Friday, April 10, 2026
Friday, April 10, 2026
Home Blog Page 664

KSRTC ಕೆಎಸ್ಆರ್‌ಟಿಸಿ ವಿಭಾಗೀಯ ಅಧಿಕಾರಿ ನವೀನ್ ಗೆ ಸನ್ಮಾನ

0

KSRTC ಕೆಎಸ್ಆರ್‌ಟಿಸಿ ಜಿಲ್ಲಾ ವಿಭಾಗಕ್ಕೆ ನೂತನ ವಿಭಾಗೀಯ ಅಧಿಕಾರಿಯಾಗಿ ಟಿ.ಆರ್. ನವೀನ್ ಅಧಿಕಾರ ವಹಿಸಿ ಕೊಂಡಿದ್ದಾರೆ. ಇವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಸಂಘ (ಸಿಐಟಿಯು) ವತಿಯಿಂದ ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಮನ್ವಯ ಸಂಘ ವತಿಯಿಂದ ಇಲ್ಲಿನ ವಿಭಾಗೀಯ ಕಚೇರಿ ಆವರಣದಲ್ಲಿ ಶುಕ್ರವಾರ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಇಲ್ಲಿ ಹೂ ಗುಚ್ಚ ನೀಡಿ ವಿಭಾಗೀಯ ನಿಯಂತ್ರಣಾಧಿಕಾರಿ ಅವರನ್ನು ಸ್ವಾಗತಿಸಲಾಯಿತು.

KSRTC ಕಾರ್ಯಕ್ರಮದಲ್ಲಿ ಕೆಎಸ್ಆರ್ ಟಿಸಿ ಸಿಐಟಿಯು ಅಧ್ಯಕ್ಷ ರಾಜು ಚಿನ್ನಸ್ವಾಮಿ, ಕೆಎಸ್ಆರ್ಟಿಸಿ ಸಿಐಟಿಯು ಹಾಗೂ ಕೆ ಎಸ್ ಆರ್ ಟಿ ಸಿ ಪ. ಜಾ. ಪ. ಪಂ. ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಹನುಮಂತಪ್ಪ, ಖಜಾಂಚಿ ಶಂಕರಮೂರ್ತಿ ಹಾಗೂ ಸಂಘದ ಇತರೆ ಮುಖಂಡರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.

Rain in Shivamogga ಮಳೆಯಬ್ಬರಕ್ಕೆ ತುಂಬಿ ಹರಿದ ಹಳ್ಳಕೊಳ್ಳ. ಹೊಸನಗರ ತಾಲ್ಲೂಕಿನಲ್ಲಿ ದಾಖಲೆ ಮಳೆ

0

Rain in Shivamogga ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ದಾಖಲೆಯ ಮಳೆಯಾಗಿದೆ.
ಮಲೆನಾಡಿನ ಅತ್ಯಂತ ಅಣ್ಣನ ಮಳೆ ದೊಡ್ಡಪುಶ್ಯ ಎಂದು ಕರೆಯಲ್ಪಡುವ ಪುನರ್ವಸು ಮಳೆ ಅಬ್ಬರದಿಂದಲೇ ಪುನರ್ವಸು ಮಳೆಯಾಗಿದೆ.

ಶರಾವತಿ ಜಲಾನಯನ ಪ್ರದೇಶದ ಇಕ್ಕೆಲಗಳ ಹಳ್ಳ ಕೊಳ್ಳ ಉಪನದಿಗಳು ಮೈದುಂಬಿ ಹರಿಯುತ್ತಿವೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ತಾಲೂಕಿನ ಸಾವೇ ಹಕ್ಕಲಿನಲ್ಲಿ 138 ಮಿಲಿಮೀಟರ್ ಮಳೆಯಾಗಿದೆ.

Rain in Shivamogga ಚಕ್ರಾನಗರದಲ್ಲಿ 125 ಮಿಲಿ ಮಿಟರ್ ಮಳೆ, ಮಾಸ್ತಿ ಕಟ್ಟೆಯಲ್ಲಿ 116 ಮಿಲಿಮೀಟರ್, ಹುಲಿಕಲ್ಲಿನಲ್ಲಿ 115 ಮಿಲಿ ಮೀಟರ್, ಬಿದನೂರುನಲ್ಲಿ 104 ಮಿಲಿಮೀಟರ್, ಹೊಂಬುಜದಲ್ಲಿ 93.4 ಮಿಲಿಮಿಟರ್, ಮಾಣಿಯಲಿ 82 ಮಿಲಿ ಮೀಟರ್, ಹೊಸನಗರದಲ್ಲಿ 70 ಮಿಲಿಮೀಟರ್, ಕಾರ್ಗನ್ನಲ್ಲಿ 69.6 ಮಿಲಿ ಮೀಟರ್, ರಿಪ್ಪನ್ಪೇಟೆಯಲ್ಲಿ 28.2 ಮಿಲಿ ಮೀಟರ್, ಅರಸಾಳಿ ನಲ್ಲಿ 21.6 ಮಿಲಿ ಮೀಟರ್ ಮಳೆ ದಾಖಲಾಗಿದೆ.

Bhadravathi Urban Development Authority ನ್ಯಾಯಾಲಯದ ಆದೇಶದಂತೆ ವಾಜಪೇಯಿ ಬಡಾವಣೆ ನಿವೇಶನ ಹಂಚಿಕೆ ಪ್ರಕ್ರಿಯೆ- ಸೂಡಾ ಅಧ್ಯಕ್ಷ ಹೆಚ್.ಎನ್.ಸುಂದರೇಶ್

0

Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ೨೦೦೯-೧೦ನೇ ಸಾಲಿನಲ್ಲಿ ನಗರದ ಹೊರವಲಯ ಮಲ್ಲಿಗೇನಹಳ್ಳಿಯಲ್ಲಿ ಸಾರ್ವಜನಿಕ ವಿತರಣೆಗಾಗಿ ಸುಮಾರು ೧೭೨ಎಕರೆ ಪ್ರದೇಶದಲ್ಲಿ ಸೃಜಿಸಲಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯ ನಿವೇಶನ ಹಂಚಿಕೆಯಲ್ಲಿ ಆಗಿರಬಹುದಾದ ಸಮಸ್ಯೆಯ ಪರಿಹಾರಕ್ಕಾಗಿ ೨೦೨೩ರ ಆಗಸ್ಟ್ ಮಾಹೆಯಲ್ಲಿ ನ್ಯಾಯಾಲಯ ನೀಡಿದ ಆದೇಶದಂತೆ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಲು ಕ್ರಮ ವಹಿಸಲಾಗುವುದು ಎಂದು ಸೂಡಾ ಅಧ್ಯಕ್ಷ ಹೆಚ್.ಎನ್.ಸುಂದರೇಶ್ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ವಿವರ ನೀಡಿ ಮಾತನಾಡುತ್ತಿದ್ದರು. ನ್ಯಾಯಾಲಯದ ತೀರ್ಪಿನಂತೆ ಸೂಡಾದಲ್ಲಿ ಸೇವೆ ಸಲ್ಲಿಸುತ್ತಿರುವ ೧೭ ಸಿಬ್ಬಂಧಿಗಳು ಸೇರಿದಂತೆ ಅಧ್ಯಕ್ಷರ ವಿವೇಚನಾ ಕೋಟಾದಡಿ ಹಂಚಿಕೆ ಮಾಡಲಾಗಿದ್ದ ೧೪೨ ಜನರು ಮತ್ತು ಪತಿ-ಪತ್ನಿ ಪ್ರಕರಣಗಳಲ್ಲಿ ಆಯ್ಕೆಗೊಂಡಿದ್ದ ೧೬ಫಲಾನುಭವಿಗಳನ್ನು ಹೊರತುಪಡಿಸಿ, ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈವರೆಗೆ ಪರಿಶೀಲಿಸಲಾಗಿರುವ ೩೧೮ ಅರ್ಜಿಗಳ ಫಲಾನುಭವಿಗಳಿಗೆ ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
Bhadravathi Urban Development Authority ನ್ಯಾಯಾಲಯದ ಈ ಆದೇಶಕ್ಕೆ ಮೊದಲು, ಲೋಕಾಯುಕ್ತರ ತನಿಖಾ ವರದಿಯ ನಂತರ, ಪ್ರಾಧಿಕಾರದ ಸಭೆಯ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ಸಮಿತಿಯಲ್ಲಿ ವಿಸ್ತೃತವಾಗಿ ಸಮಾಲೋಚನೆ ನಡೆಸಿ, ಅರ್ಹರನ್ನು ಆಯ್ಕೆ ಮಾಡಲಾಗಿತ್ತು. ಕೆಲವು ಸೌಲಭ್ಯ ವಂಚಿತ ಅರ್ಜಿದಾರರು ಹಲವು ನಿಯಮಗಳನ್ನು ಉಲ್ಲಂಘಿಸಲಾಗಿರುವ ಬಗ್ಗೆ ಉಚ್ಚ ನ್ಯಾಯಾಲದಯಲ್ಲಿ ಪ್ರಶ್ನಿಸಿದ್ದರು. ಸದರಿ ಪ್ರಕರಣದಲ್ಲಿ ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಲಯವು ನೀಡಿದ ತೀರ್ಪಿನಂತೆ ಪ್ರಸ್ತುತ ಕ್ರಮ ವಹಿಸಲಾಗುತ್ತಿದೆ ಎಂದರು.
ವಾಜಪೇಯಿ ಬಡಾವಣೆಯಲ್ಲಿ ೧೮೦೧ನಿವೇಶನಗಳನ್ನು ಸೃಜಿಸಲಾಗಿದೆ. ಈ ನಿವೇಶನಗಳಲ್ಲಿ ೨೧೭ನಿವೇಶನಗಳನ್ನು ಭೂಮಾಲೀಕರಿಗೆ ಪರಿಹಾರ ರೂಪದಲ್ಲಿ ನೀಡಲಾಗಿದೆ. ೨೫೦ಮೂಲೆ ನಿವೇಶನಗಳನ್ನು ಕಾಯ್ದಿರಿಸಲಾಗಿದೆ. ೧೯ನಿವೇಶನಗಳನ್ನು ವೀರಪ್ಪನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದವರಿಗೆ ಸರ್ಕಾರದ ಆದೇಶದಂತೆ ವಿತರಿಸಲಾಗಿದೆ. ಭೂಮಾಲೀಕರಿಗೆ ನಿವೇಶನ ರೂಪದ ಪರಿಹಾರ ಪಡೆಯದೇ ನಗದು ರೂಪದ ಪರಿಹಾರ ಪಡೆದಾಗ ಉಳಿದ ೧೪೨ ನಿವೇಶನಗಳನ್ನು ವಿವೇಚನಾ ಕೋಟಾದಡಿ ಹಂಚಿಕೆ ಮಾಡಲಾಗಿದೆ ಎಂದರು.
ಪ್ರಾಧಿಕಾರದ ವ್ಯಾಪ್ತಿಗೊಳಪಡುವ ಭದ್ರಾವತಿಯಲ್ಲಿ ೩೪ಎಕರೆ ಭೂಪ್ರದೇಶವನ್ನು ಗುರುತಿಸಲಾಗಿದ್ದು, ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಅಲ್ಲದೇ ಊರುಗಡೂರು ಪ್ರದೇಶದಲ್ಲಿ ಈಗಾಗಲೇ ೮೫ಶೇ. ಕಾಮಗಾರಿ ಪೂರ್ಣಗೊಂಡಿದ್ದು, ಸುಮಾರು ೬೮೭ನಿವೇಶನಗಳ ಹಂಚಿಕೆ ಕಾರ್ಯ ಶೀಘ್ರದಲ್ಲಿ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಸೂಡಾ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಇಂಜಿನಿಯರ್ ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.

Department Of Skill Development ಉಚಿತ ಕೌಶಲ್ಯಾಭವೃದ್ಧಿ ತರಬೇತಿಗಾಗಿ ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

0

Department Of Skill Development ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯವರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಶಿವಮೊಗ್ಗ ಇಲ್ಲಿ ‘ಎಐಟಿಟಿ- ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ನಿರುದ್ಯೋಗ ಯುವಕ/ಯುವತಿಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದ್ಧಾರೆ.
ಐಟಿಐ ಆದವರಿಗೆ ಸಿಎನ್‍ಸಿ ಆಪರೇಟರ್-ವರ್ಟಿಕಲ್ ಮಷಿನ್ನಿಂಗ್ ಸೆಂಟರ್ 4 ತಿಂಗಳ ತರಬೇತಿ, ಡಿಪ್ಲೊಮ/ಬಿಇ ಆದವರಿಗೆ ಸಿಎನ್‍ಸಿ ಪ್ರೊಗ್ರಾಮರ್/ಪ್ರೊ-ಇ/ಆಟೋಕ್ಯಾಡ್ 4 ತಿಂಗಳ ತರಬೇತಿ, ಎಸ್‍ಎಸ್‍ಎಲ್‍ಸಿ ಆದವರಿಗೆ 4 ತಿಂಗಳ ಮಿಲ್ಲರ್/ಟರ್ನರ್ ಮತ್ತು 12 ತಿಂಗಳ ಅವಧಿಯ ಟೂಲ್ ರೂಂ ಮಷಿನಿಸ್ಟ್ ತರಬೇತಿಯನ್ನು ನೀಡಲಾಗುವುದು.
Department Of Skill Development ತರಬೇತಿ ಅವಧಿಯಲ್ಲಿ ರೂ.2500 ಪ್ರತಿ ತಿಂಗಳು ಶಿಷ್ಯವೇತನ ನೀಡಲಾಗುವುದು. ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ವಯಸ್ಸು, ವಿದ್ಯಾರ್ಹತೆ ದಾಖಲಾತಿಗಳು ಹಾಗೂ ವೈಯಕ್ತಿಕ ವಿವರಗಳೊಮದಿಗೆ ಜುಲೈ 27 ರೊಳಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ ಸಿಎ-38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ: 08182-246054, ಮೊ.ಸಂ 9448307027, 9449286543 ನ್ನು ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಚಾರ್ಯರು ತಿಳಿಸಿದ್ದಾರೆ.

Karnataka Land Reforms Act ಬರಗಾಲ ಬಂದರೂ ಈಗಿನ ಸರ್ಕಾರ ಪರಿಹಾರ ನೀಡಲಿಲ್ಲ- ಕೋಡಿಹಳ್ಳಿ ಚಂದ್ರಶೇಖರ್ ಆರೋಪ

0

Karnataka Land Reforms Act ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
ಪತ್ರಿಕಾಭವನದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರಕ್ಕೆ ಒಂದು ವರ್ಷವಾಗಿದೆ. ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಗ್ಯಾರಂಟಿಗಳಲ್ಲಿ ಮುಳುಗಿ ಅಭಿವೃದ್ಧಿಯನ್ನೇ ಕಡೆಗಾಣಿಸಿದ್ದಾರೆ. ಬರಗಾಲ ಬಂದರೂ ಅದಕ್ಕೆ ಪರಿಹಾರ ನೀಡಲಿಲ್ಲ. ಅದರ ಬದಲು ಬರಗಾಲದ ಸಂದರ್ಭದಲ್ಲಿ ತೆಲಂಗಾಣಕ್ಕೆ ಹೋಗಿ ಚುನಾವಣಾ ಪ್ರಚಾರದಲ್ಲಿ ಮುಳುಗಿದರು. ಕೇಂದ್ರ ಸರ್ಕಾರಕ್ಕೆ 36 ಸಾವಿರ ಕೋಟಿ ಪರಿಹಾರ ಕೇಳಿದ್ದರೂ ಕೂಡ ಕೇಂದ್ರ ಸರ್ಕಾರ ಕೇವಲ 3 ಸಾವಿರ ಕೋಟಿ ರೂ. ನೀಡಿ ಕೈ ಚೆಲ್ಲಿದೆ. ರಾಜ್ಯ ಸರ್ಕಾರ ರೈತರಿಗೆ 200 ಕೋಟಿ ರೂ. ಮಾತ್ರ ಕೊಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ರೈತರನ್ನು ಕಡೆಗಾಣಿಸಿವೆ ಎಂದರು.
Karnataka Land Reforms Act ಕೇಂದ್ರ ಸರ್ಕಾರ ರೈತರ ಎಪಿಎಂಸಿ ಹಾಗೂ ಭೂಸುಧಾರಣಾ ಕಾಯ್ದೆ ರದ್ದು ಮಾಡಿದರೂ ಕೂಡ ರಾಜ್ಯ ಸರ್ಕಾರ ಮಾತ್ರ ರೈತರಿಗೆ ಮಾರಕವಾಗಿರುವ ಈ ಕಾನೂನುಗಳನ್ನು ರದ್ದು ಮಾಡದೇ ಅದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರುತ್ತಿದೆ. ಚುನಾವಣೆಗೂ ಮುನ್ನ ರದ್ದು ಮಾಡುವ ಭರವಸೆ ನೀಡಿತ್ತು. ಆದರೆ, ಅದು ರದ್ದಾಗಿಲ್ಲ. ಭೂ ಸುಧಾರಣೆ ಕಾಯ್ದೆ ಪರಿಣಾಮವಾಗಿ ಸುಮಾರು 10 ಲಕ್ಷ ರೈತರು ತಮ್ಮ ಭೂಮಿ ಮಾರಿದ್ದಾರೆ. ಹಾಗೆಯೇ ಎಪಿಎಂಸಿ ಕಾಯ್ದೆಯಿಂದ ಕೃಷಿ ಮಾರುಕಟ್ಟೆಗೆ ಕಾರ್ಪೊರೇಟ್ ಕಂಪನಿಗಳು ನುಸುಳಿದ್ದಾರೆ. ಕೂಡಲೇ ಈ ಎರಡೂ ಕಾಯ್ದೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

Sringeri Sharada Peetham ಶೃಂಗೇರಿ ಭಾರೀಮಳೆಗೆ ತುಂಗಾತಟದ ಕಪ್ಪೆ ಶಂಕರ ಸೋಪಾನ ಮುಳುಗಿದೆ

0

Sringeri Sharada Peetham ಇತಿಹಾಸ ಪ್ರಸಿದ್ದ ಶೃಂಗೇರಿ ತುಂಗಾ ತಟದಲ್ಲಿರುವ ಕಪ್ಪೆಶಂಕರ ನಗರದ ಕುರಬಗೇರಿ ಗಾಂಧಿ ಮೈದಾನ ಸಂಪರ್ಕಿಸುವ ಒನ್ -ವೇ ರಸ್ತೆ ಮುಳುಗಡೆಯಾಗಿದ್ದು ಸಂಚಾರ ಸ್ಥಗಿತಗೊಂಡಿದೆ. ರಾತ್ರಿಯಿಡೀ ಎಡಬಿಡದೇ ಸುರಿದ ಭಾರೀ ಮಳೆಗೆ ಶಾರದಾ ಪೀಠ ಶೃಂಗೇರಿಯ ತುಂಗಾ ತಟದಲ್ಲಿರುವ ಕಪ್ಪೆ ಶಂಕರ ಸಂಪೂರ್ಣ ಮುಳುಗಡೆಯಾಗಿದೆ.
ಇಲ್ಲಿನ ಕುರುಬಗೇರಿಯಿಂದ ಗಾಂಧಿ ಮೈದಾನ, ಶ್ರೀಮಠಕ್ಕೆ ಸಂಪರ್ಕ ಕಲ್ಪಿಸುವ ಗೌರಿಶಂಕರ್ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಆ ಮೂಲಕ ಇದ್ದ ಸಂಚಾರ ಸ್ಥಗಿತಗೊಂಡಿದೆ. ಭಾರೀ ಮಳೆಯ ಮುನ್ಸೂಚನೆಯಿಂದ ಜಾಗೃತರಾಗಿದ್ದ ಶೃಂಗೇರಿ ಪೋಲೀಸರು ನದಿ Sringeri Sharada Peetham ತೀರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದ್ದರು ಹಾಗೂ ಅಪಾಯದ ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ರಾತ್ರಿಯಿಂದಲೇ ಸಂಚಾರ ಸ್ಥಗಿತಗೊಳಿಸಲಾಗಿತ್ತು
ಈ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆ ತುಂಗೆಯ ನೀರಿನ ಮಟ್ಟ ಏರುತ್ತಿದೆ.

Agumbe Police ಆಗುಂಬೆ ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ಕತ್ತು ಹಿಸುಕಿ ಯುವತಿಯ ಕೊಲೆ ತಪ್ಪು ಒಪ್ಪಿಕೊಂಡ ಆರೋಪಿ

0

Agumbe Police ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯ ಕುಶಾಲ್ ರವರ ಮಗಳಾದ ಪೂಜಾ (24) ಜೂನ್ 30 ರಂದು ನಾಪತ್ತೆಯಾಗಿದ್ದ ಪೂಜಾ ಎ ಕೆ ಹೆಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.ನಾಲೂರು ಸಮೀಪದ ಮಣಿ ಎಂಬಾತ ಆರೋಪಿ ಕತ್ತು ಹಿಸುಕಿ ಸಾಯಿಸಿ ನಾಲೂರು ಸಮೀಪ ಹೊಂಡದಲ್ಲಿ ಹಾಕಿರುವುದಾಗಿ

Agumbe Police ಒಪ್ಪಿಕೊಂಡಿದ್ದಾನೆ.ರಾತ್ರಿ ಸು 11 ರ ವೇಳೆ ಆರೋಪಿ ಮಣಿ ಯನ್ನು ಘಟನೆ ನಡೆದ ಸ್ಥಳಕ್ಕೆ ಕರೆದು ತಂದು ಸ್ಥಳ ಮಹಜರು ಮಾಡಲಾಗಿದೆ.ಈ ಕಾರ್ಯಾಚರಣೆ ಆಗುಂಬೆ ಪೊಲೀಸ್ ಠಾಣೆ ಪಿ ಎಸ್ ಐ ರಂಗನಾಥ್ ಅಂತರಗಟ್ಟಿ ನೇತೃತ್ವದಲ್ಲಿ ನಡೆದಿದೆ ಇದ್ದರು.

T20 World Cup ಟಿ 20 ವಿಶ್ವ ಕಪ್ ಗೆದ್ದ ಬೆನ್ನಲ್ಲೇ ಜಿಂಬಾಬ್ವೆ ವಿರುದ್ಧ ಹೀನಾಯ ಸೋತ‌ ಇಂಡಿಯ ಬ್ಲೂ ಬಾಯ್ಸ್ ತಂಡ

0

T20 World Cup ಭಾರತ ಮತ್ತು ಜಿಂಬಾಬ್ವೆ ನಡುವಿನ ಐದು ಪಂದ್ಯಗಳ ಟಿ20 ಸರಣಿ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 13 ರನ್ ಗಳಿಂದ ಸೋಲು ಕಂಡಿದೆ.
ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಜಿಂಬಾಬ್ವೆ ಭಾರತಕ್ಕೆ 116 ರನ್‌ಗಳ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಭಾರತ ತಂಡ 19.5 ಓವರ್‌ಗಳಲ್ಲಿ 10 ವಿಕೆಟ್‌ಗೆ 102 ರನ್ ಗಳಿಸಲಷ್ಟೇ ಶಕ್ತವಾಯಿತು. ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ಭಾರತವನ್ನು 13 ರನ್‌ಗಳಿಂದ ಸೋಲಿಸಿದೆ.
T20 World Cup ಈ ಪಂದ್ಯದಲ್ಲಿ ಭಾರತ ತಂಡದ ಬ್ಯಾಟಿಂಗ್ ಕ್ರಮಾಂಕ ಸಂಪೂರ್ಣ ವಿಫಲವಾಗಿತ್ತು. ಅಚ್ಚರಿಯ ವಿಷಯವೆಂದರೆ ಕಳೆದ ವಾರ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದಿತ್ತು. ಇದೀಗ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆಯದ ತಂಡದಿಂದ ಸೋಲು ಕಂಡಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ, ಕ್ಲೈವ್ ಮದಾಂಡೆ ಅಜೇಯ 29 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ 9 ವಿಕೆಟ್ ಗೆ 115 ರನ್ ಗಳಿಸಿತು. ಉತ್ತರವಾಗಿ ಭಾರತ ತಂಡ 19.5 ಓವರ್‌ಗಳಲ್ಲಿ 10 ವಿಕೆಟ್‌ಗೆ 102 ರನ್ ಗಳಿಸಲಷ್ಟೇ ಶಕ್ತವಾಯಿತು. ಗಿಲ್ ಮತ್ತು ಸುಂದರ್ ಹೊರತುಪಡಿಸಿ ಯಾವುದೇ ಬ್ಯಾಟ್ಸ್‌ಮನ್ ಉತ್ತಮ ಪ್ರದರ್ಶನ ನೀಡಲಿಲ್ಲ.

Grocers Association of Shivamogga ಸಂಘ ಸಂಸ್ಥೆಗಳು ಸುತ್ತಮುತ್ತಲ ಸಾಧಕರನ್ನ ಗಮನಿಸಿ ಗೌರವಿಸಬೇಕು- ಪಿ.ಎಸ್.ಹಾಲಸ್ವಾಮಿ

0

Grocers Association of Shivamogga ಸಮಾಜದಲ್ಲಿ ಸಾರ್ಥಕ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಇತರರಿಗೂ ಪ್ರೇರಣೆ ದೊರೆಯುತ್ತದೆ. ಸಂಘ ಸಂಸ್ಥೆಗಳು ನಮ್ಮ ಸುತ್ತಮುತ್ತ ಇರುವ ಮಹನೀಯರನ್ನು ಗುರುತಿಸುವ ಕೆಲಸ ಮಾಡಬೇಕು ಎಂದು ದಿನಸಿ ವರ್ತಕರ ಸಂಘದ ಅಧ್ಯಕ್ಷ ಪಿ.ಎಸ್.ಹಾಲಸ್ವಾಮಿ ಹೇಳಿದರು.
ಶಿವಮೊಗ್ಗ ನಗರದ ಎಪಿಎಂಸಿ ಯಾರ್ಡ್ ನಲ್ಲಿ ದಿನಸಿ ವರ್ತಕರ ಸಂಘದಿಂದ ಏರ್ಪಡಿಸಿದ್ದ ಕುಟುಂಬ ಸ್ನೇಹ ಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ವರ್ತಕರ ಸಂಘದಿಂದ ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಅಭಿನಂದಿಸಲಾಗುತ್ತಿದೆ ಎಂದು ತಿಳಿಸಿದರು.
ದಿನಸಿ ವರ್ತಕರ ಸಂಘದಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು, ಪ್ರತಿಭಾ ಪುರಸ್ಕಾರ ಹಾಗೂ ಕುಟುಂಬ ಮಿಲನ ಕಾರ್ಯಕ್ರಮದ ಮಾಡುವುದರಿಂದ ಪರಸ್ಪರರಲ್ಲಿ ಅವಿನಾಭಾವ ಸಂಬಂಧ ಪರಿಚಯವಾಗಿ ಪ್ರೀತಿ ವಿಶ್ವಾಸ ವೃದ್ಧಿಸುತ್ತದೆ ಎಂದರು.
ಹಳೆಯ ಗೀತೆಗಳು ನಮಗೆ ಖಿನ್ನತೆಯಿಂದ ದೂರ ಮಾಡುವುದರ ಜತೆಗೆ ನಮ್ಮ ಮನಸ್ಸನ್ನು ಆರಳಿಸುತ್ತವೆ. ಹಳೆಯ ಚಿತ್ರಗೀತೆಗಳು ಇಂದಿಗೂ ಸಹ ಪ್ರಸ್ತುತ. ನಮ್ಮ ಬದುಕಿಗೆ ತುಂಬಾ ಹತ್ತಿರವಾಗಿವೆ. ಸಾಹಿತ್ಯ ಸಂಗೀತವೂ ಕೂಡ ತುಂಬಾ ಅರ್ಥಪೂರ್ಣವಾಗಿರುತ್ತದೆ ಎಂದು ನುಡಿದರು.
Grocers Association of Shivamogga ಇದೇ ಸಂದರ್ಭದಲ್ಲಿ ಕನ್ನಿಕಾ ಟ್ರೇಡರ್ಸ್ ಅವರು ಎಲ್ಲಾ ವರ್ತಕರಿಗೆ ವಿಶೇಷವಾದ ಫುಡ್ ಕೀಟ್ ವಿತರಿಸಿದರು. ಹೊಸನಗರದ ಸುಗಮ ಸಂಗೀತ ಆಕಾಶವಾಣಿ ಕಲಾವಿದರಾದ ಆದ್ಯಾ, ರಮೇಶ್ ಹಾಗೂ ಜಿ.ವಿಜಯಕುಮಾರ್, ಬಿಂದು ವಿಜಯಕುಮಾರ್, ಶಾರುಖ್ ಖಾನ್ ಅವರಿಂದ ಮಧುರ ಮಧುರವಿ ಮಂಜುಳಗಾನ, ಹಳೆಯ ಚಿತ್ರಗೀತೆಗಳ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಕಲಾವಿದರನ್ನು ಗೌರವಿಸಿದರು. ಎಸ್ ಎಸ್ ಎಲ್ ಸಿ ಹಾಗೂ ಪಿಯುನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸನ್ಮಾನಿಸಿ ಪ್ರಶಸ್ತಿ ಪತ್ರ ಪಾರಿತೋಷಕ ಹಾಗೂ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಆರ್.ಬಿ.ಕಡದಕಟ್ಟೆ, ಎಂ.ಪಿ.ನಾಗರಾಜ್, ಎಚ್.ಜೆ.ದೇವರಾಜ್, ರಘುಪ್ರಸಾದ್, ಲಕ್ಷಿö್ಮಕಾಂತ್, ಆನಂದ್, ಉಮೇಶ್, ನಂದಕುಮಾರ್, ಸಂತೋಷ್, ಪ್ರಸನ್ನ, ಪ್ರಕಾಶ್, ಸಿದ್ದಪ್ಪ, ಶ್ರೀಕಾಂತ್, ಶಿವಪ್ರಕಾಶ್ ಮತ್ತು ಅಶೋಕ್ ಕುಮಾರ್ ಉಪಸ್ಥಿತರಿದ್ದರು.

MESCOM ಜುಲೈ 8 ರಂದು ತಾವರೆಚಟ್ನಳ್ಳಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

0

MESCOM ತಾವರೆಚಟ್ನಹಳ್ಳಿ ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ಎಫ್-3 ಅಬ್ಬಲಗೆರೆ ಐಪಿ ಮಾರ್ಗ ಮತ್ತು ಎಫ್-7 ಎನ್‍ಜೆವೈ ಮಾರ್ಗಗಳಲ್ಲಿ ವಾಹಕ ಬದಲಾವಣೆ ಮತ್ತು ಜಂಗಲ್ ಕಟ್ಟಿಂಗ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ರತ್ನಗಿರಿನಗರ, ಅಬ್ಬಲಗೆರೆ, ಹುಣಸೋಡು, ತಲ್ಲಗಂಗೂರು, ಮೋಜಪ್ಪನ ಹೊಸೂರು, ಸುತ್ತಮುತ್ತಲಿನ ಕ್ರಷರ್‍ಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಜು. 08 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.