Friday, April 3, 2026
Friday, April 3, 2026
Home Blog Page 600

Department of Fisheries ಒಳನಾಡು ಮೀನುಗಾರರಿಗೆ ಅನ್ಯಾಯವಾಗುತ್ತಿದೆ. ಸರಿಪಡಿಸಲು ಮೀನುಗಾರರ ಸಹಕಾರ ಸಂಘದ ಮನವಿ

0

Department of Fisheries ರಾಜ್ಯದ ಒಳನಾಡು ಮೀನುಗಾರರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಜಿಲ್ಲಾ ಮೀನುಗಾರರ ಸಹಕಾರ ಸಂಘಗಳ ಕ್ಷೇಮಾಭಿವೃದ್ಧಿ ಸಮಿತಿ ಒತ್ತಾಯಿಸಿದೆ.

ಮೀನುಗಾರಿಕೆ ಇಲಾಖೆಯಿಂದ ಸೌಲಭ್ಯ ನೀಡುವಲ್ಲಿ ತಾರತಮ್ಯ ಎಸಗಲಾಗುತ್ತಿದೆ. ಇದರಿಂದ, ಒಳನಾಡು ಮೀನುಗಾರರು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ, ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದೆ.

ಕಳೆದ ಎರಡು ವರ್ಷಗಳಿಂದ ಏತ ನೀರಾವರಿ ಕೆರೆಗಳನ್ನು ವಿಲೇವೇರಿ ಮಾಡಿಲ್ಲ. ಇಲ್ಲಿ ಸಮುದ್ರ ಮೀನುಗಾರಿಕೆ ಮಾಡುತ್ತಿರುವ ಮೀನುಗಾರರಿಗೆ ಸರ್ಕಾರದ ಯೋಜನೆಯ ಶೇ 90ರಷ್ಟು ಅನುದಾನ ನೀಡಲಾಗುತ್ತಿದೆ. ಆದರೆ,
ಒಳನಾಡು ಮೀನುಗಾರರಿಗೆ ಶೇ ೧೦ ಅನುದಾನ ಸಿಗುತ್ತಿದೆ. ಕಡಲ ತೀರದ ಮೀನುಗಾರಿಕೆಗೆ ಒಬ್ಬೊಬ್ಬರಿಗೆ ಆರರಿಂದ ಹತ್ತು ಲಕ್ಷ ಡೀಸೆಲ್ ಸಬ್ಸಿಡಿ ಕೊಡುತ್ತಿದ್ದಾರೆ. ಒಳನಾಡಿನ ಮೀನುಗಾರರಿಗೆ 10 ಸಾವಿರ ಸಹಾಯಧನ ನೀಡುತ್ತಿದೆ. ಇದರಿಂದ ತಾಲ್ಲೂಕು ವ್ಯಾಪ್ತಿಯ ಉಳಿದ ಮೀನುಗಾರರು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.

Department of Fisheries ಮೀನುಗಾರಿಕೆ ಸಲಕರಣೆ ಕಿಟ್ ಗಳನ್ನು ಪ್ರತಿ ವರ್ಷವೂ ಮೀನುಗಾರರಿಗೆ ನೀಡಬೇಕು. ಮತ್ತು ಮೀನು ಮಾರಾಟ ಮಾಡುವ ಮಹಿಳೆಯರಿಗೆ ಮೀನು ಮಾರಾಟ ಸಾಮಾಗ್ರಿ ಸಲಕರಣೆಗಳನ್ನು ನೀಡಬೇಕು. ಮೀನುಗಾರರಿಗೆ ಮನೆಗಳ ಸೌಲಭ್ಯದ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ, ಪ್ರತಿ ತಾಲೂಕಿಗೆ ಮನೆಗಳ ಸೌಲಭ್ಯ ದೊರೆಯುತ್ತಿಲ್ಲ.,

ಮೂಲ ಮೀನುಗಾರರು ವಿದ್ಯಾವಂತರಾಗಿರುವುದರಿಂದ ಇ- ಟೆಂಡರ್ ಬಗ್ಗೆ ತಿಳುವಳಿಕೆ ಇಲ್ಲ. ಇದರ ಲಾಭ ಕಾರ್ಪೊರೇಟ್ ಮತ್ತು ಹಣವಂತರು ಪಡೆಯುತ್ತಿದ್ದಾರೆ.

Brahma Kumaris Institute ನಗರದ ಬ್ರಹ್ಮ ಕುಮಾರಿ ಸಂಸ್ಥೆಯಲ್ಲಿ ರಾಖಿ ಹಬ್ಬ ಆಚರಣೆ

0

Brahma Kumaris Institute ಬ್ರಹ್ಮಾಕುಮಾರಿ ಸಂಸ್ಥೆಯಲ್ಲಿ ರಾಖಿ ಹಬ್ಬವನ್ನು ವಿನೂತನವಾಗಿ ಆಚರಿಸಲಾಯಿತು. ರಕ್ಷಾಬಂಧನ ಸಂದರ್ಭದಲ್ಲಿ ನಾವೆಲ್ಲರೂ ಪರಸ್ಪರ ಸೋದರ-ಸೋದರಿಯರು ಎಂಬ ಪವಿತ್ರ ದೃಷ್ಟಿಯ ಸಂಕಲ್ಪವನ್ನು ಕೈಗೊಳ್ಳಲಾಯಿತು.
ಹಾಗೂ ಎಲ್ಲರಿಗೂ ಶ್ರೀರಕ್ಷೆಯೊಂದಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾನ್ಯ ಶ್ರೀ ಕೆ ಎಸ್ ಈಶ್ವರಪ್ಪನರು,ಮಾಜಿ ಉಪಮುಖ್ಯ ಮಂತ್ರಿಗಳು, ಶಿವಮೊಗ್ಗ ಇವರು ಮಾತನಾಡುತ್ತಾ“ ಇಡೀ ವಿಶ್ವವನ್ನೇ ಒಂದುಗೂಡಿಸುವ ಸಂಸ್ಥೆಯೆಂದರೆ ಅದು ಈಶ್ವರೀಯ ವಿಶ್ವ ವಿದ್ಯಾಲಯ , ಇಲ್ಲಿ ಯಾವುದೇ ಜಾತಿ-ಧರ್ಮದ ಭೇದ-ಭಾವವಿಲ್ಲ ಎಂದರು.

Brahma Kumaris Institute ಮುಂದುವರೆದು ಮಾತನಾಡುತ್ತಾ ಪ್ರಸ್ತುತ ರಾಖಿಯ ಪಾವಿತ್ರತೆಯು ಜಗತ್ತಿನ ಮೃಗೀಯ ಮನಸ್ಕರಿಗೆ ಬೇಕಾಗಿದೆ. ನಾವು ಪರಸ್ಪರ ಅಣ್ಣ-ತಂಗಿಯರು,ಅಕ್ಕ-ತಮ್ಮಂದಿರು ಎಂಬ ಭಾವನೆಯಿಂದ ಸೋದರಿಯರ ರಕ್ಷಣೆಯಾಗಬೇಕು.ಅನಾಚರ-ಅತ್ಯಾಚಾರಗಳು ನಿಲ್ಲಬೇಕು “ ಎಂದು ರಾಖಿಯ ಮಹತ್ವವನ್ನು ತಿಳಿಸಿದರು. ನಂತರ ಶ್ರೀ ಈಶ್ವರಪ್ಪ ಹಾಗೂ ಶ್ರೀ ಕೆ ಈ ಕಾಂತೇಶ್ ಇವರಿಗೆ ಬ್ರಹ್ಮಾಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ಬಿಕೆ ಅನಸೂಯಕ್ಕನವರು ರಾಖಿ ಕಟ್ಟಿ ಸನ್ಮಾನಿಸಿದರು. ಬಿಕೆ ಶಿವದೇವಿ , ಬಿಕೆ ನಾಗರಾಜ್ ,ಬಿಕೆ ಮಂಜಪ್ಪ ಹಾಗೂ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

[2] ಮಾನ್ಯ ಶ್ರೀ ಚೆನ್ನಬಸಪ್ಪ , ಶಾಸಕರು,ಶಿವಮೊಗ್ಗ ಹಾಗೂ ಮಾನ್ಯ ಶ್ರೀ ಡಿ ಎಸ್ ಅರುಣ್ , ವಿಧಾನ ಪರಿಷತ್ ಸದಸ್ಯರು, ಶಿವಮೊಗ್ಗ -ಇವರಿಗೆ ಬ್ರಹ್ಮಾಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ಬಿಕೆ ಅನಸೂಯಕ್ಕನವರು ರಕ್ಷಾಬಂಧನ ಕಟ್ಟಿ ಶುಭಹಾರೈಸಿದರು

DVS Independent College ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಡಿವಿಎಸ್ ಸ್ವತಂತ್ರ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

0

DVS Independent College ನೆಹರು ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಪದವಿಪೂರ್ವ ( ಸ್ವತಂತ್ರ ) ಕಾಲೇಜು ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.
ಶನಿವಾರ ಮತ್ತು ಭಾನುವಾರ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗಗಳಲ್ಲಿ ಅಸಾಮಾನ್ಯ ಸಾಧನೆ ಮಾಡುವ ಮೂಲಕ ವಿವಿಧ ಸ್ಪರ್ಧೆಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ. ದೈಹಿಕ ಶಿಕ್ಷಕ ಎನ್.ಮಧು ಹಾಗೂ ಕಾಲೇಜಿನ ಕ್ರೀಡಾಪಟುಗಳಿಗೆ ಡಿವಿಎಸ್ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ, ಕಾರ್ಯದರ್ಶಿ ಎಸ್.ರಾಜಶೇಖರ್, ಸ್ವತಂತ್ರ ಪಿಯು ಕಾಲೇಜಿನ ಪ್ರಾಚಾರ್ಯ ಎ.ಇ.ರಾಜಶೇಖರ್ ಹಾಗೂ ಕಾಲೇಜಿನ ಸಿಬ್ಬಂದಿ ಶುಭಕೋರಿದ್ದಾರೆ.
ಬಾಲಕರ ವಿಭಾಗದ ಬೆಸ್ಟ್ ಅಥ್ಲೀಟ್, ಬಾಲಕರ ವಿಭಾಗದ ಸಮಗ್ರ ಪ್ರಶಸ್ತಿ ಹಾಗೂ ಬಾಲಕಿಯರ ವಿಭಾಗದ ಸಮಗ್ರ ಪ್ರಶಸ್ತಿಗಳನ್ನು ಕ್ರೀಡಾಕೂಟದಲ್ಲಿ ಡಿವಿಎಸ್ ಪದವಿಪೂರ್ವ ( ಸ್ವತಂತ್ರ ) ಕಾಲೇಜು ತನ್ನದಾಗಿಸಿಕೊಂಡಿದೆ. ಉತ್ತಮ ಪ್ರದರ್ಶನ ನೀಡಿದ ಕಾಲೇಜಿನ ತಂಡ ವಾಲಿಬಾಲ್ ವಿನ್ನರ್ ಆಗಿ ಹೊರಹೊಮ್ಮಿದೆ
DVS Independent College ಬಾಲಕರ ವಿಭಾಗದಲ್ಲಿ 400 ಮೀ ಓಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ, 800 ಮೀ ಓಟದಲ್ಲಿ ಪ್ರಥಮ, 1500 ಮೀ ಓಟದಲ್ಲಿ ದ್ವಿತೀಯ, 4400 ಮೀ ಓಟದಲ್ಲಿ ಪ್ರಥಮ, 4100 ಮೀ ಓಟದಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ಪ್ರಥಮ, ಟ್ರಿಪಲ್ ಜಂಪ್‌ನಲ್ಲಿ ಪ್ರಥಮ, ಎತ್ತರ ಜಿಗಿತದಲ್ಲಿ ಪ್ರಥಮ, 100 ಮೀ ಹರ್ಡಲ್ಸ್ ನಲ್ಲಿ ಪ್ರಥಮ, 400 ಮೀ ಹರ್ಡಲ್ಸ್ ನಲ್ಲಿ ಪ್ರಥಮ, ಶಾಟ್‌ಪುಟ್‌ನಲ್ಲಿ ಪ್ರಥಮ, 200 ಮೀ ಓಟದಲ್ಲಿ ತೃತೀಯ ಸ್ಥಾನ ಗಳಿಸಿದೆ.
ಬಾಲಕಿಯರ ವಿಭಾಗದಲ್ಲಿ 400 ಮೀ ಓಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ, 200 ಮೀ ಓಟದಲ್ಲಿ ಪ್ರಥಮ, ದ್ವಿತೀಯ, 100 ಮೀ ಓಟದಲ್ಲಿ ಪ್ರಥಮ, 110 ಮೀ ಹರ್ಡಲ್ಸ್ ನಲ್ಲಿ ದ್ವಿತೀಯ, 400 ಮೀ ಹರ್ಡಲ್ಸ್ ನಲ್ಲಿ ದ್ವಿತೀಯ, 4400 ಮೀ ಓಟದಲ್ಲಿ ಪ್ರಥಮ, 4100 ಮೀ ಓಟದಲ್ಲಿ ಪ್ರಥಮ ಹಾಗೂ ಯಾಮರ್ ಥ್ರೋನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಡಿವಿಎಸ್ ಪದವಿಪೂರ್ವ ( ಸ್ವತಂತ್ರ ) ಕಾಲೇಜಿನ ಕ್ರೀಡಾಪಟುಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿರುವುದಕ್ಕೆ ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿದೆ.

S.N.Chennabasappa ನಗರದಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನೀಡಲು ಶಾಸಕ ಚೆನ್ನಿಅಧಿಕಾರಿಗಳಿಗೆ ಸೂಚನೆ

0

S.N.Chennabasappa ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ನಗರದ ಬಿ.ಬಿ ರಸ್ತೆ ಹಾಗೂ ಕುಂಬಾರಕೇರಿಯ ಬಡಾವಣೆಗಳಿಗೆ ಜಲಮಂಡಳಿ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸ್ಥಳೀಯರ ಸಮಸ್ಯೆಗಳನ್ನುಆಲಿಸಿ ಕೂಡಲೇ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು.

S.S. Mallikarjun ಭದ್ರಾ ಡ್ಯಾಂ ಭರ್ತಿ.ರೈತರಲ್ಲಿ ಹರ್ಷ. ತೋಟಗಾರಿಕಾ ವಾರ್ಷಿಕ ಎರಡು ಬೆಳೆಗಳಿಗೆ ಅನುಕೂಲ- ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

0

S.S. Mallikarjun ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಶಿವಮೊಗ್ಗ ಸೇರಿದಂತೆ ಚಿತ್ರದುರ್ಗ ದಾವಣಗೆರೆ ಬಳ್ಳಾರಿ ಮತ್ತಿತರ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರು ಹೇಳಿದರು.

ಅವರು ಇಂದು ಬಿ ಆರ್ ಪಿ ಯಲ್ಲಿ ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.

ಕಳೆದ ಸಾಲಿನಲ್ಲಿ ಸಕಾಲದಲ್ಲಿ ಮಳೆ ಆಗದಿದ್ದ ಪರಿಣಾಮವಾಗಿ ರೈತರಲ್ಲಿ ಆತಂಕದ ಛಾಯೆ ಮೂಡಿತ್ತು. ಪ್ರಸಕ್ತ ಸಾಲಿನಲ್ಲಿ ಬಿದ್ದ ಮಳೆಯಿಂದಾಗಿ ಕೃಷಿ, ಅದರಲ್ಲೂ ವಿಶೇಷವಾಗಿ ತೋಟಗಾರಿಕೆಯ ವಾರ್ಷಿಕ ಎರಡು ಬೆಳೆಗಳಿಗೆ ಅನುಕೂಲವಾಗಲಿದೆ. ಅಲ್ಲದೆ ಈ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಸಹಾಯವಾಗಿದೆ. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಕ್ಕು ರೈತರ ನೆಮ್ಮದಿಯ ಬದಿಕಿಗೆ ಆಸಾರೆಯಾಗಲೆಂದು ಎಂದವರು ಆಶಿಸಿದರು.

S.S. Mallikarjun ಈ ಜಲಾಶಯದ ವ್ಯಾಪ್ತಿಗಳು ಕೊಡುವ ಅಚ್ಚು ಪಟ್ಟು ಪ್ರದೇಶದ ರೈತರು ಇರುವ ನೀರನ್ನು ಮಿತ ಬಳಕೆ ಹಾಗೂ ಸದ್ಬಳಕೆ ಮಾಡಿಕೊಂಡು ತಮ್ಮ ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುವಂತೆ ಅವರು ಮನವಿ ಮಾಡಿದರು.

ದಾವಣಗೆರೆ ಸಂಸದೆ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಬಸವಂತಪ್ಪ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು, ಹೊನ್ನಾಳಿ ಶಾಸಕ ಶಾಂತನಗೌಡ ಹಾಗೂ ಹರಿಹರದ ಮಾಜಿ ಶಾಸಕ ರಾಮಪ್ಪ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕು ಗಳಿಂದ ಆಗಮಿಸಿದ್ದ ಅಧಿಕಾರಿಗಳು ganyaru ಹಾಗೂ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

CM Siddharamaih ಪ್ರಾಸಿಕ್ಯೂಷನ್ ಅನುಮತಿ .ಸಿಎಂ ಸಿದ್ಧರಾಮಯ್ಯ ಅವರು ಹೇಳಿದ್ದೇನು?

0

CM Siddharamaih ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಅವರ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ.

ನಮ್ಮ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರದ ಪಾಲುದಾರರು. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ.
ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ, ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು.

ನನ್ನ ವಿರುದ್ಧ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ.

ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ .ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ.

CM Siddharamaih ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆಗೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗಿಲ್ಲ.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ‘ಎಕ್ಸ್’ ಜಾಲತಾಣದಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ.

Klive Special Article ಮಲ್ಲಮ್ಮಳ ಮುಂದೆ ಮಂಡಿಯುರಿ ಕೃತಜ್ಞತೆ ಸಲ್ಲಿಸಿದ್ದ ಶಿವಾಜಿ

0

Klive Special Article ಬೆಳವಡಿ ಮಲ್ಲಮ್ಮ ಬೆಳವಾಡಿ ಸಾಮ್ರಾಜ್ಯದ (ಸಂಷ್ಟಾನ) ರಾಣಿ. ವಿಶ್ವದಲ್ಲಿ ಪ್ರಥಮ ಮಹಿಳಾ ಸೈನ್ಯ ಕಟ್ಟಿದ್ದು ಬೆಳವಡಿಯ ವೀರ ರಾಣಿ ಈ ಮಲ್ಲಮ್ಮ. ಬೆಳವಡಿ ಮಲ್ಲಮ್ಮ ಕರ್ನಾಟಕದ ಬೆಳಗಾವಿ ಜಿಲ್ಲೆಯ ವೀರ ರಾಣಿ, ಮರಾಠರ ವಿರುದ್ಧ ಹೋರಾಡಲು ಮಹಿಳಾ ಸೇನೆಯನ್ನು ಸಂಘಟಿಸಿದ ಮೊದಲ ಮಹಿಳೆಯಾಗಿದ್ದಾರೆ, ಜಗತ್ತಿನಲ್ಲಿ ಪ್ರಥಮವಾಗಿ ಎರಡು ಸಾವಿರ ಮಹಿಳಾ ಸೈನ್ಯವನ್ನು ಕಟ್ಟಿ ಶಿವಾಜಿ ಮಹಾರಾಜರ ಧೈರ್ಯ ಪ್ರಶ್ನೆ ಮಾಡಿದ ಮತ್ತು ಶಿವಾಜಿ ಮಾಹಾರಜರಿಗೆ ಪ್ರತಿಭಟಿಸಿದ ರಾಣಿ ಬೆಳವಡಿ ಮಲ್ಲಮ್ಮ

● ಬೆಳವಡಿ ಮಲ್ಲಮ್ಮನ ಬಾಲ್ಯದ ಜೀವನ:- ಆಧುನಿಕ ಉತ್ತರ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಗೋವಾವನ್ನು ನಿಯಂತ್ರಿಸಿದ ಸೋಧೆ ಸಾಮ್ರಾಜ್ಯದ ರಾಜ ಮಧುಲಿಂಗ ನಾಯಕನ ಮಗಳು ಈ ಮಲ್ಲಮ್ಮ, ಇವರ ಶಿಕ್ಷಣವು 5 ನೇ ವಯಸ್ಸಿನಲ್ಲಿ ಪ್ರಾರಂಭವಾಯಿತು, ಅಲ್ಲಿ ಅವಳು ತನ್ನ ತಂದೆ ಮತ್ತು ಅವಳ ಸಹೋದರ ಸದಾಶಿವ ನಾಯಕನಿಗೆ ನಿರ್ಮಿಸಿದ ಶಾಲೆಯಲ್ಲಿ ಓದಿದಳು. ಶಾಲೆಯ ಪ್ರಾಂಶುಪಾಲರು ಶಂಕರ್ ಭಟ್ ಗಮನಾರ್ಹ ವಿದ್ವಾಂಸರಾಗಿದ್ದರು ಮತ್ತು 10 ಹಿರಿಯ ಶಾಸ್ತ್ರಿಗಳು (ತತ್ವಶಾಸ್ತ್ರ ಮತ್ತು ಪ್ರಾಚೀನ ಗ್ರಂಥಗಳ ಗೌರವಾನ್ವಿತ ಶಿಕ್ಷಕರು) ಮಲ್ಲಮ್ಮನ ಶಿಕ್ಷಕರಾಗಿ ಕಾರ್ಯನಿರ್ವಹಿಸಿದರು. ಮಲ್ಲಮ್ಮ ಮದುವೆಯ ವಯಸ್ಸನ್ನು ತಲುಪಿದಾಗ, ಅವಳ ತಂದೆ ಸ್ವಯಂವರವನ್ನು ಏರ್ಪಡಿಸಲು ನಿರ್ಧರಿಸಿದರು. ಮಲ್ಲಮ್ಮ ತನ್ನ ದಾಳಿಕೋರರಿಗೆ ಒಂದು ತಿಂಗಳೊಳಗೆ ಅವನ ವಯಸ್ಸು ಮತ್ತು ಒಂದಕ್ಕೆ ಸಮನಾದ ಹುಲಿಗಳ ಸಂಖ್ಯೆಯನ್ನು ಬೇಟೆಯಾಡಲು ಸವಾಲು ಹಾಕಲು ನಿರ್ಧರಿಸಿದಳು. ಬೆಳವಾಡಿಯ ರಾಜಕುಮಾರ ಈಶಪ್ರಭು ತನ್ನ 20ನೇ ವಯಸ್ಸಿನಲ್ಲಿ ಒಂದು ತಿಂಗಳಲ್ಲಿ 21 ಹುಲಿಗಳನ್ನು ಯಶಸ್ವಿಯಾಗಿ ಬೇಟೆಯಾಡಿ ಕೊಂದು ಮಲ್ಲಮ್ಮನ ಕೈಗೆ ಸಿಕ್ಕರು. ಈ ಒಕ್ಕೂಟದೊಂದಿಗೆ ಮಲ್ಲಮ್ಮ ಬೆಳವಾಡಿ ಮಲ್ಲಮ್ಮ ಎಂದು ಕರೆಯಲ್ಪಟ್ಟರು ಮತ್ತು ಈಶಪ್ರಭುವಿನ ಜೊತೆಯಲ್ಲಿ ಬೆಳವಾಡಿಯ ಆಡಳಿತ ದಂಪತಿಯಾದರು, ಇದು ತುಲನಾತ್ಮಕವಾಗಿ ಸಣ್ಣ ಸಾಮ್ರಾಜ್ಯವಾಗಿದ್ದು, ಅವರ ಪ್ರದೇಶಗಳು ಆಧುನಿಕ ದಿನದ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಭಾಗಗಳನ್ನು ಒಳಗೊಂಡಿವೆ.

● ಮಲ್ಲಮ್ಮ ಮತ್ತು ಮರಾಠರ ಜೊತೆಗಿನ ಯುದ್ಧ:- ಬೆಳವಡಿ ಸಂಸ್ಥಾನದ ಪಾರಂಪರಿಕ ತಾಣವಾದ ಬೃಹನ್ಮಠದ ಶಿವ ಬಸವ ಶಾಸ್ತ್ರಿಯವರು ಬರೆದ ತರಾತುರಿ ಪಂಚಮರ ಇತಿಹಾಸ ಪುಸ್ತಕದಲ್ಲಿ ಬೆಳವಡಿ ಸಂಸ್ಥಾನದ ಇತಿಹಾಸವು 1511ರಿಂದ ರಾಜ ಚಂದ್ರಶೇಖರ ರಾಜನೊಂದಿಗೆ ಪ್ರಾರಂಭವಾಗುತ್ತದೆ. ಈ ಪುಸ್ತಕದಲ್ಲಿ ಮರಾಠರ ರಾಜ ಶಿವಾಜಿ ಮತ್ತು ಬೆಳವಡಿ ಮಲ್ಲಮ್ಮನವರ ನಡುವೆ ನಡೆದ ಯುದ್ಧ ದಾಖಲಾಗಿದೆ. ಇಶಪ್ರಭು ಯುದ್ಧಭೂಮಿಯಲ್ಲಿ ನಿಧನರಾದ ನಂತರ ಮಲ್ಲಮ್ಮ ಛತ್ರಪತಿ ಶಿವಾಜಿ ಮಹಾರಾಜನನ್ನು ಸೋಲಿಸಿದಳು. ಈ ಯುದ್ಧದ ನೆನಪಿಗಾಗಿ ವೀರಗಲ್ಲುಗಳನ್ನು ಬೆಳವಡಿಯ ಸಂಸ್ಥಾನದಲ್ಲಿ ಮಲ್ಲಮ್ಮನ ಹೆಸರಲ್ಲಿ ಕಟ್ಟಿಸಲಾಯಿತು. ತರಾತುರಿ ಪಂಚಮರ ಇತಿಹಾಸ ಪುಸ್ತಕ 1929 ರಲ್ಲಿ ಮೊದಲ ಬಾರಿಗೆ ಪ್ರಕಟವಾಯಿತು.

Klive Special Article ಮಲ್ಲಮ್ಮನ ಗುರುಗಳಾಗಿದ್ದ ಶಂಕರ ಭಟ್ಟರು ಬರೆದ ಸಂಸ್ಕೃತ ಪುಸ್ತಕ ಶಿವವಂಶ ಸುಧರ್ನವದಲ್ಲಿ ಶಿವಾಜಿಯನ್ನು ಬೆಳವಡಿ ಮಲ್ಲಮ್ಮ ಸೋಲಿಸಿದರು ಎಂದು ದಾಖಲಾಗಿದೆ. ಶಿವಾಜಿಯ ಎರಡನೇ ಸೊಸೆಯಾಗಿದ್ದ ತಾರಾಬಾಯ್ ಅವರು ಈ ಪುಸ್ತಕಕ್ಕೆ ಪ್ರಥಮ ಬಹುಮಾನ ನೀಡಿದ್ದರು ಮತ್ತು ಈ ಪುಸ್ತಕದಲ್ಲಿ ಶಿವಾಜಿ ಮತ್ತು ಮಲ್ಲಮ್ಮರ ನಿಖರವಾದ ವಿಷಯವಿದೆ ಎಂದು ಹೇಳಿದ್ದಾರೆ. ಜಾದುನಾಥ್ ಸರ್ಕಾರ್ ಶಿವಾಜಿಯ ಜೀವನಚರಿತ್ರೆಯನ್ನು ಮರಾಠಿ ಭಾಷೆಯಲ್ಲಿ ಬರೆದಿದ್ದು ಈ ಪುಸ್ತಕದಲ್ಲಿ ಮಲ್ಲಮ್ಮಳನ್ನು ‘ಸಾವಿತ್ರಿ ಬಾಯಿ’ ಎಂದು ಕರೆದಿದ್ದಾರೆ. ಮಲ್ಲಮ್ಮ ಮತ್ತು ಶಿವಾಜಿಯ ನಡುವಿನ ಯುದ್ದ 27 ದಿನಗಳ ಕಾಲ ನಡೆದಿತ್ತು ಎಂದು ಬರೆದಿದ್ದಾರೆ.

ಶಿವಾಜಿ ಮಹಾರಾಜರ ಸೈನ್ಯ ನಿರಂತರ ಇಪ್ಪತ್ತೇಳು ದಿನಗಳ ಪ್ರಯತ್ನ ಮಾಡಿದರೂ ಬೆಳವಡಿ ಕೋಟೆ ಬೇದಿಸಲು ಸಾದ್ಯವಾಗಲಿಲ್ಲ. ಇಪ್ಪತ್ತೆಂಟನೆಯ ದಿನ ಕೋಟೆ ವಶವಾಯಿತು. ರಾಣಿ ಮಲ್ಲಮ್ಮನಿಗೆ ಅವಮಾನಿಸಿದ ಸುಖೋಜಿ ಗಾಯಕವಾಡನ ಕಣ್ಣುಗಳನ್ನು ಶಿವಾಜಿ ಮಹಾರಾಜರು ಕಿಳಿಸಿರುವುದಾಗಿ ಮರಾಠಿ ಇತಿಹಾಸದ ದಾಖಲೆಗಳು ಹೇಳುತ್ತವೆ. ಶಿವಾಜಿಯು ತನ್ನ ಸೈನಿಕರು ತಪ್ಪು ಮಾಡಿದ ಕಾರಣಕ್ಕೆ ಶಿವಾಜಿ ಸ್ವತಃ ರಾಣಿ ಬೆಳವಾಡಿ ಮಲ್ಲಮ್ಮ ಅವರ ಪರಾಕ್ರಮ ಮೆಚ್ಚಿ ಅವರ ಹತ್ತಿರ ಮಂಡಿ ಊರಿ ಕೃತಜ್ಞೆ ಹೇಳುತ್ತಾರೆ, ರಾಣಿ ಬೆಳವಾಡಿ ಮಲ್ಲಮ್ಮ ಅವರ ಸಂಸ್ಥಾನ ದಲ್ಲಿ ಶಿವಾಜಿ ಅವರ ಮೂರ್ತಿ ಸ್ಥಾಪನೆ ಮಾಡ್ತಾರ ಅಂತೆ ಪುರಾವೆಗಳಿವೆ.

ಮರಾಠಿ ಇತಿಹಾಸಕಾರರಲ್ಲಿ ಅನೇಕ ಗೊಂದಲಗಳು ಇರುವ ಬಗ್ಗೆ ಪುಣೆ ವಿಶ್ವವಿದ್ಯಾಲಯದವರು ಸಾಬೀತು ಮಾಡಿದ್ದಾರೆ. ಅವಳು ಶತ್ರು ಪಡೆಗಳ ಜತೆ ಕುದುರೆ ಮೇಲೆ ಸೀರೆಯಲ್ಲಿ ವೀರಗಚ್ಚೆ ಹಾಕಿ ಹೋರಾಡಿದಳು, ಹಾಗೂ ಬೆಳವಡಿಯ ಮಲ್ಲಮ್ಮಳು ಬಿಲ್ಲು ಬಾಣ, ಕಾವಲಿಗಳ ಆಯುಧಗಳನ್ನು ಉಪಯೋಗಿಸಿ ಯುದ್ಧ ಮಾಡಿದಳು ಎಂದು ಉಲ್ಲೇಖಿಸಲಾಗಿದೆ. ವಿದ್ವಾಂಸರಾದ ಶೇಷೊ ಶ್ರೀನಿವಾಸ್ ಮುತಾಲಿಕ ಅವರು ಕ್ರಿ.ಶ 1704-05 ರಲ್ಲಿ ಮಧುಲಿಂಗ ನಾಯಕರ ಅರಮನೆ ಜೀವನವನ್ನು ಮರಾಠಿ ಭಾಷೆಯಲ್ಲಿ ದಾಖಲಿಸಿದ್ದಾರೆ.

● ಕೊನೆಯ ಮಾತು:- ಇತಿಹಾಸದಲ್ಲಿ ಬೆಳವಡಿ ಮಲ್ಲಮ್ಮಾ ಜೀ ಮತ್ತು ಶಿವಾಜಿ ಮಹಾರಾಜರ ಸಂಘರ್ಷದ ನಂತರ ಕನ್ನಡ ಮತ್ತು ಮರಾಠಿ ಭಾಷಿಕರ ಮಧ್ಯದ ಭಾವನಾತ್ಮಕ ಬೇಸುಗೆಯುಂಟು ಮಾಡುವ ಪ್ರೇರಣಾದಾಯಿ ಘಟನೆಯಾಯಿತು. ವಿಶ್ವದಲ್ಲಿ ಪ್ರಥಮ ಮಹಿಳಾ ಸೈನ್ಯ ಕಟ್ಟಿ, ಮರಾಠರೊಂದಿಗೆ ಕೆಚ್ಚೆದೆಯಿಂದ ಹೋರಾಡಿ ಯುದ್ಧದಲ್ಲಿ ಜಯಶಾಲಿಯಾಗಿ, ಶತ್ರುಗಳನ್ನು ಮಂಡಿಯುರುವಂತೆ ಮಾಡಿದ ಮಲ್ಲಮ್ಮ ಎಂಬ ಈ ವೀರ ಮಹಿಳೆಗೆ ನಮ್ಮದೊಂದು ಸಲಾಂ ಹೇಳೋಣವೇ.

ಎನ್.ಎನ್.ಕಬ್ಬೂರ
ಶಿಕ್ಷಕರು, ತಾ-ಸವದತ್ತಿ ಜಿ-ಬೆಳಗಾವಿ
ಮೊಬೈಲ್-9740043452
mutturaj.kabbur@gmail.com

Koramagala Police ಬೆಂಗಳೂರಲ್ಲಿ ಪದವಿ ಕಾಲೇಜ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

0

Koramagala Police ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಈ ನಡುವೆ ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದೆ.

ಶನಿವಾರ ತಡರಾತ್ರಿ ಘಟನೆ ನಡೆದಿದೆ. ಸಂತ್ರಸ್ತ ವಿದ್ಯಾರ್ಥಿನಿಯು ಹೊರ ರಾಜ್ಯದ ನಿವಾಸಿಯಾಗಿದ್ದು, ಬೆಂಗಳೂರಿನ ಖಾಸಗಿ ಕಾಲೇಜ್ ವೊಂದರಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಲೈಂಗಿಕ ದೌರ್ಜನ್ಯದಿಂದ ಅಸ್ವಸ್ಥಗೊಂಡಿರುವ ಯುವತಿಯನ್ನು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಸಂಬಂಧ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಕರಣದ ಹಿನ್ನಲೆ :
ಸಂತ್ರಸ್ತ ಯುವತಿಯು ರಾತ್ರಿ ಕೋರಮಂಗಲದ ಪಬ್ ವೊಂದರಲ್ಲಿ ಸ್ನೇಹಿತರ ಜೊತೆ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದಳು. ತಡರಾತ್ರಿ ಪಾರ್ಟಿ ಮುಗಿಸಿದ ನಂತರ, ಅಪರಿಚಿತ ದ್ವಿಚಕ್ರ ವಾಹನ ಚಾಲಕನ ಮೂಲಕ ಮನೆಯತ್ತ ಲಿಫ್ಟ್ ಪಡೆದುಕೊಂಡಿದ್ದಳು.
ಈ ವೇಳೆ ಯುವತಿಯು ಮದ್ಯದ ನಶೆಯಲ್ಲಿದ್ದಳು ಎನ್ನಲಾಗಿದೆ.

ಬೈಕ್ ಚಾಲಕನು ಯುವತಿಯನ್ನು ಗೋಡೌನ್ ವೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ನಂತರ ಅರೆಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ಬಿಟ್ಟು ಪರಾರಿಯಾಗಿದ್ದಾನೆ.

ಯುವತಿಯನ್ನು ಹೆಬ್ಬುಗೋಡಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

Koramagala Police ಗೃಹ ಸಚಿವರ ಹೇಳಿಕೆ : ಈ ಕುರಿತಂತೆ ಭಾನುವಾರ ಗೃಹ ಸಚಿವ ಪರಮೇಶ್ವರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ಯತ್ನ ನಡೆದಿದೆ. ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಕಾನೂನು ರೀತ್ಯ ಪೊಲೀಸರು ಕ್ರಮ ಜರುಗಿಸಲಾಗಿದ್ಧಾರೆ ಎಂದು ತಿಳಿಸಿದ್ದಾರೆ.

ತಂಡ ರಚನೆ :
ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಪತ್ತೆಗೆ, ಪೊಲೀಸರು ವ್ಯಾಪಕ ಶೋಧ ಕಾರ್ಯ ನಡೆಸಲಾರಂಭಿಸಿದ್ದಾರೆ. ಪ್ರತ್ಯೇಕ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ತನಿಖೆ ಬಿರುಸುಗೊಂಡಿದೆ.

Ninasam Theatre institute ನೀನಾಸಮ್ ಸಂಸ್ಥೆಯಲ್ಲಿ ಅಕ್ಟೋಬರ್ 02ರಿಂದ 6ರ ವರೆಗೆ ಕಲೆಗಳ ಸಂಗಡ ಮಾತುಕತೆ ಕಾರ್ಯಕ್ರಮ

0

Ninasam Theatre institute ನೀನಾಸಮ್ ಸಂಸ್ಥೆಯು ಅಕ್ಟೋಬರ್ 02ರಿಂದ 6ರ ವರೆಗೆ ಕಲೆಗಳ ಸಂಗಡ ಮಾತುಕತೆ ಕಾರ್ಯಕ್ರಮವನ್ನು ಆಯೋಜಿಸಿದೆ.

ಕಳೆದ ಎರಡೂವರೆ ದಶಕಗಳಿಂದ ಪ್ರತಿವರ್ಷ ಚಲನಚಿತ್ರ-ಸಂಸ್ಕೃತಿ ಶಿಬಿರಗಳನ್ನು ನಡೆಸುತ್ತ ಬಂದಿರುವ ನೀನಾಸಮ್ ಕಳೆದ ಎರಡು ವರ್ಷಗಳಿಂದ ಅದರ ಪರಿಷ್ಕೃತ ರೂಪವಾದ `ಕಲೆಗಳ ಸಂಗಡ ಮಾತುಕತೆ’ ಎಂಬ ಕಾರ್ಯಕ್ರಮವನ್ನು ಸಂಘಟಿಸುತ್ತಿದೆ.

Ninasam Theatre institute ಹೆಚ್ಚಿನ ಮಾಹಿತಿ ಮತ್ತು ಅಭ್ಯರ್ಥಿಯಾಗಿ ನೋಂದಾಯಿಸಲು ಲಿಂಕ್ ಒತ್ತಬಹುದು.
Click the link for more details and to register.
https://ninasam.org/kalegala-sangada-matukate/

Kolkata Doctor Rape ಕೊಲ್ಲೊತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ದೌರ್ಜನ್ಯ ಖಂಡಿಸಿ ಶಿವಮೊಗ್ಗದಲ್ಲಿ ವಿವಿಧ ಸಂಘಟನೆ ಗಳಿಂದ ಪ್ರತಿಭಟನೆ

0

Kolkata Doctor Rape Case ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣ ಮತ್ತು ನಂತರ ಪ್ರತಿಭಟನಾನಿರತ ವೈದ್ಯ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಇಂದು ಐಎಂಎ ಕರೆ ನೀಡಿದ್ದ ಮುಷ್ಕರ ಬೆಂಬಲಿಸಿ ಶನಿವಾರ ನಗರದಲ್ಲಿ ವೈದ್ಯರ ವಿವಿಧ ಸಂಘಟನೆಗಳು, ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಸಿಮ್ಸ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು, ಗೋಪಿವೃತ್ತದಲ್ಲಿ ಮಾನವ ಸರಪಳಿ ರಚಿಸಿ ನಂತರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಸಿ ಮನವಿ ಸಲ್ಲಿಸಿದರು.
ಭಾರತೀಯ ವೈದ್ಯಕೀಯ ಸಂಘ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘ ಕರೆ ನೀಡಿದ್ದ ಮುಷ್ಕರದ ಹಿನ್ನಲೆಯಲ್ಲಿ ನಗರದಲ್ಲಿ ವೈದ್ಯರು ಒಪಿಡಿ ಬಂದ್ ಮಾಡಿದ್ದರು. ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಹೊರತಾಗಿ ಬೇರೆ ಸೇವೆ ಇಲ್ಲದ ಕಾರಣ ರೋಗಿಗಳಿಗೆ ತೊಂದರೆಯಾಗಿತ್ತು.
Kolkata Doctor Rape Case ವಿಧಾನ ಪರಿಷತ್ ಸದಸ್ಯ ಡಾ|| ಧನಂಜಯ ಸರ್ಜಿ ಮಾತನಾಡಿ, ವೈದ್ಯರಿಗೆ ಮತ್ತು ವೈದ್ಯ ವಿದ್ಯಾರ್ಥಿಗಳು ದಿನದ ೨೪ ಗಂಟೆಯೂ ತುರ್ತು ಸೇವೆ ಮಾಡಬೇಕಿರುತ್ತದೆ. ಆದರೆ, ವೈದ್ಯರಿಗೆ ಇತ್ತೀಚಿನದ ದಿನಗಳಲ್ಲಿ ರಕ್ಷಣೆ ಇಲ್ಲದಂತಾಗಿದೆ. ಮಹಿಳಾ ವೈದ್ಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಭಯಪಡುತ್ತಿದ್ದಾರೆ. ಇಂತಹ ಘಟನೆಗಳು ಸಂಭವಿಸಿದ ತಕ್ಷಣ ’ವೈದೋ ನಾರಾಯಣೋ ಹರಿ’ ಎಂದು ಹೇಳುತ್ತಾರೆ. ಆದರೆ, ವೈದ್ಯರ ಮೇಲೆಯೇ ಹಲ್ಲೆ ನಡೆಯುತ್ತಿದೆ. ಇದನ್ನು ಸರ್ಕಾರಗಳು ತಪ್ಪಿಸಬೇಕು. ಮಹಿಳಾ ವೈದ್ಯರಿಗೆ ಸೂಕ್ತರ ರಕ್ಷಣೆ ನೀಡಬೇಕು. ಕೂಡಲೇ ಅತ್ಯಾಚಾರ ಎಸಗಿದ ಆರೋಪಿಗಳನ್ನು ಬಂಧಿಸಿ, ಶಿಕ್ಷಿಸಬೇಕು. ಮುಚ್ಚಿಡಲು ಪ್ರಯತ್ನ ಕೂಡ ನಡೆಯುತ್ತಿದೆ. ಕೂಡಲೇ ಇಂತಹ ಪ್ರಕರಣಗಳು ಸಂಭವಿಸಿದಾಗ ಸರ್ಕಾರ ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಬೇಕು. ಕಾಲಹರಣ ಮಾಡದೇ ಅಪರಾಧಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.
೨೦೨೦ರ ವೈದ್ಯಕೀಯ ನಿಯಮಾವಳಿಗಳನ್ನು ಕೂಡಲೇ ಜಾರಿಗೊಳಿಸಬೇಕು. ನೊಂದ ಕುಟುಂಬಕ್ಕೆ ಎಲ್ಲಾ ರೀತಿಯ ನೆರವಿನ ಜೊತೆಗೆ ಅವರಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಡಾ|| ಶ್ರೀಧರ್, ಡಾ|| ಸುರೇಶ್, ಡಾ|| ಸತೀಶ್‌ಕುಮಾರ್, ಡಾ|| ಸಂಜಯ್, ಡಾ|| ಹೇಮಂತ್, ಡಾ|| ರಮ್ಯಾ, ಡಾ|| ಜಿತೇಂದ್ರಕುಮಾರ್, ಡಾ|| ಶ್ರೀಕಾಂತ್ ಶೆಟ್ಟಿ, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ವೈದ್ಯಕೀಯ ವಿದ್ಯಾರ್ಥಿಗಳು, ಗೃಹ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.