DC Shivamogga ವಿನೋಬನಗರ ಪೊಲೀಸ್ ಚೌಕಿ ಕಡೆಗಳಲ್ಲಿ ದಿನೇ ದಿನೇ ವಾಹನ ಮತ್ತು ಸಂಚಾರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ವಿನೋಬನಗರದ 2 ನೇ ಹಂತದ 2ನೇ ಮುಖ್ಯ ರಸ್ತೆ ಪೊಲೀಸ್ಚೌಕಿ ಕೆಳಭಾಗ ನಂದಿನಿ ಪಾರ್ಲರ್ ನಿಂದ ಮಾನಸ ಪೆಟ್ಸ್ ಮಾರ್ಟ್ ಶಾಪ್ ಕಡೆಗೆ ಹೋಗುವ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡಿ, ಮಾನಸ ಪೆಟ್ಸ್ ಮಾರ್ಟ್ ಶಾಪ್ ನಿಂದ ನಂದಿನಿ ಪಾರ್ಲರ್ ಪೊಲೀಸ್ ಚೌಕಿ ಕಡೆಗೆ ಬರುವ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಿ ಏಕಮುಖ ಸಂಚಾರಕ್ಕೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
Karnataka State Food Commission ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಷ ಅವರ ಜಿಲ್ಲಾ ಪ್ರವಾಸ ಮಾಹಿತಿ.
Karnataka State Food Commission ಕರ್ನಾಟಕ ರಾಜ್ಯ ಆಹಾರ ಆಯೋಗವು ಡಿ. 8 ರಿಂದ 11 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ನ್ಯಾಯಬೆಲೆ ಅಂಗಡಿ, ಆಹಾರ ಧ್ಯಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಎಂ.ಎಸ್.ಪಿ.ಟಿ.ಸಿ., ಮಧ್ಯಾಹ್ನ ಉಪಹಾರ ಯೋಜನೆ, ಜಿಲ್ಲಾ ಆಸ್ಪತ್ರೆಯಲ್ಲಿರುವ ಎನ್.ಆರ್.ಸಿ. ಘಟಕ, ಹಾಗೂ ವಿವಿಧ ಇಲಾಖೆಗಳ ಪರೀಶೀಲನೆ, ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯೊಂದಿಗೆ ಸಭೆಯನ್ನು ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ.
Karnataka State Food Commission ಆಯೋಗದ ಪ್ರವಾಸದಲ್ಲಿ ಅಧ್ಯಕ್ಷರಾದ ಡಾ. ಹೆಚ್. ಕೃಷ್ಣ, ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ ದೊಡ್ಡಲಿಂಗಣ್ಣವರ, ಶ್ರೀಮತಿ ಎ. ರೋಹಿಣಿ ಪ್ರಿಯ ಮತ್ತು ಶ್ರೀಮತಿ ಕೆ.ಎಸ್.ವಿಜಯಲಕ್ಷ್ಮೀ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಗದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ
ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳ ನಿವೃತ್ತ ಅಧ್ಯಾಪಕರ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
2022ರ ಜುಲೈ 1ರ ನಂತರ ಕರ್ನಾಟಕ ರಾಜ್ಯದಲ್ಲಿ ವಿಶ್ವವಿದ್ಯಾಲಯ, ಸರ್ಕಾರಿ ಪದವಿ ಕಾಲೇಜುಗಳು ಮತ್ತು ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ 2,000 ಅಧ್ಯಾಪಕರಿಗೆ ಕರ್ನಾಟಕ ಸರ್ಕಾರವು 2025ರ ಜೂನ್ 30ರಂದು ಜಾರಿಗೊಳಿಸಿದ ಆದೇಶದಿಂದ 7ನೇ ವೇತನದ ಪಿಂಚಣಿ ಪರಿಷ್ಕರಣೆಯಿಂದ ಭಾರಿ ಆರ್ಥಿಕ ನಷ್ಟವಾಗಲಿದೆ.
ಸದರಿ ಅಧ್ಯಾಪಕರಿಗೆ ಈಗ ಪಡೆಯುತ್ತಿರುವ ಪಿಂಚಣಿಯಲ್ಲಿ ಪ್ರತಿ ತಿಂಗಳಿಗೆ 25.000 ರೂ.ನಿಂದ 30,000 ರೂ.ವರೆಗೆ ಕಡಿಮೆಯಾಗುತ್ತದೆ. ಈ ಅಧ್ಯಾಪಕರಿಗೆ ಈಗಾಗಲೇ 6ನೇ ವೇತನದ ಅಡಿಯಲ್ಲಿ ಪಿಂಚಣಿ ನಿಗದಿಯಾಗಿ ನಿವೃತಿ ವೇತನ ಪಡೆಯುತ್ತಿದ್ದಾರೆ. 7ನೇ ವೇತನದ ಅಡಿಯಲ್ಲಿ 30-06-2025ರ ಆದೇಶದಂತೆ ಅಧ್ಯಾಪಕರಿಗೆ ಅನ್ಯಾಯವಾಗಲಿದೆ.
ಹಿಂದೆ 4, 5 ಮತ್ತು 6ನೇ ವೇತನದ ಅಡಿಯಲ್ಲಿ ಯುಜಿಸಿ ವೇತನ ಶ್ರೇಣಿ ಪಡೆದು ನಿವೃತ್ತರಾದಾಗ ಕರ್ನಾಟಕ ಸರ್ಕಾರವು ಕರೆಕ್ಟಿವ್ ಫ್ಯಾಕ್ಟರ್ ಮೂಲಕ ನಿವೃತ್ತಿ ವೇತನ ನಿಗದಿಯಾಗುತ್ತಿತ್ತು. ಈ ಕಾರಣದಿಂದ ಯಾವ ಅಧ್ಯಾಪಕರಿಗೂ ಅನ್ಯಾಯವಾಗುತ್ತಿರಲಿಲ್ಲ. ಇಂದಿನ ಸರ್ಕಾರವು ಕರೆಕ್ಟಿವ್ ಫ್ಯಾಕ್ಟರ್ ಕೈ ಬಿಟ್ಟು 30-06-2025 ರಂದು ಸುಧೀರ್ಘ ಆದೇಶ ಜಾರಿ ಮಾಡಿರುತ್ತಾರೆ.
ಈ ಆದೇಶದಲ್ಲಿ ಎರಡು ಭಾಗಗಳಿದ್ದು ಭಾಗ ಒಂದರಲ್ಲಿ ಕೆಸಿಎಸ್ಆರ್ ನಿಯಮ 291 (ಜಿ) ಪ್ರಕಾರ ನಿವೃತ್ತಿ ವೇತನವನ್ನು ಪರಿಷ್ಕರಣೆ ಮಾಡಲಾಗುವುದು. ಇದರಿಂದ 01-07-2022ರ ನಂತರ ನಿವೃತ್ತರಾದ ಅಧ್ಯಾಪಕರಿಗೆ ನಿವೃತ್ತಿ ವೇತನದಲ್ಲಿ ಬಹಳ ನಷ್ಟವಾಗುತ್ತದೆ. ಕರ್ನಾಟಕ ಸರ್ಕಾರವು ಭಾಗ 02ರಲ್ಲಿ ಹಿರಿಯ ಅಧ್ಯಾಪಕರಿಗೆ ನಿವೃತ್ತಿ ವೇತನ ಕಡಿಮೆಯಾದಲ್ಲಿ ಸರಿಸಮಾನ ವೃಂದ ವೇತನ ಶ್ರೇಣಿ ಇತ್ಯಾದಿಗಳು 01-07-2022ಕ್ಕಿಂತ ಮೊದಲು ನಿವೃತ್ತರಾದ ಕಿರಿಯ ಅಧ್ಯಾಪಕರ ನಿವೃತ್ತಿ ವೇತನಕ್ಕೆ ಎತ್ತರಿಸುವುದು.
ಈ ಆದೇಶದ ಪ್ರಕಾರ ನಿವೃತ್ತ ಕಿರಿಯ ಅಧ್ಯಾಪಕರನ್ನು ಹುಡುಕುವುದು ನಿವೃತ್ತ ಹಿರಿಯ ಅಧ್ಯಾಪಕರಿಗೆ ದೊಡ್ಡ ಸವಾಲಾಗಿದೆ. ಇದರ ಜೊತೆಗೆ ಕಾಲೇಜು ಶಿಕ್ಷಣ ಇಲಾಖೆ, ವಿವಿಧ ಜಂಟಿ ನಿರ್ದೇಶಕರ ಕಚೇರಿಗಳಿಂದ ಸದರಿ ಅಧ್ಯಾಪಕರ ಪ್ರಸ್ತಾವನೆ ಕಳುಹಿಸಲು ದೊಡ್ಡ ಸವಾಲಾಗಿದೆ. ಸರ್ಕಾರವು ತನ್ನ ತಪ್ಪನ್ನು ತಿದ್ದಿಕೊಳ್ಳಲು ಸದರಿ ಆದೇಶದಲ್ಲಿ ಕಂಡಿಕೆ 13 ರ ಪ್ರಕಾರ ಈ ಅನ್ಯಾಯವನ್ನು ಸರಿಪಡಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲು ತಿಳಿಸಿರುತ್ತಾರೆ.
ಈ ಎಲ್ಲ ಅಂಶಗಳನ್ನು ಗಮನಿಸಿದಾಗ ಸದರಿ ಅಧ್ಯಾಪಕರಿಗೆ ನಿವೃತ್ತಿ ವೇತನ ಪಡೆಯುವುದು ಕನಸಿನ ಮಾತಾಗಿದೆ. ಕರ್ನಾಟಕ ಸರ್ಕಾರವು ಈ ವಿಷಯಕ್ಕೆ ಆದ್ಯತೆ ಕೊಟ್ಟು ಅನ್ಯಾಯವನ್ನು ಸರಿಪಡಿಸಬೇಕು ಎಂದು ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳ ನಿವೃತ್ತ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಬಿ.ಸಿ ಗೌಡರ್ ಶಿವಣ್ಣನವರ್, ಉಪಾಧ್ಯಕ್ಷ ಎಂ.ಚಂದ್ರಪ್ಪ, ಜಂಟಿ ಕಾರ್ಯದರ್ಶಿ ಧನಂಜಯ ಬಿ.ಆರ್. ಮತ್ತು ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
B.Y.Raghavendra ಹವಾಮಾನಾಧಾರಿತ ಬೆಳೆವಿಮೆ ನಿರ್ಧರಣೆ ನ್ಯೂನತೆ ಸಮರ್ಪಕಗೊಳಿಸಲು ಸೂಚನೆ : ಬಿ.ವೈ.ರಾಘವೇಂದ್ರ
B.Y.Raghavendra ಕಾರ್ಯನಿರ್ವಹಿಸದಿರುವ ಮಳೆ ಮಾಪನ ಯಂತ್ರಗಳು ಹಾಗೂ ಸಕಾಲಿಕವಾಗಿ ಗಮನಹರಿಸದ ಅಧಿಕಾರಿ-ಸಿಬ್ಬಂಧಿಗಳ ನಿರ್ಲಕ್ಷ್ಯ ಮುಂತಾದ ಕಾರಣಗಳಿಂದಾಗಿ ಬೆಳೆಹಾನಿಗೊಳಗಾದ ರೈತರಿಗೆ ನಿರೀಕ್ಷಿತ ಪ್ರಮಾಣದ ವಿಮಾ ಮೊತ್ತ ಪಾವತಿಯಾಗದಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಅದನ್ನು ಮುಂದಿನ ಒಂದು ವಾರದೊಳಗಾಗಿ ಸಮರ್ಪಕವಾಗಿ ದಾಖಲೆಗಳನ್ನು ಸರಿಪಡಿಸಿಕೊಂಡು ಸಂತ್ರಸ್ಥ ರೈತರಿಗೆ ನ್ಯಾಯೋಚಿತವಾದ ಪರಿಹಾರ ಮೊತ್ತವನ್ನು ಪಾವತಿಸಲು ಕ್ರಮ ಕೈಗೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಹಾಗೂ ವಿಮಾ ಕಂಪನಿಗಳ ಮುಖ್ಯಸ್ಥರಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಕೃಷಿ, ತೋಟಗಾರಿಕೆ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಹವಾಮಾನಾಧಾರಿತ ಬೆಳೆವಿಮೆ ಅಸಮರ್ಪಕವಾಗಿ ವಿತರಿಸುತ್ತಿರುವ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ಮಾಹಿತಿ ಪಡೆದರು.
ಜಿಲ್ಲೆಯಲ್ಲಿರುವ 280 ಮಳೆ ಮಾಪನ ಯಂತ್ರಗಳಲ್ಲಿ ಶೇ.75ರಷ್ಟು ಯಂತ್ರಗಳು ಕಾರ್ಯನಿರ್ವಹಿಸುತ್ತಿಲ್ಲ. ಹೀಗಿರುವಾಗ ಮಳೆಮಾಪನದ ದತ್ತಾಂಶ ಸಂಗ್ರಹಿಸುವುದಾದರೂ ಹೇಗೆ? ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದ ಅವರು, ನೆರೆಯ ಗ್ರಾಮ ಪಂಚಾಯಿತಿಗಳಲ್ಲಿ ಬಿದ್ದಿರುವ ಮಳೆಯ ಅಂದಾಜನ್ನು ಆಧರಿಸಿ, ಮಳೆಯ ಪ್ರಮಾಣವನ್ನು ನಿರ್ಧರಿಸುವುದು ಸರಿಯಾದ ಕ್ರಮವಲ್ಲ. ಒಂದೊಮ್ಮೆ ನೆರೆಯ ಗ್ರಾಮ ಪಂಚಾಯಿತಿಗಳಲ್ಲಿನ ಮಳೆ ಪ್ರಮಾಣವನ್ನು ಗುರುತಿಸುವುದಾದರೆ ರಸ್ತೆಯ ದೂರವನ್ನಾಧರಿಸಿ ಅಥವಾ ವೈಮಾನಿಕ ದೂರವನ್ನು ಅಂದಾಜಿಸಿ ಮಳೆಯ ಮಾಪನ ಕೇಂದ್ರವನ್ನು ಗುರುತಿಸಲಾಗುವುದು ಎಂಬ ಬಗ್ಗೆ ಅಧಿಕಾರಿಗಳಲ್ಲಿ ನಿಖರವಾದ ಮಾಹಿತಿ ಇಲ್ಲ. B.Y.Raghavendra ಮಲೆನಾಡು, ಅರೆಮಲೆನಾಡು ಮತ್ತು ಬಯಲುಸೀಮೆ ಪ್ರದೇಶಗಳಲ್ಲಿ ಮಳೆ ಪ್ರಮಾಣ, ದತ್ತಾಂಶ ಸಂಗ್ರಹಣೆಯಲ್ಲಿನ ನ್ಯೂನತೆಗಳಂತಹ ಅವೈಜ್ಞಾನಿಕವಾದ ಕಾರಣಗಳಿಂದಾಗಿ ಸಂತ್ರಸ್ಥ ರೈತರಿಗೆ ಶೋಷಣೆ ಮಾಡುತ್ತಿರುವುದು ಸೂಕ್ತವಲ್ಲ ಎಂದ ಅವರು, ಸಂಬಂಧಿಸಿದ ಇಲಾಖೆಗಳ ಹಾಗೂ ವಿಮಾ ಕಂಪನಿಗಳ ಅಧಿಕಾರಿಗಳು ಕೂಡಲೇ ಗಮನಹರಿಸಿ, ಅಸಮರ್ಪಕ ವಿಮಾ ಮೊತ್ತದ ವಿತರಣೆಯನ್ನು ಸರಿಪಡಿಸಿಕೊಂಡು ವಿತರಿಸಲು ಮುಂದಾಗುವಂತೆ ಅವರು ಸೂಚಿಸಿದರು.
ಶಿವಮೊಗ್ಗದಲ್ಲಿ ಖ್ಯಾತ ವೈದ್ಯೆ ತಾಯಿ ಮತ್ತು ಪುತ್ರ ನೇಣಿಗೆ ಶರಣು
ಶಿವಮೊಗ್ಗ ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ ನಗರದ ಗಾಂಧಿ ನಗರದಲ್ಲಿ ಹೊಮ್ಮರಡಿ ಆಸ್ಪತ್ರೆಯ ಮೂಲಕ ಹಲವು ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿ ತೊಡಗಿತ್ತು.
ಮಕ್ಕಳ ತಜ್ಞರಾಗಿದ್ದ ಡಾ.ನಾಗರಾಜ ಹೊಮ್ಮರಡಿ ಕೂಡ 10 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ರ ಆಕಾಶ್ ಹೊಮ್ಮರಡಿ ಅವರ ಪತ್ನಿ ನವ್ಯಶ್ರೀ ಕೂಡ ಒಂದೂವರೆ ವರ್ಷದ ಹಿಂದೆ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಡಾ.ಜಯಶ್ರೀ ನೆಲ ಮಹಡಿಯ ಕೊಠಡಿಲ್ಲಿ ನೇಣು ಬಿಗಿದುಕೊಂಡಿದ್ದು, ಆಕಾಶ್ ಶವ ಮೊದಲ ಮಹಡಿ ಕೊಠಡಿಯಲ್ಲಿ ಪತ್ತೆಯಾಗಿದೆ. ಆಕಾಶ್ ಅವರಿಗೆ ಕಳೆದ ಮೇ ತಿಂಗಳಲ್ಲಿ ಮತ್ತೊಂದು ಮದುವೆ ಆಗಿತ್ತು. ಆಕಾಶ್ ಪತ್ನಿ ಮತ್ತೊಂದು ಕೊಠಡಿಯಲ್ಲಿ ಇದ್ದರು ಎಂದು ತಿಳಿದುಬಂದಿದೆ.
‘ಸೊಸೆ ನವ್ಯಶ್ರೀ ಸಾವಿನಿಂದ ಕುಟುಂಬ ಬೇಸರಕ್ಕೆ ಒಳಗಾಗಿತ್ತು ಎಂಬುದು ಸ್ಥಳದಲ್ಲಿ ದೊರೆತ ಡೆತ್ನೋಟ್ನಲ್ಲಿ ವ್ಯಕ್ತವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ವಿನೋಬ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ICAR-Center for Agricultural Sciences ಸಾವಯವ ಮತ್ತು ಜೈವಿಕ ಗೊಬ್ಬರ ಬಳಕೆಯಿಂದ ಮಣ್ಣಿನ ಗುಣಮಟ್ಟ ರಕ್ಷಿಸಿ- ಡಾ.ಲೋಕೇಶ್.
ICAR-Center for Agricultural Sciences ಐ ಸಿ ಎ ಆರ್-ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಇಲ್ಲಿ ಕೃಷಿ ಇಲಾಖೆ ಸಹಯೋಗದೊಂದಿಗೆ ದಿನಾಂಕ 5.12 2025 ರಂದು ವಿಶ್ವ ಮಣ್ಣು ದಿನಾಚರಣೆಯನ್ನು ಆಚರಿಸಲಾಯಿತು.
ಈ ವರ್ಷದ ಧ್ಯೇಯ ವಾಕ್ಯವಾದ ಆರೋಗ್ಯಕರ ನಗರಗಳಿಗೆ ಆರೋಗ್ಯಕರ ಮಣ್ಣು ಎಂಬ ಶೀರ್ಷಿಕೆಯಲ್ಲಿ ಈ ದಿನದ ಮಣ್ಣು ದಿನಾಚರಣೆಯನ್ನು ಆಚರಿಸಲಾಯಿತು. 2013ರಲ್ಲಿ ಆಹಾರ ಮತ್ತು ಕೃಷಿ ಸಂಸ್ಥೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 68ನೇ ಸಮ್ಮೇಳನದಲ್ಲಿ ವಿಶ್ವ ಮಟ್ಟದಲ್ಲಿ ಮಣ್ಣಿನ ದಿನವನ್ನು ಆಚರಿಸಬೇಕೆನ್ನುವ ಪ್ರಸ್ತಾವವನ್ನು ಸಲ್ಲಿಸಿತು. ಇದರ ಫಲವಾಗಿ 2014 ಡಿಸೆಂಬರ್ 5 ರಂದು ಮೊದಲ ಬಾರಿಗೆ ಮಣ್ಣು ದಿನವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಯಿತು.
ಈ ವಿಶ್ವ ಮಣ್ಣು ದಿನವನ್ನು ಆಚರಿಸುವ ಉದ್ದೇಶವು ಮಣ್ಣಿನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ.
ಇಂದು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆ ಪ್ಲಾಸ್ಟಿಕ್ ಬಳಕೆ ಸೇರಿದಂತೆ ಇತ್ಯಾದಿ ಮಾಲಿನ್ಯದ ಕಾರಣದಿಂದಾಗಿ ಮಣ್ಣಿನ ಫಲವತ್ತತೆಯು ಕಡಿಮೆಯಾಗುತ್ತಿದೆ, ಅಷ್ಟು ಮಾತ್ರವಲ್ಲದೆ ಕಾಡುಗಳ ನಾಶದಿಂದಾಗಿ ಪ್ರವಾಹ ಮತ್ತು ಬಾರಿ ಮಳೆಯ ಸಂದರ್ಭದಲ್ಲಿ ಮಣ್ಣಿನ ಸವತೆಯು ಹೆಚ್ಚಾಗುತ್ತಿದೆ.
ಹೀಗಾಗಿ ಸುಸ್ಥಿರ ಭವಿಷ್ಯಕ್ಕಾಗಿ ಮಣ್ಣಿನ ಸಂರಕ್ಷಣೆ ಎಷ್ಟು ಮುಖ್ಯ ಎಂಬ ಬಗ್ಗೆ ಜಾಗೃತಿ ಮೂಡಿಸುವುದು ಈ ಆಚರಣೆಯ ಮುಖ್ಯ ಉದ್ದೇಶವಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಲೋಕೇಶ್, ಉಪ ಕೃಷಿ ನಿರ್ದೇಶಕರು ,ಕೃಷಿ ಇಲಾಖೆ ,ಶಿವಮೊಗ್ಗ ಇವರು ಗಿಡಗಳಿಗೆ ಜೈವಿಕ ಗೊಬ್ಬರಗಳನ್ನು ಹಾಕುವುದರ ಮೂಲಕ ಉದ್ಘಾಟನೆಯನ್ನು ನೆರವೇರಿಸಿಕೊಟ್ಟರು ತಮ್ಮ ಉದ್ಘಾಟನಾ ನುಡಿಗಳಲ್ಲಿ ಇವರು ಇಂದಿನ ದಿನ ಮಣ್ಣು ತುಂಬಾ ಮಾಲಿನ್ಯಗೊಳ್ಳುತ್ತಿದ್ದು ,ಇದರ ಸಂರಕ್ಷಣೆಗೆ ನಾವು ಸಾವಯವ ಗೊಬ್ಬರ ಮತ್ತು ಜೈವಿಕ ಗೊಬ್ಬರಗಳನ್ನು ಬಳಕೆ ಮಾಡುವುದರಿಂದ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಬಹುದೆಂದು ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ತಿಪ್ಪೇಶ್, ಡೀನ್ ಕೃಷಿ, ,ಕೃಷಿ ಮಹಾವಿದ್ಯಾಲಯ ಶಿವಮೊಗ್ಗ ಇವರು ಉಳಿಸಿಕೊಂಡಿದ್ದು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಪರಿಸರ ವ್ಯವಸ್ಥೆ ಮತ್ತು ಜೀವರಾಶಿಗಳ ಯೋಗಕ್ಷೇಮಕ್ಕೆ ಮಣ್ಣು ಪ್ರಮುಖ ಅಡಿಪಾಯವಾಗಿದೆ ಹೀಗೆ ಮಣ್ಣಿನ ಅಮೂಲ್ಯವಾದ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮಣ್ಣಿನ ಮಾಲಿನ್ಯವನ್ನು ತಡೆಗಟ್ಟಲು, ಮಣ್ಣು ಹಾಗೂ ಮಣ್ಣಿನ ಆರೋಗ್ಯವನ್ನು ಸಂರಕ್ಷಿಸಲು ಡಿಸೆಂಬರ್ 5 ರಂದು ಮಣ್ಣು ದಿನವನ್ನು ಆಚರಿಸಲಾಗುತ್ತದೆ ಎಂದು ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಮಣ್ಣು ವಿಜ್ಞಾನಿಯಾದ ಡಾಕ್ಟರ್ ಜಿ ಎನ್ ತಿಪ್ಪೇಶಪ್ಪ ಪ್ರಾಧ್ಯಾಪಕರು ಕೃಷಿ ಮಹಾವಿದ್ಯಾಲಯ ಶಿವಮೊಗ್ಗ ಇವರು ಮಣ್ಣಿನ ಸಂರಕ್ಷಣೆಯ ಕುರಿತು ರೈತರಿಗೆ ವಿವರವಾಗಿ ತಿಳಿಸಿದರು.
ಇವರು ಮಣ್ಣಿನ ಆರೋಗ್ಯದ ಬಗ್ಗೆ ವಿವರಿಸುತ್ತಾ ಆಹಾರಭದ್ರತೆ ಮತ್ತು ನಮ್ಮ ಸುಸ್ಥಿರ ಭವಿಷ್ಯವನ್ನು ಕಾಪಾಡಿಕೊಳ್ಳಲು ಮಣ್ಣು ಮತ್ತು ಮಣ್ಣಿನ ಆರೋಗ್ಯ ಸಂರಕ್ಷಣೆ ಮಾಡುವುದು ಅತ್ಯಂತ ಅಗತ್ಯವಾಗಿದೆ ಎಂದು ರೈತರಿಗೆ ಮನವರಿಕೆ ಮಾಡಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಮೊದಲಿಗೆ ಡಾ. ಸುನಿಲ್, ಸಿ ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ ರವರು ಈ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ,ಬಂದಿರುವ ಎಲ್ಲಾ ಗಣ್ಯರನ್ನು ಮತ್ತು ರೈತ ಮಿತ್ರರನ್ನು ಈ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಬಿ ಸಿ ಹನುಮಂತ ಸ್ವಾಮಿ, ಸಹ ವಿಸ್ತಾರಣ ನಿರ್ದೇಶಕರು, ಡಾ. ಸುಧಾಕರ್ ಮುಖ್ಯಸ್ಥರು ಆಕಾಶವಾಣಿ ಭದ್ರಾವತಿ, ಶ್ರೀಯುತ ರಾಘವೇಂದ್ರ ರವರು, ಜಿಲ್ಲಾ ರೈತ ಸಂಘದ ಅಧ್ಯಕ್ಷರು ಹಾಗೂ ಪ್ರಗತಿಪರ ಸಾವಯವ ಕೃಷಿಕರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಕೃಷಿಯಲ್ಲಿನ ಅನುಭವವನ್ನು ರೈತರಲ್ಲಿ ಹಂಚಿಕೊಂಡರು.
ICAR-Center for Agricultural Sciences ಡಾ. ಶಿಲ್ಪ ಶ್ರೀ ಮಣ್ಣು ವಿಜ್ಞಾನಿಗಳು, ಕೆ ವಿ ಕೆ ಇವರು ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ನಿರೂಪಣೆಯನ್ನು ಮಾಡಿದರು. ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತ ಬಾಂಧವರು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ರೈತರಿಗೆ ತಮ್ಮ ಮಣ್ಣಿನ ಫಲವತ್ತತೆಯ ಮಣ್ಣು ಗುರುತು ಚೀಟಿಯನ್ನು ವಿತರಿಸಲಾಯಿತು ಮತ್ತು ಈ ಮಣ್ಣು ಗುರುತು ಚೀಟಿಯ ಮಹತ್ವವನ್ನು ಅವರಿಗೆ ತಿಳಿಸಿಕೊಡಲಾಯಿತು.
ಈ ಕಾರ್ಯಕ್ರಮದಲ್ಲಿ ಸುಮಾರು 70 ರಿಂದ 80 ರೈತ ಮಿತ್ರರು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು.
ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ
Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, , ಪ್ರಾದೇಶಿಕ ಕಛೇರಿ, ಹುಬ್ಬಳ್ಳಿ ಇವರುಗಳ ಸಂಯುಕ್ತ ಸಹಭಾಗಿತ್ವದಲ್ಲಿ ದಿನಾಂಕ:06.12.2025ನೇ ಶನಿವಾರ ಸಂಜೆ 4.45ಕ್ಕೆ ಸಂಘದ ಶಾಂತಲಾ ಸ್ಪೇರೋಕ್ಯಾಸ್ಟ್ ಸಭಾಂಗಣದಲ್ಲಿ ಯೋಜನೆ ಅಡಿಯಲ್ಲಿ ಸಾಮಾಜಿಕ ಭದ್ರಾತಾ ಸೌಲಭ್ಯ ವಿಸ್ತರಣಾ ಅರಿವು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ಶ್ರೀ ಕೆ.ರಘುರಾಮನ್,ಜಂಟಿ ನಿರ್ದೇಶಕರು, ಇ.ಎಸ್.ಐ ಪ್ರಾದೇಶಿಕ ಕಛೇರಿ ಹುಬ್ಬಳ್ಳಿ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಬಿ.ಗೋಪಿನಾಥ್ರವರು ವಹಿಸಲಿರುವರು ಮತ್ತು ಇ.ಎಸ್.ಐ ಕಾರ್ಪೊರೇಶನ್ ಶಿವಮೊಗ್ಗ ಶಾಖಾ ಕಚೇರಿಯ ವ್ಯವಸ್ಥಾಪಕರಾದ ಶ್ರೀಮತಿ ಎಂ.ಎ ಆಶಾದೇವಿಯವರು ಉಪಸ್ಥಿತರಿರುತ್ತಾರೆ. ಯೋಜನೆ ಕಾಯಿದೆಯಡಿಯಲ್ಲಿ ಸಾಮಾಜಿಕ ಭದ್ರತಾ ವ್ಯಾಪ್ತಿಗೊಳಪಡುವ ಉಪಯುಕ್ತ ವಿಶೇಷ ಉಪಕ್ರಮವಾಗಿದೆ. ಈ ಯೋಜನೆ 31ನೇ ಡಿಸೆಂಬರ್ 2025ವರೆಗೂ ಸಕ್ರೀಯವಾಗಿದ್ದು ದಂಡ ರಹಿತವಾಗಿ ನೊಂದಣಿ ಮಾಡಲಾಗುವುದಾಗಿರುತ್ತದೆ. Shivamogga District Chamber of Commerce and Industry, ಇ.ಎಸ್.ಐ ವ್ಯಾಪ್ತಿಗೊಳಪಡುವ ಶಿವಮೊಗ್ಗ ಜಿಲ್ಲೆಯ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು ಅರಿವು ಕಾರ್ಯಾಗಾರದಲ್ಲಿ ಭಾಗಿಗಳಾಗಿ ಈ ಕುರಿತು ಹೆಚ್ಚಿನ ಮಾಹಿತಿ ಪಡೆದು ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ ಹಾಗೂ ಕಾರ್ಯಕ್ರಮಕ್ಕೆ ಸಂಘದ ಸದಸ್ಯ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು, ಲೆಕ್ಕಪರಿಶೋಧಕರು, ತೆರಿಗೆ ಸಲಹೆಗಾರರು, ವೃತ್ತಿಪರರು, ಸಂಸ್ಥೆಯ ಸದಸ್ಯರುಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಗೌರವ ಕಾರ್ಯದರ್ಶಿ ಶ್ರೀ ಎ.ಎಂ. ಸುರೇಶ್ರವರು ಸಂಘದ ಪ್ರಕಟಣೆಯಲ್ಲಿ ಕೋರಿದ್ದಾರೆ.
ಇನ್ನರ್ ವೀಲ್ ಪೂರ್ವ ಸಂಸ್ಥೆಯಿಂದ ಗರ್ಭಕಂಠ ಕ್ಯಾನ್ಸರ್ ಜಾಗೃತಿ
ಮಕ್ಕಳಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಜಾಗೃತಿ ಮೂಡಿಸುವ ಆಶಯದಿಂದ ಇನ್ನರ್ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಪೂರ್ವ ವತಿಯಿಂದ ಜ್ಞಾನದೀಪ ಶಾಲೆ, ಓಪನ್ ಮೈಂಡ್ ಶಾಲೆ ಮತ್ತು ಜೈನ್ ಪಬ್ಲಿಕ್ ಶಾಲೆಗಳಲ್ಲಿ ಎಚ್ಪಿವಿ ಲಸಿಕಾ ಶಿಬಿರ ನಡೆಸಲಾಯಿತು.
ಸರ್ಜಿ ಆಸ್ಪತ್ರೆಯ ಶಿಶುರೋಗ ತಜ್ಞ ಡಾ. ಪ್ರಸಾದ್, ಶಿಶುರೋಗ ತಜ್ಞೆ ಡಾ. ಶಮಿತಾ ಅವರು ಲಸಿಕೆಯ ಮಹತ್ವ ಹಾಗೂ ಗರ್ಭಕಂಠದ ಕ್ಯಾನ್ಸರ್ ತಡೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಿದರು. ಪ್ರತಿ ವರ್ಷ 1,20,000 ಮಹಿಳೆಯರು ಈ ರೋಗಕ್ಕೆ ಒಳಗಾಗುತ್ತಿದ್ದು, ಜಾಗೃತಿ ಮತ್ತು ಸರಿಯಾದ ಸಮಯದಲ್ಲಿ ಚಿಕಿತ್ಸೆ ಇಲ್ಲದೆ 85,000 ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಎಚ್ಪಿವಿ ಲಸಿಕೆ ಪಡೆಯುವುದರಿಂದ ಈ ಕ್ಯಾನ್ಸರ್ ಅನ್ನು ಬಹಳ ಮಟ್ಟಿಗೆ ತಡೆಗಟ್ಟಬಹುದು ಎಂದು ತಿಳಿಸಿದರು.
ಇನರ್ವೀಲ್ ಕ್ಲಬ್ ಈ ಜೀವ ರಕ್ಷಕ ಲಸಿಕೆಯನ್ನು ಎಲ್ಲರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡಲು ಬದ್ಧವಾಗಿದೆ. 9–14 ವರ್ಷದ ಮಕ್ಕಳಿಗೆ 2 ಡೋಸ್, 15–26 ವರ್ಷ ವಯಸ್ಸಿನವರಿಗೆ 3 ಡೋಸ್ ಹೆಣ್ಣುಮಕ್ಕಳು ಮತು ಗಂಡುಮಕ್ಕಳು ಲಸಿಕೆ ಪಡೆಯಬೇಕು. ಎಚ್ಪಿವಿ ವೈರಸ್ ಹರಡುವಿಕೆ ಸಾಮಾನ್ಯವಾಗಿ ಪುರುಷರಿಂದ ಆಗುತ್ತದೆ. ಶೇ. 32 ಪುರುಷರು ಮತ್ತು ಶೇ. 12 ಮಹಿಳೆಯರು ಎಚ್ಪಿವಿ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಇನರ್ವೀಲ್ ಕ್ಲಬ್ ಅಧ್ಯಕ್ಷೆ ವೀಣಾ ಸುರೇಶ್ ಮುಂಚೂಣಿಯಲ್ಲಿದ್ದು, ಉಚಿತ ಲಸಿಕೆ ಒದಗಿಸಲು ಸ್ನೇಹಿತರು ಹಾಗೂ ಬಂಧುಗಳಿಂದ ನಿಧಿ ಸಂಗ್ರಹಿಸಿದರು. ಲಸಿಕೆಗಳ ಉಳಿದ ವೆಚ್ಚವನ್ನು ರೋಟರಿ ಕ್ಲಬ್ ಆಫ್ ಮದ್ರಾಸ್ ನಿಧಿ ಸಂಗ್ರಹದ ಮೂಲಕ ಭರಿಸುತ್ತಿದೆ. ಸರ್ಜೀ ಆಸ್ಪತ್ರೆಗಳ ಗುಂಪು ಮತ್ತು ಡಾ. ಧನಂಜಯ್ ಸರ್ಜೀ ಅವರು ಲಸಿಕೆಗಳನ್ನು ನೀಡಲು ವೈದ್ಯರನ್ನು ಮತ್ತು ಸಿಬ್ಬಂದಿ ಒದಗಿಸುತ್ತಿದ್ದಾರೆ. ಶಿಬಿರದಲ್ಲಿ 500 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಲಸಿಕೆ ಪಡೆದರು.
ಇನ್ನರ್ವ್ಹೀಲ್ ಜಿಲ್ಲಾ ಅಧ್ಯಕ್ಷೆ ಶಬರಿ ಕಡಿದಾಳ್, ಜಿಲ್ಲಾ ಕಾರ್ಯದರ್ಶಿ ಶಿಲ್ಪಾ ಗೋಪಿನಾಥ್, ಜಿಲ್ಲಾ ಖಜಾಂಚಿ ಶ್ವೇತಾ ಅಶಿತ್, ಇನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ವೀಣಾ ಸುರೇಶ್ ಹಾಗೂ ಮಾಜಿ ಅಧ್ಯಕ್ಷೆ ಜಯಂತಿ ವಾಲಿ, ಬಿಂದು ವಿಜಯ ಕುಮಾರ್ ಉಪಸ್ಥಿತರಿದ್ದರು.
ಕ್ಯಾನ್ಸರ್ ಬಗ್ಗೆ ಸಂಶೋಧನಾ ಪ್ರಬಂಧ ಮಂಡಿಸಲು ಶಿವಮೊಗ್ಗದ ಎಸ್.ಬಿ.ಧನರಾಜ್ ಸಿಂಗಾಪುರಕ್ಕೆ ಪ್ರಯಾಣ
ಶಿವಮೊಗ್ಗದ ವಕೀಲರಾದ ಶ್ರೀಯುತ ಕೆ.ಸಿ.ಬಸವರಾಜ್ ಮತ್ತು ಶ್ರೀಮತಿ ವಿನೋದ ರವರ ಪುತ್ರ ದನರಾಜ್ ಎಸ್. ಬಿ. ರವರು ಸ್ವೀಡಜ್ ರ್ ಲ್ಯಾಂಡ್ ನ ಯೂರೋಪಿಯನ್ ಸೋಸೈಟಿ ಫಾರ್ ಮೆಡಿಕಲ್ ಅನ್ಕೊಲಜಿ ರವರು ಈ ವರ್ಷ ಡಿಸೆಂಬರ್ 5 ರಿಂದ 7 ನೆಯ ತಾರೀಕಿನ ವರೆಗೆ ಸಿಂಗಾಪುರ್ ದೇಶದಲ್ಲಿ ಏರ್ಪಡಿಸಿರುವ ಏಷ್ಯಾ ಆದಿವೇಶನಕ್ಕೆ ” ಕ್ಯಾನ್ಸರ್ ಕಾಯಿಲೆ ” ಬಗ್ಗೆ ತಾವು ಕೈಗೊಂಡ ಸಂಶೋಧನೆಯ ಅಂಶಗಳ ಕುರಿತು ವಿಚಾರ ಮಂಡಿಸಲು ತೆರಳಿದ್ದಾರೆ. YHAI ಸದಸ್ಯರಾಗಿರುವ ಅವರು ಈಗಾಗಲೇ ರಾಜ್ಯ – ರಾಷ್ಟ್ರ ಮಟ್ಟದ ಅನೇಕ ಚಾರಣಗಳಲ್ಲಿ ಪಾಲ್ಗೊಂಡಿದ್ದಾರೆ, ಎಂ. ಎಸ್ಸಿ, ಬಿಎಡ್ ಪದವೀದರರಾದ ಧನ್ ರಾಜ್ ರವರು ಪ್ರಸ್ತುತ ಮಣಿಪಾಲ್ ಅಕಾಡೆಮಿ ಆಫ಼್ ಹೈಯೆರ್ ಎಜುಕೇಶನ್ ನಲ್ಲಿ ಓರಲ್ ಕ್ಯಾನ್ಸರ್ ಕುರಿತು ಸಂಶೋದನೆಯಲ್ಲಿ ತೊಡಗಿದ್ದಾರೆ ( PhD) . ವಿವಿಧ ದೇಶಗಳ ಹೆಸರಾಂತ ವಿಜ್ಞಾನಿಗಳು ಪಾಲ್ಗೊಳ್ಳಲಿರುವ ಏಷ್ಯಾ ಮಟ್ಟದ ಅಂತರ್ ರಾಷ್ಟ್ರೀಯ ಸಮಾವೇಶಕ್ಕೆ ಶಿವಮೊಗ್ಗದ ಪ್ರತಿಬಾವಂತ ಯುವಕ ಶ್ರೀ ಧನ್ ರಾಜ್ ಎಸ್. ಬಿ. ರವರಿಗೆ ಆಮಂತ್ರಣ ದೊರಕಿರುವುದಕ್ಕೆ ಅವರಿಗೆ ಶುಭಾಷಯಗಳು.
ಗುಡ್ಡೇಕಲ್ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ
ಶಿವಮೊಗ್ಗದ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಮತ್ತು ಶ್ರೀ ಕಾರ್ತಿಕ ದಿಪೋತ್ಸವ ಸೇವಾ ಸಮಿತಿ ವತಿಯಿಂದ ಗುಡ್ಡೇಕಲ್ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ದ ಅದ್ದೂರಿ ಮೆರವಣಿಗೆಯ ಈ ಸಂದರ್ಭದಲ್ಲಿ ಶಿವಮೊಗ್ಗದ ಮಲೆನಾಡು ತಮಿಳ್ ಯುವ ಸಂಗಮ್ ಇವರಿಂದ ದೀಪವನ್ನು ತೆಗೆದುಕೊಂಡು ಬಂದ ಭಕ್ತಾಯಗಳಿಗೆ ಪುಷ್ಪವನ್ನು ಹಾಕಿ ಸ್ವಾಗತಿಸಿ ಹಾಗೂ ಶ್ರೀ ಬಾಲಸುಬ್ರಮಣ್ಯಯ ಸ್ವಾಮಿಯ ಮೂರ್ತಿಗೆ ಹೂವಿನ ಬೃಹತ್ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸಂದೀಪ್ ಸುಂದರ್ ರಾಜ್, ಉಪಾಧ್ಯಕ್ಷರಾದ ಶಶಿಕುಮಾರ್ ಆರ್., ಪ್ರಧಾನ ಕಾರ್ಯದರ್ಶಿ, ರಮೇಶ್ ಸಿ., ಖಜಾಂಚಿ ಶಬರೀಶ್ ಎಸ್. ಸಂಘಟನಾ ಕಾರ್ಯದರ್ಶಿ ಕುಮಾರೇಶ್, ಸಹ ಕಾರ್ಯದರ್ಶಿಗಳು, ಸಂಘದ ಪದಾಧಿಕಾರಿಗಳಾದ ಸಂತೋಷ್, ಶಿವರಾಜ್, ರಮೇಶ್, ರಾಜೇಶ್(ಕುಟ್ಟಿ) ಕಾರ್ತಿಕ್ ಎಂ., ಶ್ರೀಧರ್, ಭರತ್, ಕಾರ್ತಿಕ್ ವಿ. ವಿನಯ ಎಸ್., ಪ್ರಶಾಂತ್ ಆರ್, ಯುವರಾಜ್, ಫೆಕ್ಸ್ ರಘು, ಶಿವುಕುಮಾರ್, ನಟರಾಜ್, ಗೋಪಿ, ಶಬರಿ, ಮತ್ತಿತರರು ಉಪಸ್ಥಿತರಿದ್ದರು.
