ಬಿಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ (44) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.
ಅವರಿಗೆ ಇಬ್ಬರು ಗಂಡು ಮಕ್ಕಳು, ಒಬ್ಬಳು ಪುತ್ರಿ, ಪತ್ನಿ ಇದ್ದಾರೆ.
ಈ ಮೊದಲು ಟಿವಿ9 ಕ್ಯಾಮರಾಮನ್ ಆಗಿ ಕಾರ್ಯನಿರ್ವಹಿಸಿ ನಂತರ ಬಿಟಿವಿಗೆ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಅನಿಲ್ ನಿಧನಕ್ಕೆ ಶಿವಮೊಗ್ಗ ಜಿಲ್ಹಾ ಬಿಜೆಪಿ ಸಮಿತಿಯ ಪರವಾಗಿ ಜಿಲ್ಲಾಧ್ಯಕ್ಷರಾದ ಎನ್ ಕೆ ಜಗದೀಶ್ ರವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಪತ್ರಕರ್ತ ಅನಿಲ್ ನಿಧನಕ್ಕೆ ಸಂತಾಪ
Canara Bank. Rural Self-Employment Training Institute ಉಚಿತ ಬ್ಯೂಟಿಪಾರ್ಲರ್ ತರಬೇತಿಗಾಗಿ ಅರ್ಜಿ ಆಹ್ವಾನ
Canara Bank. Rural Self-Employment Training Institute ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್. ಗ್ರ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಏಪ್ರಿಲ್ ತಿಂಗಳ ಮೊದಲನೆಯ ವಾರದಿಂದ 35 ದಿನಗಳ ಕಾಲ ನಿರುದ್ಯೋಗಿ ಯುವತಿಯರಿಗೆ ಹಾಗೂ ಮಹಿಳೆಯರಿಗೆ ಉಚಿತ ಬ್ಯೂಟಿಪಾರ್ಲರ್ ತರಬೇತಿ ಶಿಬಿರವನ್ನುಏರ್ಪಡಿಸಿದ್ದು, ಆಸಕ್ತ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಯುವತಿಯರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
Canara Bank Rural Self-Employment Training Institute ಆಸಕ್ತಿಯುಳ್ಳ ಅಭ್ಯರ್ಥಿಗಳು ಮಾ.23 ರಂದು ಬೆಳಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 23/03/2026 ರೊಳಗೆ ಸಂಸ್ಥೆಯನ್ನು ಈ ದೂರವಾಣಿ ಸಂಖ್ಯೆ 8970476050/ 6363139123/ 9591514154/ 9686248369/9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
DVS Arts, Science and College ಎಲ್ಲ ಕ್ಷೇತ್ರಗಳಿಗೂ ಹಣ ಒದಗಿಸುವುದು ಬಜೆಟ್ ಆಶಯ : ಪ್ರೊ. ಚಂದ್ರಶೇಖರ್
DVS Arts, Science and College ಬಜೆಟ್ ಎಂಬುದು ರಾಜ್ಯದ ಜನರ ಕ್ಷೇಮಾಭಿವೃದ್ಧಿಯ ಸಂಕೇತ ಎಂದು ಸಾಗರದ ಇಂದಿರಾಗಾಂಧಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಚಂದ್ರಶೇಖರ್ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ಕಾಲೇಜಿನಲ್ಲಿ ಆಯೋಜಿಸಿದ್ದ “ಕರ್ನಾಟಕ ರಾಜ್ಯ ಬಜೆಟ್ 2026 ಒಂದು ವಿಶ್ಲೇಷಣೆ” ಕಾರ್ಯಕ್ರಮದಲ್ಲಿ ಮಾತನಾಡಿ, ಈ ಬಜೆಟ್ ಸಮತೂಕದ ಬಜೆಟ್ ಎಂದು ತಿಳಿಸಿದರು.
ಬಜೆಟ್ ಎಂಬುದು ಕೇವಲ ಕಾಗದದ ಪತ್ರಗಳಲ್ಲಿರುವ ಅಂಕಿ ಸಂಖ್ಯೆಗಳು ಮಾತ್ರವಲ್ಲ. ಒಂದು ರಾಜ್ಯದ ಜನರ ಕ್ಷೇಮಾಭಿವೃದ್ಧಿಯ ಸಂಕೇತ. ಬಹಳ ಮುಖ್ಯವಾಗಿ ಎಲ್ಲ ಸಮುದಾಯಗಳನ್ನು ಪರಿಗಣಿಸಿ ಎಲ್ಲ ಕ್ಷೇತ್ರಗಳಿಗೆ ಸಾಧ್ಯವಾದಷ್ಟು ಹೆಚ್ಚಿನ ಹಣಕಾಸಿನ ಸಂಪನ್ಮೂಲವನ್ನು ಒದಗಿಸಿರುವುದು ಈ ಬಜೆಟ್ನ ಮತ್ತೊಂದು ಮೈಲುಗಲ್ಲು ಎಂದು ಹೇಳಿದರು.
ಬಹಳ ಮುಖ್ಯವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರೂ ಸಹ ಅದನ್ನು ಮೀರಿದ ಎಲ್ಲ ಜನರ ಯೋಗಕ್ಷೇಮದ ದೃಷ್ಟಿಯಿಂದ ಕೃಷಿ ವಲಯ, ಕೈಗಾರಿಕಾ ವಲಯ, ಸೇವಾ ವಲಯ ಮತ್ತು ಮಹಿಳಾ ಕ್ಷೇತ್ರಕ್ಕೂ ಕೂಡ ವಿಶೇಷ ಒತ್ತನ್ನು ಕೊಟ್ಟಿರುವುದು ಈ ಬಜೆಟ್ನಲ್ಲಿ ಕಂಡುಬರುತ್ತದೆ ಎಂದು ತಿಳಿಸಿದರು.
ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ.ವೆಂಕಟೇಶ್ ಮಾತನಾಡಿ, ಕರ್ನಾಟಕದ ಬಜೆಟ್ ಎಲ್ಲ ಜನರನ್ನು ಒಳಗೊಂಡ ಒಂದು ವಿಶೇಷ ಬಜೆಟ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಜೆಟ್ನಲ್ಲಿ ಸಾರ್ವಜನಿಕರ ಹಿತಾಸಕ್ತಿಗಳನ್ನು ಗಮನಿಸಿ ಅದಕ್ಕೆ ತಕ್ಕ ಹಾಗೆ ಹಣಕಾಸಿನ ಸಂಪನ್ಮೂಲಗಳನ್ನು ಹಂಚಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
DVS Arts, Science and College ಅನೇಕ ದೂರ ದೃಷ್ಟಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ವಿಶೇಷವಾಗಿ ಈ ಮುಂಗಡ ಪತ್ರ ಜನಪ್ರಿಯ ಎನ್ನುವುದಕ್ಕಿಂತ ಜನಪರ ಬಜೆಟ್ ಅನ್ನು ಕರ್ನಾಟಕದ ಜನತೆಗೆ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಐಕ್ಯೂಎಂಸಿ ಸಂಯೋಜಕ ಕುಮಾರಸ್ವಾಮಿ, ಅರ್ಥಶಾಸ್ತ್ರ ವಿಭಾಗದ ಅಧ್ಯಾಪಕಿ ರಂಜಿತಾ ಮತ್ತು ಶಿವಲಿಂಗಂ ಉಪಸ್ಥಿತರಿದ್ದರು.
DVS College of Arts, Science and Commerce ಕಾನೂನಿನಲ್ಲಿ ಮಹಿಳೆಯರ ರಕ್ಷಣೆಗೆ ಆದ್ಯತೆ :ಎಂ.ಎಸ್.ಸಂತೋಷ್
DVS College of Arts, Science and Commerce ಮಹಿಳೆಯರ ರಕ್ಷಣೆಗೆ ಕಾನೂನಿನಲ್ಲಿ ಹೆಚ್ಚಿನ ಕಾಯ್ದೆಗಳನ್ನು ರೂಪಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಹೇಳಿದರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಅಖಿಲ ಭಾರತ ಅಂಚೆ ಅಧಿಕಾರಿಗಳ ಸಂಘದ ಸಿ ಗ್ರೂಪ್ ನೌಕರರು ಮತ್ತು ವಿವಿಧ ಸಂಘಗಳ ವತಿಯಿಂದ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆಯರು ತಮಗೆ ಆದಂತಹ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಬಹುದಾಗಿದೆ. ಅತ್ಯಂತ ಸರಳವಾಗಿ ಇರುವ ಕಾನೂನು ವಿಚಾರಗಳನ್ನು ಜನಸಾಮಾನ್ಯರು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಮಹಿಳಾ ನೌಕರರು ಕಾರ್ಯನಿರ್ವಹಿಸುವ ಸ್ಥಳದಲ್ಲಿ ಏನಾದರೂ ಲೈಂಗಿಕ ಕಿರುಕುಳ ಕಂಡು ಬಂದರೆ ಹೇಗೆ ದೂರು ನೀಡಬೇಕು ಮತ್ತು ದೂರು ನೀಡುವಾಗ ಯಾವ ಸಂಗತಿಗಳನ್ನು ಪರಿಗಣಿಸಬೇಕು ಎಂಬುದರ ಬಗ್ಗೆ ಮಾಹಿತಿ ಹೊಂದಿರಬೇಕು. ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ಅಲ್ಲಿನ ಮುಖ್ಯಸ್ಥರು ಅಥವಾ ಸಹೋದ್ಯೋಗಿಗಳು ಏನಾದರೂ ಲೈಂಗಿಕ ಕಿರುಕುಳ ನೀಡಿದರೆ ಕಿರುಕುಳಕ್ಕೆ ಒಳಪಟ್ಟ ಮಹಿಳೆಯು ಕಡ್ಡಾಯವಾಗಿ ಬರವಣಿಗೆಯಲ್ಲಿ ದೂರು ನೀಡಬೇಕಾಗುತ್ತದೆ ಎಂದು ಹೇಳಿದರು.
ಆಂತರಿಕ ದೂರು ಸಮಿತಿಗೆ ವಿಚಾರಣೆ ನಡೆಸುವ ಅಧಿಕಾರವಿದೆ. ಮುಂದಿನ ಕ್ರಮ ಕೈಗೊಳ್ಳಬಹುದಾಗಿರುತ್ತದೆ. ಸಿವಿಲ್ ನ್ಯಾಯಾಲಯದ ಎಲ್ಲಾ ಅಧಿಕಾರವು ಈ ಆಂತರಿಕ ದೂರು ಸಮಿತಿಗೆ ಇರುವುದರಿಂದ ಸಮಸ್ಯೆಗೆ ಪರಿಹಾರವನ್ನು ನೀಡಬಹುದಾಗಿದೆ ಎಂದು ತಿಳಿಸಿದರು.
DVS College of Arts, Science and Commerce ಕಾರ್ಯಗಾರದಲ್ಲಿ ಭಾರತ್ ನ್ಯಾಯ ಸಮಿತಿ ಮತ್ತು ಪೋಕ್ಸೋ ಕಾಯ್ದೆಯ ಸಂಪೂರ್ಣ ವಿವರಗಳನ್ನು ತಿಳಿಸಿದರು. ಕರ್ತವ್ಯದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನಿಯಂತ್ರಣ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್ ಮಾತನಾಡಿ, ಮಹಿಳೆಯರು ಸಮಾಜದ ಎಲ್ಲ ರಂಗಗಳಲ್ಲಿ ಸಾಧನೆಗಳನ್ನು ಮಾಡುತ್ತಿದ್ದಾರೆ. ಬಹಳ ಮುಖ್ಯವಾಗಿ ಅಂಚೆ ಇಲಾಖೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳಾ ನೌಕರರಿದ್ದಾರೆ ಎಂದರು.
ಅಖಿಲ ಭಾರತ ಅಂಚೆ ಅಧಿಕಾರಿಗಳ ಸಂಘದ ರೂಪಾ, ಕ್ರಿಸ್ಟಿನಾ ಇತರರಿದ್ದರು.
ಸೊರಬದಲ್ಲಿ ಸಂಭ್ರಮದ ಹೋಳಿ ಹಬ್ಬ ಆಚರಣೆ
ವಿಶ್ವ ಹಿಂದೂ ಪರಿಷದ್, ಬಜರಂಗದಳ ಹಾಗೂ ವಿವಿಧ ಹಿಂದೂ ಪರ ಸಂಘನೆಗಳ ವತಿಯಿಂದ ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಆವರಣದಲ್ಲಿ ಹಿಂದೂ ಬಾಂಧವರು ಸಂಭ್ರಮದಿಂದ ಹೋಳಿ ಹಬ್ಬದ ಅಂಗವಾಗಿ ರಂಗ ಪಂಚಮಿ ಆಚರಿಸಿದರು.
ಭ್ರಾತೃತ್ವದ ಕೊಂಡಿ ಬೆಸೆಯುವ ಹಬ್ಬದ ಅಂಗವಾಗಿ ಯುವ ಜನತೆ ಡಿಜೆ ಸದ್ದಿಗೆ ರೈನ್ ಡ್ಯಾನ್ಸ್ ಮಾಡುವ ಮೂಲಕ ಸಂತಸಪಟ್ಟರು. ಹಾಡುಗಳ ಸದ್ದಿಗೆ ಹಿರಿಯರು, ಕಿರಿಯರೆನ್ನೆದೇ ಎಲ್ಲರೂ ಜೊತೆಗೂಡಿ ಹೆಜ್ಜೆಹಾಕಿದರು. ಪರಸ್ಪರ ಬಣ್ಣ ಹಚ್ಚುವ ಮೂಲಕ ಹಬ್ಬದ ಶುಭಾಷಯ ವಿನಿಮಯ ಮಾಡಿಕೊಂಡರು. ರೈನ್ ಡ್ಯಾನ್ಸ್ ಮಾಡಲು ಯುವತಿಯರಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿತ್ತು.
ರಂಗ ಪಂಚಮಿ ಆಚರಣೆಗೆ ಸಮಾಜ ಸೇವಕ ಡಾ. ಎಚ್.ಇ. ಜ್ಞಾನೇಶ್ ಚಾಲನೆ ನೀಡಿದರು. ವಿಶ್ವ ಹಿಂದೂ ಪರಿಷದ್ ತಾಲೂಕು ಅಧ್ಯಕ್ಷ ನಿರಂಜನ್, ಜಿಲ್ಲಾ ಕಾರ್ಯದರ್ಶಿ ಎಚ್.ಎಲ್. ಚಂದನ್, ತಾಲೂಕು ಕಾರ್ಯದರ್ಶಿ ಸಾತ್ವಿಕ್, ಸಹ ಕಾರ್ಯದರ್ಶಿ ನಂದನ್ ಕುಮಾರ್, ಬಜರಂಗದಳದ ಸಾಗರ ಜಿಲ್ಲಾ ಸಹ ಸಂಚಾಲಕ ರವಿ ಗುಡಿಗಾರ್, ಸಹ ಸಂಯೋಜಕ ಬಿ. ಶಶಿಕುಮಾರ್, ತಾಲೂಕು ಸಂಯೋಜಕ ಉಮಾಶಂಕರ್, ಸಹ ಸಂಯೋಜಕ್ ಮಣಿ…
ಅಪರಿಚಿತ ಶವ ಪತ್ತೆ
ಮಾ.08 ರಂದು ತುಪ್ಪೂರು ಗ್ರಾಮದ ಅನೆಮರಿ ಕ್ರಾಸ್ ಬಳಿ ಶಿವಮೊಗ್ಗ ಸಾಗರ ಎನ್ ಹೆಚ್ ರಸ್ತೆ ಪಕ್ಕದಲ್ಲಿ ಸುಮಾರು 40-50 ವಯಸ್ಸಿನ ಅನಾಮದೇಯ ವ್ಯಕ್ತಿ ಮಲಗಿದ್ದ ಸ್ಥಿತಿಯಲ್ಲಿ ಮೃತ ಪಟ್ಟಿರುತ್ತಾನೆ.
ಮೃತನ ಚಹರೆ ದೃಡಕಾಯ ಮೈ ಕಟ್ಟು, ಎಣ್ಣೆಕಪ್ಪು ಮೈ ಬಣ್ಣ, 5.6 ಅಡಿ ಎತ್ತರ, ಎಡ ಪಕ್ಕೆಯಲ್ಲಿ ಸಾಸಿವೆ ಗಾತ್ರದ ಮಚ್ಚೆ ಇರುತ್ತದೆ, ಮೃತದೇಹ ಮೇಲೆ ನೀಲಿ ಬಣ್ಣದ ತುಂಬು ತೋಳಿನ ಟೀ ಶರ್ಟ, ತಿಳಿ ಹಸಿರು ಬಣ್ಣದ ನೈಟ್ ಪ್ಯಾಂಟ್ಇರುತ್ತದೆ.
ಈ ಮೃತ ವ್ಯಕ್ತಿಯ ವಾರಸುದಾರರು ಪತ್ತೆಯಾದಲ್ಲಿ ಅಥವಾ ಯಾವುದೇ ಪೊಲೀಸ್ ಠಾಣೆಯಲ್ಲಿ ಮನುಷ್ಯಕಾಣೆ ಪ್ರಕರಣ ದಾಖಲಾಗಿದ್ದಲ್ಲಿ ಪಿ.ಐ ಕುಂಸಿ ಠಾಣೆ-9480803351, ಕುಂಸಿ ಪೊಲೀಸ್ ಠಾಣೆ -8277982830, ಶಿವಮೊಗ್ಗ ಕಂಟ್ರೋಲ್ ರೂಂ- 08182 261413 ಗಳನ್ನು ಸಂಪರ್ಕಿಸಿ, ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
Breaking News ಕಡೂರಿನ ಎಚ್.ಟಿ.ಪ್ರವೀಣ್ಐಎಎಸ್ ತೇರ್ಗಡೆ
UPSC ಚಿಕ್ಕಮಗಳೂರು ಜಿಲ್ಲೆಯ, ನಮ್ಮ ಕಡೂರು ತಾಲೂಕಿನ, ಹುಲಿಕೆರೆಯ ಪ್ರವೀಣ ಎಚ್ ಟಿ ಅವರು ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 720ನೇ ರ್ಯಾಂಕ್ ಪಡೆದಿದ್ದಾರೆ.
ಈ ಸಾಧನೆಯಿಂದಾಗಿ ಪ್ರವೀಣ್ ಜಿಲ್ಲೆಗೆ ಗೌರವ ತಂದಿದ್ದಾರೆ. ತಂದೆ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ತಮ್ಮಯ್ಯನವರು ಪುತ್ರನ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ.
ತಮ್ಮಯ್ಯ ಮತ್ತು ನೀಲಮ್ಮ ದಂಪತಿಗಳ ಪುತ್ರರಾದ ಪ್ರವೀಣ್ ಅವರ ಸಾಧನೆ ಜಿಲ್ಲೆಯ ಯುವಕರಿಗೆ ಸ್ಫೂರ್ತಿಯಾಗಲಿ .
UPSC ಪರೀಕ್ಷೆಯಲ್ಲಿ ಈ ಬಾರಿ 958 ಮಂದಿ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಇವರ ಪೈಕಿ 25 ಕನ್ನಡಿಗರು ಉತ್ತೀರ್ಣರಾಗಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
Balkish Banu ಮಹಿಳೆಯರಿಗೆ ಕಾನೂನಿನ ರಕ್ಷಣೆ ಇದೆ : ಬಲ್ಕೀಶ್ ಬಾನು
Balkish Banu ಪ್ರಸ್ತುತ ಸಮಾಜದಲ್ಲಿ ಮಹಿಳೆಯರಿಗೆ ಕಾನೂನು ಎಲ್ಲ ರೀತಿಯ ರಕ್ಷಣೆ ನೀಡುತ್ತಿದ್ದು ಕಾನೂನುಗಳನ್ನು ಅರಿತು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಶಿವಮೊಗ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇವತ್ತು ಅಮ್ಮನ ದಿನ. ಹೆಣ್ಣು ಗಂಡು ಎಂಬ ತಾರತಮ್ಯ ಇಲ್ಲ. ಹೆಣ್ಣುಮಕ್ಕಳಿಗೆ ದೇವರು ಎಲ್ಲ ಗುಣಗಳನ್ನು ನೀಡಿದ್ದು ತಾಯಿಯಾಗಿ, ಮಗಳಾಗಿ, ಸಹೋದರಿಯಾಗಿ, ಪತ್ನಿಯಾಗಿ ಎಲ್ಲ ರೀತಿಯ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾಳೆ. ಹೆಣ್ಣುಮಕ್ಕಳು ಈ ಸಮಾಜದಲ್ಲಿ ಏನನ್ನಾದರೂ ಸಾಧಿಸಬಹುದು ಎಂಬ ನಂಬಿಕೆಯನ್ನು ಹೊಂದಿರಬೇಕು. ಹೆಣ್ಣುಮಕ್ಕಳ ಶಿಕ್ಷಣ, ಕ್ರೀಡೆಗೆ ಪ್ರೋತ್ಸಾಹ ಮಾಡುವುದು ತುಂಬಾ ಮುಖ್ಯವಾಗಿದೆ. ವಿವಿಧ ಸಂಘ ಸಂಸ್ಥೆಗಳು ಇಂತಹ ಕಾರ್ಯಗಳಲ್ಲಿ ಭಾಗವಹಿಸುವುದರ ಮೂಲಕ ಉತ್ತಮವಾಗಿ ಈ ದಿನವನ್ನು ಆಚರಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ ಎಂ. ಎಸ್ ಮಾತನಾಡಿ, ತಾಯಿ ಜೀವನದಲ್ಲಿ ಕೊನೆಯವರೆಗೂ ಪ್ರೀತಿ, ವಾತ್ಸಲ್ಯ ನೀಡಿ ಮಾರ್ಗದರ್ಶನ ನೀಡುತ್ತಾಳೆ. ಯಾವುದೇ ಒಂದು ಕುಟುಂಬ ಹಾಗೂ ದೇಶದ ಏಳಿಗೆಗೆ ಮಹಿಳೆಯರ ಪಾತ್ರ ತುಂಬಾ ಮುಖ್ಯ. ಪ್ರೀತಿ, ಅಕ್ಕರೆ, ಜೀವನದ ಮುಖ್ಯ ಅಂಶಗಳನ್ನು ನೀಡುವವರೇ ತಾಯಿ, ಅಕ್ಕ, ತಂಗಿಯರಾಗಿದ್ದಾರೆ. ಕುಟುಂಬದ ಸೇತುವೆಯಾಗಿ ಮಹಿಳೆಯರು ಕಾರ್ಯ ನಿರ್ವಹಿಸುತ್ತಾರೆ.
ಕಾನೂನಾತ್ಮಕವಾಗಿ ಯಾವುದೇ ಸಮಸ್ಯೆಗಳು ಇದ್ದಲ್ಲಿ ಅಥವಾ ಸಲಹೆಗಳು ಬೇಕಾದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಡಿಯಲ್ಲಿ ಉಚಿತ ಕಾನೂನು ಅರಿವು, ನೆರವು, ಸಲಹೆಗಳನ್ನು ನೀಡಲಾಗುತ್ತದೆ. ಹಾಗೂ ಸಹಾಯವಾಣಿ 15100 ಸಂಖ್ಯೆಗೆ ಕರೆ ಮಾಡಿ ಸಲಹೆ ಮತ್ತು ನೆರವನ್ನು ಪಡೆಯಬಹುದು ಎಂದರು.
Balkish Banu ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಡಾ. ಹಸೀನಾ ಮಾತನಾಡಿ ಹೆಣ್ಣು ಒಂದು ದೊಡ್ಡ ಶಕ್ತಿ. ತಾಯಿಯಾಗಿ, ಮಡದಿಯಾಗಿ, ಗೃಹಿಣಿಯಾಗಿ, ಗೆಳತಿಯಾಗಿ, ಸಹೋದರಿಯಾಗಿ ತಮ್ಮ ಬದುಕನ್ನೇ ಕುಟುಂಬಕ್ಕಾಗಿ ಮೀಸಲಿಟ್ಟು ಕಾಪಾಡುತ್ತಾಳೆ. ಮಹಿಳೆ ಧಾರ್ಮಿಕವಾಗಿ,ರಾಜಿಕೀಯವಾಗಿ, ಸಾಮಾಜಿಕವಾಗಿ ಪ್ರತಿಯೊಂದರಲ್ಲೂ ಸಬಲೀಕರಣಗೊಂಡಿದ್ದಾಳೆ. ಭಾರತದ ಮೊದಲ ಅಕ್ಷರದ ಅವ್ವ ಸಾವಿತ್ರಿ ಬಾಯಿ ಫುಲೆ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹಾಗೂ ಹಲವಾರು ಧೀಮಂತ ಮಹಿಳೆಯರು ಸ್ವಾತಂತ್ರ್ಯಹೋರಾಟಕ್ಕೆ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿದ್ದು ಅವರ ಚರಿತ್ರೆಯನ್ನು ಇಂದಿನ ಹೆಣ್ಣುಮಕ್ಕಳು ಮನದಲ್ಲಿ ಇಟ್ಟುಕೊಂಡು ಮುಂದಕ್ಕೆ ಸಾಗಬೇಕು ಎಂದು ಹೇಳಿದರು. ಪ್ರಾಚೀನ ಕಾಲದಿಂದ ಇಂದಿನ ಕಾಲದವರೆಗೂ ನಾರಿಶಕ್ತಿಯ ಮುಂದೆ ಬೇರೆ ಯಾವ ಶಕ್ತಿಯು ಇಲ್ಲ, ನಾಡಿನ ಸಂಸ್ಕೃತಿಯನ್ನು, ಪರಂಪರೆಯನ್ನು ಉಳಿಸಿಕೊಂಡು ಹೋಗುವುದರಲ್ಲಿ ಮಹಿಳೆಯರು ತುಂಬಾ ಮುಖ್ಯ ಪಾತ್ರ ವಹಿಸುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾ ನಾಯ್ಕ್, ಸ್ನೇಹಲತಾ, ಅರವಿಂದ್, ವಿದ್ಯಾರ್ಥಿಗಳು ಹಾಜರಿದ್ದರು.
International Women’s Day ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು: ಬಲ್ಕೀಶ್ ಬಾನು
International Women’s Day ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು. ಮಹಿಳೆ ಪ್ರಗತಿ ಹೊಂದಲು ಶಿಕ್ಷಣ ಮತ್ತು ಕುಟುಂಬದ ಬೆಂಬಲ ಅತಿ ಅವಶ್ಯ ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ – 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
೧೯೦೮ ರಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಡಿದ ಮಹಿಳಾ ಕಾರ್ಮಿಕರಿಗೆ ನಮನಗಳು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಘೋಷಣೆಯಾಗಲು ಈ ಹೋರಾಟವೂ ಕಾರಣವಾಗಿದೆ.
ಮನೆಯಿಂದ ಸಮಾಜ ಶುರುವಾಗುತ್ತದೆ.ಅಲ್ಲಿಂದಲೇ ಅವಕಾಶ ಸಿಕ್ಕರೆ ಪ್ರಗತಿ ಸಾಧಿಸಲು ಸಾಧ್ಯವಾಗಿದ್ದು ಶಿಕ್ಷಣ ಪಡೆಯುವುದು ಬಹಳ ಮುಖ್ಯವಾಗಿದೆ.
ಭೂಮಿಯಿಂದ ಆಕಾಶದವರೆಗೆ ಇಂದು ಎಲ್ಲ ಕ್ಷೇತ್ರದಲ್ಲಿ ಹೆಣ್ಣು ಮುಂದೆ ಬರುತ್ತದ್ದಾಳೆ. ಇದಕ್ಕೆ ಮುಖ್ಯ ಕಾರಣ ಶಿಕ್ಷಣ. ಹಿಂದೆ ಹೆಣ್ಣುಮಕ್ಕಳಿಗೆ ಹೆಚ್ಚಿನದಾಗಿ ಮೌಲ್ಯಾಧಾರಿತ ಉಪಚಾರ ಹೇಳಲಾಗುತ್ತಿತ್ತು. ಆಕೆಯ ಪ್ರಗತಿಗೆ ಅವಕಾಶ ಇರಲಿಲ್ಲ.
ತ್ಯಾಗ, ಸಹನೆ ಜನ್ಮತಃ ಹೊಂದಿರುವ ಹೆಣ್ಣು ಮನೆಯಲ್ಲಿ ಹೋಂಮಿನಿಸ್ಟರ್ ಆದಿಯಾಗಿ ಎಲ್ಲ ಜವಾಬ್ದಾರಿ ನಿರ್ವಹಣೆ ಮಾಡುತ್ತಾಳೆ. ಕೃಷಿ, ಕೈಗಾರಿಕೆಯಿಂದ ಹಿಡಿದು ದೊಡ್ಡ ದೊಡ್ಡ ಹುದ್ದೆಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ.
ಮಹಿಳಾ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಮಹಿಳೆಯರ ಯುಗ ರಾಜ್ಯದಲ್ಲಿದೆ. ಗ್ಯಾರಂಟಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ.
ರಾಜಕೀಯ ವಲಯದಲ್ಲಿ ಅವಕಾಶಗಳು ಇನ್ನೂ ಹೆಚ್ಚಬೇಕು.ಈ ವಲಯದಲ್ಲಿ ಹೆಣ್ಣು ಮಕ್ಕಳು ಹೆಚ್ಚೆಚ್ಚು ಪಾಲ್ಗೊಳ್ಳಬೇಕು. ಕೈಗಾರಿಕಾ ಕ್ಷೇತ್ರದ
ಅವಕಾಶಗಳನ್ನು ಬಳಸಿಕೊಳ್ಳಬೇಕೆಂದರು.
ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಮಾತನಾಡಿ, ಹೆಣ್ಣು ಸಬಲಳು. ನೋವನ್ನು ಸಹಿಸಿ ಆಕೆ ನಗುತ್ತಾಳೆ. ದೇವರು ಆಕೆಗೆ ವಿಶೇಷ ಶಕ್ತಿ ನೀಡಿದ್ದಾರೆ. ಸಹನೆ, ಪ್ರೀತಿಯನ್ನು ಹೆಚ್ಚಿಸುವ ಶಕ್ತಿಯನ್ನು ಸೃಷ್ಟಿ ಆಕೆಗೆ ನೀಡಿದೆ. ಮನೆಯ ಎಲ್ಲ ಕೆಲಸ ನಿರ್ವಹಣೆ ಮಾಡಿ, ಮನೆಯ ಮಂದಿಯನ್ನು, ಮಕ್ಕಳನ್ನು ಗುರುವಾಗಿ, ಮನೆಯ ವೈದ್ಯೆಯಾಗಿ, ವಕೀಲಳಾಗಿ, ಹೀಗೆ ಹಲವಾರು ಪಾತ್ರಗಳನ್ನು ನಿರ್ವಹಿಸುತ್ತಾಳೆ. ಅದಕ್ಕೆ ನಮ್ಮ ಸಂಸ್ಕೃತಿಯಲ್ಲಿ ಮಹಿಳೆಗೆ ಮಾತೆಯ ಮೌಲ್ಯವಿದೆ.
೨೦ ನಿಮಿಷ ನಿಮಗೆ ಇಷ್ಟವಾದ ಕೆಲಸಕ್ಕಾಗಿ, ಹವ್ಯಾಸಕ್ಕಾಗಿ ಮೀಸಲಿಡಿರಿ. ನಿಮಗಾಗಿ ಸಮಯ ಮಾಡಿಕೊಂಡು ನಿಮ್ಮ ಹವ್ಯಾಸಗಳಿಗೆ ಒತ್ತು ನೀಡಿದರೆ ನಿಮ್ಮಲ್ಲಿ ಉತ್ತಮ ಬದಲಾವಣೆ ಸಾಧ್ಯವಾಗುತ್ತದೆ. ಕೊಡುವಂತಹ ಮನೋಭಾವವನ್ನು ಮಕ್ಕಳಿಗೆ ಕಲಿಸಿಕೊಡಬೇಕು ಎಂದ ಅವರು ಮಕ್ಕಳನ್ನು ಆಸ್ತಿ ಮಾಡುವ ಶಕ್ತಿ ತಾಯಿಗಿದೆ ಎಂದರು.
ಕರ್ನಾಟಕ ರಾಜ್ಯ ಎಸ್ ಸಿ /ಎಸ್ ಟಿ ಅಲೆಮಾರಿಗಳ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಮಾತನಾಡಿ , ಕುಟುಂಬ, ಸಮಾಜದಲ್ಲಿ ಎದುರಾಗುವ ಸವಾಲುಗಳು ಮಹಿಳೆಗೆ ಮಾತ್ರ ತಿಳಿದಿದೆ. ಅಡುಗೆ ಮನೆಯಿಂದ ಅಂತರಿಕ್ಷದವರೆಗೆ ಹೋಗಿದ್ದರೂ ಕಟ್ಟುಪಾಡುಗಳು ಅಷ್ಟೇ ಇವೆ. ನಮ್ಮ ಹಕ್ಕುಗಳಿಗಾಗಿ ೯೮ ವರ್ಷಗಳ ಹಿಂದೆ ನಡೆದ ಕಾರ್ಮಿಕ ಹೋರಾಟವು ಮಹಿಳಾ ದಿನಾಚರಣೆಗೆ ಕಾರಣವಾಗಿದೆ. ೧೨ ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪದಲ್ಲಿ ಹೆಣ್ಣಿಗೆ ಸಮಾನ ಅವಕಾಶ ನೀಡಿ ಸಾಮಾಜಿಕ ನ್ಯಾಯ ಮೆರೆದರು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರು ಮಹಿಳೆಗೆ ಸಾಂವಿಧಾನಿಕ ಹಕ್ಕುಗಳನ್ನು ನೀಡಿದ್ದು ಇವರನ್ನೆಲ್ಲ ಸ್ಮರಿಸಲೇಬೇಕು. ದೇಶದ ಹೆಣ್ಣುಮಕ್ಕಳು ಸುಶಿಕ್ಷಿತರಾಗಿ ಎಲ್ಲ ರಂಗಗಳಲ್ಲಿ ಮುಂದೆ ಬರಬೇಕೆಂದು ಕ್ರಾಂತಿ ಮಾಡಿ, ಶಿಕ್ಷಣ ನೀಡಿದ ಮಹಿಳೆ ಸಾವಿತ್ರಿಬಾಯಿ ಫುಲೆಯಂತಹವರನ್ನು ಮರೆಯಬಾರದು. ಹೆಣ್ಣಿಗೆ ಜಾತಿ, ಧರ್ಮ ಇಲ್ಲ. ಅವಳೊಂದು ಶಕ್ತಿ. ಅವಕಾಶಗಳನ್ನು ಬಳಸಿಕೊಂಡು, ಪ್ರಗತಿ ಹೊಂದಿ, ಉತ್ತಮ ಕೊಡುಗೆ ನೀಡಬೇಕಿದೆ. ನಮ್ಮೊಂದಿಗೆ ಇತರೆ ಮಹಿಳೆಯರನ್ನು ಬೆಳೆಸಬೇಕು. ಹಾಗೂ ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಎಂದರು.
International Women’s Day ಸೂಡಾ ಅಧ್ಯಕ್ಷರಾದ ಹೆಚ್ ಎಸ್. ಸುಂದರೇಶ್ ಮಾತನಾಡಿ, ೧೯೦೮ ರಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮಹಿಳಾ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ನಡೆಸಿದ ಹೋರಾಟಗಳು ಅಂತರಾಷ್ಟ್ರೀಯ ಮಹಿಳಾ ದಿನ ಘೋಷಣೆಗೆ ಕಾರಣವಾಯಿತು.
ಎಲ್ಲ ಕ್ಷೇತ್ರದಲ್ಲಿ ಮಹಿಳೆಯರು ಉತ್ತಮವಾಗಿ ಸಾಧನೆ ಮಾಡಿದ್ದಾರೆ. ಉತ್ತಮ ಆಡಳಿತಗಾರರೂ ಆಗಿದ್ದಾರೆ. ತುಳಿತಕ್ಕೊಳಗಾಗಿ ಅಡುಗೆ ಮನೆಗೆ ಸೀಮಿತವಾಗಿದ್ದ ಹೆಣ್ಣು ಇಂದು ಎಲ್ಲ ರಂಗಗಳಲ್ಲಿ ಮುಂದೆ ಬರುತ್ತಿದ್ದಾರೆ.
ಮಹಿಳಾ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಗೃಹಲಕ್ಷ್ಮಿ,ಶಕ್ತಿ ಯಂತಹ ಯೋಜನೆಗಳನ್ನು ನೀಡಿದೆ ಎಂದರು.
ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಟಾನದ ಅಧ್ಯಕ್ಷರು ಹಾಗೂ ಕಮಲಾ ನೆಹರು ಮಹಿಳಾ ಕಾಲೇಜಿನ ನಿ.ಉಪನ್ಯಾಸಕರಾದ ಪ್ರೊ.ಕಿರಣ್ ಆರ್ ದೇಸಾಯಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಕೊಡು ಮತ್ತು ಪಡೆ ಎಂಬುದು ಈ ವರ್ಷದ ಮಹಿಳಾ ದಿನಾಚರಣೆ ಘೋಷವಾಕ್ಯವಾಗಿದ್ದು ಏನಾದರೂ ಪಡೆಯಲಿಕ್ಕಾಗಿ ಕೆಲವನ್ನು ತ್ಯಾಗ ಮಾಡಬೇಕು. ಮಹಿಳೆ ನಿರಂತರವಾಗಿ ಇದನ್ನೇ ಮಾಡುತ್ತಾ ಬಂದಿದ್ದಾಳೆ.
ಮಹಿಳಾ ದಿನ ನಮ್ಮನ್ನು ನಾವೇ ಸಂಭ್ರಮಿಸುವ ದಿನ. ಮಹಾ ಇಳೆ ಮಹಿಳೆ. ಇದೊಂದು ಶಕ್ತಿಶಾಲಿ ಪದ. ಆಕೆಗೆ ದೈಹಿಕ ಶಕ್ತಿ , ಭಾವನಾತ್ಮಕ ಶಕ್ತಿ, ಬೌಧ್ದಿಕ ಶಕ್ತಿ, ಮಾನಸಿಕ ಶಕ್ತಿ, ಆತ್ಮಿಕ ಶಕ್ತಿ ಅಗಾಧವಾಗಿದೆ. ಇತಿಹಾಸದುದ್ದಕ್ಕೂ ಹೆಣ್ಣಿನ ಶಕ್ತಿಯನ್ನು ಸಾಕ್ಷೀಕರಿಸುತ್ತಾ ಬಂದಿದ್ದೇವೆ. ಅಸಂಖ್ಯಾತ ಮಹಿಳಾ ಸಾಧಕಿಯರು ಮಾದರಿಯಾಗಿದ್ದಾರೆ. ಆತ್ಮವಿಶ್ವಾಸ, ದೃಢತೆ ಬಹಳ ಮುಖ್ಯವಾಗಿದ್ದು ನಡೆ ನುಡಿ, ಉಡುಗೆ ತೊಡುಗೆ ಬಗ್ಗೆ ಗಮನ ಹರಿಸಬೇಕು ಎಂದ ಅವರು ಮಕ್ಕಳಿಗೆ ಮಾನವೀಯತೆ ಕಲಿಸುವುದು ಬಹಳ ಮುಖ್ಯ ಎಂದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ನಿರೂಪಣಾಧಿಕಾರಿ ಡಾ.ಸಂತೋಷ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅ್ಇಕಾರಿ ಶಶಿರೇಖಾ, ತಾಜುದ್ದೀನ್ ಖಾನ್, ರೇಖಾ, ಸ್ ಒಕ್ಕೂಟದ ಅಧ್ಯಕ್ಷೆ ಪ್ರಭಾವತಿ, ಅಕ್ಕ ಪಡೆ ಎಎಸ್ ಐ ಹೇಮಾ, ಇತರರು ಪಾಲ್ಗೊಂಡಿದ್ದರು.
Madhu Bangarappa ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ಕನ್ನಡಿಗರಿಗೆ ಮಧು ಬಂಗಾರಪ್ಪನವರಿಂದ ಶುಭ ಹಾರೈಕೆ
Madhu Bangarappa ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿ ಪಡೆದು ತೇರ್ಗಡೆಯಾದ ಕರ್ನಾಟಕದ ಎಲ್ಲಾ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.
ನಿಮ್ಮ ನಿರಂತರ ಪರಿಶ್ರಮ ಮತ್ತು ಛಲ ಇಂದು ರಾಜ್ಯದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದಿದೆ. ನಿಮ್ಮ ಈ ಯಶಸ್ಸು ನಾಡಿನ ಲಕ್ಷಾಂತರ ಯುವಜನತೆಗೆ ಮಾದರಿಯಾಗಲಿ. ಸಮಾಜ ಸೇವೆಯ ನಿಮ್ಮ ಮುಂದಿನ ಪಯಣ ಅರ್ಥಪೂರ್ಣವಾಗಿರಲಿ ಎಂದು ಹಾರೈಸುತ್ತೇನೆ.
Madhu Bangarappa ಇನ್ನು, ಈ ಬಾರಿ ಯಶಸ್ಸು ಕಾಣದವರು ಎದೆಗುಂದಬೇಡಿ. ಸೋಲು ಗೆಲುವಿನ ಹಾದಿಯ ಒಂದು ಭಾಗವಷ್ಟೇ. ನಿಮ್ಮ ಪ್ರಯತ್ನ ಮತ್ತು ಆತ್ಮವಿಶ್ವಾಸದ ಮೇಲೆ ನಂಬಿಕೆಯಿಟ್ಟು ಮುಂದಿನ ಗುರಿಯತ್ತ ಸಾಗಿ. ಯಶಸ್ಸು ಖಂಡಿತ ನಿಮ್ಮದಾಗಲಿದೆ.
