Kuvempu University ಗ್ರಾಮೀಣ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ಸೇವಾ ಮನೋಭಾವವನ್ನು ಬೆಳೆಸುವಲ್ಲಿ ಮಹತ್ತರ ಪಾತ್ರವಹಿಸುತ್ತವೆ ಎಂದು ಕೋಮಾರನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಮಾಧುರಾವ್ ಹೇಳಿದರು.
ಅವರು ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಮಂಗಳವಾರ ಕೋಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಕಾಚಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾದ “ಸಮಾಜಕಾರ್ಯ ಗ್ರಾಮೀಣ ಶಿಬಿರ- 2026 ”ರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕೈಗೊಂಡ ಸ್ವಚ್ಛತಾ ಕಾರ್ಯ, ಆರೋಗ್ಯ ಶಿಬಿರ ಹಾಗೂ ಜನಜಾಗೃತಿ ಕಾರ್ಯಕ್ರಮಗಳು ಗ್ರಾಮಾಭಿವೃದ್ಧಿಗೆ ಸಹಕಾರಿ ಆಗಿದ್ದು, ಇಂತಹ ಶಿಬಿರಗಳು ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು ವಿದ್ಯಾರ್ಥಿಗಳು ನಡೆಸಿದ ಸೇವಾ ಕಾರ್ಯಗಳನ್ನು ಪ್ರಶಂಸಿಸಿದರು. ಶಿಬಿರದ ಅವಧಿಯಲ್ಲಿ ಕೈಗೊಂಡ ಸ್ವಚ್ಛತಾ ಅಭಿಯಾನ, ಆರೋಗ್ಯ ಶಿಬಿರ, ಜನಜಾಗೃತಿ ಕಾರ್ಯಕ್ರಮಗಳು ಹಾಗೂ ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ಮೆಚ್ಚಿ, ಪ್ರಶಿಕ್ಷಣಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲೆಂದು ಹಾರೈಸಿದರು.
Kuvempu University ಮುಖ್ಯ ಅತಿಥಿಗಳಾಗಿ ಗ್ರಾಮದ ಮುಖಂಡರಾದ ಮಂಜುನಾಥ್, ಸವಿತಾ, ರವಿಕುಮಾರ್, ಸಾಕಮ್ಮ ಹಾಗೂ ಆನಂದರಾವ್ ಉಪಸ್ಥಿತರಿದ್ದು, ಶಿಬಿರದ ಯಶಸ್ಸಿಗೆ ವಿದ್ಯಾರ್ಥಿಗಳ ಪರಿಶ್ರಮವನ್ನು ಶ್ಲಾಘಿಸಿದರು.
ಸಂದರ್ಭದಲ್ಲಿ ಕೋಮಾರನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಸಿಬ್ಬಂದಿ ವರ್ಗದವರು, ರಂಗಸ್ವಾಮಿ, ಸಮಾಜಕಾರ್ಯ ವಿಭಾಗದ ಉಪನ್ಯಾಸಕರು, ಪ್ರಶಿಕ್ಷಣಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
Kuvempu University ಗ್ರಾಮೀಣ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆ ಬೆಳೆಸುತ್ತವೆ: ಮಾಧುರಾವ್
Government Industrial Training Institute ತೀರ್ಥಹಳ್ಳಿ ಐಟಿಐ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
Government Industrial Training Institute ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು 2026ನೇ ಶೈಕ್ಷಣಿಕ ಸಾಲಿನ ಐಟಿಐ ತರಬೇತಿಗಾಗಿ ಆಸಕ್ತ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕಾನಿಕ್, ಐಸಿಟಿಎಸ್ಎಮ್, ಡ್ರೇಸ್ ಮೇಕಿಂಗ್, ಮೆಕಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಅಡ್ವಾನ್ಸ್ ಸಿಎನ್ಸಿ ಟೆಕ್ನಿಷಿಯನ್, ಮ್ಯಾನುಫಾಕ್ಚರಿಂಗ್ ಫ್ರೋಸಸ್ ಕಂಟ್ರೋಲ್ & ಆಟೋಮೆಸಿನ್, ಇಂಡಸ್ಟ್ರೀಯಲ್ ರೋಬೋಟಿಕ್ಸ್ ಅಂಡ್ ಡಿಜಿಟಲ್ ಮ್ಯಾನುಫಾಕ್ಚರಿಂಗ್, ಬೇಸಿಕ್ ಡಿಸೈನ್ ಅಂಡ್ ವರ್ಚ್ಯುವಲ್ ವೆರಿಫೈಯರ್, ಆರ್ಟೀಸಾನ್ ಯೂಸಿಂಗ್ ಅಡ್ವಾನ್ಸ್ ಟೂಲ್ಸ್ ಮತ್ತು ಅಲ್ಪಾವಧಿ ತರಬೇತಿಗಳಾದ ಎಲೆಕ್ಟ್ರಿಕ್ ಬ್ಯಾಟರಿ ವೆಹಿಕಲ್, ಅಡ್ವಾನ್ಸ್ ಪೈಂಟಿಂಗ್ ಟೆಕ್ನಾಲಜಿ, ಅಡ್ವಾನ್ಸ್ ಪ್ಲಂಬಿಂಗ್ ಟೆಕ್ನೀಷಿಯನ್ಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು www.cite.karnataka.gov.in ಆನ್ಲೈನ್ನಲ್ಲಿ ಮೇ 08 ರೊಳಗಾಗಿ ಅರ್ಜಿ ಸಲ್ಲಿಸಬಹುದೆಂದು ತೀರ್ಥಹಳ್ಳಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9880005425/ 9890350198/ 9945823291/ 9980626062/ 8310069017/8277494105 ಗಳನ್ನು ಸಂಪರ್ಕಿಸುವುದು.
Madhu Bangarappa ಹುಲಿಕಲ್ ಘಾಟ್ ಕುಸಿತ ಪ್ರಕರಣ: ಸಮಗ್ರ ವಿವರ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಮಧು ಬಂಗಾರಪ್ಪ
Madhu Bangarappa ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ ತಾಲೂಕಿನ ವ್ಯಾಪ್ತಿಯ ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು, ತಪ್ಪಿತಸ್ಥರ ವಿರುದ್ದ ಕಾನೂನಾತ್ಮಕ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.
ಅವರು ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ, ಕಾಮಗಾರಿ ಮತ್ತು ಮಣ್ಣು ಕುಸಿತದ ಪ್ರದೇಶವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದ ನಂತರ ಅವರು ಮಾತನಾಡಿದರು.
ಹುಲಿಕಲ್ ರಸ್ತೆ ತಡೆಗೋಡೆ ನಿರ್ಮಾಣ ವೇಳೆ ಮಣ್ಣು ಕುಸಿತ ಅವಘಡ ಸಂಭವಿಸಿ ಮೂರು ಕಾರ್ಮಿಕರು ಮೃತಪಟ್ಟಿದ್ದು, ಸೂಕ್ತ ರೀತಿಯ ಮುನ್ನೆಚ್ಚರಿಕೆ ವಹಿಸದೆ ಕಾಮಗಾರಿ ನಡೆಸಿದ ತಪ್ಪಿತಸ್ಥ ಅಧಿಕಾರಿ, ಗುತ್ತಿಗೆದಾರರ ವಿರುದ್ದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು.
ಹಾಗೂ ಲೋಕೋಪಯೋಗಿ ಸಚಿವರೊಂದಿಗೆ , ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತುರ್ತಾಗಿ ವ್ಯವಸ್ಥಿತ ರೀತಿಯ ಕಾಮಗಾರಿ ನಡೆಸಲು ಕ್ರಮ ವಹಿಸಲಾಗುವುದು ಎಂದ ಅವರು ಈ ಭಾಗದ ಜನಸಾಮಾನ್ಯರ ಅಹವಾಲುಗಳಿಗೆ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದ್ದು, ಮುಂದೆಯೂ ಮಾಡುತ್ತೇನೆಂದು ಭರವಸೆ ನೀಡಿದರು.
ಕಾಮಗಾರಿ ವಿವರ :ಮಳೆಯಿಂದ ಭೂಕುಸಿತ ಉಂಟಾಗಿದ್ದ ಹುಲಿಕಲ್ ಘಾಟ್ ಸ್ಥಳದಲ್ಲಿ ಶಾಶ್ವತ ಪರಿಹಾರಕ್ಕಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ.
ಮೊದಲ ಹಂತದಲ್ಲಿ ರೂ.435 ಲಕ್ಷಗಳ ಅನುದಾನದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
Madhu Bangarappa ಸುಮಾರು 80 ಮೀಟರ್ ಉದ್ದದ ಆರ್.ಸಿ.ಸಿ. ತಡೆಗೋಡೆಯನ್ನು ಇಲಾಖೆಯ ತಾಂತ್ರಿಕ ವಿನ್ಯಾಸದಂತೆ ನಿರ್ಮಿಸಲಾಗುತ್ತಿದೆ.
ಡಿಸೆಂಬರ್ ಮಾಹೆಯಲ್ಲಿ ಕಾಮಗಾರಿ ಆರಂಭವಾಗಿದ್ದು, ಈಗಾಗಲೇ 60 ಮೀಟರ್ ಉದ್ದದ ಭಾಗದಲ್ಲಿ ಹಳೆಯ ಮಣ್ಣನ್ನು ತೆರವುಗೊಳಿಸಿ, ಅಡಿಪಾಯದೊಂದಿಗೆ ಸುಮಾರು 6 ಮೀಟರ್ ಎತ್ತರದವರೆಗೆ ಗೋಡೆ ನಿರ್ಮಿಸಲಾಗಿದೆ.
ಹೊಸನಗರ ತಾಲೂಕಿನ ತೀರ್ಥಹಳ್ಳಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 52ರ ಸರಪಳಿ 38.00 ಕಿ.ಮೀ ನಿಂದ 43.58 ಕಿ.ಮೀ ವರೆಗಿನ ಸುಮಾರು 5.58 ಕಿ.ಮೀ ಉದ್ದದ ರಸ್ತೆ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಬರಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ.
ಹೇರ್ ಪಿನ್ ತಿರುವುಗಳ ಸುಧಾರಣೆ: ರಸ್ತೆಯ ಸರಪಳಿ 42.05 ಕಿ.ಮೀ ನಿಂದ 42.25 ಕಿ.ಮೀ ವರೆಗಿನ ಭಾಗವು ಪ್ರಸ್ತುತ ಅತ್ಯಂತ ಕಿರಿದಾದ ಹೇರ್ ಪಿನ್ ತಿರುವುಗಳಿಂದ ಕೂಡಿದ್ದು, ಈ ಭಾಗದ ಸುಧಾರಣೆಗೂ ಆದ್ಯತೆ ನೀಡಲಾಗಿದೆ ಎಂದರು.
ಇದೇ ವೇಳೆ ಸಾರ್ವಜನಿಕರು ಮಾತನಾಡಿ, ಹುಲಿಕಲ್ ಘಾಟ್ ರಸ್ತೆ ಮೂಲಕ ಸುಗಮ ಸಂಚಾರಕ್ಕೆ ವ್ಯವಸ್ಥಿತ ಯೋಜನೆ ರೂಪಿಸಿ, ಅನುದಾನ ನಿಗದಿಗೊಳಿಸಿ ಶಾಶ್ವತ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.
ಈ ವೇಳೆ ಎಂಎಡಿಬಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ, ಪಿಡಬ್ಲ್ಯುಡಿ ಅಧೀಕ್ಷಕ ಅಭಿಯಂತರರಾದ ಗಣೇಶ್ , ಇತರೆ ಅಧಿಕಾರಿಗಳು , ಸ್ಥಳೀಯರು ಹಾಜರಿದ್ದರು.
ಹಳೆಯ ನೆನಪು ನೋಡಿದರೆ ವಿದ್ಯಾರ್ಥಿಜೀವನ ಬಂಗಾರದ ಜೀವನ ಎಂಬುದು ಅರ್ಥವಾಗುತ್ತದೆ- ಪ್ರಾಂಶುಪಾಲ ವಿಜಯ ಕುಮಾರ್
ಸ್ನೇಹ ಮಿಲನದಂತಹ ಕಾರ್ಯಕ್ರಮಗಳು ಮನುಷ್ಯರ ಭಾವನೆಗಳನ್ನು ಬಾಂಧವ್ಯಗಳನ್ನು ಜೀವಂತವಾಗಿಟ್ಟುಕೊಳ್ಳುವಲ್ಲಿ ಸಹಾಯಕವಾಗುತ್ತದೆ ಎಂದು ಪ್ರಾಂಶುಪಾಲ ವಿಜಯ್ಕುಮಾರ್ ಹೇಳಿದರು.
ಅವರು ಕಂಟ್ರಿಕ್ಲಬ್ನಲ್ಲಿ ಆಯೋಜಿಸಿದ್ದ 2009 ಮತ್ತು 2010 ನೇ ಸಾಲಿನ ಬಿ.ಎಡ್ ವಿದ್ಯಾರ್ಥಿಗಳ ಗುರುವಂದನಾ ಮತ್ತು ಸ್ನೇಹಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸ್ನೇಹಮಿಲನ ಕಾರ್ಯಕ್ರಮಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಇದು ಸ್ವಾಗತಾರ್ಹಕೂಡ. ಯಾವುದೋ ತರಗತಿಗಳಲ್ಲಿ ನಾವೆಲ್ಲ ಒಟ್ಟಾಗಿ ಓದಿರುತ್ತೇವೆ. ಕಲಿತು ನಕ್ಕು, ನಲಿದಿರುತ್ತೇವೆ. ನಂತರ ನಮ್ಮ ನಮ್ಮ ಜೀವನದ ದಾರಿಗಳನ್ನು ನಾವು ಹುಡುಕಿಕೊಳ್ಳುತ್ತೇವೆ. ಆದರೆ ನಮ್ಮ ಹಳೇಯ ನೆನಪುಗಳನ್ನು ನೋಡುತ್ತಾ ಹೋದರೆ ವಿದ್ಯಾರ್ಥಿ ಜೀವನ ಬಂಗಾರದ ಜೀವನ ಎಂಬುದು ನಮಗೆ ಅರ್ಥವಾಗುತ್ತದೆ. ಈಗಾಗಲೇ ಬದುಕಿನ ಬಹುಭಾಗವನ್ನು ಕಳೆದಿರುವ ನಮಗೆ ನಮ್ಮ ಬಾಲ್ಯದ ನೆನಪುಗಳು ಮರಳಿ ಬಂದು ನಮ್ಮ ವಯಸ್ಸು ಚಿಕ್ಕದಾಗುತ್ತದೆ. ಇದೊಂದು ಸುಂದರ ಕಾರ್ಯಕ್ರಮ. ಆದರೆ ಜೊತೆಗೆ ಓದಿದ ಸಹಪಾಠಿಗಳನ್ನು ಸೇರಿಸುವುದೇ ಒಂದು ಬಹುದೊಡ್ಡ ಕೆಲಸ ಎಂದರು.
ರುದ್ರಮ್ಮ ಮಾತನಾಡಿ, ಹಳೇಯ ನೆನಪುಗಳು ಹೊಸ ನೆನಪುಗಳನ್ನು ನೀಡಿ ಮನಸ್ಸನ್ನು ಮುದಗೊಳಿಸುತ್ತದೆ. ವಯಸ್ಸು ಜಾಸ್ತಿ ಆಯಿತು, ಮಕ್ಕಳಾದವು, ಕೂದಲು ಬೆಳ್ಳಗಾಯಿತು, ಜವಾಬ್ದಾರಿ ಜಾಸ್ತಿಯಾಯಿತು ಎಂದುಕೊಳ್ಳುತ್ತಿರುವಾಗಲೇ ಕಾಲೇಜಿನಲ್ಲಿ ಹಾಜರಿ ಹಾಕಿದಾಗ ಬಂದಿದ್ದೇನೆ ಗುರುಗಳೇ ಎನ್ನುವ ಸಂಭ್ರಮ ನೆನಪಾಗಿ ಈ ಸ್ನೇಹದ ಹೂ ಎಂದೂ ಬಾಡಲ್ಲ ಎನಿಸುತ್ತದೆ ಎಂದರು.
ನಾವೆಲ್ಲಾ 2009-2010ರ ಬಿ.ಎಡ್.ನಲ್ಲಿ ಓದುತ್ತಿರುವ ಹಳೇಯ ವಿದ್ಯಾರ್ಥಿಗಳು ಆಗ ಮೊಗ್ಗಾಗಿ ಶಾಲೆಗೆ ಬಂದಿದ್ದೆವು ಈಗ ಹೂವಾಗಿ ಅರಳಿದ್ದೇವೆ. ಮತ್ತೆ ಒಂದೆಡೆ ಸೇರಿ ಕಂಪು ಸೂಸಿಸುತ್ತಿದ್ದೇವೆ. ಯಾರೋ ಟೀಚರ್ ಆಗಿದ್ದಾರೆ, ಮತ್ಯಾರೋ ರೈತರಾಗಿದ್ದಾರೆ, ರಾಜಕಾರಣಿಗಳಾಗಿದ್ದಾರೆ, ಅಫೀಸಿನಲ್ಲಿ ಕೆಲಸ ಮಾಡುತ್ತಿದ್ದಾರೆ, ಬದುಕು ನಮ್ಮನ್ನು ಎಲ್ಲೋ ಎಳೆದುಕೊಂಡು ಹೋಗಿದೆ. ಈಗ ನಾವೆಲ್ಲಾ ಒಟ್ಟಾಗಿದ್ದೇವೆ. ಈ ಸೊಗಸೇ ಚೆಂದ ಎಂದರು.
ಕಾರ್ಯಕ್ರಮದಲ್ಲಿ ಅಂದಿನ ಪ್ರಾಧ್ಯಾಪಕರುಗಳಾದ ನಂಜಾನಾಯ್ಕ್, ನಾಗರಾಜ್, ಪ್ರಶಾಂತ್, ಮೋಹನ್ ಸೇರಿದಂತೆ ಹಲವರಿದ್ದರು. ಕಾರ್ಯಕ್ರಮವನ್ನು ಆಗಿನ ವಿದ್ಯಾರ್ಥಿ ನಾಯಕರಾಗಿದ್ದ ಶೇಖರ್ ನಾಯ್ಕ (ಲಂಬು), ನಾಗೇಶ್, ಮಣಿಕಂಠ ಮುಂತಾದವರು ಭಾಗವಹಿಸಿದ್ದರು. ವಿದ್ಯಾರ್ಥಿನಿಯರು ಕುಣಿದು ಕುಪ್ಪಳಿಸಿ ನಲಿದರು. 16 ವರ್ಷದ ವಿದ್ಯಾರ್ಥಿ ಜೀವನ ನಂತರ ತಮ್ಮ ಬದುಕಿನ ಬದಲಾವಣೆಗಳ ಕುರಿತು ಪರಸ್ಪರ ಹಂಚಿಕೊಂಡರು. ಇದರ ಜೊತೆಗೆ ಅವರ ಕುಟುಂಬ ವರ್ಗದವರೂ ಸೇರಿ ಮತ್ತಷ್ಟು ಖುಷಿಗೊಂಡಿತು. ಇದೊಂದು ಜೀವಕೋಶದ ಅನುಭವವನ್ನು ಪಡೆಯಿತು.
ಪಿಯು ವಾರ್ಷಿಕ ಪರೀಕ್ಷೆ- 2 ( ಪೂರಕ ಪರೀಕ್ಷೆ) ಏಪ್ರಿಲ್ 30 ರಿಂದ ಮೇ 13 ವರೆಗೆ ನಡೆಯಲಿದೆ : ಎನ್.ಹೇಮಂತ್
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ವತಿಯಿಂದ 2026 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (ಪೂರಕ ಪರೀಕ್ಷೆ) ಏಪ್ರಿಲ್ 30 ರಿಂದ ಮೇ 13 ರವರೆಗೆ ನಡೆಯಲಿದ್ದು, ಜಿಲ್ಲಾಡಳಿತವು ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅಗತ್ಯ ಸಿದ್ದತೆ ನಡೆಸಿದೆ ಎಂದು ಜಿಲ್ಲಾಧಿಕಾರಿಗಳಾದ(ಪ್ರ) ಹೇಮಂತ್ ಎನ್ ತಿಳಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಪಿಯುಸಿ ವಾರ್ಷಿಕ ಪರೀಕ್ಷೆ 2 ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಏಪ್ರಿಲ್ 30 ರಿಂದ ಮೇ 13 ರವರೆಗೆ ಜಿಲ್ಲೆಯ 08 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ. (ಮೇ 13 ರಂದು ಮಾತ್ರ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ಮತ್ತು ಮಧ್ಯಾಹ್ನ 2:00 ರಿಂದ ಸಂಜೆ 4:15 ರವರೆಗೆ ಪರೀಕ್ಷೆ ನಡೆಯಲಿದೆ) ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ.
ಪರೀಕ್ಷಾ ಅವಧಿಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ನಿರಂತರ ವಿದ್ಯುತ್ ಪೂರೈಕೆ ಮಾಡಲು ಮೆಸ್ಕಾಂ ಇಲಾಖೆಗೆ ಸೂಚಿಸಿದರು.
ಪರೀಕ್ಷೆಗಳು ಪಾರದರ್ಶಕವಾಗಿ ನಡೆಯಲು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀ.ಫಾಸಲೆಯವರೆಗೆ ಪರೀಕ್ಷಾ ದಿನಗಳಂದು ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ ಎಂದರು.
ಮಂಡಳಿಯ ಮಾರ್ಗಸೂಚಿಯಂತೆ ಎಲ್ಲಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ ಅವರು, ಶಾಂತಿಯುತವಾಗಿ ಪರೀಕ್ಷೆಗಳನ್ನು ನಡೆಸುವ ಮೂಲಕ ಯಶಸ್ವಿಗೊಳಿಸಬೇಕೆಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಅಧಿಕಾರಿಗಳು ಹಾಜರಿದ್ದರು.
ಕೆಎಸ್ಸಿಎ ಅಕಾಡೆಮಿ ಸಮರ್ ಕ್ಯಾಂಪ್ ಉದ್ಘಾಟನೆ
ಶಿವಮೊಗ್ಗದ KSCA ನವುಲೆ ಸ್ಟೇಡಿಯಂನಲ್ಲಿ ನಡೆದ KSCA ಅಕಾಡೆಮಿ ಸಮರ್ ಕ್ಯಾಂಪ್ ಉದ್ಘಾಟನಾ ಸಮಾರಂಭ ನಡೆಯಿತು.
ಈ ಕಾರ್ಯಕ್ರಮವನ್ನು ಶ್ರೀ ನಿಖಿಲ್ ಬಿ., ಐಪಿಎಸ್, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಉದ್ಘಾಟಿಸಿದರು. ಅವರ ಗೌರವಾನ್ವಿತ ಉಪಸ್ಥಿತಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.
ಈ ಸಮಾರಂಭದಲ್ಲಿ ಶ್ರೀ ಅವಿನಾಶ್ ವೈದ್ಯ, ಶ್ರೀ ಆರ್. ಪಿ. ನಾಗರಾಜ್, ಮಾಜಿ ವಲಯ ಅಧ್ಯಕ್ಷರಾದ ಶ್ರೀ ರಾಜೇಂದ್ರ ಕಾಮತ್ ಎನ್., ಶ್ರೀ ಎಸ್. ಎಸ್. ಸುಕುಮಾರ್ ಪಟೇಲ್, ಮಾಜಿ ವಲಯ ಸಂಚಾಲಕರಾದ ಡಿ. ಆರ್ . ನಾಗರಾಜ್, ಶ್ರೀ ಸದಾನಂದ ಹೆಚ್.ಎಸ್., ಹಾಗೂ KSCA ಪದಾಧಿಕಾರಿಗಳು, ತರಬೇತುದಾರರು, ಪೋಷಕರು, ಕ್ಲಬ್ ಕಾರ್ಯದರ್ಶಿಗಳು, ಜೀವಮಾನ ಸದಸ್ಯರು, ಆಟಗಾರರು ಮತ್ತು ಕ್ರಿಕೆಟ್ ಅಭಿಮಾನಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಗಿ, ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟನೆ ನೆರವೇರಿತು. ನಂತರ ಹಸಿರು ಅಭಿಯಾನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಅಂಡರ್-14 ಬಾಲಕರು, ಅಂಡರ್-16 ಬಾಲಕರು, ಅಂಡರ್-19 ಬಾಲಕರು, ಅಂಡರ್-15 ಬಾಲಕಿಯರು ಹಾಗೂ ಅಂಡರ್-19 ಮಹಿಳಾ ವಿಭಾಗಗಳ ಸಮರ್ ಕ್ಯಾಂಪ್ಗಳಿಗೆ ಚಾಲನೆ ನೀಡಲಾಯಿತು.
ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ
ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಜಯಂತಿಗ್ರಾಮ, ಕೆ.ಎಸ್.ಆರ್.ಪಿ.ಕಾಲೋನಿ, ಮಾಚೇನಹಳ್ಳಿ, ಬಿದರೆ ಗೇಟ್, ಬಿದರೆ, ಮಲ್ನಾಡ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ. 30 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ರಾಜೇಂದ್ರ ನಗರ ಸಹ್ಯಾದ್ರಿ ಕನ್ನಡ ಪ್ರೌಢಶಾಲೆಗೆ ಶೇ.100 ಫಲಿತಾಂಶ
ಶಿವಮೊಗ್ಗ ತಾಲೂಕಿನ ಕುಂಸಿ ರಾಷ್ಟ್ರೀಯ ಪ್ರೌಢಶಾಲೆಗೆ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಬಂದಿದ್ದು, ವಿದ್ಯಾರ್ಥಿನಿಯರಾದ ರೇಖಾ 576, ಭೂಮಿಕಾ 535 ಐಶ್ವರ್ಯ 526, ಚೇತನ್ಯ 518 ಹಾಗೂ ರಮ್ಯ 507 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಎಲ್ಲಾ ಮಕ್ಕಳೂ ಉತ್ತೀರ್ಣರಾಗಿದ್ದು ಅವರನ್ನು ಮುಖ್ಯ ಶಿಕ್ಷಕರು, ಗ್ರಾಮಸ್ಥರು, ರಾ.ಶಿ. ಸಮಿತಿ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
JCI Shivamogga ಶಿವಮೊಗ್ಗದಲ್ಲಿ ಜೇಸೀಸ್ ಆಶ್ರಯದಲ್ಲಿ ಆ್ಯಕ್ಷನ್ ಫ್ರೇಮ್ ವರ್ಕ್ ಟ್ರೈನಿಂಗ್
JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನ ಮತ್ತು ಜೆಸಿಐ ಶಿವಮೊಗ್ಗ ಚಿರಂತನದ ಸಹಯೋಗದೊಂದಿಗೆ ಭಾವನದ ಅಧ್ಯಕ್ಷೆ ಕರಿಬಸಮ್ಮ ಆನಂದ್ ರವರ ಅಧ್ಯಕ್ಷತೆಯಲ್ಲಿ ಅದಿ ಗ್ರ್ಯಾಂಡ್ ಹೋಟೆಲ್ ಶುಭಂನಲ್ಲಿ ಆಕ್ಷನ್ ಪ್ರೇಮ್ ವರ್ಕ್ ಟ್ರೈನಿಂಗ್ ನಡೆಯಿತು.
JCI Shivamogga ಸುನೀಲ್ ಕುಮಾರ್ ಜಿ. ರವರು ನಡೆಸಿಕೊಟ್ಟರು. ಪೂರ್ವ ಅಧ್ಯಕ್ಷರುಗಳು, ಹಿರಿಯ ಕಿರಿಯ ಸದಸ್ಯರು, ಚಿರಂತನದ ಸದಸ್ಯರು ಭಾಗವಹಿಸಿದ್ದರು. ಝೆನ್ ವೈಸ್ ಪ್ರೆಸಿಡೆಂಟ್ ಜೆಸಿಐ ಸೆನೆಟರ್ ಕಾರ್ಕಳ ಗಣೇಶ್ ಪೈ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಶಿವಮೊಗ್ಗದ ಜುನೇರ ತಾಜ್ ಗೆ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 614 ಅಂಕಗಳು
2025 26 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಅಲ್ಪ ಸಂಖ್ಯಾತರ ಶಾಲೆಗಳಲ್ಲಿ ಓದುತ್ತಿರುವ (ಮುಸ್ಲಿಂ) ಜುನೇರ ತಾಜ್ ಇವಳು 625 ಕ್ಕೆ 614 ಅಂಕಗಳನ್ನು ಪಡೆದು ಶಿವಮೊಗ್ಗಕ್ಕೆ ಪ್ರಥಮವಾಗಿ ಬಂದು, ಶಾಲೆಗೂ ಕೀರ್ತಿಯನ್ನು ತಂದಿರುತ್ತಾಳೆ.
ಈ ವಿದ್ಯಾರ್ಥಿನಿಗೆ ಶಿವಮೊಗ್ಗ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಅವರು ವಿದ್ಯಾರ್ಥಿನಿ
ಮನೆಗೆ ಭೇಟಿ ನೀಡಿ, ಸನ್ಮಾನಿಸಿ ಶುಭ ಹಾರೈಸಿದರು.
ಇವಳ ಮುಂದಿನ ವಿದ್ಯಾಭ್ಯಾಸವು ಉನ್ನತ ಮಟ್ಟದಲ್ಲಿ ಇರಲೆಂದು ಅಲ್ಪಸಂಖ್ಯಾತರ ವಿಭಾಗದ ಸಿ. ಆರ್. ಪಿ ಆದಂತಹ ಮೆಹಬೂಬ್ ಅಲಿ ಮಾತನಾಡಿ, ನಮ್ಮ ಸಮಾಜದ ಹೆಣ್ಣು ಮಕ್ಕಳು ಚೆನ್ನಾಗಿ ಹೆಚ್ಚು ಹೆಚ್ಚಾಗಿ ವಿದ್ಯಾಭ್ಯಾಸವನ್ನು ಮಾಡಬೇಕು ಎಂದು ತಿಳಿಸಿದರು. ನಂತರ ಸಂಸ್ಥೆಯ ಕಾರ್ಯದರ್ಶಿಗಳಾದ ಎಸ್ ಆಯೂಬ್ ಖಾನ್ ಮಾತನಾಡಿ, ಇಂತಹ ವಿದ್ಯಾರ್ಥಿನಿಯರಿಂದ ನಮ್ಮ ಶಾಲೆಗೆ ಹಾಗೂ ಸಮಾಜಕ್ಕೆ ಹೆಮ್ಮೆಪಡುವಂಥ ವಿಷಯ ಎಂದು ತಿಳಿಸಿದರು. ಮುಖ್ಯ ಶಿಕ್ಷಕರಾದ ಅಂತುಲ್ ವಹಿದ್ ಹಾಗೂ ಸಹ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಶುಭವನ್ನು ಹಾರೈಸಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಘು ಎಲ್.ಎಸ್. ಮಾತನಾಡಿ, ನಮ್ಮ ಶಾಲೆಯು ಸತತವಾಗಿ( ಮುಸ್ಲಿಂ) ಅಲ್ಪಸಂಖ್ಯಾತರ ಭಾಗದಲ್ಲಿ ಉತ್ತಮ ಫಲಿತಾಂಶದೊಂದಿಗೆ ನಮ್ಮ ಶಾಲೆಗೂ ಶಿವಮೊಗ್ಗ ತಾಲೂಕಿಗೂ ಹಾಗೂ ಜಿಲ್ಲೆಗೂ ಕೀರ್ತಿಯನ್ನು ತಂದಿರುತ್ತಾರೆ ಎಂದರು.
