Wednesday, April 1, 2026
Wednesday, April 1, 2026
Home Blog Page 599

Shivamogga Bhadravathi Urban Development Authority ಸುಡಾದಿಂದ ಜನರೇಟರ್ ಶೆಡ್ ನಿರ್ಮಾಣ. ನಿಯಮ ಉಲಂಘನೆ ಎಂದು ನಾಗರೀಕ ಹಿತರಕ್ಷಣಾ ವೇದಿಕೆ ಆರೋಪ

0

Shivamogga Bhadravathi Urban Development Authority ಶಿವಮೊಗ್ಗ ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಮೂರನೇ ಕಾನೂನು ಬಾಹಿರ ನಿರ್ಮಾಣ. ಈಗಗಾಗಲೇ ರಸ್ತೆಯಲ್ಲಿ ಶೆಡ್ ನಿರ್ಮಾಣ, ಸೂಡ ಮತ್ತು ನೊಂದಾವಣೆ ಕಛೇರಿ ಪಕ್ಕದಲ್ಲಿ ಪಾರ್ಕಿನ ಒಳಗೆ ಲಿಪ್ಟ ಹಾಕಲು ಕಟ್ಟಡ ನಿರ್ಮಾಣ ಮಾಡಿರುವ ಸೂಡ. ಈಗ ಆದೇ ಪಾರ್ಕಿನಲ್ಲಿ ಜನರೇಟರ್ ಗೆ ಶೆಡ್ ನಿರ್ಮಿಸಿ ಜನರೇಟರ್ ಸ್ಥಾಪಿಸಿದ್ದಾರೆ. ಇದು ಸಹಾ ಮಹಾನಗರ ಯೋಜನೆ-2030 ನಿಯಮ ಸ್ಪಷ್ಟ ಉಲ್ಲಂಘನೆಯ ಮೂರನೇ ಅಪರಾದ. ಜಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಈ ನಿರ್ಮಾಣವನ್ನೂ ತಕ್ಷಣ ತೆರುವು ಗೊಳಿಸಲು ಕ್ರಮ ಕೈಗೊಳ್ಳ ಬೇಕು.

Philip Green ಆಗುಂಬೆಗೆ ಭೇಟಿ ನೀಡಿ ನಿಸರ್ಗಕ್ಕೆ ಮನಸೋತ ಭಾರತದಲ್ಲಿರುವ ಆಸ್ಟ್ರೇಲಿಯ ಹೈಕಮೀಷನರ್ ಕುಟುಂಬ

0

Philip Green ಆಸ್ಟ್ರೇಲಿಯಾ ದೇಶದ ಭಾರತೀಯ ಹೈಕಮಿಷನರ್‌ ಫಿಲಿಪ್‌ ಗ್ರೀನ್‌ ಮತ್ತು ಅವರ ಕುಟುಂಬವು ಮಳೆ ಕಾಡು ಅಧ್ಯಯನಕ್ಕೆ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಆಗುಂಬೆಗೆ ಭೇಟಿ ನೀಡಿದೆ.

ಆಗುಂಬೆಗೆ ಆಸ್ಟ್ರೇಲಿಯಾದ ಭಾರತೀಯ ಹೈಕಮಿಷನರ್‌ ಭೇಟಿ, 3 ದಿನ ಅ‍ಧ್ಯಯನ ಪ್ರವಾಸ ಕೈಗೊಂಡಿದ್ದಾರೆ.
ಆಗುಬೆಯ ಸನ್‌ ಸೆಟ್‌ ಪಾಯಿಂಟ್‌ಗೆ ತೆರಳಿ ಪಶ್ಚಿಮಘಟ್ಟದ ವೈಭವ ಕಣ್ತುಂಬಿಕೊಂಡ ಫಿಲಿಪ್ ಗ್ರೀನ್ ಕುಟುಂಬ ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಸೆಲ್ಫಿ, ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ‌.

Philip Green ಕಾಳಿಂಗ ಫೌಂಡೇಶನ್‌ಗೆ ಭೇಟಿ. ನೀಡಿ ,ಆಗುಂಬೆ ಭಾಗದ ವಿವಿಧೆಡೆ ಭೇಟಿ, ಟ್ರೆಕಿಂಗ್‌, ಕಾಳಿಂಗ ಸರ್ಪಗಳ ಕುರಿತು ಅಧ್ಯಯನ ನಡೆಸಿಲಾಗಿದೆ‌

Bharat Scouts and Guides ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಸ್ಮರಣೆ ಮಾಡಬೇಕು- ಕೆ.ಪಿ.ಬಿಂದುಕುಮಾರ್

0

Bharat Scouts and Guides ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್, ಶಿವಮೊಗ್ಗ ಜಿಲ್ಲಾ ಮತ್ತು ಸ್ಥಳೀಯ ಸಂಸ್ಥೆ ವತಿಯಿಂದ ಜಿಲ್ಲಾ ಸ್ಕೌಟ್ ಭವನದ ಆವರಣದಲ್ಲಿ 78ನೇ ಸ್ವಾತಂತ್ಯ್ರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಮುಖ್ಯ ಆಯುಕ್ತರಾದ ಕೆ ಪಿ ಬಿಂದು ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿ ಮಕ್ಕಳನ್ನು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು ನಮ್ಮ ದೇಶ ಮೊದಲಿಗಿಂತಲೂ ಎಲ್ಲಾ ಕ್ಷೇತ್ರಗಳಲ್ಲೂ ತುಂಬಾ ಸದೃಢವಾಗಿದೆ, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ವೀರ ಯೋಧರ ಹುತಾತ್ಮರ ಸ್ಮರಣೆ ನಿತ್ಯ ಮಾಡಲೇಬೇಕಾದ ಅಗತ್ಯತೆ ಇದೆ, ನಮ್ಮ ಮಕ್ಕಳಿಗೆ ಇಂದು ಸ್ವಾತಂತ್ರ್ಯ ಗಳಿಸುವಲ್ಲಿ ನಮ್ಮವರು ಮಾಡಿದ ಸಾಧನೆ ಇಂದ ನಾವು ಇಂದು ನೆಮ್ಮದಿ ಜೇವನ ನೆಡೆಸುತ್ತಿದ್ದೇವೆ ಎನ್ದು ನುಡಿದರು.. ಕಾರ್ಯಕ್ರಮದಲ್ಲಿ ಮಕ್ಕಳಿಂದ ಕವಾಯಿತು. ಸಾಂಸ್ಕ್ರತಿಕ ಕಾರ್ಯಕ್ರಮ ಆಕರ್ಷಕ ಪೆರೇಡ್ ನೆರವೇರಿತು.

Bharat Scouts and Guides ಸಮಾರಂಭದಲ್ಲಿ ಸ್ಕೌಟ್ ಆಯುಕ್ತರಾದ ಶ್ರೀ ಎಸ್. ಜಿ. ಆನಂದ್., ಗೈಡ್ ಆಯುಕ್ತರದ ಶ್ರೀಮತಿ ಶಕುಂತಲಾ ಚಂದ್ರಶೇಖರ್. ಖಜಾಂಚಿ ಚೂಡಮಣಿ ಈ ಪವರ್. ಕಾರ್ಯದರ್ಶಿ ಪರಮೇಶ್ವರ್. ಸಹಕಾರ್ಯದರ್ಶಿ ಶ್ರೀ ವೀರೇಶಪ್ಪ. ಜಂಟಿ ಕಾರ್ಯದರ್ಶಿ ಶ್ರೀಮತಿ ಲಕ್ಷಿ÷್ಮ ಕೆ ರವಿ., ಶಿವಶಂಕರ್. ರಾಜೇಶ್ ಅವಲಕ್ಕಿ, ಶ್ರೀಮತಿ ಹೇಮಲತಾ, .ಚಂದ್ರಶೇಖರ್. ಮಲ್ಲಿಕಾರ್ಜುನ್ ಕಾನೂರ್, ಕೃಷ್ಣ ಸ್ವಾಮಿ, ಹಾಗೂ ಸ್ಕೌಟ್ ಅಂಡ್ ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ಮಕ್ಕಳು ದಳ ನಾಯಕ / ನಾಯಕಿರವರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.”

Klive Special Article ತಿಂಗಳ ಕವಿತೆ

0

Klive Special Article ಉತ್ತು – ಬಿತ್ತಿ ಭುವಿಗೆ
ಬೆವರ ಸುರಿಸಿ ನಾಡಿಗೆ
ಅನ್ನ ನೀಡುವ ನನ್ನ ರೈತ

ಬಿಸಿಲಲ್ಲಿ ಬೆಂದು
ಮಳೆಯಲ್ಲಿ ನೆನೆದು
ಚಳಿಯಲ್ಲಿ ನಡುಗಿ ಊರ ಹಸಿವು ನೀಗಿಸುವ ನನ್ನ ರೈತ

ಬೆಳೆಗಾಗಿ ಸಾಲ – ಸೂಲ ಮಾಡಿ ಹಾಕಿದ ಬೀಜ ಜೀವ – ಜಲವಿಲ್ಲದೆ ಕಂಗೆಟ್ಟು, ಮಳೆ ಬಂದಾಗ ಸಂತೋಷಪಟ್ಟ ನನ್ನ ರೈತ

ಮಳೆ ಬಂದು ಇಳೆತುಂಬಿ
ಬೆಳೆ ಮುಳುಗಿ ಹೋದಾಗ ಯಾರಿಗೂ ಹೇಳದೆ ಸಂಕಟ ಪಟ್ಟ ನನ್ನ ರೈತ

ಕಷ್ಟಪಟ್ಟು ಹೊಟ್ಟೆ – ಬಟ್ಟೆ ಕಟ್ಟಿ ದುಡಿದು – ದುಡಿದು ಸೋತು – ಸೊರಗಿ ಹೋದ ನನ್ನ ರೈತ

ಬೆಳೆಗಾಗಿ ತಂದ ಸಾಲ ತೀರಲಿಲ್ಲ ಕೊಟ್ಟವರು ಬಿಡುತ್ತಿಲ್ಲ ಮಾನಕ್ಕಾಗಿ ಜೀವ ಪಣಕಿಟ್ಟ ನನ್ನ ರೈತ

Klive Special Article ಸಾಲ ಕೊಟ್ಟವರು ಬಿಡಲಿಲ್ಲ
ಸರ್ಕಾರದ ಮನಸ್ಸು ಕರಗಲಿಲ್ಲ ಕೊನೆಗೂ ರೈತನ ಭವಣೆ ತೀರಲಿಲ್ಲ
ಇಷ್ಟೆಲ್ಲಾ ಕಷ್ಟವ ಅನುಭವಿಸಿಯೂ ಎದೆಗುಂದದೆ ದೇಶಕ್ಕೆ ಅನ್ನವ ನೀಡುವಾತ ನನ್ನ ರೈತ
ದೇಶಕ್ಕೆ ಅನ್ನವ ನೀಡುವಾತ ನನ್ನ ರೈತ…..!

ರಚನೆ : ಧರ್ಮರಾಜ್.ಜಿ.ಸಾಗರ, ಪತ್ರಕರ್ತರು ಹಾಗೂ ಹವ್ಯಾಸಿ ಕವಿ, ಸಾಗರ

Rain In Shivamogga ಭಾರಿಮಳೆಯಿಂದ ಜೈಲ್ ರಸ್ತೆ ಜಲಾವೃತ.ಸಂಚಾರ ಅಸ್ತವ್ಯಸ್ತ

0

Rain In Shivamogga ಶಿವಮೊಗ್ಗ ನಗರದಲ್ಲಿ ಮಳೆ ಅಬ್ಬರಿಸುತ್ತಿದೆ . ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ಹೊತ್ತಿಗೆ ಮಳೆ ಜೋರಾಗಿದೆ.
ನಗರದಲ್ಲಿ ದಟ್ಟ ಮೋಡ ಕವಿದಿದ್ದು ಕೆಲ ಹೊತ್ತು ಎಡೆಬಿಡದೆ ಮಳೆಯಾಗುತ್ತಿದೆ. ಭಾರಿ ಮಳೆಗೆ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ವಿವಿಧೆಡೆ ಮನೆ, ಮಳಿಗೆಗಳಿಗು ನೀರು ನುಗ್ಗಿದೆ.
ಜೈಲ್‌ ರಸ್ತೆ ಜಲಾವೃತ
ಶಿವಮೊಗ್ಗ ಜೈಲ್‌ ರಸ್ತೆ ಜಲಾವೃತವಾಗಿದೆ.

Rain In Shivamogga ಸುಬ್ಬಯ್ಯ ಆಸ್ಪತ್ರೆಯಿಂದ ಹೊಸಮನೆ ಚಾನೆಲ್‌ ವರೆಗು ರಸ್ತೆ ಮೇಲೆ ನೀರು ಹರಿಯುತ್ತಿದೆ. ಚರಂಡಿಗಳು ಭರ್ತಿಯಾಗಿ ನೀರು ಉಕ್ಕಿ ಬರುತ್ತಿದೆ. ವಾಹನ ಸವಾರರು ನಿಧಾನವಾಗಿ ಚಲಿಸುವಂತಾಗಿದೆ. ಇನ್ನು, ನಗರದ ವಿವಿಧೆಡೆ ತಗ್ಗು ಪ್ರದೇಶಗಳಿಗು ನೀರು ನುಗ್ಗಿದೆ.

Election Commission of India ಹರಿಯಾಣ ಮತ್ತು ಜಮ್ಮು& ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ

0

Election Commission of India ಭಾರತೀಯ ಚುನಾವಣಾ ಆಯೋಗವು ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗಳಿಗೆ ಚುನಾವಣೆ ಘೋಷಣೆ ಮಾಡಿದೆ.

ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯೋಗ ಮತದಾನ ಹಾಗೂ ಎಣಿಕೆಯ ದಿನಾಂಕಗಳನ್ನು ಪ್ರಕಟಿಸಿದೆ.
ಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಅಕ್ಟೋಬರ್ 1ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ಮಾಡಲಾಗುತ್ತದೆ.

Election Commission of India ಜಮ್ಮು ಮತ್ತು ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 18,25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ಮಾಡಲಾಗುತ್ತದೆ.
ಆರ್ಟಿಕಲ್ 370 ರದ್ದತಿ ಬಳಿಕ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆಗೆ ಘೋಷಣೆಯಾಗಿದೆ.

ಸುಪ್ರೀಂ ಕೋರ್ಟ್ ವಿಧಿಸಿರು

Uddhav Thackeray ಮಹಾರಾಷ್ಟ್ರದ ಮುಂದಿನ ಸೀಎಂ ಸ್ಥಾನಕ್ಕೆ ಕಾಂಗ್ರೆಸ್, ಎನ್ ಸಿಪಿ ಘೋಷಿಸಿದ ಅಭ್ಯರ್ಥಿಗೆ ಬೆಂಬಲ-ಉದ್ಧವ್ ಠಾಕ್ರೆ

0

Uddhav Thackeray ಮುಂಬರುವ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆಗೆ ಮಹಾ ವಿಕಾಸ್ ಅಘಾಡಿ (ಎಂವಿಎ) ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮತ್ತು ಎನ್‌ಸಿಪಿ (ಎಸ್‌ಪಿ) ಸೂಚಿಸುವ ಯಾವುದೇ ನಾಯಕನನ್ನು ಬೆಂಬಲಿಸಲು ನಾವು ಸಿದ್ದ ಎಂದು ಶಿವಸೇನೆ (ಯುಬಿಟಿ) ನಾಯಕ ಉದ್ದವ್ ಠಾಕ್ರೆ ಹೇಳಿದ್ದಾರೆ.

ಮಹಾ ವಿಕಾಸ್ ಅಘಾಡಿ (ಎಂವಿಎ) ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯು ರಾಜ್ಯದ ಸ್ವಾಭಿಮಾನವನ್ನು ರಕ್ಷಿಸುವ ಹೋರಾಟವಾಗಿದೆ ಎಂದಿದ್ದಾರೆ.

“ಮಹಾ ವಿಕಾಸ್ ಅಘಾಡಿಯ ಸಿಎಂ ಅಭ್ಯರ್ಥಿಯನ್ನು ನಿರ್ಧರಿಸೋಣ, ನಾನು ಅದನ್ನು ಬೆಂಬಲಿಸುತ್ತೇನೆ. ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಅವರ ಅಭ್ಯರ್ಥಿಯನ್ನು ಘೋಷಿಸಲಿ ನಾನು, ಅದನ್ನು ಬೆಂಬಲಿಸುತ್ತೇನೆ. ಏಕೆಂದರೆ ನಾವು ಮಹಾರಾಷ್ಟ್ರದ ಒಳಿತಿಗಾಗಿ ಕೆಲಸ ಮಾಡಬೇಕಾಗಿದೆ. ಜನರಿಗೆ ನಾವು ಬೇಕು, ನೀವಲ್ಲ ಎಂದು ಈ 50 ಖೋಕಾಗಳು ಮತ್ತು ಗದ್ದಾರ್‌ಗಳಿಗೆ ನಾನು ಉತ್ತರ ನೀಡಬೇಕಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಹಿಂದಿನ ಅನುಭವವನ್ನು ನೆನಪಿಸಿಕೊಂಡ ಉದ್ಧವ್ ಠಾಕ್ರೆ “ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಪಡೆಯುವ ಪಕ್ಷದ ವ್ಯಕ್ತಿ ಸಿಎಂ ಎಂಬ ತತ್ವಕ್ಕೆ ಬದಲಾಗಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಮುಂಚಿತವಾಗಿ ನಿರ್ಧರಿಸಬೇಕು” ಎಂದಿದ್ದಾರೆ.

“ಬಿಜೆಪಿ ಜೊತೆಗಿನ ಮೈತ್ರಿಯ ಅನುಭವದ ನಂತರ, ಮೈತ್ರಿಕೂಟದಲ್ಲಿ ಹೆಚ್ಚು ಶಾಸಕರನ್ನು ಹೊಂದಿರುವ ಪಕ್ಷಕ್ಕೆ ಸಿಎಂ ಹುದ್ದೆ ಎಂಬ ನೀತಿ ಅನುಸರಿಸಬಾರದು ಎಂಬ ಅಭಿಪ್ರಾಯ ಹೊಂದಿದ್ದೇವೆ. ಹಿಂದಿನ ಹಲವು ಚುನಾವಣೆಗಳಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯಿಂದ ನಾವು ಅನುಭವಿಸಿದ್ದೇವೆ. ಗರಿಷ್ಠ ಸಂಖ್ಯೆಯ ಶಾಸಕರನ್ನು ಗಳಿಸಲು, ಪಕ್ಷಗಳು ತಮ್ಮ ಮಿತ್ರಪಕ್ಷಗಳ ಅಭ್ಯರ್ಥಿಗಳನ್ನು ಕೆಳಗಿಳಿಸಲು ಪ್ರಯತ್ನಿಸುತ್ತವೆ. ಆದ್ದರಿಂದ ಹೆಚ್ಚು ಶಾಸಕರನ್ನು ಹೊಂದಿರುವ ಪಕ್ಷವು ಸಿಎಂ ಸ್ಥಾನವನ್ನು ಪಡೆಯಬೇಕು ಎಂಬ ವಾದವನ್ನು ನಾನು ಬೆಂಬಲಿಸುವುದಿಲ್ಲ” ಎಂದು ಹೇಳಿದ್ದಾರೆ.

Uddhav Thackeray ರಾಜ್ಯದಲ್ಲಿ ಪ್ರತಿಪಕ್ಷಗಳ ಒಕ್ಕೂಟದ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸುವಂತೆ ಉದ್ಧವ್ ಠಾಕ್ರೆ ಅವರು ಮಹಾ ವಿಕಾಸ್ ಅಘಾಡಿ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಶಿವಸೇನೆ (ಯುಬಿಟಿ), ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಪಕ್ಷಗಳು ಮಹಾ ವಿಕಾಸ ಅಘಾಡಿ ಎಂಬ ತಮ್ಮ ಹಳೆಯ ಒಕ್ಕೂಟದ ಹೆಸರಿನಲ್ಲಿ ಚುನಾವಣೆ ಎದುರಿಸಲಿವೆ.

Madhu Bangarappa ಗೋವಿಂದಾಪುರ ಆಶ್ರಯ ಮನೆ ಬಗ್ಗೆ ಸೌಕರ್ಯ ಒದಗಿಸುವ ಸಂಬಂಧಿತ ನ್ಯೂನತೆಗಳ ಪಟ್ಟಿಕೊಡಿ- ಮಧು ಬಂಗಾರಪ್ಪ

0

Madhu Bangarappa ಗೋವಿಂದಾಪುರ ಆಶ್ರಯ ಮನೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಬಂಧ ನ್ಯೂನ್ಯತೆಗಳ ಪಟ್ಟಿಯನ್ನು ತಮಗೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ . ಮಧು ಬಂಗಾರಪ್ಪ ಆಯುಕ್ತರಿಗೆ ತಿಳಿಸಿದರು.

ಮಹಾನಗರಪಾಲಿಕೆಯಲ್ಲಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್ ಮಾತನಾಡಿ, ಗೋವಿಂದಾಪುರ ಆಶ್ರಯ ಯೋಜನೆಯಡಿ 40 ಎಕರೆಯಲ್ಲಿ ಒಟ್ಟು 3000 ಮನೆಗಳು ಮಂಜೂರಾಗಿದ್ದು 624 ಮನೆಗಳನ್ನು ಈಗಾಗಲೇ ಸಂಪೂರ್ಣಗೊಳಿಸಿದ್ದು 225 ಫಲಾನುಭವಿಗಳಿಗೆ ಮನೆಗಳನ್ನು ಹಸ್ತಾಂತರಿಸಲಾಗಿದೆ. ಉಳಿದ 399 ಮನೆಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಸಾಲ ಪ್ರಕ್ರಿಯೆ ನಡೆಯುತ್ತಿದೆ.

ಫಲಾನುಭವಿಗಳಿಗೆ ಬ್ಯಾಂಕ್‌ನಿಂದ ಸಾಲ ಮಂಜೂರಾದ ತಕ್ಷಣ ಹಸ್ತಾಂತರಿಸಲಾಗುವುದು. 648 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು, 1728 ಮನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.
ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ, ಮನೆಗಳನ್ನು ಹಸ್ತಾಂತರಿಸಿದ್ದರೂ ಅಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್, ಇತರೆ ಸೌಲಭ್ಯಗಳೇ ಇಲ್ಲ. ಇದನ್ನೆಲ್ಲ ಶೀಘ್ರವಾಗಿ ಒದಗಿಸುವಂತೆ ತಿಳಿಸಿದರು.

ಶಾಸಕರಾದ ಚನ್ನಬಸಪ್ಪ ಮಾತನಾಡಿ ಪಾಲಿಕೆ ವತಿಯಿಂದ ಈ ವಸತಿ ಯೋಜನೆಗೆ ರೂ.25 ಕೋಟಿ ನೀಡಬೇಕಿದ್ದು ಈವರೆಗೆ ರೂ.9 ಕೋಟಿ ನೀಡಲಾಗಿದೆ. ಹಿಂದಿನ ಸಭೆಯಲ್ಲಿ ಆಯುಕ್ತರು ಇತರೆ ಹೆಡ್‌ನಲ್ಲಿ ಉಳಿಕೆ ಹಣವನ್ನು ನೀಡುವುದಾಗಿ ತಿಳಿಸಿದ್ದರು. ಉಳಿದ ಹಣವನ್ನು ನೀಡುವಂತೆ ತಿಳಿಸಿದರು.

ಆಯುಕ್ತರು ಮಾತನಾಡಿ, ಪಾಲಿಕೆಯಿಂದ ಈಗಾಗಲೇ ರಸ್ತೆ ಹಾಗೂ ತುರ್ತಾಗಿ ನೀರಿನ ಅಗತ್ಯ ನೀಗಿಸಲು 3 ಬೋರ್‌ವೆಲ್ ಕೊರೆಸಲಾಗಿದೆ, 288 ಮನೆಗಳಿಗೆ ಯುಜಿಡಿ, ಕುಡಿಯುವ ನೀರು ನೀಡಲಾಗಿದೆ. 336 ಮನೆಗಳಿಗೆ ಬೋರ್ ವೆಲ್ ವ್ಯವಸ್ಥೆ ಮಾಡಲಾಗುತ್ತಿದೆ. ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ರೂ.10.5 ಕೋಟಿ ಅವಶ್ಯಕತೆ ಇದೆ ಎಂದರು.

Madhu_Bangarappa ಶಾಸಕರಾದ ಚನ್ನಬಸಪ್ಪ ಪ್ರತಿಕ್ರಿಯಿಸಿ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಗೋವಿಂದಾಪುರ ಗೋಪಿಶೆಟ್ಟಿಕೊಪ್ಪ ಒಂದೆಡೆಯಾದರೆ, ಸ್ಲಂ ಬೋರ್ಡ್ ಗೆ ಸಂಬಂಧಿಸಿದಂತೆ 1500 ಮನೆಗಳ ಸಮಸ್ಯೆಯೂ ಇದೆ. ಗೋವಿಂದಾಪುರದಲ್ಲಿ ಈಗ ಕೇವಲ 60-70 ಜನ ಮಾತ್ರ ವಾಸ ಮಾಡುತ್ತಿದ್ದಾರೆ. ಅಲ್ಲಿ ಮೂಲಭೂತ ಸೌಕರ್ಯಗಳಿಗೆ ಶಾಶ್ವತವಾದ ಪರಿಹಾರಗಳನ್ನು ಒದಗಿಸಬೇಕೆಂದರು.

ಸಚಿವರು, ನೀರು, ಯುಜಿಡಿ, ವಿದ್ಯುತ್ ಇತರೆ ಮೂಲಭೂತ ಸೌಕರ್ಯಗಳ ಕುರಿತು ಯೋಜನೆಯಲ್ಲಿ ಮೊದಲೇ ವ್ಯವಸ್ಥೆ ಮಟಡಬೇಕಿತ್ತು. ಫಲಾನುಭವಿಗಳ ವಂತಿಗೆಯೂ ಹೆಚ್ಚಾಗಿದ್ದು ಅವರಿಗೆ ಹೊರೆಯಾಗಿದೆ. ರೂ.260 ಕೋಟಿ ಮೊತ್ತದಷ್ಟು ದೊಡ್ಡ ಯೋಜನೆಯನ್ನು ಸಮರ್ಪಕವಾಗಿ ಯೋಜಿಸಬೇಕಿತ್ತು. ಅದು ಆಗಿಲ್ಲ. ಇದೀಗ ನ್ಯೂನ್ಯತೆಗಳ ಸಂಪೂರ್ಣ ವರದಿ ತಕ್ಷಣ ನೀಡಿ. ತುರ್ತಾಗಿ ಅವಶ್ಯಕವಾಗಿ ಆಗಬೇಕಿರುವ ಕೆಲಸಗಳ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳ ಮೂಲಕ ತಮಗೆ ಒಂದು ಸೋಮವಾರದ ಒಳಗೆ ವರದಿ ನೀಡಿ. ಸರ್ಕಾರದಿಂದ ರೂ.10 ರಿಂದ 15 ಕೋಟಿ ಅನುದಾನ ತರುವ ಪ್ರಯತ್ನ ಮಾಡುತ್ತೇನೆ ಎಂದರು
ಪಾಲಿಕೆ ಆಯುಕ್ತರು, 2024-5 ನೇ ಸಾಲಿನ ಜುಲೈವರೆಗೆ ಒಟ್ಟು 4626.31 ಲಕ್ಷ, ರೂ.2872.13 ವೆಚ್ಚವಾಗಿದ್ದು ರೂ.1754.18 ಲಕ್ಷ ಉಳಿಕೆಯಾಗಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್ ಮಾತನಾಡಿ, ಪಾಲಿಕೆಯಲ್ಲಿ ಖಾತೆ ಎಕ್ಸಟ್ರಾಕ್ಟ್ ತೆಗೆದುಕೊಳ್ಳಲು ಹೋದಾಗ ಕಳೆದ 8 ರಿಂದ 10 ವರ್ಷ ನಿರಂತರವಾಗಿ ತೆರಿಗೆ ಕಟ್ಟಿದ್ದರೂ ಸಹ ಅದರ ಹಿಂದಿನ 8 ರಿಂದ 10 ವರ್ಷಗಳ ತೆರಿಗೆಯನ್ನು ಪಾವತಿಸಿಕೊಳ್ಳುತ್ತಾರೆ. ಇದರಿಂದ ಸಾರ್ವಜನಿಕರಿಗೆ ಕಿರುಕುಳ ಆದಂತೆ ಆಗುತ್ತಿದೆ ಎಂದು ದೂರಿದರು.
ಸಚಿವರು, ಪಾಲಿಕೆಯವರು ತಮ್ಮ ಸಾಫ್ಟ್ವೇರ್‌ನಲ್ಲಿ ಅಗತ್ಯವಾದ ಬದಲಾವಣೆ ತಂದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.

ಹಾಗೂ ನಗರದಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಹಲವಾರು ದೂರುಗಳಿದ್ದು ಆಯುಕ್ತರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನೀರು, ವಿದ್ಯುತ್, ಯುಜಿಡಿ ಇತರೆ ಕುರಿತು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಕ್ರಮ ಕೈಗೊಳ್ಳಬೇಕೆಂದರು.
ಸ್ಮಾರ್ಟ್ ಸಿಟಿ ಯೋಜನೆಯಡಿ 24*7 ಕುಡಿಯುವ ನೀರಿನ ಯೋಜನೆಯಡಿ 59 ಝೋನ್‌ಗಳ ಪೈಕಿ 18 ಝೋನ್‌ಗಳಲ್ಲಿ ಸಂಪರ್ಕ ನೀಡಲಾಗಿದ್ದು ಎಲ್ಲ ಝೋನ್‌ಗಳಲ್ಲಿ ಸಂಪರ್ಕ ನೀಡಿದ ನಂತರ ಬಿಲ್ ನೀಡಲಾಗುವುದು ಎಂದು ಸಂಬಂಧಿಸಿದ ಅಧಿಕಾರಿಗಳು ತಿಳಿಸಿದರು.

ತುಂಗಾನದಿ ಮಾಲಿನ್ಯ ತಡೆಯಿರಿ : ಕಾಡಾ ಅಧ್ಯಕ್ಷರಾದ ಡಾ.ಅಂಶುಮನ್ ಮಾತನಾಡಿ, ತುಂಗಾ ಎಡ ಮತ್ತು ಬಡದಂಡೆ ಕಾಲುವೆಗಳಿಗೆ ನಗರ ಮತ್ತು ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ನೇರವಾಗಿಊ ಕಲುಷಿತ ನೀರನ್ನು ಬಿಡಲಾಗುತ್ತಿದೆ. ಇದರಿಂದ ನೀರು ಕಲುಷಿತವಾಗಿ ಕೃಷಿಗೆ ಕೂಡ ಯೋಗ್ಯವಾಗಿಲ್ಲ, ಜನ-ಜಾನುವಾರುಗಳ ಆರೋಗ್ಯಕ್ಕೂ ಈ ನೀರು ಮಾರಕವಾಗಿದೆ. ಈ ಮಾಲಿನ್ಯ ತಡೆಗಟ್ಟಬೇಕೆಂದು ಮನವಿ ಮಾಡಿದರು.
ಕರ್ನಾಟಕ ನೀರು ಮಂಡಳಿ ಎಇಇ ಮಿಥುನ್ ಕುಮಾರ್ ಮಾತನಾಡಿ, ಒಳಚರಂಡಿ ನೀರನ್ನು ಸಂಸ್ಕರಣಾ ಘಟಕದಿಂದ ಶುದ್ದೀಕರಿಸಿ ನದಿಗೆ ಬಿಡಲಾಗುತ್ತಿದೆ, ಬಚ್ಚಲು, ಶೌಚಾಲಯದ ಗ್ರೇವಾಟರ್‌ನ್ನು ಒಳಚರಂಡಿ ನೀರಿಗೆ ಸಂಪರ್ಕ ಒದಗಿಸಿದರೆ ಅದನ್ನು ಸಂಸ್ಕರಿಸಿ ಬಿಡಲಾಗುವುದು. 80 ಸಾವಿರ ಮನೆಗಳ ಪೈಕಿ 42 ಸಾವಿರ ಮನೆಗಳ ತ್ಯಾಜ್ಯ ನೀರು ಶುದ್ದೀಕರಣಕ್ಕೆ ಒಳಗಾಗುತ್ತಿದೆ. ಗ್ರೇವಾಟರ್‌ನ್ನೂ ಕೂಡ ಸಂಸ್ಕರಿಸಿದಲ್ಲಿ ಮಾಲಿನ್ಯ ತಡೆಗಟ್ಟಬಹುದು ಎಂದರು.
ಸಚಿವರು, ಅನಧಿಕೃತ ಗ್ರೇ ಮತ್ತು ಬ್ಲಾಕ್ ವಾಟರ್ ನದಿ ಸೇರದಂತೆ ತಡೆಯಬೇಕು. ಪ್ರತಿ ಮನೆಗಳ ಒಳಚರಂಡಿ, ಗ್ರೇವಾಟರ್ ಶುದ್ದೀಕರಣಕ್ಕೆ ಒಳಗಾಗುವಂತೆ ಕ್ರಮ ವಹಿಸಬೇಕು ಎಂದರು ಹೇಳಿದರು.

ಹಾಗೂ ಶಾಸಕರು ಸಭೆಯಲ್ಲಿ ತಿಳಿಸಿದಂತೆ ಕಾವೇರಿ ನದಿ ಮಾಲಿನ್ಯ ತಡೆ ಸಮಿತಿ ರಚನೆಯಂತೆ ತುಂಗ-ಭದ್ರಾ ನದಿ ಮಾಲಿನ್ಯ ತಡೆಯಲು ಸಮಿತಿ ರಚನೆಗೆ ಪ್ರಸ್ತಾವನೆ ಸಿದ್ದಪಡಿಸುವಂತೆ ತಿಳಿಸಿದರು.
ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹಬ್ಬಗಳನ್ನು ನೆಹರೂ ಕ್ರೀಡಾಂಗಣದಲ್ಲಿ ನೆರವೇರಿಸುವಂತೆ ಶಾಸಕರು ಕೋರಿದರು. ಈ ಕುರಿತು ಚಿಂತಿಸುವುದಾಗಿ ಹೇಳಿದ ಸಚಿವರು, ನಗರದ ಅಲ್ಲಮಪ್ರಭು ಮೈದಾನದಲ್ಲಿ ಜಿಲ್ಲಾ, ರಾಜ್ಯ ಮಟ್ಟದ ಕಾರ್ಯಕ್ರಮಗಳು ಜರುಗುವಂತೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಯೋಜನೆ ರೂಪಿಸಲು ಕ್ರಿಯಾಯೋಜನೆ ಸಿದ್ದಪಡಿಸಲಾಗುವುದು ಎಂದರು.

ಮಹಾನಗರಪಾಲಿಕೆ ವ್ಯಾಪ್ತಿಯ ಕೆರೆ ಮತ್ತು ಉದ್ಯಾನಗಳ ನಿರ್ವಹಣೆ ಸಂಬಂಧಿಸಿದಂತೆ ಮಾಹಿತಿಯನ್ನು ತಮಗೆ ನೀಡುವಂತೆ ತಿಳಿಸಿದ ಅವರು ಪಾಲಿಕೆ ವ್ಯಾಪ್ತಿಗೆ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಸ್ಥಳೀಯ ಪ್ರದೇಶ ಅಭಿವೃದ್ದಿ ವ್ಯಾಪ್ತಿಯಲ್ಲಿ ಹೊಸದಾಗಿ 23 ಗ್ರಾಮಗಳನ್ನು ಸೇರ್ಪಡೆಗೊಳಿಸುವ ವಿಷಯ ಪರಿಶೀಲನಾ ಹಂತದಲ್ಲಿದೆ ಎಂದರು ತಿಳಿಸಿದರು.

ಪಾಲಿಕೆ ಆಯುಕ್ತರು ಬೈಪಾಸ್ ರಸ್ತೆಗೆ ಪೂರಕವಾಗಿ ಹೊರ ವರ್ತುಲ ರಸ್ತೆ ಅಭಿವೃದ್ದಿ, ಸುಸಜ್ಜಿತ ಮೀನು ಮಾರುಕಟ್ಟೆ ಅಭಿವೃದ್ದಿಗೆ ಅಗತ್ಯವಾದ ಅನುದಾನ ಒದಗಿಸುವಂತೆ ಸಚಿವರಿಗೆ ಕೋರಿದರು.

ಶಾಸಕರಾದ ಶಾರದಾ ಪರ‍್ಯಾನಾಯ್ಕ ಮಾತನಾಡಿ, ಅನುಪಿನಕಟ್ಟೆ ಪೋದಾರ್ ಶಾಲೆ ಬಳಿ ಪಾಲಿಕೆಯವರು ರಾತ್ರಿ ಹೊತ್ತು ಕಸ ಹಾಕುತ್ತಿದ್ದಾರೆ, ಕಟ್ಟಡದ ತ್ಯಾಜ್ಯಗಳನ್ನು ಹಾಕುತ್ತಿದ್ದು ಇದನ್ನು ನಿಲ್ಲಿಸಬೇಕು. ಪಾಲಿಕೆ ಆಯುಕ್ತರು ಖುದ್ದು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಾಲಿಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Mallikarjuna Murugarajendra Swamiji ಪಂಚಾಕ್ಷರಿ ಗವಾಯಿಗಳ ಪ್ರೇರಣೆಯಿಂದ ಅನೇಕರು ಆದರ್ಶಪ್ರಾಯ ಸಂಗೀತಗಾರರಾಗಿದ್ದಾರೆ- ಡಾ.ಮಲ್ಲಿಕಾರ್ಜುನ ಮರುಘರಾಜೇಂದ್ರ ಶ್ರೀ

0

Mallikarjuna Murugarajendra Swamiji ಸಂಗೀತಕ್ಕೆ ಹೆಚ್ಚು ಪಾವಿತ್ರ್ಯತೆ ತಂದುಕೊಟ್ಟವರು ಪಂಚಾಕ್ಷರಿ ಗವಾಯಿಗಳು, ಅವರ ಸಾಧನೆಯಿಂದ ಪ್ರೇರೆಪಿತರಾದ ಅನೇಕ ಜನರು ನಾಡಿನ ಆದರ್ಶಪ್ರಾಯ ಸಂಗೀತಗಾರರಾಗಿದ್ದಾರೆ ಎಂದು ಬೆಕ್ಕಿನ ಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಕೃಷಿನಗರದ ರೋಟರಿ ರಿವರ್‌ಸೈಡ್ ಸಭಾಂಗಣದಲ್ಲಿ ಬೆಕ್ಕಿನ ಕಲ್ಮಠದ ಶ್ರೀ ಮುರುಘರಾಜೆಂದ್ರ ಮಹಾಸಂಸ್ಥಾನ ಮಠ ಟ್ರಸ್ಟ್ ನ ಗುರುಬಸವ ಅಧ್ಯಯನ ಪೀಠದಿಂದ ಶಿವಗಂಗಾ ಯೋಗಕೇಂದ್ರ ಕೃಷಿನಗರ ಶಾಖೆ ಮತ್ತು ರೋಟರಿ ರಿವರ್‌ಸೈಡ್ ಸಹಯೋಗದಲ್ಲಿ ಆಯೋಜಿಸಿದ್ದ ಶ್ರಾವಣ ಚಿಂತನ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಶ್ರಾವಣ ಚಿಂತನದಿಂದ ಮನೆ ಮನಗಳು ಬೆಳಗುತ್ತವೆ. ಆಧ್ಯಾತ್ಮಿಕ, ಧಾರ್ಮಿಕ ಹಾಗೂ ಒಳ್ಳೆಯ ವಿಚಾರಗಳ ಅರಿವು ಮೂಡುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಡಾ. ಎಂ.ಬಸವರಾಜಪ್ಪ ಮಾತನಾಡಿ, ಪಂಚಾಕ್ಷರಿ ಗವಾಯಿಗಳ ಸಾಧನೆ ಬದುಕು ಬರಹ ಕುರಿತು ಮಾತನಾಡಿದರು. ಸೇನೆಯಲ್ಲಿ ಯೋಧನಾಗಿ ಸೇವೆ ಸಲ್ಲಿಸಿದ ಭಾವೇಶ್ ಅವರು ಸೇನೆಯ ಅನುಭವಗಳ ಕುರಿತು ಹಾಗೂ ಜೀವನ್ಮರಣ ಹೋರಾಟದ ರೋಮಾಂಚನ ಅನುಭವಗಳನ್ನು ಹಂಚಿಕೊಂಡರು.

ರೋಟರಿ ಕ್ಲಬ್ ರಿವರ್‌ಸೈಡ್ ಅಧ್ಯಕ್ಷ ಎಂ.ಆರ್.ಬಸವರಾಜ ಮಾತನಾಡಿ, ಗುರುಗಳು ನಡೆಸುವ ಶ್ರಾವಣ ಚಿಂತನದಂತಹ ಕಾರ್ಯಕ್ರಮಗಳು ಧಾರ್ಮಿಕ ಅರಿವಿನ ಜತೆ ಹೊಸ ವಿಷಯಗಳ ತಿಳವಳಿಕೆ ಮೂಡಿಸುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಕುಟುಂಬ ಸದಸ್ಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

Mallikarjuna Murugarajendra Swamiji ಆಕಾಶವಾಣಿ ಹಿರಿಯ ಕಲಾವಿದೆ ನಾಗರತ್ನಮ್ಮ ಚಂದ್ರಶೇಖರ್ ಹಾಗೂ ಯೋಗ ಶಿಬಿರಾರ್ಥಿಗಳಿಂದ ಭಕ್ತಿ ಸಂಗೀತ ಸೇವೆ ಹಾಗೂ ವಚನ ಕಾರ್ಯಕ್ರಮ ಸುಂದರವಾಗಿ ನೆರವೇರಿತು. ಜಿ.ವಿಜಯಕುಮಾರ್, ಯೋಗ ಶಿಕ್ಷಕರಾದ ಚಂದ್ರಶೇಖರಯ್ಯ, ನೀಲಕಂಠರಾವ್, ಜಯಣ್ಣ, ಮಹೇಶ್ವರಪ್ಪ, ಚಿದಾನಂದ, ಕುಸುಮಾ, ಬಿಂದು ವಿಜಯಕುಮಾರ್, ವಿನೋದಮ್ಮ, ಕೃಷ್ಣಮೂರ್ತಿ, ಮಹಾಬಲೇಶ್ವರ ಹೆಗಡೆ, ಸುರೇಶ್, ವಕೀಲ ಮಲ್ಲೇಶ್, ರೇವಣಪ್ಪ, ಕುಸುಮಾ, ಅರುಣಾ, ಭಾಗ್ಯ ಹಾಗೂ ಯೋಗಬಂಧುಗಳು ಉಪಸ್ಥಿತರಿದ್ದರು.

Department of Kannada and Culture ಆಗಸ್ಟ್ 20, ಜಿಲ್ಲಾಡಳಿತದಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ”

0

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಆರ್ಯ ಈಡಿಗರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಆ.20ರಂದು ಬೆಳಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು ನೆರವೇರಿಸುವರು. ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

Department of Kannada and Culture ಜಿಲ್ಲೆಯ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಜನಪ್ರತಿನಿಧಿಗಳು, ಪಾಲಿಕೆ ಮಹಾಪೌರರು, ವಿವಿಧ ನಿಗಮ/ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಆರ್ಯ ಈಡಿಗರ ಸಂಘದ ಮುಖಂಡರು/ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು ಹಾಗೂ ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕಿ ಶ್ರೀಮತಿ ಜ್ಯೋತಿಕುಮಾರಿ ಕೆ.ವಿ. ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.