Tuesday, February 3, 2026
Tuesday, February 3, 2026
Home Blog Page 6

Ishwar B Khandre ಅರಣ್ಯ ಸಂರಕ್ಷಣೆ-ಜನರ ಜೀವನೋಪಾಯದ ನಿಟ್ಟಿನಲ್ಲಿ ಸರ್ಕಾರದ ನಿರ್ಧಾರ : ಈಶ್ವರ್ ಬಿ ಖಂಡ್ರೆ

0

Ishwar B Khandre ವನ್ಯಜೀವಿ ಸಂರಕ್ಷಣೆ, ಅರಣ್ಯ ಸಂಪತ್ತು ರಕ್ಷಣೆ ಮತ್ತು ಜನರ ಅಭಿವೃದ್ದಿಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದು ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್ ಮತ್ತು ಶರಾವತಿ ಸಂತ್ರಸ್ತರಿಗೆ ಪರಿಹಾರ ಕುರಿತಾದ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆ ಎಂದು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಬಿ ಖಂಡ್ರೆ ತಿಳಿಸಿದರು.
ಬುಧವಾರ ತ್ಯಾವರೆಕೊಪ್ಪದ ಸಿಂಹಧಾಮದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೆಟ್ಟಿಹಳ್ಳಿ ವನ್ಯಜೀವಿ ಧಾಮ ಡಿ-ನೋಟಿಫಿಕೇಷನ್ ಪ್ರಸ್ತಾವನೆಯು ಸುಮಾರು 2016 ರಿಂದ ಬಾಕಿ ಇದ್ದು ಈಗ ಅಂತಿಮ ಘಟ್ಟಕ್ಕೆ ಬಂದಿದೆ. ಹಿಂದೆ 1974 ರಲ್ಲಿ ನೋಟಿಫಿಕೇಷನ್ ಮಾಡಿದ ಸಂದರ್ಭದಲ್ಲಿ 395 ಚ.ಕೀ ಪ್ರದೇಶ ಸೇರ್ಪಡೆ ಮಾಡಿದ್ದರು. ಆದರೆ ಅದರಲ್ಲಿ ಬಸ್ ಸ್ಟಾö್ಯಂಡ್, ಎಫ್‌ಸಿಐ ಗೋಡಾನ್, ಎಪಿಎಂಸಿ, ಸರ್ಕಾರಿ ಕಚೇರಿಗಳು, ಜನವಸತಿ ಪ್ರದೇಶ ಸೇರ್ಪಡೆಗೊಂಡಿದ್ದು ಇದೆಲ್ಲವನ್ನೂ ಪರಿಶೀಲನೆ ಮಾಡಿ, ಅಧಿಕಾರಿಗಳು ಸಮೀಕ್ಷೆಗಳನ್ನು ಮಾಡಿದ್ದಾರೆ. ಈ ಕುರಿತು ಹಲವಾರು ಸಭೆಗಳನ್ನು ಮಾಡಲಾಗಿದೆ. ಅರಣ್ಯ ಸಂಪತ್ತು ಸಂರಕ್ಷಣೆ ಮಾಡಬೇಕು. ಜೀವನ ಮತ್ತು ಜೀವನೋಪಾಯ ಎರಡೂ ಬೇಕಾಗಿದ್ದು ಆಡಳಿತಾತ್ಮಕವಾಗಿ, ಭಾವನಾತ್ಮಕವಾಗಿ ತೀರ್ಮಾನ ತೆಗೆದುಕೊಳ್ಳಲು ಖುದ್ದಾಗಿ ಪರಿಶೀಲಿಸಲು ಬಂದಿದ್ದೇನೆ. ನಂತರ ಸಭೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು.
ಶರಾವತಿ ಸಂತ್ರಸ್ತರ ಸಮಸ್ಯೆಗಳಿಗೆ ಪರಿಹಾರೋಪಾಯ ಅಂತಿಮ ಘಟ್ಟ ತಲುಪಿದೆ. ಸರ್ವೋಚ್ಚ ನ್ಯಾಯಾಲಯಕ್ಕೆ ಅಪೀಲು ಸಲ್ಲಿಸಲಾಗಿದ್ದು ನ್ಯಾಯಾಲಯವು, ಕೇಂದ್ರ ಸರ್ಕಾರ ಮತ್ತು ಅರಣ್ಯ ಇಲಾಖೆ ಸೇರಿ ತೀರ್ಮಾನ ಮಾಡಲು ಸೂಚಿಸಿದೆ. ಹಾಗೂ ಕಂದಾಯ ಇಲಾಖೆಯು ಅರ್ಹ ಫಲಾನುಭವಿಗಳನ್ನು ಗುರಿತಿಸುತ್ತಿದ್ದು, ಅರಣ್ಯ ಇಲಾಖೆ ನಿರಂತರವಾಗಿ ಕಂದಾಯ ಇಲಾಖೆಯ ಸಂಪರ್ಕದಲ್ಲಿದೆ. ಕಂದಾಯ ಇಲಾಖೆ ಅಂತಿಮಗೊಳಿಸಿದ ಪಟ್ಟಿ ಬಂದ ತಕ್ಷಣ ಸುಮಾರು 60 ವರ್ಷಗಳ ನಂತರ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಶಾಶ್ವತವಾಗಿ ಪರಿಹಾರ ನೀಡುತ್ತಿದೆ ಎಂದರು.
Ishwar B Khandre ವನ್ಯಜೀವಿ ಸಂರಕ್ಷಣೆ ಆಗಬೇಕು, ಅರಣ್ಯ ಸಂಪತ್ತು ಉಳಿಯಬೇಕು ಹಾಗೂ ಅಭಿವೃದ್ದಿಯೂ ಆಗಬೇಕು ಈ ನಿಟ್ಟಿನಲ್ಲಿ ಸರ್ಕಾರ ತೀರ್ಮಾನಗಳನ್ನು ತೆಗೆದುಕೊಳ್ಳತ್ತಿದೆ. ಮಾನವ-ವನ್ಯಜೀವಿ ಸಂಘರ್ಷವನ್ನು ತಡೆಯಲು ಸರ್ಕಾರ ಹಲವಾರು ಕ್ರಮ ಕೈಗೊಂಡಿದೆ. ಆನೆ ಕಾರ್ಯಪೆಡೆ, ಚಿರತೆ ಕಾರ್ಯಪಡೆ, ಹೆಚ್ಚುವರಿ ಸಿಬ್ಬಂದಿ ನೇಮಕ, ಸಲಕರಣೆಗಳು, ಕ್ಯಾಂಪ್‌ಗಳು, ರೈಲ್ವೇ ಬ್ಯಾರಿಕೇಡ್, ಸೋಲಾರ್ ಫೆನ್ಸಿಂಗ್ ರಚನೆ, ಕಮಾಂಡ್ ಸೆಂಟರ್ ಗಳು, ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್‌ಗಳು ಜೊತೆಗೆ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಈ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದ್ದು ಒಂದೇ ಒಂದು ಜೀವ ಕಳೆದುಕೊಳ್ಳದ ರೀತಿ ಮಾನವ ಪ್ರಾಣ ಮತ್ತು ವನ್ಯಜೀವಿಗಳು ಉಳಿಯಬೇಕೆಂಬ ದೃಷ್ಟಿಯಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪರ‍್ಯಾನಾಯ್ಕ, ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

ಕಾಣಿಯಾಗಿದ್ದಾರೆ ಸುಳಿವು ನೀಡಲು ಮನವಿ

0

ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಸೊರಬ ತಾಲೂಕು ಕುಪ್ಪಗುಡ್ಡೆ ಗ್ರಾಮ ವಾಸಿ ಮಾರುತಿ ಎಂಬುವವರ ಪತ್ನಿ 25 ವರ್ಷದ ಭಾಗ್ಯ ಎಂಬುವವರು ಸೆಪ್ಟಂಬರ್ 2025 ರಂದು ಮನೆ ಬಿಟ್ಟು ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆ ಗಾಜನೂರು ಮುರಾರ್ಜಿ ಹಾಸ್ಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಈಕೆಯ ಚಹರೆ 5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿರುತ್ತಾರೆ. ಮನೆಯಿಂದ ಹೋಗುವಾಗ ಆಕಾಶ ನೀಲಿ ಬಣ್ಣದ ಚೂಡಿದಾರ್, ಕಪ್ಪು ಬಣ್ಣದ ಜಾಕೆಟ್ ಧರಿಸಿರುತ್ತಾರೆ.
ಈಕೆಯ ಕುರಿತು ಸುಳಿವು ದೊರೆತಲ್ಲಿ ದೂ.ಸಂ.: 08182-261413/ 08187-222443/ 08184-272122/267135/ 9480803339/ 9480803369 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

Bharat Scouts and Guides ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಮಲ್ನಾಡ್ ಓಪನ್ ಗ್ರೂಪ್ ವತಿಯಿಂದ 77ನೇ ಗಣರಾಜ್ಯೋತ್ಸವ ಆಚರಣೆ

0

Bharat Scouts and Guides ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಮಲ್ನಾಡ್ ಓಪನ್ ಗ್ರೂಪ್ ವತಿಯಿಂದ ಜಿಲ್ಲಾ ಸ್ಕೌಟ್ ಭವನದ ಆವರಣದಲ್ಲಿ 77ನೇ ಗಣರಾಜ್ಯೋತ್ಸವ ಅಂಗವಾಗಿ ದೆಹಲಿಯಲ್ಲಿ ನಡೆಯುವ ರೀತಿ ಮಾದರಿಯ ‘ಬೀಟಿಂಗ್ ದ ರಿಟ್ರೀಟ್’ ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ವಿನಯ್ ಕಠಾರೆ ಅವರು ಅಮರ್ ಜವಾನ್‌ಗೆ ಗೌರವ ಸಲ್ಲಿಸಿದರು.

25ನೇ ವರ್ಷದ ರಿಟ್ರೀಟ್ ಕಾರ್ಯಕ್ರಮದ ಆಯೋಜನೆ ಮಾಡಿದ್ದ ಮಲ್ನಾಡ್ ಓಪನ್ ಗ್ರೂಪ್‌ನ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆಯ 60 ವಿದ್ಯಾರ್ಥಿಗಳ ತಂಡ ಅತ್ಯುತ್ತಮ ಬ್ಯಾಂಡ್ ಪ್ರದರ್ಶನ ನೀಡಿತು.

ಸಾಂದೀಪನಿ ಶಾಲೆಯ ವಿದ್ಯಾರ್ಥಿಗಳು ಉತ್ತಮವಾಗಿ ದೈಹಿಕ ಕವಾಯತು ಪ್ರದರ್ಶಿಸಿದರು. ಮೇರಿ ಇಮಾಕ್ಯುಲೇಟ್ ಹಿರಿಯ ಪ್ರಾಥಮಿಕ ಶಾಲೆ ಗೈಡ್ ವಿದ್ಯಾರ್ಥಿನಿಯರು ದೇಶಭಕ್ತಿ ಗೀತೆಗೆ ನೃತ್ಯ ಪ್ರದರ್ಶಿಸಿದರು. ರೇಡಿಯೋ ಶಿವಮೊಗ್ಗ 90.8 ಎಫ್.ಎಂನ ಆರ್.ಜೆ.ಅರ್ಪಿತ ಅವರ ಮುಂಗೋಳಿ ಕೂಗ್ಯಾವೋ, ಪರಿಸರ ಪರಿಚಯ, ಬ್ಯುಜಿನೆಸ್ ಬಝ್ ಕಾರ್ಯಕ್ರಮಗಳ ವಿಶೇಷ ಕಾಳಜಿಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಮಲ್ನಾಡ್ ಓಪನ್ ಗ್ರೂಪ್‌ನ ಸ್ವಯಂ ಸೇವಕ ಚಂದನ್.ಕೆ.ಎಂ, ರಾಷ್ಟ್ರೀಯ ಟೆಕ್ವಾಂಡೋ ರೆಫರಿ ಆಗಿರುವ ನವೀ.ಡಿ.ಸಿ, ಕರಾಟೆಯಲ್ಲಿ ಸಾಧನೆ ಮಾಡಿರುವ ಶೃತಿ.ಪಿ, ಗ್ರೂಪ್ ಹಿರಿಯ ಸದಸ್ಯ ಉಮೇಶ್.ಹೆಚ್.ವಿ, 25 ವರ್ಷ ಶಿಕ್ಷಕ ಸೇವೆ ಗುರುತಿಸಿ ಸ್ವಾಮಿ ವಿವೇಕಾಂದ ಶಾಲೆಯ ದೈಹಿಕ ಶಿಕ್ಷಕ ಜಯದೇವ್.ಹೆಚ್.ಎನ್ ಅವರನ್ನು ಸನ್ಮಾನಿಸಲಾಯಿತು.

ಗ್ರೂಪ್ ಸದಸ್ಯ ಚೇತನ್ ಕುಮಾರ್.ಸಿ 46ನೇ ಬಾರಿ ರಕ್ತದಾನ ಮಾಡಿದ್ದನ್ನು ಗುರುತಿಸಿ ಉತ್ತಮ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಿದರು. ನಗರದ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ಚಿತ್ರಕಲೆ ಮತ್ತು ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

Bharat Scouts and Guides ಜಿಲ್ಲಾ ಸಂಸ್ಥೆಯ ಮುಖ್ಯ ಆಯುಕ್ತೆ ಶಕುಂತಲಾ ಚಂದ್ರಶೇಖರ್, ಜಿ.ವಿಜಯ್ ಕುಮಾರ್, ರವಿ.ಕೆ, ಎಸ್.ಜಿ.ಆನಂದ್, ಎಸ್.ಕೆ.ಲಕ್ಷ್ಮೀ, ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದ ನವೀನ್ ಜವಳಿ, ಗ್ರೂಪ್‌ನ ಫೋಷಕರ್ ಪ್ರರಮೇಶ್ವರ.ಹೆಚ್, ರಾಜೇಶ್ ಅವಲಕ್ಕಿ ಮತ್ತು ಚೇತನ್ ಕುಮಾರ್.ಸಿ, ಶ್ರೀನಿವಾಸ ವರ್ಮಾ ಇದ್ದರು.

ಅಮರ್ ಜವಾನ್ ಮುಂದೆ ದೇಶಕ್ಕಾಗಿ ಮಡಿದ ವೀರಯೋಧರಿಗೆ ದೀಪ ಬೆಳಗಿಸುವ ಮೂಲಕ ನಮನ ಸಲ್ಲಿಸಲಾಯಿತು. ಪರಮವೀರಚಕ್ರ ಪುರಸ್ಕತ 21 ಯೋಧರ ಭಾವಚಿತ್ರವನ್ನು ಅಮರ್ ಜವಾನ್ ಹಿಂಭಾಗದಲ್ಲಿ ಹಾಕಲಾಗಿತ್ತು.

Rotary Club Shivamogga ರೋಟರಿ ಕ್ಲಬ್‌ ಶಿವಮೊಗ್ಗ ಉತ್ತರದಿಂದ ವೃತ್ತಿಸೇವಾ ಮಾಸ ಆಚರಣೆ

0

Rotary Club Shivamogga ರೋಟರಿ ಕ್ಲಬ್‌ಶಿವಮೊಗ್ಗ ಉತ್ತರದಿಂದ ವೃತ್ತಿಸೇವಾ ಮಾಸ ಆಚರಣೆ ಸಂದರ್ಭ ಕ್ಲಬ್‌ನ ವಾರದ ಸಭೆಯಲ್ಲಿ ವೈದ್ಯರಾದ ಡಾ.ಸಾತ್ವಿಕರವರು ಪಾರ್ಶ್ವವಾಯು ರೋಗದ ತಡೆಗಟ್ಟುವ ಕುರಿತುಉಪನ್ಯಾಸ ಮಾಡಿದರು.
ಅಧ್ಯಕ್ಷ ಬಸವರಾಜ.ಅರ್ ಕಾರ್ಯದರ್ಶಿ ಶಿವಕುಮಾರ ನಿರ್ದೇಶಕ ವೆಂಕಟೇಶ, ಪಿಡಿಜಿ ಚಂದ್ರಶೇಖರ, ಮಾಜಿ ಅಧ್ಯಕ್ಷರಾದ ರವೀಂದ್ರನಾಥ ಐತಾಳ, ಜಗದೀಶ, ನಾಗರಾಜ, ಶಿವಲಿಂಗಪ್ಪ, ಶರವಣ ಸದಸ್ಯರಾದ ಸುದರ್ಶನ,ಶ್ರೀಧರ ,ಉಶಾ
ಉಪಶ್ಥಿತರಿದ್ದರು.

ಅಡಿಕೆ ಸಮೃದ್ಧಿಗಾಗಿ ಕಾಳು ಮೆಣಸಿನ ಅಂತರ ಬೆಳೆ : ರಾಷ್ಟ್ರೀಯ ವಿಚಾರ ಸಂಕಿರಣ

0

ಕಾಳು ಮೆಣಸು ಸೇರಿದಂತೆ ಯಾವುದೇ ಸಂಬಾರು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಮಾಡಿದಾಗ ಆರ್ಥಿಕತೆ ಬೆಳೆಯಲು ಸಾಧ್ಯವಾಗುತ್ತದೆ. ಆದ್ದರಿಂದ ರೈತರು ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಎನ್ ಶಿವಪ್ರಕಾಶ್ ಮನವಿ ಮಾಡಿದರು.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಅಡಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ, ಅಡಿಕೆ ಮತ್ತು ಸಾಂಬಾರ ಪದಾರ್ಥಗಳ ಅಭಿವೃದ್ಧಿ ನಿರ್ದೇಶನಾಲಯ, ಕೋಜಿಕೋಡ್, ಐ.ಸಿ.ಎ.ಆರ್. – ಭಾರತೀಯ ಸಾಂಬಾರು ಬೆಳೆ ಸಂಶೋಧನಾ ಸಂಸ್ಥೆ, ಕೋಜಿಕೋಡ್, ಐ.ಸಿ.ಎ.ಆರ್. – ಅಖಿಲ ಭಾರತ ಸಂಯೋಜಿತ ಸಂಶೋಧನಾ ಯೋಜನೆ (ಸಾಂಬಾರು ಬೆಳೆ), ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಲಿಮಿಟೆಡ್, ಬೆಂಗಳೂರು, ಮಲ್ನಾಡ್ ಅಡಿಕೆ ಕೋ-ಆಪರೇಟಿವ್ ಮಾರ್ಕೆಟಿಂಗ್ ಸೊಸೈಟಿ ಲಿಮಿಟೆಡ್, ಶಿವಮೊಗ್ಗ, ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘ ನಿಯಮಿತ, ಚನ್ನಗಿರಿ ಮತ್ತು ಇಂಡಿಯನ್ ಸೊಸೈಟಿ ಆಫ್ ಸ್ಪೈಸಸ್, ಕೋಜಿಕೋಡ್‌ರವರ ಸಹಯೋಗದೊಂದಿಗೆ ಜ. 28 ಮತ್ತು 29 ರಂದು “ಅಡಿಕೆ ಸಮೃದ್ಧಿಗಾಗಿ ಕಾಳು ಮೆಣಸಿನ ಅಂತರ ಬೆಳೆ” ಎಂಬ ವಿಷಯದ ಬಗ್ಗೆ ನವುಲೆಯ ಕೃಷಿ ಕಾಲೇಜಿನಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಜಿಡಿಪಿ ಗೆ ಮುಖ್ಯ ಕೊಡುಗೆ ಕೃಷಿ ಕ್ಷೇತ್ರದ್ದಾಗಿದ್ದು, ಕೃಷಿ ಉತ್ಪನ್ನಗಳ ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡಿಂಗ್ ಗೆ ಹೆಚ್ಚಿನ ಒತ್ತು ನೀಡಬೇಕು. ಮೌಲ್ಯವರ್ಧನೆ ಮಾಡುವುದು ಅತಿ ಮುಖ್ಯವಾಗಿದ್ದು, ಇದರಿಂದ ಆರ್ಥಿಕತೆ ಬೆಳೆಯಲು ಸಾಧ್ಯವಾಗುತ್ತದೆ. ಆದ್ದರಿಂದ ರೈತರು ಇದಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಹೇಳಿದರು.
ಗೋವಾ ಯಿಂದ ಕನ್ಯಾಕುಮಾರಿವರೆಗೆ ಕಾಳು ಮೆಣಸನ್ನು ಪ್ಲಾಂಟೇಷನ್ ಬೆಳೆಯಾಗಿ ಬೆಳೆಯಲಾಗುತ್ತಿದೆ. ಅಡಿಕೆ ಮತ್ತು ಸಿಲ್ವರ್ ಓಕ್ ಮರಗಳಿಗೆ ಕಾಳು ಮೆಣಸ ಬಳ್ಳಿಯನ್ನು ಹಬ್ಬಿಸಬೇಕು.
ಊರು-ಕೇರಿಗಳಲ್ಲಿ ನೂರಾರು ತಳಿಗಳನ್ನು ಬೆಳೆದು ರೈತರು ಪ್ರಸಿದ್ದಪಡಿಸಿದ್ದಾರೆ. ಈ ತಳಿಗಳಿಗೆ ಟ್ಯಾಗ್‌ಲೈನ್ ನೀಡಿ, ಬ್ರಾö್ಯಂಡಿAಗ್ ಮಾಡಿ ಮಾರಾಟ ಮಾಡಿದರೆ ಉತ್ತಮ ಆದಾಯ ಪಡೆಯಲು ಸಾಧ್ಯವಾಗುತ್ತದೆ. ಕಾಳು ಮೆಣಸಿನ ಪ್ರತಿ ತಳಿಗಳೂ ವಿಶೇಷವಾಗಿದ್ದು, ತಳಿಗಳ ಉತ್ಪಾದನೆಯನ್ನು ಹೆಚ್ಚಿಸುವುದು, ಸಾವಯವವಾಗಿ ಬೆಳೆಯುವುದು ಮತ್ತು ಮಾರುಕಟ್ಟೆ, ರಫ್ತು ಇತರೆ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ಚರ್ಚಿಸಲಾಗುವುದು.
ಪ್ರಧಾನ ಮಂತ್ರಿ ಕೃಷಿಕ ಯೋಜನೆಯಡಿ ರೈತರಿಗೆ ಶೇ.50 ಸಬ್ಸಿಡಿ ಯೊಂದಿಗೆ ರೂ. 30 ಲಕ್ಷ ಸಾಲ ನೀಡಲಾಗುವುದು. ಹಾಗೂ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ, ಪ್ರಾಜೆಕ್ಟ್ ವರದಿ ಸಿದ್ದಪಡಿಸಲು ಮತ್ತು ಸಾಲ ಕೊಡಿಸುವಲ್ಲಿ ಸಹಾಯ ನೀಡಲಾಗುವುದು ಎಂದರು.
ರೂ.2.10 ಕೋಟಿ ವೆಚ್ಚದಲ್ಲಿ ಮೂಡಿಗೆರೆಯಲ್ಲಿ ಸಂಸ್ಕರಣಾ ಘಟಕವನ್ನು ಸ್ಥಾಪಿಸಿದ್ದು ಇಲ್ಲಿ ಕಾಳು ಮೆಣಸು ಬೆಳೆಗಾರರು ಉಚಿತವಾಗಿ ಸಂಸ್ಕರಣೆ ಮಾಡಿಕೊಳ್ಳಬಹುದು. ಹಾಗೂ ಕೆಪಿಕ್ ವತಿಯಿಂದ ರೈತರಿಗೆ, ಬೆಳೆಗಾರರಿಗೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಐಸಿಎಆರ್-ಐಐಎಸ್‌ಆರ್ ಕೊಝಿಕೊಡ್ ನಿರ್ದೇಶಕರಾದ ಆರ್. ದಿನೇಶ್ ಮಾತನಾಡಿ, ಕಾಳುಮೆಣಸು ಹಲವಾರು ರೈತರ ಜೀವನೋಪಾಯವಾಗಿದ್ದು, ಶೇ.15 ರಷ್ಟು ಮಾತ್ರ ರಫ್ತು ಮಾಡಲಾಗುತ್ತಿದೆ. ರಫ್ತಿನ ಪ್ರಮಾಣ ಇನ್ನೂ ಹೆಚ್ಚುವ ನಿಟ್ಟಿನಲ್ಲಿ ಬೆಳೆಯನ್ನು ಉತ್ತೇಜನಗೊಳಿಸಬೇಕಿದೆ.
ನಮ್ಮಲ್ಲಿ ಉತ್ತಮ ಗುಣಮಟ್ಟದ ಹಲವಾರು ತಳಿಗಳಿದ್ದು, ವಾಣಿಜ್ಯ ಬೆಳೆಯಾಗಿ ಬೆಳೆಯಲು ರೈತರಿಗೆ ಪರವಾನಗಿ ನೀಡಲಾಗಿದೆ. ತಳಿಗಳನ್ನು ಅಭಿವೃದ್ದಿ ಪಡಿಸಲಾಗುತ್ತಿದ್ದು, ಉತ್ಪಾದನೆ ಹೆಚ್ಚಿಸುವ ಕುರಿತು ರೈತರಿಗೆ ರಚನಾತ್ಮಕ ಸಲಹೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಐಸಿಎಆರ್-ಐಐಎಸ್‌ಆರ್ ನಿರ್ದೇಶಕ(ಕೊಝಿಕೊಡ್) ಡಾ. ಬಾಲಚಂದ್ರ ಹೆಬ್ಬಾರ್ ಮಾತನಾಡಿ , ಇಡೀ ವಿಶ್ವ ಉತ್ತಮ ಆದಾಯ ನೀಡುವ ಬೆಳೆ ಕಾಳು ಮೆಣಸು ಎಂದು ನಂಬಿದೆ. ಶಿವಮೊಗ್ಗ ಅಡಿಕೆ ಬೆಳೆಯನ್ನು ಹೆಚ್ಚಾಗಿ ಬೆಳೆಯುವ ಜಿಲ್ಲೆಯಾಗಿದ್ದು, ಅಡಿಕೆ ಜೊತೆ ಅಂತರ ಬೆಳೆಯಾಗಿ ಕಾಳುಮೆಣಸನ್ನು ಬೆಳೆದರೆ ಉತ್ತಮ ಆದಾಯ ಪಡೆಯಲು ಸಾಧ್ಯವಾಗುತ್ತದೆ. ಈ ಬೆಳೆ ಹವಾಮಾನ ಸೂಕ್ಷö್ಮತೆಯನ್ನು ಉತ್ತಮವಾಗಿ ನಿರ್ವಹಿಸಲು ಸಹಕಾರಿಯಾಗಿದೆ. ನೋಡಲು ಸಹ ಚೆನ್ನಾಗಿ ಕಾಣುವ ಈ ಬೆಳೆ ಅಡಿಕೆಯೊಂದಿಗೆ ಬೆಳೆಯಲು ಅತ್ಯುತ್ತಮ ಬೆಳೆಯಾಗಿದೆ ಎಂದರು.
ಎಐಸಿಆರ್‌ಪಿ, ಐಸಿಎಆರ್-ಐಎಎಸ್‌ಆರ್ ನ ಪ್ರಾಜೆಕ್ಟ್ ಕೋಆರ್ಡಿನೇಟರ್ ಡಾ. ಪ್ರಸಾತ್ ಮಾತನಾಡಿ, ಶೇ.50 ರಷ್ಟು ಅಡಿಕೆ ಬೆಳೆಯಲ್ಲಿ ಕಾಳು ಮೆಣಸನ್ನು ಬೆಳೆದರೂ ದೇಶೀಯವಾಗಿ ಅಗತ್ಯವಿರುವ ಕಾಳು ಮೆಣಸಿನ ಬೇಡಿಕೆಯನ್ನು ಪೂರೈಸಬಹುದು. ಜೊತೆಗೆ ಆಮದನ್ನು ಕಡಿತಗೊಳಿಸಬಹುದಾಗಿದ್ದು, ಮುಂದಿನ ದಿನಗಳಲ್ಲಿ ಆಮದು ಪ್ರಮಾಣ ಕಡಿಮೆ ಮಾಡುವ ಗುರಿ ಹೊಂದಲಾಗಿದೆ. ಜೈವಿಕವಾಗಿ ಉತ್ಪನ್ನಗಳನ್ನು ಬೆಳೆಯುವ ಕಡೆ ಹೆಚ್ಚಿನ ಒತ್ತು ನೀಡಬೇಕಿದ್ದು, ಕೃಷಿ ಉತ್ಪನ್ನ ಸಂಘಗಳ(ಎಫ್‌ಪಿಓ) ಗಳ ಸಬಲೀಕರಣಕ್ಕೆ ಶ್ರಮಿಸಬೇಕಿದೆ ಎಂದರು.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್.ಸಿ ಜಗದೀಶ್ ಮಾತನಾಡಿ, ಮೂಡಿಗೆರೆಯಲ್ಲಿ ಕಾಳುಮೆಣಸು ಸಂಸ್ಕರಣಾ ಘಟಕವನ್ನು ಸ್ಥಾಪಿಸಿದ್ದು ಕಾಳುಮೆಣಸು ಬೆಳೆಗಾರರು ಉಚಿತವಾಗಿ ಇದರ ಸದ್ಬಳಕೆ ಮಾಡಕೊಳ್ಳಬೇಕು. ಅಡಿಕೆ, ಕಾಫಿ ಬೆಳೆಯೊಂದಿಗೆ ಕಾಳು ಮೆಣಸನ್ನು ಉತ್ತಮವಾಗಿ ಬೆಳೆಯಬಹುದಾಗಿದ್ದು ರೈತರು ಮೌಲ್ಯವರ್ಧನೆಗೆ ಹೆಚ್ಚಿನ ಮಾನ್ಯತೆ ನೀಡಬೇಕು.ರೈತರು ಕಾಳುಮೆಣಸು ಬೆಳೆಯಲ್ಲಿ ಹಲವಾರು ಪ್ರಯೋಗಗಳನ್ನು ಮಾಡಿದ್ದಾರೆ. ಯಶಸ್ವಿಯಾಗಿದ್ದಾರೆ. ಸರ್ಕಾರ ಮತ್ತು ಕೆಪೆಕ್ ಸಹಕಾರ ಸಹ ಇದ್ದು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದರು.
ಈ ಕಾರ್ಯಕ್ರಮಕ್ಕೆ ಭಾರತದ ಬೇರೆ ಬೇರೆ ರಾಜ್ಯಗಳಿಂದ 500ಕ್ಕೂ ಹೆಚ್ಚು ಅಧಿಕಾರಿಗಳು, ವಿಜ್ಞಾನಿಗಳು, ರೈತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
30ಕ್ಕೂ ಹೆಚ್ಚು ಕಾಳುಮಣಸಿನ ತಳಿಗಳ ಪ್ರದರ್ಶನ ಹಾಗೂ 20ಕ್ಕೂ ಹೆಚ್ಚು ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವಿಚಾರ ಸಂಕಿರಣದಲ್ಲಿ ಮಂಡಿಸಿದ ‘ವಿಷಯದ ಪುಸ್ತಕ’, ‘ಅಡಿಕೆಯಲ್ಲಿ ಅಂತರ ಬೆಳೆಯಾಗಿ ಕಾಳುಮೆಣಸು’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು ಹಾಗೂ ಸಸ್ಯ ತಳಿ ಸಂರಕ್ಷಣೆ ಹಾಗೂ ರೈತರ ಹಕ್ಕುಗಳ ಪ್ರಾಧಿಕಾರದಲ್ಲಿ ನೋಂದಾಯಿಸಿದ ನಾಲ್ಕು ಕಾಳುಮೆಣಸಿನ ತಳಿಗಳ ನೋಂದಣಿ ಪ್ರಮಾಣಪತ್ರವನ್ನು ರೈತರಿಗೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ದೇವಿಕುಮಾರ್, ಶಶಾಂಕ್, ವಿವಿ ಶಿಕ್ಷಣ ನಿರ್ದೇಶಕರಾದ ಬಿ.ಹೇಮ್ಲಾನಾಯ್ಕ, ದುಷ್ಯಂತ ಕುಮಾರ್, ಕೃಷಿ ಕಾಲೇಜಿನ ಡೀನ್ ಡಾ.ತಿಪ್ಪೇಶ್, ಡೀನ್ ಡಾ.ವಿ.ಶ್ರೀನಿವಾಸ್ ಡಾ.ಪ್ರದೀಪ್, ಡಾ.ನಾಗರಾಜಪ್ಪ ಅಡಿವಪ್ಪರ್ ಮುಂತಾದ ಅಧಿಕಾರಿಗಳು, ವಿಜ್ಞಾನಿಗಳು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

National Health Campaign ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನಕ್ಕೆ ಆಹ್ವಾನ

0

National Health Campaign ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತುಮರಿ , ಮಳೂರು ಮತ್ತು ಬ್ಯಾಕೋಡು ಉಪಕೇಂದ್ರಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗಳಿಗೆ ಫೆ. 02 ರಂದು ಬೆಳಗ್ಗೆ 10.30 ರಿಂದ ಮ. 1.30 ರವರೆಗೆ ಶಿವಮೊಗ್ಗ ಬಿ.ಹೆಚ್.ರಸ್ತೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಎನ್.ಹೆಚ್.ಎಂ. ವಿಭಾಗದಲ್ಲಿ ನಡೆಯುವ ನೇರ ಸಂದರ್ಶನ ಏರ್ಪಡಿಸಲಾಗಿದೆ.
National Health Campaign ಆಸಕ್ತರು ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ ಹಾಗೂ ಹುದ್ದೆಗೆ ಸಂಬಂಧಪಟ್ಟ ಮೂಲ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-200337 ನ್ನು ಸಂಪರ್ಕಿಸುವುದು

Keladi Shivappa Nayak University of Agricultural ಅಡಿಕೆ ಸಮೃದ್ಧಿಗಾಗಿ ಕಾಳು ಮೆಣಸಿನ ಅಂತರ ಬೆಳೆ”; ರಾಷ್ಟ್ರೀಯ ವಿಚಾರ ಸಂಕಿರಣ

0

Keladi Shivappa Nayak University of Agricultural ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತುತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಅಡಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ, ಅಡಿಕೆ ಮತ್ತು ಸಾಂಬಾರ ಪದಾರ್ಥಗಳ ಅಭಿವೃದ್ಧಿ ನಿರ್ದೇಶನಾಲಯ, ಕೋಜಿಕೋಡ್, ಐ.ಸಿ.ಎ.ಆರ್. – ಭಾರತೀಯ ಸಾಂಬಾರು ಬೆಳೆ ಸಂಶೋಧನಾ ಸಂಸ್ಥೆ, ಕೋಜಿಕೋಡ್, ಐ.ಸಿ.ಎ.ಆರ್. – ಅಖಿಲ ಭಾರತ ಸಂಯೋಜಿತ ಸಂಶೋಧನಾ ಯೋಜನೆ (ಸಾಂಬಾರು ಬೆಳೆ), ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತುರಫ್ತು ನಿಗಮ ಲಿಮಿಟೆಡ್, ಬೆಂಗಳೂರು, ಮಲ್ನಾಡ್ ಅಡಿಕೆ ಕೋ-ಆಪರೇಟಿವ್ ಮಾರ್ಕೆಟಿಂಗ್ ಸೊಸೈಟಿ ಲಿಮಿಟೆಡ್, ಶಿವಮೊಗ್ಗ, ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘ ನಿಯಮಿತ, ಚನ್ನಗಿರಿ ಮತ್ತು ಇಂಡಿಯನ್ ಸೊಸೈಟಿ ಆಫ್ ಸ್ಪೈಸಸ್, ಕೋಜಿಕೋಡ್‌ರವರ ಸಹಯೋಗದೊಂದಿಗೆ ಜ. 28 ಮತ್ತು 29 ರಂದು “ಅಡಿಕೆ ಸಮೃದ್ಧಿಗಾಗಿ ಕಾಳು ಮೆಣಸಿನ ಅಂತರ ಬೆಳೆ” (An Intercrop in Arecanut for prosperity) ಎಂಬ ವಿಷಯದ ಬಗ್ಗೆ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಭಾರತದ ಬೇರೆ ಬೇರೆ ರಾಜ್ಯಗಳಿಂದ 500ಕ್ಕೂ ಹೆಚ್ಚು ಅಧಿಕಾರಿಗಳು, ವಿಜ್ಞಾನಿಗಳು, ರೈತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ಎರಡು ದಿನದ ಕಾರ್ಯಕ್ರಮದಲ್ಲಿ ಮೊದಲನೆಯ ದಿನ ನಾಲ್ಕು ತಾಂತ್ರಿಕ ಅಧಿವೇಶನವಿದ್ದು, ಮೊದಲ ತಾಂತ್ರಿಕ ಅಧಿವೇಶನದಲ್ಲಿ ‘ಸಂಶೋಧನೆ ಮತ್ತು ಪ್ರಚಲಿತ ಸಮಸ್ಯೆಗಳು’ ಎಂಬ ವಿಷಯದ ಬಗ್ಗೆ ಆಹ್ವಾನಿತ ಮೂರು ಸಂಪನ್ಮೂಲ ವಿಜ್ಞಾನಿಗಳು ಮಾಹಿತಿ ನೀಡಲಿದ್ದಾರೆ. ಎರಡನೆಯ ಅಧಿವೇಶನದಲ್ಲಿ ‘ಅಡಿಕೆ ಮತ್ತು ಕಾಳುಮೆಣಸಿನ ಸಸ್ಯೋತ್ಪಾದನೆ ಮತ್ತು ಸಾಗುವಳಿ’ ಎಂಬ ವಿಷಯದ ಬಗ್ಗೆ ಆಹ್ವಾನಿತ ನಾಲ್ಕು ಸಂಪನ್ಮೂಲ ವಿಜ್ಞಾನಿಗಳು ಮಾಹಿತಿ ನೀಡಲಿದ್ದಾರೆ. ಮೂರನೇ ಅಧಿವೇಶನದಲ್ಲಿ ‘ಕಾಳುಮೆಣಸಿನಲ್ಲಿ ಜೈವಿಕ ತಂತ್ರಜ್ಞಾನ, ನ್ಯಾನೋ ತಂತ್ರಜ್ಞಾನ ಮತ್ತು ಜೀನೋಮಿಕ್ಸ್’ ಎಂಬ ವಿಷಯದ ಬಗ್ಗೆ ಆಹ್ವಾನಿತ ಐದು ಸಂಪನ್ಮೂಲ ವಿಜ್ಞಾನಿಗಳು ಮಾಹಿತಿ ನೀಡಲಿದ್ದಾರೆ. ಕೊನೆಯ ಮತ್ತು ನಾಲ್ಕನೇ ಅಧಿವೇಶನದಲ್ಲಿ ‘ಕಾಳುಮೆಣಸಿನಲ್ಲಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆ’ ಕುರಿತು ಆಹ್ವಾನಿತ ಇಬ್ಬರು ಸಂಪನ್ಮೂಲ ವಿಜ್ಞಾನಿಗಳು ಮಾಹಿತಿ ನೀಡಲಿದ್ದಾರೆ.
ರಾಷ್ಟ್ರೀಯ ವಿಚಾರ ಸಂಕಿರಣದ ಎರಡನೇ ದಿನದ ಕಾರ್ಯಕ್ರಮದಲ್ಲಿ ಎರಡು ತಾಂತ್ರಿಕ ಅಧಿವೇಶನವಿದ್ದು, ಮೊದಲ ತಾಂತ್ರಿಕ ಅಧಿವೇಶನದಲ್ಲಿ ‘ಕಾಳುಮೆಣಸು ಬೆಳೆಯಲ್ಲಿ ನೂತನ ಉತ್ಪಾದನಾ ತಾಂತ್ರಿಕತೆ ಮತ್ತು ಸಸ್ಯ ಸಂರಕ್ಷಣೆ’ ಕುರಿತು ಆಹ್ವಾನಿತ ಇಬ್ಬರು ಸಂಪನ್ಮೂಲ ವಿಜ್ಞಾನಿಗಳು ಮಾಹಿತಿ ನೀಡಲಿದ್ದಾರೆ. ಎರಡನೇ ತಾಂತ್ರಿಕ ಅಧಿವೇಶನದಲ್ಲಿ ‘ಕಾಳುಮೆಣಸಿನ ಬೆಳೆಯಲ್ಲಿ ಉತ್ಪಾದನೆ, ಸಂಸ್ಕರಣೆ ಮತ್ತು ಮಾರುಕಟ್ಟೆಯ ಕ್ಷೇತ್ರದಲ್ಲಿ ನಾವೀನ್ಯತೆ’ ಬಗ್ಗೆ ಸಂಪನ್ಮೂಲ ವಿಜ್ಞಾನಿಗಳು ಚರ್ಚೆ ನಡೆಸಲಿದ್ದಾರೆ. ನಂತರ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಗೆ ಸೇರುವ ಕಾಳುಮೆಣಸು ಬೆಳೆಯುವ ಪ್ರಗತಿಪರ ರೈತರು ಹಾಗೂ “ಅಂತರಾಷ್ಟಿçಯ ಕಾಳುಮೆಣಸು ಪ್ರಶಸ್ತಿ” ಪಡೆದಿರುವ ರೈತರು ತಮ್ಮ ಅನಿಸಿಕೆ ಹಂಚಿಕೊಳ್ಳಲ್ಲಿದ್ದಾರೆ. 30ಕ್ಕೂ ಹೆಚ್ಚು ಕಾಳುಮಣಸಿನ ತಳಿಗಳ ಪ್ರದರ್ಶನ ಹಾಗೂ 20ಕ್ಕೂ ಹೆಚ್ಚು ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ವಿಚಾರ ಸಂಕಿರಣದಲ್ಲಿ ಮಂಡಿಸಿದ ‘ವಿಷಯದ ಪುಸ್ತಕ’, ‘ಅಡಿಕೆಯಲ್ಲಿ ಅಂತರ ಬೆಳೆಯಾಗಿ ಕಾಳುಮೆಣಸು’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸುವುದು ಹಾಗೂ ಸಸ್ಯ ತಳಿ ಸಂರಕ್ಷಣೆ ಹಾಗೂ ರೈತರ ಹಕ್ಕುಗಳ ಪ್ರಾಧಿಕಾರದಲ್ಲಿ ನೋಂದಾಯಿಸಿದ ನಾಲ್ಕು ಕಾಳುಮೆಣಸಿನ ತಳಿಗಳ ನೋಂದಣಿ ಪ್ರಮಾಣಪತ್ರವನ್ನು ರೈತರಿಗೆ ಕೊಡಲಾಗುವುದು.
Keladi Shivappa Nayak University of Agricultural ಈ ಕಾರ್ಯಕ್ರಮದಲ್ಲಿ ಡಾ. ಹೋಮಿ ಚೆರಿಯನ್, ನಿರ್ದೇಶಕರು, ಅಡಿಕೆ ಮತ್ತು ಸಾಂಬಾರ ಪದಾರ್ಥಗಳ ಅಭಿವೃದ್ಧಿ ನಿರ್ದೇಶನಾಲಯ ಕೋಜಿಕೋಡ್, ಡಾ. ಆರ್ ದಿನೇಶ್, ನಿರ್ದೇಶಕರು, ಐ.ಸಿ.ಎ.ಆರ್. ಭಾರತೀಯ ಸಾಂಬಾರು ಬೆಳೆ ಸಂಶೋಧನಾ ಸಂಸ್ಥೆ, ಅಖಿಲ ಭಾರತ ಸಂಯೋಜಿತ ಸಂಶೋಧನಾಯೋಜನೆ (ಸಾಂಬಾರು), ಡಾ. ಡಿ ಪ್ರಸಾತ್, ಯೋಜನಾ ಸಂಯೋಜಕರು, ಸಿ.ಎನ್ ಶಿವಪ್ರಕಾಶ್, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಲಿಮಿಟೆಡ್, ಬೆಂಗಳೂರು, ಮಹೇಶ್ ಹೆಚ್.ಎ¸.ï ಹುಲ್ಕುಳಿ, ಉಪಾಧ್ಯಕ್ಷರು, ಮಲ್ನಾಡ್ ಅಡಿಕೆ ಕೋ-ಆಪರೇಟಿವ್ ಮಾರ್ಕೆಟಿಂಗ್ ಸೊಸೈಟಿ ಲಿಮಿಟೆಡ್, ಶಿವಮೊಗ್ಗ, ಹೆಚ್.ಎಸ್ ಶಿವಕುಮಾರ್, ಅಧ್ಯಕ್ಷರು, ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘ ನಿಯಮಿತ, ಚನ್ನಗಿರಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಡಾ. ಆರ್.ಸಿಜಗದೀಶ್, ಕುಲಪತಿಗಳು, ವಿಶ್ವವಿದ್ಯಾಲಯದ ಎಲ್ಲಾ ವಿಜ್ಞಾನಿಗಳು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಯವರು ತಮ್ಮ ಸಂಶೋಧನೆಯ ಫಲಿತಾಂಶದ ಬಗ್ಗೆಯೂ ಸಹ ಪ್ರಸ್ತುತ ಪಡಿಸಲಾಗುವುದು ಎಂದು ಡಾ. ಆರ್.ಸಿ ಜಗದೀಶ್, ಗೌರವಾನ್ವಿತ ಕುಲಪತಿಗಳು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ನವಿಲೆ, ಶಿವಮೊಗ್ಗರವರು ತಿಳಿಸಿದ್ದಾರೆ.

Chamber Of Commerce Shivamogga ಎಂ.ಎಸ್.ಎಂ.ಇ.: ಒಂದು ದಿನನದ ಅರಿವು ಮೂಡಿಸುವ ಕಾರ್ಯಾಗಾರ

0

Chamber Of Commerce Shivamogga ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆ.ಸಿ.ಟಿ.ಯು ಬೆಂಗಳೂರು ಹಾಗೂ ಅವೇಕ್-ಕರ್ನಾಟಕ ರಾಜ್ಯ ಮಹಿಳಾ ಉದ್ಯಮಿಗಳ ಸಂಸ್ಥೆ ಇವರುಗಳ ಸಹಯೋಗದಲ್ಲಿ ಜ.30 ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗದ ಜಿಲ್ಲಾ ಕೈಗಾರಿಕಾ ಕೇಂದ್ರ ಸಭಾಂಗಣ, ಶಿವಪ್ಪನಾಯಕ ಸಂಕೀರ್ಣ, 3ನೇ ಮಹಡಿ, ನೆಹರು ರಸ್ತೆ, ಶಿವಮೊಗ್ಗ ಇಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಯೋಜನೆಯಡಿ “One Day Awarness workshop on BDSP” ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
Chamber Of Commerce Shivamogga ಕಾರ್ಯಕ್ರಮವನ್ನು ಬೆಂಗಳೂರಿನ ಅವೇಕ್ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಭುವನೇಶ್ವರಿ ಸಿ. ರವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್. ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅವೇಕ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಹೇಮಮಾಲಿನ, ಖಜಾಂಚಿ ಶ್ರೀಮತಿ ಶ್ಯಾಮಲ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಶರತ್ ಗೌಡ ಪಿ. ಹಾಗೂ ಜಿಲ್ಲಾ ಲೀಡ್ ಬ್ಯಾಂಕ್, ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಹನುಮಂತಪ್ಪ ಪಿ. ಇವರುಗಳು ಉಪಸ್ಥಿತರಿರಲಿದ್ದಾರೆ.

MESCOM ಜ. 30 ರಿಂದ ಫೆ. 01 ರವರೆಗೆ ವಿದ್ಯುತ್ ವ್ಯತ್ಯಯ

0

MESCOM ಶಿವಮೊಗ್ಗ ನಗರ ಉಪವಿಭಾಗ 2, ಘಟಕ -5ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಜ. 30, 31 ಮತ್ತು ಫೆ. 01 ರಂದು 3 ದಿನಗಳು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಜ. 30 ರಂದು ಬೆಳಗ್ಗೆ 10.00 ರಿಂದ ಮ. 3.00 ರವರೆಗೆ ಮಿಳಗಟ್ಟ, ಬುದ್ಧನಗರ, ಕಿಣಿ ಲೇಔಟ್, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಜ. 31 ರಂದು ಬೆಳಗ್ಗೆ 10.00 ರಿಂದ ಮ. 3.00 ರವರೆಗೆ ಟಿಪ್ಪುನಗರ 1 ರಿಂದ 7ನೇ ಕ್ರಾಸ್‌ವರೆಗೆ ಎಡಭಾಗ, ಕೆ.ಕೆ.ಶೆಡ್, ಪದ್ಮಾ ಟಾಕೀಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಫೆ. 01 ರಂದು ಬೆ. 10 ರಿಂದ ಸಂ. 04 ರವರೆಗೆ ಪಿಯರ್‌ಲೈಟ್ ಫ್ಯಾಕ್ಟರಿ, ಎನ್.ಟಿ.ರಸ್ತೆ, ಮಂಡ್ಲಿ ಬೈಪಾಸ್, ಮಂಡ್ಲಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Karnataka State Commission for Protection of Child Rights ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಮರಳಿ ಶಾಲೆಗೆ ಕರೆತರಲು ಸೂಚನೆ: ಅಪರ್ಣಾ ಕೊಳ್ಳ

0

Karnataka State Commission for Protection of Child Rights ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶಿಕ್ಷಣ ಬಹು ಮುಖ್ಯವಾಗಿದ್ದು ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಶಿಕ್ಷಕರು ಹಾಗೂ ಅಧಿಕಾರಿಗಳು ಮಕ್ಕಳನ್ನು ಶಾಲೆಗೆ ಮರಳಿ ಕರೆ ತರಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಅಪರ್ಣಾ ಕೊಳ್ಳ ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಜಿಲ್ಲಾ ಡಯಟ್ ತರಬೇತಿ ಸಂಸ್ಥೆಯಲ್ಲಿ “ ಬಾಲನ್ಯಾಯ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೊಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳು, ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ” ಕುರಿತು ಭಾಗೀದಾರ ಇಲಾಖೆಯ ಅಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರವು ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ, ಪೌಷ್ಟಿಕ ಆಹಾರ, ವಸತಿ ಸೌಲಭ್ಯ, ಪಠ್ಯ ಪುಸ್ತಕಗಳನ್ನು ನೀಡುತ್ತಿದೆ. ಆದರೂ ಮಕ್ಕಳು ಶಾಲೆಗೆ ಗೈರಾಗುತ್ತಿದ್ದಾರೆ. ಇದನ್ನು ಅಧಿಕಾರಿಗಳು ಹಾಗೂ ಶಿಕ್ಷಕರು ಗಂಭೀರವಾಗಿ ಪರಿಗಣಿಸಿ ಮಕ್ಕಳು ಹಾಗೂ ಅವರ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿ ಶಾಲೆಗೆ ಮಕ್ಕಳನ್ನು ಕರೆತರಬೇಕು. ಸರ್ಕಾರಿ ಸೌಲಭ್ಯಗಳನ್ನು ಮಕ್ಕಳು ಪಡೆದು ಶಾಲೆಯಲ್ಲಿ ಹಾಜರಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆಗಳ ಬಗ್ಗೆ ಮಕ್ಕಳಿಗೆ ಶಾಲೆಯಲ್ಲಿ ಶಿಕ್ಷಕರು ಅರಿವು ಮೂಡಿಸಬೇಕು. ತೆರೆದ ಮನೆ ಕಾರ್ಯಕ್ರಮದಡಿಯಲ್ಲಿ ಪೊಲೀಸ್ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ತಮ್ಮ ಹಕ್ಕುಗಳ ಬಗ್ಗೆ ತಿಳಿಸಬೇಕು. ಶಿಕ್ಷಕರು ಹಾಗೂ ಅಧಿಕಾರಿಗಳು ಸಾರ್ವಜನಿಕರನ್ನು ಒಗ್ಗೂಡಿಸಿಕೊಂಡು ಬಾಲ್ಯ ವಿವಾಹ ಹಾಗೂ ಪೊಕ್ಸೋದಂತಹ ಅನಿಷ್ಟ ಪದ್ದತಿ ಕುರಿತು ಜಾಗೃತಿ ಮೂಡಿಸಿ ಅದನ್ನು ತಡೆಯಬೇಕು, ರಜೆ ದಿನಗಳಲ್ಲಿ ಶಾಲಾ ಆವರಣದಲ್ಲಿ ಅನೈತಿಕ ಚಟುವಟಿಕೆಗಳು ನಡೆಯದಂತೆ ಪೊಲೀಸ್ ವ್ಯವಸ್ಥೆ ಬಿಗಿಗೊಳಿಸಬೇಕು ಎಂದರು.
Karnataka State Commission for Protection of Child Rights ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದರೆ ಹಾಗೂ ಶಾಲೆಗಳಲ್ಲಿ ಸರ್ಕಾರ ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸದಿದ್ದಲ್ಲಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ಮಕ್ಕಳು ತಮ್ಮ ಅಹವಾಲು ನೀಡಬಹುದು ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್.ಆರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಮಕ್ಕಳ ರಕ್ಷಣೆಗೋಸ್ಕರ ಮಿಷನ್ ಸುರಕ್ಷಾ ವೆಬ್‌ಸೈಟ್‌ನ್ನು ಒಂದು ವಾರದಲ್ಲಿ ಬಿಡುಗಡೆ ಮಾಡಲಿದ್ದು, ಇದು ಬಾಲ್ಯವಿವಾಹ ಹಾಗೂ ಪೋಕ್ಸೋ ಪ್ರಕರಣ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ 214 ಪೋಕ್ಸೋ ಹಾಗೂ 54 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಇಲಾಖೆಯು ಏಪ್ರಿಲ್‌ನಿಂದ ಡಿಸೆಂಬರ್ ವರೆಗೂ 60 ಬಾಲ್ಯವಿವಾಹಗಳನ್ನು ತಡೆಗಟ್ಟಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ‘ಒಂದು ಬಾಲ್ಯ ವಿವಾಹ ತಡೆಗಟ್ಟಿದರೆ ಒಂದು ಕುಟುಂಬದ ಜೀವ ಉಳಿಸಿದಂತೆ’ ಈ ನಿಟ್ಟಿನಲ್ಲಿ ಮಕ್ಕಳಿಗೆ ರಕ್ಷಣೆ ನೀಡಲು ಸರ್ಕಾರ ಅನೇಕ ಕಾಯ್ದೆಗಳನ್ನು ಜಾರಿ ಮಾಡಿದ್ದು ಇದನ್ನು ನಾವೆಲ್ಲರೂ ಚಾಚೂ ತಪ್ಪದೆ ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಿ ಬಾಲ್ಯವಿವಾಹ ಮುಕ್ತ ಸಮಾಜವನ್ನು ನಿರ್ಮಿಸಬೇಕು. ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದಲ್ಲಿ ಮಕ್ಕಳು ಸೇರಿದಂತೆ ಶಿಕ್ಷಕರೂ ಸಹ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ.ಜಿ.ಕಾರ್ಯಪ್ಪ, ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯೆ ರೇಖಾ.ಜಿ.ಎಂ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ರತ್ನ, ಡಯಟ್ ಪ್ರಾಂಶುಪಾಲರಾದ ಹೆಚ್.ಆರ್. ಕೃಷ್ಣಮೂರ್ತಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.