Wednesday, August 5, 2026
Wednesday, August 5, 2026
Home Blog Page 69

B. K. Sangameshwara ಭದ್ರಾವತಿ ಹಿರಿಯ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಲಿ. ಜಿಲ್ಲಾ ಗಾಣಿಗ ಸಂಘದ ಆಗ್ರಹ

0

B. K. Sangameshwara ಭದ್ರಾವತಿ ವಿಧಾನಸಭಾ ಕ್ಷೇತ್ರದ ಬಿ. ಕೆ. ಸಂಗಮೇಶ್‌ರವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ಹಾಗೂ ತಾಲೂಕು ಘಟಕಗಳು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ರವರನ್ನು ಆಗ್ರಹಿಸಿದೆ.
ಬಿ. ಕೆ. ಸಂಗಮೇಶ್‌ರವರು ನಾಲ್ಕು ಬಾರಿ ಶಾಸಕರಾಗಿದ್ದಾರೆ. ಕ್ಷೇತ್ರದಲ್ಲಿ ಅಪಾರ ಜನಮನ್ನಣೆಗಳಿಸಿದ್ದಾರೆ. ಪ್ರಮುಖವಾಗಿ ಬಿಜೆಪಿಯನ್ನು ಎದುರಿಸುವ ಸಾಮರ್ಥ್ಯದ ನಾಯಕತ್ವ ಹೊಂದಿದ್ದಾರೆ. ಭದ್ರಾವತಿ ಸೇರಿದಂತೆ ಮಲೆನಾಡಿನಲ್ಲಿ ಅನೇಕ ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನು ಬಗೆಹರಿಸಬೇಕಾದರೆ ಸಂಗಮೇಶ್‌ರವರ ನಾಯಕತ್ವ ಬೇಕೇ ಬೇಕಾಗಿದೆ. ಆದ್ದರಿಂದ ಮಂತ್ರಿಮಂಡಲದಲ್ಲಿ ಅವರಿಗೆ ಸ್ಥಾನ ನೀಡಲೇಬೇಕು ಎಂದಿರುವ ಸಂಘ, ಡಿ.ಕೆ.ಶಿವಕುಮಾರ್ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಇವರ ಅಧಿಕಾರಾವಧಿ ಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಬಲಿಷ್ಠವಾಗುತ್ತದೆ ಎಂಬ ನಂಬಿಕೆ ನಮಗಿದೆ. ನಿರ್ಲಕ್ಷಿಸಲ್ಪಟ್ಟಿರುವ ಭದ್ರಾವತಿ ಭಾಗಕ್ಕೂ ಆದ್ಯತೆ ಕೊಡುವ ಹಿನ್ನಲೆಯಲ್ಲಿ ಸಂಗಮೇಶ್‌ರವರಿಗೆ, ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಮತ್ತು ರಾಷ್ಟ್ರವರಿಷ್ಠರು, ಸಚಿವ ಸ್ಥಾನವನ್ನು ನೀಡಬೇಕು ಎಂದಿದೆ.
ಕಾಂಗ್ರೆಸ್ ಜಿಲ್ಲೆಯಲ್ಲಿ ಮತ್ತೆ ಭದ್ರಕೋಟೆಯಾಗಬೇಕು. ಇದಕ್ಕಾಗಿ ಸಂಗಮೇಶ್‌ರವರ ನಾಯಕತ್ವ ಬೇಕಾಗಿದೆ. ಪಕ್ಷದ ಹಿತದೃಷ್ಟಿಯಿಂದಲೂ ಅವರು ಸಚಿವರಾಗಬೇಕು. ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರಲಿದೆ. ೨೦೨೮ಕ್ಕೆ ವಿಧಾನಸಭಾ ಚುನಾವಣೆಯೂ ಬರಲಿದೆ. ಈ ಎಲ್ಲಾ ಚುನಾವಣೆಗಳನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿಯನ್ನು ಸಂಗಮೇಶ್ ಹೊಂದಿದ್ದಾರೆ. ಹಾಗಾಗಿ ಅವರನ್ನು ಸಚಿವ ಸಂಪುಟದಲ್ಲಿ ಸೇರ್ಪಡೆಗೊಳಿಸಲೇಬೇಕು.
B. K. Sangameshwara ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡಬೇಕೆಂಬ ಕೂಗು ಹೆಚ್ಚಾಗುತ್ತಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಈ ನಡುವೆ ಕೆಲವು ಸಂಘ-ಸಂಸ್ಥೆಗಳು, ಮುಖಂಡರು ನೇರವಾಗಿ ಪತ್ರಿಕಾಗೋಷ್ಠಿ, ಪತ್ರಿಕಾ ಹೇಳಿಕೆಗಳ ಮೂಲಕ ಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಸಂಗಮೇಶ್ವರ್ ಜಿಲ್ಲೆಯಲ್ಲಿ ೪ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪಕ್ಷದ ಹಿರಿಯ ಶಾಸಕರಾಗಿದ್ದು, ಅಲ್ಲದೆ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದಾರೆ. ವಿಶೇಷವಾಗಿ ಕ್ಷೇತ್ರದಲ್ಲಿ ಸರ್ವ ಜನಾಂಗದ ನಾಯಕರಾಗಿ ಎಲ್ಲರ ಪ್ರೀತಿಗೆ ಪಾತ್ರ ರಾಗಿದ್ದಾರೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಶ್ರಮ ವಹಿಸುತ್ತಿದ್ದಾರೆ. ಅವರಿಗೆ ಮಂತ್ರಿ ಸ್ಥಾನ ಹೊಂದುವ ಹಕ್ಕಿದೆ.
ಹಲವು ಬಾರಿ ಸಚಿವ ಸ್ಥಾನದಿಂದ ವಂಚಿತರಾಗಿರುವ ಅವರು, ಕಳೆದ ಎರಡು ಅವಽಯಿಂದ ಮಂತ್ರಿ ಸ್ಥಾನ ನೀಡುವಂತೆ ಪಕ್ಷದ ವರಿಷ್ಠರಿಗೆ ಒತ್ತಾಯಿಸಿಕೊಂಡು ಬರುತ್ತಿದ್ದಾರೆ. ಆದರೆ, ಮಂತ್ರಿ ಸ್ಥಾನ ನೀಡುವ ಬದಲು ಎರಡು ಬಾರಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಗೊಳಿಸಲಾಗಿದೆ. ಈ ಬಾರಿ ಮಂತ್ರಿಯಾಗುತ್ತಾರೆಂಬ ನಿರೀಕ್ಷೆ ಕ್ಷೇತ್ರದ ಜನರು ಹೊಂದಿದ್ದಾರೆ.
ಈ ಹಿನ್ನಲೆಯಲ್ಲಿ ಈ ಬಾರಿ ಮಂತ್ರಿ ಸ್ಥಾನ ಲಭಿಸಲೇಬೇಕೆಂಬುದು ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ಹಾಗೂ ತಾಲೂಕು ಘಟಕಗಳ ಆಗ್ರಹ.. ಈ ಪತ್ರಿಕಾ. ಗೋಷ್ಠಿಯಲ್ಲಿ. ಸಂಘದ ಅಧ್ಯಕ್ಷರಾದ ಜಿ ವಿಜಯಕುಮಾರ್. ಕಾರ್ಯದರ್ಶಿಗಳಾದ ವಾಗೀಶ್ ಕೋಟಿ ಉಪಾಧ್ಯಕ್ಷರಾದ
ಎನ್ ಜಿ ಲೋಕೇಶಪ್ಪ. ಖಜಾಂಚಿ. ಎಎಸ್ ರವಿ ಪ್ರೊಫೆಸರ್ ಶಿವಯೋಗಿ ನೀಲಗುಂದ. ಕೆ ಪಿ ರವೀಶ್. ಮಂಜಪ್ಪ ವಿ ಸಜ್ಜನ್ ಶೆಟ್ಟರ್. ಹಾಗೂ ಸಂಘದ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು

S.N. Channabasappa ವಿದ್ಯಾವಂತ ಯುವಕ- ಯುವತಿಯರು “ಕಾಯಕ ಸೇತು” ಪೋರ್ಟಲ್ ನ ಸದುಪಯೋಗಪಡಿಸಿಕೊಳ್ಳಿ- ಎಸ್.ಎನ್.ಚನ್ನಬಸಪ್ಪ.

0

S.N. Channabasappa ನಮ್ಮ ಶಿವಮೊಗ್ಗದ ಹೆಣ್ಣುಮಕ್ಕಳ ಆರ್ಥಿಕ ಸಬಲೀಕರಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆ: ‘ಕಾಯಕ ಸೇತು’ ಬೃಹತ್ ಉದ್ಯೋಗ ನೇಮಕಾತಿ ಅಭಿಯಾನಕ್ಕೆ ಚಾಲನೆ!

ನಮ್ಮ ಶಿವಮೊಗ್ಗದ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ಶ್ಲಾಘನೀಯ ಸದುದ್ದೇಶದಿಂದ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ ಅವರು ಪ್ರಾರಂಭಿಸಿರುವ ‘ಕಾಯಕ ಸೇತು’ ಜಾಬ್ ಪೋರ್ಟಲ್ ಹಾಗೂ ಸರ್ಜಿ ಫೌಂಡೇಶನ್ ಜಂಟಿ ಸಹಯೋಗದಲ್ಲಿ ಆಯೋಜಿಸಲಾಗಿರುವ 5 ದಿನಗಳ ಕಾಲ ಡಾ. ಧನಂಜಯ್ ಸರ್ಜಿ ಅವರ ಕಚೇರಿಯಲ್ಲಿ ನಡೆಯಲಿರುವ  ಉದ್ಯೋಗ ಸಂದರ್ಶನ ಪ್ರಕ್ರಿಯೆಗೆ ಇಂದು ಚಾಲನೆ ನೀಡಲಾಯಿತು.

ಬೆಂಗಳೂರಿನ ಪ್ರತಿಷ್ಠಿತ ಬಹುರಾಷ್ಟ್ರೀಯ ಮೊಬೈಲ್ ತಯಾರಿಕಾ ಕಂಪನಿಯಲ್ಲಿ ಖಾಲಿ ಇರುವ 2,000ಕ್ಕೂ ಹೆಚ್ಚು ಹುದ್ದೆಗಳಿಗೆ ಕೇವಲ ಮಹಿಳಾ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ನಮ್ಮ ಶಿವಮೊಗ್ಗ ನಗರ ಹಾಗೂ ಗ್ರಾಮೀಣ ಭಾಗದ ಅರ್ಹ ಯುವತಿಯರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಹೆಣ್ಣುಮಕ್ಕಳು ಆರ್ಥಿಕವಾಗಿ ಸ್ವತಂತ್ರರಾಗಬೇಕು, ಅವರಿಗೆ ಅತ್ಯಂತ ಸುರಕ್ಷಿತ ಹಾಗೂ ಭದ್ರತೆಯ ವಾತಾವರಣ ಸಿಗಬೇಕು ಎನ್ನುವ ಕಳಕಳಿಯಿಂದ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

S.N. Channabasappa ಲೋಕಾರ್ಪಣೆಗೊಂಡ ಕೇವಲ 7 ತಿಂಗಳ ಅಲ್ಪಾವಧಿಯಲ್ಲೇ ನೂರಾರು ಯುವಕ-ಯುವತಿಯರಿಗೆ ಆಸರೆಯಾಗಿರುವ ‘ಕಾಯಕ ಸೇತು’ ಪೋರ್ಟಲ್‌ನ ಈ ಜನಪರ ಪ್ರಯತ್ನ ಅತ್ಯಂತ ಶ್ಲಾಘನೀಯ. ಜಿಲ್ಲೆಯ ಆಸಕ್ತ ಮಹಿಳಾ ಅಭ್ಯರ್ಥಿಗಳು ಈ ಸದವಕಾಶದ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರುತ್ತೇನೆ.

​ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಸುಡಾ ಅಧ್ಯಕ್ಷರಾದ ಶ್ರೀ ನಾಗರಾಜ್, ಪ್ರಮುಖರಾದ ಶ್ರೀ ಜ್ಞಾನೇಶ್ವರ್, ಇನ್ನೋವ್ ಕಂಪನಿಯ ಅಸಿಸ್ಟೆಂಟ್ ಮ್ಯಾನೇಜರ್ ಶ್ರೀ ದಯಾನಂದ್ ಹಾಗೂ  ಪ್ರಮುಖರು ಉಪಸ್ಥಿತರಿದ್ದರು.

Pride Of Karnatak ಫೋಟೋಗ್ರಾಫರ್ ಜಯಸಿಂಹ ಜೋಷಿಗೆ”ಪ್ರೈಡ್ ಆಫ್ ಕರ್ನಾಟಕ ” ಪ್ರಶಸ್ತಿ.

0

Pride Of Karnatak ಆಂಧ್ರದ ಗಡಿಭಾಗದ ಕರ್ನೂಲು ಜಿಲ್ಲೆಯ ಹವ್ಯಾಸಿ ಛಾಯಾಗ್ರಾಹಕ ಹಾಗೂ ಕಲಾವಿದರಾದ ಶ್ರೀ ಯುತ ಜಯಸಿಂಹ ಜೋಷಿಯವರಿಗೆ ಛಾಯಾಗ್ರಹಣ ಮತ್ತು ಕಲೆಗೆ ಸಲ್ಲಿಸಿರುವ ಸೇವೆಗಾಗಿ ಬೆಂಗಳೂರಿನ ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಬೆಂಗಳೂರಿನ ಕಲಾಗ್ರಾಮದ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಚಲನಚಿತ್ರ ನಟ ಶ್ರೀಯುತ ಚೇತನ್ ಅಹಿಂಸಾರವರು 2026 ನೇ ಸಾಲಿನ “ಪ್ರೈಡ್ ಆಫ್ ಕರ್ನಾಟಕ” ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

DK Shivakumar ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ಜನತೆಗೆ ಸಂದೇಶ: ಸುರಕ್ಷಿತ ಸಮಾಜ ನಿರ್ಮಾಣದ ಸಂಕಲ್ಪ ನಮ್ಮದು.

0

DK Shivakumar  “ನಾಗರಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ”

ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು‌ ನೆಮ್ಮದಿಯ ವಾತಾವರಣವನ್ನು ಕಾಪಾಡಿಕೊಂಡು ಹೋಗುವುದು ನಮ್ಮ ಗುರಿಯಾಗಿದ್ದು, ರಾಜ್ಯದ ಇತಿಹಾಸದಲ್ಲೆ ನಾವೊಂದು ವಿನೂತನ ಹಾಗೂ ದಿಟ್ಟ ಹೆಜ್ಜೆಯನ್ನು ಇರಿಸಿದ್ದೇವೆ.

DK Shivakumar ರೌಡಿ ಗ್ಯಾಂಗ್‌ಗಳು, ಹ್ಯಾಬಿಚ್ಯುಯಲ್ ಅಫೆಂಡರ್ಸ್‌ಗಳ ಮೇಲೆ ನಿರಂತರ ನಿಗಾ ಇಡಲು ಪ್ರತಿ ಪೊಲೀಸ್ ವೃತ್ತದಲ್ಲೂ ವಿಶೇಷ ರೌಡಿ ನಿಗ್ರಹ ಪಡೆ ಇನ್ನು ಮುಂದೆ ಕಾರ್ಯಾಚರಣೆ ನಡೆಸಲಿದೆ. ಬೆದರಿಕೆ, ದೌರ್ಜನ್ಯ, ಸುಲಿಗೆ ಮತ್ತು ಬಲವಂತದಿಂದ ಹಣ ವಸೂಲಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಿದೆ. ಇಂತಹ ಸಮಾಜ ವಿರೋಧಿ, ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ಶೂನ್ಯ ಸಂವೇದನಾ ನೀತಿ ನಮ್ಮದಾಗಿದ್ದು, ರೌಡಿಸಂ ಅನ್ನು ಬೇರುಸಹಿತ ಕಿತ್ತಸೆದು ನಾಡನ್ನು ಶಾಂತಿಯ ತೋಟವಾಗಿಸಲು ನಾವು ಕಟಿಬದ್ಧರಾಗಿದ್ದೇವೆ.

ಸುರಕ್ಷಿತ ಸಮಾಜ ನಿರ್ಮಾಣದ ಸಂಕಲ್ಪ ನಮ್ಮದು, ಇದಕ್ಕೆ ನಿಮ್ಮೆಲ್ಲರ ಸಹಕಾರವೂ ಇರಲಿ.

B.Y. Raghavendra ಪ್ರತೀ ಮನೆಯ ಮುಂದೆ ಸಸಿ ನೆಡುವ ಅಪೂರ್ವ ಸಂಕಲ್ಪ, ನಿವಾಸಿಗಳ ಪ್ರಯತ್ನ ಶ್ಲಾಘನೀಯ- ಬಿ.ವೈ.ರಾಘವೇಂದ್ರ

0

B.Y. Raghavendra ಹಸಿರು ಶಿವಮೊಗ್ಗ ಮತ್ತು ಸುಸ್ಥಿರ ಪರಿಸರದ ಆಶಯದೊಂದಿಗೆ, ಪಶು ವೈದ್ಯಕೀಯ ಕಾಲೇಜು ಮುಖ್ಯ ರಸ್ತೆ ನಿವಾಸಿಗಳ ಸಂಘ (ರಿ.), ಕಾಶಿಪುರ ಹಾಗೂ ಸ್ಟೇಟ್ ಪಿಯು ಕಾಲೇಜ್, ಶಿವಮೊಗ್ಗ ಇವರ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂಘದ ಅಧಿಕೃತ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಚಾಲನೆ ನೀಡಲಾಯಿತು.

“ಪ್ರತಿ ಮನೆಯ ಮುಂದೆ ಸಸಿ ನೆಡುವ” ಅಪೂರ್ವ ಸಂಕಲ್ಪ:
ಈ ಸಂಘದ ಉದ್ಘಾಟನೆಯನ್ನು ಕೇವಲ ವೇದಿಕೆ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ಬಡಾವಣೆಯ ಪ್ರತಿಯೊಂದು ಮನೆಯ ಮುಂಭಾಗದಲ್ಲೂ ಸಸಿಗಳನ್ನು ನೆಡುವ (Planting Drive) ಅತ್ಯಂತ ಪರಿಸರ ಪೂರಕ ಹಾಗೂ ವಿಶಿಷ್ಟ ಮಾದರಿಯ ಮೂಲಕ ಹಮ್ಮಿಕೊಳ್ಳಲಾಗಿತ್ತು.

ಗಿಡ ನೆಡುವ ಈ ಜನಾಂದೋಲನದಲ್ಲಿ ನಿವಾಸಿಗಳೊಂದಿಗೆ ಖುದ್ದಾಗಿ ಭಾಗವಹಿಸಿ ಸಸಿಗಳನ್ನು ನೆಟ್ಟು, ನೀರೆರೆಯುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಹಂಚಿಕೊಳ್ಳಲಾಯಿತು. ಬಡಾವಣೆಯ ಮೂಲಭೂತ ಸಮಸ್ಯೆಗಳ ಪರಿಹಾರದ ಜೊತೆಗೆ ಪರಿಸರದ ಸಮತೋಲನ ಕಾಪಾಡಲು ಒಗ್ಗಟ್ಟಾಗಿರುವ ಇಲ್ಲಿನ ನಿವಾಸಿಗಳ ಪ್ರಯತ್ನ ನಿಜಕ್ಕೂ ಹೆಮ್ಮೆ ತರುವಂತದ್ದು.

B.Y. Raghavendra ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಶ್ರೀ ಧನಂಜಯ ಸರ್ಜಿ, ಸಂಘದ ಅಧ್ಯಕ್ಷರಾದ ಶ್ರೀ ನಟರಾಜ್ ಹಾಗೂ ಬಡಾವಣೆಯ ನೂರಾರು ನಿವಾಸಿಗಳು ಕುಟುಂಬ ಸಮೇತರಾಗಿ ಪಾಲ್ಗೊಂಡು ಗಿಡ ನೆಡುವ ಅಭಿಯಾನವನ್ನು ಯಶಸ್ವಿಗೊಳಿಸಿದರು.

Bharat Scouts and Guides ಮಕ್ಕಳ ಆಸಕ್ತಿಗೆ ಅನುಗುಣ ಅವರ ಕಲಿಕೆಯನ್ನ ಪ್ರೋತ್ಸಾಹಿಸಬೇಕು- ಶಕುಂತಲಾ ಚಂದ್ರಶೇಖರ್

0

Bharat Scouts and Guides ಮಕ್ಕಳ ಆಸಕ್ತಿಗನುಗುಣವಾಗಿ ಅವರ ಕಲಿಕೆಯನ್ನು ಉತ್ತಮ ರೀತಿಯಲ್ಲಿ ಎಲ್ಲರೂ ಪ್ರೋತ್ಸಾಹಿಸಬೇಕು. ಉತ್ತಮ ಕಲಿಕೆಯಿಂದ ಮಕ್ಕಳ ಭವಿಷ್ಯ ರೂಪುಗೊಳ್ಳುತ್ತದೆ ಎಂದು ಜಿಲ್ಲಾ ಮುಖ್ಯ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಶಿವಮೊಗ್ಗದ ವತಿಯಿಂದ ಶನಿವಾರ ಜಿಲ್ಲಾ ಸ್ಕೌಟ್ಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಚತುರ್ಥ ಚರಣ್ ಶಿಬಿರದ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ಅವರು, ಮಕ್ಕಳ ಭವಿಷ್ಯದ ಕುರಿತು ಈಗಿಂದಲೇ ನಿಮ್ಮ ಗುರಿ ಕಡೆ ಗಮನ ಹರಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಒಂದು ಉತ್ತಮ ವೇದಿಕೆಯಾಗಿದೆ. ಇದನ್ನು ಒಳ್ಳೆಯ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳುವಂತೆ ಪರೀಕ್ಷಾರ್ಥಿಗಳನ್ನು ಕುರಿತು ವಿವರಿಸಿದರು.

ರಾಜೇಶ್ ಅವಲಕ್ಕಿ ರವರು ಮಾತನಾಡಿ, ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಪಾಲ್ಗೊಳ್ಳುವುದರಿಂದ ಅವರ ಆಲೋಚನೆಯ ಕ್ರಮಗಳು ಉನ್ನತ ಮಟ್ಟದಲ್ಲಿರುತ್ತದೆ. ಇದು ಪ್ರಕೃತಿಯ ಮಡಿಲಲ್ಲಿ ಕಲಿಯುವ, ಕಷ್ಟಗಳನ್ನು ಎದುರಿಸುವ ಧೈರ್ಯವನ್ನು ತುಂಬುವ ಮತ್ತು ಇತರರಿಗೆ ಸಹಾಯ ಮಾಡುವ ಮನೋಭಾವನೆಯನ್ನು ಕಲಿಸುವ ಒಂದು ಶಿಸ್ತಿನ ಶಿಕ್ಷಣವಾಗಿದೆ. ಎಲ್ಲರೂ ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳಬೇಕು ಎಂದ ಅವರು, ಪರೀಕ್ಷೆ ಎದುರಿಸುವ ಕುರಿತು ಉಪಯುಕ್ತ ಮಾಹಿತಿಯನ್ನು ಮಕ್ಕಳಿಗೆ ತಿಳಿಸಿ ಹೇಳಿದರು.

ಶಿಬಿರದ ನಾಯಕಿಯಾದ ಮೀನಾಕ್ಷಮ್ಮ ಎಲ್.ಟಿ. (ಬುಲ್ ಬುಲ್ಸ್) ಉದ್ಘಾಟಿಸಿ ಉದ್ಘಾಟನಾ ಭಾಷಣ ಮಾಡಿದರು. ಪರೀಕ್ಷಾ ಶಿಬಿರದಲ್ಲಿ ಭಾಗವಹಿಸಿದ್ದ 22 ಕಬ್ಸ್ ಮತ್ತು 30 ಬುಲ್ ಬುಲ್ಸ್ ಹೀಗೆ ಒಟ್ಟು 52 ಜಿಲ್ಲಾ ಪರೀಕ್ಷಾ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

Bharat Scouts and Guides ವೇದಿಕೆಯಲ್ಲಿ ರಾಜೇಶ್ ಅವಲಕ್ಕಿ, ಗೈಡ್ ಆಯುಕ್ತರಾದ ಲಕ್ಷ್ಮಿ, ಕೆ.ರವಿ, ಪದಾಧಿಕಾರಿಗಳು, ಪರೀಕ್ಷಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಶಿಬಿರಲ್ಲಿ ದಳನಾಯಕಿಯರಾದ ಈಸೂರಿನ ಶಾರದಮ್ಮ, ಜ್ಞಾನದೀಪ ಶಾಲೆಯ ಶಿಕ್ಷಕಿಯರಾದ ವಿದ್ಯಾ, ಶೀಲಾ ಮತ್ತು ದಳನಾಯಕರಾದ ಅಶೋಕ್ ಕುಮಾರ್ ಸಿ.ಎನ್., ಸೇತುರಾಮ್, ಮಂಜುನಾಥ್, ದಿನೇಶ್ ಸಿಂಗ್ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಬ್ಸ್ ಅಂಡ್ ಬುಲ್ ಬುಲ್ಸ್ ಪ್ರಾರ್ಥನೆ ಮಾಡಿದರು. ಜಿಲ್ಲಾ ತರಬೇತಿ ಆಯುಕ್ತರಾದ ಶಿವಶಂಕರಪ್ಪ ಅವರು ಶಿಬಿರದಲ್ಲಿ ಭಾಗವಹಿಸಿದ್ದ ಎಲ್ಲರನ್ನೂ ಸ್ವಾಗತಿಸಿದರು.
ಜಿಲ್ಲಾ ಆಯುಕ್ತರಾದ ಎಸ್. ಕಲಾ (ಗೈಡ್) ನಿರೂಪಣೆ ಮಾಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಈಸೂರು ಶಾರದಮ್ಮ ವಂದನಾರ್ಪಣೆ ಮಾಡಿದರು.

ಎಸ್.ಎಫ್.ಸಿ.ನಿಧಿ ಯೋಜನೆಯಡಿ ಪಜಾ/ ಪ.ಪಂ /ವಿಶೇಷ ಚೇತನರು/ ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಸಹಾಯ ಧನ,: ಶಿವಮೊಗ್ಗ ಮಹಾ ನಗರಪಾಲಿಕೆ ಪ್ರಕಟಣೆ

0

ಶಿವಮೊಗ್ಗ ಮಹಾನಗರ ಪಾಲಿಕೆಯು 2026-27ನೇ ಸಾಲಿನ ಎಸ್.ಎಫ್.ಸಿ ನಿಧಿಯ ಯೋಜನೆಯಡಿ ಪರಿಶಿಷ್ಟಜಾತಿ / ಪರಿಶಿಷ್ಟ ಪಂಗಡ ವಿಶೇಷಚೇತನ ಮತ್ತು ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ.

ಬಿ.ಇ /ಎಂ.ಬಿ. ಬಿ.ಎಸ್. ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಗಾಗಿ ರೂ.50000/- ಸಹಾಯಧನ ನೀಡಲಾಗುತ್ತಿದ್ದು, ಆದಾಯ ರೂ.5 ಲಕ್ಷ ಮಿತಿಯಲ್ಲಿರಬೇಕು.

ಬಿ.ಇ /ಎಂ.ಬಿ. ಬಿ.ಎಸ್. ವ್ಯಾಸಾಂಗ ಮಾಡುತ್ತಿರುವ ಇತರೆ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಗಾಗಿ ರೂ.50000/- ಸಹಾಯಧನ ನೀಡಲಾಗುತ್ತಿದ್ದು, ಆದಾಯ ರೂ. 2.50 ಲಕ್ಷ ಮಿತಿಯಲ್ಲಿರಬೇಕು. ವಿಶೇಷ ಚೇತನರಿಗೆ ಸಣ್ಣ ಉದ್ದಿಮೆಗೆ ಸಹಾಯಧನ ನೀಡಲಾಗುತ್ತಿದ್ದು, ಅವರ ಆದಾಯ ರೂ. 3.00 ಲಕ್ಷ ಮಿತಿಯಲ್ಲಿರಬೇಕು.

ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಚುನಾವಣಾ ಗುರುತಿನ ಪತ್ರ, ಪಡಿತರಚೀಟಿ ಆಧಾರ ಕಾರ್ಡ್, ವ್ಯಾಸಾಂಗ ದೃಢೀಕರಣ ಪತ್ರ, ವಿಶೇಷ ಚೇತನರ UDID ಕಾರ್ಡ್, ಸಣ್ಣ ಉದ್ದಿಮೆ ಫಲಾಭವಿಗಳು ಯೋಜನಾ ವರದಿ ಲಗತ್ತಿಸುವುದು. ಈ ಎಲ್ಲಾ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ನೀಡುವುದು.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.shivamoggacity.mrc.gov.in, ದೂ. ಸಂ.: 08182-277677/226606 ಗಳನ್ನು ಸಂಪರ್ಕಿಸಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ನಮ್ಮ‌ ಮುಂದಿನ ಪೀಳಿಗೆಗೆ ಪ್ರಕೃತಿ ಉಳಿಸಿದರೆ ಸಾಕು, ಜೀವನ ಕಟ್ಟಿಕೊಳ್ಳುತ್ತಾರೆ- ರವೀಂದ್ರ ನಾಯಕ್

0

ಜೀವರಾಶಿ ಪ್ರಾರಂಭ ವಾಗಿರುವುದೇ ಪ್ರಕೃತಿಯಿಂದ, ಅದನ್ನು ಸುಸ್ತಿತಿಯಲ್ಲಿ ಇಟ್ಟು ಕೊಳ್ಳದೇ ಹೋದರೆ, ವಿಶ್ವದಲ್ಲಿ ಯಾವ ಜೀವಿಯು ಉಳಿಯುವುದಿಲ್ಲ. ನಾವು
ಮುಂದಿನ ಪೀಳಿಗೆಗೆ ಉಳಿಸಿಕೊಡುವ ಪ್ರಕೃತಿಯೇ, ಜೀವನ ಕಟ್ಟಿಕೊಳ್ಳಲು ಉತ್ತಮ ಕೊಡುಗೆ ಎಂದು ಸಹಾಯಕ ಅರಣ್ಯಾಧಿಕಾರಿ ರವೀಂದ್ರನಾಯ್ಕ್, ಶಿಕಾರಿಪುರದ ಯೂತ್ ಹಾಸ್ಟೆಲ್ಸ್ ಕುಮುದ್ವತಿ ಘಟಕ ಆಯೋಜಿಸಿದ್ದ ವಿಶ್ವ ಪರಿಸರ ದಿನ ಉದ್ಘಾಟಿಸಿ ಮಾತನಾಡುತ್ತಿದ್ದರು.

ಎಲ್ಲಾ ದೇಶಗಳಲ್ಲಿಯೂ ಪರಿಸರದ ಬಗ್ಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ನಮ್ಮ ದೇಶದಲ್ಲಿ ಜನಸಂಖ್ಯೆ ಸ್ಪೋಟದಿಂದ ಸ್ವಲ್ಪ ಹಿನ್ನಡೆ ಯಾಗಿದೆ. ನಾವೇಲ್ಲರು ಎಚ್ಚೆತ್ತು ಇಂದಿನಿಂದಲೇ ಪ್ರಕೃತಿ ಉಳಿಸುವ ವಾಗ್ದಾನ ಮಾಡೋಣ, ನಮ್ಮ ಮುಂದಿನ ಪೀಳಿಗೆಗೆ ಪ್ರಕೃತಿ ಉಳಿಸಿ ಕೊಟ್ಟರೆ ಸಾಕು, ಅವರು ಜೀವನ ಕಟ್ಟಿಕೊಳ್ಳುತ್ತಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಗಿರೀಶ್ ಕುಮಾರ್ ಮಾತನಾಡುತ್ತ, ನಮ್ಮ ಪೂರ್ವಜರು ನಮಗೆ ಅತ್ಯ ಅಮೂಲ್ಯ ಕೊಡುಗೆಯಾಗಿ ಪರಿಸರ ನೀಡಿದ್ದರು. ಆದರೆ ಆಧುನಿಕತೆ ಬೆಳೆದಂತೆ, ಅದರ ಬೆನ್ನತ್ತಿ ನಮ್ಮ ನಾಡನ್ನೇ ನಾವೆಲ್ಲರೂ ಸೇರಿ ನಾಶ ಮಾಡುತ್ತಿದ್ದೇವೆ. ಕಾಡು ಕಡಿಯುವುದನ್ನು ನೋಡಿ ಸುಮ್ಮನ್ನಿರುವುದು ನಾವೇ ಮರ ಕಡಿದಂತೆ. ಆದ್ದರಿಂದ ಎಲ್ಲರೂ ಪ್ರಕೃತಿ ರಕ್ಷಣೆಗೆ ಪಣ ತೊಡೋಣ ಆದಷ್ಟು ಸಸಿ ನೆಟ್ಟು ಆಗಿರುವ ನಷ್ಟವನ್ನು ಸರಿ ತೂಗಿಸಲು ಪ್ರಯತ್ನಿಸೋಣ ಎಂದರು.

ಪ್ರಸ್ಥಾವಿಕವಾಗಿ ಮಾತನಾಡಿದ ಯೂತ್ ಹಾಸ್ಟೆಲ್ಸ್ ರಾಜ್ಯ ಘಟಕದ ಛೇರ್ಮನ್ ಸುದರ್ಶನ್ ಪೈ ಯೂತ್ ಹಾಸ್ಟೆಲ್ ರಾಷ್ಟ್ರಾದ್ಯಂತ ಪ್ರಕೃತಿಯೊಂದಿಗೆ ಬೆರೆಯುವ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗುತ್ತದೆ. ಇದರಿಂದ ದೇಹಕ್ಕೆ ಹಸುವು, ಮನಃಶಾಂತಿ ದೊರಕುತ್ತದೆ ಮತ್ತು ಆರೋಗ್ಯವು ಸುದಾರಿಸುತ್ತದೆ. ಎಲ್ಲರೂ ಸದಸ್ಯಸತ್ವಪಡೆದು, ಚಾರಣದ ಸವಿ ಸವಿಯಬೇಕೆಂದು ಕೋರಿದರು.

ಕಾರ್ಯದರ್ಶಿ ಮಂಜುನಾಥ್ ಸ್ವಾಗತಿಸಿದರು, ಪುಟ್ಟಣ್ಣ ವಂದಿಸಿದರು, ರಾಜ್ಯ ಖಚಾಂಚಿ ಜಯರಾಮ್ ಪೂಜಾರಿ,
ಗೋಕುಲ್ ಹೊಂಡ ಸಿಬ್ಬಂದಿ, ಮುರುಳಿಧರ್ ನಗರದ ನಾಗರೀಕರು ಭಾಗವಹಿಸಿದ್ದರು.

Rotary Shimoga ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ನಿರ್ಲಕ್ಷ್ಯ – ಎಂ.ಎನ್.ಸುಂದರ ರಾಜ್

0

Rotary Shimoga ನಾಡಿನ ಆದಾಯದ ಮೂಲ ಆಗಬೇಕಿದ್ದ ಪ್ರವಾಸೋದ್ಯಮ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಸಾಹಿತಿ, ಅಂಕಣಕಾರ ಎಂ.ಎನ್.ಸುಂದರ್‌ರಾಜ್ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ಸ್ಥಳಗಳ ಬಗ್ಗೆ ಮಾತನಾಡಿ, ನಾಡಿನ ಪ್ರಕೃತಿ ಸಂಪತ್ತು, ಜಲಪಾತಗಳು, ದೇವಾಲಯಗಳು, ಪಕ್ಷಿ ಧಾಮಗಳು, ಮತ್ತಿತರ ಅನೇಕ ಪ್ರೇಕ್ಷಣೀಯ ಸ್ಥಳಗಳು ಸಮೃದ್ಧವಾಗಿದೆ. ಆದರೆ ಅವುಗಳ ಸಂರಕ್ಷಣೆ ಮತ್ತು ಸರಿಯಾದ ಪ್ರಕಾರದ ಕೊರತೆ ಮತ್ತು ಮಾರ್ಗದರ್ಶನವಿಲ್ಲದೆ ಎಲ್ಲವೂ ನಿರ್ಲಕ್ಷಕ್ಕೆ ಒಳಪಟ್ಟಿದೆ ಎಂದು ತಿಳಿಸಿದರು.

ಸರ್ಕಾರದ ಪ್ರವಾಸೋದ್ಯಮ ಇಲಾಖೆ ಇಂತಹ ಸ್ಥಳಗಳ ಮಾಹಿತಿ ಪಡೆದು ಜನರನ್ನು ಆಕರ್ಷಿಸುವಲ್ಲಿ ವಿಫಲವಾಗಿವೆ. ಹೀಗಾಗಿ ಪ್ರವಾಸೋದ್ಯಮ ಒಂದು ಉದ್ಯಮವಾಗದೆ ನಿರುಪಯೋಗವಾಗಿದೆ. ಎಂದು ಹೇಳಿದರು.

ಪ್ರವಾಸೋದ್ಯಮದಲ್ಲಿ ರಾಜ್ಯ ತುಂಬಾ ಹಿಂದುಳಿದಿದೆ. ಅದಕ್ಕೆ ಮುಖ್ಯ ಕಾರಣ ಸರ್ಕಾರ ಮತ್ತು ಅಧಿಕಾರಿಗಳ ನಿರ್ಲಕ್ಷö್ಯ ಮನೋಭಾವನೆ. ಜಿಲ್ಲೆಯಲ್ಲಿರುವ 80ಕ್ಕೂ ಹೆಚ್ಚು ಪ್ರೇಕ್ಷಣೀಯ ಸ್ಥಳಗಳ ವಿವರವಾದ ಮಾಹಿತಿಗಳನ್ನು ಜನರಿಗೆ ತಲುಪಿಸಿದಲ್ಲಿ ಮತ್ತು ಅಂತಹ ಸ್ಥಳಗಳ ಬಗ್ಗೆ ಮಾರ್ಗದರ್ಶಕ ಫಲಕಗಳನ್ನು ಅಳವಡಿಸುವುದು ಮತ್ತು ಸಾಹಿತ್ಯವನ್ನು ಪ್ರಕಟಿಸುವುದರಿಂದ ಹೆಚ್ಚು ಹೆಚ್ಚು ಹೆಚ್ಚು ಪ್ರವಾಸಿಗರು ಬಂದು ಹೋಗಲು ಸಾಧ್ಯವಾಗುತ್ತದೆ. ದೇಶ ವಿದೇಶಗಳಿಂದ ವಿವಿಧ ರಾಜ್ಯಗಳಿಂದ ಪ್ರವಾಸಿಗರು ಹರಿದು ಬರಲು ಸಾಧ್ಯವಾಗಿ ರಾಜ್ಯದ ಆದಾಯ ಹೆಚ್ಚುತ್ತದೆ. ಈ ರೀತಿ ಮಾಡುವುದರಿಂದ ಅನೇಕ ಜನರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಿ ಕೊಡುತ್ತದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಚಂಪಕ ಸರಸು, ಹೊಸನಗರ ತಾಲ್ಲೂಕಿನ ದೇವಗಂಗೆ, ಸಾಗರ ತಾಲ್ಲೂಕಿನ ದೇವರ ಗದ್ದೆ ಮತ್ತು ಹಿರೇಭಾಸ್ಕರ ಡ್ಯಾಮ್ ಸೇರಿ ಪ್ರಮುಖ ತಾಣಗಳಿವೆ. ಈ ಸ್ಥಳಗಳನ್ನು ಒಮ್ಮೆಯಾದರೂ ಸಂದರ್ಶಿಸಬೇಕು. ನಮ್ಮ ನಾಡಿನ ಅನೇಕ ಪ್ರವಾಸಿ ಸ್ಥಳಗಳು ದೇಶದಲ್ಲಿಯೇ ಪ್ರಸಿದ್ಧವಾಗಿದ್ದು, ಅವುಗಳ ಪ್ರಾಮುಖ್ಯತೆ ಅರಿಯಬೇಕು ಎಂದರು.

ಸುಂದರರಾಜ್ ಅವರನ್ನು ಸನ್ಮಾನಿಸಲಾಯಿತು. ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್, ಕಾರ್ಯದರ್ಶಿ ಬಿ.ಆರ್.ಧನಂಜಯ, ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್, ಡಾ. ಗುಡದಪ್ಪ ಕಸಬಿ, ಆದಿಮೂರ್ತಿ, ಶ್ರೀನಿವಾಸ ಗೌಡ, ಮನೋಹರ, ಗಣೇಶ, ವಿಜಯಪ್ರಕಾಶ್, ರಮೇಶ್ ಭಟ್, ನಿಯೋಜಿತ ಅಧ್ಯಕ್ಷ ಶೇಷಗಿರಿ.ಡಿ.ಕೆ., ಗಂಗಪ್ಪ.ಬಿ., ವೀಣಾ ಕಿಶೋರ್, ರೂಪಾ, ಅರುಣ್ ದೀಕ್ಷಿತ್, ಸಂಜೀವ್ ಇತರರಿದ್ದರು.

ವಿದ್ಯಾರ್ಥಿಗಳು & ಯುವಜನರಲ್ಲಿ ಸೈಕಲ್ ಬಳಕೆ ಹೆಚ್ಚಾಗಬೇಕು- ಗಿತ್ತೆ ಮಾಧವ ವಿಠಲ್

0

ವಿದ್ಯಾರ್ಥಿಗಳು ಯುವ ಜನರಲ್ಲಿ ಸೈಕಲ್ ಬಳಕೆ ಹೆಚ್ಚಾಗಬೇಕು ಎಂದು ದಾವಣಗೆರೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲ್ ಹೇಳಿದರು.

ಅವರಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಬೈಸಿಕಲ್ ಕ್ಲಬ್, ಹಿಮಾಲಯನ್ ಅಡ್ವೆಂಚರ್ ಅಂಡ್ ನೇಚರ್ ಅಕಾಡೆಮಿ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಸೈಕಲ್ ದಿನಾಚರಣೆ’ ಅಂಗವಾಗಿ ಏರ್ಪಾಡಾಗಿದ್ದ ‘ಸೈಕಲ್ ಜಾತಾ’ ಗೆ ಚಾಲನೆ ನೀಡಿ ಮಾತನಾಡುತ್ತ ತಾವು ಸಹಾ ವಿದ್ಯಾರ್ಥಿ ದೆಸೆಯಲ್ಲಿ ಸೈಕಲನ್ನೇ ಬಳಸುತ್ತಿದ್ದು ನಿತ್ಯ ಸುಮಾರು 11 ಕಿಲೋಮೀಟರ್ ನಷ್ಟು ದೂರ ಹೋಗಿ ಬರುತ್ತಿದ್ದುದಾಗಿ ಹೇಳಿದರು.

ವಿಶೇಷ ಆಹ್ವಾನಿತರಾಗಿ ಸೈಕಲ್ ಜಾತಾದಲ್ಲಿ ಭಾಗವಹಿಸಿದ್ದ ಹಿರಿಯ ಪತ್ರಕರ್ತ, ಪರಿಸರವಾದಿ ಡಾ. ಎಚ್ ಬಿ ಮಂಜುನಾಥರವರು ಸಹ ಸವಾರರೊಂದಿಗೆ ಮಾತನಾಡುತ್ತಾ ಸೈಕಲ್ ಬಳಸುವುದರಿಂದ ದೈಹಿಕ ಆರೋಗ್ಯ, ಇಂಧನ ಉಳಿತಾಯದಿಂದ ರಾಷ್ಟ್ರದ ಹಿತ ಹಾಗೂ ವಾಯು ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಿಂದ ಪರಿಸರ ಸಂರಕ್ಷಣೆ ಸಾಧ್ಯವಿದ್ದು ನಮ್ಮ ದೇಶದಲ್ಲಿ ವಾರ್ಷಿಕ 245 ಮಿಲಿಯನ್ ಮೆಟ್ರಿಕ್ ಟನ್ನಿನಷ್ಟು ಪೆಟ್ರೋಲಿಯಂ ಬಳಕೆಯಾಗುತ್ತಿದ್ದು ಪ್ರತಿನಿತ್ಯ ದೇಶದಲ್ಲಿ 6 ಕೋಟಿ ಬ್ಯಾರಲ್ ಗಳಷ್ಟು ಪೆಟ್ರೋಲಿಯಂ ಖರ್ಚಾಗುತ್ತಿದೆ, ಇದರಲ್ಲಿ ಶೇಕಡಾ 62ರಷ್ಟು ಪೆಟ್ರೋಲ್ ಬಳಕೆಯು ದ್ವಿಚಕ್ರ ವಾಹನಗಳಿಂದ ಆಗುತ್ತಿದ್ದು ವಾರದಲ್ಲಿ ಒಂದು ದಿನವಾದರೂ ಸ್ಕೂಟರು ಬೈಕ್ ಗಳ ಬದಲು ಸೈಕಲ್ ಬಳಸುವುದರಿಂದ ವಾರ್ಷಿಕ 320 ಕೋಟಿ ಬ್ಯಾರಲ್ ಗಳಷ್ಟು ಪೆಟ್ರೋಲ್ ಉಳಿಸಬಹುದು, ಸೈಕಲ್ ಬಳಕೆಯಿಂದ ಸಮಯ ವ್ಯರ್ಥವಾಗುತ್ತದೆ ಎಂಬ ಭಾವನೆ ತಪ್ಪು, ಸಮಯದ ಸದ್ಬಳಕೆಯ ಅರಿವು ಉಂಟಾಗುತ್ತದೆ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ರೇಣುಕಾ, ಗ್ರಾಹಕರ ಕೋರ್ಟಿನ ನ್ಯಾಯಾಧೀಶರಾಗಿದ್ದ ಶಿವಕುಮಾರ್, ದಾವಣಗೆರೆ ಬೈಸಿಕಲ್ ಕ್ಲಬ್ ಕಾರ್ಯದರ್ಶಿ ಮಹೇಶ್,ಸದಸ್ಯ ಕಿರಣ್ ಬಾಳೆಹೊಲದ,ಪ್ರಸಾದ್,ಹಿಮಾಲಯನ್ ಅಡ್ವೆಂಚರ್ ಅಂಡ್ ನೇಚರ್ ಅಕಾಡೆಮಿ ಕಾರ್ಯದರ್ಶಿ ಎನ್ ಕೆ ಕೊಟ್ರೇಶ್, ಸದಸ್ಯರುಗಳಾದ ಚಂದ್ರಮೌಳಿ, ಮಧುಸೂದನ್, ಚನ್ನಬಸವ ಶೀಲವಂತ್ ಮುಂತಾದವರು ಭಾಗವಹಿಸಿದ್ದರು.