Thursday, May 7, 2026
Thursday, May 7, 2026
Home Blog Page 59

D.K. Shivakumar ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಉಪಮುಖ್ಯಮಂತ್ರಿ ಡಿ‌.ಕೆ. ಶಿವಕುಮಾರ್

0

D.K. Shivakumar ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೇಟಿ ಮಾಡಿ ಸಚಿವರಾದ ಮಧು ಬಂಗಾರಪ್ಪನವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಚಿವರುಗಳಾದ ಶ್ರೀ ಎನ್.ಎಸ್ ಬೋಸರಾಜು, ಶ್ರೀ ಪ್ರಿಯಾಂಕ್ ಖರ್ಗೆ ಹಾಗೂ ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ಹಾಜರಿದ್ದರು.

Klive Special Article ಮೂತ್ರಪಿಂಡದ ಕಾಯಿಲೆ – ಒಂದು ನಿಶಬ್ದ ಹಂತಕ, ಇದನ್ನು ನೀವು ತಡೆಯಬಹುದು

0

Klive Special Article ಮೂತ್ರಪಿಂಡಗಳು (ಕಿಡ್ನಿ) ನಮ್ಮ ದೇಹದ ಅತ್ಯಂತ ಪ್ರಮುಖ ಅಂಗಗಳಾಗಿದ್ದು, ನಮ್ಮನ್ನು ಆರೋಗ್ಯವಾಗಿಡಲು ಹಲವು ಅಗತ್ಯ ಕಾರ್ಯಗಳನ್ನು ನಿರ್ವಹಿಸುತ್ತವೆ. ರಕ್ತದಲ್ಲಿನ ಕಲ್ಮಶಗಳನ್ನು (ಟಾಕ್ಸಿನ್) ಮತ್ತು ಹೆಚ್ಚುವರಿ ನೀರನ್ನು ಹೊರಹಾಕುವುದು ಇದರ ಮುಖ್ಯ ಕೆಲಸವಾಗಿದೆ. ಅಲ್ಲದೆ, ರಕ್ತದೊತ್ತಡವನ್ನು ನಿಯಂತ್ರಿಸಲು, ಹಿಮೋಗ್ಲೋಬಿನ್ ಮಟ್ಟವನ್ನು ಕಾಪಾಡಲು ಮತ್ತು ಮೂಳೆಗಳ ಆರೋಗ್ಯವನ್ನು ವೃದ್ಧಿಸಲು ಇದು ಸಹಾಯ ಮಾಡುತ್ತದೆ.

ಮೂತ್ರಪಿಂಡದ ಕಾಯಿಲೆಯನ್ನು ‘ನಿಶಬ್ದ ಹಂತಕ’ (ಸೈಲೆಂಟ್ ಕಿಲ್ಲರ್) ಎಂದು ಕರೆಯಲು ಒಂದು ಕಾರಣವಿದೆ: ಮೂತ್ರಪಿಂಡದ ಕಾಯಿಲೆಗಳು ಆರಂಭಿಕ ಹಂತದಲ್ಲಿ ಯಾವುದೇ ರೋಗಲಕ್ಷಣಗಳನ್ನು ತೋರಿಸುವುದಿಲ್ಲ. ರೋಗವು ತೀವ್ರ ಹಂತಕ್ಕೆ ತಲುಪಿದಾಗ ಮಾತ್ರ ಲಕ್ಷಣಗಳು ಗೋಚರಿಸುತ್ತವೆ.

ಸಾಮಾನ್ಯ ಜನರಲ್ಲಿ ಮೂತ್ರಪಿಂಡದ ಕಾಯಿಲೆಯ ಬಗ್ಗೆ ಇರುವ ಅರಿವು ಶೇಕಡಾ 10% ಕ್ಕಿಂತ ಕಡಿಮೆಯಿದೆ. ಶೇಕಡಾ 80 ರಿಂದ 90 ರಷ್ಟು ಮೂತ್ರಪಿಂಡಗಳು ಹಾನಿಗೊಳಗಾದಾಗ ಮಾತ್ರವೇ ರೋಗಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ.ಉಲ್ಬಣಗೊಂಡ ಮೂತ್ರಪಿಂಡ ಕಾಯಿಲೆಯ ಪ್ರಮುಖ ಲಕ್ಷಣಗಳು:

ಕಾಲುಗಳಲ್ಲಿ ಊತ / ಮುಖ ಊದಿಕೊಳ್ಳುವುದು ಉಸಿರಾಡಲು ತೊಂದರೆ

ವಿಪರೀತ ಸುಸ್ತು ಅಥವಾ ಆಯಾಸ

ಹಸಿವು ಕಡಿಮೆಯಾಗುವುದು

ಸ್ನಾಯು ಸೆಳೆತ (ಮಸಲ್ ಕ್ರ್ಯಾಂಪ್ಸ್)

ಚರ್ಮದಲ್ಲಿ ತುರಿಕೆ

ಮೂತ್ರದಲ್ಲಿ ನೊರೆ ಬರುವುದು

ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು

ಅತಿ ಹೆಚ್ಚಿನ ರಕ್ತದೊತ್ತಡ

ಮೂತ್ರಪಿಂಡದ ಕಾಯಿಲೆ ಯಾರಿಗೆಲ್ಲ ಬರುವ ಸಾಧ್ಯತೆಯಿದೆ?

ಇದರ ಅಪಾಯಕಾರಿ ಅಂಶಗಳು (Risk factors) ಹೀಗಿವೆ:

೧. ಅಧಿಕ ರಕ್ತದೊತ್ತಡ (ಹೈ ಬಿಪಿ)

೨. ಮಧುಮೇಹ (ಡಯಾಬಿಟಿಸ್) – ಪ್ರಪಂಚದಾದ್ಯಂತ ಇದು ಅತಿ ಸಾಮಾನ್ಯ ಕಾರಣವಾಗಿದೆ.

೩. ಬೊಜ್ಜು (ಸ್ಥೂಲಕಾಯ)

೪. ಮೂತ್ರಪಿಂಡಗಳ ಸೋಂಕು (ಪೈಲೊನೆಫ್ರೈಟಿಸ್)

೫. ನೋವು ನಿವಾರಕ ಮಾತ್ರೆಗಳ (ಪೇನ್‌ಕಿಲ್ಲರ್ಸ್) ಮತ್ತು ಗ್ಯಾಸ್ಟ್ರಿಕ್ ಮಾತ್ರೆಗಳ (ಆಂಟಾಸಿಡ್) ಅತಿಯಾದ ಬಳಕೆ

೬. ಕಿಡ್ನಿ ಸ್ಟೋನ್ (ಮೂತ್ರಪಿಂಡದ ಕಲ್ಲು) ಸಮಸ್ಯೆಯನ್ನು ನಿರ್ಲಕ್ಷಿಸುವುದು

೭. ಗ್ಲೋಮೆರುಲೋನೆಫ್ರೈಟಿಸ್ (ಮೂತ್ರಪಿಂಡದ ಫಿಲ್ಟರ್‌ಗಳ ಉರಿಯೂತ

Klive Special Article ನಮ್ಮ ದೇಶದಲ್ಲಿ ಈ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಕಾರಣ – ಅತಿಯಾದ ಹೃದಯದ ಒತ್ತಡ, ದೀರ್ಘಕಾಲದ ನಿರ್ಜಲೀಕರಣ (ದೇಹದಲ್ಲಿ ನೀರಿನಂಶ ಕಡಿಮೆಯಾಗುವುದು), ವಿಪರೀತ ಆಹಾರ ಸೇವನೆ ಮತ್ತು ಕೀಟನಾಶಕಗಳ ಪ್ರಭಾವ.

ಮೂತ್ರಪಿಂಡದ ಕಾಯಿಲೆಯನ್ನು ಪತ್ತೆ ಹಚ್ಚುವುದು ಹೇಗೆ?

ಸಂಪೂರ್ಣ ಮೂತ್ರ ಪರೀಕ್ಷೆಯಂತಹ (Complete Urine Test) ಸರಳ ಪರೀಕ್ಷೆಗಳ ಮೂಲಕ ಸೋಂಕು, ಮೂತ್ರದಲ್ಲಿ ರಕ್ತ ಅಥವಾ ಪ್ರೋಟೀನ್ ಸೋರಿಕೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತದೆ. ರಕ್ತ ಪರೀಕ್ಷೆಯಲ್ಲಿ ‘ಸಿರಮ್ ಕ್ರಿಯೇಟಿನೈನ್’ (Serum Creatinine) ಮಟ್ಟವನ್ನು ಅಳೆಯಲಾಗುತ್ತದೆ. ಇದರ ಮೂಲಕ ಮೂತ್ರಪಿಂಡಗಳು ಎಷ್ಟು ಶೇಕಡಾ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಲೆಕ್ಕಹಾಕಲಾಗುತ್ತದೆ (ಇದನ್ನು eGFR- ಗ್ಲೋಮೆರುಲಾರ್ ಫಿಲ್ಟ್ರೇಶನ್ ರೇಟ್ ಎಂದು ಕರೆಯಲಾಗುತ್ತದೆ).

ಮೂತ್ರದಲ್ಲಿ ಪ್ರೋಟೀನ್ ಸೋರಿಕೆಯಾಗುತ್ತಿರುವ ಕೆಲವು ಸಂದರ್ಭಗಳಲ್ಲಿ, ‘ಕಿಡ್ನಿ ಬಯಾಪ್ಸಿ’ (Kidney Biopsy) ಮಾಡಿಸಿಕೊಳ್ಳಲು ಸಲಹೆ ನೀಡಲಾಗುತ್ತದೆ. ಕಿಡ್ನಿಯ ಅಲ್ಟ್ರಾಸೌಂಡ್ (Ultrasound) ಸ್ಕ್ಯಾನಿಂಗ್ ಕೂಡ ಅಗತ್ಯವಿರುತ್ತದೆ.

ಮೂತ್ರಪಿಂಡಗಳು ಹಾನಿಗೊಳಗಾಗದಂತೆ ನಾವು ತಡೆಯಬಹುದೇ?

ಹೌದು, ಕೆಲವು ಸರಳ ಕ್ರಮಗಳನ್ನು ಅನುಸರಿಸುವ ಮೂಲಕ ನಾವು ಇದನ್ನು ತಡೆಯಬಹುದು:

೧. ದೈಹಿಕವಾಗಿ ಫಿಟ್ ಆಗಿರಿ ಮತ್ತು ಚಟುವಟಿಕೆಯಿಂದಿರಿ.

೨. ಆರೋಗ್ಯಕರ ಆಹಾರವನ್ನು ಸೇವಿಸಿ – ದಿನಕ್ಕೆ 5 ಗ್ರಾಂ ಗಿಂತ ಕಡಿಮೆ ಉಪ್ಪನ್ನು ಬಳಸಿ.

೩. ನಿಮ್ಮ ರಕ್ತದೊತ್ತಡವನ್ನು ಪರೀಕ್ಷಿಸಿಕೊಂಡು 140/90mmHg ಗಿಂತ ಕಡಿಮೆ ಇರುವಂತೆ ನೋಡಿಕೊಳ್ಳಿ ಮತ್ತು ನಿಮ್ಮ ರಕ್ತದ ಸಕ್ಕರೆ ಮಟ್ಟವನ್ನು (HbA1c) ಶೇಕಡಾ 7% ಕ್ಕಿಂತ ಕಡಿಮೆ ಇಟ್ಟುಕೊಳ್ಳಿ.

೪. ಸೂಕ್ತ ಪ್ರಮಾಣದಲ್ಲಿ ಹಣ್ಣುಗಳನ್ನು ಸೇವಿಸಿ – ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳಲು ದಿನಕ್ಕೆ ಕನಿಷ್ಠ 2 ಲೀಟರ್ ನೀರು ಕುಡಿಯಿರಿ.

೫. ಧೂಮಪಾನ ಮತ್ತು ಮದ್ಯಪಾನವನ್ನು ತ್ಯಜಿಸಿ.

೬. ವೈದ್ಯರ ಚೀಟಿ ಇಲ್ಲದೆ ಸಿಗುವ ನೋವು ನಿವಾರಕ ಮಾತ್ರೆಗಳನ್ನು (Pain killers) ಪದೇ ಪದೇ ತೆಗೆದುಕೊಳ್ಳಬೇಡಿ.

೭. ನಿಮಗೆ ಮಧುಮೇಹ, ಅಧಿಕ ರಕ್ತದೊತ್ತಡ, ವಯಸ್ಸು 40 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ, ಅಥವಾ ನಿಮ್ಮ ಕುಟುಂಬದಲ್ಲಿ ಯಾರಿಗಾದರೂ ಮೂತ್ರಪಿಂಡದ ಕಾಯಿಲೆ ಇದ್ದರೆ, ದಯವಿಟ್ಟು ನಿಮ್ಮ ಕಿಡ್ನಿ ಕಾರ್ಯಕ್ಷಮತೆಯನ್ನು ಒಮ್ಮೆ ಪರೀಕ್ಷಿಸಿಕೊಳ್ಳಿ.

ಈ ವರ್ಷದ ವಿಶ್ವ ಮೂತ್ರಪಿಂಡ ದಿನದ ಧ್ಯೇಯವಾಕ್ಯ:

“ಎಲ್ಲರಿಗೂ ಮೂತ್ರಪಿಂಡದ ಆರೋಗ್ಯ – ಜನರ ಕಾಳಜಿ, ಭೂಮಿಯ ರಕ್ಷಣೆ”.

ಮೂತ್ರಪಿಂಡದ ಕಾಯಿಲೆಗೆ ಚಿಕಿತ್ಸೆ ಹೇಗೆ?

ಆರಂಭಿಕ ಹಂತದಲ್ಲಿ, (ACE-I/ARB-I) ನಂತಹ ಹಲವು ಔಷಧಿಗಳು ಮೂತ್ರಪಿಂಡದ ಕಾಯಿಲೆ (CKD) ಉಲ್ಬಣಗೊಳ್ಳುವುದನ್ನು ತಡೆಯಬಲ್ಲವು.

ಮೂತ್ರಪಿಂಡದ ಕಾಯಿಲೆಯು ಕೊನೆಯ ಹಂತದಂತಹ (CKD stage V) ಮುಂದುವರಿದ ಹಂತಗಳಿಗೆ ತಲುಪಿದಾಗ, ಚಿಕಿತ್ಸಾ ಆಯ್ಕೆಗಳು ಸೀಮಿತವಾಗುತ್ತವೆ. ಆಗ ಡಯಾಲಿಸಿಸ್ (Renal replacement therapy) ಅಥವಾ ಕಿಡ್ನಿ ಕಸಿಗೆ (Renal transplantation) ಒಳಗಾಗಬೇಕಾಗುತ್ತದೆ.

ಸೂಕ್ತ ರೋಗಿಗಳಿಗೆ ಕಿಡ್ನಿ ಕಸಿ ಮಾಡುವುದು ಅತ್ಯುತ್ತಮ ಚಿಕಿತ್ಸೆಯಾಗಿದೆ ಮತ್ತು ಇದು ಡಯಾಲಿಸಿಸ್‌ಗಿಂತ ಹೆಚ್ಚು ಪ್ರಯೋಜನಗಳನ್ನು ಹೊಂದಿದೆ.

ಕಿಡ್ನಿ ತೊಂದರೆಗಳು ಹೆಚ್ಚಾಗುತ್ತಿರುವ ಕಾರಣವೇನು?

ಪ್ರಪಂಚದಾದ್ಯಂತ ಕಿಡ್ನಿ ತೊಂದರೆಯಿಂದ ಬಳಲುತ್ತಿರುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ಪ್ರಮುಖ ಕಾರಣವೆಂದರೆ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದು. ಅಲ್ಲದೆ ಆಧುನಿಕ ಜೀವನಶೈಲಿಯಿಂದ ಉಂಟಾಗಿರುವ ಸ್ಥೂಲಕಾಯ (Obesity) ಧೂಮಪಾನ ಆರೋಗ್ಯಕ್ಕೆ ಪೂರಕವಲ್ಲದ ಆಹಾರ ಸೇವನೆ (Unhealthy Diet) ಹಾಗೂ ವ್ಯಾಯಾಮವಿಲ್ಲದ ಜೀವನ ಶೈಲಿ ಕಾರಣವಾಗಿದೆ.

ಭಾರತದಲ್ಲಿನ ಅಂಕಿ ಅಂಶಗಳ ಪ್ರಕಾರ 60 ರಿಂದ 70% ಕಿಡ್ನಿ ವೈಫಲ್ಯತೆ ಉಂಟಾಗುವುದು ಡಯಾಬಿಟಿಸ್ ಹಾಗೂ ಬಿಪಿ ಕಾಯಿಲೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳೇ ಕಾರಣ. ಕಿಡ್ನಿ ತೊಂದರೆ ತಡೆಗಟ್ಟ ಬೇಕಾದಲ್ಲಿ ಈ ವರ್ಗದ ಜನರಿಗೆ ಆರೋಗ್ಯದ ಬಗ್ಗೆ ಅರಿವನ್ನು ಮೂಡಿಸಿ, ಕನಿಷ್ಠ ವರ್ಷಕ್ಕೆ ಒಮ್ಮೆಯಾದರೂ ಕಿಡ್ನಿ ತಪಾಸಣೆ (Blood Urine & Urine Protein) ಮಾಡಿಸಿಕೊಳ್ಳುವುದು ಅನಿವಾರ್ಯವಾಗಿದೆ. ಹೆಚ್ಚಿನ ನೀರು ಸೇವನೆ ಮಾಡಬೇಕು. (ದಿನಕ್ಕೆ ಎರಡು ಲೀಟರ್) ಆಹಾರದಲ್ಲಿನ ಉಪ್ಪಿನ ಪ್ರಮಾಣ ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಹಾಗೂ ಯಾವುದೇ ರೋಗ ಲಕ್ಷಣ ಕಂಡು ಬಂದಲ್ಲಿ ವೈದ್ಯರೊಂದಿಗೆ ತಪಾಸಣೆ ಮಾಡಿಸುವುದು ಬಹಳ ಮುಖ್ಯವಾಗಿರುತ್ತದೆ. ಸೌಂದರ್ಯ ವರ್ಧಕ ವಸ್ತುಗಳು (Skin Peel, Hair Straightening, Anti Aging Cream) ಮುಂತಾದವುಗಳಲ್ಲಿ ಕಿಡ್ನಿಗೆ ಹಾನಿ ಮಾಡಬಹುದಾದ ರಾಸಾಯನಿಕ ವಸ್ತುಗಳು ಇರಬಹುದು. ಆದ್ದರಿಂದ ಇಂತಹ ವಸ್ತುಗಳಿಂದ ದೂರ ಇರಬೇಕು ಹಾಗೂ ತಜ್ಞರ ನಿರ್ದೇಶನವಿಲ್ಲದೆ Online Products ಗೆ ಮೊರೆ ಹೋಗಬೇಡಿ. ಪ್ರಕೃತಿದತ್ತವಾದ ನಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ.

Renukacharya Jayanti ಮಾ.16ರ ಮತ್ತು ಮಾ. 17ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

0

Renukacharya Jayanti ಸೊರಬ ತಾಲೂಕಿನ ಸುಕ್ಷೇತ್ರ ದುಗ್ಲಿಯ ಶ್ರೀಮದ್ ರಂಭಾಪುರಿ ಶಾಖಾ ಶ್ರೀ ಗುರು ರೇವಣಸಿದ್ಧೇಶ್ವರ ಮಠದ ಆವರಣದಲ್ಲಿ ಮಾ.16ರ ಸೋಮವಾರ ಮತ್ತು ಮಾ. 17ರ ಮಂಗಳವಾರ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಪ್ರಯುಕ್ತ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಶ್ರೀ ರೇವಣ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಸೊರಬ ಪಟ್ಟಣದ ನಿಜಗುಣ ರೆಸಿಡೆನ್ಸಿ ಸಭಾಂಗಣದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಾ. 16ರಂದು ಸಂಜೆ 4ಕ್ಕೆ ಗಂಗಾಪೂಜೆ, ಶ್ರೀ ಜಗದ್ಗುರು ಪಂಚಾಚಾರ್ಯ ಧ್ವಜಾರೋಹಣ, ಸಂಜೆ ೬ಕ್ಕೆ ಕಲಶಾರಾಧನೆ, ಶ್ರೀ ದುರ್ಗಾಹೋಮ ಪೂರ್ಣಾಹುತಿ ಮಹಾಮಂಗಳಾರತಿ ನಂತರ ಶ್ರೀ ಚೌಡೇಶ್ವರಿ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. ಮಾ. ೧೭ರಂದು ಜಗುದ್ಗುರು ರೇಣುಕಾರ್ಯರಿಗೆ, ಶ್ರೀ ವೀರಭದ್ರಸ್ವಾಮಿಗೆ, ಶ್ರೀ ಚೌಡೇಶ್ವರಿ ದೇವಿಗೆ, ಲಿಂ. ಶ್ರೀ ಮುರುಘೇಂದ್ರ ಸ್ವಾಮಿ ಅವರ ಗದ್ದುಗೆಗೆ, ಶ್ರೀ ಬಸವೇಶ್ವರ ಸ್ವಾಮಿಗೆ ಮತ್ತು ಶ್ರೀ ನಾಗಮೂರ್ತಿಗೆ ರುದ್ರಾಭಿಷೇಕ ಶಿವಾಷ್ಟೋತ್ತರ ವಿಶೇಷ ಅಲಂಕಾರ ಮತ್ತು ಮಹಾ ಮಂಗಳಾರತಿ ನಡೆಯಲಿದ್ದು, ನಂತರ ಶ್ರೀ ಜಗದ್ಗುರು ರೇವಣ ಸಿದ್ಧೇಶ್ವರರ ಪಲ್ಲಕ್ಕಿ ಉತ್ಸವ ಸಕಲ ವಾಧ್ಯಮೇಳದೊಂದಿಗೆ ಗ್ರಾಮದಲ್ಲಿ ಜರುಗಲಿದೆ. ಬೆಳಗ್ಗೆ 10ಕ್ಕೆ ಕಾಳಸರ್ಪ ನಿವಾರಣೆಗೆ ಆಶ್ಲೇಷ ಬಲಿ, ಸರ್ಪಶಾಂತಿ ಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ ಹಾಗೂ ತೀರ್ಥ ಪ್ರಸಾಧ ವಿನಿಯೋಗ ನಡೆಯಲಿದೆ ಎಂದರು.
ಮಹಾರಥೋತ್ಸವ: ಸಂಜೆ 4ಕ್ಕೆ ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರ ಆಗಮನವಾಗಲಿದ್ದು, ನಂತರ ಜಗದ್ಗುರು ಶ್ರೀ ರೇವಣ ಸಿದ್ಧೇಶ್ವರ ಮಹಾರಥೋತ್ಸವ ಸಕಲ ವಾಧ್ಯ ವೈಭವದೊಂದಿಗೆ ವಿಜೃಂಭಣೆಯಿಂದ ಜರುಗಲಿದೆ. ಶ್ರೀ ಶಿವಕುಮಾರ ಶಾಸ್ತ್ರೀ ಹಿರೇಮಠ ಹಾಗೂ ಶ್ರೀ ಮಠದ ಪರೋಹಿತ ಬಳಗದಿಂದ ವೈದಿಕ ಸೇವೆ ನಡೆಯಲಿದೆ. ವಿಶೇಷವಾಗಿ ಈ ಬಾರಿ ಶ್ರೀ ವೀರಭದ್ರೇಶ್ವರ ಮೂರ್ತಿಯ ಪ್ರತಿಷ್ಟಾಪನೆಯ ವರ್ಷಾಚರಣೆ ಅಂಗವಾಗಿ ಶರಬಿ ಗುಗ್ಗಳ ನಡೆಯಲಿದೆ ಎಂದರು.
ಧರ್ಮ ಸಮಾರಂಭ: ಶ್ರೀ ಮಠದ ಆವರಣದಲ್ಲಿ ಸಂಜೆ 5:30ಕ್ಕೆ ಶ್ರೀ ಕ್ಷೇತ್ರದ ಜಾತ್ರಾ ಮಹೋತ್ಸವ ಮತ್ತು ಲಂಗೈಕ್ಯ ಪೂಜ್ಯರ ಪುಣ್ಯಸ್ಮರಣೆ ಅಂಗವಾಗಿ ಧರ್ಮ ಸಮಾರಂಭ ನಡೆಯಲಿದ್ದು, ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸುಳ್ಳ ಪಂಗೃಹ ಹಿರೇಮಠದ ಶ್ರೀ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. Renukacharya Jayanti ಸಮಾರಂಭವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಲಿಂ. ಶ್ರೀಗಲ ಭಾವಚಿತ್ರವನ್ನು ಮಾಜಿ ಸಚಿವ ಹರತಾಳು ಹಾಲಪ್ಪ ಬಿಡುಗಡೆ ಮಾಡಲಿದ್ದು, ಮುಂಡಗೋಡ ಮಾಜಿ ಶಾಸಕ ವಿ.ಎಸ್. ಪಾಟೀಲ್, ಈಡಿಗ ಸಮಾಜದ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಗುರುಕುಮಾರ ಪಾಟೀಲ್, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ ಅಗಸನಹಳ್ಳಿ, ವಿವಿಧ ಸಮಾಜ ಪ್ರಮುಖರಾದ ಎನ್. ಸುರೇಶ್, ಎಚ್. ಮಲ್ಲಿಕಾರ್ಜುನಪ್ಪ, ಪಿಡಿಓ ಮಲ್ಲಮ್ಮ ಕಬ್ಬೂರು, ಮೆಸ್ಕಾಂ ಜೆಇ ಬಾಲರಾಜ್ ನಾಗರಾಳ ಸೇರಿದಂತೆ ಇತರರು ಪಾಲ್ಗೊಳ್ಳುವರು. ಸಭಾ ಕಾರ್ಯಕ್ರಮದಲ್ಲಿ ಶ್ರೀಗಳ ದ್ವಾದಶ ಪಟ್ಟಾಧಿಕಾರ ವರ್ಧಂತಿ ವರ್ಷಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರಗಳ ಸಾಧಕರಿಗೆ ಶ್ರೀ ಗುರು ರೇವಣಸಿದ್ಧೇಸ್ವರ ಸದ್ಭಾವನಾ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಾಗರಾಜಗೌಡ ಚಿಕ್ಕಾವಲಿ, ಟೌನ್ ವೀರಶೈವ ಸಮಾಜದ ಅಧ್ಯಕ್ಷ ವಿಶ್ವನಾಥ ಗೌಡ, ಪ್ರಮುಖರಾದ ಸಿ.ಪಿ. ವೀರೇಶ್ ಗೌಡ, ಮಲ್ಲಿಕಾರ್ಜುನ ನಿಜಗುಣ, ಚಂದ್ರಶೇಖರ ನಿಜಗುಣ, ವಿಜೇಂದ್ರಗೌಡ ತಲಗುಂದ, ಶಶಿಕಾಂತ ಗೌಡ ಬೆನ್ನೂರು, ಜಗದೀಶಗೌಡ ತ್ಯಾವಗೋಡು, ಗಂಗಾಧರ ಗೌಡ ಗುಡುವಿ, ಸತೀಶ್‌ಗೌಡ ಗುಂಜನೂರು, ಗುರುಪ್ರತೀಕ್ ಸೇರಿದಂತೆ ಇತರರಿದ್ದರು.

ಶ್ರೀಕಾಂತಣ್ಣ ಕಪ್-3 ಪೋಸ್ಟರ್ ಬಿಡುಗಡೆ

0

ಮಾ.28-29 ರಂದು ಎಂಬಿಸಿ ಇವರ ಆಶ್ರಯದಲ್ಲಿ ಸತತ 3ನೇ ಬಾರಿಗೆ ಆಯೋಜಿಸಲಾಗಿರುವ ಶ್ರೀಕಾಂತಣ್ಣ ಕಪ್-3 ಪೋಸ್ಟರ್ ಅನ್ನು ಗಾಂಧಿ ಬಜಾರ್‌ನಲ್ಲಿರುವ ತುಳಜಾ ಭವಾನಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಂತೋಷ್ ಸಕ್ರೆ, ಗಜೇಂದ್ರನಾಥ್, ಪ್ರವೀಣ್, ಬಸವರಾಜ್, ವಿನಯ್ ತಾಂಡ್ಲೆ, ಸಂತೋಷ್, ಅನಿಲ್ ಆಚಾರ್, ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

International Women’s Day ಒತ್ತಡರಹಿತ ಜೀವನಕ್ಕೆ ವ್ಯಾಯಾಮ, ಯೋಗ ಅಗತ್ಯ: ಡಾ. ಕೆ.ಎಸ್. ಪವಿತ್ರ

0

International Women’s Day ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಮಹಿಳಾ ಘಟಕದ ವತಿಯಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಧರ್ ನರ್ಸಿಂಗ್ ಹೋಂನ ಮನೋವೈದ್ಯೆ ಡಾ. ಕೆ.ಎಸ್. ಪವಿತ್ರ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುವುದರಿಂದ ಒತ್ತಡದ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಒತ್ತಡರಹಿತ ಜೀವನ ನಡೆಸುವುದು ಅತ್ಯಂತ ಮುಖ್ಯವಾಗಿದ್ದು, ನಿಯಮಿತ ವ್ಯಾಯಾಮ ಹಾಗೂ ಯೋಗಾಭ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಸೌಮ್ಯಾ ಪ್ರಸಾದ್, ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರು ಆರ್ಥಿಕ, ಸಾಮಾಜಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದು, ಸ್ವಾವಲಂಬಿಯಾಗಿ ಬದುಕಲು ಪ್ರಯತ್ನಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ. ಜಗದೀಶ್, ಮಹಿಳಾ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗದೆ ಮಹಿಳೆಯರ ಸಮಸ್ಯೆಗಳು, ಹಕ್ಕುಗಳು ಹಾಗೂ ಸಾಧನೆಗಳನ್ನು ಚರ್ಚಿಸುವ ವೇದಿಕೆಯಾಗಬೇಕು ಎಂದು ಅಭಿಪ್ರಾಯಪಟ್ಟರು. ಮಹಿಳೆಯರ ಸಾಧನೆಗೆ ಸಮಾಜದ ಎಲ್ಲರೂ ಗೌರವ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಪ್ರಾಧ್ಯಾಪಕಿ ಡಾ. ಜಯಲಕ್ಷ್ಮಿ ನಾರಾಯಣ ಹೆಗಡೆ, ಪ್ರತಿವರ್ಷ ವಿಶ್ವವಿದ್ಯಾಲಯದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ದಿನದ ಉದ್ದೇಶ ಮಹಿಳೆಯರ ಹಕ್ಕುಗಳು ಹಾಗೂ ಸಾಧನೆಗಳನ್ನು ಗೌರವಿಸುವುದಾಗಿದೆ ಎಂದು ತಿಳಿಸಿದರು.

International Women’s Day ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಮಹಿಳಾ ಘಟಕವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ಜಿ.ಕೆ. ಗಿರಿಜೇಶ್ (ವಿಸ್ತರಣಾ ನಿರ್ದೇಶಕರು), ಡಾ. ಸಿ.ಜೆ. ಶ್ರೀಧರ್ (ಡೀನ್–ಸ್ನಾತಕೋತ್ತರ ಅಧ್ಯಯನ), ಡಾ. ನಾರಾಯಣ ಎಂ. ಮಾವರಕರ (ಡೀನ್–ವಿದ್ಯಾರ್ಥಿ ಕಲ್ಯಾಣ), ಡಾ. ಚಂದ್ರಶೇಖರ್ ಎಸ್.ವೈ. (ಪ್ರಚಾರ ವಿಶೇಷಾಧಿಕಾರಿ), ಆಹಾರ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಆದ ಜ್ಯೋತಿ ಎಂ ರಾಥೋಡ್ ಹಣಕಾಸು ನಿಯಂತ್ರಣಾಧಿಕಾರಿ ಪ್ರಿಯಾಂಕಾ ಸೇರಿದಂತೆ ಪ್ರಾಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸೇವಿಸುವ ಆಹಾರವು ಉತ್ತಮ ಗುಣಮಟ್ಟದ್ದಾಗಿದ್ದಲ್ಲಿ ಆರೋಗ್ಯವು ಉತ್ತಮ : ಎಸ್‌.ಪಿ ಪರಮೇಶ್ವರ್ ಹೆಚ್

0

ಸೇವಿಸುವ ಆಹಾರವು ಉತ್ತಮ ಗುಣಮಟ್ಟದ್ದಾಗಿದ್ದಲ್ಲಿ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ದಾವಣಗೆರೆ ಜಿಲ್ಲಾ ಅಡಿಷನಲ್ ಎಸ್‌.ಪಿ ಪರಮೇಶ್ವರ್ ಹೆಚ್ ಹೇಳಿದರು.

ಅವರಿಂದು ಆಹಾರ್2000 ನವರ ನೂತನ ಆಹಾರೋದ್ಯಮ ಉದ್ಘಾಟಿಸಿ ಮಾತನಾಡುತ್ತಾ ಉತ್ತಮ ಗುಣಮಟ್ಟದ ಬೇಕರಿ ಉತ್ಪನ್ನಗಳು ಹಾಗೂ ಸಿಹಿ ಪದಾರ್ಥಗಳನ್ನು ಆಧುನಿಕ ತಂತ್ರಜ್ಞಾನಗಳೊಂದಿಗೆ ಮಾಡುತ್ತಿರುವುದು ಸ್ವಾಗತಾರ್ಹ ಎಂದರು.

ಮುಖ್ಯ ಅತಿಥಿಗಳಾಗಿ ಮಾತನಾಡಿದ ಹಿರಿಯ ಪತ್ರಕರ್ತ ಡಾ ಎಚ್ ಬಿ ಮಂಜುನಾಥ ರಾಷ್ಟ್ರದ ಜಿಡಿಪಿಯಲ್ಲಿ ಆಹಾರೋದ್ಯಮದ ಕೊಡುಗೆ ಮಹತ್ತರವಾಗಿದೆ. ನಮ್ಮ ರಾಷ್ಟ್ರದ ಜಿಡಿಪಿ ಅಭಿವೃದ್ಧಿ ದರವು 7.8 ರಷ್ಟಿದ್ದು ವಿಶ್ವದಲ್ಲಿ ಇದು ಅಧಿಕವಾಗಿದೆ, ದೇಶದ ನಿವ್ಹಳ ಆಂತರಿಕ ಉತ್ಪಾದನಾ ಅಭಿವೃದ್ಧಿಯಲ್ಲಿ ಶೇಕಡ 11 ರಿಂದ 12 ರಷ್ಟು ಕೊಡುಗೆ ಕೊಡುತ್ತಿರುವ ಆಹಾರೋದ್ಯಮ ಕ್ಷೇತ್ರವು ದೇಶದ ಒಟ್ಟು ಉದ್ಯೋಗಗಳಲ್ಲಿ ಶೇಕಡ 13ರಷ್ಟನ್ನು ಒದಗಿಸುತ್ತಿದೆ ಎಂದರಲ್ಲದೆ ರುಚಿಯೊಂದಿಗೆ ಶುಚಿಯನ್ನೂ ಕಾಪಾಡಿಕೊಂಡು ಗ್ರಾಹಕರಿಗೆ ಯೋಗ್ಯ ಬೆಲೆಯಲ್ಲಿ ಒದಗಿಸಬಲ್ಲ ಆಹಾರ ಪದಾರ್ಥಗಳಿಗೆ ಯಾವತ್ತೂ ಭವಿಷ್ಯವಿದ್ದು ಆಹಾರ 2000 ಸಂಸ್ಥೆಯ ಧ್ಯೇಯವೇ ಇದಾಗಿದೆ. ಗ್ರಾಹಕ ಪರವಾದ ಆರ್ ಪ್ರಭಾಕರ್ ರವರ ಅವಿಷ್ಕಾರಗಳ ಪರಿಕಲ್ಪನೆಗಳನ್ನು ಎರಡೂವರೆ ದಶಕಗಳ ಕೆಳಗೆ ದಾವಣಗೆರೆಯಲ್ಲಿ ಕಾರ್ಯರೂಪಕ್ಕೆ ತರುವಲ್ಲಿ ಜಿ ವಿ ರಮೇಶ್ ಹಾಗೂ ಜಿ ನಾರಾಯಣ ಭಟ್ ರವರ ಪರಿಶ್ರಮವ ಅನುಕರಣೆಯ ಎಂದು ಹೆಚ್ ಬಿ ಮಂಜುನಾಥ್ ಅಭಿಪ್ರಾಯ ಪಟ್ಟರು.

ಘಪ್ರಸಿದ್ಧ ಮಯೂರ ಸಮೂಹದ ಚೇರ್ಮನ್ ಜಿ ಶ್ರೀನಿವಾಸರಾವ್ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಯಾವುದೇ ಸಂಸ್ಥೆಯ ಅಭಿವೃದ್ಧಿಯಲ್ಲಿ ಸಿಬ್ಬಂದಿಗಳ ಪಾತ್ರವೂ ಮಹತ್ತರವಾಗಿರುತ್ತದೆ ಎಂದರು. ರೂಪಾರವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು.

ಪ್ರಾಸ್ತಾವಿಕ ನುಡಿಗಳ ನಾಡಿದ ಆಹಾರ 2000 ಸಂಸ್ಥೆಯ ಜಿ ವಿ ರಮೇಶ್ ಅತ್ಯಾಧುನಿಕ ತಂತ್ರಜ್ಞಾನದ ಯಂತ್ರೋಪಕರಣಗಳನ್ನು ಬಳಸಿ ಆರೋಗ್ಯಕರವಾದ ಉತ್ಪನ್ನಗಳನ್ನು ನೂತನ ಸಂಸ್ಥೆಯು ಗ್ರಾಹಕರಿಗೆ ಒದಗಿಸಲಿದೆ ಎಂದರು. ಆಹಾರ 2000 ಸಂಸ್ಥೆಯ ರಚತ ಮಹೋತ್ಸವ ಅಂಗವಾಗಿ 35 ಶ್ರಮಿಕ ಬಂಧುಗಳನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸಾರ್ವಜನಿಕ ಸೇವಾ ಉದ್ದೇಶದ ಮಾತಾಪಿತೃ ಫೌಂಡೇಶನ್ ಅನ್ನು ಲೋಕಾರ್ಪಣೆ ಮಾಡಲಾಯಿತು. ಆಹಾರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿ ನಾರಾಯಣ ಭಟ್, ಸುಬ್ಬಣ್ಣ, ಜನಾರ್ದನರಾವ್, ನಗರಪಾಲಿಕಾ ಮಾಜಿ ಸದಸ್ಯ ನಾಗರಾಜ್, ಶಿವನಹಳ್ಳಿ ರಮೇಶ್, ಲೋಕಿಕೆರೆ ನಾಗರಾಜ್, ಸುನಂದಾ ರಮೇಶ್ ಭಟ್ ಮುಂತಾದವರು ಉಪಸ್ಥಿತರಿದ್ದು ಹೋಟೆಲ್ ಉದ್ಯಮಿ ನೇರಂಬಳ್ಳಿ ರಾಘವೇಂದ್ರರಾರು ಅಧ್ಯಕ್ಷೀಯ ನುಡಿಗಳ ನಾಡಿದರು. ಖ್ಯಾತ ವಾಗ್ಮಿ ಶ್ರೀಕಾಂತ ಭಟ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಖ್ಯಾತ ಗಾಯಕಿ ಮಾನಸ ವಿ ಎಸ್, ಹೆಚ್ ಎಂ ಶ್ರೀಧರ್ ಮತ್ತು ತಂಡದವರು ಸುಗಮ ಸಂಗೀತ ಪ್ರಸ್ತುತಪಡಿಸಿದರು.

Department of Kannada and Culture ವಚನ ಕಲ್ಯಾಣ-ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

0

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ವಚನ ಕಲ್ಯಾಣ’ ಎಂಬ ಅಹೋರಾತ್ರಿ (9 ಗಂಟೆಗಳ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಉದ್ದೇಶಿಸಿದ್ದು, ನುರಿತ ಹಾಗೂ ಆಸಕ್ತ ಯುವಕ/ಯುವತಿಯರು ಹಾಗೂ ಅನುಭವಿ ರಂಗ ಕಲಾವಿದರು/ಗಾಯಕರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಯೋಮಿತಿ 18 ರಿಂದ 40 ವರ್ಷಗಳ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದ್ದು ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕದಲ್ಲಿ ಅಭಿನಯಿಸಿದ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ನಮೊನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್‌ಸೈಟ್ ವಿಳಾಸ kannadasiri.karnataka.gov.in ಇಲ್ಲಿ ಪಡೆದು, ಮಾ.20 ರೊಳಗಾಗಿ ಅರ್ಜಿಯನ್ನು ಭರ್ತಿಮಾಡಿ ಸದಸ್ಯ ಕಾರ್ಯದರ್ಶಿ, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಮುದ್ದಾಂ ಅಥವಾ ಅಂಚೆಯ ಮೂಲಕ ಅಥವಾ ಇಮೇಲ್ ವಿಳಾಸ kanakaresearchcenter@gmail.com ಮೂಲಕ ಸಲ್ಲಿಸಲು ಕೋರಿದೆ.
Department of Kannada and Culture ಆಯ್ಕೆಯಾದ ಅಭ್ಯರ್ಥಿಗಳು ಮೂರು ತಿಂಗಳ ಕಾಲದ ಅವಧಿಯಲ್ಲಿ ಪೂರ್ಣಕಾಲಿಕ ತರಬೇತಿ ಪ್ರದರ್ಶನಗಳಲ್ಲಿ ಪಾಲ್ಗೊಳ್ಳುವುದು ಕಡ್ಡಾಯವಾಗಿದ್ದು, ಮಾಸಿಕ ಗೌರವಧನ ಮತ್ತು ಊಟ-ವಸತಿ ವ್ಯವಸ್ಥೆಯನ್ನು ಮಾಡಲಾಗುವುದು. ಹಾಗೂ ಸಂದರ್ಶನಕ್ಕೆ ಹಾಜರಾಗುವ ಕಲಾವಿದರಿಗೆ ಇಲಾಖೆಯು ಯಾವುದೇ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ವಚನ ಕಲ್ಯಾಣ ನಾಟಕದ ನಿರ್ದೇಶಕರಾದ ಬಸಲಿಂಗಯ್ಯ ಅಥವಾ ದೂ.ಸಂ:94485 38620 ನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಕಾರಿಪುರದ ಇಬ್ಬರು ಯುವ ಬರಹಗಾರರಿಗೆ ಸನ್ಮಾನ

0

ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಯುವ ಬರಹಗಾರರ ಚೊಚ್ಚಲ ಕೃತಿಗೆ ಆಯ್ಕೆಯಾದ ಲೇಖಕರು ಮತ್ತು ಕವಿಗಳನ್ನು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಮಂಗಳವಾರ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಆಯ್ಕೆಯಾದ ಶಿರಾಳಕೊಪ್ಪದ ಲೇಖಕ ಎಂ ನವೀನ್ ಕುಮಾರ್ ಅವರ ‘ಬುದ್ಧಿವಂತರು ಬಡವರಾಗುವುದು ಏಕೆ?’ ಕೃತಿ ಹಾಗೂ ಶಿಕಾರಿಪುರದ ಶ್ರೀದೇವಿ ಭುಜಂಗಪ್ಪ ಅವರ ‘ಇವನೇ ಕವನ’ ಸಂಕಲನಕ್ಕೆ ಗೌರವ ಸಲ್ಲಿಸಲಾಯಿತು. ಖ್ಯಾತ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಇವರಿಗೆ ಸನ್ಮಾನಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ, ಖ್ಯಾತ ಸಾಹಿತಿ ಹಂಪನಾ, ಕವಿ ಸತೀಶ್ ಕುಲಕರ್ಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್, ನಿರ್ದೇಶಕ ಡಾ. ಕೆ.ಬಿ. ಮಂಜುನಾಥಯ್ಯ, ಪ್ರಾಧಿಕಾರದ ಸದಸ್ಯ ಲಕ್ಷ್ಮಣ್ ಕೂಡಸೆ, ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಡಾ. ಬಿ.ಸಿ. ಕುಶಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಯುವ ಬರಹಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಹೊಸ ಸಾಹಿತ್ಯ ಕೃತಿಗಳನ್ನು ಹೊರತರುವ ಲೇಖಕರಿಗೆ ಇದು ಪ್ರೇರಣೆಯಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಬಾಬಾ ಸಾಹೇಬರು ಭಾರತ ದೇಶದ ನಿಜ ಭಾಗ್ಯವಿಧಾತ: ಪಲ್ಲವಿ ಜಿ

0

ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆ ತರಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟವರು ಡಾ. ಬಿ ಆರ್ ಅಂಬೇಡ್ಕರ್. ಅವರು ಭಾರತ ದೇಶದ ನಿಜ ಭಾಗ್ಯವಿಧಾತ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಅವರು ಅಭಿಪ್ರಾಯ ವ್ಯಕ್ತ ಪಡಿಸಿದರು.

ಬೆಂಗಳೂರು ನಗರದ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಡಾ. ಬಿ ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ, ಡಾ, ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಇವರ ಸಹಯೋಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಏರ್ಪಡಿಸಿದ್ದ “ಭೀಮ ಗಾಯನ”ವಿಶೇಷ ಸಂಗೀತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಮ್ಮ ಸಂವಿಧಾನ ಪೀಠಿಕೆಯು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಐಕ್ಯತೆ ಮತ್ತು ಭ್ರಾತೃತ್ವದ ಬದ್ಧತೆಯನ್ನು ಪ್ರತಿಪಾದಿಸುತ್ತದೆ.ಅಂಬೇಡ್ಕರ್ ರಚಿತ ಈ ಸಂವಿಧಾನದ ಪೀಠಿಕೆಯೇ ಅವರು ಒಬ್ಬ ವಿಶ್ವ ಮಾನವ ಎಂಬುದನ್ನು ಸಾಬೀತು ಪಡಿಸುತ್ತದೆ ಎಂದ ಅವರು ಬಾಬಾ ಸಾಹೇಬರು ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಭಾರತದ ಎಲ್ಲ ಪ್ರಜೆಗಳ ಸಮಾನ ಹಕ್ಕುಗಳಿಗೆ ಹೋರಾಡಿದವರು. ಅವರ ಆಶಯ ಆದರ್ಶಗಳನ್ನು ಈ ದೇಶದ ಯುವ ಸಮುದಾಯ ಅರ್ಥ ಮಾಡಿಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ಕೊಟ್ಟರು.

ಮಹಿಳೆಯರಿಗೆ ಹೆಚ್ಚಿನ ಹಕ್ಕುಗಳನ್ನು ಪ್ರತಿಪಾದಿಸಿದ ಹಿಂದು ಕೋಡ್ ಬಿಲ್ಲನು ತಿರಸ್ಕರಿಸಿದ ಸಂದರ್ಭದಲ್ಲಿ ಅಂಬೇಡ್ಕರ್ ಅವರು ತಮ್ಮ ಸಚಿವ ಪದವಿಗೆ ರಾಜಿನಾಮೆ ನೀಡುತ್ತಾರೆ. ಅಂತಹ ಕಾರ್ಯ ನಿಷ್ಠೆ ಇಂದಿನ ಸಂದರ್ಭದಲ್ಲಿ ಕಾಣುವುದೇ ಅತ್ಯಂತ ವಿರಳ. ಹಾಗಾಗಿ ಅಂಬೇಡ್ಕರ್ ಇಂದಿಗೂ ನಮಗೆ ಅತ್ಯಂತ ಪ್ರಸ್ತುತ ಎಂದ ಅವರು, ದೇಶದಲ್ಲಿ ಮಹಿಳೆಯರನ್ನು ಒಂದು ವರ್ಗವನ್ನಾಗಿಸಿ ಮನೆಗೆ ಸೀಮಿತವಾಗಿರಿಸಿದ್ದ ಪರಿಸ್ಥಿತಿ ಒಂದು ಕಾಲದಲ್ಲಿ ಇತ್ತು, ಅಂತಹ ಸಂದರ್ಭದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಅವರು ಮಹಿಳೆಯರ ಶಿಕ್ಷಣಕ್ಕೆ ಹೋರಾಡಿದವರು. ಇಂದು ಅವರ ಪುಣ್ಯಸ್ಮರಣೆಯ ದಿನದಂದು ನಾವೆಲ್ಲರೂ ಕೃತಜ್ಞತಾ ಭಾವದಿಂದ ಅವರನ್ನು ನೆನೆಯಬೇಕಿದೆ ಎಂದರು.

Chamber of Commerce Shivamogga ಮಹಿಳೆಯರು ಸಂಘಟಿತರಾಗುವುದು ಅತ್ಯಂತ ಅವಶ್ಯ : ಜಿ.ವಿಜಯಕುಮಾರ್

0

Chamber of Commerce Shivamogga ಸಮಾಜದ ಬೆಳವಣಿಗೆಗೆ ಮಹಿಳೆಯರ ಪಾತ್ರ ದೊಡ್ಡದು. ಮಹಿಳೆಯರು ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು, ಆರ್ಥಿಕವಾಗಿ ಸದೃಢರಾಗಲು ಸಂಘಟಿತರಾಗುವುದು ಮುಖ್ಯ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಹೇಳಿದರು
ಶಿವಮೊಗ್ಗ ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಆವರಣದಲ್ಲಿ ಜಿಲ್ಲಾ ಸರ್ವೋದಯ ಮಂಡಲದಿಂದ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಸಾಧನೆ ಮಾಡಿದ ಮಹಿಳೆಯರು ಮತ್ತು ಆಕಾಶವಾಣಿ ಆರ್ ಜೆ ಬಳಗದವರನ್ನು ಸನ್ಮಾನಿಸಿ ಮಾತನಾಡಿದರು.
ಹೆಣ್ಣು ಮಕ್ಕಳು ಸ್ವಾವಲಂಬಿಯಾಗಬೇಕು. ಮಹಿಳೆ ತನ್ನ ಪ್ರಯತ್ನ, ಪರಿಶ್ರಮದಿಂದ ಈಗ ಎಲ್ಲಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದಾಳೆ. ತಾನು ಪಡೆದುಕೊಂಡ ಶಿಕ್ಷಣದಿಂದ ಸ್ವತಂತ್ರವಾಗಿ ಜೀವನ ಮಾಡುವ ಶಕ್ತಿ ಹೊಂದಿದ್ದಾಳೆ. ಮಹಿಳೆಯರ ಅಭಿವೃದ್ಧಿ ಎಂದರೆ ಒಟ್ಟಾರೆ ಸಮಾಜದ ಅಭಿವೃದ್ಧಿ ಎಂದು ತಿಳಿಸಿದರು.
ಮನೋವೈದ್ಯೆ ಕೆ.ಎಸ್.ಪವಿತ್ರ ಮಾತನಾಡಿ, ಮಹಿಳೆಯು ಆರೋಗ್ಯದಿಂದ ಇದ್ದರೆ ಮನೆಗೆ ಅಡಿಪಾಯವಿದ್ದಂತೆ. ಅವರು ಆರೋಗ್ಯದಿಂದ ಇದ್ದಷ್ಟು ಮನೆ ಸಬಲವಾಗಿರುತ್ತದೆ. ಮಹಿಳೆಯ ದೃಢಸಂಕಲ್ಪವು ಯಾವುದೇ ಸವಾಲನ್ನು ಜಯಿಸಬಹುದು ಎಂದರು.
ಜಿಲ್ಲಾ ಸರ್ವೋದಯ ಮಂಡಲ ಅಧ್ಯಕ್ಷ ಆರ್.ಮನೋಹರ ಮಾತನಾಡಿ, ಹೆಣ್ಣು ಭ್ರೂಣ ಹತ್ಯೆ ಕೇವಲ ಅಪರಾಧವಲ್ಲ, ಅದೊಂದು ನೈತಿಕ ಕಳಂಕ ಮತ್ತು ಸಾಂವಿಧಾನಿಕ ಅವಮಾನ ಎಂದು ಹೇಳಿದರು.
ಸನ್ಮಾನಿತರಾದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎಮಿರೇಟ್ಸ್ ಪ್ರಾಧ್ಯಾಪಕಿ ಡಾ. ವಿಜಯ ದೇವಿ ಮಾತನಾಡಿ, ಮಹಿಳೆಯ ಸಬಲೀಕರಣ ಮನೆಯಿಂದಲೇ ಪ್ರಾರಂಭವಾಗಬೇಕು. ಶೈಕ್ಷಣಿಕ ಪ್ರಗತಿ ತುಂಬಾ ಮುಖ್ಯ. ಮಹಿಳೆಯರ ಪ್ರತಿಭೆಯನ್ನು ಗುರುತಿಸುವ ಕೆಲಸವಾಗಬೇಕು ಎಂದರು.
Chamber of Commerce Shivamogga ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಬಸವರಾಜ ನೆಲ್ಲಿಸರ, ಆಕಾಶವಾಣಿ ಆರ್ ಜೆ ಗಣೇಶ್ ಕೆಂಚನಾಲ್, ಸನ್ಮಾನಿತ ಆಕಾಶವಾಣಿ ಆರ್ ಜೆ ಗಳಾದ ಪ್ರೇಮ ಸಾಲೆರಾ, ನಂದಿನಿ, ವಿದ್ಯಾ ಕಾರಂತ್ ಹಾಗೂ ಬಸವರಾಜ್ ಗುಬ್ಬಿ.. ಮಾನಸ ಶಿವರಾಮ್ ಕೃಷ್ಣ, ಚಂದ್ರಿಕಾ ನೇರಲಗುಂಡಿ, ಬ್ರಹ್ಮಾನಂದ ರಾನಾದೆ, ಪಂಕಜ, ಸಹನಾ ಚೇತನ್, ರಾಜು ಶಂಕರಘಟ್ಟ, ಡಾ ಮಾನಸ, ಆಕಾಶವಾಣಿ ಆರ್ ಜೆ ಬಳಗ ಇತರರಿದ್ದರು.