Tuesday, February 3, 2026
Tuesday, February 3, 2026
Home Blog Page 7

B.Y.Raghavendra ರೈತರಿಗೆ ಹವಾಮಾನ ಆಧಾರಿತ ವಿಮೆ ಸಮರ್ಪಕವಾಗಿ ತಲುಪಿಸಲು ಕ್ರಮ : ಬಿ.ವೈ.ರಾಘವೇಂದ್ರ

0

B.Y.Raghavendra ಹವಾಮಾನ ಆಧಾರಿತ ಬೆಳೆ ವಿಮೆಯು ರೈತರಿಗೆ ಸಮರ್ಪಕವಾಗಿ ಲಭಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಕಳೆದ ಬಾರಿ ವಿಮೆ ಪಡೆಯುವಲ್ಲಿ ರೈತರಿಗೆ ಆದ ಅನ್ಯಾಯವನ್ನು ಸಹ ಸರಿಪಡಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹವಾಮಾನ ಆಧಾರಿತ ಬೆಳೆ ವಿಮೆಯಲ್ಲಿ ಜಿಲ್ಲೆಯ ರೈತರಿಗೆ ಸಾಕಷ್ಟು ಅನ್ಯಾಯವಾಗಿದೆ. ಕಳೆದ ಸಾಲಿನಲ್ಲಿ ರೂ. 70-80 ಕೋಟಿಯಷ್ಟು ವಿಮಾ ಮೊತ್ತ ನಷ್ಟವಾಗಿದೆ. ಆದ್ದರಿಂದ ಬೆಳೆ ನಷ್ಟವನ್ನು ನಿರ್ಧರಿಸುವ ಮಳೆ ಮಾಪನ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು.
ಜಿಲ್ಲೆಯಲ್ಲಿ ಒಟ್ಟು 280 ಮಳೆ ಮಾಪನ ಕೇಂದ್ರಗಳಿದ್ದು ಇದರಲ್ಲಿ 112 ಅಂದರೆ ಕೇವಲ ಶೇ.40 ರಷ್ಟು ಮಾತ್ರ ಕೆಲಸ ಮಾಡುತ್ತಿವೆ ಎಂದು ವರದಿ ನೀಡಲಾಗಿದೆ. ಈ ಕೇಂದ್ರಗಳ ಬ್ಯಾಕ್ ಅಪ್ ಸ್ಟೇಷನ್‌ಗಳು ಸಹ ಸರಿ ಇಲ್ಲ. ಈ ಬಗ್ಗೆ ಅಧಿಕಾರಿಗಳು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಹಾಗೂ ರೈತರಿಗೆ ವಿಮೆ ನೀಡುವಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಕಳೆದ ಬಾರಿ ರೈತರಿಗೆ ಆಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು ಎಂದರು.
ಹಾಗೂ ವಿಮೆ ನಿರ್ಧರಿಸುವ ಟರ್ಮ್ ಶೀಟ್ ಮಾನದಂಡವನ್ನು ಪಾರದರ್ಶಕಗೊಳಿಸಬೇಕು. ಸ್ಥಳೀಯ ಶಾಸಕರೊಂದಿಗೆ ಸಭೆ ನಡೆಸಿ ರೈತರ ಪರವಾಗಿ, ಅವರಿಗೆ ಅನುಕೂಲವಾಗುವಂತೆ ಟರ್ಮ್ ಶೀಟ್ ನ್ನು ಸಿದ್ದಪಡಿಸಬೇಕೆಂದು ತಿಳಿಸಿದರು.
ದಿಶಾ ಸಮಿತಿ ಸದಸ್ಯರಾದ ಗುರುಮೂರ್ತಿ, ಮಲೆನಾಡಿನಲ್ಲಿ ಎಲೆ ಚುಕ್ಕಿ ರೋಗದಿಂದ 40% ಬೆಳೆ ಇಲ್ಲವಾಗಿದೆ. ಮಧ್ಯಮ ವರ್ಗದ ರೈತರಿಗೆ ತೊಂದರೆಯಾಗುತ್ತಿದ್ದು, ಹವಾಮಾನ ಆಧಾರಿತ ವಿಮೆ ಕುರಿತು ತಕ್ಷಣ ಪರಿಶೀಲಿಸಿ ನಷ್ಟ ಭರಿಸುವಂತೆ ಮನವಿ ಮಾಡಿದರು. ಹಾಗೂ ಅಂಗನವಾಡಿ, ಶಾಲೆ, ಕಚೇರಿಗಳ ಮೇಲ್ಛಾವಣಿ ಸೋರಿಕೆ ಸಾಮಾನ್ಯವಾಗಿದ್ದು, ಈ ಕಟ್ಟಡಗಳ ಕಾಮಗಾರಿ ನಿರ್ವಹಿಸಿದ ಏಜೆನ್ಸಿಗಳನ್ನು ಪರಿಶೀಲಿಸಿ ಬ್ಲಾಕ್ ಲಿಸ್ಟ್ಗೆ ಸೇರಿಸುವ ಬಗ್ಗೆ ನಿರ್ಣಯ ಕೈಗೊಳ್ಳಬೇಕು ಎಂದರು.
ಸAಸದರು, ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಎಸ್ ಸಿ ಜನಸಂಖ್ಯೆ ಶೇ.40 ಕ್ಕಿಂತ ಹೆಚ್ಚಿರುವ ಗ್ರಾಮಗಳಿಗೆ ಸಮಗ್ರ ಅಭಿವೃದ್ದಿ ಕೈಗೊಳ್ಳಲು ಪ್ರಸಕ್ತ ವರ್ಷ 16 ಗ್ರಾಮಗಳು ಆಯ್ಕೆಯಾಗಿದ್ದು ಸರ್ಕಾರ ಇಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಹಣ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದರು.
ಶಿವಮೊಗ್ಗ -ತುಮಕೂರು ರಾಷ್ಟಿçÃಯ ಹೆದ್ದಾರಿ ಕಾಮಗಾರಿಗೆ ಸಂಬAಧಿಸಿದAತೆ ಕೆಲಸಗಳನ್ನು ಚುರುಕುಗೊಳಿಸಿ, ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಮುಗಿಸಬೇಕು. ಈ ಯೋಜನೆ ಮಂಜೂರಾಗಿ 4-5 ವರ್ಷಗಳಾಗಿದ್ದು, ಭೂಸ್ವಾಧೀನ ಪ್ರಕ್ರಿಯೆ ಕುರಿತು ಸ್ಪಷ್ಟತೆ ನೀಡಬೇಕು. ಹಾಲಿನ ಡೈರಿ ಬಳಿಯ ಅಂಡರ್ ಪಾಸ್ ಕೆಲಸವನ್ನು ತ್ವರಿತ ಗತಿಯಲ್ಲಿ ಮಾಡಬೇಕು. ಇಲ್ಲಿ ಜನರು ಮಕ್ಕಳು ಓಡಾಡುವುದು ತುಂಬಾ ಕಷ್ಟವಾಗಿದೆ ಹಾಗೂ ಶಿವನಿ ಮತ್ತು ಬೆಲೇನಹಳ್ಳಿಯಲ್ಲಿಯೂ ಓಡಾಟ ಕಷ್ಟ ಆಗುತ್ತಿದೆ. ಆದ್ದರಿಂದ ಎನ್‌ಹೆಚ್ ಅಧಿಕಾರಿಗಳು ಕೆಲಸಗಳನ್ನು ಶೀಘ್ರದಲ್ಲಿ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.
ಶಿಕಾರಿಪುರ ತಾಲ್ಲೂಕಿನ ಕಲ್ಲಾಪುರ ಗೇಟ್ ಯಿಂದ ಕುಟ್ರಳ್ಳಿವರೆಗೆ ಕೇವಲ 30 ಕಿ ಮೀ ಇದ್ದರೂ ಇಲ್ಲಿ ಟೋಲ್ ನಿರ್ಮಿಸಿದ್ದು ಈ ಟೋಲ್ ಗೇಟಿನಿಂದಾಗಿ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ನಿಯಮಾವಳಿ ಪ್ರಕಾರ 60 ಕಿ.ಮೀ ಗೆ ಟೋಲ್ ನಿರ್ಮಿಸಬಹುದು ಎಂದಿದೆ. ಆದ್ದರಿಂದ ಈ ಟೋಲ್‌ನ್ನು ಬೇರೆಡೆ ಶಿಫ್ಟ್ ಮಾಡಬೇಕೆಂದು ಸದಸ್ಯರು, ಸಂಸದರು ತಿಳಿಸಿದರು.
ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ಅಂಡರ್ ಬ್ರಿಡ್ಜ್ಗೆ ಅನುಮೋದನೆ ದೊರೆತು ಒಂದು ವರ್ಷವಾಗಿದ್ದು ಶೀಘ್ರ ಕಾರ್ಯಾರಂಭ ಮಾಡಬೇಕು ಹಾಗೂ ರೂ.73 ಕೋಟಿ ವೆಚ್ಚದಲ್ಲಿ ಮಂಜೂರಾಗಿರುವ ಫ್ರೀಡಂ ಪಾರ್ಕ್ ಹಿಂದಿನ ಆರ್‌ಓಬಿ ಕಾಮಗಾರಿಯನ್ನು ಸಹ ಶೀಘ್ರದಲ್ಲಿ ಆರಂಭಿಸಬೇಕೆAದು ರೈಲ್ವೆ ಅಧಿಕಾರಿಗಳು ಮತ್ತು ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಸಾಗರ ತಾಲ್ಲೂಕಿನ ಮೇಘಾನೆಯಲ್ಲಿ ಬಿಎಸ್ ಎನ್ ಎಲ್ ಟವರ್ ಆಗಬೇಕು. ಪ್ರಸ್ತುತ ಅಳವಡಿಸಲಾಗಿರುವ ಟವರ್‌ಗಳಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಸರಪಡಿಸಬೇಕು. ಹಳೆಯ ಟವರ್ ಗಳನ್ನು ಪರಿಶೀಲಿಸಿ ದುರಸ್ತಿಪಡಿಸಬೇಕು ಹಾಗೂ ಇದಕ್ಕೆ ಸಂಬAಧಿಸಿದ ಬಾಕಿ ಕಡತಗಳನ್ನು ವಿಲೇ ಮಾಡಬೇಕೆಂದು ಬಿಎಸ್‌ಎನ್‌ಎಲ್ ಎಜಿಎಂ ರಿಗೆ ಸೂಚನೆ ನೀಡಿದರು.
ಪಿಎಂಜಿಎಸ್‌ವೈ ಯೋಜನೆಯಡಿ ರಾಜ್ಯಕ್ಕೆ ಒಟ್ಟು 53 ಕಾಮಗಾರಿಗಳು ಮಂಜೂರಾಗಿದ್ದು ಅದರಲ್ಲಿ ಶೇ.50 ರಷ್ಟು ಅಂದರೆ 25 ಕಾಮಗಾರಿಗಳು ಶಿವಮೊಗ್ಗ ಜಿಲ್ಲೆಗೆ ಮಂಜೂರಾಗಿದ್ದು, ಹೊಸನಗರ 14, ಸಾಗರ 06, ತೀರ್ಥಹಳ್ಳಿ 01 ಸೊರಬ 04 ಕಾಮಗಾರಿಗಳು ಮಂಜೂರಾಗಿದ್ದು ಗುಣಮಟ್ಟದೊಂದಿಗೆ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ತಿಳಿಸಿದರು.
ರಸ್ತೆ ಡಾಂಬರೀಕರಣ ಹಾಳಾಗಿರುವೆಡೆ ಜಿ.ಪಂ ಸಿಇಓ ಅವರು ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚನೆ ನೀಡಬೇಕು ಎಂದ ಅವರು ಪಿಎಂಜಿಎಸ್‌ವೈ ಯೋಜನೆಯ ಕಾಮಗಾರಿಗಳನ್ನು ಅಧಿಕಾರಿಗಳು ಶಾಸಕರ ಗಮನಕ್ಕೆ ತಂದು ಇತರೆ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯವೆಸಗಬೇಕೆಂದರು.
B.Y.Raghavendra ದಿಶಾ ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ್ ಮಾತನಾಡಿ, ರಸ್ತೆಗಳಲ್ಲಿ ಶಾರ್ಟ್ ಕರ್ವ್ಗಳಿಂದಾಗಿ ರಸ್ತೆ ಅಪಘಾತಗಳು ಹೆಚ್ಚುತ್ತಿವೆ ಆದ್ದರಿಂದ ಎನ್ ಹೆಚ್ ಸೇರಿದಂತೆ ಎಲ್ಲ ರಸ್ತೆ ಗಳಲ್ಲಿ ಬ್ಲಾಕ್ ಸ್ಪಾಟ್ಸ್ಗಳನ್ನು ಗುರುತಿಸಿ ಪಟ್ಟಿ ಮಾಡಿ, ಸೂಕ್ತ ಕ್ರಮ ವಹಿಸಬೇಕೆಂದು ಹಾಗೂ ಜನರಿಗೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಜನರಿಗೆ ನ್ಯಾಯ ಒದಗಿಸಬೇಕು ಹಾಗೂ ಜಲಶಕ್ತಿ ಯೋಜನೆಯನ್ನು ಸರಿಪಡಿಸಬೇಕೆಂದು ಮನವಿ ಮಾಡಿದರು.
ಗ್ರಾಮೀಣ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಅಭಿಯಂತರರು ಮಾತನಾಡಿ ಜೆಜೆಎಂ ಯೋಜನೆಯಡಿ ಜಿಲ್ಲೆಗೆ ಓವರ್‌ಹೆಡ್, ಬೋರ್‌ವೆಲ್, ನಳ ಸಂಪರ್ಕ ಸೇರಿ 2528 ಕಾಮಗಾರಿಗಳು ಮಂಜುರಾಗಿದ್ದು 2023 ಪೂರ್ಣಗೊಂಡಿವೆ, 494 ಚಾಲ್ತಿಯಲ್ಲಿದ್ದು ಶೇ.86 ಕೆಲಸ ಆಗಿದೆ. ರೂ 728 ಕೋಟಿ ಮಂಜೂರಾಗಿದ್ದು 628 ಕೋಟಿ ವೆಚ್ಚವಾಗಿದೆ ಎಂದರು.
ದಿಶಾ ಸಮಿತಿ ಸದಸ್ಯರಾದ ಗಿರೀಶ್ ಭದ್ರಾಪುರ ಮಾತನಾಡಿ 70 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಕೊಳಚೆ ನೀರು ನದಿಗೆ ಸೇರ್ಪಡೆಯಾಗುತ್ತಿರುವ ಕಾರಣ ಆ ನೀರು ತಮಗೆ ಬೇಡವೆಂದು ಪಿಳ್ಳಂಗಿರಿ, ಬುಳ್ಳಾಪುರ ಇತರೆ ಗ್ರಾಮಸ್ಥರು ಈ ನೀರನ್ನು ಬಳಕೆ ಮಾಡಲು ಒಪ್ಪುತ್ತಿಲ್ಲ. ಗುಂಡಪ್ಪ ಶೆಡ್, ರಾಮಣ್ಣಶೆಟ್ಡಿ ಪಾರ್ಕ್ ಮತ್ತು ಚಟ್ನಹಳ್ಳಿಯಲ್ಲಿ ಕೊಳಚೆ ನೀರು ನದಿಗೆ ಸೇರ್ಪಡೆಯಾಗುತ್ತಿದ್ದು ಇದನ್ನು ಕೂಡಲೇ ಪರಿಶೀಲಿಸಿ ಕ್ರಮ ವಹಿಸಬೇಕೆಂದರು.
ಸAಸದರು, ಶಿವಮೊಗ್ಗ ಸೇರಿದಂತೆ ಭದ್ರಾವತಿ ಮತ್ತು ಇತರ ನಗರ ಪ್ರದೇಶದಲ್ಲಿ ಕೊಳಚೆ ನೀರು ನದಿಗೆ ಸೇರುತ್ತಿರುವ ಬಗ್ಗೆ ಪರಿಶೀಲಿಸಿ ಆದ್ಯತೆ ಮೇಲೆ ಇದನ್ನು ತಡೆ ಹಿಡಿಯಬೇಕು ಎಂದು ಸೂಚಿಸಿದರು.
ಕೋಟೆಗಂಗೂರು ಮತ್ತು ಶಿಕಾರಿಪುರ ಬ್ರಾಡ್‌ಗೇಜ್ ಯೋಜನೆಗೆ ಸಂಬಂಧಿಸಿದಂತೆ ಇಲ್ಲಿಗೆ ಕರ್ನಾಟಕ ನಗರ ನೀರು ಮಂಡಳಿ ವತಿಯಿಂದ ನೀರು ಸರಬರಾಜು ಮಾಡಲು ಕ್ರಮ ವಹಿಸುವಂತೆ ತಿಳಿಸಿದರು. ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ: 2024–25ನೇ ಸಾಲಿನ ಸಂಸತ್ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ,ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ ಮಾಡಿ, ವಿಕಲಚೇತನರು ಸ್ವಾವಲಂಬಿಗಳಾಗಿ, ಆತ್ಮಗೌರವದೊಂದಿಗೆ ಬದುಕು ಕಟ್ಟಿಕೊಳ್ಳಲು ಚಲನೆಯ ಸ್ವಾತಂತ್ರ‍್ಯ ಅತ್ಯಂತ ಅವಶ್ಯಕ. ಈ ದ್ವಿಚಕ್ರವಾಹನಗಳು ಅವರ ಶಿಕ್ಷಣ, ಉದ್ಯೋಗ ಹಾಗೂ ದಿನನಿತ್ಯದ ಜೀವನವನ್ನು ಸುಲಭಗೊಳಿಸಿ, ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು.

ಜಿಲ್ಲೆಯಲ್ಲಿ ಚಡ್ಡಿ ಗ್ಯಾಂಗ್ ಸೇರಿದಂತೆ ಕಳ್ಳತನ ಹೆಚ್ಚಾಗಿದ್ದು, ಶೇ.10 ರಿಂದ 12 ಮಾತ್ರ ರಿಕವರಿ ಆಗುತ್ತಿದೆ. ಹಾಗೂ ಜಿಲ್ಲೆಯಲ್ಲಿ ಗಾಂಜಾ, ಓಸಿ, ಮಟ್ಕಾ, ಗ್ರಾಮಗಳಲ್ಲಿ ಸೆಕೆಂಡ್ಸ್ ಮದ್ಯ ಮಾರಾಟ ಹೆಚ್ಚಿದ್ದು, ಇದನ್ನು ನಿಯಂತ್ರಿಸಲು ಮತ್ತು ತಡೆಯಲು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿ.ವೈ.ರಾಘವೇಂದ್ರ ಹೇಳಿದರು.

ಸಭೆಯಲ್ಲಿ ದಿಶಾ ಸಮಿತಿ ಸದಸ್ಯರಾದ ದೇವೇಂದ್ರಪ್ಪ, ಮಹಾದೇವಪ್ಪ, ಸುವರ್ಣ, ಗುರುಮೂರ್ತಿ, ಗಿರೀಶ್ ಭದ್ರಾಪುರ, ಆನಂದ್ , ನಗರಸಭೆ, ಪಟ್ಟಣ ಪಂಚಾಯತ್ ಮತ್ತು ಗ್ರಾ ಪಂ ಅಧ್ಯಕ್ಷರು, ಸದಸ್ಯರು, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ.ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ವಸತಿ ಶಾಲೆಯ 14 ಮಕ್ಕಳಲ್ಲಿ ಒಟ್ಟಿಗೆ ಕೆಮ್ಮು ಆಸ್ಪತ್ರೆಗೆ ದಾಖಲು

0

ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಮಕ್ಕಳಲ್ಲಿ ಒಟ್ಟಿಗೆ ಕೆಮ್ಮು ಕಾಣಿಸಿಕೊಂಡಿದೆ.

ಕಳೆದ 3 ದಿನಗಳಿಂದ 14 ಮಕ್ಕಳು ನಿರಂತರ ಕೆಮ್ಮುತ್ತಿದ್ದ ಹಿನ್ನೆಲೆ ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಗೆ ಜಿಲ್ಲಾಧಿಕಾರಿ, ಜಿ.ಪಂ. ಸಿ.ಇ.ಓ., ಟಿ ಹೆಚ್ ಓ, ಆರೋಗ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

0

ಶಿವಮೊಗ್ಗ ಭದ್ರಾವತಿ ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ವಾಂತಿ ಬೇದಿಯಾಗಿ , ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಊಟ ಆದ ಮೇಲೆ ನೀಡಿದ ರಕ್ತ ಅಭಿವೃದ್ಧಿಗೆ ನೀಡುವ ಟಾನಿಕ್ ನಿಂದ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಸರ್ಕಾರಿ ಆದೇಶದ ಹಿನ್ನಲೆಯಲ್ಲಿ ಟಾನಿಕ್ ನೀಡಿದ ಮೇಲೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಪತ್ರಿಕಾ ವಿತರಕರ ಒಕ್ಕೂಟದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಚಲನ ಚಿತ್ರನಟ ಸೂರಜ್

0

ಕುಂಭಾಶಿ ಕ್ರಿಯೇಷನ್ ಲಾಂಛನದಲ್ಲಿ ಮೂಡಿ ಬರುತ್ತಿರುವ “ಪ್ರಣಯ “” ಕನ್ನಡ ಚಲನಚಿತ್ರದ ನಟ ಸೂರಜ್ ರವರು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕದ ತಾಲೂಕು ಮಟ್ಟದ ವಿತರಕರ ಕ್ಯಾಲೆಂಡರನ್ನು ವಿಶೇಷ ಪೂಜೆ ವಿಧಿ ವಿಧಾನದೊಂದಿಗೆ ಕ್ಷೇತ್ರ ದೇವತೆ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದ ದೇವರ ಸನ್ನಿಧಿಯಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿತರಕ ಹಿರಿಯ ಪತ್ರಕರ್ತ ಜಿಕೆ ಹೆಬ್ಬಾರ್ ಮಾತನಾಡಿ ಪತ್ರಕರ್ತರು ಹಾಗೂ ವಿತರಕರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಸಂಪಾದಕರು ಬಂಡವಾಳ ಹಾಕಿ ಶ್ರಮಿಸಿದರೆ ವರದಿಗಾರರು ಮುಂದಿನ ಸವಾಲುಗಳನ್ನು ಎದುರಿಸಿ ಸುದ್ದಿಗಳನ್ನು ತರುತ್ತಾರೆ. ಸಿಬ್ಬಂದಿಗಳು ಅದನ್ನು ಮುದ್ರಿಸಿ ಓದುಗರ ಮನ ಮುಟ್ಟಿಸಲು ಪ್ರಯತ್ನ ಪಡುತ್ತಾರೆ ಆದರೆ ವಿತರಕರು ಚಳಿ ಗಾಳಿ ಬಿಸಿಲು ಎನ್ನದೆ ಬೆಳಿಗ್ಗೆ ನಸುಕಿನಲ್ಲಿ ಎದ್ದು ಇವರೆಲ್ಲರ ಶ್ರಮದ ಫಲವನ್ನು ಮನೆ ಮನೆಗೆ ತಲುಪಿಸುವ ಪ್ರಾಮಾಣಿಕ ಸೇವೆಯನ್ನು ಸಲ್ಲಿಸುತ್ತಿರುತ್ತಾರೆ ಇವರ ಈ ಉತ್ತಮ ಸೇವೆ ಪತ್ರಿಕೆ ಅಭಿವೃದ್ಧಿಗೆ ಪೂರಕ ಹಾಗಾಗಿ ವರದಿಗಾರರು ಹಾಗು ವಿತರಕರು ಒಂದೇ ನಾಣ್ಯದ ಎರಡು ಮುಖಗಳಂತೆ ಕಾರ್ಯನಿರ್ವಹಿಸುತ್ತಾರೆ ಎಂದು ಹಿರಿಯ ಪತ್ರಕರ್ತ ಜಿಕೆ ಹೆಬ್ಬಾರ್ ಅಭಿಪ್ರಾಯೆಸಿದರು. ಸರ್ಕಾರ ವಿತರಕರ ಗೋಳನ್ನ ಅರಿತು ಅವರಿಗೆ ಸೇವಾ ಭದ್ರತೆ ಆರೋಗ್ಯ ವಿಮೆಯಂತಹ ಸೌಲಭ್ಯಗಳನ್ನು ನೀಡುವುದು ಸೂಕ್ತ ಪತ್ರಿಕೆ ಅಭಿವೃದ್ಧಿಗೆ ವಿತರಕನ ಶ್ರಮ ಅನನ್ಯ ಹಾಗಾಗಿ ವಿತರಕರಿಗೆ ಯಾವುದೇ ಸರ್ಕಾರ ಬಂದರೂ ಆರ್ಥಿಕ ಭದ್ರತೆಯ ಯೋಜನೆಗಳನ್ನು ನೀಡಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿದರು. ಹಿರಿಯ ಅರ್ಚಕರಾದ ಪಾಂಡುರಂಗ ಹಾಗೂ ಹಿಮಾಲಯ ರವರು ಇತರರು ಉಪಸ್ಥಿತರಿದ್ದು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಸಂಭ್ರಮಿಸಿದರು

ಸಂಪೂರ್ಣ ಸುಟ್ಟು ಭಸ್ಮವಾದ ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್

0

ಶಿವಮೊಗ್ಗ ಹಾಗೂ ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ ಘಟನೆ ನಡೆದಿದೆ.

ಶ್ರೀ ಅನ್ನಪೂರ್ಣೇಶ್ವರಿ ಎಂಬ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರಸಾಳು ಹಾಗೂ ಸುಡೂರು ಗ್ರಾಮಗಳ ಮಧ್ಯೆ ನಡೆದ ಈ ಘಟನೆ ಸಂಭವಿಸಿದೆ.

ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಸ್ಲೀಪರ್ ಬಸ್ ಇದಾಗಿದ್ದು,
ಚಾಲಕ ಸೇರಿದಂತೆ 40 ಜನ ಪ್ರಯಾಣಿಸುತಿದ್ದರು ಎನ್ನಲಾಗಿದೆ.

ಘಟನೆಯಲ್ಲಿ ಎಂಟು ಜನರಿಗೆ ಗಾಯಯಳಾಗಿವೆ.ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾದ ನಂತರ ಚಾಲಕ ಬಸ್ ನಿಲ್ಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ, ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಫೆಬ್ರವರಿ 01 ರಂದು ಶಿವಮೊಗ್ಗದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ

0

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಡಿವಾಳ ಸಮಾಜ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಆಯೋಜಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಮಹಾನಗರಪಾಲಿಕೆ ಮಹಾಪೌರರು, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದ ನಾಮ ನಿರ್ದೇಶಕರು,ಜಿಲ್ಲಾ ಮಡಿವಾಳ ಸಮಾಜದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆ ಮುಖಂಡರು, ಪದಾಧಿಕಾರಿಗಳು ಪಾಲ್ಗೊಳ್ಳುವರು.
ಈ ಕಾರ್ಯಕ್ರಮದಲ್ಲಿ ಸಾಗರ ತಾಲೂಕು, ತ್ಯಾಗರ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಳೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ನಾಗರಾಜ ಎ.ಎಂ.ರವರು ವಿಶೇಷ ಉಪನ್ಯಾಸ ನೀಡುವರು.

ಜ.27 ರಂದು ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದಿಂದ ವಿಶೇಷ ನೃತ್ಯ ಕಾರ್ಯಕ್ರಮ

0

ಜ. 27 ರ ನಾಳೆ ಸಂಜೆ 5:30ಕ್ಕೆ ಶಿವಮೊಗ್ಗದ ಹೆಸರಾಂತ ಭರತನಾಟ್ಯ ಶಾಲೆಯಾದ ನಟನಂ ಬಾಲ ನಾಟ್ಯ ಕೇಂದ್ರದ ನರ್ತನಾಂಕುರ – ೧ ಎಂಬ ಭರತನಾಟ್ಯ, ಜಾನಪದ ಹಾಗೂ ಫ್ಯೂಶನ್ ನೃತ್ಯದ ಕಾರ್ಯಕ್ರಮವನ್ನು ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಎಸ್ ಕೇಶವಕುಮಾರ್ ಪಿಳ್ಳೈ ಹಾಗೂ ವಿದ್ವಾನ್ ಚೇತನ್ ಎಸ್, ಸಿ ವಿದುಷಿ ನಾಟ್ಯಶ್ರೀ ಚೇತನ್ ಇವರು ಪ್ರಸ್ತುತಪಡಿಸಲಿದ್ದಾರೆ.
ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಮಹಾಕಾಳಿ ಸ್ತುತಿ, ಈಜಿಪ್ಟಿಯನ್ ವಿನ್ ಡ್ಯಾನ್ಸ್ ಮತ್ತು ಜಪಾನ್ ಫ್ಯಾನ್ ಡ್ಯಾನ್ಸ್ ಅಭಿನಯಿಸುತ್ತಿದ್ದಾರೆ.
ಶಿವಮೊಗ್ಗದ ನಮ್ಮ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಹೊಳೆ ಹೊನ್ನೂರಿನ ಹೊಸ ಶಾಖೆಯ 40 ವಿದ್ಯಾರ್ಥಿಗಳು ಸೇರಿ ಒಟ್ಟು 95 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ನರ್ತಿಸಲಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್ ಶೇಖರ್ ಅವರು ವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಎಸ್ ಕೇಶವ್ ಕುಮಾರ್ ಪಿಳ್ಳೈ ಅವರು ಕೋರಿದ್ದಾರೆ.

Chamber of Commerce Shivamogga ಆತ್ಮ ನಿರ್ಭರ ಕಾರ್ಯಕ್ರಮಗಳಿಂದ ವಿಕಸಿತ ಭಾರತದೆಡೆಗೆ ಸದೃಢ ಹೆಜ್ಜೆ: ಬಿ.ಗೋಪಿನಾಥ್

0

Chamber of Commerce Shivamogga ಭಾರತವು ಡಿಜಿಟಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, ಆತ್ಮ ನಿರ್ಭರ ಕಾರ್ಯಕ್ರಮಗಳಿಂದ ವಿಕಸಿತ ಭಾರತ ಆಗುತ್ತಿದ್ದು, ಮೂರನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗುವತ್ತ ಮುನ್ನುಗುತ್ತಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆವರಣದಲ್ಲಿ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಉತ್ತಮ ಸಂವಿಧಾನ ಭಾರತ ದೇಶದಲ್ಲಿ ರಚನೆಯಾಗಿದ್ದು, ಈ ದಿನ ಭಾರತದ ಸಾರ್ವಭೌಮತ್ವ ಮತ್ತು ಪ್ರಜಾಪ್ರಭುತ್ವ ಆಡಳಿತವನ್ನು ಆಚರಿಸುತ್ತದೆ. ವೈವಿಧ್ಯತೆಯಲ್ಲಿ ಏಕತೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮತ್ತಷ್ಟು ಎತ್ತಿ ತೋರಿಸುತ್ತದೆ. ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ‍್ಯದ ತತ್ವಗಳನ್ನು ಬಲಪಡಿಸುವ ದಿನವಾಗಿದೆ ಎಂದು ತಿಳಿಸಿದರು.

ಸಂಘದ ಮಾಜಿ ಅಧ್ಯಕ್ಷ ಕೆ.ವಿ.ವಸಂತ್‌ಕುಮಾರ್ ಮಾತನಾಡಿ, ದೇಶದ ಐಕ್ಯತೆ, ಏಕತೆ ಮತ್ತು ಅಖಂಡತೆ ಬಗ್ಗೆ, ದೇಶದ ಅಭಿವೃದ್ದಿಯಲ್ಲಿ ನಮ್ಮ ಜವಾಬ್ದಾರಿ ಕರ್ತವ್ಯಗಳನ್ನು ನಿರ್ವಹಿಸುವ ಬಗ್ಗೆ ಜನತೆಯ ಸಹಕಾರದ ಪ್ರಾಮುಖ್ಯತೆ ತಿಳಿಸಿದರು.

ಸಂಘದ ಮಾಜಿ ಅಧ್ಯಕ್ಷ ಜೆ.ಆರ್.ವಾಸುದೇವ ಮಾತನಾಡಿ, ದೇಶದಲ್ಲಿ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ಹೆಚ್ಚಿನ ಸಾಧನೆ ಮಾಡುತ್ತಿದೆ. ಪ್ರಜೆಗಳಾದ ನಾವು ಸಂವಿಧಾನದ ಹಕ್ಕು, ಜವಾಬ್ದಾರಿಯನ್ನು ಅರಿಯುವಲ್ಲಿ ನಾವು ತುಂಬಾ ಹಿಂದಿದ್ದೇವೆ. ದೇಶದ ಅಭಿವೃದ್ಧಿಯಲ್ಲಿ ಮುಂದಿನ ಪೀಳಿಗೆಗೆ ತಿಳಿಹೇಳುವ ಜವಾಬ್ದಾರಿ ನಮ್ಮ ಮೇಲಿದೆ. ಯುವಜನರನ್ನು ದೇಶಭಿಮಾನದ ಕಡೆ ಸೆಳೆಯುವ ಪ್ರಯತ್ನವಾಗಬೇಕಿದೆ ಎಂದರು.

Chamber of Commerce Shivamogga ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ಮಾಜಿ ಅಧ್ಯಕ್ಷ ಕೆ.ವಿ.ವಸಂತ್‌ಕುಮಾರ್, ಟಿ.ಆರ್.ಆಶ್ವಥ್‌ನಾರಾಯಣ ಶೆಟ್ಟಿ, ಜೆ.ಆರ್.ವಾಸುದೇವ, ಡಿ.ಎಸ್.ನಟರಾಜ್, ನಿರ್ದೇಶಕರಾದ ಎಸ್.ಎಸ್.ಉದಯಕುಮಾರ್, ಪಿ.ರುದ್ರೇಶ್, ಪ್ರದೀಪ್ ವಿ.ಎಲಿ, ಗಣೇಶ ಎಂ.ಅಂಗಡಿ, ವಿನೋದ್‌ಕುಮಾರ್ ಜೈನ್, ಕೆ.ಎನ್.ರಾಜಶೇಖರ್, ಬಿ.ಸುರೇಶ್ ಕುಮಾರ್, ಸಂಯೋಜಿತ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಉಮೇಶ್ ಶಾಸ್ತ್ರಿ, ಪ್ರಶಾಂತ್ ಶಾಸ್ತ್ರಿ, ಎಂ.ಸಿ.ದೇವರಾಜ್, ಶಿವರಾಜ್ ಉಡುಗಣಿ, ಚಂದ್ರಶೇಖರ್ ಉಪಸ್ಥಿತರಿದ್ದರು.

Bharat Scouts and Guides ವಿಶ್ವದ ಎಲ್ಲ ರಾಷ್ಟ್ರಗಳಿಗೂ ಮಾದರಿ ನಮ್ಮ ಸಂವಿಧಾನ : ಶಕುಂತಲಾ ಚಂದ್ರಶೇಖರ್

0

Bharat Scouts and Guides ಭಾರತದ ಸಂವಿಧಾನ ಎಲ್ಲ ರಾಷ್ಟ್ರಗಳಿಗೂ ಮಾದರಿಯಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಹೇಳಿದರು.

ನಗರದ ಸ್ಕೌಟ್ಸ್ ಭವನದ ಆವರಣದಲ್ಲಿ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸಂವಿಧಾನದ ಆಶಯದಂತೆ ನಾವೆಲ್ಲರೂ ನಡೆದುಕೊಳ್ಳಬೇಕು. ನಮ್ಮ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಇಂದಿಗೂ ಸಹ ತುಂಬಾ ಪ್ರಸ್ತುತವಾಗಿದೆ. ನಮ್ಮ ದೇಶಕ್ಕಾಗಿ ದುಡಿದ ಮಹನೀಯರನ್ನು ಸದಾ ಸ್ಮರಿಸಬೇಕು ಎಂದು ತಿಳಿಸಿದರು.

ಆಯುಕ್ತ ಕೆ.ರವಿ ಮಾತನಾಡಿ, ಮಕ್ಕಳಲ್ಲಿ ರಾಷ್ಟ್ರ ಪ್ರೇಮ ಹಾಗೂ ಇತಿಹಾಸದ ಬಗ್ಗೆ ಅರಿವು ಮೂಡಿಸುವ ಅಗತ್ಯತೆ ಇದೆ. ನಮ್ಮ ರಾಷ್ಟ್ರ ಸುವ್ಯವಸ್ಥಿತವಾಗಿ ಆಡಳಿತ ನಡೆಯುತ್ತಿದೆ. ಇದಕ್ಕೆ ನಮ್ಮ ದೇಶದ ಸಂವಿಧಾನವೇ ಕಾರಣ. ಎಲ್ಲರೂ ಸಂವಿಧಾನವನ್ನು ಗೌರವಿಸೋಣ ಎಂದು ತಿಳಿಸಿದರು.

Bharat Scouts and Guides ಸಮಾರಂಭದಲ್ಲಿ ಮಕ್ಕಳಿಂದ ಪೆರೇಡ್ ಹಾಗೂ ಕವಾಯತು ನಡೆಯಿತು. ಸಮಾರಂಭದಲ್ಲಿ ಸ್ಕೌಟ್ಸ್ ಆಯುಕ್ತ ಎಸ್.ಜಿ.ಆನಂದ್, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಗೈಡ್ ಆಯುಕ್ತೆ ಲಕ್ಷ್ಮೀ ಕೆ.ರವಿ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ, ಜಂಟಿ ಕಾರ್ಯದರ್ಶಿ ವೈ.ಆರ್.ವೀರೇಶಪ್ಪ, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ರಾಜೇಶ್ ಅವಲಕ್ಕಿ, ದೊರೆ, ಚೇತನ್ ರಾಯನಹಳ್ಳಿ, ಪರಮೇಶ್ವರ್, ಚುಡಾಮಣಿ ಪವಾರ್, ರುದ್ರಪ್ಪ ಚೀಲೂರ್, ಚಂದ್ರಶೇಖರ್, ಕೃಷ್ಣಸ್ವಾಮಿ, ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಿಕಾರಿಪುರದಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ

0

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸವಿ ನೆನಪಿಗಾಗಿ ಮೂರನೇ ಬಾರಿಗೆ ರಾಷ್ಟ್ರ ಮಟ್ಟದ 25 ಜೋಡಿ ಕುಸ್ತಿ ಪಂದ್ಯಾವಳಿಗಳನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಶ್ರೀಕಾಂತ್ ರವರು ಉದ್ಘಾಟಿಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು

ಈ ಕುಸ್ತಿ ಪಂದ್ಯಾವಳಿಗೆ ಹಲವು ರಾಜ್ಯಗಳಿಂದ ಹೆಸರಾಂತ ಪೈಲ್ವಾನ್ ಗಳು ಕುಸ್ತಿ ಪಂದ್ಯಾವಳಿಗೆ ಭಾಗವಹಿಸಿದ್ದರು ಇದರ ಅಧ್ಯಕ್ಷತೆಯನ್ನು ಸಂದೀಪ್ ರವರು ವಹಿಸಿದರು

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾದ ಗೋಣಿ ಮಾಲ್ತೇಶ್ ರವರು, ಕಾಂಗ್ರೆಸ್ ಯುವ ಮುಖಂಡರಾದ ವಿನಯ್ ತಾಂಡ್ಲೆ, ಗ್ಯಾರೆಂಟಿ ಯೋಜನೆ ಸದ್ಯಸರದ ಬಸವ,ಕರ್ಕುಚಿ ಲೋಕೇಶ್,ಪುರಲೆ ಮಂಜು,ಮೋಹನ್, ಹಾಗು ಶಿಕಾರಿಪುರದ ಹಲವು ನಾಯಕರು ಮುಖಂಡರುಗಳು ಭಾಗಿಯಾಗಿದ್ದರು.