Monday, April 6, 2026
Monday, April 6, 2026
Home Blog Page 613

Human Fraternity Forum ಮೌಢ್ಯತೆ ವಿರುದ್ಧ ಜನಜಾಗೃತಿ ಪ್ರಜ್ಞಾವಂತರ ಜವಾಬ್ದಾರಿ- ರಾಜೇಶ್ .ಸಿ.ಕಾನಡೆ

0

Human Fraternity Forum ಮೌಢ್ಯತೆ, ಕಂದಾಚಾರ, ಅಂಧಶ್ರದ್ಧೆ ಸಮಾಜದಲ್ಲಿ ಬಲವಾಗಿ ಬೇರೂರಿವೆ. ಅವುಗಳ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುವ ಕಾರ್ಯ ಪ್ರಜ್ಞಾವಂತರ ಜವಾಬ್ದಾರಿ ಎಂದು ಮಾನವ ಬಂಧುತ್ವ ವೇದಿಕೆ ಸೊರಬ ತಾಲೂಕು ಅಧ್ಯಕ್ಷ ರಾಜೇಶ್ ಸಿ. ಕಾನಡೆ ಹೇಳಿದರು.

ಆಯನೂರಿನ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಮಾನವ ಬಂಧುತ್ವ ವೇದಿಕೆ ನೇತೃತ್ವದಲ್ಲಿ ಆಸರೆ ಮಹಿಳಾ ಸಂಘ ಹಾಗೂ ವಿವಿಧ ಸಂಘಟನೆ ನೇತೃತ್ವದಲ್ಲಿ ಹಮ್ಮಕೊಂಡ ಬಸವ ಪಂಚಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಗರ ಪಂಚಮಿ ಹಬ್ಬದ ಆಚರಣೆ ಹೆಸರಿನಲ್ಲಿ ಹುತ್ತ ಮತ್ತು ಕಲ್ಲು ನಾಗರ ಮೂರ್ತಿಗೆ ಹಾಲು, ನೈವೇದ್ಯ ಅರ್ಪಿಸಿ ದುಂದು ವೆಚ್ಚ ಮಾಡುವುದರಿಂದ ಲಕ್ಷಾಂತರ ಲೀಟರ್ ಹಾಲು ಮಣ್ಣು ಪಾಲು ಆಗುತ್ತಿದೆ. ಇದರಿಂದ ಯಾರಿಗೆ ಸಹ ಉಪಯೋಗವಿಲ್ಲ.
ಇದರ ಬದಲಾಗಿ ಬಡ ಮಕ್ಕಳು, ರೋಗಿಗಳು, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಹಾಲು, ಹಣ್ಣು ನೀಡಿದರೆ ದೇವರಿಗೆ ನಿಜವಾದ ಪೂಜೆ ಸಲ್ಲಿಸಿದಂತಾಗುತ್ತದೆ. ಮೌಢ್ಯತೆ ವಿರುದ್ಧ ಸಮಾಜದಲ್ಲಿ ನಿರಂತರವಾಗಿ ಜಾಗೃತಿ ಮೂಡಿಸುವ ಪ್ರಯತ್ನ ಎಲ್ಲರಿಂದ ನಡೆಯಬೇಕು ಎಂದರು.

ಸಂವಿಧಾನವೇ ನಮ್ಮ ಧರ್ಮ ಗ್ರಂಥವಾಗಿದ್ದು, ಮಾನವತವಾದವೇ ನಮ್ಮ ಧರ್ಮ ಎಂಬ ಉದ್ಧೇಶದಿಂದ ವೇದಿಕೆ ಕಾರ್ಯನಿರ್ವಹಿಸುತ್ತಿದೆ. ರಾಜ್ಯದಲ್ಲಿ ಅಪೌಷ್ಟಿಕತೆಯಿಂದ 2023 ರಲ್ಲಿ ಸುಮಾರು 2.23 ಲಕ್ಷ ಮಕ್ಕಳು ಬಳಲುತ್ತಿರುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದೃಢಪಡಿಸಿತ್ತು. ಈ ನಿಟ್ಟಿನಲ್ಲಿ ಹಬ್ಬಗಳಲ್ಲಿನ ಮೌಢ್ಯತೆ ತೊಲಗಿಸಬೇಕು. ಕಲ್ಲಿಗೆ ಹಾಲು ಎರೆಯುವ ಬದಲು ಮಕ್ಕಳಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಅಂಗನವಾಡಿ ಮಕ್ಕಳಿಗೆ ಪಠ್ಯ ಪರಿಕರಗಳನ್ನು ಮಾನವ ಬಂಧುತ್ವ ವೇದಿಕೆಯಿಂದ ವಿತರಿಸಲಾಯಿತು.

Human Fraternity Forum ಆಸರೆ ಮಹಿಳಾ ಸಂಘದ ಅಧ್ಯಕ್ಷೆ ಆರ್. ಶಿಲ್ಪಾ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯೆ ಲತಾ, ಆಸರೆ ಮಹಿಳಾ ಸಂಘದ ಕಾರ್ಯದರ್ಶಿ ವಿಶಾಲಾಕ್ಷಮ್ಮ, ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಟಿ. ನಾಗರಾಜಪ್ಪ, ಮಾನವ ಬಂಧುತ್ವ ವೇದಿಕೆ ಗುಡುಗಿನಕೊಪ್ಪ ಗ್ರಾಮ ಸಂಚಾಲಕ ವೀರಭದ್ರ ಸ್ವಾಮಿ, ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಸೊರಬ ಕಾರ್ಯದರ್ಶಿ ಟಿ.ಎಚ್. ಲತಾ ಸೇರಿದಂತೆ ಅಂಗನವಾಡಿ ಸಿಬ್ಬಂದಿ ಮತ್ತು ಸ್ಥಳೀಯ ಗ್ರಾಮಸ್ಥರು, ಮತ್ತಿತರರು ಉಪಸ್ಥಿತರಿದ್ದರು.

Kanchi Kamakoti Medical Trust ನೇತ್ರ ಸಂಬಂಧೀ ಐಆರ್ ಐ ಎಸ್ ರಿಟ್ರಾಕ್ಟರ್ ಆವಿಷ್ಕಾರಕ್ಕೆ ಪೇಟೆಂಟ್

0

Kanchi Kamakoti Medical Trust ಕಂಚಿ ಕಾಮಕೋಟಿ ವೈದ್ಯಕೀಯ ಟ್ರಸ್ಟಿನ ಇಂಟ್ರಾ ಆಪರೇಟಿವ್ ಫ್ಲಾಪಿ ಐರಿಸ್ ಸಿಂಡೋಮ್ ನಿರ್ವಹಣೆಗಾಗಿ ಐಆರ್‌ಐಎಸ್ ರಿಟ್ರಾಕ್ಟರ್ ಎಂಬ ಅವಿ?ರಕ್ಕಾಗಿ ಭಾರತ ಸರ್ಕಾರದ ಪೇಟೆಂಟ್ ಕಚೇರಿಯಿಂದ ಪೇಟೆಂಟ್ ನೀಡಲಾಗಿದೆ.

ಪೇಟೆಂಟ್ ಕಾಯಿದೆಗಳು, 1970 ರ ಅಡಿಯಲ್ಲಿ 20 ವರ್ಷಗಳವರೆಗೆ ಮಾನ್ಯವಾಗಿರುವ ಪೇಟೆಂಟ್ ಅನ್ನು ಇತ್ತೀಚೆಗೆ ನೀಡಲಾಗಿದೆ. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಐರಿಸ್ ನಿರ್ವಹಣೆಗೆ ಅನುವು ಮಾಡಿಕೊಡುವ ಈ ವಿಶಿ? ಅವಿಷ್ಕಾರವನ್ನು ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಯ ಕಾರ್ನಿಯಾ ಮತ್ತು ವಕ್ರೀಕಾರಕ ಶಸ್ತ್ರಚಿಕಿತ್ಸೆಯ ಸಲಹೆಗಾರ ಡಾ|| ಮಲ್ಲಿಕಾರ್ಜುನ ಹೇರಲಗಿ ಅಭಿವೃದ್ಧಿಪಡಿಸಿದ್ದಾರೆ.

Kanchi Kamakoti Medical Trust ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಇಂಟ್ರಾ ಆಪರೇಟಿವ್ ಫ್ಲಾಪಿ ಐರಿಸ್ ಸಿಂಡೋಮ್ ಅನ್ನು ಐರಿಸ್ ನಡುಕ, ಛೇದನದ ಕಡೆಗೆ ಐರಿಸ್ ಸುತ್ತುವರಿಯುವುದು ಮತ್ತು ದೊಡ್ಡ ಮಟ್ಟದಲ್ಲಿ ಅಡ್ಡಿಯಾಗುವ ಬೆಳೆಯುತ್ತಿರುವ ಕಣ್ಣಿನ ಪಾಪೆಯ ಸಂಕೋಚನವನ್ನು ಆಧರಿಸಿ ಅಭಿವೃದ್ಧಿಪಡಿಸಲಾಗಿದೆ ಮತ್ತು ಸಣ್ಣ ಪಾಪೆಯಲ್ಲಿ ಬಳಸಬಹುದು.

Samyukta Kisan Morcha ಈಗ ರೈತ ಸಂಘಟನೆಗಳಿಂದ ‘ ಕಾರ್ಪೋರೇಟ್ ಕಂಪನಿಗಳೆ ಕ್ವಿಟ್ ಇಂಡಿಯಾ’ ಚಳವಳಿ

0

Samyukta Kisan Morcha ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ಹೋರಾಟದ ಅಂಗವಾಗಿ ಇಂದು ನಗರದ ರಾಯಲ್ ವೃತ್ತದ ಬಳಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಪ್ರತಿಭಟನೆ ಮಾಡಿ, ಕಾರ್ಪೊರೇಟ್ ಕಂಪನಿಗಳ ಭೂತ ದಹನ ಮಾಡಲಾಯಿತು.

ಈ ಸಂದರ್ಭದಲ್ಲಿ ಎ ಐ ಕೆ ಕೆ ಎಂ ಎಸ್ ರೈತ ಸಂಘದ ಜಿಲ್ಲಾ ಅಧ್ಯಕ್ಷ ಗೋವಿಂದ್, ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಸಂಗನಕಲ್ಲು ಕೃಷ್ಣಪ್ಪ , ಕರ್ನಾಟಕ ಜನಶಕ್ತಿಯ ವಸಂತ್ ಕಾಳೆ ಮಾತನಾಡುತ್ತಾ

ಸ್ವಾತಂತ್ರ್ಯ ಹೋರಾಟದಲ್ಲಿ 1942 ರ ಸಮಯದಲ್ಲಿ ನಡೆದ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಐತಿಹಾಸಿಕ ಹೋರಾಟ ನಡೆದ ದಿನವಾದ ಇಂದು ಈ ದೇಶದ ದುಡಿಯುವ ಜನರಿಗೆ ಸೇರಬೇಕಾದ ಸಂಪತ್ತನ್ನು ಲೂಟಿಹೊಡೆಯುತ್ತಿರುವ ಕಾರ್ಪೊರೇಟ್ ಕಂಪನಿಗಳೇ ಭಾರತ ಬಿಟ್ಟು ತೊಲಗಿ ಎಂಬ ದೇಶವ್ಯಾಪಿ ಬೃಹತ್ ಹೋರಾಟ ನಡೆಯುತ್ತಿದೆ. ಇಂದು ಯಾವುದೇ ಸರ್ಕಾರಗಲಿ ಅಧಿಕಾರಕ್ಕೇರಲಿ ಈ ಬಂಡವಾಳಶಾಹಿ ಗಳ ಪರವಾಗಿ ನೀತಿಗಳನ್ನು ಜಾರಿಗೆ ತಂದು, ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ತಳ್ಳುತ್ತಿದ್ದಾರೆ.

Samyukta Kisan Morcha ಹಾಗಾಗಿ, ಇಂದು ಕೃಷಿಯ – ಕಾರ್ಪೋರೇಟಿಕರಣ ನಿಲ್ಲಿಸಬೇಕು ರೈತ ವೀರೋಧಿ – ವಿದ್ಯುತ್ ಖಾಸಗಿಕರಣ ಮಸೂದೆ ಹಿಂಪಡೆಯಬೇಕು,
ಭಾರತದ ಕೃಷಿ ಉದ್ಪಾದನೆ- ಮಾರುಕಟ್ಟೆ-ಸಂಗ್ರಹಣೆ ಮತ್ತು ವಿತರಣೆ ರೈತರು ಮತ್ತು ಸರಕಾದ ಆಧೀನದಲ್ಲಿಯೇ ಇರುವಂತೆ ಜೋಪಾನ ಮಾಡಬೇಕು, ಕೃಷಿಭೂಮಿ ರೈತರಲ್ಲೇ ಉಳಿಯುವಂತೆ ಸಂರಕ್ಷಿಸಬೇಕು, ಕೈಗಾರಿಕೆ- ರಾಷ್ಟ್ರೀಯ ಹೆದ್ದಾರಿ- ರಾಜ್ಯ ಹೆದ್ದಾರಿ ಹೆಸರಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಕಬಳಿಸುವುದನ್ನು ನಿಲ್ಲಿಸಿ, ಕೃಷಿ ಉತ್ಪಾದನೆಯನ್ನು ವಿಶ್ವ ವಾಣಿಜ್ಯ ಒಪ್ಪಂದದಿಂದ ಹೊರಗಿಡಿ, ಕೃಷಿ ಉತ್ಪನ್ನಗಳಿಗೆ ಡಾ/ ಸ್ವಾಮಿನಾಥನ್ ನೇತೃತ್ವದ ಸಮಿತಿಯ ಶಿಪಾರಸ್ಸಿನಂತೆ ಉತ್ಪಾದನಾ ವೆಚ್ಚ ೫೦% ಬೆಂಬಲ ಬೆಲೆಯನ್ನು ಕಾನೂನಾತ್ಮಕ ಗೊಳಿಸಿ, ಕೃಷಿ ಒಳಸುರಿಗಳ ಮೇಲಿನ GST ಹಿಂಪಡೆಯಿರಿ, ಕೃಷಿಗೆ ಅಂತರಿಕ ಸಹಾಯಧನವನ್ನು ಹೆಚ್ಚು ನೀಡಲೂ ಸೂಕ್ತ ಕ್ರಮ ಕೈಗೊಳ್ಳಬೇಕು, ಕೃಷಿ ಉತ್ಪನ್ನಗಳ ಸಂರಕ್ಷಣೆಗೆ ಕೋಲ್ಡ್ ಸ್ಟೋರೇಜ್ ಗಳನ್ನು ಸಹಕಾರಿಸಂಘಗಳ ಮೂಲಕ ನಿರ್ಮಿಸಲು ಸಹಾಯಧನ ನೀಡಬೇಕು, ಅಂತರ ರಾಜ್ಯ ನೀರಾವರಿ ಸಮಸ್ಯೆಗಳನ್ನು ಕಾಲಮಿತಿಯೊಳಗಡೆ ಬಗೆಹರಿಸಬೇಕು, ಅರಣ್ಯ ಸಂಪತ್ತನ್ನು ರಕ್ಷಿಸಲು ಪಶ್ಚಿಮಘಟ್ಟದ ರಕ್ಷಣೆಗಾಗಿ ಮಾಧವ ಗಾಡ್ಗೀಳ್ ವರದಿಯನ್ನು ಅನುಷ್ಠಾನ ಗೊಳಿಸಬೇಕು, ಬರ ಹಾಗೂ ಅತೀವೃಷ್ಠಿಯಿಂದ ಕೃಷಿ ಕ್ಷೇತ್ರಕ್ಕಾದ ನಾಶ ನಷ್ಟಕ್ಜೆ ವೈಜ್ಞಾನಿಕ ಪರಿಹಾರಬನೀಡಬೇಕು, ಕೇರಳದ ವಯನಾಡು ಸೇರಿದಂತೆ ಈ ಬಾರಿಯ ಮೇಘಸ್ಪೋಟವನ್ನು ರಾಷ್ಟ್ರೀಯ ವಿಪತ್ತು ಅಂತ ಘೋಷಿಸಿ ಪುನರ್ವಸತಿ ಕಲ್ಪಿಸಬೇಕು, ಸರಕಾರಗಳ ಕೃಷಿ ವೀರೋಧಿ ನೀತಿಯಿಂದಾಗಿ ಸಾಲಗಾರರಾದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ಫಸಲ್ ಭೀಮಾ ಯೋಜನೆಯಿಂದಾಗಿ ರೈತರಿಗಾದ ಮೋಸ ಹಾಗೂಖಾಸಗಿ ವಿಮಾ ಕಂಪನಿಗಳ ಹಗಲು ದರೋಡೆ ನಿಲ್ಲಿಸಬೇಕು ಎಂಬುದು ಸೇರಿದಂತೆ ಇತರ ಬೇಡಿಕೆಗಳನ್ನು ಸರ್ಕಾರ ಹಿಡೇರಿಸಬೇಕು, ಇಲ್ಲದಿದ್ದರೆ ಬೃಹತ್ ಹೋರಾಟಗಳಿಗೆ ರೈತ ಕೃಷಿಕಾರ್ಮಿಕರು ಬಿದಿಗಿಳಿಯಬೇಕಾಗುತ್ತದೆ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎ ಐ ಕೆ ಕೆ ಎಂ ಎಸ್ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ , ರಾಜ್ಯ ರೈತ ಸಂಘದ ದ್ಯಾವಣ್ಣ ಜನಶಕ್ತಿಯ ಜಿಲ್ಲಾ ಸದಸ್ಯ ಅಪ್ಪಾಜಿ, ಹೊನ್ನೂರಪ, ಸೇರಿದಂತೆ ಇತರರು ಇದ್ದರು.

Shivamogga Police ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

0

Shivamogga Police ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ.

ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ(12), ಸಂಪದಾ (06) ಸಾವನ್ನಪ್ಪಿದವರು. ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Shivamogga Police ಶಿವಮೊಗ್ಗ ನಗರ ಠಾಣೆ ಪಿಎಸ್‌ಐ ರಮೇಶ್ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ನಗರ ಆಸ್ಪತ್ರೆಯ ಶವಾಗಾರಕ್ಕೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

Shivamogga Narayana Hrudayalaya ಹೃದಯದಲ್ಲಿನ ರಂಧ್ರ ಮುಚ್ಚುವ ಯಶಸ್ವಿ ಶಸ್ತ್ರಚಿಕಿತ್ಸೆ- ಡಾ.ಬಾಲಸುಬ್ರಹ್ಮಣ್ಯಂ

0

Shivamogga Narayana Hrudayalaya ಶಿವಮೊಗ್ಗ ನಾರಾಯಣ ಹೃದಯಾಲಯದಲ್ಲಿ 2 ವರ್ಷಗಳಿಂದ ಮಿನಿಮಲ್ ಇನ್ಸಾಸಿವ್ ಹೃದಯ ಯ ಕಾರ್ಯ ವಿಧಾನವನ್ನು ಪ್ರಾರಂಭಿಸಲಾಗಿದ್ದು, ಇಲ್ಲಿಯವರೆಗೆ ನಾವು 3 ಮಿನಿಮಲ್ ಇನ್ವಾಸಿವ್ ಮಹಾಪಧಮನಿಯ ಕವಾಟವನ್ನು ಬದಲಾಯಿಸಲಾಗಿದೆ ಎಂದು ಆಸ್ಪತ್ರೆಯ ಹೃದ್ರೋಗ ಚಿಕಿತ್ಸಾ ತಜ್ಞ ಡಾ!! ಬಾಲಸುಬ್ರಹ್ಮಣ್ಯಂ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 9 ಮಕ್ಕಳು ಮತ್ತು ಯುವತಿಯರಲ್ಲಿ ಆಸ್ಟಿಯಮ್ ಸೆಕಂಡಮ್ ಹೃತ್ಕರ್ಣದ ಸೆಪ್ಪಲ್ ದೋಷ ಮುಚ್ಚುವಿಕೆ (ಹೃದಯದಲ್ಲಿನ ರಂಧ್ರ) ಎದೆಯ ಮಧ್ಯದಲ್ಲಿನ ಕಲೆ ಗುರುತನ್ನು ತಪ್ಪಿ ಸಲಾಗಿದೆ. ಇದು ಅತ್ಯುತ್ತಮ Shivamogga Narayana Hrudayalaya ಯಶಸ್ವಿ ಫಲಿತಾಂಶಗಳನ್ನು ನೀಡಿದೆ. ಆರ್ಮ್ಪಿಟ್ ಪ್ರದೇಶದಲ್ಲಿ ಮಿನಿಮಲ್ ಇನ್ಸಾಸಿವ್ ವಿಧಾನದ ಮೂಲಕ ಯುವಕನಲ್ಲಿ ಎಡ ಹೃತ್ಕರ್ಣದ ಹೃದಯದಿಂದ ಗೆಡ್ಡೆ ತೆಗೆದುಹಾಕುವುದನ್ನು ನಾವು ಯಶಸ್ವಿಯಾಗಿ ಮಾಡಿದ್ದೇವೆ ಎಂದರು.
ಮಲೆನಾಡು ಪ್ರದೇಶದಲ್ಲಿ ಹೆಚ್ಚಿನ ರೋಗಿಗಳಿಗೆ ಮಿನಿಮಲ್ ಇನ್ವಾಸಿವ್ ಹೃದಯ ಕಾರ್ಯ ವಿಧಾನವನ್ನು ವಿಸ್ತರಿಸುವುದನ್ನು ಮುಂದುವರಿಸಲಾಗುವುದು ಎಂದರು.

Public Health Campaigns ಜಿಲ್ಲೆಯಲ್ಲಿನ ಕ್ಲಿನಿಕ್ ಗಳಲ್ಲಿ ವೈದ್ಯಕೀಯ, ಅರೆ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

Public Health Campaigns 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 3 ಕ್ಲಿನಿಕ್‌ಗಳಲ್ಲಿ ಖಾಲಿಯಿರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಎಂಬಿಬಿಎಸ್ ವೈದ್ಯರ -2 ಹುದ್ದೆಗೆ ಎಂಬಿಬಿಎಸ್ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂರ‍್ನ್ಶಿಪ್ ಪೂರೈಸಿರಬೇಕು.
ಕಿರಿಯ ಆರೋಗ್ಯ ಸಹಾಯಕ(ಆರೋಗ್ಯ ನಿರೀಕ್ಷಣಾಧಿಕಾರಿಗಳು)ರ-3 ಹುದ್ದೆಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಕರ್ನಾಟಕ ರಾಜ್ಯದ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದ್ದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಪಡೆದಿರಬೇಕು.

ಅಥವಾ ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 3 ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು. ಅಥವಾ ಪಿಯುಸಿ (ವಿಜ್ಞಾನ) ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 2 ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು.
ನೇಮಕಾತಿಯು ಮೇರಿಟ್ ಕಂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲಾಗುವುದು

ಆಸಕ್ತರು ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ. ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 2-5 ವರ್ಷಗಳ ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಹಾಗೂ ವಾಸ ಸ್ಥಳದ ಬಗ್ಗೆ ಮಹಾನಗರ ಪಾಲಿಕೆ/ಸಂಬಂಧಿಸಿದ ಪಂಚಾಯತ್‌ನಿಂದ ದೃಢೀಕರಣ ಪತ್ರ ಮತ್ತು ಸ್ವವಿವರಗಳೊಂದಿಗೆ ಆ.13 ರಂದು ಮಧ್ಯಾಹ್ನ 1.30ರೊಳಗಾಗಿ ಸಲ್ಲಿಸುವುದು.

Public Health Campaigns ಅದೇ ದಿನ ಸಂಜೆ 5.30ರವೆಗೆ ಎಲ್ಲಾ ಮೂಲ ದಾಖಲಾತಿಗಳ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-200337 ನ್ನು ಸಂಪರ್ಕಿಸುವುದು.

Ministry of Forests and Climate Change ಗಮನಿಸಿ. ಪ್ಲಾಸ್ಟಿಕ್ ಧ್ವಜ ಬಳಕೆ ನಿಷೇಧ ಮಾಡಲಾಗಿದೆ

0

Ministry of Forests and Climate Change ಭಾರತ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಗೃಹ ಮಂತ್ರಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ನಿರ್ದೇಶನ ನೀಡಿದೆ.
Ministry of Forests and Climate Change ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತ ಧ್ವಜ ಸಂಹಿತೆ 2002 ರಡಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕ ಪ್ರಮುಖ ರಾಷ್ಟ್ರೀಯ ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳಲ್ಲಿ ಹಾಗೂ ಸ್ವಾತಂತ್ರ‍್ಯ ದಿನಾಚರಣೆಯ ದಿನ ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ಹಾಗೂ ಈ ನಿರ್ದೇಶನವನ್ನು ಉಲ್ಲಂಘಿಸಿದವರ ವಿರುದ್ಧ ಅಪರಾಧ ಸ್ವರೂಪಕ್ಕೆ ಅನುಗುಣವಾಗಿ ಕರ್ನಾಟಕ ಸರ್ಕಾರದ ಅಧಿಸೂಚನೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ರಮೇಶ್ ವಿ. ತಿಳಿಸಿದ್ದಾರೆ.

DC Shivamogga ಜಿಲ್ಲಾಮಟ್ಟದ ಜಾಗೃತಿ & ಉಸ್ತುವಾರಿ ದೌರ್ಜನ್ಯ ಪ್ರತಿಬಂಧ ಸಮಿತಿಗೆ ಅಧಿಕಾರೇತರ ಸದಸ್ಯರ ಆಯ್ಕೆ ಪ್ರಕ್ರಿಯೆಗೆ ಅರ್ಜಿ ಆಹ್ವಾನ

0

DC Shivamogga ಶಿವಮೊಗ್ಗ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ (ದೌರ್ಜನ್ಯ ಪ್ರತಿಬಂಧ) ಸಮಿತಿಗೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟಿಗೆ ಸೇರಿದ 05 ಮತ್ತು ಇತರೆ ಪ್ರವರ್ಗಗಳಿಂದ 03 ಅಧಿಕಾರೇತರ ಸದಸ್ಯರನ್ನು ಹೊಸದಾಗಿ ಆಯ್ಕೆಗೊಳಿಸಲು ಪ.ಜಾತಿ ಮತ್ತು ಪ.ವರ್ಗದವರ ಪರವಾಗಿ ಧ್ವನಿ ಎತ್ತಿ ನ್ಯಾ ಒದಗಿಸಬಲ್ಲಂತಹ ಆಸಕ್ತ ಅನುಸೂಚಿತ ಜಾತಿ, ಅನುಸೂಚಿತ ಬುಡಕಟ್ಟು ಮತ್ತು ಇತರೆ ಪ್ರವರ್ಗಕ್ಕೆ ಸೇರಿದವರಿಂದ ಅರ್ಜಿ ಆಹ್ವಾನಿಸಿದೆ.

DC Shivamogga ಆಸಕ್ತರು ಅರ್ಜಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆ.20 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ 08182-249241 ನ್ನು ಸಂಪರ್ಕಿಸುವುದು.

Bharat Scouts and Guides ಭಾರತ್ ಸ್ಕೌಟ್ಸ್ & ಗೈಡ್ಸ್ ಜಿಲ್ಲಾ ಸಂಸ್ಥೆಯ ಅಧ್ಯಕ್ಷರಾಗಿ ಶ್ರೀರಮೇಶ್ ಆಯ್ಕೆ

0

Bharat Scouts and Guides ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಶಿವಮೊಗ್ಗ ತಾಲೂಕು ಮಟ್ಟದ ಸ್ಥಳೀಯ ಸಂಸ್ಥೆಯ ವತಿಯಿಂದ, ನೂತನವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆಗಮಿಸಿರುವ ಶ್ರೀ ರಮೇಶ್ ಕೆ. ಇ. ಎಸ್., ರವರನ್ನು ಸಂಸ್ಥೆಯ ಅಧ್ಯಕ್ಷರನ್ನಾಗಿ ಕೇಂದ್ರ ಸ್ಥಾನಿಕ ಆಯುಕ್ತರಾದ ಶ್ರೀ ಜಿ. ವಿಜಯ್ ಕುಮಾರ್, ಕಾರ್ಯಧ್ಯಕ್ಷ ಶ್ರೀ ಚೂಡಾಮಣಿ ಈ ಪವಾರ್ ಹಾಗೂ ಸ್ಥಳೀಯ ಸಂಸ್ಥೆಯ

Bharat Scouts and Guides ಕಾರ್ಯದರ್ಶಿ ಶ್ರೀ ರಾಜೇಶ್ ವಿ ಅವಲಕ್ಕಿ ರವರು ಆಹ್ವಾನಿಸಿದರು ಮತ್ತು ತಾಲ್ಲೂಕು ಮಟ್ಟದ ಚಟುವಟಿಕೆಯಲ್ಲಿ ಮಾರ್ಗದರ್ಶನ ನೀಡಲು ಕೋರಿದರು . ಇದೇ ಸಂದರ್ಭದಲ್ಲಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ರಮೇಶ್ ಅವರು ಸ್ಕೌಟ್ ಅಂಡ್ ಗೈಡ್ಸ್ ನಲ್ಲಿ ನಡೆಯುವ ಮಕ್ಕಳ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು

Adichunchanagiri ಆಗಸ್ಟ್ 11 ರಿಂದ 14 ವರೆಗೆ ಚುಂಚಾದ್ರಿ ಕಪ್ ವಾಲಿಬಾಲ್ ಪಂದ್ಯಾವಳಿ

0

Adichunchanagiri ಶಿವಮೊಗ್ಗ ನಗರದ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ವತಿಯಿಂದ ಆಗಸ್ಟ್ 11 ರಿಂದ 14 ರ ವರೆಗೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಚುಂಚಾದ್ರಿ ಕಪ್ ವಾಲಿಬಾಲ್ ಸಂಭ್ರಮವನ್ನು ಏರ್ಪಡಿಸಲಾಗಿದೆ.
ಸಹ್ಯಾದ್ರಿ ತಪ್ಪಲಿನ ಮಲೆನಾಡಿನ ಮಡಿಲಲ್ಲಿ ಶೈಕ್ಷಣಿಕ ಹಾಗೂ ಬೌದ್ಧಿಕ ಬೆಳವಣಿಗೆಯಲ್ಲಿ ವಿಶೇಷ ಹೆಸರಿನಿಂದ ಕಂಗೊಳಿಸುತ್ತಿರುವ ವಿದ್ಯಾ ಸಂಸ್ಥೆಯೇ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ.
ಯುವ ಜನಾಂಗದಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಯೋಗ್ಯ ಮಾರ್ಗದರ್ಶನ ಮತ್ತು ತರಬೇತಿ ನೀಡಿ ಅವರ ಬದುಕನ್ನು ರೂಪಿಸುವ ಪ್ರಯತ್ನಕ್ಕಾಗಿ ಶಿವಮೊಗ್ಗ ನಗರದಲ್ಲಿರುವ ಶ್ರೀಆದಿಚುಂಚನಗಿರಿ ಶಾಖಾ ಮಠದ ಪೂಜ್ಯರಾದ ಶ್ರೀ ಶ್ರೀ ಪ್ರಸನ್ನನಾಥಸ್ವಾಮೀಜಿ ಯವರ ನೇತೃತ್ವದಲ್ಲಿ ಶಿವಮೊಗ್ಗ ನಗರದ ಅನೇಕ ಸಂಸ್ಥೆಗಳ ಕ್ರೀಡಾ ತಜ್ಞರ ಮತ್ತು ತರಬೇತುದಾರರ ಒಂದು ತಂಡ ಅಸ್ತಿತ್ವಕ್ಕೆ ಬಂದಿರುವುದರಿಂದ ಇವತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ.
ವಿದ್ಯಾಸಂಸ್ಥೆಯಿಂದ ಕ್ರೀಡೆಯಲ್ಲಿ ಉತ್ತಮ ತರಬೇತಿಯನ್ನು ನೀಡಿ ಕ್ರೀಡಾಪಟುಗಳು ರಾಷ್ಟ್ರ ಹಾಗೂ ಅಂತರಾಷ್ಟ್ರ ಮಟ್ಟದಲ್ಲಿ ಮೆರೆಯುವಂತೆ ಮಾಡಿದೆ.
ಮಕ್ಕಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ,ಪ್ರೋತ್ಸಾಹಿಸುವ ಉದ್ದೇಶದಿಂದ ಅನೇಕ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುತಿದ್ದೇವೆ. ಇದರಂತೆ ಶಿವಮೊಗ್ಗ ಜಿಲ್ಲೆಯ ವಾಲಿಬಾಲ್ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ ) ಶಿವಮೊಗ್ಗ ಮತ್ತು ಜಿಲ್ಲಾ ವಾಲಿಬಾಲ್ ಸಂಸ್ಥೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಮತ್ತು ಬಾಲಕೀಯರಿಗಾಗಿ “ಸಿ. ಎಸ್. ಐ. ಕಪ್ ” 1996 ವಾಲಿಬಾಲ್ ಪಂದ್ಯಾವಳಿಯನ್ನು ಆರಂಭಿಸಲಾಯಿತು.
ಪೂಜ್ಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಈ ಪಂದ್ಯಾವಳಿಗೆ 2000 ಇಸ್ವಿಯಲ್ಲಿ Adichunchanagiri “ಚುಂಚಾದ್ರಿ ಕಪ್ “ಎಂಬ ನೂತನ ಅಭೀದಾನ ಮಾಡಲಾಯಿತು.
77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಾಗೂ 22ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು , ಈ ಕ್ರೀಡಾಕೂಟದ ದಿವ್ಯ ಸಾನ್ನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸಾನಿಧ್ಯ ವಹಿಸಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯ ಉಪಸ್ಥಿತಿ ವಹಿಸುವರು.
ಈ ಪಂದ್ಯಾವಳಿಯಲ್ಲಿ ಪ್ರತಿ ವರ್ಷ ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲಾ ಬಾಲಕರ ಸುಮಾರು 55 ತಂಡಗಳು, ಬಾಲಕಿಯರ 30 ತಂಡಗಳು ಭಾಗವಹಿಸಿ ಅದ್ಭುತ ಪ್ರದರ್ಶನ ನೀಡುತ್ತಿವೆ. ಈ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಬಾಲಕ, ಬಾಲಕಿಯರಿಗೆ “ಬೆಸ್ಟ್ ಅಟ್ಯಾಕರ್,ಬೆಸ್ಟ್ ಬೂಸ್ಟರ್, ಬೆಸ್ಟ್ ಆಲ್ ರೌಂಡರ್, ಬೆಸ್ಟ್ ಲೀಬ್ರೋ ” ಸೆಂಟರ್ ಬ್ಲಾಕರ್ ಈ ಪ್ರಶಸ್ತಿಗಳನ್ನು ನೀಡಿ ಕ್ರೀಡಾಪಟುಗಳನ್ನು ಹುರಿದುಂಬಿಸಲಾಗುತ್ತಿದೆ, ವಿಜೇತ ತಂಡಗಳಿಗೆ ಆಕರ್ಷಕ ಪಾರಿತೋಷಕದೊಂದಿಗೆ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತಿದೆ.
ಈ ಬಾರಿ ಬಾಲಕಿಯರ ವಿಭಾಗದಲ್ಲಿ 30 ಕ್ಕಿಂತ ಹೆಚ್ಚು ತಂಡಗಳು ಭಾಗವಹಿಸುತ್ತಿರುವುದರಿಂದ ಈ ಬಾರಿಯೂ ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆದ ಬಾಲಕಿಯರ ತಂಡಕ್ಕೆ ನಗದು ಬಹುಮಾನ ಕೊಡುತ್ತಿರುವುದು ಮತ್ತೊಂದು ವಿಶೇಷ.
ಈ ಪಂದ್ಯಾವಳಿಯು ಆರಂಭವಾದಾಗಿನಿಂದ ಪ್ರತಿವರ್ಷವೂ ಶಿವಮೊಗ್ಗ ಜಿಲ್ಲೆಯ 20 ರಿಂದ 25 ವಾಲಿಬಾಲ್ ಕ್ರೀಡಾಪಟು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಭಾರತ ತಂಡವನ್ನು ಪ್ರತಿನಿಧಿಸಿ ಶಿವಮೊಗ್ಗ ಜಿಲ್ಲೆಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ.
ಶಿವಮೊಗ್ಗ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಮಹಾಪೋಷಕರು ಹಾಗೂ ಕ್ರೀಡಾ ಪ್ರೇಮಿಗಳಾದ ಪೂಜ್ಯ ಶ್ರೀಶ್ರೀ ಪ್ರಸನ್ನನಾಥ ಸ್ವಾಮಿಜಿಯವರು ಪ್ರತಿ ವರ್ಷ ಈ ಪಂದ್ಯಾವಳಿಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇವರೊಂದಿಗೆ ಜಿಲ್ಲಾ ವಾಲಿಬಾಲ್ ಸಂಸ್ಥೆಯು ಸಹ ಕೈಜೋಡಿಸಿದೆ.
ಈ ವರ್ಷ ಪಂದ್ಯಾವಳಿಯು ದಿನಾಂಕ:11-08-2024 ರಿಂದ 14-08-2024 ರ ವರೆಗೆ ನಡೆಯಲಿದ್ದು, ಆಟಗಾರರ ಅನುಕೂಲಕ್ಕಾಗಿ ಈಗಾಗಲೇ 4 ಅಂಕಣಗಳನ್ನು ಸಿದ್ಧಪಡಿಸಲಾಗಿದೆ, ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಹೊರಾಂಗಣ ಮತ್ತು ಒಳಾಂಗಣದಲ್ಲಿ ವಾಲಿಬಾಲ್ ಪಂದ್ಯಾವಳಿಯು ನಡೆಸಲಾಗುವುದು. ರಾಷ್ಟ್ರ ಮತ್ತು ರಾಜ್ಯಮಟ್ಟದ ನುರಿತ ವಾಲಿಬಾಲ್ ತೀರ್ಪುಗಾರರು ಆಗಮಿಸಲಿದ್ದಾರೆ.
ಜಿಲ್ಲೆಯ ವಿವಿಧ ತಾಲೂಕುಗಳಿಂದ ಬರುವ ಎಲ್ಲಾ ಕ್ರೀಡಾಪಟುಗಳಿಗೂ ವಸತಿ ಹಾಗೂ ಊಟದ ವ್ಯವಸ್ಥೆಯನ್ನೂ,ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷನೂ ಸಹ ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿದ್ದು, ಜಿಲ್ಲೆಯ 17 ವರ್ಷದ ವಯೋಮಿತಿ ಯೊಳಗಿನ ಕ್ರೀಡಾಪಟುಗಳನ್ನೊಳಗೊಂಡ ಪ್ರೌಢಶಾಲಾ ತಂಡಗಳು ಭಾಗವಹಿಸಬಹುದಾಗಿದೆ.

ನಿಬಂಧನೆಗಳು :1) ತಂಡಗಳು ಕಡ್ಡಾಯವಾಗಿ ಕ್ರೀಡಾ ಸಮವಸ್ತ್ರ ಧರಿಸಿ ಈ ಪಂದ್ಯಾವಳಿಯಲ್ಲಿ ಭಾಗವಹಿಸಬೇಕು.
2) ವಯೋಮಿತಿ 17 ವರ್ಷ ಮೀರಿರಬಾರದು. (01-01-2008 ರ ನಂತರ ಜನಿಸಿರಬೇಕು.)
3) ಕಡ್ಡಾಯವಾಗಿ 18 ಕಾಲಂ ಇರುವ ಗುರುತಿನ ಚೀಟಿ ತರಬೇಕು. (ಇತ್ತೀಚಿನ ಭಾವಚಿತ್ರದೊಂದಿಗೆ ) ಶಾಲೆಯ ಪ್ರಾಂಶುಪಾಲರಿಂದ ದೃಢೀಕರಣ ಪತ್ರವನ್ನು ದೈಹಿಕ ಶಿಕ್ಷಣ ಶಿಕ್ಷಕರು ತರತಕ್ಕದ್ದು.
4) ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಮತ್ತು ಶಾಲೆಯ ಡೈಸ್ ಕೋಡ್ ಕಡ್ಡಾಯವಾಗಿರುತ್ತದೆ.
5) ವಿದ್ಯಾರ್ಥಿಯ ಎಸ್‌ಟಿಎಸ್ ಸಂಖ್ಯೆ ಕಡ್ಡಾಯವಾಗಿರುತ್ತದೆ.
ಈ ವಿಷಯವನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ ಈ ಪಂದ್ಯಾವಳಿಯು ಯಶಸ್ವಿಯಾಗಲು ಸಹಕರಿಸಬೇಕಾಗಿ ವಿನಂತಿ. ಹಿಂದಿನಿಂದಲೂ ತಾವುಗಳು ನೀಡಿದ ಸಹಕಾರಗಳಿಗೆ ಪಂದ್ಯಾವಳಿಯ ಸಂಘಟನಾ ಸಮಿತಿಯು ತಮಗೆ ಧನ್ಯವಾದಗಳು ಸಲ್ಲಿಸುತ್ತದೆ.


ನಗದು ಬಹುಮಾನ :-ಬಾಲಕರ ವಿಭಾಗ: ಪ್ರಥಮ ಸ್ಥಾನ — 5000 ರೂ, ದ್ವಿತೀಯ ಸ್ಥಾನ 4000 ರೂ, ತೃತೀಯ ಸ್ಥಾನ 3000 ರೂ ಮತ್ತು ನಾಲ್ಕನೇ ಸ್ಥಾನ 2000 ರೂ ನಗದು ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.
ಬಾಲಕಿಯರ ವಿಭಾಗ: ಪ್ರಥಮ ಸ್ಥಾನ ಪಡೆದ ತಂಡಕ್ಕೆ 5000 ರೂ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 4000 ರೂ , ತೃತೀಯ ಸ್ಥಾನ 3000 ರೂ ಮತ್ತು ನಾಲ್ಕನೇ ಸ್ಥಾನ 2000 ರೂ ನಗದು ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.


ಕ್ರೀಡೆ ನಡೆಸುವ ಉದ್ದೇಶ, : ಶಿವಮೊಗ್ಗ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಬೆಳಕಿಗೆ ತರುವುದು. ಈಗ ಸುಮಾರು ಬಾಲಕ ಬಾಲಕಿಯರು ವಾಲಿಬಾಲ್ ಕ್ರೀಡೆಯಲ್ಲಿ ಭಾಗವಹಿಸಿ ದೇಶಕ್ಕೆ ಅನೇಕ ಪ್ರಶಸ್ತಿಗಳನ್ನು ತಂದುಕೊಟ್ಟಿರುವುದೇ ಇದಕ್ಕೆ ಸಾಕ್ಷಿ. ಈಗಲೂ ಅನೇಕ ಪ್ರತಿಭಾವಂತ ಕ್ರೀಡಾಪಟುಗಳು ಚುಂಚಾದ್ರಿ ಕಪ್ ವಾಲಿಬಾಲ್ ನಿಂದ ಉತ್ತೇಜಿತರಾಗಿ ದೇಶದ ವಿವಿಧ ಕಂಪನಿಗಳಲ್ಲಿ ಸೇವೆ ಸಲ್ಲಿಸುವಂತಹ ಅವಕಾಶ ಪಡೆದುಕೊಂಡಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಭಾಸ್ಕರ್ ಜಿ ಕಾಮತ್ , ವಾಲಿಬಾಲ್ ಸಂಸ್ಥೆಯ ಕಾರ್ಯದರ್ಶಿ ಶಶಿ ಕೆ ಎಸ್, ನಿರ್ದೇಶಕರಾದ ವಾಸಪ್ಪ ಕೊಳಿಗೆ , ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲರಾದ ದಿವ್ಯ ಕರಣಮ್, ಗುರುಪುರದ ಬಿಜಿಎಸ್ ಕಾಲೇಜಿನ ಪ್ರಾಂಶುಪಾಲರಾದ ಸುರೇಶ ಎಸ್. ಹೆಚ್.ಮುಖ್ಯ ಶಿಕ್ಷಕರಾದ ರಮೇಶ್, ಅಥ್ಲೆಟಿಕ್ಸ್ ಸಂಸ್ಥೆಯ ಕಾರ್ಯದರ್ಶಿಯಾದ ಉದಯ್ಇನ್ನೂ ಮುಂತಾದವರು ಉಪಸ್ಥಿತರಿದ್ದರು