Tuesday, February 10, 2026
Tuesday, February 10, 2026
Home Blog Page 70

DC Shivamogga ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ” ಮುಜರಾಯಿ ದೇವಾಲಯ” ನಾಮಫಲಕ & ಸಿಸಿಟಿವಿ ಅಳವಡಿಕೆ ಕಡ್ಡಾಯ -‘ ಡೀಸಿ’ ಗುರುದತ್ತ ಹೆಗಡೆ

0

DC Shivamogga ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ಧಾರ್ಮಿಕ ದತ್ತಿ ಇಲಾಖೆ ಮುಜರಾಯಿ ದೇವಾಲಯ ಕರ್ನಾಟಕ ಸರ್ಕಾರ ಎಂದು ನಾಮಫಲಕ ಅಳವಡಿಸಲು ಕ್ರಮ ವಹಿಸಬೇಕೆಂದು ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು.
ದಿನಾಂಕ:02.12.2025 ರಂದು ಜಿಲ್ಲಾ ವ್ಯಾಪ್ತಿಯ ಮುಜರಾಯಿ “ಸಿ” ವರ್ಗದ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆ, ಜೀರ್ಣೋದ್ದಾರ ಹಾಗೂ ಅರ್ಚಕರ ನೇಮಕಾತಿ ಹಾಗೂ ಇತರೆ ವಿಚಾರಗಳ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ಮುಜರಾಯಿ ದೇವಾಲಯಗಳಿಗೆ ಕಡ್ಡಾಯವಾಗಿ ಸಿ.ಸಿ ಟಿ.ವಿ ಅಳವಡಿಸುವಂತೆ, ಅಧಿಸೂಚಿತ ದೇವಾಲಯಗಳಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್ ನಿಷೇದಿತ ದೇವಾಲಯದ ಎಂದು ನಾಮಫಲಕ ಅಳವಡಿಸುಂತೆ ಸೂಚಿಸಿದರು.
ಶ್ರೀ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯ ಮುಜರಾಯಿ ಅಧಿಸೂಚಿತ ಸಂಸ್ಥೆಯಾಗಿದ್ದು, ದೇವಾಲಯದ ಅರ್ಚಕರು / ನೌಕರರು ಇಲಾಖಾ ಹೆಸರನ್ನು ಹೊರತು ಪಡಿಸಿ ಸ್ವ-ಇಚ್ಛೆಯ ಅನುಸಾರ ಸೇವಾದರಗಳನ್ನು ಮುದ್ರಿಸಿ ಭಕ್ತಾಧಿಗಳು / ಸಾರ್ವಜನಿಕರಿಗೆ ಹಂಚಿಕೆ ಮಾಡಿದ್ದು, ಈ ಬಗ್ಗೆ ತಹಶೀಲ್ದಾರ್ ರವರಿಗೆ ಸೂಕ್ತ ಕ್ರಮ ಜರುಗಿಸಲು ಸೂಚಿಸಿದ ಅವರು ಅಧಿಸೂಚಿತ ದೇವಾಲಯಗಳು/ದೇವಾಲಗಳ ಆಸ್ತಿಯನ್ನು ಸರ್ವೆ ಮಾಡಿಸಿ ವರದಿಯನ್ನು ಸಲ್ಲಿಸುವಂತೆ ತಹಶೀಲ್ದಾರಿಗೆ ತಿಳಿಸಿದರು.
DC Shivamogga ಭದ್ರಾವತಿ ತಾಲ್ಲೂಕು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವೈಕುಂಟ ಏಕಾದಶಿಯ ಕಾರ್ಯಕ್ರಮದಲ್ಲಿ ನಡೆದ ಹಣ ದುರುಪಯೋಗದ ಕುರಿತು ತಕ್ಷಣದಲ್ಲಿ ವರದಿಯನ್ನು ಸಲ್ಲಿಸಲು ತಹಶೀಲ್ದಾರ್, ಭದ್ರಾವತಿ ಇವರಿಗೆ ಸೂಚಿಸಿದರು.
ಶ್ರೀ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರು ಸೇವಾದರ ಪಟ್ಟಿಯನ್ನು ಅಳವಡಿಸದೇ ಸಕ್ಷಮ ಪ್ರಾಧಿಕಾರದಿಂದ ಅನುಮತಿಯನ್ನು ಪಡೆಯದೇ ಭಕ್ತಾಧಿಗಳಿಗೆ ರಶೀದಿಯನ್ನು ನೀಡದೇ ದೇವಾಲಯದ ಆದಾಯಕ್ಕೆ ಕುಂಟಿತರಾಗಿರುತ್ತಾರೆ. ದೇವಸ್ಥಾನದ ರಥೋತ್ಸವದ ಆಮಂತ್ರಣ ಪತ್ರಿಕೆಯನ್ನು ಅನುಮತಿ ಇಲ್ಲದೆ ಮುದ್ರಿಸಿದ್ದು, ಹಾಗೂ ಪತ್ರಿಕೆಯಲ್ಲಿ ಸೇವಾವಿವರದ ಮೊತ್ತವನ್ನು ಸ್ವ- ಇಚ್ಛೆಯಿಂದ ಮುದ್ರಿಸಿರುತ್ತಾರೆ ಈ ರೀತಿಯಾಗಿ ಸಾರ್ವಜನಿಕರಿಂದ ಸಾಕಷ್ಟು ಹಣ ಪಡೆಯುತ್ತಿದ್ದು, ದೇವಸ್ಥಾನದ ಖಾತೆ ಜಮಾ ಮಾಡದೇ ಇರುವ ಕುರಿತು ಗಮನಕ್ಕೆ ಬಂದಿರುವುದಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸಭೆಯಲ್ಲಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬಗ್ಗೆ ವಿವರವಾದ ವರದಿಯನ್ನು ನೀಡಲು ತಹಶೀಲ್ದಾರ್, ಶಿವಮೊಗ್ಗ ಇವರಿಗೆ ಸೂಚಿಸಿದರು.
ಸೊರಬ ತಾಲ್ಲೂಕಿನ ಶ್ರೀ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಭ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗಳು ದೇವಾಲಯಕ್ಕೆ ಹರಿಕೆ ರೂಪದಲ್ಲಿ ಬಂದಂತಹ ಸೀರೆಗಳನ್ನು ಶಿಷ್ಠಾಚಾರದ ನೆಪದಲ್ಲಿ ಮನಬಂದಂತೆ ಹಂಚಿಕೆ ಮಾಡುತ್ತಿರುವುದು ಹಾಗೂ ಹರಕೆ ರೂಪದಲ್ಲಿ ಸ್ವೀಕೃತವಾದ ಸೀರೆ, ಅಕ್ಕಿ, ಎಣ್ಣೆ ಇತರೆ ವಸ್ತುಗಳ ಬಗ್ಗೆ ಯಾವುದೇ ರಿಜಿಸ್ಟರ್‌ಗಳ ನಿರ್ವಹಣೆ ಇಲ್ಲದೇ ಇರುವ ಬಗ್ಗೆ ದೇವಾಲಯದಲ್ಲಿ ಬರುವಂತಹ ಭಕ್ತಾಧಿಗಳಿಗೆ ತುಂಬಾ ವರಟಾಗಿ ವರ್ತಿಸುತ್ತಿರುತ್ತಾರೆ. ಎಂಬ ಕುರಿತು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬಗ್ಗೆ ವಿವರವಾದ ವರದಿಯನ್ನು ನೀಡುವಂತೆ ಸೊರಬದ ತಹಶೀಲ್ದಾರಿಗೆ ಸೂಚಿಸಿದರು.
ಸಾಗರ ತಾಲ್ಲೂಕಿನ ಮಹಾಗಣಪತಿ ದೇವಾಲಯದ 2024-25ನೇ ಸಾಲಿನ ಜಾತ್ರಾ ಹೆಚ್ಚುವರಿ ಖರ್ಚು ಕುರಿತು ಹಾಗೂ 2025-26ನೇ ಸಾಲಿನಲ್ಲಿ ಸ್ಪಾಲ್ ಹರಾಜಿನಿಂದ ಸಂಗ್ರಹವಾದ ಮೊತ್ತವನ್ನು ವಿಳಂಬವಾಗಿ ದೇವಾಲಯದ ಖಾತೆಗೆ ಜಮಾ ಮಾಡಿರುವ ಕುರಿತು ವಿವರವಾದ ವರದಿಯನ್ನು ಸಲ್ಲಿಸುವ ಬಗ್ಗೆ ಸೂಚನೆ ನೀಡಿದರು.
ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿ ‘ಸಿ’ ವರ್ಗದ ದೇವಸ್ಥಾನಗಳ ಸುಗಮ ಆಡಳಿತ ನಿರ್ವಹಣೆಗೆ ವ್ಯವಸ್ಥಾಪನಾ ಸಮಿತಿಯನ್ನು ರಚನೆ ಮಾಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಶ್ರೀ ಜೇನುಕಲ್ಲಮ್ಮ ದೇವಸ್ಥಾನ, ಹಾಗೂ “ಸಿ” ವರ್ಗದ 27 ಸಂಸ್ಥೆಗಳ ವ್ಯವಸ್ಥಾಪನಾ ಸಮಿತಿಯನ್ನ ರಚಿಸಲಾಯಿತು.
ಸಭೆಯಲ್ಲಿ ಧಾರ್ಮಿಕ ಪರಿಷತ್ ಸದಸ್ಯರಾದ ಸೆಲ್ವಕುಮಾರ್.ಸಿ, ನಿವೃತ್ತ ನ್ಯಾಯಾದೀಶರು, ವಿಧೂಶಿ ಗೀತಾದಾತಾರ್, ಎಂ.ಶಿವಲಿಂಗಪ್ಪ, ವರಲಕ್ಷ್ಮೀ, ಎನ್. ಉಮಾಪತಿ, ಎಸ್.ಡಿ ಪ್ರವೀಣ್ ಕುಮಾರ್, ಮುಜರಾಯಿ ತಹಶೀಲ್ದಾರರು ಹಾಜರಿದ್ದರು.

Consumer Disputes Redressal Commission ಕ್ರೆಡಿಟ್ ಕಾರ್ಡಿನಿಂದ ಅನಧಿಕೃತ ಹಣ ಕಡಿತ, ಸೇವಾನ್ಯೂನತೆ ಎಸಗಿದ ಸಂಸ್ಥೆಗೆ ದಂಡ

0

Consumer Disputes Redressal Commission ಕ್ರೆಡಿಟ್ ಕಾರ್ಡಿನಿಂದ ಅನಧಿಕೃತವಾಗಿ ಕಡಿತವಾದ ಮೊತ್ತಗಳ ಬಗ್ಗೆ ಆರ್‌ಬಿಐ ಮಾರ್ಗಸೂಚಿಗಳನ್ನು ಪರಿಗಣಿಸದೆ ಹಾಗೂ ಸರಿಯಾದ ರೀತಿಯಲ್ಲಿ ತನಿಖೆಯನ್ನು ಮಾಡದೇ, ಕಟಾವಣೆಗೊಂಡ ಮೊತ್ತವನ್ನು ಕ್ರೆಡಿಟ್ ಕಾರ್ಡ್ಗೆ ಮರುಜಮೆ ಮಾಡದೇ ಎಸ್‌ಬಿಐ ಕಾರ್ಡ್ಸ್ ಮತ್ತು ಪೇಮೆಂಟ್ ಸರ್ವಿಸ್ ಲಿ.ಬೆಂಗಳೂರು ಇವರು ಸೇವಾನ್ಯೂನ್ಯತೆ ಎಸಗಿದ್ದು ದೂರುದಾರರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಜ ಆದೇಶಿಸಿದೆ.
ದೂರುದಾರರಾದ ಮಂಜುನಾಥ ಜಿ. ತಿಲಕ್‌ನಗರ ಶಿವಮೊಗ್ಗ ಇವರು ಎಸ್.ಬಿ.ಐ ಕಾರ್ಡ್ಸ್ ಮತ್ತು ಪೇಮೆಂಟ್ ಸರ್ವೀಸ್ ಲಿ.. ಬೆಂಗಳೂರು ಇವರ ವಿರುದ್ಧ ದೂರನ್ನು ಸಲ್ಲಿಸಿರುತ್ತಾರೆ. ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ದೂರುದಾರರು ಎಸ್.ಬಿ.ಐ ಬ್ಯಾಂಕ್, ತಿಲಕ್ ನಗರ ಶಾಖೆ, ಶಿವಮೊಗ್ಗ, ಇಲ್ಲಿ ವೇತನ ಖಾತೆಯನ್ನು ಹೊಂದಿದ್ದು,ಈ ಬ್ಯಾಂಕಿನವರು ಎಸ್.ಬಿ.ಐ. ಕ್ರೆಡಿಟ್ ಕಾರ್ಡ್ನ್ನು ನೀಡಿರುತ್ತಾರೆ. ಕ್ರೆಡಿಟ್ ಕಾರ್ಡ್ನ್ನು ಅವಶ್ಯಕತೆಗೆ ತಕ್ಕಂತೆ ಉಪಯೋಗಿಸುತ್ತಾ ಬಂದಿದ್ದು, ವಾರ್ಷಿಕ ಶುಲ್ಕವನ್ನು ಪಾವತಿಸುತ್ತಿದ್ದರೂ ದಿ:21/05/2024 ರಂದು ರೂ.40,000/-, ರೂ.50,000/- ಮತ್ತು ರೂ.1,01,940/-ಗಳು ಕ್ರೆಡಿಟ್ ಕಾರ್ಡ್ನಲ್ಲಿ ಕಟಾವಣೆಯಾಗಿರುವುದಾಗಿ ಸಂದೇಶ ಬಂದಿರುತ್ತದೆ. (ಮೂರು ಕಟಾವಣೆ ಪ್ರತ್ಯೇಕವಾಗಿರುತ್ತವೆ).
ತದನಂತರ ಎದುರುದಾರರ ಕನ್ಸೂಮರ್-ಕೇರ್ ನಿಂದ ಬಂದ ದೂರವಾಣಿ ಕರೆ ಮೂಲಕ ವಿಚಾರಿಸಲಾಗಿ, ದೂರುದಾರರು ಯಾವುದೇ ವ್ಯವಹಾರವನ್ನು ಮಾಡಿರುವುದಿಲ್ಲ ಎಂದು ತಿಳಿಸಿ, ಸರ್ವೀಸ್ ರಿಕ್ವೆಸ್ಟ್ ಮಾಡಿ ಈ ವ್ಯವಹಾರಗಳ ಕುರಿತು ತನಿಖೆಯನ್ನು ಮಾಡಲು ಕೋರಿರುತ್ತಾರೆ. ಹಾಗೂ ಆನ್‌ಲೈನ್ ಮೂಲಕ ಪೊಲೀಸ್ ಠಾಣೆಯಲ್ಲಿ ದೂರುನ್ನು ಸಲ್ಲಿಸಿರುತ್ತಾರೆ.
Consumer Disputes Redressal Commission ಸದರಿ ವ್ಯವಹಾರಗಳನ್ನು ಮಾಡಲು ಸಿವಿವಿ ಮತ್ತು ಓಟಿಪಿ ಯನ್ನು ನಮೂದಿಸದೇ ಹೇಗೆ ವ್ಯವಹಾರ ಸಾಧ್ಯವಾಯಿತು ಎಂದು ಇ-ಮೇಲ್ ಮೂಲಕ ದೂರನ್ನು ನೀಡಿದಾಗ, ಎದುರುದಾರರು ದಿ: 16/08/2024 ತನಿಖೆ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ, ತದನಂತರ ಎದುರುದಾರರು ದಿ:19/11/2024 ರಂದು ದೂರುದಾರರಿಗೆ ಇ-ಮೇಲ್ ಮಾಡಿ ತಮ್ಮ ದೂರನ್ನು ಮುಕ್ತಾಯಗೊಳಿಸಿರುವುದಾಗಿ ತಿಳಿಸಿರುತ್ತಾರೆ. ದೂರುದಾರರ ಕ್ರೆಡಿಟ್ ಕಾರ್ಡಿನಿಂದ ಅನಧಿಕೃತವಾಗಿ ಕಡಿತವಾದ ಮೊತ್ತಗಳ ಬಗ್ಗೆ ಎದುರುದಾರರು ಆರ್‌ಬಿಐ ಗೈಡ್‌ಲೈನ್ಸ್/ರೆಗ್ಯೂಲೇಶನ್‌ಗಳನ್ನು ಪರಿಗಣಿಸದೆ ಹಾಗೂ ಸರಿಯಾದ ರೀತಿಯಲ್ಲಿ ತನಿಖೆಯನ್ನು ಮಾಡದೇ, ಕಟಾವಣೆಗೊಂಡ ಮೊತ್ತವನ್ನು ಕ್ರೆಡಿಟ್ ಕಾರ್ಡ್ಗೆ ಮರುಜಮೆ ಮಾಡದೇ, ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ದೂರನ್ನು ಸಲ್ಲಿಸಿರುತ್ತಾರೆ.
ದೂರುದಾರರು ಸಲ್ಲಿಸಿರುವ ದಾಖಲಾತಿಗಳನ್ನು ಪರಿಶೀಲಿಸಿ, ದೂರುದಾರರ ವಾದವನ್ನು ಆಲಿಸಿ, ಎದುರುದಾರರು ಆರ್‌ಬಿಐ ಸುತ್ತೋಲೆಯಂತೆ ಸರಿಯಾದ ರೀತಿಯಲ್ಲಿ ತನಿಖೆಯನ್ನು ಮಾಡದೇ ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ತೀರ್ಮಾನಿಸಿ, ದೂರನ್ನು ಪುರಸ್ಕರಿಸಿ, ಎದುರುದಾರರು ರೂ.1,01,940/-ಗಳನ್ನು ದೂರುದಾರರ ಕ್ರೆಡಿಟ್ ಕಾರ್ಡ್ ಖಾತೆಗೆ 45 ದಿನಗಳ ಒಳಗೆ ಜಮಾ ಮಾಡುವುದು ಮತ್ತು ಎದುರುದಾರರು ರೂ.25,000/- ಗಳನ್ನು ಮತ್ತು ರೂ.10,000/-ಗಳನ್ನು ಮಾನಸಿಕ ಹಿಂಸೆಗೆ ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ 45 ದಿನಗಳ ಒಳಗಾಗಿ ಪಾವತಿಸುವುದು, ತಪ್ಪಿದ್ದಲ್ಲಿ ವಾರ್ಷಿಕ ಶೇ.10ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ನೀಡುವವರೆಗೆ ನೀಡತಕ್ಕದ್ದು ಎಂದು ಆಯೋಗದ ಅಧ್ಯಕ್ಷರಾದ ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯರವರನ್ನು ಒಳಗೊಂಡ ಪೀಠವು ದಿನಾಂಕ:29/11/2025ರಂದು ಆದೇಶಿಸಿದೆ.

Minority Welfare Department 2025-26 ನೇ ಸಾಲಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖಾ ವತಿಯಂದ ಬಿಎಡ್ ವ್ಯಾಸಂಗ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಇಲಾಖೆ ಪ್ರಕಟಣೆ

0

Minority Welfare Department 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ರೂ.25000/-ಗಳ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ವಿಶೇಷ ಪ್ರೋತ್ಸಾಹಧನವನ್ನು ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ಜಮಾ ಮಾಡಲಾಗುವುದು.

ಅರ್ಜಿ ಸಲ್ಲಿಸಲು ದಿ: 31.12.2025 ಕಡೆಯ ದಿನಾಂಕವಾಗಿದ್ದು, ಅರ್ಜಿಯನ್ನು sevasindhu.karnataka.gov.in ಮೂಲಕ ಸಲ್ಲಿಸಿ ನಂತರ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ಮೊಹರು ಮತ್ತು ಸಹಿ/ದೃಢೀಕರಣ ಪಡೆದು, ಅರ್ಜಿಯೊಂದಿಗೆ ನಿವಾಸಿ ದೃಢೀಕರಣ ಪತ್ರ.

Minority Welfare Department ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಸೀದಿ, ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪಿ.ಯು.ಸಿ ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಪತ್ರ, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿಳಿಗೆ ಪ್ರಾಂಶುಪಾಲರಿಂದ ದೃಢೀಕರಿಸಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-220206 ಗೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Rotary Shimoga ಆರೋಗ್ಯ, ಶಿಕ್ಷಣ ಕ್ಷೇತ್ರದ ಸೇವೆಯಲ್ಲಿ ತೊಡಗಿರುವ ರೋಟರಿ ಸೇವೆ ಶ್ಲಾಘನೀಯ- ಕೆ.ಇ.ಕಾಂತೇಶ್

0

Rotary Shimoga ರೋಟರಿ ಜ್ಯೂಬಿಲಿ ಸಂಸ್ಥೆಯು ಪಾರದರ್ಶಕವಾಗಿ ಸೇವೆಯಲ್ಲಿ ತೊಡಗಿಸಿಕೊಂಡಿ ದ್ದು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಒತ್ತು ನೀಡಿ ಗ್ರಾಮಾಂತರ ಶಾಲೆಗಳಿಗೆ ಅನೇಕ ಸೌಲಭ್ಯ ಒದಗಿಸುತ್ತಿರುವುದು ಶ್ಲಾಘನೀಯ ಎಂದು ರೋಟರಿ ಶಿವಮೊಗ್ಗ ಜ್ಯುಬಿಲಿ ಕ್ಲಬ್ ವಾರದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಪೋಲಿಯೊ ಲಸಿಕೆ ಅಭಿಯಾನದಿಂದ ಈ ಮಾರಕ ಕಾಯಿಲೆಯನ್ನು ಪ್ರಪಂಚದದಂತ್ಯ ನಿರ್ಮೂಲ ಮಾಡಿದ ಹೆಗ್ಗಳಿಕೆ ರೋಟರಿ ಸಂಸ್ಥೆಗೆ ಸಲ್ಲಬೇಕು. ಸ್ವಾಹಿತ ಮೀರಿದ ಸೇವೆಯಿಂದ ಇಂದು ವಿಶ್ವದಲ್ಲಿ ಶಾಂತಿ ನೆಲೆಸಲು ಶ್ರಮಿಸುತ್ತಿದೆ, ಎಂದು ತಿಳಿಸುತ್ತಾ ರೋಟರಿ ಮಿತ್ರರು ಒಂದು ಶಕ್ತಿ ಎಂದು ಅಬಿಪ್ರಾಯ ಪಟ್ಟರು.
ರೋಟರಿ ಜ್ಯುಬಿಲಿ ಕ್ಲಬ್ ಅಧ್ಯಕ್ಷ ರೊ ಬಿ.ಎಸ್.ಅಶ್ವಥ್ ರವರು ಮಾತನಾಡಿ ಶ್ರೀಗಂಧ ಸಂಸ್ಥೆಯನ್ನು ಸ್ಥಾಪಿಸಿ ಅನೇಕ ಧಾರ್ಮಿಕ ಮತ್ತು ಸಮಾಜಮುಖಿ ಕಾರ್ಯಗಳನ್ನು ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಕೆ.ಇ.ಕಾಂತೇಶ್ ರವರು ಸಮಾಜ ಸೇವೆಗೆ ಮನ್ನಣೆಗೆ ಪಾತ್ರರಾಗಿದ್ದು ನಗರದ ಮನೆ ಮಾತಾಗಿದ್ದಾರೆ ಎಂದು ತಿಳಿಸುತ್ತಾ, ಗೋಸಂರಕ್ಷಣೆ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು ಗೋವರ್ಧನ ಟ್ರಸ್ಟ್ ಮೂಲಕ ಸಹಾಯ ಗೋಶಾಲೆಗಳಿಗೆ ಸಹಾಯ ನೀಡುವುದಲ್ಲದೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರಶಂಸಿದರು. ಸಮಾಜದ ಮಠಾಧಿಪತಿಗಳ ಮೂಲಕ ಅನೇಕ ಧಾರ್ಮಿಕ ಕಾರ್ಯಗಳನ್ನು ನಡೆಸುತ್ತಿದ್ದು ಅವರ ಸಮಾಜ ಸೇವೆ ಹೀಗೆ ನಿರಂತರವಾಗಿ ಮುಂದುವರೆಯಲಿ ಎಂದು ಆಶಿಸುತ್ತಾ ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದರು.

Rotary Shimoga ಉಮಾದೇವಿ ಸ್ವಾಗತಿಸಿದರು, ಕಾರ್ಯದರ್ಶಿ ರೊ. ರೇವಣಸಿದ್ದಪ್ಪರವರು ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು. ಸಭೆಯಲ್ಲಿ ನವೀನ್, ಉಮೇಶ್, ರಾಜಶೇಖರ್, ನವೀನ್ ಕುಮಾರ್, ಪ್ರಶಾಂತ್ ಜವಳಿ, ಅವಿನಾಶ್ ಲಕ್ಷ್ಮೀನಾರಾಯಣ,ಶ್ರೀಪತಿ, ಹರ್ಷ ಪಟೇಲ್ ಹಾಜರಿದ್ದರು

Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸ್ವ ಉದ್ಯೋಗ ಯೋಜನೆ ಪ್ರಕಟಣೆ

0

Canara Bank Rural Self Employment Training Institute ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ ತಿಂಗಳ ಡಿ.22 ರಿಂದ 31 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 35 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ ಡಿ 15 ರಂದು ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು.

ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಡಿ.15 ರೊಳಗೆ ಸಂಸ್ಥೆಯ ದೂರವಾಣಿ ಸಂಖ್ಯೆ 8970476050, 9591514154, 9686248369, 9505894247 ಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

Rangayana Shivamogga ಡಿಸೆಂಬರ್ 5, ಶಿವಮೊಗ್ಗದ ರಂಗಾಯಣದಲ್ಲಿ “ನಮ್ಮೊಳಗೊಬ್ಬ ಗಾಂಧಿ” ನಾಟಕ ಪ್ರದರ್ಶನ

0

Rangayana Shivamogga ರಂಗಾಯಣ, ಶಿವಮೊಗ್ಗ ರೆಪರ್ಟರಿ ಕಲಾವಿದರ ಪ್ರಸ್ತುತಿಯಲ್ಲಿ ಡಿ.5 ರಂದು ಶಿವಮೊಗ್ಗದ ಅಶೋಕನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಸಂಜೆ 6.30ಕ್ಕೆ ಡಾ.ಡಿ.ಎಸ್.ಚೌಗಲೆ ರಚನೆಯ ಶ್ರೀ ಚಿದಂಬರ ರಾವ್ ಜಂಬೆ ನಿರ್ದೇಶನದ ‘ನಮ್ಮೊಳಗೊಬ್ಬ ಗಾಂಧಿ’ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಈ ನಾಟಕವನ್ನು ಸಂಸ್ಕೃತಿ ಚಿಂತಕರಾದ ಪ್ರೊ. ರಾಜೇಂದ್ರ ಚೆನ್ನಿ, ಶಿವಮೊಗ್ಗ ಇವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗದ ರಂಗಾಯಣದ ನಿರ್ದೇಶಕರಾದ ಶ್ರೀ ಪ್ರಸನ್ನ ಡಿ ಸಾಗರ ಇವರು ವಹಿಸಲಿದ್ದಾರೆ. 2025 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶಿವಮೊಗ್ಗ ಜಿಲ್ಲೆಯ ಕೋಣಂದೂರು ಲಿಂಗಪ್ಪ, ಪ್ರೊ. ರಾಜೇಂದ್ರ ಚೆನ್ನಿ ಮತ್ತು ಶ್ರೀ ಟಾಕಪ್ಪ ಇವರನ್ನು ರಂಗಾಯಣದಿಂದ ಗೌರವಿಸಲಾಗುವುದು. Rangayana Shivamogga ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಡಾ.ಡಿ.ಎಸ್. ಚೌಗಲೆ ನಾಟಕಕಾರರು, ಬೆಳಗಾವಿ ಮತ್ತು ಶ್ರೀ. ಡಿಂಗ್ರಿ ನರೇಶ್, ರಂಗಕರ್ಮಿಗಳು ಮತ್ತು ಸದಸ್ಯರು, ರಂಗಸಮಾಜ ಇವರು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಿವಮೊಗ್ಗ ರಂಗಾಯಣ ಆಡಳಿತಾಧಿಕಾರಿಗಳಾದ ಡಾ. ಶೈಲಜಾ ಎ.ಸಿ. ಇವರು ಉಪಸ್ಥಿತರಿರುವರು.
ಈ ನಾಟಕಕ್ಕೆ ಪ್ರವೇಶ ಉಚಿತವಾಗಿದ್ದು, ರಂಗಾಸಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ವೀಕ್ಷಿಸಬೇಕೆಂದು ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಪ್ರಸನ್ನ ಡಿ. ಸಾಗರ ಮತ್ತು ಆಡಳಿತಾಧಿಕಾರಿಗಳಾದ ಡಾ.ಶೈಲಜಾ ಎ.ಸಿ. ತಿಳಿಸಿದ್ದಾರೆ.

ಬೆಂಗಳೂರು ಜಲಮಂಡಳಿಗೆ ” ಜಿಯೋಸ್ಪೆಷಿಯಲ್ ಎಕ್ಸಲೆನ್ಸ್ “ಪ್ರಶಸ್ತಿ

0

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತನ್ನ ಜಿಐಎಸ್-ಆಧಾರಿತ ಯುಟಿಲಿಟಿ ಆಸ್ತಿ ನಿರ್ವಹಣಾ ವೇದಿಕೆ ಜಲಪಥಕ್ಕಾಗಿ ಪ್ರತಿಷ್ಠಿತ ‘ಜಿಯೋಸ್ಪೇಷಿಯಲ್ ಎಕ್ಸಲೆನ್ಸ್ ಪ್ರಶಸ್ತಿ’ (Geospatial Excellence Award) ಗಾಗಿ ಭಾಜನವಾಗಿದೆ.

ಹೊಸ ದೆಹಲಿಯ ಭಾರತ್ ಮಂಟಪಂನಲ್ಲಿ ನಡೆದ ‘ಜಿಯೋಸ್ಮಾರ್ಟ್ ಇಂಡಿಯಾ 2025’ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಸಮ್ಮೇಳನದ ಸಮಾರೋಪ ಅಧಿವೇಶನದಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್‌ ಮನೋಹರ್, ಐಎಎಸ್, ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

ಕಾರ್ಯಕ್ರಮದ ನಂತರ ಮಾತನಾಡಿದ ಡಾ. ಮನೋಹರ್ ಅವರು, ಜಿಯೋಸ್ಪಾಷಿಯಲ್‌ ಮ್ಯಾಪಿಂಗ್ ತಂತ್ರಜ್ಞಾನದ ಮೂಲಕ ಆಸ್ತಿಗಳ ಡಿಜಿಟಲೀಕರಣ, ರಿಯಲ್‌ ಟೈಮ್‌ ಡೇಟಾ ಇಂಟಿಗೇಷನ್‌ನಲ್ಲಿ ಬೆಂಗಳೂರು ಜಲಮಂಡಳಿಯ ಸಾಧನೆಗಳನ್ನು ಗುರುತಿಸಿದೆ. ಈ ಮೂಲಕ ಸಾವಿರಾರು ನೀರು ಮತ್ತು ಒಳಚರಂಡಿ ಆಸ್ತಿಗಳನ್ನು ಏಕೀಕೃತ ವೇದಿಕೆಯಲ್ಲಿ ಕೇಂದ್ರೀಕರಿಸಲು ಸಹಾಯ ಮಾಡಿದೆ, ಇದು ಯೋಜನಾ ಪ್ರಕ್ರಿಯೆ, ಮೇಲ್ವಿಚಾರಣೆ ಮತ್ತು ನಿರ್ವಹಣೆಯ ದಕ್ಷತೆಯನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ.

ಈ ಪ್ರಶಸ್ತಿಯು ಬೆಳೆಯುತ್ತಿರುವ ಬೆಂಗಳೂರು ನಗರಕ್ಕೆ ವೈಜ್ಞಾನಿಕ ಮತ್ತು ತಂತ್ರಜ್ಞಾನ ಆಧಾರಿತ ನೀರು ನಿರ್ವಹಣೆಯನ್ನು ಒದಗಿಸುವ ಬದ್ದತೆಯನ್ನು ಪ್ರತಿಬಿಂಬಿಸುತ್ತದೆ.

ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರ ದೂರದೃಷ್ಟಿಯಿಂದ ಈ ತಂತ್ರಜ್ಞಾನದ ಅಳವಡಿಕೆ ಸಾಧ್ಯವಾಗಿದೆ.

ಜಲಮಂಡಳಿಯಲ್ಲಿ ಈ ಮಹತ್ವದ ತಂತ್ರಜ್ಞಾನ ಕಾರ್ಯಕ್ರಮ ಅನುಷ್ಠಾನಕ್ಕೆ ಮಾರ್ಗದರ್ಶನ ನೀಡಿದ ಕರ್ನಾಟಕದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ತಂತ್ರಜ್ಞಾನ ಅಳವಡಿಕೆಗೆ ಚಾಲನೆ ನೀಡಿದ್ದ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು. “ಈ ಪ್ರಶಸ್ತಿಯು ನಮ್ಮ ಬಿಡಬ್ಲ್ಯುಎಸ್‌ಎಸ್‌ಬಿ ಎಂಜಿನಿಯರ್‌ಗಳು, ಜಿಐಎಸ್ ತಂಡಗಳು ಮತ್ತು ಈ ಪರಿವರ್ತನೆಯನ್ನು ನಿರ್ಮಿಸಿದ ನಮ್ಮ ಕ್ಷೇತ್ರ ಸಿಬ್ಬಂದಿಗೆ ಸೇರಿದ್ದು,” ಎಂದು ಅವರು ತಿಳಿಸಿದರು.

ಭವಿಷ್ಯದ ಮೇಲೆ ಕೇಂದ್ರೀಕರಿಸಿದ ಜಲ ಜಾಲ
ಬೆಂಗಳೂರು ಜಲಮಂಡಳಿಯು ‘ಜಲಪಥ’ ತಂತ್ರಜ್ಞಾನವನ್ನು ಇನ್ನಷ್ಟು ಆಧುನಿಕಗೊಳಿಸಲಿದೆ. ಮುಂದಿನ ಹಂತದಲ್ಲಿ ಸುಧಾರಿತ ಭೌಗೋಳಿಕ-ಪ್ರಾದೇಶಿಕ ವಿಶ್ಲೇಷಣೆಗಳು, ಪ್ರಿಡಿಕ್ಟಿವ್‌ ಮೆಂಟೇನೇನ್ಸ್‌ ಉಪಕರಣಗಳು ಮತ್ತು ರೀಯಲ್‌ ಟೈಮ್‌ ಯೋಜನೆಗಳ ಮೇಲ್ವಿಚಾರಣೆಯನ್ನು ಮಾಡಲು ಅನುವು ಮಾಡಿಕೊಡಲಿದೆ. “ಈ ನವೀಕರಣಗಳು ಸೇವಾ ವಿತರಣೆಯನ್ನು ಬಲಪಡಿಸುತ್ತವೆ, ನೀರಿನ ನಷ್ಟವನ್ನು ಕಡಿಮೆ ಮಾಡುತ್ತವೆ ಮತ್ತು ಬೆಂಗಳೂರಿನ ಭವಿಷ್ಯಕ್ಕಾಗಿ ಸಿದ್ಧವಾಗಿರುವ ಜಲ ಜಾಲವನ್ನು ನಿರ್ಮಿಸಲಿವೆ,” ಎಂದು ಡಾ. ಮನೋಹರ್ ಹೇಳಿದರು.

ಸರ್ವೆ ಆಫ್ ಇಂಡಿಯಾ ಮತ್ತು ರಾಷ್ಟ್ರೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂಧರ್ಭದಲ್ಲಿ ಬೆಂಗಳೂರು ಜಲಮಂಡಳಿಯ ಮುಖ್ಯ ಅಭಿಯಂತರರಾದ ಸನತ್‌ ಹಾಗೂ ಸಹಾಯಕ ಮುಖ್ಯ ಅಭಿಯಂತರಾದ ಮಹೇಶ್ವರಪ್ಪ ಉಪಸ್ಥಿತರಿದ್ದರು.

ಶಿವಮೊಗ್ಗದಲ್ಲಿ “ವಿವೇಕ ವಿದ್ಯಾನಿಧಿ” ವಿತರಣಾ ಕಾರ್ಯಕ್ರಮ ಯಶಸ್ವಿ

0

ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ 200 ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ತಲುಪಿಸುವ ಧ್ಯೇಯದೊಂದಿಗೆ ಅನವರತ ಫೌಂಡೇಶನ್ ಹಮ್ಮಿಕೊಂಡಿದ್ದ “ವಿವೇಕ ವಿದ್ಯಾನಿಧಿ” ವಿತರಣಾ ಕಾರ್ಯಕ್ರಮವು ಶಿವಮೊಗ್ಗದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು.

ಶಿಕ್ಷಣದ ಮೂಲಕ ಸಾಮಾಜಿಕ ಪ್ರಗತಿಗೆ ನಿರಂತರ ಬೆಂಬಲ ನೀಡುವ ಗುರಿಯನ್ನು ಈಡೇರಿಸುವ ಈ ಮಹತ್ವದ ಕಾರ್ಯಕ್ರಮದಲ್ಲಿ, ಸಮಾಜದ ಪ್ರತಿಭಾನ್ವಿತ ಹಾಗೂ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಒಟ್ಟು 200 ವಿದ್ಯಾರ್ಥಿಗಳಿಗೆ ವಿದ್ಯಾನಿಧಿಯನ್ನು ವಿತರಿಸಲಾಯಿತು.

ಈ ಮೂಲಕ ಅವರ ಶೈಕ್ಷಣಿಕ ಕನಸುಗಳಿಗೆ ಸಂಸ್ಥೆಯು ಭದ್ರ ಬುನಾದಿ ಒದಗಿಸಿತು.

ಅನವರತ ಫೌಂಡೇಶನ್‌ನ ಈ ಮೊದಲ ಹೆಜ್ಜೆ, ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯವನ್ನು ಬೆಳಗಿಸುವ ದಿಸೆಯಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ.

ಎಸ್ ಎನ್ ಚನ್ನಬಸಪ್ಪ (ಚೆನ್ನಿ)ನವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಅಧ್ಯಕ್ಷರಾದ ಡಾ. ಬಿ ವಿ ವಸಂತ್ ಕುಮಾರ್ , ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಎಸ್ ಎನ್ ನಾಗರಾಜ್ , ಶ್ರೀ ಡಿಎಸ್ ಅರುಣ್ , ವಿಧಾನಪರಿಷತ್ ಶಾಸಕರಾದ ಡಾ. ಧನಂಜಯ್ ಸರ್ಜಿ , ವಿಧಾನಪರಿಷತ್ ಶಾಸಕರಾದ ಶ್ರೀ ಎ.ಜೆ ರಾಮಚಂದ್ರ , ವಿಕಾಸ ವಿದ್ಯಾ ಸಮಿತಿಯ ಕಾರ್ಯದರ್ಶಿಗಳಾದ
ಶ್ರೀ ಎಸ್ ರಾಜಶೇಖರ್ , ದೇಶಿಯ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳು ಭಾಗಿಯಾಗಿದ್ದರು.

ಸಮಾರಂಭದಲ್ಲಿ ಮಾತನಾಡಿದ ಗಣ್ಯರು, ಅನವರತ ಫೌಂಡೇಶನ್‌ನ ಈ ಸಾಮಾಜಿಕ ಕಳಕಳಿಯ ಕಾರ್ಯವನ್ನು ಶ್ಲಾಘಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಮಹತ್ವದ ಕುರಿತು ಪ್ರೇರಣಾತ್ಮಕ ಮಾತುಗಳನ್ನಾಡಿದರು.

ಮುಂದಿನ ದಿನಗಳಲ್ಲಿ “ವಿವೇಕ ವಿದ್ಯಾನಿಧಿ” ಕಾರ್ಯಕ್ರಮವನ್ನು ವಿಸ್ತರಿಸುವ ಮೂಲಕ ಇನ್ನಷ್ಟು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಮಹತ್ವಾಕಾಂಕ್ಷೆಯನ್ನು ಅನವರತ ಫೌಂಡೇಶನ್ ವ್ಯಕ್ತಪಡಿಸಿತು.

Keladi Shivappa Nayak University of Agriculture and Horticulture ಡಿ.15 ರಿಂದ ಒಂದು ತಿಂಗಳ ಅವಧಿಯ ಬೇಕರಿ ಉತ್ಪನ್ನಗಳ ತಯಾರಿಕಾ ಕೌಶಲ ತರಬೇತಿ

0

Keladi Shivappa Nayak University of Agriculture and Horticulture ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ದಿ:15/12/2025 ರಿಂದ ದಿ:13/01/2026 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್‌ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ ಬ್ರೆಡ್, ಬನ್, ರಸ್ಕ್, ಫಿಜ್ಜಾ, ಪಪ್‌ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.

ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಡಿ.13 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ತಿಳಿಸಿದ್ದಾರೆ.

Keladi Shivappa Nayak University of Agriculture and Horticulture ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸಬಹುದು.

Armed Forces Flag Day ಡಿಸೆಂಬರ್ 8 ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಗೆ ಜಿಲ್ಲಾಡಳಿತದಿಂದ ಪೂರ್ವಸಿದ್ಧತೆ

0

Armed Forces Flag Day ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಅಂಗವಾಗಿ ಧ್ವಜ ಬಿಡುಗಡೆ ಸಮಾರಂಭವನ್ನು ಡಿ.08 ರಂದು ಬೆಳಿಗ್ಗೆ 11 ಘಂಟೆಗೆ ಶಿವಮೊಗ್ಗ ಜಿಲ್ಲಾ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜಿಸಿದ್ದು, ಜಿಲ್ಲಾಧಿಕಾರಿಗಳು ಧ್ವಜ ಬಿಡುಗಡೆಗೊಳಿಸುವರು.

ಈ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರು, ವೀರ ನಾರಿಯರು ಹಾಗೂ ಮಾಜಿ ಸೈನಿಕರ ಅವಲಂಬಿತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Armed Forces Flag Day ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.