Thursday, May 14, 2026
Thursday, May 14, 2026
Home Blog Page 69

Shikaripura Horticulture Department ಉಚಿತ ತರಕಾರಿ ಬೀಜಗಳನ್ನು ಪಡೆಯಲು ಅರ್ಜಿ ಆಹ್ವಾನ

0

Shikaripura Horticulture Department ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಹೈಬ್ರಿಡ್ ಹಾಗೂ ಸುಧಾರಿತ ತಳಿಯ ತರಕಾರಿ ಬೀಜಗಳನ್ನು ಉಚಿತವಾಗಿ ವಿತರಣೆ ಮಾಡುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ
ಆಸಕ್ತ ಎಲ್ಲಾ ವರ್ಗದ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಹಾಗೂ ಪ. ಜಾತಿ ಮತ್ತು ಪ. ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣದ ಪ್ರತಿಗಳನ್ನು ಕಛೇರಿಗೆ ಸಲ್ಲಿಸುವುದು. ಮೊದಲು ಬಂದವರಿಗೆ ಮೊದಲ ಆಧ್ಯತೆ ಎಂದು ಶಿಕಾರಿಪುರ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
Shikaripura Horticulture Department ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ತೋಟಗಾರಿಕೆ ಇಲಾಖೆಯನ್ನು ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು.

Information and Public Relations Department ಭೀಮ ಗಾಯನದ ಮೂಲಕ ಸಮಾಜವನ್ನು ಎಚ್ಚರಿಸುವ ಕೆಲಸ ಪರಿಣಾಮಕಾರಿ : ಚಂದ್ರಭೂಪಾಲ

0

Information and Public Relations Department ಅಂಬೇಡ್ಕರ್, ಬುದ್ದ ಮತ್ತು ಬಸವಣ್ಣನಂತಹವರು ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ಹೋರಾಟ ನಡೆಸಿದ್ದನ್ನು ‘ಭೀಮ ಗಾಯನ’ದ ಮೂಲಕ ಜಾಗೃತಿ ಮೂಡಿಸುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ‘ಭೀಮ ಗಾಯನ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತಿಹಾಸದುದ್ದಕ್ಕೂ ಗಾಯನದ ಮೂಲಕ ಸಮಾಜವನ್ನು ಎಚ್ಚರಿಸುವ ಕೆಲಸ ಮಾಡುತ್ತಾ ಬರಲಾಗಿದ್ದು ಹೋರಾಟದ ಅಂಶಗಳನ್ನು ಸ್ವರಗಳಲ್ಲಿ ಜೀವಂತಗೊಳಿಸಿ, ಜಾಗೃತಿ ಮತ್ತು ಸಮಾನತೆಯನ್ನು ಸಾರುವ ಇಂತಹ ಕಾರ್ಯಕ್ರಮಗಳು ಇನ್ನಷ್ಟು ನಡೆಯುತ್ತಿರುಬೇಕು.
ಸಂವಿಧಾನವೆAಬ ಶ್ರೇಷ್ಟ ಗ್ರಂಥವನ್ನು ನಾವೆಲ್ಲರೂ ಓದಿ, ಇದರ ಅಂಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಅಭಿವೃದ್ದಿ ದಿಸೆಯಲ್ಲಿ ನಡೆಯಲು ಸಾಧ್ಯ. ಈ ಶ್ರೇಷ್ಟ ಗ್ರಂಥ ನಮ್ಮ ಬದುಕನ್ನು ರೂಪಿಸುವ ಸಾಧನವಾಗಿದ್ದು, ಸಮಾನತೆಯೇ ಇದರ ಮೂಲ ತತ್ವವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್‌ರವರು ಸಾಮಾಜಿಕ ನ್ಯಾಯದ ಎಲ್ಲ ಅಂಶಗಳನ್ನು ಸಂವಿಧಾನದಲ್ಲಿ ನೀಡಿ ಪ್ರಜಾಪ್ರಭುತ್ವದ ರೂಪ ನೀಡಿದ್ದಾರೆ ಎಂದರು.
ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ, ಡಾ.ಬಿ,.ಆರ್.ಅಂಬೇಡ್ಕರ್‌ರವರು ಇಡೀ ದೇಶದ ನಾಯಕ. ನಮ್ಮ ಸಮಾಜಕ್ಕೆ ಅಗತ್ಯವಾದ ಚೌಕಟ್ಟನ್ನು ಹಾಕಿಕೊಟ್ಟ ಮಹಾಧುರೀಣರು. ಇವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು. ಹಾಗೂ ದಲಿತ ಹೋರಾಟ, ದಲಿತ ನಾಯಕ ಎಂಬುದಕ್ಕೆ ಸೀಮಿತವಾಗದೆ, ನಾಗರೀಕ ಹೋರಾಟ, ನಾಗರೀಕ ನಾಯಕ ಎಂಬAತಾಗಬೇಕು.
ಇಂದಿನ ಭೀಮ ಗಾಯನದ ಉದ್ದೇಶ ಮನೋರಂಜನೆಯಲ್ಲ. ಬದಲಾಗಿ ಸಂಘರ್ಷದ ಹಾದಿಯಲ್ಲಿ ನಡೆದುಬಂದ ಹೋರಾಟದ ಹಾದಿಯನ್ನು ಗಾಯನದ ಜಾಗೃತಿ ಮೂಡಿಸುವ ಕಾರ್ಯಕ್ರಮ. ಅಂಬೇಡ್ಕರ್‌ರವರ ಅಗತ್ಯತೆ ನಮಗೆಲ್ಲಾ ಇದೆ. ಅವರು ಕಾರ್ಮಿಕ ಕಾನೂನು, ಆರ್ ಬಿ ಐ, ಇತರೆ ಕಾನೂನುಗಳು ಸೇರಿದಂತೆ ಸಾಮಾಜಿಕ ಸಾಮರಸ್ಯ ಮತ್ತು ಸರ್ವತೋಮುಖ ಅಭಿವೃದ್ದಿಯನ್ನು ನೀಡಿದ್ದಾರೆ.
Information and Public Relations Department ನಮ್ಮ ದೇಶದಲ್ಲಿ ಇತರೆ ದೇಶಗಳಂತೆ ಅರಾಜಕತೆ ಮೂಡಲು ಸಾಧ್ಯವಿಲ್ಲ. ಇದಕ್ಕೆ ಕಾರಣ ನಮ್ಮ ಸಂವಿಧಾನ. ಇದರಲ್ಲಿ ಎಲ್ಲ ಅಂಗಗಳಿಗೆ ಸ್ವಾತಂತ್ರö್ಯ ನೀಡಿ, ಉತ್ತಮ ತಂತ್ರ ನಿರ್ವಹಣೆಗೆ ಅವಕಾಶ ನೀಡಲಾಗಿದೆ. ಇದನ್ನು ನಾವು ಅಳವಡಿಸಿಕೊಂಡು ಪ್ರಗತಿ ಮತ್ತು ಸಾಮರಸ್ಯವನ್ನು ಸಾಧಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು. ಭೀಮ ಗಾಯನ ಕಾರ್ಯಕ್ರಮವನ್ನು ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ‘ಅಮ್ಮ ವಸುಂಧರೆ ಕಲಾತಂಡ’ದ ಕಲಾವಿದರು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಮಧು ಹೆಚ್ ಎಂ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮೋಹನ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮಾರುತಿ ಆರ್. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಿ.ಮಲ್ಲೇಶಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶೋಭಾ, ವಿವಿಧ ಸಮಾಜದ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಸದಸ್ಯರು ಹಾಜರಿದ್ದರು.

ಪತ್ರಿಕಾ ವಿತರಕ ಕಿರಣ್ ನಿಧನ

0

ಶಿವಮೊಗ್ಗ ನಗರದ ಹೊಸಮನೆ ಬಡಾವಣೆ ನಿವಾಸಿ ಪತ್ರಿಕಾ ವಿತರಕ ಕಿರಣ್(೩೫) ಮಾ.೦೫ರ ಗುರುವಾರ ಬೆಳಿಗ್ಗೆ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾಗಿದ್ದಾರೆ.
ಇವರು ಎರಡು ಹೆಣ್ನು ಮಕ್ಕಳು, ಪತ್ನಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ರಾಜ್ಯಾಧ್ಯಕ್ಷ ಶಂಭುಲಿಂಗ ಕೆ., ಜಿಲ್ಲಾಧ್ಯಕ್ಷ ಎನ್.ಮಾಲತೇಶ್ ಹಾಗೂ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

ಐ ಟಿ ಬಿಯಾoಡ್ ಬೆಂಗಳೂರು ಇನಿಶಿಯೇಟಿವ್‌ ಮತ್ತು ಕೈಗಾರಿಕಾ ಕ್ಲಸ್ಟರ್ ಸ್ಥಾಪನೆ ಸ್ವಾಗತ

0

ರಾಜ್ಯ ಸರ್ಕಾರ ಬಜೆಟ್ ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿ ಪ್ರಮುಖ ಅಂಶಗಳನ್ನು ಘೋಷಿಸಿರುವುದು ಸ್ವಾಗತಾರ್ಹ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ತಿಳಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ತಯಾರಿಕೆ ಮತ್ತು ಜೋಡಣೆ ಚಟುವಟಿಕೆಗಳನ್ನು ಪಿಪಿಪಿ ಮಾದರಿಯಲ್ಲಿ ಕೈಗೊಳ್ಳುವುದು. ಭದ್ರಾವತಿ ಇಎಸ್ಐ ಆಸ್ಪತ್ರೆ ಮೇಲ್ದರ್ಜೆಗೇರಿಸುವುದು. 2ನೇ ಮತ್ತು 3ನೇ ಶ್ರೇಣಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಕಂಪನಿಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರದ ಬೆಂಗಳೂರು ಬಿಯಾಂಡ್ ಉಪಕ್ರಮಕ್ಕೆ ಆದ್ಯತೆ ನೀಡಿರುವುದು.
ರಾಜ್ಯಾದ್ಯಂತ ಎಂಎಸ್ಎಂಇಗಳಿಗೆ ಸಹಾಯ ಮಾಡಲು 15 ಕೋಟಿ ರೂ. ವೆಚ್ಚದಲ್ಲಿ 10 ಕೈಗಾರಿಕಾ ಕ್ಲಸ್ಟರ್ ಗಳನ್ನು ಸ್ಥಾಪಿಸುವುದು. ಪ್ರವಾಸೋದ್ಯಮ ಮತ್ತು ನಾವೀನ್ಯತಗೆ ಒತ್ತು ನೀಡಿರುವುದು. ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಪ್ರಸ್ತಾವನೆ, ಬೆಂಗಳೂರಿನ ದಟ್ಟಣೆ ಕಡಿಮೆ ಮಾಡುವ ಗುರಿಯೊಂದಿಗೆ ಮೈಸೂರನ್ನು ರಾಜ್ಯದ ಎರಡನೇ ಐಟಿ ನಗರವನ್ನಾಗಿ ಅಭಿವೃದ್ಧಿಪಡಿಸಲು ನಿರ್ಧಾರ ಕೈಗೊಂಡಿರುವುದು.
ತಾಂತ್ರಿಕ ತರಬೇತಿ ಮೂಲಸೌಕರ್ಯವನ್ನು ಬಲಪಡಿಸಲು 60 ಕೋಟಿ ರೂ.ನಲ್ಲಿ 10 ಹೊಸ GTTC (ಸರ್ಕಾರಿ ಪರಿಕರ ಕೊಠಡಿ ಮತ್ತು ತರಬೇತಿ ಕೇಂದ್ರ) ಸೌಲಭ್ಯ ಸ್ಥಾಪನೆ ಮಾಡುವುದು. ಕೃಷಿಯಲ್ಲಿ 100 ಕೋಟಿ ರೂ. ಹೂಡಿಕೆಯೊಂದಿಗೆ ಮಿಲ್ಲೆಟ್ ಹಬ್ ಆರಂಭ, ರಾಗಿ ಉತ್ಪನ್ನಗಳನ್ನು ಉತ್ತೇಜಿಸಲು ರಾಗಿ ಹಬ್ ಸ್ಥಾಪನೆ ಮಾಡಲು ಕ್ರಮ ವಹಿಸುವುದು ಉತ್ತಮ ನಿರ್ಧಾರ ಎಂದು ತಿಳಿಸಿದ್ದಾರೆ.

Bharat Fritz Werner Company ಭಾರತೀಯ ಕಂಪನಿಗಳು ಜಾಗತಿಕ ಗುಣಮಟ್ಟದ ಕಂಪನಿಗಳಾಗಲಿ : ಎಸ್.ರುದ್ರೇಗೌಡ

0

Bharath Fritz Werner Company ಭಾರತದ ಉತ್ಪಾದನಾ ಕಂಪನಿಗಳು ಜಾಗತಿಕ ಗುಣಮಟ್ಟದ ಉತ್ಪಾದನಾ ಕಂಪನಿಗಳಾಗಿ ರೂಪುಗೊಳ್ಳಬೇಕು ಎಂದು ಕೈಗಾರಿಕೋದ್ಯಮಿ ಎಸ್.ರುದ್ರೇಗೌಡ ಹೇಳಿದರು.

ಭಾರತ್ ಫ್ರಿಟ್ಜ್ ವರ್ನರ್ ಕಂಪನಿಯು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಶಿವಮೊಗ್ಗ ಗ್ರಾಹಕರ ಸಭೆ, ಗ್ರಾಹಕರು ಮತ್ತು ಸೇವಾ ಪೂರೈಕೆದಾರರ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತದ ಉತ್ಪಾದನಾ ಕಂಪನಿಗಳು ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ಸೌಲಭ್ಯ ಬಳಸಿಕೊಂಡು ಜಾಗತಿಕ ಕಂಪನಿಯೊಂದಿಗೆ ಸ್ಪರ್ಧಿಸಲು ಜಾಗತಿಕ ಗುಣಮಟ್ಟದ ಉತ್ಪಾದನಾ ಕಂಪನಿಯಾಗಬೇಕು. ನಮ್ಮ ಕೆಲಸದಲ್ಲಿನ ನಿಖರತೆ ಮತ್ತು ನಾವೀನ್ಯತೆಗೆ ಬದ್ಧತೆಯೊಂದಿಗೆ ನಾವು ಪ್ರಮುಖ ಜಾಗತಿಕ ಉತ್ಪಾದನಾ ಪೂರೈಕೆದಾರರಾಗಲು ಮೂಲಸೌಕರ್ಯವನ್ನು ನಿರಂತರವಾಗಿ ಹೆಚ್ಚಿಸುತ್ತಿದ್ದೇವೆ ಎಂದು ತಿಳಿಸಿದರು.

ಭಾರತ್ ಫ್ರಿಟ್ಜ್ ವರ್ನರ್ ವ್ಯವಸ್ಥಾಪಕ ನಿರ್ದೇಶಕ ರವಿ ರಾಘವನ್ ಮಾತನಾಡಿ, ಭಾರತ್ ಫ್ರಿಟ್ಜ್ ವರ್ನರ್ ಭಾರತದಲ್ಲಿ ಪ್ರಧಾನ ಕಚೇರಿ ಹೊಂದಿರುವ ಜಾಗತಿಕ ಮುಂದುವರಿದ ಉತ್ಪಾದನಾ ಕಂಪನಿಯಾಗಿದೆ. ಯಂತ್ರೋಪಕರಣಗಳು, ಉತ್ಪಾದನಾ ಪರಿಹಾರಗಳು ಮತ್ತು ತಾಂತ್ರಿಕ ನಾವೀನ್ಯತೆಗಳಲ್ಲಿ ಹೆಸರಾಗಿದೆ. ಆರು ದಶಕಗಳಿಗೂ ಹೆಚ್ಚು ಕಾಲ ಅತ್ಯುನ್ನತ ಗುಣಮಟ್ಟದ ಯಂತ್ರಗಳನ್ನು ಉತ್ಪಾದಿಸುವಲ್ಲಿ ತೊಡಗಿಸಿಕೊಂಡಿದ್ದೇವೆ ಎಂದು ಹೇಳಿದರು.

ಏರೋಸ್ಪೇಸ್, ಆಟೋಮೋಟಿವ್, ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸೇವೆ ಸಲ್ಲಿಸುತ್ತಿದ್ದೇವೆ. ನಿರ್ಣಾಯಕ ಉದ್ಯಮ ಸವಾಲುಗಳನ್ನು ನಾವೀನ್ಯತೆ ಅವಕಾಶಗಳಾಗಿ ಪರಿವರ್ತಿಸುತ್ತೇವೆ. ಹೆಚ್ಚುವರಿಯಾಗಿ ನಮ್ಮ ಗ್ರಾಹಕ-ಕೇಂದ್ರಿತ ವಿಧಾನವು ಸೂಕ್ತವಾದ ಪರಿಹಾರಗಳಿಗೆ ಆದ್ಯತೆ ನೀಡುತ್ತದೆ ಎಂದು ತಿಳಿಸಿದರು.

Bharath Fritz Werner Company ಭಾರತ್ ಫ್ರಿಟ್ಜ್ ವರ್ನರ್ ಸಂಸ್ಥೆಯ ಸತೀಶ್ ಮೇಸ್ತಾ, ನಿಖಿಲ್ ನಾಗರಾಜ್, ಪ್ರೇಮ್‌ಕುಮಾರ್, ಬಿ.ಮನು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ಪ್ರಮುಖರಾದ ಮಹೇಂದ್ರಪ್ಪ, ಚಂದ್ರಶೇಖರ್, ಡಿ.ಜಿ.ಬೆನಕಪ್ಪ, ಶಶಿಧರ್, ದಿವೇಕರ್, ಹರ್ಷ ಇತರರಿದ್ದರು.

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

0

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ ಹಸೂಡಿ ವೆಂಕಟಶಾಸ್ತ್ರಿ ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕನ್ನಡತಿ ಧಾರಾವಾಹಿ ಖ್ಯಾತಿಯ ರಂಜನಿ ರಾಘವನ್, ನಟಿ, ಬರಹಗಾರ್ತಿ, ಸೃಜನಾತ್ಮಕ ನಿರ್ದೇಶಕಿ, ಬೆಂಗಳೂರು ಇವರು ‘ಆಧುನಿಕ ಮಹಿಳೆಯ ಅಭಿವ್ಯಕ್ತಿ ಆಯಾಮಗಳು’ ವಿಷಯದ ಕುರಿತು ಮಾತನಾಡಲಿದ್ದಾರೆ.

Karnataka Sanga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಪ್ರಚುರಪಡಿಸಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

0

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಂತಿವೆ:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 144 BS-VI ನಗರ ಸಾರಿಗೆ ಡೀಸೆಲ್ ಬಸ್ಸುಗಳನ್ನು ರೂ.62.00 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ವ್ಯಾಪ್ತಿಯ ವಿರಿಜಾ, ದೇವರಾಯ, ಆರ್.ಬಿ.ಎಲ್.ಎಲ್ ಮತ್ತು ಬಂಗಾರದೊಡ್ಡಿ ನಾಲೆಗಳ ವಿತರಣಾ ನಾಲೆಗಳ ಅಭಿವೃದ್ಧಿ ಕಾಮಗಾರಿಗಳನ್ನು ರೂ.60.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

• ಬೀದರ್ ಜಿಲ್ಲೆಯಲ್ಲಿ ಮಾಂಜ್ರಾ ನದಿಗೆ ಅಡ್ಡಲಾಗಿ ಭಾಲ್ಕಿ ತಾಲ್ಲೂಕಿನಲ್ಲಿ ನಿರ್ಮಿಸಿರುವ ಜೀರಗಿಯಾಳ್, ಮಾಣಿಕೇಶ್ವರ ಮತ್ತು ಚಂದಾಪುರ ಹಾಗೂ ಔರಾದ್ ತಾಲ್ಲೂಕಿನಲ್ಲಿ ನಿರ್ಮಿಸಿರುವ ಹಾಲ್ಹಳ್ಳಿ ಒಟ್ಟು ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್ಗಳ ಪುನಶ್ಚೇತನ ಕಾಮಗಾರಿಗಳನ್ನು ರೂ.151.70 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಈಗಾಗಲೇ ಗ್ರೇಟರ್ ಬೆಂಗಳೂರು ಕಾಯ್ದೆ, 2025ರಲ್ಲಿ ಕಲ್ಪಿಸಿರುವ ಅವಕಾಶಗಳಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಜಾಹೀರಾತುಗಳಿಗೆ ಶುಲ್ಕಗಳನ್ನು ಪಾವತಿಸಿಕೊಂಡು ಅನುಮತಿ ನೀಡಲು Karnataka Municipalities Act, 1964 and The Karnataka Municipal Corporations Act, ತಿದ್ದುಪಡಿ ತರಲು The Karnataka Municipalities and Certain Other Law (Amendment) Bill, 2026 ಗೆ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.

CM Siddharamaiah ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಖಾಯಂ ಆಗಿ ಅಥವಾ ಗುತ್ತಿಗೆ ಆಧಾರದ ಮೇಲೆ ಅಥವಾ ತಾತ್ಕಾಲಿಕ ಆಧಾರದ ಮೇಲೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ವೈದ್ಯರು ಮತ್ತು ನೌಕರರುಗಳ ಸೇವೆಯನ್ನು ಅತ್ಯವಶ್ಯಕ ಸೇವೆಯೆಂದು ಪರಿಗಣಿಸುವ ವಿಷಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರು ಸಭೆ ನಡೆಸಿ ಚರ್ಚಿಸಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲು ಸಚಿವ ಸಂಪುಟ ತೀರ್ಮಾನಿಸಿತು. ರಾಜ್ಯ ಅಪರಾಧ ದಾಖಲಾತಿ ವಿಭಾಗ / ಪೊಲೀಸ್ ಗಣಕ ವಿಭಾಗಕ್ಕೆ ರಾಜ್ಯದಲ್ಲಿ ಪರಸ್ಪರ ಕಾರ್ಯನಿರ್ವಹಹಿಸಬಹುದಾದ ಅಪರಾಧ ನ್ಯಾಯ ವ್ಯವಸ್ಥೆ ಐ.ಸಿ.ಜೆ.ಎಸ್ (Inter-operable Criminal Justice System) ಹಾಗೂ ಐ.ಟಿ ಸೇವೆಗಳ ಅನುಷ್ಠಾನಕ್ಕೆ ವಿವಿಧ ಹಾರ್ಡ್ವೇರ್ ಮತ್ತು ಸಾಫ್ಟ್ವೇರ್ಗಳನ್ನು ರೂ.227.58 ಕೋಟಿಗಳ ವೆಚ್ಚದಲ್ಲಿ ಪೊಲೀಸ್ ಆಧುನೀಕರಣ ಯೋಜನೆಯಡಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

ನೇರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಅಳವಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ವಿಷಯವಾಗಿ ಇಂದಿನ ಸಭೆಯಲ್ಲಿ ಚರ್ಚೆ ಮುಂದುವರೆದಿದ್ದು, ಸ್ವಲ್ಪ ಕಾಲ ವಿವರವಾಗಿ ಚರ್ಚೆ ನಡೆಸಲಾಗಿದೆ. ಆದರೂ ಇನ್ನಷ್ಟು ಸಚಿವರುಗಳು ಮಾತನಾಡಲು ಬಾಕಿ ಇರುವುದರಿಂದ ಆದರೆ ಪೂರ್ಣವಾದ ಚರ್ಚೆ ಆಗಿಲ್ಲ, ಈ ವಿಷಯದ ಕುರಿತಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮುಂದುವರಿದ ತೀವ್ರ ಚರ್ಚೆಗಾಗಿ ಸಭೆ ಸೇರಲು ಸನ್ಮಾನ್ಯ ಮುಖ್ಯಮಂತ್ರಿಯವರಿಗೆ ಸಮಯವನ್ನು ನಿಗದಿಪಡಿಸಲು ಸಚಿವ ಸಂಪುಟ ತೀರ್ಮಾನಿಸಿತು.

ಬೇಕರಿ ಉತ್ಪನ್ನಗಳ ತಯಾರಿಕೆ-ಕೌಶಲ್ಯಾಭಿವೃದ್ಧಿ ತರಬೇತಿ

0

ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಮಾರ್ಚ್ 12 ರಿಂದ ಏಪ್ರಿಲ್ 10 ರವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ದಿ ತರಬೇತಿಯನ್ನು ಆಯೋಜಿಸಲಾಗಿದೆ.
ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ್ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಪ್ , ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದ್ದು, ಆಸಕ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಮಾ.11 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕು. ತರಬೇತಿ ಸಮಯದಲ್ಲಿ ಊಟ ಮತ್ತು ವಸತಿ ಸೌಲಭ್ಯ ಇರುವುದಿಲ್ಲ. ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. ಮೊ.ಸಂ. 9449187763 ಮತ್ತು ಜಯಶಂಕರ 9686555897 ಇವರುಗಳನ್ನು ಸಂಪರ್ಕಿಸಬಹುದೆಂದು ತಿಳಿಸಿದೆ.

ಅಪ್ಪಟ ಚರ್ಮದ ಲಿಡ್ಕರ್ ಉತ್ಪನ್ನಗಳಿಗೆ ಶೇ.20 ರಿಯಾಯ್ತಿ

0

ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಡಿಯಲ್ಲಿ ಬರುವ ನಗರದ ನೆಹರು ರಸ್ತೆಯ ಬಸವ ಸದನದಲ್ಲಿರುವ ಲಿಡ್ಕರ್ ಮಾರಾಟ ಮಳಿಗೆಯಲ್ಲಿ ಅಪ್ಪಟ ಚರ್ಮದ ವಸ್ತುಗಳ ಮೇಲೆ ಯುಗಾದಿ ಹಬ್ಬ ಮತ್ತು ವರ್ಷಾಂತ್ಯದ ತೀರುವಳಿ ಮಾರಾಟದ ಪ್ರಯುಕ್ತ ಎಲ್ಲಾ ದಾಸ್ತಾನುಗಳ ಮೇಲೆ ಶೇ.20 ರಿಯಾಯಿತಿಯನ್ನು ನೀಡಲಾಗುತ್ತಿದೆ.
ಮಾ.6 ರಿಂದ 25 ರವರೆಗೆ ಈ ಅವಕಾಶವಿದ್ದು ಸಾರ್ವಜನಿಕರು ಇದರ ಸದುಪಯೋಗಪಡೆಯಬೇಕೆಂದು ಲಿಡ್ಕರ್ ಮಾರಾಟ ಮಳಿಗೆಯ ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.

Klive Special Article ನಿಮ್ಮೂರು ನಮ್ಮ ಮಾಹಿತಿ ಸ್ಥಳ: ಸುಣ್ಣದಹಳ್ಳಿ ಲೇ: ದಿಲೀಪ್ ನಾಡಿಗ್

0

Klive Special Article ಸುವರ್ಣ ಹಳ್ಳಿ ಕಾಲಕ್ರಮೇಣ ಸುಣ್ಣದ ಹಳ್ಳಿಯಾಯಿತು. ಇಲ್ಲಿದ್ದಾನೆ ಅಭಯ ವೀರಾಂಜನೇಯ.

ಸುಂದರಮೂರುತಿ ಮುಖ್ಯಪ್ರಾಣ ಬಂದ ನಮ್ಮ ಮನೆಗೆ.

ಪ್ರಥಮೋ‌ಹನುಮನ್ನಾಮ, ದ್ವಿತಿಯೋ ಭೀಮೇವಚ, ಪೂರ್ಣಪ್ರಜ್ಞ ತೃತೀಯಸ್ತು ಭಗವತ್ಕಾರ್ಯ ಸಾಧಕಃ.

ಭದ್ರಾ ನದಿಯ ದಡದ ಮೇಲೆ ನಿಂತಿದ್ದಾನೆ ವ್ಯಾಸರಾಜರಿಂದ‌ ಪ್ರತಿಷ್ಠಿತನಾಗಿರುವ ವೀರಾಂಜನೇಯ.‌ ವೆಂಕಿಪುರ ಪುರಾತನ ಹೆಸರು .
ಐತಿಹಾಸಿಕವಾಗಿ ಈ ಸ್ಥಳವನ್ನು ವೆಂಕಿಪುರ (Venkipura) ಎಂದೂ ಕರೆಯಲಾಗುತ್ತಿತ್ತು. “ವೆಂಕಿ” ಎಂಬುದು ಸಂಸ್ಕೃತದಲ್ಲಿ “ಮೂಲೆ/ತಿರುಗು” ಎಂಬ ಅರ್ಥ ನೀಡುತ್ತದೆ. ಈ ಹೆಸರು ಬಂದಿರುವುದಕ್ಕೆ ಕಾರಣ, ಇಲ್ಲಿ ಭದ್ರಾ ನದಿ ಮೊದಲು ಪಶ್ಚಿಮಕ್ಕೆ 90° ತಿರುಗಿ, ನಂತರ ಮತ್ತೆ ಪೂರ್ವದ ಕಡೆಗೆ ಹರಿಯುತ್ತದೆ.
ಈ ಪ್ರದೇಶವನ್ನು ಹೊಯ್ಸಳ ರಾಜರು ಆಳಿದರು. ಈ ನಗರವನ್ನು ಪ್ರಾಚೀನ ಕಾಲದಿಂದ ಹಳದಮ್ಮ ದೇವಿ (Haladammadevi) ಮತ್ತು ಅಂತರಗಟ್ಟಮ್ಮ ದೇವಿ (Antaragattammadevi) ಎಂಬ ದೇವತೆಗಳು ಕಾಪಾಡುತ್ತಿವೆ ಎಂಬ ಸ್ಥಳೀಯ ನಂಬಿಕೆ ಇದೆ. ಈ ದೇವಾಲಯಗಳು ಇಂದಿಗೂ ನಗರದಲ್ಲಿ ಇವೆ.
Klive Special Article ಕ್ರಿ.ಶ. 1413ರಲ್ಲಿ, ಹೊಯ್ಸಳರ ಢಣಾಯಕನಾದ ಎರೇಲಕ್ಕ ನಾಯಕ (Yerelakka Nayaka) ಎಂಬ ನಾಯಕನು ದುಮ್ಮ (Dumma) ಮತ್ತು ಬಾಣೂರು (Banuru) ಎಂಬ ಎರಡು ಪಟ್ಟಣಗಳನ್ನು ಆಡಳಿತ ಮಾಡುತ್ತಿದ್ದನು. ನಂತರ ಅವನು ಅರಣ್ಯವನ್ನು ತೆರವುಗೊಳಿಸಿ ಇನ್ನೂ ಎರಡು ಹೊಸ ಪಟ್ಟಣಗಳನ್ನು ನಿರ್ಮಿಸಿ ಅವುಗಳಿಗೆ ನರಸಿಂಹಪುರ (Narasimha Pura) ಮತ್ತು ಲಕ್ಷ್ಮೀಪುರ (Lakshmipura) ಎಂಬ ಹೆಸರುಗಳನ್ನು ಇಟ್ಟನು.
ನಂತರ ಈ ಎರಡು ಪಟ್ಟಣಗಳು ಸೇರಿ ಬೆಂಕಿಪುರ / ವೆಂಕಿಪುರ ಎಂದು ಪ್ರಸಿದ್ಧಿಯಾದವು. ಕಾಲಕ್ರಮೇಣ ಭದ್ರಾ ನದಿಯ ತೀರದಲ್ಲಿ ಇರುವುದರಿಂದ ಈ ಪಟ್ಟಣಕ್ಕೆ ಭದ್ರಾವತಿ ಎಂಬ ಹೆಸರು ಬಂದಿತು.
ಇಂತಹ ಪುಣ್ಯಸ್ಥಳದಲ್ಲಿ ವ್ಯಾಸರಾಜರಿಂದ ಪ್ರತಿಷ್ಠಾಪಿಸಲಾದ ವೀರಾಂಜನೇಯ ಆಭಯಹಸ್ತನಾಗಿ, ಮೇಲೆ ಶಂಖ, ಚಕ್ರ, ಶಿಖೆಯನ್ನು, ಬಾಲದಲ್ಲಿ ಘಂಟೆಯನ್ನು, ಕಾಲಕೆಳಗೆ ಅಕ್ಷಯಕುಮಾರನ ಸಂಹರಿಸಿದ ರೀತಿಯಲ್ಲಿ ನಿಂತು ಪ್ರಾಚೀನ ಕಾಲದಿಂದಲೂ ಭಕ್ತರ ಇಷ್ಟಾರ್ಥ ಸಿದ್ಧಿಯಾಗುವಂತೆ ಹರಸುತ್ತಿದ್ದಾನೆ ಮುದ್ದು ಆಂಜನೇಯ.

ದಿಲೀಪ್ ನಾಡಿಗ್
6361124316
9448148710