೊಂದಿಗೆ ಕಾರ್ಯ ಮಾಡುತ್ತಿರುವ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾ ಗುತ್ತದೆ.
ಸೆಪ್ಟೆಂಬರ್ 21 ರಂದು ಮುಂಡರಗಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಲಕ್ಷ್ಮಿ ಎಸ್ :
Shimoga News ಲಕ್ಷ್ಮಿಯವರು ಭದ್ರಾವತಿಯವರಾಗಿದ್ದು ಸಿರಿಗೆರೆ ಗ್ರಾಮದ ಸರಕಾರಿ
ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಂಗ ಕಲಾವಿದೆ , ನೃತ್ಯ ಹಾಗೂ ಸಂಗೀತ ಕಲಾವಿದೆಯಾಗಿ ಜನಮನ್ನಣೆ ಪಡೆದಿದ್ದು ಮಕ್ಕಳ ಸ್ನೇಹಿಯಾಗಿ ನೃತ್ಯ ಹಾಗೂ ರಂಗ ಚಟುವಟಿಕೆಗಳನ್ನು ರೂಪಿಸಿ ಮಕ್ಕಳಲ್ಲಿ ಭಾಷಾ ಪ್ರೌಢಿಮೆ ಹೆಚ್ಚಿಸಲು ಕಲಾ ಪ್ರತಿಭೆ ಹೊರಹೊಮ್ಮಿಸಲು ನಿರಂತರ ಪ್ರಯತ್ನಿಸುತ್ತ ಬಂದಿದ್ದಾರೆ. ಭಾರತಾಂಬೆ, ಮಾತೆ ಮಂಡೋದರಿ, ಶಿಕ್ಷಕಿಯಾಗಿದ್ದಾರೆ.
ಅಂಬೆ, ಕೆಳದಿ ಚೆನ್ನಮ್ಮ, ಉಡುತಡಿ ಮೊದಲಾದ ನಾಟಕಗಳಲ್ಲಿ ಅಭಿನಯಿಸಿ ರಂಗಭೂಮಿಯಲ್ಲೂ
ಉತ್ತಮ ಪ್ರತಿಭೆ ಮೆರೆದು ಮಕ್ಕಳ ಸ್ನೇಹಿ ಆದರ್ಶ ಶಿಕ್ಷಕಿಯಾಗಿದ್ದಾರೆ.
Shimoga News ಮುಂಡರಗಿಯ ಪ್ರತಿಷ್ಠಾನದಿಂದ ಶಿವಮೊಗ್ಗದ ಶಿಕ್ಷಕಿ ಎಸ್.ಲಕ್ಷ್ಮೀ ಅವರಿಗೆ ಮಕ್ಕಳ ಸ್ನೇಹಿ ಪ್ರಶಸ್ತಿ
Aynur News ಅರಣ್ಯ ಸಿಬ್ಬಂದಿ ಜಾಲಕ್ಕೆ ಸಿಕ್ಕಿ ಗಂಧದ ಮರ ಕಡಿದ ವ್ಯಕ್ತಿ
Aynur News ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಮ್ ನ ಹತ್ತಿರ ಮೂರು ಶ್ರೀಗಂಧ ಮರಗಳನ್ನು ಅಕ್ರಮ ಕಡಿತಲೆ ಮಾಡಿದ ಆರೋಪಿಯನ್ನು ಹಣಗೆರೆ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಅರೆನೆಲ್ಲಿ ಗ್ರಾಮದ ವಾಸಿ ಕಲ್ಲುಬಂಡೆ ಮಂಜಪ್ಪ ಬಿನ್ ಸಿದ್ದಪ್ಪ ಬಂಧಿತ ವ್ಯಕ್ತಿ. ಅರಣ್ಯ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಿ ಈತನನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ತಲೆ ಮರೆಸಿಕೊಂಡ ಇದೇ ಗ್ರಾಮದ ರಾಮಕೃಷ್ಣ ಬಿನ್ ಹನುಮಂತಯ್ಯ ಹಾಗೂ ವಿಜಯ್ ಕುಮಾರ್ ಬಿನ್ ಉಮೇಶ ಇವರ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬೀಸಿದ್ದಾರೆ.
Aynur News ಅರಣ್ಯಾಧಿಕಾರಿ ಅರವಿಂದ್ ಪಿ ಹಾಗೂ ಅವರ ಸಿಬ್ಬಂದಿಗಳಿಂದ ನಡೆದ ಕಾರ್ಯಾಚರಣೆಯಲ್ಲಿ ಶಿವಕುಮಾರ್ . ಕೊಟ್ರೇಶ ದಾನಮ್ಮನವರ್ ಮಂಜುನಾಥ್, ಗಿರೀಶ್, ಮಾರುತಿ, ರಾಕೇಶ್ ಭಾಗಿಯಾಗಿದ್ದರು.
Hosanagara News ದಂಪತಿ ಜಗಳ.ಪತ್ನಿಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ ಪತಿ ಆತ್ಮಹತ್ಯೆ
Hosanagara News ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೋಡೂರು ಗ್ರಾಮದ ಸದಾನಂದ ಭಟ್ ಮತ್ತು ಪತ್ನಿ ಸವಿತಾ ನಡುವೆ ಗುರುವಾರ ಕೌಟುಂಬಿಕ ಕಾರಣಗಳಿಗಾಗಿ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿದ್ದನು.
ತಲೆಗೆ ತೀವ್ರವಾದ ಗಾಯವಾದ ಹಿನ್ನೆಲೆಯಲ್ಲಿ ಸಬೀತಾ ಅವರನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ರಿಪ್ಪನ್ಪೇಟೆ ಪೊಲೀಸರು ಆರೋಪಿ ಸದಾನಂದ ಭಟ್ ಗೆ ಶೋಧ ನಡೆಸಿದಾಗ ಆತನ ಕಾರು ಪಟಗುಪ್ಪ ಸೇತುವೆ ಬಳಿ ಕಂಡುಬಂದಿದೆ. ಆದರೆ ಆತನ ಸುಳಿವು ಸಿಕ್ಕಿರಲಿಲ್ಲ ನಂತರ ಕಾರನ್ನು ಹೊಸನಗರ ಪೊಲೀಸರು ವಶಪಡಿಸಿಕೊಂಡಿದ್ದರು.
Hosanagara News ಶುಕ್ರವಾರ ಬೆಳಿಗ್ಗೆ ಆರೋಪಿ ಸದಾನಂದ ಭಟ್ ಮೃತ ದೇಹ ಪಟಗುಪ್ಪ ಸೇತುವೆ ಬಳಿಯಲ್ಲಿ ಪತ್ತೆಯಾಗಿದೆ. ಶವ ಮೇಲೆತ್ತಿ ಮಹಜರು ನಡೆಸಿ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದೆ.
FIR on Yogaraj Bhat ಚಿತ್ರೀಕರಣದ ವೇಳೆ ಲೈಟ್ ಬಾಯ್ ಸಾವು. ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ ಐ ಆರ್
FIR on Yogaraj Bhat ಲೈಟ್ ಬಾಯ್ ಒಬ್ಬರು ಸಾವನ್ನಪ್ಪಿದ ಪ್ರಕರಣ ಸಂಬಂಧ ಕನ್ನಡ ಚಿತ್ರರಂದ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮನದ ಕಡಲು ಸಿನಿಮಾ ಶೂಟಿಂಗ್ ವೇಳೆ ಸಂಭವಿಸಿದ ಘಟನೆಯ ಸಂಬಂಧ ಈ ಕೇಸ್ ದಾಖಲಾಗಿದೆ.
ಕನ್ನಡ ಚಿತ್ರರಂಗಕ್ಕೆ ಆಘಾತ
FIR on Yogaraj Bhat ಕಳೆದ ಸೆಪ್ಟೆಂಬರ್ 3 ರಂದು ಮನದ ಕಡಲು ಸಿನಿಮಾದ ಶೂಟಿಂಗ್ ವೇಳೆ ಲೈಟ್ ಬಾಯ್ ಮೋಹನ್ ಎಂಬವರು 30 ಅಡಿ ಉದ್ದದ ಏಣಿಯಿಂದ ಕೆಳಕ್ಕೆ ಬಿದ್ದಿದ್ದರು. ಈ ವೇಳೆ ಗಂಭೀರವಾದ ಗಾಯಗೊಂಡ ಅವರನ್ನ ಗೊರಗುಂಟೆ ಪಾಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಬಳಿಕ ಅವರು ಗುರುವಾರ ಸಾವನ್ನಪ್ಪಿದ್ದಾರೆ.
ಪ್ರಕರಣದಲ್ಲಿ ಚಿತ್ರದ ನಿರ್ದೇಶಕ ಯೋಗರಾಜ್ ಭಟ್ ಮತ್ತು ನಿರ್ವಾಹಕ ಸುರೇಶ್ ಸೇರಿದಂತೆ ಮೂವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಚಿತ್ರೀಕರಣದ ವೇಳೆ ಸುರಕ್ಷತಾ ವೈಫಲ್ಯದ ಆರೋಪದ ಅಡಿಯಲ್ಲಿ ಕೇಸ್ ದಾಖಲಾಗಿದೆ.
The Emergency ಕಂಗನಾ ಅಭಿನಯದ ಸಿನಿಮಾ” ಎಮರ್ಜೆನ್ಸಿ” ವಿವಾದದ ಹಿನ್ನೆಲೆಯಲ್ಲಿ ಬಿಡುಗಡೆ ಮುಂದೂಡಿಕೆ
The Emergency ಸಿಖ್ ಸಂಘಟನೆಗಳ ವಿರೋಧದ ಹಿನ್ನೆಲೆಯಲ್ಲಿ ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಚಿತ್ರ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ. ನಟಿ-ಬಿಜೆಪಿ ಸಂಸದೆ ಕಂಗನಾ ರಣಾವತ್ ಇಂದು ಘೋಷಣೆ ಮಾಡಿದ್ದು, ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ಸಿ) ಪ್ರಮಾಣ ಪತ್ರ ಪಡೆಯುವುದು ಬಾಕಿ ಉಳಿದಿದೆ ಎಂದು ಹೇಳಿದ್ದಾರೆ.
“ಭಾರವಾದ ಹೃದಯದಿಂದ, ನನ್ನ ನಿರ್ದೇಶನದ ತುರ್ತು ಪರಿಸ್ಥಿತಿಯನ್ನು ಮುಂದೂಡಲಾಗಿದೆ ಎಂದು ನಾನು ಘೋಷಿಸುತ್ತೇನೆ. ನಾವು ಇನ್ನೂ ಸೆನ್ಸಾರ್ ಮಂಡಳಿಯಿಂದ ಪ್ರಮಾಣೀಕರಣಕ್ಕಾಗಿ ಕಾಯುತ್ತಿದ್ದೇವೆ. ಹೊಸ ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ನಿಮ್ಮ ತಿಳುವಳಿಕೆ ಮತ್ತು ತಾಳ್ಮೆಗೆ ಧನ್ಯವಾದಗಳು” ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಂಗನಾ ಅವರ ಮಣಿಕರ್ಣಿಕಾ ಫಿಲ್ಮ್ಸ್ ಮತ್ತು ಜೀ ಸ್ಟುಡಿಯೋಸ್ ಸಹ-ನಿರ್ಮಾಣದ ಚಿತ್ರವು ಆರಂಭದಲ್ಲಿ ಸೆಪ್ಟೆಂಬರ್ 6 ರಂದು ಬಿಡುಗಡೆಯಾಗಲಿದೆ ಎಂಧು ಹೇಳಲಾಗಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರದ ಕೊರತೆಯಿಂದಾಗಿ, ಜೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಈ ವಿಷಯವನ್ನು ಬಾಂಬೆ ಹೈಕೋರ್ಟ್ಗೆ ತೆಗೆದುಕೊಂಡು, ಚಿತ್ರ ಬಿಡುಗಡೆಗೆ ಮಧ್ಯಪ್ರವೇಶಿಸುವಂತೆ ಕೋರಿತು. ಈ ಕಾನೂನು ಹೋರಾಟವು ಮತ್ತಷ್ಟು ವಿಳಂಬಕ್ಕೆ ಕಾರಣವಾಯಿತು. ನ್ಯಾಯಾಲಯದಿಂದ ಯಾವುದೇ ಅನುಕೂಲಕರ ಫಲಿತಾಂಶವಿಲ್ಲದ ಕಾರಣಕ್ಕೆ ಬಿಡುಗಡೆಯನ್ನು ಈಗ ಅನಿರ್ದಿಷ್ಟವಾಗಿ ಮುಂದೂಡಲಾಗಿದೆ.
The Emergency ಬುಧವಾರ, ಬಾಂಬೆ ಹೈಕೋರ್ಟ್ ಮಧ್ಯಪ್ರದೇಶ ಹೈಕೋರ್ಟ್ ನೀಡಿದ ನಿರ್ದೇಶನದ ಹಿನ್ನೆಲೆಯಲ್ಲಿ ಯಾವುದೇ ತುರ್ತು ಪರಿಹಾರವನ್ನು ನೀಡಲು ನಿರಾಕರಿಸಿತು. ಸೆನ್ಸಾರ್ ಮಂಡಳಿಯು ಚಲನಚಿತ್ರವನ್ನು ಪ್ರಮಾಣೀಕರಿಸುವ ಮೊದಲು ಆಕ್ಷೇಪಣೆಗಳನ್ನು ಪರಿಗಣಿಸುವಂತೆ ನಿರ್ದೇಶಿಸಿದೆ.
Gajunuru News ಪ್ರಗತಿಪರ ಕೃಷಿಕ ಗಾಜನೂರು ಎ.ಆರ್.ಮಲ್ಲೇಶಪ್ಪ ನಿಧನ
Gajunuru News 1930 ರ ಡೆಸೆಂಬರ್ 19 ರಂದು ವೀರಶೈವ ಸಮಾಜದಲ್ಲಿ ಜನಿಸಿದ ಶ್ರೀ ಎ.ಆರ್.ಮಲ್ಲೇಶಪ್ಪ ಗಾಜನೂರು, ಇವರು ಸಾರ್ಥಕ ಜೀವನ ನಡೆಸಿ 2024 ರ ಸೆಪ್ಟೆಂಬರ್ 05 ರ ಬೆಳಗ್ಗೆ ನಿಧನರಾದರು.
ಇವರು ಮೂಲತಃ ಕೃಷಿ ಕುಟುಂಬದವರಾಗಿದ್ದು, ಕೃಷಿಯಲ್ಲೇ ತಮ್ಮನ್ನು ತೊಡಗಿಸಿಕೊಂಡು ಪ್ರಗತಿ ಪರ ಕೃಷಿಕರೆಂದು ಸಮಾಜದಲ್ಲಿ ಗುರುತಿಸಿಕೊಂಡಿದ್ದರು. 80 ರ ದಶಕದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಲ್ಲಿ ಸಕ್ರಿಯರಾಗಿದ್ದು, ಶ್ರೀಯುತ ಎನ್.ಡಿ.ಸುಂದರೇಶ್ ಹಾಗೂ ಇತರೆ ರೈತ ಮುಖಂಡರ ಒಡನಾಡಿಯಾಗಿದ್ದು, 1982 ರಲ್ಲಿ ರೈತ ಸಂಘದ ಜೈಲ್ ಭರೋ ರಸ್ತೆ ತಡೆ ಚಳುವಳಿಯಲ್ಲಿ ಮೊದಲು ಗಾಜನೂರಿನಿಂದ ಇವರ ನಾಯಕತ್ವದಲ್ಲಿ ನಡೆದು ಸುಮಾರು 20 ದಿನ ಬಳ್ಳಾರಿ ಜೈಲ್ ವಾಸ ಅನುಭವಿಸಿದ್ದರು.
Gajunuru News ಗಾಜನೂರು ವ್ಯವಸಾಯ ಸಹಕಾರಿ ಸಂಘದ ಗೌರವ ಕಾರ್ಯದರ್ಶಿಯಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದಾರೆ. ಶಿವಮೊಗ್ಗ ಎ.ಪಿ.ಎಂ.ಸಿ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಕೃಷಿ ಕ್ಷೇತ್ರದಲ್ಲಿ ಇವರ ಸಾಧನೆಗಾಗಿ ಹಲವಾರು ಸಂಘ ಸಂಸ್ಥೆಗಳಿಂದ ಪ್ರಶಸ್ತಿ ಪುರಸ್ಕøತರಾಗಿದ್ದರು.
ಮೃತರು ಧರ್ಮಪತ್ನಿ ಗೌರಮ್ಮ, ಗಂಡು ಮಕ್ಕಳಾದ ಉದಯಕುಮಾರ್.ಎ.ಎಂ, ಮಹೇಶ್.ಎ.ಎಂ, ಲಿಂಗರಾಜ್.ಎ.ಎಂ, ಗಣೇಶ್ ಎಂ ಅಂಗಡಿ, ಹೆಣ್ಣು ಮಕ್ಕಳಾದ ಪಾರ್ವತಿ ಓಂಕಾರ್, ಶಾರದಾ ಶಂಕರ್, ಮೊಮ್ಮಕ್ಕಳು ಮತ್ತು ಕುಟುಂಬ ವರ್ಗ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
Vinesh Phogat – Bajrang Punia ಕಾಂಗ್ರೆಸ್ ಪಕ್ಷ ಸೇರಿದ ಈರ್ವರು ಕುಸ್ತಿಪಟುಗಳು
Vinesh Phogat – Bajrang Punia ಒಲಿಂಪಿಯನ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಹರಿಯಾಣ ವಿಧಾನಸಭಾ ಚುನಾವಣೆಗೆ ಮುನ್ನ ಶನಿವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಗೆ ಸೇರಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೆಪ್ಟೆಂಬರ್ 4 ರಂದು ನವದೆಹಲಿಯಲ್ಲಿ ಇತ್ತೀಚೆಗೆ ಭೇಟಿಯಾದ ನಂತರ ಈ ಬೆಳವಣಿಗೆಯಾಗಿದೆ. ಹಿರಿಯ ರಾಜಕೀಯ ವ್ಯಕ್ತಿಯೊಂದಿಗೆ ಅವರ ಚರ್ಚೆಯ ನಂತರ ಈ ಕ್ರಮವು ವ್ಯಾಪಕವಾಗಿ ನಿರೀಕ್ಷಿತವಾಗಿತ್ತು. ಅವರ ರಾಜಕೀಯ ಪ್ರವೇಶದ ಬಗ್ಗೆ ಊಹಾಪೋಹಗಳಿಗೆ ಉತ್ತೇಜನ ನೀಡಲಾಯಿತು.
ಇಬ್ಬರು ಹೈ-ಪ್ರೊಫೈಲ್ ವ್ಯಕ್ತಿಗಳು ಪಕ್ಷ ಸೇರ್ಪಡೆಯು ಕಾಂಗ್ರೆಸ್ ಶಕ್ತಿಯನ್ನು ಹೆಚ್ಚಿಸುವ ನಿರೀಕ್ಷೆಯಿದೆ. ವಿಶೇಷವಾಗಿ ಕೆಲವು ಹರಿಯಾಣ ಕಾಂಗ್ರೆಸ್ ನಾಯಕರು ಎಎಪಿ ಜೊತೆ ಕೈಜೋಡಿಸುವ ಬಗ್ಗೆ ಅನುಮಾನಗಳನ್ನು ಹೊಂದಿದ್ದಾರೆ.
ಇಬ್ಬರು ಕುಸ್ತಿಪಟುಗಳು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ನಿವಾಸಕ್ಕೆ ಆಗಮಿಸಿ ಹಳೆಯ ಪಕ್ಷ ಸೇರಿದರು.
ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಫೋಗಟ್ ಅವರು ತಮ್ಮ ರೈಲ್ವೆ ಹುದ್ದೆಗೆ ರಾಜೀನಾಮೆ ನೀಡಿದ್ದು, ಅದರ ಪ್ರತಿಯನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ತನ್ನ ಜೀವನದಲ್ಲಿ ಸ್ಮರಣೀಯ ಮತ್ತು ಹೆಮ್ಮೆಯ ಸಮಯವಾಗಿದೆ ಎಂದು ಉಲ್ಲೇಖಿಸಿದ್ದಾರೆ.
Vinesh Phogat – Bajrang Punia “ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದಲ್ಲಿ ಸ್ಮರಣೀಯ ಮತ್ತು ಹೆಮ್ಮೆಯ ಸಮಯ. ನನ್ನ ಜೀವನದ ಈ ಹಂತದಲ್ಲಿ, ನಾನು ರೈಲ್ವೆ ಸೇವೆಯಿಂದ ನನ್ನನ್ನು ಪ್ರತ್ಯೇಕಿಸಲು ನಿರ್ಧರಿಸಿದೆ ಮತ್ತು ನನ್ನ ರಾಜೀನಾಮೆಯನ್ನು ಭಾರತೀಯ ರೈಲ್ವೆಯ ಸಮರ್ಥ ಅಧಿಕಾರಿಗಳಿಗೆ ಸಲ್ಲಿಸಿದ್ದೇನೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞರಾಗಿರುತ್ತೇನೆ” ಎಂದು ಫೋಗಟ್ ಎಕ್ಸ್ನಲ್ಲಿ ಬರೆದಿದ್ದಾರೆ.
Death News ಆನೆದಾಳಿಗೆ ಹೆದರಿಒಟ್ಟಿಗೇ ಮಲಗಿದ್ದ ಮೂವರಿಗೆ ವಿಷಪೂರಿತ ಹಾವು ಕಡಿದು ಸಾವು
Death News ಜಾರ್ಖಂಡ್ನ ಗರ್ವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಆನೆ ದಾಳಿಯ ಭಯದಿಂದ ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಜಿಲ್ಲೆಯ ಚಿನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಚಪ್ಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನಿಡಿದ್ದಾರೆ.
ಆನೆ ದಾಳಿಗೆ ಹೆದರಿ ಒಂದೇ ಕುಟುಂಬದ ಸುಮಾರು 8 ರಿಂದ 10 ಮಕ್ಕಳು ತಮ್ಮ ಹೆಂಚಿನ ಮನೆಯ ನೆಲದ ಮೇಲೆ ಮಲಗಿದ್ದಾಗ ಕ್ರೈಟ್ ಹೆಸರಿನ ಹಾವೊಂದು ಗುರುವಾರ ರಾತ್ರಿ ನವನಗರ ತೊಲದಲ್ಲಿರುವ ಮನೆಯಲ್ಲಿ ಮೂವರನ್ನು ಕಚ್ಚಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Death News ಘಟನೆಯ ನಂತರ, ಬಲಿಪಶುಗಳನ್ನು ಸುಮಾರು 1 ಗಂಟೆಗೆ ಮಾಂತ್ರಿಕನ ಬಳಿಗೆ ಕರೆದೊಯ್ಯಲಾಯಿತು, ಅಲ್ಲಿ ಅವರಲ್ಲಿ ಇಬ್ಬರು ಸಾವನ್ನಪ್ಪಿದರು. ನಂತರ ಕುಟುಂಬ ಸದಸ್ಯರು ಮೂರನೇ ಬಲಿಪಶುವನ್ನು ಕ್ವಾಕ್ಗೆ ಕರೆದೊಯ್ದರು. ಆದರೆ, ಅವಳು ದಾರಿಯಲ್ಲಿ ಸಾವನ್ನಪ್ಪಿದಳು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಕ್ಕಳನ್ನು ಪನ್ನಾಲಾಲ್ ಕೊರ್ವಾ (15), ಕಾಂಚನ್ ಕುಮಾರಿ (8), ಬೇಬಿ ಕುಮಾರಿ (9) ಎಂದು ಗುರುತಿಸಲಾಗಿದೆ ಎಂದು ಚಿನಿಯಾ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ನೀರಜ್ ಕುಮಾರ್ ತಿಳಿಸಿದ್ದಾರೆ.
Breaking News ಗಣಪತಿ ಹೊತ್ತ ವಾಹನ ಪಲ್ಟಿ.ಇಬ್ಬರು ಯುವಕರ ಮರಣ
Breaking News ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು ಕಂಡ ಘಟನೆ ವರದಿಯಾಗಿದೆ.
ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ.
ಘಟನೆ ಇಂದು ಬೆಳಿಗ್ಗೆ
Breaking News ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಮೃತರನ್ನು 20 ವರ್ಷದ ಧನುಷ್ ಹಾಗೂ ಶ್ರೀಧರ್ ಎಂದು ಗುರುತಿಸಲಾಗಿದೆ.
ಲಿಂಗದಹಳ್ಳಿ ಗ್ರಾಮದ 9 ಯುವಕರು ಬೆಳಗ್ಗೆ ಏಳು ಗಂಟೆಗೆ ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಗೇಜ್ ಆಟೋದಲ್ಲಿ ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ಟಾಟಾ ಏಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಇದರಲ್ಲಿದ್ದ ಉಳಿದ ಮೂರು ಯುವಕರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು ತೀವ್ರವಾದ ರಕ್ತಸ್ರಾವವಾಗಿದೆ.
ಚಾಲಕ ಮನೋಜ್ ಹಾಗೂ ಮತ್ತೋರ್ವನನ್ನು ಮೆಗ್ಗಾನ್ ತುರ್ತುಘಟಕಕ್ಕೆ ರವಾನಿಸಲಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಲಿಂಗದಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Union of Press Distributors ಸೆ,8 ರಂದು ಚಿತ್ರದುರ್ಗದಲ್ಲಿ ಪತ್ರಿಕಾ ವಿತರಕರ 8 ನೇ ರಾಜ್ಯಮಟ್ಟದ ಸಮ್ಮೇಳನ
Union of Press Distributors ಚಿತ್ರದುರ್ಗದಲ್ಲಿ ಸೆ.8ರಂದು ಪತ್ರಿಕಾ ವಿತರಕರ 8ನೇ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷರಾದ ಮಾಲತೇಶ್ ಎನ್.ತಿಳಿಸಿದರು.
ಅವರು ಮಾತನಾಡುತ್ತಾ ಚಿತ್ರದುರ್ಗದ ಮುರುಘಾಮಠದ ಅನುಭವ ಮಂಟಪದಲ್ಲಿ ಅಂದು ಬೆಳಗ್ಗೆ 11:30ಕ್ಕೆ ನಡೆವ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲೆಯ ನಾನಾ ಮಠಾಧೀಶರು ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಂಸದ ಗೋವಿಂದ ಕಾರಜೋಳ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಗಣ್ಯರು ಭಾಗವಹಿಸುವರು ಎಂದು ಹೇಳಿದರು.
ಮಧ್ಯಾಹ್ನ 2ಕ್ಕೆ ಎಸ್ಎಸ್ಎಲ್ಸಿ, ಪಿಯುಸಿ ಓದುತ್ತಿರುವ ಪತ್ರಿಕಾ ವಿತರಕರು ಹಾಗೂ ವಿತರಕರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಮಧ್ಯಾಹ್ನ 3ಕ್ಕೆ ’ವಿತರಕರು ಅಂದು ಇಂದು ಮುಂದು ವಿಷಯ ಕುರಿತು ಚರ್ಚಾ ಗೋಷ್ಠಿ ನಡೆಯಲಿದ್ದು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಉದ್ಘಾಟಿಸುವರು ಎಂದು ತಿಳಿಸಿದರು.
ಸರಕಾರ ಪತ್ರಿಕೆಗಳನ್ನು ನಾಲ್ಕನೇ ಅಂಗ ಎಂದು ಗುರುತಿಸಿದೆ, ಆದರೆ ಮನೆ ಮನೆಗೆ ಪತ್ರಿಕೆಗಳನ್ನು ವಿತರಣೆ ಮಾಡುವವರನ್ನು ನಿರ್ಲಕ್ಷಿಸಿದೆ. ನಮಗೆ ಯಾವುದೇ ರೀತಿಯ ಸೌಲಭ್ಯಗಳು ಲಭಿಸಿಲ್ಲ ಕೋವಿಡ್
ಸಮಯದಲ್ಲಿ ನಾನಾ ತೊಂದರೆ ಅನುಭವಿಸಿದ್ದು, ಹಲವು ವಿತರಕರನ್ನು ಕಳೆದು ಕೊಳ್ಳಬೇಕಾಯಿತು. ಈ ಸಮಯದಲ್ಲಿ ಒಕ್ಕೂಟ ಮಾಡುವುದರ ಮೂಲಕ ನಮ್ಮ ಸಮಸ್ಯೆಗಳಿಗಾಗಿ ಹೋರಾಟ ಮಾಡಲಾಗುತ್ತಿದೆ. ಈಗ ಸರ್ಕಾರದಿಂದ ನಮಗೆ ಸ್ಪಂದನೆ ಸಿಕ್ಕಿದೆ, ಸರಕಾರದ ಇ-ಶ್ರಮ್ ಯೋಜನೆಯಡಿ ನಮಗೆ ಅರ್ಜಿ ಹಾಕಲು ಅನುಮತಿ ಲಭಿಸಿರಿವುದು ಸಂತಸ ತಂದಿದೆ ಎಂದರು.
Union of Press Distributors ಇದೇ ಸಂದರ್ಭದಲ್ಲಿ ನಮ್ಮ ಒಕ್ಕೂಟದ ಹೆಸರಿನಲ್ಲಿ ಕ್ಷೇಮ ನಿಧಿ ಸ್ಥಾಪಿಸಿ 10 ಕೋಟಿ ಮೀಸಲಿಡುವುದು, ಪತ್ರಿಕಾ ವಿತರಕರಿಗೆ ರಾಜ್ಯೋತ್ಸವ ಪ್ರಶಸ್ತಿ ಮುಂದುವರೆಸಿಕೊಂಡು ಹೋಗುವುದು ಸೇರಿದಂತೆ ಮತ್ತಿತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಸಲಾಗುವುದು. ರಾಜ್ಯದಲ್ಲಿ ಸುಮಾರು 40 ಸಾವಿರ ಪತ್ರಿಕಾ ವಿತರಕರಿದ್ದೇವೆ, ನಮ್ಮ ಒಕ್ಕೂಟದಲ್ಲಿ ಸುಮಾರು 3500 ವಿತರಕರು ನೋಂದಾಯಿಸಿಕೊಂಡಿದ್ದಾರೆ. ಈ ಸಮ್ಮೇಳನದಲ್ಲಿ ರಾಜ್ಯದ ನಾನಾ ಕಡೆಗಳಿಂದ ಸುಮಾರು 03 ಸಾವಿರಕ್ಕೂ ಹೆಚ್ಚು ವಿತರಕರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 500 ಜನ ಪತ್ರಿಕಾ ವಿತರಕರು ಇದ್ದು, ಸೆ.೮ಕ್ಕೆ ಪತ್ರಿಕಾ ವಿತರಕರ ೪ನೇ ರಾಜ್ಯ ಸಮ್ಮೇಳನಕ್ಕೆ ಎಲ್ಲಾ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.
