Saturday, December 6, 2025
Saturday, December 6, 2025
Home Blog Page 6

World Soil Day ಇರುವಕ್ಕಿಯಲ್ಲಿ ತೋಟಗಾರಿಕಾ ಬೆಳೆಗಳ ಕೃಷಿಯಲ್ಲಿ ಮಣ್ಣು ಪರೀಕ್ಷೆ & ಸಮಗ್ರ ಪೋಷಕಾಂಶ ನಿರ್ವಹಣೆ ತರಬೇತಿ

0

World Soil Day ವಿಶ್ವ ಮಣ್ಣು ದಿನಾಚರಣೆಯ ಪ್ರಯುಕ್ತ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯದ, ರೈತರ ತರಬೇತಿ ಸಂಸ್ಥೆ, ಇರುವಕ್ಕಿ ಮತ್ತು ಮಣ್ಣು ವಿಜ್ಞಾನ ವಿಭಾಗ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ, ಇರುವಕ್ಕಿ ಇವರ ಸಹಭಾಗಿತ್ವದಲ್ಲಿ “ತೋಟಗಾರಿಕೆ ಬೆಳೆಗಳಲ್ಲಿ ಮಣ್ಣು ಪರೀಕ್ಷೆ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆ (ಅಡಿಕೆ, ತೆಂಗು, ಶುಂಠಿ ಹಾಗೂ ಕಾಳುಮೆಣಸು) “
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.

ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ “ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್, ನೆಲ ಮಹಡಿ, ಇರುವಕ್ಕಿ” ಯಲ್ಲಿ ದಿನಾಂಕ: 05.12.2025 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.

ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.

ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 8618715599 / 9448312978

World Soil Day ಇರುವಕ್ಕಿಯಲ್ಲಿ ತೋಟಗಾರಿಕಾ ಬೆಳೆಗಳ ಕೃಷಿಯಲ್ಲಿ ಮಣ್ಣು ಪರೀಕ್ಷೆ & ಸಮಗ್ರ ಪೋಷಕಾಂಶ ನಿರ್ವಹಣೆ ತರಬೇತಿ ತರಬೇತಿ ನಡೆಯುವ ಸ್ಥಳಕ್ಕೆ ಬರಲು ಈ ಕೋಡ್ ಪಿನ್ 44L-7L7-PJM6 ಅನ್ನು ಗೂಗಲ್ ಮ್ಯಾಪ್ ನಲ್ಲಿ ಉಪಯೋಗಿಸಿ.

Guarantee scheme ಗ್ಯಾರಂಟಿ ಯೋಜನೆಗಳು ಜನರ ಜೀವನದಲ್ಲಿ ಒಂದಿಲ್ಲೊಂದು ರೀತಿಯ ಬದಲಾವಣೆ ತಂದಿವೆ- ಹೆಚ್.ಎಂ.ಮಧು

0

Guarantee scheme ಆರ್ಥಿಕವಾಗಿ ಸಾಮಾಜಿಕವಾಗಿ ದುರ್ಬಲರಾದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಘನತೆಯಿಂದ ಜೀವನವನ್ನು ಸಾಗಿಸುವಂತಾಗಬೇಕು ಎನ್ನುವ ಸದುದ್ದೇಶದಿಂದ ಆಡಳಿತಾರೂಢ ಸರ್ಕಾರವು ಪಂಚ ಗ್ಯಾರಂಟೆ ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸಿದೆ ಎಂದು ಶಿವಮೊಗ್ಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ.ಮಧು ಅವರು ಹೇಳಿದರು

ಅವರು ಶಿವಮೊಗ್ಗ ನಗರದ ಖಾಸಗಿ ಬಸ್‌ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಗ್ರಾಮ ಸಂಪರ್ಕ ಯೋಜನೆಯಡಿ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಾಕ್ಷ್ಯ ಚಿತ್ರಪ್ರದರ್ಶನ, ಸಂಗೀತ ಮತ್ತು ಬೀದಿನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಶತಶತಮಾನಗಳಿಂದ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರನ್ನು ಶೋಷಿತರನ್ನು ಮಾತ್ರವಲ್ಲದೇ ಸಮಾಜದ ಎಲ್ಲಾ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಿದ ಅತ್ಯಂತ ಯಶಸ್ವಿ ಗ್ಯಾರಂಟಿ ಯೋಜನೆಗಳಾಗಿದ್ದು, ಜಗತ್ತಿನಾದ್ಯಂತ ಜನಪ್ರಿಯಗೊಂಡಿವೆ ಮಾತ್ರವಲ್ಲ ದೇಶದ ಇತರೆ ರಾಜ್ಯಗಳ ಜನರು ಅವುಗಳನ್ನು ಅನುಸರಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.

ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿನಲ್ಲಿ ಒಂದಿಲ್ಲೊಂದು ರೀತಿಯ ಬದಲಾವಣೆ ಸುಧಾರಣೆ ತಂದಿವೆಯಲ್ಲದೆ ಆರ್ಥಿಕವಾಗಿ ಸಂಚಲನವನ್ನುಂಟು ಮಾಡಿದೆ ಎಂದ ಅವರು, ಆರ್ಥಿಕವಾಗಿ ದುರ್ಬಲ ವರ್ಗದವರ ಜೀವನಮಟ್ಟ ಸುಧಾರಿಸುವಲ್ಲಿ ಮಹತ್ವದ ಪಾತ್ರವಹಿಸಿವೆ ಎಂದರು.

ಕುಟುಂಬದ ಯಜಮಾನಿಗೆ ಆರ್ಥಿಕ ಬಲತುಂಬುವ ನಿಟ್ಟಿನಲ್ಲಿ ಅಕೆಯ ಬ್ಯಾಂಕ್‌ಖಾತೆಗೆ ನೇರವಾಗಿ ರೂ 2000/-ಗಳನ್ನು ಜಮಾ ಮಾಡುವ ಗೃಹಲಕ್ಷ್ಮೀ ಯೋಜನೆ, ಮಹಿಳಾ ಸಬಲೀಕರಣಕ್ಕೆ ಮುನ್ನಡಿ ಎನ್ನುವಂತೆ ಮಹಿಳೆಯರಿಗಾಗಿಯೇ ರೂಪಿಸಿದ ಉಚಿತ ಬಸ್‌ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ, ಹಸಿದ ಒಡಲಿಗೆ ಸಂತೃಪ್ತಿಯ ಊಟ ಬಡಿಸುವ ಅನ್ನಭಾಗ್ಯ ಯೋಜನೆ, ವಿದ್ಯುತ್‌ಬಳಸುವ ಪ್ರತಿ ಮನೆಗೆ ಉಚಿತ ವಿದ್ಯುತ್‌ಒದಗಿಸಿದ ಗೃಹಜ್ಯೋತಿ ಯೋಜನೆ ಹಾಗೂ ವಿದ್ಯಾವಂತರಾಗಿಯೂ ಉದ್ಯೋಗ ಸಿಗದ ನಿರುದ್ಯೋಗಿ ಪದವೀದರರಿಗೆ, ಡಿಪ್ಲೋಮಾ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗಳು ಅತ್ಯಂತ ಜನಪ್ರಿಯಗೊಂಡಿದ್ದು, ಜನಸಾಮಾನ್ಯರಲ್ಲಿ ಮಂದಹಾಸ ಮೂಡಿಸಿದೆ ಎಂದರು.

Guarantee scheme ಯಾವುದೇ ಸರ್ಕಾರ ಜನರ ವೆಚ್ಚ ಸಾಮರ್ಥ್ಯವನ್ನು ಅಥವಾ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದಲ್ಲಿ ಅಂತಹ ಸಮಾಜದಲ್ಲಿ ಅರ್ಥಿಕ ಚಲನಶೀಲತೆ ಆರೋಗ್ಯಕರವಾಗಿರುತ್ತದೆ ಜಿಡಿಪಿ ಬೆಳವಣಿಯೂ ಉತ್ತಮ ರೀತಿಯಲ್ಲಿರುತ್ತದೆ ಎಂಬುದು ಆರ್ಥಿಕ ತಜ್ಞರ ಅಭಿಮತ. ಇಂತಹ ಮಾದರಿ ಎನಿಸಬಹುದಾದ ಯೋಜನೆಗಳ ಜಾರಿಯಿಂದ ಜನರ ಜೀವನಮಟ್ಟ ಸುಧಾರಣೆಗೊಂಡು ಆರ್ಥಿಕ ಚಟುವಟಿಕೆ ಸುಧಾರಿಸಲಿದೆ ಎಂದರು.

ಗ್ಯಾರಂಟಿ ಯೋಜನೆಗಳು ಕಡುಬಡವರ, ದುರ್ಬಲರ ಬಾಳನ್ನು ಬೆಳಗಿಸಿವೆ. ವ್ಯವಸ್ಥೆಯಲ್ಲಿ ಬದಲಾವಣೆಯ ದಿನಗಳನ್ನು ಕಾಣಬಹುದಾಗಿದೆ. ಈ ಯೋಜನೆಗಳ ಪಡೆದ ಫಲಾನುಭವಿಗಳು ಸಹಜವಾಗಿ ತೃಪಭಾವ ಹೊಂದಿರುವುದು ನಮ್ಮ ಅರಿವಿಗೆ ಬರುತ್ತಿದೆ. ಅಷ್ಟೇ ಅಲ್ಲದೇ ಜಿಲೆಯ ಜನರ ಆಶೋತ್ತರಗಳಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವಲ್ಲಿ ಸರ್ಕಾರ ಸಕ್ರಿಯವಾಗಿದೆ ಎಂದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಆರ್.ಮಾರುತಿ ಅವರು ಉಪಸ್ಥಿತರಿದ್ದರು ಭದ್ರಾವತಿಯ ಜಗದೀಶ್ ನೇತೃತ್ವದ ಸಂಸ್ಕೃತಿ ಕಲಾತಂಡದ ಕಲಾವಿದರು ಭಾಗ್ಯದ ಬೆಳಕು ಎಂಬ ಕಿರುನಾಟಕವನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮವು ಜಿಲ್ಲೆಯ ಎಲ್ಲಾ ತಾಲೂಕುಗಳ ಆಯ್ದ 20ಸ್ಥಳಗಳಲ್ಲಿ ಪ್ರದರ್ಶನ ನೀಡಲಿದೆ. ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸುತ ಪಡಿಸುವ ಗ್ಯಾರಂಟಿ ಯೋಜನೆಗಳ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.

Unite and Orange the World ಮಹಿಳೆಯರಿಗೆ ಸೂಕ್ತ ಭದ್ರತೆ ನೀಡಲು ವಾಕಥಾನ್ ಮೂಲಕ ಮನವಿ

0

Unite and Orange the World ಮಹಿಳೆಯರ ಮೇಲಿನ ಹಿಂಸಾಚಾರದ ವಿರುದ್ಧ ಶಿವಮೊಗ್ಗ ನಗರದ ಐದು ಇನ್ನರ್‌ವ್ಹೀಲ್ ಕ್ಲಬ್‌ಗಳಿಂದ ಸ್ಟೆಪ್ ಅಪ್ ಮತ್ತು ಸ್ಪೀಕ್ ಔಟ್ ವಿಷಯದಡಿ “ಯುನೈಟ್ ಆಂಡ್ ಆರೇಂಜ್ ದಿ ವರ್ಲ್ಡ್” ಸಾರ್ವಜನಿಕ ಜಾಗೃತಿ ರ‍್ಯಾಲಿ ವಾಕಥಾನ್ ಆಯೋಜಿಸಲಾಗಿತ್ತು.
ಮಹಿಳೆಯರ ಮೇಲಿನ ಹಿಂಸಾಚಾರದ ವಿರುದ್ಧ ಧ್ವನಿ ಎತ್ತಲು, ಸಮಾಜದ ಕಲ್ಯಾಣ ಕಾಪಾಡಲು ಮತ್ತು ಮಹಿಳೆಯರು ಗೌರವಯುತ ಜೀವನ ನಡೆಸುವಂತೆ ರಕ್ಷಣೆಯನ್ನು ಖಚಿತಪಡಿಸಲು ಉಪ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಮಹಿಳೆ ಒಂಟಿಯಾಗಿ ಓಡಾಡದ ಪರಿಸ್ಥಿತಿ ಇದೆ. ದರೋಡೆ, ಆತ್ಯಾಚಾರಗಳು ಹೆಚ್ಚಾಗುತ್ತಿವೆ. ಇದಕ್ಕೆ ಪರಿಹಾರವಾಗಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮಹಿಳೆಯರಿಗೆ ಸೂಕ್ತ ರೀತಿ ಭದ್ರತೆ ನೀಡುವಂತೆ ಮನವಿ ಮೂಲಕ ಆಗ್ರಹಿಸಲಾಯಿತು.
ವಾಕಥಾನ್ ನಗರದ ಸಹ್ಯಾದ್ರಿ ಶಾಲೆಯಿಂದ ಆರಂಭಗೊಂಡು ಜಾಗೃತಿ ಸಂದೇಶದ ಘೋಷಣೆಗಳನ್ನು ಸಾರಲಾಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಾಕಥಾನ್ ಸಮಾರೋಪಗೊಂಡಿತು. ಮಹಿಳೆಯರ ಮೇಲಿನ ಹಿಂಸಾಚಾರ ತಡೆಗಟ್ಟುವ ಅಗತ್ಯ ಹೇಳುವ ಬೀದಿನಾಟಕವನ್ನು ಬಿಎಸ್‌ಎಸ್ ಸರ್ಜಿ ನರ್ಸಿಂಗ್ ವಿದ್ಯಾರ್ಥಿಗಳು ಪ್ರದರ್ಶಿಸಿದರು.
Unite and Orange the World ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್, ಪಿಡಿಸಿ ವಾರಿಜಾ ಜಗದೀಶ್, ಭಾರತಿ ಚಂದ್ರಶೇಖರ್, ಇನ್ನರ್‌ವ್ಹೀಲ್ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್, ಐದು ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷರಾದ ವೀಣಾ ಸುರೇಶ್, ಅನ್ನಪೂರ್ಣ ರಂಗರಾಜನ್, ಶೀಲಾ ಸುರೇಶ್, ಲತಾ ರಮೇಶ್, ಶಾರದಾ ಬಸವರಾಜ್, ಮಹಿಳಾ ಕಲ್ಯಾಣ ಅಧಿಕಾರಿ ಶಶಿರೇಖಾ, ಕಲಾವಿದೆ ಎಂ.ವಿ.ಪ್ರತಿಭಾ, ಐದು ಕ್ಲಬ್‌ಗಳ ಸದಸ್ಯರು, ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

United Sports and Culture Club ವಾಲಿಬಾಲ್ ಪಂದ್ಯ. ಯುನೈಟೆಡ್ ಕಪ್ ವಿಜೇತರಾದ ಆದಿ ಚುಂಚನಗಿರಿ ಪ.ಪೂ. ಕಾಲೇಜಿನ ಬಾಲಕಿಯರ ತಂಡ

0

United Sports and Culture Club ಸರ್ದಾರ್ ಜಾಫರ್ ಸ್ಮರಣಾರ್ಥವಾಗಿ ನಾಲ್ಕನೇ ವರ್ಷದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜಿನ ಬಾಲಕ,ಬಾಲಕಿಯರಿಗಾಗಿ ಯುನೈಟೆಡ್ ಕಪ್ ವಾಲಿಬಾಲ್ ಕ್ರೀಡಾಕೂಟವನ್ನು ನೆಹರೂ ಕ್ರೀಡಾಂಗಣದಲ್ಲಿ ಯುನೈಟೆಡ್ ಸ್ಪೋರ್ಟ್ಸ್ ಅಂಡ್ ಕಲ್ಚರ್ ಕ್ಲಬ್, ಶಿವಮೊಗ್ಗ. ಹಾಗೂ ಜಿಲ್ಲಾ ವಾಲಿಬಾಲ್ ಸಂಸ್ಥೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ಭಾಗವಹಿಸಿ,ಉತ್ತಮ ಆಟದ ಪ್ರದರ್ಶನ ನೀಡಿ, ಉತ್ತಮ ದಾಳಿ, ಅಷ್ಟೇ ರಕ್ಷಣಾತ್ಮಕ ಆಟದ ಪ್ರದರ್ಶನ ನೀಡಿ, ಬಾಲಕಿಯರು ಅಂತಿಮ ಪಂದ್ಯದಲ್ಲಿ ಉತ್ತಮ ಜೊತೆ ಆಟದ ಪ್ರದರ್ಶನ ನೀಡಿ, ಪ್ರಥಮ ಬಹುಮಾನವನ್ನು ತಮ್ಮದಾಗಿಸಿಕೊಂಡಿರುತ್ತಾರೆ. ಅತ್ಯಾಕರ್ಷಕ ಟ್ರೋಪಿ ಮತ್ತು 7777 ರೂಗಳ ನಗದು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿರುತ್ತಾರೆ.
ಬಾಲಕರ ವಿಭಾಗದಲ್ಲಿ ಉತ್ತಮವಾದ ಪ್ರದರ್ಶನ ನೀಡಿ, ಮೂರನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿರುತ್ತಾರೆ.ಟ್ರೋಫಿ ಮತ್ತು 3333 ನಗದು ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ.
ಬೆಸ್ಟ್ ಆಲ್ ರೌಂಡರ್ ಆಗಿ ಮಾನಸಿ, ಬೆಸ್ಟ್ ಪಾಸರ್ ಯಶಸ್ವಿನಿ ಪಡೆದುಕೊಂಡರೆ, ಬಾಲಕರ ವಿಭಾಗದಲ್ಲಿ ಹರ್ಷ ಕೆ. ಬೆಸ್ಟ್ ಲಿಬ್ರೋ ಆಗಿ ಹೊರಹೊಮ್ಮಿರುತ್ತಾನೆ.
United Sports and Culture Club ಕ್ರೀಡಾಪಟುಗಳ ಮುಂದಿನ ಕ್ರೀಡಾ ಜೀವನ ಯಶಸ್ವಿಯಾಗಲಿ ಎಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲ ಎಸ್. ವಿ. ಗುರುರಾಜ್, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

Dinesh Gundu Rao ಶಿವಮೊಗ್ಗ ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಅಗತ್ಯ ಕ್ರಮ ಕೈಗೊಳ್ಳಿ- ದಿನೇಶ್ ಗುಂಡೂರಾವ್

0

Dinesh Gundu Rao ಶಿವಮೊಗ್ಗ ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಅಗತ್ಯವಾದ ಎಲ್ಲ‌ ಕ್ರಮ ವಹಿಸಬೇಕು. ಜೊತೆಗೆ ಲಿಂಗಾನುಪಾತ ಸಮತೋಲನವಾಗಿರುವಂತೆ ನೋಡಿಕೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡಿಹೆಚ್ ಓ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಸ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಯಿ ಮತ್ತು ಶಿಶು‌ ಮರಣ ಪ್ರಮಾಣ ತಗ್ಗಿಸಲು ಹೈರಿಸ್ಕ್ ಗರ್ಭಿಣಿಯರ ಕುರಿತು ಕಡ್ಡಾಯವಾಗಿ ಶೇ.100 ಟ್ರಾಕ್ ಆಗಬೇಕು. ಎಎನ್ ಸಿ‌ನೋಂದಣಿ ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಆಗುವಂತೆ ನೋಡಿಕೊಳ್ಳಬೇಕು. ತಾಯಿ ಮರಣ ಪ್ರಮಾಣ 80 ಇದ್ದು ಹೊರ ಜಿಲ್ಲೆಗಳ ಗಂಭೀರ ಪ್ರಕರಣಗಳಿಂದಾಗಿ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ಶಿಶು ಮರಣ 15.1 ಇದ್ದು, ಕಳೆದ ಸಾಲಿಗಿಂತ ಕಡಿಮೆ ಆಗಿದೆ. ತಾಯಿ ಮತ್ತು ಶಿಶು
ಮರಣ ಪ್ರಮಾಷ ರಾಜ್ಯ ಸರಾಸರಿಗಿಂತ ಹೆಚ್ಚಿದ್ದು ಇದನ್ನು ಕಡಿತಗೊಳಿಸಲು ಸೂಕ್ತ ಕ್ರಮ‌ಕೈಗೊಳ್ಳಬೇಕೆಂದು ಸೂಚಿಸಿದರು.

ಲಿಂಗಾನುಪಾತ ಸರಿಯಾಗಿರುವಂತೆ ನೋಡಿಕೊಳ್ಳಬೇಕು. ಸೊರಬ, ಶಿವಮೊಗ್ಗ, ಭದ್ರಾವತಿ ಕಡಿಮೆ ಇದ್ದು ಯಾಕೆಂದು ತಿಳಿದು ಕ್ರಮ‌ ವಹಿಸಬೇಕು. ಲಿಂಗ ಪತ್ತೆ ಹಚ್ಚುವ ಕಾರ್ಯವೆಲ್ಲಾದರೂ ನಡೆಯುತ್ತಿದೆಯೋ ಎಂದು ಪತ್ತೆ ಹಚ್ಚಬೇಕು. ಎಎನ್ಸಿ ನೋಂದಣಿ ಕಡ್ಡಾಯವಾಗಿ ಮಾಡಿಸಿ. ವಿಳಂಬ ನೋಂದಣಿಯಲ್ಲಿ ಲಿಂಗಾನುಪಾತ ಪತ್ತೆ ಹಚ್ಚಿ ವರದಿ ನೀಡುವಂತೆ ತಿಳಿಸಿದರು.

ಸಿಹೆಚ್ ಸಿ ಗಳಲ್ಲಿ ಹೆರಿಗೆ ಪ್ರಮಾಣ ಕಡಿಮೆ ಇದೆ. ಹೆರಿಗೆ ಅತಿ ಕಡಿಮೆ ಇರುವ ಸಿಹೆಚ್ ಸಿಯಿಂದ ಪ್ರಸೂತಿ‌ ಮತ್ತು ಅರವಳಿಕೆ ತಜ್ಞ ವೈದ್ಯರನ್ನು‌ತಾಲ್ಲೂಕು ಆಸ್ಪತ್ರೆಗಳಿಗೆ ವರ್ಗಾಯಿಸಿ 24/7 ಕೆಲಸ ಮಾಡುವಂತೆ ಕ್ರಮ‌ವಹಿಸಬಹುದು ಎಂದ ಅವರು ತಾಲ್ಲೂಕು ಆಸ್ಪತ್ರೆಗಳನ್ನು ಹೆಚ್ಚಿನ ಮಟ್ಟದಲ್ಲಿ ಸುಧಾರಣೆ ಮಾಡಬೇಕು. ಆಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೂ ಹೊರೆ ಕಡಿಮೆ ಆಗುತ್ತದೆ ಎಂದರು.

ಜಿಲ್ಲೆಯಲ್ಲಿ 14887 ಹೆರಿಗೆ ಆಗಿದ್ದು, 52.21 % ಸಿಜೇರಿಯನ್ ಶಸ್ತ್ರ ಚಿಕಿತ್ಸೆ ನಡೆದಿದೆ. ಜಿಲ್ಲೆಯಲ್ಲಿ ಎಂಆರ್ ೧, ೨ ನೇ ಡೋಸ್ ಲಸಿಕೆ 91% ಆಗಿದೆ. ರಾಜ್ಯ ಸರಾಸರಿ 95% ಇದ್ದು, 95% ಆಗುವಂತೆ ಕ್ರಮ‌ಕೈಗೊಳ್ಳಬೇಕು. ಖಾಸಗಿ ಆಸ್ಪತ್ರೆಯಲ್ಲಿ ನೀಡುತ್ತಿರುವ ಎಂ ಆರ್ ಲಸಿಕೆ ಪ್ರಮಾಣವನ್ನೂ ಪರಿಶೀಲಿಸುವಂತೆ ಸೂಚಿಸಿದರು.

ನಮ್ಮ ಕ್ಲಿನಿಕ್ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಎಎಂಪಿಕೆ (ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ) ಕಾರ್ಯಕ್ರಮದಡಿ 5 ರಿಂದ 19 ರ್ಷದೊಳಗಿನ ಶಾಲಾ- ಕಾಲೇಜಿನ 114196
ಮಕ್ಕಳನ್ನು ತಪಾಸಣೆಗೆ ಒಳಡಿಸಿದ್ದು, 6.5 % ತೀವ್ರವಲ್ಲದ(ಮೈಲ್ಡ್) 5.7% ಮಧ್ಯಮ(ಮಾಡರೇಟ್) ಮತ್ತು , 0.04 ತೀವ್ರ (ಸಿವಿಯರ್) ಅನಿಮಿಯಾ ಪತ್ತೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದು, ಚಿಕಿತ್ಸೆ ಮುಗಿದ ನಂತರ ಮುಂದಿನ ತಿಂಗಳು‌ ವರದಿ ನೀಡಿ ಎಂದರು.

Dinesh Gundu Rao ಗೃಹ ಆರೋಗ್ಯ ಕಾರ್ಯಕ್ರಮದಡಿ ಜಿಲ್ಲೆಯಲ್ಲಿಆಗಸ್ಟ್ ಯಿಂದ ಸೆಪ್ಟೆಂಬರ್ವರೆಗೆ ಸಕ್ಕರೆ ಖಾಯಿಲೆ 178, ಕಿಡ್ನಿ ಖಾಯಿಲೆ 147, ಸಿಒಪಿಡಿ 36, ಅನೀಮಿಯಾ 97, ಸ್ತನ ಕ್ಯಾನ್ಸರ್ 16, ಗರ್ಭಗೊರಳಿನ ಕ್ಯಾನ್ಸರ್ 4 ಸೇರಿದಂತೆ ವಿವಿಧ ಖಾಯಿಲೆಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ಮತ್ತು ಸಲಹೆ ನೀಡಲಾಗುತ್ತಿದೆ. 14 ಆರೋಗ್ಯ ಸಮಸ್ಯೆಗಳನ್ನು ತಪಾಸಣೆಗೊಳಪಡಿಸಿ ರೋಗಿಗಳಿಗೆ ದೀರ್ಘಕಾಲದ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಗೃಹ ಆರೋಗ್ಯ ಕಾರ್ಯಕ್ರಮ ಆರಂಭಿಸಿದ್ದು ಬೇರೆ ಯಾವ ರಾಜ್ಯದಲ್ಲೂ ಇಂತಹ ಕಾರ್ಯ ಇಲ್ಲ. ಮನೆ ಮನೆಗೆ ತೆರಳಿ ಈ ಕಾರ್ಯಕ್ರಮವನ್ನು ಪರಿಣಾಮಕಾರಿಗೊಳಿಸಬೇಕು. ಸಕ್ಕರೆ ಖಾಯಿಲೆ ಮತ್ತು ಹೈಪರ್ ಟೆನ್ಶನ್ ಸಮಸ್ಯೆಗಳನ್ನು ಸಮರ್ಪಕವಾಗಿ ಸ್ಕ್ರೀನಿಂಗ್ ಮಾಡಬೇಕೆಂದು ಸೂಚನೆ ನೀಡಿದರು.

ಡಾ. ಪುನೀತ್ ಹೃದಯ ಜ್ಯೋತಿ ಕಾರ್ಯಕ್ರಮದಡಿ ಎಐ ಮೂಲಕ ಹೃದಯ ಖಾಯಿಲೆ ಪತ್ತೆ ಮಾಡಿ, ಗಂಭೀರವಾಗಿದ್ದರೆ ವೈದ್ಯರಿಗೆ ರೆಫರ್ ಮಾಡಿ ಚಿಕಿತ್ಸೆ ನೀಡಲಾಗುವುದು. ಈ ಕಾರ್ಯಕ್ರಮದಡಿ ಹಲವಾರು ಜೀವ ಉಳಿಸಲಾಗಿದ್ದು ಈ ಬಾರಿ
ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೂ ಈ ಕಾರ್ಯಕ್ರಮ ವಿಸ್ತರಿಸಲಾಗುವುದು ಎಂದರು.

ಕೆಎಫ್ ಡಿ ಎಚ್ಚರ ವಹಿಸಿ :
ಈ ಬಾರಿ ಕೆಎಫ್ ಡಿ ನಿಯಂತ್ರಣಕ್ಕೆ ಅತಿ ಎಚ್ಚರಿಕಯಿಂದ ಈಗಿನಿಂದಲೇ ಕಾರ್ಯೋನ್ಮುಖರಾಗಬೇಕು ಎಂದು ಸಚಿವರು ಸೂಚನೆ ನೀಡಿದರು.

2025 ನೇ ಸಾಲಿನಿಂದ ಇಲ್ಲಿಯವರೆಗೆ ಕೆಎಫ್ ಡಿ ಪತ್ತೆಗೆ 7155 ಪರೀಕ್ಷೆ ನಡೆಸಲಾಗಿದ್ದು 72 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 02 ಮರಣ ಸಂಭವಿಸಿರುತ್ತದೆ. 450 ಉಣ್ಣೆ ಸಂಗ್ರಹ, 229 ಮಂಗಗಳ ಸಾವು ಸಂಭವಿಸಿದೆ ಎಂದು ವಿಡಿಎಲ್ ನ ಡಿಸಿಎಂಒ ಡಾ.ಹರ್ಷವರ್ದನ್ ತಿಳಿಸಿದರು.
ಸಚಿವತು, ಮಂಗನ ಸಾವು ಕುರಿತು ಕೂಡಲೇ ವರದಿ‌ ಮಾಡಬೇಕು. ಕೆಎಫ್ ಡಿ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ಕ್ರಮ‌ವಹಿಸಬೇಕು.ಈ ವರ್ಷ ಬಹಳ ಜಾಗೃತೆಯಿಂದ ಇದ್ದು ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಕೆಎಫ್ ಡಿ ಪರೀಕ್ಷೆಗೆ ಶಿರಸಿ ಯಲ್ಲಿ ಪ್ರಯೋಗಾಲಯ ಆರಂಭಿಸಲು ಅನುಮತಿ ದೊರೆತಿದ್ದು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಈವರೆಗೆ 143 ಡೆಂಗಿ, ಚಿಗುನ್ ಗುನ್ಯ 64 ಮತ್ತು ಮಲೇರಿಯಾ 31 ಪ್ರಕರಣಗಳು ದಾಖಲಾಗಿದೆ. ಟಿಬಿ ಪರೀಕ್ಷೆಯಲ್ಲಿ
99% ಪ್ರಗತಿ ಸಾಧಿಸಲಾಗಿದ್ದು 1492 ಜನ ಚಿಕಿತ್ಸೆಯಲ್ಲಿದ್ದಾರೆ.
ಕುಷ್ಟರೋಗ 32 ಪಾಸಿಟಿವ್ ಇದಗದು ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ 72% ಸಾಧನೆ ಮಾಡಲಾಗಿದೆ.

ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಕನ್ನಡಕ ನೀಡುವ ಆಶಾಕಿರಣ ಕೇಂದ್ರಗಳನ್ನು ರಾಜ್ಯಾದ್ಯಂತ ತೆರೆಯಲಾಗಿದ್ದು ಜಿಲ್ಲೆಯ ೧೪ ಕಡೆ ಮತ್ತು ರಾಜ್ಯದಲ್ಲಿ 398 ಕೇಂದ್ರಗಳನ್ನು ತೆರೆಯಲಾಗಿದೆ.
ಎಲ್ಲ ತಾಲ್ಲೂಕು ಆಸ್ಪತ್ರಯಲ್ಲಿ ಇಬ್ಬರು ಪ್ರಸೂತಿ ಮತ್ತು ಅರವಳಿಕೆ ತಜ್ಞರು ನೇಮಕ ಮಾಡಲು‌ಕ್ರಮ ವಹಿಸಲಾಗುವುದು ಎಂದರು.

ಸಭೆಯಲ್ಲಿ‌ಎನ್ ಸಿಡಿ ಉಪನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಡಾ.ರಘುನಂದನ್,
ಡಿಹೆಚ್ ಒ ಡಾ.ನಟರಾಜ್, ಎನ್ ವಿಬಿಡಿಸಿಪಿ ಅಧಿಕಾರಿ ಡಾ.ಗುಡುದಪ್ಪ ಕಸಬಿ, ಡಿಎಸ್ ಓ ಡಾ.ನಾಗರಾಜ ನಾಯ್ಕ್ , ಆರ್ ಸಿ ಹೆಚ್ ಒ ಡಾ.ಮಲ್ಲಪ್ಪ, ಡಿಎಲ್ ಒ ಡಾ.ಕಿರಣ್,
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಜರಿದ್ದರು.

Madhu Bangarappa ಜಿಪಂ/ ತಾಪಂ / ಗ್ರಾಪಂ/ನಗರ ಸ್ಥಳೀಯ ಸಂಸ್ಥೆಗಳ ವಾರ್ಷಿಕ ಕರಡು ಯೋಜನೆಗೆ ಅನುದಾನಕ್ಕೆ ಬೇಡಿಕೆ- ಮಧು ಬಂಗಾರಪ್ಪ

0

Madhu Bangarappa 2026-27 ನೇ ಸಾಲಿಗೆ ಜಿಲ್ಲಾ ಪಂಚಾಯತ್, ತಾ.ಪಂ, ಗ್ರಾ.ಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಷಿಕ ಕರಡು ಅಭಿವೃದ್ದಿ ಯೋಜನೆಗೆ ರೂ. 68 ಸಾವಿರ ಕೋಟಿ ಅನುದಾನ ಬೇಡಿಕೆಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.
ಶುಕ್ರವಾರ ಜಿ.ಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಯೋಜನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ವಿವಿಧ ಇಲಾಖೆಗಳಡಿ ಮೂಲಭೂತ ಸೌಕರ್ಯ ಹಾಗೂ ಅಭಿವೃದ್ದಿ ಕಾಮಗಾರಿಗಳಿಗೆ ರೂ.68 ಸಾವಿರ ಕೋಟಿ ಅನುದಾನ ಬೇಡಿಕೆ ಕುರಿತು ಸಭೆ ಚರ್ಚೆ ನಡೆಸಲಿದೆ ಎಂದರು.
ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಮಾತನಾಡಿ, ಯೋಜನಾ ಸಮಿತಿ ಸಭೆಗೆ ಸಂಬಂಧಿಸಿದಂತೆ ತಾಲ್ಲೂಕುಗಳಲ್ಲಿ ಪೂರ್ವಭಾವಿ ಸಭೆ ಆಗಿಲ್ಲ. ಶಾಸಕರ ಅನುಮೋದನೆ ಪಡೆದಿಲ್ಲ. ಆದ್ದರಿಂದ ತಾಲ್ಲೂಕು ಇಓ ಗಳು ಜಿಲ್ಲಾ ಸಭೆ ಕುರಿತು ಶಾಸಕರ ಗಮನಕ್ಕೆ ತಂದು ಜಿಲ್ಲಾ ಯೋಜನಾ ಸಮಿತಿ ಸಭೆ ಮಾಡಬೇಕೆಂದರು.
ಶಾಸಕರಾದ ಶಾರದಾ ಪೂರ್ಯಾಯ್ಕರವರು ಮಾತನಾಡಿ, ಜಿಲ್ಲಾ ಯೋಜನಾ ಸಮಿತಿ ಸಭೆಯನ್ನು ವ್ಯವಸ್ಥಿತವಾಗಿ ಮಾಡಬೇಕು ಎಂದು ಸಲಹೆ ನೀಡಿದರು.
ಸಚಿವರು ಪ್ರತಿಕ್ರಿಯಿಸಿ, ತಾಲ್ಲೂಕುಗಳಲ್ಲಿ ಸೋಮವಾರವೇ ಕರಡು ಅಭಿವೃದ್ದಿ ಯೋಜನೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿ, ಶಾಸಕರ ಅನುಮೋದನೆ ಪಡೆದ ನಂತರ ಜಿಲ್ಲಾ ಸಭೆ ನಡೆಸೋಣ ಎಂದರು.
ಜಿ.ಪಂ ಯೋಜನಾ ನಿರ್ದೇಶಕ ಹನುಮನಾಯಕ್ ಮಾತನಾಡಿ, ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಿಂದ ಆರು ಜನ ಸದಸ್ಯರು ಸಮಿತಿಗೆ ಅವಿರೋಧ ಆಯ್ಕೆಯಾಗಿದ್ದು, ಸಮಿತಿ ಸಭೆಗೂ ಮುನ್ನ ಮೂರು ಹಂತದಲ್ಲಿ ಕ್ರಿಯಾ ಯೋಜನೆ ರೂಪಿಸಲಾಗುತ್ತದೆ ಎಂದು ತಿಳಿಸಿದರು.
ಜಿ.ಪಂ ಸಿಇಓ ಹೇಮಂತ್ ಎನ್ ಮಾತನಾಡಿ, ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮಿಷನ್ ಸುರಕ್ಷಾ ಅಭಿಯಾನ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಕಳೆದ 5 ತಿಂಗಳಿಂದ ಸತತವಾಗಿ ಜಾಗೃತಿ ಮೂಡಿಸಲಾಗುತ್ತಿದ್ದು ಸೆಪ್ಟೆಂಬರ್ ಮಾಹೆಯಿಂದ ಇಲ್ಲಿಯವೆಗೆ 25 ಬಾಲ್ಯ ವಿವಾಹಗಳನ್ನು ತಡೆಗಟ್ಟಲಾಗಿದೆ. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ 22 ಕ್ರಿಯಾ ಯೋಜನೆ ರೂಪಿಸಿ ಕ್ರಮ ವಹಿಸಲಾಗುತ್ತಿದೆ. ಗ್ರಾಮಗಳಲ್ಲಿ ಹೆಚ್ಚಿನ ಸಮಸ್ಯೆ ಇರುವ ಮಕ್ಕಳನ್ನು ಗ್ರಾ.ಪಂ ವತಿಯಿಂದ ದತ್ತು ತೆಗೆದುಕೊಳ್ಳಲಾಗುತ್ತಿದೆ ಎಂದರು.
Madhu Bangarappa ದಸರಾ ಶಿಬಿರದಲ್ಲಿ ‘ನಮ್ಮ ಊರು ನಮ್ಮ ಬೇರು’ ಕಾರ್ಯಕ್ರಮದಡಿ ಗ್ರಾ.ಪಂ ಗಳ ಗ್ರಂಥಾಲಯಲಕ್ಕೆ ಬರುವ ಮಕ್ಕಳಿಂದ ರಾಜಕೀಯ, ಆಡಳಿತ, ಸಾಮಾಜಿಕ, ಆರ್ಥಿಕ, ನಾಗರೀಕರತೆ ಹೀಗೆ ವಿವಿಧ ವಿಷಯಗಳನ್ನೊಳಗೊಂಡ ‘ಪರಂಪರೆ’ ಎಂಬ ಪುಸ್ತಕವನ್ನು ಗ್ರಾ.ಪಂ ಗಳ ಗ್ರಂಥಾಲಯಗಳಿಂದ ಪ್ರಕಟಿಸಿದ್ದು, ಅತ್ಯುತ್ತಮವಾಗಿ ಪ್ರಕಟಿಸಿದ ನಾಲ್ಕು ಗ್ರಾ.ಪಂ ಗ್ರಂಥಾಲಯಗಳಾದ ಹೊಸನಗರದ ಹರಿದ್ರಾವತಿ ಗ್ರಾ.ಪಂ, ಸಾಗರದ ಹಿರೇನಲ್ಲೂರು ಗ್ರಾ.ಪಂ, ತೀರ್ಥಹಳ್ಳಿಯ ಬೆಜ್ಜವಳ್ಳಿ ಹಾಗೂ ಸೊರಬದ ಕುಪ್ಪೆಗುಡ್ಡೆ ಗ್ರಾ.ಪಂ ಗ್ರಂಥಾಲಯಗಳಿಗೆ ಪ್ರಶಸ್ತಿಯನ್ನು ಇದೇ ಸಂದರ್ಭದಲ್ಲಿ ನೀಡಿ ಗೌರವಿಸಲಾಯಿತು.
ಸಭೆಯಲ್ಲಿ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಎಸ್.ಎನ್.ಚನ್ನಬಸಪ್ಪ, ಎಂಎಡಿಬಿ ಅಧ್ಯಕ್ಷರಾದ ಆರ್ ಎಂ ಮಂಜುನಾಥ ಗೌಡ, ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಗಳು ಹಾಜರಿದ್ದರು.

Adarsh ​​Super Specialty Eye Hospital ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉತ್ತಮ ಜೀವನ ಶೈಲಿ ರೂಢಿಸಿಕೊಳ್ಳಬೇಕು- ಜಿ.ವಿಜಯ ಕುಮಾರ್

0

Adarsh ​​Super Specialty Eye Hospital ಸಕ್ಕರೆ ಕಾಯಿಲೆಯಿಂದ ನಿಮ್ಮ ದೃಷ್ಟಿ ಹಾನಿಯಾಗದಂತೆ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಹೇಳಿದರು.

ಶಿವಮೊಗ್ಗ ನಗರದ ಆದರ್ಶ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ವತಿಯಿಂದ ಲಕ್ಷ್ಮೀದೇವಿ ಚಿಟ್ಟ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಡಯಾಬಿಟಿಸ್ ಸಂಬಂಧಿತ ಕಣ್ಣಿನ ರೆಟಿನಾ ತಪಾಸಣಾ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉತ್ತಮ ಜೀವನಶೈಲಿ ರೂಢಿಸಿಕೊಳ್ಳಬೇಕು. ಪೂರಕವಾದ ಆಹಾರಕ್ರಮವನ್ನು ಪಾಲಿಸಬೇಕು ಎಂದು ತಿಳಿಸಿದರು.

ಆದರ್ಶ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ರೆಟಿನಾ ತಜ್ಞೆ ಡಾ. ದೀಪಾ ಎಂ.ಜೆ. ಮಾತನಾಡಿ, ದೀರ್ಘಕಾಲದ ಸಕ್ಕರೆ ಕಾಯಿಲೆಯಿಂದ ಕಣ್ಣಿನ ರೆಟಿನಾದ ರಕ್ತನಾಳಗಳು ಹಾನಿಗೊಳ್ಳುತ್ತವೆ. ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ದೃಷ್ಟಿ ಹಾನಿಯಾಗಬಹುದು ಅಥವಾ ಕುರುಡುತನ ಉಂಟಾಗಬಹುದು ಎಂದು ಹೇಳಿದರು.

ಟೈಪ್ 1 ಅಥವಾ ಟೈಪ್ 2 ಡಯಾಬಿಟಿಸ್ ಇರುವವರಿಗೆ, ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಿದ್ದರೆ, ಬಿಪಿ ನಿಯಂತ್ರಣದಲ್ಲಿ ಇಲ್ಲದಿದ್ದರೆ, ದೀರ್ಘಕಾಲದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರೆ, ಧೂಮಪಾನಿಗಳು ಮತ್ತು ರಕ್ತದಲ್ಲಿ ಕೊಬ್ಬಿನಾಂಶ ಇದ್ದರೆ ಅಪಾಯ ಹೆಚ್ಚಿರುತ್ತದೆ ಎಂದರು.

Adarsh ​​Super Specialty Eye Hospital ಏಕಾಏಕಿ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ದೃಷ್ಟಿ ಅಸ್ಪಷ್ಟವಾಗುವುದು ಅಥವಾ ಬದಲಾವಣೆ ಕಾಣುವುದು. ಕಣ್ಣ ಮುಂದೆ ಕಪ್ಪು ಕಲೆಗಳು ಕಾಣುವುದು. ರಾತ್ರಿ ಸಮಯದಲ್ಲಿ ದೃಷ್ಟಿ ಕಡಿಮೆ ಆಗುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದರು.
ಆರಂಭಿಕ ಹಂತಗಳಲ್ಲಿ ಯಾವುದೇ ಲಕ್ಷಣಗಳು ಕಾಣಿಸದೇ ಇರಬಹುದು. ಆದರೆ ನಿಯಮಿತ ಕಣ್ಣಿನ ತಪಾಸಣೆ ಮುಖ್ಯ ಎಂದರು. ಮಧುಮೇಹ ಇರುವ ರೋಗಿಗಳಿಗೆ ಕಣ್ಣಿನ ತಪಾಸಣೆ, ಡಯಾಬಿಟಿಕ್ ರೆಟಿನೋಪತಿ ಬಗ್ಗೆ ತಜ್ಞ ವೈದ್ಯರಿಂದ ಉಚಿತ ಸಮಾಲೋಚನೆ ನಡೆಸಲಾಯಿತು.

ಡಾ. ಮೇಘರಾಜ್ ಚಿಟ್ಟ, ಡಾ. ಅಶೋಕ್ ಟಿ., ಮಲ್ಲಿಕಾರ್ಜುನ್ ಕಾನೂರು ಮತ್ತಿತರರು ಉಪಸ್ಥಿತರಿದ್ದರು.

B.Y.Raghavendra ರೈತರಿಗೆ ಕೆಲವು ಬೆಳೆಗಳಿಗೆ ವಿಮಾ ಪರಿಹಾರ ಇನ್ನೂ ಸಿಕ್ಕಿಲ್ಲ-ಸಂಸದ ಬಿ.ವೈ.ರಾಘವೇಂದ್ರ

0

B.Y.Raghavendra ಶಿವಮೊಗ್ಗ ‌ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರಯವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಘೋಷಣೆ ಮಾಡಿದ್ದರು.ಆ 2024-25 ಪ್ರಕಾರ ಜಿಲ್ಲೆಯ 89,611ರೈತರಿಗೆ 113 ಕೋಟಿ 25 ಲಕ್ಷ ಪರಿಹಾರ ಬಿಡುಗಡೆ ಆಗಿದೆ ಎಂದರು.

ಅಡಕೆ, ಮಾವು, ಕಾಳು ಮೆಣಸು ಬೆಳೆಗಳಿಗೆ ವಿಮೆ ಸಿಕ್ಕಿದೆ.ಅದರೆ ಕೆಲವೆಡೆ ದೂರು ಬರುತ್ತಿದೆ.ರೈತರು ತಾವು ಕಟ್ಟಿದ ಪ್ರಿಮೀಯಂ‌ ಕಂತಿನ ಹಣದಷ್ಟೂ ಪರಿಹಾರ ಸಿಕ್ಕಿಲ್ಲ ಎಂದು ದೂರುತ್ತಿದ್ದಾರೆ.
ಈ ಬಗ್ಗೆ ರೈತರೊಂದಿಗೆ ಸಭೆ ನಡೆಸಿದಾಗ ಶಿವಮೊಗ್ಗ ಕ್ಷೇತ್ರಕ್ಕೆ ಇನ್ನೂ 100 ಕೋಟಿಯಷ್ಟು ಪರಿಹಾರ ಬೇಕಿತ್ತು ಎಂದು ಹೇಳಿದರು.

ಪ್ರತಿ ೩ ವರ್ಷಕ್ಕೊಮ್ಮೆ ಸಿದ್ಧಪಡಿಸುವ ಟರ್ಮ್ ಶೀಟ್ ನಲ್ಲಿ ೩ ಸೆ.ಮೀ. ಮಳೆ ೧೦ ದಿನ‌ ನಿಗದಿಪಡಿಸಲಾಗಿದೆ.
ಆದರೆ ಅದಕ್ಕಿಂತ ಹಿಂದೆ ೩ ಸೆ.ಮೀ.ಮಳೆ ೫ ದಿನ ಬೀಳಬೇಕು ಎಂದಿತ್ತು.
ಜಿಲ್ಲೆಯ ಬಹಳಷ್ಟು ಮಳೆ ಮಾಪನ ಕೇಂದ್ರಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಹೇಳಿದರು.

ಇದರಿಂದಾಗಿ ವಿಮೆ ಕಂಪನಿಗಳಿಗೆ ಲಾಭ ಅಗುತ್ತಿದೆ, ರೈತರಿಗೆ ಅನ್ಯಾಯ ಆಗುತ್ತಿದೆ.
ನಮ್ಮ ಪಕ್ಷದ ವತಿಯಿಂದ ಈ ಬಗ್ಗೆ ಗಮನ‌ ಹರಿಸಲಾಗುತ್ತದೆ.
ನಾನೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ತಿಳಿಸಿದರು.

ಉತ್ತರ ಕರ್ನಾಟಕ ರೈತರಿಗೆ ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ಪ್ರೀಮಿಯಂ‌ನ್ನು ನಮ್ಮ ಜಿಲ್ಲೆಯ ರೈತರು ಪಾವತಿಸಿದ್ದಾರೆ.
ಕೆಡಿಪಿ ಸಭೆಯಲ್ಲಿ ಮಳೆ ಮಾಪನ ಕೇಂದ್ರದ ಸ್ಥಿತಿಗತಿ ಬಗ್ಗೆ ಚರ್ಚೆ ನಡೆದಿದೆ.
ಆದರೂ ಯಾವುದೇ ದುರಸ್ತಿ ಕೆಲಸ ಆಗಿಲ್ಲ.ಇದರಿಂದಾಗಿ ನಮ್ಮ ರೈತರಿಗೆ ಅನ್ಯಾಯ ಆಗುತ್ತಿದೆ, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.

B.Y.Raghavendra ವಿಐಎಸ್ಎಲ್ ಅಭಿವೃದ್ಧಿ ಕುರಿತು ಕೇಂದ್ರ ಸಚಿವ ಕುಮಾರಸ್ವಾಮಿ ಕಾರ್ಖಾನೆಗೆ ಭೇಟಿ ನೀಡಿದ್ದಾರೆ.ಅಭಿವೃದ್ಧಿ ಕುರಿತು ಮೆಕಾನ್ ಸಂಸ್ಥೆಗೆ ವಹಿಸಲಾಗಿದೆ. ಅದೇ ರೀತಿ ಮೆಟಿರಿಯಲ್ಸ್ ಖರೀದಿಗೆ ಮೆಗಾನೆ ಸಂಸ್ಥೆಯನ್ನು ನಿಗದಿ ಮಾಡಿದೆ. ಕಾರ್ಖಾನೆಯ ವಿವಿಧ ವಿಭಾಗವನ್ನು ಏಕ ಕಾಲಕ್ಕೆ ಆರಂಭಿಸುವ ಚಿಂತನೆ ಇದೆ ಎಂದರು.

Shivamogga Trupti Clinic ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಜ್ಞಾನ, ವಿಜ್ಞಾನ‌ & ಸಂಸ್ಕಾರ ಅತಿ ಮುಖ್ಯ- ಎ.ಎಸ್.ಚಂದ್ರಶೇಖರ್

0

Shivamogga Trupti Clinic ವಿದ್ಯಾರ್ಥಿಗೆ ಶಿಕ್ಷಣ ಪಡೆಯುವುದು ಮಾತ್ರ ಮುಖ್ಯವಲ್ಲ ಅದರ ಜೊತೆ ಜ್ಞಾನ ವಿಜ್ಞಾನ ಹಾಗೂ ಸಂಸ್ಕಾರ ಅತಿ ಮುಖ್ಯ ಎಂದು ಶಿವಮೊಗ್ಗದ ತೃಪ್ತಿ ಕ್ಲಿನಿಕ್ ನ ಕಿಡ್ನಿ ಹಾಗೂ ಮೂತ್ರ ಕೋಶ ಶಸ್ತ್ರ ಚಿಕಿತ್ಸಕರಾದ ಡಾ. ಎಸ್. ಚಂದ್ರಶೇಖರ್ ತಿಳಿಸಿದರು.

ಅವರು ಶಿವಮೊಗ್ಗ ಅನುಪಿನಕಟ್ಟೆಯಲ್ಲಿರುವ ಶ್ರೀ ರಾಮಕೃಷ್ಣ ಗುರುಕುಲ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಜ್ಞಾನ ವಿಜ್ಞಾನ ಹಾಗೂ ಸೃಜನಶೀಲ ದಿನಾಚರಣೆ ಯನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದ ಜೊತೆ ಜೊತೆಗೆ ಜ್ಞಾನ ಮತ್ತು ಸಂಸ್ಕಾರದ ಪರಿಪಾಠವನ್ನು ಶಿಕ್ಷಕರು ಹಾಗೂ ಪೋಷಕರು ನೀಡುವುದು ಅತ್ಯಗತ್ಯ ಈ ಮೂರರಿಂದ ಆ ಮಗು ಉನ್ನತ ಮಟ್ಟದಲ್ಲಿ ಗುರುತಿಸಿಕೊಂಡು ಬೆಳೆದು ಸಾಧನೆಯ ತೋರಲು ಸಾಧ್ಯ ಎಂದರು. ನಯ ವಿನಯ ಸಭ್ಯತೆ ಹಾಗೂ ಸಂಸ್ಕೃತಿ ನಮ್ಮ ಪರಿಪಾಠವಾಗಬೇಕು ಎಲ್ಲದನ್ನು ತಿಳಿದುಕೊಳ್ಳಲು ಕೇಳುವ ಮನೋಭಾವ ಮನೋಸ್ಥಿತಿ ನಮ್ಮಲ್ಲಿ ಬೆಳೆಯಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಮಕ್ಕಳ ಬೇಕು- ಬೇಡಗಳನ್ನು ನಾವು ಅವಲೋಕಿಸಿ ಅವರನ್ನು ಕಲಿಕೆಯತ್ತ ಹಾಗೂ ಸೃಜನಶೀಲತೆಯತ್ತ ಬೆಳೆಸಿದಾಗ ಅವರ ಜೀವನ ಸಮರ್ಪಕವಾಗುತ್ತದೆ ಹಾಗೂ ಹೊಸ ಸಾಧನೆಗೆ ದಾರಿದೀಪವಾಗುತ್ತದೆ.

ಈ ನಿಟ್ಟಿನಲ್ಲಿ ರಾಮಕೃಷ್ಣ ವಿದ್ಯಾಸಂಸ್ಥೆ ಆರಂಭದಿಂದಲೂ ಎಲ್ಲಾ ಶಾಲೆಗಳಲ್ಲಿ ಪ್ರತಿವರ್ಷ ಇಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದೆ ಎಂದು ಹೇಳಿದರು.

Shivamogga Trupti Clinic ಕಾರ್ಯಕ್ರಮದಲ್ಲಿ ಸಂಚಾಲಕರಾದ ಎಚ್. ಕೆ. ಅರುಣ್ ಹಾಗೂ ಕೆ.ಡಿ. ಶರತ್ ಮತ್ತು ಮುಖ್ಯ ಶಿಕ್ಷಕರಾದ ವೆಂಕಟೇಶ್, ತೀರ್ಥೇಶ್, ಗಜೇಂದ್ರನಾಥ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಠ್ಯ ವಿಷಯಗಳಿಗೆ ಸಂಬಂಧಪಟ್ಟಂತೆ ವಿಜ್ಞಾನ, ಗಣಿತ, ಸಮಾಜ ಹಾಗೂ ಭಾಷೆಯ ಮಾಡಲ್ ಪ್ರದರ್ಶನಗಳೊಂದಿಗೆ ಚಿತ್ರಕಲೆ, ಅಕ್ಷರ ಬರಹ ಸೇರಿದಂತೆ 2100 ಕ್ಕೂ ಹೆಚ್ಚು ಮಾಡೆಲ್ ಗಳು ಅತ್ಯಂತ ವಿಶೇಷವಾಗಿದ್ದವು.

ಆರೋಗ್ಯ ಸಂಪತ್ತಿನ ಮುಂದೆ ಬೇರೆ ಸಂಪತ್ತು ಯಾವುದೂ ಇಲ್ಲ- ವಾಗ್ದೇವಿ ಬಸವರಾಜ್

0

ಆರೋಗ್ಯ ಸಂಪತ್ತಿನ ಮುಂದೆ ಬೇರೆ ಸಂಪತ್ತು ಯಾವುದು ಇಲ್ಲ ಪ್ರತಿಯೊಬ್ಬರೂ ಸಕಾಲದಲ್ಲಿ ನಿರಂತರವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಸೂಕ್ತ ಆಧುನಿಕ ಯುಗದಲ್ಲಿ ದೈಹಿಕ ಚಟುವಟಿಕೆ ಇಲ್ಲದಿರುವುದು ಹಾಗೂ ಒತ್ತಡದ ಜೀವನದಲ್ಲಿ ಬದುಕುತ್ತಿರುವ ನಾವುಗಳು ಆರೋಗ್ಯವನ್ನು ಸರಿಯಾಗಿ ಇಟ್ಟುಕೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ವಾಗ್ದೇವಿ ಬಸವರಾಜ್ ಅವರು ನುಡಿದರು.

ಅವರು ಶಕ್ತಿಧಾಮ ಬಡಾವಣೆಯ ನಮ್ಮ ಕ್ಲಿನಿಕ್ ನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗ ಉಚಿತ ಆರೋಗ್ಯ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಿಳೆಯರು ತಮ್ಮ ಮನೆಯ ಒತ್ತಡದ ಕೆಲಸದಲ್ಲಿ ಆರೋಗ್ಯದ ಕಡೆ ಗಮನಹರಿಸುವುದು ಕಡಿಮೆಯಾಗಿ ಸಾಕಷ್ಟು ತೊಂದರೆಗಳನ್ನು ಅನುಭವಿಸುವುದನ್ನು ನೋಡುತ್ತಾ ಬಂದಿದ್ದೇವೆ ಇಂತಹ ಆರೋಗ್ಯ ತಪಾಸಣಾ ಶಿಬಿರಗಳನ್ನು ಸಾರ್ವಜನಿಕರು ಸದಾ ಉಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಡಾಕ್ಟರ್ ಗುಡದಪ್ಪ ಕಸಬಿ ಯವರು ಮಾತನಾಡುತ್ತಾ ನಮ್ಮ ಕ್ಲಿನಿಕ್ ನಲ್ಲಿ ಉಚಿತವಾಗಿ ವೈದ್ಯಕೀಯ ಅನುಕೂಲತೆಗಳು ಸಿಗುವದರಿಂದ ಅವುಗಳನ್ನು ಬಳಸಿಕೊಂಡು ಸದಾ ಆರೋಗ್ಯವಂತರಾಗಿ ಜೀವನ ನಡೆಸೋಣ ಪ್ರತಿನಿತ್ಯ ನಿರಂತರವಾಗಿ ಯೋಗ ಪ್ರಾಣಾಯಾಮ ಧ್ಯಾನ ವಾಕಿಂಗ್ ಇವುಗಳನ್ನು ಅಳವಡಿಸಿಕೊಳ್ಳುವುದರ ಮುಖಾಂತರ ನಾವು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಬೇಕು ಎಂದು ಕರೆ ನೀಡಿದರು.

ಶಿಬಿರದಲ್ಲಿ ಮಹಿಳಾ ಘಟಕದ ಉಪಾಧ್ಯಕ್ಷರಾದ
ಲಾವಣ್ಯ ಶಶಿಧರ್, ಪ್ರದಾನ
ಕಾರ್ಯದರ್ಶಿ ಆಶಾ ಆನಂದ್.
ಕಾರ್ಯದರ್ಶಿ ಬಿಂದು ವಿಜಯಕುಮಾರ್. ನಿರ್ದೇಶಕರುಗಳಾದ ಗೀತಾ ಬಸವ ಕುಮಾರ್. ಶಕುಂತಲಾ ಹವಳದ. ಶಶಿಕಲಾ
ಜಿಲ್ಲಾ ಘಟಕದ ಅಧ್ಯಕ್ಷರಾದ ರುದ್ರಮುನಿ ಸಜ್ಜನ್. ಮಲ್ಲಿಕಾರ್ಜುನ್ ಕಾನೂರ್.
ಜಿ ವಿಜಯಕುಮಾರ್ ಮಾಧ್ಯಮ ಘಟಕದ ಅಧ್ಯಕ್ಷರಾದ
ಸೋಮನಾಥ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸ್ವಾಶಕೋಶ ತಜ್ಞರು ಮತ್ತು ಪಿಜೆಶಿಯನ್. ಡಾಕ್ಟರ್ ಅಭಿಷೇಕ್ ನುಚ್ಚಿನ್. ಮೂಳೆ ವೈದ್ಯರಾದ ಡಾಕ್ಟರ್ ಬಿ ಸುರೇಶ್. ಪ್ರಸುತಿ ಮತ್ತು ಶ್ರೀ ರೋಗ ತಜ್ಞರಾದ ಡಾಕ್ಟರ್ ಮಾಧುರ್ಯ ಆರ್ ಎಂ
ಸಾಕಷ್ಟು ಆರೋಗ್ಯದ ಬಗ್ಗೆ ಸಲಹೆ ನೀಡಿ ತಪಾಸಣೆ ನಡೆಸಿ ಉಚಿತ ಔಷಧವನ್ನು ವಿತರಣೆ ಮಾಡಿದರು ಇನ್ನೂರಕ್ಕೂ ಹೆಚ್ಚು ಜನ ಶಿಬಿರದಲ್ಲಿ ಭಾಗವಹಿಸಿದ್ದರು.